ಭಾರತಕ್ಕೆ ಪಾಕಿಸ್ತಾನ, ಶ್ರೀಲಂಕಾದ ದುಸ್ಥಿತಿ ಆಗದು, ಆರ್‌ಬಿಐ ಮಾಜಿ ಗವರ್ನರ್‌ ರಘುರಾಮ್‌ ರಾಜನ್ - Vistara News

ಪ್ರಮುಖ ಸುದ್ದಿ

ಭಾರತಕ್ಕೆ ಪಾಕಿಸ್ತಾನ, ಶ್ರೀಲಂಕಾದ ದುಸ್ಥಿತಿ ಆಗದು, ಆರ್‌ಬಿಐ ಮಾಜಿ ಗವರ್ನರ್‌ ರಘುರಾಮ್‌ ರಾಜನ್

ಭಾರತದ ಸಮೃದ್ಧ ವಿದೇಶಿ ವಿನಿಮಯ ಸಂಗ್ರಹ ಹಾಗೂ ವಿದೇಶಿ ಸಾಲ ಕಡಿಮೆಯಾಗಿರುವುದರಿಂದ ಶ್ರೀಲಂಕಾ, ಪಾಕಿಸ್ತಾನದ ದುಸ್ಥಿತಿ ಉಂಟಾಗದು ಎಂದು ಆರ್‌ಬಿಐ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಹೇಳಿದ್ದಾರೆ.

VISTARANEWS.COM


on

raghuram rajan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದ ವಿದೇಶಿ ವಿನಿಮಯ ಸಂಗ್ರಹ ಸಮೃದ್ಧವಾಗಿದ್ದು, ವಿದೇಶಿ ಸಾಲದ ಮೊತ್ತವೂ ಕಡಿಮೆಯಾಗಿದೆ. ಹೀಗಾಗಿ ಶ್ರೀಲಂಕಾ ಮತ್ತು ಪಾಕಿಸ್ತಾನಕ್ಕೆ ಆಗಿರುವ ದುಸ್ಥಿತಿ ಭಾರತಕ್ಕೆ ಉಂಟಾಗದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಹೇಳಿದ್ದಾರೆ.

ಆರ್‌ಬಿಐ ಒಳ್ಳೆಯ ಕೆಲಸ ಮಾಡಿದೆ ಎಂದ ರಾಜನ್:‌ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಹೆಚ್ಚಿಸುವ ಮೂಲಕ ಬಹಳ ಒಳ್ಳೆಯ ಕೆಲಸವನ್ನು ಮಾಡಿದೆ. ಜತೆಗೆ ನಮ್ಮ ವಿದೇಶಿ ಸಾಲದ ಹೊರೆಯೂ ಕಡಿಮೆ ಎಂದು ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಹೇಳಿದ್ದಾರೆ.

ಸಮೃದ್ಧ ವಿದೇಶಿ ವಿನಿಮಯ ಸಂಗ್ರಹ ಮತ್ತು ಕಡಿಮೆ ವಿದೇಶಿ ಸಾಲವು ಭಾರತದ ಆರ್ಥಿಕತೆಯ ಚೇತರಿಕೆಗೆ ಕಾರಣವಾಗಿದೆ. ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ವಿದೇಶಿ ವಿನಿಮಯ ಸಂಗ್ರಹ ಕುಸಿದಿದೆ. ಜತೆಗೆ ವಿದೇಶಿ ಸಾಲದ ಹೊರೆ ಅತಿಯಾಗಿದೆ. ಹೀಗಾಗಿ ಆ ದೇಶಗಳ ಆರ್ಥಿಕತೆ ನೆಲಕಚ್ಚಿದೆ ಎಂದು ರಾಜನ್‌ ವಿವರಿಸಿದರು. ಶ್ರೀಲಂಕಾದ ವಿದೇಶಿ ವಿನಿಮಯ ಸಂಗ್ರಹ ಇತ್ತೀಚೆಗೆ ೫೦ ದಶಲಕ್ಷ ಡಾಲರ್‌ಗೆ (೩೯೫ ಕೋಟಿ ರೂ.) ಕುಸಿದಿತ್ತು. ವಿದೇಶಿ ಸಾಲದ ಮರುಪಾವತಿಯಲ್ಲಿ ಶ್ರೀಲಂಕಾ ಸ್ಥಗಿತಗೊಳಿಸಿದೆ. ಪಾಕಿಸ್ತಾನದಲ್ಲೂ ವಿದೇಶಿ ವಿನಿಮಯ ಸಂಗ್ರಹ ೭೫೪ ದಶಲಕ್ಷ ಡಾಲರ್‌ಗೆ ಕುಸಿದಿದೆ (ಅಂದಾಜು ೬೭,೯೪೦ ಕೋಟಿ ರೂ.)

