KYC Update: ಡಿಮ್ಯಾಟ್‌ ಮತ್ತು ಟ್ರೇಡಿಂಗ್‌ ಖಾತೆ ಕೆವೈಸಿ ಅಪ್‌ಡೇಟ್‌ ಮಾಡಲು ಕೊನೆ ದಿನ ಜೂನ್‌ 30 - Vistara News

ಪ್ರಮುಖ ಸುದ್ದಿ

KYC Update: ಡಿಮ್ಯಾಟ್‌ ಮತ್ತು ಟ್ರೇಡಿಂಗ್‌ ಖಾತೆ ಕೆವೈಸಿ ಅಪ್‌ಡೇಟ್‌ ಮಾಡಲು ಕೊನೆ ದಿನ ಜೂನ್‌ 30

ಡಿಮ್ಯಾಟ್‌ ಮತ್ತು ಟ್ರೇಡಿಂಗ್‌ ಖಾತೆಯನ್ನು ಹೊಂದಿರುವವರು ವಿವರಗಳನ್ನು ಪರಿಷ್ಕರಣೆ ಮಾಡಲು ಇದೇ ಜೂನ್‌ 30 ಕೊನೆಯ ದಿನವಾಗಿದೆ. ತಪ್ಪಿದರೆ ಖಾತೆ ನಿಷ್ಕ್ರಿಯ ಎನ್ನಿಸಲಿದೆ.

VISTARANEWS.COM


on

KYC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಡಿಮ್ಯಾಟ್‌ ಮತ್ತು ಟ್ರೇಡಿಂಗ್‌ ಅಕೌಂಟ್‌ಗಳಿಗೆ ಕೆವೈಸಿ ಪರಿಷ್ಕರಣೆ ಮಾಡಲು ಕೊನೆಯ ದಿನ ಇದೇ 2022ರ ಜೂನ್‌ 30 ಆಗಿದೆ. ಹೀಗಾಗಿ ಎಲ್ಲ ಹೂಡಿಕೆದಾರರು ಗಡುವಿನ ಒಳಗಾಗಿ ಕೆವೈಸಿ ಅಪ್‌ಡೇಟ್‌ ಮಾಡಬೇಕು ಎಂದು ಎನ್‌ಎಸ್‌ಡಿಎಲ್‌ ತಿಳಿಸಿದೆ.

ನ್ಯಾಶನಲ್‌ ಸೆಕ್ಯುರಿಟೀಸ್‌ ಡಿಪಾಸಿಟರಿ ಲಿಮಿಟೆಡ್‌ (NSDL) ಈ ಸಂಬಂಧ ಹೇಳಿಕೆ ನೀಡಿದ್ದು, ಕೆವೈಸಿಯಲ್ಲಿ ಹೂಡಿಕೆದಾರರು ತಮ್ಮ ಹೆಸರು, ಪ್ಯಾನ್‌, ವಿಳಾಸ, ಮೊಬೈಲ್‌ ಸಂಖ್ಯೆ, ಇಮೇಲ್‌ ಐಡಿ, ಆದಾಯ ಶ್ರೇಣಿಯನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ತಿಳಿಸಿದೆ. 2021ರ ಜೂನ್‌ 1ರಿಂದ ಕೆವೈಸಿಯಲ್ಲಿ ಈ ಆರೂ ವಿವರಗಳನ್ನು ನೀಡುವುದು ಕಡ್ಡಾಯವಾಗಿದೆ.

ಹೂಡಿಕೆದಾರರಿಗೆ ಈಗಾಗಲೇ ಅಲರ್ಟ್‌ ಮಾಡಲಾಗಿದೆ ಎಂದು ಎನ್‌ಎಸ್‌ಡಿಎಲ್‌ ತಿಳಿಸಿದೆ. ಜೂನ್‌ 30ರ ಬಳಿಕ ಕೆವೈಸಿ ಪರಿಷ್ಕರಣೆ ಆಗದಿರುವ ಡಿಮ್ಯಾಟ್‌ ಮತ್ತು ಟ್ರೇಡಿಂಗ್‌ ಖಾತೆಗಳನ್ನು ನಿಷ್ಕ್ರಿಯ ಖಾತೆ ಎಂದು ಪರಿಗಣಿಸಲಾಗುವುದು ಎಂದು ಎನ್‌ಎಸ್‌ಡಿಎಲ್‌ ತಿಳಿಸಿದೆ.

