ರಾಜ್ಯದಲ್ಲಿ ಮೇ 31ಕ್ಕೆ ಪೆಟ್ರೋಲ್‌, ಡೀಸೆಲ್‌ ಡೀಲರ್‌ಗಳಿಂದ ಮುಷ್ಕರ - Vistara News

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮೇ 31ಕ್ಕೆ ಪೆಟ್ರೋಲ್‌, ಡೀಸೆಲ್‌ ಡೀಲರ್‌ಗಳಿಂದ ಮುಷ್ಕರ

ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಡೀಲರ್‌ಗಳು ತಮ್ಮ ಬೇಡಿಕೆಗೆ ಒತ್ತಾಯಿಸಿ ಮೇ ೩೧ರಂದು ಮುಷ್ಕರ ನಡೆಸಲಿದ್ದಾರೆ. ಆದರೆ ಗ್ರಾಹಕರಿಗೆ ತೊಂದರೆ ಆಗದು ಎಂದಿದ್ದಾರೆ.

VISTARANEWS.COM


on

petrol
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ಪೆಟ್ರೋಲಿಯಂ ಡೀಲರ್‌ಗಳು ಮೇ 31 ರಂದು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಅಂದು ತೈಲವನ್ನು ಖರೀದಿಸದಿರಲು ತೀರ್ಮಾನಿಸಿದ್ದಾರೆ.

ಕೇಂದ್ರ ಸರಕಾರ ಅಬಕಾರಿ ಸುಂಕ ಕಡಿತಗೊಳಿಸಿರುವುದರಿಂದ ಡೀಲರ್‌ಗಳಿಗೆ ವ್ಯಾಪಾರದಲ್ಲಿ ಗಣನೀಯ ನಷ್ಟವಾಗುತ್ತಿದೆ. ಇದಕ್ಕೆ ಕೇಂದ್ರ ಸರಕಾರ ಪರಿಹಾರ ನೀಡಬೇಕು ಎಂದು ಪೆಟ್ರೋಲಿಯಂ ಡೀಲರ್‌ಗಳು ದೂರಿದ್ದಾರೆ.
ಹೀಗಿದ್ದರೂ, ರಾಜ್ಯಾದ್ಯಂತ ಪೆಟ್ರೋಲ್‌ ಬಂಕ್‌ಗಳು ಮುಷ್ಕರದ ದಿನವಾದ ಮೇ 31 ರಂದು ಎಂದಿನಂತೆ ತೆರೆಯಲಿವೆ. ಡೀಲರ್‌ಗಳು ಮೂರು ದಿನಗಳಿಗೆ ಆಗುವಷ್ಟು ತೈಲವನ್ನು ಮೊದಲೇ ಖರೀದಿಸಿರುತ್ತಾರೆ. ಆದ್ದರಿಂದ ಜನತೆಗೆ ತೊಂದರೆ ಆಗದು ಎಂದು ಡೀಲರ್ ಗಳು ತಿಳಿಸಿದ್ದಾರೆ. ಹೀಗಿದ್ದರೂ ಕೆಲವೆಡೆ ಪೆಟ್ರೋಲ್‌ ಬಂಕ್‌ಗಳಲ್ಲಿ ” ನೊ ಸ್ಟಾಕ್‌ ಬೋರ್ಡ್‌ʼʼ ಕಾಣಿಸುವ ಸಾಧ್ಯತೆ ಇದೆ.

ಪೆಟ್ರೋಲ್-ಡೀಸೆಲ್‌ ಡೀಲರ್‌ಗಳ ಬೇಡಿಕೆ ಏನು?