ಆರ್‌ಬಿಐ ಅಂಕಿ ಅಂಶಗಳ ಪ್ರಕಾರ ಜುಲೈ ೨೨ರ ವೇಳೆಗೆ ೫೭೧ ಶತಕೋಟಿ ಡಾಲರ್‌ (ಅಂದಾಜು ೪೫ ಲಕ್ಷ ಕೋಟಿ ರೂ.) ವಿದೇಶಿ ವಿನಿಮಯ ಸಂಗ್ರಹ ಇದೆ. ಭಾರತದ ವಿದೇಶಿ ಸಾಲ ೬೨೦ ಶತಕೋಟಿ ಡಾಲರ್‌ ( ಅಂದಾಜು ೪೮ ಲಕ್ಷ ಕೋಟಿ ರೂ.) ಆಗಿದೆ. ಜಿಡಿಪಿ-ಸಾಲದ ಅನುಪಾತ ೧೯.೯%ಕ್ಕೆ ಇಳಿಕೆಯಾಗಿದೆ.

ಆರ್‌ಬಿಐ ತನ್ನ ರೆಪೊ ದರವನ್ನು ಏರಿಸಿರುವ ಪರಿಣಾಮ ಹಣದುಬ್ಬರ ಇಳಿಕೆಗೆ ಸಹಾಯಕವಾಗಲಿದೆ. ಆಹಾರ ಹಣದುಬ್ಬರ ಈಗಾಗಲೇ ವಿಶ್ವಾದ್ಯಂತ ತಗ್ಗುತ್ತಿದೆ. ಭಾರತದಲ್ಲೂ ಇಳಿಕೆಯಾಗಲಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

DK Shivakumar: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ; ಡಿ.ಕೆ. ಶಿವಕುಮಾರ್‌ಗೆ ರಿಲೀಫ್

DK Shivakumar: ಡಿ.ಕೆ. ಶಿವಕುಮಾರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ದು, ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂದು ಹೇಳಿದರು. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಚುನಾವಣಾ ಆಯೋಗದ ಪರ ವಕೀಲ ಶರತ್ ದೊಡ್ಡವಾಡ್, ಮತದಾರರಿಗೆ ಡಿ.ಕೆ. ಶಿವಕುಮಾರ್ ಆಮಿಷ ಒಡ್ಡಿದ್ದಾರೆ. ನಾನು ಇಲ್ಲಿ ಬಿಸಿನೆಸ್ ಡೀಲ್‌ಗೆ ಬಂದಿದ್ದೇನೆ, ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನಿಮಗೆ ಅಪಾರ್ಟ್‌ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುತ್ತೇನೆ ಎಂದು ಪ್ರತಿವಾದ ಮಂಡಿಸಿದರು.

VISTARANEWS.COM


on

Case of luring apartment dwellers Relief for DK Shivakumar
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷವೊಡ್ಡಿದ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ಗೆ (DK Shivakumar) ಬಿಗ್‌ ರಿಲೀಫ್ ಸಿಕ್ಕಿದೆ. ಅಲ್ಲದೆ, ಡಿ.ಕೆ. ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ (Karnataka High Court) ಸೂಚನೆ ನೀಡಿದೆ.

ರಾಜರಾಜೇಶ್ವರಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಮತಯಾಚನೆ ಮಾಡುವ ವೇಳೆ, ನಮಗೆ ನೀವಾದರೆ, ನಿಮಗೆ ನಾವಾಗುತ್ತೇವೆ. ನಾನಿಲ್ಲಿ ಬ್ಯುಸಿನೆಸ್‌ ಡೀಲ್‌ಗೆ ಬಂದಿದ್ದೇನೆ. ಅಪಾರ್ಟ್‌ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ಹಕ್ಕುಪತ್ರವನ್ನು ನಿಮಗೆ ಹಸ್ತಾಂತರಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.

ಈ ವಿಚಾರವು ಕೋರ್ಟ್‌ ಮೆಟ್ಟಿಲೇರಿತ್ತು. ಡಿ.ಕೆ. ಶಿವಕುಮಾರ್‌ ಅವರು ಮತಯಾಚನೆ ಮಾಡುವ ವೇಳೆ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠವು ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಸಿ ಎಂದು ಹೇಳಿದೆ.

ವಾದ – ಪ್ರತಿವಾದ

ಡಿ.ಕೆ. ಶಿವಕುಮಾರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ದು, ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂದು ಹೇಳಿದರು. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಚುನಾವಣಾ ಆಯೋಗದ ಪರ ವಕೀಲ ಶರತ್ ದೊಡ್ಡವಾಡ್, ಮತದಾರರಿಗೆ ಡಿ.ಕೆ. ಶಿವಕುಮಾರ್ ಆಮಿಷ ಒಡ್ಡಿದ್ದಾರೆ. ನಾನು ಇಲ್ಲಿ ಬಿಸಿನೆಸ್ ಡೀಲ್‌ಗೆ ಬಂದಿದ್ದೇನೆ, ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನಿಮಗೆ ಅಪಾರ್ಟ್‌ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುತ್ತೇನೆ ಎಂದು ಪ್ರತಿವಾದ ಮಂಡಿಸಿದರು.

