Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು? - Vistara News

ಮನಿ-ಗೈಡ್

Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

Money Guide: ಆನ್‌ಲೈನ್‌ ಸಾಲದ ಹೆಸರಿನಲ್ಲಿ ವಂಚನೆಯ ಜಾಲ ಇದೀಗ ಸಕ್ರಿಯವಾಗಿದೆ. ಅದರಿಂದ ಹೇಗೆ ಪಾರಾಗಬಹುದು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

loan new
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಸ್ತುತ ನಮ್ಮ ಕನಸುಗಳನ್ನು ಈಡೇರಿಸಲು ಸಾಲದ ಮೊರೆ ಹೋಗಬೇಕಾದ ಅನಿವಾರ್ಯತೆಗೆ ಸಿಲುಕಿದ್ದೇವೆ. ಮನೆ ನಿರ್ಮಾಣ, ವಾಹನ ಖರೀದಿ, ಕೃಷಿ ಚಟುವಟಿಕೆ ಹೀಗೆ ಮಧ್ಯಮ ವರ್ಗದ ಜನರು ವಿವಿಧ ಕಾರಣಗಳಿಗೆ ಸಾಲದತ್ತ ಮುಖ ಮಾಡುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ವಂಚಕರು ಆನ್‌ಲೈನ್‌ ಲೋನ್‌ ಹೆಸರಿನಲ್ಲಿ ದುಡ್ಡು ದೋಚುತ್ತಾರೆ. ಹಾಗಾದರೆ ಇಂತಹ ಮೋಸದ ಜಾಲದಿಂದ (Loan Scam) ಹೇಗೆ ಪಾರಾಗಬಹುದು ಎನ್ನುವುದರ ವಿವರ ಮನಿಗೈಡ್‌ (Money Guide)ನಲ್ಲಿದೆ.

ನಮ್ಮ ಅನಿವಾರ್ಯತೆಯನ್ನು ದುರುಪಯೋಗಿಸಿಕೊಂಡು ಅಂತಹ ಕಂಪೆನಿಗಳು ದುಡ್ಡು ದೋಚುತ್ತವೆ. ಹೆಚ್ಚಿನ ಮುಂಗಡ ಶುಲ್ಕಗಳು, ಅವಾಸ್ತವಿಕ ಬಡ್ಡಿದರಗಳು ಮತ್ತು ಷರತ್ತುಗಳ ಹೆಸರಿನಲ್ಲಿ ಹಗಲು ದರೋಡೆಗೆ ಇಳಿಯುತ್ತವೆ. ಡಿಜಿಟಲ್ ಪಾವತಿ ಮತ್ತು ಹಣಕಾಸು ಸೇವೆಗಳ ಪ್ಲಾಟ್‌ಫಾರ್ಮ್‌ ಫೋನ್‌ ಪೇ ಇಂತಹ ಸಾಲಗಳಿಂದ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಕೆ ನೀಡಿದೆ.

ಸಾಲದ ಹೆಸರಿನಲ್ಲಿ ಮೋಸ

ಲೋನ್‌ ಸ್ಕ್ಯಾಮ್‌ ಎಂದು ಕರೆಯಲಾಗುವ ಈ ವಂಚನೆಯ ಜಾಲ ಹೇಗೆ ಕಾರ್ಯ ನಿರ್ವಹಿಸುತ್ತದೆ ಎನ್ನುವುದನ್ನು ನೋಡೋಣ: ನೀವು ಬಯಸಿದ ಸಾಲವನ್ನು ತ್ವರಿತವಾಗಿ ಮತ್ತು ಸುಲಭವಾಗಿ ಪಡೆಯಬಹುದು ಎಂಬ ವಂಚಕರು ಸುಳ್ಳು ಭರವಸೆ ನೀಡುತ್ತಾರೆ. ಉದಾಹರಣೆಗೆ ನೀವು ಬ್ಯಾಂಕ್‌ನಿಂದ ಸಾಲ ಪಡೆಯಲು ಉತ್ತಮ ಕ್ರೆಡಿಟ್ ಸ್ಕೋರ್ (CIBIL Score) ಹೊಂದಿಲ್ಲದಿದ್ದರೆ ಅಥವಾ ಬಹಳ ಕಡಿಮೆ ಸಮಯದಲ್ಲಿ ದೊಡ್ಡ ಮೊತ್ತದ ಹಣದ ಅಗತ್ಯವಿದ್ದರೆ ಆ ಸಂದರ್ಭವನ್ನು ವಂಚಕರು ಬಳಸಿಕೊಳ್ಳುತ್ತಾರೆ. ಕೆಲವೇ ನಿಮಿಷಗಳಲ್ಲಿ ಸಾಲ ನೀಡುತ್ತೇವೆ ಎಂದು ನಂಬಿಸುತ್ತಾರೆ.

ಈ ಮೋಸದ ಜಾಲ ಮುಖ್ಯವಾಗಿ ಎರಡು ರೀತಿಯಲ್ಲಿ ನಡೆಯುತದೆ. ವಂಚಕರು ಭದ್ರತೆಯಾಗಿ ಒಂದು ನಿರ್ದಿಷ್ಟ ಮೊತ್ತವನ್ನು ಮುಂಗಡವಾಗಿ ಕೇಳುತ್ತಾರೆ. ಅದನ್ನು ಎಂದಿಗೂ ಹಿಂದಿರುಗಿಸಲಾಗುವುದಿಲ್ಲ. ಜತೆಗೆ ಪ್ರೊಸೆಸಿಂಗ್‌ ಶುಲ್ಕ, ವಿಳಂಬ ಶುಲ್ಕ, ಬಡ್ಡಿ ಮತ್ತಿತರ ಹೆಸರಿನಲ್ಲಿ ದೊಡ್ಡ ಮೊತ್ತವನ್ನು ಪಡೆಯುತ್ತಾರೆ. ಭಾರೀ ಮೊತ್ತದ ನಷ್ಟವಾಗುತ್ತದೆ.

ಹೇಗೆ ಸಂಪರ್ಕಿಸುತ್ತಾರೆ?

ವಂಚಕರು ನಿಮ್ಮನ್ನು ಎಸ್ಎಂಎಸ್, ಇಮೇಲ್ ಅಥವಾ ಫೋನ್ ಮೂಲಕ ಸಂಪರ್ಕಿಸುತ್ತಾರೆ. ನಿಮ್ಮ ವಿವರಗಳನ್ನು ಭರ್ತಿ ಮಾಡಲು ಮತ್ತು ತ್ವರಿತ ಲೋನ್ ಅನುಮೋದನೆ ಪಡೆಯಲು ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಲು ಪದೇ ಪದೆ ಒತ್ತಾಯಿಸುತ್ತಾರೆ. ಒಂದು ವೇಳೆ ನೀವು ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಿದ್ದೀರಿ ಅಂತಿಟ್ಟುಕೊಳ್ಳೋಣ. ನಿಮ್ಮ ಸಂಪೂರ್ಣ ಸಂಪರ್ಕ ಪಟ್ಟಿ, ಫೋಟೊ ಮತ್ತು ವೀಡಿಯೊಗಳಿಗೆ ಅಕ್ಸೆಸ್‌ ಕೇಳುತ್ತದೆ. ಇನ್ನು ನೀವು ಆಧಾರ್, ಪ್ಯಾನ್, ವಿಳಾಸ ಮತ್ತು ನಿಮಗೆ ಅಗತ್ಯವಿರುವ ಮೊತ್ತದಂತಹ ಮೂಲ ವಿವರಗಳನ್ನು ಭರ್ತಿ ಮಾಡಿದ ಕೂಡಲೇ ನಿಮ್ಮ ಖಾತೆಗೆ ನಗದು ಕ್ರೆಡಿಟ್ ಆಗುತ್ತದೆ.

