Oil demand | ಅಕ್ಟೋಬರ್‌ನಲ್ಲಿ ಪೆಟ್ರೋಲ್-ಡೀಸೆಲ್‌ಗೆ ಬೇಡಿಕೆ 4 ತಿಂಗಳಿನಲ್ಲೇ ಗರಿಷ್ಠ - Vistara News

ಪ್ರಮುಖ ಸುದ್ದಿ

Oil demand | ಅಕ್ಟೋಬರ್‌ನಲ್ಲಿ ಪೆಟ್ರೋಲ್-ಡೀಸೆಲ್‌ಗೆ ಬೇಡಿಕೆ 4 ತಿಂಗಳಿನಲ್ಲೇ ಗರಿಷ್ಠ

ಕಳೆದ ಅಕ್ಟೋಬರ್‌ನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದಲ್ಲಿ 27.8 ಲಕ್ಷ ಟನ್‌ ಪೆಟ್ರೋಲ್‌ ಮಾರಾಟವಾಗಿದೆ. (Oil demand) ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, 12.1% ಹೆಚ್ಚಳವಾಗಿದೆ.

VISTARANEWS.COM


on

Petrol rate hike in Pakistan by rs 10 per liter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟ ಕಳೆದ ಅಕ್ಟೋಬರ್‌ನಲ್ಲಿ 4 ತಿಂಗಳಿನಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. (Oil demand) ಹಬ್ಬದ ಸಂದರ್ಭದಲ್ಲಿ ಬೇಡಿಕೆ ಚೇತರಿಸಿದೆ.

ಅಕ್ಟೋಬರ್‌ನಲ್ಲಿ ಪೆಟ್ರೋಲ್‌ ಮಾರಾಟದಲ್ಲಿ 12.1% ಹೆಚ್ಚಳವಾಗಿದ್ದು, 27.8 ಲಕ್ಷ ಟನ್‌ ಮಾರಾಟವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 24.8 ಲಕ್ಷ ಟನ್‌ ವಿಕ್ರಯವಾಗಿತ್ತು. ಕೋವಿಡ್‌ ಸಂದರ್ಭದ 2020ರ ಅಕ್ಟೋಬರ್‌ಗೆ ಹೋಲಿಸಿದರೆ 21.4% ಹೆಚ್ಚಳವಾಗಿದೆ.

ಕಳೆದ ಜೂನ್‌ನಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟ ಉನ್ನತ ಮಟ್ಟದಲ್ಲಿ ಇದೆ. ಮುಂಗಾರು ವಿಸ್ತರಣೆಯ ಪರಿಣಾಮ ದೇಶದ ನಾನಾ ರಾಜ್ಯಗಳಲ್ಲಿ ಕೃಷಿ ಚಟುವಟಿಕೆಗಳು ಕೂಡ ಮುಂದುವರಿದಿವೆ. ಹೀಗಾಗಿ ಡೀಸೆಲ್‌ಗೆ ಬೇಡಿಕೆ ವೃದ್ಧಿಸಿದೆ.

ವೈಮಾನಿಕ ಇಂಧನ ಎಟಿಎಫ್‌ಗೆ ಕೂಡ ಅಕ್ಟೋಬರ್‌ನಲ್ಲಿ ಬೇಡಿಕೆಯಲ್ಲಿ 26.4% ಹೆಚ್ಚಳವಾಗಿದೆ. ಹೀಗಿದ್ದರೂ, ಎಲ್ಪಿಜಿ ಮಾರಾಟದಲ್ಲಿ 1.27% ಇಳಿಕೆಯಾಗಿದೆ. 24.4 ಲಕ್ಷ ಟನ್‌ ಮಾರಾಟವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

ಕಬಿನಿ ಡ್ಯಾಂ ಒಡೆಯುವ ಭೀತಿಯಲ್ಲಿ ಸುತ್ತಮುತ್ತಲ ಗ್ರಾಮಗಳ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯದ ಒಳಹರಿವು ಜಾಸ್ತಿಯಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರಿ ಪ್ರಮಾಣದ ಬಿರುಕು ಮೂಡಿಸಿರುವುದು ಭೀತಿ ಹುಟ್ಟಿಸಿದೆ.

