PM SVANidhi : ಬೀದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಯೋಜನೆಯಲ್ಲಿ ಎಷ್ಟು ಸಾಲ ಸಿಗುತ್ತೆ? - Vistara News

ವಾಣಿಜ್ಯ

PM SVANidhi : ಬೀದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಯೋಜನೆಯಲ್ಲಿ ಎಷ್ಟು ಸಾಲ ಸಿಗುತ್ತೆ?

ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ಬದಿಯ ವ್ಯಾಪಾರಿಗಳು ಕಡಿಮೆ ಬಡ್ಡಿಗೆ ಸಾಲ (PM SVANidhi) ಪಡೆಯಬಹುದು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

loan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಧಾನ ಮಂತ್ರಿ ಸ್ಟ್ರೀಟ್‌ ವೆಂಡರ್ಸ್‌ ಆತ್ಮನಿರ್ಭರ್‌ ನಿಧಿ ಅಥವಾ ಪಿಎಂ ಸ್ವನಿಧಿ (PM SVANidhi ) ಯೋಜನೆಯ ಬಗ್ಗೆ ನೀವು ಕೇಳಿರಬಹುದು. ಬೀದಿ ಬದಿಯ ಸಣ್ಣ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 50,000 ರೂ. ತನಕ ಸಾಲವನ್ನು ವಿತರಿಸಲು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆ ಇದಾಗಿದೆ. ಈ ಯೋಜನೆಯ ಅಡಿಯಲ್ಲಿ ಫಸ್ಟ್‌ ಟರ್ಮ್‌ ಲೋನ್‌ ವಿಭಾಗದಲ್ಲಿ ಇದುವರೆಗೆ 76,78,830 ಅರ್ಹ ಅರ್ಜಿಗಳನ್ನು ಸ್ವೀಕರಿಸಲಾಗಿದೆ. 60,03,816 ಪ್ರಕರಣಗಳಲ್ಲಿ ಸಾಲ ವಿತರಿಸಲಾಗಿದೆ.

ಏನಿದು ಪಿಎಂ ಸ್ವನಿಧಿ ಯೋಜನೆ: ಬೀದಿ ಬದಿ ವ್ಯಾಪಾರಿಗಳಿಗೆ ಬಂಡವಾಳ ನೆರವು ನೀಡುವ ಸಲುವಾಗಿ ಇರುವ ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆ. ಲಾಕ್‌ ಡೌನ್‌ ಸಂದರ್ಭ ಸಂಕಷ್ಟಕ್ಕೀಡಾಗಿದ್ದ ರಸ್ತೆ ಬದಿ ವ್ಯಾಪಾರಿಗಳ ನೆರವಿಗೆ ಇದನ್ನು ಆರಂಭಿಸಲಾಗಿದ್ದು, ಮುಂದುವರಿದಿದೆ. ಆರಂಭಿಕ ಹಂತದಲ್ಲಿ 10,000 ರೂ. ಸಾಲ ನೀಡಲಾಗುವುದು. ಬಳಿಕ 50,000 ರೂ. ತನಕ ವಿಸ್ತರಿಸಲು ಅವಕಾಶ ಇದೆ. ಸ್ವನಿಧಿ ಸಾಲಕ್ಕೆ ಬಡ್ಡಿ ದರ 7% ಆಗಿರುತ್ತದೆ. ಸಕಾಲಕ್ಕೆ ಸಾಲ ಮರು ಪಾವತಿಸುವವರಿಗೆ ಹೆಚ್ಚಿನ ಸಾಲಕ್ಕೆ ಅರ್ಹತೆಯಾಗುತ್ತದೆ.