ಮೊದಲೇ ಹೇಳಿದಂತೆ ಈ ಸಾಲಗಳನ್ನು ಸಂಕೀರ್ಣ ನಿಯಮಗಳು ಮತ್ತು ಷರತ್ತುಗಳನ್ನು ಹೊಂದಿರುತ್ತವೆ. ಅದನ್ನು ಮೊದಲೇ ತಿಳಿಸಲಾಗುವುದಿಲ್ಲ. ಕಡಿಮೆ ಬಡ್ಡಿದರದ ಭರವಸೆಯೊಂದಿಗೆ ಮೋಸಗೊಳಿಸುತ್ತಾರೆ. ನಂತರ ಕಡಿಮೆ ಬಡ್ಡಿದರವು ಸೀಮಿತ ಅವಧಿಗೆ ಮಾತ್ರ ಎಂದು ವರಾತ ಬದಲಾಯಿಸುತ್ತಾರೆ. ಅದರ ನಂತರ ಹೆಚ್ಚಿನ ಬಡ್ಡಿಯನ್ನು ವಿಧಿಸಲಾಗುತ್ತದೆ. ಗಮನಿಸಿ ಇದನ್ನು ಮೊದಲೇ ಉಲ್ಲೇಖಿಸುವುದಿಲ್ಲ.

ಇದನ್ನೂ ಓದಿ: Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

ಹೊಡೆತದ ಮೇಲೆ ಹೊಡೆತ

ಹೆಚ್ಚಿನ ಬಡ್ಡಿದರಗಳ ಜತೆಗೆ ಸಾಲಗಳನ್ನು ಮರುಪಾವತಿಸದಿರುವುದಕ್ಕೆ ಪ್ರತಿದಿನ ಭಾರೀ ದಂಡವನ್ನು ವಿಧಿಸುತ್ತವೆ. ಅದಕ್ಕೆ ಹೆಚ್ಚಿನ ಪ್ರೊಸೆಸಿಂಗ್‌ ಶುಲ್ಕ ಸೇರಿದಂತೆ ಇತರ ದಂಡಗಳನ್ನು ಸೇರಿಸುತ್ತಾರೆ. ಮಾತ್ರವಲ್ಲ ಈ ಅಪ್ಲಿಕೇಷನ್‌ಗಳು ನಿಮ್ಮ ಫೋನ್‌ನ ಎಲ್ಲ ಮಾಹಿತಿಗಳನ್ನು ಕದ್ದು ಬ್ಲ್ಯಾಕ್‌ ಮೇಲ್‌ ಮಾಡುವ ಸಾಧ್ಯತೆಯೂ ಇದೆ. ಸಾಲ ವಸೂಲಾತಿ ಏಜೆಂಟರು ನಿರಂತರ ಕಿರುಕುಳ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇದೇ ಕಾರಣದಿಂದ ಇತ್ತೀಚೆಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.

ನೀವೇನು ಮಾಡಬೇಕು?

  • ಫೋನ್, ಇಮೇಲ್ ಅಥವಾ ಇತರ ವಿಧಾನಗಳ ಮೂಲಕ ನಿಮ್ಮ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.
  • ಸಾಲ ನೀಡುವ ಕಂಪೆನಿಯ ಪೂರ್ವಾಪರ ತಿಳಿದುಕೊಳ್ಳಿ
  • ಯಾವುದೇ ಒಟಿಪಿ ಅಥವಾ ಇತರ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಫೋನ್ ಪೇ, ಪೇಟಿಎಂ ಅಥವಾ ಗೂಗಲ್ ಪೇಯಂತಹ ಪ್ಲಾಟ್ ಫಾರ್ಮ್‌ಗಳು ಅಂತಹ ಗೌಪ್ಯ ಅಥವಾ ವೈಯಕ್ತಿಕ ವಿವರಗಳನ್ನು ಎಂದಿಗೂ ಕೇಳುವುದಿಲ್ಲ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Money Guide: ಕಾಯಿಲೆ ಬಂದಾಗ ಔಷಧ ಹುಡುಕುವುದಕ್ಕಿಂತ ಕಾಯಿಲೆಯೇ ಬರದಂತೆ ಮುಂಜಾಗ್ರತೆ ಹೊಂದುವುದು ಜಾಣತನ. ಅದೇ ರೀತಿ ಕಾಯಿಲೆ ಬಂದಾಗ ಇನ್ಶೂರೆನ್ಸ್‌ ಮಾಡಿಸುವುದಕ್ಕಿಂತ ಮೊದಲೇ ಮಾಡಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ವಿವಿಧ ಕಂಪನಿಗಳು ಹಲವಾರು ವಿಶೇಷತೆಗಳನ್ನು ಒಳಗೊಂಡ ಆರೋಗ್ಯ ವಿಮೆಯನ್ನು ಪರಿಚಯಿಸಿವೆ. ಒಂದುವೇಳೆ ನೀವು ಈಗಾಗಲೇ ಖರೀದಿಸಿದ ಪಾಲಿಸಿಯಲ್ಲಿ ತೃಪ್ತರಾಗದಿದ್ದರೆ ಅದನ್ನು ಬದಲಾಯಿಸುವ ಆಯ್ಕೆ ಇದೆ. ಇದನ್ನೇ ಹೆಲ್ತ್ ಇನ್ಶೂರೆನ್ಸ್ ಪೋರ್ಟಬಿಲಿಟಿ ಎಂದು ಕರೆಯಲಾಗುತ್ತದೆ. ಈ ಯೋಜನೆ ಬಗೆಗಿನ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಯಾವುದೇ ಉದ್ಯೋಗವಿರಲಿ ಹೆಲ್ತ್‌ ಇನ್ಶೂರೆನ್ಸ್‌ (Health Insuranceಮಾಡಿಸುವುದು ಅತ್ಯಗತ್ಯ. ಯಾವಾಗ, ಯಾವ ರೀತಿಯ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಕಾಯಿಲೆ ಬಂದಾಗ ಔಷಧ ಹುಡುಕುವುದಕ್ಕಿಂತ ಕಾಯಿಲೆಯೇ ಬರದಂತೆ ಮುಂಜಾಗ್ರತೆ ಹೊಂದುವುದು ಜಾಣತನ. ಅದೇ ರೀತಿ ಕಾಯಿಲೆ ಬಂದಾಗ ಇನ್ಶೂರೆನ್ಸ್‌ ಮಾಡಿಸುವುದಕ್ಕಿಂತ ಮೊದಲೇ ಮಾಡಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ವಿವಿಧ ಕಂಪನಿಗಳು ಹಲವಾರು ವಿಶೇಷತೆಗಳನ್ನು ಒಳಗೊಂಡ ಆರೋಗ್ಯ ವಿಮೆಯನ್ನು ಪರಿಚಯಿಸಿವೆ. ಒಂದುವೇಳೆ ನೀವು ಈಗಾಗಲೇ ಖರೀದಿಸಿದ ಪಾಲಿಸಿಯಲ್ಲಿ ತೃಪ್ತರಾಗದಿದ್ದರೆ ಅದನ್ನು ಬದಲಾಯಿಸುವ ಆಯ್ಕೆ ಇದೆ. ಅಂದರೆ ನೀವು ನಿಮ್ಮ ಮೊಬೈಲ್‌ ನಂಬರ್‌ ಅನ್ನು ಬದಲಾಯಿಸದೆ ಸಿಮ್‌ ಕಂಪನಿಯನ್ನು ಬದಲಾಯಿಸುವಂತೆ ಆರೋಗ್ಯ ವಿಮೆಯನ್ನೂ ಬದಲಾಯಿಸಬಹುದು. ಆ ಕುರಿತಾದ ವಿವರ ಇಲ್ಲಿದೆ (Money Guide).

ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ (Health Insurance Portability)

ನಿಮ್ಮ ಪ್ರಸ್ತುತ ಹೆಲ್ತ್ ಇನ್ಶೂರೆನ್ಸ್ ಪಾಲಿಸಿಯನ್ನು ನಿಮ್ಮ ಆಯ್ಕೆಯ ಮತ್ತೊಂದು ಇನ್ಶೂರೆನ್ಸ್ ಕಂಪನಿಗೆ ವರ್ಗಾಯಿಸುವ ಪ್ರಕ್ರಿಯೆಯನ್ನು ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಎನ್ನಲಾಗುತ್ತದೆ. ಈ ಆಯ್ಕೆಯನ್ನು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (Insurance Regulatory and Development Authority of India) 2011ರಲ್ಲಿ ಪರಿಚಯಿಸಿದೆ. ನಿಮ್ಮ ಆರೋಗ್ಯ ವಿಮಾ ಪಾಲಿಸಿಯ ವೈಶಿಷ್ಟ್ಯಗಳು ಅಥವಾ ಪ್ರೀಮಿಯಂ ಬಗ್ಗೆ ನಿಮಗೆ ಸಮಾಧಾನ ಇಲ್ಲದಿದ್ದರೆ ಅಥವಾ ಇನ್ನೊಂದು ಕಂಪನಿ ಇನ್ನೂ ಹೆಚ್ಚಿನ ಆಯ್ಕೆಯನ್ನು ನೀಡುತ್ತಿದ್ದರೆ ಅದಕ್ಕೆ ಬದಲಾಯಿಸಬಹುದು.

ಅನುಕೂಲಗಳೇನು?

ಇದು ಇನ್ಶೂರೆನ್ಸ್ ಕಂಪನಿಗಳಲ್ಲಿನ ಬದಲಾವಣೆ ಮಾತ್ರವಲ್ಲ. ಇದರ ಜತೆಗೆ ಇನ್ನೂ ಅನೇಕ ಅನುಕೂಲಗಳು ಲಭಿಸುತ್ತವೆ. ನೀವು ಕಂಪನಿ ಬದಲಾಯಿಸುವಾಗ ಉತ್ತಮ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಹುದು. ಜತೆಗೆ ನಿಮ್ಮ ಕಾಯುವ ಅವಧಿ (Waiting Period) ಮತ್ತು ನೋ-ಕ್ಲೈಮ್ ಬೋನಸ್ ಅನ್ನು ಸಹ ವರ್ಗಾಯಿಸಬಹುದು. ಆದ್ದರಿಂದ ನೀವು ಮೊದಲಿನಿಂದಲೇ ಕಾಯುವ ಅವಧಿಯನ್ನು ಪ್ರಾರಂಭಿಸಬೇಕಾಗಿಲ್ಲ. ಜತೆಗೆ ನೀವು ಕ್ಯುಮುಲೇಟಿವ್ ಬೋನಸ್ (Cumulative bonus) ಅನ್ನು ಕಳೆದುಕೊಳ್ಳುವುದಿಲ್ಲ.

ವೈಶಿಷ್ಟ್ಯಗಳು

ಅಗತ್ಯ ಸೌಲಭ್ಯ ಪಡೆದುಕೊಳ್ಳಿ

ನಿಮ್ಮ ಅಗತ್ಯವನ್ನು ಈಗಿರುವ ಪಾಲಿಸಿ ಪೂರೈಸುವುದಿಲ್ಲ ಎಂದಾದರೆ ನೀವು ಇದನ್ನು ಒಳಗೊಳ್ಳುವ ಪಾಲಿಸಿಗೆ ಬದಲಾಯಿಸಬಹುದು. ಉದಾಹರಣೆಗೆ ಅಂಕಿತಾ ಪಾಲಿಸಿ ಖರೀದಿಸುವಾಗ ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದ್ದರೂ ಅದು ಹೆರಿಗೆ ಪ್ರಯೋಜನ ಮತ್ತು ವ್ಯಾಪಕ ಆಸ್ಪತ್ರೆ ವ್ಯಾಪ್ತಿಯನ್ನು ಒಳಗೊಂಡಿರಲಿಲ್ಲ. ಈಗ ಅವರಿಗೆ ಈ ಸೌಲಭ್ಯದ ಅಗತ್ಯವಿದೆ. ಹೀಗಾಗಿ ಅವರು ಈ ಸೌಲಭ್ಯವನ್ನು ಹೊಂದಿರುವ ವಿಮಾ ಯೋಜನೆಗೆ ತಮ್ಮ ಪಾಲಿಸಿಯನ್ನು ಬದಲಾಯಿಸಬಹುದು. ಜತೆಗೆ ವಿಮೆಯ ಮೊತ್ತವನ್ನು ಹೆಚ್ಚಿಸುವ ಆಯ್ಕೆಯೂ ಇದೆ.

ವೆಚ್ಚ ಕಡಿತ

ನಿಮ್ಮ ಅಗತ್ಯಕ್ಕೆ ಅನುಗುಣವಾಗಿ ಕಡಿಮೆ ಪ್ರೀಮಿಯಂ ಹೊಂದಿರುವ ಪಾಲಿಸಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಉದಾಹರಣೆಗೆ ನೀವು ಭವಿಷ್ಯಕ್ಕೆ ಅಗತ್ಯವಾದ ಯೋಜನೆಗಳನ್ನು ಹುಡುಕುತ್ತಿದ್ದೀರಿ ಎಂದಿಟ್ಟುಕೊಳ್ಳೋಣ. ನೀವು ಪಾಲಿಸಿ ಹೊಂದಿರುವ ಕಂಪನಿಯಲ್ಲಿ ಇದು ದುಬಾರಿಯಾಗಿದ್ದು, ಮತ್ತೊಂದು ಕಂಪನಿಯಲ್ಲಿ ರಿಯಾಯಿತಿ ದರದಲ್ಲಿ ಲಭಿಸುತ್ತದೆ ಮತ್ತು ಹೆಚ್ಚಿನ ಪ್ರಯೋಜನ ಹೊಂದಿದೆ ಎಂದಾದರೆ ಅದರತ್ತ ನಿಮ್ಮ ಪಾಲಿಸಿಯನ್ನು ಬದಲಾಯಿಸಿ.