ಈ ಹಿಂದೆ 2022 ಮಾರ್ಚ್‌ 31 ಕೆವೈಸಿ ಪರಿಷ್ಕರಣೆಗೆ ಕೊನೆ ದಿನಾಂಕವಾಗಿತ್ತು ಬಳಿಕ ಜೂನ್‌ 30ಕ್ಕೆ ವಿಸ್ತರಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Mohammed Siraj : ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು,

VISTARANEWS.COM


on

Mohammed Siraj
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿಜಯದ ಅಭಿಯಾನದ ನಂತರ ಟೀಮ್ ಇಂಡಿಯಾ ತಾರೆಯರಿಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಗುತ್ತಿದೆ. ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅಮೋಘ ಬೆಂಬಲ ಪಡೆದುಕೊಂಡಿದ್ದ ಭಾರತ ತಂಡದ ಆಟಗಾರರು ಇದೀಗ ತಮ್ಮ ತಮ್ಮ ತವರಿಗೆ ಮರಳಿದ್ದಾರೆ. ಅವರಿಗೆ ಅಲ್ಲಿಯೂ ದೊಡ್ಡ ಮಟ್ಟ ಶ್ಲಾಘನೆ ದೊರಕಿದೆ. ವೇಗದ ಬೌಲರ್​ ಮೊಹಮ್ಮದ್ ಸಿರಾಜ್​ (Mohammed Siraj ) ಹೈದಾರಾದಬಾದ್​ನಲ್ಲಿ ಭರ್ಜರಿ ಸ್ವಾಗತ ಗಿಟ್ಟಿಸಿಕೊಂಡರು.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 7 ರನ್​ಗಳ ಭರ್ಜರಿ ಜಯ ಸಾಧಿಸಿದೆ. 11 ವರ್ಷಗಳ ಅಂತರದ ನಂತರ ಐಸಿಸಿ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಭಾರತದ ಹಲವು ವರ್ಷಗಳ ನೋವನ್ನು ಮರೆಯಿತು. ಮೆನ್ ಇನ್ ಬ್ಲೂ ತಂಡವು ಹಲವಾರು ಸಂದರ್ಭಗಳಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಸೋತಿತ್ತು. ಕೊನೆಗೂ ಅವರು ತಮ್ಮ ನಿರೀಕ್ಷೆಯನ್ನು ಮೀರಿದ್ದಾರೆ.

ತಂಡವು ಮಂಗಳವಾರ ಭಾರತಕ್ಕೆ ಇಳಿಯಬೇಕಿತ್ತು. ಬೆರಿಲ್ ಚಂಡಮಾರುತದಿಂದಾಗಿ ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​ನಿಂದ ಅವರ ನಿರ್ಗಮನವು ಎರಡು ದಿನ ವಿಳಂಬವಾಯಿತು. ಅಂತಿಮವಾಗಿ ಬುಧವಾರ ದ್ವೀಪವನ್ನು ಬಿಡುವಲ್ಲಿ ಯಶಸ್ವಿಯಾದರು. ಗುರುವಾರ ಬೆಳಿಗ್ಗೆ ಭಾರತಕ್ಕೆ ಬಂದಿಳಿದರು. ಮುಂಬೈಗೆ ತೆರಳುವ ಮೊದಲು ತಂಡವು ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಇಳಿದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಇದನ್ನೂ ಓದಿ: Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು, ಭಾರತ ತಂಡ ಮತ್ತು ಅಭಿಮಾನಿಗಳು ಒಟ್ಟಾಗಿ ಸ್ಮರಣೀಯ ವಿಜಯವನ್ನು ಆಚರಿಸಿದರು. ಬಿಸಿಸಿಐನಿಂದ ಸನ್ಮಾನಿಸಲ್ಪಡುವ ಮೊದಲು ಆಟಗಾರರು ಪ್ರೇಕ್ಷಕರೊಂದಿಗೆ ನೃತ್ಯ ಮಾಡಿದರು.

