MB Patil: ವಿಜಯಪುರ ಜಿಲ್ಲೆಗೆ 36 ಸಾವಿರ ಕೋಟಿ ಹೂಡಿಕೆ ತಂದ ಸಚಿವ ಎಂ.ಬಿ. ಪಾಟೀಲ್! - Vistara News

ವಾಣಿಜ್ಯ

MB Patil: ವಿಜಯಪುರ ಜಿಲ್ಲೆಗೆ 36 ಸಾವಿರ ಕೋಟಿ ಹೂಡಿಕೆ ತಂದ ಸಚಿವ ಎಂ.ಬಿ. ಪಾಟೀಲ್!

MB‌ Patil: ಸುಜ್ಲಾನ್‌ ಕಂಪನಿಯು ಪವನ ವಿದ್ಯುತ್‌ ಕ್ಷೇತ್ರಕ್ಕೆ ಅಗತ್ಯವಿರುವ 160 ಮೀಟರ್‌ ಎತ್ತರದ ಕಂಬಗಳು ಮತ್ತು 70 ಮೀಟರ್‌ ಉದ್ದದ ಬೃಹತ್‌ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದ್ದು, ವಿಜಯಪುರದಲ್ಲಿ ಹಂತಹಂತವಾಗಿ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

Minister MB Patil has brought rs 36000 investment to Vijayapura district
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ (MB Patil) ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಪವನ ವಿದ್ಯುತ್‌ ಮತ್ತು ಸೌರ ವಿದ್ಯುತ್‌ ಕ್ಷೇತ್ರಗಳ ಕಂಪನಿಗಳಿಂದ ಒಟ್ಟು 36 ಸಾವಿರ ಕೋಟಿ ರೂಪಾಯಿ ಹೂಡಿಕೆಯನ್ನು ತಂದಿದ್ದಾರೆ. ಸುಜ್ಲಾನ್‌ ಮತ್ತು ರೆನೈಸಾನ್ಸ್‌ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಮಂಗಳವಾರ ಈ ಸಂಬಂಧ ಮಾತುಕತೆಯನ್ನು ನಡೆಸಲಾಗಿದೆ.

ಬಳಿಕ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್‌, ʻಸುಜ್ಲಾನ್‌ ಕಂಪನಿಯು ಪವನ ವಿದ್ಯುತ್‌ ಕ್ಷೇತ್ರಕ್ಕೆ ಅಗತ್ಯವಿರುವ 160 ಮೀಟರ್‌ ಎತ್ತರದ ಕಂಬಗಳು ಮತ್ತು 70 ಮೀಟರ್‌ ಉದ್ದದ ಬೃಹತ್‌ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದ್ದು, ವಿಜಯಪುರದಲ್ಲಿ ಹಂತಹಂತವಾಗಿ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ. ಮೊದಲ ಹಂತದಲ್ಲಿ ಕಂಪನಿಯು ಬ್ಲೇಡುಗಳ ತಯಾರಿಕಾ ಘಟಕ ಆರಂಭಿಸಲು ತೀರ್ಮಾನಿಸಿದ್ದು, 100 ಎಕರೆ ಜಮೀನನ್ನು ಕೇಳಿದೆ. ಇದು ವಿಜಯಪುರ ಜಿಲ್ಲೆಗೆ ಹರಿದು ಬರಲಿರುವ ಬೃಹತ್‌ ಹೂಡಿಕೆಯಾಗಲಿದೆʼ ಎಂದರು.

ಈಗಾಗಲೇ ನಡೆಸಿರುವ ಅಧ್ಯಯನಗಳ ಪ್ರಕಾರ ಇಡೀ ದೇಶದಲ್ಲಿ ವಿಜಯಪುರ, ಆಂಧ್ರಪ್ರದೇಶದ ಅನಂತಪುರ ಮತ್ತು ರಾಜಸ್ಥಾನದ ಜೈಸಲ್ಮೇರ್‌ ಮಾತ್ರ ಪವನ ವಿದ್ಯುತ್‌ ಉತ್ಪಾದನೆಗೆ ಅತ್ಯಂತ ಪ್ರಶಸ್ತ ತಾಣಗಳೆಂದು ಗೊತ್ತಾಗಿದೆ. ಅನಂತಪುರ ಮತ್ತು ಜೈಸಲ್ಮೇರ್‌ಗಳಲ್ಲಿ ಸುಜ್ಲಾನ್‌ ಕಂಪನಿಯು ಈಗಾಗಲೇ ಕ್ರಮವಾಗಿ 2,000 ಮತ್ತು 3,000 ಮೆಗಾವ್ಯಾಟ್‌ ಉತ್ಪಾದನಾ ಸಾಮರ್ಥ್ಯದ ಪವನ ವಿದ್ಯುತ್‌ ಘಟಕಗಳನ್ನು ಹೊಂದಿದೆ. ವಿಜಯಪುರದಲ್ಲಿ ಕಂಪನಿಯು 5,000 ಮೆಗಾವ್ಯಾಟ್‌ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಲಿದ್ದು, ಇದು ದೇಶದಲ್ಲೇ 2ನೇ ಅತಿ ದೊಡ್ಡ ಪವನ ವಿದ್ಯುತ್‌ ಘಟಕವಾಗಿರಲಿದೆ ಎಂದು ಎಂ.ಬಿ. ಪಾಟೀಲ್‌ ತಿಳಿಸಿದರು.

