PAN compulsory: ವರ್ಷಕ್ಕೆ 20 ಲಕ್ಷ ರೂ.ಗಿಂತ ಹೆಚ್ಚಿನ ನಗದು ಡಿಪಾಸಿಟ್‌, ವಿತ್‌ ಡ್ರಾವಲ್ಸ್‌ಗೆ ಪ್ಯಾನ್‌ ಕಡ್ಡಾಯ - Vistara News

ವಾಣಿಜ್ಯ

PAN compulsory: ವರ್ಷಕ್ಕೆ 20 ಲಕ್ಷ ರೂ.ಗಿಂತ ಹೆಚ್ಚಿನ ನಗದು ಡಿಪಾಸಿಟ್‌, ವಿತ್‌ ಡ್ರಾವಲ್ಸ್‌ಗೆ ಪ್ಯಾನ್‌ ಕಡ್ಡಾಯ

ಬ್ಯಾಂಕ್‌ ಮತ್ತು ಅಂಚೆ ಕಚೇರಿ ಹಾಗೂ ಸಹಕಾರ ಬ್ಯಾಂಕ್‌ ಗಳಲ್ಲಿ ನಗದು ವ್ಯವಹಾರಕ್ಕೆ ಸಂಬಂಧಿಸಿ ಹೊಸ ನಿಯಮಗಳು ಜಾರಿಯಾಗುತ್ತಿವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಹೊಸದಿಲ್ಲಿ: ಬ್ಯಾಂಕ್‌, ಅಂಚೆ ಇಲಾಖೆ, ಸಹಕಾರ ಬ್ಯಾಂಕ್‌ಗಳಲ್ಲಿ ನಗದು ವ್ಯವಹಾರಗಳಿಗೆ ಸಂಬಂಧಿಸಿ ಸರಕಾರ ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಒಂದು ವರ್ಷಕ್ಕೆ 20 ಲಕ್ಷ ರೂ.ಗಿಂತ ಹೆಚ್ಚಿನ ನಗದನ್ನು ಬ್ಯಾಂಕ್‌ ಅಥವಾ ಅಂಚೆ ಇಲಾಖೆಯ ಖಾತೆಗಳಲ್ಲಿ ಠೇವಣಿ ಇಟ್ಟಿದ್ದರೆ ಅಥವಾ ಹಿಂತೆಗೆದುಕೊಂಡಿದ್ದರೆ, ಪ್ಯಾನ್‌ ಅಥವಾ ಆಧಾರ್‌ ವಿವರಗಳನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ.

ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಮಂಗಳವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಮೇ ೨೬ರಂದು ಹೊಸ ನಿಯಮಗಳು ಜಾರಿಯಾಗಲಿವೆ. ಬ್ಯಾಂಕ್‌ಗಳಲ್ಲಿ ಚಾಲ್ತಿ ಖಾತೆ (current account) ತೆರೆಯಲು ಪ್ಯಾನ್‌, ಆಧಾರ್‌ ವಿವರ ಸಲ್ಲಿಸಬೇಕಾಗುತ್ತದೆ.


ನಗದು ವ್ಯವಹಾರಕ್ಕೆ ಹೊಸ ನಿಯಮವೇನು?
-ಒಂದು ವರ್ಷದಲ್ಲಿ 20 ಲಕ್ಷ ರೂ. ಅಥವಾ ಹೆಚ್ಚು ನಗದನ್ನು ಬ್ಯಾಂಕ್‌, ಅಂಚೆ, ಸಹಕಾರ ಬ್ಯಾಂಕ್‌ ಗಳ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಖಾತೆಗಳಲ್ಲಿ ಜಮೆ ಮಾಡಿದರೆ ಪ್ಯಾನ್‌ ಅಥವಾ ಆಧಾರ್‌ ವಿವರ ಸಲ್ಲಿಸಬೇಕು.

  • ಬ್ಯಾಂಕ್‌, ಅಂಚೆ ಕಚೇರಿ, ಸಹಕಾರ ಬ್ಯಾಂಕ್‌ ಗಳಲ್ಲಿ ಒಂದು ಅಥವಾ ಹೆಚ್ಚಿನ ಒಂದಕ್ಕಿಂತ ಹೆಚ್ಚಿನ ಖಾತೆಗಳಲ್ಲಿ ಇಡೀ ವರ್ಷದಲ್ಲಿ ಒಟ್ಟಾಗಿ ಅಥವಾ ಒಂದೇ ಸಲಕ್ಕೆ ೨೦ ಲಕ್ಷ ರೂ. ಅಥವಾ ಹೆಚ್ಚು ನಗದನ್ನು ಹಿಂತೆಗೆದುಕೊಂಡರೆ ಪ್ಯಾನ್‌ ಅಥವಾ ಆಧಾರ್‌ ವಿವರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
  • ಬ್ಯಾಂಕ್‌ನಲ್ಲಿ ಕರೆಂಟ್‌ ಅಕೌಂಟ್‌ ಅಥವಾ ಕ್ಯಾಶ್‌ ಕ್ರೆಡಿಟ್‌ ಅಕೌಂಟ್‌ ತೆರೆಯಲು ಪ್ಯಾನ್‌ ಅಥವಾ ಆಧಾರ್‌ ವಿವರಗಳನ್ನು ನೀಡಬೇಕು.

