Adani stocks : ಅದಾನಿ ಎಫ್‌ಪಿಒ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ, ಹೆಚ್ಚುವರಿ ಷೇರು ಮಾರಾಟ ವಿಫಲ ಸಂಭವ - Vistara News

ಪ್ರಮುಖ ಸುದ್ದಿ

Adani stocks : ಅದಾನಿ ಎಫ್‌ಪಿಒ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ, ಹೆಚ್ಚುವರಿ ಷೇರು ಮಾರಾಟ ವಿಫಲ ಸಂಭವ

ಅದಾನಿ ಎಂಟರ್‌ಪ್ರೈಸಸ್‌ ಎಫ್‌ಪಿಒದ ವೇಳಾಪಟ್ಟಿ ಹಾಗೂ ಷೇರು ದರದಲ್ಲಿ ಬದಲಾವಣೆ ಇರುವುದಿಲ್ಲ ಎಂದು ಅದಾನಿ ಗ್ರೂಪ್‌ ಸ್ಪಷ್ಟಪಡಿಸಿದೆ. ಜನವರಿ 31ಕ್ಕೆ ಎಫ್‌ಪಿಒ (Adani stocks) ಮುಕ್ತಾಯವಾಗಲಿದೆ.

VISTARANEWS.COM


on

Adani stocks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಹಿಂಡೆನ್‌ ಬರ್ಗ್‌ ಸಂಸ್ಥೆಯ ಸ್ಫೋಟಕ ವರದಿಯ ಬಳಿಕ (Adani stocks) ಷೇರು ದರದಲ್ಲಿ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಅದಾನಿ ಎಂಟರ್‌ಪ್ರೈಸಸ್‌ನ (Adani Group) ಮುಂದುವರಿದ ಷೇರು ಬಿಡುಗಡೆಯ ( FPO) ಬಗ್ಗೆ ಉಂಟಾಗಿರುವ ಊಹಾಪೋಹಗಳಿಗೆ ಕಂಪನಿ ತೆರೆ ಎಳೆದಿದೆ. ಎಫ್‌ಪಿಒ ವೇಳಾ ಪಟ್ಟಿ ಮತ್ತು ಷೇರುಗಳಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜನವರಿ 31ರಂದು ಎಪ್‌ಪಿಒ ಮುಕ್ತಾಯವಾಗಲಿದೆ. ಕಳೆದ ಶುಕ್ರವಾರ 20,000 ಕೋಟಿ ರೂ. ಎಫ್‌ಪಿಒದ ಮೊದಲ ದಿನ ಕೇವಲ 1 % ಷೇರುಗಳು ವಿಕ್ರಯವಾಗಿತ್ತು. ಹೂಡಿಕೆದಾರರಿಂದ ನೀರಸ ಪ್ರತಿಕ್ರಿಯೆ ಲಭಿಸಿತ್ತು.

20,000 ಕೋಟಿ ರೂ. ಎಫ್‌ಪಿಒ ವಿಫಲ ಸಂಭವ:

ಅದಾನಿ ಎಂಟರ್‌ಪ್ರೈಸಸ್‌ನ ಎಫ್‌ಪಿಒದಲ್ಲಿ ಬಿಡುಗಡೆಯಾಗುವ ಪ್ರತಿ ಷೇರಿನ ದರ ಶ್ರೇಣಿಯನ್ನು 3,112 ರೂ.ಗಳಿಂದ 3,276 ರೂ.ಗೆನಿಗದಿಪಡಿಸಲಾಗಿತ್ತು. ಆದರೆ ಶುಕ್ರವಾರ ಬಿಎಸ್‌ಇನಲ್ಲಿ ಸೆಕೆಂಡರಿ ಮಾರುಕಟ್ಟೆಯಲ್ಲಿ ಷೇರಿನ ದರ 2,762 ರೂ.ಗಳ ಕೆಳಮಟ್ಟದಲ್ಲಿತ್ತು. ಹೀಗಾಗಿ ಷೇರುದಾರರಿಂದ ಎಫ್‌ಪಿಒಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಎಫ್‌ಪಿಒದಲ್ಲಿ ಹೆಚ್ಚಿನ ಬೆಲೆಗೆ ಷೇರುಗಳನ್ನು ಕೊಳ್ಳಲು ಅವರು ಮುಂದೆ ಬಂದಿರಲಿಲ್ಲ. ಹೀಗಾಗಿ ಷೇರಿನ ದರದಲ್ಲಿ ಮತ್ತಷ್ಟು ಡಿಸ್ಕೌಂಟ್‌ ಹಾಗೂ ವೇಳಾಪಟ್ಟಿಯಲ್ಲಿ ಬದಲಾವಣೆ ನಿರೀಕ್ಷಿಸಲಾಗಿತ್ತು.

