LPG Price Cut 171.50 rupees decrease in commercial LPG cylinder priceLPG Price Cut : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್‌ ದರದಲ್ಲಿ 171.50 ರೂ. ಇಳಿಕೆ - Vistara News

ಪ್ರಮುಖ ಸುದ್ದಿ

LPG Price Cut : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್‌ ದರದಲ್ಲಿ 171.50 ರೂ. ಇಳಿಕೆ

LPG Price Cut ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಕಮರ್ಶಿಯಲ್‌ ಬಳಕೆಯ ಅಡುಗೆ ಅನಿಲ ದರದಲ್ಲಿ 171.50 ರೂ. ಕಡಿತ ಘೋಷಿಸಿವೆ. ಮೇ 1ರಿಂದ ಇದು ಜಾರಿಯಾಗಲಿದೆ.

VISTARANEWS.COM


on

LPG Price Cut 171.50 rupees decrease in commercial LPG cylinder price
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್‌ ಸಿಲಿಂಡರ್‌ ದರದಲ್ಲಿ ಗಣನೀಯ ದರ ಇಳಿಕೆಯನ್ನು ಪ್ರಕಟಿಸಿವೆ. 19 ಕೆ.ಜಿ ಕಮರ್ಶಿಯಲ್‌ ಗ್ಯಾಸ್‌ ಸಿಲಿಂಡರ್‌ ದರ ( Commercial LPG cylinder) ಸೋಮವಾರದಿಂದ (ಮೇ 1) ಇಳಿಕೆಯಾಗಿದೆ. (LPG Price Cut) ಇದರಿಂದಾಗಿ ದಿಲ್ಲಿಯಲ್ಲಿ 19 ಕೆ.ಜಿ ಕಮರ್ಶಿಯಲ್‌ ಎಲ್ಪಿಜಿ ದರ ಈಗ 1856.50 ರೂ.ಗೆ ತಗ್ಗಿದೆ. ಮನೆಗಳಲ್ಲಿ ಬಳಕೆ ಮಾಡುವ ಅಡುಗೆ ಅನಿಲ ದರದಲ್ಲಿ ಬದಲಾವಣೆ ಆಗಿಲ್ಲ.

2023ರ ಏಪ್ರಿಲ್‌ 1ರಂದು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್‌ ದರದಲ್ಲಿ 91.50 ರೂ. ಕಡಿತ ಮಾಡಿದ್ದವು. ಆಗ ದಿಲ್ಲಿಯಲ್ಲಿ 19 ಕೆಜಿ ಕಮರ್ಷಿಯಲ್‌ ಸಿಲಿಂಡರ್‌ ದರ 2,028 ರೂ. ಇತ್ತು. ಕಳೆದ ಮಾರ್ಚ್‌ 1ರಂದು ತೈಲ ಮಾರುಕಟ್ಟೆ ಕಂಪನಿಗಳು ಕಮರ್ಶಿಯಲ್‌ ಎಲ್ಪಿಜಿ ಸಿಲಿಂಡರ್‌ ದರದಲ್ಲಿ 350.50 ರೂ. ಏರಿಕೆ ಮಾಡಿತ್ತು. ಡೊಮೆಸ್ಟಿಕ್‌ ಎಲ್ಪಿಜಿ ಸಿಲಿಂಡರ್‌ ದರದಲ್ಲಿ 50 ರೂ. ಏರಿಸಲಾಗಿತ್ತು.