ಈ ಹಿಂದೆ ನಿಯಮವೇನಿತ್ತು?
ಈ ಹಿಂದೆ ಬ್ಯಾಂಕ್‌ ಗಳಲ್ಲಿ ಒಂದು ದಿನಕ್ಕೆ 50,000 ರೂ.ಗಿಂತ ಹೆಚ್ಚಿನ ನಗದನ್ನು ಠೇವಣಿ ಇಟ್ಟರೆ ಪ್ಯಾನ್‌ ಕಡ್ಡಾಯವಾಗಿತ್ತು. ಆದರೆ ನಗದು ಠೇವಣಿ ಇಡಲು ಯಾವುದೇ ವಾರ್ಷಿಕ ಮಿತಿ ಇದ್ದಿರಲಿಲ್ಲ.
ನಗದು ಹಿಂತೆಗೆತಕ್ಕೆ ಯಾವುದೇ ಮೊತ್ತವಾದರೂ ಪ್ಯಾನ್‌ ಕಡ್ಡಾಯವಾಗಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

Sachin Tendulkar: ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗರಲ್ಲಿ ಒಬ್ಬರಾದ ತೆಂಡೂಲ್ಕರ್ ಒಟ್ಟು ಆಸ್ತಿ 1,354 ಕೋಟಿ ರೂಪಾಯಿ ಇದೆ. ಜಾಗತಿಕ ಶ್ರೀಮಂತ ಕ್ರಿಕೆಟಿರ್​ಗಳಲ್ಲಿ ಒಬ್ಬರು.ಸಚಿನ್‌ ನಿವೃತ್ತಿ ಪಡೆದು ಹತ್ತು ವರ್ಷಗಳು ಕಳೆದರೂ ಇಂದಿಗೂ ಮಾರುಕಟ್ಟೆಯಲ್ಲಿ ಇರುವ ಬಹು ಬೇಡಿಕೆಯ ವ್ಯಕ್ತಿ. ಜಾಹೀರಾತು ಕ್ಷೇತ್ರಗಳಲ್ಲಿಯೂ ಸಚಿನ್‌ಗೆ ಇಂದಿಗೂ ಭಾರಿ ಬೇಡಿಕೆ ಇದೆ. ಸಚಿನ್ ತೆಂಡೂಲ್ಕರ್ ಅವರ ಅತ್ಯಂತ ದುಬಾರಿ ಆಸ್ತಿಗಳ ವಿವರ ಇಲ್ಲಿದೆ!

VISTARANEWS.COM


on

Sachin Tendulkar Net Worth Assets Owned
Koo

ಬೆಂಗಳೂರು: ಕ್ರಿಕೆಟ್ ಜಗತ್ತಿನ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಗೆ ಇಂದು (ಏ.24) ಜನುಮದಿನದ (Sachin Birthday) ಸಂಭ್ರಮ. ಸಚಿನ್ ತೆಂಡೂಲ್ಕರ್ (Sachin Tendulkar’s Net Worth) ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಚಿನ್‌ ಶ್ರೇಷ್ಠ ಬ್ಯಾಟರ್‌ ಮಾತ್ರವಲ್ಲದೇ ದೇಶದ ಶ್ರೀಮಂತ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದಾರೆ. ಸಚಿನ್‌ ನಿವೃತ್ತಿ ಪಡೆದು ಹತ್ತು ವರ್ಷಗಳು ಕಳೆದರೂ ಇಂದಿಗೂ ಮಾರುಕಟ್ಟೆಯಲ್ಲಿ ಇರುವ ಬಹು ಬೇಡಿಕೆಯ ವ್ಯಕ್ತಿ. ಜಾಹೀರಾತು ಕ್ಷೇತ್ರಗಳಲ್ಲಿಯೂ ಸಚಿನ್‌ಗೆ ಇಂದಿಗೂ ಭಾರಿ ಬೇಡಿಕೆ ಇದೆ.

ಕ್ರೀಡೆಯಿಂದ ನಿವೃತ್ತರಾದ ನಂತರ, ಸಚಿನ್ ತೆಂಡೂಲ್ಕರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ನ (MI) ಮಾರ್ಗದರ್ಶಕರು ಆಗಿದ್ದರು. ತೆಂಡೂಲ್ಕರ್ ಅನೇಕ ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅವುಗಳಲ್ಲಿ ಸ್ಮಾರ್ಟ್‌ಟ್ರೋನ್‌ಇಂಡಿಯಾ (SmartronIndia) ಸ್ಮ್ಯಾಷ್‌ ಎಂಟರ್‌ಟೈನ್‌ಮೆಂಟ್‌ (Smaaash Entertainment ), ಸ್ಪಿನ್ನಿ, ಇಂಟರ್ನ್ಯಾಷನಲ್ ಟೆನ್ನಿಸ್ ಪ್ರೀಮಿಯರ್ ಲೀಗ್ ಸೇರಿದಂತೆ ಅನೇಕ ವಿವಿಧ ಉದ್ಯಮಗಳಿಗೆ ಹೂಡಿಕೆ ಮಾಡಿದ್ದಾರೆ.

ಬರೋಬ್ಬರಿ 1354 ಕೋಟಿ ರೂ. ಒಡೆಯ ಸಚಿನ್‌ ತೆಂಡೂಲ್ಕರ್. ಭಾರತವಲ್ಲದೆ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ತೆಂಡೂಲ್ಕರ್ ಅವರು ಮುಂಬೈನಲ್ಲಿ ಐಷಾರಾಮಿ ಬಂಗಲೆಯನ್ನು ಹೊಂದಿದ್ದಾರೆ. ಅಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಸಚಿನ್‌ ಇನ್ನಿತರ ದುಬಾರಿ ಆಸ್ತಿಗಳನ್ನು ಹೊಂದಿದ್ದಾರೆ. ಅವುಗಳು ಯಾವುವು ಎಂಬುದು ನೋಡೋಣ.