ಇದನ್ನೂ ಓದಿ: Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

ಬಲವಂತದ ಕ್ರಮ ಬೇಡ

ವಾದ – ಪ್ರತಿ ವಾದ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರಿಗೆ ಸೂಚನೆ ನೀಡಿದರು. ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆಯನ್ನು ನೀಡಿದರು.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ಪ್ರಮುಖ ಸುದ್ದಿ

Narendra Modi : ತಮ್ಮನ್ನು ನಿಂದಿಸಿದ ರಾಹುಲ್​ಗೆ ಪ್ರತ್ಯುತ್ತರ ಕೊಟ್ಟ ಮೋದಿ; ಇಲ್ಲಿದೆ ವಿಡಿಯೊ

Narendra Modi: “ನನ್ನ ವಿರುದ್ಧ ರಾಹುಲ್ ಗಾಂಧಿ “ಶೆಹಜಾದಾ” ಎಂದು ಹೇಳಿಕೆ ನೀಡಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನಗೊಳ್ಳಬಾರದು ಮತ್ತು ಕೋಪಗೊಳ್ಳಬಾರದು ಎಂದು ನಾನು ಕೈಮುಗಿದು ವಿನಂತಿಸುತ್ತೇನೆ. ನಾವು “ಕಾಮ್ ದಾರ್” ಗಳು ಮತ್ತು ರಾಹುಲ್ ಮತ್ತು ಅವರ ಪಕ್ಷದವರು “ನಾಮ್ ದಾರ್”ಗಳು. ಈ ”ನಾಮ್ ದಾರ್” ಗಳು ಹಲವಾರು ವರ್ಷಗಳಿಂದ “ಕಾಮ್ ದಾರ್” ಗಳನ್ನು ಅವಮಾನಿಸುತ್ತಲೇ ಇದ್ದಾರೆ ಎಂದು ಹೇಳಿದರು.

VISTARANEWS.COM


on

Lok sabaha election
Koo

ನವದೆಹಲಿ: ತಮ್ಮನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪಾರ್ಹ ಪದಗಳಿಂದ ನಿಂದಿಸುತ್ತಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ (ಏಪ್ರಿಲ್ 25) ಮಾತನಾಡಿದ್ದಾರೆ. ಮಧ್ಯಪ್ರದೇಶದ ಮೊರೆನಾದಲ್ಲಿ ವಿಜಯ ಸಂಕಲ್ಪ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ರಾಹುಲ್ ಗಾಂಧಿ ಅವರ ಅವಹೇಳನಕಾರಿ ಹೇಳಿಕೆಗಳಿಂದ ಜನರು ವಿಚಲಿತರಾಗಬಾರದು ಎಂದು ಮನವಿ ಮಾಡಿದ್ದಾರೆ . ಬಿಜೆಪಿಯ “ಕಾಮ್ದಾರ್” (ಕಾರ್ಯಕರ್ತ) ಮತ್ತು ಕಾಂಗ್ರೆಸ್ ನ “ನಾಮ್ದಾರ್” (ರಾಜವಂಶ) ನಡುವೆ ವ್ಯತ್ಯಾಸವಿದೆ ಎಂದು ಹೇಳಿದ ಮೋದಿ, ವಿನಮ್ರ ಹಿನ್ನೆಲೆಯಿಂದ ಬಂದ ತಮ್ಮಂತವರಿಗೆ ಅವಮಾನಗಳು ಹೊಸತೇನಲ್ಲ ಎಂದು ಪ್ರತಿಪಾದಿಸಿದರು.

ನನ್ನ ವಿರುದ್ಧ ರಾಹುಲ್ ಗಾಂಧಿ “ಶೆಹಜಾದಾ” (ಚಕ್ರವರ್ತಿಯ ಮಗ) ಎಂದು ಹೇಳಿಕೆ ನೀಡಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನಗೊಳ್ಳಬಾರದು ಮತ್ತು ಕೋಪಗೊಳ್ಳಬಾರದು ಎಂದು ನಾನು ಕೈಮುಗಿದು ವಿನಂತಿಸುತ್ತೇನೆ. ನಾವು “ಕಾಮ್ ದಾರ್” ಗಳು ಮತ್ತು ರಾಹುಲ್ ಮತ್ತು ಅವರ ಪಕ್ಷದವರು “ನಾಮ್ ದಾರ್”ಗಳು. ಈ ”ನಾಮ್ ದಾರ್” ಗಳು ಹಲವಾರು ವರ್ಷಗಳಿಂದ “ಕಾಮ್ ದಾರ್” ಗಳನ್ನು ಅವಮಾನಿಸುತ್ತಲೇ ಇದ್ದಾರೆ ಎಂದು ಹೇಳಿದರು.

