Moody's report Risk to Indian economy due to high debt, fiscal deficit Moodys warningMoodys report : ಅಧಿಕ ಸಾಲದಿಂದ ಭಾರತದ ಆರ್ಥಿಕತೆಗೆ ಅಪಾಯ ಇದೆಯೆ? ಮೂಡೀಸ್‌ ಹೇಳಿದ್ದೇನು?

ಪ್ರಮುಖ ಸುದ್ದಿ

Moodys report : ಅಧಿಕ ಸಾಲದಿಂದ ಭಾರತದ ಆರ್ಥಿಕತೆಗೆ ಅಪಾಯ ಇದೆಯೆ? ಮೂಡೀಸ್‌ ಹೇಳಿದ್ದೇನು?

Moodys report ಅಧಿಕ ಸಾಲ ಮತ್ತು ವಿತ್ತೀಯ ಕೊರತೆಯಿಂದ ಭಾರತದ ಆರ್ಥಿಕತೆಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ರೇಟಿಂಗ್‌ ಏಜೆನ್ಸಿ ಮೂಡೀಸ್‌ ಎಚ್ಚರಿಸಿದೆ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದ ಆರ್ಥಿಕತೆಗೆ ಪ್ರಸಕ್ತ ಸಾಲಿನಲ್ಲಿ ಅಧಿಕ ಸಾಲದ ಹೊರೆ ಮತ್ತು ವಿತ್ತೀಯ ಕೊರತೆಯಿಂದಾಗಿ ಅಪಾಯ ಎದುರಾಗಬಹುದು ಎಂದು ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿ ಮೂಡೀಸ್‌ ಎಚ್ಚರಿಸಿದೆ. ( Moodys report) ಮೂಡೀಸ್‌ ಇನ್ವೆಸ್ಟರ್ಸ್‌ ಸರ್ವೀಸ್‌ ಅಸೋಸಿಯೇಟ್‌ನ ಎಂಡಿ ಗೆನ್‌ ಫಾಂಗ್‌ ನೀಡಿರುವ ಸಂದರ್ಶನದಲ್ಲಿ, ಭಾರತ ಸರ್ಕಾರದ ಮಟ್ಟದಲ್ಲಿ (general government debt) ಜಿಡಿಪಿಯ 81.8% ಸಾಲವನ್ನು ಹೊಂದಿದೆ. ಜನರಲ್‌ ಗವರ್ನಮೆಂಟ್‌ ಡೆಟ್‌ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು, ಸ್ಥಳೀಯಾಡಳಿತಗಳು ಹೊಂದಿರುವ ಸಾಲವನ್ನು ಒಳಗೊಂಡಿದೆ. ಹೀಗಾಗಿ ಸಾಲ ಪಡೆಯುವ ಸಾಮರ್ಥ್ಯ ಕಡಿಮೆಯಾಗಬಹುದು ಎಂದು ಎಚ್ಚರಿಸಿದ್ದಾರೆ.

ಭಾರತವು 2023ರ ಏಪ್ರಿಲ್-ಜೂನ್‌ ತ್ರೈಮಾಸಿಕದಲ್ಲಿ 6-6.3% ಜಿಡಿಪಿ ದಾಖಲಿಸುವ ಅಂದಾಜು ಇದೆ. ಕಳೆದ ಜನವರಿ-ಮಾರ್ಚ್‌ಗೆ (6.1%) ಹೋಲಿಸಿದರೆ ಯಥಾಸ್ಥಿತಿಯಲ್ಲಿ ಇರಲಿದೆ. ಹಣದುಬ್ಬರ, ಅಧಿಕ ಬಡ್ಡಿ ದರದ ಪರಿಣಾಮಗಳು ಬಂಡವಾಳ ಕ್ರೋಡೀಕರಣಕ್ಕೆ ಪ್ರತಿಕೂಲ ಪ್ರಭಾವ ಬೀರಬಹುದು ಎಂದು ಫಾಂಗ್‌ ವಿವರಿಸಿದ್ದಾರೆ.

