Interest rate : ಬ್ಯಾಂಕ್‌ಗಳಲ್ಲಿ ಎಂಸಿಎಲ್‌ಆರ್‌ ಆಧರಿತ ಸಾಲದ ಬಡ್ಡಿ ದರ 2023-24ರಲ್ಲಿ ಏರಿಕೆ ಸಂಭವ - Vistara News

ಪ್ರಮುಖ ಸುದ್ದಿ

Interest rate : ಬ್ಯಾಂಕ್‌ಗಳಲ್ಲಿ ಎಂಸಿಎಲ್‌ಆರ್‌ ಆಧರಿತ ಸಾಲದ ಬಡ್ಡಿ ದರ 2023-24ರಲ್ಲಿ ಏರಿಕೆ ಸಂಭವ

ಬ್ಯಾಂಕ್‌ಗಳಲ್ಲಿ ಎಂಸಿಎಲ್‌ಆರ್‌ ಆಧಾರಿತ ಸಾಲದ ಬಡ್ಡಿ ದರ 2023-24ರಲ್ಲಿ ಏರಿಕೆಯಾದರೆ, ಅದನ್ನು ಅವಲಂಬಿಸಿದ (Interest rate ) ಗೃಹ ಸಾಲ, ವಾಹನ ಸಾಲ, ಕಾರ್ಪೊರೇಟ್‌ ಸಾಲದ ಬಡ್ಡಿ ದರಗಳೂ ಏರಿಕೆಯಾಗಬಹುದು.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಮುಂದಿನ 2023-24ರ ಸಾಲಿನಲ್ಲಿ ಎಂಸಿಎಲ್‌ಆರ್‌ (Marginal cost of funds based lending rate) ಆಧರಿತ ಸಾಲದ ಬಡ್ಡಿ ದರಗಳಲ್ಲಿ ಏರಿಕೆ ನಿರೀಕ್ಷಿಸಲಾಗಿದೆ. ಇಂಡಿಯಾ ರೇಟಿಂಗ್ಸ್‌ ಏಜೆನ್ಸಿಯ ವರದಿಯ ಪ್ರಕಾರ ಎಂಸಿಎಲ್‌ಆರ್‌ ದರದಲ್ಲಿ 1-1.5% ತನಕ ಹೆಚ್ಚಳವಾಗುವ ಸಾಧ್ಯತೆ ಇದೆ. (Interest rate) ಇದರ ಪರಿಣಾಮ ಎಂಸಿಎಲ್‌ಆರ್‌ ಆಧಾರಿತ ಗೃಹ ಸಾಲ, ವಾಹನ ಸಾಲ, ಕಾರ್ಪೊರೇಟ್‌ ಸಾಲಗಳ ಬಡ್ಡಿ ದರಗಳು ವೃದ್ಧಿಸುವ ಸಾಧ್ಯತೆ ಇದೆ.

ಈ ಹಿಂದೆ ರಿವರ್ಸ್‌ ರೆಪೊ ದರದ ಪರಿಣಾಮ ಬ್ಯಾಂಕಿಂಗ್‌ ವಲಯ 5 ಲಕ್ಷ ಕೋಟಿ ರೂ. ಗಳಿಸಿತ್ತು. ಇದರಿಂದ ಸಾಲ ಮತ್ತು ಠೇವಣಿಯ ಬಡ್ಡಿ ದರದ ವ್ಯತ್ಯಾಸವನ್ನು ಭರಿಸಲು ಸಹಕಾರಿಯಾಗಿತ್ತು. ಹಣದುಬ್ಬರ ನಿಯಂತ್ರಿಸುವ ಸಲುವಾಗಿ ಆರ್‌ಬಿಐ, ತನ್ನ ರೆಪೊ ದರ ಏರಿಕೆ ಮಾಡಿದೆ. ಇದರ ಪರಿಣಾಮ ಮುಂಬರುವ ದಿನಗಳಲ್ಲಿ ವ್ಯವಸ್ಥೆಯಲ್ಲಿ ನಗದು ಲಭ್ಯತೆ ಬಿಗಿಯಾಗಲಿದೆ ಎಂದು ಇಂಡಿಯಾ ರೇಟಿಂಗ್ಸ್‌ ತಿಳಿಸಿದೆ.