ಇದನ್ನೂ ಓದಿ: Sachin Tendulkar : ಸೋಲಿನ ಹತಾಶೆಯಲ್ಲಿದ್ದ ಕೊಹ್ಲಿಯನ್ನು ತಬ್ಬಿ ಸಂತೈಸಿದ ಸಚಿನ್; ಇಲ್ಲಿದೆ ವಿಡಿಯೊ

  1. – ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ (Bandra-Kurla complex) ಸಚಿನ್ ಅಲ್ಟ್ರಾ ಐಷಾರಾಮಿ ಫ್ಲ್ಯಾಟ್ ಹೊಂದಿದ್ದಾರೆ. 2018ರಲ್ಲಿ ಈ ಫ್ಲ್ಯಾಟ್ ಖರೀದಿಸಿದರು. ವರದಿಗಳ ಪ್ರಕಾರ, ಈ ಫ್ಲ್ಯಾಟ್ ಮೌಲ್ಯ 7.15 ಕೋಟಿ ರೂ.
  2. – ಸಚಿನ್ ಅವರು ಪಲಾಟಿಯಲ್ ಬಾಂದ್ರಾದಲ್ಲಿನ (Palatial Bandra) ಬಂಗಲೆಯ ಮಾಲೀಕರಾಗಿದ್ದಾರೆ. ಈ ಬಂಗಲೆಯ ಈಗಿನ ಮೌಲ್ಯ 39 ಕೋಟಿ ರೂಪಾಯಿ. ವರದಿಯ ಪ್ರಕಾರ, ತೆಂಡೂಲ್ಕರ್ ಅದನ್ನು ಖರೀದಿಸಿದಾಗ ಆ ಬಂಗಲೆ ಶಿಥಿಲಗೊಂಡಿತ್ತು. ಅದಾದ ಬಳಿಕ 45 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳಿಸಿದರು.
  3. – ಸಚಿನ್‌ 2021ರಲ್ಲಿ ಮಾರಾಟ ಮಾಡಿದ ಐಷಾರಾಮಿ BMW X5 M50d ಕಾರಿನ ಬೆಲೆ 1.78 ಕೋಟಿ ರೂ.
  4. – ಸಚಿನ್ 2.62 ಕೋಟಿ ರೂಪಾಯಿಗೆ ಬಿಎಂಡಬ್ಲ್ಯು ಐ8 ಕಾರನ್ನು ಖರೀದಿಸಿದ್ದರು.
  5. – BMW M5”30 Jahre MS” Limited Edition ದುಬಾರಿ ಕಾರನ್ನು ಸಚಿನ್‌ ಸಹ ಹೊಂದಿದ್ದಾರೆ. ಇದರ ಬೆಲೆ 1.50 ಕೋಟಿ ರೂ.
  6. – ಸಚಿನ್ 2015ರಲ್ಲಿ 1.73 ಕೋಟಿ ರೂ. ಮೌಲ್ಯದ BMW 750 Li M ದುಬಾರಿ ಸ್ಪೋರ್ಟ್ಸ್‌ ಕಾರು ಖರೀದಿಸಿದ್ದರು.
  7. – ಸಚಿನ್ ಅವರಿಗೆ ವಾಚ್‌ಗಳೆಂದರೆ ತುಂಬ ಪ್ರೀತಿ. ಸಚಿನ್‌ ಬಳಿ ಅದೆಷ್ಟೋ ದುಬಾರಿ ವಾಚ್‌ ಕಲೆಕ್ಷನ್‌ಗಳು ಇವೆ. ಆಡೆಮಾರ್ಸ್ ಪಿಕ್ವೆಟ್ (Audemars Piquet) ತಯಾರಿಸಿದ ರಾಯಲ್ ಓಕ್ ಪರ್ಪೆಚುಯಲ್ ಕ್ಯಾಲೆಂಡರ್ (Royal Oak Perpetual Calendar) ವಾಚ್‌ ಬ್ರ್ಯಾಂಡ್‌ ಮಾಲೀಕರಾಗಿದ್ದಾರೆ.
  8. – BMW M6 ಗ್ರ್ಯಾನ್ ಕಪಲ್ ಐಷಾರಾಮಿ ಕಾರು ಕೂಡ ತೆಂಡೂಲ್ಕರ್ ಬಳಿ ಇದೆ. ಈ ಕಾರನ್ನು 2020ರಲ್ಲಿ ಖರೀದಿಸಿದರು ಮತ್ತು ಅದರ ಮೌಲ್ಯ 1.8 ಕೋಟಿ ರೂ. ಈ ಕಾರು ಭಾರತದಲ್ಲಿ ಸಚಿನ್ ಬಳಿ ಮಾತ್ರ ಇದೆ ಎಂಬುದೇ ವಿಶೇಷ.
  9. – ಸಚಿನ್ ಪೋರ್ಷೆ ಕಯೆನ್ನೆ (Porsche Cayenne) ಕಾರು ಹೊಂದಿದ್ದಾರೆ. ಇದರ ಬೆಲೆ 1.93 ಕೋಟಿ ರೂ.
  10. – ಫೆರಾರಿ 360: ಫೆರಾರಿ ( Ferrari 360: Ferrar) ಕಾರ್‌ ಕೂಡ ಸಚಿನ್‌ ಬಳಿ ಇದೆ. 29ನೇ ಟೆಸ್ಟ್ ಶತಕ ಬಾರಿಸಿ ಸರ್ ಡಾನ್ ಬ್ರಾಡ್ಮನ್ ಅವರ ದಾಖಲೆಯನ್ನು (Sir Don Bradman’s) ಸರಿಗಟ್ಟಿದ್ದರು. ಹೀಗಾಗಿ ಫೆರಾರಿ 360: ಫೆರಾರಿ ಕಾರು ಸಚಿನ್‌ ಅವರಿಗೆ ಉಡುಗೊರೆಯಾಗಿ ಬಂದಿತ್ತು. ಆಗ ಫೆರಾರಿ 360: ಫೆರಾರಿ ಕಾರಿನ ಬೆಲೆ 75 ಲಕ್ಷ ರೂಪಾಯಿ. ಬಳಿಕ ಈ ಕಾರನ್ನು 11 ಕೋಟಿ ರೂ. ಗೆ ಸಚಿನ್ ಮಾರಾಟ ಮಾಡಿದರು.

