Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ? - Vistara News

ವಾಣಿಜ್ಯ

Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

ಉದ್ಯೋಗ, ಆಶ್ರಯ ಬಯಸಿ ಒಂದೂರಿನಿಂದ ಇನ್ನೊಂದು ಊರಿಗೆ ಹೋಗುವವರು ತಮ್ಮ ಹೊಸ ಬದುಕನ್ನು ಬಾಡಿಗೆ ಮನೆಯಿಂದಲೇ ಆರಂಭಿಸುತ್ತಾರೆ. ಅದು ಚಿಕ್ಕದಾಗಿದ್ದರೂ ಸರಿ ಚೆನ್ನಾಗಿರಬೇಕು, ಅಗತ್ಯ ಸೌಕರ್ಯಗಳಿರಬೇಕು ಎಂದು ಬಯಸುತ್ತಾರೆ. ಬಾಡಿಗೆ ಒಪ್ಪಂದದ ಬಗ್ಗೆ ಹೆಚ್ಚಿನವರು ಯೋಚಿಸುವುದಿಲ್ಲ. ಮನೆ ಮಾಲೀಕ ಹೇಳುವ ಬಜೆಟ್ ಸೂಕ್ತ ಎನಿಸಿದರೆ ಒಪ್ಪಂದ ಪತ್ರಕ್ಕೆ ಸಹಿ ಹಾಕುತ್ತಾರೆ. ಈ ಬಾಡಿಗೆ ಒಪ್ಪಂದವನ್ನು (Rent Agreement) ಕೇವಲ 11 ತಿಂಗಳ ಅವಧಿಗೆ ಮಾತ್ರ ಮಾಡಲಾಗುತ್ತದೆ. ಇದು ಯಾಕೆ ಎಂದು ಎಂದಾದರೂ ಯೋಚಿಸಿದ್ದೀರಾ? ಅದಕ್ಕೆ ಇಲ್ಲಿದೆ ಉತ್ತರ.

VISTARANEWS.COM


on

Rent Agreement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನೆ, ಅಂಗಡಿ, ಕಚೇರಿ ಬಾಡಿಗೆ ಒಪ್ಪಂದ ಪತ್ರಗಳನ್ನು (Tenancy agreement letter) ಎಂದಾದರೂ ಗಮನಿಸಿದ್ದೀರಾ? ಬಾಡಿಗೆ ಒಪ್ಪಂದವನ್ನು (Rent Agreement) ಕೇವಲ 11 ತಿಂಗಳ ಅವಧಿಗೆ ಮಾತ್ರ ಮಾಡಲಾಗುತ್ತದೆ. ಇದು ಯಾಕೆ ಎಂದು ಎಂದಾದರೂ ಯೋಚಿಸಿದ್ದೀರಾ? ಬಾಡಿಗೆ ಒಪ್ಪಂದ ಪತ್ರ ಓದಿರುವವರು ಇದು ಕಾನೂನಿನ ನಿಯಮ (rule of law) ಅಂದುಕೊಂಡು ಸುಮ್ಮನೆ ಸಹಿ ಮಾಡಿರುತ್ತಾರೆ. ಇಲ್ಲದವರು ಇದರ ಬಗ್ಗೆ ಯೋಚಿಸಲು ಹೋಗಿರಲಿಕ್ಕಿಲ್ಲ. ನಾವು ಇರಬೇಕಾದ ಸ್ಥಳ ಚೆನ್ನಾಗಿದೆ, ಎಲ್ಲ ಸವಲತ್ತು ಇದೆ, ಕಾನೂನು ಕಟ್ಟಳೆ ಏನೇ ಇದ್ದರೂ ಅದನ್ನು ಮಾಲೀಕರು ನೋಡಿಕೊಳ್ಳುತ್ತಾರೆ ಎಂದುಕೊಂಡು ಅದರ ಚಿಂತೆಗೆ ಹೋಗುವುದಿಲ್ಲ.

ಬಾಡಿಗೆ ಒಪ್ಪಂದ ಎಂದರೇನು?

ಬಾಡಿಗೆ ಒಪ್ಪಂದವು ನಿರ್ದಿಷ್ಟಪಡಿಸಿದ ನಿಯಮಗಳು ಮತ್ತು ಷರತ್ತುಗಳನ್ನು ಒಳಗೊಂಡಿರುವ ದಾಖಲೆಯಾಗಿದೆ. ಆಸ್ತಿಯನ್ನು ಬಾಡಿಗೆಗೆ ನೀಡುವಾಗ ಆಸ್ತಿ ಮಾಲೀಕರಿಗೆ ಇರುವ ಅಧಿಕಾರವನ್ನು ಇದು ವ್ಯಾಖ್ಯಾನಿಸುತ್ತದೆ ಹಾಗೂ ಆಸ್ತಿ ಮಾಲೀಕ ಮತ್ತು ಬಾಡಿಗೆದಾರರಿಗೆ ಇರುವ ಸಂಬಂಧ, ಎರಡೂ ಕಡೆಯವರಿಗೆ ಇರುವ ಕಟ್ಟುಪಾಡುಗಳನ್ನು ಇದು ಉಲ್ಲೇಖಿಸುತ್ತದೆ.


