Money Guide: ನಿಷ್ಕ್ರಿಯ ಪೋಸ್ಟ್‌ ಆಫೀಸ್‌ ಸೇವಿಂಗ್‌ ಅಕೌಂಟ್‌ ಹೀಗೆ ಸಕ್ರಿಯಗೊಳಿಸಿ... - Vistara News

ಮನಿ-ಗೈಡ್

Money Guide: ನಿಷ್ಕ್ರಿಯ ಪೋಸ್ಟ್‌ ಆಫೀಸ್‌ ಸೇವಿಂಗ್‌ ಅಕೌಂಟ್‌ ಹೀಗೆ ಸಕ್ರಿಯಗೊಳಿಸಿ…

Money Guide: ನಿಮ್ಮ ಪೋಸ್ಟ್‌ ಆಫೀಸ್‌ ಸೇವಿಂಗ್‌ ಅಕೌಂಟ್‌ ನಿಷ್ಕ್ರೀಯವಾಗಿದ್ದರೆ ಚಿಂತೆ ಬಿಡಿ. ಅದನ್ನು ಸುಲಭವಾಗಿ ಸಕ್ರೀಯಗೊಳಿಸುವ ವಿಧಾನದ ವಿವರ ಇಲ್ಲಿದೆ.

VISTARANEWS.COM


on

post office new
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೊದಲೆಲ್ಲ ಅಂಚೆ ಕಚೇರಿ ಎಂದರೆ ಥಟ್ಟನೆ ನೆನಪಿಗೆ ಬರುತ್ತಿದ್ದುದು ಪತ್ರ ವ್ಯವಹಾರ. ಆದರೀಗ ಅಂಚೆ ಕಚೇರಿಗಳು ಬ್ಯಾಂಕ್‌ಗಳಾಗಿಯೂ ಮಾರ್ಪಾಡಾಗಿವೆ. ಉಳಿತಾಯ ಎಂದಾಗ ಈಗ ಬ್ಯಾಂಕ್‌ ಜತೆಗೆ ಅಂಚೆ ಕಚೇರಿಯೂ ನೆನಪಿಗೆ ಬರುತ್ತದೆ. ಯಾಕೆಂದರೆ ಪೋಸ್ಟ್‌ ಆಫೀಸ್‌ ಬ್ಯಾಂಕ್‌ಗಳಲ್ಲಿ (Post Office Schemes) ಉಳಿತಾಯ ಯೋಜನೆಗಳಿಗೆ ಆಕರ್ಷಕ ಬಡ್ಡಿಯೂ (Interest) ಸಿಗುವುದರಿಂದ ಹೆಚ್ಚಿನ ಜನರು ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ (Saving Schemes) ಮೂಲಕ ಲಾಭ ಗಳಿಸುತ್ತಿದ್ದಾರೆ. ಇಂದಿನ ಮನಿಗೈಡ್‌ (Money Guide)ನಲ್ಲಿ ಪೋಸ್ಟ್‌ ಆಫೀಸ್‌ನ ನಿಷ್ಕ್ರಿಯ ಖಾತೆಯನ್ನು ಹೇಗೆ ಪುನಃ ಸಕ್ರೀಯಗೊಳಿಸುವುದು ಎನ್ನುವುದನ್ನು ನೋಡೋಣ.

ಯಾವಾಗ ನಿಷ್ಕ್ರಿಯವಾಗುತ್ತದೆ?

ನಿರ್ದಿಷ್ಟ ಅವಧಿಯವರೆಗೆ ಖಾತೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿದ್ದಾಗ ಅಂಚೆ ಕಚೇರಿಯಲ್ಲಿ ಖಾತೆಯನ್ನು ನಿಷ್ಕ್ರೀಯವೆಂದು ಪರಿಗಣಿಸಲಾಗುತ್ತದೆ. ಅಂದರೆ ಸತತ ಮೂರು ಹಣಕಾಸು ವರ್ಷಗಳ ಅವಧಿಯಲ್ಲಿ ಖಾತೆಯಲ್ಲಿ ಯಾವುದೇ ಠೇವಣಿ ಹೂಡಿಕೆ ಅಥವಾ ವಿತ್‌ಡ್ರಾ ನಡೆಯದಿದ್ದರೆ ಆ ಖಾತೆಯನ್ನು ಸುಪ್ತ (ನಿಷ್ಕ್ರಿಯ) ಎಂದು ಕರೆಯಲಾಗುತ್ತದೆ.

ಪುನಃ ಸಕ್ರಿಯಗೊಳಿಸಲು ಸಾಧ್ಯವೇ?

ಖಂಡಿತ ಸಾಧ್ಯವಿದೆ. ಕೆಲವೊಂದು ಡಾಕ್ಯುಮೆಂಟ್‌ ಸಲ್ಲಿಸುವ ಮೂಲಕ ಖಾತೆಯನ್ನು ಮತ್ತೆ ಚಾಲ್ತಿಗೆ ತರಬಹುದು. ಹೊಸ ಕೆವೈಸಿ ದಾಖಲೆಗಳು ಮತ್ತು ಪಾಸ್‌ಬುಕ್‌ನೊಂದಿಗೆ ಸಂಬಂಧಪಟ್ಟ ಅಂಚೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರೆ ಸಾಕು. ನಿಮ್ಮ ಪೋಸ್ಟ್‌ ಆಫೀಸ್‌ನ ಖಾತೆ ಮತ್ತೆ ಕಾರ್ಯ ನಿರ್ವಹಿಸಲಿದೆ.

ಖಾತೆ ತೆರೆಯುವುದು ಸುಲಭ

ಪೋಸ್ಟ್‌ ಆಫೀಸ್‌ನ ಖಾತೆಯ ಮುಖ್ಯ ಅನುಕೂಲವೆಂದರೆ ಇಲ್ಲಿ ಅಕೌಂಟ್‌ ತೆರೆಯುವುದು ಬಹಳ ಸುಲಭ.  ಅಗತ್ಯ ದಾಖಲೆ ನೀಡಿ, ಕೇವಲ 500 ರೂ. ಡೆಪಾಸಿಟ್‌ ಮಾಡಿದರೆ ಉಳಿತಾಯ ಖಾತೆ ತೆರೆಯಲಾಗುತ್ತದೆ. ಇನ್ನು ಚೆಕ್‌ಬುಕ್‌, ಎಟಿಎಂ ಕಾರ್ಡ್‌, ಇ-ಬ್ಯಾಂಕಿಂಗ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳೂ ಇವೆ. ವರ್ಷಕ್ಕೆ ಶೇ. 4ರಷ್ಟು ಬಡ್ಡಿಯೂ ಸಿಗುತ್ತದೆ.

ಯಾರೆಲ್ಲ ತೆರೆಯಬಹುದು?

  • ವಯಸ್ಕರು (18 ವರ್ಷ ಪ್ರಾಯ ಪೂರ್ತಿಯಾದವರು)
  • ಅಪ್ರಾಪ್ತ ವಯಸ್ಕರ ಪರವಾಗಿ ಪೋಷಕರು
  • ಮಾನಸಿಕ ಅಸ್ವಸ್ಥರ ಪರವಾಗಿ ಪಾಲಕರು

ಠೇವಣಿ ಮತ್ತು ವಿತ್‌ಡ್ರಾ ವಿವರ

  • ಕನಿಷ್ಠ ಹೂಡಿಕೆ ಮೊತ್ತ 500 ರೂ.
  • ಕನಿಷ್ಠ ವಿತ್‌ಡ್ರಾ ಮೊತ್ತ 50 ರೂ.
  • ಗರಿಷ್ಠ ಹೂಡಿಕೆಗೆ ಯಾವುದೇ ಮಿತಿ ಇಲ್ಲ
  • ಕನಿಷ್ಠ ಬ್ಯಾಲೆನ್ಸ್ 500 ರೂ. ಇರಲೇ ಬೇಕು.
  • ಖಾತೆಯ ಬ್ಯಾಲೆನ್ಸ್ ಶೂನ್ಯವಾದರೆ ಖಾತೆ ಸ್ವಯಂಚಾಲಿತವಾಗಿ ಮುಚ್ಚಲ್ಪಡುತ್ತದೆ.

ಇದನ್ನೂ ಓದಿ: Money Guide: 1.5 ಲಕ್ಷ ರೂ. ಹೂಡಿಕೆ ಮಾಡಿ 2.27 ಕೋಟಿ ರೂ. ಗಳಿಸಿ! ಯಾವುದು ಈ ಸ್ಕೀಂ?

ಬಡ್ಡಿದರ

  • ತಿಂಗಳ 10ನೇ ತಾರೀಕಿನಿಂದ ತಿಂಗಳ ಅಂತ್ಯದವರೆಗೆ ಕನಿಷ್ಠ ಬ್ಯಾಲೆನ್ಸ್ ಆಧಾರದ ಮೇಲೆ ಬಡ್ಡಿಯನ್ನು ಲೆಕ್ಕ ಹಾಕಲಾಗುತ್ತದೆ.
  • 10ನೇ ತಾರೀಕಿನಿಂದ ಕೊನೆಯ ದಿನದ ನಡುವಿನ ಬ್ಯಾಲೆನ್ಸ್ 500 ರೂ.ಗಿಂತ ಕಡಿಮೆಯಿದ್ದರೆ ಯಾವುದೇ ಬಡ್ಡಿ ಲಭಿಸುವುದಿಲ್ಲ
  • ಪ್ರತಿ ಹಣಕಾಸು ವರ್ಷದ ಕೊನೆಯಲ್ಲಿ ಹಣಕಾಸು ಸಚಿವಾಲಯ ಸೂಚಿಸಿದ ಬಡ್ಡಿದರವನ್ನು ಖಾತೆಗೆ ಜಮಾ ಮಾಡಲಾಗುತ್ತದೆ
  • ಖಾತೆಯನ್ನು ಮುಚ್ಚುವ ಸಮಯದಲ್ಲಿ, ಖಾತೆಯನ್ನು ಮುಚ್ಚಿದ ಹಿಂದಿನ ತಿಂಗಳವರೆಗೆ ಬಡ್ಡಿಯನ್ನು ಪಾವತಿಸಲಾಗುತ್ತದೆ.

