ಪ್ರಮುಖ ಸುದ್ದಿ
ವಿಸ್ತಾರ Money Guide | ಲಾಭದಾಯಕ ಟಾಪ್- 5 ಲಾರ್ಜ್ ಕ್ಯಾಪ್ ಈಕ್ವಿಟಿ ಮ್ಯೂಚುಯಲ್ ಫಂಡ್ಗಳಿವು!
ಮ್ಯೂಚುಯಲ್ ಫಂಡ್ಗಳಲ್ಲಿ ಹೆಚ್ಚು ಲಾಭ ತಂದುಕೊಡುವ ಲಾರ್ಜ್ ಕ್ಯಾಪ್ ಈಕ್ವಿಟಿ ಮ್ಯೂಚುಯಲ್ ಫಂಡ್ಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಉಪಯುಕ್ತ ಒಳನೋಟ (ವಿಸ್ತಾರ Money Guide) ಮತ್ತು ವಿವರಗಳು ಇಲ್ಲಿವೆ.
ಶರತ್ ಎಂ.ಎಸ್. ಎಕ್ಸಿಕ್ಯುಟಿವ್ ಎಡಿಟರ್, ವಿಸ್ತಾರ ನ್ಯೂಸ್
ಮ್ಯೂಚಯಲ್ ಫಂಡ್ಗಳ ಬಗ್ಗೆ ಪ್ರಾಥಮಿಕ ಮಾಹಿತಿ ನಮಗೆಲ್ಲ ತಿಳಿದಿದೆ. ಅವುಗಳ ಬಗ್ಗೆ ಮತ್ತಷ್ಟು ವಿಸ್ತಾರವಾದ ಹಾಗೂ ಅತ್ಯಂತ ಉಪಯುಕ್ತವಾದ ವಿವರಗಳನ್ನು ತಿಳಿದುಕೊಳ್ಳೋಣ! ಈಕ್ವಿಟಿ ಮ್ಯೂಚುವಲ್ ಫಂಡ್ಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೇಗೆ? ಹೆಚ್ಚು ಲಾಭ ಕೊಡುವ ಟಾಪ್ 5 ಲಾರ್ಜ್ ಕ್ಯಾಪ್ ಈಕ್ವಿಟಿ ಮ್ಯೂಚುಯಲ್ ಫಂಡ್ಗಳು ಯಾವುದು? ಅವುಗಳಲ್ಲಿ ಎಷ್ಟು ಆದಾಯ ಪಡೆಯಬಹುದು? (ವಿಸ್ತಾರ Money Guide) ಇಲ್ಲಿದೆ ಸಮಗ್ರ ವಿವರ!
ಮ್ಯೂಚುಯಲ್ ಫಂಡ್ ಮತ್ತು ಲಾರ್ಜ್ ಕ್ಯಾಪ್ ಈಕ್ವಿಟಿ ಮ್ಯೂಚುಯಲ್ ಫಂಡ್ ಎಂದರೇನು ಎಂದು ನೀವು ಕೇಳಬಹುದು. ಮ್ಯೂಚುಯಲ್ ಎಂದರೆ ಪರಸ್ಪರ ಫಂಡ್ ಎಂದರೆ ನಿಧಿ. ಪರಸ್ಪರರು ಸೇರಿ ಒಂದು ನಿಧಿಯನ್ನು ಸ್ಥಾಪಿಸಿ, ಅದರ ನಿರ್ವಹಣೆಗೆ ವೃತ್ತಿಪರ ವ್ಯವಸ್ಥಾಪಕರನ್ನು ನೇಮಿಸುವುದೇ ಮ್ಯೂಚುಯಲ್ ಫಂಡ್. ಷೇರು ಮಾರುಕಟ್ಟೆಯಲ್ಲಿ ನೇರವಾಗಿ ಹೂಡಿಕೆ ಮಾಡಲು ಸಾಧ್ಯವಾಗದಿದ್ದವರಿಗೆ, ನುರಿತ ವ್ಯವಸ್ಥಾಪಕರ ನಿರ್ವಹಣೆಯಲ್ಲಿ ಪರೋಕ್ಷವಾಗಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಮ್ಯೂಚುಯಲ್ ಫಂಡ್ ಬೇಕಾಗುತ್ತದೆ. ಇದರಲ್ಲಿ ಪ್ರತಿ ತಿಂಗಳು ಕನಿಷ್ಠ 500 ರೂ. 1000 ರೂ. ಅಥವಾ ಸಾಧ್ಯವಾದಾಗ ಹಣವನ್ನು ಹೂಡಿಕೆ ಮಾಡಲೂ ಅವಕಾಶ ಇದೆ. ಹಣಕಾಸು ತಜ್ಞರು ತಮ್ಮ ವೃತ್ತಿಪರ ನಿರ್ವಹಣೆಯ ಮೂಲಕ ಆದಾಯವನ್ನು ಹೆಚ್ಚಿಸುತ್ತಾರೆ.
ಲಾರ್ಜ್ ಕ್ಯಾಪ್ ಈಕ್ವಿಟಿ ಮ್ಯೂಚುಯಲ್ ಫಂಡ್ ಎಂದರೇನು?