ಬಾಡಿಗೆ ಒಪ್ಪಂದವು ಕೇವಲ 11 ತಿಂಗಳದ್ದಾಗಿರುತ್ತದೆ. 11 ತಿಂಗಳ ಬಳಿಕ ಅದನ್ನು ಮತ್ತೆ ನವೀಕರಿಸುವುದು ಮುಖ್ಯವಾಗಿರುತ್ತದೆ. ಇದಕ್ಕೆ ಮುಖ್ಯ ಕಾರಣ ಇದು ಕಾನೂನು ಸಂಬಂಧವನ್ನು ಹೊಂದಿದೆ. ಆಸ್ತಿ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜವಾಬ್ದಾರಿಗಳನ್ನು ಕಾನೂನು ನಿರ್ಧರಿಸುತ್ತದೆ. ಇದರಲ್ಲಿ ಬಾಡಿಗೆದಾರ ಮತ್ತು ಆಸ್ತಿ ಮಾಲೀಕರಿಗೆ ಇರುವ ಕಾನೂನು ನಿಯಮಗಳನ್ನು ಉಲ್ಲೇಖಿಸಲಾಗುತ್ತದೆ. ಇದರಲ್ಲಿ ಆಸ್ತಿಯ ಬಾಡಿಗೆ, ನಿರ್ವಹಣೆ, ಭದ್ರತೆ ಇತ್ಯಾದಿಗಳ ಷರತ್ತುಗಳ ಮೇಲೆ ಎರಡು ಪಕ್ಷದವರಿಗೂ ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ.

ಭೂಮಾಲೀಕರು ಮತ್ತು ಹಿಡುವಳಿದಾರರು ಈ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಅನುಸರಿಸುವುದನ್ನು ಬಾಡಿಗೆ ಒಪ್ಪಂದವು ಖಚಿತಪಡಿಸುತ್ತದೆ. ಬಾಡಿಗೆ ಒಪ್ಪಂದವು ಕೆಲವೊಂದು ಸಂದರ್ಭದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಎರಡೂ ಪಕ್ಷಗಳ ನಡುವೆ ವಿವಾದ ಉಂಟಾದರೆ ಅದನ್ನು ಸುಲಭವಾಗಿ ಕಾನೂನಿನ ರೂಪದಲ್ಲಿ ಪ್ರಸ್ತುತಪಡಿಸಿ ತ್ವರಿತ ಪರಿಹಾರವನ್ನು ಪಡೆಯಲು ಇದು ಸಹಾಯ ಮಾಡುತ್ತದೆ.

11 ತಿಂಗಳ ಬಾಡಿಗೆ ಒಪ್ಪಂದವು ನ್ಯಾಯಾಲಯದಲ್ಲಿ ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಯಾವುದೇ ವಿವಾದಗಳ ಸಂದರ್ಭದಲ್ಲಿ ಅದನ್ನು ಪುರಾವೆಯಾಗಿ ಪರಿಗಣಿಸಬಹುದು.


ನಿಯಮಗಳು ಏನು?

100 ರೂ.ಯ ಸ್ಟ್ಯಾಂಪ್ ಡ್ಯೂಟಿ ಪೇಪರ್‌ನಲ್ಲಿ ಬರೆದಿರುವ ನಿಯಮಗಳನ್ನು ಓದಿ ಬಾಡಿಗೆದಾರರು ಮತ್ತು ಜಮೀನುದಾರರು ಅದರಲ್ಲಿ ಸಹಿ ಮಾಡಬೇಕು. ಜೊತೆಗೆ ಒಪ್ಪಂದಕ್ಕೆ ಇಬ್ಬರು ಸಾಕ್ಷಿಗಳಿರಬೇಕು. ಗುರುತು ಪತ್ರ, ಬಾಡಿಗೆ ಒಪ್ಪಂದವನ್ನು ಮಾನ್ಯ ಮಾಡಲು ಅವರ ಸಹಿಗಳು ಅಗತ್ಯವಿದೆ. 11 ತಿಂಗಳ ಬಾಡಿಗೆ ಒಪ್ಪಂದವನ್ನು ಕಾನೂನು ಪ್ರಕಾರ ಮುಕ್ತಾಯ ದಿನಾಂಕದ ಮೊದಲ 30 ದಿನಗಳಲ್ಲಿ ನವೀಕರಿಸಬೇಕಾಗಿದೆ.

11 ತಿಂಗಳ ಬಾಡಿಗೆ ಒಪ್ಪಂದಕ್ಕೆ ನೋಟರಿ ನೋಂದಣಿ ಮುಖ್ಯವಲ್ಲ. ಆದರೆ ಬಾಡಿಗೆ 11 ತಿಂಗಳುಗಳಿಗಿಂತ ಹೆಚ್ಚಿನ ಅವಧಿಯ ಒಪ್ಪಂದವಾಗಿದ್ದರೆ ಜಮೀನುದಾರ ಮತ್ತು ಹಿಡುವಳಿದಾರರ ಅಥವಾ ಮಾಲೀಕರು ಮತ್ತು ಬಾಡಿಗೆದಾರರ ಸಮ್ಮುಖದಲ್ಲಿ ಹತ್ತಿರದ ಉಪ-ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಲೇಬೇಕು.

ಬಾಡಿಗೆ ಒಪ್ಪಂದ 11 ತಿಂಗಳುಗಳ ಕಾಲ ಏಕೆ?

ಕೇವಲ 11 ತಿಂಗಳ ಬಾಡಿಗೆ ಒಪ್ಪಂದವನ್ನು ರಚಿಸಲು ಪ್ರಮುಖ ಕಾರಣಗಳಿವೆ. ಇದಕ್ಕೆ ಯಾವುದೇ ನೋಂದಣಿ ಅಗತ್ಯವಿಲ್ಲ. ನೋಂದಣಿ ಕಾಯಿದೆ 1908ರ ಪ್ರಕಾರ ಉಪ-ವಿಭಾಗ (1) ನ ಷರತ್ತು (ಡಿ) ಅಡಿಯಲ್ಲಿ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಬಾಡಿಗೆ ಒಪ್ಪಂದದ ನೋಂದಣಿ ಕಡ್ಡಾಯವಾಗಿದೆ. ಬಾಡಿಗೆ ನಿಯಂತ್ರಣ ಕಾಯಿದೆ ಅಡಿಯಲ್ಲಿ, ಒಳಗೊಂಡಿರುವ ಪಕ್ಷಗಳು ಯಾವುದೇ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಿಲ್ಲ. 11 ತಿಂಗಳ ಬಾಡಿಗೆ ಒಪ್ಪಂದವನ್ನು ರಚಿಸಲು ಯಾವುದೇ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಪಾವತಿಸಬೇಕಿಲ್ಲ.

