Loan Recovery : ಸಾಲದ ರಿಕವರಿಯಲ್ಲಿ ಮಾನವೀಯತೆ ಇರಲಿ: ಬ್ಯಾಂಕ್‌ಗಳಿಗೆ ವಿತ್ತ ಸಚಿವೆ ಸೂಚನೆ - Vistara News

ವಾಣಿಜ್ಯ

Loan Recovery : ಸಾಲದ ರಿಕವರಿಯಲ್ಲಿ ಮಾನವೀಯತೆ ಇರಲಿ: ಬ್ಯಾಂಕ್‌ಗಳಿಗೆ ವಿತ್ತ ಸಚಿವೆ ಸೂಚನೆ

Loan Recovery ಸಾಲದ ರಿಕವರಿಯಲ್ಲಿ ಮಾನವೀಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಬ್ಯಾಂಕ್‌ಗಳಿಗೆ ಸೂಚಿಸಿದೆ. ವಿವರ ಇಲ್ಲಿದೆ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸಾರ್ವಜನಿಕ ಹಾಗೂ ಖಾಸಗಿ ವಲಯದ ಬ್ಯಾಂಕ್‌ಗಳು ಸಾಲ ವಸೂಲಾತಿಯಲ್ಲಿ ಕಠೋರ ಕ್ರಮಗಳನ್ನು ಕೈ ಬಿಡಬೇಕು. ಮಾನವೀಯತೆ ಮತ್ತು ಸೂಕ್ಷ್ಮ ಸಂವೇದನೆಯಿಂದ ಸಾಲದ ರಿಕವರಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಕೆಲವು ಬ್ಯಾಂಕ್‌ಗಳು ನಿರ್ದಾಕ್ಷಿಣ್ಯವಾಗಿ ಉಗ್ರ ಕ್ರಮಗಳ ಮೂಲಕ ಸಾಲದ ಮರು ವಸೂಲಾತಿ ಕೈಗೊಂಡಿರುವ ಬಗ್ಗೆ ದೂರುಗಳನ್ನು ಗಮನಿಸಿದ್ದೇನೆ. ಆದರೆ ಸಾಲ ವಸೂಲಾತಿಯ ವಿಚಾರದಲ್ಲಿ ಮಾನವೀಯತೆ ಮತ್ತು ಸೂಕ್ಷ್ಮ ಸಂವೇದನೆಯಿಂದ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಎಲ್ಲ ಬ್ಯಾಂಕ್‌ಗಳಿಗೆ ಸೂಚಿಸಿದೆ ಎಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ.

ಬ್ಯಾಂಕ್‌ಗಳು ಖಾಸಗಿ ರಿಕವರಿ ಏಜೆಂಟರ ಮೂಲಕ ಬಲವಂತವಾಗಿ ಸಾಲ ಮರು ವಸೂಲಾತಿ ಮಾಡಬಾರದು. ಗ್ರಾಹಕರಿಗೆ ಕಿರುಕುಳ ನೀಡಬಾರದು. ತೋಳ್ಬಲವನ್ನು ಪ್ರಯೋಗಿಸಬಾರದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 2008ರಲ್ಲಿ ಬ್ಯಾಂಕ್‌ಗಳಿಗೆ ಈ ಬಗ್ಗೆ ಎಚ್ಚರಿಸಿತ್ತು. ಸಾಲದ ರಿಕವರಿಯನ್ನು ಬಲವಂತವಾಗಿ, ರಿಕವರಿ ಏಜೆಂಟರ ಮೂಲಕ ಕಿರುಕುಳ ಕೊಟ್ಟು ಮಾಡಿಸಿದರೆ, ಅಂಥ ಬ್ಯಾಂಕ್‌ ಅನ್ನು ನಿಷೇಧಿಸಲಾಗುವುದು ಎಂದು ಆರ್‌ಬಿಐ ಎಚ್ಚರಿಸಿತ್ತು.

