Money Guide : ತಿಂಗಳಿಗೆ 12 ಸಾವಿರಕ್ಕೂ ಹೆಚ್ಚು ಪಿಂಚಣಿ; ಎಲ್​​ಐಸಿ ಪರಿಚಯಿಸಿದೆ ಹೊಸ ಯೋಜನೆ - Vistara News

ವಾಣಿಜ್ಯ

Money Guide : ತಿಂಗಳಿಗೆ 12 ಸಾವಿರಕ್ಕೂ ಹೆಚ್ಚು ಪಿಂಚಣಿ; ಎಲ್​​ಐಸಿ ಪರಿಚಯಿಸಿದೆ ಹೊಸ ಯೋಜನೆ

LIC Pension Scheme: ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಹಲವಾರು ದಶಕಗಳಿಂದ ಭಾರತೀಯರಿಗೆ ವಿಶ್ವಾಸಾರ್ಹ ವಿಮಾ ಕಂಪೆನಿಯಾಗಿ ಗುರುತಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಪಿಂಚಣಿ ಭದ್ರತೆಯ ಹೆಚ್ಚುತ್ತಿರುವ ಅಗತ್ಯವನ್ನು ಗುರುತಿಸಿರುವ ಎಲ್ ಇಸಿ ಸರಳ ಪಿಂಚಣಿ ಯೋಜನೆಯನ್ನು ಪರಿಚಯಿಸಿದೆ.

VISTARANEWS.COM


on

LIC Pension Scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಇತ್ತಿಚಿನ ಕೆಲವು ವರ್ಷಗಳಲ್ಲಿ ಖಾಸಗಿ ವಲಯದ ಉದ್ಯೋಗಗಳು ಆಕರ್ಷಕ ವೇತನವನ್ನು ನೀಡಿದರೂ ಅವುಗಳಲ್ಲಿ ಸಾಮಾನ್ಯವಾಗಿ ಪಿಂಚಣಿ (pension) ಸೌಲಭ್ಯವನ್ನು ಹೊಂದಿರುವುದಿಲ್ಲ. ಹೀಗಾಗಿ ಹೆಚ್ಚಿನ ಉದ್ಯೋಗಿಗಳು ಉತ್ತಮ ಪಿಂಚಣಿ ಯೋಜನೆ ಹುಡುಕಾಟದಲ್ಲಿರುತ್ತಾರೆ. ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (Life Insurance Corporation) ಹಲವಾರು ದಶಕಗಳಿಂದ ಭಾರತೀಯರಿಗೆ ವಿಶ್ವಾಸಾರ್ಹ ವಿಮಾ ಕಂಪೆನಿಯಾಗಿ ಗುರುತಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಪಿಂಚಣಿ ಭದ್ರತೆಯ ಹೆಚ್ಚುತ್ತಿರುವ ಅಗತ್ಯವನ್ನು ಗುರುತಿಸಿರುವ ಎಲ್ ಇಸಿ ಸರಳ ಪಿಂಚಣಿ ಯೋಜನೆಯನ್ನು (LIC Pension Scheme) ಪ್ರಾರಂಭಿಸಿದೆ (Money Guide).

ಎಲ್ಐಸಿ ಸರಳ ಪಿಂಚಣಿ ಯೋಜನೆಯು ಹೂಡಿಕೆ ಮತ್ತು ನಿವೃತ್ತಿ ಜೀವನದಲ್ಲಿ ನಿರ್ದಿಷ್ಟ ಆದಾಯವನ್ನು ಹೊಂದಬೇಕು ಎನ್ನುವ ಯೋಚನೆಯಲ್ಲಿರುವವರಿಗೆ ಇದೊಂದು ಉತ್ತಮ ಆಯ್ಕೆ.

ಎಲ್ಐಸಿ ಸರಳ ಪಿಂಚಣಿ ಯೋಜನೆ (LIC Saral Pension Scheme)

ಎಲ್ಐಸಿಯ ಸರಳ ಪಿಂಚಣಿ ಯೋಜನೆಯು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (IRDAI) ಮಾರ್ಗಸೂಚಿಗಳ ಮೂಲಕ ಪ್ರಮಾಣಿತ ಯೋಜನೆಯಾಗಿದೆ. ಈ ಯೋಜನೆಯು ಪಾಲಿಸಿಯ ಪ್ರಾರಂಭದಲ್ಲೇ ನಿರ್ದಿಷ್ಟ ವಾರ್ಷಿಕ ದರಗಳನ್ನು ಖಾತರಿಪಡಿಸುತ್ತದೆ. ನಿವೃತ್ತಿಯ ಅನಂತರ ಜೀವಿತಾವಧಿಯಲ್ಲಿ ನಿಖರವಾದ ಪಿಂಚಣಿಯನ್ನು ಒದಗಿಸುತ್ತದೆ.

ಇದನ್ನೂ ಓದಿ: Electronic voting machine: ಎಲೆಕ್ಟ್ರಾನಿಕ್ ಮತಯಂತ್ರ ಹೇಗೆ ಕೆಲಸ ಮಾಡುತ್ತೆ ಗೊತ್ತಾ ?

