karnataka budget 2023 : ಗ್ಯಾರಂಟಿಗಳ ಜಾರಿಗೆ ಸಂಪನ್ಮೂಲ ಹೇಗೆ? ತೆರಿಗೆ ಇಲಾಖೆಗೆ ಕೊಟ್ಟ ಟಾರ್ಗೆಟ್‌ ಡಿಟೇಲ್ಸ್ - Vistara News

ಕರ್ನಾಟಕ ಬಜೆಟ್

karnataka budget 2023 : ಗ್ಯಾರಂಟಿಗಳ ಜಾರಿಗೆ ಸಂಪನ್ಮೂಲ ಹೇಗೆ? ತೆರಿಗೆ ಇಲಾಖೆಗೆ ಕೊಟ್ಟ ಟಾರ್ಗೆಟ್‌ ಡಿಟೇಲ್ಸ್

karnataka budget 2023 ಬಜೆಟ್‌ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ.ಗೂ ಹೆಚ್ಚು ತೆರಿಗೆ ಸಂಗ್ರಹದ ಗುರಿ ನಿಗದಿಪಡಿಸಿದೆ. ವಿವರ ಇಲ್ಲಿದೆ.

VISTARANEWS.COM


on

notes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಬಜೆಟ್‌ನಲ್ಲಿ ಒಟ್ಟು 57,910 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಹಾಗಾದರೆ ಸರ್ಕಾರ 2023-24ರಲ್ಲಿ ರಾಜ್ಯದಲ್ಲಿ ಎಷ್ಟರಮಟ್ಟಿಗೆ ತೆರಿಗೆ ಸಂಗ್ರಹ ಆಗಬಹುದು ಎಂದು ನಿರೀಕ್ಷಿಸಿದೆ? ( karnataka budget 2023) ಈ ಬಗ್ಗೆ ಬಜೆಟ್‌ನಲ್ಲಿ ಅಂದಾಜು ಲೆಕ್ಕಾಚಾರವನ್ನು ನೋಡಬಹುದು. ವಿವರ ಇಲ್ಲಿದೆ.

ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಬಜೆಟ್‌ಗೆ ಹೋಲಿಸಿದರೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆ ಸಂಗ್ರಹದ ಗುರಿಯನ್ನು ಹೆಚ್ಚಿಸಿದೆ.

ವಾಣಿಜ್ಯ ತೆರಿಗೆ ಇಲಾಖೆಗೆ ಲಕ್ಷ ಕೋಟಿ ತೆರಿಗೆ ಸಂಗ್ರಹ ಗುರಿ:

ಇದೇ ಮೊದಲ ಬಾರಿಗೆ ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹದ ಟಾರ್ಗೆಟ್‌ ನೀಡಲಾಗಿದೆ. ಹೀಗಾಗಿ ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯ ಮೇಲೆ ಬಹು ದೊಡ್ಡ ಜವಾಬ್ದಾರಿ ಬಿದ್ದಿದೆ. ಹಾಗಾದರೆ ಏನಿದು ವಾಣಿಜ್ಯ ತೆರಿಗೆ? ಇದರಲ್ಲಿ ಯಾವ್ಯಾವುದು ಬರುತ್ತದೆ? ವಾಣಿಜ್ಯ ತೆರಿಗೆಯಲ್ಲಿ ಸರಕು ಮತ್ತು ಸೇವೆಗಳ ಮೇಲೆ ಸೇಲ್ಸ್‌, ಖರೀದಿ, ವಿನಿಮಯಕ್ಕೆ ಹಾಕುವ ತೆರಿಗೆಗಳು ಬರುತ್ತದೆ. ಜಿಎಸ್‌ಟಿ ಕೂಡ ವಾಣಿಜ್ಯ ತೆರಿಗೆಯ ಭಾಗವಾಗಿದೆ.