ಇದನ್ನೂ ಓದಿ: Sachin Tendulkar: ಮಹಿಳಾ ದಿನಾಚರಣೆಯಂದು ಭಾವುಕ ಕ್ಷಣದ ಫೋಟೊ ಹಂಚಿಕೊಂಡ ಸಚಿನ್‌

  • – ಸೋಷಿಯಲ್​ ಮೀಡಿಯಾದಲ್ಲೂ ಹಣ ಸಂಪಾದಿಸುತ್ತಿರುವ ಸಚಿನ್​, ಹಲವಾರು ಕಂಪನಿಗಳ ರಾಯಭಾರಿಯೂ ಆಗಿದ್ದಾರೆ. ಅಲ್ಲದೆ, ಆಹಾರ ಉದ್ಯಮದಲ್ಲೂ ಸಚಿನ್​ ಕಾಲಿಟ್ಟಿದ್ದಾರೆ. ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ರೆಸ್ಟೋರೆಂಟ್‌ಗಳನ್ನು ಹೊಂದಿದ್ದಾರೆ. ಮನರಂಜನೆ, ತಂತ್ರಜ್ಞಾನ ಕಂಪನಿಗಳಲ್ಲೂ ಹೂಡಿಕೆ ಮಾಡಿದ್ದಾರೆ. ಇಂಗ್ಲೆಂಡ್‌ನ ಲಂಡನ್‌ನಲ್ಲೂ ಸಚಿನ್ ಅವರಿಗೆ ಸ್ವಂತ ಮನೆಯಿದೆ. ಲೆಕ್ಕವಿಲ್ಲದಷ್ಟು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.
Continue Reading

ಪ್ರಮುಖ ಸುದ್ದಿ

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Public Sector Banks :ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

VISTARANEWS.COM


on

Public Sector Banks
Koo

ಮುಂಬೈ: ವಿದೇಶದಲ್ಲಿರುವ ಸುಸ್ತಿ ಸಾಲಗಾರರ ವಿರುದ್ಧ ಲುಕ್ ಔಟ್ ನೋಟಿಸ್​ (LOC) ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ (Public Sector Banks) ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹೈಕೋರ್ಟ್​ ತೀರ್ಪಿನಿಂದಾಗಿ ಸಾಲ ಕಟ್ಟದೇ ವಿದೇಶಗಳಲ್ಲಿ ವಾಸವಿರುವವರಿಗೆ ನೀಡಲಾಗಿರುವ ಎಲ್ಲ ನೋಟಿಸ್​ಗಳು ರದ್ದಾಗಲಿವೆ.

ಸುಸ್ತಿ ಸಾಲಗಾರರ ವಿರುದ್ಧ ಲುಕ್​ಔಟ್​ ನೋಟಿಸ್​ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳ ಅಧ್ಯಕ್ಷರಿಗೆ ಅಧಿಕಾರ ನೀಡುವಂಥ ಕೇಂದ್ರ ಸರ್ಕಾರ ಹೊರಡಿಸಿದ ಕಚೇರಿ ಜ್ಞಾಪಕ ಪತ್ರದ ಷರತ್ತು ಅಸಂವಿಧಾನಿಕ ಎಂದು ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲ ಆದಿತ್ಯ ಠಕ್ಕರ್ ಅವರು ಹೈಕೋರ್ಟ್ ಆದೇಶವನ್ನು ತಡೆಹಿಡಿಯಬೇಕೆಂದು ಕೋರಿದರು. ಆದರೆ ನ್ಯಾಯಪೀಠ ನಿರಾಕರಿಸಿತು.

ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಯಾವುದೇ ಸುಸ್ತಿದಾರರ ವಿರುದ್ಧ ನ್ಯಾಯಮಂಡಳಿ ಅಥವಾ ಕ್ರಿಮಿನಲ್ ನ್ಯಾಯಾಲಯವು ವಿದೇಶಕ್ಕೆ ಪ್ರಯಾಣಿಸದಂತೆ ನಿರ್ಬಂಧಿಸುವ ಆದೇಶಗಳ ಮೇಲೆ ತನ್ನ ತೀರ್ಪು ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : Diamond Smuggling : ನೂಡಲ್ಸ್​ ಪ್ಯಾaಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

ಕೇಂದ್ರವು ಹೊರಡಿಸಿದ ಕಚೇರಿ ಜ್ಞಾಪಕ ಪತ್ರವು ಸಂವಿಧಾನಕ್ಕೆ ವಿರುದ್ಧವಾಗಿಲ್ಲವಾದರೂ, ಎಲ್ಒಸಿ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕಿನ ಅಧ್ಯಕ್ಷರಿಗೆ ಅಧಿಕಾರ ನೀಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಕೇಂದ್ರದ ಕಚೇರಿ ಜ್ಞಾಪಕ ಪತ್ರವು 2018 ರಲ್ಲಿ ಮಾಡಿದ ತಿದ್ದುಪಡಿಯಲ್ಲಿ, “ಭಾರತದ ಆರ್ಥಿಕ ಹಿತದೃಷ್ಟಿಯಿಂದ” ಎಲ್ಒಸಿಗಳನ್ನು ನೀಡಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಅಧಿಕಾರ ನೀಡಿತ್ತು.