ಎರಡು ಆಯ್ಕೆ ಇದೆ

ಈ ಯೋಜನೆಯಲ್ಲಿ ಪಾಲಿಸಿದರನಿಗೆ ಎರಡು ಆಯ್ಕೆಗಳನ್ನು ನೀಡಲಾಗುತ್ತದೆ. ಒಂದು ಖರೀದಿ ಬೆಲೆಯ ಶೇ. 100ರಷ್ಟು ಲಾಭದೊಂದಿಗೆ ಜೀವನ ಪರ್ಯಂತ ಪಿಂಚಣಿ ಸೌಲಭ್ಯ ಹಾಗೂ ಇನ್ನೊಂದು ತನ್ನ ಮರಣದ ಬಳಿಕ ಅವಲಂಬಿತರಿಗೆ ಶೇ. 100ರಷ್ಟು ಆರ್ಥಿಕ ಭದ್ರತೆಯನ್ನು ಒದಗಿಸುವುದು. ಎರಡನೇ ಆಯ್ಕೆಯನ್ನು ವಿವಾಹಿತರು ತಮ್ಮ ಸಂಗಾತಿಗಾಗಿ ಆಯ್ಕೆ ಮಾಡಿಕೊಳ್ಳಬಹುದು.

LIC Pension Scheme


ಅರ್ಹತೆ

ಈ ಯೋಜನೆಯ ಅರ್ಹತೆ ಪಡೆಯಲು ಪಾಲಿಸಿದಾರರು 40 ರಿಂದ 80 ವರ್ಷ ವಯಸ್ಸಿನವರಾಗಿರಬೇಕು. ಖರೀದಿ ಬೆಲೆಗೆ ಯಾವುದೇ ಗರಿಷ್ಠ ಮಿತಿ ಇಲ್ಲ.

ಕನಿಷ್ಠ ಮೊತ್ತ

ಎಲ್ಐಸಿ ಸರಳ ಪಿಂಚಣಿ ಯೋಜಯು ಮೂರು ಖರೀದಿ ಬೆಲೆಯ ಸ್ಲ್ಯಾಬ್‌ಗಳಿಗೆ ವಾರ್ಷಿಕ ದರಗಳನ್ನು ಹೆಚ್ಚಿಸುವುದರೊಂದಿಗೆ ಹೆಚ್ಚಿನ ಖರೀದಿ ಬೆಲೆಗಳಿಗೆ ಪ್ರೋತ್ಸಾಹವನ್ನು ಒದಗಿಸುತ್ತದೆ. ವಾರ್ಷಿಕ ಪಾವತಿಗಳ ಆಧಾರದಲ್ಲಿ ಪ್ರೋತ್ಸಾಹವು ಬದಲಾಗುತ್ತದೆ ಮತ್ತು ಪಾವತಿಯಲ್ಲಿನ ಕಡಿತದಲ್ಲೂ ವ್ಯತ್ಯಾಸವಾಗುತ್ತದೆ.

ನಿವೃತ್ತಿ ಯೋಜನೆ ಪ್ರಯೋಜನಗಳು

ಸರಳ ಪಿಂಚಣಿ ಯೋಜನೆಯು ನಿವೃತ್ತಿ ಯೋಜನೆಗೆ ಪರಿಹಾರವಾಗಿದೆ. ಪಿಎಫ್ ಮತ್ತು ನಿವೃತ್ತಿಯ ಅನಂತರ ಸಂಗ್ರಹವಾದ ಗ್ರಾಚ್ಯುಟಿ ಹಣವನ್ನು ಒಳಗೊಂಡು ಒಟ್ಟು ಮೊತ್ತದ ಹೂಡಿಕೆಗಳ ಮೂಲಕ ವಾರ್ಷಿಕವಾಗಿ ಖರೀದಿಗೆ ಅವಕಾಶವಿದೆ.

ಉದಾ- 42 ವರ್ಷ ವಯಸ್ಸಿನವರು 30 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಪಿಂಚಣಿಯಾಗಿ 12,388 ರೂಪಾಯಿಗಳನ್ನು ಪಡೆಯುತ್ತಾರೆ.

ವಿಶ್ವದ ನಂಬರ್ ಒನ್‌ ಜಾಗತಿಕ ವಿಮೆ ಬ್ರ್ಯಾಂಡ್ ಎಲ್‌ಐಸಿ

ಭಾರತದ ಬೃಹತ್‌ ಜೀವವಿಮೆ ಸಂಸ್ಥೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಜಾಗತಿಕವಾಗಿ ಪ್ರಬಲ ವಿಮಾ ಬ್ರಾಂಡ್ ಆಗಿದೆ. ಬ್ರಾಂಡ್ ಫೈನಾನ್ಸ್ ಇನ್ಶೂರೆನ್ಸ್ ಸಂಸ್ಥೆಯ 2024ರ ವರದಿ ಇದನ್ನು ತಿಳಿಸಿದೆ.

ಎಲ್ಐಸಿಯ ಬ್ರ್ಯಾಂಡ್ ಮೌಲ್ಯವು 9.8 ಶತಕೋಟಿ ಡಾಲರ್‌ಗಳಲ್ಲಿ ಸ್ಥಿರವಾಗಿದೆ. ಜೊತೆಗೆ ಬ್ರ್ಯಾಂಡ್ ಸಾಮರ್ಥ್ಯದ ಸೂಚ್ಯಂಕ ಸ್ಕೋರ್ 88.3ರಲ್ಲಿದ್ದು, AAA ಬ್ರ್ಯಾಂಡ್ ಸಾಮರ್ಥ್ಯದ ರೇಟಿಂಗ್ ಅನ್ನು ಹೊಂದಿದೆ.

