Mutual Fund SIP : ಮ್ಯೂಚುವಲ್‌ ಫಂಡ್‌ನಲ್ಲಿ ಪ್ರತಿಯೊಂದು ಸಿಪ್‌ ಕೂಡ ಅಷ್ಟೇ ಮುಖ್ಯ - Vistara News

ಮನಿ-ಗೈಡ್

Mutual Fund SIP : ಮ್ಯೂಚುವಲ್‌ ಫಂಡ್‌ನಲ್ಲಿ ಪ್ರತಿಯೊಂದು ಸಿಪ್‌ ಕೂಡ ಅಷ್ಟೇ ಮುಖ್ಯ

Mutual Fund SIP ಮ್ಯೂಚುವಲ್‌ ಫಂಡ್‌ ಯೋಜನೆಗಳಲ್ಲಿ ಹೂಡಿಕೆದಾರರು ಪ್ರತಿಯೊಂದು ಸಿಪ್‌ ಅನ್ನೂ ತಪ್ಪದೆ ಪಾವತಿಸುವುದು ಮುಖ್ಯವಾಗುತ್ತದೆ. ಇಲ್ಲದಿದ್ದರೆ ಏನಾಗುತ್ತದೆ? ಇಲ್ಲಿದೆ ಉದಾಹರಣೆ ಸಹಿತ ವಿವರ.

VISTARANEWS.COM


on

RBI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾರುಕಟ್ಟೆ ದುರ್ಬಲವಾಗಿದ್ದಾಗ ನಿಮ್ಮ ಮ್ಯೂಚುವಲ್‌ ಫಂಡ್‌ ಸಿಪ್‌ ಅತ್ಯಂತ ಪರಿಣಾಮಕಾರಿಯಾಗಿ ಇರುತ್ತದೆ. (Mutual Fund SIP ) ಏಕೆಂದರೆ ಯುನಿಟ್‌ಗಳ ಸಂಖ್ಯೆ ಹೆಚ್ಚುತ್ತದೆ. ಇಲ್ಲೊಂದು ಉದಾಹರಣೆಯನ್ನು ನಾವೀಗ ನೋಡೋಣ.

ಎ ಮತ್ತು ಬಿ ಎಂಬ ಎರಡು ವ್ಯಕ್ತಿಗಳನ್ನು ತೆಗೆದುಕೊಳ್ಳೋಣ. ಇವರು ಜನವರಿ 2005ರಿಂದ ಡಿಸೆಂಬರ್‌ 2010 ತನಕ ಮಾಸಿಕ 10,000 ಸಿಪ್‌ ಹೂಡಿಕೆ ಮಾಡಿದ್ದಾರೆ. ಎ ವ್ಯಕ್ತಿ ಮಾರುಕಟ್ಟೆ ಹಿಂದಿನ ತಿಂಗಳಿಗಿಂ 5% ಹೆಚ್ಚಿದ್ದಾಗಲೆಲ್ಲ ಸಿಪ್‌ ಅನ್ನು ಮಿಸ್‌ ಮಾಡುತ್ತಾರೆ. ಆದರೆ ಬಿ ವ್ಯಕ್ತಿ ಸಿಪ್‌ ಅನ್ನು ಮುಂದುವರಿಸುತ್ತಾರೆ. ಎಲ್ಲಿಯೂ ಮಿಸ್‌ ಮಾಡುವುದಿಲ್ಲ. ಅವಧಿಯ ಮುಕ್ತಾಯಕ್ಕೆ ಬಿ ವಾರ್ಷಿಕ 16.12% ರಿಟರ್ನ್‌ನೊಂದಿಗೆ 11.72 ಲಕ್ಷ ರೂ. ಗಳಿಸುತ್ತಾರೆ. ಎ ವ್ಯಕ್ತಿ 16.41% ರಿಟರ್ನ್‌ ಪಡೆದರೂ, ಸಿಗುವ ಮೊತ್ತ 7.95 ಲಕ್ಷ ರೂ. ಇದಕ್ಕೆ ಕಾರಣ ಎ ವ್ಯಕ್ತಿ 24 ಸಲ ಸಿಪ್‌ ಮಿಸ್‌ ಮಾಡಿರುವುದು.

ಮಾರುಕಟ್ಟೆ ಉನ್ನತ ಮಟ್ಟದಲ್ಲಿ ಇದ್ದಾಗ ಸಿಪ್‌ ಅಷ್ಟೊಂದು ಫಲದಾಯಕ ಆಗಿರುವುದಿಲ್ಲ ಎಂಬ ಮಾತು ಪೂರ್ಣ ಸತ್ಯವಲ್ಲ. ದೀರ್ಘಾವಧಿಯ ಸಿಪ್‌ ಕೆಲವು ಯುನಿಟ್‌ಗಳನ್ನು ಅತ್ಯಂತ ಅಗ್ಗದ ದರದಲ್ಲಿ ನೀಡುತ್ತದೆ. ಕೆಲವು ಸಿಪ್‌ಗಳು ದುಬಾರಿಯಾಗುತ್ತವೆ. ಕೆಲವು ಸಾಧಾರಣ ದರಕ್ಕೆ ಸಿಗುತ್ತವೆ. ಆದ್ದರಿಂದ ಯಾತ್ರೆಯ ಮಧ್ಯೆ ಸಿಪ್‌ಗಳನ್ನು ಮಿಸ್‌ ಮಾಡುವುದು ಅಷ್ಟೊಂದು ಸೂಕ್ತವಲ್ಲ.

ದೀರ್ಘಾವಧಿಗೆ ಸಿಪ್‌ಗಳಲ್ಲಿ ಹೂಡಿಕೆಯು ನಿಮ್ಮನ್ನು ಕೋಟ್ಯಧಿಪತಿಯನ್ನಾಗಿಸಬಹುದು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. 2005ರ ಆಗಸ್ಟ್‌ 5ರಂದು ಶುರುವಾದ ಆದಿತ್ಯ ಬಿರ್ಲಾ ಸನ್‌ಲೈಫ್‌ ಇಂಡಿಯಾ ಜನ್‌ನೆಕ್ಸ್ಟ್‌ ಫಂಡ್‌ (Aditya Birla sun life India GenNext Fund) ವಾರ್ಷಿಕ 15.20 ಗ್ರೋತ್‌ ರೇಟ್‌ ಅನ್ನು ನೀಡಿದೆ. ಹೀಗಾಗಿ ಒಂದು ವೇಳೆ ಆಗ ಲಂಪ್ಸಮ್‌ ಆಗಿ 10,000 ರೂ. ಹೂಡಿದ್ದರೆ ಈಗ 1.55 ಲಕ್ಷ ರೂ. ಆಗಿರುತ್ತಿತ್ತು. ಪ್ರತಿ ತಿಂಗಳು 10,000 ರೂ. ಸಿಪ್‌ ಹೂಡಿದ್ದರೆ ಈಗ 1.1 ಕೋಟಿ ರೂ. ಆಗಿರುತ್ತಿತ್ತು. 2023ರ ಜೂನ್‌ 30ಕ್ಕೆ ಫಂಡ್‌ ಹೌಸ್‌ 3,855 ಕೋಟಿ ರೂ. ಆಸ್ತಿಯನ್ನು ನಿರ್ವಹಿಸುತ್ತಿದೆ.