ಆರ್‌ಬಿಐ ಈ ವರ್ಷ ಆರ್‌ಬಿಎಲ್‌ ಬ್ಯಾಂಕ್‌ಗೆ 2.27 ಕೋಟಿ ರೂ. ದಂಡ ವಿಧಿಸಿತ್ತು. ರಿಕವರಿ ಏಜೆಂಟರನ್ನು ನೇಮಿಸುವಾಗ ಬ್ಯಾಂಕ್‌ ಕೆಲವು ನಿಯಮಗಳನ್ನು ಪಾಲಿಸಿರಲಿಲ್ಲ. ಹಲವಾರು ಕೋಪರೇಟಿವ್‌ ಬ್ಯಾಂಕ್‌ಗಳಿಗೂ ಆರ್‌ಬಿಐ ಈ ರೀತಿ ದಂಡ ವಿಧಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

Money Guide: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ಹಾಗಾದರೆ ವಿದೇಶಿ ಪ್ರಯಾಣದ ವೇಳೆ ನೆರವಾಗುವ ಫೊರೆಕ್ಸ್‌ ಕಾರ್ಡ್‌ ಮತ್ತು ಕ್ರೆಡಿಟ್‌ ಕಾರ್ಡ್‌ ಪೈಕಿ ಯಾವುದು ಸೂಕ್ತ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಸೂಕ್ತ ಪ್ಲಾನ್‌ ಮಾಡಬೇಕಾಗುತ್ತದೆ. ಜತೆಗೆ ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ತೆರಿಗೆಯನ್ನು ತಪ್ಪಿಸಲು ವಿದೇಶಿ ವಿನಿಮಯ ಕಾರ್ಡ್‌ (forex cards)ಗಳನ್ನು ಬಳಸಬೇಕೆ ಅಥವಾ ಕ್ರೆಡಿಟ್ ಕಾರ್ಡ್ ಸ್ವೈಪ್ ಮಾಡಬೇಕೆ ಎನ್ನುವ ಗೊಂದಲ ಕಾಡುವುದು ಸಹಜ. ಈ ಪ್ರಶ್ನೆಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಕ್ರೆಡಿಟ್‌ ಕಾರ್ಡ್‌

ಗ್ರಾಹಕರು ಮೊದಲು ಸರಕು ಅಥವಾ ಸೇವೆಗಳನ್ನು ಖರೀದಿಸಿ ಬಳಿಕ ಪಾವತಿಸುವ ವ್ಯವಸ್ಥೆ ಕ್ರೆಡಿಟ್‌ ಕಾರ್ಡ್‌ನಲ್ಲಿದೆ. ಈ ಕಾರ್ಡ್ ಮೂಲಕ ನೀವು ನಿಮ್ಮ ಅಗತ್ಯಗಳನ್ನು ಸೀಮಿತ ಪ್ರಮಾಣದಲ್ಲಿ ಪೂರೈಸಿಕೊಳ್ಳಬಹುದು. ತೀರ ಬೇಕೆಂದಾಗ ನೀವು ಕ್ರೆಡಿಟ್ ಕಾರ್ಡ್‌ನಿಂದ ಹಣವನ್ನು ಕೂಡ ಪಡೆಯಬಹುದು. ಈ ರೀತಿಯಾಗಿ ಕ್ರೆಡಿಟ್ ಕಾರ್ಡ್ ಹೊಂದಿರುವವರು ಬ್ಯಾಂಕ್ ಬ್ಯಾಲೆನ್ಸ್ ಇಲ್ಲದಿದ್ದರೂ ಯಾವುದೇ ತೊಂದರೆಯಿಲ್ಲದೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಬಹುದು. ಕಡಿಮೆ ಬ್ಯಾಂಕ್ ಬ್ಯಾಲೆನ್ಸ್‌ನ ಸಂದರ್ಭದಲ್ಲಿಯೂ ಸಹ ಖರೀದಿ ಮಾಡಲು ಕ್ರೆಡಿಟ್ ಕಾರ್ಡ್ ನೆರವಾಗುತ್ತದೆ. ಇಲ್ಲಿ ನೀವು ಅನೇಕ ಬಡ್ಡಿ ರಹಿತ ಕ್ರೆಡಿಟ್‌ಗಳ ಪ್ರಯೋಜನವನ್ನು ಸಹ ಪಡೆಯಬಹುದು. ಕ್ರೆಡಿಟ್ ಕಾರ್ಡ್‌ಗಳನ್ನು ಆನ್‌ಲೈನ್ ಶಾಪಿಂಗ್, ಶಾಪಿಂಗ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಪಾವತಿ ಮಾಡಲು ಬಳಸಬಹುದು.