ಎಲ್ ಇಸಿ ನಂತರದ ಶ್ರೇಯಾಂಕಗಳ ಪ್ರಕಾರ ಕ್ಯಾಥೆ ಲೈಫ್ ಇನ್ಶುರೆನ್ಸ್ ಎರಡನೇ ಪ್ರಬಲ ಬ್ರ್ಯಾಂಡ್ ಆಗಿದೆ. ಇದು ಬ್ರ್ಯಾಂಡ್ ಮೌಲ್ಯದಲ್ಲಿ 4.9 ಶತಕೋಟಿ ಡಾಲರ್‌ ಇದ್ದು, 9 ಶೇಕಡಾ ಹೆಚ್ಚಳ ಕಂಡಿದೆ. NRMA ಇನ್ಶುರೆನ್ಸ್ ನಂತರದ ಸ್ಥಾನದಲ್ಲಿದ್ದು, 82 ಸೂಚ್ಯಂಕ ಹಾಗೂ 1.3 ಶತಕೋಟಿ ಡಾಲರ್‌ ಬ್ರಾಂಡ್ ಮೌಲ್ಯ ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Pakistan Inflation: ಹಣದುಬ್ಬರದಿಂದ ಪಾಕಿಸ್ತಾಣವು ತತ್ತರಿಸಿ ಹೋಗಿದೆ. ಒಂದೆಡೆ, ಪಾಕಿಸ್ತಾನಕ್ಕೆ ಬೇರೆ ದೇಶಗಳಿಂದ, ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಹಣಕಾಸು ನೆರವು ಸಿಗುತ್ತಿಲ್ಲ. ಇನ್ನೊಂದೆಡೆ, ಹಣದುಬ್ಬರ ನಿಯಂತ್ರಣ ಮಾಡಲು ಆಗುತ್ತಿಲ್ಲ. ಹಾಗಾಗಿ, ಪಾಕಿಸ್ತಾನದ ನಾಗರಿಕರು ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಪಾವತಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಹಣದುಬ್ಬರ ಏರಿಕೆಯು ಅವರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ.

VISTARANEWS.COM


on

Pakistan Inflation
Koo

ಇಸ್ಲಾಮಾಬಾದ್:‌ ಉಗ್ರರ ಪೋಷಣೆ, ಅವರಿಗೆ ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನವು (Pakistan) ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಇನ್ನು, ಹಣದುಬ್ಬರದ ಏರಿಕೆಯಿಂದಾಗಿ (Pakistan Inflation) ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಹೌದು, ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. (ಪಾಕಿಸ್ತಾನದ ರೂಪಾಯಿ) ಆದರೆ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಇದರಿಂದಾಗಿ ಪಾಕಿಸ್ತಾನದ ನಾಗರಿಕರು ತತ್ತರಿಸಿ ಹೋಗಿದ್ದಾರೆ.

“ಪಾಕಿಸ್ತಾನದ ಸರ್ಕಾರವು ಸಾಮಾನ್ಯ ಜನರ ಅಗತ್ಯಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದರಿಂದಾಗಿಯೇ ದಿನೇದಿನೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಈಗ ಗೋಧಿ ಕಟಾವು ಮಾಡುವ ಸೀಸನ್.‌ ಹೀಗಿದ್ದರೂ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಇನ್ನು, ಒಂದು ರೊಟ್ಟಿಗೆ 25 ರೂ. ನೀಡಬೇಕಾಗಿದೆ. ಇದರಿಂದಾಗಿ ಸಾಮಾನ್ಯ ಜನ ಮೂರು ಹೊತ್ತು ಊಟ ಮಾಡಲು ಕೂಡ ತೊಂದರೆಯಾಗುತ್ತಿದೆ. ಇದಕ್ಕೂ ಮೊದಲು ಒಂದು ಕೆ.ಜಿ ಹಿಟ್ಟಿಗೆ 230 ರೂ. ಇತ್ತು” ಎಂದು ಕರಾಚಿಯಲ್ಲಿ ದಿನಸಿ ಅಂಗಡಿ ಇಟ್ಟಿರುವ ಅಬ್ದುಲ್‌ ಹಮೀದ್‌ ಎಂಬುವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಾಥಮಿಕ ಶಾಲೆ ಶಿಕ್ಷಕರಾಗಿರುವ ಅಬ್ದುಲ್‌ ಜಬ್ಬರ್‌ ಅವರು ಕೂಡ ಸಂಕಷ್ಟದ ಕುರಿತು ಮಾಹಿತಿ ನೀಡಿದ್ದಾರೆ. “ದಿನಕ್ಕೆ 16 ಗಂಟೆ ಲೋಡ್‌ ಶೆಡ್ಡಿಂಗ್‌ ಇರುತ್ತದೆ. ಆದರೂ, ಮಾಸಾಂತ್ಯಕ್ಕೆ ಹೆಚ್ಚಿನ ವಿದ್ಯುತ್‌ ಬಿಲ್‌ ಪಾವತಿಸಬೇಕು. ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಆದರೆ, ನಿತ್ಯ 500 ರೂ. ದುಡಿಯುವವರ ಪಾಡೇನು? ಅಡುಗೆ ಅನಿಲದ ಸಿಲಿಂಡರ್‌ ಬೆಲೆಯೂ ಗಗನಕ್ಕೇರಿದೆ. ಇದರಿಂದ ಜನರ ಜೀವನ ದುಸ್ಥರವಾಗಿದೆ” ಎಂದು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಹೀಗಿದೆ

ಒಂದು ಲೀಟರ್‌ ಹಾಲಿಗೆ 212 ರೂ., ಕೆ.ಜಿ ಅಕ್ಕಿಗೆ 330 ರೂ., ಒಂದು ಕೆ.ಜಿ ಸೇಬಿಗೆ 300 ರೂ., ಒಂದು ಕೆ.ಜಿ ಟೊಮ್ಯಾಟೊಗೆ 125 ರೂ., ಒಂದು ಕೆ.ಜಿ ಈರುಳ್ಳಿ 125 ರೂ., ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. ಇದೆ. ದಿನೇದಿನೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಪಾಕಿಸ್ತಾನದ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಂತರದ ದುಸ್ಥಿತಿ ಹೀಗೆಯೇ ಮುಂದುವರಿದಿರುವುದು ಅವರನ್ನು ಆತಂಕಕ್ಕೆ ದೂಡಿದೆ.

ಐಎಂಎಫ್‌ ಹಣವೂ ಸಿಗುತ್ತಿಲ್ಲ

ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಹೆಣಗಾಡುತ್ತಿದೆ. ಈಗಾಗಲೇ ಐಎಂಎಫ್‌ 1.10 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂಬುದಾಗಿ ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

Continue Reading

ಮನಿ ಗೈಡ್

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

PF Balance Check: ಇನ್ನೇನು 2023 -2024ರ ಬಡ್ಡಿ ಹಣ ಇಪಿಎಫ್ ಖಾತೆಗೆ ಬೀಳಲಿದೆ. ನೌಕರರ ಭವಿಷ್ಯ ನಿಧಿ ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಇಪಿಎಫ್ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಎಂಬುದನ್ನು ನೋಡಲು ನಾಲ್ಕು ದಾರಿಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

PF Balance Check
Koo

ನವದೆಹಲಿ: ನೌಕರರ ಭವಿಷ್ಯ ನಿಧಿ (EPF) ಹೊಂದಿರುವ ಉದ್ಯೋಗಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ 2023-2024ರ ಬಡ್ಡಿ ಹಣ (interest money) ಖಾತೆಗೆ ಬೀಳಲಿದೆ. ಹೀಗಾಗಿ ಈಗಾಗಲೇ ಇಪಿಎಫ್‌ಒ ಹೊಂದಿರುವ ಸದಸ್ಯರು ತಮ್ಮ ಖಾತೆಗೆ ಬಡ್ಡಿ ಹಣ (PF Balance Check) ಬಂದಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ತೊಡಗಿದ್ದಾರೆ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇರುವುದರಿಂದ ಈಗ ಇದು ಕಷ್ಟವೇನಲ್ಲ.

ಇಪಿಎಫ್ ಬಡ್ಡಿ ಕ್ರೆಡಿಟ್ ಸ್ಥಿತಿಯನ್ನು ಪರಿಶೀಲಿಸಲು ನಾಲ್ಕು ದಾರಿಗಳಿವೆ. ಆನ್‌ಲೈನ್ ಮೂಲಕ, ಸಂದೇಶ ಕಳುಹಿಸಿ, ಮಿಸ್ಡ್ ಕಾಲ್‌ ಅಥವಾ ಉಮಂಗ್ ಅಪ್ಲಿಕೇಶನ್ ಮೂಲಕ ಇಪಿಎಫ್ ಬಡ್ಡಿ ಕ್ರೆಡಿಟ್ ಆಗಿದೆಯೇ ಇಲ್ಲವೋ ಎಂದು ನೋಡಬಹುದು.

ಆನ್ ಲೈನ್ ನಲ್ಲಿ ಪರಿಶೀಲಿಸಿ

ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು epfindia.gov.in ಗೆ ಲಾಗಿನ್ ಮಾಡಿ. ಅಲ್ಲಿ UAN ಸಂಖ್ಯೆ, ಪಾಸ್‌ವರ್ಡ್ ಮತ್ತು ಕ್ಯಾಪ್ಚಾ ಕೋಡ್‌ ಅನ್ನು ಹಾಕಿ. ಬಳಿಕ ಇ-ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ. ಒಮ್ಮೆ ನೀವು ಎಲ್ಲಾ ವಿವರಗಳನ್ನು ಫೈಲ್ ಮಾಡಿದರೆ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಸದಸ್ಯರ ಐಡಿ ತೆರೆದು ಖಾತೆಯಲ್ಲಿರುವ ಒಟ್ಟು EPF ಬ್ಯಾಲೆನ್ಸ್ ಅನ್ನು ನೋಡಬಹುದು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ


ಉಮಂಗ್ ಅಪ್ಲಿಕೇಶನ್

ಉಮಂಗ್ ಅಪ್ಲಿಕೇಶನ್ ಮೂಲಕ EPF ಬ್ಯಾಲೆನ್ಸ್ ಅನ್ನು ಹೇಗೆ ಪರಿಶೀಲಿಸಲು UMANG ಅಪ್ಲಿಕೇಶನ್ ತೆರೆಯಿರಿ. EPFO ಮೇಲೆ ಕ್ಲಿಕ್ ಮಾಡಿ. ಉದ್ಯೋಗಿ ಕೇಂದ್ರಿತ ಸೇವೆಗಳ ಮೇಲೆ ಕ್ಲಿಕ್ ಮಾಡಿ, ಬಳಿಕ View Passbook ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ UAN ಸಂಖ್ಯೆ ಮತ್ತು ಪಾಸ್‌ವರ್ಡ್‌ ಫೀಡ್ ಮಾಡಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಅನ್ನು ಅಲ್ಲಿ ಹಾಕಿ ಇಪಿಎಫ್ ಬ್ಯಾಲೆನ್ಸ್ ಅನ್ನು ಪರಿಶೀಲಿಸಬಹುದು.

ಎಸ್‌ಎಂಎಸ್

ಇಪಿಎಫ್ ಬ್ಯಾಲೆನ್ಸ್ ಅನ್ನು ಎಸ್ ಎಂಎಸ್ ಕಳುಹಿಸಿಯೂ ಪರಿಶೀಲಿಸಬಹುದು. ಮೊಬೈಲ್ ಸಂಖ್ಯೆಯನ್ನು ಹೊರತುಪಡಿಸಿ, ಯುಎಎನ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ಸದಸ್ಯರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳಿಂದ ಎಸ್ ಎಂಎಸ್ ಕಳುಹಿಸುವ ಮೂಲಕ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ಇದಕ್ಕಾಗಿ EPFOHO UAN ಅನ್ನು 7738299899ಗೆ ಎಸ್‌ಎಂಎಸ್ ಮಾಡಬೇಕು.

ಮಿಸ್ಡ್ ಕಾಲ್

ಮಿಸ್ಡ್ ಕಾಲ್ ನೀಡಿಯೂ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸಬಹುದು. ಇದಕ್ಕಾಗಿ UAN ಪೋರ್ಟಲ್‌ನಲ್ಲಿ ನೋಂದಾಯಿಸಲಾದ EPFO ಚಂದಾದಾರರು UANನಲ್ಲಿ ನೋಂದಾಯಿಸಲಾದ ತಮ್ಮ ಮೊಬೈಲ್ ಸಂಖ್ಯೆಯಿಂದ 9966044425 ಈ ನಂಬರ್‌ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ನೆನಪಿಡಿ, ನೀವು ಕರೆ ಮಾಡುವ ಸಂಖ್ಯೆ ನಿಮ್ಮ ಪಿಎಫ್‌ ಅಕೌಂಟ್‌ನಲ್ಲಿ ದಾಖಲಾಗಿರಬೇಕು.

Continue Reading

ವಾಣಿಜ್ಯ

Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ (ಟಿಕೆಎಂ) ತನ್ನ ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್” ಅನ್ನು ಪ್ರಾರಂಭಿಸಿದ್ದು, ಟಿಕೆಎಂ ವಾಹನದ ಇಂಟೀರಿಯರ್ ಮತ್ತು ಎಕ್ಸ್‌ಟೀರಿಯರ್ ಲುಕ್ ಅನ್ನು ಹೆಚ್ಚಿಸಲು ವ್ಯಾಪಕವಾದ ಸೇವೆಗಳನ್ನು ಇದು ನೀಡಲಿದೆ.

VISTARANEWS.COM


on

Toyota Kirloskar Motor launched the Tgloss
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ (ಟಿಕೆಎಂ) ತನ್ನ ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್” ಅನ್ನು (Toyota Kirloskar Motor) ಪ್ರಾರಂಭಿಸಿದೆ.

ಮೇ 1, 2024 ರಿಂದ, “ಟಿಗ್ಲೊಸ್” ಸೇವೆಯು ಭಾರತದ ಎಲ್ಲಾ ಅಧಿಕೃತ ಟೊಯೊಟಾ ಡೀಲರ್‌ಶಿಪ್‌ಗಳಲ್ಲಿ ದೊರೆಯಲಿದೆ. ಕಾರು ತಯಾರಕರ ಇಂಡಸ್ಟ್ರಿ ಫಸ್ಟ್ ಉದ್ಯಮವಾಗಿ, “ಟಿಗ್ಲೊಸ್” ಬ್ರಾಂಡ್ ಅಡಿಯಲ್ಲಿ ಟಿಕೆಎಂ ವಾಹನದ ಇಂಟೀರಿಯರ್ ಮತ್ತು ಎಕ್ಸ್‌ಟೀರಿಯರ್ ಲುಕ್ ಅನ್ನು ಹೆಚ್ಚಿಸಲು ವ್ಯಾಪಕವಾದ ಸೇವೆಗಳನ್ನು ಇದು ನೀಡಲಿದೆ.