ಕಂಪನಿಗಳಲ್ಲಿ ಹಲವಾರು ಉದ್ಯೋಗಿಗಳಿಗೆ ಈ ವರ್ಷ ವೇತನ ಏರಿಕೆ ಅತ್ಯಲ್ಪ ಪ್ರಮಾಣದಲ್ಲಿ ನಡೆದಿದೆ. ವರ್ಷದಿಂದ ವರ್ಷಕ್ಕೆ ವೇತನ ಏರಿಕೆಯಲ್ಲಿ ವ್ಯತ್ಯಾಸ ಇರುತ್ತದೆ. ಆದರೆ ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮೂಲಕ ನಿಮ್ಮ ವೇತನ ಏರಿಕೆ ಆಗದಿದ್ದರೂ ಆದಾಯ ಏರಿಸಬಹುದು ಎನ್ನುತ್ತಾರೆ ತಜ್ಞರು.

ನೀವು ಸಿಪ್‌ ಹೇಗೆ ದೊಡ್ಡ ಮೊತ್ತ ಕೊಡುತ್ತದೆ ಎಂಬುದಕ್ಕೆ ಈ ಉದಾಹರಣೆ ಗಮನಿಸಿ. ನೀವು ಪ್ರತಿ ತಿಂಗಳು 10,000 ರೂ. ಮಾಸಿಕ ಸಿಪ್‌ ಹೂಡಿಕೆ ಮಾಡಿದರೆ, 32 ವರ್ಷ ಮತ್ತು 11 ತಿಂಗಳುಗಳಲ್ಲಿ 5 ಕೋಟಿ ರೂ. ಗಳಿಸುತ್ತೀರಿ. ಆದರೆ ವಾರ್ಷಿಕ ರಿಟರನ್‌ 12% ಸಿಗಬೇಕು. ಆದರೆ ಸಿಪ್‌ ಮೊತ್ತವನ್ನು ಪ್ರತಿ ವರ್ಷ 5% ಏರಿಸಿದರೆ 24 ವರ್ಷದಲ್ಲಿ ಈ ಗುರಿ ಸಾಧಿಸಬಹುದು.

ಮಕ್ಕಳ ವಿದ್ಯಾಭ್ಯಾಸ, ವಿವಾಹ, ವಿದೇಶ ಪ್ರವಾಸ, ಇಳಿ ವಯಸ್ಸಿನ ಆರ್ಥಿಕ ಭದ್ರತೆ ಸಲುವಾಗಿ ಮ್ಯೂಚುವಲ್‌ ಸಿಪ್‌ ಮೂಲಕ ಹೂಡಿಕೆ ಮಾಡಬಹುದು. ಉದಾಹರಣೆಗೆ ನಿಮ್ಮ ಮಗುವಿನ ವಯಸ್ಸು 5 ವರ್ಷ ಎಂದಿಟ್ಟುಕೊಳ್ಳಿ. ಸುಮಾರು 13 ವರ್ಷಗಳಲ್ಲಿ ಕಾಲೇಜು ಶಿಕ್ಷಣ ಪಡೆಯಬಹುದು. ಇಂಥ ಸಂದರ್ಭ ಈಗಲೇ ಪ್ರತಿ ತಿಂಗಳು ಸಿಪ್‌ ಹೂಡಿಕೆ ಶುರು ಮಾಡಿದರೆ ಪ್ರಯೋಜನವಾದೀತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Income Tax Returns: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡದಿದ್ದರೆ ಏನಾಗುತ್ತದೆ?

ಆರ್ಥಿಕ ಮೌಲ್ಯಮಾಪನ ವರ್ಷ 2024- 25 ಅಥವಾ ಹಣಕಾಸು ವರ್ಷ 2023- 24 ಕ್ಕಾಗಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಆದಾಯ ತೆರಿಗೆ ನಿಯಮಗಳ ಬಗ್ಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ವರ್ಷ ಆದಾಯ ತೆರಿಗೆ ರಿಟರ್ನ್ಸ್ (Income Tax Returns) ಅನ್ನು ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನು ನೀವು ನಿರ್ಧರಿಸಲು ಬೇಕಾದ ಸಮಗ್ರ ಮಾಹಿತಿ ಇಲ್ಲಿದೆ.

VISTARANEWS.COM


on

By

Income Tax Returns
Koo

ಪ್ರತಿ ವರ್ಷ ಆದಾಯ ತೆರಿಗೆ ವಿವರ (Income Tax Returns) ಸಲ್ಲಿಸುತ್ತಿದ್ದರೂ ಇನ್ನೂ ಹಲವಾರು ಗೊಂದಲಗಳು ನಮ್ಮನ್ನು ಕಾಡುತ್ತಿರುತ್ತವೆ. ಮುಖ್ಯವಾಗಿ ಪ್ರತಿ ವರ್ಷ ಆದಾಯ ತೆರಿಗೆ (Income Tax) ವಿವರವನ್ನು ಸಲ್ಲಿಸಲೇಬೇಕೇ ? ಎನ್ನುವುದು. ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವುದು ಅನೇಕ ಭಾರತೀಯ (Indian’s) ತೆರಿಗೆದಾರರ (taxpayers) ಕರ್ತವ್ಯವಾಗಿದೆ.

ಆರ್ಥಿಕ ಮೌಲ್ಯಮಾಪನ ವರ್ಷ 2024- 25 ಅಥವಾ ಹಣಕಾಸು ವರ್ಷ 2023- 24 ಕ್ಕಾಗಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಆದಾಯ ತೆರಿಗೆ ನಿಯಮಗಳ ಬಗ್ಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ವರ್ಷ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನು ನೀವು ನಿರ್ಧರಿಸಲು ಬೇಕಾದ ಸಮಗ್ರ ಮಾಹಿತಿ ಇಲ್ಲಿದೆ.