ಎಸ್‌ಬಿಐನಲ್ಲಿ ಎಂಸಿಎಲ್‌ಆರ್‌ ದರ 3 ವರ್ಷಗಳ ಅವಧಿಗೆ 8.70 % ಹಾಗೂ 2 ವರ್ಷಗಳ ಅವಧಿಗೆ 8.60% ಇದೆ. ಬ್ಯಾಂಕ್‌ಗೆ ಸಾಲ ವಿತರಣೆಗೆ ತಗಲುವ ವೆಚ್ಚದ ದರವನ್ನು ಎಂಸಿಎಲ್‌ಆರ್‌ ಎನ್ನುತ್ತಾರೆ. ಅದಕ್ಕಿಂತ ಕಡಿಮೆ ಮಟ್ಟಕ್ಕೆ ಬ್ಯಾಂಕ್‌ ಬಡ್ಡಿ ದರ ನಿಗದಿಪಡಿಸುವುದಿಲ್ಲ. ರೆಪೊ ದರ ಆಧರಿತ ಸಾಲ ವಿತರಣೆಯೂ ಜಾರಿಯಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

Cauvery Dispute: ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು.

VISTARANEWS.COM


on

cauvery dispute
Koo

ನವದೆಹಲಿ: ಕರ್ನಾಟಕದಲ್ಲಿ ಬರಗಾಲವಿದ್ದರೂ ಕಾವೇರಿ ನದಿ ನೀರು (Cauvery Dispute) ವಿಚಾರದಲ್ಲಿ ಮೊಂಡಾಟ ಪ್ರದರ್ಶಿಸುತ್ತಿದ್ದ ತಮಿಳುನಾಡಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಭಾರಿ ಮುಖಭಂಗವಾಗಿದೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿನ ವಾದವನ್ನು ಒಪ್ಪದ ಸಿಡಬ್ಲ್ಯೂಆರ್‌ಸಿಯು ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಭಾರಿ ಮುಖಭಂಗವಾಗಿದೆ.

ತಮಿಳುನಾಡಿಗೆ ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು 2023-24ನೇ ಜಲವರ್ಷದ ಅಂತಿಮ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಖಡಕ್‌ ಆದೇಶ ನೀಡಿದೆ. “ಕರ್ನಾಟಕದಲ್ಲಿ ತೀವ್ರ ಬರಗಾಲ ಇರುವುದರಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಿಂದ ನೈಸರ್ಗಿಕವಾಗಿ ನದಿ ಸೇರುವ ನೀರನ್ನು ಬಳಸಿಕೊಳ್ಳಿ” ಎಂಬುದಾಗಿ ತಮಿಳುನಾಡಿಗೆ ಸೂಚನೆ ನೀಡಿದೆ. ಮೇ 21ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಲಿದ್ದು, ಅಲ್ಲೂ ತಮಿಳುನಾಡು ತನ್ನ ಮೊಂಡುವಾದ ಮುಂದಿಡಲಿದೆ ಎಂದು ಹೇಳಲಾಗುತ್ತಿದೆ.

Cauvery water CWRC order

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿದೆ.

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆ ಬರುತ್ತಿದೆ. ಇಷ್ಟಾದರೂ ಅಣೆಕಟ್ಟುಗಳು ತುಂಬಿಲ್ಲ. ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Continue Reading

ಪ್ರಮುಖ ಸುದ್ದಿ

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

MS Dhoni: ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿವೆ. ಆರ್​ಸಿಬಿ ಫ್ರಾಂಚೈಸಿಯ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ನಲ್ಲಿ ವಿಷಯವನ್ನು ಹೇಳಲಾಗಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಭ್ಯಾಸದ ಸಮಯದಲ್ಲಿ 42 ವರ್ಷದ ಧೋನಿ ಆರ್​ಸಿಬಿಯ ಡ್ರೆಸ್ಸಿಂಗ್ ರೂಮ್​ನಲ್ಲಿ ಏಕಾಏಕಿ ಕಾಣಿಸಿಕೊಂಡರು.