ಒಡಂಬಡಿಕೆ ಆಗಬೇಕಿದೆ

ಸುಜ್ಲಾನ್‌ ಕಂಪನಿಯು ಇಲ್ಲಿ ತಯಾರಿಸಲಿರುವ ಕಂಬ ಮತ್ತು ಬ್ಲೇಡುಗಳನ್ನು ಸ್ಥಳೀಯವಾಗಿಯೇ ಬಳಸಲಿದೆ. ಕಂಪನಿಗೆ ಅಗತ್ಯವಿರುವ 100 ಎಕರೆ ಜಮೀನನ್ನು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೊಡಲು ಏನೂ ಸಮಸ್ಯೆ ಇಲ್ಲ. ಅಕಸ್ಮಾತ್‌ ಕಂಪನಿಯು ಜಿಲ್ಲೆಯ ಬೇರೆಡೆಗಳಲ್ಲಿ ತನಗೆ ಅಗತ್ಯವಿರುವ ಸೂಕ್ತ ಭೂಮಿ ಲಭ್ಯವಿದೆ ಎಂದು ಭಾವಿಸಿದರೆ, ಅಷ್ಟು ಪ್ರಮಾಣದ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಕೊಡಲಾಗುವುದು. ಒಟ್ಟಿನಲ್ಲಿ ಈ ಕಂಪನಿಯು ವಿಜಯಪುರಕ್ಕೆ ಬರಬೇಕು ಎನ್ನುವುದು ಸರ್ಕಾರದ ಗುರಿಯಾಗಿದ್ದು, ಇದಕ್ಕಾಗಿ ʻಬಿಯಾಂಡ್‌ ಬೆಂಗಳೂರುʼ ಉಪಕ್ರಮದಡಿ ಇರುವ ಸೌಲಭ್ಯ, ಪ್ರೋತ್ಸಾಹಗಳನ್ನೆಲ್ಲ ಕೊಡಲಾಗುವುದು. ಇದಕ್ಕೆ ಕಂಪನಿಯ ಸಿಇಒ ಒಪ್ಪಿಕೊಂಡಿದ್ದು, ಸದ್ಯದಲ್ಲೇ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಅಂತಿಮವಾಗಿ ಒಡಂಬಡಿಕೆಗೆ ಸಹಿ ಹಾಕಲಾಗುವುದು ಎಂದು ಎಂ.ಬಿ. ಪಾಟೀಲ್‌ ಮಾಹಿತಿ ನೀಡಿದರು.

ರೆನೈಸಾನ್ಸ್‌ ಕಂಪನಿಯಿಂದ 6,000 ಸಾವಿರ ಕೋಟಿ ರೂ. ಹೂಡಿಕೆ

ಇದಲ್ಲದೆ, ಸೌರ ಫಲಕಗಳ (ಸೋಲಾರ್‌ ಪ್ಯಾನೆಲ್ಸ್)‌ ತಯಾರಿಕೆಗೆ ಬೇಕಾಗುವ ಬಿಡಿ ಭಾಗಗಳ ಉತ್ಪಾದನೆಗೆ ಹೆಸರಾಗಿರುವ ರೆನೈಸಾನ್ಸ್‌ ಸೋಲಾರ್‌ ಮತ್ತು ಎಲೆಕ್ಟ್ರಾನಿಕ್‌ ಮೆಟೀರಿಯಲ್ಸ್‌ ಕಂಪನಿ ಕೂಡ ವಿಜಯಪುರದಲ್ಲಿ ತನ್ನ ಘಟಕ ಆರಂಭಿಸಲು 6,000 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದೆ. ಈ ಸಂಬಂಧ ಕಂಪನಿಯ ಸಿಇಒ ಮಿಲಿಂದ್‌ ಕುಲಕರ್ಣಿ ಅವರೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಕಂಪನಿ ಕೂಡ ತನಗೆ 100 ಎಕರೆ ಜಮೀನು, 80 ಮೆಗಾವ್ಯಾಟ್‌ ವಿದ್ಯುತ್‌ ಮತ್ತು ಪ್ರತಿನಿತ್ಯ 10 ಎಂಎಲ್‌ಡಿ ನೀರಿನ ಅಗತ್ಯವಿದೆ ಎಂದು ತಿಳಿಸಿದೆ. ಜಮೀನು ಮತ್ತು ವಿದ್ಯುತ್ತಿಗೆ ಜಿಲ್ಲೆಯಲ್ಲಿ ಸಮಸ್ಯೆಯೇನೂ ಇಲ್ಲ. ಆಲಮಟ್ಟಿ ಅಣೆಕಟ್ಟೆಯಿಂದ ಕಂಪನಿಗೆ ಅಗತ್ಯವಿರುವಷ್ಟು ನೀರನ್ನೂ ಕೊಡಬಹುದು. ಕಂಪನಿಯು ಆರಂಭದಲ್ಲಿ 2,500 ಕೋಟಿ ರೂ. ಹಣ ಹೂಡಲಿದ್ದು, 5,000 ಮೆಗಾವ್ಯಾಟ್‌ ಸಾಮರ್ಥ್ಯದ ಘಟಕವನ್ನು (ಕ್ರಿಸ್ಟಲ್‌ ಗ್ರೋತ್‌ & ವೇಫರಿಂಗ್‌ ಯೂನಿಟ್)‌ ಆರಂಭಿಸಲಿದೆ. 2025ರ ಕೊನೆಯ ಹೊತ್ತಿಗೆ ತನ್ನ ವಾಣಿಜ್ಯ ಚಟುವಟಿಕೆ ಆರಂಭಿಸಲು ಉದ್ದೇಶಿಸಲಿದೆ. ಇದರಿಂದ 1 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಎಂ.ಬಿ. ಪಾಟೀಲ್‌ ವಿವರಿಸಿದರು.

ರೆನೈಸಾನ್ಸ್‌ ಕಂಪನಿಯು 2030ರ ಹೊತ್ತಿಗೆ ತನ್ನ ಘಟಕವನ್ನು 20 ಸಾವಿರ ಮೆಗಾವ್ಯಾಟ್‌ ಮಟ್ಟಕ್ಕೆ ಕೊಂಡೊಯ್ಯುವ ನೀಲನಕಾಶೆಯನ್ನು ಹೊಂದಿದೆ. ಆಗ 3,000ಕ್ಕೂ ಹೆಚ್ಚು ಜನರಿಗೆ ಇಲ್ಲಿ ಉದ್ಯೋಗ ಸಿಗಲಿದೆ. ಕಂಪನಿಯು ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಕೂಡ ಸೂಕ್ತ ಜಾಗಕ್ಕಾಗಿ ಹುಡುಕಾಟ ನಡೆಸಿದ್ದು, ಅಂತಿಮವಾಗಿ ವಿಜಯಪುರವನ್ನು ಆಯ್ಕೆ ಮಾಡಿಕೊಂಡಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದರು.

