GST rate hike | ಪ್ಯಾಕೇಜ್ಡ್‌ ಪನೀರ್‌, ಮೊಸರು, ಮೀನು, ಮಾಂಸ ಇನ್ನು ದುಬಾರಿ - Vistara News

ಪ್ರಮುಖ ಸುದ್ದಿ

GST rate hike | ಪ್ಯಾಕೇಜ್ಡ್‌ ಪನೀರ್‌, ಮೊಸರು, ಮೀನು, ಮಾಂಸ ಇನ್ನು ದುಬಾರಿ

ಪ್ಯಾಕ್‌ಗಳಲ್ಲಿ ಮಾರಾಟ ಮಾಡುವ ಪನೀರ್‌, ಮೊಸರು, ಲಸ್ಸಿ, ಮಜ್ಜಿಗೆ, ಜೇನುತುಪ್ಪ, ಮೀನು ಮತ್ತು ಮಾಂಸ, ಬಾರ್ಲಿ, ಓಟ್ಸ್‌, ಜೋಳದ ಹಿಟ್ಟು ಮೊದಲಾದ ಆಹಾರ ದರ ಶೀಘ್ರ ಏರಿಕೆಯಾಗಲಿದೆ. ಇದು ಜನಸಾಮಾನ್ಯರ ಮೇಲೆ ಜಿಎಸ್‌ಟಿಯ ನೇರ ಪ್ರಹಾರವಾಗಿದೆ.

VISTARANEWS.COM


on

GST Fraud
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‌ಟಿ ಮಂಡಳಿಯ ೪೭ನೇ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಉನ್ನತ ಮಟ್ಟದ ಸಚಿವರುಗಳ ಸಮಿತಿಯು (GoM) ಜಿಎಸ್‌ಟಿಯ ದರಗಳನ್ನು ಸರಳಗೊಳಿಸುವ ಸಂಬಂಧ ನೀಡಿರುವ ಮಧ್ಯಂತರ ವರದಿಯನ್ನು ಅಂಗೀಕರಿಸಲಾಗಿದೆ.

ಇದರ ಪರಿಣಾಮ ದಿನ ನಿತ್ಯ ಬಳಸುವ ಹಲವು ವಸ್ತುಗಳ ದರಗಳು ಏರಿಕೆಯಾಗಲಿವೆ. ಏಕೆಂದರೆ ಸಮಿತಿಯ ಶಿಫಾರಸ್ಸಿನ ಮೇರೆಗೆ ದಿನ ಬಳಕೆಯ ಹಲವು ವಸ್ತುಗಳು ಮತ್ತು ಸೇವೆಗಳ ಮೇಲಿನ ತೆರಿಗೆ ವಿನಾಯಿತಿಯನ್ನು ಹಿಂಪಡೆಯಲಾಗುವುದು. ಇದರ ಪರಿಣಾಮ ಅವುಗಳ ಬೆಲೆ ಏರಿಕೆಯಾಗಲಿದೆ. ಜುಲೈ ೧೮ರಿಂದ ಜಿಎಸ್‌ಟಿ ಪರಿಷ್ಕೃತ ದರಗಳು ಜಾರಿಯಾಗಲಿವೆ.

ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ೨೦೨೨ರ ಜೂನ್‌ ೩೦ರ ಬಳಿಕ ಜಿಎಸ್‌ಟಿ ನಷ್ಟ ಪರಿಹಾರವನ್ನು ವಿಸ್ತರಿಸಲು ಅಥವಾ ಜಿಎಸ್‌ಟಿಯಲ್ಲಿ ತಮ್ಮ ಆದಾಯದ ಪಾಲನ್ನು ಈಗಿನ ೫೦%ಕ್ಕಿಂತ ಹೆಚ್ಚಿಸಲು ಒತ್ತಾಯಿಸುತ್ತಿವೆ. ಹೀಗಾಗಿ ತೆರಿಗೆ ವಿನಾಯಿತಿ ರದ್ದುಪಡಿಸುವ ಈ ನಡೆ ಮಹತ್ವ ಪಡೆದಿದೆ. ಆದರೆ ಇದರ ಪರಿಣಾಮ ಗ್ರಾಹಕರಿಗೆ ಕೆಲ ವಸ್ತುಗಳು ಮತ್ತು ಸೇವೆಗಳ ದರ ಹೆಚ್ಚಲಿದೆ.

೧೫ ವಸ್ತುಗಳಿಗೆ ತೆರಿಗೆ ವಿನಾಯಿತಿ ರದ್ದು

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವರುಗಳ ಉನ್ನತಮಟ್ಟದ ಸಮಿತಿಯ ಶಿಫಾರಸ್ಸಿನ ಅನ್ವಯ ೧೫ ವಸ್ತುಗಳಿಗೆ ಜಿಎಸ್‌ಟಿ ವಿನಾಯಿತಿ ರದ್ದಾಗಲಿದೆ. ಆದರೆ ಅನ್‌ ಪ್ಯಾಕ್ಡ್‌ ಮತ್ತು ಅನ್‌ಲೇಬಲ್ಡ್‌ ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ಮುಂದುವರಿಯಲಿದೆ. ಪ್ಯಾಕೇಟ್‌ನಲ್ಲಿ ಕೊಡುವ ಸಿದ್ಧಪಡಿಸಿದ ಆಹಾರ ವಸ್ತುಗಳು ತುಟ್ಟಿಯಾಗಲಿವೆ. ಪ್ಯಾಕೇಟ್‌ಗಳಲ್ಲಿ ಇರದ ಉತ್ಪನ್ನಗಳಿಗೆ ಜಿಎಸ್‌ಟಿ ವಿನಾಯಿತಿ ಮುಂದುವರಿಯಲಿದೆ.

