LIC business LIC pales in comparison to private insurance companiesLIC business : ಖಾಸಗಿ ವಿಮೆ ಕಂಪನಿಗಳ ಅಬ್ಬರಕ್ಕೆ ಮಂಕಾದ ಎಲ್‌ಐಸಿ

ಪ್ರಮುಖ ಸುದ್ದಿ

LIC business : ಖಾಸಗಿ ವಿಮೆ ಕಂಪನಿಗಳ ಅಬ್ಬರಕ್ಕೆ ಮಂಕಾದ ಎಲ್‌ಐಸಿ

LIC business ಖಾಸಗಿ ವಿಮೆ ಕಂಪನಿಗಳು ಕಳೆದ ಮೇ ತಿಂಗಳಿನಲ್ಲಿ ಉತ್ತಮ ವಹಿವಾಟನ್ನು ದಾಖಲಿಸಿವೆ. ಮಾಸಿಕ ಬೆಳವಣಿಗೆಯ ಮಟ್ಟದಲ್ಲಿ ಎಲ್‌ಐಸಿಯನ್ನೂ ಹಿಂದಿಕ್ಕಿವೆ. ವಿವರ ಇಲ್ಲಿದೆ.

VISTARANEWS.COM


on

LIC OFFICE
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಖಾಸಗಿ ವಲಯದ ವಿಮೆ ಕಂಪನಿಗಳು ಕಳೆದ ಮೇ ತಿಂಗಳಿನಲ್ಲಿ ಭರ್ಜರಿ ವಹಿವಾಟು ದಾಖಲಿಸಿವೆ. ಇವುಗಳ ಅಬ್ಬರಕ್ಕೆ ಎಲ್‌ಐಸಿ ಮಂಕಾಗಿದೆ. (Life Insurance Corporation-LIC) ಖಾಸಗಿ ವಿಮೆ ಕಂಪನಿಗಳು ಪ್ರೀಮಿಯಂ ಮಾರಾಟದಲ್ಲಿ 10% ಬೆಳವಣಿಗೆ ದಾಖಲಿಸಿದ್ದರೆ, ಎಲ್‌ಐಸಿ 6% ಇಳಿಕೆ ಕಂಡಿದೆ.

ಎಸ್‌ಬಿಐ ಲೈಫ್‌ ಮತ್ತು ಎಚ್‌ಡಿಎಫ್‌ಸಿ ಲೈಫ್‌ ಅತಿ ಹೆಚ್ಚು ವಹಿವಾಟನ್ನು ಮೇನಲ್ಲಿ ನಡೆಸಿವೆ. ವಿಮೆ ಮಾರುಕಟ್ಟೆ ತಜ್ಞರ ಪ್ರಕಾರ ಕಳೆದ ತಿಂಗಳು ವಿಮೆ ಬಿಸಿನೆಸ್‌ ಇಳಿಕೆಗೆ ಬೇಸ್‌ ಎಫೆಕ್ಟ್‌ ಉನ್ನತ ಮಟ್ಟದಲ್ಲಿ ಇದ್ದುದೂ ಒಂದು ಕಾರಣ. ಏಕೆಂದರೆ 2022ರ ಮೇನಲ್ಲಿ ವಿಮೆ ಕಂಪನಿಗಳು 101% ವಹಿವಾಟು ಪ್ರಗತಿ ದಾಖಲಿಸಿತ್ತು. ಕೋವಿಡ್‌ ಬಿಕ್ಕಟ್ಟು ಉಪಶಮನವಾಗಿ ಮಾರುಕಟ್ಟೆ ತೆರೆದಿದ್ದರಿಂದ ವಹಿವಾಟು ಹೆಚ್ಚಳವಾಗಿತ್ತು.