ಆರ್‌ಡಿ ಖಾತೆ

ಪೋಸ್ಟ್‌ ಆಫೀಸ್‌ನಲ್ಲಿ ಆರ್‌ಡಿ (Recurring Deposit) ಖಾತೆ ತೆಗೆಯುವುದು ಉಳಿತಾಯ ಖಾತೆ ತೆರೆದಷ್ಟೇ ಸುಲಭ. ಪೋಸ್ಟ್‌ ಆಫೀಸ್‌ನಲ್ಲಿ ಉಳಿತಾಯ ಖಾತೆ ಹೊಂದಿದವರು ಆರ್‌ಡಿ ಮಾಡಬಹುದಾಗಿದೆ. ಐದು ವರ್ಷದ ಅವಧಿಗೆ ಮಾಸಿಕ ಇಂತಿಷ್ಟು ಹಣ ಕಟ್ಟುತ್ತ ಹೋದರೆ ಐದು ವರ್ಷಕ್ಕೆ ಶೇ. 6.2ರಷ್ಟು ಬಡ್ಡಿಯ ಲಾಭ ದೊರೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Money Guide: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ದೇಶದಲ್ಲಿರುವ ಅತ್ಯುತ್ತಮ ನಿವೃತ್ತಿ ಯೋಜನೆ ಎನಿಸಿಕೊಂಡಿದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದನ್ನು ಹೇಗೆ ಸರಿಪಡಿಸಬಹುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಪ್ರತಿಯೊಬ್ಬ ಉದ್ಯೋಗಿಯೂ ಕೆಲಸಕ್ಕೆ ಸೇರಿದಾಗಿನಿಂದಲೇ ನಿವೃತ್ತಿ ಜೀವನಕ್ಕಾಗಿ ಯೋಜನೆ ರೂಪಿಸುವುದು ಅಗತ್ಯ. ಅದಕ್ಕಾಗಿ ಈಗಲೇ ಒಂದಷ್ಟು ಮೊತ್ತವನ್ನು ಕೂಡಿಡಲು ಆರಂಭಿಸಬೇಕು ಎಂದು ಸಲಹೆ ನೀಡುತ್ತಾರೆ ಆರ್ಥಿಕ ತಜ್ಞರು. ಇದಕ್ಕಾಗಿ ದೇಶದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (NPS) ಕೂಡ ಒಂದು. ಎನ್‌ಪಿಎಸ್‌ ಅನ್ನು ನಿವೃತ್ತಿಗೆ ಉತ್ತಮ ಯೋಜನೆ ಎಂದು ಪರಿಗಣಿಸಲಾಗುತ್ತದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದಕ್ಕೆ ಕಾರಣವೇನು? ಇದನ್ನು ಹೇಗೆ ಸರಿಪಡಿಸಬಹುದು? ಮುಂತಾದ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಸ್ಥಗಿತಗೊಂಡ ಎನ್‌ಪಿಎಸ್‌ ಖಾತೆಯನ್ನು ಸಕ್ರಿಯಗೊಳಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಕೆಲವೊಂದು ಮಾರ್ಗಸೂಚಿಗಳನ್ನು ನೀಡಿದೆ. ಈ ಕುರಿತಾದ ವಿವರ ಇಲ್ಲಿದೆ.

ಯಾಕಾಗಿ ಖಾತೆ ಸ್ಥಗಿತಗೊಳ್ಳುತ್ತದೆ?

ಕನಿಷ್ಠ ಪಾವತಿಯ ಕೊರತೆ: ಟೈರ್ 1 ಎನ್‌ಪಿಎಸ್‌ ಖಾತೆಗಳಿಗೆ ವಾರ್ಷಿಕ ಕನಿಷ್ಠ 1,000 ರೂ. ಹೂಡಿಕೆ ಮಾಡಬೇಕಾಗುತ್ತದೆ. ಒಂದು ವರ್ಷದೊಳಗೆ ಈ ನಿಯಮ ಪಾಲಿಸದಿದ್ದರೆ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಟೈರ್ 1 ಸ್ಥಗಿತಗೊಂಡರೆ ಟೈರ್ 2 ಖಾತೆಗಳು ಸಹ ನಿಷ್ಕ್ರಿಯವಾಗುತ್ತವೆ.

ಅಪೂರ್ಣ ಕೆವೈಸಿ ಪ್ರಕ್ರಿಯೆ: ಎನ್‌ಪಿಎಸ್‌ ಖಾತೆಗಳಿಗೆ ಕೆವೈಸಿ (Know Your Customer) ಅಪ್‌ಡೇಟ್‌ ಮಾಡುವುದು ಕಡ್ಡಾಯಗೊಳಿಸಲಾಗಿದೆ. ನೋಂದಣಿ ವೇಳೆ ಅಪೂರ್ಣ ಮಾಹಿತಿ ನೀಡಿದ್ದರೆ ಅಥವಾ ಸೂಕ್ತ ದಾಖಲೆ ಒದಗಿಸದಿದ್ದರೆ ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಳ್ಳುತ್ತದೆ.

ದಾಖಲಾತಿ ನಮೂನೆ ಸಲ್ಲಿಕೆಯ ವಿಳಂಬ: ತಾಂತ್ರಿಕ ದೋಷ ಅಥವಾ ಕೇಂದ್ರ ರೆಕಾರ್ಡ್ ಕೀಪಿಂಗ್ ಏಜೆನ್ಸಿಗೆ (CRA) ದಾಖಲಾತಿ ನಮೂನೆಯನ್ನು ಸಲ್ಲಿಸುವಲ್ಲಿನ ವಿಳಂಬವು ಖಾತೆ ಸ್ಥಗಿತಗೊಳಿಸಲು ಕಾರಣವಾಗಬಹುದು.

ಆನ್‌ಲೈನ್‌ ಮೂಲಕ ಹೀಗೆ ಸಕ್ರಿಯಗೊಳಿಸಿ

ಕನಿಷ್ಠ ಕೊಡುಗೆ ಪಾವತಿಸಿ / ದಂಡ ಕಟ್ಟಿ: ಎನ್‌ಪಿಎಸ್‌ ಅಕೌಂಟ್‌ಗೆ ಲಾಗಿನ್‌ ಆಗಿ Contribution ವಿಭಾಗಕ್ಕೆ ತೆರಳಿ. ನಿಮ್ಮ ಖಾತೆ ಸ್ಥಗಿತಗೊಂಡ ಅವಧಿಯಿಂದ ತೊಡಗಿ ಇದುವರೆಗೆ ತಿಂಗಳಿಗೆ ಕನಿಷ್ಠ 500 ರೂ. ಪಾವತಿಸಿ. ಹೆಚ್ಚುವರಿಯಾಗಿ 100 ರೂ. ದಂಡವನ್ನೂ ಕಟ್ಟಿ.

ದೃಢೀಕರಣ ಮತ್ತು ಖಾತೆ ಪುನರುಜ್ಜೀವನ: ಆನ್‌ಲೈನ್‌ ಪಾವತಿಯನ್ನು ಯಶಸ್ವಿಯಾಗಿ ಮಾಡಿದ ನಂತರ ಇಮೇಲ್ ಅಕೌಂಟ್‌ಗೆ ದೃಢೀಕರಣದ ಸಂದೇಶ ಬರುತ್ತದೆ. ಬಳಿಕ ಪಿಎಫ್‌ಆರ್‌ಡಿಎ ನಿಮ್ಮ ಖಾತೆಯನ್ನು ಪರಿಶೀಲಿಸಿ ಕೆಲವೇ ದಿನಗಳಲ್ಲಿ ಅದನ್ನು ಮತ್ತೆ ಸಕ್ರಿಯಗೊಳಿಸುತ್ತದೆ.