ಒಬ್ಬ ವ್ಯಕ್ತಿಯ ನಿರ್ಗಮನವು ದೇಶದ ಆರ್ಥಿಕ ಹಿತಾಸಕ್ತಿಗೆ ಹಾನಿಕಾರಕವಾಗಿದ್ದರೆ ಅವನು/ ಅವಳು ವಿದೇಶಕ್ಕೆ ಪ್ರಯಾಣಿಸುವುದನ್ನು ನಿರ್ಬಂಧಿಸುತ್ತದೆ ಎಂದು ಹೇಳಿತ್ತು “ಭಾರತದ ಆರ್ಥಿಕ ಹಿತಾಸಕ್ತಿ” ಎಂಬ ಪದಗಳನ್ನು ಯಾವುದೇ ಬ್ಯಾಂಕಿನ “ಆರ್ಥಿಕ ಹಿತಾಸಕ್ತಿಗಳೊಂದಿಗೆ” ತುಲನೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

Continue Reading

ಮನಿ-ಗೈಡ್

Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Money Guide: ಮನೆ ನಿರ್ಮಾಣಕ್ಕೆ ಬ್ಯಾಂಕ್‌ನಿಂದ ಸಾಲ ಪಡೆದುಕೊಂಡಿದ್ದೀರಿ. ಆದರೆ ಮನೆ ಪೂರ್ತಿಯಾಗುವ ಮುನ್ನವೇ ಹಣವೆಲ್ಲ ಖಾಲಿಯಾಯ್ತು ಎಂದಿಟ್ಟುಕೊಳ್ಳೋಣ. ಆಗ ಸಹಜವಾಗಿ ಆತಂಕ ಎದುರಾಗುತ್ತದೆ. ಚಿಂತೆ ಮೂಡುತ್ತದೆ. ಆದರೆ ಈ ಬಗ್ಗೆ ಹೆಚ್ಚು ಯೋಚಿಸಬೇಕಾಗಿಲ್ಲ. ಯಾಕೆಂದರೆ ಇಂತಹ ಸಂದರ್ಭದಲ್ಲಿ ನೆರವಾಗಲೆಂದೇ ಟಾಪ್‌ ಅಪ್‌ ಲೋನ್‌ ಯೋಜನೆಯನ್ನು ರೂಪಿಸಲಾಗಿದೆ. ಟಾಪ್‌ ಅಪ್‌ ಲೋನ್‌ ಎಂದರೇನು? ಇದರ ವಿಧ ಯಾವುದು? ಯಾರೆಲ್ಲ ಅಪ್ಲೈ ಮಾಡಬಹುದು? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಮನೆ ನಿರ್ಮಾಣಕ್ಕೆ ಸಾಲ ಪಡೆದುಕೊಂಡಿದ್ದೀರಿ ಅಥವಾ ತುರ್ತು ಅಗತ್ಯಕ್ಕಾಗಿ ಪರ್ನನಲ್‌ ಲೋನ್‌ಗೆ ಅಪ್ಲೈ ಮಾಡಿ ಅದು ಮಂಜೂರಾಗಿದೆ. ಆದರೆ ನೀವು ಉದ್ದೇಶಿಸಿದ ಕಾರ್ಯ ಪೂರ್ಣಗೊಳ್ಳುವ ಮೊದಲೇ ಹಣ ಖಾಲಿಯಾಗಿದೆ. ಇನ್ನೂ ಸ್ವಲ್ಪ ದುಡ್ಡಿನ ಅಗತ್ಯ ಇದೆ. ಈ ಸಂದರ್ಭದಲ್ಲಿ ಗೊಂದಲ ಉಂಟಾಗುತ್ತದೆ. ಅರ್ಧದಲ್ಲೇ ಮುಗಿದ ಕಾರ್ಯವನ್ನೂ ಹೇಗೆಪ್ಪ ಪೂರ್ತಿಗೊಳಿಸವುದು ಎನ್ನುವ ಚಿಂತೆ ಕಾಡುತ್ತದೆ. ಇಂತಹ ಸಂದರ್ಭದಲ್ಲಿ ನಿಮ್ಮ ನೆರವಿಗೆ ಬರುವುದೇ ಟಾಪ್‌ ಅಪ್‌ ಲೋನ್‌ (Top-Up Loan). ಜನ ಸಾಮಾನ್ಯರ ಆಪತ್ಬಾಂಧವ ಎನಿಸಿಕೊಂಡಿರುವ ಟಾಪ್‌ ಅಪ್‌ ಲೋನ್‌ ಎಂದರೇನು? ಇದನ್ನು ಪಡೆಯುವುದು ಹೇಗೆ? ನಿಮ್ಮೆಲ್ಲ ಪ್ರಶ್ನೆಗಳಿಗೆ ಇಂದಿನ ಮನಿಗೈಡ್‌ (Money Guide) ಉತ್ತರಿಸಲಿದೆ.

ಟಾಪ್‌ ಅಪ್‌ ಲೋನ್‌ ಎಂದರೇನು?

ಮೊದಲಿಗೆ ಟಾಪ್‌ ಅಪ್‌ ಲೋನ್‌ ಎಂದರೇನು ಎನ್ನುವುದನ್ನು ನೋಡೋಣ. ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಅಸ್ತಿತ್ವದಲ್ಲಿರುವ ಸಾಲದ ಮೇಲೆ ನಿಮಗೆ ಹೆಚ್ಚುವರಿ ಮೊತ್ತವನ್ನು ನೀಡುವುದನ್ನು ಟಾಪ್ ಅಪ್ ಲೋನ್ ಎಂದು ಕರೆಯಲಾಗುತ್ತದೆ. ಈ ಆಯ್ಕೆಯು ಸಾಮಾನ್ಯವಾಗಿ ಗೃಹ ಸಾಲಗಳು, ವೈಯಕ್ತಿಕ ಸಾಲಗಳು ಮತ್ತು ಕಾರು ಸಾಲಗಳಂತಹ ವಿವಿಧ ರೀತಿಯ ಸಾಲಗಳಿಗೆ ಲಭ್ಯ. ಉದಾಹರಣೆಗೆ ನೀವು ಮನೆ ನಿರ್ಮಾಣಕ್ಕೆ ಸಾಲ ಪಡೆದುಕೊಂಡಿದ್ದೀರಿ ಎಂದಿಟ್ಟುಕೊಳ್ಳೋಣ. ಮನೆ ಅರ್ಧವಾಗುವಷ್ಟರಲ್ಲಿ ಸಾಲದ ಮೊತ್ತ ಖಾಲಿಯಾಯಿತು. ಪೂರ್ಣಗೊಳಿಸಲು ಇನ್ನೊಂದಿಷ್ಟು ಹಣ ಬೇಕು. ಆಗ ಟಾಪ್‌ ಅಪ್‌ ಲೋನ್‌ ಸೌಲಭ್ಯದ ಮೂಲಕ ಮತ್ತೊಮ್ಮೆ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ನಿಯಮಿತವಾಗಿ ಇಎಂಐ ಕಟ್ಟುವವರಿಗೆ ಟಾಪ್‌ ಅಪ್‌ ಲೋನ್‌ ಸುಲಭವಾಗಿ ಲಭಿಸುತ್ತದೆ.