ಕಳೆದ ಶುಕ್ರವಾರ ಅದಾನಿ ಎಂಟರ್‌ಪ್ರೈಸಸ್‌ ಷೇರು ದರದಲ್ಲಿ 18% ಇಳಿಕೆ ದಾಖಲಾಗಿತ್ತು. ಅಮೆರಿಕ ಮೂಲದ ಹಿಂಡೆನ್‌ ಬರ್ಗ್‌ ಎಂಬ ಮಾರುಕಟ್ಟೆ ಸಂಶೋಧನಾ ಸಂಸ್ಥೆ ತನ್ನ ಸ್ಫೋಟಕ ವರದಿಯಲ್ಲಿ ಅದಾನಿ ಗ್ರೂಪ್‌ ವಿರುದ್ಧ ಷೇರು ಅವ್ಯವಹಾರ, ನಕಲಿ ಕಂಪನಿಗಳ ಸ್ಥಾಪನೆ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿತ್ತು. ಇದಾದ ಬಳಿಕ ಅದಾನಿ ಕಂಪನಿಗಳ ಷೇರು ದರ ಕುಸಿದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

ಜಾಹೀರಾತು ಏಜೆನ್ಸಿ ಮಾಲೀಕ ಭಿಂಡೆ 2009ರಲ್ಲಿ ಮುಲುಂಡ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ತಮ್ಮ ಅಫಿಡವಿಟ್​ನಲ್ಲಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ ಮತ್ತು ನೆಗೋಷಿಯಬಲ್ ಇನ್​ಸ್ಟ್ರುಮೆಂಟ್​ ಆ್ಯಕ್ಟ್​ (ಚೆಕ್ ಬೌನ್ಸ್ ​ ಪ್ರಕರಣ ) ಅಡಿಯಲ್ಲಿ ತಮ್ಮ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದ.

VISTARANEWS.COM


on

Billboard Collapse
Koo

ನವದೆಹಲಿ: ಮುಂಬೈನ ಘಾಟ್​ಕೋಪರ್​ನಲ್ಲಿ ಸೋಮವಾರ ಧೂಳು ಬಿರುಗಾಳಿ ಹಾಗೂ ಮಳೆ ಸುರಿದಾಗ ಹೋರ್ಡಿಂಗ್ ಕುಸಿತು ಬಿದ್ದು (Billboard Collapse) 14 ಮಂದಿ ಮೃತಪಟ್ಟು 74ಕ್ಕೂ ಹೆಚ್ಚು ಮಂದಿ ಗಾಯೊಂಡಿದ್ದರು. ಈ ಹಿನ್ನೆಲೆಯಲ್ಲಿ ಹೋರ್ಡಿಂಗ್ ಸ್ಥಾಪಿಸಿದ್ದ ಇಗೊ ಮೀಡಿಯಾ ಕಂಪನಿಯ ಮಾಲೀಕ ಭವೇಶ್ ಭಿಂಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಚ್ಚರಿಯೆಂರೆ ಭವೇಶ್​ಗೆ ಇದು ಮಾಮೂಲಿ. ಯಾಕೆಂಧರೆ ಅವರ ವಿರುದ್ಧ ಅತ್ಯಾಚಾರ ಸೇರಿದಂತೆ 20 ಕ್ಕೂ ಹೆಚ್ಚು ಪ್ರಕರಣಗಳಿವೆ. ಘಟನ ಬಳಿಕ ಭಿಂಡೆ ಪರಾರಿಯಾಗಿದ್ದು, ಆತನ ಸೆಲ್ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು ಏಜೆನ್ಸಿ ಮಾಲೀಕ ಭಿಂಡೆ 2009ರಲ್ಲಿ ಮುಲುಂಡ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ತಮ್ಮ ಅಫಿಡವಿಟ್​ನಲ್ಲಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ ಮತ್ತು ನೆಗೋಷಿಯಬಲ್ ಇನ್​ಸ್ಟ್ರುಮೆಂಟ್​ ಆ್ಯಕ್ಟ್​ (ಚೆಕ್ ಬೌನ್ಸ್ ​ ಪ್ರಕರಣ ) ಅಡಿಯಲ್ಲಿ ತಮ್ಮ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದ.