ಐಸಿಐಸಿಐ ಪ್ರುಡೆನ್ಷಿಯಲ್‌ ಲೈಫ್‌, ಎಚ್‌ಡಿಎಫ್‌ಸಿ ಲೈಫ್‌ ಮತ್ತು ಎಸ್‌ಬಿಐ ಲೈಫ್‌ ಕಳೆದ ಮೇನಲ್ಲಿ 8-10% ಪ್ರಗತಿ ದಾಖಲಿಸಿತ್ತು. ಮ್ಯಾಕ್ಸ್‌ ಲೈಫ್ಸ್‌ ಬೆಳವಣಿಗೆ ಮಂದಗತಿಯಲ್ಲಿತ್ತು. ಏಪ್ರಿಲ್‌ನಲ್ಲಿ ವಿಮೆ ವಹಿವಾಟು ಕಡಿಮೆಯಾಗಿದ್ದರೂ, ಮೇನಲ್ಲಿ ಮತ್ತೆ ಚುರುಕಾಗಿತ್ತು ಎಂದು ಕೋಟಕ್‌ ಇನ್‌ಸ್ಟಿಟ್ಯೂಶನಲ್‌ ಈಕ್ವಿಟೀಸ್‌ನ ವರದಿ ತಿಳಿಸಿದೆ.

ಜೀವ ವಿಮೆ ಇಂಡಸ್ಟ್ರಿ (life insurance industry) ಕಳೆದ ಏಪ್ರಿಲ್-ಮೇನಲ್ಲಿ ಒಟ್ಟು 36,043 ಕೋಟಿ ರೂ. ಪ್ರೀಮಿಯಂ ಅನ್ನು ಸಂಗ್ರಹಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 15% ಇಳಿಕೆ ದಾಖಲಿಸಿದೆ. ಎಸ್‌ಬಿಐ ಲೈಫ್‌ 3,751 ಕೋಟಿ ರೂ.ಗಳ ಪ್ರೀಮಿಯಂ ಸಂಗ್ರಹಿಸಿದೆ. 2022-23ರ ಇದೇ ಅವಧಿಗೆ ಹೋಲಿಸಿದರೆ (2,764 ಕೋಟಿ ರೂ.) 35% ಏರಿಕೆ ದಾಖಲಿಸಿದೆ.

ಎಲ್‌ಐಸಿ ಗಣನೀಯ ಕುಸಿತ: ಎಲ್‌ಐಸಿಯ ಪ್ರೀಮಿಯಂ ಸಂಗ್ರಹ 27,557 ಕೋಟಿ ರೂ.ಗಳಿಂದ 19,866 ಕೋಟಿ ರೂ.ಗೆ ಇಳಿಕೆ ದಾಖಲಿಸಿದೆ. 27% ಕುಸಿತ ಆಗಿರುವುದು ಗಮನಾರ್ಹ.‌

ಕಳೆದ ವರ್ಷ ಸಂಚಲನ ಮೂಡಿಸಿದ್ದ ಎಲ್‌ಐಸಿಯ ಐಪಿಒದಲ್ಲಿ ಹೂಡಿಕೆ ಮಾಡಿದ್ದವರಿಗೆ ಕಳೆದೊಂದು ವರ್ಷದಲ್ಲಿ ಭಾರಿ ನಿರಾಸೆಯಾಗಿದೆ. (LIC Stock) ಹೂಡಿಕೆದಾರರಿಗೆ ಒಂದೇ ವರ್ಷದಲ್ಲಿ 2.5 ಲಕ್ಷ ಕೋಟಿ ರೂ. ನಷ್ಟದ ಆಘಾತ ಎದುರಿಸುವಂತಾಗಿದೆ. (Life Insurance Corporation India-LIC) 2022ರ ಮೇ 17ರಂದು ಎಲ್‌ಐಸಿ ಷೇರು ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ನೋಂದಣಿಯಾಗಿತ್ತು. ಐಪಿಒ ದರ ಪ್ರತಿ ಷೇರಿಗೆ 949 ರೂ. ಆಗಿತ್ತು. ಈ ಮಟ್ಟದಿಂದ ದರದಲ್ಲಿ 40% ಇಳಿಕೆಯಾಗಿದೆ. ಇದರ ಪರಿಣಾಮ ಎಲ್‌ಐಸಿಯ ಮಾರುಕಟ್ಟೆ ಮೌಲ್ಯದಲ್ಲಿ ಒಟ್ಟು 2.5 ಲಕ್ಷ ಕೋಟಿ ರೂ. ನಷ್ಟವಾಗಿದೆ.