ಸರ್ಕಾರ ದೀರ್ಘಕಾಲೀನ ವಿತ್ತೀಯ ಸ್ಥಿರತೆ ಮತ್ತು ಬೆಳವಣಿಗೆಗೆ ಬದ್ಧವಾಗಿದ್ದರೂ, ಅಧಿಕ ಹಣದುಬ್ಬರದ ನಡುವೆ ಆರ್ಥಿಕತೆಯನ್ನು ಬೆಂಬಲಿಸಬೇಕಾದ ಅಗತ್ಯತೆ, ಅಧಿಕ ಹಣದುಬ್ಬರ, ದುರ್ಬಲ ಜಾಗತಿಕ ಬೇಡಿಕೆ, 2024ರ ಮೇನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವಿತ್ತೀಯ ಕೊರತೆ ಉಂಟಾಗಬಹುದು. ನಿರೀಕ್ಷಿತ ಮಟ್ಟದಲ್ಲಿ ಸರ್ಕಾರದ ಬೊಕ್ಕಸಕ್ಕೆ ಆದಾಯ ಸಂಗ್ರಹ ಆಗದೆ ಸಮಸ್ಯೆಯಾಗುವ ಆತಂಕವೂ ಇದೆ ಎಂದು ಮೂಡೀಸ್‌ ಹೇಳಿದೆ.

ಮೂಡೀಸ್‌ ರೇಟಿಂಗ್‌ ಏಜೆನ್ಸಿಯ ಪ್ರಕಾರ ಭಾರತದ ಸಾವರಿನ್ ಕ್ರೆಡಿಟ್‌ ರೇಟಿಂಗ್‌ ಸದ್ಯಕ್ಕೆ Baa3 ಆಗಿದೆ. ರೇಟಿಂಗ್‌ ಪೈಕಿ ಇದು ಉತ್ತಮ ದರ್ಜೆಯದ್ದಾಗಿದ್ದು, ಭಾರತದ ಆರ್ಥಿಕತೆಯ ವೈವಿಧ್ಯತೆ, ಬೆಳವಣಿಗೆಯ ಸಾಧ್ಯತೆಯನ್ನು ಒಳಗೊಂಡಿದೆ. ಕಳೆದ ಎರಡು ವರ್ಷಗಳಿಂದ ಆರ್ಥಿಕ ನೀತಿಯ ಮಾನದಂಡಗಳನ್ನು ಭಾರತ ಪೂರೈಸಿ ಬೆಳವಣಿಗೆ ಕಂಡಿದೆ. ವಿತ್ತೀಯ ಕೊರತೆ ನಿಯಂತ್ರಣದಲ್ಲೂ ಸುಧಾರಿಸಿದೆ. ಹೀಗಿದ್ದರೂ, ಅಧಿಕ ಸಾಲದ ಬಗ್ಗೆ ಎಚ್ಚರ ವಹಿಸಬೇಕಾಗಿದೆ. (Fiscal deficit) ವಿತ್ತೀಯ ಕೊರತೆ ಎಂದರೆ ಸರ್ಕಾರದ ಆದಾಯ ಮತ್ತು ವೆಚ್ಚದ ನಡುವಣ ವ್ಯತ್ಯಾಸ. ಇದು 2022-23ರಲ್ಲಿ ಜಿಡಿಪಿಯ 6.4%ಕ್ಕೆ ಇಳಿದಿದೆ. 2021-22ರಲ್ಲಿ ಜಿಡಿಪಿಯ 6.7% ರಷ್ಟಿತ್ತು ಎಂದು ಮೂಡೀಸ್‌ ತಿಳಿಸಿದೆ.

ಇದನ್ನೂ ಓದಿ: India GDP Q4 Growth : 2022-23ರಲ್ಲಿ ಭಾರತದ ಜಿಡಿಪಿ 7.2%ಕ್ಕೆ ಏರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

ಇಂದು ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಪಂದ್ಯ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

VISTARANEWS.COM


on

Fans brave the dampness, waiting for India's tour of South Africa to kick off
Koo

ಡಬಾರ್ನ್: ಭಾರತ(IND vs SA) ಮತ್ತು ದಕ್ಷಿಣ ಆಫ್ರಿಕಾ(South Africa vs India, 1st T20) ಪಂದ್ಯವನ್ನು ವೀಕ್ಷಿಸಲು ಭಾರಿ ನಿರೀಕ್ಷೆಯಲ್ಲಿದ್ದ ಕ್ರಿಕೆಟ್​ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇಂದು ನಡೆಯಬೇಕಿದ್ದ ಮೊದಲ ಟಿ20 ಪಂದ್ಯ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

ಟಾಸ್​ ಆರಂಭಕ್ಕೂ ಮುನ್ನವೇ ಮಳೆ ಅಡ್ಡಿ ಪಡಿಸಿತು. ಪಂದ್ಯ ಆರಂಭಕ್ಕೆ ಸುಮಾರು 2 ಗಂಟೆಗಳ ಕಾಲ ಕಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಮಳೆ ಬಿಡುವ ಸೂಚನೆ ಕಂಡು ಬಾರದ ಕಾರಣ ಅಂತಿಮವಾಗಿ ಪಂದ್ಯದ ಅಂಪೈರ್​ಗಳು ಪಂದ್ಯವನ್ನು ರದ್ದು ಎಂದು ಘೋಷಿಸಿದರು. ಇತ್ತಂಡಗಳ ನಡುವಣ ದ್ವಿತೀಯ ಪಂದ್ಯ ಡಿ.12ರಂದು ನಡೆಯಲಿದೆ.