ಈ ವರ್ಷದ ಜನವರಿಯಲ್ಲಿ ಮುಲುಂಡ್ ಪೊಲೀಸ್ ಠಾಣೆಯಲ್ಲಿ ಭಿಡೆ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಚಾರ್ಜ್​ ಶೀಟ್​ ಕೂಡ ಸಲ್ಲಿಸಲಾಗಿದೆ. ಹೋರ್ಡಿಂಗ್​ಗಳು ಮತ್ತು ಬ್ಯಾನರ್​​ ಸ್ಥಾಪಿಸಲು ಭಿಂಡೆ ಭಾರತೀಯ ರೈಲ್ವೆ ಮತ್ತು ಮುಂಬೈ ನಾಗರಿಕ ಸಂಸ್ಥೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯಿಂದ ಹಲವಾರು ಗುತ್ತಿಗೆಗಳನ್ನು ಪಡೆದಿದ್ದಾನೆ. ಎರಡೂ ಸಂಸ್ಥೆಗಳ ನಿಯಮಗಳನ್ನು ಹಲವಾರು ಬಾರಿ ಉಲ್ಲಂಘಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆತನ ಕಂಪನಿ ವಿರುದ್ಧ ಮರ ವಿಷ ಹಾಕಿದ ಮತ್ತು ಮರ ಕಡಿಯುವ ಪ್ರಕರಣಗಳಲ್ಲಿ ದೂರು ದಾಖಲಾಗಿದೆ.

ಅತ್ಯಂತ ದೊಡ್ಡ ಹೋರ್ಡಿಂಗ್​

ಸೋಮವಾರ ಪೆಟ್ರೋಲ್​ ಸ್ಟೇಷನ್​ ಮೇಲೆ ಮೇಲೆ ಬಿದ್ದ ಹೋರ್ಡಿಂಗ್ 120X120 ಅಡಿ ರಚನೆಯಾಗಿದ್ದು, ಅದು ಲಿಮ್ಕಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆಯುವಷ್ಟು ದೊಡ್ಡದಾಗಿದೆ. ಅಂದ ಹಾಗೆ ಬಿಎಂಸಿ 40X40 ಅಡಿಗಿಂತ ಹೆಚ್ಚಿನ ಗಾತ್ರದ ಜಾಹೀರಾತು ಫಲಕಗಳನ್ನು ಅನುಮತಿಸುವುದಿಲ್ಲ. ಹೀಗಾಗಿ ನಿಯಮ ಮೀರಿ ಅಳವಡಿಸಿರುವುದು ಸ್ಪಷ್ಟ.

ಇದನ್ನೂ ಓದಿ: Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

ನಗರದಲ್ಲಿನ ಎಲ್ಲಾ ಅಕ್ರಮ ಹೋರ್ಡಿಂಗ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ನಾವು ಆದೇಶಿಸಿದ್ದೇವೆ. ನಾವು ಇಂದು ಅಭಿಯಾನ ಪ್ರಾರಂಭಿಸುತ್ತಿದ್ದೇವೆ. ಅನುಮತಿ ಪಡೆಯದ ಕಾರಣ ಈ ಪ್ರಕರಣದಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹೋರ್ಡಿಂಗ್ ಗೋಚರಿಸುವಂತೆ ಕೆಲವು ಮರಗಳನ್ನು ಕತ್ತರಿಸಲಾಗಿದೆ ಎಂಬ ದೂರು ಸಹ ಬಂದಿದೆ. ಈ ಸಂಬಂಧ ನಾವು ಪ್ರಕರಣ ದಾಖಲಿಸಿದ್ದೇವೆ ಎಂದು ಬಿಎಂಸಿ ಆಯುಕ್ತ ಭೂಷಣ್ ಗಗ್ರಾನಿ ಸುದ್ದಿಗಾರರಿಗೆ ತಿಳಿಸಿದರು.