ಜನರು ಅವರ ಹೇಳಿಕೆಗಳನ್ನು ಕೇಳಿಸಿಕೊಂಡು ಸಮಯ ವ್ಯರ್ಥ ಮಾಡಬಾರದು ಹಾಗೂ ನಮ್ಮ ಗುರಿಯತ್ತ ಮುಂದುವರಿಯಬೇಕು. ಅವರು (ರಾಹುಲ್ ಗಾಂಧಿ) ತುಂಬಾ ಅಸಮಾಧಾನಗೊಂಡಿದ್ದಾರೆ ಮತ್ತು ಸಂಕಷ್ಟದಲ್ಲಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಮ್ಮನ್ನು ಇನ್ನಷ್ಟು ಅವಮಾನಿಸುತ್ತಾರೆ. ನಾನು ಸಾಮಾನ್ಯ ವ್ಯಕ್ತಿ , ನಾನು ಬಡ ಹಿನ್ನೆಲೆಯಿಂದ ಬಂದಿರುವವನು. ಆದ್ದರಿಂದ ಇಂತಹ ಅವಮಾನಗಳು ನನಗೆ ಹೊಸತಲ್ಲ” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಭಾರತದ ಚುನಾವಣಾ ಆಯೋಗ (ಇಸಿಐ) ಕ್ರಮ ಕೈಗೊಳ್ಳಲು ಮುಂದಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು ಪ್ರಚೋದಿಸುತ್ತಿವೆ ಎಂಬ ದೂರುಗಳು ದಾಖಲಾಗಿವೆ.

ಪ್ರಕರಣದ ದಾಖಲಿಸಿದ ಚುನಾವಣಾ ಆಯೋಗ

ಈ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಚುನಾವಣಾ ಆಯೋಗವು ಜನ ಪ್ರತಿನಿಧ್ಯ ಕಾಯ್ದೆಯ ಸೆಕ್ಷನ್ 77 ಅನ್ನು ಅನ್ವಯಿಸಿದೆ. ಪಕ್ಷದ ಅಧ್ಯಕ್ಷರು ತಮ್ಮ ಸ್ಟಾರ್ ಪ್ರಚಾರಕರ ನಡವಳಿಕೆಗಳ ಮೇಲೆ ಕಣ್ಗಾವಲು ಇಟ್ಟಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಎಂಸಿಸಿ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ನೀಡಬೇಕಾಗಿದೆ. ಏಪ್ರಿಲ್ 29 ರಂದು ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ಅವರಿಬ್ಬರಿಗೆ ಗಡುವು ನಿಗದಿಪಡಿಸಿದೆ.

ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತ ಏಪ್ರಿಲ್ 19 ರಂದು ಮುಕ್ತಾಯಗೊಂಡಿದೆ. ಎರಡನೇ ಹಂತವು ಏಪ್ರಿಲ್ 26 ರಂದು ನಡೆಯಲಿದೆ. ಮುಂದಿನ ಹಂತಗಳು ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಡೆಯಲಿವೆ. 543 ಲೋಕಸಭಾ ಕ್ಷೇತ್ರಗಳ ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ.

Continue Reading

ಪ್ರಮುಖ ಸುದ್ದಿ

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

VISTARANEWS.COM


on

Ranji Trophy
Koo

ಬೆಂಗಳೂರು: ದೇಶೀಯ ಕ್ರಿಕೆಟ್ ಅದರಲ್ಲೂ ರಣಜಿ ಕ್ರಿಕೆಟ್ (Ranji Trophy) ಟೂರ್ನಿಯನ್ನು ಕ್ರಿಕೆಟಿಗರಿಗೆ ಹೆಚ್ಚು ಆಕರ್ಷಕವಾಗಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗಿದೆ. ಆಟಗಾರರು ದೇಶೀಯ ಕ್ರಿಕೆಟ್​​ಗೆ ಸೂಕ್ತ ಪ್ರಾಮುಖ್ಯತೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಮಂಡಳಿಯು ಇತ್ತೀಚಿನ ದಿನಗಳಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೀಗ ವೇತನ ಹೆಚ್ಚಳದ ದೊಡ್ಡ ಆಫರ್​ ಕೊಡಲಿದ್ದು, ದೇಶೀಯ ಕ್ರಿಕೆಟ್ ಆಡವ ಪ್ರತಿಯೊಬ್ಬರಿಗೆ ವರ್ಷಕ್ಕೆ 1 ಕೋಟಿ ವೇತನ ನೀಡುವ ಯೋಜನೆಯೊಂದು ಶುರುವಾಗಿದೆ.