100 ರೂಪಾಯಿಯ ಸ್ಟ್ಯಾಂಪ್ ಡ್ಯೂಟಿ ಪೇಪರ್ ಅನ್ನು ಬಳಸಿಕೊಂಡು ಒಪ್ಪಂದಗಳನ್ನು ಸುಲಭವಾಗಿ ನವೀಕರಿಸಬಹುದು. ಬಾಡಿಗೆ ಒಪ್ಪಂದವನ್ನು ವಿಸ್ತರಿಸಲು ಇದರಲ್ಲಿ ಅವಕಾಶವಿದೆ. 11 ತಿಂಗಳ ಬಾಡಿಗೆ ಒಪ್ಪಂದದ ಸ್ವರೂಪವು ಭೂಮಾಲೀಕರಿಗೆ ಆಸ್ತಿಯ ಮೇಲಿನ ಭದ್ರತೆಯನ್ನು ಖಚಿತಪಡಿಸುತ್ತದೆ. ಒಂದು ವರ್ಷದೊಳಗೆ ಅವರಿಗೆ ಮಾರುಕಟ್ಟೆ ಪರಿಸ್ಥಿತಿಗಳು ಮತ್ತು ಅವರ ಹಣಕಾಸಿನ ಆದ್ಯತೆಗಳ ಆಧಾರದ ಮೇಲೆ ಮಾಸಿಕ ಬಾಡಿಗೆಯನ್ನು ಪರಿಶೀಲಿಸಬಹುದು.


11 ತಿಂಗಳಿಗಿಂತ ಹೆಚ್ಚು ಬಾಡಿಗೆ ಒಪ್ಪಂದಕ್ಕೆ ನೋಂದಣಿ ಕಡ್ಡಾಯವಾಗಿದೆ. ನೋಟರಿ ಮೂಲಕ ಮಾಡಬೇಕಾಗುತ್ತದೆ. ಯಾವುದೇ ವಿವಾದದ ಸಂದರ್ಭದಲ್ಲಿ ಎರಡೂ ಪಕ್ಷಗಳು ನಿರ್ದಿಷ್ಟ ಹಣವನ್ನು ಪಾವತಿಸಬೇಕಾಗಬಹುದು. ದಾಖಲಾತಿಯನ್ನು ನೋಂದಾಯಿಸದಿದ್ದಕ್ಕಾಗಿ ದಂಡವನ್ನೂ ವಿಧಿಸಬಹುದು. ಬಾಡಿಗೆಯನ್ನು ನೋಂದಾಯಿಸಲು ಆಸ್ತಿ ಮಾಲೀಕರು ಮುದ್ರಾಂಕ ಶುಲ್ಕವನ್ನು ಪಾವತಿಸಬೇಕು. ಒಪ್ಪಂದವು 11 ತಿಂಗಳಿಗಿಂತ ಹೆಚ್ಚು ಕಾಲ ಜಾರಿಯಲ್ಲಿದ್ದರೆ ಇವುಗಳ ಶುಲ್ಕಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಿರಬಹುದು.

ಇದನ್ನೂ ಓದಿ: Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

11 ತಿಂಗಳ ಬಾಡಿಗೆ ಒಪ್ಪಂದವು ಮಾನ್ಯವೇ?

ಭಾರತೀಯ ನ್ಯಾಯಾಲಯಗಳಲ್ಲಿ 11 ತಿಂಗಳ ಬಾಡಿಗೆ ಒಪ್ಪಂದ ಮಾನ್ಯವಾಗಿದೆ. ಈ ಒಪ್ಪಂದವನ್ನು 100 ರೂ. ಮೌಲ್ಯದ ಸ್ಟಾಂಪ್ ಪೇಪರ್ ಮೇಲೆ ಮಾಡಿಸಲೇಬೇಕು. ಇದಕ್ಕೆ ಯಾವುದೇ ಮುದ್ರಾಂಕ ಶುಲ್ಕವಿಲ್ಲ. ಬಾಡಿಗೆ ಒಪ್ಪಂದವು 12 ತಿಂಗಳಿಗಿಂತ ಹಳೆಯದಾಗಿದ್ದರೆ ಮಾತ್ರ ಮುದ್ರಾಂಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

11 ತಿಂಗಳು ಪೂರ್ಣಗೊಳ್ಳುವ ಮೊದಲು ಆಸ್ತಿ ಬಿಡಬಹುದೇ?