VISTARANEWS.COM


on

Kabini Dam
Koo

ಮೈಸೂರು: ಜಿಲ್ಲೆಯ ಕಬಿನಿ ಜಲಾಶಯದ (Kabini Dam) ಬಲದಂಡೆ ನಾಲೆ ಬಳಿ ಭಾರಿ ಪ್ರಮಾಣದ ಬಿರುಕು ಉಂಟಾಗಿದ್ದು, ನಾಲೆ ಹೊಡೆದರೆ ಅಪಾರ ಪ್ರಮಾಣದ ಹಾನಿಯುಂಟಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕು ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿರುವುದು ಈಗ ಭಾರಿ ಆತಂಕ ಸೃಷ್ಟಿಸಿದೆ.

ಕಬಿನಿ ಡ್ಯಾಂ ಒಡೆಯುವ ಭೀತಿಯಲ್ಲಿ ಸುತ್ತಮುತ್ತಲ ಗ್ರಾಮಗಳ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯದ ಒಳಹರಿವು ಜಾಸ್ತಿಯಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರಿ ಪ್ರಮಾಣದ ಬಿರುಕು ಮೂಡಿಸಿರುವುದು ಭೀತಿ ಹುಟ್ಟಿಸಿದೆ. ಕಾಲುವೆಯನ್ನು ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಬೆಳೆ ಹಾನಿಯೂ ಆಗಲಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪೋಲಾಗುತ್ತಿರುವ ನೀರು

ನಿತ್ಯ 300ರಿಂದ 500 ಕ್ಯುಸೆಕ್ ನೀರು ಪೋಲಾಗುತ್ತಿದೆ. ನೀರಾವರಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಜಲಾಶಯದ ಕೆಳಭಾಗದ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2,284 ಅಡಿ ಎತ್ತರದ ಜಲಾಶಯಕ್ಕೆ ಮೂರು ದಿನಗಳ ಹಿಂದಷ್ಟೆ ಬಾಗಿನ ಅರ್ಪಣೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದರು. ಆದರೆ ಈಗ ನಾಲೆ ಬಿರುಕು ಬಿಟ್ಟಿರುವುದು ಭೀತಿ ಹೆಚ್ಚಿಸಿದೆ. ಬಲದಂಡೆ ನಾಲೆ‌ ಒಡೆದರೆ ಸರಗೂರು ತಿ.ನರಸೀಪುರ, ನಂಜನಗೂಡು ತಾಲೂಕಿನ ನಾಲೆಗಳಿಗೆ ಹಾನಿಯಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ.

ವಾಹನ ಸಂಚಾರ ನಿಷೇಧ

ಬೆಂಗಳೂರು ಹಾಗೂ ಮಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಹಾದುಹೋಗುವ ಶಿರಾಡಿ ಘಾಟ್‌ ರಸ್ತೆಯ ಮೇಲೆ ಮತ್ತೆ ಭೂಕೂಸಿತ ಉಂಟಾಗಿದೆ. ಹಾಗಾಗಿ, ಶಿರಾಡಿ ಘಾಟ್‌ (Shiradi Ghat) ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಗೊಳಿಸಲಾಗಿದೆ. ಈಗ ಕುಸಿದಿರುವ ಮಣ್ಣು ಹಾಗೂ ಕಲ್ಲನ್ನು ತೆರವುಗೊಳಿಸುವುದು ಹಾಗೂ ಮತ್ತೆ ಭೂಕುಸಿತ ಉಂಟಾಗುವ ಭೀತಿ ಇರುವುದರಿಂದ ಶಿರಾಡ್‌ ಘಾಟ್‌ನಲ್ಲಿ ಮತ್ತೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ

ಇದನ್ನೂ ಓದಿ: Snake Bite: ಮಳೆಗಾಲದಲ್ಲಿ ಹಾವುಗಳ ಕಾಟ ಹೆಚ್ಚು; ಕಚ್ಚಿದರೆ ಈ ಕ್ರಮ ಅನುಸರಿಸಿ ಅಪಾಯದಿಂದ ಪಾರಾಗಿ!