ಬಿಎಂಸಿ ಹೆಚ್ಚುವರಿ ಆಯುಕ್ತ ಸುಧಾಕರ್ ಶಿಂಧೆ ಮಾತನಾಡಿ, ನಿಯಮ ಉಲ್ಲಂಘನೆ ವಿವಾದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಲೋಪಗಳು ಎಲ್ಲಿ ಸಂಭವಿಸಿವೆ ಎಂಬುದು ತನಿಖೆಯಿಂದ ಬಹಿರಂಗವಾಗಲಿದೆ. ಗಾಯಗೊಂಡ ಜನರನ್ನು ನೋಡಿಕೊಳ್ಳುವುದು ಬಿಎಂಸಿಯ ಪ್ರಸ್ತುತ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

Continue Reading

ದೇಶ

Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

Dog Attack : ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್​ನಲ್ಲಿ ವರದಿ ಮಾಡಿತ್ತು.

VISTARANEWS.COM


on

Dog Attack
Koo

ಹೈದರಾಬಾದ್: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ (Dog Attack) ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೆಲಸದ ಸ್ಥಳದಲ್ಲಿದ್ದ ಸಾಕು ನಾಯಿ ಅದು ಎಂದು ಸ್ಥಳೀಯ ನಿವಾಸಿಗಳು ಹೇಳಿದರೆ, ಜಾಗದ ಮಾಲೀಕರು ಬೀದಿ ನಾಯಿ ಎಂದು ಹೇಳಿದ್ದಾರೆ.

ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್​ನಲ್ಲಿ ವರದಿ ಮಾಡಿತ್ತು.

ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್​​ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್​ಮೆಂಟ್​​ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.

ಇದನ್ನೂ ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಬೇಜವಾಬ್ದಾರಿ ಕಾರಣ

ಈ ತಿಂಗಳ ಆರಂಭದಲ್ಲಿ, ಚೆನ್ನೈನ ಉದ್ಯಾನವನದಲ್ಲಿ ಎರಡು ರಾಟ್ವೀಲರ್ ನಾಯಿಗಳ ದಾಳಿಗೆ ಐದು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಳು. ಅವು ಸಾಕಿದ್ದ ನಾಯಿಗಳಾಗಿದ್ದು ಮಾಲೀಕ ಅನ್ನು ಕಟ್ಟಿರಲಿಲ್ಲ. . ಪೊಲೀಸರು ಅವರ ಮಾಲೀಕರ ವಿರುದ್ಧ ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ, ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಸಾಕುಪ್ರಾಣಿಗಳಿಗೆ ವಿಶೇಷವಾಗಿ ನಾಯಿಗಳಿಗೆ ಸಾರ್ವಜನಿಕ ಉದ್ಯಾನವನಗಳ ಒಳಗೆ ಪ್ರವೇಶ ನಿರ್ಬಂಧಿಸಿದೆ. ಪರಿಷ್ಕೃತ ನಿಯಮಗಳ ಪ್ರಕಾರ ಸಾಕುಪ್ರಾಣಿಗಳನ್ನು ಉದ್ಯಾನವನಗಳ ಒಳಗೆ ಬಿಗಿಯಾಗಿ ಕಟ್ಟುವುದು ಮತ್ತು ಬಾಯಿ ಮುಚ್ಚಿಸುವುದು ಕಡ್ಡಾಯ.

ನಾಯಿಗಳಿಗೆ ಬ್ಯಾನ್​

ನಾಯಿಗಳ ದಾಳಿಯು ಕೆಲವು ತಳಿಗಳ ನಾಯಿಗಳನ್ನು ವಸತಿ ಪ್ರದೇಶಗಳಲ್ಲಿ ಸಾಕಬಹುದೇ ಎಂಬ ಚರ್ಚೆ ಹುಟ್ಟು ಹಾಕಲು ಕಾರಣವಾಗಿದೆ. ಪಿಟ್ಬುಲ್ ಟೆರಿಯರ್, ಅಮೆರಿಕನ್ ಬುಲ್ಡಾಗ್, ರಾಟ್​ವೀಲರ್​ ಮತ್ತು ಮಾಸ್ಟಿಫ್ಸ್ ಸೇರಿದಂತೆ 23 ತಳಿಯ ಕ್ರೂರ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರವು ಮಾರ್ಚ್​ನಲ್ಲಿ ರಾಜ್ಯಸರ್ಕಾರಗಳನ್ನು ಕೇಳಿದೆ. ಈಗಾಗಲೇ ಈ ತಳಿಗಳನ್ನು ಸಾಕುಪ್ರಾಣಿಗಳಾಗಿ ಹೊಂದಿರುವವರು ಅವುಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಬೇಕು ಎಂದು ನಿರ್ದೇಶನದಲ್ಲಿ ಸೇರಿಸಲಾಗಿದೆ

Continue Reading

ಬೆಂಗಳೂರು

HSRP Number Plate: ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌! ಸರ್ಕಾರದಿಂದ ದಂಡಾಸ್ತ್ರ ಪ್ರಯೋಗ?