ಮೊಹಮ್ಮದ್ ಸಿರಾಜ್​​ಗೆ ಹೈದರಾಬಾದ್ ಸ್ವಾಗತ

ಗುರುವಾರ ಮುಂಬೈನಲ್ಲಿ ವಿಜಯೋತ್ಸವದ ನಂತರ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಶುಕ್ರವಾರ ಸಂಜೆ ತಮ್ಮ ತವರು ಪಟ್ಟಣ ಹೈದರಾಬಾದ್​ಗೆ ಬಂದಿಳಿದರು. ನಿರೀಕ್ಷೆಯಂತೆ, ವಿಮಾನ ನಿಲ್ದಾಣದ ಹೊರಗೆ ಭಾರಿ ಜನಸಮೂಹ ಅವರಿಗಾಗಿ ಕಾಯುತ್ತಿತ್ತು. ಅಭಿಮಾನಿಗಳು ತಮ್ಮ ತವರು ಆಟಗಾರನನ್ನು ಸ್ವಾಗತಿಸುತ್ತಿದ್ದಂತೆ ಎಲ್ಲೆಡೆ ‘ಇಂಡಿಯಾ, ಇಂಡಿಯಅ ‘ ಘೋಷಣೆಗಳು ಮೊಳಗಿದವು.

ಮೊಹಮ್ಮದ್ ಸಿರಾಜ್ ಟಿ 20 ವಿಶ್ವಕಪ್​​ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದಾರೆ. ಪಂದ್ಯಾವಳಿಯ ಯುಎಸ್ಎ ಲೆಗ್ ಮುಗಿದ ಕೂಡಲೇ ಕುಲ್ದೀಪ್ ಯಾದವ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಲಾಗಿದೆ. ಕೆರಿಬಿಯನ್ ಪರಿಸ್ಥಿತಿಗಳು ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ, ಸಿರಾಜ್ ಬದಲಿಗೆ ಕುಲ್ದೀಪ್ ಅವರನ್ನು ತಂಡಕ್ಕೆ ಕರೆತಂದಿತು.

ಐದು ಪಂದ್ಯಗಳಲ್ಲಿ ಕುಲ್ದೀಪ್ 10 ವಿಕೆಟ್​ಗಳನ್ನು ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಿರಾಜ್ 3 ಪಂದ್ಯಗಳಲ್ಲಿ 1 ವಿಕೆಟ್ ಪಡೆದಿದ್ದರು. .

Continue Reading

ವಿದೇಶ

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Akshata Murty: ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ದೇಶದ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ, ಅವರ ಹಿಂದೆ ನಿಂತಿದ್ದ ಪತ್ನಿ ಅಕ್ಷತಾ ಮೂರ್ತಿ ಅವರು ಧರಿಸಿದ್ದ ಡ್ರೆಸ್‌ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Akshata Murty
Koo

ಲಂಡನ್:‌ ಬ್ರಿಟನ್‌ ಸಾರ್ವತ್ರಿಕ ಚುನಾವಣೆಯ (Britain Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ರಾಜೀನಾಮೆ ನೀಡಿ, ವಿದಾಯದ ಭಾಷಣ ಮಾಡುವಾಗ ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ಅವರು ಧರಿಸಿದ್ದ ಡ್ರೆಸ್‌ ಹಾಗೂ ಅದರ ಮೌಲ್ಯದ ಕುರಿತು ಭಾರಿ ಚರ್ಚೆ ಶುರುವಾಗಿದೆ.

ಚುನಾವಣೆಯಲ್ಲಿ ಹಿನ್ನಡೆಯಾಗುತ್ತಲೇ ದೇಶದ ಜನರನ್ನು ಉದ್ದೇಶಿಸಿ ರಿಷಿ ಸುನಕ್‌ ಮಾತನಾಡಿದರು. “ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ” ಎಂದು ಅವರು ಹೇಳಿದರು. ಇದೇ ವೇಳೆ, ಅವರ ಹಿಂದೆ ಅಕ್ಷತಾ ಮೂರ್ತಿ ಅವರು ನಿಂತಿದ್ದರು. ಅಷ್ಟೇ ಅಲ್ಲ, ಅಕ್ಷತಾ ಮೂರ್ತಿ ಅವರು ಧರಿಸಿದ್ದ, ಇಂಡಿಯನ್‌ ಲೇಬಲ್‌ನ ಡ್ರೆಸ್‌ ಕುರಿತು ಭಾರಿ ಚರ್ಚೆಯಾಗುತ್ತಿದೆ. ಬ್ರಿಟನ್‌ ರಾಷ್ಟ್ರಧ್ವಜದಲ್ಲಿರುವ ನೀಲಿ, ಕೆಂಪು ಹಾಗೂ ವೈಟ್‌ ಪಟ್ಟಿಗಳು ಇರುವ, ಹೈ ನೆಕ್ಡ್‌ ಆಗಿರುವ ಡ್ರೆಸ್‌ಅನ್ನು ಅಕ್ಷತಾ ಮೂರ್ತಿ ಧರಿಸಿದ್ದು, ಇದರ ಬೆಲೆ 42 ಸಾವಿರ ರೂ. ಇದೆ ಎಂದು ತಿಳಿದುಬಂದಿದೆ.