ಆದಾಯದ ಮಿತಿಗಳು

ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಪ್ರಾಥಮಿಕ ಮಾನದಂಡವು ಆದಾಯದ ಮಟ್ಟವನ್ನು ಆಧರಿಸಿದೆ. ಆರ್ಥಿಕ ವರ್ಷ 2024- 25ರ ಆದಾಯ ಮಿತಿಗಳು ಈ ಕೆಳಗಿನಂತಿವೆ.

60 ವರ್ಷಕ್ಕಿಂತ ಕೆಳಗಿನ ವ್ಯಕ್ತಿಗಳು ಒಟ್ಟು ಆದಾಯ 2.5 ಲಕ್ಷ ರೂ., 60- 80 ವರ್ಷದ ಹಿರಿಯ ನಾಗರಿಕರ ಒಟ್ಟು ಆದಾಯ 3 ಲಕ್ಷ ರೂ., 80 ವರ್ಷ ಮೇಲ್ಪಟ್ಟ ಸೂಪರ್ ಸೀನಿಯರ್ ಸಿಟಿಜನ್ಸ್ ಒಟ್ಟು ಆದಾಯ 5 ಲಕ್ಷ ರೂ. ಗಳಿದ್ದರೆ ಸೆಕ್ಷನ್ 80C ನಿಂದ 80U ವರೆಗಿನ ಕಡಿತಗಳ ಮೊದಲು ನಿಮ್ಮ ಒಟ್ಟು ಆದಾಯವು ಈ ಮಿತಿಗಳನ್ನು ಮೀರಿದರೆ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕು.

ಆದಾಯದ ವಿಧಗಳು

ಮೂಲ ಆದಾಯದ ಮಿತಿಗಳನ್ನು ಮೀರಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಅಗತ್ಯವು ವಿವಿಧ ರೀತಿಯ ಆದಾಯಗಳಿಗೆ ವಿಸ್ತರಿಸುತ್ತದೆ. ಇದರರ್ಥ ಕೆಳಗಿನ ಆದಾಯವನ್ನು ವರ್ಷವಿಡೀ ನಿಮ್ಮ ಆದಾಯವೆಂದು ಪರಿಗಣಿಸಲಾಗುತ್ತದೆ.

ಸಂಬಳ ಪಡೆಯುವ ವ್ಯಕ್ತಿಗಳು ನಿಗದಿತ ಮಿತಿಯನ್ನು ಮೀರಿದ ಸಂಬಳದಿಂದ ಬರುವ ಆದಾಯ, ಮನೆ ಆಸ್ತಿಯಿಂದ ಬಾಡಿಗೆ ಅಥವಾ ಇತರ ಆದಾಯ, ಆಸ್ತಿ, ಷೇರುಗಳು, ಮ್ಯೂಚುಯಲ್ ಫಂಡ್ಗಳು ಇತ್ಯಾದಿಗಳ ಮಾರಾಟದಿಂದ ಗಳಿಕೆಗಳು, ವ್ಯಾಪಾರ ಅಥವಾ ವೃತ್ತಿಪರ ಚಟುವಟಿಕೆಗಳಿಂದ ಆದಾಯ, ಬಡ್ಡಿ, ಲಾಭಾಂಶಗಳು, ಲಾಟರಿಗಳಿಂದ ಗೆಲುವುಗಳು ಇತ್ಯಾದಿಗಳಿಂದ ಬರುವ ಆದಾಯ.

ಷರತ್ತುಗಳು

ಆದಾಯವು ಮಿತಿಗಿಂತ ಕೆಳಗಿದ್ದರೂ ಕೆಲವು ಷರತ್ತುಗಳಿಗಾಗಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಅಗತ್ಯವಿದೆ.

ಚಾಲ್ತಿ ಖಾತೆಗಳಿಗೆ, ಒಂದು ಅಥವಾ ಹೆಚ್ಚಿನ ಬ್ಯಾಂಕ್ ಖಾತೆಗಳಲ್ಲಿ 1 ಕೋಟಿ ರೂ. ಉಳಿತಾಯ ಖಾತೆಗಳಿಗೆ, 50 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಠೇವಣಿ, ವಿದೇಶಿ ಪ್ರಯಾಣಕ್ಕೆ 2 ಲಕ್ಷ ರೂ. ವೆಚ್ಚ, ವಿದ್ಯುತ್ ಬಿಲ್‌ಗಳ ಮೇಲೆ ರೂ 1 ಲಕ್ಷಕ್ಕಿಂತ ಹೆಚ್ಚಿನ ಪಾವತಿಗಳು, ಹೆಚ್ಚುವರಿಯಾಗಿ ವಿದೇಶಿ ಆಸ್ತಿ ಅಥವಾ ಆದಾಯವನ್ನು ಹೊಂದಿದ್ದರೆ ಅಥವಾ ಭಾರತದ ಹೊರಗಿನ ಯಾವುದೇ ಖಾತೆಯಲ್ಲಿ ಸಹಿ ಮಾಡುವ ಅಧಿಕಾರವನ್ನು ಹೊಂದಿದ್ದರೆ ಆದಾಯದ ಮಟ್ಟವನ್ನು ಲೆಕ್ಕಿಸದೆ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕು.

ಹೂಡಿಕೆ ಲಾಭ ಮತ್ತು ನಷ್ಟ

ಸ್ಟಾಕ್‌, ಮ್ಯೂಚುವಲ್ ಫಂಡ್‌ ಅಥವಾ ಇತರ ಸೆಕ್ಯುರಿಟಿಗಳಲ್ಲಿನ ಹೂಡಿಕೆದಾರರು ಐಟಿಆರ್ ಅನ್ನು ಫೈಲ್ ಮಾಡಬೇಕಾಗುತ್ತದೆ. ಅಲ್ಪಾವಧಿಯ ಅಥವಾ ದೀರ್ಘಾವಧಿಯ ಬಂಡವಾಳ ಲಾಭವನ್ನು ಗಳಿಸುತ್ತಿದ್ದರೆ, 10 ಲಕ್ಷದವರೆಗೆ ತೆರಿಗೆ-ಮುಕ್ತವಾಗಿದ್ದರೂ ಸಹ ಲಾಭಾಂಶವನ್ನು ಸ್ವೀಕರಿಸಿದ್ದರೆ, ಹೂಡಿಕೆಯ ನಷ್ಟವನ್ನು ವರದಿ ಮಾಡುವುದು ಸಹ ನಿರ್ಣಾಯಕವಾಗಿದೆ. ಏಕೆಂದರೆ ಇದು ಭವಿಷ್ಯದ ಲಾಭಗಳನ್ನು ಸರಿದೂಗಿಸಲು ನಷ್ಟವನ್ನು ಮುಂದಕ್ಕೆ ಸಾಗಿಸಲು ಅನುವು ಮಾಡಿಕೊಡುತ್ತದೆ. ಅನಂತರದ ವರ್ಷಗಳಲ್ಲಿ ನಿಮ್ಮ ತೆರಿಗೆ ಹೊಣೆಗಾರಿಕೆಯನ್ನು ಕಡಿಮೆ ಮಾಡುತ್ತದೆ.