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇದ್ದ ಗಡುವನ್ನು ರಾಜ್ಯ ಸರ್ಕಾರ ಈಗ ಮೇ 31ರವರೆಗೆ ವಿಸ್ತರಣೆ ಮಾಡಿತ್ತು. ಆದರೆ, ಆ ಸಮಯ ಈಗ ಸಮೀಪಿಸುತ್ತಿದೆ. ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಹೊರಡಿಸಿದ್ದ ಆದೇಶವನ್ನು ಇದುವರೆಗೆ ಎರಡು ಬಾರಿ ಮುಂದಕ್ಕೆ ಹಾಕಿದಂತಾಗಿದೆ. ಇದಕ್ಕೆ ಕಾರಣ, ಇನ್ನೂ ಅಲ್ಪಮಟ್ಟದಲ್ಲಿ ನೋಂದಣಿ ಆಗಿರುವುದಾಗಿದೆ. ಹೀಗಾಗಿ ಈ ಬಾರಿಯೂ ವಿಸ್ತರಣೆ ಮಾಡಲಿದೆಯೇ? ಅಥವಾ ದಂಡ ಪ್ರಯೋಗಕ್ಕೆ ಮುಂದಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

VISTARANEWS.COM


on

HSRP Number Plate Registration Deadline Near Will the government impose fines
Koo

ಬೆಂಗಳೂರು: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ – HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಮುಗಿಯುತ್ತಾ ಬಂದರೂ ವಾಹನ ಸವಾರರು ಮಾತ್ರ ನಿರಾಸಕ್ತಿ ತೋರಿದ್ದಾರೆ. ಅವಧಿಯನ್ನು ವಿಸ್ತರಣೆ ಮಾಡಲಾಗುತ್ತಾ ಬರುತ್ತಿದ್ದರೂ 2 ಕೋಟಿ ವಾಹನಗಳ ಪೈಕಿ ಈವರೆಗೆ ನೋಂದಣಿ ಮಾಡಿಸಿರುವುದು 35 ಲಕ್ಷ ಮಂದಿ ಮಾತ್ರ ಎಂಬ ವಿಚಾರ ಗೊತ್ತಾಗಿದೆ. ಹಾಗಾಗಿ ಮತ್ತೊಮ್ಮೆ ಅವಧಿ ವಿಸ್ತರಣೆ ಆಗಲಿದೆಯೇ? ಅಥವಾ ದಂಡಾಸ್ತ್ರಕ್ಕೆ ರಾಜ್ಯ ಸರ್ಕಾರ ಮುಂದಾಗಲಿದೆಯೇ ಎಂಬ ಬಗ್ಗೆ ಈ ತಿಂಗಳ ಕೊನೆಯಲ್ಲಿ ಗೊತ್ತಾಗಲಿದೆ.

ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಈಗ ಮೇ 31ರವರೆಗೆ ವಿಸ್ತರಣೆ ಮಾಡಿ ಈಗಾಗಲೇ ಆದೇಶಿಸಿದೆ. ಸರಿಯಾಗಿ ಲೆಕ್ಕ ಹಾಕಿದರೆ ಇನ್ನು 17 ದಿನ ಮಾತ್ರ ಬಾಕಿ ಇದೆ. ಆದರೆ, ರಾಜ್ಯದ ವಾಹನ ಸವಾರರು ಈ ಬಗ್ಗೆ ತಲೆಬಿಸಿಯನ್ನೇ ಮಾಡಿಕೊಂಡಂತೆ ಇಲ್ಲ. ಗಡುವು ವಿಸ್ತರಣೆಯಾದರೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಸಲ ಗಡುವು ವಿಸ್ತರಣೆಯಾಗಿದ್ದಾಗ ಕೊನೇ ಹಂತದಲ್ಲಿ 18 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದರು. ಈಗ ಅದರ ಪ್ರಮಾಣ 35 ಲಕ್ಷಕ್ಕೇರಿದೆ. ಆದರೆ, ನೋಂದಾಯಿತ ವಾಹನಗಳು ಬರೋಬ್ಬರಿ 2 ಕೋಟಿಗೂ ಅಧಿಕ ಇದೆ. ಹೀಗಾಗಿ ಈ ಬಾರಿ ರಾಜ್ಯ ಸರ್ಕಾರ ಯಾವ ಕ್ರಮವನ್ನು ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮಾರ್ಚ್‌ನಲ್ಲಿ ನಡೆದಿದ್ದ ವಿಧಾನ ಮಂಡಲ ಅಧಿವೇಶನದಲ್ಲಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ವಿಚಾರ ಚರ್ಚೆಗೆ ಬಂದಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿ, ಇನ್ನೂ 18 ಲಕ್ಷ ವಾಹನ ಸವಾರರು ನೋಂದಣಿ ಮಾಡಿಸಿಕೊಂಡಿದ್ದರಿಂದ ಗಡುವನ್ನು ವಿಸ್ತರಣೆ ಮಾಡುತ್ತಿರುವುದಾಗಿ ಹೇಳಿದ್ದರು. ಇದರಂತೆ ಈಗ ಮೇ 31ರವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಸಾವಿರ ರೂಪಾಯಿವರೆಗೂ ದಂಡ

ಒಂದು ವೇಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡದೇ ಇದ್ದರೆ ದಂಡ ಬೀಳುವುದು ಗ್ಯಾರಂಟಿ. ಮೇ 31ರೊಳಗೆ ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರವೇ ನೋಂದಣಿ ಮಾಡಿ

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ಅಧಿಸೂಚನೆ ಹೊರಡಿಸಿದ್ದ ಸರ್ಕಾರ

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (High Security Registration Plate-ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಅರ್ಜಿ ಸಲ್ಲಿಕೆಗೆ ನವೆಂಬರ್‌ 17 ಕೊನೇ ದಿನವಾಗಿತ್ತು

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಬಳಿಕ ವಿಸ್ತರಣೆ ಮಾಡಲಾಗುತ್ತಾ ಬರುತ್ತಿದೆ.

ಹೆಚ್ಚುವರಿ ಹಣ ವಸೂಲಿ ಮಾಡಿದರೆ ದೂರು ನೀಡಿ: ರಾಮಲಿಂಗಾ ರೆಡ್ಡಿ

HSRP ಅಳವಡಿಸಲು ಹೆಚ್ಚುವರಿ ಹಣ ವಸೂಲಿ ವಿಚಾರ ಸರ್ಕಾರದ ಗಮನಕ್ಕೆ ಬರುತ್ತಿದೆ. ಈ ಬಗ್ಗೆ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೆ, ಸರಿಯಾಗಿ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು. ಸಾರಿಗೆ ಇಲಾಖೆಯ ಆಯುಕ್ತರಿಗೆ ದೂರು ನೀಡಿದರೆ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಪದೇ ಪದೆ ಗ್ರಾಹಕರಿಗೆ ಕಿರಿಕಿರಿ ಮಾಡಿದರೆ ಅಂತಹ ಡೀಲರ್‌ಗಳನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಪ್ರಮುಖ ಅಂಶಗಳು

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
  5. HSRP ಅಳವಡಿಕೆಗೆ ಮೇ 31 ಕೊನೇ ದಿನವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

  1. HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
  2. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
  3. ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
  4. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
  5. ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
  6. ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

ಹೆಚ್ಚುತ್ತಿವೆ ನಕಲಿ ಹಾವಳಿ; ಎಚ್ಚರ

HSRP ನಂಬರ್‌ ಪ್ಲೇಟ್‌ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ನಂತೆಯೇ ಹೋಲಿಕೆ ಇರುವಂತೆ ಇಂಥವರು ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ ಆರ್‌ಟಿಒ ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