  • ಪೆಟ್ರೋಲ್-ಡೀಸೆಲ್‌ ಮಾರಾಟದಲ್ಲಿ ಡೀಲರ್‌ಗಳ ಕಮೀಶನ್‌ ಹೆಚ್ಚಳ ಮಾಡಬೇಕು.
  • ಇತ್ತೀಚಿನ ಅಬಕಾರಿ ಸುಂಕ ಹೆಚ್ಚಳದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ

ಅನೇಕ ಡೀಲರ್‌ಗಳು ಅಬಕಾರಿ ಸುಂಕ ಕಡಿತಕ್ಕೆ ಮೊದಲೇ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸಿದ್ದಾರೆ. ಅಬಕಾರಿ ಸುಂಕ ಕಡಿತದ ಪರಿಣಾಮ ಅವರಿಗೆ ಈಗ ಕಡಿಮೆ ದರದಲ್ಲಿ ಮಾರಾಟದಿಂದ ನಷ್ಟ ಉಂಟಾಗಲಿದೆ. ಈ ನಷ್ಟವನ್ನು ಕೇಂದ್ರ ಸರಕಾರ ಭರಿಸಬೇಕು ಎಂದು ಅಖಿಲ ಕರ್ನಾಟಕ ಫೆಡರೇಷನ್‌ ಆಫ್‌ ಪೆಟ್ರೋಲಿಯಂ ಟ್ರೇಡರ್ಸ್‌ ಒತ್ತಾಯಿಸಿದೆ. ಸರಕಾರ ಕಳೆದ ವರ್ಷ ನವೆಂಬರ್‌ ಮತ್ತು ಇತ್ತೀಚೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಅಬಕಾರಿ ಸುಂಕವನ್ನು ಕಡಿತಗೊಳಿಸಿರುವುದರಿಂದ ಪ್ರತಿ ಡೀಲರ್‌ಗೆ 5-10ಲಕ್ಷ ರೂ. ನಷ್ಟವಾಗಿದೆ. ಈ ನಷ್ಟವನ್ನು ಸರಕಾರ ಭರಿಸಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಬಸವೇಗೌಡ ಅವರು ಒತ್ತಾಯಿಸಿದ್ದಾರೆ.

ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ಮೇ 31ರಂದು ನಾವು ಪೆಟ್ರೋಲ್‌ ಖರೀದಿಸುವುದಿಲ್ಲ ಎಂದು ಡೀಲರ್‌ ಗಳು ತಿಳಿಸಿದ್ದಾರೆ. ಹೀಗಿದ್ದರೂ ಗ್ರಾಹಕರಿಗೆ ಪೆಟ್ರೋಲ್-ಡೀಸೆಲ್‌ ಮಾರಾಟ ಮುಂದುವರಿಯಲಿದೆ ಎಂದು ಒಕ್ಕೂಟದ ಉಪಾಧ್ಯಕ್ಷ ಎ ತಾರಾನಾಥ್‌ ತಿಳಿಸಿದ್ದಾರೆ.
ಕೇಂದ್ರ ಸರಕಾರ ಯಾವುದೇ ನೋಟಿಸ್‌ ನೀಡದೆ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಇದರಿಂದ ಡೀಲರ್‌ ಗಳಿಗೆ ಕಷ್ಟವಾಗಿದೆ. ಡೀಲರ್‌ ಗಳ ಕಮಿಶನ್‌ ಹೆಚ್ಚಿಸುವಂತೆ 2017ರಿಂದಲೂ ನಾವು ಒತ್ತಾಯಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಪೆಟ್ರೋಲಿಯಂ ಡೀಲರ್‌ ಗಳು ನಷ್ಟ ಅನುಭವಿಸುತ್ತಿದ್ದಾರೆ. ಮಾಸಿಕ 60-100 ಕಿಲೋಲೀಟರ್‌ ಮಾರಾಟ ಮಾಡುವವರಿಗೆ ಸಂಕಷ್ಟವಾಗುತ್ತಿದೆ ಎಂದರು. ಕೇಂದ್ರ ಸರಕಾರ ಮೇ 22ರಂದು ಪೆಟ್ರೋಲ್‌ ಮೇಲೆ ಲೀಟರ್‌ ಗೆ 8 ರೂ. ಹಾಗೂ ಡೀಸೆಲ್‌ ಮೇಲೆ ಲೀಟರ್‌ಗೆ 6 ರೂ. ಅಬಕಾರಿ ಸುಂಕ ಕಡಿತಗೊಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Cheating case : ಮಠಕ್ಕೆ ಭಕ್ತರು ಸಾಕಷ್ಟು ಧನ ಸಹಾಯ ಮಾಡಿದ್ದರು. ಅಂತೆಯ 40 ಲಕ್ಷ ರೂಪಾಯಿ ಮಠದಲ್ಲಿತ್ತು. ಅದನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವುದು ಸ್ವಾಮೀಜಿಯ ದುರಾಲೋಚನೆಯಾಗಿತ್ತು ಎಂಬುದು ಪೊಲೀಸರು ಪತ್ತೆ ಹಚ್ಚಿದ ಹಲವಾರು ಸಾಕ್ಷಿಗಳಿಂದ ಗೊತ್ತಾಗಿದೆ. ಹಣದ ಥೈಲಿಯನ್ನು ಬಾಚಿಕೊಳ್ಳುವುದಕ್ಕೆ ಸಜ್ಜಾಗಿದ್ದ ಸ್ವಾಮೀಜಿ ಪೊಲೀಸರ ಕೈಕೋಳಕ್ಕೆ ಕೈ ನೀಡುವ ಪರಿಸ್ಥಿತಿ ಎದುರಾಗಿದೆ.

