GST rate hike| ಜಿಎಸ್‌ಟಿ ನಷ್ಟಪರಿಹಾರ ವಿತರಣೆ ತೀರ್ಮಾನ ಇನ್ನೂ ಆಗಿಲ್ಲ ಎಂದ ವಿತ್ತ ಸಚಿವೆ ನಿರ್ಮಲಾ - Vistara News

ಪ್ರಮುಖ ಸುದ್ದಿ

GST rate hike| ಜಿಎಸ್‌ಟಿ ನಷ್ಟಪರಿಹಾರ ವಿತರಣೆ ತೀರ್ಮಾನ ಇನ್ನೂ ಆಗಿಲ್ಲ ಎಂದ ವಿತ್ತ ಸಚಿವೆ ನಿರ್ಮಲಾ

ಜಿಎಸ್‌ಟಿ ಅನುಷ್ಠಾನದಲ್ಲಿ ರಾಜ್ಯಗಳಿಗೆ ಉಂಟಾಗುತ್ತಿರುವ ಕಂದಾಯ ನಷ್ಟಕ್ಕೆ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

VISTARANEWS.COM


on

Forbes Most powerful women list, nirmala sitharaman in 32 place
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಜ್ಯಗಳಿಗೆ ೨೦೨೨ರ ಜೂನ್‌ ೩೦ರ ಬಳಿಕ ಜಿಎಸ್‌ಟಿ ನಷ್ಟ ಪರಿಹಾರಕ್ಕೆ ಸಂಬಂಧಿಸಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಿಳಿಸಿದ್ದಾರೆ.

ಚಂಡಿಗಢದಲ್ಲಿ ನಡೆದ ಜಿಎಸ್‌ಟಿ ಮಂಡಳಿಯ 47ನೇ ಸಭೆಯ ಬಳಿಕ ಮಾತನಾಡಿದ ಅವರು, ಜಿಎಸ್‌ಟಿ ನಷ್ಟ ಪರಿಹಾರವನ್ನು ಮತ್ತೆ ೫ ವರ್ಷಗಳ ಅವಧಿಗೆ ವಿಸ್ತರಿಸಬೇಕು ಎಂಬ ಮನವಿ ಬಂದಿದೆ. ಆದರೆ ಈ ಕುರಿತು ನಿರ್ಧಾರ ಆಗಿಲ್ಲ ಎಂದು ತಿಳಿಸಿದರು.

ಕೆಲವು ರಾಜ್ಯಗಳು ನಷ್ಟ ಪರಿಹಾರವನ್ನು ಕೆಲ ವರ್ಷ ಮುಂದುವರಿದರೆ ಸಾಕು ಎಂದಿವೆ. ೩-೪ ರಾಜ್ಯಗಳು ಪರಿಹಾರ ವಿತರಣೆಯನ್ನು ಅಂತ್ಯಗೊಳಿಸಬಹುದು ಎಂದೂ ತಿಳಿಸಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಆನ್‌ಲೈನ್‌ ಗೇಮಿಂಗ್‌, ಕ್ಯಾಸಿನೊ ಸೇವೆಗಳಿಗೆ ಜಿಎಸ್‌ಟಿ ದರ ಪರಿಷ್ಕರಣೆ ಬಗ್ಗೆ ಸಚಿವರುಗಳ ಗುಂಪಿನ ಸಮಿತಿ ಜುಲೈ ೧೫ರೊಳಗೆ ತನ್ನ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.

ದಿನ ನಿತ್ಯ ಬಳಕೆಯ ವಸ್ತುಗಳ ಮೇಲೆ ಜಿಎಸ್‌ಟಿಗೆ ಖರ್ಗೆ ಖಂಡನೆ

ಜಿಎಸ್‌ಟಿ ಮಂಡಳಿಯಲ್ಲಿ ದಿನ ನಿತ್ಯ ಬಳಕೆಯ ನಾನಾ ವಸ್ತುಗಳಿಗೆ ಜಿಎಸ್‌ಟಿ ತೆರಿಗೆ ವಿನಾಯಿತಿ ರದ್ದುಪಡಿಸಿರುವುದಕ್ಕೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ. ಇದರಿಂದ ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಮತ್ತಷ್ಟು ಹೆಚ್ಚಲಿದೆ. ಅಕ್ಕಿ, ಹಿಟ್ಟು ಇತ್ಯಾದಿ ದಿನ ಬಳಕೆಯ ಆಹಾರ ವಸ್ತುಗಳ ಮೇಲೆಯೂ ಜಿಎಸ್‌ಟಿ ಸಲ್ಲದು ಎಂದಿದ್ದಾರೆ.

