Pakistan Crisis Pakistans decision to barter with Afghanistan, Iran, Russia, what is the reasonPakistan Crisis : ಪಾಕ್‌ಗೆ ಆಫ್ಘನ್‌, ಇರಾನ್‌, ರಷ್ಯಾ ಎದುರು ಕೈ ಚಾಚುವ ಸ್ಥಿತಿ!

ಪ್ರಮುಖ ಸುದ್ದಿ

Pakistan Crisis : ಪಾಕ್‌ಗೆ ಆಫ್ಘನ್‌, ಇರಾನ್‌, ರಷ್ಯಾ ಎದುರು ಕೈ ಚಾಚುವ ಸ್ಥಿತಿ!

Pakistan Crisis ಅಫಘಾನಿಸ್ತಾನ, ಇರಾನ್‌ ಮತ್ತು ರಷ್ಯಾದ ಜತೆ ಬಾರ್ಟರ್‌ ಪದ್ಧತಿ ಮೂಲಕ ವ್ಯವಹರಿಸಲು ಪಾಕಿಸ್ತಾನ ನಿರ್ಧರಿಸಿದೆ. ವಿವರ ಇಲ್ಲಿದೆ.

VISTARANEWS.COM


on

Push for wheat in Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಪಾಕಿಸ್ತಾನವು (Pakistan Crisis) ಅಫಘಾನಿಸ್ತಾನ, ಇರಾನ್‌ ಮತ್ತು ರಷ್ಯಾದ ಜತೆ ಕೆಲವು ಸರಕುಗಳಿಗೆ ಬಾರ್ಟರ್‌ ಪದ್ಧತಿಯಲ್ಲಿ ಕೊಡುಕೊಳ್ಳುವಿಕೆ ವ್ಯವಹಾರ ನಡೆಸಲು ನಿರ್ಧರಿಸಿದೆ. ಇದರಲ್ಲಿ ಪೆಟ್ರೋಲಿಯಂ ಉತ್ಪನ್ನಗಳು, ನೈಸರ್ಗಿಕ ಅನಿಲ ಕೂಡ ಸೇರಿದೆ ಎಂದು ಪಾಕಿಸ್ತಾನದ ವಾಣಿಜ್ಯ ಇಲಾಖೆ ತಿಳಿಸಿದೆ. ಬಾರ್ಟರ್‌ ಪದ್ಧತಿಯಲ್ಲಿ (barter trade) ವ್ಯಾಪಾರ ಮಾಡುವಾಗ ಒಂದು ವಸ್ತುವಿಗೆ ಪ್ರತಿಯಾಗಿ ಮತ್ತೊಂದು ವಸ್ತುವನ್ನೇ ನೀಡಲಾಗುತ್ತದೆ. ಕರೆನ್ಸಿಯ ಚಲಾವಣೆ ಇರುವುದಿಲ್ಲ.

ಹಾಗಾದರೆ ಇದಕ್ಕೆ ಕಾರಣವೇನು? ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸಿ ದಿವಾಳಿಯಾಗಿದೆ. ವಿದೇಶಿ ವಿನಿಮಯ ಸಂಗ್ರಹ ಒಂದು ತಿಂಗಳಿನ ಖರ್ಚಿಗೂ ಸಾಲದು. ಹೀಗಾಗಿ ಸರ್ಕಾರ ಅಫಘಾನಿಸ್ತಾನ, ಇರಾನ್‌ ಮತ್ತು ರಷ್ಯಾಕ್ಕೆ ಕೆಲವು ಸರಕುಗಳನ್ನು ಕೊಟ್ಟು ಕೆಲವನ್ನು ಖರೀದಿಸಲು ನಿರ್ಧರಿಸಿದೆ. (business to business) ಹಣದುಬ್ಬರ 38%ಕ್ಕ ಏರಿಕೆಯಾಗಿರುವುದೂ ಮತ್ತೊಂದು ಕಾರಣವಾಗಿದೆ.

2023ರ ಜೂನ್‌ 1 ರಿಂದ ಈ ಬಾರ್ಟರ್‌ ಸಿಸ್ಟಮ್‌ ಶುರುವಾಗಿದೆ. ಖಾಸಗಿ ಕಂಪನಿಗಳೂ ಇದರಲ್ಲಿ ಭಾಗವಹಿಸಬಹುದು ಎಂದು ಪಾಕ್‌ ಸರ್ಕಾರ ಹೇಳಿದೆ. ರಷ್ಯಾ, ಇರಾನ್‌ನಿಂದ ತೈಲ ಖರೀದಿಸಲು ಡಾಲರ್‌ ಇಲ್ಲದಿದ್ದರೂ ನಡೆಯುತ್ತದೆ. ಅಪಘಾನಿಸ್ತಾನ ಜತೆಗಿನ ಪಾಕ್‌ ಗಡಿಯಲ್ಲಿ ಕರೆನ್ಸಿಯ ಕಳ್ಳಸಾಗಣೆ ನಡೆಯುತ್ತಿದೆ. ಇದನ್ನು ತಡೆಯಲು ಆಗದಿದ್ದರೂ, ಸರಕುಗಳ ಕಳ್ಳಸಾಗಣೆ ತಡೆಯಲು ಒಂದಷ್ಟು ಮಟ್ಟಿಗೆ ಸಾಧ್ಯವಾದೀತು ಎಂದು ಪಾಕ್‌ ಸರ್ಕಾರ ಭಾವಿಸಿದೆ. ಉದಾಹರಣೆಗೆ ಡೀಸೆಲ್‌ ಕಳ್ಳಸಾಗಣೆ ನಿಯಂತ್ರಿಸುವ ಉದ್ದೇಶ ಇದಕ್ಕಿದೆ.