ಹಿಡುವಳಿದಾರ ಅಥವಾ ಬಾಡಿಗೆದಾರ 11 ತಿಂಗಳುಗಳು ಪೂರ್ಣಗೊಳ್ಳುವ ಮೊದಲು ಆಸ್ತಿ ಖಾಲಿ ಮಾಡಿ ಹೋಗಬಹುದು. ಆದರೆ ಇದಕ್ಕೆ ನಿಯಮಗಳಿವೆ. ಬಾಡಿಗೆ ಒಪ್ಪಂದದಲ್ಲಿ ನಿರ್ದಿಷ್ಟಪಡಿಸಿದ ನಿಯಮಗಳನ್ನು ಅನುಸರಿಸಬೇಕು. ಇದರಲ್ಲಿ ಮುಖ್ಯವಾಗಿ ನೊಟೀಸ್ ನೀಡಬೇಕು. ಇಲ್ಲವಾದರೆ ಮಾಲೀಕರಿಗೆ ದಂಡವನ್ನು ಪಾವತಿಸಬೇಕಾಗಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

Hindenburg Report : ಆದಾಗ್ಯೂ, ಸೆನ್ಸೆಕ್ಸ್ ಇಂಟ್ರಾ-ಡೇ ವಹಿವಾಟಿನಲ್ಲಿ 300 ಪಾಯಿಂಟ್​ಗಳ ಜಿಗಿತ ಕಂಡು ಅಲ್ವಾವಧಿಯವರೆಗೆ 80,000 ಅಂಕಗಳ ಮಟ್ಟವನ್ನು ದಾಟಿತ್ತು. ಇದು ಮಾರುಕಟ್ಟೆಯಒಟ್ಟಾರೆ ಆರ್ಥಿಕ ಬೆಳವಣಿಗೆಯಲ್ಲಿ ಭಾರತೀಯ ಹೂಡಿಕೆದಾರರ ನಂಬಿಕೆಯನ್ನು ಪ್ರತಿಬಿಂಬಿಸಿದೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್ ಕೇವಲ 57 ಪಾಯಿಂಟ್ಸ್ ಕುಸಿದು 79,648 ಕ್ಕೆ ನಿಂತಿದ್ದು. ನಿಫ್ಟಿ 20 ಪಾಯಿಂಟ್ಸ್ ಕುಸಿದು 24,347 ಕ್ಕೆ ತಲುಪಿದೆ. ಹೀಗಾಗಿ ಭಾರೀ ಕುಸಿತ ಕಾಣುತ್ತದೆ ಎಂಬ ಅಂದಾಜಿ ಸುಳ್ಳಾಗಿದೆ.

VISTARANEWS.COM


on

Hindenburg Report
Koo

ನವದೆಹಲಿ: ಭಾರತೀಯ ಷೇರು ಮಾರುಕಟ್ಟೆಗೆ (Stock Market) ಹಾನಿ ಮಾಡಬೇಕು ಎಂಬ ಉದ್ದೇಶದಿಂದ ಅಮೆರಿಕದ ಮೂಲಕ ಶಾರ್ಟ್​ ಸೆಲ್ಲಿಂಗ್​ ಸಂಸ್ಥೆ ಹಿಂಡೆನ್​ಬರ್ಗ್​​ ರೀಸರ್ಚ್​ ಎಲ್​ಎಲ್​​ಸಿ ಬಿಡುಗಡೆ ಮಾಡಿರುವ ವರದಿ (Hindenburg Report) ಠುಸ್ ಎಂದಿದೆ. ಸೋಮವಾರ ಭಾರತೀಯ ಷೇರು ಮಾರುಕಟ್ಟೆಗೆ ಯಾವುದೇ ಯಾನಿ ಉಂಟಾಗಿಲ್ಲ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ಅಧ್ಯಕ್ಷರಾದ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ವಿರುದ್ಧದ ಹಿಂಡನ್​ಬರ್ಗ್​ ಆರೋಪಗಳನ್ನು ಭಾರತೀಯ ಹೂಡಿಕೆದಾರರು ಸಾರಾಸಗಟು ತಿರಸ್ಕರಿಸಿದ್ದಾರೆ.

ಸೆಬಿ ಮುಖ್ಯಸ್ಥರ ವಿರುದ್ಧದ ಗಂಭೀರ ಆರೋಪಗಳ ಬಗ್ಗೆ ಜಂಟಿ ಸದನ ಸಮಿತಿಯಿಂದ ತನಿಖೆ ನಡೆಸುವುದಾಗಿ ಪ್ರಧಾನಿ ಘೋಷಿಸಬೇಕು ಎಂದು ರಾಹುಲ್ ಗಾಂಧಿ ಭಾನುವಾರ ವೀಡಿಯೊ ಸಂದೇಶದಲ್ಲಿ ಒತ್ತಾಯಿಸಿದರು, “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕದ ಸಮಗ್ರತೆಗೆ ಅದರ ಅಧ್ಯಕ್ಷರ ವಿರುದ್ಧದ ಆರೋಪಗಳಿಂದ ತೀವ್ರವಾಗಿ ಹಾನಿಯಾಗಿದೆ ” ಎಂದು ಹೇಳಿದರು. ಹೀಗಾಗಿ ಸೋಮವಾರ ವರದಿಯು ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಆ ವರದಿಯನ್ನು ಭಾರತೀಯ ಹೂಡಿಕೆದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.

ಆದಾಗ್ಯೂ, ಸೆನ್ಸೆಕ್ಸ್ ಇಂಟ್ರಾ-ಡೇ ವಹಿವಾಟಿನಲ್ಲಿ 300 ಪಾಯಿಂಟ್​ಗಳ ಜಿಗಿತ ಕಂಡು ಅಲ್ವಾವಧಿಯವರೆಗೆ 80,000 ಅಂಕಗಳ ಮಟ್ಟವನ್ನು ದಾಟಿತ್ತು. ಇದು ಮಾರುಕಟ್ಟೆಯಒಟ್ಟಾರೆ ಆರ್ಥಿಕ ಬೆಳವಣಿಗೆಯಲ್ಲಿ ಭಾರತೀಯ ಹೂಡಿಕೆದಾರರ ನಂಬಿಕೆಯನ್ನು ಪ್ರತಿಬಿಂಬಿಸಿದೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್ ಕೇವಲ 57 ಪಾಯಿಂಟ್ಸ್ ಕುಸಿದು 79,648 ಕ್ಕೆ ನಿಂತಿದ್ದು. ನಿಫ್ಟಿ 20 ಪಾಯಿಂಟ್ಸ್ ಕುಸಿದು 24,347 ಕ್ಕೆ ತಲುಪಿದೆ. ಹೀಗಾಗಿ ಭಾರೀ ಕುಸಿತ ಕಾಣುತ್ತದೆ ಎಂಬ ಅಂದಾಜಿ ಸುಳ್ಳಾಗಿದೆ.

