PPF Investment : ಪಿಪಿಎಫ್ ಮೊತ್ತದ ಆಧಾರದಲ್ಲಿ ಸಾಲ ಪಡೆಯುವುದು ಹೇಗೆ? Vistara News

ಮನಿ-ಗೈಡ್

PPF Investment : ಪಿಪಿಎಫ್ ಮೊತ್ತದ ಆಧಾರದಲ್ಲಿ ಸಾಲ ಪಡೆಯುವುದು ಹೇಗೆ?

PPF Investment ಸಾರ್ವಜನಿಕ ಭವಿಷ್ಯನಿಧಿ ಅಥವಾ ಪಿಪಿಎಫ್‌ ಹೂಡಿಕೆಯ ಆಧಾರದಲ್ಲಿ ಸಾಲ ಪಡೆಯಬಹುದು. ಆದರೆ ಇದಕ್ಕೆ ಕೆಲ ನಿಯಮಗಳು ಇವೆ. ವಿವರ ಇಲ್ಲಿದೆ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಿಪಿಎಫ್‌ನ ಪೂರ್ತಿ ಹೆಸರು ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ (Public Provident Fund). ಸಣ್ಣ ಉಳಿತಾಯ ಯೋಜನೆಗಳ ಸಾಲಿನಲ್ಲಿ ಇದು ಅತ್ಯಂತ ಜನಪ್ರಿಯ ಯೋಜನೆಯಾಗಿದೆ. ಇದು ಹಲವಾರು ಹೂಡಿಕೆದಾರ ಸ್ನೇಹಿ ಫೀಚರ್‌ಗಳನ್ನು ಒಳಗೊಂಡಿದೆ. ಹಾಗಾದರೆ ಇದರ ಬಗ್ಗೆ ತಿಳಿದುಕೊಳ್ಳೋಣ.

ಪಿಪಿಎಫ್‌ ಎನ್ನುವುದು ಸರಳವಾಗಿ ಹೇಳುವುದಿದ್ದರೆ ದೀರ್ಘಕಾಲೀನ ಹೂಡಿಕೆಯ ಯೋಜನೆಯಾಗಿದೆ. ಲಾಂಗ್‌ ಟರ್ಮಿಗೆ ಸ್ಥಿರವಾದ ಸಂಪತ್ತು ಸೃಷ್ಟಿಸಿಕೊಳ್ಳಲು, ಒಂದು ದೊಡ್ಡ ಇಡಿಗಂಟನ್ನು ಮಾಡಿಕೊಳ್ಳಲು ಇದು ಉಪಯುಕ್ತ. ಅಸಲು ಮೊತ್ತವನ್ನು ಕಾಪಿಟ್ಟುಕೊಂಡು ಸೇಫ್‌ ಆಗಿ ಹೂಡಿಕೆ ಮಾಡಲು ಸಹಕಾರಿ.

ಕಡಿಮೆ ರಿಸ್ಕ್‌ ಬಯಸುವ ಸಣ್ಣ ಹೂಡಿಕೆದಾರರಿಗೆ ಪಿಪಿಎಫ್‌ ಸೂಕ್ತ. ಸರ್ಕಾರವೇ ಇದನ್ನು ನಿರ್ವಹಿಸುತ್ತದೆ. ಖಾತರಿಯ ಆದಾಯ ನೀಡುತ್ತದೆ. ಇದು ಮಾರುಕಟ್ಟೆಗೆ ಲಿಂಕ್‌ ಆಗಿರುವುದಿಲ್ಲ. ತಮ್ಮ ಹೂಡಿಕೆಯನ್ನು ವೈವಿಧ್ಯಮಯಗೊಳಿಸಲು ಬಯಸುವವರು ಪಿಪಿಎಫ್‌ ಅಕೌಂಟ್‌ ತೆರೆಯಬಹುದು.

ಪಿಪಿಎಫ್‌ ಖಾತೆಯ ಮುಖ್ಯಾಂಶಗಳು:

ಪಿಪಿಎಫ್‌ ಖಾತೆಯಲ್ಲಿನ ಹೂಡಿಕೆಗೆ ಸಿಗುವ ಬಡ್ಡಿ ದರ : 7.1% ವಾರ್ಷಿಕ.

ತೆರಿಗೆ ಬೆನಿಫಿಟ್:‌ ಸೆಕ್ಷನ್‌ 80 ಸಿ ಅಡಿಯಲ್ಲಿ 1.5 ಲಕ್ಷ ರೂ. ತನಕ ಟ್ಯಾಕ್ಸ್‌ ಬೆನಿಫಿಟ್‌

ರಿಸ್ಕ್‌ ಪ್ರೊಫೈಲ್:‌ ಖಾತರಿಯ ರಿಸ್ಕ್-ಫ್ರೀ ಆದಾಯ.

ಕನಿಷ್ಠ ಹೂಡಿಕೆಯ ಮೊತ್ತ: 500 ರೂ.

ಗರಿಷ್ಠ ಹೂಡಿಕೆ (ವಾರ್ಷಿಕ): 1.5 ಲಕ್ಷ ರೂ.

ಅವಧಿ: 15 ವರ್ಷಗಳು

ಒಂದು ಪಿಪಿಎಫ್‌ ಅಕೌಂಟ್‌ಗೆ 15 ವರ್ಷಗಳ ಲಾಕ್‌ ಇನ್‌ ಅವಧಿ ಇರುತ್ತದೆ. ಅದಕ್ಕೂ ಮುನ್ನ ಫಂಡ್‌ ಅನ್ನು ಪೂರ್ಣಪ್ರಮಾಣದಲ್ಲಿ ಹಿಂತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಲಾಕ್‌ ಇನ್‌ ಅವಧಿಯನ್ನು ಮತ್ತೆ 5 ವರ್ಷ ವಿಸ್ತರಿಸಬಹುದು. ವರ್ಷಕ್ಕೆ ಕನಿಷ್ಠ 500 ರೂ. ಮತ್ತು ಗರಿಷ್ಠ 1.5 ಲಕ್ಷ ರೂ. ಹೂಡಿಕೆ ಮಾಡಬಹುದು. ಲಂಪ್ಸಮ್‌ ಅಥವಾ ಕಂತುಗಳಲ್ಲಿ ಕಟ್ಟಬಹುದು. ಅಕೌಂಟ್‌ ಸಕ್ರಿಯವಾಗಲು ಪ್ರತಿ ವರ್ಷ ಕಟ್ಟಬೇಕು.