ಕಳೆದ ಮೇ ತಿಂಗಳಿನಲ್ಲಿ ಪಾಕಿಸ್ತಾನದ ಪೆಟ್ರೋಲಿಯಂ ಡೀಲರ್‌ಗಳ ಅಸೋಸಿಯೇಶನ್‌, ಪಾಕ್‌ನಲ್ಲಿ ಮಾರಾಟವಾಗುತ್ತಿರುವ 38% ಡೀಸೆಲ್‌ ಇರಾನ್‌ನಿಂದ ಕಳ್ಳಸಾಗಣೆಯಾಗಿ ಬರುತ್ತಿರುವಂಥದ್ದು ಎಂದು ದೂರಿದ್ದರು. ಪಾಕಿಸ್ತಾನದಿಂದಲೂ ಗೋಧಿ, ರಸಗೊಬ್ಬರ ಅಫಘಾನಿಸ್ತಾನಕ್ಕೆ ಕಳ್ಳಸಾಗಣೆಯಾಗುತ್ತಿದೆ.

ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನದಲ್ಲಿ ಹಣದುಬ್ಬರ 38% ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಶ್ರೀಲಂಕಾವನ್ನೂ ಹಿಂದಿಕ್ಕಿದೆ. ಶ್ರೀಲಂಕಾದಲ್ಲಿ ಹಣದುಬ್ಬರ 25.2%ಕ್ಕೆ ಇಳಿಕೆಯಾಗಿದೆ. (Pakistan inflation) ಈಗ ಏಷ್ಯಾದಲ್ಲಿಯೇ ಅತಿ ಹೆಚ್ಚು ಹಣದುಬ್ಬರ ಪಾಕಿಸ್ತಾನದಲ್ಲಿದೆ. ಭಾರತದಲ್ಲಿ ಹಣದುಬ್ಬರ 4.7% ಇದೆ. ಪಾಕಿಸ್ತಾನವು ಐಎಂಎಫ್‌ನ ಕಠಿಣ ಷರತ್ತುಗಳನ್ನು ಪೂರೈಸಲು ಹಿಂದೇಟು ಹಾಕುತ್ತಿದೆ. 1957ರಿಂದೀಚೆಗಿನ ಅವಧಿಯಲ್ಲಿಯೇ ಗರಿಷ್ಠ ಹಣದುಬ್ಬರವನ್ನು ಪಾಕಿಸ್ತಾನ ದಾಖಲಿಸಿದೆ.

2023ರ ಏಪ್ರಿಲ್‌ನಲ್ಲಿ ಪಾಕಿಸ್ತಾನವು ಹಣದುಬ್ಬರದಲ್ಲಿ ಶ್ರೀಲಂಕಾವನ್ನು ಹಿಂದಿಕ್ಕಿದೆ. ಪಾಕಿಸ್ತಾನಕ್ಕೆ ಈ ಹಿಂದೆ ಅಮೆರಿಕ, ಬಳಿಕ ಚೀನಾದಿಂದ ಹಣಕಾಸು ನೆರವು ಲಭಿಸುತ್ತಿತ್ತು. ಇದರೊಂದಿಗೆ ಪಾಕಿಸ್ತಾನ ತನ್ನನ್ನು ಭಾರತದ ಜತೆಗೆ ಹೋಲಿಸುತ್ತಿತ್ತು. ಆದರೆ ಈಗ ಪಾಕ್ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಭಾರತದಲ್ಲಿ ಹಣದುಬ್ಬರರ 4.7%ಕ್ಕೆ ಇಳಿದಿದೆ. ಆಹಾರ ಹಣದುಬ್ಬರ 3.8%ಕ್ಕೆ ತಗ್ಗಿದೆ. ಪಾಕಿಸ್ತಾನದಲ್ಲಿ ಆಹಾರ ಹಣದುಬ್ಬರ 48.7% ಕ್ಕೆ ಏರಿಕೆಯಾಗಿದೆ.