ಆಫ್‌ಲೈನ್‌ ಮೂಲಕ ಸಕ್ರಿಯಗೊಳಿಸುವ ವಿಧಾನ

ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ: ದಂಡ ಸಹಿತ ಬಾಕಿ ಇರುವ ಮೊತ್ತವನ್ನು ಪಾವತಿಸಿ. ಬಳಿಕ ಎನ್‌ಪಿಎಸ್‌ ವೆಬ್‌ಸೈಟ್‌ನಿಂದ UOS-S10-A ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ. ಅದನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಪ್ಯಾನ್‌ ಕಾರ್ಡ್‌ ಪ್ರತಿಯನ್ನು ಲಗತ್ತಿಸಿ. ಇದನ್ನು ನಿಮ್ಮ ಪಿಒಪಿ ಶಾಖೆ (ಬ್ಯಾಂಕ್ ಅಥವಾ ನಿಯೋಜಿತ ಏಜೆನ್ಸಿ)ಗೆ ನೀಡಿ. ಪಿಒಪಿ ನಿಮ್ಮ ಮನವಿಯನ್ನು ಪರಿಶೀಲಿಸಿ ಪಿಎಫ್‌ಆರ್‌ಡಿಎಗೆ ಕಳುಹಿಸುತ್ತದೆ. ಕೆಲವೇ ದಿನಗಳಲ್ಲಿ ಖಾತೆ ಸಕ್ರಿಯಗೊಂಡಿರುವ ಬಗ್ಗೆ ಎಸ್‌ಎಂಎಸ್‌ ಅಥವಾ ಇಮೇಲ್‌ಗೆ ಮಾಹಿತಿ ರವಾನೆಯಾಗುತ್ತದೆ.

ಆಧಾರ್ ದೃಢೀಕರಣ ಕಡ್ಡಾಯ

ದೇಶಾದ್ಯಂತ ಆನ್‌ಲೈನ್‌ ವಂಚನೆ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಖಾತೆಗಳ ಲಾಗಿನ್ ಪ್ರಕ್ರಿಯೆಯಲ್ಲಿ ಬದಲಾವಣೆ ತಂದಿದೆ. ಏಪ್ರಿಲ್ 1ರಿಂದ ಹೊಸ ನಿಯಮ- ಕಡ್ಡಾಯ ಆಧಾರ್ ಅಥೆಂಟಿಕೇಷನ್‌ ಜಾರಿಗೆ ಬಂದಿದೆ.  

ಇದನ್ನೂ ಓದಿ: Money Guide: ಗಮನಿಸಿ; ಏ. 1ರಿಂದ ಎನ್‌ಪಿಎಸ್ ವಹಿವಾಟಿಗೆ ಆಧಾರ್ ದೃಢೀಕರಣ ಕಡ್ಡಾಯ: ಏನಿದು ಹೊಸ ನಿಯಮ ? ಯಾಕಾಗಿ ?

Continue Reading

ಮನಿ ಗೈಡ್

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ನಿರ್ದಿಷ್ಟ ಉದ್ದೇಶಗಳೊಂದಿಗೆ ವಿನ್ಯಾಸಗೊಳಿಸಲಾದ (Money Guide) ಎರಡು ಪ್ರಮುಖ ಯೋಜನೆಗಳಾಗಿವೆ. ಮಹಿಳೆಯರಿಗೆ ಈ ಎರಡು ಯೋಜನೆಗಳ ಪ್ರಯೋಜನಗಳು ಏನೇನು? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Money Guide
Koo

ಮಹಿಳೆಯರನ್ನು (women) ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು, ಲಿಂಗ ಸಮಾನತೆಯನ್ನು ಉತ್ತೇಜಿಸಲು ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆಗಳನ್ನು ಪರಿಚಯಿಸಿದೆ. ಸಾಮಾನ್ಯವಾಗಿ ಮಹಿಳೆಯರು ಹಣಕಾಸಿನ ಸೇವೆಗಳ (Money Guide) ಸದುಪಯೋಗಪಡಿಸಲು ಮತ್ತು ಉಳಿತಾಯ ಕಾರ್ಯವಿಧಾನಗಳಲ್ಲಿ ಭಾಗವಹಿಸಲು ಅಡೆತಡೆಗಳನ್ನು ಎದುರಿಸುತ್ತಾರೆ. ವಿಶೇಷ ಉಳಿತಾಯ ಯೋಜನೆಗಳು (saving Scheme) ಅವರನ್ನು ಆರ್ಥಿಕ ಮುಖ್ಯವಾಹಿನಿಗೆ ತರುವ ಗುರಿಯನ್ನು ಹೊಂದಿದ್ದು, ಇದರಿಂದ ಅವರ ಭವಿಷ್ಯಕ್ಕಾಗಿ ಉಳಿತಾಯವನ್ನು ಮಾಡಲು ಪ್ರೋತ್ಸಾಹಿಸುತ್ತವೆ.

ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Scheme) ಮತ್ತು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು (Mahila Samman Saving Certificate) ನಿರ್ದಿಷ್ಟ ಉದ್ದೇಶಗಳೊಂದಿಗೆ ವಿನ್ಯಾಸಗೊಳಿಸಲಾದ ಎರಡು ಪ್ರಮುಖ ಯೋಜನೆಗಳಾಗಿವೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇದು ಪ್ರಮುಖವಾಗಿದೆ. ಉಳಿತಾಯ ಮತ್ತು ಹೂಡಿಕೆಗೆ ಅವಕಾಶಗಳನ್ನು ಒದಗಿಸುವ ಮೂಲಕ ಈ ಯೋಜನೆಗಳು ಮಹಿಳೆಯರು ತಮ್ಮ ಹಣಕಾಸಿನ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಮತ್ತು ಸ್ವತಂತ್ರ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.


ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಭಾರತ ಸರ್ಕಾರದ ಒಂದು ಬಾರಿಯ ಹೊಸ ಸಣ್ಣ ಉಳಿತಾಯ ಯೋಜನೆಯಾಗಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಮಾರ್ಚ್ 2025ರವರೆಗೆ ಎರಡು ವರ್ಷಗಳವರೆಗೆ ಲಭ್ಯವಿದೆ. ಇದು 2 ವರ್ಷಗಳ ಅವಧಿಗೆ ಮಹಿಳೆಯರು ಅಥವಾ ಹುಡುಗಿಯರ ಹೆಸರಿನಲ್ಲಿ 2 ಲಕ್ಷದವರೆಗೆ ಠೇವಣಿ ಸೌಲಭ್ಯವನ್ನು ನೀಡುತ್ತದೆ.

ಬಡ್ಡಿ ದರ

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಮಹಿಳೆಯರು ಅಥವಾ ಬಾಲಕಿಯರ ಹೆಸರಿನಲ್ಲಿ 2 ಲಕ್ಷದವರೆಗೆ ಠೇವಣಿ ಸೌಲಭ್ಯವನ್ನು 2 ವರ್ಷಗಳ ಅವಧಿಗೆ ಶೇ. 7.5ರ ಸ್ಥಿರ ಬಡ್ಡಿ ದರದಲ್ಲಿ ಭಾಗಶಃ ಹಿಂತೆಗೆದುಕೊಳ್ಳುವ ಆಯ್ಕೆಯೊಂದಿಗೆ ನೀಡುತ್ತದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಅಲ್ಪಾವಧಿಗೆ ಮಹಿಳೆಯ ಹೆಸರಿನಲ್ಲಿ ಹೂಡಿಕೆ ಮಾಡುವ ಸ್ಥಿರ ಠೇವಣಿಗಳಿಗೆ (ಎಫ್‌ಡಿ) ಸೂಕ್ತವಾದ ಪರ್ಯಾಯವಾಗಿದೆ ಎಂಬುದು ತಜ್ಞರ ಅಭಿಪ್ರಾಯ.

ಅರ್ಹತೆ

ಯಾವುದೇ ಭಾರತೀಯ ನಿವಾಸಿ ಮಹಿಳೆ ಇದನ್ನು ಪಡೆಯಬಹುದು. ಯಾವುದೇ ವಯಸ್ಸಿನ ನಿರ್ಬಂಧ ಇಲ್ಲ. ಅಪ್ರಾಪ್ತ ವಯಸ್ಸಿನ ಬಾಲಕಿಯ ಸ್ವಾಭಾವಿಕ ಅಥವಾ ಕಾನೂನುಬದ್ಧ ಪೋಷಕರಿಂದ ಖಾತೆಯನ್ನು ಮಾಡಬಹುದು.

ಠೇವಣಿ ಮಿತಿಗಳು

ಕನಿಷ್ಠ ಠೇವಣಿ 1000 ರೂ.ನಿಂದ ಗರಿಷ್ಠ 2 ಲಕ್ಷ ರೂ. ಪ್ರತಿ ಠೇವಣಿದಾರರ ಖಾತೆಗಳ ಸಂಖ್ಯೆಯ ಮೇಲೆ ಯಾವುದೇ ಮಿತಿಯಿಲ್ಲ. ಈ ಯೋಜನೆಯಡಿಯಲ್ಲಿ ಎಲ್ಲಾ ಖಾತೆಗಳ ಒಟ್ಟು ಮೊತ್ತವು 2 ಲಕ್ಷ ರೂ.ಗಳನ್ನು ಮೀರುವುದಿಲ್ಲ. ಒಂದೇ ಗ್ರಾಹಕನಿಗೆ ಈ ಯೋಜನೆಯಡಿಯಲ್ಲಿ ಎರಡು ಖಾತೆಗಳನ್ನು ತೆರೆಯಬಹುದು. ಆದರೆ ಇದರ ನಡುವೆ 3 ತಿಂಗಳ ಮಧ್ಯಂತರ ಸಮಯವಿದೆ.