ಕವರ್​ನಿಂದ ಮುಚ್ಚಿದ ಮೈದಾನ

ಡರ್ಬಾನ್​ನ ಕಿಂಗ್ಸ್‌ಮೀಡ್ ಮೈದಾನವನ್ನು ಕವರ್​ನಿಂದ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಆಟಗಾರರೆಲ್ಲ ಡ್ರೆಸಿಂಗ್​ ರೂಮ್​ನಲ್ಲಿ ಮಳೆ ಯಾವಾಗ ಬಿಡುತ್ತದೆ ಎಂದು ಕಾದು ಕುಳಿತಿದ್ದರು. ಆದರೆ ಇದಕ್ಕೆ ಮಳೆ ಅನುವು ಮಾಡಿಕೊಡಲಿಲ್ಲ. ಆರಂಭದಲ್ಲಿ ಇದು ಐಸಿಸಿ ಅಡಿಯಲ್ಲಿ ನಡೆಯುವ ಟೂರ್ನಿಯಾದ ಕಾರಣ ನಿಗದಿತ ಸಮಯಕ್ಕೆ ಮಳೆ ನಿಂತು ಆಟ ಪ್ರಾರಂಭವಾಗದ ಕಾರಣ ಪಂದ್ಯವನ್ನು ರದ್ದು ಎಂದು ಘೋಷಿಸಲಾಯಿತು.

ಇದನ್ನೂ ಓದಿ Gautam Gambhir : ಮೋದಿಯನ್ನು ಪನೌತಿ ಎಂದವರಿಗೆ ತಿರುಗೇಟು ಕೊಟ್ಟ ಗೌತಮ್​ ಗಂಭೀರ್​

ಸಮಯ ಬದಲಿಸಿದ್ದ ಬಿಸಿಸಿಐ

ಸರಣಿಯ ಮೂಲ ವೇಳಾಪಟ್ಟಿಯ ಪ್ರಕಾರ ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 9.30 ನಿಗದಿಯಾಗಿತ್ತು. ಪಂದ್ಯ ಮುಗಿಯುವಾಗ ಮಧ್ಯರಾತ್ರಿಯಾಗುದರಿಂದ ಭಾರತೀಯ ಕ್ರಿಕಟ್​ ಅಭಿಮಾನಿಗಳಿಗ ಇದು ತೊಂದರಯಾಗುತ್ತದೆ ಎನ್ನುವ ನಿಟ್ಟಿನಲ್ಲಿ ಬಿಸಿಸಿಐ ಪಂದ್ಯವನ್ನು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭಗೊಳ್ಳುವಂತೆ ಮಾಡಿತ್ತು. ಆದರೆ ಮಳೆ ಯಾವುದಕ್ಕೂ ಅನುವು ಮಾಡಿಕೊಡಲಿಲ್ಲ. ಒಂದೊಮ್ಮೆ ಪಂದ್ಯ ಮೂಲಕ ವೇಳಾಪಟ್ಟಿಯ ಪ್ರಕಾರ ನಡೆಯುತ್ತಿದ್ದರೆ ಮಳೆ ನಿಂತು ಪಂದ್ಯ ನಡೆಯುವ ಸಾಧ್ಯತೆ ಇತ್ತು.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

Continue Reading

ದೇಶ

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

Article 370: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುವ ಆರ್ಟಿಕಲ್ 370 ಅನ್ನು ಕೇಂದ್ರ ಸರ್ಕಾರವು 2019ರಲ್ಲಿ ರದ್ದು ಮಾಡಿತ್ತು. ಈ ನಿರ್ಧಾರವನ್ನು ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