ಪಿಪಿಎಫ್ ಹೂಡಿಕೆಯ ಮೇಲೆ ಸಾಲ: ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ನಲ್ಲಿ ನೀವು ಮಾಡುವ ಇನ್ವೆಸ್ಟ್‌ಮೆಂಟ್‌ ಮೇಲೆ ಸಾಲ ಪಡೆಯಬಹುದು. ಹೀಗಿದ್ದರೂ ಖಾತೆಯ 3-6ನೇ ವರ್ಷದಲ್ಲಿ ಮಾತ್ರ ಸಾಲ ಪಡೆಯಬಹುದು. ಇಂಥ ಸಾಲದ ಗರಿಷ್ಠ ಅವಧಿ 36 ತಿಂಗಳು ಮಾತ್ರ. ಅಕೌಂಟ್‌ನಲ್ಲಿರುವ ಮೊತ್ತದ 25% ಅಥವಾ ಕಡಿಮೆ ಮೊತ್ತವನ್ನು ಮಾತ್ರ ಸಾಲಕ್ಕಾಗಿ ಕ್ಲೇಮ್‌ ಮಾಡಿಕೊಳ್ಳಬಹುದು.‌

ಇದನ್ನೂ ಓದಿ: Post office savings : ಅಂಚೆ ಇಲಾಖೆಯ ಉಳಿತಾಯ ಖಾತೆಗಳಲ್ಲಿ 3 ಬದಲಾವಣೆ ಯಾವುದು?

ಭಾರತೀಯ ನಾಗರಿಕರು ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಖಾತೆ ತೆರೆಯಬಹುದು. ಅನಿವಾಸಿ ಭಾರತೀಯರು ಹೊಸ ಪಿಪಿಎಫ್‌ ಅಕೌಂಟ್‌ ತೆರೆಯುವಂತಿಲ್ಲ. ಹೀಗಿದ್ದರೂ ಈಗಾಗಲೇ ಇದ್ದರೆ ಅದು ಪೂರ್ಣವಾಗುವ ತನಕ ಸಕ್ರಿಯವಾಗಿರುತ್ತದೆ. ಹಾಗೂ 5 ವರ್ಷಗಳ ಹೆಚ್ಚುವರಿ ಅವಧಿ ಇರುವುದಿಲ್ಲ.

ಬಡ್ಡಿಯನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಈಗ 7.1% ಬಡ್ಡಿ ಇದೆ. ಆಫ್‌ಲೈನ್‌ ಹಾಗೂ ಆನ್‌ಲೈನ್‌ ವಿಧಾನದಲ್ಲಿ ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಮೂಲ ಮೊತ್ತಕ್ಕೆ ಟ್ಯಾಕ್ಸ್‌ ಬೆನಿಫಿಟ್‌ ಪಡೆಯಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮನಿ-ಗೈಡ್

Money Guide: ತೆರಿಗೆ ಕಡಿತ ಇಲ್ಲದ ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಸಣ್ಣ ಉಳಿತಾಯ ಯೋಜನೆಗಳ ಸಾಲಿನಲ್ಲಿ ಅತ್ಯಂತ ಜನಪ್ರಿಯ ಯೋಜನೆ ಪಿಪಿಎಫ್‌. ಇದರಲ್ಲಿ ಹೂಡಿಕೆ ಮಾಡಿದರೆ ಯಾವುದೇ ತೆರಿಗೆ ಕಡಿತವಾಗುವುದಿಲ್ಲ ಎನ್ನುವುದೇ ಇದರ ಪ್ಲಸ್‌ ಪಾಯಿಂಟ್.

VISTARANEWS.COM


on

ppf
Koo

ಬೆಂಗಳೂರು: ಸಣ್ಣ ಉಳಿತಾಯ ಯೋಜನೆಗಳ ಸಾಲಿನಲ್ಲಿ ಅತ್ಯಂತ ಜನಪ್ರಿಯ ಯೋಜನೆ ಪಿಪಿಎಫ್‌. ಅಂದರೆ ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ (Public Provident Fund). ಇದು ಹಲವು ಹೂಡಿಕೆದಾರ ಸ್ನೇಹಿ ಫೀಚರ್‌ಗಳನ್ನು ಒಳಗೊಂಡಿದೆ. ದೀರ್ಘಕಾಲೀನ ಹೂಡಿಕೆಯ ಯೋಜನೆಯಾದ ಇದನ್ನು ಲಾಂಗ್‌ ಟರ್ಮ್‌ಗೆ ಸ್ಥಿರವಾದ ಸಂಪತ್ತು ಸೃಷ್ಟಿಸಿಕೊಳ್ಳಲು, ದೀರ್ಘಾವಧಿಯಲ್ಲಿ ಸಂಪತ್ತನ್ನು ಸಂಗ್ರಹಿಸಲು ಬಳಸಲಾಗುತ್ತದೆ. ಪಿಪಿಎಫ್‌ ಕುರಿತದ ಹೆಚ್ಚಿನ ವಿವರ ಇಲ್ಲಿದೆ (Money Guide).

ಕಡಿಮೆ ರಿಸ್ಕ್‌ ಬಯಸುವ ಸಣ್ಣ ಹೂಡಿಕೆದಾರರಿಗೆ ಪಿಪಿಎಫ್‌ ಸೂಕ್ತ. ಸರ್ಕಾರವೇ ಇದನ್ನು ನಿರ್ವಹಿಸುತ್ತದೆ. ಖಾತರಿಯ ಆದಾಯ ನೀಡುತ್ತದೆ ಎನ್ನುವುದೇ ಇದರ ವಿಶೇಷತೆ. ತ್ರೈಮಾಸಿಕದ ಆಧಾರದ ಮೇಲೆ ಬಡ್ಡಿದರಗಳನ್ನು ನಿರ್ಧರಿಸಲಾಗುತ್ತದೆ.

