Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು - Vistara News

ವಾಣಿಜ್ಯ

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

ಭಾರತದಿಂದ 2022-23ರಲ್ಲಿ ಒಟ್ಟು 85,000 ಕೋಟಿ ರೂ. ಮೌಲ್ಯದ ಮೊಬೈ;ಲ್‌ ಫೋನ್‌ ರಫ್ತಾಗಿದೆ. ಕೇಂದ್ರ ಸರ್ಕಾರ ಸ್ಥಳೀಯ ಉತ್ಪಾದನೆಗೆ ಉತ್ತೇಜನ ನೀಡುತ್ತಿರುವುದು ಸಕಾರಾತ್ಮಕ (Mobile export) ಪ್ರಭಾವ ಬೀರಿದೆ.

VISTARANEWS.COM


on

smartphone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದಿಂದ 2022-23ರಲ್ಲಿ ಒಟ್ಟು 85,000 ಕೋಟಿ ರೂ. ಮೌಲ್ಯದ (Mobile Export) ಮೊಬೈಲ್‌ ಹ್ಯಾಂಡ್‌ಸೆಟ್‌ ರಫ್ತಾಗಿದೆ ಎಂದು ಶನಿವಾರ ಬಿಡುಗಡೆಯಾದ ಇಂಡಿಯಾ ಸೆಲ್ಯುಲಾರ್‌ & ಎಲೆಕ್ಟ್ರಾನಿಕ್ಸ್‌ ಅಸೋಸಿಯೇಶನ್‌ನ (India Cellular and Electronics Association) ಅಂಕಿ ಅಂಶಗಳು ತಿಳಿಸಿವೆ.

ಕಳೆದ 2021-22ರ ಸಾಲಿನಲ್ಲಿ 46,980 ಕೋಟಿ ರೂ. ಮೌಲ್ಯದ ಮೊಬೈಲ್‌ ಹ್ಯಾಂಡ್‌ಸೆಟ್‌ ರಫ್ತಾಗಿತ್ತು. ಉತ್ಪಾದಕರು ಮೊಬೈಲ್‌ ಉತ್ಪಾದನೆ ಮತ್ತು ರಫ್ತನ್ನು ವೃದ್ಧಿಸಿರುವುದು ಇದಕ್ಕೆ ಕಾರಣ. ಸ್ಥಳೀಯವಾಗಿ ಮೊಬೈಲ್‌ ಫೋನ್‌ ಉತ್ಪಾದನೆಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಉಪಕ್ರಮಗಳು (production linked incentive) ಫಲ ನೀಡುತ್ತಿವೆ. ಆ್ಯಪಲ್‌ನ ಉತ್ಪಾದನೆಯಲ್ಲಿ ಉಂಟಾಗಿರುವ ಹೆಚ್ಚಳ, ಸ್ಯಾಮ್‌ಸಂಗ್‌ ಸೇರಿದಂತೆ ಇತರ ಕಂಪನಿಗಳೂ ಹ್ಯಾಂಡ್‌ ಸೆಟ್‌ ಉತ್ಪಾದನೆಯನ್ನು ಹೆಚ್ಚಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಭಾರತ 2027ರ ವೇಳೆಗೆ ಐಫೋನ್‌ನ 47% ಪಾಲನ್ನು ತಯಾರಿಸುವ ನಿರೀಕ್ಷೆ ಇದೆ.

ರಾಜ್ಯಗಳಲ್ಲಿ ಎಲೆಕ್ಟ್ರಾನಿಕ್ಸ್‌ ಉತ್ಪಾದನೆಯನ್ನು ಹೆಚ್ಚಿಸಲು ಎಲ್ಲ ರಾಜ್ಯಗಳ ಐಟಿ ಸಚಿವರುಗಳ ಜತೆಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ನಿಯಮಿತವಾಗಿ ಸಭೆ ನಡೆಸುತ್ತಿದ್ದಾರೆ.

ಭಾರತವು ಮೊಬೈಲ್‌ ಫೋನ್‌ಗಳನ್ನು ಯುಎಇ, ಅಮೆರಿಕ, ನೆದರ್ಲೆಂಡ್‌, ಬ್ರಿಟನ್‌, ಇಟಲಿಗೆ ರಫ್ತು ಮಾಡುತ್ತಿದೆ ಎಂದು ಐಸಿಇಎ ವರದಿ ತಿಳಿಸಿದೆ. ಭಾರತದಲ್ಲಿ ಮಾರಾಟವಾಗುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ 97% ಸ್ಥಳೀಯವಾಗಿ ಉತ್ಪಾದನೆಯಾಗುತ್ತಿವೆ. ಜಗತ್ತಿನಲ್ಲಿಯೇ ಎರಡನೇ ಅತಿ ದೊಡ್ಡ ಮೊಬೈಲ್‌ ಉತ್ಪಾದಕ ಈಗ ಭಾರತವಾಗಿದೆ.

2023ರಲ್ಲಿ ಭಾರತವು 1 ಲಕ್ಷ ಕೋಟಿ ಸ್ಮಾರ್ಟ್‌ ಫೋನ್‌ಗಳನ್ನು ರಫ್ತು ಮಾಡಿ ಹೊಸ ದಾಖಲೆ ಸೃಷ್ಟಿಸಲಿದೆ ಎಂದು ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ ಖಾತೆಯ ಸಹಾಯಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಸ್ಮಾರ್ಟ್‌ಫೋನ್‌ ಪೂರೈಕೆಯ ಸರಣಿ ಚೀನಾದಿಂದ ಸ್ಥಳಾಂತರವಾಗುವುದರ ಪ್ರಯೋಜನವನ್ನು ಭಾರತ ಮತ್ತು ವಿಯೆಟ್ನಾಂ ಪಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

SBI Debit Cards: ಏಪ್ರಿಲ್‌ 1ರಿಂದ ಎಸ್‌ಬಿಐ ಡೆಬಿಟ್ ಕಾರ್ಡ್‌ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳಲಿದೆ. ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸುವುದಾಗಿ ಬ್ಯಾಂಕ್‌ ಘೋಷಿಸಿದೆ.