VISTARANEWS.COM


on

Supreme Court verdict on Article 370 and Know about this article
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ (Special Status) ಕಲ್ಪಿಸುವ ಆರ್ಟಿಕಲ್ 370 ರದ್ದು (Article 370) ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ (Supreme Court) ಡಿ.11, ಸೋಮವಾರ ತೀರ್ಪು ಪ್ರಕಟಿಸಲಿದೆ(Judgment Day). ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಸಾಂವಿಧಾನಿಕ ಪೀಠವು ದೀರ್ಘ ಅವಧಿಯಿಂದ ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಸೆಪ್ಟೆಂಬರ್ 5 ರಂದು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. 16 ದಿನಗಳ ಕಾಲ ಸಮಗ್ರ ವಿಚಾರಣೆಗೆ ಸಾಕ್ಷಿಯಾಯಿತು. ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ತಮ್ಮ ವಾದಗಳನ್ನು ಮಂಡಿಸಿದರು, ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ಬಳಸಿದ ಕಾರ್ಯವಿಧಾನದ ಸಾಂವಿಧಾನಿಕತೆಯನ್ನು ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ನಂತರದ ರದ್ದತಿಯನ್ನು ಪರಿಶೀಲಿಸಲಾಯಿತು. ಅಂತಿಮವಾಗಿ ಸೋಮವಾರ ತೀರ್ಪು ಹೊರ ಬೀಳಲಿದೆ. ಈ ಆರ್ಟಿಕಲ್ 370 ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಏನಿದು ಆರ್ಟಿಕಲ್ 370?

ಆರ್ಟಿಕಲ್ 370 ಭಾರತೀಯ ಸಂವಿಧಾನದಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಪ್ರಮುಖ ನಿಬಂಧನೆಯಾಗಿದೆ. 1949 ಜುಲೈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಮಧ್ಯಂತರ ಪ್ರಧಾನ ಮಂತ್ರಿ ಶೇಖ್ ಅಬ್ದುಲ್ಲಾ ಅವರು ಭಾರತೀಯ ಸಂವಿಧಾನ ಸಭೆಯೊಂದಿಗೆ ಮಾತುಕತೆಗಳನ್ನು ನಡೆಸಿ, ಅಂತಿಮವಾಗಿ 370 ನೇ ವಿಧಿಯನ್ನು ಅಳವಡಿಸಲಾಯಿತು. ಆ ವಿಧಿಯ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಲಾಯಿತು. ಉದಾಹರಣೆಗೆ ರಾಜ್ಯವು ತನ್ನದೇ ಆದ ಸಂವಿಧಾನವನ್ನು ಹೊಂದಲು ಅವಕಾಶ ನೀಡಿತು, ಪ್ರತ್ಯೇಕ ಧ್ವಜ ಮತ್ತು ಭಾರತ ಸರ್ಕಾರದ ಸೀಮಿತ ನ್ಯಾಯವ್ಯಾಪ್ತಿಯನ್ನು ಕಲ್ಪಿಸಿತು.

ಭಾರತೀಯ ಸಂವಿಧಾನ ಆರ್ಟಿಕಲ್ 1, ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಮೂಲಕ ಜಾರಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಎಂದು ಆರ್ಟಿಕಲ್ 370(1)(ಸಿ)ನಲ್ಲಿ ತಿಳಿಸಲಾಗಿದೆ. ಆರ್ಟಿಕಲ್ 1 ಒಕ್ಕೂಟ ಎಂದು ಹೇಳುತ್ತದೆ. ಅದರರ್ಥ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಭಾರತೀಯ ಒಕ್ಕೂಟಕ್ಕೆ ಬಂಧಿಸುವ ವಿಧಿ 370 ಆಗಿದೆ. ರಾಷ್ಟ್ರಪತಿಗಳ ಆದೇಶದ ಮೂಲಕ 370 ನೇ ವಿಧಿಯನ್ನು ತೆಗೆದುಹಾಕಬಹುದಾದರೂ, ಹೊಸ ಕಾನೂನುಗಳನ್ನು ಮಾಡದ ಹೊರತು ಅದು ರಾಜ್ಯವನ್ನು ಭಾರತದಿಂದ ಸ್ವತಂತ್ರವಾಗಿರುವಂತೆ ನೋಡಿಕೊಳ್ಳುತ್ತದೆ.

370ನೇ ವಿಧಿ ರದ್ದು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ರಾಷ್ಟ್ರಪತಿ ಆದೇಶದ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು 2019 ಆಗಸ್ಟ್ 5ರಂದು ರದ್ದು ಮಾಡಿತು. ಅಲ್ಲದೇ, ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳನ್ನು ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ರಾಜ್ಯವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಶಾಸಕಾಂಗವನ್ನು ಹೊಂದಿದ್ದರೆ, ಲಡಾಖ್ ಶಾಸಕಾಂಗವನ್ನು ಹೊಂದಿರುವುದಿಲ್ಲ.