ಇದನ್ನು ಗಮನಿಸಿ

  • ಅಸ್ತಿತ್ವದಲ್ಲಿರುವ ನಿಮ್ಮ ಪಾಲಿಸಿಯ ಅವಧಿ ಮುಗಿಯುವ ಕನಿಷ್ಠ 45 ದಿನಗಳ ಮೊದಲು ನೀವು ಪೋರ್ಟೆಬಿಲಿಟಿಗೆ ಅರ್ಜಿ ಸಲ್ಲಿಸಬೇಕು.
  • ನಿಮ್ಮ ಹೊಸ ವಿಮಾದಾರರು ಪ್ರೀಮಿಯಂಗಳು, ನಿಯಮಗಳು ಮತ್ತು ಷರತ್ತುಗಳು ಸೇರಿದಂತೆ ಲಭ್ಯವಿರುವ ವಿವಿಧ ಆರೋಗ್ಯ ವಿಮಾ ಯೋಜನೆಗಳ ಪ್ರಯೋಜನವನ್ನು ಪಡೆಯಲು ವಿವಿಧ ನಮೂನೆಗಳನ್ನು ನಿಮಗೆ ಒದಗಿಸುತ್ತಾರೆ. ಅದನ್ನು ಗಮನವಿಟ್ಟು ಓದಿ.
  • ನೀವು ಬಯಸುವ ಯೋಜನೆ ಮತ್ತು ವ್ಯಾಪ್ತಿಯನ್ನು ಆಯ್ಕೆ ಮಾಡಿ ಮತ್ತು ಎಲ್ಲ ದಾಖಲೆಗಳನ್ನು ಸಲ್ಲಿಸಿ.
  • ಹೊಸ ವಿಮಾ ಕಂಪನಿ ಹಿಂದಿನ ವಿಮಾದಾರರಿಂದ ಮಾಹಿತಿಯನ್ನು ಪಡೆಯುವ ಮೂಲಕ ಹಿಂದಿನ ಕ್ಲೈಮ್ ಇತಿಹಾಸ, ವೈದ್ಯಕೀಯ ದಾಖಲೆಗಳು ಪರಿಶೀಲಿಸುತ್ತದೆ.
  • ಹೊಸ ವಿಮಾದಾರರು ಪೋರ್ಟೆಬಿಲಿಟಿಗೆ ಅರ್ಹರೇ ಅಥವಾ ಇಲ್ಲವೇ ಎಂದು ನಿರ್ಧರಿಸಲು ಈ ಮಾಹಿತಿಯನ್ನು ಬಳಸುತ್ತಾರೆ. ಬಳಿಕ 15 ದಿನಗಳೊಳಗೆ ನಿಮ್ಮ ಅರ್ಜಿ ಸ್ವೀಕೃತವಾಗುತ್ತದೆ.

ಯಾವೆಲ್ಲ ಸೌಲಭ್ಯಗಳನ್ನು ಪೋರ್ಟ್‌ ಮಾಡಬಹುದು?

  • ಪ್ರಸ್ತುತ ಇರುವ ಇನ್ಶೂರೆನ್ಸ್ ಮೊತ್ತ
    ನಿಮ್ಮ ಸಂಗ್ರಹಿತ ಕ್ಯುಮುಲೇಟಿವ್ ಬೋನಸ್
    ಮೊದಲೇ ಅಸ್ತಿತ್ವದಲ್ಲಿರುವ ಕಾಯುವ ಅವಧಿ
    ನಿರ್ದಿಷ್ಟ ರೋಗ ನಿರೀಕ್ಷಣಾ ಅವಧಿ
    ಹೆರಿಗೆ ಪ್ರಯೋಜನದ ಕಾಯುವ ಅವಧಿ (ಆಯ್ಕೆ ಮಾಡಿಕೊಂಡಿದ್ದರೆ)

ಅಗತ್ಯವಿರುವ ದಾಖಲೆಗಳು?

  • ನಿಮ್ಮ ಪ್ರಸ್ತುತ ಹೆಲ್ತ್ ಇನ್ಶೂರೆನ್ಸ್ ಪಾಲಿಸಿ ವೇಳಾಪಟ್ಟಿ.
    ಗುರುತಿನ ಪುರಾವೆ
    ವೈದ್ಯಕೀಯ ವಿವರಗಳು

ಇದನ್ನೂ ಓದಿ: Money Guide: ಹೆಲ್ತ್‌ ಇನ್ಶೂರೆನ್ಸ್‌ ಕ್ಲೈಮ್‌ ಆಗುತ್ತಿಲ್ಲವೆ?; ಈ ಸಮಸ್ಯೆ ಇರಬಹುದು ಗಮನಿಸಿ

Continue Reading

ಮನಿ ಗೈಡ್

Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

Money Guide: ಪಿಎಫ್ (PF) ಎಂದೂ ಕರೆಯಲ್ಪಡುವ ನೌಕರರ ಭವಿಷ್ಯ ನಿಧಿ  ಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡಲಾಗುತ್ತದೆ. ಆ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಈ ವರ್ಷ ಸರ್ಕಾರ ಪಿಎಫ್‌ ಖಾತೆಗಳಿಗೆ ಸಂಬಂಧಿಸಿದ ನಿಯಮದಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದಿದೆ. ಅದೇನು ಎನ್ನುವ ವಿವರ ಮನಿಗೈಡ್‌ನಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಿಎಫ್ (PF) ಎಂದೂ ಕರೆಯಲ್ಪಡುವ ನೌಕರರ ಭವಿಷ್ಯ ನಿಧಿ (Employees Provident Fund-EPFಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡಲಾಗುತ್ತದೆ. ಆ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಪ್ರತಿ ತಿಂಗಳು ತಮ್ಮ ಮೂಲ ವೇತನದ ಶೇ. 12ರಷ್ಟು ಕೊಡುಗೆ ನೀಡುವ ಉದ್ಯೋಗಿಗಳಿಗೆ ಈ ಯೋಜನೆಯು ಶೇ. 8.15 ಬಡ್ಡಿದರವನ್ನು ನೀಡುತ್ತದೆ. ಉದ್ಯೋಗಿಗಳು ನಿವೃತ್ತರಾದ ನಂತರ ತಮ್ಮ ಪಿಎಫ್‌ ಖಾತೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಅದಾಗ್ಯೂ ಕೆಲವೊಮ್ಮೆ ತೀರಾ ಅನಿವಾರ್ಯ ಸಂದರ್ಭದಲ್ಲಿ ಕೆಲವೊಂದಷ್ಟು ಮೊತ್ತವನ್ನು ಹಿಂಪಡೆಯಬಹುದು. ಹೀಗಾಗಿ ಪಿಎಫ್‌ ಉದ್ಯೋಗಿಗಳ ಪಾಲಿಗೆ ಆಪತ್ಬಾಂಧವ ಎನಿಸಿಕೊಂಡಿದೆ. ಈ ವರ್ಷ ಸರ್ಕಾರ ಪಿಎಫ್‌ ಖಾತೆಗಳಿಗೆ ಸಂಬಂಧಿಸಿದ ನಿಯಮದಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದಿದೆ. ಅದೇನು ಎನ್ನುವ ವಿವರ ಮನಿಗೈಡ್‌ (Money Guide)ನಲ್ಲಿದೆ.