ಇದನ್ನೂ ಓದಿ: GST rate hike | ದಿನ ಬಳಕೆಯ ಹಲವು ವಸ್ತು, ಸೇವೆಗಳ ಬೆಲೆ ಏರಿಕೆ ಶೀಘ್ರ‌, ಯಾವುದು ದುಬಾರಿ?

ಇದನ್ನೂ ಓದಿ: GST rate hike | ದಿನ ಬಳಕೆಯ ಹಲವು ವಸ್ತು, ಸೇವೆಗಳ ಬೆಲೆ ಏರಿಕೆ ಶೀಘ್ರ‌, ಯಾವುದು ದುಬಾರಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

Hardik Pandya : ಹಾರ್ದಿಕ್ ಪಾಂಡ್ಯ ಅವರನ್ನು ಮುಂಬಯಿ ತಂಡದ ನಾಯಕನನ್ನಾಗಿ ಮಾಡಿದ ಬಳಿಕ ಕ್ರಿಕೆಟ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Hardik Pandya
Koo

ಹೈದರಾಬಾದ್​: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ (Hardik Pandya) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (mumbai Indians) ಮತ್ತು ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ತಂಡಗಳು ಮುಖಾಮುಖಿಯಾಗಿದ್ದವು. ಬ್ಯಾಟಿಂಗ್ ಪರಾಕ್ರಮದ ರೋಮಾಂಚಕ ಪ್ರದರ್ಶನದ ಹೊರತಾಗಿಯೂ, ಮುಂಬೈ ಇಂಡಿಯನ್ಸ್ ಪ್ರಸ್ತುತ ನಡೆಯುತ್ತಿರುವ ಮೆಗಾ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಸೋಲನ್ನು ಅನುಭವಿಸಿತು. ಆದರೆ, ಸೋಲಿನ ಬೇಸರದ ಹೊರತಾಗಿಯೂ ಪ್ರೇಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದು ಹಾರ್ದಿಕ್ ಪಾಂಡ್ಯ. (Hardik Pandya)

ಕುತೂಹಲಕಾರಿ ಸಂಗತಿಯೆಂದರೆ, ಐಪಿಎಲ್ 2024 ಋತುವಿನ ಪ್ರಾರಂಭದಿಂದಲೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕ್ರೀಡಾಂಗಣದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್​ ಅಭಿಮಾನಿಗಳಿಂದ ಟೀಕೆಗಳು ಹಾಗೂ ಅಪಹಾಸ್ಯವನ್ನು ಎದುರಿಸುತ್ತಿದ್ದಾರೆ. ಅಂತೆಯೇ ಎಸ್​ಆರ್​​ಎಚ್​ ವಿರುದ್ಧದ ಪಂದ್ಯದಲ್ಲಿ, ಹಾರ್ದಿಕ್ 20 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದ ನಂತರ, ಅಭಿಮಾನಿಗಳು “ರೋಹಿತ್ ರೋಹಿತ್” ಎಂದು ಜಪಿಸಲು ಪ್ರಾರಂಭಿಸಿದ್ದರು. ಹಾರ್ದಿಕ್ ಡ್ರೆಸ್ಸಿಂಗ್ ರೂಮ್ಗೆ ಹಿಂದಿರುಗುತ್ತಿದ್ದಂತೆ ಅವರನ್ನು ಅಪಹಾಸ್ಯ ಮಾಡಿದ್ದರು. ಬಳಕೆದಾರರೊಬ್ಬರು ಈ ಘಟನೆಯ ವೀಡಿಯೊವನ್ನು ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದಾರೆ. ಇದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆದವು.