ಬ್ರಿಟನ್‌ ಪ್ರಧಾನಿಯಾಗಿ ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌ ಆಯ್ಕೆಯಾಗಿದ್ದಾರೆ. ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ದೇಶದ ಜನರ ಸೇವೆ ಮಾಡುವುದೇ ನಮಗೆ ಭಾಗ್ಯವಾಗಿದೆ. ನೀವು ಲೇಬರ್‌ ಪಕ್ಷಕ್ಕೆ ಮತ ಹಾಕಿದ್ದೀರೋ, ಬಿಟ್ಟಿದ್ದೀರೋ ಅದು ಬೇಕಾಗಿಲ್ಲ. ದೇಶದ ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ರಾಜಕೀಯ ಎಂದರೆ ಉತ್ತಮ ಆಡಳಿತ ನೀಡುವುದು, ರಾಜಕೀಯವನ್ನು ಸಕಾರಾತ್ಮಕ ಸಂಗತಿಗಾಗಿ ಬಳಸಿಕೊಳ್ಳುತ್ತೇವೆ. ಮತಗಳನ್ನು ನೀಡಿ ಗೆಲ್ಲಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು. ಕೀರ್‌ ಸ್ಟಾರ್ಮರ್‌ ಅವರು ನಿರ್ಗಮಿತ ಪ್ರಧಾನಿ ರಿಷಿ ಸುನಕ್‌ ಅವರ ಆಡಳಿತವನ್ನೂ ಹೊಗಳಿದ್ದು ವಿಶೇಷವಾಗಿತ್ತು.

ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ಅವರು ಆಯ್ಕೆಯಾಗುತ್ತಲೇ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಬ್ರಿಟನ್‌ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ-ಬ್ರಿಟನ್‌ ಒಗ್ಗೂಡಿ, ಸಂಬಂಧವನ್ನು ವೃದ್ಧಿಸಿಕೊಂಡು ಉಭಯ ದೇಶಗಳ ಏಳಿಗೆಗೆ ಶ್ರಮಿಸುವ ವಿಶ್ವಾಸವಿದೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಇದುವರೆಗೆ ಆಡಳಿತ ನಡೆಸಿದ, ಭಾರತದ ಮೂಲದ ರಿಷಿ ಸುನಕ್‌ ಅವರ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Continue Reading

ಪ್ರಮುಖ ಸುದ್ದಿ

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Hardik Pandya : ಹಾರ್ದಿಕ್ ಪಾಂಡ್ಯ ಟಿ20 ವಿಶ್ವ ಕಪ್​ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ದೊಡ್ಡ ಪಾತ್ರ ವಹಿಸಿದ್ದರು. ಅವರೆಲ್ಲರ ಪ್ರಯತ್ನ ಭಾರತ ತಂಡದ ಐಸಿಸಿ ಟ್ರೋಫಿಗಾಗಿ ದೀರ್ಘಕಾಲದ ಕಾಯುವಿಕೆ ಕೊನೆಯಾಗಿತು.. 2007ರ ಬಳಿಕ ಭಾರತ ಟಿ20 ವಿಶ್ವಕಪ್ ಗೆದ್ದಿಲ್ಲ. ಅಂತಿಮವಾಗಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನೊಂದಿಗೆ ದೀರ್ಘ ಕಾಯುವಿಕೆ ಕೊನೆಗೊಳಿಸುವಲ್ಲಿ ಯಶಸ್ವಿಯಾದರು.