Continue Reading

ಪ್ರಮುಖ ಸುದ್ದಿ

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

IPL 2024: ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ವಿಫಲಗೊಂಡಿದ್ದಾರೆ. ಪ್ಲೇ ಆಫ್ ರೇಸ್ ನಿಂದ ಹೊರಗುಳಿದ ಮೊದಲ ತಂಡ ಎಂಬ ಕುಖ್ಯಾತಿಗೆ ಮುಂಬಯಿ ತಂಡ ಪಾತ್ರವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕನಾ ಬಳಿಕದಿಂದ ಅವರು ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಅಭಿಮಾನಿಗಳ ಕೀಟಲೆಗಳ ಜತೆಗೆ ಅನೇಕ ಹಿರಿಯ ಆಟಗಾರರ ಮೂದಲಿಕೆಗಳನ್ನೂ ಕೇಳುವಂತಾಗಿದೆ. ಇಂಗ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾರ್ದಿಕ್ ನಾಯಕತ್ವದ ಶೈಲಿಯನ್ನು ಸತತವಾಗಿ ಪ್ರಶ್ನಿಸಿದ್ದರು. ತಮ್ಮ ತಂಡದ ವೈಫಲ್ಯಕ್ಕೆ ಹಾರ್ದಿಕ್ ಕಾರಣ ಎಂದು ಇಬ್ಬರೂ ಷರಾ ಬರೆದಿದ್ದರು.

ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

ಈ ಇಬ್ಬರು ನಾಯಕರಾಗಿದ್ದ ವೇಳೆ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಕೆವಿನ್ ಪೀಟರ್ಸನ್ ಮತ್ತು ಎಬಿ ಡಿವಿಲಿಯರ್ಸ್ ನಾಯಕರಾಗಿ ಗಮನಾರ್ಹವಾಗಿ ಏನನ್ನೂ ಸಾಧಿಸಿಲ್ಲ. ನೀವು ಅವರ ದಾಖಲೆಗಳನ್ನು ಮೊದಲು ನೋಡಿಕೊಳ್ಳಿ. ಅದು ಚೆನ್ನಾಗಿದ್ದರೆ ಉಳಿದವರ ದಾಖಲೆಗಳನ್ನು ವಿಮರ್ಶೆ ಮಾಡುವುದು ಸೂಕ್ತ ಎಂದು ಗಂಭೀರ್ ಟೀಕಿಸಿದ್ದಾರೆ.

ಇದನ್ನೂ ಓದಿ: Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

ಐಪಿಎಲ್​​ನಲ್ಲಿ ಎಬಿ ಡಿವಿಲಿಯರ್ಸ್ ಎಂದಿಗೂ ನಾಯಕತ್ವ ವಹಿಸಿಲ್ಲ. ಎಬಿಡಿ ಸಾಧನೆ ಎಂದರೆ ಸ್ವಂತ ಸ್ಕೋರ್​ಗಳು. ಅದನ್ನು ಹೊರತುಪಡಿಸಿ ಅವರು ಏನನ್ನೂ ಸಾಧಿಸಿದ್ದಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಗಂಭೀರ್​ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್ ವಿಜೇತ ನಾಯಕ. ಆದ್ದರಿಂದ ನೀವು ಕಿತ್ತಳೆಯನ್ನು ಕಿತ್ತಳೆಗೆ ಹೋಲಿಸಬೇಕು ಮತ್ತು ಕಿತ್ತಳೆಯನ್ನು ಸೇಬುಗಳಿಗೆ ಹೋಲಿಸಬಾರದು ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.

Continue Reading
Advertisement
Billboard Collapse
ಪ್ರಮುಖ ಸುದ್ದಿ17 mins ago

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

Stabbing Case
ಕರ್ನಾಟಕ19 mins ago

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Ooty Tour
ಪ್ರವಾಸ23 mins ago

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

WhatsApp Update
ತಂತ್ರಜ್ಞಾನ30 mins ago

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

Spoken Language
Latest38 mins ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Karnataka Weather Forecast
ಮಳೆ46 mins ago

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Prajwal Revanna Case
ಕರ್ನಾಟಕ51 mins ago

Prajwal Revanna Case: ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್‌, ಬಾರ್‌ ಮೇಲೆ ಎಸ್‌ಐಟಿ ದಾಳಿ

Warning For Android Users
ಗ್ಯಾಜೆಟ್ಸ್54 mins ago

Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

Dog Attack
ದೇಶ59 mins ago

Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

Fashion Trend
ಫ್ಯಾಷನ್1 hour ago

Fashion Trend: ಯುವತಿಯರನ್ನು ಸೆಳೆದಿರುವ 3 ಶೈಲಿಯ ವೈಟ್‌ ಪ್ಯಾಂಟ್‌ಗಳಿವು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 20242 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20246 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ6 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು7 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ14 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ1 day ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