ಅಟೋ ಸೆಟಲ್‌ಮೆಂಟ್‌

ಹೊಸದಾಗಿ ಅಟೋ ಸೆಟಲ್‌ಮೆಂಟ್‌ ಸೌಲಭ್ಯವನ್ನು ಇಪಿಎಫ್ಒ ಇತ್ತೀಚೆಗೆ ಪರಿಚಯಿಸಿದೆ. ಅನಾರೋಗ್ಯದ ಕಾರಣಕ್ಕಾಗಿ ಮುಂಗಡ ಕ್ಲೈಮ್ ಮಾಡಲು 2020ರ ಏಪ್ರಿಲ್‌ನಲ್ಲಿ ಅಟೋ ಸೆಟಲ್‌ಮೆಂಟ್‌ ಮೋಡ್ ಅನ್ನು ಪರಿಚಯಿಸಲಾಗಿತ್ತು. ಈಗ ಈ ಮಿತಿಯನ್ನು 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇದರಲ್ಲಿ ಉನ್ನತ ಶಿಕ್ಷಣ ಮತ್ತು ಮದುವೆಯ ಆಯ್ಕೆಯನ್ನೂ ಪರಿಚಯಿಸಲಾಗಿದೆ. ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಇದನ್ನು ಸ್ವಯಂ ಪ್ರಕ್ರಿಯೆಗೊಳಿಸಲಾಗುತ್ತದೆ. ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಐಟಿ ವ್ಯವಸ್ಥೆಯಿಂದ ಇಂತಹ ಕ್ಲೈಮ್‌ಗಳನ್ನು ಸ್ವಯಂಚಾಲಿತವಾಗಿ ಪ್ರಕ್ರಿಯೆಗೊಳಿಸಲಾಗುತ್ತದೆ.

ಮಲ್ಟಿ ಲೊಕೇಷನ್‌ ಕ್ಲೈಮ್‌ ಸೆಟಲ್‌ಮೆಂಟ್‌

ಇಪಿಎಫ್ ಕ್ಲೈಮ್ ಪ್ರಕ್ರಿಯೆಯನ್ನು ನಿಗದಿತ ಸಮಯದೊಳಗೆ ಮುಗಿಸಲು ಇಪಿಎಫ್ಒ ಬಹು-ಸ್ಥಳ ಇತ್ಯರ್ಥಕ್ಕಾಗಿ ಲಿಂಕ್ ಕಚೇರಿ ಸೆಟಪ್ ಪರಿಚಯಿಸಿದೆ. ಇದರೊಂದಿಗೆ ಕ್ಲೈಮ್‌ಗೆ ಸಂಬಂಧಿಸಿದ ಹೊರೆಯನ್ನು ಕಡಿಮೆ ಮಾಡಬಹುದು. ಇದು ಕ್ಲೈಮ್‌ ಪ್ರಕ್ರಿಯೆಯನ್ನೂ ವೇಗಗೊಳಿಸುತ್ತದೆ.

ಆಧಾರ್ ವಿವರ ಇಲ್ಲದೆ ಇಪಿಎಫ್ ಡೆತ್ ಕ್ಲೈಮ್‌

ಒಂದು ವೇಳೆ ಪಿಎಫ್‌ ಗ್ರಾಹಕ ಮೃತಪಟ್ಟರೆ ಆಧಾರ್ ವಿವರಗಳನ್ನು ನೀಡದೆ ಡೆತ್‌ ಕ್ಲೈಮ್‌ ಪ್ರಕ್ರಿಯೆಯನ್ನು ಸುಲಭಗೊಳಿಸಲು ಈ ಆಯ್ಕೆಯನ್ನು ಪರಿಚಯಿಸಲಾಗಿದೆ. ಇದನ್ನು ತಾತ್ಕಾಲಿಕ ಕ್ರಮವಾಗಿ ಜಾರಿಗೆ ತರಲಾಗಿದೆ. ಜತೆಗೆ ಇದಕ್ಕೆ ಒಐಸಿ (OIC)ಯಿಂದ ಸರಿಯಾದ ಅನುಮೋದನೆಯ ಅಗತ್ಯವಿದೆ.

ಚೆಕ್ ಲೀಫ್ ಕಡ್ಡಾಯ ಅಪ್‌ಲೋಡ್‌ ನಿಯಮ ಸಡಿಲಿಕೆ

2024ರ ಮೇ 28ರ ಸುತ್ತೋಲೆಯಲ್ಲಿ ಇಪಿಎಫ್ಒ ಕೆಲವು ಸಂದರ್ಭಗಳಲ್ಲಿ ಚೆಕ್ ಲೀಫ್ ಇಮೇಜ್ ಅಥವಾ ದೃಢೀಕರಿಸಿದ ಬ್ಯಾಂಕ್ ಪಾಸ್‌ಬುಕ್‌ ಅನ್ನು ಅಪ್‌ಲೋಡ್‌ ಮಾಡುವ ಕಡ್ಡಾಯ ನಿಯಮವನ್ನು ಸಡಿಲಗೊಳಿಸಿದೆ. ಈ ಕ್ರಮವು ಆನ್‌ಲೈನ್ ಕ್ಲೈಮ್ ಪ್ರಕ್ರಿಯೆಯನ್ನು ಹೆಚ್ಚು ತ್ವರಿತವಾಗಿ ಸುಗಮಗೊಳಿಸುತ್ತದೆ. ಜತೆಗೆ ಕ್ಲೈಮ್‌ ವಿಫಲವಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಆಧರೆ ಇದಕ್ಕೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಇಪಿಎಫ್‌ ಖಾತೆಯ ವೈಶಿಷ್ಟ್ಯ

  • ಉದ್ಯೋಗಿಗಳ ಕೊಡುಗೆ ಸಾಮಾನ್ಯವಾಗಿ ಮೂಲ ವೇತನದ ಶೇ. 12ರಷ್ಟಿರುತ್ತದೆ.
  • ಉದ್ಯೋಗದಾತರ ಕೊಡುಗೆ ನಿಮ್ಮ ಮೂಲ ವೇತನ ಮತ್ತು ತುಟ್ಟಿಭತ್ಯೆಯ ಶೇ. 12ಕ್ಕೆ ಸಮನಾಗಿರುತ್ತದೆ. ಉದ್ಯೋಗದಾತರ ಕೊಡುಗೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ: ಅವೆಂದರೆ- ಇಪಿಎಫ್ ಮತ್ತು ನೌಕರರ ಪಿಂಚಣಿ ಯೋಜನೆ(ಇಪಿಎಸ್).
  • ಹೀಗೆ ನಿಮ್ಮ ಮತ್ತು ಉದ್ಯೋಗದಾತರ ಕೊಡುಗೆಗಳೊಂದಿಗೆ ಪ್ರತಿ ತಿಂಗಳು ನಿವೃತ್ತಿಗಾಗಿ ಗಣನೀಯ ಮೊತ್ತವನ್ನು ಮೀಸಲಿಡಲಾಗುತ್ತದೆ. ಇದು ಭಾರತದಲ್ಲಿ ಕಡ್ಡಾಯ.