VISTARANEWS.COM


on

MS Dhoni
Koo

ಬೆಂಗಳೂರು : ಆರ್​ಸಿಬಿ ಮತ್ತು ಚೆನ್ನೈ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗ ಆರ್​ಸಿಬಿ ಆಟಗಾರರು ಹಾಗೂ ಚೆನ್ನೈ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಬಿಸಿ ಬಿಸಿ ಚಹಾ ಕುಡಿದು ಸಂಭ್ರಮಿಸುತ್ತಿದ್ದಾರೆ. ಇದು ನಡೆದಿರುವುದು ಗುರುವಾರ ಬೆಳಗ್ಗೆ ಅಭ್ಯಾಸದ ಅವಧಿಯಲ್ಲಿ. ಚಿನ್ನಸ್ವಾಮಿ ಸ್ಟೇಡಿಯಮ್​​ಲ್ಲಿದ್ದ ಆರ್​ಸಿಬಿ ಶಿಬಿರವು ಎಂ.ಎಸ್. ಧೋನಿಯನ್ನು ಬಿಸಿ ಕಪ್ ಚಹಾದೊಂದಿಗೆ ಸ್ವಾಗತಿಸಿತು. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ಭೇಟಿ ನೀಡಿದ ಧೋನಿಗೆ ತಂಡದ ಸಹಾಯಕ ಸಿಬ್ಬಂದಿ ಬಿಸಿ ಬಿಸಿ ಚಹಾವನ್ನು ನೀಡಿ ಸತ್ಕರಿಸಿದರು. ಬೆಂಗಳೂರಿನ ಮೋಡ ಮುಸುಕಿದ ಹವಾಮಾನದ ನಡುವೆ, ಧೋನಿ ತಮ್ಮ ತರಬೇತಿಯ ಸಮಯದಲ್ಲಿ ತಮ್ಮ ನೆಚ್ಚಿನ ಪಾನೀಯ ಸೇವಿಸಿದರು.

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿವೆ. ಆರ್​ಸಿಬಿ ಫ್ರಾಂಚೈಸಿಯ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ನಲ್ಲಿ ವಿಷಯವನ್ನು ಹೇಳಲಾಗಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಭ್ಯಾಸದ ಸಮಯದಲ್ಲಿ 42 ವರ್ಷದ ಧೋನಿ ಆರ್​ಸಿಬಿಯ ಡ್ರೆಸ್ಸಿಂಗ್ ರೂಮ್​ನಲ್ಲಿ ಏಕಾಏಕಿ ಕಾಣಿಸಿಕೊಂಡರು.

ಧೋನಿ ಸಿಎಸ್​ಕೆ ತರಬೇತಿ ಕಿಟ್ ಧರಿಸಿ ಡ್ರೆಸ್ಸಿಂಗ್ ರೂಮ್​ನಿಂದ ಹೊರನಡೆದಿರುವ ವಿಡಿಯೊ ಬಹಿರಂಗಗೊಂಡಿದೆ. ಫ್ರಾಂಚೈಸಿ ಈ ಪೋಸ್ಟ್​ಗೆ “ವೆಲ್ಕಮ್ ಟು ಬೆಂಗಳೂರು ಮಹಿ” ಎಂದು ಶೀರ್ಷಿಕೆ ನೀಡಲಾಗಿದೆ.

ಇದನ್ನೂ ಓದಿ: IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

ಕಳೆದ ವರ್ಷ ಸಂದರ್ಶನವೊಂದರಲ್ಲಿ ಎಂಎಸ್ ಧೋನಿ ತಮ್ಮನ್ನು ಅನುಭವಿ ಎಂದು ಕರೆದುಕೊಂಡಿದ್ದರು. ಚಹಾವು ಅದರ ಸರಳತೆಯ ಪ್ರತಿಕೆ ಎಂದರು. ಎಲ್ಲಾದರೂ ಅಭ್ಯಾಸಕ್ಕೆ ಹೋದಾಗ ಮತ್ತು ಯಾರಾದರೂ ಅವರಿಗೆ ಚಹಾ ನೀಡಿದರೆ ಅವರು ಯಾವಾಗಲೂ ಸಂತೋಷ ಪಡುತ್ತೇನೆ ಎಂದು ಹೇಳಿದ್ದರು. ಬೆಂಗಳೂರು ಫ್ರಾಂಚೈಸಿ ವಿರುದ್ಧ 35 ಪಂದ್ಯಗಳಲ್ಲಿ 140.77 ಸ್ಟ್ರೈಕ್​​​ರೇಟ್​​ನಲ್ಲಿ 839 ರನ್ ಗಳಿಸಿದ್ದಾರೆ.