ಸರ್ಕಾರ ಈಗಲೂ ಎಲ್‌ಐಸಿಯಲ್ಲಿ 96.5% ಷೇರು ಪಾಲನ್ನು ಹೊಂದಿದೆ. ಮ್ಯೂಚುವಲ್‌ ಫಂಡ್‌ಗಳು ಮತ್ತು ಎಫ್‌ಐಐಗಳು ಎಲ್‌ಐಸಿಯಲ್ಲಿ ಕಳೆದೊಂದು ವರ್ಷದಲ್ಲಿ ಹೂಡಿಕೆಯನ್ನು ತಗ್ಗಿಸಿವೆ. ಎಲ್‌ಐಸಿಯಲ್ಲಿ ರಿಟೇಲ್‌ ಹೂಡಿಕೆದಾರರ ಸಂಖ್ಯೆಯೂ ಇಳಿದಿದೆ.

ಇದನ್ನೂ ಓದಿ: Digital Payments: ಡಿಜಿಟಲ್ ಪಾವತಿ, ಇಂಡಿಯಾದ್ದೇ ಕೀರ್ತಿ! ಎಲ್ಲ ದೇಶಗಳನ್ನು ಹಿಂದಿಕ್ಕಿ ನಂ.1 ಆದ ಭಾರತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪವಿತ್ರಾ ಗೌಡಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ (Pavithra Gowda) ಸೇರಿ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಎ1 ಪವಿತ್ರಾ ಗೌಡಳನ್ನು ಮಂಗಳವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಜೀಪ್‌ನಿಂದ ಇಳಿಯುವಾಗ ಯಾವುದೇ ರೀತಿಯ ಭಯವಿಲ್ಲದೇ ಪವಿತ್ರಾ ಗೌಡ ನಗುನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದು ಕಂಡುಬಂದಿದೆ.

ಆರೋಪಿಗಳಿಗೆ 6 ದಿನಗಳ ಕಾಲ ಕಸ್ಟಡಿ ವಿಧಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಯಿತು. ಈ ವೇಳೆ ಕ್ಯಾಮೆರಾಗಳ ಕಣ್ಣಿಗೆ ಬೀಳದಂತೆ ಮುಖಕ್ಕೆ ಅಡ್ಡಲಾಗಿ ವಾಟರ್‌ ಬಾಟಲ್‌ ಹಿಡಿದು ಕಾರಿನಲ್ಲಿ ಪವಿತ್ರಾ ಗೌಡ ನಗುತ್ತಿದ್ದದ್ದು ಕಂಡುಬಂದಿದೆ. ನಂತರ ಯಾವುದೇ ಭಯವೇ ಇಲ್ಲದಂತೆ ನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದಾಳೆ. ಸದ್ಯ ಈ ವಿಡಿಯೊ ವೈರಲ್‌ ಆಗಿದ್ದು, ಬಂಧನವಾದರೂ ಇವರಿಗೆ ಯಾವುದೇ ಆತಂಕ, ಭಯ ಇಲ್ಲ ಎಂದು ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ಇದನ್ನೂ ಓದಿ | Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Actor Darshan Arrested

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

Priyanka Gandhi: ಅಮೇಥಿ ಮತ್ತು ರಾಯ್​​ಬರೇಲಿ ಲೋಕಸಭಾ ಸ್ಥಾನಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಯ್ಕೆಯಾಗಿದ್ದವು. ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಊಹಿಸಲಾಗಿತ್ತು. ಕೊನೆಗೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್​ಬರೇಲಿಯಲ್ಲಿ ಸ್ಪರ್ಧಿಸಿದ್ದರು.