ಈ ವರ್ಷದ ಆರಂಭದಲ್ಲಿ, ಬಿಸಿಸಿಐ ಆಟಗಾರರಿಗೆ ದೇಶಿಯ ಕ್ರಿಕೆಟ್​ನಲ್ಲಿ ಪಾಲ್ಗೊಳ್ಳಲೇ ಬೇಕು ಎಂದು ನಿರ್ದೇಶನ ನೀಡಿತು. ಜತೆಗೆ ಕ್ರಿಕೆಟಿಗರು ಟೀಮ್ ಇಂಡಿಯಾಕ್ಕಾಗಿ ಆಡದಿದ್ದಾಗ ತಮ್ಮ ರಾಜ್ಯ ತಂಡಗಳನ್ನು ಪ್ರತಿನಿಧಿಸುವುದನ್ನು ಕಡ್ಡಾಯಗೊಳಿಸಿತು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ತಮ್ಮನ್ನು ಫಿಟ್​ ಆಗಿರಿಸಿಕೊಳ್ಳುವ ಉದ್ದೇಶದಿಂದ ಹಲವಾರು ಆಟಗಾರರು ರಣಜಿ ಟ್ರೋಫಿಯಲ್ಲಿ ಆಡುವುದನ್ನು ತಪ್ಪಿಸಿಕೊಂಡ ನಂತರ ಮಂಡಳಿಯು ಈ ಕ್ರಮವನ್ನು ತೆಗೆದುಕೊಳ್ಳಬೇಕಾಯಿತು.

ಬಿಸಿಸಿಐ ಈಗ ದೇಶೀಯ ಆಟಗಾರರ ಸಂಭಾವನೆಯನ್ನು ಹೆಚ್ಚಿಸಲು ಯೋಚಿಸುತ್ತಿದೆ ಎಂದು ವರದಿಯಾಗಿದೆ. ಈ ವಿಷಯದ ಬಗ್ಗೆ ಮಂಡಳಿಯು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲವಾದರೂ, ಈ ಕಲ್ಪನೆಯನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡುವ ಜವಾಬ್ದಾರಿಯನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಗೆ ನೀಡಲಾಗಿದೆ.

ಕ್ರಿಕ್​ಬಜ್​ ವರದಿ ಪ್ರಕಾರ, ಪಂದ್ಯದ ಶುಲ್ಕ ಹೆಚ್ಚಳದ ಬಗ್ಗೆ ಬಿಸಿಸಿಐ ತಕ್ಷಣದ ಘೋಷಣೆ ಮಾಡುವ ಸಾಧ್ಯತೆಯಿಲ್ಲ. ಆದಾಗ್ಯೂ, ರಾಷ್ಟ್ರೀಯ ಆಯ್ಕೆ ಸಮಿತಿಯು ಈ ಪ್ರಸ್ತಾಪವನ್ನು ಚರ್ಚಿಸಿದೆ. ಸಂಭಾವನೆಯನ್ನು ಹೆಚ್ಚಿಸುವ ಮೂಲಕ, ಐಪಿಎಲ್ ಒಪ್ಪಂದಗಳನ್ನು ಹೊಂದಿರದ ದೇಶೀಯ ಆಟಗಾರರು ಆದಾಯದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಬಿಸಿಸಿಐ ಬಯಸಿದೆ.

ಕ್ರಿಕೆಟಿಗರ ವೇತನ ದುಪ್ಪಟ್ಟು ಮಾಡಲು ಬಿಸಿಸಿಐ ನಿರ್ಧಾರ

ಈ ವಿಷಯದ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲವಾದರೂ, ದೇಶೀಯ ಕ್ರಿಕೆಟಿಗರ ಶುಲ್ಕವನ್ನು ದ್ವಿಗುಣಗೊಳಿಸಬೇಕು ಎಂದು ಸಂಬಂಧಪಟ್ಟ ಎಲ್ಲಾ ಪಾಲುದಾರರು ನಂಬಿದ್ದಾರೆ. ದೇಶೀಯ ಆಟಗಾರರು ಪ್ರತಿ ಋತುವಿನಲ್ಲಿ 10 ರಣಜಿ ಟ್ರೋಫಿ ಪಂದ್ಯಗಳನ್ನು ಆಡಿದರೆ ವಾರ್ಷಿಕವಾಗಿ 75 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಗಳಿಸಬೇಕು ಎಂಬ ಪ್ರಸ್ತಾಪವೂ ಇದೆ.

ಪ್ರಸ್ತುತ, ಒಬ್ಬ ಆಟಗಾರನು 40 ಕ್ಕಿಂತ ಹೆಚ್ಚು ರಣಜಿ ಪಂದ್ಯಗಳನ್ನು ಆಡಿದರೆ ದಿನಕ್ಕೆ 60,000 ರೂ., 21 ರಿಂದ 40 ಪಂದ್ಯಗಳನ್ನು ಆಡಿದವರಿಗೆ 50,000 ರೂ., 20 ಪಂದ್ಯಗಳಲ್ಲಿ ಕಾಣಿಸಿಕೊಂಡವರಿಗೆ 40,000 ರೂ. ಮತ್ತೊಂದೆಡೆ, ಮೀಸಲು ಆಟಗಾರರು ಆಯಾ ವಿಭಾಗಗಳಲ್ಲಿ 30,000, 25,000 ಮತ್ತು 20,000 ರೂ.ಗಳವರೆಗೆ ಪಡೆಯುತ್ತಾರೆ.