ಪಾಕಿಸ್ತಾನದ ನಾಯಕರು ಚೀನಾದಿಂದ ಹಣಕಾಸು ನೆರವಿನ ನಿರೀಕ್ಷೆಯಲ್ಲಿದ್ದಾರೆ. ಐಎಂಎಫ್‌ ಜತೆಗೆ ಮಾತುಕತೆ ಫಲಪ್ರದವಾಗದಿದ್ದರೆ, ಪಾಕಿಸ್ತಾನದ ಆರ್ಥಿಕತೆ ತೀವ್ರ ಬಿಗಡಾಯಿಸಲಿದೆ. ಕಳೆದ 12 ತಿಂಗಳಿನಲ್ಲಿ ಸರಾಸರಿ 29.16% ಹಣದುಬ್ಬರ ಇತ್ತು. ಹಣದುಬ್ಬರ ಜಿಗಿತದ ಪರಿಣಾಮ ಪಾಕಿಸ್ತಾನದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಭಾರಿ ತೊಂದರೆಯಾಗಿದೆ. ಹಣಕಾಸು ನಿರ್ವಹಣೆಯ ಕೊರತೆಯ ಪರಿಣಾಮ ಭಾರಿ ಸವಾಲನ್ನು ಎದುರಿಸುವಂತಾಗಿದೆ. ಪಾಕಿಸ್ತಾನದಲ್ಲಿ ಕಳೆದ ಫೆಬ್ರವರಿಯಲ್ಲಿ ಪ್ರತಿ ಲೀಟರ್‌ ಹಾಲಿನ ದರ 210 ರೂ, ಕೋಳಿ ಮಾಂಸ ಕೆ.ಜಿ ದರ 700 ರೂ, ಪೆಟ್ರೋಲ್‌ ದರ ಲೀಟರ್‌ಗೆ 272 ರೂ, ಡೀಸೆಲ್‌ ದರ ಲೀಟರ್‌ಗೆ 282 ರೂ. ಇತ್ತು.

ಅರ್ಜೆಂಟೀನಾ ಎರಡನೇ ಸ್ಥಾನದಲ್ಲಿದ್ದು 21 ಸಲ ಐಎಂಎಫ್‌ನಿಂದ ಹಣಕಾಸು ನೆರವು ಯಾಚಿಸಿದೆ. ಆದರೆ ಭಾರತ ಕೇವಲ 7 ಸಲ ಐಎಂಎಫ್‌ ನೆರವು ಯಾಚಿಸಿತ್ತು. 1991ರಲ್ಲಿ ನರಸಿಂಹರಾವ್‌ ನೇತೃತ್ವದ ಸರ್ಕಾರ ಆರ್ಥಿಕ ಸುಧಾರಣಾ ನೀತಿಯನ್ನು ಜಾರಿಗೊಳಿಸಿದ ಬಳಿಕ ಒಂದು ಸಲವೂ ಐಎಂಎಫ್‌ ನೆರವನ್ನು ಬಯಸಿಲ್ಲ.

ಇದನ್ನೂ ಓದಿ: Indian fishermen: 198 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ, ಇನ್ನಿಬ್ಬರು ಅಲ್ಲೇ ಉಳಿದಿದ್ದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Narendra Modi: “ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಎಕ್ಸ್​ ಪೋಸ್ಟ್​​ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿಕೊಂಡಿದ್ದಾರೆ. ಮತದಾನ ಪ್ರಮಾಣದಲ್ಲಿ ಹೆಚ್ಚಳ ಕಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಭಾರತದ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಏಳು ಹಂತಗಳ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಚುನಾವಣಾ ಆಯೋಗ ಮತದಾನ “ಹೆಚ್ಚಿನ ಪ್ರಮಾಣದಲ್ಲಿ ಆಗಿದೆ” ಎಂದು ಬಣ್ಣಿಸಿದೆ. ಮತದಾನವು “ಹೆಚ್ಚಾಗಿ ಶಾಂತಿಯುತವಾಗಿ” ಉಳಿದಿದೆ ಎಂದು ಹೇಳಿದೆ.

2019 ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇಕಡಾ 69.43 ರಷ್ಟು ಮತದಾನ ದಾಖಲಾಗಿತ್ತು. ಕೆಲವು ಕ್ಷೇತ್ರಗಳು ಆಗ ವಿಭಿನ್ನವಾಗಿದ್ದವು ಮತ್ತು ಮತದಾನಕ್ಕೆ ಹೋದ ಒಟ್ಟು ಸ್ಥಾನಗಳ ಸಂಖ್ಯೆ 91 ಆಗಿತ್ತು.

ಇದನ್ನೂ ಓದಿ: lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳು ಮತ್ತು ಜನಾಂಗೀಯ ಬಿಕ್ಕಟ್ಟು ಪೀಡಿತ ಮಣಿಪುರದಿಂದ ಹಿಂಸಾಚಾರ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಸಶಸ್ತ್ರ ಗುಂಪು ಜನರು ಮತ ಚಲಾಯಿಸಲು ತಮ್ಮ ಮನೆಗಳಿಂದ ಹೊರಬರದಂತೆ ತಡೆದಿದ್ದಾರೆ ಎಂದು ಇನ್ನರ್​​ ಮಣಿಪುರದ ಕಾಂಗ್ರೆಸ್ ಅಭ್ಯರ್ಥಿ ಎ ಬಿಮೋಲ್ ಅಕೋಯಿಜಾಮ್ ಆರೋಪಿಸಿದ್ದಾರೆ.