VISTARANEWS.COM


on

Hardik Pandya
Koo

ಬೆಂಗಳೂರು: ಟಿ20 ವಿಶ್ವ ಕಪ್​​ ಗೆದ್ದು ಖುಷಿಯಲ್ಲಿರುವ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಐಪಿಎಲ್​ನಲ್ಲಿ ಅವರ ಮುಂಬಯಿ ಇಂಡಿಯನ್ಸ್ ಜತೆಗಾರ ಇಶಾನ್ ಕಿಶನ್ ಶುಕ್ರವಾರ ಭೇಟಿಯಾದರು. ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತದ ವಿಜಯ ಅಭಿಯಾನದಲ್ಲಿ ಅವರ ಪಾತ್ರಕ್ಕಾಗಿ ಅಭಿನಂದಿಸಿದರು. ಈ ವೇಳೆ ಅವರು ಎರಡೂ ಕೆನ್ನೆಗಳಿಗೆ ಮುತ್ತು ನೀಡಿ ಶುಭಾಶಯ ತಿಳಿಸಿದರು.

ಹಾರ್ದಿಕ್ ಪಾಂಡ್ಯ ಟಿ20 ವಿಶ್ವ ಕಪ್​ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ದೊಡ್ಡ ಪಾತ್ರ ವಹಿಸಿದ್ದರು. ಅವರೆಲ್ಲರ ಪ್ರಯತ್ನ ಭಾರತ ತಂಡದ ಐಸಿಸಿ ಟ್ರೋಫಿಗಾಗಿ ದೀರ್ಘಕಾಲದ ಕಾಯುವಿಕೆ ಕೊನೆಯಾಗಿತು.. 2007ರ ಬಳಿಕ ಭಾರತ ಟಿ20 ವಿಶ್ವಕಪ್ ಗೆದ್ದಿಲ್ಲ. ಅಂತಿಮವಾಗಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನೊಂದಿಗೆ ದೀರ್ಘ ಕಾಯುವಿಕೆ ಕೊನೆಗೊಳಿಸುವಲ್ಲಿ ಯಶಸ್ವಿಯಾದರು.

ಟಿ20 ವಿಶ್ವಕಪ್ ಟೂರ್ನಿಯ 9ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿ ಚಾಂಪಿಯನ್ ಆಯಿತು. ಹಾರ್ದಿಕ್ ಪಾಂಡ್ಯ ಪಂದ್ಯಾವಳಿಯುದ್ದಕ್ಕೂ ಟೀಮ್ ಇಂಡಿಯಾಕ್ಕಾಗಿ ಉತ್ತಮ ಪ್ರದರ್ಶನ ನೀಡಿದ್ದರು ಮತ್ತು ಫೈನಲ್​​ನಲ್ಲಿಯೂ ಭಾರಿ ಪ್ರಭಾವ ಬೀರಿದ್ದರು. 177 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತು.

ನಂತರ ಭಾರತದ ಉಪನಾಯಕ 17 ನೇ ಓವರ್​ನ ಮೊದಲ ಎಸೆತದಲ್ಲಿ ಅಪಾಯಕಾರಿಯಾಗಿದ್ದ ಹೆನ್ರಿಕ್ ಕ್ಲಾಸೆನ್ ಅವರನ್ನು 52 ರನ್​ಗಳಿಗೆ ಔಟ್ ಮಾಡುವ ಮೂಲಕ ಪಂದ್ಯವನ್ನು ಭಾರತ ಕಡೆಗೆ. ನಂತರ ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಔಟ್​ ಮಾಡಿದರು. ಪಾಂಡ್ಯ 48 ಸರಾಸರಿಯಲ್ಲಿ 144 ರನ್ ಗಳಿಸಿದ್ದಾರೆ ಮತ್ತು 17.36 ಸರಾಸರಿಯಲ್ಲಿ 11 ವಿಕೆಟ್​ಗಳನ್ನು ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯಗೆ ಶುಭಾಶಯ ಸಲ್ಲಿಸಿದ ಇಶಾನ್ ಕಿಶನ್

ಶುಕ್ರವಾರ ಇಶಾನ್ ಕಿಶನ್ ತಮ್ಮ ಐಪಿಎಲ್​ ಸಹ ಆಟಗಾರನಿಗೆ ಶುಭಾಶಯವನ್ನು ಇನ್​​ಸ್ಟಾಗ್ರಾಮ್​ ಮೂಲಕ ಸಲ್ಲಿಸಿದರು. ಅದರಲ್ಲಿ ಅವರು ಪಾಂಡ್ಯ ಅವರ ನಿವಾಸಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಅವರ ಪ್ರದರ್ಶನಕ್ಕಾಗಿ ಅವರನ್ನು ಅಭಿನಂದಿಸಿದರು. ಕಿಶನ್ ಪಾಂಡ್ಯಗೆ ಮುತ್ತಿಡುವ ಮೊದಲು ಇಬ್ಬರೂ ಅಪ್ಪಿಕೊಂಡರು.