Continue Reading

ಕರ್ನಾಟಕ

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Shiradi Ghat: ಮಣ್ಣಿನಡಿ ಎರಡು ಕಂಟೇನರ್ ಹಾಗೂ ಟ್ಯಾಂಕರ್ ಸಿಲುಕಿದ್ದು, ಮಣ್ಣು ತೆರವುಗೊಳಿಸಿ ವಾಹನಗಳನ್ನು ತೆಗೆಯಬೇಕು. ಅಲ್ಲದೆ, ಮಳೆ ಸುರಿಯುತ್ತಿರುವ ಕಾರಣ ಕಂಟೇನರ್‌ ಹಾಗೂ ಟ್ಯಾಂಕರ್‌ ಹೊರತೆಗೆಯಲು ಕಷ್ಟವಾಗುತ್ತಿದೆ. ಹಾಗೆಯೇ, ಮತ್ತೆ ಭೂಕುಸಿತ ಉಂಟಾಗುವ ಭೀತಿ ಎದುರಾಗಿದೆ.

VISTARANEWS.COM


on

Shiradi Ghat
Koo

ಹಾಸನ: ಬೆಂಗಳೂರು (Bengaluru) ಹಾಗೂ ಮಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಹಾದುಹೋಗುವ ಶಿರಾಡಿ ಘಾಟ್‌ ರಸ್ತೆಯ ಮೇಲೆ ಮತ್ತೆ ಭೂಕೂಸಿತ (Landslide) ಉಂಟಾಗಿದೆ. ಹಾಗಾಗಿ, ಶಿರಾಡಿ ಘಾಟ್‌ (Shiradi Ghat) ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಗೊಳಿಸಲಾಗಿದೆ. ಈಗ ಕುಸಿದಿರುವ ಮಣ್ಣು ಹಾಗೂ ಕಲ್ಲನ್ನು ತೆರವುಗೊಳಿಸುವುದು ಹಾಗೂ ಮತ್ತೆ ಭೂಕುಸಿತ ಉಂಟಾಗುವ ಭೀತಿ ಇರುವುದರಿಂದ ಶಿರಾಡ್‌ ಘಾಟ್‌ನಲ್ಲಿ ಮತ್ತೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಭೂಕುಸಿತ ಸೇರಿ ಹಲವು ಕಾರಣಗಳಿಂದಾಗಿ ಶಿರಾಡಿ ಘಾಟ್‌ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಆದೇಶ ಹೊರಡಿಸಿದ್ದಾರೆ. ಈ ರಸ್ತೆಯ ಬದಲು ಬೇರೆ ಮಾರ್ಗದ ಮೂಲಕ ಸಂಚರಿಸಬೇಕು ಎಂದು ಅವರು ಆದೇಶಿಸಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡ ತಪ್ಲು ಬಳಿ ಗುಡ್ಡ ಕುಸಿದಿದೆ. ಮಣ್ಣು ತೆರವುಗೊಳಿಸುವವರೆಗೂ ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮಣ್ಣಿನಡಿ ಎರಡು ಕಂಟೇನರ್ ಹಾಗೂ ಟ್ಯಾಂಕರ್ ಸಿಲುಕಿದ್ದು, ಮಣ್ಣು ತೆರವುಗೊಳಿಸಿ ವಾಹನಗಳನ್ನು ತೆಗೆಯಬೇಕು. ಅಲ್ಲದೆ, ಮಳೆ ಸುರಿಯುತ್ತಿರುವ ಕಾರಣ ಕಂಟೇನರ್‌ ಹಾಗೂ ಟ್ಯಾಂಕರ್‌ ಹೊರತೆಗೆಯಲು ಕಷ್ಟವಾಗುತ್ತಿದೆ. ಹಾಗೆಯೇ, ಮತ್ತೆ ಭೂಕುಸಿತ ಉಂಟಾಗುವ ಭೀತಿ ಎದುರಾಗಿದೆ. ಜುಲೈ ಮಧ್ಯಭಾಗದಲ್ಲೂ ಶಿರಾಡಿ ಘಾಟ್‌ ರಸ್ತೆಯಲ್ಲಿ ಬೆಟ್ಟ ಕುಸಿದ ಕಾರಣ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಭೂಕುಸಿತ ಉಂಟಾದ ಕಾರಣ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದ ಕರಾವಳಿ-ಮಲೆನಾಡು ಭಾಗದಲ್ಲಿ ಭರ್ಜರಿ ಮಳೆಯಾಗಲಿದ್ದು, 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Tips for Monsoon: ಮಳೆಗಾಲದಲ್ಲಿ ಬಟ್ಟೆಗಳನ್ನು ಗರಿಗರಿಯಾಗಿ ಇರಿಸುವುದು ಹೇಗೆ?