VISTARANEWS.COM


on

SBI Debit Cards
Koo

ನವದೆಹಲಿ: ನೀವು ಎಸ್‌ಬಿಐ (State Bank of India)ಯ ಡೆಬಿಟ್‌ ಕಾರ್ಡ್‌ ಹೊಂದಿದ್ದೀರಾ? ಹಾಗಾದರೆ ನಿಮಗಿದು ಬ್ಯಾಡ್‌ ನ್ಯೂಸ್‌. ಯಾಕೆಂದರೆ ಎಸ್‌ಬಿಐ ಕೆಲವು ವರ್ಗದ ಡೆಬಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸುವುದಾಗಿ ಘೋಷಿಸಿದೆ (SBI Debit Cards). ಹೊಸ ದರಗಳು ಹೊಸ ಹಣಕಾಸು ವರ್ಷದ ಮೊದಲ ದಿನವಾದ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ ಎಂದು ಎಸ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಯಾವೆಲ್ಲ ಕಾರ್ಡ್‌ಗಳಿಗೆ ಅನ್ವಯ?

ಡೆಬಿಟ್ ಕಾರ್ಡ್‌ಗಳಾದ ಕ್ಲಾಸಿಕ್ / ಸಿಲ್ವರ್ / ಗ್ಲೋಬಲ್, ಯುವ / ಗೋಲ್ಡ್, ಪ್ಲಾಟಿನಂ ಮತ್ತು ಪ್ರೈಡ್ / ಪ್ರೀಮಿಯಂ ಬಿಸಿನೆಸ್ ವಿಭಾಗಗಳಿಗೆ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ವಿವಿಧ ವಿಭಾಗಗಳಲ್ಲಿ ವಾರ್ಷಿಕ ನಿರ್ವಹಣಾ ಶುಲ್ಕವನ್ನು 75 ರೂ. ಹೆಚ್ಚಿಸಲಾಗಿದೆ ಎಂದು ಎಸ್‌ಬಿಐ ತಿಳಿಸಿದೆ.

ಡೆಬಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ಇತರ ಶುಲ್ಕಗಳನ್ನು ಸಹ ಉಲ್ಲೇಖಿಸಲಾಗಿದೆ. ಇವುಗಳಲ್ಲಿ ಡೆಬಿಟ್ ಕಾರ್ಡ್‌ಗಳ ವಿತರಣೆ ಮತ್ತು ಬದಲಾವಣೆಯೂ ಸೇರಿವೆ. ಗ್ರಾಹಕರು ಡೆಬಿಟ್ ಕಾರ್ಡ್ ಬದಲಾಯಿಸಲು (300 ರೂ. ಮತ್ತು ಜಿಎಸ್‌ಟಿ), ನಕಲಿ ಪಿನ್ / ಪಿನ್ ರಿಜನರೇಷನ್‌ (50 ರೂ. ಪ್ಲಸ್ ಜಿಎಸ್‌ಟಿ)ಗೆ ಶುಲ್ಕ ಪಾವತಿಸಬೇಕಾಗುತ್ತದೆ. ಅಂತಾರಾಷ್ಟ್ರೀಯ ವಹಿವಾಟುಗಳಂತಹ ಸೇವೆಗಳ ಫೀಸ್‌ ಬಗ್ಗೆಯೂ ಎಸ್‌ಬಿಐ ಉಲ್ಲೇಖಿಸಿದೆ. ಎಲ್ಲ ಶುಲ್ಕಗಳು ಶೇ. 18 ರಷ್ಟು ಜಿಎಸ್‌ಟಿಯನ್ನು ಒಳಗೊಂಡಿದೆ.

  • ಎಸ್‌ಬಿಐ ಕ್ಲಾಸಿಕ್, ಸಿಲ್ವರ್, ಗ್ಲೋಬಲ್, ಕಾಂಟ್ಯಾಕ್ಟ್‌ಲೆಸ್ ಡೆಬಿಟ್ ಕಾರ್ಡ್‌ಗಳ ಗ್ರಾಹಕರು ವಾರ್ಷಿಕ 200 ರೂ. ನಿರ್ವಹಣಾ ಶುಲ್ಕ ಮತ್ತು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ. ಪ್ರಸ್ತುತ ಈ ಕಾರ್ಡ್‌ಗಳಿಗೆ 125 ರೂ. ಶುಲ್ಕ + ಜಿಎಸ್‌ಟಿ ಪಾವತಿಸಬೇಕಿದೆ.
  • ಯುವ, ಗೋಲ್ಡ್, ಕಾಂಬೋ ಡೆಬಿಟ್ ಕಾರ್ಡ್, ಮೈ ಕಾರ್ಡ್ (ಇಮೇಜ್ ಕಾರ್ಡ್)ಗೆ ಏಪ್ರಿಲ್‌ 1ರಿಂದ 250 ರೂ. + ಜಿಎಸ್‌ಟಿ ನಿರ್ವಹಣಾ ಶುಲ್ಕ ಪಾವತಿಸಬೇಕು (ಇದುವರೆಗೆ 175 ರೂ. + ಜಿಎಸ್‌ಟಿ ಇತ್ತು). ಎಸ್‌ಬಿಐ ಪ್ಲಾಟಿನಂ ಡೆಬಿಟ್ ಕಾರ್ಡ್‌ಗಳಿಗೆ 250 ರೂ. ಬದಲಿಗೆ 325 ರೂ. + ಜಿಎಸ್‌ಟಿ ವಾರ್ಷಿಕ ಶುಲ್ಕ ಪಾವತಿಸಬೇಕು.
  • ಪ್ರೈಡ್ ಮತ್ತು ಪ್ರೀಮಿಯಂ ಬ್ಯುಸಿನೆಸ್ ಡೆಬಿಟ್ ಕಾರ್ಡ್‌ಗಳ ವಾರ್ಷಿಕ ನಿರ್ವಹಣೆ ಶುಲ್ಕವು ಈಗಿನ 350 ರೂ. + ಜಿಎಸ್‌ಟಿಯಿಂದ 425 ರೂ. + ಜಿಎಸ್‌ಟಿಗೆ ಹೆಚ್ಚಾಗುತ್ತದೆ.