ವೈಶಿಷ್ಟ್ಯ

ನೀವು ಪಿಪಿಎಫ್ ಖಾತೆಗಳಲ್ಲಿ ವರ್ಷಕ್ಕೆ ಕನಿಷ್ಠ 500 ರೂ. ಮತ್ತು ಗರಿಷ್ಠ 1.5 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಮಾರ್ಗಸೂಚಿಗಳ ಪ್ರಕಾರ, ನೀವು ಹಣವನ್ನು ಪಿಪಿಎಫ್ ಖಾತೆಯಲ್ಲಿ ಸತತ 15 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಒಂದು ವೇಳೆ 15 ವರ್ಷಗಳ ಕೊನೆಯಲ್ಲಿ ಹಣದ ಅಗತ್ಯವಿಲ್ಲದಿದ್ದರೆ ಪಿಪಿಎಫ್ ಖಾತೆಯ ಅವಧಿಯನ್ನು ಅಗತ್ಯವಿರುವಷ್ಟು ವರ್ಷಗಳವರೆಗೆ ವಿಸ್ತರಿಸಬಹುದಾದ ಆಯ್ಕೆಯೂ ಇದೆ. ಇದಕ್ಕಾಗಿ ಪಿಪಿಎಫ್ ಖಾತೆ ವಿಸ್ತರಣೆ ಫಾರ್ಮ್ ಸಲ್ಲಿಸಬೇಕಾಗುತ್ತದೆ. ಇದು ಸಂಪೂರ್ಣ ತೆರಿಗೆ ಮುಕ್ತ ಉಳಿತಾಯ ಯೋಜನೆ ಎನ್ನುವುದು ವಿಶೇಷ. ಅಂದರೆ ಅಸಲು, ಲಾಭ ಮತ್ತು ಹಿಂಪಡೆಯುವಾಗ ಸಂಗ್ರಹವಾದ ಮೊತ್ತದ ಮೇಲೆ ಯಾವುದೇ ತೆರಿಗೆ ಕಡಿತ ಇರುವುದಿಲ್ಲ.

ಯಾರೆಲ್ಲ ತೆರೆಯಬಹುದು?

ಯಾವುದೇ ಭಾರತೀಯ ನಾಗರಿಕ ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಖಾತೆ ತೆರೆಯಬಹುದು. ಅಪ್ರಾಪ್ತ / ಮಾನಸಿಕ ಅಸ್ವಸ್ಥ ವ್ಯಕ್ತಿಯ ಪರವಾಗಿ ಪೋಷಕರು ಸಹ ಪಿಪಿಎಫ್‌ನಲ್ಲಿ ಹೂಡಿಕೆ ಮಾಡಬಹುದು. ಅನಿವಾಸಿ ಭಾರತೀಯರು ಹೊಸ ಪಿಪಿಎಫ್‌ ಅಕೌಂಟ್‌ ತೆರೆಯುವಂತಿಲ್ಲ. ಹೀಗಿದ್ದರೂ ಈಗಾಗಲೇ ಇದ್ದರೆ ಅದು ಪೂರ್ಣವಾಗುವ ತನಕ ಸಕ್ರಿಯವಾಗಿರುತ್ತದೆ. 5 ವರ್ಷಗಳ ಹೆಚ್ಚುವರಿ ಅವಧಿ ಇರುವುದಿಲ್ಲ. ಬಡ್ಡಿಯನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಈಗ 7.1% ಬಡ್ಡಿ ಇದೆ. 

ಪಿಪಿಎಫ್ ಹಣವನ್ನು ಹಿಂಪಡೆಯುವುದು ಹೇಗೆ?

ಮೊದಲೇ ಹೇಳಿದಂತೆ ಒಂದು ಪಿಪಿಎಫ್‌ ಅಕೌಂಟ್‌ಗೆ 15 ವರ್ಷಗಳ ಲಾಕ್‌ ಇನ್‌ ಅವಧಿ ಇರುತ್ತದೆ. ಅದಕ್ಕೂ ಮುನ್ನ ಫಂಡ್‌ ಅನ್ನು ಪೂರ್ಣಪ್ರಮಾಣದಲ್ಲಿ ಹಿಂತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. 15 ವರ್ಷಗಳ ನಂತರ, ಪಿಪಿಎಫ್ ಚಂದಾದಾರರು ಸಂಬಂಧಪಟ್ಟ ಅಂಚೆ ಕಚೇರಿಯಲ್ಲಿ ಪಾಸ್‌ಬುಕ್‌ನೊಂದಿಗೆ ಖಾತೆ ಮುಕ್ತಾಯ ಫಾರ್ಮ್ ಅನ್ನು ಸಲ್ಲಿಸುವ ಮೂಲಕ ಮೆಚ್ಯೂರಿಟಿ ಪಾವತಿಯನ್ನು ಹಿಂಪಡೆಯಬಹುದು. ಸಂಬಂಧಿತ ಅಂಚೆ ಕಚೇರಿಯಲ್ಲಿ ನಿಗದಿತ ವಿಸ್ತರಣಾ ನಮೂನೆಯನ್ನು ಸಲ್ಲಿಸುವ ಮೂಲಕ ಚಂದಾದಾರರು ತಮ್ಮ ಖಾತೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಬಹುದು (ಗಮನಿಸಿ ಇದನ್ನು ಮೆಚ್ಯೂರಿಟಿಯ ಒಂದು ವರ್ಷದೊಳಗೆ ಸಲ್ಲಿಸಬೇಕು).

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

ಸಾಲ ಪಡೆಯಬಹುದು

ಪಿಪಿಎಫ್ ಹೂಡಿಕೆಯ ಮೇಲೆ ನೀವು ಸಾಲವನ್ನು ಪಡೆಯುವ ಸೌಲಭ್ಯವೂ ಇದೆ. ಖಾತೆಯ 3-6ನೇ ವರ್ಷದಲ್ಲಿ ಮಾತ್ರ ಸಾಲ ಪಡೆಯಬಹುದು. ಇಂಥ ಸಾಲದ ಗರಿಷ್ಠ ಅವಧಿ 36 ತಿಂಗಳು ಮಾತ್ರ. ಅಕೌಂಟ್‌ನಲ್ಲಿರುವ ಮೊತ್ತದ 25% ಅಥವಾ ಕಡಿಮೆ ಮೊತ್ತವನ್ನು ಮಾತ್ರ ಸಾಲಕ್ಕಾಗಿ ಕ್ಲೇಮ್‌ ಮಾಡಿಕೊಳ್ಳಬಹುದು.‌

ಇನ್ನಷ್ಟು ಮನಿಗೈಡ್‌ ಓದಲು ಇಲ್ಲಿ ಕ್ಲಿಕ್‌ ಮಾಡಿ

Continue Reading

ಮನಿ-ಗೈಡ್

Money Guide: ಡಿಮ್ಯಾಟ್ ಖಾತೆದಾರರ ಗಮನಕ್ಕೆ; ವರ್ಷಾಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಅಕೌಂಟ್‌ ಸ್ಥಗಿತ!