2022ರ ಸೆಪ್ಟೆಂಬರ್‌ 1ರಂದು ಕಮರ್ಶಿಯಲ್‌ ಎಲ್ಪಿಜಿ ಸಿಲಿಂಡರ್‌ ದರದಲ್ಲಿ 91.50 ರೂ.ಗಳನ್ನು ಏರಿಸಲಾಗಿತ್ತು. 2022ರ ಆಗಸ್ಟ್‌ 1ರಂದು 36 ರೂ. ಕಡಿತ ಮಾಡಲಾಗಿತ್ತು. ಕೋಲ್ಕೊತಾದಲ್ಲಿ 19 ಕೆ.ಜಿ ಕಮರ್ಶಿಯಲ್‌ ಗ್ಯಾಸ್‌ ಸಿಲಿಂಡರ್‌ ದರ ಈಗ 1960.50 ರೂ.ಗೆ ಇಳಿದಿದೆ. ಅಲ್ಲಿ ಈ ಹಿಂದೆ 2132 ರೂ. ಇತ್ತು. ಮುಂಬಯಿನಲ್ಲಿ 19 ಕೆ.ಜಿ ಕಮರ್ಶಿಯಲ್‌ ಗ್ಯಾಸ್‌ ಸಿಲಿಂಡರ್‌ ದರ ಈಗ 1808 ರೂ.ಗೆ ಇಳಿದಿದೆ. ಈ ಹಿಂದೆ 1980 ರೂ. ಇತ್ತು. ಚೆನ್ನೈನಲ್ಲಿ ಈಗ 19 ಕೆ.ಜಿ ಕಮರ್ಶಿಯಲ್‌ ಗ್ಯಾಸ್‌ ಸಿಲಿಂಡರ್‌ ದರ 2021 ರೂ.ಗೆ ಇಳಿದಿದೆ. ಈ ಹಿಂದೆ 2192 ರೂ. ಇತ್ತು.

19 ಕೆ.ಜಿ ಕಮರ್ಶಿಯಲ್‌ ಗ್ಯಾಸ್‌ ಸಿಲಿಂಡರ್‌ ದರ ಇಳಿಕೆಯಿಂದ ಹೋಟೆಲ್‌, ರೆಸ್ಟೊರೆಂಟ್‌, ಉದ್ದಿಮೆಗಳಿಗೆ ಅನುಕೂಲವಾಗಲಿದೆ. ಇದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಹಾದಿ ಸುಗಮವಾಗಲಿದೆ. ಹಣದುಬ್ಬರ ನಿಯಂತ್ರಿಸಲು ಕೂಡ ಸಹಕಾರಿಯಾಗುವ ನಿರೀಕ್ಷೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕನ್ಯಾ ರಾಶಿಯಿಂದ ಶನಿವಾರ ರಾತ್ರಿ 11:08ಕ್ಕೆ ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 22:40 ವಾರ: ಶನಿವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 14:03 ಯೋಗ: ಧ್ರುವ 26:46
ಕರಣ: ಭವ 09:22 ಅಮೃತಕಾಲ: ಬೆಳಗ್ಗೆ 06:50 ರಿಂದ 08:39
ದಿನದ ವಿಶೇಷ: ಮಾಗಡಿ ರಂಗನಾಥ ಸ್ವಾಮಿ ರಥ

ಸೂರ್ಯೋದಯ : 06:04   ಸೂರ್ಯಾಸ್ತ : 06:33

ರಾಹುಕಾಲ : ಬೆಳಗ್ಗೆ 09:11 ರಿಂದ 10:45
ಗುಳಿಕಕಾಲ: ಬೆಳಗ್ಗೆ 06:04ರಿಂದ 07:38
ಯಮಗಂಡಕಾಲ: ಮಧ್ಯಾಹ್ನ 01:52 ರಿಂದ 03:26

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ, ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು,ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

ಗೃಹ ಸಚಿವರು ಈ ಕುರಿತು ಪ್ರತಿಕ್ರಿಯೆ ನೀಡುತ್ತ, “ನೇಹಾ ಕೊಲೆ ಆಕಸ್ಮಿಕ. ಆಕೆಯೂ ಆರೋಪಿಯೂ ಪ್ರೀತಿಸುತ್ತಿದ್ದರು. ಆಕೆ ನಿರಾಕರಿಸಿದ್ದರಿಂದ ಕೊಲೆ ಮಾಡಿದ್ದಾನೆ” ಎಂದು ಹಗುರವಾದ ಹೇಳಿಕೆ ನೀಡಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ. ಆಕಸ್ಮಿಕ ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಇಂಥ ಅಪರಾಧಗಳು ಆಕಸ್ಮಿಕವಾಗಿ ಆಗುವುದಿಲ್ಲ. ಗೃಹ ಸಚಿವರು ಹಾಗೂ ಪೊಲೀಸರು ರಾಜ್ಯದ ಕಾನೂನು ಸುವ್ಯವಸ್ಥೆಯತ್ತ ಗಂಭೀರ ಗಮನ ನೆಟ್ಟಿದ್ದಾರೆಯೇ ಎಂದು ಪ್ರಶ್ನಿಸುವಂತಾಗಿದೆ.