ಮರುಪಾವತಿಗಳಿಗಾಗಿ ಕ್ಲೈಮ್

ತೆರಿಗೆ ಕಡಿತಗೊಳಿಸಲಾದ (ಟಿಡಿಎಸ್) ಅಥವಾ ಮುಂಗಡ ತೆರಿಗೆಯ ಮೂಲಕ ನೀವು ಹೆಚ್ಚುವರಿ ತೆರಿಗೆಯನ್ನು ಪಾವತಿಸಿದ್ದರೆ, ಮರುಪಾವತಿಯನ್ನು ಕ್ಲೈಮ್ ಮಾಡಲು ಐಟಿಆರ್ ಅನ್ನು ಸಲ್ಲಿಸುವುದು ಅವಶ್ಯಕ. ಸಲ್ಲಿಸದೆಯೇ, ಪಾವತಿಸಿದ ಹೆಚ್ಚುವರಿ ತೆರಿಗೆಯನ್ನು ಮರುಪಡೆಯಲು ಸಾಧ್ಯವಿಲ್ಲ.

ಯಾರಿಗೆ ಕಡ್ಡಾಯ?

ಆದಾಯದ ಮಟ್ಟವನ್ನು ಲೆಕ್ಕಿಸದೆ ಕೆಲವು ವರ್ಗದ ವ್ಯಕ್ತಿಗಳು ಮತ್ತು ಘಟಕಗಳು ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಲು ಕಡ್ಡಾಯವಾಗಿ ಅಗತ್ಯವಿದೆ.

ಎಲ್ಲಾ ಕಂಪೆನಿ, ಸಂಸ್ಥೆಗಳು ಆದಾಯ ಅಥವಾ ನಷ್ಟವನ್ನು ಲೆಕ್ಕಿಸದೆ ಆದಾಯ ತೆರಿಗೆ ಸಲ್ಲಿಸಲೇಬೇಕು.
ಚಾರಿಟಬಲ್ ಟ್ರಸ್ಟ್‌ಗಳು ಮತ್ತು ಧಾರ್ಮಿಕ ಸಂಸ್ಥೆಗಳು ಸೆಕ್ಷನ್ 10 ರ ಅಡಿಯಲ್ಲಿ ವಿನಾಯಿತಿಯನ್ನು ಕ್ಲೈಮ್ ಮಾಡುತ್ತಿದ್ದರೆ ಆದಾಯ ತೆರಿಗೆ ಸಲ್ಲಿಸಬೇಕು.

ಇದನ್ನೂ ಓದಿ: PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡದಿದ್ದರೆ ಏನಾಗುತ್ತದೆ?

ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಲು ವಿಫಲವಾದರೆ ದಂಡ ಮತ್ತು ಕಾನೂನು ಕ್ರಮಕ್ಕೆ ಕಾರಣವಾಗಬಹುದು. ತಡವಾಗಿ ಫೈಲಿಂಗ್ ಮಾಡಿದರೆ ದಂಡ ವಿಧಿಸಲಾಗುತ್ತದೆ. ನಿಗದಿತ ದಿನಾಂಕದ ಅನಂತರ ಆದರೆ ಮೌಲ್ಯಮಾಪನ ವರ್ಷದ ಡಿಸೆಂಬರ್ 31 ರ ಮೊದಲು ಸಲ್ಲಿಸಿದರೆ 5,000 ರೂ. ದಂಡ ಮತ್ತು ಅನಂತರ ಸಲ್ಲಿಸಿದರೆ ದಂಡ ಮೊತ್ತ ಹೆಚ್ಚಾಗುತ್ತದೆ. ಬಾಕಿ ಮೊತ್ತದ ಮೇಲಿನ ಬಡ್ಡಿ, ನಿಗದಿತ ದಿನಾಂಕದಿಂದ ಮಾಸಿಕವಾಗಿ ಲೆಕ್ಕಹಾಕಲಾಗುತ್ತದೆ.

ತೀವ್ರತರವಾದ ಪ್ರಕರಣಗಳಲ್ಲಿ ಪಾಲಿಸದಿರುವುದು ಕಾನೂನು ಕ್ರಮಕ್ಕೆ ಕಾರಣವಾಗಬಹುದು. ಮೂರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು.

Continue Reading

ಮನಿ ಗೈಡ್

Money Guide: 30 ಸಾವಿರ ಸಂಬಳ ಪಡೆಯುವವರೂ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆಗಲು ಸಾಧ್ಯ!

ತಿಂಗಳಿಗೆ ಇರುವುದು ಕೇವಲ 25 ರಿಂದ 30 ಸಾವಿರ ಸಂಬಳ. ಇನ್ನು ಕೋಟ್ಯಧಿಪತಿ ಆಗುವುದು ಕನಸಿನ ಮಾತು ಎಂದು ನಿರಾಶೆಗೆ ಒಳಗಾಗುವರೇ ಹೆಚ್ಚು. ಆದರೆ ಮನಸ್ಸು ಮಾಡಿದರೆ ಕಡಿಮೆ ಸಂಬಳವಿದ್ದರೂ ಸರಿಯಾದ ಯೋಜನೆ (Money Guide) ಹಾಕಿಕೊಂಡರೆ ಕೆಲವೇ ವರ್ಷಗಳಲ್ಲಿ ಕೋಟ್ಯಾಧಿಪತಿಗಳಾಗಬಹುದು. ಕಡಿಮೆ ಸಂಬಳ ಇರುವವರೂ ಹೆಚ್ಚು ಸಂಪಾದನೆ ಮಾಡಲು ಸಾಧ್ಯವಿದೆ. ಅದಕ್ಕಾಗಿ ಇಲ್ಲಿದೆ ಕೆಲವು ಉಪಯುಕ್ತ ಟಿಪ್ಸ್.

VISTARANEWS.COM


on

By

Money Guide
Koo

ಕೋಟ್ಯಧಿಪತಿ (Crorepati) ಆಗುವ ಕನಸು (dream) ಪ್ರತಿಯೊಬ್ಬರಿಗೂ ಇದೆ. ಆದರೆ ಬರುವ ಸಂಬಳ (salary) ಮನೆ ಖರ್ಚಿಗೂ ಸಾಲುವುದಿಲ್ಲ ಎಂದು ದುಃಖಿಸುವವರೇ ಹೆಚ್ಚು. ಆದರೆ ಸರಿಯಾದ ಯೋಜನೆ (Money Guide ) ರೂಪಿಸಿಕೊಂಡರೆ ಇದು ಕಷ್ಟವೇನಲ್ಲ. ಹಣಕಾಸಿನ ಲೆಕ್ಕಾಚಾರದ ಜೊತೆಜೊತೆಗೆ ಒಂದಷ್ಟು ಯೋಜನೆ ಹಾಕಿಕೊಂಡರೆ ಬಹುತೇಕ ಎಲ್ಲರೂ ಕೋಟ್ಯಧಿಪತಿಗಳಬಹುದು.