Money Guide: ವೈಯಕ್ತಿಕ ಡಿಮ್ಯಾಟ್ ಖಾತೆದಾರರು ಮತ್ತು ಮ್ಯೂಚುವಲ್ ಫಂಡ್ ಹೂಡಿಕೆದಾರರು ಈ ವರ್ಷಾಂತ್ಯದ ಒಳಗೆ ಮಾಡಿ ಮುಗಿಸಲೇ ಬೇಕಾದ ಬಹು ಮುಖ್ಯ ಕೆಲಸವೊಂದಿದೆ. ಅದೇನು? ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

demat account
Koo

ಬೆಂಗಳೂರು: ವೈಯಕ್ತಿಕ ಡಿಮ್ಯಾಟ್ ಖಾತೆದಾರರು (Demat account holders) ಮತ್ತು ಮ್ಯೂಚುವಲ್ ಫಂಡ್ ಹೂಡಿಕೆದಾರರ (Mutual fund investors) ಗಮನಕ್ಕೆ… ಡಿಸೆಂಬರ್ 31ರೊಳಗೆ ಘೋಷಣೆ ಫಾರ್ಮ್ ಸಲ್ಲಿಸುವ ಮೂಲಕ ನಾಮನಿರ್ದೇಶಿತ(Nominate a beneficiary-ನಾಮಿನಿ)ರ ಹೆಸರನ್ನು ಘೋಷಿಸಲು ಅಥವಾ ನಾಮನಿರ್ದೇಶನ ಆಯ್ಕೆಯನ್ನು ಕೈಬಿಡಲು ಸರ್ಕಾರ ತಿಳಿಸಿದೆ. ಒಂದು ವೇಳೆ ಸರ್ಕಾರ ವಿಧಿಸಿದ ಗಡುವಿನೊಳಗೆ ಈ ಪ್ರಕ್ರಿಯೆ ನಡೆಸದಿದ್ದರೆ ಏನಾಗುತ್ತದೆ ಎನ್ನುವುದರ ವಿವರ ಮನಿಗೈಡ್‌ (Money Guide)ನಲ್ಲಿದೆ.

ವರ್ಷಾಂತ್ಯದ ವೇಳೆಗೆ ಡಿಮ್ಯಾಟ್ ಖಾತೆದಾರರು ನಾಮನಿರ್ದೇಶನ ಆಯ್ಕೆ ಮಾಡಲು ಅಥವಾ ನಾಮನಿರ್ದೇಶನ ಆಯ್ಕೆಯನ್ನು ಕೈಬಿಡದಿದ್ದರೆ ಅಂತಹವರ ಡಿಮ್ಯಾಟ್ ಖಾತೆ ಮತ್ತು ಫೋಲಿಯೊ ಸ್ಥಗಿತಗೊಳಿಸಲಾಗುತ್ತದೆ. ಇದರಿಂದಾಗಿ ಅವರು ತಮ್ಮ ಹೂಡಿಕೆಗಳನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂದು ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಎಚ್ಚರಿಸಿದೆ. ಈ ಆದೇಶವು ಹೊಸ ಮತ್ತು ಅಸ್ತಿತ್ವದಲ್ಲಿರುವ ಹೂಡಿಕೆದಾರರಿಗೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಟ್ರೇಡಿಂಗ್‌ ಮತ್ತು ಡಿಮ್ಯಾಟ್‌ ಖಾತೆಗೆ ನಾಮಿನೇಶನ್‌ ಮಾಡುವಾಗ ಸಾಕ್ಷಿಯ ಅಗತ್ಯ ಇರುವುದಿಲ್ಲ. ಇ-ಸೈನ್‌ ಬಳಸಿ ನಾಮಿನೇಶನ್‌ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ಮಾಡಬಹುದು. ಆಫ್‌ಲೈನ್‌ನಲ್ಲೂ ಮಾಡಬಹುದಾದ ಆಯ್ಕೆ ಇದೆ. ನಿಮ್ಮ ಡಿಮ್ಯಾಟ್‌ ಖಾತೆಯ ಪೂರೈಕೆದಾರ DP ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ನಾಮಿನೇಶನ್‌ ಮಾಡಬಹುದು. NSDL DP ವೆಬ್‌ಸೈಟ್‌ ಮೂಲಕವೂ ಬದಲಿಸಬಹುದು. ನಿಮ್ಮ ಡಿಮ್ಯಾಟ್‌ ಖಾತೆಗೆ ಮೂರು ನಾಮಿನಿಗಳನ್ನು ಹೆಸರಿಸಬಹುದು. ನಿಮ್ಮ ತಂದೆ, ತಾಯಿ, ಸಂಗಾತಿ, ಮಕ್ಕಳು ಅಥವಾ ಬೇರೆ ಯಾರಾದರೂ ನಾಮಿನಿ ಆಗಬಹುದು. ಈ ಕ್ರಮವು ಹೂಡಿಕೆದಾರರಿಗೆ ತಮ್ಮ ಸ್ವತ್ತುಗಳನ್ನು ಸುರಕ್ಷಿತವಾಗಿರಿಸಲು ಮತ್ತು ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವರ್ಗಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಈ ಹಿಂದೆ ಅಸ್ತಿತ್ವದಲ್ಲಿರುವ ಎಲ್ಲ ಅರ್ಹ ಟ್ರೇಡಿಂಗ್‌ ಮತ್ತು ಡಿಮ್ಯಾಟ್ ಖಾತೆದಾರರಿಗೆ ನಾಮಿನಿ ಆಯ್ಕೆಯನ್ನು ಒದಗಿಸುವಂತೆ ಜುಲೈ 2021ರಲ್ಲಿಯೇ ಸೆಬಿ ಹೇಳಿತ್ತು. ಮಾರ್ಚ್ 31, 2022ರ ಗಡುವು ನೀಡಿತ್ತು. ನಂತರ ಅದನ್ನು ಇನ್ನೂ ಒಂದು ವರ್ಷ ಅಂದರೆ ಮಾರ್ಚ್ 31, 2023ರವರೆಗೆ ನಂತರ ಮತ್ತೆ ಸೆಪ್ಟೆಂಬರ್ 30, 2023ರವರೆಗೆ ಬಳಿಕ ಡಿಸೆಂಬರ್‌ 31, 2023ರವರೆಗೆ ವಿಸ್ತರಿಸಿತ್ತು. ಇನ್ನು ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇಲ್ಲ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

ಯಾಕಾಗಿ ಈ ಕ್ರಮ?