ಷೇರು ಮಾರುಕಟ್ಟೆಯಲ್ಲಿ 7,500 ಕ್ಕೂ ಹೆಚ್ಚು ಕಂಪನಿಗಳಿವೆ. ಇದರಲ್ಲಿ ಯಾವುದು ಒಳ್ಳೆಯದು, ಯಾವುದು ಒಳ್ಳೆಯ ಕಂಪನಿ ಅಲ್ಲ, ಯಾವ ಕಂಪನಿಯಲ್ಲಿ ಹೂಡಿಕೆ ಮಾಡಬಹುದು ಎಂಬುದನ್ನು ತಿಳಿಯುವುದು ಅವಶ್ಯಕ. ಈ ನಿಟ್ಟಿನಲ್ಲಿ ಒಳ್ಳೆಯ ಈಕ್ವಿಟಿ ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡುವುದು ಮುಖ್ಯ. ನಾವು ಈಗ ಟಾಪ್ 5 ಲಾರ್ಜ್ ಕ್ಯಾಪ್ ಈಕ್ವಿಟಿ ಮ್ಯೂಚುಯಲ್ ಫಂಡ್ ಕಂಪನಿಗಳ ಬಗ್ಗೆ ತಿಳಿದುಕೊಳ್ಳೋಣ.
ಲಾರ್ಜ್ ಕ್ಯಾಪ್ ಎಂದರೆ ಬೃಹತ್ ಕಂಪನಿಗಳು. ಭಾರತದ ಷೇರು ಮಾರುಕಟ್ಟೆಯಲ್ಲಿ ನೋಂದಣಿಯಾಗಿರುವ ಟಾಪ್ 100 ಕಂಪನಿಗಳಲ್ಲಿ ಮಾಡುವ ಮ್ಯೂಚುಯಲ್ ಫಂಡ್ ಹೂಡಿಕೆಯನ್ನು ಲಾರ್ಜ್ ಕ್ಯಾಪ್ ಅಥವಾ ಬ್ಲೂ ಚಿಪ್ ಕಂಪನಿಗಳಲ್ಲಿನ ಹೂಡಿಕೆ ಎನ್ನುತ್ತೇವೆ. ಇದನ್ನು ಲಾರ್ಜ್ ಕ್ಯಾಪ್ ಈಕ್ವಿಟಿ ಮ್ಯೂಚುಯಲ್ ಫಂಡ್ ಎಂದು ಕರೆಯುತ್ತಾರೆ. ಈಗ ನಾವು ಲಾರ್ಜ್ ಕ್ಯಾಪ್ ಕೆಟಗರಿಯಲ್ಲಿ ಟಾಪ್ 5 ಯಾವುದು ಎಂಬುದನ್ನು ತಿಳಿಯೋಣ.
ಸಾಮಾನ್ಯವಾಗಿ ಜನರು ಯಾವ ಮ್ಯೂಚುಯಲ್ ಫಂಡ್ನಲ್ಲಿ ಹೂಡಿಕೆ ಮಾಡಬೇಕು ಎಂದು ಕೇಳುತ್ತಾರೆ. ಯಾರದ್ದೋ ಸಲಹೆಗೆ ಯಾವುದೋ ಫಂಡ್ಗಳಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ ಯಾವುದು ಬೆಸ್ಟ್ ಎಂದರೆ ಅದಕ್ಕೆ ಹಲವು ಆಯಾಮಗಳು ಇವೆ. ಇದನ್ನೆಲ್ಲ ಪರಿಗಣಿಸಿ ಇಲ್ಲಿ ಟಾಪ್ 5 ಆಯ್ಕೆ ಮಾಡಲಾಗಿದೆ.
ಟಾಪ್- ೫ ಲಾರ್ಜ್ ಕ್ಯಾಪ್ ಈಕ್ವಿಟಿ ಫಂಡ್ಗಳು
1. ಕೆನರಾ ರೊಬೆಕೋ ಬ್ಲೂ ಚಿಪ್ ಈಕ್ವಿಟಿ ಫಂಡ್
2. ಕೋಟಕ್ ಬ್ಲೂ ಚಿಪ್ ಫಂಡ್ ಗ್ರೋಥ್ ಡೈರೆಕ್ಟ್
3. ಮಿರಾಯ್ ಅಸೆಟ್ ಲಾರ್ಜ್ ಕ್ಯಾಪ್ ಫಂಡ್ ಗ್ರೋಥ್ ಡೈರೆಕ್ಟ್
4. ಐಸಿಐಸಿಐ ಪ್ರೂರೆನ್ಸಿಯಲ್ ಬ್ಲೂಚಿಪ್ ಫಂಡ್ ಡೈರೆಕ್ಟ್ ಗ್ರೋಥ್
5. ಎಕ್ಸಿಸ್ ಬ್ಲೂಚಿಪ್ ಫಂಡ್ ಡೈರೆಕ್ಟ್ ಪ್ಲಾನ್ ಗ್ರೋಥ್