VISTARANEWS.COM


on

Priyanka Gandhi:
Koo

ನವದೆಹಲಿ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಸ್ಪರ್ಧಿಯಾಗಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi) ನಿಂತಿದ್ದರೆ 2 ರಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಿದ್ದರು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ರಾಯ್​ಬರೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

“ನಾನು ಇದನ್ನು ಅಹಂಕಾರದಿಂದ ಹೇಳುತ್ತಿಲ್ಲ” ಎಂದು ಹೇಳಿದ ರಾಹುಲ್ ಗಾಂಧಿ, ಭಾರತದ ಜನರು ಪ್ರಧಾನಿ ಮೋದಿಯವರ ಆಡಳಿತದಿಂದ ಸಂತುಷ್ಟರಾಗಿಲ್ಲ. ಅವರಿಗೆ ಮತದಾರರು ಸ್ಪಷ್ಟ ಸಂದೇಶ ಕಳುಹಿಸಿದ್ದಾರೆ. ಹೀಗಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ನುಡಿದಿದ್ದಾರೆ. ಜನರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ನಿಲ್ಲುತ್ತೇವೆ ಎಂಬ ಸಂದೇಶವನ್ನು ಕಳುಹಿಸಿದ್ದಾರೆ” ಎಂದು ಮುಂದುವರಿದ ರಾಹುಲ್ ಗಾಂಧಿ ಹೇಳಿದರು.

ಅಮೇಥಿ ಮತ್ತು ರಾಯ್​​ಬರೇಲಿ ಲೋಕಸಭಾ ಸ್ಥಾನಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಯ್ಕೆಯಾಗಿದ್ದವು. ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಊಹಿಸಲಾಗಿತ್ತು. ಕೊನೆಗೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್​ಬರೇಲಿಯಲ್ಲಿ ಸ್ಪರ್ಧಿಸಿದ್ದರು. ಅವರು ಅಮೇಥಿಯಿಂದ ಕೆಎಲ್ ಶರ್ಮಾ ಅವರನ್ನು ಕಣಕ್ಕಿಳಿಸಿದರು, ಅವರು ಬಿಜೆಪಿಯ ಸ್ಮೃತಿ ಇರಾನಿ ಅವರನ್ನು 1.6 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

ಇದನ್ನೂ ಓದಿ: Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆದಾಗ್ಯೂ, ಅವರ ಗೆಲುವಿನ ಅಂತರವು 2019 ಮತ್ತು 2014 ಕ್ಕಿಂತ ಕಡಿಮೆಯಾಗಿದೆ. 1.5 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ಆದಾಗ್ಯೂ, ಬಿಜೆಪಿ ಲೋಕಸಭೆಯಲ್ಲಿ 240 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಕೊರತೆಯನ್ನು ಎದುರಿಸಿತು. 2014 ಮತ್ತು 2019 ರ ಲೋಕಸಭಾ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ 99 ಸ್ಥಾನಗಳನ್ನು ಗಳಿಸಿದೆ

Continue Reading

ಪ್ರಮುಖ ಸುದ್ದಿ

Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

Modi Ka Parivar : ಕಳೆದ ಮಾರ್ಚ್​ನಲ್ಲಿ ಲಾಲೂ ಪ್ರಸಾದ್ ಯಾದವ್​​, ಮೋದಿಯ ವಿರುದ್ಧ ಟೀಕೆ ಮಾಡುವಾಗ, ಕುಟುಂಬವೇ ಇಲ್ಲದವರು ಎಂದಿದ್ದರು. ತಿರುಗೇಟು ಕೊಟ್ಟಿದ್ದ ಮೋದಿ, ಭಾರತ ಎಲ್ಲರೂ ನನ್ನ ಕುಟುಂಬದ ಸದಸ್ಯರು ಎಂದಿದ್ದರು. ಈ ವೇಳೆ ಮೋದಿ ಪರವಾಗಿ ನಿಂತ ಬಿಜೆಪಿ ನಾಯಕರು ನಾವೆಲ್ಲರೂ ಅವರ ಕುಟುಂಬ ಎಂದು ಹೇಳಿದ್ದರು. ಆ ಅಭಿಯಾನದ ಭಾಗವೇ ‘ಮೋದಿ ಕಾ ಪರಿವಾರ್​’.