ಬಜೆಟ್‌ನ ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಅಬಕಾರಿ ಇಲಾಖೆಗೆ 36,000 ಕೋಟಿ ರೂ. ಗುರಿ: ಅಬಕಾರಿ ಇಲಾಖೆಗೆ 2023-24ರಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ಹೊಂದಲಾಗಿದೆ. ಮೋಟಾರು ವಾಹನ ತೆರಿಗೆ 11,500 ಕೋಟಿ ರೂ. ಸಂಗ್ರಹವಾಗುವ ನಿರೀಕ್ಷೆ ಇದೆ. ನೋಂದಣಿ ಮತ್ತು ಮುದ್ರಾಂಕ ಶುಲ್ಕವಾಗಿ 25,000 ಕೋಟಿ ರೂ. ಸಂಗ್ರಹವಾಗುವ ನಿರೀಕ್ಷೆ ಇದೆ. ಇತರ ತೆರಿಗೆ ಮೂಲಗಳಿಂದ 2153 ಕೋಟಿ ರೂ. ಸಂಗ್ರಹವಾಗುವ ಅಂದಾಜಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಂಡಿಸಿದ್ದ ಬಜೆಟ್‌ನಲ್ಲಿ, 2023-24ರಲ್ಲಿ 97,000 ಕೋಟಿ ರೂ. ತೆರಿಗೆ ಸಂಗ್ರಹ ನಿರೀಕ್ಷಿಸಲಾಗಿತ್ತು. ಅಬಕಾರಿ ಸುಂಕವಾಗಿ 35,000 ಕೋಟಿ ರೂ, ನೋಂದಣಿ ಮತ್ತು ಮುದ್ರಾಂಕ ಶುಲ್ಕವಾಗಿ 19,000 ಕೋಟಿ ರೂ, ಮೋಟಾರು ವಾಹನ ತೆರಿಗೆಯಾಗಿ 10,500 ಕೋಟಿ ರೂ. ತೆರಿಗೆ ಸಂಗ್ರಹ ನಿರೀಕ್ಷಿಸಲಾಗಿದೆ

ಬಜೆಟ್‌ನಲ್ಲಿ ತೆರಿಗೆ ಪ್ರಸ್ತಾವನೆಗಳು:

ರಾಜ್ಯವು ಜಿ.ಎಸ್‍.ಟಿ ತೆರಿಗೆ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 21 ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಸಾಧಿಸಿದೆ. ಪ್ರಸ್ತುತ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ಕೆ.ಜಿ.ಎಸ್‍.ಟಿ ರಾಜಸ್ವ ಸಂಗ್ರಹವು 18,962 ಕೋಟಿ ರೂ.ಗಳಾಗಿರುತ್ತದೆ ಎಂದು ಬಜೆಟ್‌ ತಿಳಿಸಿದೆ.

ಪರಿಣಾಮಕಾರಿ ತೆರಿಗೆ ಆಡಳಿತಕ್ಕಾಗಿ ಹಾಗೂ ವಾಣಿಜ್ಯೋದ್ಯಮಗಳಿಗೆ ಉತ್ತಮ ಸಂಪರ್ಕವನ್ನು ನೀಡಲು, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನಾಲ್ಕು ಹೊಸ ವಿಭಾಗಗಳನ್ನು ಶೀಘ್ರದಲ್ಲಿ ಕಾರ್ಯೋನ್ಮುಖಗೊಳಿಸಲಾಗುವುದು. ಅತ್ಯಧಿಕ ತೆರಿಗೆ ಪಾವತಿದಾರರಿಗಾಗಿ ಒಂದು ಪ್ರತ್ಯೇಕ ವಿಭಾಗವನ್ನು ಬೆಂಗಳೂರು ನಗರದಲ್ಲಿ ಸ್ಥಾಪಿಸಲಾಗುವುದು.