ಮುಖ್ಯವಾಗಿ ಎರಡು ಕಾರಣಕ್ಕಾಗಿ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಮೊದಲನೆಯದ್ದು ಈ ಹಿಂದೆ ಹೇಳಿದಂತೆ ಹೂಡಿಕೆದಾರರ ಸ್ವತ್ತುಗಳನ್ನು ಸುರಕ್ಷಿತವಾಗಿರಿಸಿಕೊಳ್ಳುವುದು. ಇನ್ನು ಎರಡನೇ ಕಾರಣ ಎಂದರೆ, ಈ ಹಿಂದೆ ಅನೇಕ ಖಾತೆದಾರರು ತಮಗೆ ಏನಾದರೂ ಸಂಭವಿಸಿದರೆ ಆಸ್ತಿಗಳನ್ನು ಯಾರಿಗೆ ವರ್ಗಾಯಿಸಬೇಕು ಎಂಬುದನ್ನು ನಾಮನಿರ್ದೇಶನ ಮಾಡದೆ ಅನೇಕ ಹೂಡಿಕೆ ಖಾತೆಗಳನ್ನು ತೆರೆದಿದ್ದರು. ಇದರಿಂದಾಗಿ ನಿಜವಾದ ವಾರಸುದಾರರನ್ನು ಕಂಡುಕೊಳ್ಳಲು ಬಹಳ ಶ್ರಮ ಪಡಬೇಕಾದ ಸಂದರ್ಭ ಸೃಷ್ಟಿಯಾಗಿತ್ತು. ಅಲ್ಲದೆ ಕೆಲವೊಮ್ಮೆ ಬೇರೆ ಯಾರಿಗೋ ಅನುಕೂಲ ಲಭಿಸಿ ನಿಜವಾದ ವಾರಸುದಾರರಿಗೆ ಅನ್ಯಾಯವಾದ ಘಟನೆಯೂ ನಡೆದಿತ್ತು. ಈ ಎಲ್ಲ ಕಾರಣಗಳಿಂದ ನಾಮಿನಿ ಹೆಸರನ್ನು ಸೂಚಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಆರ್ಥಿಕ ತಜ್ಞರು ವಿವರಿಸುತ್ತಾರೆ.

ಇನ್ನಷ್ಟು ಮನಿಗೈಡ್‌ ಓದಲು ಇಲ್ಲಿ ಕ್ಲಿಕ್‌ ಮಾಡಿ

Continue Reading

ಮನಿ-ಗೈಡ್

Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

Money Guide: ಆನ್‌ಲೈನ್‌ ಸಾಲದ ಹೆಸರಿನಲ್ಲಿ ವಂಚನೆಯ ಜಾಲ ಇದೀಗ ಸಕ್ರಿಯವಾಗಿದೆ. ಅದರಿಂದ ಹೇಗೆ ಪಾರಾಗಬಹುದು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

loan new
Koo

ಬೆಂಗಳೂರು: ಪ್ರಸ್ತುತ ನಮ್ಮ ಕನಸುಗಳನ್ನು ಈಡೇರಿಸಲು ಸಾಲದ ಮೊರೆ ಹೋಗಬೇಕಾದ ಅನಿವಾರ್ಯತೆಗೆ ಸಿಲುಕಿದ್ದೇವೆ. ಮನೆ ನಿರ್ಮಾಣ, ವಾಹನ ಖರೀದಿ, ಕೃಷಿ ಚಟುವಟಿಕೆ ಹೀಗೆ ಮಧ್ಯಮ ವರ್ಗದ ಜನರು ವಿವಿಧ ಕಾರಣಗಳಿಗೆ ಸಾಲದತ್ತ ಮುಖ ಮಾಡುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ವಂಚಕರು ಆನ್‌ಲೈನ್‌ ಲೋನ್‌ ಹೆಸರಿನಲ್ಲಿ ದುಡ್ಡು ದೋಚುತ್ತಾರೆ. ಹಾಗಾದರೆ ಇಂತಹ ಮೋಸದ ಜಾಲದಿಂದ (Loan Scam) ಹೇಗೆ ಪಾರಾಗಬಹುದು ಎನ್ನುವುದರ ವಿವರ ಮನಿಗೈಡ್‌ (Money Guide)ನಲ್ಲಿದೆ.

ನಮ್ಮ ಅನಿವಾರ್ಯತೆಯನ್ನು ದುರುಪಯೋಗಿಸಿಕೊಂಡು ಅಂತಹ ಕಂಪೆನಿಗಳು ದುಡ್ಡು ದೋಚುತ್ತವೆ. ಹೆಚ್ಚಿನ ಮುಂಗಡ ಶುಲ್ಕಗಳು, ಅವಾಸ್ತವಿಕ ಬಡ್ಡಿದರಗಳು ಮತ್ತು ಷರತ್ತುಗಳ ಹೆಸರಿನಲ್ಲಿ ಹಗಲು ದರೋಡೆಗೆ ಇಳಿಯುತ್ತವೆ. ಡಿಜಿಟಲ್ ಪಾವತಿ ಮತ್ತು ಹಣಕಾಸು ಸೇವೆಗಳ ಪ್ಲಾಟ್‌ಫಾರ್ಮ್‌ ಫೋನ್‌ ಪೇ ಇಂತಹ ಸಾಲಗಳಿಂದ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಕೆ ನೀಡಿದೆ.

ಸಾಲದ ಹೆಸರಿನಲ್ಲಿ ಮೋಸ

ಲೋನ್‌ ಸ್ಕ್ಯಾಮ್‌ ಎಂದು ಕರೆಯಲಾಗುವ ಈ ವಂಚನೆಯ ಜಾಲ ಹೇಗೆ ಕಾರ್ಯ ನಿರ್ವಹಿಸುತ್ತದೆ ಎನ್ನುವುದನ್ನು ನೋಡೋಣ: ನೀವು ಬಯಸಿದ ಸಾಲವನ್ನು ತ್ವರಿತವಾಗಿ ಮತ್ತು ಸುಲಭವಾಗಿ ಪಡೆಯಬಹುದು ಎಂಬ ವಂಚಕರು ಸುಳ್ಳು ಭರವಸೆ ನೀಡುತ್ತಾರೆ. ಉದಾಹರಣೆಗೆ ನೀವು ಬ್ಯಾಂಕ್‌ನಿಂದ ಸಾಲ ಪಡೆಯಲು ಉತ್ತಮ ಕ್ರೆಡಿಟ್ ಸ್ಕೋರ್ (CIBIL Score) ಹೊಂದಿಲ್ಲದಿದ್ದರೆ ಅಥವಾ ಬಹಳ ಕಡಿಮೆ ಸಮಯದಲ್ಲಿ ದೊಡ್ಡ ಮೊತ್ತದ ಹಣದ ಅಗತ್ಯವಿದ್ದರೆ ಆ ಸಂದರ್ಭವನ್ನು ವಂಚಕರು ಬಳಸಿಕೊಳ್ಳುತ್ತಾರೆ. ಕೆಲವೇ ನಿಮಿಷಗಳಲ್ಲಿ ಸಾಲ ನೀಡುತ್ತೇವೆ ಎಂದು ನಂಬಿಸುತ್ತಾರೆ.