ಇದನ್ನೂ ಓದಿ: Anantkumar Hegde: ಮಾಧ್ಯಮಗಳಿಗೆ ನಾಯಿ ಎಂದರೇ ಅನಂತ್‌ ಕುಮಾರ್‌? ಪತ್ರಕರ್ತರ ಸಂಘದಿಂದ ಬಿಜೆಪಿ ಹೈಕಮಾಂಡ್‌ಗೆ ದೂರು

ಸುಜ್ಲಾನ್‌ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್‌ ಸೋಲಾರ್‌ ಮತ್ತು ಎಲೆಕ್ಟ್ರಾನಿಕ್‌ ಮೆಟೀರಿಯಲ್ಸ್‌ ಕಂಪನಿಯ ಸಿಇಒ ಮಿಲಿಂದ್‌ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು. ಕೆಐಎಡಿಬಿ ಸಿಇಒ ಡಾ.ಮಹೇಶ್‌ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Money Guide: ದೇಶದ ಜನರಲ್ಲಿನ ಉಳಿತಾಯ ಪ್ರವೃತ್ತಿಯನ್ನು ಉತ್ತೇಜಿಸಲು ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಕೂಡ ಒಂದು. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಇಂತಹ ಅತ್ಯುತ್ತಮ ಯೋಜನೆ ಜಾರಿಗೆ ಬಂದು ಇಂದಿಗೆ 15 ವರ್ಷ ಪೂರ್ಣಗೊಂಡಿದೆ. ಈ ಯೋಜನೆ ಕುರಿತಾದ ಕೆಲವು ಆಸಕ್ತಿದಾಯಕ ಸಂಗತಿಗಳ ವಿವರ ಇಲ್ಲಿದೆ

VISTARANEWS.COM


on

Money Guide
Koo

ಬೆಂಗಳೂರು: ದೇಶದ ಜನರಲ್ಲಿನ ಉಳಿತಾಯ ಪ್ರವೃತ್ತಿಯನ್ನು ಉತ್ತೇಜಿಸಲು ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಕೂಡ ಒಂದು. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಇಂತಹ ಅತ್ಯುತ್ತಮ ಯೋಜನೆ ಜಾರಿಗೆ ಬಂದು ಇಂದಿಗೆ 15 ವರ್ಷ ಪೂರ್ಣಗೊಂಡಿದೆ. 2009ರ ಮೇ 1ರಂದು ಈ ಯೋಜನೆಯನ್ನು ದೇಶದಲ್ಲಿ ಜಾರಿಗೊಳಿಸಲಾಯಿತು. ಈ ಯೋಜನೆ ಕುರಿತಾದ ಕೆಲವು ಆಸಕ್ತಿದಾಯಕ ಸಂಗತಿಗಳ ವಿವರ ಇಲ್ಲಿದೆ (Money Guide).

ಭಾರತ ಸರ್ಕಾರ 2004ರ ಜನವರಿ 1ರಂದು ಎನ್‌ಪಿಎಸ್‌ ಅನ್ನು ಪರಿಚಯಿಸಿತು ಮತ್ತು ಐದು ವರ್ಷಗಳ ನಂತರ (2009) ಅದನ್ನು ಸಾರ್ವಜನಿಕರಿಗಾಗಿ ಮುಕ್ತಗೊಳಿಸಲಾಯಿತು. ಈ ಯೋಜನೆಯು ಭಾರತದ ನಾಗರಿಕರಿಗೆ ವೃದ್ಧಾಪ್ಯದ ಭದ್ರತೆಯಾಗಿ ಪಿಂಚಣಿ ಮತ್ತು ಹೂಡಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿಯಂತ್ರಿಸುತ್ತದೆ.

ಯಾರೆಲ್ಲ ಅರ್ಹರು?

ಭಾರತೀಯ ಮತ್ತು ಆನಿವಾಸಿ ಭಾರತೀಯ ನಾಗರಿಕರು ಈ ಯೋಜನೆಯಲ್ಲಿ ಹೀಡಿಕೆ ಮಾಡಬಹುದಾಗಿದೆ. 18ರಿಂದ 70 ವರ್ಷದವರು ಈ ಯೋಜನೆಗೆ ಅರ್ಹರು. ವೃದ್ಧಾಪ್ಯ ಆದಾಯವನ್ನು ಒದಗಿಸುವುದು, ದೀರ್ಘಾವಧಿಯಲ್ಲಿ ಮಾರುಕಟ್ಟೆ ಆಧಾರಿತ ಆದಾಯ ನೀಡುವುದು ಮತ್ತು ಎಲ್ಲ ನಾಗರಿಕರಿಗೆ ವೃದ್ಧಾಪ್ಯ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸುವುದು ಕೂಡ ಈ ಯೋಜನೆಯ ಉದ್ದೇಶ.

ಎನ್‌ಆರ್‌ಐ ಕೂಡ ಹೂಡಿಕೆ ಮಾಡಬಹುದೆ?

ವಿಶೇಷ ಎಂದರೆ ಆನಿವಾಸಿ ಭಾರತೀಯರು ಕೂಡ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಅದಾಗ್ಯೂ ಆರ್‌ಬಿಐ ಮತ್ತು ಫೆಮಾ ಸೂಚಿಸುವ ಷರತ್ತುಗಳು ಅನ್ವಯವಾಗುತ್ತವೆ. ಇನ್ನು ಒಸಿಐ (ಓವರ್‌ಸೀಸ್‌ ಸಿಟಿಜನ್ಸ್ ಆಫ್ ಇಂಡಿಯಾ) ಮತ್ತು ಪಿಐಒ (ಪರ್ಸನ್ ಆಫ್ ಇಂಡಿಯನ್ ಒರಿಜಿನ್) ಕಾರ್ಡ್ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.

ಎನ್‌ಪಿಎಸ್‌ ಖಾತೆ ತೆರೆಯುವುದು ಹೇಗೆ?

ಆಫ್‌ಲೈನ್‌

  • ನಿಮ್ಮ ಮನೆ ಹತ್ತಿರದ ಪಿಒಪಿ (PoP) ಅಥವಾ ಪೋಸ್ಟ್‌ ಆಫೀಸ್‌ಗೆ ತೆರಳಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಒದಗಿಸಿ.
  • ಟೈರ್‌ 1 ಖಾತೆಗೆ ಕನಿಷ್ಠ 500 ರೂ. ಹೂಡಿಕೆ ಮಾಡಿ.
  • ಅಪ್ಲಿಕೇಷನ್‌ ಫಾರಂ ಸಲ್ಲಿಸಿ.

ಆನ್‌ಲೈನ್‌

  • ಇಲ್ಲಿ ಕ್ಲಿಕ್‌ ಮಾಡಿ
  • ಹೆಸರು ನೋಂದಾಯಿಸಿ.
  • ಮೊಬೈಲ್‌ ನಂಬರ್‌, ಪ್ಯಾನ್‌ ಕಾರ್ಡ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ.
  • ಮೊಬೈಲ್‌ಗೆ ಬಂದ ಒಟಿಪಿ ನಮೂದಿಸಿ.
  • ಅಗತ್ಯ ವಿವರಗಳನ್ನು ಭರ್ತಿ ಮಾಡಿ. ಈಗ ನಿಮಗೆ PRAN (Permanent Retirement Account Number) ಸಂಖ್ಯೆ ದೊರೆಯುತ್ತದೆ. ಇದನ್ನು ಬಳಸಿ ಲಾಗಿನ್‌ ಆಗಬಹುದು.