ಇದನ್ನೂ ಓದಿ: Money Guide: ಮೊಬೈಲ್‌ನಲ್ಲಿಯೇ ಪಿಎಫ್‌ ಮೊತ್ತ ಪರಿಶೀಲಿಸಬೇಕೆ?; ಜಸ್ಟ್‌ ಹೀಗೆ ಮಾಡಿ ಸಾಕು

Continue Reading

ಮನಿ-ಗೈಡ್

Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

Money Guide: ಪ್ರತಿಯೊಬ್ಬ ಉದ್ಯೋಗಿಯೂ ಕೆಲಸಕ್ಕೆ ಸೇರಿದಾಗಿನಿಂದಲೇ ನಿವೃತ್ತಿ ಜೀವನಕ್ಕಾಗಿ ಯೋಜನೆ ರೂಪಿಸುವುದು ಅನಿವಾರ್ಯ ಎನಿಸಿಕೊಂಡಿದೆ. ಇದೇ ಕಾರಣಕ್ಕೆ ದೇಶದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ ರಾಷ್ಟ್ರೀಯ ಪಿಂಚಣಿ ಯೋಜನೆ (National Pension Scheme-NPS) ಕೂಡ ಒಂದು. ಎನ್‌ಪಿಎಸ್‌ ಅನ್ನು ನಿವೃತ್ತಿಗೆ ಉತ್ತಮ ಯೋಜನೆ ಎಂದೇ ಪರಿಗಣಿಸಲಾಗುತ್ತದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ವಿಶೇಷ ಎಂದರೆ ಎನ್‌ಪಿಎಸ್‌ನಲ್ಲಿ ಹೂಡಿಕೆ ಮಾಡುವ ಮೂಲಕ ನೀವು ತಿಂಗಳಿಗೆ 1 ಲಕ್ಷ ರೂ.ವರೆಗೆ ನಿವೃತ್ತಿ ವೇತನ ಪಡೆಯಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪ್ರತಿಯೊಬ್ಬ ಉದ್ಯೋಗಿಯೂ ಕೆಲಸಕ್ಕೆ ಸೇರಿದಾಗಿನಿಂದಲೇ ನಿವೃತ್ತಿ ಜೀವನಕ್ಕಾಗಿ ಯೋಜನೆ ರೂಪಿಸುವುದು ಅಗತ್ಯ ಎಂದು ಹಿರಿಯರು ಹೇಳುತ್ತಿದ್ದರು. ಇಂದು ಇದು ಅನಿವಾರ್ಯ ಎನಿಸಿಕೊಂಡಿದೆ. ಬೆಲೆ ಏರಿಕೆ, ದುಬಾರಿಯಾಗುತ್ತಿರುವ ಜೀವನ ವೆಚ್ಚ ಇದಕ್ಕೆ ಕಾರಣ. ಅದಕ್ಕಾಗಿ ಈಗಲೇ ಒಂದಷ್ಟು ಮೊತ್ತವನ್ನು ಕೂಡಿಡಲು ಆರಂಭಿಸಬೇಕು ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಇದೇ ಕಾರಣಕ್ಕೆ ದೇಶದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ ರಾಷ್ಟ್ರೀಯ ಪಿಂಚಣಿ ಯೋಜನೆ (National Pension Scheme-NPS) ಕೂಡ ಒಂದು. ಎನ್‌ಪಿಎಸ್‌ ಅನ್ನು ನಿವೃತ್ತಿಗೆ ಉತ್ತಮ ಯೋಜನೆ ಎಂದೇ ಪರಿಗಣಿಸಲಾಗುತ್ತದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಈ ಯೋಜನೆ ಬಗೆಗಿನ ವಿವರ ಇಲ್ಲಿದೆ (Money Guide).

ವಿಶೇಷ ಎಂದರೆ ಎನ್‌ಪಿಎಸ್‌ನಲ್ಲಿ ಹೂಡಿಕೆ ಮಾಡುವ ಮೂಲಕ ನೀವು ತಿಂಗಳಿಗೆ 1 ಲಕ್ಷ ರೂ.ವರೆಗೆ ನಿವೃತ್ತಿ ವೇತನ ಪಡೆಯಬಹುದು. ಭಾರತ ಸರ್ಕಾರ 2004ರ ಜನವರಿ 1ರಂದು ಎನ್‌ಪಿಎಸ್‌ ಅನ್ನು ಪರಿಚಯಿಸಿತು ಮತ್ತು ಐದು ವರ್ಷಗಳ ನಂತರ (2009) ಅದನ್ನು ಸಾರ್ವಜನಿಕರಿಗಾಗಿ ಮುಕ್ತಗೊಳಿಸಲಾಯಿತು. ಈ ಯೋಜನೆಯು ಭಾರತದ ನಾಗರಿಕರಿಗೆ ವೃದ್ಧಾಪ್ಯದ ಭದ್ರತೆಯಾಗಿ ಪಿಂಚಣಿ ಮತ್ತು ಹೂಡಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿಯಂತ್ರಿಸುತ್ತದೆ.

ಪ್ರತಿ ತಿಂಗಳು 1 ಲಕ್ಷ ರೂ. ಹೀಗೆ ಪಡೆಯಿರಿ

ಪ್ರತಿ ತಿಂಗಳು 1 ಲಕ್ಷ ರೂ. ಪಿಂಚಣಿ ಪಡೆಯುವುದು ಹೇಗೆ ಎನ್ನುವುದನ್ನು ಉದಾಹರಣೆ ಮೂಲಕ ನೋಡೋಣ. ನೀವು 18ನೇ ವಯಸ್ಸಿನಲ್ಲಿ ಪ್ರತಿ ತಿಂಗಳು ಎನ್‌ಪಿಎಸ್‌ನಲ್ಲಿ 3,475 ರೂ. ಹೂಡಿಕೆ ಮಾಡಲು ಆರಂಭಿಸಿದ್ದೀರಿ ಎಂದಿಟ್ಟುಕೊಳ್ಳೋಣ. ಹೀಗೆ ಸುಮಾರು 47 ವರ್ಷ ನಿಯಮಿತವಾಗಿ ಹೂಡಿಕೆ ಮಾಡಿದರೆ ನಿಮ್ಮ ನಿವೃತ್ತಿ ಜೀವನದ ವೇಳೆ ಅಂದರೆ 65 ವರ್ಷ ವಯಸ್ಸಾದಾಗ ಪ್ರತಿ ತಿಂಗಳು 1 ಲಕ್ಷ ರೂ. ಲಭಿಸಲು ಅರಂಭವಾಗುತ್ತದೆ. ವಯಸ್ಸಿಗೆ ಅನುಗುಣವಾಗಿ ಹೂಡಿಕೆಯ ಮೊತ್ತ ಹೆಚ್ಚಾಗುತ್ತದೆ.