ಮಾರುಕಟ್ಟೆ ತಜ್ಞರ ಪ್ರಕಾರ, ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ವಿರುದ್ಧ ಹಿಂಡೆನ್​​​ಬರ್ಗ್​ ಅವರ ಆರೋಪಗಳ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ದೃಢತೆಯನ್ನು ಪ್ರದರ್ಶಿಸಿದೆ, ನಕಾರಾತ್ಮಕ ವರದಿಯ ಹೊರತಾಗಿಯೂ, ದೇಶೀಯ ಷೇರು ಮಾರುಕಟ್ಟೆಗಳು ಅವರನ್ನು ತಿರಸ್ಕರಿಸಿದೆ.

ಜಾಗತಿಕ ಮಾರುಕಟ್ಟೆಗಳಿಂದ ಸಕಾರಾತ್ಮಕ ಸೂಚನೆ ಪಡೆದುಕೊಂಡು ಮಾರುಕಟ್ಟೆಯು ಹಿಂಡೆನ್ಬರ್ಗ್ ಆರೋಪಗಳಿಗೆ ಕಿಮ್ಮತ್ತು ನೀಡಲಿಲ್ಲ. ಹಿಂಡೆನ್ಬರ್ಗ್ ವರದಿಯು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಮತ್ತು ಗೂಳಿಯ ಓಟವು ಉತ್ತಮವಾಗಿದೆ ಎಂದು ಮಾರುಕಟ್ಟೆ ವೀಕ್ಷಕರು ಹೇಳಿದ್ದಾರೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

ತಪ್ಪಾದ ವರದಿ

ಹಿಂಡೆನ್​ಬರ್ಗ್​ನಂಥ ಆಧಾರವಿಲ್ಲದ ವರದಿಗಳಿಗೆ ಪ್ರತಿಕ್ರಿಯಿಸುವ ಬದಲು ಶಾಂತವಾಗಿರುವಂತೆ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಹೂಡಿಕೆದಾರರಿಗೆ ಭಾನುವಾರ ಸಲಹೆ ನೀಡಿತ್ತು. ಅಮೆರಿಕದ ಶಾರ್ಟ್​ ಸೆಲ್ಲರ್​ ಹಿಂಡೆನ್ಬರ್ಗ್ ರಿಸರ್ಚ್ ಮಾಡಿದ ಆರೋಪಗಳಿಗೆ ಸೆಬಿ ಅಧ್ಯಕ್ಷರು ಮತ್ತು ಅವರ ಪತಿ ವಿವರವಾದ ಪ್ರತಿಕ್ರಿಯೆ ನೀಡಿದ್ದಾರೆ. ಶೋಕಾಸ್ ನೋಟಿಸ್​ಗೆ ಉತ್ತರಿಸುವ ಬದಲು, ಅವರು ಸೆಬಿಯ ವಿಶ್ವಾಸಾರ್ಹತೆಯ ಮೇಲೆ ದಾಳಿ ಮಾಡಲು ಮತ್ತು ಅದರ ಅಧ್ಯಕ್ಷರ ಚಾರಿತ್ರ್ಯ ಹರಣ ಮಾಡಲು ಪ್ರಯತ್ನಿಸಲು ನಿರ್ಧರಿಸಿರುವುದು ದುರದೃಷ್ಟಕರ ಎಂದು ಹೇಳಿದರು.

ದಂಪತಿ ಎಲ್ಲಾ ಆರೋಪಗಳನ್ನು ದೃಢವಾಗಿ ವಿವರಣೆ ನೀಡಿದ್ದಾರೆ. ಸೆಬಿಯಲ್ಲಿ ಮಾಧಾಬಿ ಅವರ ಅಧಿಕಾರಾವಧಿಗೆ ಮುಂಚಿತವಾಗಿ ಹೂಡಿಕೆ ನಡೆದಿದೆ ಎಂಬುದಾಗಿ ಹೇಳಿದ್ದಾರೆ.

Continue Reading

ವಾಣಿಜ್ಯ

Palika Bazar: ಬೆಂಗಳೂರಿನಲ್ಲೂ ದೆಹಲಿಯಂತಹ ʼಪಾಲಿಕಾ ಬಜಾರ್ʼ; ಎಲ್ಲಿ ನಿರ್ಮಾಣ? ಯಾವಾಗ ಆರಂಭ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇರುವಂತ ಅಗ್ಗದ ಬಟ್ಟೆ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹೆಸರುವಾಸಿಯಾಗಿರುವ ಪಾಲಿಕಾ ಬಜಾರ್ (Palika Bazar) ನಿರ್ಮಾಣವಾಗಲಿದೆ. ಆಗಸ್ಟ್ ತಿಂಗಳ ಅಂತ್ಯದ ವೇಳೆಗೆ ಇದು ಬೆಂಗಳೂರಿನ ವಿಜಯನಗರದಲ್ಲಿ ತೆರೆಯುವ ನಿರೀಕ್ಷೆ ಇದ್ದು, ಇದರ ಕಾರ್ಯಗಳು ಬಹುತೇಕ ಪೂರ್ಣಗೊಂಡಿದೆ.