ಫೊರೆಕ್ಸ್‌ ಕಾರ್ಡ್‌

ಫೊರೆಕ್ಸ್‌ ಕಾರ್ಡ್ ಒಂದು ರೀತಿಯ ಪ್ರಿಪೇಯ್ಡ್ ಟ್ರಾವೆಲ್ ಕಾರ್ಡ್ ಆಗಿದ್ದು, ಇದು ವಿದೇಶಿ ಹಣವನ್ನು ಲೋಡ್ ಮಾಡಿ ಅದನ್ನು ಖರ್ಚು ಮಾಡಲು ನಿಮಗೆ ಅನುವು ಮಾಡಿಕೊಡುತ್ತದೆ. ಈ ಕಾರ್ಡ್ ಅನ್ನು ಬ್ಯಾಂಕುಗಳು ನೀಡುತ್ತವೆ. ನೀವು ಇದರಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಯನ್ನು ಮುಂಚಿತವಾಗಿಯೇ ಲೋಡ್ ಮಾಡಬಹುದು ಮತ್ತು ನೀವು ಭೇಟಿ ನೀಡುವ ವಿದೇಶಿ ರಾಷ್ಟ್ರದಲ್ಲಿ ನಗದು ಹಿಂಪಡೆಯಲು, ಶಾಪಿಂಗ್ ಮಾಡಲು ಬಳಸಬಹುದು. ವಿದೇಶದಲ್ಲಿ ಅಧ್ಯಯನ ಮಾಡುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಡ್ ಬಳಸುತ್ತಾರೆ.

ಯಾವುದು ಉತ್ತಮ?

  • ನೀವು ಫೊರೆಕ್ಸ್‌ ಕಾರ್ಡ್‌ಗೆ ಹಣವನ್ನು ಲೋಡ್ ಮಾಡಿದಾಗ ವಿದೇಶಿ ವಿನಿಮಯ ದರವನ್ನು ಲಾಕ್ ಮಾಡಲಾಗುತ್ತದೆ. ಇದು ಭವಿಷ್ಯದ ಕರೆನ್ಸಿ ಬದಲಾವಣೆಯ ದರಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಕ್ರೆಡಿಟ್ ಕಾರ್ಡ್‌ನ ವಹಿವಾಟಿನ ಸಮಯದಲ್ಲಿ ಅದಕ್ಕೆ ದರ ಅನ್ವಯವಾಗುತ್ತದೆ. ಇದು ನಿರೀಕ್ಷಿತ ಏರಿಳಿತಗಳಿಗೆ ನಿಮ್ಮನ್ನು ಒಡ್ಡುತ್ತದೆ.
  • ಫೊರೆಕ್ಸ್‌ ಕಾರ್ಡ್‌ಗೆ ವ್ಯತಿರಿಕ್ತವಾಗಿ ಅಂತಾರಾಷ್ಟ್ರೀಯ ವಹಿವಾಟು ಮತ್ತು ನಗದು ಮುಂಗಡ ಶುಲ್ಕದಿಂದಾಗಿ ವಿದೇಶದಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ನಗದು ಹಿಂಪಡೆಯುವಿಕೆ ದುಬಾರಿಯಾಗಬಹುದು.
  • ಫೊರೆಕ್ಸ್‌ ಕಾರ್ಡ್ ಪ್ರಿಪೇಯ್ಡ್ ಆಗಿರುತ್ತವೆ. ಆದ್ದರಿಂದ ಕ್ರೆಡಿಟ್ ಕಾರ್ಡ್‌ನಲ್ಲಿ ವಿಧಿಸಲಾಗುವ ವಿಳಂಬ ಪಾವತಿಯ ದಂಡ ಮತ್ತು ಅತಿಯಾದ ಬಡ್ಡಿದರಗಳಿಂದ ಪಾರಾಗುತ್ತೀರಿ.
  • ನಿಮ್ಮ ಕ್ರೆಡಿಟ್ ಕಾರ್ಡ್‌ನ ಸಂಪೂರ್ಣ ಕ್ರೆಡಿಟ್ ಮಿತಿಯನ್ನು ಬಳಸಬಹುದು. ಇದು ಖರೀದಿಗಳು ಮತ್ತು ತುರ್ತು ಪರಿಸ್ಥಿತಿಗಳಿಗೆ ಸೂಕ್ತ. ಆದಾಗ್ಯೂ ಫೊರೆಕ್ಸ್‌ ಕಾರ್ಡ್‌ನಲ್ಲಿ ಮೊದಲೇ ಲೋಡ್ ಮಾಡಿದ ಮೊತ್ತವನ್ನಷ್ಟೇ ಬಳಸಬಹುದು. ನಿಮ್ಮ ಮೊತ್ತವು ಮುಗಿದರೆ, ನೀವು ಅದನ್ನು ಮತ್ತೆ ಲೋಡ್ ಮಾಡಬೇಕಾಗುತ್ತದೆ. ಇದು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಜತೆಗೆ ಮರು-ಲೋಡ್ ಶುಲ್ಕ ಪಾವತಿಸಬೇಕಾಗುತ್ತದೆ.