ಇದನ್ನೂ ಓದಿ : IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

277 ರನ್ ಗಳಿಸುವ ಸವಾಲನ್ನು ಗುರುತಿಸಿದ ಹಾರ್ದಿಕ್ ಪಾಂಡ್ಯ, ಎದುರಾಳಿ ತಂಡದ ಬ್ಯಾಟಿಂಗ್ ಅನ್ನು ಶ್ಲಾಘಿಸಿದರು ಮತ್ತು ಬ್ಯಾಟಿಂಗ್ ಸ್ನೇಹಿ ಪಿಚ್​ನಲ್ಲಿ ತಮ್ಮ ತಂಡದ ಬೌಲರ್​ಗಳು ಎದುರಿಸುತ್ತಿದ್ದ ಕಷ್ಟವನ್ನು ಒಪ್ಪಿಕೊಂಡರು. ಅವರು ತಮ್ಮ ಯುವ ಬೌಲಿಂಗ್ ದಾಳಿಯ ಸುಧಾರಿಸುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಪದಾರ್ಪಣೆ ಆಟಗಾರ್ತಿ ಕ್ವೆನಾ ಮಾಫಕಾ ಅವರ ಪ್ರದರ್ಶನವನ್ನು ಶ್ಲಾಘಿಸಿದರು.

” ಎಸ್​ಅರ್​​​ಎಚ್​​ 277 ರನ್ ಗಳಿಸುತ್ತದೆ ಎಂದೇ ಭಾವಿಸಲಾಗಿತ್ತು. ಪಿಚ್ ಬ್ಯಾಟಿಂಗ್​ಗೆ ಪೂರಕವಾಗಿತ್ತು. ವೇಳೆ ಎಷ್ಟೇ ಕೆಟ್ಟದಾಗಿರಲಿ ಅಥವಾ ಉತ್ತಮವಾಗಿರಲಿ, ಎದುರಾಳಿ ತಂಡವು ಅಷ್ಟು ಸ್ಕೋರ್ ಮಾಡಬೇಕಾದರೆ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಆ ತಂಡದ ಬೌಲರ್​ಗಳು ಉತ್ತಮವಾಗಿದ್ದರು. ಎರಡೂ ತಂಡಗಳು ಸುಮಾರು 500 ರನ್ ಬಾರಿಸಿದ್ದೇವೆ ಎಂದು ಪಾಂಡ್ಯ ಹೇಳಿಕೊಂಡಿದ್ದಾರೆ.

Continue Reading

ಕ್ರೀಡೆ

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

IPL 2024 : ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

VISTARANEWS.COM


on

IPL 2024-CSKRCB
Koo

ಮುಂಬೈ ಐಪಿಎಲ್ ನ 2024ರ (IPL 2024) ಅಧಿಕೃತ ಪ್ರಸಾರಕ ಡಿಸ್ನಿ ಸ್ಟಾರ್ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ದಾಖಲೆಯೊಂದಿಗೆ ಆರಂಭಿಸಿದೆ. ಐಪಿಎಲ್ 2024 ರ ಮೊದಲ ದಿನದಂದು 16.8 ಕೋಟಿ ವಿಶಿಷ್ಟ ವೀಕ್ಷಕರು 1276 ಕೋಟಿ ನಿಮಿಷಗಳ ವೀಕ್ಷಣೆಯ ಸಮಯವನ್ನು ದಾಖಲಿಸಿದೆ. ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ (TV viewers) ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

ಸ್ಟಾರ್ ಸ್ಪೋರ್ಟ್ಸ್ ವಕ್ತಾರರು “ಇದು ಒಂದು ಸ್ಮರಣೀಯ ಸಾಧನೆಯಾಗಿದ್ದು, ಸ್ಟಾರ್ ಸ್ಪೋರ್ಟ್ಸ್ ಮೇಲಿನ ಅಭಿಮಾನಿಗಳ ಪ್ರೀತಿಯ ಪ್ರತಿಫಲನವಾಗಿದೆ. ಇದು ನೆಟ್ವರ್ಕ್​ ಅಚಲ ಬದ್ಧತೆಗೆ ಸಾಧ್ಯವಾಗಿದೆ. ಕ್ರಿಕೆಟ್ ಮತ್ತು ಐಪಿಎಲ್ ಅನ್ನು ಬೆಳೆಸಲು ಸ್ಟಾರ್ ಸ್ಪೋರ್ಟ್ಸ್ ನಿರಂತರವಾಗಿ ಕೈಗೊಂಡಿರುವ ವ್ಯಾಪಕ ಶ್ರೇಣಿಯ ಉಪಕ್ರಮಗಳಿಗೆ ಬೆಂಬಲ ನೀಡಿದ್ದಕ್ಕಾಗಿ ನಾವು ನಮ್ಮ ಎಲ್ಲಾ ಪಾಲುದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಮತ್ತು ಬಿಸಿಸಿಐಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವೇಗವನ್ನು ಮುಂದುವರಿಸಲು ಮತ್ತು ಅಭೂತಪೂರ್ವ ವೀಕ್ಷಕರನ್ನು ತಲುಪಲು ನಾವು ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ನಮ್ಮ ಸಾಮರ್ಥ್ಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ವೀಕ್ಷಕ ವಿವರಣೆ ತಂಡದಲ್ಲಿರುವ ಸ್ಟಾರ್​ಗಳು ಇವರು