VISTARANEWS.COM


on

Cheating Case
Koo

ರಾಯಚೂರು: ಭಕ್ತರಿಗೆ ಸೇರಿದ್ದ 40 ಲಕ್ಷ ರೂಪಾಯಿ ಹಣವನ್ನು ಸ್ವಂತಕ್ಕೆ ಮಾಡಿಕೊಳ್ಳುವುದಕ್ಕೆ ಸಂಚು ರೂಪಿಸಿ ದರೋಡೆ ಕತೆಯನ್ನು ಸೃ ಷ್ಟಿಸಿದ ಸ್ವಾಮೀಜಿಯ ಕಳ್ಳಾಟ (Cheating case) ಬಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಪ್ರಾಥಮಿಕ ಹಂತದಲ್ಲಿಯೇ ಸ್ವಾಮೀಜಿಯ ಕತೆ ಬಹಿರಂಗಗೊಂಡಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರೋ ವಿಜಯಮಹಾಂತೇಶ್ವರ ಶಾಖಾ ಮಠ ನುಗ್ಗಿದ ದರೋಡೆಕೋರರು ತಮ್ಮನ್ನು ಬೆದರಿಸಿ 40 ಲಕ್ಷ ರೂಪಾಯಿ ಹಣ ದರೋಡೆ ಮಾಡಿದ್ದಾರೆ ಎಂದು ಇಲ್ಲಿನ ವಿಜಯಮಹಾಂತೇಶ್ವರ ಶಾಖಾ ಮಠದ ಸಿದ್ದಲಿಂಗ ಸ್ವಾಮೀಜಿ ದೂರು ನೀಡಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂಚಲನ ಮೂಡಿತ್ತು. ಮಠಕ್ಕೆ ನುಗ್ಗಿ ಹಣವನ್ನು ದರೋಡೆ ಮಾಡಿದವರನ್ನು ಬಂಧಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ದೂರು ನೀಡಿದ ಸ್ವಾಮೀಜಿಯ ಕೆಲವೊಂದು ನಡೆ ಬಗ್ಗೆ ಅನುಮಾನಗೊಂಡಿದ್ದ ಪೊಲೀಸರು ಎಫ್​ಐಆರ್​ ದಾಖಲಿಸಿ ಒಂದೇ ದಿನದಲ್ಲಿ ದರೋಡೆ ಕೇಸನ್ನು ಭೇದಿಸಿದ್ದಾರೆ.

ಇದನ್ನೂ ಓದಿ: ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಮಠಕ್ಕೆ ಭಕ್ತರು ಸಾಕಷ್ಟು ಧನ ಸಹಾಯ ಮಾಡಿದ್ದರು. ಅಂತೆಯ 40 ಲಕ್ಷ ರೂಪಾಯಿ ಮಠದಲ್ಲಿತ್ತು. ಅದನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವುದು ಸ್ವಾಮೀಜಿಯ ದುರಾಲೋಚನೆಯಾಗಿತ್ತು ಎಂಬುದು ಪೊಲೀಸರು ಪತ್ತೆ ಹಚ್ಚಿದ ಹಲವಾರು ಸಾಕ್ಷಿಗಳಿಂದ ಗೊತ್ತಾಗಿದೆ. ಹಣದ ಥೈಲಿಯನ್ನು ಬಾಚಿಕೊಳ್ಳುವುದಕ್ಕೆ ಸಜ್ಜಾಗಿದ್ದ ಸ್ವಾಮೀಜಿ ಪೊಲೀಸರ ಕೈಕೋಳಕ್ಕೆ ಕೈ ನೀಡುವ ಪರಿಸ್ಥಿತಿ ಎದುರಾಗಿದೆ.