ಆರ್ಸಿಬಿ-ಸಿಎಸ್ಕೆ ಪಂದ್ಯದ ವೇಳೆ ಮಳೆ ಭೀತಿ?

ಬೆಂಗಳೂರಿನಲ್ಲಿ ಶನಿವಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ತಜ್ಞರ ಭವಿಷ್ಯವಾಣಿಗಳು ಬೆಂಗಳೂರು ಮೂಲದ ಫ್ರಾಂಚೈಸಿಯ ಅಭಿಮಾನಿಗಳಿಗೆ ಕೆಟ್ಟ ಸುದ್ದಿಯಾಗಿದೆ. ಆದಾಗ್ಯೂ, ಎರಡೂ ತಂಡಗಳು, ವಿಶೇಷವಾಗಿ ಆರ್​​ಸಿಬಿ ಮುಖಾಮುಖಿಯ ದಿನದಂದು ಮಳೆಗಾಲದ ಹವಾಮಾನ ಊಹಿಸುವುದಿಲ್ಲ.

Continue Reading

ಪ್ರಮುಖ ಸುದ್ದಿ

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

R Ashok: ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Opposition party leader r ashok latest statement in Mysuru
Koo

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.‌ ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾ ಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

Continue Reading

ಪ್ರಮುಖ ಸುದ್ದಿ

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

VISTARANEWS.COM


on

IPL 2024
Koo

ಹೈದರಾಬಾದ್​​: ಇಲ್ಲಿ ಗುರುವಾರ ನಿಗದಿಯಾಗಿದ್ದ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಸನ್​ರೈಸರ್ಸ್​​ ಹೈದರಾಬಾದ್​ (Sunrisers Hyderabad) ತಂಡ ಬೆವರು ಸುರಿಸದೇ 2024ನೇ ಆವೃತ್ತಿಯ (IPL 2024) ಐಪಿಎಲ್​ನ ಪ್ಲೇಆಫ್​​ಗೆ ಪ್ರವೇಶಿಸಿತು. ಕೋಲ್ಕತಾ ಮತ್ತು ರಾಜಸ್ಥಾನದ ನಂತರ ಐಪಿಎಲ್ 2024 ರ ಪ್ಲೇಆಫ್​​ಗೆ ಅರ್ಹತೆ ಪಡೆದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಎಸ್​ಆರ್​ಎಚ್​ ಪಾತ್ರವಾಯಿತು. ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ (ಮೇ 16) ಗುಜರಾತ್ ವಿರುದ್ಧ ಸೆಣಸಬೇಕಾಗಿತ್ತು. ಆದರೆ ಪಂದ್ಯ ಟಾಸ್​ ಕೂಡ ಕಾಣದೆ ಮಳೆಯಿಂದಾಗಿ ರದ್ದಾಯಿತು. ಹೀಗಾಗಿ 2016ರ ಚಾಂಪಿಯನ್ಸ್ ತಂಡ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯುವುದನ್ನು ಖಚಿತಪಡಿಸಿಕೊಂಡಿತು.