Continue Reading

ದೇಶ

Road Rage: ಸ್ಕೂಟಿಗೆ ಬೈಕ್‌ ಟಚ್‌ ಆಗಿದ್ದಕ್ಕೆ ಜಗಳ; ಗುಂಡು ಹಾರಿಸಿ 2 ಮಕ್ಕಳ ತಾಯಿಯನ್ನು ಕೊಂದ ವ್ಯಕ್ತಿ

Road Rage: ಸಿಮ್ರನ್‌ಜೀತ್‌ ಕೌರ್‌ ಅವರು 12 ಹಾಗೂ 4 ವರ್ಷದ ಮಕ್ಕಳನ್ನು ಕೂರಿಸಿಕೊಂಡಿದ್ದರು. ಸ್ಕೂಟಿ ಓಡಿಸುತ್ತಿದ್ದ ವ್ಯಕ್ತಿಯು ಅವಾಚ್ಯ ಶಬ್ದಗಳಿಂದ ಬೈಯುತ್ತಲೇ ಇವರ ಬೈಕ್‌ ಮೇಲೆ ಗುಂಡು ಹಾರಿಸಿದ್ದಾನೆ. ಆ ಗುಂಡು ಮಹಿಳೆಗೆ ತಗುಲಿದೆ. ಮಹಿಳೆಯ ಕುತ್ತಿಗೆ ಹಾಗೂ ಎದೆಗೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

VISTARANEWS.COM


on

Road Rage
Koo

ನವದೆಹಲಿ: ದೇಶದಲ್ಲಿ ರಸ್ತೆ ಮೇಲೆ ವಾಹನ ಚಲಾಯಿಸುವಾಗ, ಬೈಕ್‌ ಸವಾರಿ ಮಾಡುವಾಗ ಬೇರೊಬ್ಬ ಚಾಲಕನು ಸಣ್ಣ ತಪ್ಪು ಮಾಡಿದರೂ ಜಗಳಕ್ಕೆ (Road Rage) ನಿಲ್ಲುವ, ಅವಾಚ್ಯ ಶಬ್ದಗಳಿಂದ ನಿಂದಿಸುವ, ಸಾರಿ ಕೇಳಿ ಮುಂದೆ ಹೋಗಬೇಕಾದ ಸಂದರ್ಭದಲ್ಲೂ ಹಲ್ಲೆಗೆ ಮುಂದಾಗುವವರ ಸಂಖ್ಯೆ ದೊಡ್ಡದಿದೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲಿ ವ್ಯಕ್ತಿಯೊಬ್ಬ ಬೈಕ್‌ ಚಲಾಯಿಸುವಾಗ ತನ್ನ ಬೈಕ್‌ಗೆ ಪಕ್ಕದಲ್ಲಿ ಬರುತ್ತಿದ್ದ ಸ್ಕೂಟಿ ಟಚ್‌ ಆಯಿತು ಎಂದು ಸ್ಕೂಟಿಯಲ್ಲಿ ಬರುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಗೆ ಇಬ್ಬರು ಮಕ್ಕಳ ತಾಯಿಯು ಮೃತಪಟ್ಟಿದ್ದಾರೆ.

