Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು - Vistara News

ವಾಣಿಜ್ಯ

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

ಭಾರತದಿಂದ 2022-23ರಲ್ಲಿ ಒಟ್ಟು 85,000 ಕೋಟಿ ರೂ. ಮೌಲ್ಯದ ಮೊಬೈ;ಲ್‌ ಫೋನ್‌ ರಫ್ತಾಗಿದೆ. ಕೇಂದ್ರ ಸರ್ಕಾರ ಸ್ಥಳೀಯ ಉತ್ಪಾದನೆಗೆ ಉತ್ತೇಜನ ನೀಡುತ್ತಿರುವುದು ಸಕಾರಾತ್ಮಕ (Mobile export) ಪ್ರಭಾವ ಬೀರಿದೆ.

VISTARANEWS.COM


on

smartphone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದಿಂದ 2022-23ರಲ್ಲಿ ಒಟ್ಟು 85,000 ಕೋಟಿ ರೂ. ಮೌಲ್ಯದ (Mobile Export) ಮೊಬೈಲ್‌ ಹ್ಯಾಂಡ್‌ಸೆಟ್‌ ರಫ್ತಾಗಿದೆ ಎಂದು ಶನಿವಾರ ಬಿಡುಗಡೆಯಾದ ಇಂಡಿಯಾ ಸೆಲ್ಯುಲಾರ್‌ & ಎಲೆಕ್ಟ್ರಾನಿಕ್ಸ್‌ ಅಸೋಸಿಯೇಶನ್‌ನ (India Cellular and Electronics Association) ಅಂಕಿ ಅಂಶಗಳು ತಿಳಿಸಿವೆ.

ಕಳೆದ 2021-22ರ ಸಾಲಿನಲ್ಲಿ 46,980 ಕೋಟಿ ರೂ. ಮೌಲ್ಯದ ಮೊಬೈಲ್‌ ಹ್ಯಾಂಡ್‌ಸೆಟ್‌ ರಫ್ತಾಗಿತ್ತು. ಉತ್ಪಾದಕರು ಮೊಬೈಲ್‌ ಉತ್ಪಾದನೆ ಮತ್ತು ರಫ್ತನ್ನು ವೃದ್ಧಿಸಿರುವುದು ಇದಕ್ಕೆ ಕಾರಣ. ಸ್ಥಳೀಯವಾಗಿ ಮೊಬೈಲ್‌ ಫೋನ್‌ ಉತ್ಪಾದನೆಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಉಪಕ್ರಮಗಳು (production linked incentive) ಫಲ ನೀಡುತ್ತಿವೆ. ಆ್ಯಪಲ್‌ನ ಉತ್ಪಾದನೆಯಲ್ಲಿ ಉಂಟಾಗಿರುವ ಹೆಚ್ಚಳ, ಸ್ಯಾಮ್‌ಸಂಗ್‌ ಸೇರಿದಂತೆ ಇತರ ಕಂಪನಿಗಳೂ ಹ್ಯಾಂಡ್‌ ಸೆಟ್‌ ಉತ್ಪಾದನೆಯನ್ನು ಹೆಚ್ಚಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಭಾರತ 2027ರ ವೇಳೆಗೆ ಐಫೋನ್‌ನ 47% ಪಾಲನ್ನು ತಯಾರಿಸುವ ನಿರೀಕ್ಷೆ ಇದೆ.

ರಾಜ್ಯಗಳಲ್ಲಿ ಎಲೆಕ್ಟ್ರಾನಿಕ್ಸ್‌ ಉತ್ಪಾದನೆಯನ್ನು ಹೆಚ್ಚಿಸಲು ಎಲ್ಲ ರಾಜ್ಯಗಳ ಐಟಿ ಸಚಿವರುಗಳ ಜತೆಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ನಿಯಮಿತವಾಗಿ ಸಭೆ ನಡೆಸುತ್ತಿದ್ದಾರೆ.

ಭಾರತವು ಮೊಬೈಲ್‌ ಫೋನ್‌ಗಳನ್ನು ಯುಎಇ, ಅಮೆರಿಕ, ನೆದರ್ಲೆಂಡ್‌, ಬ್ರಿಟನ್‌, ಇಟಲಿಗೆ ರಫ್ತು ಮಾಡುತ್ತಿದೆ ಎಂದು ಐಸಿಇಎ ವರದಿ ತಿಳಿಸಿದೆ. ಭಾರತದಲ್ಲಿ ಮಾರಾಟವಾಗುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ 97% ಸ್ಥಳೀಯವಾಗಿ ಉತ್ಪಾದನೆಯಾಗುತ್ತಿವೆ. ಜಗತ್ತಿನಲ್ಲಿಯೇ ಎರಡನೇ ಅತಿ ದೊಡ್ಡ ಮೊಬೈಲ್‌ ಉತ್ಪಾದಕ ಈಗ ಭಾರತವಾಗಿದೆ.