ಮಣಿಪುರದ ಒಳಭಾಗದ ಮತಗಟ್ಟೆಗಳಲ್ಲಿ ಜನರು ವಿದ್ಯುನ್ಮಾನ ಮತದಾನ ಯಂತ್ರಗಳನ್ನು (ಇವಿಎಂ) ಒಡೆದ ಕನಿಷ್ಠ ನಾಲ್ಕು ಘಟನೆಗಳು ವರದಿಯಾಗಿವೆ. ಸಶಸ್ತ್ರ ಗುಂಪಿನ ಪ್ರಾಕ್ಸಿ ಮತದಾನದ ಬಗ್ಗೆ ಜನರು ಅಸಮಾಧಾನಗೊಂಡರು.

ಉತ್ತರಾಖಂಡ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳು ಇಂದು ಒಂದೇ ಹಂತದ ಚುನಾವಣೆಯಲ್ಲಿ ತಮ್ಮ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ.

ಛತ್ತೀಸ್ ಗಢದ ಬಸ್ತಾರ್ ನ 56 ಹಳ್ಳಿಗಳ ಜನರು ತಮ್ಮ ಸ್ವಂತ ಹಳ್ಳಿಗಳಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗ್ರೇಟ್ ನಿಕೋಬಾರ್ ನ ಶೋಂಪೆನ್ ಬುಡಕಟ್ಟು ಜನಾಂಗದವರು ಮೊದಲ ಬಾರಿಗೆ ಮತ ಚಲಾಯಿಸುವ ಮೂಲಕ ಇತಿಹಾಸ ನಿರ್ಮಿಸಿದರು.

ದೇಶದ ಹೆಚ್ಚಿನ ಭಾಗಗಳಲ್ಲಿ ಮತದಾರರು ಬಿಸಿಲಿನ ತಾಪವನ್ನು ಧೈರ್ಯದಿಂದ ಎದುರಿಸಿದರೆ, ಇತರ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಲ್ಲಿ ತಾಳ್ಮೆಯಿಂದ ಕಾಯುತ್ತಿದ್ದರು.

Continue Reading

ರಾಜಕೀಯ

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

lok Sabha Election: ಏಳು ಹಂತಗಳ ಚುನಾವಣೆಯ ಮೊದಲ ಮತ್ತು ಅತಿದೊಡ್ಡ ಹಂತದ ಮತದಾನವು ಎಲ್ಲಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಹೆಚ್ಚಿನ ಸ್ಥಾನಗಳಲ್ಲಿ ಸಂಜೆ 6 ಗಂಟೆಗೆ ಕೊನೆಗೊಂಡಿತು. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಏಕಕಾಲದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿದೆ.

VISTARANEWS.COM


on

Lok sabha Election
Koo

ಹೊಸದಿಲ್ಲಿ: ಪಶ್ಚಿಮ ಬಂಗಾಳ ಕೆಲವೆಡೆ ಹಿಂಸಾಚಾರ ನಡೆದಿರುವುದು ಸೇರಿದಂತೆ ಹಲವು ಘಟನೆಗಳ ಮಧ್ಯೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳನ್ನು ಒಳಗೊಂಡ ಲೋಕಸಭಾ ಚುನಾವಣೆಯ (lok Sabha Election) ಮೊದಲ ಹಂತದ ಮತದಾನ ಏಪ್ರಿಲ್​ 19ಕ್ಕೆ ಪೂರ್ಣಗೊಂಡಿತು. ಸಂಜೆ 5 ಗಂಟೆಯವರೆಗೆ ಸುಮಾರು ಶೇ.60ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಇದು ಅಂತಿಮ ಅಂಕಿ ಅಂಶವಲ್ಲ ಎಂಬುದಾಗಿಯೂ ಸ್ಪಷ್ಟಪಡಿಸಿದೆ. ಮತದಾನವು ಭಾಗಶಃ ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಿತು ಎಂದು ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಏಳು ಹಂತಗಳ ಚುನಾವಣೆಯ ಮೊದಲ ಮತ್ತು ಅತಿದೊಡ್ಡ ಹಂತದ ಮತದಾನ ಪ್ರಕ್ರಿಯೆ ಎಲ್ಲಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಹೆಚ್ಚಿನ ಸ್ಥಾನಗಳಲ್ಲಿ ಸಂಜೆ 6 ಗಂಟೆಗೆ ಕೊನೆಗೊಂಡಿತು. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಏಕಕಾಲದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿದೆ.

ತಮಿಳುನಾಡು (39), ಉತ್ತರಾಖಂಡ (5), ಅರುಣಾಚಲ ಪ್ರದೇಶ (2), ಮೇಘಾಲಯ (2), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (1), ಮಿಜೋರಾಂ (1), ನಾಗಾಲ್ಯಾಂಡ್ (1), ಪುದುಚೇರಿ (1), ಸಿಕ್ಕಿಂ (1) ಮತ್ತು ಲಕ್ಷದ್ವೀಪ (1) ಸ್ಥಾನಗಳಿಗೆ ಮತದಾನ ನಡೆದಿದೆ.