ಎನ್‌ಪಿಎಸ್‌ನ ವಿಶೇಷತೆ

ಎನ್‌ಪಿಎಸ್‌ ದೀರ್ಘಾವಧಿಯ ಹೂಡಿಕೆ ಯೋಜನೆಯಾಗಿದ್ದು, ಅದರ ಮೂಲಕ ನಿಮ್ಮ ನಿವೃತ್ತಿ ಜೀವನವನ್ನು ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿಸಬಹುದು ಎಂದು ಆರ್ಥಿಕ ತಜ್ಞರು ಹೇಳುತ್ತಾರೆ. 18 ವರ್ಷದಿಂದ 70 ವರ್ಷ ವಯಸ್ಸಿನ ಯಾರು ಬೇಕಾದರೂ ಈ ಯೋಜನೆಯಡಿ ಖಾತೆ ತೆರೆಯಬಹುದು. ಈ ಯೋಜನೆಯಲ್ಲಿ ಕನಿಷ್ಠ 20 ವರ್ಷಗಳವರೆಗೆ ಹೂಡಿಕೆ ಮಾಡುವುದು ಅಗತ್ಯ. ಖಾತೆಯನ್ನು ತೆರೆದ ನಂತರ 60 ವರ್ಷ ವಯಸ್ಸಿನವರೆಗೆ ಅಥವಾ ಯೋಜನೆಯ ಮುಕ್ತಾಯದವರೆಗೆ ಕೊಡುಗೆ ನೀಡಬೇಕು. 60ನೇ ವಯಸ್ಸಿನಲ್ಲಿ, ನೀವು ಈ ನಿಧಿಯ ಗರಿಷ್ಠ 60 ಪ್ರತಿಶತವನ್ನು ಹಿಂತೆಗೆದುಕೊಳ್ಳಬಹುದು. ಹೂಡಿಕೆಯ ಅವಧಿ ಮುಕ್ತಾಯದ ನಂತರ ಮಾಸಿಕ ಪಿಂಚಣಿಯ ಹೊರತಾಗಿ ನೀವು ಒಂದು ದೊಡ್ಡ ಮೊತ್ತವನ್ನು ಹಿಂಪಡೆಯುತ್ತೀರಿ.

ವಿಶೇಷ ಎಂದರೆ ಆನಿವಾಸಿ ಭಾರತೀಯರು ಕೂಡ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಅದಾಗ್ಯೂ ಆರ್‌ಬಿಐ ಮತ್ತು ಫೆಮಾ ಸೂಚಿಸುವ ಷರತ್ತುಗಳು ಅನ್ವಯವಾಗುತ್ತವೆ. ಇನ್ನು ಒಸಿಐ (ಓವರ್‌ಸೀಸ್‌ ಸಿಟಿಜನ್ಸ್ ಆಫ್ ಇಂಡಿಯಾ) ಮತ್ತು ಪಿಐಒ (ಪರ್ಸನ್ ಆಫ್ ಇಂಡಿಯನ್ ಒರಿಜಿನ್) ಕಾರ್ಡ್ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.

ಇದನ್ನೂ ಓದಿ: Money Guide: ವೇತನದ ಜತೆಗೆ ಮಾಸಿಕವಾಗಿ 9,250 ರೂ. ಆದಾಯ ಬೇಕೆ? ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Continue Reading

ಮನಿ-ಗೈಡ್

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

Money Guide: ಹೋಮ್‌ ಲೋನ್‌ ಸಂಪೂರ್ಣ ಪಾವತಿಸಿದ ಮೇಲೂ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ಸಾಲ ಪಾವತಿಯಾದ ಬಳಿಕವೂ ನೀವು ಒಂದಷ್ಟು ಮುಖ್ಯ ಕೆಲಸ ಮಾಡಬೇಕಾಗುತ್ತದೆ. ಭವಿಷ್ಯದಲ್ಲಿ ಯಾವುದೇ ತೊಂದರೆ ಎದುರಾಗದಿರಲು ಕೆಲವು ಅಂಶಗಳತ್ತ ನೀವು ಗಮನ ಹರಿಸಲೇ ಬೇಕು. ಅವು ಯಾವುವು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಸ್ವಂತದ್ದೊಂದು ಸೂರು ಹೊಂದಿರಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಆದರೆ ಈ ಕನಸನ್ನು ನನಸು ಮಾಡಿಕೊಳ್ಳುವುದು ಮಾತ್ರ ಬಹು ಪ್ರಯಾಸದ ಸಂಗತಿ. ಅದರಲ್ಲಿಯೂ ಈ ದುಬಾರಿ ದುನಿಯಾದಲ್ಲಿ ಮನೆ ಕಟ್ಟಬೇಕು ಎಂದರೆ ಸಾಮಾನ್ಯ ವರ್ಗದ ಜನರು ಸಾಲದ ಮೊರೆ ಹೋಗಲೇ ಬೇಕಾಗುತ್ತದೆ. ಸರಿ ಅಂತೂ ಗೃಹಸಾಲ ಮಂಜೂರಾಗಿ, ಗೃಹ ಪ್ರವೇಶ ನಡೆದು, ಸಾಲವನ್ನೂ ಕಟ್ಟಿಯಾಯ್ತು ಎಂದುಕೊಳ್ಳೋಣ. ʼಅಬ್ಬ ದೊಡ್ಡ ಹೊರೆಯೊಂದು ತಲೆಯ ಮೇಲಿಂದ ಇಳಿಯಿತುʼ ಎಂದು ನೆಮ್ಮದಿಯ ನಿಟ್ಟುಸಿರು ಬಿಡುವ ಮುನ್ನ ಇಲ್ಲಿ ಗಮನಿಸಿ. ಸಾಲ ಕಟ್ಟಿದ ಮಾತ್ರಕ್ಕೆ ನಿಮ್ಮ ಎಲ್ಲ ಜವಾಬ್ದಾರಿ ಮುಗಿಯಿತು ಎಂದುಕೊಳ್ಳಬೇಡಿ. ಸಾಲ ತೀರಿಸಿದ ಮೇಲೂ ನೀವು ಮಾಡಿ ಮುಗಿಸಬಹುದಾದು ಬಹು ಮುಖ್ಯ ಕೆಲಸಗಳಿವೆ. ಅವು ಯಾವುವು ಎನ್ನುವ ಮಾಹಿತಿ ತಿಳಿದುಕೊಳ್ಳಲು ಇಂದಿನ ಮನಿಗೈಡ್‌ (Money Guide) ಓದಿ.

ಎನ್‌ಒಸಿ ಪಡೆದುಕೊಳ್ಳಿ

ಗೃಹಸಾಲವನ್ನು ಸಂಪೂರ್ಣವಾಗಿ ಪಾವತಿಸದ ಬಳಿಕ ನೀವು ಮಾಡಬೇಕಾದ ಬಹು ಮುಖ್ಯ ಕೆಲಸ ಎಂದರೆ ಬ್ಯಾಂಕ್‌ನಿಂದ ಎನ್‌ಒಸಿ (ನಿರಾಕ್ಷೇಪಣಾ ಪತ್ರ) ಅಥವಾ ನೋ ಡ್ಯೂ ಸರ್ಟಿಫಿಕೆಟ್‌ (ಎನ್‌ಡಿಸಿ) ಪಡೆದುಕೊಳ್ಳುವುದು. ನೀವು ಸಂಪೂರ್ಣ ಸಾಲವನ್ನು ಮರುಪಾವತಿಸಿದ್ದೀರಿ ಎನ್ನುವುದನ್ನು ಬ್ಯಾಂಕ್‌ ಪ್ರಮಾಣಿಕರಿಸುವ ಸರ್ಟಿಫಿಕೆಟ್‌ ಇದು. ಗಮನಿಸಿ, ಈ ಪತ್ರವನ್ನು ಪಡೆದುಕೊಳ್ಳುವ ಮುನ್ನ ಇದರಲ್ಲಿ ನಮೂದಿಸಿರುವ ಎಲ್ಲ ಅಂಶಗಳು ಸರಿಯಾಗಿವೆಯೇ ಎನ್ನುವುದನ್ನು ಪರಿಶೀಲಿಸಿ. ಅಕ್ಷರ ದೋಷ ಅಥವಾ ಯಾವುದಾದರೂ ಮಾಹಿತಿಯಲ್ಲಿ ತಪ್ಪು ಕಂಡು ಬಂದರೆ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತನ್ನಿ. ಜತೆಗೆ ಈ ಪ್ರಮಾಣ ಪತ್ರದಲ್ಲಿ ಸಾಲ ನೀಡಿದ ಸಂಸ್ಥೆಯ ಹೆಸರು, ಸಾಲದ ಖಾತೆ ಸಂಖ್ಯೆ, ಸಾಲ ಪಡೆದ ಆಸ್ತಿಯ ವಿವರ, ನಿಮ್ಮ ವಿಳಾಸ, ಸಾಲದ ಕಂತು ಆರಂಭಗೊಂಡ ಮತ್ತು ಕೊನೆಗೊಂಡ ದಿನಾಂಕ ಇದೆಯೇ ಎನ್ನುವುದನ್ನು ಪರಿಶೀಲಿಸಿ. ಮನೆ ಇನ್ನು ಸಂಪೂರ್ಣವಾಗಿ ನಿಮ್ಮ ಸೊತ್ತು ಎನ್ನುವುದು ಕೂಡ ಇದರಲ್ಲಿ ನಮೂದಾಗಿದೆ ಎನ್ನುವುದನ್ನು ಚೆಕ್‌ ಮಾಡಿ.