VISTARANEWS.COM


on

Neha Hiremttt
Koo

ಬೆಳಗಿ ಬಾಳಬೇಕಾದ ಕುಡಿಯೊಂದು ಯವ್ವನದಲ್ಲೇ ಕಮರಿಹೋಗಿದೆ. ಬೆಳಗಾವಿ ಮೂಲದ ಯುವತಿಯೊಬ್ಬಳನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ ಎಂಬಾಕೆಯನ್ನು ಫಯಾಜ್ ಎನ್ನುವವನು ಕೊಂದು ಹಾಕಿದ್ದಾನೆ. ಈ ಹಿಂದೆ ನೇಹಾ ಓದುತ್ತಿದ್ದ ಕಾಲೇಜಿನಲ್ಲಿ ಈಕೆಯ ಸಹಪಾಠಿಯಾಗಿದ್ದ ಈತ, ತನ್ನ ಪ್ರೀತಿಯನ್ನು ಆಕೆ ತಿರಸ್ಕರಿಸಿದ್ದರಿಂದ ರೊಚ್ಚಿಗೆದ್ದಿದ್ದ. ಬಿಸಿಎಯಲ್ಲಿ ಫೇಲ್ ಆಗಿದ್ದ ಈತನ ಯಾವ ʼಕಲ್ಯಾಣ ಗುಣʼ ನೋಡಿ ಆಕೆ ತನ್ನನ್ನು ಪ್ರೀತಿಸಬೇಕು ಎಂದುಕೊಂಡಿದ್ದನೋ ಗೊತ್ತಿಲ್ಲ. ನಿನ್ನೆ ಏಕಾಏಕಿ ಅವಳು ಓದುತ್ತಿದ್ದ ಕಾಲೇಜಿಗೆ ಬಂದು, ಕ್ಯಾಂಪಸ್‌ನಲ್ಲಿಯೇ ಆಕೆಯನ್ನು ಇರಿದು ಕೊಂದಿದ್ದಾನೆ. ಕೊಲೆ ಮಾಡಿದ ರೀತಿಯೂ ಬೆಚ್ಚಿ ಬೀಳಿಸುವಂತಿದೆ. ಒಂಬತ್ತು ಬಾರಿ ಚಾಕುವಿನಿಂದ ಇರಿದ ಈತ, ನೋವಿನಿಂದ ಆಕೆ ನರಳಾಡುತ್ತಿದ್ದರೂ, ಆಕೆ ಕೊನೆಯುಸಿರು ಎಳೆದದ್ದನ್ನು ಖಚಿತಪಡಿಸಿಕೊಂಡೇ ಅಲ್ಲಿಂದ ತೆರಳಿದ್ದಾನೆ. ಅಂದ ಮೇಲೆ ಆತನಲ್ಲಿ ಇದ್ದುದು ಪ್ರೀತಿಯಲ್ಲ, ಕ್ರೌರ್ಯ ಮಾತ್ರ. ಪ್ರೇಮ ಎಂದೂ ಇಂಥ ವಿಕೃತಿಯನ್ನು ತಾಳಲು ಸಾಧ್ಯವಿಲ್ಲ.