ಪಿಎಂ ಸ್ವನಿಧಿ ಯೋಜನೆಯಡಿ ಸಾಲ ಪಡೆಯಲು ಬೀದಿ ವ್ಯಾಪಾರಿಗಳು ಯಾವುದೇ ಅಡಮಾನ ಇಡಬೇಕಾಗಿರುವುದಿಲ್ಲ. ಮೊದಲ 10,000 ರೂ. ಸಾಲದ ಮರು ಪಾವತಿಗೆ ಒಂದು ವರ್ಷ ಅವಧಿ ಇರುತ್ತದೆ. ನಿರ್ದಿಷ್ಟ ಸಂಖ್ಯೆಯಲ್ಲಿ ಡಿಜಿಟಲ್‌ ಟ್ರಾನ್ಸಕ್ಷನ್‌ ಮಾಡುವವರಿಗೆ 100 ರೂ. ತನಕ ಕ್ಯಾಶ್‌ ಬ್ಯಾಕ್‌ ಇರುತ್ತದೆ. ಮೊದಲ ಸಾಲವನ್ನು ಸಕಾಲಕ್ಕೆ ಮರು ಪಾವತಿಸುವವರು 20,000 ರೂ. ಹಾಗೂ ಬಳಿಕ 50,000 ರೂ. ಸಾಲ ಪಡೆಯುವ ಅರ್ಹತೆಯನ್ನು ಗಳಿಸುತ್ತಾರೆ.

ಬೀದಿ ಬದಿಯ ವ್ಯಾಪಾರಿಗಳು ಸ್ಥಳೀಯ ಆಡಳಿತ ಸಂಸ್ಥೆಗಳು ನೀಡಿರುವ ಐಡೆಂಟಿಟಿ ಕಾರ್ಡ್‌ ಅನ್ನು ಹೊಂದಿರಬೇಕು. ಸ್ಥಳೀಯಾಡಳಿತದ ಸರ್ವೇನಲ್ಲಿ ಗುರುತಿಸಿಕೊಂಡಿರಬೇಕು.

ರಸ್ತೆ ಬದಿಯಲ್ಲಿ ತರಕಾರಿ, ಹಣ್ಣು ಹಂಪಲು, ದಿನೋಪಯೋಗಿ ವಸ್ತುಗಳು, ಆಟಿಕೆಗಳು, ರೆಡಿಮೇಡ್‌ ವಸ್ತುಗಳು, ಬಟ್ಟೆ ಬರೆಗಳು, ಬ್ರೆಡ್‌, ಮೊಟ್ಟೆ, ಪುಸ್ತಕ, ಪೆನ್ನು ಇತ್ಯಾದಿಗಳನ್ನು ಮಾರಾಟ ಮಾಡುವವರು, ತಳ್ಳುವ ಗಾಡಿಯನ್ನು ಇಟ್ಟು ರಸ್ತೆ ಪಕ್ಕ ಮಾರಾಟ ಮಾಡುವವರು, ಪಾನ್‌ ಶಾಪ್‌ನವರು, ರಸ್ತೆ ಬದಿಯ ಸಲೂನ್‌ಗಳನ್ನು ನಡೆಸುವವರು, ರಸ್ತೆ ಬದಿ ಅಂಗಡಿಯಲ್ಲಿ ಇಸ್ತ್ರಿ ಹಾಕುವರು ಈ ಸಾಲ ಪಡೆಯಬಹುದು.

ಇದನ್ನೂ ಓದಿ: Money plus : ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ನಲ್ಲಿ ಯಾಕೆ ಹೂಡಬೇಕು?

ಸಾರ್ವಜನಿಕ-ಖಾಸಗಿ ಬ್ಯಾಂಕ್‌ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು, ಕಿರು ಹಣಕಾಸು ಬ್ಯಾಂಕ್‌ಗಳು, ಕೋಪರೇಟಿವ್‌ ಬ್ಯಾಂಕ್‌ಗಳು, ಎನ್‌ಬಿಎಫ್‌ಸಿಗಳು, ಎಸ್‌ಎಚ್‌ಜಿ ಬ್ಯಾಂಕ್‌ಗಳು ಸಾಲ ವಿತರಿಸಬಹುದು. ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಾಹನ ಚಾಲನಾ ತರಬೇತಿ, ನರೇಗಾ ಕಾರ್ಡ್‌, ಪ್ಯಾನ್‌ ಕಾರ್ಡ್‌ ಇವುಗಳಲ್ಲಿ ಕೆಲ ದಾಖಲೆಗಳು ಇದ್ದರೆ ಸಾಕು. ಆಧಾರ್‌ ಮತ್ತು ವೋಟರ್‌ ಐಡಿ ಕಡ್ಡಾಯವಾಗಿ ಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