ಕೆನರಾ ರೊಬೆಕೋ ಬ್ಲೂ ಚಿಪ್ ಈಕ್ವಿಟಿ ಫಂಡ್ -CANARA ROBECO BLUCHIP EQUITY FUND : ಈ ಈಕ್ವಿಟಿ ಫಂಡ್ನಲ್ಲಿ ಕಳೆದ 5 ವರ್ಷಗಳಲ್ಲಿ 18.04% ಲಾಭ ಹೂಡಿಕೆದಾರರಿಗೆ ಲಭಿಸಿದೆ. ಇದರಲ್ಲಿ ಎಕ್ಸ್ಪೆನ್ಸ್ ಅನುಪಾತ ಅಂದರೆ ಕಮೀಶನ್ ಕೇವಲ 0.39% ಮಾತ್ರ. ಲಾರ್ಜ್ ಕ್ಯಾಪ್ ಕೆಟಗರಿಯಲ್ಲಿಯೇ ಇದು ಕಡಿಮೆ. ಕನಿಷ್ಠ 1000 ರೂ. ಹಾಗೂ 5000 ಲಂಪ್ಸಮ್ ಹೂಡಿಕೆ ಮಾಡಬಹುದು. ಈ ಫಂಡ್ನಲ್ಲಿ ಪ್ರತಿ ತಿಂಗಳು 10,000 ರೂ.ಗಳನ್ನು 5 ವರ್ಷಗಳ ಕಾಲ ಹೂಡಿಕೆ ಮಾಡಿದರೆ, ಒಟ್ಟು 6 ಲಕ್ಷ ರೂ. ಹೂಡಿಕೆ ಮಾಡುತ್ತೀರಿ. ನಿಮಗೆ ಸಿಗಬಹುದಾದ ಲಾಭ 3.41 ಲಕ್ಷ ರೂ. ಲಾಭ ಸಿಗುತ್ತದೆ. ಅಂದರೆ 18.04% ಲಾಭವನ್ನು ನಿರೀಕ್ಷಿಸಬಹುದು. ಆದರೆ ಮಾರುಕಟ್ಟೆಯ ರಿಸ್ಕ್ ಇದರಲ್ಲಿ ಇರುತ್ತದೆ. ಆದರೆ ಇದು ಬ್ಲೂ ಚಿಪ್ ಕಂಪನಿಗಳ ಹೂಡಿಕೆಯಾದ್ದರಿಂದ ಹೂಡಿಕೆ ಮಾಡಬಹುದು.
೨. ಕೋಟಕ್ ಬ್ಲೂ ಚಿಪ್ ಫಂಡ್ ಗ್ರೋಥ್ ಡೈರೆಕ್ಟ್: KOTAK BLUCHIP FUND GROWTH DIRECT: ಇದು ಹೂಡಿಕೆದಾರರಿಗೆ 5 ವರ್ಷಗಳಲ್ಲಿ 17.52% ಲಾಭ ತಂದುಕೊಟ್ಟಿದೆ. 4,997 ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗಿದೆ. ಹಣಕಾಸು, ತಂತ್ರಜ್ಞಾನ, ಇಂಧನ, ಆಟೊಮೊಬೈಲ್ ವಲಯದಲ್ಲಿ ಹೂಡಿಕೆ ಮಾಡಲಾಗಿದೆ. ಎಕ್ಸ್ಪೆನ್ಸ್ ರೇಶಿಯೊ, ಲಾಭಾಂಶದ ಲೆಕ್ಕದಲ್ಲಿ ಕೋಟಕ್ ಬ್ಲೂ ಚಿಪ್ಗಿಂತ ಕೆನರಾ ರೊಬೋಕೊ ಉತ್ತಮ ಎನ್ನಬಹುದು.
೩. ಮಿರಾಯ್ ಅಸೆಟ್ ಲಾರ್ಜ್ ಕ್ಯಾಪ್ ಫಂಡ್ ಗ್ರೋಥ್ ಡೈರೆಕ್ಟ್- MIRAE ASSET LARGE CAP FUND GROWTH DIRECT : ಕಳೆದ 5 ವರ್ಷಗಳಲ್ಲಿ 16.3% ಲಾಭ ಕೊಟ್ಟಿದೆ. ಇದರಲ್ಲಿ 33,748 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಎಚ್ಡಿಎಫ್ಸಿ, ಐಸಿಐಸಿಐ, ಇನ್ಫೋಸಿಸ್, ರಿಲಯನ್ಸ್ ಇತ್ಯಾದಿ ಕಂಪನಿಗಳಲ್ಲಿ ಹೂಡಿಕೆ ಮಾಡಿದೆ. ಹಣಕಾಸು, ಟೆಕ್ನಾಲಜಿ, ಎನರ್ಜಿ, ಹೆಲ್ತ್ಕೇರ್ನಲ್ಲಿ ಹೂಡಿಕೆ ಮಾಡಿರುವುದನ್ನು ಗಮನಿಸಬಹುದು.