2023ರಲ್ಲಿ ಭಾರತವು 1 ಲಕ್ಷ ಕೋಟಿ ಸ್ಮಾರ್ಟ್‌ ಫೋನ್‌ಗಳನ್ನು ರಫ್ತು ಮಾಡಿ ಹೊಸ ದಾಖಲೆ ಸೃಷ್ಟಿಸಲಿದೆ ಎಂದು ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ ಖಾತೆಯ ಸಹಾಯಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಸ್ಮಾರ್ಟ್‌ಫೋನ್‌ ಪೂರೈಕೆಯ ಸರಣಿ ಚೀನಾದಿಂದ ಸ್ಥಳಾಂತರವಾಗುವುದರ ಪ್ರಯೋಜನವನ್ನು ಭಾರತ ಮತ್ತು ವಿಯೆಟ್ನಾಂ ಪಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Chinese visa scam : ಚೀನಾ ವೀಸಾ ಹಗರಣ: ಕಾರ್ತಿ ಚಿದಂಬರಂ ಸೇರಿ ಹಲವರಿಗೆ ಕೋರ್ಟ್​​ ಸಮನ್ಸ್

Chinese visa scam : ಕಾರ್ತಿ ಚಿದಂಬರಂ ಅವರ ಮಾಜಿ ಚಾರ್ಟರ್ಡ್ ಅಕೌಂಟೆಂಟ್ ಎಸ್ ಭಾಸ್ಕರರಾಮನ್ ಮತ್ತು ಉಳಿದ ಕಂಪನಿಗಳ ಪ್ರತಿನಿಧಿಗಳಿಗೆ ಏಪ್ರಿಲ್ 5 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

VISTARANEWS.COM


on

Karti Chidambaram
Koo

ನವದೆಹಲಿ,: ಚೀನಾದ ವೀಸಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಇತರರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ಸಲ್ಲಿಸಿದ ನಂತರ ಕಾರ್ತಿ ಚಿದಂಬರಂ ಮತ್ತು ಇತತರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ವಿಶೇಷ ನ್ಯಾಯಾಧೀಶ ಎಂ.ಕೆ.ನಾಗಪಾಲ್ ಅವರು ಕಾರ್ತಿ ಚಿದಂಬರಂ ಮತ್ತು ಇತರರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಪದಮ್ ದುಗರ್, ವಿಕಾಸ್ ಮಖಾರಿಯಾ, ಮನ್ಸೂರ್ ಸಿದ್ದಿಕಿ, ದುಗರ್ ಹೌಸಿಂಗ್ ಲಿಮಿಟೆಡ್, ಅಡ್ವಾಂಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಮತ್ತು ತಲ್ವಾಂಡಿ ಸಾಬೊ ಪವರ್ ಲಿಮಿಟೆಡ್ ಈ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿರುವ ಹೆಸರುಗಳು.

ಕಾರ್ತಿ ಚಿದಂಬರಂ ಅವರ ಮಾಜಿ ಚಾರ್ಟರ್ಡ್ ಅಕೌಂಟೆಂಟ್ ಎಸ್ ಭಾಸ್ಕರರಾಮನ್ ಮತ್ತು ಕೆಲವು ಕಂಪನಿಗಳ ಪ್ರತಿನಿಧಿಗಳಿಗೆ ಏಪ್ರಿಲ್ 5 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಕಾರ್ತಿ ಅವರ ತಂದೆ ಪಿ.ಚಿದಂಬರಂ ಯುಪಿಎ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಗೃಹ ಸಚಿವರಾಗಿದ್ದಾಗ 2011 ರಲ್ಲಿ 263 ಚೀನೀ ಪ್ರಜೆಗಳಿಗೆ ವೀಸಾಗಳನ್ನು ನೀಡಿದ್ದ ಪ್ರಕರಣ ಇದಾಗಿದೆ. ಅವರ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ.

ಇದನ್ನೂ ಓದಿ : ರ್ಯಾಲಿಯ ಭಾಷಣದಲ್ಲಿ ಭಾವುಕರಾದ ಪ್ರಧಾನಿ ಮೋದಿ; ಅವರು ಹೇಳಿದ್ದೇನು?

ಈ ಪ್ರಕರಣದಲ್ಲಿ ಹಣ ವರ್ಗಾವಣೆ ಮಾಡಿದ ಹಣದ ನಿಜವಾದ ಪ್ರಮಾಣ ಅಥವಾ ಪ್ರಮಾಣವನ್ನು ಇನ್ನೂ ಗೊತ್ತಾಗಿಲ್ಲ. ಕೇಂದ್ರ ತನಿಖಾ ದಳ (ಸಿಬಿಎಲ್) ಉಲ್ಲೇಖಿಸಿದಂತೆ 50 ಲಕ್ಷ ರೂ.ಗಳ ಲಂಚವನ್ನು ಪ್ರಸ್ತುತ ಪ್ರಕರಣದ ಆಧಾರವೆಂದು ಪರಿಗಣಿಸಲಾಗುವುದಿಲ್ಲ ಎಂದು ಇಡಿ ಹೇಳಿದೆ.

ಇದೇ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್ಐಆರ್ ಅನ್ನು ಗಮನದಲ್ಲಿಟ್ಟುಕೊಂಡು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಇಡಿ ತನ್ನ ಪ್ರಕರಣವನ್ನು ದಾಖಲಿಸಿದೆ.

Continue Reading

ವಾಣಿಜ್ಯ

Unilever Comapny: ಐಸ್‌ಕ್ರೀಮ್‌ ಉದ್ಯಮದಿಂದ ಹಿಂದೆ ಸರಿದ ಯೂನಿಲಿವರ್ ಕಂಪೆನಿ; 7,500 ಉದ್ಯೋಗ ಕಡಿತದ ಸೂಚನೆ

Unilever Comapny: ಗ್ರಾಹಕರ ಅಚ್ಚುಮೆಚ್ಚಿನ, ಇಂಗ್ಲೆಂಡ್‌ ಮೂಲದ ಕಂಪೆನಿ ಯೂನಿಲಿವರ್ ಐಸ್‌ಕ್ರೀಮ್‌ ಉದ್ಯಮದಿಂದ ಹಿಂದೆಕ್ಕೆ ಸರಿಯುವ ನಿರ್ಧಾರ ಪ್ರಕಟಿಸಿದೆ.