Share Market: ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಇದು ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಗೆ ಹಿಡಿದ ಕನ್ನಡಿ ಎಂದೇ ವಿಶ್ಲೇಷಿಸಲಾಗುತಿದೆ.

VISTARANEWS.COM


on

Share Market
Koo

ಮುಂಬೈ: “ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರಂದು ಭಾರತದ ಷೇರು ಮಾರುಕಟ್ಟೆಯು (Share Market) ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಇದೇ ಮಾತು ಹೇಳಿದ್ದಾರೆ. ಇದರ ಮಧ್ಯೆಯೇ, ಗುರುವಾರ (ಮೇ 23) ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಯ ಸಂಕೇತವಾಗಿಯೇ ಷೇರು ಮಾರುಕಟ್ಟೆಯು ದಾಖಲೆ ಬರೆದಿದೆ ಎಂದೇ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

“ನಿಫ್ಟಿಯು ದಾಖಲೆಯ ಏರಿಕೆ ಕಾಣುವ ಮೂಲಕ ಚುನಾವಣೆ ನಂತರದಲ್ಲಿ ದೇಶದಲ್ಲಿ ರಾಜಕೀಯ ಸ್ಥಿರತೆ ಇರುತ್ತದೆ ಎಂಬ ಸಂದೇಶ ರವಾನಿಸಿದೆ. ಅತಿ ಹೆಚ್ಚಿನ ಹಣ ಹೂಡಿಕೆ ಮಾಡುವವರು ಸೇರಿ ಎಲ್ಲರಿಗೂ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಜಿಯೋಜೀತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ರಣತಂತ್ರಗಾರ ವಿ.ಕೆ.ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ದಿನ ಷೇರು ಪೇಟೆಯಲ್ಲಿ ಲವಲವಿಕೆ ಇದ್ದೇ ಇರುತ್ತದೆ. ಆದರೆ, ಜೂನ್‌ 4ರಂದು ಇತಿಹಾಸ ಸೃಷ್ಟಿಯಾಗುತ್ತದೆ ಎಂದು ಹೇಳುತ್ತಿರುವುದು ಹೂಡಿಕೆದಾರರ ಖುಷಿ ಹೆಚ್ಚಿಸಿದೆ.

Share Market

ಕೇಂದ್ರಕ್ಕೆ ಆರ್‌ಬಿಐ ಲಾಭಾಂಶದ ಕೊಡುಗೆ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.10 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಷೇರು ಮಾರುಕಟ್ಟೆ ಬಗ್ಗೆ ಮೋದಿ ಹೇಳಿದ್ದೇನು?