ಹೀರಾ ಸಿಂಗ್‌ ಎಂಬ ವ್ಯಕ್ತಿಯು ಮೌಜ್‌ಪುರದ ಕಡೆಗೆ ಗೋಕಲ್‌ಪುರಿ ಫ್ಲೈಓವರ್‌ ಮೂಲಕ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬೈಕ್‌ ಮೇಲೆ ಕರೆದುಕೊಂಡು ಹೋಗುತ್ತಿದ್ದರು. ಇದೇ ವೇಲೆ ಹೀರಾ ಸಿಂಗ್‌ ಅವರ ಬೈಕ್‌ ಮತ್ತೊಬ್ಬ ವ್ಯಕ್ತಿಯ ಸ್ಕೂಟಿಗೆ ಟಚ್‌ ಆಗಿದೆ. ಇದಾದ ಬಳಿಕ ಹೀರಾ ಸಿಂಗ್‌ ಹಾಗೂ ಸ್ಕೂಟರ್‌ ಓಡಿಸುತ್ತಿದ್ದ ವ್ಯಕ್ತಿ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದವು ಜಗಳಕ್ಕೆ ತಿರುಗಿದೆ. ಸ್ಕೂಟಿ ಓಡಿಸುತ್ತಿದ್ದ ವ್ಯಕ್ತಿಯು ಕೋಪದಲ್ಲಿ ಹೀರಾ ಸಿಂಗ್‌ ಅವರ ಬೈಕ್‌ಗೆ ಗುಂಡು ಹಾರಿಸಿದ್ದಾನೆ. ಆಗ ಸಿಮ್ರನ್‌ಜೀತ್‌ ಕೌರ್‌ ಎಂಬ 30 ವರ್ಷದ ಮಹಿಳೆಗೆ ಗುಂಡು ತಗುಲಿದ್ದು, ಅವರು ಮೃತಪಟ್ಟಿದ್ದಾರೆ.

ಸಿಮ್ರನ್‌ಜೀತ್‌ ಕೌರ್‌ ಅವರು 12 ಹಾಗೂ 4 ವರ್ಷದ ಮಕ್ಕಳನ್ನು ಕೂರಿಸಿಕೊಂಡಿದ್ದರು. ಸ್ಕೂಟಿ ಓಡಿಸುತ್ತಿದ್ದ ವ್ಯಕ್ತಿಯು ಅವಾಚ್ಯ ಶಬ್ದಗಳಿಂದ ಬೈಯುತ್ತಲೇ ಇವರ ಬೈಕ್‌ ಮೇಲೆ ಗುಂಡು ಹಾರಿಸಿದ್ದಾನೆ. ಆ ಗುಂಡು ಮಹಿಳೆಗೆ ತಗುಲಿದೆ. ಮಹಿಳೆಯ ಕುತ್ತಿಗೆ ಹಾಗೂ ಎದೆಗೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮಹಿಳೆಯ ಪತಿ ನೀಡಿದ ದೂರಿನ ಮೇರೆಗೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸ್ಕೂಟಿಗೆ ಬೈಕ್‌ ಟಚ್‌ ಆಗುತ್ತಲೇ ಬೈಕ್‌ ಓಡಿಸುತ್ತಿದ್ದ ವ್ಯಕ್ತಿಗೆ ಸ್ಕೂಟಿ ಚಾಲಕನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೇ ವೇಳೆ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಈತನ ಸಹವಾಸ ಬೇಡ ಎಂದು ಬೈಕ್‌ ಚಾಲಕನು ಫ್ಲೈಓವರ್‌ ಇಳಿದು, ಬೇರೆ ಮಾರ್ಗದ ಮೂಲಕ ತೆರಳಲು ಮುಂದಾಗುತ್ತಾನೆ. ಆಗಲೂ ಸ್ಕೂಟಿ ಚಾಲಕನು ನಿಂದಿಸುತ್ತಾನೆ. ಇದಕ್ಕೆ ಬೈಕ್‌ ಚಾಲಕನು ಕೂಡ ಅವಾಚ್ಯ ಶಬ್ದಗಳಿಂದ ಬೈಯುತ್ತಾರೆ. ಆಗ ಸ್ಕೂಟಿ ಚಾಲಕನು ಕೋಪದಲ್ಲಿ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Namaz Row: “ನಮಾಜ್‌ ಮಾಡೋಕೆ ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ಬೇಕು”-ವಿದ್ಯಾರ್ಥಿಗಳ ಗಲಾಟೆ; ಭುಗಿಲೆದ್ದಿದೆ ಮತ್ತೊಂದು ವಿವಾದ