ಈಗಿರುವ ವೇತನ ಶ್ರೇಣಿಯ ಪ್ರಕಾರ, ಹಿರಿಯ ಆಟಗಾರನು ಫೈನಲ್ ತಲುಪಿದರೆ 25 ಲಕ್ಷ ರೂ.ಗಳವರೆಗೆ ಮತ್ತು ತಂಡದ ಇತರ ಆಟಗಾರರು 17 ಲಕ್ಷದಿಂದ 22 ಲಕ್ಷ ರೂ.ಗಳವರೆಗೆ ಗಳಿಸುತ್ತಾರೆ. ಮುಂಬರುವ ಋತುವಿನಿಂದ ದೇಶೀಯ ಆಟಗಾರರ ಗಳಿಕೆಯನ್ನು ಗಣನೀಯವಾಗಿ ಹೆಚ್ಚಿಸುವುದನ್ನು ಖಚಿತಪಡಿಸಿಕೊಳ್ಳಲು ಬಿಸಿಸಿಐ ಉತ್ಸುಕವಾಗಿದೆ.

ಆಟಗಾರರು ಕೆಂಪು ಚೆಂಡಿನ ಕ್ರಿಕೆಟ್ಗೆ ಆದ್ಯತೆ ನೀಡುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಬಿಸಿಸಿಐನ ಮುಖ್ಯ ಉದ್ದೇಶವಾಗಿದೆ. ಆಟಗಾರರ ಶುಲ್ಕವನ್ನು ಹೆಚ್ಚಿಸಲು ಹಲವಾರು ಭಾಗಗಳಿಂದ ಸಲಹೆಗಳು ಬಂದಿವೆ ಮತ್ತು ಮಂಡಳಿಯು ಅಂತಿಮವಾಗಿ ಅದರ ಮೇಲೆ ಕೆಲಸ ಮಾಡುತ್ತಿದೆ. ಕಳೆದ ತಿಂಗಳು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ನಿರ್ದಿಷ್ಟ ಋತುವಿನಲ್ಲಿ ನಿಗದಿತ ಟೆಸ್ಟ್ ಪಂದ್ಯಗಳಲ್ಲಿ 75% ಅಥವಾ ಅದಕ್ಕಿಂತ ಹೆಚ್ಚು ಆಡುವ ಆಟಗಾರರಿಗೆ ಪ್ರತಿ ಪಂದ್ಯಕ್ಕೆ 45 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ಘೋಷಿಸಿದ್ದರು.

ಸುನಿಲ್ ಗವಾಸ್ಕರ್ ಸಲಹೆ ನೀಡಿದ್ದರು.

“ರಣಜಿ ಟ್ರೋಫಿ ಶುಲ್ಕವನ್ನು ದ್ವಿಗುಣಗೊಳಿಸಲು ಅಥವಾ ಮೂರು ಪಟ್ಟು ಹೆಚ್ಚಿಸಲು ಸಾಧ್ಯವಾದರೆ, ಖಂಡಿತವಾಗಿಯೂ ರಣಜಿ ಟ್ರೋಫಿ ಆಡುವ ಹೆಚ್ಚಿನ ಆಟಗಾರರು ಬರುತ್ತಾರೆ. ರಣಜಿ ಟ್ರೋಫಿಯಿಂದ ತಪ್ಪಿಸಿಕೊಳ್ಳುವುದಿಲ್ಲ ಏಕೆಂದರೆ ರಣಜಿ ಟ್ರೋಫಿ ಪಂದ್ಯವನ್ನು ಆಡುವ ಶುಲ್ಕವು ಉತ್ತಮ ಶುಲ್ಕವಾಗಿದ್ದರೆ, ವಿವಿಧ ಕಾರಣಗಳಿಗಾಗಿ ಆಟಗಾರರು ಹೊರಗುಳಿಯುತ್ತಾರೆ” ಎಂದು ಗವಾಸ್ಕರ್ ಹೇಳಿದ್ದರು.