VISTARANEWS.COM


on

Modi Ka Parivar
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟ ಸರ್ಕಾರ ರಚಿಸಿದ ಬಳಿಕ ತಮ್ಮ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಧನ್ಯವಾದ ತಿಳಿಸಿದ ಪ್ರಧಾನ ಮಂತ್ರಿ ಮೋದಿ ಅವರು, ಚುನಾವಣೆ ವೇಳೆ ತಮಗೆ ಬೆಂಬಲ ವ್ಯಕ್ತಪಡಿಸಲು ತಮ್ಮ ತಮ್ಮ ಸೋಶಿಯಲ್​ ಮೀಡಿಯಾ ಹ್ಯಾಂಡಲ್​ಗಳಲ್ಲಿ ಹಾಕಿದ್ದ ‘ಮೋದಿ ಕಾ ಪರಿವಾರ್​’ (ಮೋದಿಯ ಕುಟುಂಬ) ಉಲ್ಲೇಖವನ್ನು ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ. ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರು, ಮೋದಿಗೆ ಕುಟುಂಬವಿಲ್ಲ ಎಂದು ಹೇಳಿರುವುದಕ್ಕೆ ಪ್ರತಿಯಾಗಿ ಮೋದಿ ಅಭಿಮಾನಿಗಳು, ಬಿಜೆಪಿ ನಾಯಕರು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಹ್ಯಾಂಡಲ್​ಗಳಲ್ಲಿ ‘ಮೋದಿ ಕಾ ಪರಿವಾರ್​’ (Modi Ka Parivar) ಎಂದು ಬರೆದುಕೊಂಡಿದ್ದರು.

ಕಳೆದ ಮಾರ್ಚ್​ನಲ್ಲಿ ಲಾಲೂ ಪ್ರಸಾದ್ ಯಾದವ್​​, ಮೋದಿಯ ವಿರುದ್ಧ ಟೀಕೆ ಮಾಡುವಾಗ, ಕುಟುಂಬವೇ ಇಲ್ಲದವರು ಎಂದಿದ್ದರು. ತಿರುಗೇಟು ಕೊಟ್ಟಿದ್ದ ಮೋದಿ, ಭಾರತ ಎಲ್ಲರೂ ನನ್ನ ಕುಟುಂಬದ ಸದಸ್ಯರು ಎಂದಿದ್ದರು. ಈ ವೇಳೆ ಮೋದಿ ಪರವಾಗಿ ನಿಂತ ಬಿಜೆಪಿ ನಾಯಕರು ನಾವೆಲ್ಲರೂ ಅವರ ಕುಟುಂಬ ಎಂದು ಹೇಳಿದ್ದರು. ಆ ಅಭಿಯಾನದ ಭಾಗವೇ ‘ಮೋದಿ ಕಾ ಪರಿವಾರ್​’.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಚುನಾವಣಾ ಪ್ರಚಾರದ ಮೂಲಕ ಭಾರತದಾದ್ಯಂತ ಜನರು ನನ್ನ ಮೇಲಿನ ಪ್ರೀತಿಯ ಸಂಕೇತವಾಗಿ ತಮ್ಮ ಸಾಮಾಜಿಕ ಮಾಧ್ಯಮಕ್ಕೆ ‘ಮೋದಿ ಕಾ ಪರಿವಾರ್’ ಸೇರಿಸಿದ್ದರು. ನಾನು ಅದರಿಂದ ಸಾಕಷ್ಟು ಶಕ್ತಿಯನ್ನು ಪಡೆದುಕೊಂಡೆ. ಭಾರತದ ಜನರು ಎನ್​ಡಿಎಗೆ ಸತತ ಮೂರನೇ ಬಾರಿಗೆ ಬಹುಮತ ನೀಡಿದ್ದಾರೆ, ಇದು ಒಂದು ರೀತಿಯ ದಾಖಲೆಯಾಗಿದ. ನಮ್ಮ ರಾಷ್ಟ್ರದ ಸುಧಾರಣೆಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ನಮಗೆ ಜನಾದೇಶವನ್ನು ನೀಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾaದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