ರಾಜಸ್ಥಾನದ 12, ಉತ್ತರ ಪ್ರದೇಶದ 8, ಮಧ್ಯಪ್ರದೇಶದ 6, ಅಸ್ಸಾಂ ಮತ್ತು ಮಹಾರಾಷ್ಟ್ರದ ತಲಾ 5, ಬಿಹಾರದ 4, ಪಶ್ಚಿಮ ಬಂಗಾಳದ 3, ಮಣಿಪುರದ 2, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ ಮತ್ತು ಛತ್ತೀಸ್ ಗಢದ ತಲಾ 1 ಸ್ಥಾನಗಳಿಗೆ ಇಂದು ಮತದಾನ ನಡೆಯಿತು.

ಅರುಣಾಚಲ ಪ್ರದೇಶ (60 ಸ್ಥಾನಗಳು) ಮತ್ತು ಸಿಕ್ಕಿಂ (32 ಸ್ಥಾನಗಳು) ವಿಧಾನಸಭಾ ಚುನಾವಣೆಗಳು ಇದೇ ವೇಳೆ ನಡೆದವು.

ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಸತತ ಮೂರನೇ ಅವಧಿಗೆ ಬಲವಾದ ಬಹುಮತವನ್ನು ಬಯಸುತ್ತಿದ್ದರೆ, ಪ್ರತಿಪಕ್ಷ ಬಿಜೆಪಿ ಬಣದ ಘಟಕಗಳು 2014 ಮತ್ತು 2019 ರ ಚುನಾವಣೆಗಳಲ್ಲಿ ಹಿನ್ನಡೆಯನ್ನು ಎದುರಿಸಿದ ನಂತರ ಪುನರುಜ್ಜೀವನದ ನಿರೀಕ್ಷೆಯಲ್ಲಿವೆ.

ಮೊದಲ ಬಾರಿಗೆ ಮತ ಚಲಾಯಿಸಿದವರು, ಸಾಂಪ್ರದಾಯಿಕ ಉಡುಗೆಯಲ್ಲಿ ಬಂದ ಅನೇಕ ನವವಿವಾಹಿತ ದಂಪತಿಗಳು, ಅಂಗವಿಕಲರು ಮತ್ತು ಕೆಲವು ವೃದ್ಧರು ಸ್ಟ್ರೆಚರ್ ಮತ್ತು ಗಾಲಿಕುರ್ಚಿಗಳ ಮೂಲಕ ಬಂದವರು ಮೊದಲ ಹಂತದ ಚುನಾವಣೆಯಲ್ಲೂ ಕಂಡು ಬಂದರು.

ಇದನ್ನೂ ಓದಿ: Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಪಿಯಿಂದ ಆಕ್ಷೇಪ!; ವಿಡಿಯೊ ಇದೆ

ಇವಿಎಂ ದೋಷ

ತಮಿಳುನಾಡು, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಸ್ಸಾಂನ ಕೆಲವು ಬೂತ್ ಗಳಲ್ಲಿ ಸಣ್ಣ ಪ್ರಮಾಣದ ಇವಿಎಂ ದೋಷಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 77.57, ಅಸ್ಸಾಂನಲ್ಲಿ ಶೇಕಡಾ 70.77 ಮತ್ತು ಮೇಘಾಲಯದಲ್ಲಿ ಶೇಕಡಾ 69.91 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಸಾರ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಕ್ಷೇತ್ರದಲ್ಲಿ ಹಿಂಸಾಚಾರ ನಡೆದಿದೆ. ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಮತದಾನ ಹಿಂಸಾಚಾರ, ಮತದಾರರ ಬೆದರಿಕೆ ಮತ್ತು ಚುನಾವಣಾ ಏಜೆಂಟರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕ್ರಮವಾಗಿ 80 ಮತ್ತು 39 ದೂರುಗಳನ್ನು ದಾಖಲಾಗಿವೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.46ರಷ್ಟು ಮತದಾನವಾಗಿದೆ.

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಥೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದಿದೆ. ಛತ್ತೀಸ್​ಗಢದ ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 63.41 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಅಲ್ಲಿ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಿಆರ್​ಪಿಎಫ್​ ಜವಾನ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.

ತಮಿಳುನಾಡಿನಲ್ಲಿ 63.20 ಶೇಕಡಾ ಮತದಾನ

ತಮಿಳುನಾಡಿನ 39 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.63.20ರಷ್ಟು ಮತದಾನವಾಗಿದೆ. ಇವಿಎಂ ತಾಂತ್ರಿಕ ದೋಷಗಳಿಂದಾಗಿ ತಾಂಬರಂ ಬಳಿಯ ಮತಗಟ್ಟೆಯಂತಹ ರಾಜ್ಯದ ಕೆಲವು ಮತಗಟ್ಟೆಗಳಲ್ಲಿ ಮತದಾನವು ಒಂದು ಗಂಟೆ ಮತದಾನ ವಿಳಂಬವಾಯಿತು.