ದತ್ತಾಂಶ ವಿಶ್ಲೇಷಣೆಗಾಗಿ ಮತ್ತು ರಾಜಸ್ವ ಸಂಗ್ರಹಣೆಯನ್ನು ವೃದ್ಧಿಗೊಳಿಸಲು ಕೃತಕ ಬುದ್ಧಿಮತ್ತೆ ಮತ್ತು ಮೆಶೀನ್‌ ಲರ್ನಿಂಗ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. 2023-24ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಯ ಗುರಿಯನ್ನು 1,01,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ. ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‍ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಹಾಗೆಯೇ ಬಿಯರ್‍ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ : 2018-19ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ದಿನಾಂಕ:01.01.2019 ರಿಂದ ಜಾರಿಗೆ ತರಲಾಗಿತ್ತು. ನಂತರದಲ್ಲಿ ಕೋವಿಡ್‍-19 ಕಾರಣದಿಂದ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರುವುದಿಲ್ಲ. ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಜಾರಿಗೆ ತರಲು ಉದ್ದೇಶಿಸಲಾಗಿದೆ.

2023-24ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 25,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ. ಸಾರಿಗೆ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಸರಳೀಕರಿಸಲು ಉದ್ದೇಶಿಸಿದೆ. ಮೋಟಾರು ವಾಹನ ತೆರಿಗೆ ವ್ಯವಹಾರಗಳ ನಿಖರವಾದ ಪರಿಶೀಲನೆಗಾಗಿ ಸರಳೀಕೃತ ತಂತ್ರಾಂಶವನ್ನು ತರಲಾಗುವುದು. ಪ್ರಸ್ತುತ ಆಯ್ದ ವಾಹನದ ವರ್ಗಗಳಿಗೆ ವಿಧಿಸುವ ತೆರಿಗೆಯನ್ನು ಪರಿಷ್ಕರಿಸಲಾಗುವುದು. 2023-24ನೇ ಆರ್ಥಿಕ ವರ್ಷಕ್ಕೆ ಸಾರಿಗೆ ಇಲಾಖೆಗೆ ಒಟ್ಟು 11,500 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ. ಗಣಿ ಮತ್ತು ಭೂವಿಜ್ಞಾನ : 2023-24ನೇ ಸಾಲಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 9,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.

ಬಜೆಟ್‌ ಗಾತ್ರ: 2023-24ನೇ ಸಾಲಿನಲ್ಲಿ ರಾಜಸ್ವ ಜಮೆಗಳು 2,38,410 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು ಜಿ.ಎಸ್‍.ಟಿ. ಪರಿಹಾರ ಒಳಗೊಂಡಂತೆ 1,75,653 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 12,500 ಕೋಟಿ ರೂ.ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ರಾಜ್ಯ ಸರ್ಕಾರವು ನಿರೀಕ್ಷಿಸಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 85,818 ಕೋಟಿ ರೂ.ಗಳ ಒಟ್ಟು ಸಾಲಗಳು, 23 ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,24,478 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

2023-24ನೇ ಸಾಲಿನಲ್ಲಿ ಒಟ್ಟು 2,50,933 ಕೋಟಿ ರೂ.ಗಳ ರಾಜಸ್ವ ವೆಚ್ಚ, 54,374 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,27,747 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ

Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಯಾವ ಯೋಜನೆ ಸಿಕ್ಕಿದೆ, ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

Karnataka Budget 2024 new
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಶುಕ್ರವಾರ ಮಂಡಿಸಿದ್ದು, ಕೃಷಿ, ಮೂಲಸೌಕರ್ಯ, ಆರೋಗ್ಯ, ಪ್ರವಾಸೋದ್ಯಮ ಸೇರಿ ವಿವಿಧ ವಲಯಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಈ ಬಜೆಟ್‌ನಲ್ಲಿ (Karnataka Budget 2024) ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಯಾವ ಪ್ರಮುಖ ಯೋಜನೆಗಳು ದಕ್ಕಿವೆ ಎಂಬುವುದರ ಕುರಿತ ಜಿಲ್ಲಾವಾರು ವಿವರ ಇಲ್ಲಿದೆ.