ಈಗ ಬಹುತೇಕ ಮಂದಿ ದುಡಿಯುವವರೇ. ಇದರಲ್ಲಿ ಬಹುಪಾಲು ಮಂದಿ ದೊಡ್ಡದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಸಾಕಷ್ಟು ಹಣವನ್ನೂ ಗಳಿಸುತ್ತಿದ್ದಾರೆ. ಕೆಲವು ವರ್ಗದವರ ಆದಾಯ ಬಹುತೇಕ 1 ಕೋಟಿ ರೂ. ಹತ್ತಿರವೂ ಇದೆ. ತಿಂಗಳಿಗೆ 25 ರಿಂದ 30,000 ರೂಪಾಯಿ ಸಂಬಳ ಪಡೆಯುವವರಿಗೆ ಕೋಟ್ಯಾಧಿಪತಿ ಆಗುವ ಕನಸಿದೆ. ಆದರೆ ಇದು ಅಸಾಧ್ಯ ಎಂದು ಬಹುತೇಕ ಮಂದಿ ಕೈಚೆಲ್ಲುತ್ತಾರೆ. ಆದರೆ ಸರಿಯಾದ ಹಣಕಾಸು ಯೋಜನೆಯನ್ನು ರೂಪಿಸಿದರೆ ಇಂದಿನ ಕಾಲದಲ್ಲಿ ಕೋಟ್ಯಾಧಿಪತಿಯಾಗುವುದು ಕಷ್ಟವೇನಲ್ಲ.

ಕೋಟ್ಯಧಿಪತಿಗಳಾಗುವುದು ಇಂದಿನ ಕಾಲದಲ್ಲಿ ಕಷ್ಟವಲ್ಲ. ಇದಕ್ಕಾಗಿ ಅನೇಕ ಹೂಡಿಕೆಯ ವಿಧಾನಗಳಿವೆ. ಅದರ ಮೂಲಕ ಕಡಿಮೆ ಸಂಬಳ ಪಡೆಯುವ ಜನರೂ ಕೋಟ್ಯಾಧಿಪತಿಯಾಗುವ ತಮ್ಮ ಕನಸನ್ನು ನನಸಾಗಿಸಬಹುದು.
ಮ್ಯೂಚುವಲ್ ಫಂಡ್‌ಗಳಲ್ಲಿ ಎಸ್ ಐಪಿ ನಿಮ್ಮ ಕೋಟ್ಯಾಧಿಪತಿಯಾಗುವ ಕನಸನ್ನು ನನಸು ಮಾಡಬಹುದು. ಎಸ್ ಐಪಿ ಮಾಸಿಕ 30,000 ರೂಪಾಯಿಗಳನ್ನು ಗಳಿಸುವ ವ್ಯಕ್ತಿಯನ್ನು ಸಹ ಕೋಟ್ಯಾಧಿಪತಿಯನ್ನಾಗಿ ಮಾಡುತ್ತದೆ.

ಎಸ್ ಐ ಪಿ ಹೇಗೆ ಪ್ರಯೋಜನಕಾರಿ?

ಮ್ಯೂಚುವಲ್ ಫಂಡ್‌ಗಳು ಎಸ್ ಐ ಪಿ ಮಾರುಕಟ್ಟೆ- ಸಂಯೋಜಿತ ಯೋಜನೆಯಾಗಿದೆ. ಆದ್ದರಿಂದ ಅದರಲ್ಲಿ ಲಾಭದ ಗ್ಯಾರಂಟಿ ಇಲ್ಲ. ಆದರೆ ನೇರವಾಗಿ ಷೇರುಗಳಲ್ಲಿ ಹಣವನ್ನು ಹೂಡಿಕೆ ಮಾಡುವುದಕ್ಕೆ ಹೋಲಿಸಿದರೆ ಅಪಾಯವು ಕಡಿಮೆ. ದೀರ್ಘಾವಧಿಯಲ್ಲಿ ಅದರ ಸರಾಸರಿ ಆದಾಯವು ಸುಮಾರು ಶೇ. 12ರಷ್ಟು ಇದೆ ಎಂದು ತಜ್ಞರು ಹೇಳುತ್ತಾರೆ.

Money Guide


ಇದು ಯಾವುದೇ ಇತರ ಯೋಜನೆಗಳಿಗಿಂತ ಹೆಚ್ಚು ಲಾಭಕರ. ಕೆಲವೊಮ್ಮೆ ಅದರಿಂದ ಉತ್ತಮ ಆದಾಯ ಪಡೆಯುವ ಅವಕಾಶವಿರುತ್ತದೆ. ಈ ಸಂಯೋಜನೆಯಿಂದಾಗಿ ದೀರ್ಘಾವಧಿಯಲ್ಲಿ ಮ್ಯೂಚುವಲ್ ಫಂಡ್‌ಗಳಲ್ಲಿ ಹಣವು ವೇಗವಾಗಿ ಬೆಳೆಯುತ್ತದೆ. ಆದ್ದರಿಂದ, ಇಂದಿನ ಸಮಯದಲ್ಲಿ ಜನರು ಇದನ್ನು ಲಾಭದಾಯಕ ವ್ಯವಹಾರವೆಂದು ಪರಿಗಣಿಸುತ್ತಾರೆ ಮತ್ತು ಹೆಚ್ಚಿನ ತಜ್ಞರು ಅದನ್ನು ಪೋರ್ಟ್ ಫೋಲಿಯೋದಲ್ಲಿ ಸೇರಿಸಲು ಹೇಳುತ್ತಾರೆ.

ಮಿಲಿಯನೇರ್ ಆಗುವುದು ಹೇಗೆ?