VISTARANEWS.COM


on

uniliver
Koo

ನವದೆಹಲಿ: ಗ್ರಾಹಕರ ಅಚ್ಚುಮೆಚ್ಚಿನ, ಇಂಗ್ಲೆಂಡ್‌ ಮೂಲದ ಕಂಪೆನಿ ಯೂನಿಲಿವರ್ (Unilever Comapny) ಮಂಗಳವಾರ (ಮಾರ್ಚ್‌ 19) ಹೊಸದೊಂದು ತೀರ್ಮಾನ ಪ್ರಕಟಿಸಿದೆ. ಐಸ್‌ಕ್ರೀಮ್‌ ಬ್ರ್ಯಾಂಡ್‌ಗಳಾದ ಮ್ಯಾಗ್ನುಮ್ (Magnum) ಮತ್ತು ಬೆನ್ & ಜೆರ್ರಿ (Ben & Jerry’s)ಯಿಂದ ಬೇರ್ಪಡುವುದಾಗಿ ಘೋಷಿಸಿದೆ. ಜತೆಗೆ ವೆಚ್ಚ ತಗ್ಗಿಸುವ ಕ್ರಮಗಳನ್ನೂ ಪ್ರಕಟಿಸಿದ್ದು, ಜಗತ್ತಿನಾದ್ಯಂತ 7,500 ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಇದರಿಂದ 3 ವರ್ಷಗಳಲ್ಲಿ ಕಂಪೆನಿಗೆ ಸುಮಾರು 800 ಮಿಲಿಯನ್‌ ಡಾಲರ್‌ (66,384,240,000 ರೂ.) ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ. ಐಸ್‌ಕ್ರೀಮ್‌ ವಿಭಾಗವು 2023ರಲ್ಲಿ 8.6 ಬಿಲಿಯನ್ ಡಾಲರ್ (71,36,37,460 ರೂ.) ವ್ಯವಹಾರ ದಾಖಲಿಸಿದೆ.

ಕಾರಣವೇನು?

ಐಸ್‌ಕ್ರೀಮ್‌ ಉದ್ಯಮದಿಂದ ಹಿಂದೆ ಸರಿಯಲಿರುವ ಕಾರಣವನ್ನು ಯೂನಿಲಿವರ್‌ ಕಂಪೆನಿ ತಿಳಿಸಿದೆ. ಕಂಪೆನಿಯ ಪುನರ್‌ ರಚನೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಕಂಪೆನಿ 4 ವಿಭಾಗಗಳ ಉತ್ಪನ್ನಗಳತ್ತ ಗಮನ ಹರಿಸಲು ನಿರ್ಧರಿಸಿದೆ. ಸೌಂದರ್ಯ ಮತ್ತು ಯೋಗಕ್ಷೇಮ, ವೈಯಕ್ತಿಕ ಆರೈಕೆ, ಮನೆ ಆರೈಕೆ ಮತ್ತು ಪೋಷಣೆಯ ವ್ಯವಹಾರಗಳತ್ತ ಗಮನ ಕೇಂದ್ರೀಕರಿಸಲಿದೆ. ಹೀಗಾಗಿ ಈತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಯೂನಿಲಿವರ್‌ನ ಪ್ರತಿಸ್ಪರ್ಧಿ ನೆಸ್ಲೆ ಎಸ್ಎ ಈ ಹಿಂದೆ ಖಾಸಗಿ ಈಕ್ವಿಟಿ ಸಂಸ್ಥೆ ಪಿಎಐ ಪಾರ್ಟ್‌ನರ್ಸ್‌ (PAI Partners)ನೊಂದಿಗೆ ಜಂಟಿ ಉದ್ಯಮವನ್ನು ಸ್ಥಾಪಿಸುವ ಮೂಲಕ ತನ್ನ ಐಸ್‌ಕ್ರೀಮ್ ವ್ಯವಹಾರವನ್ನು ಬೇರ್ಪಡಿಸಿತ್ತು.

ಬೆನ್ & ಜೆರ್ರಿಯ ರಾಜಕೀಯ ನಿಲುವುಗಳಿಂದ ಹಲವು ಬಾರಿ ವಿವಾದ ಏರ್ಪಟ್ಟಿತ್ತು. ಇದೀಗ ಐಸ್‌ಕ್ರೀಮ್‌ ಉದ್ಯಮದಿಂದ ಬೇರ್ಪಡಿಸುವುದರಿಂದ ಯೂನಿಲಿವರ್‌ಗೆ ದೊಡ್ಡ ತಲೆನೋವು ಕಡಿಮೆಯಾದಂತಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತದೆ. 2022ರ ಡಿಸೆಂಬರ್‌ನಲ್ಲಿ ಯೂನಿಲಿವರ್ ತನ್ನ ಉತ್ಪನ್ನಗಳನ್ನು ಇಸ್ರೇಲಿ ಆಕ್ರಮಿತ ವೆಸ್ಟ್ ಬ್ಯಾಂಕ್‌ನಲ್ಲಿ ಮಾರಾಟ ಮಾಡಲು ಆಕ್ಷೇಪ ವ್ಯಕ್ತಪಡಿಸಿತ್ತು. ನಂತರ ಬೆನ್ & ಜೆರ್ರಿಯ ನ್ಯಾಯಾಲಯದ ಮೆಟ್ಟಿಲೇರಿತ್ತು.