ಯಾವೆಲ್ಲ ದಾಖಲೆ ಅಗತ್ಯ?

  • ಇತ್ತೀಚಿನ ಭಾವಚಿತ್ರ
  • ಪ್ಯಾನ್‌ ಕಾರ್ಡ್‌
  • ವಿಳಾಸದ ಪುರಾವೆ
  • ಬ್ಯಾಂಕ್‌ ಅಕೌಂಟ್‌ ವಿವರ

ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ವಿನಾಯಿತಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿವರೆಗಿನ ಹೂಡಿಕೆಗೆ ತೆರಿಗೆ ವಿನಾಯಿತಿ ಪಡೆಯಬಹುದು.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading

ವಾಣಿಜ್ಯ

Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

Startup Investment : ಪ್ರಸ್ತುತ ಅಸ್ತಿತ್ವದಲ್ಲಿರುವ ಹೂಡಿಕೆದಾರರೊಂದಿಗೆ ಎಸ್​ವಿಸಿಎಲ್ , ಡ್ರಿಂಕ್​​ ಪ್ರೈಮ್ ಗೆ ಆರ್ಥಿಕ ಬೆಂಬ ನೀಡುವ ಮೂಲಕ ಬ್ರಾಂಡ್ ನ ಸಾಮರ್ಥ್ಯ ಮತ್ತು ಮಾರುಕಟ್ಟೆ ಮೌಲ್ಯದ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಎಸ್ ವಿಸಿಎಲ್ ಮತ್ತು ಅಸ್ತಿತ್ವದಲ್ಲಿರುವ ಹೂಡಿಕೆದಾರರಿಂದ ಮೂಲಕ ಕಾರ್ಯತಂತ್ರದ ಹೂಡಿಕೆಭಾಗವಾಗಿ 3 ಮಿಲಿಯನ್ ಡಾಲರ್​ (25,04,88,900.00 ರೂಪಾಯಿ) ಸಂಗ್ರಹಿಸಲಾಗಿದೆ.

VISTARANEWS.COM


on

Startup Investment
Koo

ಬೆಂಗಳೂರು: ಭಾರತದ 30 ವರ್ಷಗಳಷ್ಟು ಹಳೆಯದಾದ ವಾಟರ್ ಪ್ಯೂರಿಫೈಯರ್ ಉದ್ಯಮವಾಗಿರುವ ಡ್ರಿಂಕ್​​ಪ್ರೈಮ್​ನಲ್ಲಿ (DrinkPrime) ಹೂಡಿಕೆ ನಿರ್ವಹಣಾ ಕಂಪನಿಯಾದ ಎಸ್ಐಡಿಬಿಐ ವೆಂಚರ್ ಕ್ಯಾಪಿಟಲ್ ಲಿಮಿಟೆಡ್ (SVCL) ಹೂಡಿಕೆ ಮಾಡಿದೆ (Startup Investment). ಎಸ್​ವಿಸಿಎಲ್​ ಎಸ್​​ಐಡಿಬಿಐನ (SIDBI) ಸಂಪೂರ್ಣ ಸ್ವಾಮ್ಯದ ಹಣಕಾಸು ಸಂಸ್ಥೆಯಾಗಿದ್ದು ಭಾರತದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೆ (MSME) ಆರ್ಥಿಕ ಬೆಂಬಲವನ್ನು ಒದಗಿಸುತ್ತದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಹೂಡಿಕೆದಾರರೊಂದಿಗೆ ಎಸ್​ವಿಸಿಎಲ್ , ಡ್ರಿಂಕ್​​ ಪ್ರೈಮ್ ಗೆ ಆರ್ಥಿಕ ಬೆಂಬ ನೀಡುವ ಮೂಲಕ ಬ್ರಾಂಡ್ ನ ಸಾಮರ್ಥ್ಯ ಮತ್ತು ಮಾರುಕಟ್ಟೆ ಮೌಲ್ಯದ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಎಸ್ ವಿಸಿಎಲ್ ಮತ್ತು ಅಸ್ತಿತ್ವದಲ್ಲಿರುವ ಹೂಡಿಕೆದಾರರಿಂದ ಮೂಲಕ ಕಾರ್ಯತಂತ್ರದ ಹೂಡಿಕೆಭಾಗವಾಗಿ 3 ಮಿಲಿಯನ್ ಡಾಲರ್​ (25,04,88,900.00 ರೂಪಾಯಿ) ಸಂಗ್ರಹಿಸಲಾಗಿದೆ.

“ಎಸ್ಐಡಿಬಿಐ ವೆಂಚರ್ ಕ್ಯಾಪಿಟಲ್ ಲಿಮಿಟೆಡ್ ನಮ್ಮ ದೀರ್ಘಕಾಲೀನ ಹೂಡಿಕೆದಾರರ ಗುಂಪಿಗೆ ಸೇರಲು ನಾವು ಉತ್ಸುಕರಾಗಿದ್ದೇವೆ. ನಮ್ಮ ಮೇಲಿನ ಅವರ ನಂಬಿಕೆಯು ಕುಡಿಯುವ ನೀರಿನ ಉದ್ಯಮದಲ್ಲಿ ಡ್ರಿಂಕ್​ಪ್ರೈಮ್ ನ ಆವಿಷ್ಕಾರಕ್ಕೆ ಲಭಿಸಿದ ಬಲಿಷ್ಠ ಬೆಂಬಲವಾಗಿದೆ. ನಮ್ಮ ಅಸಾಧಾರಣ ಬೆಳವಣಿಗೆಯ ಯಾನದಲ್ಲಿ ನಂಬಿಕೆಯೂ ಆಗಿದೆ. 2021 ರಿಂದ 2023 ರವರೆಗೆ, ನಾವು ಗಮನಾರ್ಹವಾದ 3 ಪಟ್ಟು ಬೆಳವಣಿಗೆ ಸಾಧಿಸಿದ್ದೇವೆ. ಕಾರ್ಯತಂತ್ರದ ಹೂಡಿಕೆಯು ವ್ಯವಹಾರ ವಿಸ್ತರಣೆಗೆ ಅವಕಾಶ ಒದಗಿಸುತ್ತದೆ” ಎಂದು ಡ್ರಿಂಕ್ ಪ್ರೈಮ್ ಸಹ ಸಂಸ್ಥಾಪಕ ಮತ್ತು ಸಿಇಒ ವಿಜೇಂದರ್ ರೆಡ್ಡಿ ಮುತ್ಯಾಲ ಹೇಳಿದರು.