ಮೂಲ ದಾಖಲೆ ಪಡೆದುಕೊಳ್ಳಿ

ಗೃಹಸಾಲಕ್ಕೆ ಅರ್ಜಿ ಸಲ್ಲಿಸುವಾಗ ಬ್ಯಾಂಕ್‌ಗಳು ನಿಮ್ಮ ಮನೆಯ ಮೂಲ ದಾಖಲೆಗಳನ್ನು ಪಡೆದುಕೊಳ್ಳುತ್ತವೆ. ಸಾಲ ಪಾವತಿಯಾದ ಬಳಿಕ ಬ್ಯಾಂಕ್‌ಗಳು ಈ ಮೂಲ ದಾಖಲೆಗಳನ್ನು ನಿಮಗೆ ಹಿಂದಿರುಗಿಸಬೇಕು ಎನ್ನುವ ನಿಯಮ ಇದೆ. ಒಂದು ಬೇಳೆ ಬ್ಯಾಂಕ್‌ ಇದನ್ನು ನೀಡಲು ಮರೆತರೆ ನೀವು ನೆನಪಿಸಿ ತಪ್ಪದೆ ಪಡೆದುಕೊಳ್ಳಿ. ದಾಖಲೆಗಳೆಲ್ಲ ಸರಿಯಾಗಿವೆಯೇ ಎನ್ನುವುದನ್ನು ಪರಿಶೀಲಿಸುವುದನ್ನು ಮರೆಯಬೇಡಿ.

ದಾಖಲೆಗಳನ್ನು ನಿಮ್ಮ ಹೆಸರಿಗೆ ಮಾಡಿಸಿಕೊಳ್ಳಿ

ಗೃಹಸಾಲ ನೀಡುವಾಗ ನಿಮ್ಮ ಆಸ್ತಿಯ ಹಕ್ಕನ್ನು ಬ್ಯಾಂಕ್‌ ಹೊಂದಿರುತ್ತದೆ. ಒಂದುವೇಳೆ ಸಾಲ ಪಡೆದವರು ಮರು ಪಾವತಿಸದಿದ್ದರೆ ಆಸ್ತಿಯನ್ನು ಮಾರಾಟ ಮಾಡುವ ಹಕ್ಕು ಬ್ಯಾಂಕ್‌ಗೆ ಇರುತ್ತದೆ. ಹೀಗಾಗಿ ಸಾಲ ಮರುಪಾವತಿ ಮಾಡಿದ ಬಳಿಕ ಆಸ್ತಿಯನ್ನು ನಿಮ್ಮ ಹೆಸರಿಗೆ ಬರೆಸುವುದನ್ನು ಯಾವುದೇ ಕಾರಣಕ್ಕೂ ತಪ್ಪಿಸಲೇಬೇಡಿ. ಜತೆಗೆ ಋಣಭಾರ ಪ್ರಮಾಣಪತ್ರ ಪಡೆದುಕೊಳ್ಳಿ. ಈ ಬಗ್ಗೆ ಬ್ಯಾಂಕ್‌ ಸಿಬ್ಬಂದಿ ಬಳಿ ಕೇಳಿ ತಿಳಿದುಕೊಳ್ಳಿ.

ಕ್ರೆಡಿಟ್‌ ಸ್ಕೋರ್‌ ಪರಿಶೀಲಿಸಿ

ಸಾಲ ಮಂಜೂರಾದ ಬಳಿಕ ನಿಮ್ಮ ಮರುಪಾವತಿಯನ್ನು ಗಮನಿಸಿ ಕ್ರೆಡಿಟ್‌ ಬ್ಯೂರೋ ಕ್ರೆಡಿಟ್‌ ಸ್ಕೋರ್‌ ನೀಡುತ್ತದೆ. ಹೀಗಾಗಿ ಸಾಲದ ಎಲ್ಲ ಕಂತನ್ನು ಪಾವತಿಸಿದ ಬಳಿಕ ಸಾಲಮುಕ್ತರಾಗಿದ್ದೀರಿ ಎನ್ನುವುದನ್ನು ಬ್ಯಾಂಕ್‌ ಅಪ್‌ಡೇಟ್‌ ಮಾಡಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಕೆಲವೊಮ್ಮೆ ಬ್ಯಾಂಕ್‌ಗಳು ಬ್ಯುರೋಕ್ಕೆ ಮಾಹಿತಿ ನೀಡಲು ಮರೆಯುವ ಸಾಧ್ಯತೆ ಇದೆ. ಹೀಗಾಗಿ ಇದನ್ನು ಪರಿಶೀಲಿಸಿ ಬ್ಯಾಂಕ್‌ ಸಿಬ್ಬಂದಿ ಗಮನಕ್ಕೆ ತನ್ನಿ.

ಒಟ್ಟಿನಲ್ಲಿ ಗೃಹಸಾಲದ ಎಲ್ಲ ಕಂತುಗಳನನು ಪಾವತಿಸಿದ ಬಳಿಕ ಭವಿಷ್ಯದಲ್ಲಿ ಯಾವುದೇ ತೊಂದರೆ, ಕಾನೂನು ಸಮಸ್ಯೆ ಎದುರಾಗದಿರಲು ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಇದನ್ನೂ ಓದಿ: Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

Continue Reading
Advertisement
sonia gandhi
ದೇಶ11 mins ago

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

IND vs PAK
ಕ್ರೀಡೆ34 mins ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ57 mins ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು1 hour ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್1 hour ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Narendra Modi
ದೇಶ1 hour ago

Narendra Modi: ನಾಳೆ 3ನೇ ಬಾರಿ ಮೋದಿಗೆ ಪ್ರಧಾನಿ ಗಾದಿ; ಇಲ್ಲಿದೆ ಅವರ ರಾಜಕೀಯದ ಹಾದಿ!

Norway Chess
ಕ್ರೀಡೆ1 hour ago

Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

IND vs PAK
ಕ್ರೀಡೆ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

Money Guide
ಮನಿ-ಗೈಡ್2 hours ago

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Niveditha Gowda chandan shetty age differance
ಸ್ಯಾಂಡಲ್ ವುಡ್2 hours ago

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