ಕೊನೆಯ ದಿನಾಂಕ

ಯೋಜನೆಯು ಸೀಮಿತ ಅವಧಿಗೆ ಮಾತ್ರ ಲಭ್ಯವಿದೆ. ಸದ್ಯಕ್ಕೆ, ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಎರಡು ವರ್ಷಗಳ ಯೋಜನೆಯಾಗಿದ್ದು, ಇದು ಏಪ್ರಿಲ್ 2023ರಲ್ಲಿ ಪ್ರಾರಂಭವಾಯಿತು ಮತ್ತು ಮಾರ್ಚ್ 2025ರವರೆಗೆ ಮುಂದುವರಿಯುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯನ್ನು ದೇಶಾದ್ಯಂತ ಬ್ಯಾಂಕ್‌ಗಳು ಮತ್ತು ಅಂಚೆ ಕಚೇರಿಗಳ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದು.

ಸುಕನ್ಯಾ ಸಮೃದ್ಧಿ ಯೋಜನೆ

ಸುಕನ್ಯಾ ಸಮೃದ್ಧಿ ಯೋಜನೆ (ಯೋಜನೆ) (SSY) ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಪ್ರಕಾರ ಆಕರ್ಷಕ ಬಡ್ಡಿದರಗಳು ಮತ್ತು ತೆರಿಗೆ ಪ್ರಯೋಜನಗಳನ್ನು ಒದಗಿಸುವ ಮೂಲಕ ಹೆಣ್ಣುಮಕ್ಕಳಿಗೆ ಸಮೃದ್ಧ ಭವಿಷ್ಯವನ್ನು ಭದ್ರಪಡಿಸುವ ಗುರಿಯನ್ನು ಹೊಂದಿದೆ.


ಮಹಿಳಾ ಸಮ್ಮಾನ್ ಮತ್ತು ಸುಕನ್ಯಾ ಸಮೃದ್ಧಿ ನಡುವಿನ ವ್ಯತ್ಯಾಸ

ಸುಕನ್ಯಾ ಸಮೃದ್ಧಿ ಯೋಜನೆಯು ಭಾರತ ಸರ್ಕಾರದ ಒಂದು ಸಣ್ಣ ಠೇವಣಿ ಯೋಜನೆಯಾಗಿದ್ದು, ಇದು ಹೆಣ್ಣು ಮಗುವಿಗೆ ಮಾತ್ರ ಮೀಸಲಾಗಿದೆ. ಈ ಯೋಜನೆಯು ಹೆಣ್ಣು ಮಗುವಿನ ಶಿಕ್ಷಣ ಮತ್ತು ಮದುವೆ ವೆಚ್ಚವನ್ನು ಭರಿಸಲು ಉದ್ದೇಶಿಸಲಾಗಿದೆ.

ಸುಕನ್ಯಾ ಸಮೃದ್ಧಿ ಎಂಬುದು ಭಾರತದಲ್ಲಿನ ಸರ್ಕಾರಿ ಕಾರ್ಯಕ್ರಮವಾಗಿದ್ದು, ಕುಟುಂಬಗಳು ತಮ್ಮ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಉಳಿಸಲು ಸಹಾಯ ಮಾಡಲು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನದ ಭಾಗವಾಗಿ 2015 ರಲ್ಲಿ ಪ್ರಾರಂಭಿಸಲಾಯಿತು. ಇದು ವಾರ್ಷಿಕವಾಗಿ ಶೇ. 8.2 ಬಡ್ಡಿದರವನ್ನು ನೀಡುತ್ತದೆ. ಸುಕನ್ಯಾ ಸಮೃದ್ಧಿ ಯೋಜನೆಯು ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಹೊಂದಿದೆ.

ಅರ್ಹತೆ

10 ವರ್ಷ ವಯಸ್ಸಿನ ಹೆಣ್ಣು ಮಗುವಿಗೆ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆಯಬಹುದು.

ಕನಿಷ್ಠ ಮತ್ತು ಗರಿಷ್ಠ ಠೇವಣಿ

ಕನಿಷ್ಠ 250 ರೂ. ಮತ್ತು ಗರಿಷ್ಠ ರೂ. ವಾರ್ಷಿಕವಾಗಿ 1.5 ಲಕ್ಷ ರೂ. ಗಳನ್ನು ಠೇವಣಿ ಮಾಡಬಹುದು.

ಹೂಡಿಕೆಯ ಅವಧಿ

ಕನಿಷ್ಠ 15 ವರ್ಷಗಳ ಕೊಡುಗೆಗಳ ಅಗತ್ಯವಿದೆ.

ಇದನ್ನೂ ಓದಿ: Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

ಭಾಗಶಃ ಹಿಂತೆಗೆದುಕೊಳ್ಳುವಿಕೆಗಳು

ಹೆಣ್ಣು ಮಗುವಿಗೆ 18 ವರ್ಷ ತುಂಬಿದ ಅನಂತರ ಉನ್ನತ ಶಿಕ್ಷಣದ ವೆಚ್ಚಗಳಿಗಾಗಿ ಭಾಗಶಃ ಹಿಂಪಡೆಯುವಿಕೆಗಳನ್ನು ಅನುಮತಿಸಲಾಗುತ್ತದೆ.

ಖಾತೆ ಮುಚ್ಚುವಿಕೆ

ಖಾತೆಯು 21 ವರ್ಷಗಳಲ್ಲಿ ಪಕ್ವವಾಗುತ್ತದೆ ಅಥವಾ 18 ವರ್ಷ ತುಂಬಿದ ನಂತರ ಹುಡುಗಿಯ ಮದುವೆಯ ಸಂದರ್ಭದಲ್ಲಿ ಅಕಾಲಿಕವಾಗಿ ಖಾತೆಯನ್ನು ಮುಚ್ಚಬಹುದು.

Continue Reading

ಮನಿ-ಗೈಡ್

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

Money Guide: ಇಂದಿನ ಮಕ್ಕಳೇ ಮುಂದಿನ ಜನಾಂಗ. ಹೀಗಾಗಿ ಮಕ್ಕಳಲ್ಲಿ ಆರ್ಥಿಕ ಶಿಸ್ತು ಬೆಳೆಸುವುದು ಮುಖ್ಯ. ಇದರಿಂದ ಭವಿಷ್ಯದಲ್ಲಿ ಅವರು ಸಾಲಕ್ಕೆ ಕೈ ಚಾಚುವುದು ತಪ್ಪುತ್ತದೆ. ನೀವು ಬಾಯಿ ಮಾತಿನಲ್ಲಿ ಹೇಳುವುದಕ್ಕಿಂತ ಪ್ರಾಕ್ಟಿಕಲ್‌ ಆಗಿ ಅವರಿಗೆ ತಿಳಿ ಹೇಳಲು ಈ ರಜಾ ಅವಧಿ ಅತ್ಯಂತ ಪ್ರಶಸ್ತ ಸಮಯ. ಹಾಗಾದರೆ ಹೇಗೆ ಮಕ್ಕಳಿಗೆ ಪ್ರಾಯೋಗಿಕ ಪಾಠ ಮಾಡಬಹುವುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಮಕ್ಕಳಿಗೆ ಈಗ ರಜಾ ಅವಧಿ. ಪಾಠ, ಪರೀಕ್ಷೆ, ಸೆಮಿನಾರ್‌ ಹೀಗೆ ವರ್ಷಪೂರ್ತಿ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿದ್ದ ಅವರು ರಿಲೀಫ್‌ ಆಗುವ ಸಮಯ. ಈಗ ಬೆಳಗ್ಗೆ ಬೇಗ ಎದ್ದು ಗಡಿಬಿಡಿಯಲ್ಲಿ ಶಾಲೆ, ಕಾಲೇಜಿಗೆ ಓಡಬೇಕೆಂಬ ಧಾವಂತ ಇರುವುದಿಲ್ಲ. ತಮಗೆ ಬೇಕಾದಂತೆ ಕಾಲ ಕಳೆಯಬಹುದು. ಹಾಗಂತ ಅವರನ್ನು ಅವರ ಪಾಡಿಗೆ ಪೂರ್ತಿಯಾಗಿ ಬಿಡಬೇಡಿ. ಅವರಲ್ಲಿ ಆರ್ಥಿಕ ಸಾಕ್ಷರತೆ ಮೂಡಿಸಲು ಇದು ತಕ್ಕ ಸಮಯ. ಎಳವೆಯಲ್ಲಿಯೇ ಆರ್ಥಿಕತೆಯ ವಿಚಾರದಲ್ಲಿ ಅವರಲ್ಲಿ ಶಿಸ್ತು ಮೂಡಿದರೆ ಭವಿಷ್ಯದಲ್ಲಿ ಎದುರಾಗುವ ಅದೆಷ್ಟೋ ಸಮಸ್ಯೆಗಳಿಂದ ಪಾರಾಗಬಹುದು. ನೀವು ಬಾಯಿ ಮಾತಿನಲ್ಲಿ ಹೇಳುವುದಕ್ಕಿಂತ ಪ್ರಾಕ್ಟಿಕಲ್‌ ಆಗಿ ಅವರಿಗೆ ತಿಳಿ ಹೇಳಲು ಈ ರಜಾ ಅವಧಿ ಅತ್ಯಂತ ಪ್ರಶಸ್ತ ಸಮಯ. ಹಾಗಾದರೆ ಹೇಗೆ ಮಕ್ಕಳಿಗೆ ಪ್ರಾಯೋಗಿಕ ಪಾಠ ಮಾಡಬಹುವುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಉಳಿತಾಯದ ಮಹತ್ವ ತಿಳಿ ಹೇಳಿ