ತಿಂಗಳಿಗೆ 30,000 ರೂ. ಸಂಬಳ ಪಡೆಯುವವರೂ ಮಿಲಿಯನೇರ್ ಆಗಬಹುದು. ಇದಕ್ಕಾಗಿ 50- 30- 20 ನಿಯಮವನ್ನು ಅನುಸರಿಸಬೇಕು. ಅಂದರೆ ಆದಾಯದ ಶೇ. 20ರಷ್ಟನ್ನು ಎಸ್ ಐ ಪಿಯಲ್ಲಿ ಹೂಡಿಕೆ ಮಾಡಬೇಕು. 30,000 ರೂ. ಶೇ. 20ರಷ್ಟು ಎಂದರೆ 6,000 ರೂ. ಆಗಿರುತ್ತದೆ. ಎಸ್ ಐಪಿಯಲ್ಲಿ ಪ್ರತಿ ತಿಂಗಳು 6,000 ರೂ. ಹೂಡಿಕೆ ಮಾಡಿದರೆ 24 ವರ್ಷಗಳಲ್ಲಿ ಕೋಟ್ಯಧಿಪತಿ ಆಗಬಹುದು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

24 ವರ್ಷಗಳಲ್ಲಿ ಒಟ್ಟು 17,28,000 ರೂ. ಅಂದರೆ ಶೇ.12ರಷ್ಟು ಬಡ್ಡಿ ದರದಲ್ಲಿ 83,08,123 ರೂ. ಆಗುತ್ತದೆ. ಸಮಯದೊಂದಿಗೆ ಆದಾಯವೂ ಹೆಚ್ಚಾಗುವುದರಿಂದ ಹೂಡಿಕೆಯನ್ನು ಹೆಚ್ಚಿಸಿ 24 ವರ್ಷಗಳಲ್ಲಿ 1,00,36,123 ರೂ. ಗಳಿಸಿ 24 ವರ್ಷಗಳ ಮುಂಚೆಯೇ ಮಿಲಿಯನೇರ್ ಆಗಬಹುದು!

Continue Reading

ವಾಣಿಜ್ಯ

EPFO Balance Check: ಜುಲೈ ಅಂತ್ಯದಲ್ಲಿ ಪಿಎಫ್ ಖಾತೆಗೆ ಬಡ್ಡಿ ಹಣ ಬರಲಿದೆ; ಪರಿಶೀಲಿಸುವುದು ಹೇಗೆ?

ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ ಶೀಘ್ರದಲ್ಲೇ ಬಡ್ಡಿ ಮೊತ್ತ (EPFO Balance Check) ಜಮೆಯಾಗಲಿದೆ. ಜುಲೈ ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ ಸದಸ್ಯರ ಖಾತೆಗೆ ತಲುಪೂವ ನಿರೀಕ್ಷೆ ಇದೆ. ಬಡ್ಡಿ ಹಣ ಖಾತೆಗೆ ಬಂದಿದೆಯೇ ಇಲ್ಲವೇ, ಎಷ್ಟು ಬಂದಿದೆ ಎಂಬುದನ್ನು ಪರಿಶೀಲಿಸಲು ಸಾಕಷ್ಟು ದಾರಿಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

EPFO Balance Check
Koo

ಭವಿಷ್ಯ ನಿಧಿ (Employees’ Provident Fund) ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಬಡ್ಡಿ (interest) ಮೊತ್ತ ಜಮೆಯಾಗುವುದನ್ನು (EPFO Balance Check) ಕಾಯುತ್ತಿದ್ದಾರೆ. ಅಂತವರಿಗೆ ಇದೀಗ ಸಿಹಿ ಸುದ್ದಿ. ಜುಲೈ (july) ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ (EPFO) ಸದಸ್ಯರ ಖಾತೆಗೆ ತಲುಪಬಹುದು. ಇದಕ್ಕಾಗಿ ಶೀಘ್ರದಲ್ಲೇ ಹಣಕಾಸು ಸಚಿವಾಲಯ (Finance Ministry) ಅಧಿಕೃತ ಅಧಿಸೂಚನೆಯನ್ನು ಹೊರಡಿಸುವ ನಿರೀಕ್ಷೆ ಇದೆ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು ಫೆಬ್ರವರಿಯಲ್ಲಿ ಆರ್ಥಿಕ ವರ್ಷ 2024 ಕ್ಕೆ ಶೇ. 8.25ರ ಬಡ್ಡಿ ದರವನ್ನು ಅನುಮೋದಿಸಿದೆ. ಆದರೆ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲು ಹಣಕಾಸು ಸಚಿವಾಲಯವು ಇನ್ನೂ ಕಾಯುತ್ತಿದೆ. ಸಾರ್ವತ್ರಿಕ ಚುನಾವಣೆಗಳಿಂದಾಗಿ ಇದು ವಿಳಂಬವಾಗಿದೆ. ಇದು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಹಣ ಬಂದಿದೆಯೇ ತಿಳಿಯುವುದು ಹೇಗೆ?

ಇಪಿಎಫ್ ಖಾತೆಯ ಪಾಸ್‌ಬುಕ್ ಅನ್ನು ಪರಿಶೀಲಿಸುತ್ತಿದ್ದರೆ ನಿಮ್ಮ ಇಪಿಎಫ್ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಎಂಬುದು ನಿಮಗೆ ತಿಳಿಯುತ್ತದೆ. ಮಿಸ್ಡ್ ಕಾಲ್ ಅಥವಾ ಎಸ್ ಎಂಎಸ್ ನಂತಹ ಸೌಲಭ್ಯಗಳ ಮೂಲಕ ಇಪಿಎಫ್ ಒ ​​ಪೋರ್ಟಲ್ ಮೂಲಕ ನೀವು ಇಪಿಎಫ್ ಪಾಸ್‌ಬುಕ್ ಅನ್ನು ಪರಿಶೀಲಿಸಬಹುದು.

EPFO Balance Check

ಇಪಿಎಫ್‌ಒ ​​ಪೋರ್ಟಲ್‌ನಲ್ಲಿ ಹೇಗೆ ಪರಿಶೀಲಿಸುವುದು?

ಮೊದಲನೆಯದಾಗಿ ಇಪಿಎಫ್ ಒ ​​ಪೋರ್ಟಲ್ https://www.epfindia.gov.in/site_en/index.php ಗೆ ಹೋಗಿ. ಇದಕ್ಕಾಗಿ ನಿಮ್ಮ ಯುಎಎನ್ (ಯುನಿವರ್ಸಲ್ ಖಾತೆ ಸಂಖ್ಯೆ) ಅನ್ನು ಸಕ್ರಿಯಗೊಳಿಸಬೇಕು. ಸೈಟ್ ತೆರೆದಾಗ, ನಮ್ಮ ಸೇವೆಗಳು ಟ್ಯಾಬ್‌ಗೆ ಹೋಗಿ ಮತ್ತು ಅನಂತರ ಡ್ರಾಪ್-ಡೌನ್ ಮೆನು ‘ಉದ್ಯೋಗಿಗಳಿಗಾಗಿ’ ಆಯ್ಕೆ ಮಾಡಿ. ಸೇವಾ ಕಾಲಂ ಅಡಿಯಲ್ಲಿ ಸದಸ್ಯರ ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ. ಮುಂದಿನ ಪುಟದಲ್ಲಿ ಯುಎಎನ್ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಬೇಕು. ಕ್ಯಾಪ್ಚಾವನ್ನು ನಮೂದಿಸುವ ಮೂಲಕ ಲಾಗ್ ಇನ್ ಮಾಡಿ. ಲಾಗಿನ್ ಆದ ಅನಂತರ ಸದಸ್ಯರ ಐಡಿ ಅನ್ನು ನಮೂದಿಸಿ. ಇದರ ಬಳಿಕ ಇಪಿಎಫ್ ಬ್ಯಾಲೆನ್ಸ್ ಗೋಚರಿಸುತ್ತದೆ.