ಪೊಲೀಸರು ಮಠ ಸೇರಿದಂತೆ ಸುತ್ತಮುತ್ತಲಿನ ಹಲವಾರು ಸಿಸಿ ಟಿವಿ ಕ್ಯಾಮೆರಾಗಳನ್ನು ವೀಕ್ಷಿಸಿದ್ದರು. ಆದರೆ ಗನ್​ ಇಟ್ಟು ಹಣ ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ ಸಮಯ ಸೇರಿದಂತೆ ಹತ್ತಿರದ ವೇಳೆಯಲ್ಲಿ ಯಾರೂ ಆ ಕಡೆಗೆ ಬಂದಿರಲಿಲ್ಲ ಹಾಗೂ ಹೋಗಿರಲಿಲ್ಲ ಎಂಬುದು ಖಾತರಿಯಾಗಿತ್ತು. ಅಂತೆಯೇ ತನಿಖೆ ಮುಂದುವರಿಸಿದಾಗ ಮಠದ ಸುತ್ತಲಿನ ಸಿಸಿ ಟಿವಿ ಕ್ಯಾಮೆರಾಗಳು ಆಫ್​ ಆಗಿರುವುದು ಗೊತ್ತಾಗಿದೆ. ಬಳಿಕ ಬೆರಳಚ್ಚು ಪರಿಣತರು ಬಂದು ಪರಿಶೀಲನೆ ನಡೆಸಿದಾಗ ಅಲ್ಲಿ ಸ್ವಾಮೀಜಿಯ ಬೆರಳಚ್ಚು ಮೂಡಿತ್ತು.

ಕ್ಯಾಮೆರಾಗಳನ್ನು ಆನ್​ – ಆಫ್​ ಮಾಡುವ ಸ್ವಿಚ್ ಮೇಲೆ ಸ್ವಾಮೀಜಿಯ ಬೆರಳಚ್ಚು ಕೊನೇ ಬಾರಿ ಮೂಡಿತ್ತು. ಹೀಗಾಗಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಆಫ್ ಮಾಡಿರುವುದು ಬೆಳಕಿಗೆ ಬಂದಿದೆ. ತನಿಖೆ ವೇಳೆ ಮಠದಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂಬುದಕ್ಕೆ ಸಾಕ್ಷಿ ಒದಗಿಸಿತ್ತು. ಹೀಗಾಗಿ ಅದು ಸ್ವಾಮೀಜಿಯ ಕಟ್ಟು ಕಥೆ ಎಂಬುದು ಗೊತ್ತಾಗಿದೆ.

ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.
ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

Continue Reading

ವೈರಲ್ ನ್ಯೂಸ್

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಬಿಹಾರದ ರಾಜೌಲಿ ಪ್ರದೇಶದಲ್ಲಿ ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ ಆತನು ಆಸ್ಪತ್ರೆಗೆ ಓಡದೆ, ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಇದಾದ ಬಳಿಕವೇ ಆತನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಹಾವು ಹಾಗೂ ವ್ಯಕ್ತಿ ನಡುವಿನ ಕಾಳಗದಲ್ಲಿ ಯಾರು ಗೆದ್ದರು? ಇಲ್ಲಿದೆ ಮಾಹಿತಿ.