ನವಜೋತ್ ಸಿಂಗ್ ಸಿಧು ಅವರು ಭಾರತದ ವಿಶ್ವ ಚಾಂಪಿಯನ್ ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್, ರವಿ ಶಾಸ್ತ್ರಿ, ಸುನಿಲ್ ಗವಾಸ್ಕರ್ ಮತ್ತು ಕ್ರಿಸ್ ಶ್ರೀಕಾಂತ್. ಸ್ಟೀವ್ ಸ್ಮಿತ್ ಮತ್ತು ಸ್ಟುವರ್ಟ್ ಬ್ರಾಡ್, ಬ್ರಿಯಾನ್ ಲಾರಾ, ಮ್ಯಾಥ್ಯೂ ಹೇಡನ್, ಕೆವಿನ್ ಪೀಟರ್ಸನ್, ಜಾಕ್ ಕಾಲಿಸ್ ಮತ್ತು ಡೇಲ್ ಸ್ಟೇನ್ ಅವರೊಂದಿಗೆ ಟಾಟಾ ಐಪಿಎಲ್ 2024 ಅನ್ನು ಪ್ರಸ್ತುತಪಡಿಸಿದರು. ಸಿಎಸ್ಕೆಯ ಮಾಜಿ ತಾರೆಗಳಾದ ಅಂಬಾಟಿ ರಾಯುಡು, ಮುರಳಿ ವಿಜಯ್, ಎಲ್ ಬಾಲಾಜಿ ಮತ್ತು ಸುಬ್ರಮಣ್ಯಂ ಬದ್ರಿನಾಥ್, ಐಪಿಎಲ್ ಚಾಂಪಿಯನ್​ಗಳಾದ ವಿನಯ್ ಕುಮಾರ್ ಮತ್ತು ವೇಣುಗೋಪಾಲ್ ರಾವ್ ಅವರು ಡಿಸ್ನಿ ಸ್ಟಾರ್​ನ 9 ಭಾಷೆಗಳಲ್ಲಿ ಪ್ರಾದೇಶಿಕ ಫೀಡ್​ನ ಮುಂಚೂಣಿಯಲ್ಲಿದ್ದರು.

ಜಿಯೊಗೆ 11.3 ಕೋಟಿ ವೀಕ್ಷಕರು

ಡಿಜಿಟಲ್​ನಲ್ಲಿ ಜಿಯೋ ಸಿನೆಮಾ ಐಪಿಎಲ್​ನ ಮೊದಲ ದಿನದಂದು 11.3 ಕೋಟಿ ವೀಕ್ಷಕರನ್ನು ಗಳಿಸಿದೆ. ಐಪಿಎಲ್ 2023 ರ ಮೊದಲ ದಿನಕ್ಕಿಂತ ಇದು 51% ಜಿಗಿತವನ್ನು ದಾಖಲಿಸಿದೆ ಎಂದು ಜಿಯೊ ಹೇಳಿಕೊಂಡಿದೆ. ಮೊದಲ ದಿನ ಜಿಯೋ ಸಿನೆಮಾದಲ್ಲಿ ಒಟ್ಟು ವೀಕ್ಷಣೆಯ ಸಮಯ 660 ಕೋಟಿ ನಿಮಿಷಗಳು.

ಇದನ್ನೂ ಓದಿ : IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

ಸ್ಟಾರ್ ಸ್ಪೋರ್ಟ್ಸ್ ಪ್ರಮುಖ ಡಿಟಿಎಚ್ ಪ್ಲಾಟ್ ಫಾರ್ಮ್ ಗಳಲ್ಲಿ ಅಟ್ಮೋಸ್ ಸೌಂಡ್ ನೊಂದಿಗೆ 4 ಕೆ ನಲ್ಲಿ ಐಪಿಎಲ್ ಪ್ರಸಾರ ಪ್ರಾರಂಭಿಸಿದೆ.