ಘಟನೆಯನ್ನು ಖಂಡಿಸಿ, ಎಂದಿನಂತೆ, ಹಿಂದೂ ಸಂಘಟನೆಗಳು ಬೀದಿಗಿಳಿದಿವೆ. ಹುಡುಗಿಯ ಮೂಲ ಊರಾದ ಮುನವಳ್ಳಿಯಲ್ಲಿ ಮೂರು ದಿನಗಳ ಕಾಲ ಬಂದ್‌ ಸಾರಲಾಗಿದೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಇಳಿದಿದ್ದಾರೆ. ಬಿಜೆಪಿ ಮುಖಂಡರು ಸಂತ್ರಸ್ತ ಯುವತಿಯ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಬೇಕು ಎಂದು ಪೊಲೀಸರನ್ನು ಹೆಚ್ಚಿನವರು ಆಗ್ರಹಿಸಿದ್ದಾರೆ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಿಎಂ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ʼಬಿಜೆಪಿ ಇದನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆʼ ಎಂದು ಆರೋಪಿಸುವುದು ಸುಲಭ; ಆದರೆ ಇಷ್ಟಾದರೂ ಪ್ರತಿಭಟನೆಯ ಧ್ವನಿ ಎಬ್ಬಿಸದೇ ಹೋದರೆ, ಪೊಲೀಸರು ಹಾಗೂ ಆಡಳಿತದಲ್ಲಿ ಇರುವವರು ಇದನ್ನು ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇತ್ತೇ? ರಾಜ್ಯದಲ್ಲಿ ಪ್ರತಿದಿನ ಹಲವಾರು ಕೊಲೆಗಳಾಗುತ್ತವೆ. ನಿನ್ನೆಯಂತೂ ಗದಗದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿಯ ಕೊಲೆಯಾಗಿದೆ. ಪೊಲೀಸರು ತಮ್ಮದೇ ವೇಗದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಪ್ರಕರಣದ ಗಂಭೀರತೆಯನ್ನು ಆಡಳಿತಕ್ಕೆ ಮುಟ್ಟಿಸಿ, ತನಿಖೆ- ವಿಚಾರಣೆ- ಶಿಕ್ಷೆ ತೀವ್ರಗತಿಯಲ್ಲಿ ನಡೆಯುವಂತೆ ಮಾಡುವುದಂತೂ ಈ ಮೂಲಕ ಸಾಧ್ಯವಿದೆ.

ಇಂಥ ಅಪರಾಧಗಳ ಮೂಲದಲ್ಲಿ ಏನಿರುತ್ತದೆ? ಇನ್ನೊಬ್ಬ ವ್ಯಕ್ತಿಯನ್ನು ಕೊಲ್ಲುವುದು ಇಷ್ಟೊಂದು ಸುಲಭವೇ? ತನ್ನ (ವಿಕೃತ)ಪ್ರೇಮವನ್ನು ತಿರಸ್ಕರಿಸಿದಳೆಂದು ಯುವತಿಯೊಬ್ಬಳನ್ನು ಕೊಲ್ಲುವ ಈ ಮನಸ್ಥಿತಿ ಎಷ್ಟು ವಿಕೃತವಾದುದು ಎಂಬುದನ್ನು ಮತ್ತೆ ಹೇಳಬೇಕಿಲ್ಲ. ತನಗೆ ದೊರೆಯದ ಯುವತಿ ಇನ್ಯಾರಿಗೂ ದೊರೆಯುವುದು ಬೇಡ, ಆಕೆ ಬದುಕುವುದೂ ಬೇಡ ಎನ್ನುವುದು ಬಣ್ಣಿಸಲೂ ಮಾತುಗಳಿಲ್ಲದ ನೀಚತನ. ಇದು ಅಪರೂಪದಲ್ಲಿ ಅಪರೂಪದ ದುಷ್ಕೃತ್ಯ. ಈತನಿಗೆ ಗಲ್ಲು ಶಿಕ್ಷೆ ಆಗಲೇಬೇಕಿದೆ. ಈತನ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಪೊಲೀಸರು ಕಲೆಹಾಕಿ ನ್ಯಾಯಾಲಯದಲ್ಲಿ ಗಟ್ಟಿಯಾಗಿ ವಾದ ಮಂಡಿಸಲು ಪೂರಕವಾಗಿ ಕೆಲಸ ಮಾಡಿದರೆ ಮಾತ್ರ ಇದು ಸಾಧ್ಯ.