VISTARANEWS.COM


on

By

Palika Bazar
Koo

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಗೆ (Delhi) ಭೇಟಿ ಕೊಟ್ಟವರು ಅಲ್ಲಿರುವ ಅಗ್ಗದ ಬಟ್ಟೆ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹೆಸರುವಾಸಿಯಾಗಿರುವ ಪಾಲಿಕಾ ಬಜಾರ್ (Palika Bazar) ಸಿಲಿಕಾನ್ ಸಿಟಿ ಬೆಂಗಳೂರಲ್ಲೂ (Silicon City bengaluru) ಇದ್ದಿದ್ದರೆ ಎಷ್ಟು ಚೆನ್ನಾಗಿ ಇರುತ್ತಿತ್ತು ಎಂದು ಯೋಚಿಸದೆ ಇರಲಾರರು. ಇನ್ನು ಈ ಬಗ್ಗೆ ಕನಸು ಕಾಣಬೇಕಿಲ್ಲ. ಯಾಕೆಂದರೆ ದೆಹಲಿಯಲ್ಲಿರುವಂತೆಯೇ ಬೆಂಗಳೂರು ತನ್ನದೇ ಆದ ಪಾಲಿಕಾ ಬಜಾರ್ ಅನ್ನು ಶೀಘ್ರದಲ್ಲೇ ಹೊಂದಲಿದೆ. ದೆಹಲಿಯಲ್ಲಿ ಇರುವಂತ ಪಾಲಿಕಾ ಬಜಾರ್ ಆಗಸ್ಟ್ ತಿಂಗಳಾಂತ್ಯದ ವೇಳೆ ಬೆಂಗಳೂರಿನಲ್ಲಿ ಉದ್ಘಾಟನೆಯಾಗಲಿದೆ.

ಎಲ್ಲಿ ಹೇಗೆ?

ದೆಹಲಿಯ ಪಾಲಿಕಾ ಬಜಾರ್ ಅಂಡರ್‌ ಗ್ರೌಂಡ್‌ ಶಾಪಿಂಗ್ ಕೇಂದ್ರವಾಗಿದೆ. ಪಶ್ಚಿಮ ಬೆಂಗಳೂರಿನ ವಿಜಯನಗರದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಸಂಪೂರ್ಣ ಹವಾನಿಯಂತ್ರಿತ ಮಾರುಕಟ್ಟೆಯು ವಿಜಯನಗರ ಮೆಟ್ರೋ ನಿಲ್ದಾಣದ ಸಮೀಪದಲ್ಲಿದೆ ಮತ್ತು ಸ್ಥಳೀಯರಿಗೆ ಸುಲಭವಾಗಿ ಇಲ್ಲಿಗೆ ತಲುಪುವ ವ್ಯವಸ್ಥೆ ಇದೆ.


ಒಂದು ಕಾಲದಲ್ಲಿ ಆ ಸ್ಥಳದಲ್ಲಿ 150ಕ್ಕೂ ಹೆಚ್ಚು ಮಾರಾಟಗಾರರು ತಾಜಾ ತರಕಾರಿ, ಹೂವುಗಳಿಂದ ಹಿಡಿದು ದೈನಂದಿನ ಅಗತ್ಯ ವಸ್ತುಗಳವರೆಗೆ ಇಲ್ಲಿ ಎಲ್ಲವನ್ನೂ ಮಾರಾಟ ಮಾಡುತ್ತಿದ್ದರು. ಹೊಸದಾಗಿ ನಿರ್ಮಿಸುವ ಸಲುವಾಗಿ ಈ ರಸ್ತೆಯನ್ನು ಅಧಿಕಾರಿಗಳು 2017ರಲ್ಲಿ ತೆರವುಗೊಳಿಸಿದ್ದರು. ಇದೀಗ ಆಧುನಿಕ ಅಂಡರ್‌ ಗ್ರೌಂಡ್‌ ಮಾರುಕಟ್ಟೆಯ ಸ್ಥಳ ಅಲ್ಲಿ ತಲೆ ಎತ್ತಲಿದೆ. ಈ ವಿಸ್ತಾರವಾದ ಮಾರುಕಟ್ಟೆಯು ನೂರು ಮೀಟರ್ ಉದ್ದ ಮತ್ತು ಹನ್ನೊಂದು ಮೀಟರ್ ಅಗಲವನ್ನು ಹೊಂದಿದೆ. 3 ಮೀಟರ್ ಅಗಲದ ಪಾದಚಾರಿ ಕಾಲುದಾರಿಯ ಎರಡೂ ಬದಿಯಲ್ಲಿ 75ಕ್ಕೂ ಹೆಚ್ಚು ಅಂಗಡಿಗಳನ್ನು ಅಚ್ಚುಕಟ್ಟಾಗಿ ಹೊಂದಿಸಲಾಗಿದೆ.


ಪಾಲಿಕಾ ಬಜಾರ್‌ನಲ್ಲಿರುವ ಸೌಲಭ್ಯಗಳು ಏನೇನು?