೪. ಐಸಿಐಸಿಐ ಪ್ರೂರೆನ್ಸಿಯಲ್ ಬ್ಲೂಚಿಪ್ ಫಂಡ್ ಡೈರೆಕ್ಟ್ ಗ್ರೋಥ್-ICICI PRUDENTIAL BLUCHIP FUND DIRECT GROWTH : ಈ ಫಂಡ್ನಲ್ಲಿ ಕಳೆದ ಐದು ವರ್ಷಗಳ ಲಾಭಾಂಶ 16.3% ಆಗಿದೆ. ಇದರಲ್ಲಿ 33,739 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಇತರ ಫಂಡ್ ಗೆ ಹೋಲಿಸಿದರೆ ಲಾಭಾಂಶದಲ್ಲಿ ಎರಡನೇ ಸ್ಥಾನದಲ್ಲಿ ಇದೆ. ಈ ಫಂಡ್ನಲ್ಲಿ ಎಕ್ಸ್ಪೆನ್ಸ್ ರೇಶಿಯೊ 1.0% ಇದೆ. ಅಂದರೆ ಕೆನರಾ ರೊಬೋಕೊಗಿಂತ ಹೆಚ್ಚು. ಸಿಪ್ ದೃಷ್ಟಿಯಿಂದ 100 ರೂ.ಗಳ ಅತ್ಯಂತ ಕಡಿಮೆ ಮೊತ್ತದಲ್ಲೂ ಹೂಡಿಕೆ ಮಾಡಬಹುದು. ಲಂಪ್ಸಮ್ನಲ್ಲೂ ಕನಿಷ್ಠ 100 ರೂ. ಹೂಡಿಕೆ ಮಾಡಬಹುದು.
5. ಎಕ್ಸಿಸ್ ಬ್ಲೂಚಿಪ್ ಫಂಡ್ ಡೈರೆಕ್ಟ್ ಪ್ಲಾನ್ ಗ್ರೋಥ್-AXIS BLUE CHIP FUND DIRECT PLAN GROWTH : ಇದು ಕಳೆದ ಐದು ವರ್ಷಗಳಲ್ಲಿ 15.31% ಲಾಭಾಂಶ ನೀಡುತ್ತದೆ. 36,980 ಕೋಟಿ ರೂ.ಗಳನ್ನು ಇದರಲ್ಲಿ ಹೂಡಲಾಗಿರುವುದು ವಿಶೇಷ. ಸಿಪ್ ಆಗಿ 500 ರೂ.ಗಳಿಂದಲೂ ಹೂಡಿಕೆ ಮಾಡಬಹುದು. ಇಲ್ಲಿ ಬಜಾಜ್ ಫೈನಾನ್ಸ್, ಡಿಮಾರ್ಟ್ ಕಂಪನಿಯಲ್ಲೂ (ಅವೆನ್ಯೂ ಮಾರ್ಕೆಟ್ಸ್) ಹೂಡಿಕೆ ಮಾಡಲಾಗಿದೆ. ಸೇವಾ ವಲಯದಲ್ಲೂ ಹೂಡಿಕೆ ಮಾಡಿರುವುದನ್ನು ಗಮನಿಸಬಹುದು.
ಉಪಯುಕ್ತ ಟಿಪ್ಸ್: 1. ಎಕ್ಸ್ಪೆನ್ಸ್ ರೇಶಿಯೊ (ಕಮಿಶನ್) ಎಷ್ಟಿದೆ ಎಂದು ನೋಡಬೇಕು. ಎಕ್ಸ್ಪೆನ್ಸ್ ರೇಶಿಯೊ ಕಡಿಮೆಯಾಗಿ ಇರಬೇಕು. 2. ದೀರ್ಘಾವಧಿ ಹೂಡಿಕೆಯಲ್ಲಿ ಎಕ್ಸ್ಪೆನ್ಸ್ ರೇಶಿಯೊ ಜಾಸ್ತಿ ಇದ್ದರೆ ಲಕ್ಷಗಟ್ಟಲೆ ರೂ. ಕಮೀಶನ್ ಆಗುತ್ತದೆ. 3. ಮೊದಲ ಮೂರು ಫಂಡ್ಗಳ ಆಯ್ಕೆಯನ್ನು ಪರಿಶೀಲಿಸಬಹುದು.
DISCLAIMER: Stock Market and Mutual Funds investments are subject to market risks. There is no assurance and gurantee of returns neither the principal nor appreciation on the investments. Kindly seek advice from your financial planner before investing. User discretion advised. Information presented in this video is for educational purpose only. It has not been prepared with regard to the individual needs, objectives or financial situation of any particular person.
ಪ್ರಮುಖ ಸುದ್ದಿ
Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಅಷ್ಟಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (28-05-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 09:56 ವಾರ: ಭಾನುವಾರ
ನಕ್ಷತ್ರ: ಹುಬ್ಬಾ 26:19 ಯೋಗ: ಹರ್ಷಣ 20:37
ಕರಣ: ಭವ 09:56 ಇಂದಿನ ವಿಶೇಷ: ಶುಕ್ಲಾದೇವಿ ಪೂಜೆ
ಅಮೃತಕಾಲ: ಸಂಜೆ 07 ಗಂಟೆ 14 ನಿಮಿಷದಿಂದ ರಾತ್ರಿ 09 ಗಂಟೆ 01ನಿಮಿಷದವರೆಗೆ.