ಹಣದ ಉಳಿತಾಯ ಎಲ್ಲರಿಗೂ, ಎಲ್ಲ ಕಾಲಕ್ಕೂ ಅನಿವಾರ್ಯ. ಒಂದಷ್ಟು ಉಳಿತಾಯ ನಿಮ್ಮ ಬಳಿ ಇದ್ದರೆ ಸಾಲ ಮಾಡುವುದರಿಂದ ಪಾರಾಗಬಹುದು. ಆರಂಭದಲ್ಲಿ ಈ ಪಾಠವನ್ನು ಮಕ್ಕಳಿಗೆ ತಿಳಿ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲರಿಗೂ ಇದನ್ನು ಅವರಿಗೆ ಮನದಟ್ಟಾಗುವಂತೆ ವಿವರಿಸಿ. ಮಕ್ಕಳ ಹೆಸರಿನಲ್ಲಿ ಸೇವಿಂಗ್ಸ್‌ ಅಕೌಂಟ್‌ ಓಪನ್‌ ಮಾಡಿ. ಪೋಸ್ಟ್‌ ಆಫೀಸ್‌ನಲ್ಲಿಯೂ ಖಾತೆ ತೆರೆಯಬಹುದು. ಅದರಲ್ಲಿ ನಿಯಮಿತವಾಗಿ ಠೇವಣಿ ಇಡಲು ಹೇಳಿ. ನೀವು ಅವರ ಅಕೌಂಟ್‌ಗೆ ಹಣ ಹಾಕುವುದಕ್ಕಿಂತ ಈ ಕೆಲಸವನ್ನು ಸ್ವತಃ ಅವರೇ ನಿರ್ವಹಿಸಲಿ. ಇದರಿಂದ ಅವರಿಗೆ ಉಳಿತಾಯದ ಪ್ರಾಧಾನ್ಯತೆ ಅರಿವಾಗುತ್ತದೆ. ಇದರ ಜತೆಗೆ ಚಿಕ್ಕ ಮಕ್ಕಳಾಗಿದ್ದರೆ ಮನೆಯಲ್ಲಿಯೇ ಉಳಿತಾಯ ಮಾಡಲು ಪಿಗ್ಗಿ ಬ್ಯಾಂಕ್‌ನ ವ್ಯವಸ್ಥೆ ಮಾಡಿ. ಭವಿಷ್ಯದ ಗುರಿಗಳಿಗಾಗಿ ಉಳಿತಾಯದ ಪ್ರಾಮುಖ್ಯತೆ ಮತ್ತು ಕಾಲಾನಂತರದಲ್ಲಿ ಸಣ್ಣ ಮೊತ್ತಗಳು ಹೇಗೆ ಉತ್ತಮ ಸಂಗ್ರಹವಾಗಿ ಬದಲಾಗಬಹುದು ಎಂಬುದನ್ನು ಅರ್ಥ ಮಾಡಿಸಿ. ಅದಕ್ಕಾಗಿ ಹೀಗೆ ಮಾಡಿ: ಅವರು ಯಾವುದಾದರೂ ವಸ್ತುವಿಗೆ ಬೇಡಿಕೆ ಇಟ್ಟರೆ (ಸೈಕಲ್‌, ಬ್ಯಾಗ್‌ ಇತ್ಯಾದಿ) ಕೂಡಲೇ ತಂದು ಕೊಡಬೇಡಿ. ಅವರ ಉಳಿತಾಯದ ಹಣದಿಂದ ಅವರ ಅಗತ್ಯವನ್ನು ಕಂಡುಕೊಳ್ಳುವ ಬಗ್ಗೆ ಪ್ರಸ್ತಾವಿಸಿ. ನಿರ್ದಿಷ್ಟ ಸಮಯದವರೆಗೆ ಹಣ ಉಳಿಸಿದರೆ ಹೇಗೆ ನಮ್ಮ ಅಗತ್ಯಗಳನ್ನು ಪೂರೈಸಬಹುದು ಎನ್ನುವದನ್ನು ಅವರಿಗೆ ಮನದಟ್ಟು ಮಾಡಿ.

ಪಾರ್ಟ್‌ ಟೈಮ್‌ ಜಾಬ್‌

ಸ್ವಲ್ಪ ದೊಡ್ಡ ಮಕ್ಕಳಾದರೆ (ಎಸ್ಸೆಸ್ಸೆಲ್ಸಿ / ಪಿಯು / ಪದವಿ) ಅವರಿಗೆ ರಜೆಯಲ್ಲಿ ಸಣ್ಣ ಪುಟ್ಟ ಪಾರ್ಟ್‌ ಟೈಮ್‌ ಜಾಬ್‌ ಕೊಡಿಸಿ. ಈ ಮೂಲಕ ಅವರಿಗೆ ಹಣದ ಮಹತ್ವ ತಿಳಿಸಿಕೊಡಿ. ಕಾರ್ಖಾನೆಗಳಲ್ಲಿ ಲೆಕ್ಕ ಪತ್ರ ನೋಡಿಕೊಳ್ಳುವುದು, ಪ್ಯಾಕ್‌ ಮಾಡುವುದು, ಕಂಪ್ಯೂಟರ್‌ ಕೆಲಸ, ಸೇಲ್‌ ಮ್ಯಾನ್‌ / ಸೇಲ್ಸ್‌ ಗರ್ಲ್‌, ಬೆಳಗ್ಗೆ ದಿನ ಪತ್ರಿಕೆ ಹಂಚುವುದು ಇತ್ಯಾದಿ ಕೆಲಸ ಮಾಡುವಂತೆ ಮಕ್ಕಳನ್ನು ಪ್ರೋತ್ಸಾಹಿಸಿ. ಹಳ್ಳಿಯವರಾದರೆ ಹೊಲ, ತೋಟದ ಕೆಲಸಕ್ಕೆ ತಮ್ಮೊಂದಿಗೆ ಬರುವಂತೆ ಹೇಳಿ. ಅವರ ಕೆಲಸಕ್ಕೆ ಅನುಗುಣವಾಗಿ ಇಂತಿಷ್ಟು ಸಂಬಳ ನಿಗದಿ ಪಡಿಸಿ. ಬೇಕಿದ್ದರೆ ಅವರ ಟ್ಯೂಷನ್‌ ಕೂಡ ಮಾಡಬಹುದು. ಒಟ್ಟಿನಲ್ಲಿ ಅವರು ಸಂಪಾದಿಸುವಂತೆ ಮಾಡಿ ಅವರಿಗೆ ದುಡಿಮೆಯ ಮಹತ್ವ ತಿಳಿಸಿ.

ಸಂಬಳವನ್ನು ಸರಿಯಾಗಿ ಹಂಚಿಕೆ ಮಾಡಿ

ಮಕ್ಕಳ ಸಂಪಾದನೆಯನ್ನು ಮುಂದಿಟ್ಟುಕೊಂಡು ಅದನ್ನು ಯಾವೆಲ್ಲ ರೀತಿ ಹಂಚಿಕೆ ಮಾಡಬಹುದು ಎನ್ನುವುದನ್ನು ಅವರೊಂದಿಗೆ ಚರ್ಚಿಸಿ. ಅವರ ಖರ್ಚಿಗೆ, ಮನೆ ಖರ್ಚಿಗೆ, ಇತರ ಅಗತ್ಯಗಳಿಗೆ ಹಂಚಿಕೆ ಮಾಡಿ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡುವುದು ಹೇಗೆ ಎನ್ನುವುದರ ಯೋಜನೆ ತಯಾರಿಸಿ. ಇನ್ನು ಅನಗತ್ಯ ವಸ್ತುಗಳನ್ನು ಅವರು ಖರೀದಿಸುವುದನ್ನು ತಪ್ಪಿಸಿ. ಅವರ ಆನ್‌ಲೈನ್‌ ಶಾಪಿಂಗ್‌ ಬಗ್ಗೆ ನಿಗಾ ಇಡಿ.

ಬಜೆಟ್‌ ತಯಾರಿಸಲಿ

ಬಜೆಟ್‌ ಯಾಕೆ ಮುಖ್ಯ ಎನ್ನುವುದರ ಕುರಿತು ಮಾಹಿತಿ ನೀಡಿ. ಇದಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಮಂಡಿಸುವ ಬಜೆಟ್‌ನ ಉದಾಹರಣೆ ಕೊಡಬಹುದು. ಬಳಿಕ ಅವರೇ ಬಜೆಟ್‌ ತಯಾರಿಸಲಿ. ಅವರ ಬಳಿ ಇರುವ ಪಾಕೆಟ್‌ ಮನಿ, ಉಡುಗೊರೆ ಸಿಕ್ಕ ಹಣ, ಸಂಬಳವನ್ನು ಆಟದ ವಸ್ತು ಖರೀದಿ, ತಿಂಡಿ ಖರೀದಿ ಮತ್ತು ಉಳಿತಾಯಕ್ಕೆ ಹೇಗೆ ಹಂಚಿಕೆ ಮಾಡಬಹುದು ಎನ್ನುವುದನ್ನು ಅವರೇ ಪ್ಲ್ಯಾನ್‌ ಮಾಡಲಿ.