ವೆಚ್ಚ ಕಡಿತದ ಯೋಜನೆ

ಉದ್ಯೋಗ ಕಡಿತದ ಬಗ್ಗೆ ಸಮರ್ಥಿಸಿದ ಕಂಪೆನಿ ಮೂಲಗಳು, ಪ್ರಸ್ತಾವಿತ ವೆಚ್ಚ ಉಳಿತಾಯವು ಲಾಭವನ್ನು ಹೆಚ್ಚಿಸಲಿದೆ. ಇದರಿಂದ ಸಂಶೋಧನೆ, ಅಭಿವೃದ್ಧಿ ಮತ್ತು ಮಾರ್ಕೆಟಿಂಗ್‌ನಲ್ಲಿ ಮತ್ತಷ್ಟು ಹೂಡಿಕೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿವೆ. ಯೂನಿಲಿವರ್‌ನ ಆದಾಯವು 2023ರ ಕೊನೆಯ ತ್ರೈಮಾಸಿಕದಲ್ಲಿ ಶೇಕಡಾ 4.7 ರಷ್ಟು ಹೆಚ್ಚಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ದೈತ್ಯ ಕಂಪೆನಿ ಇಂಟರ್‌ನ್ಯಾಷನಲ್‌ ಬ್ಯುಸಿನೆಸ್ ಮೆಷಿನ್ಸ್ ಕಾರ್ಪ್ (International Business Machines Corp) ಉದ್ಯೋಗ ಕಡಿತಕ್ಕೆ ಮುಂದಾಗಿತ್ತು. ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗದಲ್ಲಿ ಉದ್ಯೋಗ ಕಡಿತವಾಗಲಿದೆ ಎನ್ನಲಾಗಿದೆ. ಐಬಿಎಂ 3,900 ಜನರನ್ನು ಕೆಲಸದಿಂದ ತೆಗೆಯಲಿರುವುದಾಗಿ ಜನವರಿಯಲ್ಲಿ ಹೇಳಿತ್ತು. ಈ ಕಾರ್ಯದಿಂದ ಸಂಸ್ಥೆಗೆ 400 ಮಿಲಿಯನ್ ಡಾಲರ್ (33,12,92,00,000 ರೂ.) ಹಣ ಉಳಿತಾಯವಾಗಬಹುದು ಎನ್ನುವ ನಿರೀಕ್ಷೆ ಇದೆ. ಈ ಹಣವನ್ನು ಪುನಾರಚನೆ ಕಾರ್ಯಗಳಿಗೆ ಬಳಸಲಾಗುವುದು ಎಂದು ಅಂದು ಐಬಿಎಂನ ಚೀಫ್ ಫೈನಾನ್ಷಿಯಲ್ ಆಫೀಸರ್ ಜೇಮ್ಸ್ ಕೆವನಾಘ್ ತಿಳಿಸಿದ್ದರು.

ಇದನ್ನೂ ಓದಿ: Lays off: 200 ಉದ್ಯೋಗಿಗಳ ಹಬ್ಬದ ಖುಷಿ ಕಿತ್ತುಕೊಂಡ ಎಲ್‌&ಟಿ ಟೆಕ್ನಾಲಜಿ ಸರ್ವೀಸ್!

ಜತೆಗೆ ಪೇಟಿಎಂ ಮಾತೃಸಂಸ್ಥೆ ಒನ್ 97 ಕಮ್ಯುನಿಕೇಷನ್ಸ್ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆಯ ಭಾಗವಾಗಿ ತನ್ನ ಎಲ್ಲ ವಿಭಾಗಗಳಲ್ಲಿ ಉದ್ಯೋಗಿಗಳನ್ನು ಕಡಿತ ಮಾಡಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಉದ್ಯೋಗ ಕಳೆದುಕೊಳ್ಳಲಿರುವವರ ನಿಖರ ಸಂಖ್ಯೆಯನ್ನು ಕಂಪೆನಿ ಬಹಿರಂಗಪಡಿಸಲಾಗಿಲ್ಲವಾದರೂ ಎರಡು ವಾರಗಳಲ್ಲಿ ತಂಡದ ಗಾತ್ರವನ್ನು ಶೇ. 20ರವರೆಗೆ ಕಡಿಮೆ ಮಾಡಲು ಕೆಲವು ವಿಭಾಗಗಳಿಗೆ ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮನಿ-ಗೈಡ್

Money Guide: ಪಾಸ್‌ಪೋರ್ಟ್‌ ನವೀಕರಣ ಈಗ ಸುಲಭ; ಆನ್‌ಲೈನ್‌ನಲ್ಲಿ ರಿನೀವಲ್‌ ಮಾಡುವ ವಿಧಾನ ಇಲ್ಲಿದೆ

Money Guide: ನಿಮ್ಮ ಪಾಸ್‌ಪೋರ್ಟ್‌ನ ಅವಧಿ ಮುಗಿಯುವ ಹಂತಕ್ಕೆ ತಲುಪಿದ್ದರೆ, ಕೊನೆಯ ಕ್ಷಣದಲ್ಲಿ ಉಂಟಾಗುವ ಗೊಂದಲದಿಂದ ತಪ್ಪಿಸಲು ಕೂಡಲೇ ನವೀಕರಣಕ್ಕೆ ಅರ್ಜಿ ಸಲ್ಲಿಸಿ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರಿಗೆ ಮಾರ್ಗದರ್ಶನ ಇಲ್ಲಿದೆ.