ಪ್ಯಾಕೇಜ್ಡ್‌ ಆಹಾರ ವಸ್ತು ತುಟ್ಟಿ


ಪ್ಯಾಕ್‌ಗಳಲ್ಲಿ ಸಿದ್ಧಪಡಿಸಿ ಮಾರಾಟ ಮಾಡುವ ಪನೀರ್‌, ಮೊಸರು, ಲಸ್ಸಿ, ಮಜ್ಜಿಗೆ, ಜೇನುತುಪ್ಪ, ಮೀನು ಮತ್ತು ಮಾಂಸ, ಬಾರ್ಲಿ, ಓಟ್ಸ್‌, ಜೋಳದ ಹಿಟ್ಟು, ಬೆಲ್ಲ, ಮಂಡಕ್ಕಿಗೆ ನೀಡಿದ್ದ ತೆರಿಗೆ ವಿನಾಯಿತಿ ರದ್ದಾಗಲಿವೆ. ಹೀಗಾಗಿ ಇವುಗಳ ದರ ಏರಿಕೆ ಸನ್ನಿಹಿತವಾಗಿದೆ. ಪ್ರಿ-ಪ್ಯಾಕೇಜ್ಡ್‌ ಫುಡ್‌ ಇಂಡಸ್ಟ್ರಿಯ ವಹಿವಾಟಿನ ಮೇಲೆ ಇದು ಪರಿಣಾಮ ಬೀರುವ ನಿರೀಕ್ಷೆ ಇದೆ.

ಶಾಪಿಂಗ್‌ ಮಾಲ್‌, ಸೂಪರ್‌ ಮಾರ್ಕೆಟ್‌ಗಳಿಂದ ಸಾಮಾನ್ಯ ಸ್ಟೋರ್‌ಗಳಲ್ಲಿಯೂ ಇಂಥ ಪ್ಯಾಕೇಜ್ಡ್‌ ಆಹಾರ ವಸ್ತುಗಳ ಮಾರಾಟ ಸಾಮಾನ್ಯವಾಗಿದೆ. ಹೀಗಾಗಿ ಗ್ರಾಹಕರ ಜೇಬಿಗೆ ಭಾರವಾಗಲಿದೆ.

ಯಾವ ಸೇವೆಗಳು ದುಬಾರಿಯಾಗಲಿದೆ?