ವಾಹನಗಳ ಆಕರ್ಷಣೆ ಹೆಚ್ಚಿಸುವ ಗುರಿ

ಇದರಲ್ಲಿ ಸೆರಾಮಿಕ್ ಕೋಟ್, ಅಂಡರ್ ಬಾಡಿ ಕೋಟ್, ಸೈಲೆನ್ಸರ್ ಕೋಟ್ ಮತ್ತು ಇಂಟರ್‌ನಲ್ ಪ್ಯಾನಲ್ ಪ್ರೊಟೆಕ್ಷನ್ ಸೇರಿವೆ. ಇದು ವಾಹನಗಳ ಆಕರ್ಷಣೆಯನ್ನು ಹೆಚ್ಚಿಸುವ ಗುರಿಯ ಜತೆಗೆ ವಾತಾವರಣದಿಂದ ಕಾರಿನ ಮೇಲಾಗುವ ಪರಿಣಾಮಗಳ ವಿರುದ್ಧವೂ ರಕ್ಷಣೆಯನ್ನು ಒದಗಿಸುತ್ತದೆ.

ಇದನ್ನೂ ಓದಿ: IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಗ್ರಾಹಕರ ಕಾರಿಗೆ ಹೊಸ ಜೀವ ತುಂಬುವುದು, ಕಾರಿನ ಆಕರ್ಷಣೆಯನ್ನು ಹೆಚ್ಚಿಸುವುದು ಮತ್ತು ಹೊಸದಾಗಿ ಕಾಣುವಂತೆ ಮಾಡುವ ಇಂಟೀರಿಯರ್ ಎನ್‌ರಿಚ್ಮೆಂಟ್, ಎಕ್ಸ್‌ಟೀರಿಯರ್ ಆಕರ್ಷಣೆಯನ್ನು ಹೆಚ್ಚಿಸುವ ಸೇವೆಗಳಂತಹ ಸಮಗ್ರ ಸರ್ವಿಸ್‌ಗಳನ್ನು ಇದರಿಂದ ಪಡೆಯಬಹುದಾಗಿದೆ.

ಹೆಚ್ಚುವರಿಯಾಗಿ ಪ್ರಯಾಣಿಕರ ಯೋಗಕ್ಷೇಮಕ್ಕಾಗಿ “ಟಿಗ್ಲೊಸ್” ಸೇವೆಗಳು ಎಸಿ ಡಕ್ಟ್ ಕ್ಲೀನಿಂಗ್ ಮತ್ತು ಎವಾಪರೇಟರ್ ಕ್ಲೀನಿಂಗ್ ಪರಿಹಾರಗಳನ್ನೂ ಇದು ಹೊಂದಿದೆ. ಇದು ಕಾರಿನಲ್ಲಿ ಪರಿಶುದ್ಧ ವಾತಾವರಣ ನಿರ್ಮಾಣ ಮತ್ತು ಆರೋಗ್ಯಕರ ಚಾಲನೆಯನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

ಈ ಬಗ್ಗೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಸೇಲ್ಸ್–ಸರ್ವೀಸ್-ಯೂಸ್ಡ್ ಕಾರ್ ಬ್ಯುಸಿನೆಸ್‌ನ ಉಪಾಧ್ಯಕ್ಷ ಶಬರಿ ಮನೋಹರ್, ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ‘ಗ್ರಾಹಕ-ಮೊದಲು’ ತತ್ವಕ್ಕೆ ಅಚಲ ಬದ್ಧತೆಯನ್ನು ವ್ಯಕ್ತಪಡಿಸುವ ಇನ್ನೊವೇಟೀವ್ ಮತ್ತು ಇಂಡಸ್ಟ್ರಿ ಫಸ್ಟ್ “ಟಿಗ್ಲೊಸ್” ಅನ್ನು ಅನಾವರಣಗೊಳಿವುದು ನಮಗೆ ಹೆಚ್ಚು ಸಂತಸವನ್ನು ನೀಡುತ್ತದೆ. ಟಿಗ್ಲೊಸ್ ಅನ್ನು ತಮ್ಮ ಕಾರುಗಳನ್ನು ಆಕರ್ಷಣೀಯವಾಗಿ ಅತ್ಯುತ್ತಮ ಸ್ಥಿತಿಯಲ್ಲಿಡಲು ಸಹಾಯ ಮಾಡುವ ಮೂಲಕ ಅವರ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರ ಸಾವು

ಟಿಗ್ಲೊಸ್ ಎಂಬುದು ಒನ್-ಸ್ಟಾಪ್-ಶಾಪ್ ಸೊಲ್ಯೂಷನ್ ಆಗಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಕಾರ್‌ ಕೇರ್ ಸರ್ವಿಸ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ, ಇದು ಟೊಯೊಟಾ ಮಾಲೀಕರಿಗೆ ಗುಣಮಟ್ಟ, ಬಾಳಿಕೆ ಮತ್ತು ವಿಶ್ವಾಸಾರ್ಹತೆಯ (ಕ್ಯೂಡಿಆರ್) ನಮ್ಮ ಪ್ರಮುಖ ಮೌಲ್ಯಗಳೊಂದಿಗೆ ತಡೆರಹಿತವಾಗಿ ಹೊಂದಾಣಿಕೆಯಾಗುವ ಸೇವೆ ಇದಾಗಿದೆ. ಸಮಗ್ರ ಕಾರ್ ಕೇರ್ ಸೊಲ್ಯೂಷನ್‌ಗಳನ್ನು ತಲುಪಿಸುವ ನಮ್ಮ ಪ್ರಯಾಣದಲ್ಲಿ ಮಹತ್ವದ ಮತ್ತೊಂದು ನಿರ್ಣಾಯಕ ಮೈಲಿಗಲ್ಲನ್ನು ಸೂಚಿಸುತ್ತದೆ. ಇಲ್ಲಿ ಹೆಚ್ಚು ನುರಿತ ಮತ್ತು ತರಬೇತಿ ಪಡೆದ ವೃತ್ತಿಪರರು ಸೇವೆಯನ್ನು ನೀಡುತ್ತಾರೆ ಎಂದು ತಿಳಿಸಿದ್ದಾರೆ.