ಬೆಂಗಳೂರು

  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ 150 ಕೋಟಿ ರೂ.
  • ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಹನೆಗೆ 20 ಕೋಟಿ ರೂ. ಅನುದಾನ
  • ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್‌ ಶಸ್ತ್ರಚಿಕಿತ್ಸಾ ಸೌಲಭ್ಯ.
  • ಬೆ೦ಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅನ್ನು ಅಭಿವೃದ್ಧಿಗೆ ಕ್ರಮ. 40,000 ಕೋಟಿ ರೂ.ಗಳ ಹೂಡಿಕೆ ಹಾಗೂ 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ.
  • ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City)ಸ್ಥಾಪನೆ ಹಾಗೂ ನಾಲ್ಕು ಅತ್ಯಾಧುನಿಕ ಕ್ರೀಡ ಸಂಕೀರ್ಣಗಳ ನಿರ್ಮಾಣ.
  • ಬೆ೦ಗಳೂರಿನ ಪೊಲೀಸ್‌ ಸುಲಿವನ್‌ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್‌ ಹಾಕಿ ಅಂಕಣ ನಿರ್ಮಾಣ.
  • 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್‌ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.

ಮಂಗಳೂರು

ವಾಟರ್‌ ಮೆಟ್ರೋ ಸಾಂದರ್ಭಿಕ ಚಿತ್ರ
  • ಮ೦ಗಳೂರು ಬಂದರಿನಿಂದ ಬೆ೦ಗಳೂರುವರೆಗೆ ಹಾಗೂ ಬೀದರ್‌ನಿಂದ ಬೆ೦ಗಳೂರು ನಡುವೆ ಆರ್ಥಿಕ ಅಭಿವೃದ್ಧಿ ಕಾರಿಡಾರ್‌ ನಿರ್ಮಾಣಕ್ಕೆ ಕ್ರಮ.
  • ಹಳೆ ಮಂಗಳೂರು, ಕಾರವಾರ ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ.
  • ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್‌ ಬರ್ತ್‌ ನಿರ್ಮಾಣ ಕಾಮಗಾರಿ 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ.
  • ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ತಯಾರಿಸಲು ಕ್ರಮ.
  • ಮಂಗಳೂರಿನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.

ಇದನ್ನೂ ಓದಿ | Karnataka Budget 2024 : ಕಡಲ ತೀರ ವ್ಯಾಪಾರಕ್ಕೆ ಒತ್ತು; 1,017 ಕೋಟಿ ರೂಪಾಯಿ ಅನುದಾನ

ಶಿವಮೊಗ್ಗ

  • ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆ೦ಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್‌ ಸ್ಥಾಪನೆ.
  • ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಕೂರಿಟ ಕಾರಾಗೃಹ ನಿರ್ಮಾಣ

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್‌ ಪಾರ್ಕ್‌ ಅಭಿವೃದ್ಧಿ.

ವಿಜಯಪುರ

ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ

ರಾಮನಗರ

ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟ ರೂ. ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹ೦ತ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ.

ಪುತ್ತೂರು

ಪುತ್ತೂರು ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ.

ರಾಯಚೂರು

ಒಟ್ಟು 130 ಕೋಟಿ ರೂ. ವೆಚ್ಚದಲ್ಲಿ 7 ಶೀತಲಗೃಹ ನಿರ್ಮಾಣ. ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ.

ಕೊಪ್ಪಳ

  • ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಾರಂಭ.

ಮಂಡ್ಯ

  • ಕೆ.ಆರ್‌.ಎಸ್‌ನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣ.
  • ಮಂಡ್ಯದ ಮೈಶುಗರ್‌ ಕಾರ್ಲಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ.