ಈ ಮೋಸದ ಜಾಲ ಮುಖ್ಯವಾಗಿ ಎರಡು ರೀತಿಯಲ್ಲಿ ನಡೆಯುತದೆ. ವಂಚಕರು ಭದ್ರತೆಯಾಗಿ ಒಂದು ನಿರ್ದಿಷ್ಟ ಮೊತ್ತವನ್ನು ಮುಂಗಡವಾಗಿ ಕೇಳುತ್ತಾರೆ. ಅದನ್ನು ಎಂದಿಗೂ ಹಿಂದಿರುಗಿಸಲಾಗುವುದಿಲ್ಲ. ಜತೆಗೆ ಪ್ರೊಸೆಸಿಂಗ್‌ ಶುಲ್ಕ, ವಿಳಂಬ ಶುಲ್ಕ, ಬಡ್ಡಿ ಮತ್ತಿತರ ಹೆಸರಿನಲ್ಲಿ ದೊಡ್ಡ ಮೊತ್ತವನ್ನು ಪಡೆಯುತ್ತಾರೆ. ಭಾರೀ ಮೊತ್ತದ ನಷ್ಟವಾಗುತ್ತದೆ.

ಹೇಗೆ ಸಂಪರ್ಕಿಸುತ್ತಾರೆ?

ವಂಚಕರು ನಿಮ್ಮನ್ನು ಎಸ್ಎಂಎಸ್, ಇಮೇಲ್ ಅಥವಾ ಫೋನ್ ಮೂಲಕ ಸಂಪರ್ಕಿಸುತ್ತಾರೆ. ನಿಮ್ಮ ವಿವರಗಳನ್ನು ಭರ್ತಿ ಮಾಡಲು ಮತ್ತು ತ್ವರಿತ ಲೋನ್ ಅನುಮೋದನೆ ಪಡೆಯಲು ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಲು ಪದೇ ಪದೆ ಒತ್ತಾಯಿಸುತ್ತಾರೆ. ಒಂದು ವೇಳೆ ನೀವು ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಿದ್ದೀರಿ ಅಂತಿಟ್ಟುಕೊಳ್ಳೋಣ. ನಿಮ್ಮ ಸಂಪೂರ್ಣ ಸಂಪರ್ಕ ಪಟ್ಟಿ, ಫೋಟೊ ಮತ್ತು ವೀಡಿಯೊಗಳಿಗೆ ಅಕ್ಸೆಸ್‌ ಕೇಳುತ್ತದೆ. ಇನ್ನು ನೀವು ಆಧಾರ್, ಪ್ಯಾನ್, ವಿಳಾಸ ಮತ್ತು ನಿಮಗೆ ಅಗತ್ಯವಿರುವ ಮೊತ್ತದಂತಹ ಮೂಲ ವಿವರಗಳನ್ನು ಭರ್ತಿ ಮಾಡಿದ ಕೂಡಲೇ ನಿಮ್ಮ ಖಾತೆಗೆ ನಗದು ಕ್ರೆಡಿಟ್ ಆಗುತ್ತದೆ.

ಮೊದಲೇ ಹೇಳಿದಂತೆ ಈ ಸಾಲಗಳನ್ನು ಸಂಕೀರ್ಣ ನಿಯಮಗಳು ಮತ್ತು ಷರತ್ತುಗಳನ್ನು ಹೊಂದಿರುತ್ತವೆ. ಅದನ್ನು ಮೊದಲೇ ತಿಳಿಸಲಾಗುವುದಿಲ್ಲ. ಕಡಿಮೆ ಬಡ್ಡಿದರದ ಭರವಸೆಯೊಂದಿಗೆ ಮೋಸಗೊಳಿಸುತ್ತಾರೆ. ನಂತರ ಕಡಿಮೆ ಬಡ್ಡಿದರವು ಸೀಮಿತ ಅವಧಿಗೆ ಮಾತ್ರ ಎಂದು ವರಾತ ಬದಲಾಯಿಸುತ್ತಾರೆ. ಅದರ ನಂತರ ಹೆಚ್ಚಿನ ಬಡ್ಡಿಯನ್ನು ವಿಧಿಸಲಾಗುತ್ತದೆ. ಗಮನಿಸಿ ಇದನ್ನು ಮೊದಲೇ ಉಲ್ಲೇಖಿಸುವುದಿಲ್ಲ.

ಇದನ್ನೂ ಓದಿ: Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

ಹೊಡೆತದ ಮೇಲೆ ಹೊಡೆತ

ಹೆಚ್ಚಿನ ಬಡ್ಡಿದರಗಳ ಜತೆಗೆ ಸಾಲಗಳನ್ನು ಮರುಪಾವತಿಸದಿರುವುದಕ್ಕೆ ಪ್ರತಿದಿನ ಭಾರೀ ದಂಡವನ್ನು ವಿಧಿಸುತ್ತವೆ. ಅದಕ್ಕೆ ಹೆಚ್ಚಿನ ಪ್ರೊಸೆಸಿಂಗ್‌ ಶುಲ್ಕ ಸೇರಿದಂತೆ ಇತರ ದಂಡಗಳನ್ನು ಸೇರಿಸುತ್ತಾರೆ. ಮಾತ್ರವಲ್ಲ ಈ ಅಪ್ಲಿಕೇಷನ್‌ಗಳು ನಿಮ್ಮ ಫೋನ್‌ನ ಎಲ್ಲ ಮಾಹಿತಿಗಳನ್ನು ಕದ್ದು ಬ್ಲ್ಯಾಕ್‌ ಮೇಲ್‌ ಮಾಡುವ ಸಾಧ್ಯತೆಯೂ ಇದೆ. ಸಾಲ ವಸೂಲಾತಿ ಏಜೆಂಟರು ನಿರಂತರ ಕಿರುಕುಳ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇದೇ ಕಾರಣದಿಂದ ಇತ್ತೀಚೆಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.

ನೀವೇನು ಮಾಡಬೇಕು?