ಅರುಣಾಚಲ ಪ್ರದೇಶದ ಒಟ್ಟು 8,92,694 ಮತದಾರರ ಪೈಕಿ ಶೇ.60ರಷ್ಟು ಮತದಾನವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಳಗ್ಗೆ ಸಮಯದಲ್ಲಿ ಮತದಾನವು ನಿಧಾನವಾಗಿದ್ದರೂ, ಹವಾಮಾನ ಪರಿಸ್ಥಿತಿಗಳು ಸುಧಾರಿಸುವುದರೊಂದಿಗೆ ವೇಗ ಪಡೆದುಕೊಂಡಿತು. ರಾಜ್ಯದ ಕೆಲವು ಮತಗಟ್ಟೆಗಳಲ್ಲಿ, ವಿದ್ಯುನ್ಮಾನ ಮತದಾನ ಯಂತ್ರಗಳಲ್ಲಿ (ಇವಿಎಂ) ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದರಿಂದ ಮತದಾನ ವಿಳಂಬವಾಯಿತು ಎಂದು ಮುಖ್ಯ ಚುನಾವಣಾ ಅಧಿಕಾರಿ ಪವನ್ ಕುಮಾರ್ ಸೈನ್ ತಿಳಿಸಿದ್ದಾರೆ.

ಪೂರ್ವ ಕಾಮೆಂಗ್ ಜಿಲ್ಲೆಯ ಬಮೆಂಗ್ ಕ್ಷೇತ್ರದ ಮತದಾನ ಕೇಂದ್ರದ ಬಳಿ ಇಬ್ಬರು ಅಭ್ಯರ್ಥಿಗಳ ಬೆಂಬಲಿಗರು ಘರ್ಷಣೆ ನಡೆಸಿದ್ದಾರೆ.

ಇವಿಎಂ ಯಂತ್ರಕ್ಕೆ ಹಾನಿ

ಪೂರ್ವ ಕಾಮೆಂಗ್, ಕುರುಂಗ್ ಕುಮೆ ಮತ್ತು ಅಪ್ಪರ್ ಸುಬನ್ಸಿರಿ ಜಿಲ್ಲೆಗಳ ಮೂರು ಮತಗಟ್ಟೆಗಳಲ್ಲಿ ಇವಿಎಂ ಯಂತ್ರಗಳಿಗೆ ಹಾನಿ ಮಾಡಿದ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶೋಂಪೆನ್​ ಬುಡಕಟ್ಟಿನ ಸದಸ್ಯರೊಬ್ಬರಿಂದ ಮತದಾನ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಶೇ.56.87ರಷ್ಟು ಮತದಾನವಾಗಿದೆ. ಕೆಲವು ಸಣ್ಣ ಇವಿಎಂ ದೋಷಗಳು ಕಂಡು ಬಂದವು ಅಧಿಕಾರಿಗಳು ತಿಳಿಸಿದ್ದಾರೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಬಾರಿಗೆ, ಗ್ರೇಟ್ ನಿಕೋಬಾರ್ ದ್ವೀಪಗಳ ಅಪಾಯಕಾರಿ ಬುಡಕಟ್ಟು ಗುಂಪಾದ ಶೋಂಪೆನ್ ಬುಡಕಟ್ಟಿನ ಏಳು ಸದಸ್ಯರಲ್ಲಿ ಒಬ್ಬರು ಲೋಕಸಭಾ ಸ್ಥಾನಕ್ಕೆ ಮತ ಚಲಾಯಿಸಿದ್ದಾರೆ.

ಅಸ್ಸಾಂನ ಲಖಿಂಪುರದ ಬಿಹ್ಪುರಿಯಾದ ಮೂರು ಮತಗಟ್ಟೆಗಳಲ್ಲಿ, ಹೊಜೈ, ಕಾಲಿಯಾಬೋರ್ ಮತ್ತು ಬೊಕಾಖಾಟ್​​ನಲ್ಲಿ ತಲಾ ಒಂದು ಮತ್ತು ದಿಬ್ರುಗಢದ ನಹರ್ಕಟಿಯಾದಲ್ಲಿ ಒಂದು ಮತಗಟ್ಟೆಯಲ್ಲಿ ಇವಿಎಂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಜ ಮತದಾನ ಪ್ರಾರಂಭವಾಗುವ 90 ನಿಮಿಷಗಳ ಮೊದಲು ಪ್ರಾರಂಭವಾದ ಅಣಕು ಮತದಾನದ ಸಮಯದಲ್ಲಿ ಹೆಚ್ಚಿನ ದೋಷಗಳು ಕಂಡುಬಂದಿವೆ. ಆ ದೋಷಗಳನ್ನು ತಕ್ಷಣ ಸರಿಪಡಿಸಲಾಯಿತು. ಆ ಬೂತ್​ಗಳಲ್ಲಿ ಮತದಾನ ಸ್ವಲ್ಪ ತಡವಾಗಿ ಪ್ರಾರಂಭವಾಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮುಳುಗಿದ ವಾಹನ