ಧಾರವಾಡ

ಧಾರವಾಡದಲ್ಲಿರುವ ವಾಲ್ಮಿ ಸಂಸ್ಥೆಯನ್ನು Centre of Excellence in Water Management ಆಗಿ ಉನ್ನತೀಕರಿಸಲು ಕ್ರಮ.

ಯಲಗುರ್ಬಾ

ಯಲಬುರ್ಗಾ-ಕುಕನೂರು ತಾಲ್ಲೂಕಿನಲ್ಲಿ 970 ಕೋಟಿ ರೂ. ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಅನುಷ್ಠಾನ.

ಕಲಬುರಗಿ

  • ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟ ರೂ. ಮೊತ್ತದ ಯೋಜನೆ ಜಾರಿ.
  • ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ.
  • ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಸಿ.ಎನ್‌.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಟತಾ ಕೇಂದ್ರ ಸ್ಥಾಪನೆ.
  • ಕಲಬುರಗಿ, ಶಿವಮೊಗ್ಗ. ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ.
  • ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ.

ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ.

ಮೈಸೂರು

  • ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
  • ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿನೆನಪಿಗಾಗಿ ಕೆ.ಆರ್‌. ಆಸ್ಪತ್ರೆ ಆವರಣದಲ್ಲಿ 75 ಕೋಟ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.
  • 1600 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ; ವಿಜಯಪುರ ಹಾಗೂ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು, ರಾಯಚೂರು ಹಾಗೂ ಕಾರವಾರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ.
  • ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್‌ಗಳ ಪ್ರಾರಂಭ; 10,000 ಉದ್ಯೋಗ ಸೃಷ್ಟಿ ಬಳ್ಳಾರಿಯಲ್ಲಿ ಜೀನ್ಸ್‌ ಅಪಾರೆಲ್‌ ಪಾರ್ಕ್‌ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಗೆ ಕ್ರಮ.
  • ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಕೆ ಪ್ರೋತ್ಸಾಹಕ್ಕೆ ಕ್ರಮ

ಕೊಡಗು

  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL)ಅನ್ನು ಸ್ಥಾಪಿಸಲಾಗುವುದು.
  • ವಿರಾಜಪೇಟೆಯಲ್ಲಿ 12 ಕೋಟ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ನಿರ್ಮಾಣ.

ಬಳ್ಳಾರಿ

  • ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್‌ ಅಕಾಡೆಮಿ ಸ್ಥಾಪನೆ.
  • ಬಳ್ಳಾರಿ, ಕಲಬುರಗಿ, ತಳಕಲ್‌ ಮತ್ತು ಮೈಸೂರಿನ ವರುಣಾದಲ್ಲಿ 350 ಕೋಟಿ ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
  • ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿಗಳ ಪ್ರಾರಂಭ.

ಬೆಳಗಾವಿ

  • ಬೆಳಗಾವಿ ನಗರ ಪರಿಮಿತಿಯಲ್ಲಿ 450 ಕೋಟ ರೂ. ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಲೇತುವೆ (Elevated Corridor)ನಿರ್ಮಾಣಕ್ಕೆ ಕ್ರಮ.

ಉತ್ತರ ಕನ್ನಡ

  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು, ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಎರಡನೇ ಬೃಹತ್‌ ಬಂದರಿನ ಅಭಿವೃದ್ಧಿಗೆ ಕ್ರಮ.
  • ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ನಾಲ್ಕು ಬರ್ತ್‌ಗಳ ಅಭಿವೃದ್ಧಿ

ಚಿತ್ರದುರ್ಗ

ಹಿರೇಕೆರೂರು ತಾಲ್ಲೂಕಿನಲ್ಲಿ ವಚನಕಾರ ಸರ್ವಜ್ಞನ ಸ್ಮಾರಕ ನಿರ್ಮಾಣ. ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ.