  • ಫೋನ್, ಇಮೇಲ್ ಅಥವಾ ಇತರ ವಿಧಾನಗಳ ಮೂಲಕ ನಿಮ್ಮ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.
  • ಸಾಲ ನೀಡುವ ಕಂಪೆನಿಯ ಪೂರ್ವಾಪರ ತಿಳಿದುಕೊಳ್ಳಿ
  • ಯಾವುದೇ ಒಟಿಪಿ ಅಥವಾ ಇತರ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಫೋನ್ ಪೇ, ಪೇಟಿಎಂ ಅಥವಾ ಗೂಗಲ್ ಪೇಯಂತಹ ಪ್ಲಾಟ್ ಫಾರ್ಮ್‌ಗಳು ಅಂತಹ ಗೌಪ್ಯ ಅಥವಾ ವೈಯಕ್ತಿಕ ವಿವರಗಳನ್ನು ಎಂದಿಗೂ ಕೇಳುವುದಿಲ್ಲ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

ಮನಿ-ಗೈಡ್

Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

Money Guide: ವರ್ಷದ ಕೊನೆಗೆ ಬಂದು ನಿಂತಿದ್ದೇವೆ. ಡಿಸೆಂಬರ್‌ 31ರೊಳಗೆ ಕೆಲವೊಂದು ಕರ್ತವ್ಯಗಳನ್ನು ಮಾಡಿ ಮುಗಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಆ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

december
Koo

ಬೆಂಗಳೂರು: ವರ್ಷಾಂತ್ಯದ ಡಿಸೆಂಬರ್‌ ಮಾಸಕ್ಕೆ ಕಾಲಿಟ್ಟಿದ್ದೇವೆ. ಕೇಂದ್ರ ಸರ್ಕಾರ ಸೂಚಿಸಿದ ಒಂದಷ್ಟು ಕೆಲಸಗಳನ್ನು ಈ ತಿಂಗಳಾಂತ್ಯಕ್ಕೆ ಮಾಡಿ ಮುಗಿಸಲೇಬೇಕಾದ ಅನಿವಾರ್ಯತೆ ಇದೆ. ಇಲ್ಲದಿದ್ದರೆ ದಂಡ ಬೀಳಲಿದೆ. ಆಧಾರ್‌ ಕಾರ್ಡ್‌ ಅಪ್‌ಡೇಟ್‌ನಿಂದ ಹಿಡಿದು ಬ್ಯಾಂಕ್‌ ಲಾಕರ್‌ ಒಪ್ಪಂದ ನವೀಕರಣದವರೆಗೆ ಹಲವು ವಿಚಾರಗಳಿಗೆ ಕೇಂದ್ರ ಡಿಸೆಂಬರ್‌ 31ರ ವರೆಗೆ ಗಡುವು ನೀಡಿದೆ. ಅವಧಿ ಮೀರಿದರೆ ನಿಮ್ಮ ಜೇಬಿಗೆ ಕತ್ತರಿ ಬೀಳುವ ಜತೆಗೆ ಬಳಿಕ ಅದಕ್ಕಾಗಿ ಓಡಾಡುವ ಸಂಧಿಗ್ಥತೆಯೂ ಎದುರಾಗಬಹುದು. ಹೀಗಾಗಿ ಯಾವೆಲ್ಲ ಕರ್ತವ್ಯಗಳನ್ನು ಶೀಘ್ರ ಮುಗಿಸಬೇಕು ಎನ್ನುವುದನ್ನು ಮನಿಗೈಡ್‌ (Money Guide) ವಿವರಿಸಲಿದೆ.

ಆಧಾರ್‌ ಕಾರ್ಡ್‌ ನವೀಕರಣ

ಪ್ರಸ್ತುತ ಆಧಾರ್‌ ಕಾರ್ಡ್‌ ಪ್ರಮುಖ ದಾಖಲೆಯಾಗಿ ಬದಲಾಗಿದೆ. ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆಯುವುದರಿಂದ ಹಿಡಿದು ಉದ್ಯೋಗಕ್ಕೆ ಅರ್ಜಿ ಸಲ್ಲಿಸುವವರೆಗೆ ಆಧಾರ್‌ ಕಾರ್ಡ್‌ ಬೇಕೇ ಬೇಕು. ಈ ಹಿಂದೆ ಸರ್ಕಾರ ಆಧಾರ್‌ ಕಾರ್ಡ್‌ ಮಾಡಿಸಿ 10 ವರ್ಷ ಪೂರೈಸಿದವರು ನವೀಕರಣ ಮಾಡಿಸಬೇಕು ಎಂದು ಸೂಚಿಸಿತ್ತು. ಯೂನಿಕ್‌ ಐಡೆಂಟಿಫಿಕೇಷನ್‌ ಅಥಾರಟಿ ಆಫ್‌ ಇಂಡಿಯಾ (Unique Identification Authority of India-UIDAI) ಉಚಿತವಾಗಿ ಆಧಾರ್‌ ಕಾರ್ಡ್‌ ನವೀಕರಿಸುವ ದಿನಾಂಕವನ್ನು 2023ರ ಡಿಸೆಂಬರ್‌ 31ರ ವರೆಗೂ ವಿಸ್ತರಿಸಿದೆ. ಈ ಅವಧಿಯಲ್ಲಿ ವಿಳಾಸ, ಫೋನ್ ಸಂಖ್ಯೆ, ಇಮೇಲ್ ವಿವರಗಳನ್ನು ಉಚಿತವಾಗಿ ನವೀಕರಿಸಬಹುದು ಎಂದು ಸೂಚಿಸಿತ್ತು. 2023ರ ಡಿಸೆಂಬರ್ 31ರ ನಂತರ ನೀವು ನವೀಕರಣಕ್ಕಾಗಿ ಶುಲ್ಕ ಪಾವತಿಸಬೇಕಾಗುತ್ತದೆ.

ಬ್ಯಾಂಕ್‌ ಲಾಕರ್‌ ಒಪ್ಪಂದದ ನವೀಕರಣ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಈಗಿನ ಸೇಫ್‌ ಡಿಪಾಸಿಟ್‌ ಲಾಕರ್‌ಗಳ ಒಪ್ಪಂದಗಳನ್ನು ನವೀಕರಿಸಿಕೊಳ್ಳಲು ಬ್ಯಾಂಕ್‌ಗಳಿಗೆ (Bank locker agreement) ನೀಡಿದ್ದ ಗಡುವನ್ನು 2023ರ ಡಿಸೆಂಬರ್‌ 31ರ ತನಕ ವಿಸ್ತರಿಸಿತ್ತು. ಆರ್‌ಬಿಐ ಈ ಹಿಂದೆ 2021ರ ಆಗಸ್ಟ್‌ 18ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ, 2023ರ ಜನವರಿ 1ರೊಳಗೆ ಈಗಿನ ಸೇಫ್‌ ಡಿಪಾಸಿಟ್‌ ಲಾಕರ್‌ಗಳ ಒಪ್ಪಂದಗಳನ್ನು ನವೀಕರಿಸಬೇಕು ಎಂದು ಬ್ಯಾಂಕ್‌ಗಳಿಗೆ ಸೂಚಿಸಿತ್ತು. ಬಳಿಕ ಡಿಸೆಂಬರ್‌ 31ರ ತನಕ ನವೀಕರಿಸಿಕೊಳ್ಳಲು ಕಾಲಾವಕಾಶ ವಿಸ್ತರಿಸಿತ್ತು. ಹೊಸ ಲಾಕರ್ ಒಪ್ಪಂದಗಳು ಕೆಲವು ಪ್ರಮುಖ ಬದಲಾವಣೆಗಳನ್ನು ಹೊಂದಿದೆ. ಉದಾಹರಣೆಗೆ ಲಾಕರ್‌ ನಷ್ಟ ಅಥವಾ ಹಾನಿಯ ಸಂದರ್ಭದಲ್ಲಿ ಬ್ಯಾಂಕ್‌ಗಳು ಪಾವತಿಸಬೇಕಾದ ಪರಿಹಾರದ ಮೊತ್ತ ಹೆಚ್ಚಳ ಇತ್ಯಾದಿ.