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಮನಿ-ಗೈಡ್

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಭವಿಷ್ಯಕ್ಕಾಗಿ ಹೂಡಿಕೆ ಮಾಡಬೇಕು ಎನ್ನುವುದು ಬಹುತೇಕರ ಆಗ್ರಹ. ಆದರೆ ಯಾವ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಎನ್ನವ ಬಗ್ಗೆ ಗೊಂದಲ ಮೂಡುತ್ತದೆ. ಇಲ್ಲಿ ನಾವು ನಿಮಗೆ ಪರಿಚಯಿಸುವ ಯೋಜನೆ ಸರ್ಕಾರಿ ಬೆಂಬಲಿತ ಪ್ಲಾನ್‌ ಆಗಿದ್ದು, ಇಲ್ಲಿ ಹೂಡಿಕೆ ಮಾಡುವುದರಿಂದ ಯಾವುದೇ ಆತಂಕವಿಲ್ಲ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು 1 ಕೋಟಿ ರೂ.ಗಿಂತ ಹೆಚ್ಚು ಸಂಗ್ರಹಿಸಬಹುದು. ಹಾಗಾದರೆ ಇದು ಯಾವ ಯೋಜನೆ? ಯಾರೆಲ್ಲ ಹೂಡಿಕೆ ಮಾಡಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ, ದುಬಾರಿ ಜೀವನ ಶೈಲಿಯಿಂದಾಗಿ ಹಣಕಾಸಿನ ವಿಚಾರದಲ್ಲಿ ಎಲ್ಲರೂ ಎಚ್ಚರಿಕೆ ವಹಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಉಳಿತಾಯ ಮಾಡುವತ್ತ ಗಮನ ಹರಿಸಬೇಕು ಎನ್ನುವುದು ಆರ್ಥಿಕ ತಜ್ಞರ ಸಲಹೆ. ಹಾಗಾದರೆ ಉಳಿತಾಯ, ನಿವೃತ್ತಿ ಯೋಜನೆಗಳಲ್ಲಿ ಹೂಡಿಕೆ ಮಾಡುವುದಾದರೆ ಯಾವುದು ಉತ್ತಮ? ಎನ್ನುವ ಪ್ರಶ್ನೆ ಸಹಜವಾಗಿ ಎದುರಾಗುತ್ತದೆ. ಇದಕ್ಕೆ ತಜ್ಞರು ನೀಡುವ ಉತ್ತರ ಸಾರ್ವಜನಿಕ ಭವಿಷ್ಯ ನಿಧಿ (Public Provident Fund). ಇದು ಕೇಂದ್ರ ಸರ್ಕಾರ ಬೆಂಬಲಿತ ಪ್ಲಾನ್‌ ಆಗಿದ್ದು, ಸಣ್ಣ ಹೂಡಿಕೆದಾರರು ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸರ್ಕಾರಿ ಬೆಂಬಲಿತ ಪ್ಲಾನ್‌ ಆದ ಕಾರಣ ಇಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಅಲ್ಲ ಎನ್ನುವುದು ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ಪಿಪಿಎಫ್‌ ಖಾತೆ ತೆರೆಯುವವರಿಗೆ ವಾರ್ಷಿಕ ಶೇ. 7.1ರಷ್ಟು ಬಡ್ಡಿ ದೊರೆಯಲಿದೆ. ಅಲ್ಲದೆ ಈ ಹೂಡಿಕೆಯ ಮೂಲಕ ಸಾಲವನ್ನೂ ಪಡೆಯಬಹುದು. ಜತೆಗೆ ತೆರಿಗೆ ವಿನಾಯಿತಿಯೂ ಲಭಿಸುತ್ತದೆ. ವಿಶೇಷ ಎಂದರೆ ನಿಯತಕಾಲಿಕ ಹೂಡಿಕೆಗಳು ಮತ್ತು ಸಂಯೋಜನೆಯ ಮೂಲಕ ನೀವು ಪಿಪಿಎಫ್‌ನಿಂದ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Money Guide).

1 ಕೋಟಿ ರೂ. ಪಡೆಯುವ ವಿಧಾನ

ಹೂಡಿಕೆ ಅವಧಿಒಟ್ಟು ಪಿಪಿಎಫ್‌
ಹೂಡಿಕೆ
ಒಟ್ಟು ಬಡ್ಡಿಮೆಚ್ಯೂರಿಟಿ ಮೊತ್ತ
15 ವರ್ಷ1.5 ಲಕ್ಷ ರೂ.18.18 ಲಕ್ಷ ರೂ.40.68 ಲಕ್ಷ ರೂ.
20 ವರ್ಷ1.5 ಲಕ್ಷ ರೂ.36.58 ಲಕ್ಷ ರೂ.66.58 ಲಕ್ಷ ರೂ.
30 ವರ್ಷ1.5 ಲಕ್ಷ ರೂ.1.09 ಕೋಟಿ ರೂ.1.54 ಕೋಟಿ ರೂ.