ಅಸ್ಸಾಂನ ಲಖಿಂಪುರ ಕ್ಷೇತ್ರದಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಏರಿಕೆಯಾದ ಕಾರಣ ಇವಿಎಂ ಸಾಗಿಸುತ್ತಿದ್ದ ವಾಹನವು ಭಾಗಶಃ ನದಿಗೆ ಮುಳುಗಿದೆ. ಯಾಂತ್ರೀಕೃತ ದೋಣಿಯೂ ಕೊಚ್ಚಿಹೋಗಿದೆ. ವಾಹನಕ್ಕೆ ನೀರು ನುಗ್ಗುವ ಮೊದಲು ವಾಹನದ ಚಾಲಕ ಮತ್ತು ಮತಗಟ್ಟೆ ಅಧಿಕಾರಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಹಾರದಲ್ಲಿ ಕಡಿಮೆ ಮತದಾನ

ಬಿಹಾರದ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ 75 ಲಕ್ಷ ಮತದಾರರ ಪೈಕಿ ಶೇ.46.32ರಷ್ಟು ಮಂದಿ ಸಂಜೆ 5 ಗಂಟೆಯವರೆಗೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಸಂಸದೀಯ ಕ್ಷೇತ್ರದಲ್ಲಿ ಮತದಾನದ ಮೊದಲ ಆರು ಗಂಟೆಗಳಲ್ಲಿ ಶೇಕಡಾ 65.08 ರಷ್ಟು ಮತದಾರರು ತಮ್ಮ ಆಯ್ಕೆಯನ್ನು ಚಲಾಯಿಸಿದ್ದಾರೆ.

ರಾಜಸ್ಥಾನದಲ್ಲಿ ಸಂಜೆ 5 ಗಂಟೆಯವರೆಗೆ ಶೇ.50.27 ರಷ್ಟು ಮತದಾನವಾಗಿದ್ದರೆ, ಉತ್ತರಾಖಂಡದಲ್ಲಿ ಶೇ.53.56 ರಷ್ಟು ಮತದಾನವಾಗಿದೆ.

ಮಹಾರಾಷ್ಟ್ರ ವರದಿ

ಮಹಾರಾಷ್ಟ್ರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.54.85 ರಷ್ಟು ಮತದಾನವಾಗಿದ್ದರೆ, ಮಧ್ಯಪ್ರದೇಶದ ಆರು ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.50 ರಷ್ಟು ಮತದಾನವಾಗಿದೆ. ಉತ್ತರ ಪ್ರದೇಶದಲ್ಲಿ ಶೇ.57.54, ಮಿಜೋರಾಂನಲ್ಲಿ ಶೇ.56.68, ನಾಗಾಲ್ಯಾಂಡ್ನಲ್ಲಿ ಶೇ.50.41, ಪುದುಚೇರಿಯಲ್ಲಿ ಶೇ.72.8 ಮತ್ತು ಸಿಕ್ಕಿಂನಲ್ಲಿ ಶೇ.67.95ರಷ್ಟು ಮತದಾನವಾಗಿದೆ.

ಮೊದಲ ಹಂತದಲ್ಲಿ 16.63 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದರು.. ಮೊದಲ ಹಂತದಲ್ಲಿ 35.67 ಲಕ್ಷ ಮೊದಲ ಬಾರಿಗೆ ಮತದಾರರು, 20-29 ವರ್ಷ ವಯಸ್ಸಿನ 3.51 ಕೋಟಿ ಯುವ ಮತದಾರರು ಇದ್ದರು. ಜೂನ್ 1 ರಂದು ಮುಕ್ತಾಯಗೊಳ್ಳಲಿರುವ ಚುನಾವಣೆಯ ಮತ ಎಣಿಕೆ ಜೂನ್ 4 ರಂದು ನಡೆಯಲಿದೆ.

ಕಣದಲ್ಲಿದ್ದ ಪ್ರಮುಖ ಸ್ಪರ್ಧಿಗಳು

ಮೊದಲ ಹಂತದಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಸರ್ಬಾನಂದ ಸೋನೊವಾಲ್, ಕಾಂಗ್ರೆಸ್​ನ ಗೌರವ್ ಗೊಗೊಯ್ ಮತ್ತು ಡಿಎಂಕೆಯ ಕನಿಮೋಳಿ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

Continue Reading

ದೇಶ

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Boat Capsizes: ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ.