Continue Reading

ಕರ್ನಾಟಕ

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Infosys: ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Infosys
Koo

ಬೆಂಗಳೂರು: ದೇಶದ ಎರಡನೇ ಬೃಹತ್‌ ಐಟಿ ಕಂಪನಿ (IT Company) ಎನಿಸಿರುವ, ಕರ್ನಾಟಕದ ಎನ್‌.ಆರ್.ನಾರಾಯಣ ಮೂರ್ತಿ ಸೇರಿ ಹಲವರು ಹುಟ್ಟುಹಾಕಿರುವ ಐಟಿ ದೈತ್ಯ ಇನ್ಫೋಸಿಸ್‌ ಕಂಪನಿ (Infosys) ವಿರುದ್ಧ ತೆರಿಗೆ ವಂಚನೆಯ (Tax Evasion) ಆರೋಪ ಕೇಳಿಬಂದಿದೆ. ತೆರಿಗೆ ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಇನ್ಫೋಸಿಸ್‌ ಕಂಪನಿಗೆ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (DGGI) 32 ಸಾವಿರ ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ನೋಟಿಸ್‌ ಜಾರಿ ಮಾಡಿದೆ.

“ಇನ್ಫೋಸಿಸ್‌ ಕಂಪನಿಯು ಬೇರೆ ದೇಶಗಳಲ್ಲಿ ಹೊಂದಿರುವ ಬ್ರ್ಯಾಂಚ್‌ ಆಫೀಸ್‌ಗಳಿಂದ 2017-18ರಿಂದ 2021-22ರಲ್ಲಿ ಸರಬರಾಜು ಮಾಡಲಾಗಿರುವ ಸ್ವೀಕೃತಿಗಳ ಬದಲಾಗಿ ಬ್ರ್ಯಾಂಚ್‌ ಆಫೀಸ್‌ಗಳ ವೆಚ್ಚ ಎಂಬುದಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ನಿಯಮಗಳ ಪ್ರಕಾರ ಭಾರತದಿಂದ ಹೊರಗಿರುವ ಬ್ರ್ಯಾಂಚ್‌ಗಳಿಂದ ಸರಬರಾಜು ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಲಿಮಿಟೆಡ್‌ ಕಂಪನಿಯು 32,403 ಕೋಟಿ ರೂ. ಐಜಿಎಸ್‌ಟಿ ಪಾವತಿಸಬೇಕು” ಎಂಬುದಾಗಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ‌

Narayana Murthy
Narayana Murthy

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನಿಯಮಗಳ ಪ್ರಕಾರ, ಸರಕು ಅಥವಾ ಸೇವೆಗಳನ್ನು ಸ್ವೀಕರಿಸುವವರು ಪೂರೈಕೆದಾರರ ಬದಲಿಗೆ ತೆರಿಗೆ ಪಾವತಿಸಬೇಕು ಎಂಬುದೇ ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ಆಗಿದೆ. ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯ ಸ್ಪಷ್ಟನೆ ಏನು?