ಎಸ್ ವಿಸಿಎಲ್ ಸಂಸ್ಥೆಯು ಡ್ರಿಂಕ್​​​ ಪ್ರೈಮ್ ನಲ್ಲಿ ಮಾಡಿರುವ ಹೂಡಿಕೆಯು ಉದ್ಯಮಶೀಲತೆಯನ್ನು ಉತ್ತೇಜಿಸುವ ಮತ್ತು ಭಾರತದಾದ್ಯಂತ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿರುವ ಧ್ಯೇಯವನ್ನು ಹೊಂದಿದೆ. ಈ ಪಾಲುದಾರಿಕೆಯು ನಿರ್ಣಾಯಕ ಸಾಮಾಜಿಕ ಸವಾಲುಗಳನ್ನು ಪರಿಹರಿಸುವ ಮತ್ತು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುವ ವಿನೂತನ ಸ್ಟಾರ್ಟ್​​ಅಪ್​ಗಳನ್ನು ಬೆಂಬಲಿಸುವ ಬದ್ಧತೆಯ ಪ್ರತೀಕವಾಗಿದೆ ಎಂದು ವಿಜೇಂದರ್ ರೆಡ್ಡಿ ಅವು ಹೇಳಿದರು.

“ನಾವು ಡ್ರಿಂಕ್​​ ಪ್ರೈಮ್ ತಂಡದೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದೇವೆ ಮತ್ತು ಅದನ್ನು ಭಾರತದ ಪ್ರಮುಖ ವಾಟರ್ ಟೆಕ್ ಬ್ರಾಂಡ್ ಆಗಿ ಮಾಡಲು ಪ್ರಯತ್ನಿಸುತ್ತೇವೆ, ಅದೇ ಸಮಯದಲ್ಲಿ ಅದರ ನಾವಿನ್ಯ ಕೊಡುಗೆಗಳನ್ನು ಜಗತ್ತಿಗೆ ಪ್ರಸ್ತುತಪಡಿಸಲಿದ್ದೇವೆ. ಎಲ್ಲರಿಗೂ ಶುದ್ಧ, ಸುರಕ್ಷಿತ ಮತ್ತು ಆರೋಗ್ಯಕರ ಕುಡಿಯುವ ನೀರನ್ನು ಒದಗಿಸುವ ಧ್ಯೇಯವನ್ನು ಡ್ರಿಂಕ್ ಪ್ರೈಮ್ ವಿಸ್ತರಿಸಲಿದೆ ಮತ್ತು ಆ ಹೊಣೆಗಾರಿಕೆಯನ್ನು ತೆಗೆದುಕೊಳ್ಳುತ್ತದೆ ಎಂದು ಖಚಿತಪಡಿಸಿಕೊಂಡಿದ್ದೆವೆ. ನಾವು ಯೋಜನೆಯನ್ನು ನಂಬುತ್ತೇವೆ ಮತ್ತು ವರ್ಷಗಳಲ್ಲಿ ಡ್ರಿಂಕ್​ ಪ್ರೈಮ್​ ಬೆಳವಣಿಗೆ ಗಮನಿಸಿದ್ದೇವೆ. ಈಗ, ನಾವು ಡ್ರಿಂಕ್ ಪ್ರೈಮ್ ನ ತ್ವರಿತ ಬೆಳವಣಿಗೆಯನ್ನು ಎದುರು ನೋಡುತ್ತಿದ್ದೇವೆ ” ಎಂದು ಎಸ್ ಐಡಿಬಿಐ ವೆಂಚರ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫಂಡ್ ಮ್ಯಾನೇಜರ್ ದೇಬ್ರಾಜ್ ಬ್ಯಾನರ್ಜಿ ಹೇಳಿದರು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ, ಮತ್ತೆ ಚಿನ್ನದ ಮಾರುಕಟ್ಟೆಯಲ್ಲಿ ತುರುಸು; ದರಗಳು ಹೀಗಿವೆ

ಹೂಡಿಕೆಯನ್ನು ಬಳಸಿಕೊಳ್ಳುವ ಬಗ್ಗೆ ಮಾತನಾಡಿದ ಡ್ರಿಂಕ್ ಪ್ರೈಮ್ ನ ಸಹ-ಸಂಸ್ಥಾಪಕ ಮತ್ತು ಸಿಒಒ ಮಾನಸ್ ರಂಜನ್ ಹೋಟಾ, “ಈ ಕಾರ್ಯತಂತ್ರದ ಹೂಡಿಕೆಯು ವಿಸ್ತರಣಾ ಯೋಜನೆಗಳ ವೇಗವನ್ನು ದ್ವಿಗುಣಗೊಳಿಸಲು, ನಮ್ಮ ನವೀನ ಉತ್ಪನ್ನಗಳ ಪೋರ್ಟ್ ಫೋಲಿಯೊವನ್ನು ಅಭಿವೃದ್ಧಿಪಡಿಸಲು ನೆರವಾಗಲಿದೆ. ಅದೇ ರೀತಿ ನಮ್ಮ ಉದ್ಯಮದ ಪ್ರಮುಖ ಮತ್ತು ಉದ್ಯಮದ ಜೀವಾಳವಾಗಿರುವ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ವೈಶಿಷ್ಟ್ಯವನ್ನು ಬಲಪಡಿಸಲು ಡ್ರಿಂಕ್ ಪ್ರೈಮ್ ಗೆ ವಿಪುಲ ಅವಕಾಶ ನೀಡುತ್ತದೆ” ಎಂದು ಹೇಳಿದರು.