ಈ ಮಾರುಕಟ್ಟೆಯು ಆಧುನಿಕ ಮತ್ತು ಆರಾಮದಾಯಕವಾಗಿದ್ದು, ದೆಹಲಿಯ ಶಾಪಿಂಗ್ ಸೆಂಟರ್‌ಗಳ ಶೈಲಿಯಲ್ಲಿದೆ. ಹವಾನಿಯಂತ್ರಣ, ಸ್ವಯಂ ಚಾಲಿತ ಸ್ಲೈಡಿಂಗ್ ಬಾಗಿಲುಗಳು, ಎಸ್ಕಲೇಟರ್‌ಗಳು ಮತ್ತು ಎಲಿವೇಟರ್‌ಗಳನ್ನು ಹೊಂದಿದೆ. ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಯೋಜನೆಯನ್ನು ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಂದರ್ಶಕರ ಅನುಕೂಲಕ್ಕಾಗಿ ಎರಡು ಪ್ರವೇಶ ದ್ವಾರಗಳನ್ನು ಮತ್ತು ಪ್ರವಾಹವನ್ನು ತಪ್ಪಿಸಲು ನೀರಿನ ಪೈಪ್‌ಲೈನ್ ವ್ಯವಸ್ಥೆಯನ್ನು ಇರಿಸಲಾಗಿದೆ. ಮಳೆ ನೀರನ್ನು ನೇರವಾಗಿ ಚರಂಡಿಗಳಿಗೆ ಹರಿಸುವ ವ್ಯವಸ್ಥೆ ಇದೆ.

ಇದನ್ನೂ ಓದಿ: Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ವರ್ತಕರ ಆತಂಕ

ಸ್ಥಳೀಯ ಮಾರುಕಟ್ಟೆಯ ಮಾರಾಟಗಾರರು ಈಗಾಗಲೇ ಕಷ್ಟದಲ್ಲಿದ್ದಾರೆ. ಮುಂಬರುವ ಬಜಾರ್‌ಗಾಗಿ ಮಾರಾಟಗಾರರ ಆಯ್ಕೆ ಪ್ರಕ್ರಿಯೆಯ ಬಗ್ಗೆ ಇನ್ನೂ ಖಚಿತವಾಗಿಲ್ಲ. ಹೀಗಾಗಿ ಇದು ಸ್ಥಳೀಯ ವರ್ತಕರಲ್ಲಿ ಆತಂಕ ಹೆಚ್ಚಿಸಿದೆ ಎನ್ನುವ ಅಭಿಪ್ರಾಯವೂ ಕೇಳಿ ಬರುತ್ತಿದೆ.

ದೆಹಲಿ ಪಾಲಿಕೆ ಬಜಾರ್‌ ಹೇಗಿದೆ ಎಂಬ ವಿಡಿಯೊ ಈ ಸುದ್ದಿಯ ಜತೆಗಿದೆ. ಗಮನಿಸಿ…

Continue Reading

ಚಿನ್ನದ ದರ

Gold Rate Today: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 12) ಮತ್ತೆ ಹೆಚ್ಚಾಗಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 12) ಮತ್ತೆ ಹೆಚ್ಚಾಗಿದೆ (Gold Rate Today). ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,760 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,700 ಮತ್ತು ₹ 6,47,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,464 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,580 ಮತ್ತು ₹ 7,05,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,485 ₹ 7,073
ಮುಂಬೈ₹ 6,470 ₹ 7,058
ಬೆಂಗಳೂರು₹ 6,470 ₹ 7,058
ಚೆನ್ನೈ₹ 6,470 ₹ 7,058

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 79 ಹಾಗೂ 8 ಗ್ರಾಂಗೆ ₹ 632 ಇದೆ. 10 ಗ್ರಾಂ ₹ 790 ಹಾಗೂ 1 ಕಿಲೋಗ್ರಾಂ ₹ 79,000 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Continue Reading

ದೇಶ

Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

Hindenburg Report : ಹಿಂಡೆನ್​ಬರ್ಗ್​​ ರಿಸರ್ಚ್ ಶನಿವಾರ ರಾತ್ರಿ ಹೊಸ ವರದಿ ಬಿಡುಗಡೆ ಮಾಡಿದ್ದು, ಅದಾನಿ ಗ್ರೂಪ್ ವಿರುದ್ಧ ಕ್ರಮ ಕೈಗೊಳ್ಳಲು ಸೆಬಿ ಸಿದ್ಧರಿಲ್ಲ ಎಂದು ಶಂಕಿಸಿದೆ. “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕ ಸೆಬಿಯು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳನ್ನು ನಿರ್ಲಕ್ಷಿಸುತ್ತಿದೆ ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.

VISTARANEWS.COM


on

Hindenburg Report
Koo

ನವದೆಹಲಿ: ಸೆಬಿ ಅಧ್ಯಕ್ಷೆ ಮಾಧಾಬಿ ಬುಚ್ ವಿರುದ್ಧ ಯುಎಸ್ ಶಾರ್ಟ್ ಸೆಲ್ಲರ್ ಹಿಂಡೆನ್​ಬರ್ಗ್​​ ರಿಸರ್ಚ್ ಮಾಡಿರುವ ಹೊಸ ವರದಿ (Hindenburg Report) ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಸೆಕ್ಯುರಿಟೀಸ್ ನಿಯಂತ್ರಕದ ಸಮಗ್ರತೆಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆರೋಪಗಳ ವಿರುದ್ಧ ಜಂಟಿ ಸಂಸದೀಯ ಸಮಿತಿ (JPC) ತನಿಖೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಏಕೆ ಹೆದರುತ್ತಾರೆ ಎಂಬುದನ್ನು ಈ ವರದಿ ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂಡೆನ್​ಬರ್ಗ್​​ ರಿಸರ್ಚ್ ಶನಿವಾರ ರಾತ್ರಿ ಹೊಸ ವರದಿ ಬಿಡುಗಡೆ ಮಾಡಿದ್ದು, ಅದಾನಿ ಗ್ರೂಪ್ ವಿರುದ್ಧ ಕ್ರಮ ಕೈಗೊಳ್ಳಲು ಸೆಬಿ ಸಿದ್ಧರಿಲ್ಲ ಎಂದು ಶಂಕಿಸಿದೆ. “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕ ಸೆಬಿಯು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳನ್ನು ನಿರ್ಲಕ್ಷಿಸುತ್ತಿದೆ ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.