Continue Reading

ಮನಿ-ಗೈಡ್

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

Money Guide: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ಹಾಗಾದರೆ ವಿದೇಶಿ ಪ್ರಯಾಣದ ವೇಳೆ ನೆರವಾಗುವ ಫೊರೆಕ್ಸ್‌ ಕಾರ್ಡ್‌ ಮತ್ತು ಕ್ರೆಡಿಟ್‌ ಕಾರ್ಡ್‌ ಪೈಕಿ ಯಾವುದು ಸೂಕ್ತ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಸೂಕ್ತ ಪ್ಲಾನ್‌ ಮಾಡಬೇಕಾಗುತ್ತದೆ. ಜತೆಗೆ ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ತೆರಿಗೆಯನ್ನು ತಪ್ಪಿಸಲು ವಿದೇಶಿ ವಿನಿಮಯ ಕಾರ್ಡ್‌ (forex cards)ಗಳನ್ನು ಬಳಸಬೇಕೆ ಅಥವಾ ಕ್ರೆಡಿಟ್ ಕಾರ್ಡ್ ಸ್ವೈಪ್ ಮಾಡಬೇಕೆ ಎನ್ನುವ ಗೊಂದಲ ಕಾಡುವುದು ಸಹಜ. ಈ ಪ್ರಶ್ನೆಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಕ್ರೆಡಿಟ್‌ ಕಾರ್ಡ್‌

ಗ್ರಾಹಕರು ಮೊದಲು ಸರಕು ಅಥವಾ ಸೇವೆಗಳನ್ನು ಖರೀದಿಸಿ ಬಳಿಕ ಪಾವತಿಸುವ ವ್ಯವಸ್ಥೆ ಕ್ರೆಡಿಟ್‌ ಕಾರ್ಡ್‌ನಲ್ಲಿದೆ. ಈ ಕಾರ್ಡ್ ಮೂಲಕ ನೀವು ನಿಮ್ಮ ಅಗತ್ಯಗಳನ್ನು ಸೀಮಿತ ಪ್ರಮಾಣದಲ್ಲಿ ಪೂರೈಸಿಕೊಳ್ಳಬಹುದು. ತೀರ ಬೇಕೆಂದಾಗ ನೀವು ಕ್ರೆಡಿಟ್ ಕಾರ್ಡ್‌ನಿಂದ ಹಣವನ್ನು ಕೂಡ ಪಡೆಯಬಹುದು. ಈ ರೀತಿಯಾಗಿ ಕ್ರೆಡಿಟ್ ಕಾರ್ಡ್ ಹೊಂದಿರುವವರು ಬ್ಯಾಂಕ್ ಬ್ಯಾಲೆನ್ಸ್ ಇಲ್ಲದಿದ್ದರೂ ಯಾವುದೇ ತೊಂದರೆಯಿಲ್ಲದೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಬಹುದು. ಕಡಿಮೆ ಬ್ಯಾಂಕ್ ಬ್ಯಾಲೆನ್ಸ್‌ನ ಸಂದರ್ಭದಲ್ಲಿಯೂ ಸಹ ಖರೀದಿ ಮಾಡಲು ಕ್ರೆಡಿಟ್ ಕಾರ್ಡ್ ನೆರವಾಗುತ್ತದೆ. ಇಲ್ಲಿ ನೀವು ಅನೇಕ ಬಡ್ಡಿ ರಹಿತ ಕ್ರೆಡಿಟ್‌ಗಳ ಪ್ರಯೋಜನವನ್ನು ಸಹ ಪಡೆಯಬಹುದು. ಕ್ರೆಡಿಟ್ ಕಾರ್ಡ್‌ಗಳನ್ನು ಆನ್‌ಲೈನ್ ಶಾಪಿಂಗ್, ಶಾಪಿಂಗ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಪಾವತಿ ಮಾಡಲು ಬಳಸಬಹುದು.