ಡಿ.11ಕ್ಕೆ ತೀರ್ಪು ಪ್ರಕಟ

ಆರ್ಟಿಕಲ್ 370 ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ 23 ಅರ್ಜಿಗಳನ್ನು ದಾಖಲಾಗಿದ್ದವು. ದೂರಗಾಮಿ ಪರಿಣಾಮಗಳನ್ನು ಬೀರು ಮತ್ತು ಹೆಗ್ಗುರಾತಾಗಬಹುದಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೀರ್ಘ ಸಮಯದಿಂದ ನಡೆಸುತ್ತಾ ಬಂದಿದೆ. 16 ಮ್ಯಾರಥಾನ್ ದಿನಗಳ ವಿಚಾರಣೆಗಳು ಮತ್ತು ಎರಡೂ ಕಡೆಯವರು ಮಂಡಿಸಿದ ವಾದಗಳ ನಂತರ, ನ್ಯಾಯಾಲಯವು ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸೋಮವಾರ ತೀರ್ಪು ಪ್ರಕಟಿಸಲಿದೆ. 370 ನೇ ವಿಧಿಯ ರದ್ದತಿಯನ್ನು ಸಂವಿಧಾನ ಮತ್ತು ಕಾನೂನು ತತ್ವಗಳಿಗೆ ಅನುಗುಣವಾಗಿ ನಡೆಸಲಾಗಿದೆಯೇ ಎಂದು ನಿರ್ಧರಿಸುವ ಅವರ ಈ ತೀರ್ಮಾನವು ಭಾರೀ ಮಹತ್ವವನ್ನು ಪಡೆದುಕೊಳ್ಳಲಿದೆ.

ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ದುಶ್ಯಂತ್ ದವೆ ಮತ್ತು ರಾಜೀವ್ ಧವನ್ ಸೇರಿದಂತೆ 18 ವಕೀಲರು ಕೇಂದ್ರದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸಿ ವಾದ ಮಂಡಿಸಿದರೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಇತರ ಕಾನೂನು ತಜ್ಞರು ಕೇಂದ್ರವನ್ನು ಪ್ರತಿನಿಧಿಸಿ, ಕೇಂದ್ರದ ನಿರ್ಧಾರವು ಸಂಪೂರ್ಣವಾಗಿ ತಾರ್ಕಿಕ ಮತ್ತು ಸೂಕ್ತವಾಗಿದೆ ಎಂದು ವಾದ ಮಂಡಿಸಿದ್ದರು.

ಈ ಸುದ್ದಿಯನ್ನೂ ಓದಿ: Article 370: ರಾಷ್ಟ್ರಪತಿಯವರೇ ರಾಜ್ಯದ ಸ್ಥಾನ ನೀಡಬಹುದು; ಕಾಶ್ಮೀರ ವಿಷಯದಲ್ಲಿ ಸುಪ್ರೀಂ ಮಹತ್ವದ ಪ್ರಸ್ತಾಪ

Continue Reading

ಕ್ರಿಕೆಟ್

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

1.30 ಕೋಟಿಗೆ ಯು.ಪಿ ವಾರಿಯರ್ಸ್‌ ಪಾಲಾಗಿದ ಕರ್ನಾಟಕದ ಯುವ ಬ್ಯಾಟರ್‌ ವೃಂದಾ ದಿನೇಶ್(Vrinda Dinesh) ಅವರು ತಮಗೆ ಸಿಕ್ಕ ಈ ಮೊತ್ತದಲ್ಲಿ ತಂದೆ ಮತ್ತು ತಾಯಿಗೆ ಕಾರನ್ನು ಉಡುಗೊರೆಯಾಗಿ ನೀಡಲು ಬಯಸಿದ್ದಾರೆ.

VISTARANEWS.COM


on

WPL 2024 Auction
Koo

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2024ರ(WPL 2024 Auction) ಮಿನಿ ಹರಾಜಿನಲ್ಲಿ 1.30 ಕೋಟಿಗೆ ಯು.ಪಿ ವಾರಿಯರ್ಸ್‌ ಪಾಲಾಗಿದ ಕರ್ನಾಟಕದ ಯುವ ಬ್ಯಾಟರ್‌ ವೃಂದಾ ದಿನೇಶ್(Vrinda Dinesh) ಅವರು ತಮಗೆ ಸಿಕ್ಕ ಈ ಮೊತ್ತದಲ್ಲಿ ತಂದೆ ಮತ್ತು ತಾಯಿಗೆ ಉಡುಗೊರೆಯೊಂದನ್ನು ನೀಡಲು ಬಯಸಿದ್ದಾರೆ.