ಇದರ ಜೊತೆಗೆ ಮತಾಂಧತೆಯೂ ಸೇರಿದಂತಿದೆ. ಇದು ಒಬ್ಬ ವ್ಯಕ್ತಿಯ ಮನಸ್ಥಿತಿ ಮಾತ್ರವೇ ಅಲ್ಲ; ಹೀಗೆ ಸಮಾಜದಲ್ಲಿ ಭಯ ಉತ್ಪಾದಿಸುವ ಸಂಘಟನೆಗಳ ವರ್ತನೆಯೂ ಹೀಗೇ ಇರುತ್ತದೆ. ಈತನ ಹಿಂದೆ ಇನ್ಯಾರದಾದರೂ ಕೈವಾಡವಿದೆಯೇ ಎಂಬ ಕೋನದಲ್ಲಿ ಕೂಡ ತನಿಖೆ ನಡೆಸುವುದು ಒಳಿತು. ಈತನ ಕೃತ್ಯವನ್ನು ನೋಡಿದರೆ ಇದು ʼಲವ್‌ ಜಿಹಾದ್‌ ಕೊಲೆʼ ಆಗಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

ಇದರ ಜೊತೆಗೆ ಕಾನೂನು ಸುವ್ಯವಸ್ಥೆಯ ಪ್ರಶ್ನೆಯೂ ತಳುಕು ಹಾಕಿಕೊಂಡಿದೆ. ಗೃಹ ಸಚಿವರು ಈ ಕುರಿತು ಪ್ರತಿಕ್ರಿಯೆ ನೀಡುತ್ತ, “ನೇಹಾ ಕೊಲೆ ಆಕಸ್ಮಿಕ. ಆಕೆಯೂ ಆರೋಪಿಯೂ ಪ್ರೀತಿಸುತ್ತಿದ್ದರು. ಆಕೆ ನಿರಾಕರಿಸಿದ್ದರಿಂದ ಕೊಲೆ ಮಾಡಿದ್ದಾನೆ” ಎಂದು ಹಗುರವಾದ ಹೇಳಿಕೆ ನೀಡಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ. ಆಕಸ್ಮಿಕ ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಇಂಥ ಅಪರಾಧಗಳು ಆಕಸ್ಮಿಕವಾಗಿ ಆಗುವುದಿಲ್ಲ. ಅದರ ಹಿಂದೆ ತರ್ಕಬದ್ಧ ಯೋಜನೆ ಇರುತ್ತದೆ. ಆದ್ದರಿಂದ ಈತ ಗರಿಷ್ಠ ಶಿಕ್ಷೆಗೆ ಅರ್ಹ. ಗೃಹ ಸಚಿವರು ಹಾಗೂ ಪೊಲೀಸರು ರಾಜ್ಯದ ಕಾನೂನು ಸುವ್ಯವಸ್ಥೆಯತ್ತ ಗಂಭೀರ ಗಮನ ನೆಟ್ಟಿದ್ದಾರೆಯೇ? ಈ ಪ್ರಶ್ನೆಯನ್ನು ಅವರು ಉತ್ತರಿಸಬೇಕಿದೆ. ಅಪರಾಧಗಳು ಸಂಭವಿಸದಂತೆ ಕಠಿಣ ಕಾನೂನು ಸುವ್ಯವಸ್ಥೆಯನ್ನು ಜಾರಿಯಲ್ಲಿಡುವುದೇ ಅಪರಾಧಗಳನ್ನು ತಡೆಯುವ ಸುಲಭ ವಿಧಾನ. ಇಂಥ ಅಪರಾಧಗಳು ಇನ್ನು ಘಟಿಸದಿರಲಿ.