ಒಟ್ಟಿನಲ್ಲಿ ವಿದೇಶ ಪ್ರವಾಸದ ಸಂದರ್ಭದಲ್ಲಿ ಕ್ರೆಡಿಟ್‌ ಕಾರ್ಡ್‌ಗಿಂತ ಫೊರೆಕ್ಸ್‌ ಕಾರ್ಡ್‌ ಉತ್ತಮ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಇದನ್ನೂ ಓದಿ: Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Continue Reading

ಪ್ರಮುಖ ಸುದ್ದಿ

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿ ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಇದು ಆತಂಕಕಾರಿ

VISTARANEWS.COM


on

Vistara Editorial
Koo

ಭಾರತದಲ್ಲಿ ತಯಾರಾಗುವ ಒಟ್ಟು 527 ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಹೇಳಿದ್ದಾರೆ. 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿದೆಯಂತೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ. ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಅಪಾಯಕಾರಿ ಕೆಮಿಕಲ್‌ಗಳು ಕಂಡು ಬಂದಿವೆ. ಇದು ಭಾರತದ ರಫ್ತು ವಲಯದ ಮಟ್ಟಿಗೆ ಆತಂಕಕಾರಿ ಸಂಗತಿ.

ಹೀಗಾಗುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿಯನ್ನು ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಅಮೆರಿಕದಲ್ಲಿ ಭಾರತದ ಮಾವು, ಜರ್ಮನಿಯಲ್ಲಿ ಭಾರತದ ಡಾರ್ಜಲಿಂಗ್‌ ಟೀ, ಯುಎಇಯಲ್ಲಿ ನಮ್ಮ ಮಾವು ಹಾಗೂ ತರಕಾರಿ ತಿರಸ್ಕಾರಕ್ಕೊಳಗಾಗಿದ್ದವು. ಇದೀಗ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅತಿಯಾಗಿ ಕಂಡುಬಂದಿದೆ. ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಹೆಚ್ಚಿದೆ. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದ ಕೆಲವು ದೇಶಗಳಲ್ಲಿ ಸಾವಿಗೆ ಕಾರಣವಾಗಿತ್ತು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಇದಕ್ಕೆ ಕಾರಣ, ನಮ್ಮವರು ಬೆಳೆಯುವ ಬೆಳೆಗೆ ಬಳಸುವ ಕೀಟನಾಶಕ ಹಾಗೂ ರಸಗೊಬ್ಬರದ ಪ್ರಮಾಣದಲ್ಲಿ ಲಂಗುಲಗಾಮೇ ಇಲ್ಲದಿರುವುದು. ಕೀಟನಾಶಕಗಳು ಹಾಗೂ ರಸಗೊಬ್ಬರಗಳಿಗೆ ಅತಿ ಭಾರೀ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕೊಡುವ ದೇಶವೂ ನಮ್ಮದೇ. ಹೀಗಾಗಿ ಇವು ಅತ್ಯಂತ ಅಗ್ಗವಾಗಿ ಸಿಗುತ್ತವೆ. ಅಮೆರಿಕ ಬಹಳಷ್ಟು ಸಾರಿ ನಮ್ಮಲ್ಲಿ ನೀಡಲಾಗುತ್ತಿರುವ ರಸಗೊಬ್ಬರ ಸಬ್ಸಿಡಿಯ ಬಗ್ಗೆ ತಗಾದೆ ಎತ್ತಿದೆ. ಇದರಲ್ಲಿ ಅಮೆರಿಕದ ಹಿತಾಸಕ್ತಿಯೂ ಇದೆ ಎನ್ನೋಣ. ಆದರೆ ಅಮೆರಿಕದ ಆಕ್ಷೇಪದಲ್ಲಿ ಸತ್ಯವೂ ಇದೆ. ಅಮೆರಿಕ, ಮುಂದುವರಿದ ಯುರೋಪ್ ದೇಶಗಳು, ಸಿಂಗಾಪುರ ಮುಂತಾದೆಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮ ಮೀರಿದ ಉತ್ಪನ್ನಗಳನ್ನು ಅವು ಸ್ವೀಕರಿಸುವುದಿಲ್ಲ. ಹೀಗಾಗಿ ರಫ್ತಿನ ಮಟ್ಟಿಗೆ ನಾವೂ ಕಠಿಣ ನಿಯಮಗಳನ್ನು ಪಾಲಿಸಬೇಕಾದುದು ಅತ್ಯವಶ್ಯಕ.

ದೇಶದಿಂದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿನ ಪ್ರಾಮುಖ್ಯತೆ ಹಾಗೂ ಅದರ ಗುಣಮಟ್ಟ ಕಾಪಾಡಿಕೊಳ್ಳಬೇಕಾದ ಅಗತ್ಯ ಅರಿತುಕೊಂಡ ಕೇಂದ್ರ ಸರ್ಕಾರ 1986ರಲ್ಲಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವನ್ನು (APEDA) ಸ್ಥಾಪಿಸಿತು. ರಫ್ತು ಮಾಡಬೇಕಾದ ಸರಕುಗಳ ಕಡ್ಡಾಯ ಗುಣಮಟ್ಟದ ನಿಯಂತ್ರಣ ಮತ್ತು ಪೂರ್ವ-ರವಾನೆ ತಪಾಸಣೆಯ ಉದ್ದೇಶಕ್ಕಾಗಿ ರಫ್ತು (ಗುಣಮಟ್ಟ ನಿಯಂತ್ರಣ ಮತ್ತು ತಪಾಸಣೆ) ಕಾಯಿದೆ, 1963ರ ಸೆಕ್ಷನ್ 3ರ ಅಡಿಯಲ್ಲಿ ಭಾರತ ಸರ್ಕಾರದಿಂದ ರಫ್ತು ಪರಿಶೀಲನಾ ಮಂಡಳಿ (EIC) ಅನ್ನು ಸ್ಥಾಪಿಸಲಾಯಿತು. ಇದು 1000ಕ್ಕೂ ಹೆಚ್ಚು ಸರಕುಗಳನ್ನು ತಪಾಸಿಸುತ್ತದೆ. ಆಹಾರ ಮತ್ತು ಕೃಷಿ, ಮೀನುಗಾರಿಕೆ, ಖನಿಜಗಳು, ಸಾವಯವ ಮತ್ತು ಅಜೈವಿಕ ರಾಸಾಯನಿಕಗಳು, ರಬ್ಬರ್ ಉತ್ಪನ್ನಗಳು, ಸೆರಾಮಿಕ್ ಉತ್ಪನ್ನಗಳು, ಕೀಟನಾಶಕಗಳು, ಲಘು ಎಂಜಿನಿಯರಿಂಗ್, ಉಕ್ಕಿನ ಉತ್ಪನ್ನಗಳು, ಸೆಣಬು ಉತ್ಪನ್ನಗಳು, ತೆಂಗಿನಕಾಯಿ ಉತ್ಪನ್ನಗಳು, ಪಾದರಕ್ಷೆಗಳು ಇವನ್ನೆಲ್ಲ ಪರಿಶೀಲಿಸುತ್ತದೆ. ಇದಕ್ಕಾಗಿಯೇ ದೊಡ್ಡ ಸಂಖ್ಯೆಯ ಲ್ಯಾಬ್‌ಗಳಿವೆ. ಹೀಗಿದ್ದರೂ ಕಣ್ತಪ್ಪಿಸಿ ವಿಷಕಾರಕ ಅಂಶಗಳಿರುವ ಉತ್ಪನ್ನಗಳು ವಿದೇಶಕ್ಕೆ ಹೋಗುತ್ತವೆ ಎಂದರೇನರ್ಥ?