ಡ್ರಿಂಕ್ ಪ್ರೈಮ್ ನಲ್ಲಿ ದೀರ್ಘಕಾಲೀನ ಹೂಡಿಕೆದಾರರು ಹೊಂದಿರುವ ನಂಬಿಕೆ ಮತ್ತು ಸ್ಟಾರ್ಟ್ ಅಪ್ ನ ಸಾಮರ್ಥ್ಯ ಅಪೂರ್ವವಾಗಿದೆ. “ಡ್ರಿಂಕ್ ಪ್ರೈಮ್ ಕಳೆದ ಎಂಟು ವರ್ಷಗಳಿಂದ ಭಾರತದ ನೀರು ಶುದ್ಧೀಕರಣ ಮಾರುಕಟ್ಟೆಯನ್ನು ಆಳುತ್ತಿದೆ ದಶಕಗಳಿಂದ ಸ್ಥಗಿತಗೊಂಡಿದ್ದ ಉದ್ಯಮದಲ್ಲಿ ಅವರು ಅನ್ವೇಷಣೆ, ಆವಿಷ್ಕಾರ ಮತ್ತು ಬದಲಾವಣೆಯನ್ನು ಸೃಷ್ಟಿಸುವುದನ್ನು ನಾನು ನೋಡಿದ್ದೇನೆ. ಅದಕ್ಕಾಗಿಯೇ ನಾನು ಡ್ರಿಂಕ್​ಪ್ರೈಮ್​ನಲ್ಲಿ ಮರುಹೂಡಿಕೆ ಮಾಡಲು ನಿರ್ಧರಿಸಿದೆ ಎಂದು ಪಾಲಿಕ್ಯಾಬ್ ಇಂಡಿಯಾ ಲಿಮಿಟೆಡ್​​ನ ಕಾರ್ಯನಿರ್ವಾಹಕ ನಿರ್ದೇಶಕ ಭರತ್ ಜೈಸಿಂಘಾನಿ ಹೇಳಿದ್ದಾರೆ.

ಡ್ರಿಂಕ್ ಪ್ರೈಮ್ ಪ್ರಸ್ತುತ ಭಾರತದ ಏಳು ನಗರಗಳಲ್ಲಿ 2 ಲಕ್ಷಕ್ಕೂ ಹೆಚ್ಚು + ಕುಟುಂಬಗಳಿಗೆ ಶುದ್ಧ, ಸುರಕ್ಷಿತ ಮತ್ತು ಆರೋಗ್ಯಕರ ಕುಡಿಯುವ ನೀರಿನ ಲಭ್ಯತೆ ನೀಡಿದೆ. ಎಲ್ಲರಿಗೂ ಸುರಕ್ಷಿತ ಕುಡಿಯುವ ನೀರು ಲಭ್ಯವಾಗುವಂತೆ ಮಾಡುವ ತನ್ನ ಧ್ಯೇಯಕ್ಕೆ ಹತ್ತಿರವಾಗಲು ವಿಸ್ತರಣಾ ಯೋಜನೆಗಳು ಜಾರಿಯಲ್ಲಿರುವುದರಿಂದ, ಡ್ರಿಂಕ್ ಪ್ರೈಮ್ ತನ್ನ ಎರಡನೇ ಹಂತದ ನಿಧಿಸಂಗ್ರಹಕ್ಕೆ ಸಜ್ಜಾಗುತ್ತಿದೆ.

Continue Reading

ವಾಣಿಜ್ಯ

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

SBI Rates: 2023ರ ಡಿಸೆಂಬರ್‌ನಲ್ಲಿ ಎಸ್‌ಬಿಐ ಎಫ್‌ಡಿ ಮೇಲಿನ ಬಡ್ಡಿದರವನ್ನು ಹೆಚ್ಚಿಸಿತ್ತು. ಈಗ ಮತ್ತೆ 25ರಿಂದ 75 ಮೂಲಾಂಕಗಳವರೆಗೆ ಬಡ್ಡಿದರವನ್ನು ಏರಿಕೆ ಮಾಡಿದೆ. ಇದರಿಂದ ಸ್ಥಿರ ಠೇವಣಿದಾರರಿಗೆ ಭಾರಿ ಪ್ರಮಾಣದಲ್ಲಿ ಅನುಕೂಲವಾಗಲಿದೆ.

VISTARANEWS.COM


on

SBI Rates
Koo

ಮುಂಬೈ: ದೇಶದ ಅಗ್ರ ಸಾರ್ವಜನಿಕ ವಲಯದ ಬ್ಯಾಂಕ್‌ (SBI) ಆಗಿರುವ ಎಸ್‌ಬಿಐ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಸ್ಥಿರ ಠೇವಣಿದಾರರು ಬ್ಯಾಂಕ್‌ನಲ್ಲಿ ಇಟ್ಟಿರುವ ಮೊತ್ತದ ಮೇಲಿನ ಬಡ್ಡಿಯನ್ನು ಆಯಾ ಯೋಜನೆಗಳಿಗೆ ಅನ್ವಯವಾಗುವಂತೆ ಶೇ.0.25ರಿಂದ (25 ಮೂಲಾಂಕ) ಶೇ.0.75ರ (75 ಮೂಲಾಂಕ)ವರೆಗೆ ಬಡ್ಡಿದರವನ್ನು (SBI FD Interest Rates) ಏರಿಕೆ ಮಾಡಿದ್ದು, ಇದರಿಂದ ಸ್ಥಿರ ಠೇವಣಿದಾರರಿಗೆ ಭಾರಿ ಅನುಕೂಲವಾಗಲಿದೆ. ನೂತನ ಬಡ್ಡಿದರವು ಮೇ 15ರಿಂದಲೇ ಅನ್ವಯವಾಗಲಿದ್ದು, ಇದು ಗ್ರಾಹಕರ ಸಂತಸವನ್ನು ಹೆಚ್ಚಿಸಿದೆ.

7ರಿಂದ 45 ದಿನಗಳವರೆಗೆ 2 ಕೋಟಿ ರೂ. ಠೇವಣಿ ಇರಿಸಿದರೆ, ಅದರ ಮೇಲಿನ ಬಡ್ಡಿದರವನ್ನು ಬದಲಾವಣೆ ಮಾಡಿಲ್ಲ. ಆದರೆ, 46ರಿಂದ 179 ದಿನ ಠೇವಣಿ ಇಟ್ಟರೆ ಶೇ.4.75ರ ಬದಲು ಶೇ.5.50ರಷ್ಟು ಬಡ್ಡಿದರ ಸಿಗಲಿದೆ. ಹಿರಿಯ ನಾಗರಿಕರಿಗೆ ಶೇ.5.25ರ ಬದಲು ಶೇ.6ರಷ್ಟು ಬಡ್ಡಿ ಸಿಗಲಿದೆ. ಇನ್ನು ಒಂದರಿಂದ ಎರಡು ವರ್ಷದವರೆಗೆ ಸ್ಥಿರ ಠೇವಣಿ ಇರಿಸುವ ಸಾಮಾನ್ಯ (2 ಕೋಟಿ ರೂ.ಗಿಂತ ಕಡಿಮೆ ಮೊತ್ತ ಠೇವಣಿ ಇರಿಸುವವರು) ಠೇವಣಿದಾರರಿಗೆ ಶೇ.6.8ರಷ್ಟು ಹಾಗೂ ಹಿರಿಯ ನಾಗರಿಕರಿಗೆ ಶೇ.7.3ರಷ್ಟು ಬಡ್ಡಿ ಸಿಗಲಿದೆ.