ಇದನ್ನೂ ಓದಿ: PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಮಿಸ್ಡ್ ಕಾಲ್ ಮೂಲಕ ಹೇಗೆ ಪರಿಶೀಲಿಸುವುದು?

011- 22901406ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಇಪಿಎಫ್ ಬ್ಯಾಲೆನ್ಸ್ ಅನ್ನು ನೀವು ಪರಿಶೀಲಿಸಬಹುದು. ಕರೆ ಮಾಡಿದಾಗ, ಎಸ್ ಎಂಎಸ್ ಅನ್ನು ಪಡೆಯುತ್ತೀರಿ. ಅದರಲ್ಲಿ ಬ್ಯಾಲೆನ್ಸ್ ಗೋಚರಿಸುತ್ತದೆ. ಇದಕ್ಕಾಗಿ ಇಪಿಎಫ್ ಖಾತೆಯೊಂದಿಗೆ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಪ್ಯಾನ್ ಮತ್ತು ಆಧಾರ್ ಸಂಖ್ಯೆಯೊಂದಿಗೆ ಬ್ಯಾಂಕ್ ಖಾತೆ ಸಂಖ್ಯೆಯನ್ನು ಸಹ ನಿಮ್ಮ ಯುಎಎನ್ ಗೆ ಲಿಂಕ್ ಮಾಡಬೇಕು.

ಎಸ್‌ಎಂಎಸ್ ಮೂಲಕ ಪರಿಶೀಲಿಸುವುದು ಹೇಗೆ?

ಮಿಸ್ಡ್ ಕಾಲ್ ಸೇವೆಯಂತೆಯೇ ಎಲ್ಲಾ ಪ್ರಮುಖ ದಾಖಲೆಗಳನ್ನು ಯುಎಎನ್‌ಗೆ ಲಿಂಕ್ ಮಾಡಬೇಕು. ಆಗ ಮಾತ್ರ ಈ ಸೇವೆಯನ್ನು ಬಳಸಲು ಸಾಧ್ಯವಾಗುತ್ತದೆ. ಇದಕ್ಕಾಗಿ EPFOHO UAN ENG ಅಥವಾ ENG ಬದಲಿಗೆ ನೀವು ಸಂದೇಶವನ್ನು ಬಯಸುವ ಭಾಷೆಯ ಕೋಡ್ ಅನ್ನು ಬರೆದು 7738299899 ಗೆ SMS ಮಾಡಬೇಕಾಗುತ್ತದೆ.

Continue Reading

ವಾಣಿಜ್ಯ

PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಭಾರತದಲ್ಲಿ ಪಾನ್ ಕಾರ್ಡ್ ದುರ್ಬಳಕೆ ಹೆಚ್ಚಾಗುತ್ತಿದೆ. ಅದರಲ್ಲೂ ಹಿರಿಯ ನಾಗರಿಕರು, ದುರ್ಬಲರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ವಂಚಕರು ಪಾನ್ (PAN Card Safety) ವಿವರಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ವಂಚನೆಗಳನ್ನು ಹೇಗೆ ಗುರುತಿಸಬಹುದು ಮತ್ತು ಆರ್ಥಿಕ ಯೋಗಕ್ಷೇಮವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

PAN Card Safety
Koo

ಪಾನ್ ಕಾರ್ಡ್‌ಗಳ (PAN Card Safety) ದುರುಪಯೋಗ ಭಾರತದಲ್ಲಿ (india) ಹೆಚ್ಚಾಗುತ್ತಿದೆ. ವಿಶೇಷವಾಗಿ ಹಿರಿಯ ನಾಗರಿಕರು (senior citizens), ರೈತರು (farmers), ವಿದ್ಯಾರ್ಥಿಗಳು (students) ಇದಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ನಾವು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಅದರಲ್ಲೂ ಪಾನ್ ಕಾರ್ಡ್ (pan card) ಬಳಕೆ, ಮಾಹಿತಿ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯನ್ನು ವಹಿಸಬೇಕಿದೆ.

ಪಾನ್ ಕಾರ್ಡ್ ಭಾರತದಲ್ಲಿನ ಹಣಕಾಸಿನ ವಹಿವಾಟುಗಳಿಗೆ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಇದನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳಬಹುದಾದ ಸಾಧ್ಯತೆಗಳಿವೆ. ಮುಂಬಯಿಯ ಹಿರಿಯ ನಾಗರಿಕರೊಬ್ಬರ ಪಾನ್ ವಿವರಗಳನ್ನು 1.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟವನ್ನು ನೋಂದಾಯಿಸಲು ಬಳಸಿದ್ದಾರೆ ಎನ್ನುವುದು ಆದಾಯ ತೆರಿಗೆ ಇಲಾಖೆಯಿಂದ ತನಿಖೆಗೆ ಬಂದ ಬಳಿಕ ಗೊತ್ತಾಗಿದೆ.

ವಂಚಕರು ಸಾಮಾನ್ಯವಾಗಿ ತಂತ್ರಜ್ಞಾನದ ಬಗ್ಗೆ ತಿಳಿದಿರುತ್ತಾರೆ. ಹೀಗಾಗಿ ಅವರು ಹೆಚ್ಚು ಜಾಗರೂಕರಾಗಿರದ ವ್ಯಕ್ತಿಗಳನ್ನು ಗುರಿಯಾಗಿಸುತ್ತಾರೆ. ಅವರು ವಿವಿಧ ವಿಧಾನಗಳ ಮೂಲಕ ಪಾನ್ ವಿವರಗಳನ್ನು ಪಡೆದು ಅನಂತರ ಅವುಗಳನ್ನು ಕಾನೂನುಬಾಹಿರವಾಗಿ ಬಳಸುತ್ತಾರೆ.

ವಂಚನೆ ಹೇಗೆ?