ಫೊರೆಕ್ಸ್‌ ಕಾರ್ಡ್‌

ಫೊರೆಕ್ಸ್‌ ಕಾರ್ಡ್ ಒಂದು ರೀತಿಯ ಪ್ರಿಪೇಯ್ಡ್ ಟ್ರಾವೆಲ್ ಕಾರ್ಡ್ ಆಗಿದ್ದು, ಇದು ವಿದೇಶಿ ಹಣವನ್ನು ಲೋಡ್ ಮಾಡಿ ಅದನ್ನು ಖರ್ಚು ಮಾಡಲು ನಿಮಗೆ ಅನುವು ಮಾಡಿಕೊಡುತ್ತದೆ. ಈ ಕಾರ್ಡ್ ಅನ್ನು ಬ್ಯಾಂಕುಗಳು ನೀಡುತ್ತವೆ. ನೀವು ಇದರಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಯನ್ನು ಮುಂಚಿತವಾಗಿಯೇ ಲೋಡ್ ಮಾಡಬಹುದು ಮತ್ತು ನೀವು ಭೇಟಿ ನೀಡುವ ವಿದೇಶಿ ರಾಷ್ಟ್ರದಲ್ಲಿ ನಗದು ಹಿಂಪಡೆಯಲು, ಶಾಪಿಂಗ್ ಮಾಡಲು ಬಳಸಬಹುದು. ವಿದೇಶದಲ್ಲಿ ಅಧ್ಯಯನ ಮಾಡುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಡ್ ಬಳಸುತ್ತಾರೆ.

ಯಾವುದು ಉತ್ತಮ?

  • ನೀವು ಫೊರೆಕ್ಸ್‌ ಕಾರ್ಡ್‌ಗೆ ಹಣವನ್ನು ಲೋಡ್ ಮಾಡಿದಾಗ ವಿದೇಶಿ ವಿನಿಮಯ ದರವನ್ನು ಲಾಕ್ ಮಾಡಲಾಗುತ್ತದೆ. ಇದು ಭವಿಷ್ಯದ ಕರೆನ್ಸಿ ಬದಲಾವಣೆಯ ದರಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಕ್ರೆಡಿಟ್ ಕಾರ್ಡ್‌ನ ವಹಿವಾಟಿನ ಸಮಯದಲ್ಲಿ ಅದಕ್ಕೆ ದರ ಅನ್ವಯವಾಗುತ್ತದೆ. ಇದು ನಿರೀಕ್ಷಿತ ಏರಿಳಿತಗಳಿಗೆ ನಿಮ್ಮನ್ನು ಒಡ್ಡುತ್ತದೆ.
  • ಫೊರೆಕ್ಸ್‌ ಕಾರ್ಡ್‌ಗೆ ವ್ಯತಿರಿಕ್ತವಾಗಿ ಅಂತಾರಾಷ್ಟ್ರೀಯ ವಹಿವಾಟು ಮತ್ತು ನಗದು ಮುಂಗಡ ಶುಲ್ಕದಿಂದಾಗಿ ವಿದೇಶದಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ನಗದು ಹಿಂಪಡೆಯುವಿಕೆ ದುಬಾರಿಯಾಗಬಹುದು.
  • ಫೊರೆಕ್ಸ್‌ ಕಾರ್ಡ್ ಪ್ರಿಪೇಯ್ಡ್ ಆಗಿರುತ್ತವೆ. ಆದ್ದರಿಂದ ಕ್ರೆಡಿಟ್ ಕಾರ್ಡ್‌ನಲ್ಲಿ ವಿಧಿಸಲಾಗುವ ವಿಳಂಬ ಪಾವತಿಯ ದಂಡ ಮತ್ತು ಅತಿಯಾದ ಬಡ್ಡಿದರಗಳಿಂದ ಪಾರಾಗುತ್ತೀರಿ.
  • ನಿಮ್ಮ ಕ್ರೆಡಿಟ್ ಕಾರ್ಡ್‌ನ ಸಂಪೂರ್ಣ ಕ್ರೆಡಿಟ್ ಮಿತಿಯನ್ನು ಬಳಸಬಹುದು. ಇದು ಖರೀದಿಗಳು ಮತ್ತು ತುರ್ತು ಪರಿಸ್ಥಿತಿಗಳಿಗೆ ಸೂಕ್ತ. ಆದಾಗ್ಯೂ ಫೊರೆಕ್ಸ್‌ ಕಾರ್ಡ್‌ನಲ್ಲಿ ಮೊದಲೇ ಲೋಡ್ ಮಾಡಿದ ಮೊತ್ತವನ್ನಷ್ಟೇ ಬಳಸಬಹುದು. ನಿಮ್ಮ ಮೊತ್ತವು ಮುಗಿದರೆ, ನೀವು ಅದನ್ನು ಮತ್ತೆ ಲೋಡ್ ಮಾಡಬೇಕಾಗುತ್ತದೆ. ಇದು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಜತೆಗೆ ಮರು-ಲೋಡ್ ಶುಲ್ಕ ಪಾವತಿಸಬೇಕಾಗುತ್ತದೆ.

ಒಟ್ಟಿನಲ್ಲಿ ವಿದೇಶ ಪ್ರವಾಸದ ಸಂದರ್ಭದಲ್ಲಿ ಕ್ರೆಡಿಟ್‌ ಕಾರ್ಡ್‌ಗಿಂತ ಫೊರೆಕ್ಸ್‌ ಕಾರ್ಡ್‌ ಉತ್ತಮ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಇದನ್ನೂ ಓದಿ: Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Continue Reading
Advertisement
Pakistan Inflation
ವಿದೇಶ2 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ2 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು2 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ2 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ3 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ3 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ3 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ3 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ4 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ4 hours ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202413 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202414 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ21 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