  • ಹೋಟೆಲ್‌ಗಳಲ್ಲಿ ದಿನಕ್ಕೆ ೧,೦೦೦ ರೂ.ಗಿಂತ ಕಡಿಮೆ ಬಾಡಿಗೆಯ ರೂಮ್‌ಗಳಲ್ಲಿ ವಾಸ್ತವ್ಯಕ್ಕೆ ೧೨% ಜಿಎಸ್‌ಟಿ ಅನ್ವಯವಾಗಲಿದೆ. ಈ ಹಿಂದೆ ತೆರಿಗೆ ವಿನಾಯಿತಿ ಇತ್ತು. ಹೀಗಾಗಿ ಹೋಟೆಲ್‌ ಬಾಡಿಗೆ ದರ ಹೆಚ್ಚಳವಾಗಲಿದೆ.
  • ಇ-ತ್ಯಾಜ್ಯಗಳಿಗೆ ಜಿಎಸ್‌ಟಿ ಈಗಿನ ೫%ರಿಂದ ೧೮%ಕ್ಕೆ ಏರಿಕೆಯಾಗಲಿದೆ.
  • ಜಿಎಸ್‌ಟಿ ಕೌನ್ಸಿಲ್‌ ಚೆಕ್‌ ಬುಕ್‌ಗಳಿಗೆ ೧೮% ಜಿಎಸ್‌ಟಿ ವಿಧಿಸಲು ಉದ್ದೇಶಿಸಿದೆ. ಆದ್ದರಿಂದ ಇದರ ದರ ಹೆಚ್ಚಲಿದೆ.
  • ಪೋಸ್ಟ್‌ ಕಾರ್ಡ್‌, ೧೦ ಗ್ರಾಮ್‌ಗಿಂತ ಕೆಳಗಿನ ಎನ್ವಲಪ್‌ ಹೊರತುಪಡಿಸಿ ಉಳಿದ ಅಂಚೆ ಇಲಾಖೆ ಸೇವೆಗೆ ತೆರಿಗೆ ವಿನಾಯಿತಿಯನ್ನು ರದ್ದುಪಡಿಸಲಾಗಿದ್ದು, ಅವುಗಳು ತುಟ್ಟಿಯಾಗಲಿದೆ.
  • ಸಕ್ಕರೆ, ನೇಚ್ಯುರಲ್‌ ಫೈಬರ್‌ ದಾಸ್ತಾನು, ವೇರ್‌ಹೌಸ್‌ (ಗೋದಾಮು) ಸೇವೆಗೆ ತೆರಿಗೆ ವಿನಾಯಿತಿ ರದ್ದಾಗಲಿದೆ.
  • ಎಲ್‌ಇಡಿ ಬಲ್ಬ್‌, ಮುದ್ರಣಕ್ಕೆ ಬಳಸುವ ಶಾಯಿ, ಚೂರಿ, ಬ್ಲೇಡ್‌, ವಿದ್ಯುತ್‌ ಚಾಲಿತ ಪಂಪ್‌, ಡೇರಿ ಯಂತ್ರೋಪಕರಣಗಳ ಮೇಲಿನ ಜಿಎಸ್‌ಟಿಯನ್ನು ೧೨%ರಿಂದ ೧೮%ಕ್ಕೆ ಏರಿಸಲಾಗುವುದು.
  • ಧಾನ್ಯಗಳ ಮಿಲ್‌ಗಳಲ್ಲಿ ಬಳಸುವ ಯಂತ್ರೋಪಕರಣಗಳ ಮೇಲಿನ ಜಿಎಸ್‌ಟಿ ೫%ರಿಂದ ೧೮%ಕ್ಕೆ ಏರಿಕೆಯಾಗಲಿದೆ.
  • ಸೋಲಾರ್‌ ವಾಟರ್‌ ಹೀಟರ್‌, ಸಂಸ್ಕರಿತ ಲೆದರ್‌ ಮೇಲೆ ಜಿಎಸ್‌ಟಿ ೧೨%ಕ್ಕೆ ಏರಿಕೆಯಾಗಲಿದೆ.
  • ಪೆಟ್ರೋಲಿಯಂ ಮೂಲದ ನಿರ್ದಿಷ್ಟ ಉತ್ಪನ್ನಗಳ ಮೇಲೆ ಜಿಎಸ್‌ಟಿ ೫%ಯಿಂದ ೧೮%ಕ್ಕೆ ವೃದ್ಧಿಸಲಿದೆ.
  • ಈಶಾನ್ಯ ರಾಜ್ಯಗಳಿಗೆ ಬಿಸಿನೆಸ್‌ ಕ್ಲಾಸ್‌ ವಿಮಾನಯಾನಕ್ಕೆ ತೆರಿಗೆ ವಿನಾಯಿತಿ ರದ್ದಾಗಲಿದೆ.
  • ಕಸಾಯಿಖಾನೆ ಸೇವೆಗೆ ನೀಡಿದ್ದ ತೆರಿಗೆ ವಿನಾಯಿತಿ ರದ್ದಾಗಲಿದೆ.
  • ಪ್ಯಾಕ್‌ಗಳಲ್ಲಿ ಸಿದ್ಧಪಡಿಸಿ ಮಾರಾಟ ಮಾಡುವ ಪನೀರ್‌, ಮೊಸರು, ಲಸ್ಸಿ, ಮಜ್ಜಿಗೆ, ಜೇನುತುಪ್ಪ, ಮೀನು ಮತ್ತು ಮಾಂಸ, ಬಾರ್ಲಿ, ಓಟ್ಸ್‌, ಜೋಳದ ಹಿಟ್ಟು, ಬೆಲ್ಲ, ಮಂಡಕ್ಕಿಗೆ ನೀಡಿದ್ದ ತೆರಿಗೆ ವಿನಾಯಿತಿ ರದ್ದಾಗಲಿವೆ. ಹೀಗಾಗಿ ಇವುಗಳ ದರ ಏರಿಕೆ ಸನ್ನಿಹಿತವಾಗಿದೆ. ಪ್ರಿ-ಪ್ಯಾಕೇಜ್ಡ್‌ ಫುಡ್‌ ಇಂಡಸ್ಟ್ರಿಯ ವಹಿವಾಟಿನ ಮೇಲೆ ಇದು ಪರಿಣಾಮ ಬೀರುವ ನಿರೀಕ್ಷೆ ಇದೆ.
  • ಆಸ್ಪತ್ರೆಗಳಲ್ಲಿ ಐಸಿಯು ಹೊರತುಪಡಿಸಿ ಉಳಿದ ಕೊಠಡಿಗಳಿಗೆ ದಿನಕ್ಕೆ ೫,೦೦೦ ರೂ. ಬಾಡಿಗೆಯ ಮೇಲೆ ೫% ಜಿಎಸ್‌ಟಿ

ಯಾವ ಸೇವೆಗಳ ದರ ಇಳಿಕೆ ?

  • ರೋಪ್‌ವೇ ಪ್ರಯಾಣ ದರ ಕಡಿಮೆಯಾಗಲಿದೆ. ರೋಪ್‌ವೇಯ ಪ್ರಯಾಣ ದರ ಮತ್ತು ಸರಕು ಸಾಗಾಣೆ ದರದ ಜಿಎಸ್‌ಟಿಯನ್ನು ಶೇ.೧೮ರಿಂದ ಶೇ.೫ಕ್ಕೆ ಇಳಿಸಲಾಗಿದೆ.
  • ರಸ್ತೆ ಮೂಲಕ ಸರಕು ಸಾಗಣೆ ದರವೂ ಕಡಿಮೆಯಾಗಲಿದೆ. ಇದಕ್ಕೆ ವಿಧಿಸಲಾಗುತ್ತಿದ್ದ ಜಿಎಸ್‌ಟಿಯನ್ನು ಶೇ. ೧೮ರಿಂದ ಶೇ.೧೨ ಕ್ಕೆ ಇಳಿಸಲಾಗಿದೆ.
  • ಆರ್ಥೋಪೆಡಿಕ್‌ ಉಪಕರಣಗಳ ದರ ಇಳಿಕೆಯಾಗಲಿದೆ. ಸ್ಪ್ಲಿಂಟ್‌ಗಳು ಮತ್ತು ಮೂಳೆ ಮುರಿದಾಗ ಬಳಸುವ ಸಲಕರಣೆಗಳು, ದೇಹದ ಕೃತಕ ಭಾಗಗಳು, ದೇಹಕ್ಕೆ ಅಳವಡಿಸಿದ ಸಲಕರೆಣೆಗಳು ಮತ್ತು ದೇಹಕ್ಕೆ ಸಂಬಂಧಿಸಿದಂತೆ ಹೊರಗೆ ಬಳಸುವ ಸಲಕರಣೆಗಳ ಜಿಎಸ್‌ಟಿಯನ್ನು ಶೇ. ೧೨ ರಿಂದ ಶೇ.೫ಕ್ಕೆ ಇಳಿಸಲಾಗಿದೆ.
  • ರಕ್ಷಣಾ ಪಡೆಗಳು ಬಳಸುವ ಸಲಕರಣೆಗಳ ಜಿಎಸ್‌ಟಿಯನ್ನು ಇಳಿಸಲಾಗಿದ್ದು, ಇವುಗಳ ದರ ಕಡಿಮೆಯಾಗಲಿದೆ.