ವಿವಿಧ ಅವಧಿಗಳಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂ. ಹೂಡಿಕೆ ಮಾಡುವ ಮೂಲಕ ನಿಮ್ಮ ಮೆಚ್ಯೂರಿಟಿ ಮೊತ್ತವು 40 ಲಕ್ಷ ರೂ.ಯಿಂದ 1.5 ಕೋಟಿ ರೂ.ಗೆ ಹೇಗೆ ಬೆಳೆಯಬಹುದು ಎಂಬುದನ್ನು ಮೇಲಿನ ಉದಾಹರಣೆ ವಿವರಿಸುತ್ತದೆ.

ತೆರಿಗೆ ವಿನಾಯಿತಿ

ಇನ್ನು ಸೆಕ್ಷನ್‌ 80 ಸಿ ಅಡಿಯಲ್ಲಿ 1.5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಸಿಗಲಿದೆ. ಅಂದರೆ ಯೋಜನೆಯಲ್ಲಿ ಮಾಡಿದ ಸಂಪೂರ್ಣ ಹೂಡಿಕೆಯ ಮೇಲೆ ತೆರಿಗೆ ವಿನಾಯಿತಿಯ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಇದಲ್ಲದೆ, ಹೂಡಿಕೆಯಿಂದ ಪಡೆದ ಬಡ್ಡಿಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಅಲ್ಲದೆ ಯೋಜನೆ ಮುಕ್ತಾಯವಾದ ಬಳಿಕ ಪಡೆದಯುವ ಮೊತ್ತವೂ ತೆರಿಗೆಮುಕ್ತವಾಗಿರುತ್ತದೆ.

ಸಾಲ ಪಡೆಯಲಿರುವ ಅರ್ಹತೆ

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ನಲ್ಲಿ ನೀವು ಮಾಡುವ ಇನ್ವೆಸ್ಟ್‌ಮೆಂಟ್‌ ಮೇಲೆ ಸಾಲ ಪಡೆಯಬಹುದು. ಖಾತೆ ತೆರೆದ 3-6ನೇ ವರ್ಷದಲ್ಲಿ ಸಾಲ ಪಡೆಯಲು ನೀವು ಅರ್ಹರಾಗಿರುತ್ತೀರಿ. ಇಂಥ ಸಾಲದ ಗರಿಷ್ಠ ಅವಧಿ 36 ತಿಂಗಳು. ಅಕೌಂಟ್‌ನಲ್ಲಿರುವ ಮೊತ್ತದ 25% ಅಥವಾ ಕಡಿಮೆ ಮೊತ್ತವನ್ನು ಮಾತ್ರ ಸಾಲಕ್ಕಾಗಿ ಕ್ಲೈಮ್‌ ಮಾಡಿಕೊಳ್ಳಬಹುದು.‌

ಯಾರೆಲ್ಲ ತೆರೆಯಬಹುದು?

ಭಾರತೀಯ ನಾಗರಿಕರು ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಖಾತೆ ತೆರೆಯುವ ಸೌಕರ್ಯವಿದೆ. ಅನಿವಾಸಿ ಭಾರತೀಯರು ಹೊಸ ಪಿಪಿಎಫ್‌ ಅಕೌಂಟ್‌ ತೆರೆಯುವಂತಿಲ್ಲ. ಹೀಗಿದ್ದರೂ ಈಗಾಗಲೇ ಇದ್ದರೆ ಅದು ಪೂರ್ಣವಾಗುವ ತನಕ ಸಕ್ರಿಯವಾಗಿರುತ್ತದೆ. ಆದರೆ 5 ವರ್ಷಗಳ ಹೆಚ್ಚುವರಿ ಅವಧಿ ಇರುವುದಿಲ್ಲ. ಈ ಯೋಜನೆಯಲ್ಲಿ ನೀವು ವರ್ಷಕ್ಕೆ ಕನಿಷ್ಠ 500 ರೂ ಮತ್ತು ಗರಿಷ್ಠ 1.5 ಲಕ್ಷ ರೂ.ಗಳನ್ನು ಹೂಡಿಕೆ ಮಾಡಬಹುದು. ಒಂದು ಹಣಕಾಸು ವರ್ಷದಲ್ಲಿ ನೀವು ಗರಿಷ್ಠ 12 ಕಂತುಗಳಲ್ಲಿ ಹಣವನ್ನು ಠೇವಣಿ ಇಡುವ ಸೌಲಭ್ಯವೂ ಇದೆ. ಆಫ್‌ಲೈನ್‌ ಹಾಗೂ ಆನ್‌ಲೈನ್‌ ವಿಧಾನದಲ್ಲಿ ಪಿಪಿಎಫ್‌ ಖಾತೆಯನ್ನು ತೆರೆಯಬಹುದು. 