ಹೀಗಿದೆ ನೂತನ ಬಡ್ಡಿದರ (2 ಕೋಟಿ ರೂ.ಗಿಂತ ಕಡಿಮೆ ಠೇವಣಿ ಮಾಡಿದವರಿಗೆ)

ಎಫ್‌ಡಿ ಅವಧಿನೂತನ ಬಡ್ಡಿದರಹಿರಿಯ ನಾಗರಿಕರಿಗೆ
180-210 ದಿನ6%6.50%
211 ದಿನದಿಂದ 1 ವರ್ಷ6.25%6.75%
1-2 ವರ್ಷ6.80%7.30%
2-3 ವರ್ಷ7%7%
3-5 ವರ್ಷ6.75%7.25%
5-10 ವರ್ಷ6.50%7.50%

ಎಫ್‌ಡಿ ಬಡ್ಡಿದರ ಏರಿಸಲು ಕಾರಣವೇನು?

ಕೊರೊನಾ ಬಿಕ್ಕಟ್ಟಿನ ನಂತರದಲ್ಲಿ ಆರ್ಥಿಕತೆಯು ಏಳಿಗೆಯತ್ತ ಸಾಗುತ್ತಿದೆ. ಇದರಿಂದ ಬ್ಯಾಂಕ್‌ಗಳಲ್ಲಿ ವಾಹಿವಾಟು ಜಾಸ್ತಿಯಾಗಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂದಿನ ದಿನಗಳಲ್ಲೂ ರೆಪೋ ದರದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಕಡಿಮೆ ಇದೆ. ಇದರಿಂದ ಗೃಹ ಸಾಲದ ಮೇಲೆ ಹೆಚ್ಚಿನ ಇಎಂಐ ಕಟ್ಟುವ ಹೊರೆಯು ಜನರಿಗೆ ಇರುವುದಿಲ್ಲ. ಹಾಗಾಗಿ, ಎಸ್‌ಬಿಐ ಸೇರಿ ಹಲವು ಬ್ಯಾಂಕ್‌ಗಳು ಜನರಿಂದ ಹೆಚ್ಚಿನ ಠೇವಣಿಯನ್ನು ಸೆಳೆಯಲು ಸ್ಥಿರ ಠೇವಣಿ ಮೇಲಿನ ಬಡ್ಡಿದರವನ್ನು ಏರಿಕೆ ಮಾಡುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: RBI Monetary Policy: ಸಾಲಗಾರರಿಗೆ ಆರ್‌ಬಿಐ ಗುಡ್‌ ನ್ಯೂಸ್;‌ ರೆಪೋ ದರ ಯಥಾಸ್ಥಿತಿ

Continue Reading

ಮನಿ ಗೈಡ್

EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ

ಉದ್ಯೋಗಿಗಳ ಭವಿಷ್ಯ ನಿಧಿ ಹೊಂದಿರುವ ಸದಸ್ಯರಿಗೆ ಇಲ್ಲಿದೆ ಗುಡ್ ನ್ಯೂಸ್. ಶಿಕ್ಷಣ, ಮದುವೆ ಮತ್ತು ವಸತಿಗಾಗಿ ಪಿಎಫ್ ನಿಂದ ಮುಂಗಡ ಹಣವನ್ನು ಪಡೆಯುವುದು ಈಗ ಸುಲಭವಾಗಿದೆ. ಈ ಬಗ್ಗೆ ನಿಯಮಗಳು (EPF Withdraw Rule) ಏನು ಹೇಳಿವೆ ಗೊತ್ತೇ? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

EPF Withdrawal Rule
Koo

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPF Withdraw Rule) ಶಿಕ್ಷಣ, ಮದುವೆ ಮತ್ತು ವಸತಿಗೆ ಸಂಬಂಧಿಸಿ ಮುಂಗಡ ಕ್ಲೈಮ್‌ಗಳಿಗಾಗಿ (advance claims) ಸ್ವಯಂ-ಮೋಡ್ ಸೆಟಲ್‌ಮೆಂಟ್ (auto-mode settlement ) ಅನ್ನು ಪರಿಚಯಿಸುವುದಾಗಿ ಘೋಷಿಸಿದೆ. ಈ ವ್ಯವಸ್ಥೆಯಲ್ಲಿ ಯಾರದೇ ಹಸ್ತಕ್ಷೇಪವಿಲ್ಲದೆ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆಯಬಹುದು ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಹೇಳಿಕೆಯ ಪ್ರಕಾರ, ಅನಿರುದ್ಧ್ ಪ್ರಸಾದ್ ಎಂಬುವರು 2024ರ ಮೇ 9ರಂದು ಪ್ಯಾರಾ 68J ಅಡಿಯಲ್ಲಿ ಅನಾರೋಗ್ಯಕ್ಕಾಗಿ ಮುಂಗಡವಾಗಿ ಅರ್ಜಿ ಸಲ್ಲಿಸಿದ್ದರು. ಅವರ ಮುಂಗಡ ಕ್ಲೈಮ್ ಅನ್ನು 2024ರ ಮೇ 11 ರಂದು 92,143 ರೂ. ಅನ್ನು ಮೂರು ದಿನಗಳ ಒಳಗೆ ಇತ್ಯರ್ಥಪಡಿಸಲಾಗಿದೆ. ಇಂತಹ ಹಲವು ಮಂದಿ ಇಪಿಎಫ್‌ಒನಲ್ಲಿ ಮುಂಗಡ ಕ್ಲೈಮ್ ಪಾವತಿಯ ಪ್ರಯೋಜನವನ್ನು ಪಡೆದಿದ್ದಾರೆ.