ಇದನ್ನೂ ಓದಿ: GST rate hike| ಆನ್‌ಲೈನ್‌ ಗೇಮಿಂಗ್‌, ಕ್ಯಾಸಿನೊ, ಕುದುರೆ ರೇಸ್‌ಗೆ 28% ತೆರಿಗೆ ಸದ್ಯಕ್ಕಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

Dust Storm: ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

VISTARANEWS.COM


on

Dust Storm
Koo

ಮುಂಬೈ: ಇಲ್ಲಿನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 59 ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್​​ಡಿಆರ್​) ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಧೂಳು ಗಾಳಿಗೆ ಅನೇಕ ಕಡೆ ಅನಾಹುತಗಳು ಸಂಭವಿಸಿವೆ.

ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾರತೀಯ ಹವಾಮಾನ ಇಲಾಖೆ (IMD) ಈ ಹಿಂದೆ ಮೇ 13 ರಂದು ನಗರದ ಕೆಲವು ಭಾಗಗಳಿಗೆ ಯೆಲ್ಲೊ ಅಲರ್ಟ್​ (Yellow Alret) ಎಚ್ಚರಿಕೆ ನೀಡಿತ್ತು. ವಿಶೇಷವಾಗಿ ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಶುಷ್ಕ, ವೇಗದ ಗಾಳಿಯ ಎಚ್ಚರಿಕೆ ನೀಡಿತ್ತು.

2024 ರ ಮೇ 16 ರಿಂದ ವಾಯುವ್ಯ ಭಾರತದಲ್ಲಿ ಹೊಸ ಶಾಖದ ಅಲೆ ಪ್ರಾರಂಭವಾಗುವ ಸಾಧ್ಯತೆಯಿದೆ. 2. 2024 ರ ಮೇ 17 ರವರೆಗೆ ದಕ್ಷಿಣ ಪರ್ಯಾಯ ದ್ವೀಪ ಭಾರತದಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಕ್ಸ್ ನಲ್ಲಿ ಪೋಸ್ಟ್​ನಲ್ಲಿ ತಿಳಿಸಿತ್ತು.

ಇದನ್ನೂ ಓದಿ: Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

ಹೋರ್ಡಿಂಗ್ ಬಿದ್ದ ಕಾರಣ ಪೂಜಾ ಜಂಕ್ಷನ್ (ವಡಾಲಾ) ನಾರ್ತ್ ಬೌಂಡ್ ಮತ್ತು ಫ್ರೀವೇ ಟನಲ್ ಟ್ರಾಂಬೆ ಸೌತ್ ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಮುಂಬೈ ಸಂಚಾರ ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಮುಂಬೈ ಮೆಟ್ರೋದ ಸಂಚಾರಕ್ಕೂ ಸಮಸ್ಯೆಯಾಗಿದೆ. ಭಾರೀ ಗಾಳಿಯಿಂದಾಗಿ, ಏರ್ಪೋರ್ಟ್ ರಸ್ತೆ ಮೆಟ್ರೋ ನಿಲ್ದಾಣದ ಬಳಿಯ ಒಹೆಚ್ಇಯಲ್ಲಿ ಬಟ್ಟೆ ಸಿಲುಕಿಕೊಂಡಿತು/ ಇದರ ಪರಿಣಾಮವಾಗಿ ಮೆಟ್ರೋ ಸೇವೆಗೆ ಅಡ್ಡಿಯಾಯಿತು. ರೈಲುಗಳು ಈಗ ನಿಗದಿತ ಸಮಯಕ್ಕೆ ತಲುಪಲಿಲ್ಲ ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

IPL 2024 : ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2024 (IPL 2024) ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡ ದೆಹಲಿಗೆ ಪ್ರವಾಸ ಮಾಡಿದೆ. ಆದರೆ ಈ ತಂಡದ ಜತೆ ಕೆಎಲ್ ರಾಹುಲ್ (KL Rahul) ಇರಲಿಲ್ಲ. ಈ ಅನುಪಸ್ಥಿತಿ ಅನೇಕರನ್ನು ಆಶ್ಚರ್ಯಗೊಳಿಸಿದೆ. ಅವರು ನೇರವಾಗಿ ಪಂದ್ಯಕ್ಕೆ ತಂಡದ ಜತೆ ಸೇರಬಹುದು ಎಂಬ ಊಹಾಪೋಹಗಳಿವೆಯಾದರೂ, ನಾಯಕ ಸಾಮಾನ್ಯ ರೀತಿಯಲ್ಲಿ ಪ್ರಯಾಣಿಸಲಿಲ್ಲ ಎಂಬ ಅಂಶವು ಹುಬ್ಬೇರುವಂತೆ ಮಾಡಿದೆ. ಮಾಲೀಕ ಸಂಜೀವ್​ ಗೋಯೆಂಕಾ ಅವರ ಗಲಾಟೆಯಿಂದ ಬೇಸತ್ತಿರುವ ರಾಹುಲ್ ಸ್ವಂತ ಖರ್ಚಿನಲ್ಲಿಯೇ ಪ್ರಯಾಣ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಇದು ಅವರ ನಡುವಿನ ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು. ಇನ್ನೂ ಅನೇಕರು ತಂಡದಲ್ಲಿ ಅವರ ನಾಯಕತ್ವದ ಪಾತ್ರದ ಬಗ್ಗೆ ಚರ್ಚೆಗಳನ್ನು ನಡೆಸಿದ್ದರು. ಇದಕ್ಕೆಲ್ಲ ಕಾರಣ ಲಕ್ನೊ ನೀಡಿದ್ದ 166 ರನ್​ಗಳನ್ನು ಎಸ್​ಆರ್​ಎಚ್​ ತಂಡ 9.4 ಓವರ್​ಗಳಲ್ಲಿ ಬೆನ್ನಟ್ಟಿರುವುದು.