ಸೂರ್ಯೋದಯ : 05:52 ಸೂರ್ಯಾಸ್ತ : 06:41
ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30
ಮೇಷ : ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ಹಣಗಳಿಸುವ ವಿವಿಧ ಮಾರ್ಗಗಳು ನಿಮ್ಮ ಗಮನಕ್ಕೆ ಬರಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ. ಇದರಿಂದ ಮನೆಯ ವಾತಾವರಣ ಕೆಡುವ ಸಾಧ್ಯತೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಮಿಥುನ: ಅನಿವಾರ್ಯವಾಗಿ ಖರ್ಚು. ಪ್ರಯಾಣ ಮಾಡುವ ಸಾಧ್ಯತೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿ ಬರಲಿದೆ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6
ಕಟಕ: ಹಳೆಯ ವಿಚಾರಗಳನ್ನು ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಮನರಂಜನೆಗಾಗಿ ಖರ್ಚು ಮಾಡುವ ಸಾಧ್ಯತೆ. ಸಭೆ ಸಮಾರಂಭದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗ ಹಾಗೂ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಸಿಂಹ: ಇಂದು ನಿಮ್ಮ ಕೆಲಸ ಕಾರ್ಯಗಳಿಗೆ ಇತರರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಬಾಕಿ ಇರುವ ಸಾಲ ಮರುಪಾವತಿ ಆಗಲಿದೆ. ಆರ್ಥಿಕವಾಗಿ ಲಾಭ. ಹೊಸ ಹೂಡಿಕೆ ವ್ಯವಹಾರಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಕನ್ಯಾ: ಹಳೆಯ ವಿಚಾರಗಳು ನಿಮ್ಮನ್ನು ಮಾನಸಿಕ ಕುಂದಿಸುವ ಸಾಧ್ಯತೆ. ವ್ಯರ್ಥ ಯೋಚನೆಗಳು ಬೇಡ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ವ್ಯವಹಾರ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯದ ಅಭಾವ. ವ್ಯಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಆರೋಗ್ಯ ಸಾಧಾರಣ. ಉದ್ಯೋಗಿಗಳಿಗೆ ಒತ್ತಡ, ತಾಳ್ಮೆ ಅತ್ಯವಶ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ಬರದಂತೆ ಸೃಜನಾತ್ಮಕ ಕಾರ್ಯಗಳಲ್ಲಿ ತೊಡಗಿ. ಕುಲ ದೇವತಾ ದರ್ಶನ, ಅಧ್ಯಾತ್ಮ ಗುರುಗಳ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು. ಅತಿಥಿಗಳಿಗಳ ಆಗಮನದಿಂದ ಸಂತಸ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2
ಧನಸ್ಸು: ಸಾಮಾಜಿಕ ಜವಾಬ್ದಾರಿಗಳು ಹೆಚ್ಚಾಗಲಿವೆ. ಅದರ ಮಧ್ಯೆಯೂ ಆರೋಗ್ಯದ ಕುರಿತು ಕಾಳಜಿ ವಹಿಸಿ. ಸೌಂದರ್ಯ ಪ್ರಜ್ಞೆ ಮೂಡಲಿದೆ. ಭವಿಷ್ಯದ ಹೂಡಿಕೆಗಗಳ ಬಗ್ಗೆ ಆಲೋಚನೆ. ಉದ್ಯೋಗಿಗಳಿಗೆ ಯಶಸ್ಸು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಮಕರ: ಉದ್ವೇಗ ಹೆಚ್ಚಾಗಲಿದೆ. ಆತುರದಲ್ಲಿ ತೆಗೆದುಕೊಂಡ ನಿರ್ಧಾರ ಅಪಾಯ ತರುವುದು. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ. ತಂದೆ-ತಾಯಿಗಳ ಆರೋಗ್ಯದಲ್ಲಿ ವ್ಯತ್ಯಾಸ. ದಿನದ ಮಟ್ಟಿಗೆ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕುಂಭ: ಆರೋಗ್ಯ ಉತ್ತಮ. ಆರ್ಥಿಕ ಹೂಡಿಕೆ ವ್ಯವಹಾರದಲ್ಲಿ ಪ್ರಗತಿ, ಲಾಭ. ವೃತ್ತಿಪರರಿಗೆ ಶುಭ ಫಲ. ಕಾರ್ಯದ ಒತ್ತಡದಿಂದ ಕುಟುಂಬದವರೊಂದಿಗೆ ಕಾಲ ಕಳೆಯಲು ಸಮಯದ ಅಭಾವ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಮೀನ: ಮಾನಸಿಕ ಆರೋಗ್ಯ ಹದಗೆಡಲಿದೆ. ತಾಳ್ಮೆಯಿಂದ ಇರಿ. ಯಾರದರೂ ಪರ ವಹಿಸಿ ಮಾತನಾಡುವುದು ಬೇಡ. ಇದು ನಿಮಗೆ ಅಪಾಯ ತರುವುದು. ಹಣಕಾಸು ಪ್ರಗತಿ ಸಾಧಾರಣ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುತ್ತದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?
ಕರ್ನಾಟಕ
Karnataka Cabinet Expansion: ಸರ್ಕಾರ ಟೇಕಾಫ್ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು
Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.
ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಹೌದು, ಎಂ.ಸಿ.ಸುಧಾಕರ್ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್.ಕೆ.ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ
ಮೂಲ-ವಲಸಿಗ ಜಗಳ
ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಸಚಿವ ಸ್ಥಾನ ಮಿಸ್ ಆದ ಕುರಿತು ಮಾತನಾಡಿದ ಹರಿಪ್ರಸಾದ್, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶ
NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ
NITI Aayog Meeting: ಮುಖ್ಯಮಂತ್ರಿಗಳ ಗೈರು ಹಾಜರಿಯ ಮಧ್ಯೆಯೇ ನೀತಿ ಆಯೋಗದ ಸಭೆಯಲ್ಲಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ಮಂತ್ರ ಪಠಿಸಿದರು. ವಿಕಸಿತ ಭಾರತದ ಕನಸು ಬಿತ್ತಿದರು.
ನವದೆಹಲಿ: ನೀತಿ ಆಯೋಗದ ಎಂಟನೇ ಗವರ್ನಿಂಗ್ ಸಮಿತಿ ಸಭೆ ನಡೆದಿದ್ದು, 11 ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಉಳಿದ ಸಿಎಂಗಳು ಹಾಜರಾಗಿದ್ದು, ಇದೇ ವೇಳೆ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತದ ಅಭಿವೃದ್ಧಿಯ ನಕ್ಷೆ ಹಾಕಿದ್ದಾರೆ. “ಎಲ್ಲರೂ ಒಗ್ಗೂಡಿ ವಿಕಸಿತ ಭಾರತದ (ಅಭಿವೃದ್ಧಿ ಹೊಂದಿದ ಭಾರತ) ಕನಸು ನನಸು ಮಾಡೋಣ” ಎಂದು ಹೇಳಿದ್ದಾರೆ.
“ಭಾರತವು ಏಳಿಗೆ ಹೊಂದುತ್ತಿದ್ದು, ಸರ್ವ ಕ್ಷೇತ್ರಗಳಲ್ಲಿ ನಾವು ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಒಕ್ಕೂಟದ ವ್ಯವಸ್ಥೆಯ ಬೇರುಗಳು ಇನ್ನಷ್ಟು ಬಲವಾಗಬೇಕು. ದೇಶದ ಜನರಿಗೆ ಸಕಲ ಮೂಲ ಸೌಕರ್ಯಗಳು ಸಿಗುವಂತಾಗಬೇಕು. ಜಲ ಸಂರಕ್ಷಣೆ, ಪರಿಸರ ರಕ್ಷಣೆ, ಆರ್ಥಿಕ ಶಿಸ್ತಿನಲ್ಲಿ ನಾವು ಇನ್ನಷ್ಟು ನೈಪುಣ್ಯ ಸಾಧಿಸಬೇಕು. ಜಾಗತಿಕ ಮಟ್ಟದ ಸ್ಪರ್ಧೆಗೆ ನಾವು ಇನ್ನಷ್ಟು ಮುಕ್ತವಾಗಬೇಕು. ಸಣ್ಣ ಕೈಗಾರಿಕೆಗಳು, ಎಂಎಸ್ಎಂಇಗಳ ಏಳಿಗೆಯಾಗಬೇಕು. ಇದರಿಂದ ಮಾತ್ರ ಭಾರತ ಏಳಿಗೆ ಹೊಂದಲು ಸಾಧ್ಯ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಇಂತಹ ಮನೋಭಾವದೊಂದಿಗೆ 2047ರ ವೇಳೆಗೆ ವಿಕಸಿತ ಭಾರತದ ನಿರ್ಮಾಣ ಮಾಡಬೇಕು” ಎಂದು ಕರೆ ನೀಡಿದರು.
ನೀತಿ ಆಯೋಗದ ಸಭೆಯಲ್ಲಿ ದೇಶದ ಅಭಿವೃದ್ಧಿಯ ದೃಷ್ಟಿಯಿಂದ 100 ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ಗಳು, ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸಲಾಗಿದೆ. ಎಂಎಸ್ಎಂಇ, ಮೂಲ ಸೌಕರ್ಯ, ಹೂಡಿಕೆ, ಮಹಿಳಾ ಸಬಲೀಕರಣ, ಆರೋಗ್ಯ, ಕೌಶಲಾಭಿವೃದ್ಧಿ ಸೇರಿ ವಿವಿಧ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.
#8thGCM | The Centre, States & UTs should work as Team 🇮🇳 & fulfil people's dreams & aspirations for a #VikasitBharat @ 2047. #NITIAayog can play a key role in helping them take a quantum leap towards achieving its vision of #AmritKaal: PM @narendramodi
— NITI Aayog (@NITIAayog) May 27, 2023
🔗https://t.co/2g1j5ywKZu pic.twitter.com/9EIJu9SebJ
ಗೈರಾದ ಸಿಎಂಗಳು ಯಾರು? ಏಕೆ?