ಇಪಿಎಫ್‌ಒ ಆಟೋ ಮೋಡ್ ಸೆಟಲ್ಮೆಂಟ್

ಅನಾರೋಗ್ಯದ ಕಾರಣಕ್ಕಾಗಿ ಮುಂಗಡ ಕ್ಲೈಮ್ ಮಾಡಲು 2020ರ ಏಪ್ರಿಲ್ ನಲ್ಲಿ ಕ್ಲೈಮ್ ಸೆಟ್ಲ್ ಮೆಂಟ್ ಸ್ವಯಂ ಮೋಡ್ ಅನ್ನು ಪರಿಚಯಿಸಲಾಯಿತು. ಈಗ ಈ ಮಿತಿಯನ್ನು 1 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸುಮಾರು 2.25 ಕೋಟಿ ಸದಸ್ಯರು ಈ ಸೌಲಭ್ಯದ ಲಾಭವನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

2023- 24ರ ಹಣಕಾಸು ವರ್ಷದಲ್ಲಿ ಇಪಿಎಫ್‌ಒ ಸುಮಾರು 4.45 ಕೋಟಿ ಕ್ಲೈಮ್‌ಗಳನ್ನು ಇತ್ಯರ್ಥಪಡಿಸಿದೆ. ಅದರಲ್ಲಿ ಶೇ. 60ಕ್ಕಿಂತ ಹೆಚ್ಚು ಮಂದಿ ಒಟ್ಟು 2.84 ಕೋಟಿ ಕ್ಲೈಮ್‌ಗಳು ಮುಂಗಡ ಕ್ಲೈಮ್‌ಗಳಾಗಿವೆ. ವರ್ಷದಲ್ಲಿ ಇತ್ಯರ್ಥವಾದ ಒಟ್ಟು ಮುಂಗಡ ಕ್ಲೇಮ್‌ಗಳಲ್ಲಿ ಸುಮಾರು 89.52 ಲಕ್ಷ ಕ್ಲೇಮ್‌ಗಳನ್ನು ಇತ್ಯರ್ಥಗೊಳಿಸಲಾಗಿದೆ.

ಪಿಎಫ್ ಹಿಂಪಡೆಯುವುದು ಹೇಗೆ?

ಇಪಿಎಫ್ ಸದಸ್ಯರು ನಿಯಮ 68J ಅಡಿಯಲ್ಲಿ ವೈದ್ಯಕೀಯ ಕಾಯಿಲೆಗಳಿಗೆ ಇಪಿಎಫ್ ಹಿಂತೆಗೆದುಕೊಳ್ಳುವಿಕೆಗೆ ಅನ್ವಯಿಸಲು ನಿಯಮಗಳನ್ನು ತಿಳಿದಿರಬೇಕು, ನಿಯಮ 68K ಅಡಿಯಲ್ಲಿ ಮದುವೆ ಅಥವಾ ಉನ್ನತ ಶಿಕ್ಷಣ ಮತ್ತು ನಿಯಮ 68B ಅಡಿಯಲ್ಲಿ ವಸತಿ ಸೌಲಭ್ಯಕ್ಕಾಗಿ ಮುಂಗಡವನ್ನು ಪಡೆಯಬಹುದು.

ನಿಯಮ 68 ಜೆ

ಇಪಿಎಫ್ ಸದಸ್ಯರು ಉದ್ಯೋಗದಾತ ಅಥವಾ ವೈದ್ಯರಿಂದ ಸಹಿ ಮಾಡಿದ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ವೈದ್ಯಕೀಯ ಕ್ಲೈಮ್‌ಗಾಗಿ, ಇಪಿಎಫ್ ಯೋಜನೆಗೆ ಎಷ್ಟು ವರ್ಷಗಳವರೆಗೆ ಅನ್ವಯಿಸಲಾಗಿದೆ ಎಂಬ ನಿಯಮವಿಲ್ಲ.

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ನಿಯಮ 68K

ಮದುವೆ ಅಥವಾ ಉನ್ನತ ಶಿಕ್ಷಣದ ಉದ್ದೇಶಗಳಿಗಾಗಿ ಪಿಎಫ್ ಹಣವನ್ನು ಹಿಂಪಡೆಯಲು ಇಪಿಎಫ್ ಸದಸ್ಯರು ಇಪಿಎಫ್‌ಒನೊಂದಿಗೆ 7 ವರ್ಷಗಳನ್ನು ಪೂರ್ಣಗೊಳಿಸಬೇಕು. ಇಪಿಎಫ್ ಸದಸ್ಯರು ಅದನ್ನು ಆನ್‌ಲೈನ್ ಸ್ವರೂಪದಲ್ಲಿ ಘೋಷಿಸಬೇಕಾಗುತ್ತದೆ. ಆದ್ದರಿಂದ ಅವರು ತಮ್ಮ ಷೇರಿನ ಗರಿಷ್ಠ ಶೇ. 50ರಷ್ಟನ್ನು ಬಡ್ಡಿಯೊಂದಿಗೆ ಹಿಂತೆಗೆದುಕೊಳ್ಳಬಹುದು.

ನಿಯಮ 68B

ಫ್ಲಾಟ್/ಮನೆಯನ್ನು ಖರೀದಿಸಲು ಅಥವಾ ನಿರ್ಮಿಸಲು, ಇಪಿಎಫ್ ಸದಸ್ಯರು ಇಪಿಎಫ್‌ಒನೊಂದಿಗೆ ಐದು ವರ್ಷಗಳನ್ನು ಪೂರ್ಣಗೊಳಿಸಬೇಕು. ಇಪಿಎಫ್‌ಒ ಮನೆಯ ದುರಸ್ತಿ ಮತ್ತು ನವೀಕರಣಕ್ಕಾಗಿ ಮುಂಗಡ ಹಿಂತೆಗೆದುಕೊಳ್ಳುವಿಕೆಯನ್ನು ಸಹ ಅನುಮತಿಸುತ್ತದೆ. ಇದನ್ನು ಎರಡು ಬಾರಿ ಮಾಡಬಹುದು. ಹಿಂಪಡೆಯಬಹುದಾದ ಮೊತ್ತವು ಉದ್ದೇಶವನ್ನು ಅವಲಂಬಿಸಿರುತ್ತದೆ. ಶೇ.90ರವರೆಗೂ ಹಣ ಹಿಂಪಡೆಯಲು ಸಾಧ್ಯ.

Continue Reading
Advertisement
BMW X3 xDrive20d
ಪ್ರಮುಖ ಸುದ್ದಿ11 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ13 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್18 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ22 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

viral video
ಕ್ರಿಕೆಟ್26 mins ago

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Sita Temple
ದೇಶ28 mins ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ37 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ42 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್51 mins ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Hoarding Collapse
ದೇಶ57 mins ago

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಟ್ರೆಂಡಿಂಗ್‌