ಸೆಬಿ ಅಧ್ಯಕ್ಷರು ಇನ್ನೂ ಏಕೆ ರಾಜೀನಾಮೆ ನೀಡಿಲ್ಲ ಎಂದು ದೇಶಾದ್ಯಂತದ ಹೂಡಿಕೆದಾರರು ತಿಳಿಯಲು ಬಯಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ. “ದೇಶಾದ್ಯಂತದ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಯಾರು ಜವಾಬ್ದಾರರು. ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷರು ಅಥವಾ ಗೌತಮ್ ಅದಾನಿಯೇ? ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ ಎಂದು ರಾಹುಲ್​ ಹೇಳಿದ್ದಾರೆ.

“ಜೆಪಿಸಿ ತನಿಖೆಗೆ ಪ್ರಧಾನಿ ಮೋದಿ ಏಕೆ ಹೆದರುತ್ತಾರೆ ಎಂಬುದು ಸ್ಪಷ್ಟವಾಗಿದೆ. ಅದು ಸತ್ಯ ಬಹಿರಂಗಪಡಿಸಬಹುದು ಎಂಬುದು ಸ್ಪಷ್ಟವಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

ಬುಚ್ ಮತ್ತು ಅವರ ಪತಿ ಬರ್ಮುಡಾ ಮತ್ತು ಮಾರಿಷಸ್ ಮೂಲದ ವಿದೇಶಗಳ ನಿಧಿಗಳಲ್ಲಿ ರಹಸ್ಯವಾಗಿ ಹೂಡಿಕೆ ಮಾಡಿದ್ದಾರೆ ಎಂದು ಹಿಂಡೆನ್ಬರ್ಗ್ ರಿಸರ್ಚ್ ಆರೋಪಿಸಿದೆ. ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರು ರೌಂಡ್ ಟ್ರಿಪ್ಪಿಂಗ್ ಫಂಡ್​ಗಳ ಮೂಲಕ ಷೇರು ಬೆಲೆಗಳನ್ನು ಹೆಚ್ಚಿಸಲು ಬಳಸುತ್ತಿದ್ದರು ಎಂದು ವರದಿಯಲ್ಲಿದೆ.

ವರದಿಯನ್ನು ‘ಪಿತೂರಿ’ ಎಂದ ಬಿಜೆಪಿ

ಭಾರತದಲ್ಲಿ ಆರ್ಥಿಕ ಅಸ್ಥಿರತೆ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪಿತೂರಿ ನಡೆಸುತ್ತಿವೆ ಎಂದು ಆಡಳಿತಾರೂಢ ಬಿಜೆಪಿ ಆರೋಪಿಸಿದೆ. ಸೆಬಿ ಅಧ್ಯಕ್ಷರ ವಿರುದ್ಧದ ಹಿಂಡೆನ್​ಬರ್ಗ್​​ ಅವರ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ಇದು ಹಣಕಾಸು ಕಾವಲುಗಾರನ ವಿಶ್ವಾಸಾರ್ಹತೆ ದುರ್ಬಲಗೊಳಿಸುವ ಪ್ರಯತ್ನ ಎಂದಿದೆ.

“ಕಳೆದ ವರ್ಷ ಅದಾನಿ ಗ್ರೂಪ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಹಿಂಡೆನ್​ಬರ್ಗ್​​. ಭಾರತೀಯ ತನಿಖಾ ಸಂಸ್ಥೆಗಳಿಂದ ವಿಚಾರಣೆ ಎದುರಿಸುತ್ತಿದೆ ಎಂದು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ತಿಳಿಸಿದ್ದಾರೆ.

“ವಿರೋಧ ಪಕ್ಷಗಳು ಅದರ ಆರೋಪವನ್ನು ಪ್ರತಿಧ್ವನಿಸುತ್ತಿವೆ. ಪಿತೂರಿ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವರು ಅವ್ಯವಸ್ಥೆ ಮತ್ತು ಅಸ್ಥಿರತೆ ಸೃಷ್ಟಿಸಲು ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.

Continue Reading
Advertisement
Lakshmi Hebbalkar
ಕರ್ನಾಟಕ6 mins ago

Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

NIRF 2024 Rank
ಶಿಕ್ಷಣ10 mins ago

NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

Paris Olympics 2024
ಪ್ರಮುಖ ಸುದ್ದಿ22 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

Government Employees Sports
ಕರ್ನಾಟಕ26 mins ago

Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Uttara Kannada News
ಉತ್ತರ ಕನ್ನಡ34 mins ago

Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

Tungabhadra Dam
ಕರ್ನಾಟಕ37 mins ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

Bengaluru Rain
ಬೆಂಗಳೂರು41 mins ago

Bengaluru Rain: ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು; ಒಳಚರಂಡಿ, ರಸ್ತೆ ಬದಿ ಚರಂಡಿಗಳ ಸ್ವಚ್ಛತೆಗೆ ಡಿ. ಕೆ. ಶಿವಕುಮಾರ್ ಸೂಚನೆ

Whiten Your Yellow Teeth
ಆರೋಗ್ಯ53 mins ago

Whiten Your Yellow Teeth: ಈ ಆಹಾರಗಳು ನಿಮ್ಮ ಹಲ್ಲುಗಳ ಬಣ್ಣಗೆಡಿಸುತ್ತವೆ ಎನ್ನುವುದು ಗೊತ್ತಿದೆಯೆ?

Part Time Lecturers
ಪ್ರಮುಖ ಸುದ್ದಿ58 mins ago

Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Faiz Hameed
ಪ್ರಮುಖ ಸುದ್ದಿ1 hour ago

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