ನಕಲಿ ಆಸ್ತಿ ನೋಂದಣಿ

ಮುಂಬಯಿ ಪ್ರಕರಣದಂತೆ ವಂಚಕರು ನಕಲಿ ಆಸ್ತಿ ಮಾರಾಟವನ್ನು ನೋಂದಾಯಿಸಲು ಪಾನ್ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಳ್ಳಬಹುದು. ಇದು ಸಂತ್ರಸ್ತರಿಗೆ ತೆರಿಗೆ ನೊಟೀಸ್ ಜಾರಿಯಾಗಲು ಕಾರಣವಾಗಬಹುದು.

ಸಾಲ ಪಡೆಯಲು

ಕ್ರಿಮಿನಲ್‌ಗಳು ಫಿನ್‌ಟೆಕ್ ಅಪ್ಲಿಕೇಶನ್‌ಗಳ ಮೂಲಕ ಸಾಲಗಳನ್ನು ಪಡೆಯಲು ಪಾನ್ ವಿವರಗಳನ್ನು ಬಳಸಿಕೊಳ್ಳಬಹುದು. ಇದರಿಂದ ಸಂತ್ರಸ್ತರು ಅನಿರೀಕ್ಷಿತವಾಗಿ ಸಾಲಗಾರರಾಗಬಹುದು.


ಪಾನ್ ರಕ್ಷಿಸುವುದು ಹೇಗೆ?

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಪಾನ್ ಮಾಹಿತಿಯನ್ನು ಹಂಚಿಕೊಳ್ಳುವಾಗ ತೀವ್ರ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಪಾನ್ ವಿವರಗಳನ್ನು ಸರ್ಕಾರದಿಂದ ಅಧಿಕೃತವಾಗಿರುವ ಘಟಕಗಳೊಂದಿಗೆ ಮಾತ್ರ ಹಂಚಿಕೊಳ್ಳಿ. ಪಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದರಿಂದ ದುರುಪಯೋಗದ ವಿರುದ್ಧ ಸ್ವಲ್ಪ ರಕ್ಷಣೆ ಪಡೆಯಬಹುದು.

ಪ್ಯಾನ್ ಕಾರ್ಡ್ ದುರುಪಯೋಗವನ್ನು ಪರಿಶೀಲಿಸುವುದು ಹೇಗೆ?

ಪಾನ್ ಕಾರ್ಡ್ ಹಗರಣವನ್ನು ಗುರುತಿಸಲು ತೆಗೆದುಕೊಳ್ಳಬೇಕಾದ ಕೆಲವು ಕ್ರಮಗಳಿವೆ.
ವಾರ್ಷಿಕ ಮಾಹಿತಿ ಪರಿಶೀಲಿಸಿ (AIS)

ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಈ ಡಾಕ್ಯುಮೆಂಟ್, ಬ್ಯಾಂಕ್‌ಗಳು ಮತ್ತು ಇತರ ಸಂಸ್ಥೆಗಳು ವರದಿ ಮಾಡಿರುವ ನಿಮ್ಮ ಹಣಕಾಸಿನ ವಹಿವಾಟಿನ ವಿವರವಾದ ದಾಖಲೆಯನ್ನು ಒದಗಿಸುತ್ತದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಾಗಿ ನಿಮ್ಮ ವಾರ್ಷಿಕ ಮಾಹಿತಿಯನ್ನು ನಿಯಮಿತವಾಗಿ ಪರಿಶೀಲಿಸಿ.

ಕ್ರೆಡಿಟ್ ಸ್ಕೋರ್ ಮೇಲ್ವಿಚಾರಣೆ ಮಾಡಿ

CIBIL, Equifax, Experian ಅಥವಾ CRIF ಹೈ ಮಾರ್ಕ್ ನಂತಹ ಏಜೆನ್ಸಿಗಳ ಮೂಲಕ ಕ್ರೆಡಿಟ್ ಸ್ಕೋರ್ ಅನ್ನು ಪರಿಶೀಲಿಸಿ. ನಿಮಗೆ ತಿಳಿಯದೆ ನಿಮ್ಮ ಹೆಸರಿನಲ್ಲಿ ತೆಗೆದುಕೊಂಡ ಯಾವುದೇ ಸಾಲಗಳನ್ನು ಗುರುತಿಸಿ.

ಇದನ್ನೂ ಓದಿ: Elon Musk: ಟೆಸ್ಲಾದಲ್ಲಿ ಎಲಾನ್ ಮಸ್ಕ್ ಒಬ್ಬರ ಸಂಬಳ ಟಾಟಾ ಮೋಟಾರ್ಸ್‌ ಒಟ್ಟು ಆದಾಯಕ್ಕಿಂತ ಹೆಚ್ಚು!

ಹಣಕಾಸು ವರದಿಗಳನ್ನು ಪರೀಕ್ಷಿಸಿ

ಪೇಟಿಎಂ ಅಥವಾ ಬ್ಯಾಂಕ್ ಬಜಾರ್‌ನಂತಹ ಫಿನ್‌ಟೆಕ್ ಪ್ಲಾಟ್‌ಫಾರ್ಮ್‌ಗಳು ಹಣಕಾಸು ವರದಿಗಳನ್ನು ಪಡೆಯಲು ಅನುಮತಿಸುತ್ತವೆ. ಈ ವರದಿಗಳನ್ನು ನಿಯಮಿತವಾಗಿ ಪರಿಶೀಲಿಸುವುದರಿಂದ ಯಾವುದೇ ಅನಧಿಕೃತ ವಹಿವಾಟುಗಳನ್ನು ಪತ್ತೆಹಚ್ಚಲು ಸಹಾಯವಾಗುವುದು.

ಜಾಗರೂಕರಾಗಿರಿ ಮತ್ತು ಕ್ರಮ ಕೈಗೊಳ್ಳಿ

ಪಾನ್ ಕಾರ್ಡ್ ಹಂಚಿಕೆ ವಿಚಾರದಲ್ಲಿ ಜಾಗರೂಕರಾಗಿರಿ. ಅನುಮಾನಾಸ್ಪದವಾಗಿ ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಿ. ಇದರಿಂದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಪಾನ್ ಕಾರ್ಡ್ ವಂಚನೆಗೆ ಬಲಿಯಾದರೆ ತಕ್ಷಣ ಪೊಲೀಸ್ ಇಲಾಖೆಗೆ ದೂರು ನೀಡಿ. ಆರ್ಥಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಪಾನ್ ವಿವರಗಳನ್ನು ರಕ್ಷಿಸುವುದು ಬಹಳ ಮುಖ್ಯ.

Continue Reading
Advertisement
IRCTC
ದೇಶ30 seconds ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ4 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest5 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ10 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್11 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest12 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ14 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ18 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ51 mins ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್59 mins ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