ಇದನ್ನೂ ಓದಿ: Money Guide: ತೆರಿಗೆ ವಿನಾಯಿತಿ ಪಡೆಯಬೇಕೆ? ಮಾ. 31ರೊಳಗೆ ಪಿಪಿಎಫ್‌ನಲ್ಲಿ ಹೂಡಿಕೆ ಮಾಡಿ

Continue Reading

ವಾಣಿಜ್ಯ

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Highest Paid CEO: 2024ರ ಹಣಕಾಸು ವರ್ಷದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಐಟಿ ಸಿಇಒ ವಿಪ್ರೊದ ಥಿಯೆರ್ರಿ ಡೆಲಾಪೋರ್ಟೆ ಅವರು ಏಪ್ರಿಲ್ 6ರಂದು ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ 32 ವರ್ಷಗಳ ಕಾಲ ಅನುಭವಿ ಶ್ರೀನಿವಾಸ್ ಪಾಲ್ಲಿಯಾ ಅವರನ್ನು
ನೇಮಿಸಲಾಗಿದೆ. ಬೃಹತ್‌ ಐಟಿ ಕಂಪನಿಗಳ ಸಿಇಒಗಳು ಹೆಚ್ಚು ಸಂಬಳ ಪಡೆಯುತ್ತಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Highest Paid CEO
Koo

ವಿಪ್ರೋದ (Wipro) ಮಾಜಿ ಸಿಇಒ (ex-ceo) ಮತ್ತು ಆಡಳಿತ ನಿರ್ದೇಶಕ ಥಿಯೆರ್ರಿ ಡೆಲಾಪೋರ್ಟೆ (Thierry Delaporte) ಅವರು 20 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 166 ಕೋಟಿ ರೂ. ಗಳಿಸಿ ಸತತ ಎರಡನೇ ವರ್ಷ ಐಟಿ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ (Highest Paid CEO) ಪಡೆಯುವ ಸಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಥಿಯೆರಿ ಡೆಲಾಪೋರ್ಟೆ ಅವರು ಏಪ್ರಿಲ್‌ 6ರಂದು ಕಂಪನಿಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಕಂಪನಿಯು 32 ವರ್ಷಗಳ ಕಾಲ ಅನುಭವ ಹೊಂದಿರುವ ಶ್ರೀನಿವಾಸ್ ಪಾಲ್ಲಿಯಾ ಅವರನ್ನು ನೇಮಕ ಮಾಡಿದೆ. ಯುಎಸ್ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಕಮಿಷನ್‌ಗೆ ವಿಪ್ರೊ ಸಲ್ಲಿಸಿರುವ 20 ಎಫ್ ಫೈಲಿಂಗ್‌ಗಳ ಪ್ರಕಾರ ಡೆಲಾಪೋರ್ಟೆ 3.9 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಸಂಬಳ ಮತ್ತು ಭತ್ಯೆ, 5 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಕಮಿಷನ್/ ವೇರಿಯಬಲ್ ಪೇ, ಸುಮಾರು 7 ಮಿಲಿಯನ್ ಡಾಲರ್ ಇತರ ಮತ್ತು 4 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ದೀರ್ಘಾವಧಿಯ ಪರಿಹಾರವನ್ನು ಗಳಿಸಿದ್ದಾರೆ.