ಸ್ಪರ್ಧೆಯಲ್ಲಿ ಜೀವಂತವಾಗಿರಲು ಲಕ್ನೊ ತಂಡಕ್ಕೆ ಗೆಲುವು ಬೇಕಾಗಿದೆ. ಅವರು ಪ್ರಸ್ತುತ 12 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ ಮತ್ತು ಪ್ಲೇಆಫ್ಗೆ ಅವರ ಹಾದಿ ಸುಲಭವಲ್ಲ. ಈ ನಿರ್ಣಾಯಕ ಮುಖಾಮುಖಿಗೆ ಸಜ್ಜಾಗುತ್ತಿರುವಾಗ, ಎಲ್ಲರ ಕಣ್ಣುಗಳು ರಾಹುಲ್ ಮತ್ತು ಎಲ್ಎಸ್​ಜಿ ತಂಡದ ಮೇಲೆ ನೆಟ್ಟಿವೆ.

ರಾಹುಲ್ ಅವರ ಫಾರ್ಮ್ ಕೂಡ ಪರಿಶೀಲನೆಗೆ ಒಳಗಾಗಿದೆ. ವಿಶೇಷವಾಗಿ ಟಿ 20 ವಿಶ್ವಕಪ್ ತಂಡದಿಂದ ಹೊರಗುಳಿದ ನಂತರ ಅವರ ಆಟದ ವೈಖರಿ ಬಗ್ಗೆ ಪ್ರಶ್ನೆಗಳೆದ್ದಿವೆ. ಐಪಿಎಲ್ 2024 ಋತುವಿನಾದ್ಯಂತ ಅವರ ಬ್ಯಾಟಿಂಗ್ ಪರಾಕ್ರಮವು ಶ್ಲಾಘನೀಯ. ವಿಕೆಟ್ ಕೀಪರ್-ಬ್ಯಾಟರ್​ 38.33 ಸರಾಸರಿಯಲ್ಲಿ 460 ರನ್ ಗಳಿಸಿದ್ದಾರೆ. 136.09 ಉತ್ತಮ ಉತ್ತಮ ರನ್​​ ರೇಟ್ ಹೊಂದಿದ್ದಾರೆ. ಅವರು ಶತಕ ಕಳೆದುಕೊಂಡಿದ್ದರೂ ರಾಹುಲ್ ಈ ಋತುವಿನಲ್ಲಿ ಮೂರು ಅರ್ಧಶತಕಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

ಎಲ್ಎಸ್​ಜಿ ಫ್ರಾಂಚೈಸಿಯ ಬಗ್ಗೆ ಮಾತನಾಡುವುದಾದರೆ ಅವರು 2022 ರಿಂದ ಐಪಿಎಲ್ ಸರ್ಕ್ಯೂಟ್​​ಗೆ ಗಮನಾರ್ಹ ಸೇರ್ಪಡೆಯಾಗಿದ್ದಾರೆ ಮತ್ತು ಅವರು ಇಲ್ಲಿಯವರೆಗೆ ಆಡಿದ ಎರಡೂ ಋತುಗಳಲ್ಲಿ ಪ್ಲೇಆಫ್ಗೆ ಅರ್ಹತೆ ಪಡೆದಿದ್ದಾರೆ. ರಾಹುಲ್, ಕ್ವಿಂಟನ್ ಡಿ ಕಾಕ್, ಮಾರ್ಕ್ ವುಡ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರ ಗಮನಾರ್ಹ ಸಹಿಗಳಲ್ಲಿ ಸೇರಿದ್ದಾರೆ. ನಂತರ ರಾಹುಲ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಯಿತು, ಆಂಡಿ ಫ್ಲವರ್ ಅವರನ್ನು ಮುಖ್ಯ ಕೋಚ್ ಆಗಿ ಮತ್ತು ಗೌತಮ್ ಗಂಭೀರ್ ಅವರನ್ನು ತಂಡದ ಮಾರ್ಗದರ್ಶಕರಾಗಿ ನೇಮಿಸಲಾಯಿತು. 2022 ಮತ್ತು 2023 ರ ಋತುಗಳಲ್ಲಿ ಗುಂಪು ಹಂತದಲ್ಲಿ ಮೂರನೇ ಸ್ಥಾನದಲ್ಲಿದ್ದರೂ, ಅವರು ಪ್ಲೇಆಫ್ನಲ್ಲಿ ಹೊರಗುಳಿದರು.