Continue Reading

ಕ್ರೀಡೆ

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಆರಂಭಿಕ ವಿಕೆಟ್​ಗಳ ನಷ್ಟದ ಹೊರತಾಗಿಯೂ ಕೊನೇ ಹಂತದಲ್ಲಿ ಉತ್ತಮವಾಗಿ ಆಡಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 176 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಲಕ್ನೊ ತಂಡ 19 ಓವರ್​ಗಳಲ್ಲಿ 2ವಿಕೆಟ್ ನಷ್ಟಕ್ಕೆ 180 ರನ್​ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IPL 2024
Koo

ಲಖನೌ: ಕೆ. ಎಲ್​. ರಾಹುಲ್​ (82 ರನ್​, 53 ಎಸೆತ, 9 ಫೋರ್, 3 ಸಿಕ್ಸರ್​) ಹಾಗೂ ಕ್ವಿಂಟನ್ ಡಿ ಕಾಕ್​ (54 ರನ್​, 43 ಎಸೆತ, 5 ಫೋರ್​, 1 ಸಿಕ್ಸರ್​) ಜೋಡಿಯ ಅರ್ಧ ಶತಕಗಳ ನೆರವು ಪಡೆದ ಲಕ್ನೊ ಸೂಪರ್ ಜೈಂಟ್ಸ್​ ತಂಡ ಐಪಿಎಲ್​ನ 2024ನೇ (IPL 2024) ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೆಟ್​ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಸತತ ಎರಡು ಸೋಲುಗಳ ಬಳಿಕ ಗೆಲವಿನ ಟ್ರ್ಯಾಕ್​ಗೆ ಮರಳಿದೆ. ಲಕ್ನೊ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿದ ಏಳು ಪಂದ್ಯಗಳಲ್ಲಿ ನಾಲ್ಕನೇ ಗೆಲುವಾಗಿದೆ. ಅತ್ತ ಚೆನ್ನೈ ತಂಡ ಆಡಿರುವ ಏಳರಲ್ಲಿ ಮೂರನೇ ಸೋಲಿಗೆ ಒಳಗಾಯಿತು.

ಇಲ್ಲಿನ ಭಾರತ ರತ್ನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಮಾಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಆರಂಭಿಕ ವಿಕೆಟ್​ಗಳ ನಷ್ಟದ ಹೊರತಾಗಿಯೂ ಕೊನೇ ಹಂತದಲ್ಲಿ ಉತ್ತಮವಾಗಿ ಆಡಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 176 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಲಕ್ನೊ ತಂಡ 19 ಓವರ್​ಗಳಲ್ಲಿ 2ವಿಕೆಟ್ ನಷ್ಟಕ್ಕೆ 180 ರನ್​ ಬಾರಿಸಿ ಗೆಲುವು ಸಾಧಿಸಿತು.

ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಲಕ್ನೊ ತಂಡದ ಪರ ಆರಂಭಿಕರಾದ ಕ್ವಿಂಟನ್ ಡಿ ಕಾಕ್ ಹಾಗೂ ಕೆ. ಎಲ್​ ರಾಹುಲ್ ಉತ್ತಮವಾಗಿ ಆಡಿದರು. ಈ ಜೋಡಿ ಮೊದಲ ವಿಕೆಟ್​ಗೆ 134 ರನ್ ಬಾರಿಸಿತು. ಅಷ್ಟರಲ್ಲಿ ಅವರಿಬ್ಬರೂ ಅರ್ಧ ಶತಕಗಳನ್ನು ದಾಖಲಿಸಿದ್ದರು. ನಿಧಾನಗತಿಯ ಪಿಚ್​ನಲ್ಲಿ ಲಕ್ನೊ ಆಟಗಾರರು ಇನಿಂಗ್ಸ್​ ಕಟ್ಟಿದರು. ಸ್ಟ್ರೈಕ್​ ರೇಟ್ ಕಡಿಮೆ ಇದ್ದ ಹೊರತಾಗಿಯೂ ಗೆಲುವಿನಗೆ ಪೂರಕವಾದ ರನ್​ಗಳನ್ನು ಬಾರಿಸಿದರು. ಕ್ವಿಂಟನ್​ ಚೆನ್ನೈ ಬೌಲರ್​ ಮುಸ್ತಾಫಿಜುರ್ ಎಸೆತಕ್ಕೆ ಔಟಾದರೆ, ರಾಹುಲ್ ಪತಿರಾಣಾಗೆ ವಿಕೆಟ್​ ಒಪ್ಪಿಸಿದರು. ನಿಕೋಲಸ್ ಪೂರನ್ 23 ರನ್ ಸೇರಿಸಿದರು.