Continue Reading

ಕ್ರೀಡೆ

Bismah Maroof : ಹೆಣ್ಣು ಮಗುವಿನ ಸಮೇತ ಆಡಲು ಹೋಗುತ್ತಿದ್ದ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ ನಿವೃತ್ತಿ

Bismah Maroof : ಬಿಸ್ಮಾ 136 ಏಕದಿನ ಪಂದ್ಯಗಳಲ್ಲಿ 29.55 ಸರಾಸರಿಯಲ್ಲಿ 3369 ರನ್ ಗಳಿಸಿದ್ದಾರೆ, 21 ಅರ್ಧಶತಕಗಳು ಮತ್ತು 99 ಗರಿಷ್ಠ ಸ್ಕೋರ್. 140 ಟಿ20 ಪಂದ್ಯಗಳಲ್ಲಿ 27.55ರ ಸರಾಸರಿಯಲ್ಲಿ 12 ಅರ್ಧಶತಕಗಳು ಸೇರಿದಂತೆ 2893 ರನ್ ಗಳಿಸಿದ್ದಾರೆ. ಅವರು 96 ಪಂದ್ಯಗಳು, 62 ಟಿ 20 ಮತ್ತು 34 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 32 ಏಕದಿನ ಪಂದ್ಯಗಳಲ್ಲಿ 16 ಗೆಲುವು ಮತ್ತು 27 ಟಿ 20 ಐ ಗೆಲುವುಗಳಿಗೆ ತಂಡವನ್ನು ಮುನ್ನಡೆಸಿದ್ದಾರೆ.

VISTARANEWS.COM


on

Bismah Maroof
Koo

ಇಸ್ಲಾಮಾಬಾದ್​​: ಪಾಕಿಸ್ತಾನ ಮಹಿಳಾ ಕ್ರಿಕೆಟ್​​ ತಂಡದ ಅತ್ಯಂತ ಪ್ರತಿಭಾವಂತರಲ್ಲಿ ಒಬ್ಬರಾಗಿದ್ದ ಬಿಸ್ಮಾ ಮರೂಫ್ 17 ವರ್ಷಗಳ ವೃತ್ತಿಜೀವನದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ಪಾಕಿಸ್ತಾನದ ಪ್ರಮುಖ ರನ್ ಸ್ಕೋರರ್ ಆಗಿ ಮರೂಫ್ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ. ಮದುವೆಯಾಗಿ ಪುಟಾಣಿ ಮಗು ಇದ್ದ ಹೊರತಾಗಿಯೂ ಕ್ರಿಕೆಟ್​ ಆಟವನ್ನು ಮುಂದುವರಿಸಿದ್ದ ಅವರು ಪ್ರಶಂಸೆಗೆ ಪಾತ್ರರಾಗಿದ್ದರು. ಮಗುವಿನ ಸಮೇತವೇ ಅವರು ವಿದೇಶಗಳಿಗೆ ಆಡಲು ಹೋಗುವ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದರು.

ಮರೂಫ್ ಅವರ ಕ್ರಿಕೆಟ್ ಪ್ರಯಾಣವು 2006ರಲ್ಲಿ ಪ್ರಾರಂಭವಾಗಿದೆ. ಜೈಪುರದಲ್ಲಿ ಅವರು ಭಾರತ ತಂಡದ ವಿರುದ್ಧ ಪಾದಾರ್ಪಣೆ ಮಾಡಿದ್ದರು. ಅಂದಿನಿಂದ, ಅವರು ಕ್ರಿಕೆಟ್​ ಇತಿಹಾಸದ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಬಿಸ್ಮಾ 136 ಏಕದಿನ ಪಂದ್ಯಗಳಲ್ಲಿ 29.55 ಸರಾಸರಿಯಲ್ಲಿ 3369 ರನ್ ಗಳಿಸಿದ್ದಾರೆ, 21 ಅರ್ಧಶತಕಗಳು ಮತ್ತು 99 ಗರಿಷ್ಠ ಸ್ಕೋರ್. 140 ಟಿ20 ಪಂದ್ಯಗಳಲ್ಲಿ 27.55ರ ಸರಾಸರಿಯಲ್ಲಿ 12 ಅರ್ಧಶತಕಗಳು ಸೇರಿದಂತೆ 2893 ರನ್ ಗಳಿಸಿದ್ದಾರೆ. ಅವರು 96 ಪಂದ್ಯಗಳು, 62 ಟಿ 20 ಮತ್ತು 34 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 32 ಏಕದಿನ ಪಂದ್ಯಗಳಲ್ಲಿ 16 ಗೆಲುವು ಮತ್ತು 27 ಟಿ 20 ಐ ಗೆಲುವುಗಳಿಗೆ ತಂಡವನ್ನು ಮುನ್ನಡೆಸಿದ್ದಾರೆ.

“ನಾನು ಹೆಚ್ಚು ಪ್ರೀತಿಸುವ ಆಟದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಇದು ಸವಾಲುಗಳು, ಗೆಲುವುಗಳು ಮತ್ತು ಮರೆಯಲಾಗದ ನೆನಪುಗಳಿಂದ ತುಂಬಿದ ನಂಬಲಾಗದ ಪ್ರಯಾಣವಾಗಿದೆ. ಆರಂಭದಿಂದ ಇಂದಿನವರೆಗೆ ನನ್ನ ಕ್ರಿಕೆಟ್ ಪ್ರಯಾಣದುದ್ದಕ್ಕೂ ನನ್ನನ್ನು ಬೆಂಬಲಿಸಿದ ನನ್ನ ಕುಟುಂಬಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ, “ಎಂದು ಅವರು ಏಪ್ರಿಲ್ 26 ರಂದು ಪಿಸಿಬಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: IPL 2024 : ಸಾಯಿ ಕಿಶೋರ್ ನಿಂದನೆ; ರಸಿಕ್ ಸಲಾಂಗೆ ಪಾಠ ಕಲಿಸಿದ ಜಯ್​ ಶಾ

ತನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಪಿಸಿಬಿಗೆ ಧನ್ಯವಾದ ಅರ್ಪಿಸಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ನನ್ನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ಪಿಸಿಬಿಯ ಬೆಂಬಲವು ಅಮೂಲ್ಯವಾಗಿದೆ, ವಿಶೇಷವಾಗಿ ನನಗಾಗಿ ಮೊದಲ ಪೋಷಕರ ನೀತಿಯನ್ನು ಜಾರಿಗೆ ತರುವಲ್ಲಿ, ಇದು ತಾಯಿಯಾಗಿರುವಾಗ ನನ್ನ ದೇಶವನ್ನು ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸಲು ನನಗೆ ಅನುವು ಮಾಡಿಕೊಟ್ಟಿತು.

“ಕೊನೆಯದಾಗಿ, ನನಗೆ ಕುಟುಂಬದಂತೆ ಆಗಿರುವ ನನ್ನ ಸಹ ಆಟಗಾರರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಮೈದಾನದ ಒಳಗೆ ಮತ್ತು ಹೊರಗೆ ನಾವು ಹಂಚಿಕೊಂಡ ಸ್ನೇಹವನ್ನು ನಾನು ಎಂದೆಂದಿಗೂ ನೆನಪಿಸಿಕೊಳ್ಳುತ್ತೇನೆ, “ಎಂದು ಅವರು ಹೇಳಿದರು.

ತವರಿನಲ್ಲಿ ವೆಸ್ಟ್ ಇಂಡೀಸ್ ಮಹಿಳಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅವರು ಕೊನೆಯ ಬಾರಿಗೆ ಕಾಣಿಸಿಕೊಂಡರು. ಆತಿಥೇಯ ಪಾಕಿಸ್ತಾನವು ಸರಣಿಯನ್ನು 0-3 ರಿಂದ ಕಳೆದುಕೊಂಡಿತು ಮತ್ತು ಮರೂಫ್ 91 ರನ್ ಗಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಏಪ್ರಿಲ್ 26 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಸರಣಿಗಾಗಿ ವೆಸ್ಟ್ ಇಂಡೀಸ್ ಮಹಿಳೆಯರ ವಿರುದ್ಧದ ಟಿ 20 ಐ ತಂಡದ ಭಾಗವಾಗಿದ್ದಾರೆ. ಆದರೆ ಅವರ ಇತ್ತೀಚಿನ ಪ್ರಕಟಣೆಯೊಂದಿಗೆ, ಅವರ ಲಭ್ಯತೆ ಪ್ರಶ್ನಾರ್ಹವಾಗಿದೆ.

Continue Reading
Advertisement
Case of luring apartment dwellers Relief for DK Shivakumar
Lok Sabha Election 202410 mins ago

DK Shivakumar: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ; ಡಿ.ಕೆ. ಶಿವಕುಮಾರ್‌ಗೆ ರಿಲೀಫ್

ಫ್ಯಾಷನ್28 mins ago

Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

Lok sabaha election
ಪ್ರಮುಖ ಸುದ್ದಿ43 mins ago

Narendra Modi : ತಮ್ಮನ್ನು ನಿಂದಿಸಿದ ರಾಹುಲ್​ಗೆ ಪ್ರತ್ಯುತ್ತರ ಕೊಟ್ಟ ಮೋದಿ; ಇಲ್ಲಿದೆ ವಿಡಿಯೊ

Ballari Lok Sabha Constituency Congress candidate E Tukaram election campaign in Ballari
ರಾಜಕೀಯ54 mins ago

Lok Sabha Election 2024: ಸಂವಿಧಾನ ಉಳಿಸಲು ಕಾಂಗ್ರೆಸ್‌ ಗೆಲ್ಲಿಸಿ; ಈ. ತುಕಾರಾಂ

Lok Sabha Election-2024
Latest59 mins ago

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Viral Video
ವೈರಲ್ ನ್ಯೂಸ್1 hour ago

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

deadly murder
Latest1 hour ago

Deadly Murder: ಬರ್ಗರ್‌ ತಿಂದನೆಂದು ಸ್ನೇಹಿತನನ್ನೇ ಗುಂಡಿಟ್ಟು ಕೊಂದ!

Chemistry paper leak case
ಕೋರ್ಟ್1 hour ago

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Ranji Trophy
ಪ್ರಮುಖ ಸುದ್ದಿ2 hours ago

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

Fire Tragedy
ದೇಶ2 hours ago

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ3 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ6 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20248 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