Continue Reading

ದೇಶ

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

Chandrayaan 4: ಚಂದ್ರಯಾನ 3ರ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ. ಚಂದ್ರಯಾನ 3 ಮಿಷನ್‌ನ ಯಶಸ್ಸು ಇಸ್ರೋ ಆತ್ಮವಿಶ್ವಾಸವನ್ನು ನೂರ್ಮಡಿಗೊಳಿಸುವ ಜತೆಗೆ ಜಾಗತಿಕ ಖ್ಯಾತಿಯನ್ನೂ ತಂದುಕೊಟ್ಟಿದೆ. ಇದರ ಬೆನ್ನಲ್ಲೇ, ಚಂದ್ರಯಾನ 4 ಕೈಗೊಳ್ಳಲು ಇಸ್ರೋ ಸಜ್ಜಾಗಿದೆ. ನೌಕೆ ಇಳಿಯುವ ಜಾಗವನ್ನೂ ಈಗ ಘೋಷಣೆ ಮಾಡಿದೆ.

VISTARANEWS.COM


on

Chandrayaan 4
Koo

ಬೆಂಗಳೂರು: ಚಂದ್ರಯಾನ 3 ಮಿಷನ್‌ (Chandrayaan 3) ಮೂಲಕ ಇತಿಹಾಸ ಸೃಷ್ಟಿಸಿರುವ ಇಸ್ರೋ (ISRO) ಈಗ ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಲು ಮುಂದಾಗಿದೆ. ಚಂದ್ರಯಾನ 3 ಮಿಷನ್‌ ಕೈಗೊಂಡು ಜಗತ್ತಿನಲ್ಲೇ ದಕ್ಷಿಣ ಧ್ರುವಕ್ಕೆ ಬಾಹ್ಯಾಕಾಶ ನೌಕೆ ಕಳುಹಿಸಿದ ಮೊದಲ ದೇಶ ಎಂಬ ಖ್ಯಾತಿಗೆ ಭಾಜನವಾದ ಬಳಿಕ ಇಸ್ರೋ ಈಗ ಚಂದ್ರಯಾನ 4 ಮಿಷನ್‌ಗೆ ಸಜ್ಜಾಗಿದೆ. ಅಷ್ಟೇ ಅಲ್ಲ, ಚಂದ್ರಯಾನ 4 ಮಿಷನ್‌ನ (Chandrayaan 4) ಬಾಹ್ಯಾಕಾಶ ನೌಕೆಯು ಚಂದ್ರನ ಅಂಗಳದಲ್ಲಿ ಎಲ್ಲಿ ಇಳಿಯಬೇಕು ಎಂಬುದನ್ನೂ ಇಸ್ರೋ ಘೋಷಿಸಿದೆ.

ಚಂದ್ರಯಾನ 4 ಮಿಷನ್‌ ಕುರಿತು ಸ್ಪೇಸ್‌ ಅಪ್ಲಿಕೇಷನ್ಸ್‌ ಸೆಂಟರ್‌ನ (SAC) ನಿರ್ದೇಶಕ ನೀಲೇಶ್‌ ದೇಸಾಯಿ (Nilesh Desai) ಅವರು ಮಾಹಿತಿ ನೀಡಿದ್ದಾರೆ. “ಚಂದ್ರಯಾನ 4 ಮಿಷನ್‌ನ ಬಾಹ್ಯಾಕಾಶ ನೌಕೆಯು ಚಂದ್ರಯಾನ 3ರ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಜ್ಞಾನ್‌ ರೋವರ್‌ ಸಾಫ್ಟ್‌ ಲ್ಯಾಂಡ್‌ ಆದ, ಶಿವಶಕ್ತಿ ಪಾಯಿಂಟ್‌ ಎಂದೇ ಖ್ಯಾತಿಯಾದ ಪ್ರದೇಶದ ಬಳಿಯೇ ಲ್ಯಾಂಡ್‌ ಆಗಲಿದೆ. ಚಂದ್ರಯಾನ 4ರಲ್ಲಿ ಚಂದ್ರನ ಅಂಗಳದಿಂದ ಕಲ್ಲು ಹಾಗೂ ಮಣ್ಣನ್ನು ಭಾರತಕ್ಕೆ ತರುವುದು ಪ್ರಮುಖ ಉದ್ದೇಶವಾಗಿದೆ” ಎಂದು ತಿಳಿಸಿದ್ದಾರೆ.

“ಚಂದ್ರನ ಅಂಗಳದಲ್ಲಿ ವೈಜ್ಞಾನಿಕವಾಗಿ ಸಂಶೋಧನೆ ಕೈಗೊಳ್ಳಲು ಸಾಧ್ಯವಿರುವ ಪ್ರದೇಶಗಳಿಂದ ಕಲ್ಲು ಹಾಗೂ ಮಣ್ಣಿನ ಮಾದರಿಗಳನ್ನು ತಂದು, ಅದರ ಕುರಿತು ಅಧ್ಯಯನ ಮಾಡಲಾಗುತ್ತದೆ. ಇದು ಚಂದ್ರನ ಅಂಗಳದ ಕಾಲಮಾನದ ಪ್ರಕಾರ ಒಂದು ದಿನ ಆದರೆ, ಭೂಮಿಯ 14 ದಿನ ಕಾರ್ಯಾಚರಣೆ ಕೈಗೊಳ್ಳಲಿದೆ. ಹಲವು ಸವಾಲುಗಳ ಮಧ್ಯೆ ಯಶಸ್ಸು ಸಾಧಿಸಲು ಇಸ್ರೋ ಹೊರಟಿದೆ” ಎಂದು ಮಾಹಿತಿ ನೀಡಿದರು.