“ನಾವೆಲ್ಲರೂ ಒಂದೇ ಕುಟುಂಬ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವುದರೊಂದಿಗೆ, ನಾನು ಮತ್ತೊಮ್ಮೆ ಭಾರತದ ಜನರಿಗೆ ಧನ್ಯವಾದ ಹೇಳುತ್ತೇನೆ. ಈಗ ನಿಮ್ಮ ಸಾಮಾಜಿಕ ಮಾಧ್ಯಮಗಳಿಂದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ವಿನಂತಿಸುತ್ತೇನೆ. ಹ್ಯಾಂಡಲ್​ಗಳ ಹೆಸರು ಬದಲಾಗಬಹುದು. ಆದರೆ ಭಾರತದ ಪ್ರಗತಿಗಾಗಿ ಶ್ರಮಿಸುತ್ತಿರುವ ಒಂದು ಪರಿವಾರವಾಗಿ ನಮ್ಮ ಬಂಧವು ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಪಿಎಂ ಮೋದಿ ತಮ್ಮ ಎಕ್ಸ್ ಹ್ಯಾಂಡಲ್​​ನಲ್ಲಿ ತಮ್ಮ ಪ್ರೊಫೈಲ್ ಮತ್ತು ಹೆಡರ್ ಫೋಟೋಗಳನ್ನು ಸಹ ಬದಲಾಯಿಸಿದ್ದಾರೆ. ಇತ್ತೀಚಿನ ಚಿತ್ರಗಳು ಅವರ ಅಧಿಕಾರದ ಮೊದಲ ದಿನ ಮತ್ತು ಅವರ ಸರ್ಕಾರದ ಮೂರನೇ ಅವಧಿಯ ಪ್ರಮಾಣವಚನ ಸಮಾರಂಭದ ಚಿತ್ರಗಳಾಗಿವೆ. ಅವರು ಸಂವಿಧಾನವನ್ನು ಹಣೆಗೆ ಒತ್ತಿಕೊಳ್ಳುವ ಚಿತ್ರ ಹೆಡರ್​ನಲ್ಲಿದೆ.

Continue Reading

ಕರ್ನಾಟಕ

Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Rajeev Taranath: ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾದ ರಾಜೀವ್ ತಾರಾನಾಥ್ ಅವರು, ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಇವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿ ಹತ್ತಾರು ಪ್ರಶಸ್ತಿ ಸಂದಿವೆ.

VISTARANEWS.COM


on

Rajeev Taranath
Koo

ಮೈಸೂರು: ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ (91) (Rajeev Taranath) ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾದರು. ಸುಮಾರು 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾದ ಇವರು, ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಇವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿ ಹತ್ತಾರು ಪ್ರಶಸ್ತಿ ಸಂದಿವೆ. ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