ದೆಹಲಿಯಲ್ಲಿ ಆಡಳಿತ ಸೇವೆಗಳ ಮೇಲಿನ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಗೆ ಹಾಜರಾಗಿಲ್ಲ. ಇನ್ನು, ಕೇಂದ್ರದಿಂದ ಅನುದಾನ ಸಿಗುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಕೂಡ ಗೈರಾಗಿದ್ದಾರೆ. ಕರ್ನಾಟಕದಲ್ಲಿ ಸಚಿವರ ಪ್ರಮಾಣವಚನ, ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ನೂತನ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬೇರೆ ಕಾರ್ಯಕ್ರಮದಿಂದಾಗಿ ಒಡಿಶಾ ಸಿಎಂ ನವೀನ್ ಪಾಟ್ನಾಯಕ್, ಕೇಂದ್ರದ ಮೇಲಿನ ಅಸಮಾಧಾನದಿಂದಾಗಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್ ಕುಮಾರ್, ತೆಲಂಗಾಣದ ಕೆ.ಚಂದ್ರಶೇಖರ ರಾವ್ ಹಾಗೂ ಯಾವುದೇ ಕಾರಣ ನೀಡದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಇದನ್ನೂ ಓದಿ: NITI Aayog Meeting: ಕೇಂದ್ರಕ್ಕೆ ಬಾಯ್ಕಾಟ್ ಬಿಸಿ; ದೀದಿ ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕೇಜ್ರಿವಾಲ್
ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ
ನೂತನ ಹಾಗೂ ಸುಸಜ್ಜಿತ ಸಂಸತ್ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.
ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೀಕರ್ ಓಂ ಬಿರ್ಲಾ ಭಾನುವಾರ ಉದ್ಘಾಟಿಸಲಿದ್ದಾರೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಾಣ ಅಗತ್ಯವಾಗಿತ್ತು. ಈಗ ಬಳಕೆಯಾಗುತ್ತಿರುವ ಸಂಸತ್ ಭವನ ಶತಮಾನವನ್ನು ಸಮೀಪಿಸುತ್ತಿದ್ದು, ಅದರ ಗರಿಷ್ಠ ಬಳಕೆಯಾಗಿದೆ. ಮುಂದೆ ಸಂಸತ್ ಸದಸ್ಯರ ಸಂಖ್ಯೆ ಕೂಡ ಹೆಚ್ಚಾಗಲಿರುವುದರಿಂದ ಆಸನಗಳ ಸಂಖ್ಯೆಯೂ ಹೆಚ್ಚಿಸುವುದು ಅವಶ್ಯವಾಗಿತ್ತು. ಹಿಂದಿನ ಸಂಸತ್ ಭವನದಲ್ಲಿ ಲೋಕಸಭೆಯ ಆಸನಗಳ ಸಂಖ್ಯೆ 550 ಇದ್ದರೆ, ಹೊಸ ಕಟ್ಟಡದಲ್ಲಿ ಈ ಸಂಖ್ಯೆ 888ಕ್ಕೆ ಏರುತ್ತದೆ. ರಾಜ್ಯಸಭೆಯ ಆಸನಗಳ ಸಂಖ್ಯೆ 250ರಿಂದ 384ಕ್ಕೆ ಏರುತ್ತದೆ. ಪ್ರಾಕೃತಿಕ ಮತ್ತು ಭದ್ರತೆಯ ದೃಷ್ಟಿಯಿಂದ ಈಗಿನ ಕಟ್ಟಡ ಹಿಂದಿನ ಕಟ್ಟಡಕ್ಕಿಂತ ಹೆಚ್ಚು ಸುರಕ್ಷಿತವಾಗಿದೆ.
ಹಿಂದಿನ ಕಟ್ಟಡ ವಿಸ್ತೀರ್ಣ 24,281 ಚ.ಮೀ. ಇದ್ದರೆ, ಈಗಿನ ಕಟ್ಟಡ ವಿಸ್ತೀರ್ಣ 64,500 ಚ.ಮೀ ಇದೆ. ಪ್ರಜಾತಂತ್ರದ ದೇಗುಲ ಎನ್ನಲಾಗುವ ನೂತನ ಕಟ್ಟಡದ ಪಕ್ಷಿನೋಟವೇ ಅದ್ಭುತವಾಗಿದೆ. 971 ಕೋಟಿ ರೂ. ವೆಚ್ಚದ ಈ ಭವ್ಯ ಕಟ್ಟಡ ಕೇವಲ ಎರಡೇ ವರ್ಷದೊಳಗೆ ನಿರ್ಮಾಣ ಆಗಿರುವುದು ಅದ್ಭುತವೇ ಸರಿ. ಆಧುನಿಕ ತಂತ್ರಜ್ಞಾನವನ್ನೂ ಕಲಾಪಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಳಸಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು 60,000 ಕಾರ್ಮಿಕರನ್ನು ಸನ್ಮಾನಿಸಲಿರುವುದು ಕೂಡ ಅರ್ಥಪೂರ್ಣವಾಗಿದೆ. ಕ್ರಿ.ಶ. 3ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ್ದ ಚೋಳ ರಾಜರು ಬಳಸಿದ್ದ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ ಭವನದಲ್ಲಿ ಭಾರತದ ಸ್ವಾತಂತ್ರ್ಯದ ಪ್ರತೀಕವಾಗಿ ಇರಿಸುತ್ತಿರುವುದು ಕೂಡ ಭಾರತೀಯ ಪರಂಪರೆಗೆ ನೀಡುತ್ತಿರುವ ಮಹತ್ವದ ಅಂಶ.