2020ರ ಬಳಿಕ ಇದೇ ಮೊದಲ ಬಾರಿಗೆ ಸನ್ರೈಸರ್ಸ್ ಪ್ಲೇ ಆಫ್ ಹಂತ ತಲುಪಿದೆ. ಮಾಜಿ ಚಾಂಪಿಯನ್​ಗಳು ​2021, 2022 ಮತ್ತು 2023 ರಲ್ಲಿ ಕ್ರಮವಾಗಿ 8, 8 ಮತ್ತು 10 ನೇ ಸ್ಥಾನಗಳನ್ನು ಪಡೆದುಕೊಂಡಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​ ​ಷಿಪ್​​ ಮತ್ತು ಏಕದಿನ ವಿಶ್ವಕಪ್ ಗೆಲುವಿನ ನಂತರ ಪ್ರಶಸ್ತಿ ಗೆಲ್ಲುವ ಉತ್ಸಾಹದಲ್ಲಿರುವ ನಾಯಕ ಪ್ಯಾಟ್ ಕಮಿನ್ಸ್, ಐಪಿಎಲ್ 2024 ರಲ್ಲಿ ನಿರ್ಭೀತ ಬ್ರಾಂಡ್ ಕ್ರಿಕೆಟ್ ಆಡುತ್ತಿದ್ದಾರೆ.

ಪಂದ್ಯಕ್ಕೆ ಮುಂಚಿತವಾಗಿ ನಿರಂತರವಾಗಿ ಮಳೆ ಸುರಿಯಿತು. 10 ಗಂಟೆ ದಾಟಿದರೂ ಪಿಚ್​ನಿಂದ ಟಾರ್ಪಾಲ್​ ತೆಗೆಯಲು ಸಾಧ್ಯವಾಗಲಿಲ್ಲ. ನಾಯಕರಾದ ಪ್ಯಾಟ್ ಕಮಿನ್ಸ್ ಮತ್ತು ಶುಬ್ಮನ್ ಗಿಲ್ ಪಿಚ್ ಅನ್ನು ಅನೇಕ ಬಾರಿ ಪರಿಶೀಲನೆ ನಡೆಸಿದರು. ಆದರೆ ಅವರು ತಮ್ಮ ತರಬೇತಿ ಕಿಟ್​​ ಧರಿಸಿದರೇ ಹೊರತು ಮ್ಯಾಚ್​ ಕಿಟ್​ ಧರಿಸಲಿಲ್ಲ. . ಮಳೆಯ ಹೊರತಾಗಿಯೂ, ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ತವರು ತಂಡವನ್ನು ಹುರಿದುಂಬಿಸಲು ದೊಡ್ಡ ಪ್ರಮಾಣದ ಪ್ರೇಕ್ಷಕರು ಇದ್ದರು. ಎಸ್ಆರ್​ಎಚ್​ ಪ್ಲೇಆಫ್​ ಪ್ರವೇಶಿಸುತ್ತಿದ್ದಂತೆ ಅಭಿಮಾನಿಗಳಿಗಾಗಿ ಲಘು ಪ್ರದರ್ಶನ ಮತ್ತು ಸಂಗೀತ ಆಯೋಜಿಸಲಾಗಿತ್ತು.

ಇದನ್ನೂ ಓದಿ: IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

ಹೈದರಾಬಾದ್​​ನ ನಡೆದ ಪಂದ್ಯದಲ್ಲಿ ಒಂದು ಅಂಕ ಗಳಿಸುವ ಮೂಲಕ ಸನ್​ರೈಸರ್ಸ್​ ಹೈದರಾಬಾದ್​​ 13 ಪಂದ್ಯಗಳಿಂದ 15 ಅಂಕಗಳನ್ನು ಗಳಿಸಿದೆ. ಮೇ 19ರಂದು ಪಂಜಾಬ್ ವಿರುದ್ಧ ತವರಿನಲ್ಲಿ ಸೆಣಸಲಿರುವ ಪ್ಯಾಟ್ ಕಮಿನ್ಸ್ ಪಡೆಗೆ ಅಗ್ರ ಎರಡು ಸ್ಥಾನಗಳನ್ನು ಗಳಿಸುವ ಅವಕಾಶವಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೆಕೆಆರ್ ವಿರುದ್ಧ ಕ್ವಾಲಿಫೈಯರ್ 1ರಲ್ಲಿ ಆಡುವ ಅವಕಾಶ ಸಿಗಲಿದೆ. . ಎಸ್​ಆರ್​​ಎಚ್​​ ಅರ್ಹತೆಯು ದೆಹಲಿ ಮತ್ತು ಲಕ್ನೋದ ಪ್ಲೇಆಫ್ ಭರವಸೆಗಳನ್ನು ಕೊನೆಗೊಳಿಸಿತು. ಶನಿವಾರ ಬೆಂಗಳೂರಿನಲ್ಲಿ ಆರ್​​ಸಿಬಿ ಮತ್ತು ಸಿಎಸ್​ಕೆ ನಡುವಿನ ಬಹುನಿರೀಕ್ಷಿತ ಪಂದ್ಯದ ಕಿಚ್ಚನ್ನು ಹೆಚ್ಚಿಸಿತು.