ಕೊಪ್ಪಳ

Anjanadri hills
  • ಕೊಪ್ಪಳ ಜಿಲ್ಲೆ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಪಡಿಸಲು 100 ಕೋಟಿ ರೂ. ಅನುದಾನ.
  • ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆ೦ಟರ್‌ ನಿರ್ಮಾಣ.

ಇದನ್ನೂ ಓದಿ | Karnataka Budget 2024: ಬಜೆಟ್‌ನಲ್ಲೂ ಸಾರಿಗೆಗೆ ‘ಶಕ್ತಿ’ ನೀಡಿದ ಸಿದ್ದರಾಮಯ್ಯ; ಏನೆಲ್ಲ ಸಿಕ್ಕಿದೆ?

ಬೀದರ್‌

  • ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯ ಪುನಶ್ಚೇತನಕ್ಕೆ 15 ಕೋಟಿ ರೂ. ನೆರವು.
  • ಬೀದರ್‌ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸ೦ರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟ ರೂ. ಅನುದಾನ.
  • ಬೀದರ್‌ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಲ್ಲಾಡಳಿತ ಕಛೇರಿ ಹಾಗೂ ಅಗತ್ಯವಿರುವ ತಾಲ್ಲೂಕುಗಳಲ್ಲಿ ತಾಲ್ಲೂಕಾ ಆಡಳಿತ ಕಚೇರಿ ನಿರ್ಮಾಣ.

ಇದನ್ನೂ ಓದಿ | Karnataka Budget 2024 : 10 ಪ್ರವಾಸಿ ತಾಣಗಳಲ್ಲಿ ಕೇಬಲ್‌ ಕಾರ್‌, ಅಂಜನಾದ್ರಿ ಬೆಟ್ಟಕ್ಕೆ ಹೊಸ ಲುಕ್‌

Continue Reading

ಬಜೆಟ್ 2024

Karnataka Budget 2024 : ಪರಿಶಿಷ್ಟ ಪಂಗಡದ 5 ಸಾವಿರ ಯುವಕರಿಗೆ ಡ್ರೋನ್ ಟ್ರೈನಿಂಗ್​​

Karnataka Budget 2024 : ಡ್ರೋನ್ ತರಬೇತಿ ನೀಡುವ ಮೂಲಕ ಪರಿಶಿಷ್ಟ ಪಂಗಡದ ಯುವಕರಿಗೆ ಔದ್ಯೋಗಿಕ ಅವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

VISTARANEWS.COM


on

Drone Training
Koo

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಯುವಕರಿಗೆ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ. ಪ್ರಮುಖವಾಗಿ ಉದ್ಯೋಗಕ್ಕೆ ನೆರವಾಗುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದರು.

ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ ಕ್ಲಾಸ್​ -3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂಬುದಾಗಿ ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಕ್ರೈಸ್‌ ಯೋಜನೆಯಡಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು| ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು ಎಂದು ನುಡಿದರು.

2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ 100 ರೂ. ನಂತೆ ಹೆಚ್ಚಿಸಲಾಗುವುದು ಎಂದು ಹೇಳಿದರು.

35 ಕೋಟಿ ಕಾರ್ಪಸ್​ ಫಂಡ್​

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಪಸ್​​ ಫಂಡ್​ ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಪರಿಶಿಷ್ಟ ಪಂಗಡಗಳ ಕಲ್ಯಾಣ

  1. ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ ಎಂದು ಬಜೆಟ್​ನಲ್ಲಿ ಘೋಷಿಸಿದರು.
  2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
  3. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು ಎಂದು ಸಿಎಂ ಬಜೆಟ್ ವೇಳೆ ಘೋಷಿಸಿದ್ದಾರೆ.
Continue Reading
Advertisement
srinivasa prasad sutturu sri
ಕರ್ನಾಟಕ12 mins ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ33 mins ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ39 mins ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್54 mins ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ1 hour ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ1 hour ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್2 hours ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ2 hours ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ2 hours ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ2 hours ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202418 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202420 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202422 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202422 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