ಹಾಸಿಗೆ ಇದ್ದಷ್ಟೇ ಕಾಲು ಚಾಚು ಎನ್ನುವ ಪಾಠ

ಮನೆ ಸಾಮಗ್ರಿ ಖರೀದಿಗೆ ಹೋಗುವಾಗ ಅವರನ್ನು ಕರೆದುಕೊಂಡು ಹೋಗಿ. ಕೈಯಲ್ಲಿ ಇರುವ ಹಣದಿಂದ ಹೇಗೆ ನಮ್ಮ ಅಗತ್ಯಗಳನ್ನು ಪೂರೈಸಬಹುದು ಎನ್ನುವುದು ಅವರ ಗಮನಕ್ಕೆ ಬರಲಿ. ನೆನಪಿಡಿ, ಮಕ್ಕಳು ನಿಮ್ಮನ್ನು ನೋಡಿ ಕಲಿಯುವುದರಿಂದ, ನಿಮ್ಮ ಪ್ರಭಾವ ಹೆಚ್ಚೇ ಬೀರುವುದರಿಂದ ನೀವು ಕೂಡ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಿ. ಬಿಲ್‌ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಿ, ಭವಿಷ್ಯಕ್ಕಾಗಿ ಉಳಿತಾಯ ಮಾಡಿ. ಎಲ್ಲದಕ್ಕಿಂತ ಮುಖ್ಯವಾಗಿ ಹಾಸಿಗೆ ಇದ್ದಷ್ಟೇ ಕಾಲು ಚಾಚುವುದನ್ನು ರೂಢಿಸಿಕೊಳ್ಳಿ. ಅದನ್ನೇ ಮಕ್ಕಳಿಗೂ ತಿಳಿಸಿ. ಮಾತ್ರವಲ್ಲ ಹೂಡಿಕೆಯ ಪ್ರಾಧಾನ್ಯತೆಯ ಬಗ್ಗೆ ಮಕ್ಕಳಿಗೆ ವಿವರಿಸಿ. ಸಂಪತ್ತು ವೃದ್ಧಿಗೆ ಹೂಡಿಕೆ ಎನ್ನುವುದು ಅತ್ಯುತ್ತಮ ಮಾರ್ಗ ಎನ್ನವುದನ್ನು ತಿಳಿಸಿ. ಹೂಡಿಕೆಗೆ ವಿವಿಧ ವಿಧಾನಗಳಿದ್ದರೂ ಸುರಕ್ಷಿತ ಮಾರ್ಗವನ್ನು ಆಯ್ದುಕೊಳ್ಳುವ ಬಗ್ಗೆ ತಿಳಿಸಿ.

ಇದನ್ನೂ ಓದಿ: Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

Continue Reading

ಮನಿ-ಗೈಡ್

Money Guide: ಕಾರ್ಪೊರೇಟ್- ವೈಯಕ್ತಿಕ ಆರೋಗ್ಯ ವಿಮೆಯ ನಡುವಿನ ವ್ಯತ್ಯಾಸ ತಿಳಿದಿರಲಿ

Money Guide: ಕೆಲಸವಿರುವಾಗ ಆರೋಗ್ಯ ವಿಮೆಯ ಚಿಂತೆ ಇರುವುದಿಲ್ಲ. ಕೈಯಲ್ಲಿ ಹಣವಿರುವುದರಿಂದ ಹೂಡಿಕೆ ಮಾಡುವ ಒಲವು ಇರುವುದಿಲ್ಲ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಎಲ್ಲವನ್ನೂ ದೋಚಿಕೊಂಡು ಹೋದಾಗಲೇ ನಾನು ಮೊದಲೇ ಆರೋಗ್ಯ ವಿಮೆಯ ಬಗ್ಗೆ ಯೋಚಿಸಬೇಕಿತ್ತು ಎನ್ನುವಂತೆ ಮಾಡುತ್ತದೆ.

VISTARANEWS.COM


on

By

Health Plan
Koo

ನಿತ್ಯದ ಕೆಲಸದ ಒತ್ತಡದಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವಜನರು ಆರೋಗ್ಯದ ಅಪಾಯವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಆರೋಗ್ಯದ ಸುರಕ್ಷತೆಯಿಂದ (Health Plan) ಸಣ್ಣ ವಯಸ್ಸಿನಲ್ಲೇ ಉಳಿತಾಯ (saving) ಮಾಡುವುದು ಅನಿವಾರ್ಯವಾಗುತ್ತಿದೆ. ಹೀಗಾಗಿ ಹೆಚ್ಚಿನವರಿಗೆ ಮ್ಯೂಚುಯಲ್ ಫಂಡ್‌ (Mutual fund) ಮತ್ತು ಎಸ್‌ಐಪಿಗಳು (SIP) ದೀರ್ಘಾವಧಿಗೆ ಉತ್ತಮ ಹಣಕಾಸಿನ ಸಾಧನಗಳಾಗಿ ಕಾಣುತ್ತದೆ. ಇದರ ಮಧ್ಯೆ ವೈಯಕ್ತಿಕ ಆರೋಗ್ಯ ವಿಮೆ (personal health insurance) ಕೂಡ ಹಣಕಾಸಿನ ಉತ್ಪನ್ನವಾಗಿ ಕಾಣುತ್ತಿದೆ. ಆದರೆ ಇಲ್ಲಿ ವೈಯಕ್ತಿಕ ಆರೋಗ್ಯ ವಿಮಾ ಪಾಲಿಸಿಗಿಂತ ಉದ್ಯೋಗದಾತರ ಕಾರ್ಪೊರೇಟ್ ವಿಮೆಯ (corporate insurance) ಮೇಲಿನ ಅವಲಂಬನೆ ಹೆಚ್ಚಾಗಿದೆ (Money Guide).

ಕೆಲವೊಂದು ಬಾರಿ ಇದು ಎಲ್ಲ ವೆಚ್ಚಗಳನ್ನು ಸರಿದೂಗಿಸಲು ಸಾಕಾಗುವುದಿಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿ, ಅನಿರೀಕ್ಷಿತ ಘಟನೆಗಳಲ್ಲಿ ಹಣಕಾಸಿನ ಒತ್ತಡಕ್ಕೆ ಇದು ಕಾರಣವಾಗುತ್ತದೆ.

ಯುವ ವೃತ್ತಿಪರರ ಮುಂದೆ ಇರುವ ಹೆಚ್ಚಿನ ಸವಾಲೆಂದರೆ ದೀರ್ಘಾವಧಿಯ ಉಳಿತಾಯಕ್ಕಿಂತ ತಕ್ಷಣದ ತೃಪ್ತಿಯ ಕಡೆಗೆ ಅವರ ಒಲವು. ತಕ್ಷಣದ ವೈಯಕ್ತಿಕ, ವೃತ್ತಿ ಗುರಿಗಳನ್ನು ಅನುಸರಿಸುವುದರ ಮೇಲೆಯೇ ಅವರು ಗಮನ ಕೇಂದ್ರೀಕರಿಸುವುದರಿಂದ ಭವಿಷ್ಯದ ಅನಿಶ್ಚಯಗಳಿಗೆ ಅವರು ಸಿದ್ಧವಾಗಿರುವುದಿಲ್ಲ. ಹೀಗಾಗಿ ವೈಯಕ್ತಿಕ ಆರೋಗ್ಯ ವಿಮೆಯಲ್ಲಿ ಹೂಡಿಕೆ ಮಾಡುವುದನ್ನು ಅವರು ಸಾಮಾನ್ಯವಾಗಿ ಕಡೆಗಣಿಸುತ್ತಾರೆ. ಅವರ ಈ ಮನಸ್ಥಿತಿಯು ಮುಂದೆ ಎದುರಾಗುವ ಅನಿರೀಕ್ಷಿತ ಆರೋಗ್ಯ ಸಮಸ್ಯೆಗಳಿಂದ ಗಮನಾರ್ಹ ಆರ್ಥಿಕ ಹೊರೆಗಳಿಗೆ ಕಾರಣವಾಗುತ್ತದೆ.


ಇದನ್ನೂ ಓದಿ: Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

ಯುವ ವೃತ್ತಿಪರರ ಒಂದು ವರ್ಗವು ಉದ್ಯಮಿ ಮತ್ತು ಸ್ವಯಂ ಉದ್ಯೋಗಿಗಳನ್ನು ಒಳಗೊಂಡಿದೆ. ಇವರಿಗೆ ವ್ಯವಹಾರದ ಬೆಳವಣಿಗೆ ಮತ್ತು ಪೋಷಣೆಗಾಗಿ ಹಣವನ್ನು ನಿಯೋಜಿಸುವ ಅಗತ್ಯವು ಆದ್ಯತೆಯಾಗಿ ಕಾಣುತ್ತದೆ. ಇದರಿಂದ ದೀರ್ಘಾವಧಿಯ ಆರೋಗ್ಯ ರಕ್ಷಣೆಯನ್ನು ಕಡೆಗಣಿಸುತ್ತಾರೆ.

ಇಂದಿನ ಪರಿಸ್ಥಿತಿಯಲ್ಲಿ ಆರೋಗ್ಯ ವಿಮೆಯು ಎಲ್ಲರಿಗೂ ಕಡ್ಡಾಯವಾಗಿದೆ. ಇದರಿಂದ ಅನಿರೀಕ್ಷಿತ ವೈದ್ಯಕೀಯ ವೆಚ್ಚಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು. ದೈಹಿಕ ಮತ್ತು ಆರ್ಥಿಕ ಯೋಗಕ್ಷೇಮವನ್ನು ನೋಡಿಕೊಳ್ಳಬಹುದು.