2023ರ ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ LVM3 ರಾಕೆಟ್‌ನ ಮೂಲಕ ಉಡಾವಣೆಗೊಂಡ ಚಂದ್ರಯಾನ-3, ಒಂದು ತಿಂಗಳ ಕಾಲ ಬಾಹ್ಯಾಕಾಶ ಹಾರಾಟದ ನಂತರ ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯಿತು. ಆ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್‌ ಆದ ಜಗತ್ತಿನ ಮೊದಲ ಮಿಷನ್‌ ಎಂಬ ಖ್ಯಾತಿಗೆ ಭಾಜನವಾಯಿತು. ಇದರೊಂದಿಗೆ ಇಸ್ರೋ ಮೈಲುಗಲ್ಲು ಸ್ಥಾಪಿಸಿತು.

ಅಷ್ಟೇ ಅಲ್ಲ, ಚಂದ್ರಯಾನ 3 ಮಿಷನ್‌ ಲ್ಯಾಂಡ್‌ ಆದ ಪ್ರದೇಶವನ್ನು ಶಿವಶಕ್ತಿ ಎಂಬುದಾಗಿ ಕರೆಯಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟವು (International Astronomical Union) ಮಾರ್ಚ್‌ 19ರಂದು ಅನುಮತಿ ನೀಡಿದೆ. ಇದರೊಂದಿಗೆ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ. ಚಂದ್ರಯಾನ 3 ಮಿಷನ್‌ನ ಯಶಸ್ಸು ಇಸ್ರೋ ಆತ್ಮವಿಶ್ವಾಸವನ್ನು ನೂರ್ಮಡಿಗೊಳಿಸುವ ಜತೆಗೆ ಜಾಗತಿಕ ಖ್ಯಾತಿಯನ್ನೂ ತಂದುಕೊಟ್ಟಿದೆ. ಚಂದ್ರಯಾನ 4 ಮಿಷನ್‌ ಕೈಗೊಳ್ಳಲು ಇಷ್ಟೊಂದು ಆತ್ಮವಿಶ್ವಾಸ, ಉತ್ಸಾಹ ಬರಲು ಚಂದ್ರಯಾನ 3 ಮಿಷನ್‌ನ ಯಶಸ್ಸೇ ಕಾರಣವಾಗಿದೆ.

ಇದನ್ನೂ ಓದಿ: Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Continue Reading

ಕ್ರೀಡೆ

Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

Rohit Sharma : ಬಿಸಿಸಿಐನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಇತ್ತೀಚೆಗೆ ಅಪ್ಲೋಡ್ ಮಾಡಿದ ವೀಡಿಯೊದಲ್ಲಿ ಭಾರತ ತಂಡದ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಭಾರತದ ಹೊಸ ಬಣ್ಣಗಳನ್ನು ಮೊದಲ ಬಾರಿಗೆ ಪರಿಶೀಲಿಸುತ್ತಿರುವುದನ್ನು ಕಾಣಬಹುದು. ವಿಶೇಷ ಕಾರ್ಯಕ್ರಮದಲ್ಲಿ, ಜನಪ್ರಿಯ ಜರ್ಮನ್ ಕ್ರೀಡಾ ಉಡುಪು ತಯಾರಕ ಅಡಿಡಾಸ್ ತರಬೇತಿ ಕಿಟ್, ಕೋಚಿಂಗ್ ಸಿಬ್ಬಂದಿ ಕಿಟ್ ಮತ್ತು ಮುಖ್ಯ ಕಿಟ್ ಸೇರಿದಂತೆ ಎಲ್ಲರ ಕಿಟ್​​ಗಳನ್ನು ಪ್ರದರ್ಶಿಸಿತು.

VISTARANEWS.COM


on

Rohit Sharma
Koo

ಅಹ್ಮದಾಬಾದ್​: 2024 ರ ಟಿ 20 ವಿಶ್ವಕಪ್​​ಗಾಗಿ ಭಾರತ ತಂಡಕ್ಕಾಗಿ ರೂಪಿಸಿರುವ ಹೊಸ ಕಿಟ್ ಬಿಡುಗಡೆ ಕಾರ್ಯಕ್ರಮ ಅಹಮಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟ್ ಕೌನ್ಸಿಲ್ (BCCI) ಕಾರ್ಯದರ್ಶಿ ಜಯ್ ಶಾ ಮತ್ತು ಭಾರತ ನಾಯಕ ರೋಹಿತ್ ಶರ್ಮಾ (Rohit Sharma) ಭಾಗವಹಿಸಿದ್ದರು. ಬಿಸಿಸಿಐನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಇತ್ತೀಚೆಗೆ ಅಪ್ಲೋಡ್ ಮಾಡಿದ ವೀಡಿಯೊದಲ್ಲಿ ಭಾರತ ತಂಡದ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಭಾರತದ ಹೊಸ ಬಣ್ಣಗಳನ್ನು ಮೊದಲ ಬಾರಿಗೆ ಪರಿಶೀಲಿಸುತ್ತಿರುವುದನ್ನು ಕಾಣಬಹುದು. ವಿಶೇಷ ಕಾರ್ಯಕ್ರಮದಲ್ಲಿ, ಜನಪ್ರಿಯ ಜರ್ಮನ್ ಕ್ರೀಡಾ ಉಡುಪು ತಯಾರಕ ಅಡಿಡಾಸ್ ತರಬೇತಿ ಕಿಟ್, ಕೋಚಿಂಗ್ ಸಿಬ್ಬಂದಿ ಕಿಟ್ ಮತ್ತು ಮುಖ್ಯ ಕಿಟ್ ಸೇರಿದಂತೆ ಎಲ್ಲರ ಕಿಟ್​​ಗಳನ್ನು ಪ್ರದರ್ಶಿಸಿತು.