ಇದನ್ನೂ ಓದಿ: LIC News: ಎಲ್‌ಐಸಿ ಈಗ ನಂಬರ್‌ ಒನ್‌ ಜಾಗತಿಕ ವಿಮೆ ಬ್ರಾಂಡ್!‌

ಕ್ರೆಡಿಟ್‌ ಕಾರ್ಡ್‌ನಲ್ಲಿಯೂ ಬದಲಾವಣೆ

ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್‌ಗಳ ಕನಿಷ್ಠ ದಿನದ ಬಿಲ್ ಲೆಕ್ಕಾಚಾರ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಘೋಷಿಸಿದೆ. ಕೆಲವು ವಿಶೇಷ ಕ್ರೆಡಿಟ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಕ್ರೆಡಿಟ್ ಕಾರ್ಡ್‌ಗಳ ಮೂಲಕ ದರ ಪಾವತಿಗಳನ್ನು ಮಾಡುವಾಗ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುವುದಿಲ್ಲ. ಇದುವರೆಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ದರ ಪಾವತಿ ಮಾಡುವವರಿಗೆ ರಿವಾರ್ಡ್ ಪಾಯಿಂಟ್ಸ್‌ ಸಿಗುತ್ತಿತ್ತು. ಇದುವರೆಗೆ ಗಳಿಸಿರುವ ರಿವಾರ್ಡ್ ಪಾಯಿಂಟ್‌ಗಳು 2024ರ ಏಪ್ರಿಲ್ 15ರ ನಂತರ ಮುಕ್ತಾಯಗೊಳ್ಳಲಿವೆ. ಅಂದರೆ ರಿವಾರ್ಡ್ ಪಾಯಿಂಟ್ಸ್‌ ಪಡೆದಿದ್ದರೆ ಈ ಅವಧಿಯೊಳಗೆ ಬಳಸಿಕೊಳ್ಳಬೇಕು. ಎಸ್‌ಬಿಐ ದೇಶದ ಎರಡನೇ ಅತಿದೊಡ್ಡ ಕ್ರೆಡಿಟ್ ಕಾರ್ಡ್ ವಿತರಕನಾಗಿದ್ದು, 18 ದಶಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮನಿ-ಗೈಡ್

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

Money Guide: ಏಪ್ರಿಲ್‌ 1ರಂದು ದೇಶದಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಹಣಕಾಸಿನ ವಿಚಾರದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ಕಂಡು ಬರಲಿದೆ. ಅದು ಯಾವುವು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

money guide
Koo

ಬೆಂಗಳೂರು: ಹೊಸ ಹಣಕಾಸು ವರ್ಷ ಆರಂಭವಾಗಲು ಕೆಲವೇ ದಿನಗಳು ಬಾಕಿ. ಏಪ್ರಿಲ್‌ 1ರಿಂದ 2024-25ರ ಸಾಲಿನ ಹಣಕಾಸು ವರ್ಷ ನಡೆಯಲಿದೆ. ಅದರ ಜತೆಗೆ ಏಪ್ರಿಲ್‌ 1ರಿಂದ ಹಣಕಾಸಿಗೆ ಸಂಬಂಧಿಸಿದಂತೆ ಕೆಲವು ನಿಯಮಗಳಲ್ಲಿ ಬದಲಾವಣೆಯೂ ನಡೆಯಲಿದೆ. ವಿಶೇಷವಾಗಿ ಜನ ಸಾಮಾನ್ಯರ ಮೇಲೆ ಪರಿಣಾಮ ಬೀರುವಂತಹ ಬದಲಾವಣೆ ಕಂಡು ಬರಲಿದೆ. ಅವು ಯಾವುವು ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಫಾಸ್ಟ್‌ ಟ್ಯಾಗ್‌ (FASTag)

2021ರ ಫೆಬ್ರವರಿಯಿಂದ ದೇಶದಲ್ಲಿ ಫಾಸ್ಟ್‌ಟ್ಯಾಗ್‌ ಕಡ್ಡಾಯಗೊಳಿಸಲಾಗಿದೆ. ಇದೀಗ ಫಾಸ್ಟ್‌ಟ್ಯಾಗ್‌ನ ಕೆವೈಸಿಯನ್ನು ಅಪ್​ಡೇಟ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಮಾರ್ಚ್‌ 31 ಕೊನೆಯ ದಿನ. ಅಪ್‌ಡೇಟ್‌ ಆಗದಿದ್ದರೆ ಬ್ಯಾಂಕ್‌ಗಳು ನಿಮ್ಮ ಫಾಸ್ಟ್‌ಟ್ಯಾಗ್‌ ಅನ್ನು ಡೀ ಆ್ಯಕ್ಟಿವೇಟ್ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕೆವೈಸಿ ಅಪ್​ಡೇಟ್ ಆಗದ ಫಾಸ್ಟ್‌ಟ್ಯಾಗ್‌ನ ಖಾತೆಯಲ್ಲಿ ಹಣ ಇದ್ದರೂ ಅದು ಕೆಲಸ ಮಾಡುವುದಿಲ್ಲ. ಆದ್ದರಿಂದ ಈಗಲೇ ಅಪ್‌ಡೇಟ್‌ ಮಾಡಿ.

ಕೆವೈಸಿ ಅಪ್‌ಡೇಟ್ ಮಾಡುವುದು ಹೇಗೆ?

  • ಬ್ಯಾಂಕ್ ಲಿಂಕ್ ಮಾಡಲಾದ ಫಾಸ್ಟ್‌ಟ್ಯಾಗ್ ವೆಬ್‌ಸೈಟ್‌ಗೆ ಭೇಟಿ ನೀಡಿ
  • ಮೊಬೈಲ್‌ ನಂಬರ್‌ ಬಳಸಿ ಲಾಗಿನ್‌ ಆಗಿ ಮತ್ತು ಮೊಬೈಲ್‌ಗೆ ಬಂದ ಒಟಿಪಿಯನ್ನು ನಮೂದಿಸಿ.
  • ಹೋಮ್‌ಪೇಜ್‌ನಲ್ಲಿ ಕಂಡು ಬರುವ My Profile ಸೆಕ್ಷನ್‌ಗೆ ಹೋಗಿ KYC ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ.
  • ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಗತ್ಯ ಮಾಹಿತಿಯನ್ನು ತುಂಬಿ Submit ಬಟನ್‌ ಕ್ಲಿಕ್‌ ಮಾಡಿ.
  • ಈಗ ನಿಮ್ಮ ಫಾಸ್ಟ್‌ಟ್ಯಾಗ್ ಖಾತೆಯ ಕೆವೈಸಿ ಪೂರ್ಣಗೊಳ್ಳುತ್ತದೆ.