VISTARANEWS.COM


on

Passport Renewal
Koo

ಬೆಂಗಳೂರು: ಪಾಸ್‌ಪೋರ್ಟ್‌ (Passport) ಎಂಬುದು ನಿಮ್ಮ ಗುರುತು ಮತ್ತು ರಾಷ್ಟ್ರೀಯತೆಯನ್ನು ದೃಢೀಕರಿಸುವ ಅಗತ್ಯ ದಾಖಲೆಯಾಗಿದ್ದು, ಇದು ಪ್ರವಾಸ, ವ್ಯವಹಾರ ಅಥವಾ ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶಗಳಿಗೆ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ. ಇದರ ಅವಧಿ ವಯಸ್ಕರಿಗೆ ನೀಡಿದ ದಿನಾಂಕದಿಂದ ಹತ್ತು ವರ್ಷಗಳವರೆಗೆ. ಅಪ್ರಾಪ್ತ ವಯಸ್ಕರಿಗೆ ಐದು ವರ್ಷಗಳವರೆಗೆ ಅಥವಾ ಅವರಿಗೆ 18 ವರ್ಷ ತುಂಬುವವರೆಗೆ ಚಾಲ್ತಿಯಲ್ಲಿರುತ್ತದೆ. ಅದಾದ ಬಳಿಕ ನವೀಕರಣಗೊಳಿಸಬೇಕಾಗುತ್ತದೆ (Passport Renewal). ನಿಮ್ಮ ಉದ್ದೇಶಿತ ಪ್ರಯಾಣದ ಮೇಲೆ ಪರಿಣಾಮ ಬೀರದಿರಲು ಅವಧಿ ಮುಗಿಯುವ ಕನಿಷ್ಠ ಒಂಬತ್ತು ತಿಂಗಳ ಮೊದಲು ನವೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ತಜ್ಞರು ಸಲಹೆ ನೀಡುತ್ತಾರೆ. ಪಾಸ್‌ಪೋರ್ಟ್‌ ಅನ್ನು ಆನ್‌ಲೈನ್‌ನಲ್ಲಿಯೇ ನವೀಕರಿಸುವುದು ಹೇಗೆ ಎನ್ನುವ ಮಾಹಿತಿ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಆನ್‌ಲೈನ್‌ನಲ್ಲಿ ಪಾಸ್‌ಪೋರ್ಟ್‌ ನವೀಕರಿಸುವ ವಿಧಾನ

  • ಪಾಸ್‌ಪೋರ್ಟ್‌ ಸೇವಾ ವೆಬ್‌ಸೈಟ್‌ https://passportindia.gov.in/ಗೆ ಭೇಟಿ ನೀಡಿ.
  • ಹೊಸಬರಾಗಿದ್ದರೆ ಹೆಸರು ನೋಂದಾಯಿಸಿ. ಮೊದಲೇ ಹೆಸರು ನೋಂದಾಯಿಸಿದ್ದರೆ ಲಾಗಿನ್‌ ಆಗಿ.
  • ‘Apply for Fresh Passport/Re-issue of Passportʼ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ‘Click here to fill the application formʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ನಿಮ್ಮ ಹೆಸರು, ವಿಳಾಸ, ವೈಯಕ್ತಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ತುರ್ತು ಸಂದರ್ಭದಲ್ಲಿ ಸಂಪರ್ಕಿಸಬೇಕಾದ ಫೋನ್‌ ನಂಬರ್‌ ಮತ್ತು ಹಿಂದಿನ ಪಾಸ್‌ಪೋರ್ಟ್‌ನ ಮಾಹಿತಿ ನಮೂದಿಸಿ.
  • Self-declarationಗೆ ಒಪ್ಪಿಗೆ ಸೂಚಿಸಿ ಮತ್ತು Submit ಬಟನ್‌ ಕ್ಲಿಕ್‌ ಮಾಡಿ.
  • ಫಾರಂ ಸಲ್ಲಿಸಿದ ನಂತರ ಪಾಸ್‌ಪೋರ್ಟ್‌ ನವೀಕರಣ ಶುಲ್ಕವನ್ನು ಪಾವತಿಸಿ ಮತ್ತು ಅಪಾಯಿಂಟ್‌ಮೆಂಟ್‌ ದಿನಾಂಕ ನಿಗದಿಪಡಿಸಿ.

ಅಪಾಯಿಂಟ್‌ಮೆಂಟ್‌ ನಿಗದಿಪಡಿಸುವುದು ಹೇಗೆ?

  • ಪಾಸ್‌ಪೋರ್ಟ್‌ ಸೇವಾ ವೆಬ್‌ಸೈಟ್‌ https://passportindia.gov.in/ಗೆ ಭೇಟಿ ನೀಡಿ ಲಾಗಿನ್‌ ಆಗಿ.
  • ‘View Saved and Submitted Application’ ಬಟನ್‌ ಸೆಲೆಕ್ಟ್‌ ಮಾಡಿ ‘Pay and Schedule Appointmentʼ ಆಪ್ಶನ್‌ ಆಯ್ಕೆ ಮಾಡಿ
  • ಶುಲ್ಕ ಪಾವತಿ ವಿಧಾನ ಆಯ್ಕೆ ಮಾಡಿ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಆರಿಸಿ.
  • ಕ್ಯಾಪ್ಚಾ ಕೋಡ್‌ ನಮೂದಿಸಿ ನಿಮ್ಮ ಸೇವಾಕೇಂದ್ರವನ್ನು ದೃಢಪಡಿಸಿ.
  • ಲಭ್ಯವಿರುವ ದಿನಾಂಕಗಳಿಂದ ಅನುಕೂಲಕರ ಸ್ಲಾಟ್ ಆಯ್ಕೆ ಮಾಡಿ ಮತ್ತು ‘Pay and Book the Appointmentʼ ಆಪ್ಶನ್‌ ಸೆಲೆಕ್ಟ್‌ ಮಾಡಿ.