ವೈಶಿಷ್ಟ್ಯ

  • ಉದ್ದೇಶ: ಟಾಪ್‌ ಅಪ್‌ ಲೋನ್‌ಗಳನ್ನು ಮನೆ ನವೀಕರಣಕ್ಕೆ, ಉನ್ನತ ಶಿಕ್ಷಣ ಹೊಂದಲು, ವೈದ್ಯಕೀಯ ವೆಚ್ಚಗಳನ್ನು ಪೂರೈಸಲು ಅಥವಾ ಇತರ ಯಾವುದೇ ಹಣಕಾಸಿನ ಅಗತ್ಯಗಳಿಗೆ ಬಳಸಬಹುದು.
  • ಅರ್ಹತೆ: ಟಾಪ್‌ ಅಪ್ ಲೋನ್‌ಗೆ ಅರ್ಹರಾಗಲು ಗ್ರಾಹಕರು ತಮ್ಮ ಅಸ್ತಿತ್ವದಲ್ಲಿರುವ ಸಾಲದ ಮೇಲೆ ಉತ್ತಮ ಮರುಪಾವತಿಯ ಟ್ರ್ಯಾಕ್ ರೆಕಾರ್ಡ್ ಹೊಂದಿರಬೇಕು. ಟಾಪ್-ಅಪ್ ಲೋನ್ ಅನುಮೋದಿಸುವ ಮೊದಲು ಬ್ಯಾಂಕ್‌ಗಳು ಸಾಲಗಾರನ ಮರುಪಾವತಿ ಇತಿಹಾಸ, ಕ್ರೆಡಿಟ್ ಸ್ಕೋರ್, ಆದಾಯ ಸ್ಥಿರತೆ ಮತ್ತು ಇತರ ಅಂಶಗಳನ್ನು ಪರಿಶೀಲಿಸುತ್ತದೆ.
  • ಸಾಲದ ಮೊತ್ತ: ಟಾಪ್‌ ಅಪ್ ಲೋನ್‌ಗೆ ಲಭ್ಯವಿರುವ ಗರಿಷ್ಠ ಸಾಲದ ಮೊತ್ತವು ಅಸ್ತಿತ್ವದಲ್ಲಿರುವ ಸಾಲದ ಬಾಕಿ ಮೊತ್ತ, ಸಾಲಗಾರನ ಮರುಪಾವತಿ ಸಾಮರ್ಥ್ಯ ಮತ್ತು ಬ್ಯಾಂಕ್‌ನ ನೀತಿಯಂತಹ ವಿವಿಧ ಅಂಶಗಳನ್ನು ಅವಲಂಬಿಸಿರುತ್ತದೆ.
  • ಬಡ್ಡಿ ದರ: ಈ ಮಾದರಿ ಸಾಲದ ಬಡ್ಡಿದರಗಳು ಸಾಮಾನ್ಯವಾಗಿ ಮೂಲ ಸಾಲದ ಮೇಲಿನ ಬಡ್ಡಿದರಗಳಿಗಿಂತ ಸ್ವಲ್ಪ ಹೆಚ್ಚಾಗಿರುತ್ತವೆ. ಆದಾಗ್ಯೂ ಈ ದರಗಳು ಸಾಮಾನ್ಯವಾಗಿ ಪರ್ಸನಲ್‌ ಲೋನ್‌ನ ಬಡ್ಡಿದರಗಳಿಗಿಂತ ಕಡಿಮೆಯಿರುತ್ತವೆ.

ಟಾಪ್‌ ಅಪ್ ಲೋನ್‌ನ ವಿಧಗಳು

  • ಹೋಮ್ ಲೋನ್ ಟಾಪ್‌ ಅಪ್‌: ಇದು ಭಾರತದಲ್ಲಿ ಸಾಮಾನ್ಯವಾಗಿ ಕಂಡು ಬರುವ ವಿಧ. ಅಸ್ತಿತ್ವದಲ್ಲಿರುವ ಗೃಹ ಸಾಲವನ್ನು ಹೊಂದಿರುವವರು ಹೆಚ್ಚುವರಿ ದಾಖಲೆಗಳ ಅಗತ್ಯವಿಲ್ಲದೆ ತಮ್ಮ ಹೆಚ್ಚಿನ ಹಣಕಾಸು ಅಗತ್ಯಗಳನ್ನು ಪೂರೈಸಲು ಟಾಪ್ ಅಪ್‌ಗೆ ಅರ್ಜಿ ಸಲ್ಲಿಸಬಹುದು.
  • ಪರ್ಸನಲ್ ಲೋನ್ ಟಾಪ್‌ ಅಪ್‌: ಕೆಲವು ಬ್ಯಾಂಕ್‌ಗಳು ಅಸ್ತಿತ್ವದಲ್ಲಿರುವ ವೈಯಕ್ತಿಕ ಸಾಲಗಳ ಮೇಲೆ ಟಾಪ್ ಅಪ್‌ಗಳನ್ನು ನೀಡುತ್ತವೆ. ಬ್ಯಾಂಕ್‌ಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಗ್ರಾಹಕರು ಇದನ್ನು ಪಡೆಯಬಹುದು.
  • ಕಾರು ಲೋನ್ ಟಾಪ್‌ ಅಪ್‌: ಕಾರು ಸಾಲ ತೆಗೆದುಕೊಂಡ ವ್ಯಕ್ತಿಗಳಿಗೆ ಕೆಲವು ಬ್ಯಾಂಕ್‌ಗಳು ತಮ್ಮ ವಾಹನ ಅಥವಾ ಇತರ ಹಣಕಾಸು ಅಗತ್ಯಗಳಿಗೆ ಹೆಚ್ಚುವರಿ ಲೋನ್ ಹೊಂದುವ ಆಯ್ಕೆ ನೀಡುತ್ತವೆ.