VISTARANEWS.COM


on

Boat Capsizes
Koo

ಭುವನೇಶ್ವರ:‌ ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿ (Mahanadi River)ಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿ ಬಿದ್ದ (Boat Capsizes) ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನಂತರ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಇನ್ನೂ ಏಳು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇತರ ಏಳು ಪ್ರಯಾಣಿಕರು ಇನ್ನೂ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಜತೆಗೆ ಐದು ಡೈವರ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿ, ನಾಲ್ವರು ಶಾಲಾ ಮಕ್ಕಳು ಜಲಸಮಾಧಿಯಾಗಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಇಂದೂ ಅಂತಹದ್ದೇ ದುರಂತ ಸಂಭವಿಸಿದೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿತ್ತು. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ದೋಣಿ ಮಗುಚಿತ್ತು.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading

ಕರ್ನಾಟಕ

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

Neha Murder Case: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣ (Neha Murder Case) ದೇಶಾದ್ಯಂತ ಸದ್ದು ಮಾಡುತ್ತಿದೆ. ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಮಾತನಾಡಿರುವ ಬಾಬಾ ಸಾಹೇಬ್‌ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ನಾನು ಮುನವಳ್ಳಿ ಹಾಗೂ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ನಮ್ಮನ್ನು ಮುನವಳ್ಳಿ ಜನ ಬೆಳೆಸಿದ್ದಾರೆ. ಅವರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ನಮ್ಮೂರಿನ ಜನ ನನ್ನನ್ನು ಕ್ಷಮಿಸಬೇಕು. ದಯವಿಟ್ಟು ಯಾವುದೇ ಯುವಕರು, ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಬಾರದು ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನಾನು ಯಾವತ್ತೂ ಯಾರಿಗೂ ಕೆಟ್ಟದ್ದು ಮಾಡಿಲ್ಲ, ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಹೀಗಾಗಿ ನನ್ನನ್ನು ಮುನವಳ್ಳಿ ಗ್ರಾಮದ ಜನರು ಕ್ಷಮಿಸಬೇಕು ಎಂದು ಕಣ್ಣೀರು ಹಾಕಿರುವ ಅವರು, ನಾನು ಸಾಯೋವರೆಗೆ ಮುನವಳ್ಳಿ ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಯಾರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡುತ್ತಾರೋ ಅಂತಹವರಿಗೆ ಮುಂದಿನ ದಿನಗಳಲ್ಲಿ ಯಾರೂ ಅಂಥ ಕೃತ್ಯ ಮಾಡಬಾರದು, ಆ ರೀತಿಯ ಶಿಕ್ಷೆ ಆಗಬೇಕು. ಇಂತಹ ಘಟನೆಗಳಿಂದ ನಾಳಿನ ದಿನ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಜನ ಭಯಪಡುತ್ತಾರೆ. ಹೀಗಾಗಿ ನನ್ನ ಜನ್ಮಭೂಮಿ ಮುನವಳ್ಳಿ, ಅವರಿಗಾಗಿ ನಾನು ಬದುಕುತ್ತೇನೆ ಎಂದು ಹೇಳಿದ್ದಾರೆ.

ವರ್ಷದ ಹಿಂದೆ ನೇಹಾ ಅವರ ತಂದೆ ನನಗೂ ಎರಡು ಬಾರಿ ಫೋನ್‌ ಮಾಡಿದ್ದರು. ನನ್ನ ಮಗಳಿಗೆ ನಿಮ್ಮ ಮಗ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಅವರ ತುಂಬಾ ಒಳ್ಳೆಯವರು. ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂದು ಮಗ ಹೇಳಿದ್ದ. ಆದರೆ, ನಾನು ಮಾಡಲ್ಲ ಎಂದಿದ್ದೆ. ಹೀಗಾಗಿ ಅವನು ಜಗಳ ಮಾಡಿದ್ದ. ಈಗ ಅವನು ನನ್ನ ಬಳಿ ಮಾತನಾಡಲ್ಲ. ನಮ್ಮ ದಾಂಪತ್ಯ ಜೀವನ ಸರಿಯಿಲ್ಲದ ಕಾರಣ ಅವರ ತಾಯಿ ಜತೆ ಅವನು ಪ್ರತ್ಯೇಕವಾಗಿ ವಾಸವಾಗಿದ್ದ ಎಂದು ಹೇಳಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ನಾನು ಸೈನಿಕನಾಗಿ ದೇಶ ಸೇವೆ ಸಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ, ನಮ್ಮ ತಾಯಿ ಬೇಡ ಅಂದಿದ್ದರು. ಹೀಗಾಗಿ ನನ್ನ ಮಗನನ್ನು ಸೇನೆಗೆ ಸೇರಿಸಬೇಕು ಅಂದುಕೊಂಡಿದ್ದೆ. ಆದರೆ ಅವನು ಈ ರೀತಿಯ ಕೆಲಸ ಮಾಡಿದ್ದಾನೆ ಎಂದು ತಿಳಿಸಿದರು.

Continue Reading
Advertisement
Narendra Modi
ಪ್ರಮುಖ ಸುದ್ದಿ1 min ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ22 mins ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ26 mins ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Boat Capsizes
ದೇಶ40 mins ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ48 mins ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು1 hour ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ2 hours ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ2 hours ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ2 hours ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

IPL 2024
ಪ್ರಮುಖ ಸುದ್ದಿ2 hours ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ7 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ18 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