ನವೀಕರಣ ಶುಲ್ಕ ಎಷ್ಟು?

ನವೀಕರಣ ಶುಲ್ಕಗಳು ವಯಸ್ಸು, ಪುಸ್ತಕದ ಪುಟ ಮತ್ತು ಆಯ್ಕೆ ಮಾಡಿದ ಪಾಸ್‌ಪೋರ್ಟ್‌ (ಸಾಮಾನ್ಯ ಅಥವಾ ತತ್ಕಾಲ್) ಆಧಾರದ ಮೇಲೆ ಬದಲಾಗುತ್ತವೆ. ತತ್ಕಾಲ್ ಪಾಸ್‌ಪೋರ್ಟ್‌ಗೆ 2.000 ರೂ.ಗಳ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ಅಗತ್ಯ ದಾಖಲೆಗಳು

ನವೀಕರಣಕ್ಕೆ ಮೂಲ ಪಾಸ್‌ಪೋರ್ಟ್‌, ಅರ್ಜಿ ಸ್ವೀಕೃತಿ, ಸಂಬಂಧಿತ ಪುಟಗಳ ಸ್ವಯಂ-ದೃಢೀಕರಿಸಿದ ಪ್ರತಿಗಳು, ವಿಳಾಸದ ಪುರಾವೆ ಮತ್ತು ಇತರ ನಿರ್ದಿಷ್ಟ ದಾಖಲೆಗಳು ಅಗತ್ಯ. ದಾಖಲೆಗಳನ್ನು ಅಪ್‌ಲೋಡ್‌ ಮಾಡಿದ ನಂತರ, ನವೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೀವು ನಿರ್ದಿಷ್ಟ ದಿನಾಂಕದಂದು ಪಾಸ್‌ಪೋರ್ಟ್‌ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ.

ಪಾಸ್‌ಪೋರ್ಟ್‌ ನವೀಕರಣವನ್ನು ಪರೀಶೀಲಿಸುವ ವಿಧಾನ

  • ಪಾಸ್‌ಪೋರ್ಟ್‌ ಸೇವಾ ವೆಬ್‌ಸೈಟ್‌ https://passportindia.gov.in/ಗೆ ಭೇಟಿ ನೀಡಿ ಲಾಗಿನ್‌ ಆಗಿ.
  • ‘Track application statusʼ ಆಪ್ಶನ್‌ ಆಯ್ಕೆ ಮಾಡಿ.
  • ಅಪ್ಲಿಕೇಷನ್‌ ಮಾದರಿ, ಫೈಲ್‌ ನಂಬರ್‌ ಮತ್ತು ಡೇಟ್‌ ಆಫ್‌ ಬರ್ತ್‌ ನಮೂದಿಸಿ.
  • ‘Track Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

ಎಷ್ಟು ಸಮಯ ಬೇಕು?

ನವೀಕರಣ ಪ್ರಕ್ರಿಯೆಯ ಸಮಯವು ಆಯ್ಕೆ ಮಾಡಿದ ಪಾಸ್‌ಪೋರ್ಟ್‌ ಮಾದರಿಯನ್ನು ಅವಲಂಬಿಸಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ 30-60 ದಿನಗಳನ್ನು ತೆಗೆದುಕೊಂಡರೆ, ತತ್ಕಾಲ್ ಪಾಸ್‌ಪೋರ್ಟ್‌ 3-7 ದಿನಗಳಲ್ಲಿ ತ್ವರಿತವಾಗಿ ನವೀಕರಣಗೊಳ್ಳುತ್ತದೆ.

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲ ಎಂಬ ಚಕ್ರವ್ಯೂಹಕ್ಕೆ ಸಿಲುಕದಿರಲು ಹೀಗೆ ಮಾಡಿ…

Continue Reading

ವಾಣಿಜ್ಯ

NR Narayana Murthy: 4 ತಿಂಗಳ ಮೊಮ್ಮಗನಿಗೆ ನಾರಾಯಣಮೂರ್ತಿಯಿಂದ 240 ಕೋಟಿ ರೂ. ಷೇರುಗಳ ಗಿಫ್ಟ್!

NR Narayana Murthy: ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರಹ್‌ ರೋಹನ್ ಮೂರ್ತಿಗೆ 240 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