ಬ್ಯಾಟಿಂಗ್ ವೈಫಲ್ಯ

ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿತು. ಅಜಿಂಕ್ಯ ರಹಾನೆ 36 ರನ್ ಬಾರಿಸಿದ ಹೊರತಾಗಿಯೂ ರಚಿನ್ ರವಿಂದ್ರ ಶೂನ್ಯಕ್ಕೆ ನಿರ್ಗಮಿಸಿದರು. ನಾಯಕ ಋತುರಾಜ್​ 17 ರನ್​ಗೆ ಸೀಮಿತಗೊಂಡರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ರವಿಂದ್ರ ಜಡೇಜಾ ನಿಧಾನವಾಗಿ ಇನಿಂಗ್ಸ್ ಕಟ್ಟಿದರು. ಅವರು 40 ಎಸೆತ ಬಳಸಿಕೊಂಡು 57 ರನ್ ಬಾರಿಸಿ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು. ಚೆನ್ನೈತಂಡದ ಆಪತ್ಬಾಂಧವ ಶಿವಂ ದುಬೆ 3 ರನ್​ಗೆ ಸೀಮಿತಗೊಂಡರೆ ರಿಜ್ವಿ ಕೇವಲ 1 ರನ್​ಗೆ ಔಟಾದರು. 90 ರನ್​ಗೆ 5 ವಿಕೆಟ್​ ಕಳೆದುಕೊಂಡ ಚೆನ್ನೈಗೆ ಕೊನೆಯಲ್ಲಿ ಮೊಯಿನ್ ಅಲಿ 30 ರನ್​ ಹಾಗೂ ಮಹೇಂದ್ರ ಸಿಂಗ್ ಧೋನಿ 28 ರನ್ ಬಾರಿಸಿದರು.

ಇದನ್ನೂ ಓದಿ: IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

ಲಕ್ನೊ ತಂಡದ ಪರ ಕೃಣಾಲ್​ ಪಾಂಡ್ಯ 2 ವಿಕೆಟ್ ಉರುಳಿಸಿದರೆ ಮೊಹ್ಸಿನ್ ಖಾನ್, ಯಶ್ ಠಾಕೂರ್​, ರವಿ ಬಿಷ್ಣೋಯಿ ಹಾಗೂ ಮಾರ್ಕ್ ಸ್ಟೊಯ್ನಿಸ್​ ತಲಾ ಒಂದು ವಿಕೆಟ್ ಉರುಳಿಸಿದರು.

Continue Reading

ಪ್ರಮುಖ ಸುದ್ದಿ

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Narendra Modi: “ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಎಕ್ಸ್​ ಪೋಸ್ಟ್​​ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿಕೊಂಡಿದ್ದಾರೆ. ಮತದಾನ ಪ್ರಮಾಣದಲ್ಲಿ ಹೆಚ್ಚಳ ಕಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಭಾರತದ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಏಳು ಹಂತಗಳ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಚುನಾವಣಾ ಆಯೋಗ ಮತದಾನ “ಹೆಚ್ಚಿನ ಪ್ರಮಾಣದಲ್ಲಿ ಆಗಿದೆ” ಎಂದು ಬಣ್ಣಿಸಿದೆ. ಮತದಾನವು “ಹೆಚ್ಚಾಗಿ ಶಾಂತಿಯುತವಾಗಿ” ಉಳಿದಿದೆ ಎಂದು ಹೇಳಿದೆ.