ಸ್ಟಾರ್ ಸ್ಪೋರ್ಟ್ಸ್ ವಿಶೇಷ ಚೇತನರಿಗಾಗಿ, ದೃಷ್ಟಿಹೀನರು, ಕಿವುಡರು ಅಥವಾ ಶ್ರವಣದೋಷವುಳ್ಳ ಅಭಿಮಾನಿಗಳಿಗಾಗಿ ಕಾಮೆಂಟರಿ ಮತ್ತು ಸಂಜ್ಞೆ ಭಾಷೆಯ ವಿಶೇಷ ಫೀಡ್ ಅನ್ನು ಪ್ರಾರಂಭಿಸಿದೆ. ಇದು ಈ ಐಪಿಎಲ್ ಅನ್ನು ನಿಜವಾಗಿಯೂ ಒಳಗೊಳ್ಳುವಂತೆ ಮಾಡುತ್ತದೆ. ವಿಶ್ವದ ಯಾವುದೇ ಪ್ರಮುಖ ಕ್ರೀಡಾಕೂಟವು ವಿಕಲಚೇತನರಿಗೆ ಲೈವ್ ಫೀಡ್ ಹೊಂದಿರುವುದು ಇದೇ ಮೊದಲು.

Continue Reading

Lok Sabha Election 2024

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ. ಆದರೆ, ಅವರಿಗೆ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಹೇಳಿಕೊಂಡಿದ್ದಾರೆ. ಜತೆಗೆ ಕುಟುಂಬದವರಿಗೆ 43 ಕೋಟಿ ರೂಪಾಯಿ ಸಾಲವನ್ನೂ ನೀಡಿದ್ದಾರೆ. ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿಯಷ್ಟು ಬೆಳ್ಳಿಯನ್ನು ಹೊಂದಿರುವ ಇವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇನ್ನು ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಅವರು ತಮ್ಮ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Bangalore Rural Lok Sabha constituency) ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ಅವರು ನಾಮಪತ್ರ ಸಲ್ಲಿಸಿದ್ದು, ಒಟ್ಟು ಆಸ್ತಿ ಮೌಲ್ಯ 598 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಇವರ ಹೆಸರಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲವಿದ್ದು, ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯವು ಹೆಚ್ಚಳಗೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ.

207 ಕೋಟಿ ರೂಪಾಯಿ ಸಾಲದಲ್ಲಿರುವ ಡಿಕೆಸು

ಡಿ.ಕೆ. ಸುರೇಶ್ ಹೆಸರಿನಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಎಂದು ಅಫಿಡವಿಟ್‌ನಲ್ಲಿ ತೋರಿಸಲಾಗಿದೆ. ಇಷ್ಟಾದರೂ ಇದರಲ್ಲಿ ತಾಯಿ ಗೌರಮ್ಮ, ಅಣ್ಣ ಡಿ.ಕೆ. ಶಿವಕುಮಾರ್‌, ಅಣ್ಣನ ಮಕ್ಕಳಾದ ಐಶ್ವರ್ಯ ಹಾಗೂ ಮಗ ಆಕಾಶ್‌ ಕೆಂಪೇಗೌಡ ಅವರಿಗೂ ಸಾಲವನ್ನು ನೀಡಿದ್ದಾರೆ.

Lok Sabha Election 2024 DK Brothers hold roadshow in Ramanagara and DK Suresh file nomination

ಕುಟುಂಬದವರಿಗೆ ನೀಡಿದ ಸಾಲು ಎಷ್ಟು?

  • ತಾಯಿ ಗೌರಮ್ಮಗೆ ನಾಲ್ಕೂ ಮುಕ್ಕಾಲು ಕೋಟಿ ರೂಪಾಯಿ ಸಾಲ
  • ಅಣ್ಣ ಡಿಕೆ ಶಿವಕುಮಾರ್‌ಗೆ 30 ಕೋಟಿ ರೂಪಾಯಿ ಸಾಲ ಕೊಟ್ಟಿರುವ ಸುರೇಶ್
  • ಅಣ್ಣನ ಮಗಳು ಐಶ್ವರ್ಯಾಗೆ 8 ಕೋಟಿ ರೂಪಾಯಿ ಸಾಲ ನೀಡಿರುವ ಸುರೇಶ್
  • ಡಿಕೆಶಿ ಮಗ ಆಕಾಶ್‌ ಕೆಂಪೇಗೌಡಗೆ 1 ಕೋಟಿ ರೂಪಾಯಿ ಸಾಲವನ್ನು ಡಿ.ಕೆ. ಸುರೇಶ್ ನೀಡಿದ್ದಾರೆ

ಡಿ.ಕೆ. ಸುರೇಶ್‌ ಬಳಿ ಇದೆ ಒಂದೂ ಕಾಲು ಕೆಜಿ ಚಿನ್ನ!