ಶ್ರೀನಿವಾಸ್ ಪಲ್ಲಿಯಾ ಅವರು ಸುಮಾರು 50 ಕೋಟಿ ರೂಪಾಯಿಗಳ ವಾರ್ಷಿಕ ಸಂಭಾವನೆ ಪ್ಯಾಕೇಜ್‌ ಸ್ವೀಕರಿಸಿದ್ದಾರೆ. ಇದರಿಂದ ಅವರು ಆರ್ಥಿಕ ವರ್ಷ 2025ರಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಎರಡನೇ ಸಿಇಒ ಆಗಿದ್ದಾರೆ. ಕಂಪನಿಯ ಆದಾಯವು ಇಳಿಮುಖವಾಗುತ್ತಿರುವ ಹೊತ್ತಲ್ಲಿ ಹೊಸ ಸಿಇಒ ನೇಮಕ ವೇತನದ ನಡುವಿನ ಅಸಮಾನತೆಯನ್ನು ಹೆಚ್ಚಿಸಿದೆ. ಸಿಇಒ ವೇತನವು ಸತತ ಎರಡನೇ ವರ್ಷಕ್ಕೆ ಹೆಚ್ಚಾಗಿದೆ.

ಮತ್ತೊಂದೆಡೆ ವಿಪ್ರೋ ಕಾರ್ಯನಿರ್ವಾಹಕ ಅಧ್ಯಕ್ಷ ರಿಶಾದ್ ಪ್ರೇಮ್‌ಜಿ ಅವರು ಹೆಚ್ಚುತ್ತಿರುವ ಏಕೀಕೃತ ನಿವ್ವಳ ಲಾಭದ ಮೇಲೆ ಶೇ. 0.35ರಷ್ಟು ಕಮಿಷನ್‌ಗೆ ಅರ್ಹರಾಗಿದ್ದಾರೆ. ಕಂಪನಿಯ ಹಣಕಾಸಿನ ವರ್ಷದಲ್ಲಿ ನಷ್ಟವನ್ನು ಅನುಭವಿಸಿದ ಕಾರಣ ಅದನ್ನು ತಡೆಹಿಡಿಯಲಾಗಿದೆ.

ಕಂಪನಿಯ ಆದಾಯ ಇಳಿಕೆ

ಆರ್ಥಿಕ ವರ್ಷ 2024ರ ಪೂರ್ಣ ವರ್ಷದಲ್ಲಿ ವಿಪ್ರೋ ಆದಾಯವು ವರ್ಷಕ್ಕೆ 90,486 ಕೋಟಿಗಳಿಂದ 89,760 ಕೋಟಿಗೆ ಇಳಿದಿದೆ.

ಅತಿ ಹೆಚ್ಚು ವಾರ್ಷಿಕ ಸಂಭಾವನೆ

2023- 24ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರು ವಾರ್ಷಿಕ ಸಂಭಾವನೆ ಪ್ಯಾಕೇಜ್‌ನಲ್ಲಿ 56 ಕೋಟಿ ರೂ. ಆಗಿದೆ. ಎಚ್‌ಸಿಎಲ್‌ಟೆಕ್‌ನ ಸಿ ವಿಜಯಕುಮಾರ್, 28.4 ಕೋಟಿ ರೂ. ಗಳಿಸಿದ್ದಾರೆ. L&T ಮತ್ತು Mindtree ವಿಲೀನದ ಅನಂತರ ನವೆಂಬರ್ 2022 ರಲ್ಲಿ ಚುಕ್ಕಾಣಿ ಹಿಡಿದ ಅದರ ಸಿಇಒ ದೇಬಾಶಿಸ್ ಚಟರ್ಜಿ ಆರ್ಥಿಕ ವರ್ಷ 22-23ರಲ್ಲಿ 17.5 ಕೋಟಿ ರೂ. ಗಳಿಸಿದ್ದಾರೆ.