ಡಿಮ್ಯಾಟ್ ಖಾತೆಗಳಿಗೆ ನಾಮನಿರ್ದೇಶನ ಸಲ್ಲಿಕೆ

ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI) ಡಿಮ್ಯಾಟ್ ಖಾತೆಗಳಿಗೆ ನಾಮನಿರ್ದೇಶನ ಅರ್ಜಿಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 31, 2023ರ ವರೆಗೆ ವಿಸ್ತರಿಸಿದೆ. ನಾಮನಿರ್ದೇಶನ ಅರ್ಜಿಯು ಮರಣದ ನಂತರ ಡಿಮ್ಯಾಟ್ ಸೆಕ್ಯುರಿಟಿಗಳನ್ನು ಯಾರು ಪಡೆಯಬೇಕು ಎಂಬುದನ್ನು ನಿರ್ಧರಿಸಲು ನೆರವಾಗುತ್ತದೆ.

ಇದನ್ನೂ ಓದಿ: Money Guide: 1.5 ಲಕ್ಷ ರೂ. ಹೂಡಿಕೆ ಮಾಡಿ 2.27 ಕೋಟಿ ರೂ. ಗಳಿಸಿ! ಯಾವುದು ಈ ಸ್ಕೀಂ?

ವಿಶೇಷ ಸ್ಥಿರ ಠೇವಣಿ(ಫಿಕ್ಸ್‌ಡ್‌ ಡೆಪಾಸಿಟ್‌)ಗಳಲ್ಲಿ ಹೂಡಿಕೆ

ಕೆಲವು ಬ್ಯಾಂಕ್‌ಗಳು 2023ರ ಡಿಸೆಂಬರ್‌ವರೆಗೆ ಹೆಚ್ಚಿನ ಬಡ್ಡಿದರಗಳೊಂದಿಗೆ ವಿಶೇಷ ಸ್ಥಿರ ಠೇವಣಿಗಳನ್ನು ನೀಡುತ್ತಿವೆ. ಅದಾಗ್ಯೂ ಈ ಠೇವಣಿಗಳಲ್ಲಿ ಹೂಡಿಕೆ ಮಾಡಲು ಗಡುವು ಇದೆ. ಉದಾಹರಣೆಗೆ ಇಂಡಿಯನ್ ಬ್ಯಾಂಕ್‌ನ ʼಇಂಡ್ ಸೂಪರ್ 400ʼ ಮತ್ತು ʼಇಂಡ್ ಸುಪ್ರೀಂ 300 ಡೇಸ್ʼ ಸ್ಥಿರ ಠೇವಣಿಗಳಲ್ಲಿ ಹೂಡಿಕೆ ಮಾಡಲು ಕೊನೆಯ ದಿನಾಂಕ ಡಿಸೆಂಬರ್ 31, 2023. ಜತೆಗೆ ಎಸ್‌ಬಿಐಯ ಅಮೃತ್ ಕಲಾಶ್ ಯೋಜನೆ ಕೂಡ ಡಿಸೆಂಬರ್ ಕೊನೆಯ ದಿನಕ್ಕೆ ಕೊನೆಯಾಗಲಿದೆ. ಈ ವರ್ಷದ ಫೆಬ್ರವರಿಯಲ್ಲಿ ಎಸ್‌ಬಿಐ ಪರಿಚಯಿಸಿದ್ದ ಅಮೃತ್‌ ಕಲಾಶ್‌ ಯೋಜನೆ ಆಗಸ್ಟ್‌ನಲ್ಲಿ ಮುಕ್ತಾಯವಾಗಲಿದೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ಬಳಿಕ ದಿನಾಂಕವನ್ನು ಬ್ಯಾಂಕ್‌ ವಿಸ್ತರಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading
Advertisement
Earthqake
ಕರ್ನಾಟಕ17 seconds ago

Earthquake: ಕರ್ನಾಟದ ವಿಜಯಪುರ, ತಮಿಳುನಾಡಿನಲ್ಲಿ ಭೂಕಂಪ

plants
ಲೈಫ್‌ಸ್ಟೈಲ್10 mins ago

Vastu Tips: ವಾಸ್ತು ಪ್ರಕಾರ ಈ ಗಿಡಗಳನ್ನು ಮನೆಯೊಳಗೆ ಇಡಲೇಬಾರದು!

Junior Mehmood
ಬಾಲಿವುಡ್15 mins ago

Junior Mehmood: ‘ಮೇರಾ ನಾಮ್ ಜೋಕರ್’ ಖ್ಯಾತಿಯ ನಟ ಜೂನಿಯರ್ ಮೆಹಮೂದ್ ಇನ್ನಿಲ್ಲ

cm k chandrashekar rao
ದೇಶ19 mins ago

K Chandrasekhar Rao: ರೇವಂತ್‌ ರೆಡ್ಡಿ ಸಿಎಂ ಆದ ದಿನವೇ ಜಾರಿ ಬಿದ್ದು ಸೊಂಟ ಮುರಿದುಕೊಂಡ ಕೆಸಿಆರ್‌

Jasprit bumarh
ಕ್ರಿಕೆಟ್23 mins ago

Jasprit Bumrah : ಬುಮ್ರಾ ಚಿತ್ರ ಹಾಕಿ ಎಲ್ಲರಿಗೂ ಸಂದೇಶ ರವಾನಿಸಿದ ಮುಂಬಯಿ ಇಂಡಿಯನ್ಸ್​​​

Karthik threw the sandal to vinay Ugly Fight
ಬಿಗ್ ಬಾಸ್39 mins ago

BBK SEASON 10: ಚಪ್ಪಲಿ ಎಸೆದೆ ಕಾರ್ತಿಕ್‌; ನನಗೆ ಮರ್ಯಾದೆ ಇಲ್ವಾ? ಆಚೆ ಹೋಗ್ಬೇಕು ಎಂದ ವಿನಯ್‌!

RBI governor Shaktikanta Das
ದೇಶ1 hour ago

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

Stamp duty
ಕರ್ನಾಟಕ1 hour ago

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

dengue flue
ಆರೋಗ್ಯ2 hours ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ2 hours ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ15 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ16 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ21 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ2 days ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