ವೃತ್ತಿಜೀವನವನ್ನು ಪ್ರಾರಂಭಿಸುತ್ತಿರುವಾಗ ಕಾರ್ಪೊರೇಟ್ ಮತ್ತು ವೈಯಕ್ತಿಕ ಆರೋಗ್ಯ ವಿಮೆಯ ನಡುವಿನ ವ್ಯತ್ಯಾಸವನ್ನು ಮೊದಲು ತಿಳಿದುಕೊಳ್ಳಬೇಕು. ಇದರಿಂದ ಆರೋಗ್ಯದ ಅಗತ್ಯಗಳನ್ನು ಹೆಚ್ಚು ಸಮಗ್ರವಾಗಿ ಪರಿಹರಿಸಲು ಸಾಧ್ಯವಾಗುವುದು. ಜೇಬಿನಲ್ಲಿ ಸೀಮಿತ ಆದಾಯದೊಂದಿಗೆ ಒಬ್ಬರ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಆರ್ಥಿಕ ಹೊರೆಯನ್ನು ನಿವಾರಿಸುವ ಒಟ್ಟಾರೆ ಹಣಕಾಸುಗಳನ್ನು ಯೋಜಿಸಲು ಇದು ಸಹಾಯ ಮಾಡುತ್ತದೆ.

ಕಾರ್ಪೊರೇಟ್ ವಿಮೆ ಮತ್ತು ವೈಯಕ್ತಿಕ ಆರೋಗ್ಯ ವಿಮೆಯ ನಡುವೆ ಇರುವ ವ್ಯತ್ಯಾಸ.

ಸುಧಾರಿತ ಮತ್ತು ಸೇರಿಸಿದ ಕವರೇಜ್

ಅನೇಕ ಕಾರ್ಪೊರೇಟ್ ವಿಮಾ ಯೋಜನೆಗಳು ಕಡಿಮೆ ಕವರೇಜ್ ಮೊತ್ತದೊಂದಿಗೆ ಸೀಮಿತ ವ್ಯಾಪ್ತಿಯನ್ನು ನೀಡುತ್ತವೆ ಮತ್ತು ಕಾಪೇಗಳು, ಸಬ್‌ಲಿಮಿಟ್‌ಗಳಂತಹ ಇತರ ಷರತ್ತುಗಳು ವೈದ್ಯಕೀಯ ಆರೈಕೆಗಾಗಿ ಗಮನಾರ್ಹವಾದ ಔಟ್-ಆಫ್-ಪಾಕೆಟ್ ವೆಚ್ಚಗಳಿಗೆ ಕಾರಣವಾಗುತ್ತವೆ. ವೈಯಕ್ತಿಕ ಆರೋಗ್ಯ ವಿಮೆಯು ವ್ಯಕ್ತಿಗಳಿಗೆ ತಮ್ಮ ವಿಶಿಷ್ಟ ಅಗತ್ಯಗಳಿಗೆ ತಕ್ಕಂತೆ ಕವರೇಜ್ ಮಾಡಲು ಅನುಮತಿಸುತ್ತದೆ. ಹೆಚ್ಚು ಸಮಗ್ರ ವ್ಯಾಪ್ತಿಯನ್ನು ಒದಗಿಸುತ್ತದೆ.

ಹೆಚ್ಚುತ್ತಿರುವ ಆರೋಗ್ಯ ವೆಚ್ಚಗಳಿಂದ ಪರಿಹಾರ

ವೈಯಕ್ತಿಕ ಆರೋಗ್ಯ ವಿಮೆಯನ್ನು ಹೊಂದಿರುವುದು ವ್ಯಕ್ತಿಯ ಮನಸ್ಸಿನ ಶಾಂತಿ ಮತ್ತು ಆರ್ಥಿಕ ಭದ್ರತೆಯನ್ನು ನೀಡುತ್ತದೆ. ಗಂಭೀರವಾದ ಅನಾರೋಗ್ಯ ಅಥವಾ ಗಾಯದ ಸಂದರ್ಭದಲ್ಲಿ ವೈಯಕ್ತಿಕ ಆರೋಗ್ಯ ವಿಮೆಯು ಸುರಕ್ಷತಾ ನಿವ್ವಳವಾಗಿ ಕಾರ್ಯನಿರ್ವಹಿಸುತ್ತದೆ. ವೈದ್ಯಕೀಯ ಆರೈಕೆಯ ಹೆಚ್ಚಿನ ವೆಚ್ಚಗಳಿಂದ ಗ್ರಾಹಕರನ್ನು ರಕ್ಷಿಸುತ್ತದೆ.

ಪರ್ಯಾಯವಾಗಿ ಗ್ರಾಹಕರು ವೈಯಕ್ತಿಕ ಆರೋಗ್ಯ ಯೋಜನೆಯನ್ನು ಆಯ್ಕೆ ಮಾಡದಿರಲು ಆದ್ಯತೆ ನೀಡಿದರೆ ಅವರು ತಮ್ಮ ಪ್ರಸ್ತುತ ಕಾರ್ಪೊರೇಟ್ ಆರೋಗ್ಯ ಯೋಜನೆಗೆ ಹೆಚ್ಚುವರಿಯಾಗಿ ಟಾಪ್-ಅಪ್ ಆರೋಗ್ಯ ನೀತಿಯ ಆಯ್ಕೆಯನ್ನು ಹೊಂದಿರುತ್ತಾರೆ. ಟಾಪ್-ಅಪ್ ಆರೋಗ್ಯ ಯೋಜನೆಯನ್ನು ಆರಿಸಿಕೊಳ್ಳುವ ಮೂಲಕ ಕ್ಲೈಮ್ ಸಮಯದಲ್ಲಿ ತಮ್ಮ ಕಾರ್ಪೊರೇಟ್ ಆರೋಗ್ಯ ನೀತಿಯಿಂದ ಒದಗಿಸಲಾದ ವ್ಯಾಪ್ತಿಯನ್ನು ಮೀರಿದರೆ ಉಂಟಾಗಬಹುದಾದ ಅನಿರೀಕ್ಷಿತ ವೆಚ್ಚಗಳಿಂದ ವ್ಯಕ್ತಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು.


ಜೀವನ ಆಯ್ಕೆಗಳಿಗೆ ಹೊಂದಿಕೊಳ್ಳುವಿಕೆ

ಉದ್ಯೋಗಿಗಳ ಆರೋಗ್ಯ ರಕ್ಷಣೆಯ ಮೇಲೆ ಕಡಿಮೆ ಅವಲಂಬನೆ – ಬೆಳವಣಿಗೆಯ ಅವಕಾಶಗಳನ್ನು ಹುಡುಕಲು ಅಥವಾ ಕೈಗಾರಿಕೆಗಳನ್ನು ಬದಲಾಯಿಸಲು ಅಥವಾ ಉನ್ನತ ಶಿಕ್ಷಣಕ್ಕೆ ಮುಂದುವರಿಯಲು ಅಥವಾ ಸ್ವಂತವಾಗಿ ವ್ಯಾಪಾರವನ್ನು ಪ್ರಾರಂಭಿಸಲು ಉದ್ಯೋಗ ಪರಿವರ್ತನೆಗಳನ್ನು ಅನುಭವಿಸಬಹುದು. ಈ ಸ್ಥಿತ್ಯಂತರಗಳ ಸಮಯದಲ್ಲಿ, ಅನಿರೀಕ್ಷಿತ ವೈದ್ಯಕೀಯ ವೆಚ್ಚಗಳಿಗೆ ವ್ಯಕ್ತಿಗಳು ಗುರಿಯಾಗುವಂತೆ ಆರೋಗ್ಯ ವಿಮಾ ರಕ್ಷಣೆಯಲ್ಲಿ ಅಂತರಗಳಿರಬಹುದು. ವೈಯಕ್ತಿಕ ಆರೋಗ್ಯ ವಿಮೆಯಲ್ಲಿ ಹೂಡಿಕೆ ಮಾಡುವ ಮೂಲಕ ನಿರಂತರ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಬಹುದು ಮತ್ತು ಉದ್ಯೋಗ ಪರಿವರ್ತನೆಯ ಸಮಯದಲ್ಲಿ ಆರ್ಥಿಕ ಸಂಕಷ್ಟಗಳನ್ನು ಎದುರಿಸುವ ಅಪಾಯವನ್ನು ತಗ್ಗಿಸಬಹುದು.

ಕಡಿಮೆ ಪ್ರೀಮಿಯಂನ ಪ್ರಯೋಜನ

ವಿಮಾ ಕಂತುಗಳನ್ನು ನಿರ್ಧರಿಸುವಲ್ಲಿ ವಯಸ್ಸು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಯುವ ಪಾಲಿಸಿದಾರರಿಗೆ ಹಳೆಯ ಗ್ರಾಹಕರಿಗಿಂತ ಕಡಿಮೆ ಪ್ರೀಮಿಯಂ ವಿಧಿಸಲಾಗುತ್ತದೆ. ಭವಿಷ್ಯದಲ್ಲಿ ಅವರು ಯಾವುದೇ ಜೀವನಶೈಲಿ ಕಾಯಿಲೆಗೆ ಒಳಗಾದಾಗ ಹೆಚ್ಚಿದ ಪ್ರೀಮಿಯಂಗಳು ಅಥವಾ ವ್ಯಾಪ್ತಿಗೆ ನಿರ್ಬಂಧಗಳ ಬಗ್ಗೆ ಚಿಂತಿಸದೆಯೇ ಅದನ್ನು ತಕ್ಷಣವೇ ಆವರಿಸಲಾಗುತ್ತದೆ ಎಂದು ಇದು ಖಚಿತಪಡಿಸುತ್ತದೆ.