17, 1932ರ ಅ.17ರಂದು ಜನಿಸಿದ ರಾಜೀವ್ ತಾರಾನಾಥ್ ಅವರು ಅತ್ಯಂತ ಸರಳತೆ ಮತ್ತು ಶ್ರೇಷ್ಠ ಸಂಗೀತಕ್ಕೆ ಹೆಸರಾಗಿದ್ದವರು. ತಮ್ಮ ಪ್ರಾರಂಭಿಕ ಪಾಠಗಳನ್ನು ತಂದೆ ಪಂಡಿತ ತಾರಾನಾಥ್‌ ಅವರಿಂದ ಪಡೆದಿದ್ದರು. ಒಂಬತ್ತು ವರ್ಷದವರಿದ್ದಾಗ ಅವರು ಪ್ರಥಮ ಸಂಗೀತ ಕಛೇರಿಯನ್ನು ನಡೆಸಿದ್ದ ಇವರು,. ಇಪ್ಪತ್ತರ ತಾರುಣ್ಯದಲ್ಲಿ ಆಕಾಶವಾಣಿಯಲ್ಲಿ ಸಂಗೀತಗಾರರಾಗಿ ಹಾಡುತ್ತಿದ್ದರು. ರಾಜೀವ್ ತಾರಾನಾಥರು ಸಾಹಿತ್ಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದು, ಕೆಲ ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ನಂತರ ಕೆಲಸಕ್ಕೆ ರಾಜೀನಾಮೆ ಕೊಟ್ಟು ಮತ್ತೆ ಸಂಗೀತ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದರು. ಸಂಗೀತ ಅಭ್ಯಸಿಸಲು ಕೊಲ್ಕೊತ್ತಾಗೆ ತೆರಳಿದ್ದರು.

ಉಸ್ತಾದ್ ಅಲಿ ಅಕ್ಬರ್‌ ಖಾನ್‌ ಅವರ ಶಿಷ್ಯರಾದ ಇವರು, ಕ್ಯಾಲಿಪೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿದ್ದರು. 1995ರಿಂದ 2005ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ಮೈಸೂರಿನಲ್ಲಿ ನೆಲೆಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ರಾಜೀವ್ ತಾರಾನಾಥ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಜಗತ್ಪ್ರಸಿದ್ಧ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ
ತುಂಬಲಾರದ ನಷ್ಟ.

ಇದನ್ನೂ ಓದಿ | Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ ತಿಳಿಸಿದ್ದಾರೆ.

Continue Reading
Advertisement
Pavithra Gowda
ಕರ್ನಾಟಕ23 mins ago

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Priyanka Gandhi:
ಪ್ರಮುಖ ಸುದ್ದಿ56 mins ago

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

CM Siddaramaiah
ಕರ್ನಾಟಕ1 hour ago

CM Siddaramaiah: ಗಣಿಗಳ ಹರಾಜು ಪ್ರಕ್ರಿಯೆ ಕೂಡಲೇ ಕೈಗೆತ್ತಿಕೊಳ್ಳಲು ಸಿಎಂ ಸೂಚನೆ

Modi Ka Parivar
ಪ್ರಮುಖ ಸುದ್ದಿ1 hour ago

Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

Rajeev Taranath
ಕರ್ನಾಟಕ2 hours ago

Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Aishwarya Arjun
ಪ್ರಮುಖ ಸುದ್ದಿ2 hours ago

Aishwarya Arjun : ಚೆನ್ನೈನಲ್ಲಿ ವಿವಾಹವಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್​; ಇಲ್ಲಿವೆ ಚಿತ್ರಗಳು

Chellagurki Shri Yerrithathanavara Maharathotsava On 12th June
ಧಾರ್ಮಿಕ2 hours ago

Ballari News: ಜೂ.12ರಂದು ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವ

Fortis hospital Doctors Perform Successful Dual Cochlear Implant Surgery on Nigerian Young Woman
ಕರ್ನಾಟಕ2 hours ago

Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

Viral News
ವೈರಲ್ ನ್ಯೂಸ್2 hours ago

Viral News: ಕೊಳದಲ್ಲಿ ತೇಲುತ್ತಿದ್ದ ದೇಹ ಮೇಲೆತ್ತಲು ಹೋದ ಪೊಲೀಸರು! ಹೆಣ ನಡೆಯತೊಡಗಿತು!

YouTuber Dhruv Rathee
ವೈರಲ್ ನ್ಯೂಸ್2 hours ago

YouTuber Dhruv Rathee: ಧ್ರುವ ರಾಥಿಯ ಮೋದಿ ವಿರೋಧಿ ವಿಡಿಯೊ ಗೊತ್ತು; ಅವರ ಲವ್‌ ಸ್ಟೋರಿ ಗೊತ್ತಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ7 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ9 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ11 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