ಚರಾಸ್ತಿ 106.71 ಕೋಟಿ ರೂಪಾಯಿ, ಸ್ಥಿರಾಸ್ತಿ 486.33 ಕೋಟಿ ರೂಪಾಯಿ, ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ.

ರಾಮನಗರ ಜಿಲ್ಲಾಧಿಕಾರಿಗೆ ಸಂಸದ ಡಿ.ಕೆ. ಸುರೇಶ್‌ ಸಲ್ಲಿಸಿರುವ ಅಫಿಡವಿಟ್‌ ಪ್ರತಿ ಇಲ್ಲಿದೆ. ಪೂರ್ಣ ವಿವರ ಓದಲು ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

ಇವರ ಬಳಿ ಸ್ವಂತ ಕಾರೂ ಇಲ್ಲ!

ತಮ್ಮ ಬಳಿ ಸ್ವಂತ ಕಾರು ಸಹ ಇಲ್ಲ ಎಂಬ ಮಾಹಿತಿಯನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದ್ದಾರೆ. 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಸುರೇಶ್ ಹೊಂದಿದ್ದಾರೆ.

5 ವರ್ಷಗಳಲ್ಲಿ 259.19 ಕೋಟಿ ರೂ. ಹೆಚ್ಚಳ

2019ರಲ್ಲಿ ಸುರೇಶ್ ಆಸ್ತಿ ಮೌಲ್ಯ 333.86 ಕೋಟಿ ರೂಪಾಯಿ ಆಗಿತ್ತು. 5 ವರ್ಷಗಳಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಈ ವೇಳೆ ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಉಲ್ಲೇಖಿಸಿದ್ದಾರೆ. ಇನ್ನು ಅವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾಗಿ ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Job Alert: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 93 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6.

VISTARANEWS.COM


on

job alert
Koo

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ (The Karnataka State Co-Operative Apex Bank Ltd)ದ ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 93 ಬ್ಯಾಂಕ್‌ ಸಹಾಯಕ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ 85, ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ 8 ಹುದ್ದೆಗಳಿವೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇ. 55ರಷ್ಟು ಅಂಕ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಕಂಪ್ಯೂಟರ್‌ ಜ್ಞಾನ ಕಡ್ಡಾಯ

ಅಭ್ಯರ್ಥಿಗಳು ಕನ್ನಡ ಓದುವ ಜತೆಗೆ ಬರೆಯಲು, ಸ್ಪಷ್ಟವಾಗಿ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳುವಂತಿರಬೇಕು. ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಷನ್‌ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-Iರ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. + ಜಿಎಸ್‌ಟಿ, ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 1,000 ರೂ. + ಜಿಎಸ್‌ಟಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅರ್ಜಿ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 28,425 ರೂ.- 87,125 ರೂ. ಮಾಸಿಕ ವೇತನ ಸಿಗಲಿದೆ. ಗಮನಿಸಿ ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೇಲಿಟ್ಟು ಆದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿ ಜತೆಗೆ ಅಪ್‌ಲೋಡ್‌ ಮಾಡಬೇಕು. ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್‌ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಆಗ್ನೇಯ ಮಧ್ಯ ರೈಲ್ವೆಯಿಂದ 733 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading
Advertisement
Hardik Pandya
ಕ್ರೀಡೆ3 mins ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

money guide
ಮನಿ-ಗೈಡ್13 mins ago

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

IPL 2024-CSKRCB
ಕ್ರೀಡೆ25 mins ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ36 mins ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 202441 mins ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Summer Fashion
ಫ್ಯಾಷನ್43 mins ago

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

job alert
ಉದ್ಯೋಗ44 mins ago

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Aditi Rao Hydari engaged to Siddharth
ಟಾಲಿವುಡ್51 mins ago

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Henrich Klasen- IPL
ಪ್ರಮುಖ ಸುದ್ದಿ53 mins ago

IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

Actor Govinda
ದೇಶ56 mins ago

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20244 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20245 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ13 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