VISTARANEWS.COM


on

Snake
Koo

ಪಟನಾ: ಹಾವುಗಳು (Snakes) ಎಂದರೆ ಎಲ್ಲರಿಗೂ ಭಯ ಇದ್ದೇ ಇರುತ್ತದೆ. ಸಣ್ಣ ಹಾವು ಕಚ್ಚಿದರೂ ಗಾಬರಿಯಾಗುತ್ತದೆ. ಕೂಡಲೇ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯುತ್ತೇವೆ. ಹಳ್ಳಿಯಲ್ಲಾದರೆ ಆಯುರ್ವೇದದಿಂದ ಹಾವಿನ ವಿಷಯವನ್ನು ನಿಗ್ರಹಿಸಲಾಗುತ್ತದೆ. ಅಷ್ಟರಮಟ್ಟಿಗೆ, ಹಾವು ಕಚ್ಚಿದರೆ (Snake Bite) ಗಾಬರಿ, ಆತಂಕ, ಭಯ ಆಗುತ್ತದೆ. ಆದರೆ, ಬಿಹಾರದಲ್ಲೊಬ್ಬ (Bihar) ಭೂಪನು, ತನಗೆ ಕಚ್ಚಿದ ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಎಂತಹ ಅದೃಷ್ಟ ನೋಡಿ, ಹಾವು ಕಚ್ಚಿಸಿಕೊಂಡ ವ್ಯಕ್ತಿಯು ಬದುಕುಳಿದರೆ, ಈತನಿಂದ ಕಚ್ಚಿಸಿಕೊಂಡ ಹಾವು ಸತ್ತುಹೋಗಿದೆ.

ಹೌದು, ಬಿಹಾರದ ರಾಜೌಲಿ ಪ್ರದೇಶದಲ್ಲಿ ಇಂತಹದ್ದೊಂದು ವಿಸ್ಮಯಕಾರಿ ಘಟನೆ ನಡೆದಿದೆ. ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಯು ರೈಲ್ವೆ ಲೈನ್‌ನಲ್ಲಿ ಉದ್ಯೋಗ ಮಾಡುತ್ತಿದ್ದಾನೆ. ಈತನ ದಿನದ ಕೆಲಸ ಮುಗಿಸಿ ರೌಜಲಿಯಲ್ಲಿರುವ ಕ್ಯಾಂಪ್‌ನಲ್ಲಿ ಕಳೆದ ಮಂಗಳವಾರ (ಜುಲೈ 2) ಮಲಗಿದ್ದಾನೆ. ಇದೇ ವೇಳೆ ಹಾವೊಂದು ಸಂತೋಷ್‌ ಲೋಹರ್‌ಗೆ ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ, ಆಸ್ಪತ್ರೆಗೆ ಓಡದ ಈತನು ಕಬ್ಬಿಣದ ರಾಡ್‌ನಿಂದ ಹಾವನ್ನು ಹಿಡಿದು, ಅದಕ್ಕೇ ಮೂರು ಬಾರಿ ಕಚ್ಚಿದ್ದಾನೆ. ಈತನು ಕಚ್ಚಿದ ತೀವ್ರತೆಗೆ ಹಾವೇ ಸತ್ತುಹೋಗಿದೆ.

Snake bite

ಸಂತೋಷ್‌ ಲೋಹರ್‌ನನ್ನು ಕೂಡಲೇ ಆತನ ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಈತನು ಬಹುತೇಕ ಗುಣಮುಖನಾಗಿದ್ದಾನೆ. “ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿದ ಕಾರಣ ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶೀಘ್ರದಲ್ಲೇ ಆತನನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗುವುದು” ಎಂದು ಚಿಕಿತ್ಸೆ ನೀಡಿದ ಡಾ.ಸತೀಶ್‌ ಚಂದ್ರ ಅವರು ಮಾಹಿತಿ ನೀಡಿದ್ದಾರೆ. ಈತನ ಸಾಹಸವನ್ನು ಕೇಳಿದ ಸುತ್ತಮುತ್ತಲಿನ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಂತೋಷ್‌ ಲೋಹರ್‌ನು ಹಾವಿಗೆ ವಾಪಸ್‌ ಕಚ್ಚಿದ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈತನ ಸಂದರ್ಶನವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. “ನಮ್ಮ ಊರಿನಲ್ಲಿ ಒಂದು ಮಾತಿದೆ. ನಮಗೇನಾದರೂ ಹಾವು ಕಚ್ಚಿದರೆ, ಅದಕ್ಕೆ ಎರಡು ಬಾರಿ ವಾಪಸ್‌ ಕಚ್ಚಬೇಕು ಎಂಬ ಪದ್ಧತಿ ಇದೆ. ಅದರಂತೆ, ನಾನು ಹಾವಿಗೆ ವಾಪಸ್‌ ಕಚ್ಚಿದೆ. ಇದರಿಂದ ನಾನು ಬದುಕುಳಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಈತನಿಗೆ ಕಚ್ಚಿದ ಹಾವಿನಲ್ಲಿ ವಿಷ ಇರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Continue Reading