ಎನ್​ಪಿಎಸ್  (NPS)

ಹೆಚ್ಚಿನ ಭದ್ರತೆ ಒದಗಿಸಲು ಮತ್ತು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಚಂದಾದಾರರ ಹಿತಾಸಕ್ತಿಗಳನ್ನು ಕಾಪಾಡಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಹೆಚ್ಚು ಸುರಕ್ಷಿತವಾದ ಈ ವಿಧಾನವನ್ನು ಘೋಷಿಸಿದೆ. ಇದಕ್ಕಾಗಿ ಎರಡು ಅಂಶಗಳ ಆಧಾರ್ ದೃಢೀಕರಣ(ಅಥೆಂಟಿಕೇಷನ್‌) ಅನ್ನು ಪರಿಚಯಿಸಿದೆ. ಇನ್ನು ಮುಂದೆ ಪಾಸ್‌ವರ್ಡ್‌ನೊಂದಿಗೆ ಆಧಾರ್ ದೃಢೀಕರಣವನ್ನೂ ಪೂರ್ಣಗೊಳಿಸಬೇಕು. ಆಗ ಮಾತ್ರ ಲಾಗಿನ್ ಯಶಸ್ವಿಯಾಗುತ್ತದೆ. ಇದರಿಂದ ಅನಧಿಕೃತ ಎನ್‌ಪಿಎಸ್‌ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ನಿಯಮ ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ.

ಇಪಿಎಫ್‌ಒ (EPFO)

ಹೊಸ ಹಣಕಾಸು ವರ್ಷದ ಆರಂಭದ ದಿನ ನೌಕರರ ಭವಿಷ್ಯ ನಿಧಿ ದೊಡ್ಡ ಬದಲಾವಣೆಗೆ ಸಾಕ್ಷಿಯಾಗಲಿದೆ. ಅಂದರೆ ಏಪ್ರಿಲ್ 1ರಿಂದ ನೌಕರರ ಭವಿಷ್ಯ ನಿಧಿ ಸಂಸ್ಥೆ ಹೊಸ ನಿಯಮಗಳನ್ನು ಜಾರಿಗೆ ತರಲಿದೆ. ಹೊಸ ನಿಯಮದ ಪ್ರಕಾರ ನೀವು ಉದ್ಯೋಗವನ್ನು ಬದಲಾಯಿಸಿದರೆ, ನಿಮ್ಮ ಹಳೆಯ ಪಿಎಫ್ ಅಕೌಂಟ್‌ ಅನ್ನು ಅನ್ನು ಆಟೋ ಮೋಡ್‌ಗೆ ವರ್ಗಾಯಿಸಲಾಗುತ್ತದೆ. ಇದರಿಂದ ಉದ್ಯೋಗವನ್ನು ಬದಲಾಯಿಸಿದಾಗ ಪಿಎಫ್ ಮೊತ್ತವನ್ನು ವರ್ಗಾಯಿಸಲು ನೀವು ವಿನಂತಿಸುವ ಅಗತ್ಯವಿಲ್ಲ.

ಎಸ್‌ಬಿಐ ಕ್ರೆಡಿಟ್ ಕಾರ್ಡ್ (SBI Credit Card)

ನೀವು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕ್ರೆಡಿಟ್ ಕಾರ್ಡ್ ಹೊಂದಿದ್ದರೆ ಈ ಅಂಶವನ್ನು ಗಮನಿಸಲೇಬೇಕು. ಏಪ್ರಿಲ್ 1ರಿಂದ ಎಸ್‌ಬಿಐ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ತರುತ್ತಿದೆ. ಏಪ್ರಿಲ್ 1ರಿಂದ ನೀವು ಬಾಡಿಗೆ ಪಾವತಿ ಮಾಡಿದರೆ ನಿಮಗೆ ಯಾವುದೇ ರಿವಾರ್ಡ್ ಪಾಯಿಂಟ್‌ ಲಭಿಸುವುದಿಲ್ಲ. ಕೆಲವು ಕ್ರೆಡಿಟ್ ಕಾರ್ಡ್‌ಗಳಿಗೆ ಈ ನಿಯಮ ಏಪ್ರಿಲ್ 15ರಿಂದ ಅನ್ವಯವಾಗುತ್ತದೆ.

ಎಸ್‌ಬಿಐ ಅಮೃತ್‌ ಕಲಶ್‌ ವಿಶೇಷ ಎಫ್‌ಡಿ (SBI Amrit Kalash Deposit)

ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್‌ ಎಸ್‌ಬಿಐಯ ವಿಶೇಷ ಯೋಜನೆ ಅಮೃತ್‌ ಕಲಶ್‌ ಎಫ್‌ಡಿ ಡೆಪಾಸಿಟ್‌ ಸ್ಕೀಮ್‌ನ ಅವಧಿ ಮಾರ್ಚ್‌ 31ಕ್ಕೆ ಮುಕ್ತಾಯವಾಗಲಿದೆ. 400 ದಿನಗಳ ಈ ಯೋಜನೆಯಲ್ಲಿ ಬಡ್ಡಿಯನ್ನು ಮಾಸಿಕ, ತ್ರೈಮಾಸಿಕ ಅಥವಾ ಅರ್ಧ ವಾರ್ಷಿಕ ಅವಧಿಗೆ ನೀಡುವ ವ್ಯವಸ್ಥೆ ಇದೆ.‌ ದೇಶೀಯ ಹಾಗೂ ಅನಿವಾಸಿ ಭಾರತೀಯರು ಈ ಯೋಜನೆಯಲ್ಲಿ ಠೇವಣಿ ಇಡಬಹುದು. ರೆಗ್ಯುಲರ್‌ ಗ್ರಾಹಕರಿಗೆ 7.1% ಮತ್ತು ಹಿರಿಯ ಗ್ರಾಹಕರಿಗೆ 7.6% ಬಡ್ಡಿ ಸಿಗುತ್ತದೆ.