ಇದನ್ನೂ ಓದಿ: Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

ಟೆಕ್ ಮಹೀಂದ್ರಾದ ಮೋಹಿತ್ ಜೋಶಿ ಅವರು ವಾರ್ಷಿಕವಾಗಿ 6.5 ಕೋಟಿ ರೂಪಾಯಿಗಳ ವೇತನ ಪಡೆಯುತ್ತಾರೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು 2024ರಲ್ಲಿ ವಾರ್ಷಿಕ ಪರಿಹಾರದಲ್ಲಿ 25.36 ಕೋಟಿ ರೂ. ಗಳನ್ನು ಪಡೆದರು.

2024ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ ಡೆಲಾಪೋರ್ಟೆ ಅವರಿಗೆ ನೀಡಿದ ಪರಿಹಾರವು 9,89,130 ಅನ್ವೆಸ್ಟೆಡ್ ಸ್ಟಾಕ್ ಆಯ್ಕೆ ಮತ್ತು 4.33 ಮಿಲಿಯನ್ ಡಾಲರ್ ಮೊತ್ತದ ನಗದು ಪರಿಹಾರವನ್ನು ಒಳಗೊಂಡಿದೆ.

Continue Reading

ದೇಶ

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Share Market: ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

VISTARANEWS.COM


on

Share Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Share Market) ಗುರುವಾರ (ಮೇ 23) ಹೂಡಿಕೆದಾರರಿಗೆ ಭಾರಿ ಲಾಭವಾಗಿದೆ. ನಿಫ್ಟಿ (Nifty) 303 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 22,900 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿ 986 ಅಂಕಗಳ ಏರಿಕೆಯೊಂದಿಗೆ 75,206 ಪಾಯಿಂಟ್ಸ್‌ ತಲುಪುವ ಮೂಲಕ ದಾಖಲೆ ಸೃಷ್ಟಿಸಿತು. ಸೆನ್ಸೆಕ್ಸ್‌ (Sensex) ಶೇ.1.33ರಷ್ಟು ಏರಿಕೆಯಾದರೆ, ನಿಫ್ಟಿ ಕೂಡ ಶೇ.1.33ರಷ್ಟು ಏರಿಕೆಯಾಯಿತು. ನಿಫ್ಟಿ ಮಿಡ್‌ಕ್ಯಾಪ್‌ ಇಂಡೆಕ್ಸ್‌ ಕೂಡ 238 ಪಾಯಿಂಟ್‌ಗಳ ಏರಿಕೆಯೊಂದಿಗೆ 52,405 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿಯ ಸ್ಮಾಲ್‌ಕ್ಯಾಪ್‌ ಕೂಡ 27 ಅಂಕಗಳ ಏರಿಕೆಯೊಂದಿಗೆ 16,909 ಪಾಯಿಂಟ್ಸ್‌ ತಲುಪಿತು.

ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

ಇನ್ನು ಸನ್‌ ಫಾರ್ಮಾ, ಪವರ್‌ ಗ್ರಿಡ್‌, ಎನ್‌ಟಿಪಿಸಿ, ಜೆಎಸ್‌ಡಬ್ಲ್ಯೂ ಸ್ಟೀಲ್‌, ಐಟಿಸಿ, ಟಾಟಾ ಸ್ಟೀಲ್‌ ನಷ್ಟ ಹೊಂದಿದವು. ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading
Advertisement
IPL 2024
ಪ್ರಮುಖ ಸುದ್ದಿ8 mins ago

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

Share Market
ದೇಶ18 mins ago

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

IPL 2024
ಪ್ರಮುಖ ಸುದ್ದಿ37 mins ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

IPL 2024
ಕ್ರೀಡೆ59 mins ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ1 hour ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ1 hour ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ1 hour ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ2 hours ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ2 hours ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ2 hours ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ16 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