ಪ್ರಮುಖ ಸುದ್ದಿ

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Mohammed Siraj : ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು,

VISTARANEWS.COM


on

Mohammed Siraj
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿಜಯದ ಅಭಿಯಾನದ ನಂತರ ಟೀಮ್ ಇಂಡಿಯಾ ತಾರೆಯರಿಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಗುತ್ತಿದೆ. ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅಮೋಘ ಬೆಂಬಲ ಪಡೆದುಕೊಂಡಿದ್ದ ಭಾರತ ತಂಡದ ಆಟಗಾರರು ಇದೀಗ ತಮ್ಮ ತಮ್ಮ ತವರಿಗೆ ಮರಳಿದ್ದಾರೆ. ಅವರಿಗೆ ಅಲ್ಲಿಯೂ ದೊಡ್ಡ ಮಟ್ಟ ಶ್ಲಾಘನೆ ದೊರಕಿದೆ. ವೇಗದ ಬೌಲರ್​ ಮೊಹಮ್ಮದ್ ಸಿರಾಜ್​ (Mohammed Siraj ) ಹೈದಾರಾದಬಾದ್​ನಲ್ಲಿ ಭರ್ಜರಿ ಸ್ವಾಗತ ಗಿಟ್ಟಿಸಿಕೊಂಡರು.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 7 ರನ್​ಗಳ ಭರ್ಜರಿ ಜಯ ಸಾಧಿಸಿದೆ. 11 ವರ್ಷಗಳ ಅಂತರದ ನಂತರ ಐಸಿಸಿ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಭಾರತದ ಹಲವು ವರ್ಷಗಳ ನೋವನ್ನು ಮರೆಯಿತು. ಮೆನ್ ಇನ್ ಬ್ಲೂ ತಂಡವು ಹಲವಾರು ಸಂದರ್ಭಗಳಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಸೋತಿತ್ತು. ಕೊನೆಗೂ ಅವರು ತಮ್ಮ ನಿರೀಕ್ಷೆಯನ್ನು ಮೀರಿದ್ದಾರೆ.

ತಂಡವು ಮಂಗಳವಾರ ಭಾರತಕ್ಕೆ ಇಳಿಯಬೇಕಿತ್ತು. ಬೆರಿಲ್ ಚಂಡಮಾರುತದಿಂದಾಗಿ ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​ನಿಂದ ಅವರ ನಿರ್ಗಮನವು ಎರಡು ದಿನ ವಿಳಂಬವಾಯಿತು. ಅಂತಿಮವಾಗಿ ಬುಧವಾರ ದ್ವೀಪವನ್ನು ಬಿಡುವಲ್ಲಿ ಯಶಸ್ವಿಯಾದರು. ಗುರುವಾರ ಬೆಳಿಗ್ಗೆ ಭಾರತಕ್ಕೆ ಬಂದಿಳಿದರು. ಮುಂಬೈಗೆ ತೆರಳುವ ಮೊದಲು ತಂಡವು ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಇಳಿದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಇದನ್ನೂ ಓದಿ: Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು, ಭಾರತ ತಂಡ ಮತ್ತು ಅಭಿಮಾನಿಗಳು ಒಟ್ಟಾಗಿ ಸ್ಮರಣೀಯ ವಿಜಯವನ್ನು ಆಚರಿಸಿದರು. ಬಿಸಿಸಿಐನಿಂದ ಸನ್ಮಾನಿಸಲ್ಪಡುವ ಮೊದಲು ಆಟಗಾರರು ಪ್ರೇಕ್ಷಕರೊಂದಿಗೆ ನೃತ್ಯ ಮಾಡಿದರು.