ಅಡಿಡಾಸ್ ಈ ಹಿಂದೆ ಸಾಮಾಜಿಕ ಮಾಧ್ಯಮ ಹ್ಯಾಂಡಲ್​ಗಳಲ್ಲಿ ವೀಡಿಯೊ ಮೂಲಕ ಭಾರತದ ಹೊಸ ಕಿಟ್ ಪ್ರಕಟಿಸಿತ್ತು. ಇದರಲ್ಲಿ ಭಾರತೀಯ ಕ್ರಿಕೆಟ್ ತಾರೆಗಳಾದ ರೋಹಿತ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಅವರು ಧರ್ಮಶಾಲಾದ ಎಚ್ಪಿಸಿಎ ಕ್ರೀಡಾಂಗಣದಲ್ಲಿ ಹೊಸ ಕಿಟ್ ಅನ್ನು ಸ್ವಾಗತಿಸಿರುವುದನ್ನು ಚಿತ್ರಿಸಲಾಗಿತ್ತು. ವೀಡಿಯೊದಲ್ಲಿ ನೋಡಿದಂತೆ, ಹೊಸ ಕಿಟ್ ದೇಹದಲ್ಲಿ ನೀಲಿ ಮತ್ತು ತೋಳುಗಳಿಗೆ ತಿಳಿ ಕಿತ್ತಳೆ ಅದ್ಭುತ ಮಿಶ್ರಣ ಹೊಂದಿದೆ. ಈ ಕಿಟ್ ಸೊಂಟದ ಬದಿಯಲ್ಲಿ ಸಮಾನಾಂತರವಾಗಿ ಚಲಿಸುವ ಎರಡು ಕಿತ್ತಳೆ ಪಟ್ಟೆಗಳನ್ನು ಒಳಗೊಂಡಿದೆ, ಅಡಿಡಾಸ್​​ನ ಮೂರು ಟ್ರೇಡ್​​ಮಾರ್ಕ್​ ಬಿಳಿ ಪಟ್ಟೆಗಳನ್ನು ಹೊಂದಿದೆ. ಮುಖ್ಯ ಕಿಟ್ ಅದರ ಕಾಲರ್ ಮೇಲೆ ತ್ರಿವರ್ಣ ಪಟ್ಟೆಗಳನ್ನೂ ಒಳಗೊಂಡಿದೆ.

ಇದನ್ನೂ ಓದಿ: MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

ಮೇ 23, 2023 ರಂದು ಬಿಸಿಸಿಐ ಅಡಿಡಾಸ್​ನೊಂದಿಗೆ ಬಹು ವರ್ಷಗಳ ಒಪ್ಪಂದವನ್ನು ಬರೆದಾಗಿನಿಂದ ಭಾರತವು ಅಡಿಡಾಸ್ನ ವಿನ್ಯಾಸಗಳನ್ನು ಧರಿಸುತ್ತಿದೆ. ಅಡಿಡಾಸ್ ಬಿಸಿಸಿಐಗೆ ಬರುವ ಮೊದಲು, ಎಂಪಿಎಲ್​​ ಬಟ್ಟೆ ಬ್ರಾಂಡ್ ಕಿಲ್ಲರ್ ಜೀನ್ಸ್ ಭಾರತದ ಕಿಟ್ ಪ್ರಾಯೋಜಕರಾಗಿದ್ದರು. ಈ ಘೋಷಣೆಯ ನಂತರ, ಅನೇಕ ಭಾರತೀಯ ಕ್ರಿಕೆಟ್ ತಾರೆಯರು ಹೊಸ ಬಣ್ಣಗಳಲ್ಲಿ ರೂಪದರ್ಶಿಗಳಾಗಿ ಕಾಣಿಸಿಕೊಂಡಿದ್ದಾರೆ.

ಜೂನ್ 5 ರಿಂದ ಪ್ರಾರಂಭವಾಗುವ ವಿಶ್ವಕಪ್ ಅಭಿಯಾನಕ್ಕಾಗಿ ಈಗಾಗಲೇ ತಮ್ಮ ತಂಡವನ್ನು ಘೋಷಿಸಿರುವ ಭಾರತ, ಇತ್ತೀಚಿನ ಟಿ 20 ಐ ಪಂದ್ಯಗಳಲ್ಲಿ ಅದ್ಭುತ ಫಾರ್ಮ್ ನಿಂದಾಗಿ ಸ್ಪರ್ಧೆಯನ್ನು ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ.

ಟಿ20 ವಿಶ್ವಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್. ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Continue Reading
Advertisement
Dust Storm
ಪ್ರಮುಖ ಸುದ್ದಿ4 mins ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು7 mins ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

35 crore crop damage insurance deposit for farmers of Yallapur constituency says MLA Shivaram Hebbar
ಉತ್ತರ ಕನ್ನಡ12 mins ago

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Bilhara village farmer grew bumper mango on barren land
ಕರ್ನಾಟಕ15 mins ago

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Metro Penalty
ಬೆಂಗಳೂರು19 mins ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

IPL 2024
ಪ್ರಮುಖ ಸುದ್ದಿ20 mins ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ24 mins ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

CBSE Class 10 Results
ಮಂಡ್ಯ26 mins ago

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

Climate Plan
ಕರ್ನಾಟಕ37 mins ago

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

Namma Metro green line
ಬೆಂಗಳೂರು52 mins ago

Namma Metro : ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ಮೆಟ್ರೋ ಕಾಮಗಾರಿ ಪೂರ್ಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ1 hour ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ2 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ2 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ3 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ3 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ9 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ14 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ15 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