ಬಿಡ್ಡಿಂಗ್​ ಬಳಿಕ ಮಾತನಾಡಿದ ವೃಂದಾ ದಿನೇಶ್, ‘ಇನ್ನೂ ರಾಷ್ಟ್ರೀಯ ತಂಡದ ಪರ ಆಡದ ನನಗೆ ಇಷ್ಟೊಂದು ಬೇಡಿಕೆಯ ಮೊತ್ತ ಸಿಗಬಹುದೆಂದು ಕನಸಿನಲ್ಲಿಯೂ ಎನಿಸಿಕೊಂಡಿರಲಿಲ್ಲ. ಆದರೆ ನಾನು ಯಾವುದಾದರು ಒಂದು ತಂಡಕ್ಕೆ ಸೇಲ್​ ಆಗಬಹುದೆಂದು ನಂಬಿಕೆ ಇತ್ತು. ನನಗೆ ಸಿಕ್ಕ ಈ ಮೊತ್ತದಲ್ಲಿ ನನ್ನ ಎಲ್ಲ ಏಳು- ಬೀಳಿನಲ್ಲಿ ಜತೆಗಿದ್ದ ನನ್ನ ತಂದೆ ಮತ್ತು ತಾಯಿಗೆ ಕಾರನ್ನು ಉಡುಗೊರೆಯಾಗಿ ನೀಡುತ್ತೇನೆ” ಎಂದು ವೃಂದಾ ದಿನೇಶ್ ಹೇಳಿದ್ದಾರೆ.

ತಾಯಿಗೆ ವಿಡಿಯೊ ಕಾಲ್​ ಮಾಡಿಲ್ಲ

ಬೆಂಗಳೂರಿನವರದಾದ ವೃಂದಾ ಅವರು ಬಿಡ್ಡಿಂಗ್​ನಲ್ಲಿ ಅತ್ಯಧಿಕ ಮೊತ್ತಕ್ಕೆ ಸೇಲ್​ ಆದ ವಿಚಾರವನ್ನು ತಮ್ಮ ತಾಯಿಗೆ ವಿಡಿಯೊ ಕಾಲ್​ ಮೂಲಕ ಹೇಳಲಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಕಾರಣನ್ನೂ ಕೂಡ ಅವರು ತಿಳಿಸಿದ್ದಾರೆ. “ನಾನು ಬಿಡ್ಡಿಂಗ್​ನಲ್ಲಿ ಕೋಟಿ ಮೊತ್ತಕ್ಕೆ ಸೇಲ್ ಆದೆ ಎಂಬ ವಿಚಾರವನ್ನು ನನ್ನ ತಾಯಿಗೆ ಹೇಳುವಾಗ ಅವರಲ್ಲಿ ಭಾವನೆ ತಡೆಯಲಾಗದೇ ಕಣ್ಣುತುಂಬಿ ಬರಬಹುದು ಎಂದೆನಿಸಿತು. ಅವರಿಗೆ ಭಾವನೆ ತಡೆಯಲಾಗದು ಎಂಬ ಒಂದೇ ಕಾರಣದಿಂದ ವಿಡಿಯೊ ಕಾಲ್‌ ಮಾಡಲಿಲ್ಲ. ಕೇವಲ ಮೊಬೈಲ್ ಕರೆಯಷ್ಟೇ ಮಾಡಿದೆ” ಎಂದು ವೃಂದಾ ಹೇಳಿದರು. ಈ ಎಲ್ಲ ವಿಚಾರವನ್ನು ಅವರು ಯುಪಿ ವಾರಿಯರ್ಸ್ ಏರ್ಪಡಿಸಿದ್ದ ಸಂವಾದದಲ್ಲಿ ಹೇಳಿಕೊಂಡರು.

1000 ವ್ಯಾಟ್‌ ನಗುವಿನ ಮೌಲ್ಯ

‘ಎಲ್ಲ ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ತ್ಯಾಗ ಮಾಡಿರುತ್ತಾರೆ. ಮಕ್ಕಳು ಇದನ್ನು ಸಾಧಿಸಿದಾಗ ಅವರ ಮೊಗದಲ್ಲಿ ಮೂಡುವ 1000 ವ್ಯಾಟ್‌ ನಗುವಿನ ಮೌಲ್ಯ ನೋಡುವುದೇ ಒಂದು ಸೌಭಾಗ್ಯ. ನನ್ನ ಸಾಧನೆಯನ್ನು ಕಂಡು ನನ್ನ ಪೋಷಕರಿಗೆ ತುಂಬಾ ಖುಷಿಯಾಗಿದೆ. ಅವರು ಕಂಡಿದ್ದ ಕನಸಿನ ಕಾರನ್ನು ನಾನು ಉಡುಗೊರೆಯಾಗಿ ನೀಡುತ್ತೇನೆ. ಜತೆಗೆ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿಗಾಗಿ ಶ್ರಮ ಪಡುತ್ತೇನೆ” ಎಂದರು.