ಬಡ್ಡಿದರ, ನಿಬಂಧನೆಗಳು ಆಯಾ ಬ್ಯಾಂಕ್‌, ಹಣಕಾಸು ಸಂಸ್ಥೆಗಳಿಗೆ ಅನುಗುಣವಾಗಿ ಬದಲಾಗುತ್ತವೆ. ಹೀಗಾಗಿ ಅರ್ಜಿ ಸಲ್ಲಿಸಲುವ ಮುನ್ನ ಎಲ್ಲ ವಿವರಗಳಲ್ಲಿ ತಿಳಿದುಕೊಳ್ಳಿ.

Continue Reading

ಪ್ರಮುಖ ಸುದ್ದಿ

BrahMos Missiles: ಫಿಲಿಪ್ಪೀನ್ಸ್‌ಗೆ ನಾಲ್ಕನೇ ಬ್ರಹ್ಮೋಸ್‌ ಕ್ಷಿಪಣಿ ಬ್ಯಾಟರಿ ಕಳುಹಿಸಲು ಭಾರತ ಸಜ್ಜು

BrahMos Missiles: ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. 2022ರಲ್ಲಿ ಎರಡು ಮಿತ್ರರಾಷ್ಟ್ರಗಳು ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿದೆ ಇದು. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ.

VISTARANEWS.COM


on

BrahMos Missiles
Koo

ಹೊಸದಿಲ್ಲಿ: ದಕ್ಷಿಣ ಚೀನಾ ಸಮುದ್ರದಲ್ಲಿ (South China Sea) ಚೀನಾದ ಒತ್ತಡದಿಂದಾಗಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ರಕ್ಷಣಾ ರಫ್ತಿಗೆ (defence exports) ಭಾರಿ ಉತ್ತೇಜನ ನೀಡುತ್ತಿರುವ ಭಾರತ (India), ಇಂದು ಫಿಲಿಪ್ಪೀನ್ಸ್‌ಗೆ (Philippines) ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ (BrahMos missiles, BrahMos supersonic cruise missiles) ಭೂ ಆವೃತ್ತಿಯ ನಾಲ್ಕನೇ ʼಬ್ಯಾಟರಿ’ಯನ್ನು (Battery) ಕಳುಹಿಸಲು ಮುಂದಾಗಿದೆ.

ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. 2022ರಲ್ಲಿ ಎರಡು ಮಿತ್ರರಾಷ್ಟ್ರಗಳು ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿದೆ ಇದು. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ. ಈ ಕ್ಷಿಪಣಿ ಸೂಪರ್‌ಸಾನಿಕ್ ವೇಗವನ್ನು ಹೊಂದಿದ್ದು, ಇದನ್ನು ಭೂಮಿ ಅಥವಾ ಹಡಗು ಆಧಾರಿತ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMDs) ವ್ಯವಸ್ಥೆಗಳಿಂದ ಪ್ರತಿಬಂಧಿಸುವುದು ತುಂಬಾ ಕಷ್ಟ.

ಬ್ರಹ್ಮೋಸ್‌ನ ಫಿಲಿಪೈನ್ಸ್ ಒಪ್ಪಂದದ ಮೂಲಕ, 2023-2024ರಲ್ಲಿ ಭಾರತದ ರಕ್ಷಣಾ ರಫ್ತು ₹21083 ಕೋಟಿಗಳನ್ನು ಮುಟ್ಟಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.32.5ರಷ್ಟು ಬೃಹತ್ ಬೆಳವಣಿಗೆಯಾಗಿದೆ. ಬ್ರಹ್ಮೋಸ್ ದಾಖಲೆ ಮಾರಾಟ ಕಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಭಾರತವು ಈ ಸೂಪರ್‌ಸಾನಿಕ್ ಕ್ಷಿಪಣಿಗಳ ಹೆಚ್ಚಿನ ಆರ್ಡರ್‌ಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಕ್ಷಿಪಣಿ ರಫ್ತಿನಲ್ಲಿ ಭಾರತವು ಸಂತುಷ್ಟಿಯ ಮಟ್ಟವನ್ನು ಮುಟ್ಟಿದೆ. ನರೇಂದ್ರ ಮೋದಿ ಸರ್ಕಾರ ಇದೀಗ ಮುಂಬೈನಲ್ಲಿ ಸ್ಕಾರ್ಪೀನ್-ಕ್ಲಾಸ್ ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸಲು ಮತ್ತು ಇಂಡೋನೇಷ್ಯಾ, ಮಲೇಷ್ಯಾ ಮುಂತಾದ ಮೂರನೇ ದೇಶಗಳಿಗೆ ಸರಬರಾಜು ಮಾಡಲು ಮಜಗಾಂವ್ ಡಾಕ್‌ಯಾರ್ಡ್ಸ್ ಲಿಮಿಟೆಡ್ ಮತ್ತು ಫ್ರೆಂಚ್ ನೇವಲ್ ಗ್ರೂಪ್ ನಡುವೆ ಜಂಟಿ ಉದ್ಯಮವನ್ನು ಸ್ಥಾಪಿಸಲು ಮುಂದಾಗಿದೆ.