VISTARANEWS.COM


on

Youngsters should work 70 hours a week Says Narayana Murthy
Koo

ನವದೆಹಲಿ: ಇನ್ಫೋಸಿಸ್ ಸಹ ಸಂಸ್ಥಾಪಕ (Infosys co-founder) ಎನ್.ಆರ್.ನಾರಾಯಣಮೂರ್ತಿ (NR Narayana Murthy)ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅವರು ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರಹ್‌ ರೋಹನ್ ಮೂರ್ತಿ (Ekagrah Rohan Murty)ಗೆ 240 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ಮೂಲಕ ಏಕಾಗ್ರಹ್‌ ಇನ್ಫೋಸಿಸ್‌ನ 15 ಲಕ್ಷ ಷೇರುಗಳನ್ನು ಅಂದರೆ ಕಂಪನಿಯಲ್ಲಿ ಶೇಕಡಾ 0.04ರಷ್ಟು ಪಾಲನ್ನು ಹೊಂದಿದಂತಾಗಿದೆ ಎಂದು ಎಕ್ಸ್‌ಚೇಂಜ್‌ ಫೈಲಿಂಗ್ ಬಹಿರಂಗಪಡಿಸಿದೆ. ಈ ವ್ಯವಹಾರವನ್ನು ʼಆಫ್-ಮಾರ್ಕೆಟ್ʼನಲ್ಲಿ ನಡೆಸಲಾಯಿತು ಎಂದು ಫೈಲಿಂಗ್ ತಿಳಿಸಿದೆ. ನಾರಾಯಣಮೂರ್ತಿ ಅವರು ಈಗ ಇನ್ಫೋಸಿಸ್‌ನ ಆಡಳಿತ ನಿರ್ವಹಣೆಯಲ್ಲಿ ಯಾವುದೇ ಪಾತ್ರ ಹೊಂದಿಲ್ಲ. ಅದರ ಪ್ರಮುಖ ಷೇರುಪಾಲುದಾರರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇನ್ಫೋಸಿಸ್​ನಲ್ಲಿ ಮೂರ್ತಿ ಅವರ ಬಳಿ 1.51 ಕೋಟಿ ಷೇರುಗಳಿದ್ದವು. ಈಗ ಮೊಮ್ಮಗನಿಗೆ 15 ಲಕ್ಷ ಷೇರುಗಳನ್ನು ಕೊಟ್ಟ ಬಳಿಕ ಅವರ ಬಳಿ ಉಳಿರುವ ಷೇರುಗಳ ಸಂಖ್ಯೆ 1.36 ಕೋಟಿ. ಈ ಮೂಲಕ ಇನ್ಫೋಸಿಸ್​ನಲ್ಲಿ ಅವರು ಹೊಂದಿದ್ದ ಶೇ. 0.40ರಷ್ಟು ಷೇರುಪಾಲು ಶೇ. 0.36ಕ್ಕೆ ಇಳಿದಿದೆ.

ನಾರಾಯಣಮೂರ್ತಿ-ಸುಧಾ ಮೂರ್ತಿ ದಂಪತಿಯ ಪುತ್ರ ರೋಹನ್‌ ಮೂರ್ತಿ ಮತ್ತು ಸೊಸೆ ಅಪರ್ಣಾ ಕೃಷ್ಣನ್‌ ದಂಪತಿಗೆ ಕಳೆದ ವರ್ಷ ನವೆಂಬರ್‌ 10ರಂದು ಬೆಂಗಳೂರಿನಲ್ಲಿ ಏಕಾಗ್ರಹ್‌ ಜನಿಸಿದ್ದ. ಮೂರ್ತಿ ಕುಟುಂಬವು ಹಿಂದೂ ಮಹಾಕಾವ್ಯ ಮಹಾಭಾರತದಲ್ಲಿ ಬರುವ ಅರ್ಜುನನ ಅಚಲ ಏಕಾಗ್ರತೆಯಿಂದ ಪ್ರೇರಿತವಾಗಿ ಮೊಮ್ಮಗನಿಗೆ ಏಕಾಗ್ರಹ್‌ ಎಂದು ಹೆಸರಿಟ್ಟಿತ್ತು. ಇನ್ನು ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಯ ಪುತ್ರಿ ಅಕ್ಷತಾ ಮೂರ್ತಿ ಮತ್ತು ಬ್ರಿಟನ್‌ ಪ್ರಧಾನಮಂತ್ರಿ ರಿಷಿ ಸುನಕ್‌ ದಂಪತಿಗೆ ಕೃಷ್ಣ ಮತ್ತು ಅನೌಷ್ಕಾ ಎನ್ನುವ ಇಬ್ಬರು ಮಕ್ಕಳಿದ್ದಾರೆ.

ವಿವಾದ ಹುಟ್ಟು ಹಾಕಿದ್ದ ಹೇಳಿಕೆ

ಕಳೆದ ವರ್ಷ ನಾರಾಯಣ ಮೂರ್ತಿ ಅವರು ಕೆಲಸದ ಅವಧಿಯ ಕುರಿತು ನೀಡಿದ್ದ ಹೇಳಿಕೆ ಚರ್ಚೆ ಹುಟ್ಟು ಹಾಕಿತ್ತು. ʼʼಕಳೆದ ಎರಡು ಮೂರು ದಶಕಗಳಲ್ಲಿ ಅಗಾಧ ಪ್ರಗತಿ ಸಾಧಿಸಿರುವ ಭಾರತವು, ಪ್ರಪಂಚದ ಆರ್ಥಿಕತೆಯ ರಾಷ್ಟ್ರಗಳೊಂದಿಗೆ ಸ್ಪರ್ಧಿಸಬೇಕಾದರೆ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕುʼʼ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: Narayana Murthy: ವಾರಕ್ಕೆ 70 ಗಂಟೆ ಕೆಲಸ ಮಾಡಲು ಯುವಕರಿಗೆ ಇನ್ಫೋಸಿಸ್ ನಾರಾಯಣಮೂರ್ತಿ ಸಲಹೆ!