ಗುಜರಾತ್ ಗೆ ನಿರಾಶಾದಾಯಕ ಅಭಿಯಾನ

ಮಳೆಯಿಂದಾಗಿ ಕೊನೆಯ ಎರಡು ಪಂದ್ಯಗಳನ್ನು ರದ್ದುಗೊಳಿಸಿದ ನಂತರ ಗುಜರಾತ್ ತನ್ನ ಋತುವನ್ನು ಕೊನೆಯ ನಾಲ್ಕರಲ್ಲಿ ಕೊನೆಗೊಳಿಸಬೇಕಾಯಿತು. ಅಹ್ಮದಾಬಾದ್​ನಲ್ಲಿ ಕೆಕೆಆರ್ ವಿರುದ್ಧ ಜಿಟಿಯ ಕೊನೆಯ ತವರು ಪಂದ್ಯವೂ ಕೆಟ್ಟ ಹವಾಮಾನದಿಂದಾಗಿ ರದ್ದಾಗಿತ್ತು. 2022 ರಲ್ಲಿ ಪ್ರಶಸ್ತಿ ಗೆದ್ದ ಮತ್ತು 2022 ರಲ್ಲಿ ರನ್ನರ್ ಅಪ್ ಸ್ಥಾನ ಪಡೆದ ಗುಜರಾತ್​ಗೆ ಇದು ನಿರಾಶಾದಾಯಕ ಅಭಿಯಾನ. ಏಕೆಂದರೆ ಹೊಸ ನಾಯಕ ಶುಭ್ಮನ್ ಗಿಲ್ ಅವರ ಅಡಿಯಲ್ಲಿ ತಂಡವು ಪ್ರತಿಭೆಯ ಕಿಡಿಗಳನ್ನು ಹೊಂದಿದ್ದರೂ ಉತ್ತಮ ಪ್ರದರ್ಶನ ನೀಡಲು ವಿಫಲಗೊಂಡಿತು.

ಸನ್ರೈಸರ್ಸ್ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆದ್ದು ಎರಡನೇ ಸ್ಥಾನಕ್ಕೆ ಅರ್ಹತೆ ಪಡೆಯುವ ನಿರೀಕ್ಷೆಯಲ್ಲಿದೆ. ನಾಲ್ಕು ಪಂದ್ಯಗಳ ಸೋಲಿನ ಹಾದಿಯಲ್ಲಿರುವ ರಾಜಸ್ಥಾನ್ ಭಾನುವಾರ ಗುವಾಹಟಿಯಲ್ಲಿ ಕೆಕೆಆರ್ ವಿರುದ್ಧ ತನ್ನ ಕೊನೆಯ ಪಂದ್ಯವನ್ನು ಕಳೆದುಕೊಳ್ಳಲಿ ಎಂದು ಅವರು ಪ್ರಾರ್ಥಿಸಬೇಕಾಗಿದೆ. ರಾಜಸ್ಥಾನ್ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆದ್ದರೆ, ಆ ತಂಡ ಎರಡನೇ ಸ್ಥಾನ ಪಡೆಯುತ್ತದೆ.

Continue Reading
Advertisement
cauvery dispute
ಕರ್ನಾಟಕ9 mins ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ14 mins ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು29 mins ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ30 mins ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ32 mins ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ36 mins ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ2 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

DK Shivakumar in Uttar Pradesh and Strategy in Amethi and Rae Bareli
Lok Sabha Election 20242 hours ago

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

IPL 2024
ಪ್ರಮುಖ ಸುದ್ದಿ2 hours ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Virat kohli
ಪ್ರಮುಖ ಸುದ್ದಿ3 hours ago

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ10 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು13 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