ಪ್ರಸ್ತುತ ನಮ್ಮ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾನ್ ಅವರು ಫ್ರಾನ್ಸ್‌ ಸರ್ಕಾರದೊಂದಿಗೆ ಸಂವಹನ ನಡೆಸಲು ಫ್ರಾನ್ಸ್‌ಗೆ ಭೇಟಿ ನೀಡಿದ್ದು, ಭಾರತೀಯ ಮತ್ತು ಫ್ರೆಂಚ್ ರಕ್ಷಣಾ ವ್ಯವಹಾರ ಸರಪಳಿಯನ್ನು ಇನ್ನಷ್ಟು ಗಟ್ಟಿಗೊಳಿಸಲಿದ್ದಾರೆ. ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಗಾಢಗೊಳಿಸುವ ಪ್ರಯತ್ನದಲ್ಲಿ ಭಾರತೀಯ ಸೇನಾ ಮುಖ್ಯಸ್ಥರು ಟೌಲೌಸ್‌ನಲ್ಲಿರುವ ಫ್ರೆಂಚ್ ಜಲಾಂತರ್ಗಾಮಿ ನೆಲೆಗೆ ಭೇಟಿ ನೀಡಲಿದ್ದಾರೆ. ಭಾರತಕ್ಕೆ ಇನ್ನೂ ಮೂರು ಹೆಚ್ಚುವರಿ ಕಲ್ವೇರಿ (Kalveri- ಮಾರ್ಪಡಿಸಿದ ಸ್ಕಾರ್ಪೀನ್) ದರ್ಜೆಯ ಜಲಾಂತರ್ಗಾಮಿ ನೌಕೆಗಳ ನಿರ್ಮಾಣಕ್ಕಾಗಿ ಫ್ರೆಂಚ್ ನೇವಲ್ ಗ್ರೂಪ್ ಈಗಾಗಲೇ MDLನೊಂದಿಗೆ ಮಾತುಕತೆ ನಡೆಸುತ್ತಿದೆ.

P-5 ಶಕ್ತಿಗಳು ಪರಮಾಣು-ಚಾಲಿತ ಸಾಂಪ್ರದಾಯಿಕ ಸಶಸ್ತ್ರ ದಾಳಿ ಜಲಾಂತರ್ಗಾಮಿ ನೌಕೆಗಳನ್ನು (SSN) ವೈರಿ ಸೈನ್ಯದ ತಡೆಗಟ್ಟುವಿಕೆಗೆ ಬಳಸುತ್ತಿರುವಾಗ, ಭಾರತವು ಇನ್ನೂ ತನ್ನ ಆಯ್ಕೆಗಳನ್ನು ಮೌಲ್ಯಮಾಪನ ಮಾಡುತ್ತಿದೆ. ದೀರ್ಘಾವಧಿಯ ಕಡಲ ಭದ್ರತೆಗಾಗಿ ಎಸ್‌ಎಸ್‌ಎನ್‌ಗಳನ್ನು ತಯಾರಿಸುವುದು ಅಥವಾ ಸಾಂಪ್ರದಾಯಿಕ ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ಹೊಂದುವುದು ಆಯ್ಕೆಗಳಾಗಿವೆ.

ಇದನ್ನೂ ಓದಿ: BrahMos Missiles: ನೌಕಾಪಡೆಗೆ ಭೀಮಬಲ; 200 ಬ್ರಹ್ಮೋಸ್‌ ಕ್ಷಿಪಣಿ ಖರೀದಿಗೆ ಕೇಂದ್ರ ಅಸ್ತು

Continue Reading
Advertisement
IED Blast
Lok Sabha Election 202431 mins ago

IED Blast: ಎರಡನೇ ಹಂತದ ಮತದಾನಕ್ಕೆ ದಿನಗಣನೆ; ಮಣಿಪುರದ ಸೇತುವೆ ಮೇಲೆ ಐಇಡಿ ಸ್ಫೋಟ

Modi in Karnataka from April 28 and 29 BJP plan for second phase ready
Lok Sabha Election 202432 mins ago

Modi in Karnataka: ಏಪ್ರಿಲ್‌ 28 – 29ಕ್ಕೆ ಕರ್ನಾಟಕಕ್ಕೆ ಮೋದಿ; 2ನೇ ಹಂತಕ್ಕೆ ಬಿಜೆಪಿ ಪ್ಲ್ಯಾನ್‌ ರೆಡಿ!

female doctors
ಪ್ರಮುಖ ಸುದ್ದಿ33 mins ago

Female Doctors: ವೈದ್ಯೆಯರಿಂದ ಚಿಕಿತ್ಸೆ ಪಡೆದ ರೋಗಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚಂತೆ! ಅಧ್ಯಯನ ವರದಿ

Kannada New Movie Vidyarthi Vidyarthiniyare Bad Boys Full Video In AI Touch
ಸಿನಿಮಾ38 mins ago

Kannada New Movie: ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾದ ವಿಡಿಯೊ ಸಾಂಗ್‌ಗೆ ʻAIʼ ಟಚ್‌!

Vicky Kaushal transforms into Chhatrapati Sambhaji Maharaj
ಸಿನಿಮಾ40 mins ago

Vicky Kaushal: ಛತ್ರಪತಿ ಸಂಭಾಜಿ ಮಹಾರಾಜ ಲುಕ್‌ನಲ್ಲಿ ವಿಕ್ಕಿ ಕೌಶಲ್; ಫೋಟೊ ಲೀಕ್‌!

Patanjali Case
ದೇಶ1 hour ago

Patanjali Case: ಪತಂಜಲಿ ಕೇಸ್‌; ಜಾಹೀರಾತು ಮೂಲಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್‌

Road accident in Ankola The biker was burnt to death
ಕ್ರೈಂ1 hour ago

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Sachin Tendulkar Net Worth Assets Owned
ಕ್ರಿಕೆಟ್2 hours ago

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

gold model
ಚಿನ್ನದ ದರ2 hours ago

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
ಕರ್ನಾಟಕ2 hours ago

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