ತೆರಿಗೆ ವ್ಯವಸ್ಥೆ (Income Tax)

2023-24ರ ಹಣಕಾಸು ವರ್ಷದಿಂದ ಸರ್ಕಾರ ಹಳೆಯ ತೆರಿಗೆ ಪದ್ಧತಿ ಜತೆಗೆ ಹೊಸ ಆದಾಯ ತೆರಿಗೆ ಪದ್ಧತಿಯನ್ನೂ ಸೇರಿಸಿದೆ. ಹೊಸ ಟ್ಯಾಕ್ಸ್ ರೆಜಿಮೆ ಡೀಫಾಲ್ಟ್ ಆಗಿರಲಿದೆ. ನೀವು ಈಗಾಗಲೇ ಓಲ್ಡ್ ಟ್ಯಾಕ್ಸ್ ರೆಜಿಮೆಯಲ್ಲಿಯೇ ಇದ್ದರೆ ಹೊಸ ಹಣಕಾಸು ವರ್ಷಕ್ಕೂ ಅದರಲ್ಲೇ ಮುಂದುವರಿಸಬಹುದು. ಒಂದು ವೇಳೆ ನೀವು ಓಲ್ಡ್ ಟ್ಯಾಕ್ಸ್ ರೆಜಿಮೆ ಆಯ್ಕೆ ಮಾಡಿಕೊಳ್ಳದೇ ಇದ್ದಲ್ಲಿ ಹೊಸ ತೆರಿಗೆ ಪದ್ಧತಿಯೇ ಡೀಫಾಲ್ಟ್ ಆಗಿರುತ್ತದೆ. ಒಮ್ಮೆ ನೀವು ಹೊಸ ತೆರಿಗೆ ಪದ್ಧತಿಯಲ್ಲಿ ರಿಟರ್ನ್ ಫೈಲ್ ಮಾಡಿದರೆ ಅದರಲ್ಲೇ ಮುಂದುವರಿಯಬೇಕು.

ಇದನ್ನೂ ಓದಿ: Money Guide: ಆದಾಯ ತೆರಿಗೆ ರಿಟರ್ನ್‌ ಸಲ್ಲಿಸಲು ಎಷ್ಟು ಬಗೆಯ ಫಾರ್ಮ್‌ಗಳಿವೆ? ನಿಮಗೆ ಯಾವುದು ಸೂಕ್ತ? ಚೆಕ್‌ ಮಾಡಿ

Continue Reading

ಮನಿ-ಗೈಡ್

Money Guide: ಮೊಬೈಲ್‌ನಲ್ಲಿಯೇ ಪಿಎಫ್‌ ಮೊತ್ತ ಪರಿಶೀಲಿಸಬೇಕೆ?; ಜಸ್ಟ್‌ ಹೀಗೆ ಮಾಡಿ ಸಾಕು

Money Guide: ಉದ್ಯೋಗಿಗಳ ಉಳಿತಾಯ ಮನೋಭಾವವನ್ನು ಉತ್ತೇಜಿಸಲು ನೌಕರರ ಭವಿಷ್ಯ ನಿಧಿ (ಇಪಿಎಫ್‌) ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಲ್ಲಿ ನಿಮ್ಮ ಜತೆಗೆ ನಿಮ್ಮ ಉದ್ಯೋಗದಾತ ಸಂಸ್ಥೆಯೂ ಕೊಡುಗೆ ನೀಡುತ್ತದೆ. ಇದರ ಬ್ಯಾಲನ್ಸ್‌ ಅನ್ನು ನೀವು ಮೊಬೈಲ್‌ನಲ್ಲಿಯೇ ಆನ್‌ಲೈನ್‌ / ಆಫ್‌ಲೈನ್‌ ಮೂಲಕ ಪರಿಶೀಲಿಸಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

money guide
Koo

ಬೆಂಗಳೂರು: ನೌಕರರ ಭವಿಷ್ಯ ನಿಧಿ (Employees’ Provident Fund) ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ಉಳಿತಾಯವನ್ನು ಉತ್ತೇಜಿಸಲಾಗುತ್ತದೆ. ನಿವೃತ್ತಿಗಾಗಿ ಉಳಿತಾಯ ಮಾಡಲು ಇಪಿಎಫ್ ಒಂದು ಸುಲಭ ಮಾರ್ಗ ಎನ್ನುವುದರಲ್ಲಿ ಸಂದೇಹವೇ ಇಲ್ಲ. ಇದು ನಿಮ್ಮ ಸಂಬಳದಿಂದ ಸ್ವಯಂಚಾಲಿತವಾಗಿ ಕಡಿತಗೊಳ್ಳುವುದರಿಂದ ಪ್ರತ್ಯೇಕವಾಗಿ ಹೂಡಿಕೆ ಮಾಡಬೇಕಾಗಿಲ್ಲ. ಇನ್ನೊಂದು ಮುಖ್ಯ ಅನುಕೂಲ ಎಂದರೆ ತುರ್ತು ಪರಿಸ್ಥಿತಿಯಲ್ಲಿ ಈ ಅಕೌಂಟ್‌ನಿಂದ ಒಂದಷ್ಟು ಹಣವನ್ನು ಹಿಂಪಡೆಯಬಹುದು. ಇದಕ್ಕಾಗಿ ನಿವೃತ್ತಿವರೆಗೆ ಕಾಯಬೇಕಾಗಿಲ್ಲ. ಇಂದಿನ ಮನಿಗೈಡ್‌ (Money Guide)ನಲ್ಲಿ ನಿಮ್ಮ ಇಪಿಎಫ್‌ ಬ್ಯಾಲನ್ಸ್‌ ಅನ್ನು ಮೊಬೈಲ್‌ನಲ್ಲೇ ಹೇಗೆ ನೋಡಬಹುದು ಎನ್ನುವ ವಿವರವಿದೆ.