ಸದ್ಯ ಈ ತಪಾಸಣೆಯನ್ನು ಬಿಗಿ ಮಾಡಬೇಕಿದೆ. ವಿಷಕಾರಕ ಅಂಶಗಳನ್ನು ಹೊಂದಿರುವ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವ, ಪರೀಕ್ಷಿಸುವ, ದೇಶಕ್ಕೆ ಕೆಟ್ಟ ಹೆಸರು ತರುವ ಉತ್ಪನ್ನಗಳ ನಿರ್ಬಂಧಕ್ಕೆ ಕಠಿಣ ಕ್ರಮ ಆಗಬೇಕಿದೆ. ಯಾಕೆಂದರೆ ಇದು ಭಾರತದ ಘನತೆಯನ್ನು ಜಾಗತಿಕವಾಗಿ ಉಳಿಸುವ ಅಥವಾ ನಾಶಮಾಡುವ ಸಂಗತಿಯಾಗಿದೆ.

Continue Reading

ವಿದೇಶ

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಅಮೆರಿಕ ಮುಂದಾಗಿದೆ. ಉತ್ಪನ್ನಗಳನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ ನಂತರ ಈ ಬೆಳವಣಿಕೆ ಕಂಡು ಬಂದಿದೆ. ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

MDH, Everest Spices
Koo

ವಾಷಿಂಗ್ಟನ್‌: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳ ಮಾರಾಟವನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ್ದು, ಇದೀಗ ಅಮೆರಿಕವೂ ಕ್ರಮಕ್ಕೆ ಮುಂದಾಗಿದೆ. ಅಮೆರಿಕದ ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ (Food and Drug Administration) ಎಂಡಿಎಚ್ ಮತ್ತು ಎವರೆಸ್ಟ್‌ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

“ಎಫ್‌ಡಿಎ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ” ಎಂದು ವಕ್ತಾರರು ತಿಳಿಸಿದ್ದಾರೆ. ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ಇತ್ತೀಚೆಗೆ ನಿಷೇಧಿಸಿತ್ತು. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿತ ಉತ್ಪನ್ನಗಳು.

ವಿವಾದದ ಬಳಿಕ ಎವರೆಸ್ಟ್ ಸಂಸ್ಥೆ ಪ್ರತಿಕ್ರಿಯಿಸಿ, ʼʼತನ್ನ ಮಸಾಲೆಗಳು ಸೇವನೆಗೆ ಸುರಕ್ಷಿತʼʼ ಎಂದು ಹೇಳಿದೆ. ಆದರೆ ಎಂಡಿಎಚ್ ಇದುವರೆಗೆ ತನ್ನ ಉತ್ಪನ್ನಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕಂಪನಿಗಳ ಉತ್ಪನ್ನಗಳನ್ನು ಅಮೆರಿಕ, ಯುರೋಪ್‌, ಇಂಗ್ಲೆಂಡ್‌ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಗುಣಮಟ್ಟ ತಪಾಸಣೆಗೆ ಭಾರತೀಯ ಆಹಾರ ಸುರಕ್ಷತಾ ನಿಯಂತ್ರಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸೋಮವಾರ ಆದೇಶ ಹೊರಡಿಸಿದೆ.

ʼʼಹಾಂಕಾಂಗ್ ಮತ್ತು ಸಿಂಗಾಪುರದ ಅಧಿಕಾರಿಗಳಿಂದ ಎಂಡಿಎಚ್ ಮತ್ತು ಎವರೆಸ್ಟ್ ಉತ್ಪನ್ನಗಳ ರಫ್ತು ಬಗ್ಗೆ ಮಾಹಿತಿ ಕೋರಲಾಗಿದೆ. ಗುಣಮಟ್ಟದ ಸಮಸ್ಯೆಗಳ ಮೂಲ ಕಾರಣವನ್ನು ಕಂಡುಹಿಡಿಯಲು ಕಂಪನಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆʼʼ ಎಂದು ಭಾರತದ ಮಸಾಲೆ ಮಂಡಳಿ ಬುಧವಾರ ತಿಳಿಸಿದೆ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಹಿಂಪಡೆಯಲು ಸಿಂಗಾಪುರ ಆದೇಶಿಸಿತ್ತು. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಅದು ಆರೋಪಿಸಿತ್ತು. ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಕಾರಣ ತಿಳಿಸಿತ್ತು. ಅದಾದ ಬಳಿಕ ಹಾಂಕಾಂಗ್‌ನಲ್ಲೂ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ.

Continue Reading
Advertisement
love jihad
ಕರ್ನಾಟಕ3 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ4 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು4 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ4 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ4 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ5 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ5 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ5 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ5 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202411 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202413 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202415 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202415 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ18 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