2019 ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇಕಡಾ 69.43 ರಷ್ಟು ಮತದಾನ ದಾಖಲಾಗಿತ್ತು. ಕೆಲವು ಕ್ಷೇತ್ರಗಳು ಆಗ ವಿಭಿನ್ನವಾಗಿದ್ದವು ಮತ್ತು ಮತದಾನಕ್ಕೆ ಹೋದ ಒಟ್ಟು ಸ್ಥಾನಗಳ ಸಂಖ್ಯೆ 91 ಆಗಿತ್ತು.

ಇದನ್ನೂ ಓದಿ: lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳು ಮತ್ತು ಜನಾಂಗೀಯ ಬಿಕ್ಕಟ್ಟು ಪೀಡಿತ ಮಣಿಪುರದಿಂದ ಹಿಂಸಾಚಾರ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಸಶಸ್ತ್ರ ಗುಂಪು ಜನರು ಮತ ಚಲಾಯಿಸಲು ತಮ್ಮ ಮನೆಗಳಿಂದ ಹೊರಬರದಂತೆ ತಡೆದಿದ್ದಾರೆ ಎಂದು ಇನ್ನರ್​​ ಮಣಿಪುರದ ಕಾಂಗ್ರೆಸ್ ಅಭ್ಯರ್ಥಿ ಎ ಬಿಮೋಲ್ ಅಕೋಯಿಜಾಮ್ ಆರೋಪಿಸಿದ್ದಾರೆ.

ಮಣಿಪುರದ ಒಳಭಾಗದ ಮತಗಟ್ಟೆಗಳಲ್ಲಿ ಜನರು ವಿದ್ಯುನ್ಮಾನ ಮತದಾನ ಯಂತ್ರಗಳನ್ನು (ಇವಿಎಂ) ಒಡೆದ ಕನಿಷ್ಠ ನಾಲ್ಕು ಘಟನೆಗಳು ವರದಿಯಾಗಿವೆ. ಸಶಸ್ತ್ರ ಗುಂಪಿನ ಪ್ರಾಕ್ಸಿ ಮತದಾನದ ಬಗ್ಗೆ ಜನರು ಅಸಮಾಧಾನಗೊಂಡರು.

ಉತ್ತರಾಖಂಡ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳು ಇಂದು ಒಂದೇ ಹಂತದ ಚುನಾವಣೆಯಲ್ಲಿ ತಮ್ಮ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ.

ಛತ್ತೀಸ್ ಗಢದ ಬಸ್ತಾರ್ ನ 56 ಹಳ್ಳಿಗಳ ಜನರು ತಮ್ಮ ಸ್ವಂತ ಹಳ್ಳಿಗಳಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗ್ರೇಟ್ ನಿಕೋಬಾರ್ ನ ಶೋಂಪೆನ್ ಬುಡಕಟ್ಟು ಜನಾಂಗದವರು ಮೊದಲ ಬಾರಿಗೆ ಮತ ಚಲಾಯಿಸುವ ಮೂಲಕ ಇತಿಹಾಸ ನಿರ್ಮಿಸಿದರು.

ದೇಶದ ಹೆಚ್ಚಿನ ಭಾಗಗಳಲ್ಲಿ ಮತದಾರರು ಬಿಸಿಲಿನ ತಾಪವನ್ನು ಧೈರ್ಯದಿಂದ ಎದುರಿಸಿದರೆ, ಇತರ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಲ್ಲಿ ತಾಳ್ಮೆಯಿಂದ ಕಾಯುತ್ತಿದ್ದರು.

Continue Reading
Advertisement
Dina Bhavishya
ಭವಿಷ್ಯ40 mins ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

ಕರ್ನಾಟಕ6 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ6 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ6 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ6 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ7 hours ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 20247 hours ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ7 hours ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ7 hours ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ40 mins ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ14 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