ಎಪಿಎಫ್‌ ಖಾತೆಯ ವೈಶಿಷ್ಟ್ಯ

  • ಉದ್ಯೋಗಿಗಳ ಕೊಡುಗೆ ಸಾಮಾನ್ಯವಾಗಿ ಮೂಲ ವೇತನದ ಶೇ. 12ರಷ್ಟಿರುತ್ತದೆ.
  • ಉದ್ಯೋಗದಾತರ ಕೊಡುಗೆ ನಿಮ್ಮ ಮೂಲ ವೇತನ ಮತ್ತು ತುಟ್ಟಿಭತ್ಯೆಯ ಶೇ. 12ಕ್ಕೆ ಸಮನಾಗಿರುತ್ತದೆ. ಉದ್ಯೋಗದಾತರ ಕೊಡುಗೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ: ಅವೆಂದರೆ- ಇಪಿಎಫ್ ಮತ್ತು ನೌಕರರ ಪಿಂಚಣಿ ಯೋಜನೆ(ಇಪಿಎಸ್).
  • ಹೀಗೆ ನಿಮ್ಮ ಮತ್ತು ಉದ್ಯೋಗದಾತರ ಕೊಡುಗೆಗಳೊಂದಿಗೆ ಪ್ರತಿ ತಿಂಗಳು ನಿವೃತ್ತಿಗಾಗಿ ಗಣನೀಯ ಮೊತ್ತವನ್ನು ಮೀಸಲಿಡಲಾಗುತ್ತದೆ. ಇದು ಭಾರತದಲ್ಲಿ ಕಡ್ಡಾಯ.

ಬ್ಯಾಲನ್ಸ್‌ ಪರಿಶೀಲಿಸುವುದು ಹೇಗೆ?

ವೆಬ್‌ಸೈಟ್‌

  • ಇಪಿಎಫ್ಒ ವೆಬ್‌ಸೈಟ್‌  www.epfindia.gov.in ವೆಬ್‌ಸೈಟ್‌ಗೆ ಭೇಟಿ ನೀಡಿ. 
  • ಬಳಿಕ ‘Our Services’ ಆಯ್ಕೆಯ ಒಳಗೆ ಬರುವ ‘For Employees’ ಅನ್ನು ಸೆಲೆಕ್ಟ್‌ ಮಾಡಿ.
  • ನಂತರ ‘Services’ ಆಯ್ಕೆ ಕ್ಲಿಕ್‌ ಮಾಡಿ
  • ‘Member Passbook’ ಸೆಲೆಕ್ಟ್‌ ಮಾಡಿ.
  • ಈಗ ಯುಎಎನ್‌ ನಂಬರ್‌, ಪಾಸ್‌ವರ್ಡ್‌, ಕ್ಯಾಪ್ಚಾ ನಮೂದಿಸಿದರೆ ವಿವರ ಲಭ್ಯವಾಗುತ್ತದೆ.

ಉಮಾಂಗ್ ಆ್ಯಪ್‌

ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆ್ಯಪಲ್‌ ಆ್ಯಪ್‌ ಸ್ಟೋರ್‌ನಲ್ಲಿ ‘UMANG’ ಆ್ಯಪ್‌ ಡೌನ್‌ಲೋಡ್‌ ಮಾಡಿ. ಬಳಿಕ ನಿಮ್ಮ ಹೆಸರು ನೋಂದಾಯಿಸಿ. ‘Service’ ಆಯ್ಕೆ ಕ್ಲಿಕ್‌ ಮಾಡಿ. ನಂತರ ‘View Passbook’ ಕ್ಲಿಕ್‌ ಮಾಡಿ. ಅದಾದ ಬಳಿಕ ‘Employee-centric service’ ಆಪ್ಶನ್‌ ಆಯ್ಕೆ ಮಾಡಿ. ಮುಂದಿನ ಹಂತದಲ್ಲಿ ಮತ್ತೊಂದು ಹೊಸ ಪುಟ ತೆರೆಯುತ್ತದೆ. ಇಪಿಎಫ್ಒನಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗಿದೆ ಎಂಬ ಸಂದೇಶ ಇದರಲ್ಲಿ ಮೂಡುತ್ತದೆ. ಒಮ್ಮೆ ನೀವು ಒಟಿಪಿಯನ್ನು ನಮೂದಿಸಿ ಮತ್ತು ‘OK’ ಬಟನ್ ಕ್ಲಿಕ್ ಮಾಡಿದ ನಂತರ, ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಇಪಿಎಫ್ ಪಾಸ್‌ಬುಕ್‌ ಅನ್ನು ನೋಡಬಹುದು ಮತ್ತು ನಿಮ್ಮ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸಬಹುದು.

ಎಸ್‌ಎಂಎಸ್‌

ನಿಮ್ಮ ಮೊಬೈಲ್‌ ನಂಬರ್‌ ಯುಎಎನ್ ಇಪಿಎಫ್ಒನಲ್ಲಿ ನೋಂದಾಯಿಸಲ್ಪಟ್ಟಿದ್ದರೆ, 7738299899 ಎಸ್ಎಂಎಸ್ ಕಳುಹಿಸುವ ಮೂಲಕ ಪಿಎಫ್ ಬ್ಯಾಲೆನ್ಸ್ ವಿವರಗಳನ್ನು ನೀವು ಪಡೆಯಬಹುದು. 7738299899 ನಂಬರ್‌ಗೆ EPFOHO UAN ENG ಎಂದು ಸಂದೇಶ ಕಳುಹಿಸಿ.

ಮಿಸ್ಡ್ ಕಾಲ್

ಮಿಸ್ಡ್ ಕಾಲ್ ಕೊಡುವ ಮೂಲಕವೂ ಪಿಎಫ್ ಬ್ಯಾಲೆನ್ಸ್ ಪರಿಶೀಲಿಸಬಹುದು. ಅದಕ್ಕಾಗಿ ನೀವು 011-22901406 ನಂಬರ್‌ಗೆ ನೋಂದಾಯಿಸಿದ ಮೊಬೈಲ್‌ ನಂಬರ್‌ನಿಂದ ಮಿಸ್ಡ್ ಕಾಲ್ ಕೊಡಿ.

ಇದನ್ನೂ ಓದಿ: Money Guide: ಎನ್‌ಪಿಎಸ್‌ನಲ್ಲಿ ಸಿಪ್‌; ನಿವೃತ್ತಿ ಜೀವನಕ್ಕೆ ಉತ್ತಮ ಕೊಡುಗೆ; ನೋಂದಣಿಯ ಸಂಪೂರ್ಣ ವಿವರ ಇಲ್ಲಿದೆ

Continue Reading

ಪ್ರಮುಖ ಸುದ್ದಿ

LIC News: ಎಲ್‌ಐಸಿ ಈಗ ನಂಬರ್‌ ಒನ್‌ ಜಾಗತಿಕ ವಿಮೆ ಬ್ರಾಂಡ್!‌

LIC ಬ್ರಾಂಡ್ ಮೌಲ್ಯವು 9.8 ಶತಕೋಟಿ ಡಾಲರ್‌ಗಳಲ್ಲಿ ಸ್ಥಿರವಾಗಿದೆ. ಜೊತೆಗೆ ಬ್ರಾಂಡ್ ಸಾಮರ್ಥ್ಯದ ಸೂಚ್ಯಂಕ ಸ್ಕೋರ್ 88.3ರಲ್ಲಿದ್ದು, AAA ಬ್ರಾಂಡ್ ಸಾಮರ್ಥ್ಯದ ರೇಟಿಂಗ್ ಅನ್ನು ಹೊಂದಿದೆ ಎಂದು ವರದಿ ಹೇಳಿದೆ.