ಪ್ರತಿಯೊಂದು ರಾಷ್ಟ್ರವೂ ತನ್ನದೇ ಆದ ಮಹತ್ತು, ಭವ್ಯತೆಗಳನ್ನು ಹೊಂದಿರುವ ವಾಸ್ತುಶಿಲ್ಪಗಳನ್ನು ಸೃಷ್ಟಿಸುತ್ತದೆ. ಭಾರತದ ಹಳೆಯ ಸಂಸತ್ತು ಕೂಡ ಭವ್ಯವಾದುದು; ಆದರೆ ಅದು ಬ್ರಿಟಿಷರಿಂದ ನಿರ್ಮಿತವಾದುದು. ಬ್ರಿಟಿಷರಿಂದ ನಿರ್ಮಿತ ಎಂಬ ಕಾರಣಕ್ಕೇ ತ್ಯಾಜ್ಯವಾಗಬೇಕಿಲ್ಲ. ಆದರೆ, ನಮ್ಮನ್ನು ಆಳುವ ಸ್ವಾತಂತ್ರ್ಯ ಹಾಗೂ ಅಧಿಕಾರಗಳನ್ನು ನಾವೇ ಪಡೆದುಕೊಂಡಂತೆ, ಹಾಗೆ ಆಳುವ ಸರ್ಕಾರ ಕಾರ್ಯಾಚರಿಸುವ ಸಂಸತ್ ಭವನ ಕೂಡ ನಮ್ಮ ನಿರ್ಮಾಣವೇ ಆಗಿರಬೇಕು ಎಂಬ ಕನಸು ನಮಗಿರುವುದೂ ಸಹಜ. ನೂತನ ಹಾಗೂ ಸುಸಜ್ಜಿತ ಸಂಸತ್ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.
ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ
ಈ ಮಧ್ಯೆ, ಉದ್ಘಾಟನೆ ಸಮಾರಂಭಕ್ಕೆ ಕೆಲವು ಪ್ರತಿಪಕ್ಷಗಳು ಬಹಿಷ್ಕಾರ ಹಾಕಿವೆ. ಲೋಕಸಭೆ- ರಾಜ್ಯಸಭೆ ನಡೆಯುತ್ತಿರುವಾಗ ನೆಪ ತೆಗೆದು ಮಾಡುವ ಸಭಾತ್ಯಾಗವೇ ಸಮಂಜಸವಲ್ಲ ಎಂದಾಗ, ದೇಶದ ಹೆಮ್ಮೆಯಾದ ನೂತನ ಸಂಸತ್ ಭವನದ ಉದ್ಘಾಟನೆಯನ್ನೇ ಬಹಿಷ್ಕರಿಸುವ ನಡೆ ಎಷ್ಟು ಸರಿ? ಇದು ಪ್ರಜಾಪ್ರಭುತ್ವದ ನೈಜ ಚೈತನ್ಯಕ್ಕೇ ಕೊಡಲಿಯೇಟು. ಪ್ರಧಾನಿ ಮೋದಿ, ನೂರ ಮೂವತ್ತು ಕೋಟಿ ಪ್ರಜೆಗಳ ಪ್ರತಿನಿಧಿಯಾಗಿ ಸಂಸತ್ತನ್ನು ಉದ್ಘಾಟಿಸುತ್ತಿದ್ದಾರೆ. ಇನ್ನೂ ನೂರಾರು ವರ್ಷಗಳ ಕಾಲ ಇದು ಅರ್ಥಪೂರ್ಣ ಕಲಾಪಗಳ ತಾಣವಾಗಬೇಕಿದೆ. ರಾಷ್ಟ್ರದ ವಿವೇಕಯುತ ಮುನ್ನಡೆಯನ್ನು ನಿರ್ಣಯಿಸುವ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಳವಾಗಿರಲಿದೆ. ಈ ನಿಟ್ಟಿನಲ್ಲಿ ಪ್ರತಿಪಕ್ಷಗಳು ತಮ್ಮ ನಿರ್ಧಾರ ಮರುಪರಿಶೀಲಿಸಿ ಸಮಾರಂಭದಲ್ಲಿ ಭಾಗವಹಿಸುವುದು ವಿವೇಕಯುತವಾಗಿರುತ್ತದೆ. ಅವರ ಸಮಾರಂಭ ಬಹಿಷ್ಕಾರದ ಕರೆಯ ನಡುವೆಯೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮುಂತಾದ ಪ್ರತಿಪಕ್ಷಗಳ ನಾಯಕರು ಭಾಗವಹಿಸುತ್ತಿರುವುದು ವಿವೇಕದ ನಿರ್ಧಾರ. ಅವರ ಈ ನಡೆ ಇತರರಿಗೆ ಮಾದರಿಯಾಗಲಿ. ನೂತನ ಸಂಸತ್ ಭವನ ಭಾರತದ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ.
-
ಕರ್ನಾಟಕ17 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ20 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ17 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ15 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ11 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕಿರುತೆರೆ18 hours ago
Weekend With Ramesh: ಈ ವಾರದ ವೀಕೆಂಡ್ ವಿತ್ ರಮೇಶ್ ಅತಿಥಿಗಳು ಇವರು!
-
ಕರ್ನಾಟಕ8 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
ಕ್ರಿಕೆಟ್7 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