ವೃಂದಾ ದಿನೇಸ್​ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿ. ಸೀನಿಯರ್ ಮಹಿಳಾ ಏಕದಿನ ಟ್ರೋಫಿಯಲ್ಲಿ ಕರ್ನಾಟಕದ ತಂಡವು ಫೈನಲ್ ತಲುಪುವಲ್ಲಿ ವೃಂದಾ ಪ್ರಮುಖ ಪಾತ್ರ ವಹಿಸಿದ್ದರು. 11 ಇನ್ನಿಂಗ್ಸ್‌ ಗಳಲ್ಲಿ 47.70 ರ ಸರಾಸರಿಯಲ್ಲಿ 477 ರನ್ ಗಳಿಸಿದ್ದರು. ವೃಂದಾ ಇತ್ತೀಚೆಗಷ್ಟೇ ಭಾರತ ‘ಎ’ ತಂಡವನ್ನು ಪ್ರತಿನಿಧಿಸಿದ್ದರು. ಆರಂಭಿಕ ಹಂತದಲ್ಲಿ ಕನ್ನಡತಿ ವೃಂದಾ ದಿನೇಶ್ ಅವರು ಡಬ್ಲ್ಯುಪಿಎಲ್​ನಲ್ಲಿ ಅತ್ಯಧಿಕ ಮೊತ್ತಕ್ಕೆ ಸೇಲ್​ ಆದ ಅನ್​ಕ್ಯಾಪ್ಡ್​ ಪ್ಲಯರ್​ ಎನ್ನುವ ಕೀರ್ತಿಗೆ ಪಾತ್ರವಾದರೂ ಈ ಸಂತಸ ಹಚ್ಚು ಕಾಲ ಉಳಿಯಲಿಲ್ಲ. ಕಶ್ವಿ ಗೌತಮ್ ಅವರು ಬರೋಬ್ಬರಿ 2 ಕೋಟಿ ರೂ. ಪಡೆದು ಈ ದಾಖಲೆಯನ್ನು ತಮ್ಮ ಹಸರಿಗೆ ಬರೆದರು.

Continue Reading

ದೇಶ

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Chhattisgarh: ಆದಿವಾಸಿ ಸಮುದಾಯದ ಪ್ರಮುಖ ನಾಯಕ ವಿಷ್ಣು ದೇವ ಸಾಯಿ ಅವರನ್ನು ಬಿಜೆಪಿಯು ಛತ್ತೀಸ್‌ಗಢ ಮುಖ್ಯಮಂತ್ರಿಗೆ ಆಯ್ಕೆ ಮಾಡಿದೆ.

VISTARANEWS.COM


on

Chhattisgarh to be CM Vishnu has two deputies and Raman Singh Speaker
Koo

ನವದೆಹಲಿ: ಛತ್ತೀಸ್‌ಗಢದಲ್ಲಿ (Chhattisgarh) ಎಲ್ಲರ ನಿರೀಕ್ಷೆ ಹುಸಿ ಮಾಡಿ ಭಾರತೀಯ ಜನತಾ ಪಾರ್ಟಿ (BJP Party) ಗೆಲುವು ಸಾಧಿಸಿ, ವಾರದ ಬಳಿಕ ವಿಷ್ಣು ದೇವ ಸಾಯಿ (Vishnu Deo Sai) ಅವರನ್ನು ಮುಖ್ಯಮಂತ್ರಿಯಾಗಿ ಪಕ್ಷವು ಭಾನುವಾರ ಘೋಷಿಸಿದೆ. ಸಿಎಂ ಪೋಸ್ಟ್‌ಗೆ ಸಾಕಷ್ಟು ಹೆಸರುಗಳು ಕೇಳಿ ಬಂದಿದ್ದವು. ಹಾಗಾಗಿ, ಎರಡು ಉಪ ಮುಖ್ಯಮಂತ್ರಿ (Two Deputy CM) ಹುದ್ದೆಗಳನ್ನು ಸೃಜಿಸಲಾಗಿದೆ. ಸಿಎಂ ರೇಸ್‌ನಲ್ಲಿ ತೀವ್ರ ಪೈಪೋಟಿ ನೀಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಸಾವೋ ಹಾಗೂ ಇತರ ಹಿಂದುಳಿದ ವರ್ಗದ ನಾಯಕ ವಿಜಯ್ ಶರ್ಮಾ ಅವರನ್ನು ಡಿಸಿಎಂಗಳಾಗಿ ನೇಮಕ ಮಾಡಲಾಗಿದೆ. ಮಾಜಿ ಸಿಎಂ ರಮಣ್ ಸಿಂಗ್ (Raman singh) ಅವರು ವಿಧಾನಸಭೆ ಸ್ಪೀಕರ್ (Speaker) ಆಗಲಿದ್ದಾರೆ.