VISTARANEWS.COM


on

LIC
Koo

ಹೊಸದಿಲ್ಲಿ: ಭಾರತದ ಬೃಹತ್‌ ಜೀವವಿಮೆ ಸಂಸ್ಥೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (Life Insurance Corporation- ಎಲ್‌ಐಸಿ) ಜಾಗತಿಕವಾಗಿ ಪ್ರಬಲ ವಿಮಾ ಬ್ರಾಂಡ್ (insurance brand) ಆಗಿ ಹೊರಹೊಮ್ಮಿದೆ. ಬ್ರಾಂಡ್ ಫೈನಾನ್ಸ್ ಇನ್ಶೂರೆನ್ಸ್ (Brand Finance Insurance) ಸಂಸ್ಥೆಯ 2024ರ ವರದಿ ಇದನ್ನು ತಿಳಿಸಿದೆ.

LICಯ ಬ್ರಾಂಡ್ ಮೌಲ್ಯವು 9.8 ಶತಕೋಟಿ ಡಾಲರ್‌ಗಳಲ್ಲಿ ಸ್ಥಿರವಾಗಿದೆ. ಜೊತೆಗೆ ಬ್ರಾಂಡ್ ಸಾಮರ್ಥ್ಯದ ಸೂಚ್ಯಂಕ ಸ್ಕೋರ್ 88.3ರಲ್ಲಿದ್ದು, AAA ಬ್ರಾಂಡ್ ಸಾಮರ್ಥ್ಯದ ರೇಟಿಂಗ್ ಅನ್ನು ಹೊಂದಿದೆ ಎಂದು ವರದಿ ಹೇಳಿದೆ.

LIC ನಂತರದ ಶ್ರೇಯಾಂಕಗಳ ಪ್ರಕಾರ ಕ್ಯಾಥೆ ಲೈಫ್ ಇನ್ಶುರೆನ್ಸ್ ಎರಡನೇ ಪ್ರಬಲ ಬ್ರಾಂಡ್ ಆಗಿದೆಯಂತೆ. ಇದು ಬ್ರಾಂಡ್ ಮೌಲ್ಯದಲ್ಲಿ 4.9 ಶತಕೋಟಿ ಡಾಲರ್‌ ಇದ್ದು, 9 ಶೇಕಡಾ ಹೆಚ್ಚಳ ಕಂಡಿದೆ. NRMA ಇನ್ಶುರೆನ್ಸ್ ನಂತರದ ಸ್ಥಾನದಲ್ಲಿದ್ದು, 82 ಸೂಚ್ಯಂಕ ಹಾಗೂ 1.3 ಶತಕೋಟಿ ಡಾಲರ್‌ ಬ್ರಾಂಡ್ ಮೌಲ್ಯ ಹೊಂದಿದೆ.

ಈ ಸಾಧನೆ ಕುರಿತು ಪ್ರತಿಕ್ರಿಯಿಸಿರುವ ಎಲ್‌ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಾಂತಿ, “ನಮ್ಮ ಗ್ರಾಹಕರ ಅಗತ್ಯಗಳ ಬಗ್ಗೆ ನಾವು ಜಾಗೃತರಾಗಿದ್ದೇವೆ. ಅವರ ವಿಮೆ ಮತ್ತು ಹೂಡಿಕೆಯ ಅಗತ್ಯಗಳನ್ನು ಪೂರೈಸಲು ನಾವು ನಿರಂತರವಾಗಿ ಹೊಸ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಗ್ರಾಹಕರ ಸೇವೆಯತ್ತ ತೀವ್ರವಾಗಿ ಗಮನಹರಿಸುತ್ತೇವೆ ಮತ್ತು ಎಲ್ಲರಿಗೂ ಮೌಲ್ಯವರ್ಧಿತ ಸೇವೆಯನ್ನು ನೀಡುತ್ತೇವೆ” ಎಂದಿದ್ದಾರೆ.

2024ರ ಬ್ರಾಂಡ್ ಫೈನಾನ್ಸ್ ಇನ್ಶೂರೆನ್ಸ್-100 ವರದಿಯಲ್ಲಿ ಪ್ರಬಲ ವಿಮಾ ಬ್ರಾಂಡ್‌ಗಳ ಪಟ್ಟಿಯಲ್ಲಿ ನಂ.1ನೇ ಸ್ಥಾನವನ್ನು ಗಳಿಸುತ್ತಿರುವುದು ಹೆಮ್ಮೆ. ಇದು ಕಂಪನಿಯ ಮೇಲಿನ ಜನರ ನಂಬಿಕೆಯ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದ್ದಾರೆ.

ಚೀನಾದ ವಿಮಾ ಬ್ರಾಂಡ್‌ಗಳು ಜಾಗತಿಕ ಶ್ರೇಯಾಂಕದಲ್ಲಿ ಪ್ರಾಬಲ್ಯವನ್ನು ಕಾಯ್ದುಕೊಂಡಿವೆ. ಪಿಂಗ್ ಆನ್ ಬ್ರಾಂಡ್ ಮೌಲ್ಯದಲ್ಲಿ 4 ಶೇಕಡಾ ಹೆಚ್ಚಳದೊಂದಿಗೆ USD 33.6 ಶತಕೋಟಿಗೆ ಮುನ್ನಡೆ ಸಾಧಿಸಿದೆ. ನಂತರ ಚೀನಾ ಲೈಫ್ ಇನ್ಶುರೆನ್ಸ್ ಮತ್ತು CPIC ಅನುಕ್ರಮವಾಗಿ 3ನೇ ಮತ್ತು 5ನೇ ಸ್ಥಾನಗಳನ್ನು ಉಳಿಸಿಕೊಂಡಿವೆ.