ಅವರ ಈ ಹೇಳಿಕೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಅಪ್‌ಗ್ರ್ಯಾಡ್‌ ಚೇರ್ಮನ್‌ ರೋನಿ ಸ್ಕ್ರ್ಯೂವಾಲಾ, ಹೈ-ಕಾಮ್‌ ನೆಟ್‌ವರ್ಕ್‌ನ ಸಿಇಒ ಸುಖಬೀರ್‌ ಸಿಂಗ್‌ ಭಾಟಿಯಾ, ಶ್ರೀ ಸಿಮೆಂಟ್‌ ಚೇರ್ಮನ್‌ ಹರಿ ಮೋಹನ್‌ ಬಂಗೂರ್‌ ಸೇರಿ ಹಲವು ಉದ್ಯಮಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡುವುದನ್ನು ಒಪ್ಪಿರಲಿಲ್ಲ. “ನಾವು ಎಷ್ಟು ಗಂಟೆ ಕೆಲಸ ಮಾಡುತ್ತೇವೆ ಎನ್ನುವುದಕ್ಕಿಂತ, ಎಷ್ಟು ಸಮರ್ಥವಾಗಿ ಕೆಲಸ ಮಾಡುತ್ತೇವೆ ಎಂಬುದು ಮುಖ್ಯ. ಕೆಲಸ ಮಾಡುವುದು ಅವರ ಇಚ್ಛೆಗೆ ಬಿಟ್ಟಿದ್ದು. ಯಾರೂ ಇದನ್ನು ಹೇರಬಾರದು” ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇನ್ನು ಕೆಲವರು ನಾರಾಯಣ ಮೂರ್ತಿ ಅವರ ಸಲಹೆಗೆ ಸಹಮತ ಸೂಚಿಸಿದ್ದರು. ಒಟ್ಟಿನಲ್ಲಿ ಅವರ ಹೇಳಿಕೆ ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

Continue Reading
Advertisement
Ketan Inamdar
ಪ್ರಮುಖ ಸುದ್ದಿ5 mins ago

Gujarat BJP : ಒಳಗಿನ ಕರೆಗೆ ಓಗೊಟ್ಟು ಬಿಜೆಪಿಗೆ ರಾಜೀನಾಮೆ ನೀಡಿದ ಗುಜರಾತ್ ಶಾಸಕ!

baby bath
ವೈರಲ್ ನ್ಯೂಸ್7 mins ago

Viral News: ಬಾಲ್ಯದ ಫೋಟೊ ಗೂಗಲ್‌ ಡ್ರೈವ್‌ಗೆ ಸೇರಿದ್ದೇ ತಪ್ಪಾಯ್ತು: ಈ ಟೆಕ್ಕಿ ಗೋಳು ಯಾರಿಗೂ ಬೇಡ; ಅಂಥಹದ್ದೇನಾಯ್ತು?

Aishwarya Rai
ಬಾಲಿವುಡ್13 mins ago

Aishwarya Rai: ತಂದೆ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಐಶ್ವರ್ಯಾ ರೈ!

Summer Fashion
ಫ್ಯಾಷನ್17 mins ago

Summer Fashion: ಸಮ್ಮರ್‌ ಸೀರೆಯಲ್ಲಿ ನಟಿ ನಿಮಿಕಾರಂತೆ ಆಕರ್ಷಕವಾಗಿ ಕಾಣಲು 5 ಟಿಪ್ಸ್ !

DV Sadananda Gowda Congress
ರಾಜಕೀಯ19 mins ago

DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

Karti Chidambaram
ಪ್ರಮುಖ ಸುದ್ದಿ26 mins ago

Chinese visa scam : ಚೀನಾ ವೀಸಾ ಹಗರಣ: ಕಾರ್ತಿ ಚಿದಂಬರಂ ಸೇರಿ ಹಲವರಿಗೆ ಕೋರ್ಟ್​​ ಸಮನ್ಸ್

Tough fight between BJP and Congress in Chamarajanagar
ರಾಜಕೀಯ40 mins ago

Vistara News Polling Booth: ಚಾಮರಾಜನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಟಫ್‌ ಫೈಟ್; ಯಾರಿಗೆಷ್ಟು ಮತ?

Additional Special bus facility for Sri Marikamba Devi Jatra in Sirsi
ಉತ್ತರ ಕನ್ನಡ45 mins ago

Uttara Kannada News: ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಇಂದಿನಿಂದ ಹೆಚ್ಚುವರಿ ವಿಶೇಷ ಬಸ್

Modi Speech
ಪ್ರಮುಖ ಸುದ್ದಿ47 mins ago

Narendra Modi : ಸೇಲಂ ರ್ಯಾಲಿಯ ಭಾಷಣದಲ್ಲಿ ಭಾವುಕರಾದ ಪ್ರಧಾನಿ ಮೋದಿ; ಅವರು ಹೇಳಿದ್ದೇನು?

Ondu Sarala Premakathe ott in amazon prime
ಸ್ಯಾಂಡಲ್ ವುಡ್56 mins ago

Ondu Sarala Premakathe: ಒಟಿಟಿಗೆ ಬಂದೇ ಬಿಡ್ತು ʻಒಂದು ಸರಳ ಪ್ರೇಮಕಥೆʼ; ಕನ್ನಡಿಗರ ಆಕ್ರೋಶ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Nagarthpet protest by BJP
ಬೆಂಗಳೂರು4 hours ago

Hanuman Chalisa: ನಗರ್ತಪೇಟೆ ಉದ್ವಿಗ್ನ; ಜೈಶ್ರೀರಾಮ್‌ ಕೂಗಿದ ಹಿಂದು ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಪೊಲೀಸ್‌ ವಶಕ್ಕೆ

dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು23 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ2 days ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ4 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ5 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

ಟ್ರೆಂಡಿಂಗ್‌