15 ವರ್ಷಗಳ ಕಾಲ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿದ್ದ ರಮಣ್ ಸಿಂಗ್ ಅವರು ಈ ಬಾರಿ ಸಿಎಂ ಹುದ್ದೆಗೆ ಭಾರೀ ಪೈಪೋಟಿ ನಡೆಸಿದ್ದರು. ಆದರೆ, ಸಿಎಂ ಪೋಸ್ಟ್‌ಗೆ ಹೊಸ ಮುಖವನ್ನು ಹುಡುಕಿರುವ ಬಿಜೆಪಿ, ರಮಣ್ ಸಿಂಗ್ ಅವರಿಗೆ ವಿಧಾನಸಭೆ ಸ್ಪೀಕರ್ ಹುದ್ದೆಯನ್ನು ದಯಾ ಪಾಲಿಸಿದೆ.

ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ರಾಜ್ಯದ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ. ಆ ಮೂಲಕ, ಸಂಭಾವ್ಯ ಗುಂಪುಗಾರಿಕೆಯನ್ನು ತಡೆಯುವ ಪ್ರಯತ್ನವನ್ನು ಬಿಜೆಪಿ ಮಾಡಿದೆ. ಮತ್ತೊಬ್ಬ ಡಿಸಿಎಂ ಆಗಿರುವ ವಿಜಯ್ ಶರ್ಮಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಲ್ಲದೇ, ಮಾಜಿ ಸಿಎಂ ರಮಣ್ ಸಿಂಗ್ ಅವರ ಅತ್ಯಂತ ನಿಕಟವರ್ತಿಯಾಗಿದ್ದಾರೆ.

ಇನ್ನು ಮುಖ್ಯಮಂತ್ರಿಯಾಗಿ ನೇಮಕವಾಗಿರುವ ವಿಷ್ಣು ದೇವ ಸಾಯಿ ಅವರು ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 87,604 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥರಾದ ದೇವ್ ಸಾಯಿ ಅವರು ಬುಡಕಟ್ಟು ಮುಖವನ್ನು ಆಯ್ಕೆ ಮಾಡಿದರೆ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮೊದಲ ಆಯ್ಕೆಯಾಗುತ್ತಾರೆ ಎಂದು ಊಹಿಸಲಾಗಿತ್ತು.

ವಿಷ್ಣದೇವ್ ಸಾಯ ಅವರು ಈ ಮೊದಲು ಮೋದಿ ಸಂಪುಟದಲ್ಲಿ ಕೇಂದ್ರ ಉಕ್ಕು ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 16 ನೇ ಲೋಕಸಭೆಯಲ್ಲಿ ಛತ್ತೀಸ್‌ಗಢದ ರಾಯಗಢ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಿಷ್ಣು ದೇವ ಸಾಯಿ ಅವರು 2020ರಿಂದ 2022ರವರೆಗೆ ಛತ್ತೀಸ್‌ಗಢ ಬಿಜೆಪಿ ಅಧಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯಶಸ್ವಿಯಾಗಿದೆ. ಮಧ್ಯಪ್ರದೇಶವನ್ನು ಭರ್ಜರಿ ಜಯದೊಂದಿಗೆ ಉಳಿಸಿಕೊಂಡಿದೆ. ಇದು ಕೇಸರಿ ಪಕ್ಷವು ಹಿಂದಿಯ ಹೃದಯಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುವುದಕ್ಕೆ ಕಾರಣವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊಡ್ಡ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Chhattisgarh CM: ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ

Continue Reading
Advertisement
girl students fall ill
ಕರ್ನಾಟಕ9 mins ago

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Fans brave the dampness, waiting for India's tour of South Africa to kick off
ಕ್ರಿಕೆಟ್20 mins ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್42 mins ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ53 mins ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Supreme Court verdict on Article 370 and Know about this article
ದೇಶ2 hours ago

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

WPL 2024 Auction
ಕ್ರಿಕೆಟ್2 hours ago

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

Naveen Ammembala
ದಕ್ಷಿಣ ಕನ್ನಡ2 hours ago

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

Chhattisgarh to be CM Vishnu has two deputies and Raman Singh Speaker
ದೇಶ2 hours ago

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Rambhapuri seer and MB Patil
ಕರ್ನಾಟಕ3 hours ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್3 hours ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ7 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ9 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