ಜರ್ಮನಿಯ ಅಲಿಯಾನ್ಸ್ ಮತ್ತು ಫ್ರಾನ್ಸ್‌ನ ಎಎಕ್ಸ್‌ಎ 2 ಮತ್ತು 4ನೇ ಸ್ಥಾನಗಳಲ್ಲಿ ಅಗ್ರ 5 ಅನ್ನು ಪೂರ್ಣಗೊಳಿಸಲು ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿವೆ.

ಬ್ರಾಂಡ್ ಮೌಲ್ಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಅನುಭವಿಸುತ್ತಿರುವ ಸಂಸ್ಥೆಗಳಲ್ಲಿ, ಆಸ್ಟ್ರೇಲಿಯಾದ NRMA ವಿಮೆಯು 82 ಶೇಕಡಾ ಹೆಚ್ಚಳದೊಂದಿಗೆ USD 1.3 ಶತಕೋಟಿ ಮೌಲ್ಯವನ್ನು ಕಾಣಿಸಿದೆ. ಜೊತೆಗೆ ಡೆನ್ಮಾರ್ಕ್‌ನ Tryg ಜೊತೆಗೆ USD 1.6 ಶತಕೋಟಿಗೆ 66ರಷ್ಟು ಏರಿಕೆ ಕಂಡಿದೆ.

LIC ಇಂಡಿಯಾ FY23ರಲ್ಲಿ 39,090 ಕೋಟಿ ರೂಪಾಯಿಗಳ ಮೊದಲ ವರ್ಷದ ಪ್ರೀಮಿಯಂ ಸಂಗ್ರಹವನ್ನು ಸಾಧಿಸಿದೆ. ಆದರೆ SBI ಲೈಫ್ ಇನ್ಶುರೆನ್ಸ್ ಮತ್ತು HDFC ಲೈಫ್ ಇನ್ಶುರೆನ್ಸ್ ಕ್ರಮವಾಗಿ 15,197 ಕೋಟಿ ಮತ್ತು 10,970 ಕೋಟಿ ರೂಪಾಯಿಗಳ ಹೊಸ ವ್ಯವಹಾರ ಪ್ರೀಮಿಯಂ ಸಂಗ್ರಹಗಳೊಂದಿಗೆ ಖಾಸಗಿ ವಲಯವನ್ನು ಮುನ್ನಡೆಸಿದೆ.

ಇತ್ತೀಚಿನ ಬೆಳವಣಿಗೆಗಳಲ್ಲಿ, LIC ಉದ್ಯೋಗಿಗಳಿಗೆ 17 ಪ್ರತಿಶತ ವೇತನ ಪರಿಷ್ಕರಣೆಯನ್ನು ಸರ್ಕಾರವು ಅನುಮೋದಿಸಿದೆ. ಇದು 110,000 ಉದ್ಯೋಗಿಗಳಿಗೆ ಪ್ರಯೋಜನವಾಗಿದೆ. LICಯ ಷೇರುಗಳು ಇತ್ತೀಚೆಗೆ ರೂ. 1,175ರ ಸಾರ್ವಕಾಲಿಕ ಎತ್ತರವನ್ನು ತಲುಪಿದವು. ಇದು ಭಾರತದ ಅತ್ಯಂತ ಮೌಲ್ಯಯುತವಾದ PSU ಕಂಪನಿಯಾಗಿ ಮತ್ತು ಐದನೇ ಅತ್ಯಂತ ಮೌಲ್ಯಯುತವಾದ ಭಾರತೀಯ ಲಿಸ್ಟೆಡ್ ಕಂಪನಿಯಾಗಿ ಅದರ ಸ್ಥಾನಮಾನವನ್ನು ಮರಳಿ ಪಡೆದುಕೊಂಡಿದ್ದು, ಮಾರುಕಟ್ಟೆ ಮೌಲ್ಯಮಾಪನದಲ್ಲಿ SBI ಅನ್ನು ಮೀರಿಸಿದೆ.

ಇದನ್ನೂ ಓದಿ: LIC Employees: ಎಲ್‌ಐಸಿ ನೌಕರರಿಗೆ ಕೇಂದ್ರ ಗುಡ್‌ನ್ಯೂಸ್;‌ ಇಷ್ಟು ಪರ್ಸೆಂಟ್‌ ಸಂಬಳ ಹೆಚ್ಚಳ

Continue Reading
Advertisement
ipl 2023
ಕ್ರಿಕೆಟ್14 mins ago

IPL 2024: ಇಂದು ಆರ್‌ಸಿಬಿ- ಕೆಕೆಆರ್‌ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

dashamukha column silence
ಅಂಕಣ30 mins ago

ದಶಮುಖ ಅಂಕಣ: ಮೌನವೆಂಬ ಭಾವಸೇತು

SSLC exam
ಪ್ರಮುಖ ಸುದ್ದಿ43 mins ago

PUC Results 2024: ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ; ಇಲ್ಲಿ ವೀಕ್ಷಿಸಿ

Cooking utensils Health Tips
ಆರೋಗ್ಯ1 hour ago

Health Tips: ನಮ್ಮ ಅನಾರೋಗ್ಯದಲ್ಲಿ ನಾವು ಬಳಸುವ ಪಾತ್ರೆಗಳ ಪಾತ್ರವೇ ಮುಖ್ಯ!

Karnataka Weather
ಮಳೆ2 hours ago

Karnataka Weather : ಉತ್ತರದಲ್ಲಿ ಬಿಸಿಲ ಏಟು; ಮಲೆನಾಡು, ಕರಾವಳಿಯಲ್ಲಿ ಮಳೆಯಾಟ

Tea or Juice
ಆರೋಗ್ಯ2 hours ago

Tea or Juice: ಬೆಳಗ್ಗೆ ಟೀ ಕುಡಿದರೆ ಒಳ್ಳೆಯದೇ ಅಥವಾ ಹಣ್ಣಿನ ರಸ ಉತ್ತಮವೇ?

Dina Bhavishya
ಭವಿಷ್ಯ3 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

kea
ಕರ್ನಾಟಕ7 hours ago

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

Viral News: Holi at delhi metro
ದೇಶ8 hours ago

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Water Crisis
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202418 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202420 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