ಇದನ್ನೂ ಓದಿ: T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

ಕಿಶನ್ ತಮ್ಮ ವಿಶ್ವಕಪ್​ ವಿಚಾರದಲ್ಲಿ ಯಾವುದೂ ಪೂರಕವಾಗಿ ನಡೆಯದಿದ್ದ ಪಾಂಡ್ಯ ಹೇಗೆ ಶಾಂತವಾಗಿ ಮತ್ತು ಏಕಾಗ್ರತೆಯಿಂದ ಇರಲು ಸಾಧ್ಯವಾಯಿತು ಎಂಬುದನ್ನು ಎತ್ತಿ ತೋರಿಸಿದ್ದಾರೆ. ಏಸ್ ಆಲ್ರೌಂಡರ್ ಐಪಿಎಲ್ ಅಭಿಯಾನದುದ್ದಕ್ಕೂ ಅಭಿಮಾನಿಗಳಿಂದ ಟೀಕೆಗಳನ್ನು ಎದುರಿಸಿದ್ದರು. ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿದ ಬಗ್ಗೆ ಅಭಿಮಾನಿಗಳು ತಮ್ಮ ಕೋಪವನ್ನು ಹೊರಹಾಕಿದ್ದರು.

ಕಳೆದ ಕೆಲವು ತಿಂಗಳುಗಳಲ್ಲಿ ನೀವು ಅನೇಕ ಕಷ್ಟದ ದಿನಗಳನ್ನು ಎದುರಿಸಿದ್ದೀರಿ. ಆದರೂ ನೀವು ಶಾಂತವಾಗಿ ಮತ್ತು ಇಂದು ನೀವು ನಿಮ್ಮ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಪ್ರಾಮಾಣಿಕತೆಯ ಫಲಿತಾಂಶವನ್ನು ಪಡೆದಿದ್ದೀರಿ. ಇನ್ನೂ ಹೆಚ್ಚಿನದನ್ನು ಸಾಧನೆ ಮಾಡಿದ್ದೀರಿ. ಅದನ್ನು ಹೇಳಲು ಆದರೆ ಪದಗಳು ಕಡಿಮೆಯಾಗುತ್ತವೆ ಎಂದು ಇಶಾನ್ ಕಿಶನ್ ಬರೆದಿದ್ದಾರೆ.

Continue Reading

ಉತ್ತರ ಕನ್ನಡ

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Weather News: ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ. ಶನಿವಾರವಂತೂ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Weather News
Koo

ಕಾರವಾರ/ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ (Rain News) ಮುಂದುವರಿದಿದ್ದು, ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಸೇರಿ ಕರಾವಳಿಯಾದ್ಯಂತ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಯ (Weather News) ಕುರಿತು ಹವಾಮಾನ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ರಜೆ ಘೋಷಣೆ ಮಾಡಿದ್ದಾರೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಕಟ್ಟಡಗಳು ಕುಸಿದಿವೆ.

karnataka Weather Forecast

ಉಡುಪಿ ಜಿಲ್ಲೆಯಲ್ಲೂ ರಜೆ

ಮಳೆಯ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕುಗಳು ಸೇರಿ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ವಿಭಾಗಕ್ಕೆ ರಜೆ ಘೋಷಿಸಲಾಗಿದೆ. ಆದರೆ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ ,ಎಂಜಿನಿಯರಿಂಗ್, ಐಟಿಐ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ

Continue Reading
Advertisement
Mohammed Siraj
ಪ್ರಮುಖ ಸುದ್ದಿ17 mins ago

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Akshata Murty
ವಿದೇಶ23 mins ago

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Hardik Pandya
ಪ್ರಮುಖ ಸುದ್ದಿ43 mins ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ2 hours ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ2 hours ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ2 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ2 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ3 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ3 hours ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ3 hours ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ7 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ8 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ10 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ11 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು12 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು13 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