ಜಿಎಸ್‌ಟಿ ನೋಟಿಸ್‌ ಕುರಿತು ಇನ್ಫೋಸಿಸ್‌ ಸ್ಪಷ್ಟನೆ ನೀಡಿದೆ. ಇನ್ಫೋಸಿಸ್‌ ಕಂಪನಿಯು ಯಾವುದೇ ಜಿಎಸ್‌ಟಿ ಪಾವತಿ ಬಾಕಿಯನ್ನು ಉಳಿಸಿಕೊಂಡಿಲ್ಲ. ಐಟಿ ಸೇವೆಗಳ ರಫ್ತಿನ ಮೇಲೆ ಜಿಎಸ್‌ಟಿ ರಿಫಂಡ್‌ ಪಡೆಯುವ ಅವಕಾಶ ಇದೆ. ಅದರಂತೆ, ಕ್ಲೇಮ್‌ ಮಾಡಲಾಗಿದೆ. ಇನ್ನು, ಕಂಪನಿಗೆ ಪ್ರಿ-ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದ್ದು, ಈ ಕುರಿತು ಕಂಪನಿಯು ಪ್ರತಿಕ್ರಿಯೆ ನೀಡಿದೆ ಎಂಬುದಾಗಿ ಸ್ಪಷ್ಟಪಡಿಸಿದೆ.

ನಾರಾಯಣಮೂರ್ತಿ ಹೇಳಿಕೆ ಟ್ರೋಲ್

ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ. ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ಉತ್ಪಾದನಾ ಕೇಂದ್ರವಾಗುವ ಭಾರತದ ಕನಸು ಇನ್ನು ಬಹಳ ದೂರದಲ್ಲಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಾರಾಯಣ ಮೂರ್ತಿ ಅವರ ಹೇಳಿಕೆಯ ಕುರಿತು ಜನ ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: GST Fraud: ಜಿಎಸ್‌ಟಿ ತೆರಿಗೆ ವಂಚನೆ ಪತ್ತೆ ಹಚ್ಚಲು ಎಐ, ಅನಾಲಿಟಿಕ್ಸ್ ಟೂಲ್ಸ್ ಬಳಕೆ

Continue Reading
Advertisement
Kabini Dam
ಕರ್ನಾಟಕ4 hours ago

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Shiradi Ghat
ಕರ್ನಾಟಕ4 hours ago

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Road Rage
ದೇಶ5 hours ago

Road Rage: ಸ್ಕೂಟಿಗೆ ಬೈಕ್‌ ಟಚ್‌ ಆಗಿದ್ದಕ್ಕೆ ಜಗಳ; ಗುಂಡು ಹಾರಿಸಿ 2 ಮಕ್ಕಳ ತಾಯಿಯನ್ನು ಕೊಂದ ವ್ಯಕ್ತಿ

Rashid khan 600 wickets
ಕ್ರೀಡೆ5 hours ago

Rashid khan 600 wickets: ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ ರಶೀದ್​ ಖಾನ್​; ಮೊದಲ ಸ್ಪಿನ್ನರ್

Viral video
ವೈರಲ್ ನ್ಯೂಸ್5 hours ago

Viral Video: ಕೇಶ ವಿನ್ಯಾಸಕ್ಕೆ ಸಲಾಕೆ ಬಳಸಿದ ಕ್ಷೌರಿಕ!

Virat Kohli
ಕ್ರೀಡೆ5 hours ago

Virat Kohli: ಗಂಭೀರ್​ ಮಾರ್ಗದರ್ಶನದಂತೆ ಅತ್ಯಂತ ಜೋಶ್​ನಿಂದ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಕೊಹ್ಲಿ; ಫೋಟೊ ವೈರಲ್​

Infosys
ಕರ್ನಾಟಕ6 hours ago

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Paris Olympics
ಕ್ರೀಡೆ6 hours ago

Paris Olympics: ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಮುಗ್ಗರಿಸಿದ ಮಣಿಕಾ ಬಾತ್ರಾ

Indians spend 15 billion hours waiting for customer service time in 2023 ServiceNow information
ದೇಶ7 hours ago

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Former MLA Rupali Nayka appeals to DC to resolve various issues under Karwara Ankola Assembly Constituency
ಉತ್ತರ ಕನ್ನಡ7 hours ago

Uttara Kannada News: ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕರಿಂದ ಡಿಸಿಗೆ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