ತೆರಿಗೆ ಪ್ರಯೋಜನ

ವೈಯಕ್ತಿಕ ಆರೋಗ್ಯ ವಿಮೆಗೆ ಪಾವತಿಸಿದ ಪ್ರೀಮಿಯಂಗಳು ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80ಡಿ ಅಡಿಯಲ್ಲಿ ತೆರಿಗೆ ವಿನಾಯಿತಿಗಳಿಗೆ ಅರ್ಹವಾಗಿವೆ. ಈ ನಿಬಂಧನೆಯು ವ್ಯಕ್ತಿಗಳಿಗೆ ತೆರಿಗೆಗಳನ್ನು ಉಳಿಸಲು ಅನುಮತಿಸುತ್ತದೆ. ಸಂಭಾವ್ಯ ಉಳಿತಾಯ ತೆರಿಗೆಯ ಆದಾಯವು 75,000 ರೂ. ವರೆಗೆ ಇರುತ್ತದೆ. ವೈಯಕ್ತಿಕ ಆರೋಗ್ಯ ವಿಮೆಯಲ್ಲಿ ಹೂಡಿಕೆ ಮಾಡುವ ಮೂಲಕ ವ್ಯಕ್ತಿಗಳು ತಮ್ಮ ಯೋಗಕ್ಷೇಮವನ್ನು ಭದ್ರಪಡಿಸಿಕೊಳ್ಳುವುದಲ್ಲದೆ ಒಟ್ಟಾರೆ ಆರ್ಥಿಕ ಆರೋಗ್ಯಕ್ಕೆ ಕೊಡುಗೆ ನೀಡುವ ಗಮನಾರ್ಹ ತೆರಿಗೆ ಪ್ರಯೋಜನಗಳನ್ನು ಸಹ ಪಡೆದುಕೊಳ್ಳುತ್ತಾರೆ.

ಪ್ರಾಮುಖ್ಯತೆ ತಿಳಿಯಿರಿ

ವೈಯಕ್ತಿಕ ಆರೋಗ್ಯ ವಿಮೆಯ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳುವುದು ಅನಿರೀಕ್ಷಿತ ವೈದ್ಯಕೀಯ ವೆಚ್ಚಗಳ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮತ್ತು ಆರೋಗ್ಯ ಆಯ್ಕೆಗಳ ಮೇಲೆ ಹೆಚ್ಚಿನ ಸ್ವಾಯತ್ತತೆಯನ್ನು ಹೊಂದಲು ನಿರ್ಣಾಯಕವಾಗಿದೆ.

ಬಹು ವಿಮಾ ಪಾಲಿಸಿಗಳ ಕುರಿತು ಸಂಪೂರ್ಣ ಸಂಶೋಧನೆ ನಡೆಸುವುದು, ಅವುಗಳ ವೈಶಿಷ್ಟ್ಯಗಳು, ಪ್ರಯೋಜನಗಳು ಮತ್ತು ವೆಚ್ಚಗಳನ್ನು ಹೋಲಿಸುವುದು ಮತ್ತು ಯೋಜನೆಯನ್ನು ಆಯ್ಕೆ ಮಾಡುವ ಮೊದಲು ಪ್ರತಿ ವೈಶಿಷ್ಟ್ಯವು ಕ್ಲೈಮ್‌ಗಳು ಮತ್ತು ವಿಮಾ ಮೊತ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಸೂಕ್ತವಾಗಿದೆ. ವೈಯಕ್ತಿಕ ಆರೋಗ್ಯ ಅಗತ್ಯತೆಗಳನ್ನು ನಿರ್ಣಯಿಸಿ ಮತ್ತು ಹೆಚ್ಚು ಸೂಕ್ತವಾದ ಮತ್ತು ಸಾಕಷ್ಟು ವ್ಯಾಪ್ತಿಯನ್ನು ಒದಗಿಸುವಯೋಜನೆಯನ್ನು ಆಯ್ಕೆ ಮಾಡಿ.


ಗಮನದಲ್ಲಿ ಇರಲಿ

ವೈಯಕ್ತಿಕ ಆರೋಗ್ಯ ವಿಮೆಯನ್ನು ಆಯ್ಕೆ ಮಾಡುವಾಗ ಕೆಲವು ವಿಷಯಗಳು ಗಮನದಲ್ಲಿ ಇರಲಿ. ಖರೀದಿಸುವ ಮೊದಲು ಪಾಲಿಸಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ. ಪಾಲಿಸಿಯ ಕಾಯುವ ಅವಧಿ, ಹೊರಗಿಡುವಿಕೆ, ಸಹ-ಪಾವತಿ, ಕೊಠಡಿ ಬಾಡಿಗೆ ಮಿತಿ ಮತ್ತು ರೋಗದ ಉಪ-ಮಿತಿಗಳನ್ನು ಅರ್ಥಮಾಡಿಕೊಳ್ಳಿ. ಸರಿಯಾದ ಕವರೇಜ್ ಮೊತ್ತವನ್ನು ಹೊಂದಿರುವ ಪಾಲಿಸಿಯನ್ನು ಆಯ್ಕೆ ಮಾಡಿ. ಏಕೆಂದರೆ ಗಂಭೀರ ಅನಾರೋಗ್ಯದ ಸಂದರ್ಭದಲ್ಲಿ ವೈದ್ಯಕೀಯ ವೆಚ್ಚವನ್ನು ಸರಿದೂಗಿಸಲು ಸಿದ್ಧರಾಗಿರಿ

ಯೋಜನೆಯನ್ನು ಆಯ್ಕೆ ಮಾಡುವ ಮೊದಲು ವಿಮಾದಾರರ ಕ್ಲೈಮ್ ಸೆಟಲ್‌ಮೆಂಟ್ ಅನುಪಾತವನ್ನು ನೋಡಿ. ಇದು ವಿಮಾದಾರರು ಇತ್ಯರ್ಥಪಡಿಸಿದ ಕ್ಲೈಮ್‌ಗಳ ಶೇಕಡಾವಾರು ಪ್ರಮಾಣವನ್ನು ಸೂಚಿಸುತ್ತದೆ
ವೈದ್ಯಕೀಯ ತುರ್ತು ಸ್ಥಿತಿಯ ಸಮಯದಲ್ಲಿ ನಗದು ರಹಿತ ಆಸ್ಪತ್ರೆಗೆ ನೀಡುವ ನೀತಿಗಳನ್ನು ಗಮನಿಸಿ.

ಪಾಲಿಸಿ ಖರೀದಿಯ ಸಮಯದಲ್ಲಿ ಎಲ್ಲಾ ಪೂರ್ವ ಅಸ್ತಿತ್ವದಲ್ಲಿರುವ ಷರತ್ತುಗಳನ್ನು ತಿಳಿದುಕೊಳ್ಳಿ. ವಿಮೆಗಾರರು ಹಲವಾರು ವರ್ಷಗಳ ಪ್ರೀಮಿಯಂ ಪಾವತಿಯ ಅನಂತರವೂ ಗಮನಾರ್ಹ ಶೇಕಡಾವಾರು ಕ್ಲೈಮ್‌ಗಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಖರೀದಿಯ ಸಮಯದಲ್ಲಿ ಗ್ರಾಹಕರು ವೈದ್ಯಕೀಯ ಸ್ಥಿತಿಯನ್ನು ಘೋಷಿಸಲಿಲ್ಲ ಎಂದು ಅವರು ನಿರ್ಧರಿಸಬಹುದು.

ವೈಯಕ್ತಿಕ ಆರೋಗ್ಯ ವಿಮೆಯು ಯುವ ವೃತ್ತಿಪರರಿಗೆ ಅಮೂಲ್ಯವಾದ ಹೂಡಿಕೆಯಾಗಿದೆ. ವಿಶೇಷ ವ್ಯಾಪ್ತಿಯನ್ನು ನೀಡುತ್ತದೆ. ಕೆಲಸದ ವರ್ಗಾವಣೆಯ ಸಮಯದಲ್ಲಿ ರಕ್ಷಣೆ, ಮತ್ತು ಅಗತ್ಯವಿರುವ ಸಮಯದಲ್ಲಿ ಅವರ ಒಟ್ಟಾರೆ ಇತರ ಹೂಡಿಕೆಗಳನ್ನು ಆರೋಗ್ಯ ವೆಚ್ಚಗಳಿಗೆ ತಿರುಗಿಸದಿರುವಂತೆ ಮಾಡುತ್ತದೆ. ಇದು ಸಮಗ್ರ ವ್ಯಾಪ್ತಿಯನ್ನು ಒದಗಿಸುತ್ತದೆ. ಆರೋಗ್ಯ ನಿರ್ಧಾರಗಳ ಮೇಲೆ ಹೆಚ್ಚಿನ ನಿಯಂತ್ರಣ ಮತ್ತು ಆರ್ಥಿಕ ಭದ್ರತೆಗೆ ಆರೋಗ್ಯ ವಿಮೆ ಪೂರಕವಾಗಿದೆ.

Continue Reading
Advertisement
Aravind Kejriwal
ದೇಶ23 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ33 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202436 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 202447 mins ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ52 mins ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ1 hour ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ1 hour ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ1 hour ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

karnataka SSLC result 2024
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ12 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ20 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು20 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