ಮೊಹಮ್ಮದ್ ಸಿರಾಜ್​​ಗೆ ಹೈದರಾಬಾದ್ ಸ್ವಾಗತ

ಗುರುವಾರ ಮುಂಬೈನಲ್ಲಿ ವಿಜಯೋತ್ಸವದ ನಂತರ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಶುಕ್ರವಾರ ಸಂಜೆ ತಮ್ಮ ತವರು ಪಟ್ಟಣ ಹೈದರಾಬಾದ್​ಗೆ ಬಂದಿಳಿದರು. ನಿರೀಕ್ಷೆಯಂತೆ, ವಿಮಾನ ನಿಲ್ದಾಣದ ಹೊರಗೆ ಭಾರಿ ಜನಸಮೂಹ ಅವರಿಗಾಗಿ ಕಾಯುತ್ತಿತ್ತು. ಅಭಿಮಾನಿಗಳು ತಮ್ಮ ತವರು ಆಟಗಾರನನ್ನು ಸ್ವಾಗತಿಸುತ್ತಿದ್ದಂತೆ ಎಲ್ಲೆಡೆ ‘ಇಂಡಿಯಾ, ಇಂಡಿಯಅ ‘ ಘೋಷಣೆಗಳು ಮೊಳಗಿದವು.

ಮೊಹಮ್ಮದ್ ಸಿರಾಜ್ ಟಿ 20 ವಿಶ್ವಕಪ್​​ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದಾರೆ. ಪಂದ್ಯಾವಳಿಯ ಯುಎಸ್ಎ ಲೆಗ್ ಮುಗಿದ ಕೂಡಲೇ ಕುಲ್ದೀಪ್ ಯಾದವ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಲಾಗಿದೆ. ಕೆರಿಬಿಯನ್ ಪರಿಸ್ಥಿತಿಗಳು ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ, ಸಿರಾಜ್ ಬದಲಿಗೆ ಕುಲ್ದೀಪ್ ಅವರನ್ನು ತಂಡಕ್ಕೆ ಕರೆತಂದಿತು.

ಐದು ಪಂದ್ಯಗಳಲ್ಲಿ ಕುಲ್ದೀಪ್ 10 ವಿಕೆಟ್​ಗಳನ್ನು ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಿರಾಜ್ 3 ಪಂದ್ಯಗಳಲ್ಲಿ 1 ವಿಕೆಟ್ ಪಡೆದಿದ್ದರು. .

Continue Reading

ವಿದೇಶ

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Akshata Murty: ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ದೇಶದ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ, ಅವರ ಹಿಂದೆ ನಿಂತಿದ್ದ ಪತ್ನಿ ಅಕ್ಷತಾ ಮೂರ್ತಿ ಅವರು ಧರಿಸಿದ್ದ ಡ್ರೆಸ್‌ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Akshata Murty
Koo

ಲಂಡನ್:‌ ಬ್ರಿಟನ್‌ ಸಾರ್ವತ್ರಿಕ ಚುನಾವಣೆಯ (Britain Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ರಾಜೀನಾಮೆ ನೀಡಿ, ವಿದಾಯದ ಭಾಷಣ ಮಾಡುವಾಗ ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ಅವರು ಧರಿಸಿದ್ದ ಡ್ರೆಸ್‌ ಹಾಗೂ ಅದರ ಮೌಲ್ಯದ ಕುರಿತು ಭಾರಿ ಚರ್ಚೆ ಶುರುವಾಗಿದೆ.

ಚುನಾವಣೆಯಲ್ಲಿ ಹಿನ್ನಡೆಯಾಗುತ್ತಲೇ ದೇಶದ ಜನರನ್ನು ಉದ್ದೇಶಿಸಿ ರಿಷಿ ಸುನಕ್‌ ಮಾತನಾಡಿದರು. “ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ” ಎಂದು ಅವರು ಹೇಳಿದರು. ಇದೇ ವೇಳೆ, ಅವರ ಹಿಂದೆ ಅಕ್ಷತಾ ಮೂರ್ತಿ ಅವರು ನಿಂತಿದ್ದರು. ಅಷ್ಟೇ ಅಲ್ಲ, ಅಕ್ಷತಾ ಮೂರ್ತಿ ಅವರು ಧರಿಸಿದ್ದ, ಇಂಡಿಯನ್‌ ಲೇಬಲ್‌ನ ಡ್ರೆಸ್‌ ಕುರಿತು ಭಾರಿ ಚರ್ಚೆಯಾಗುತ್ತಿದೆ. ಬ್ರಿಟನ್‌ ರಾಷ್ಟ್ರಧ್ವಜದಲ್ಲಿರುವ ನೀಲಿ, ಕೆಂಪು ಹಾಗೂ ವೈಟ್‌ ಪಟ್ಟಿಗಳು ಇರುವ, ಹೈ ನೆಕ್ಡ್‌ ಆಗಿರುವ ಡ್ರೆಸ್‌ಅನ್ನು ಅಕ್ಷತಾ ಮೂರ್ತಿ ಧರಿಸಿದ್ದು, ಇದರ ಬೆಲೆ 42 ಸಾವಿರ ರೂ. ಇದೆ ಎಂದು ತಿಳಿದುಬಂದಿದೆ.

ಬ್ರಿಟನ್‌ ಪ್ರಧಾನಿಯಾಗಿ ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌ ಆಯ್ಕೆಯಾಗಿದ್ದಾರೆ. ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ದೇಶದ ಜನರ ಸೇವೆ ಮಾಡುವುದೇ ನಮಗೆ ಭಾಗ್ಯವಾಗಿದೆ. ನೀವು ಲೇಬರ್‌ ಪಕ್ಷಕ್ಕೆ ಮತ ಹಾಕಿದ್ದೀರೋ, ಬಿಟ್ಟಿದ್ದೀರೋ ಅದು ಬೇಕಾಗಿಲ್ಲ. ದೇಶದ ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ರಾಜಕೀಯ ಎಂದರೆ ಉತ್ತಮ ಆಡಳಿತ ನೀಡುವುದು, ರಾಜಕೀಯವನ್ನು ಸಕಾರಾತ್ಮಕ ಸಂಗತಿಗಾಗಿ ಬಳಸಿಕೊಳ್ಳುತ್ತೇವೆ. ಮತಗಳನ್ನು ನೀಡಿ ಗೆಲ್ಲಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು. ಕೀರ್‌ ಸ್ಟಾರ್ಮರ್‌ ಅವರು ನಿರ್ಗಮಿತ ಪ್ರಧಾನಿ ರಿಷಿ ಸುನಕ್‌ ಅವರ ಆಡಳಿತವನ್ನೂ ಹೊಗಳಿದ್ದು ವಿಶೇಷವಾಗಿತ್ತು.

ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ಅವರು ಆಯ್ಕೆಯಾಗುತ್ತಲೇ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಬ್ರಿಟನ್‌ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ-ಬ್ರಿಟನ್‌ ಒಗ್ಗೂಡಿ, ಸಂಬಂಧವನ್ನು ವೃದ್ಧಿಸಿಕೊಂಡು ಉಭಯ ದೇಶಗಳ ಏಳಿಗೆಗೆ ಶ್ರಮಿಸುವ ವಿಶ್ವಾಸವಿದೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಇದುವರೆಗೆ ಆಡಳಿತ ನಡೆಸಿದ, ಭಾರತದ ಮೂಲದ ರಿಷಿ ಸುನಕ್‌ ಅವರ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Continue Reading
Advertisement
Cheating Case
ಪ್ರಮುಖ ಸುದ್ದಿ2 hours ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Snake
ವೈರಲ್ ನ್ಯೂಸ್2 hours ago

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

Mohammed Siraj
ಪ್ರಮುಖ ಸುದ್ದಿ2 hours ago

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Akshata Murty
ವಿದೇಶ3 hours ago

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Hardik Pandya
ಪ್ರಮುಖ ಸುದ್ದಿ3 hours ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ4 hours ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ4 hours ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ4 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ5 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ5 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ8 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ10 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ10 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ12 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ13 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು15 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು15 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ20 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