Rera Act : ಫ್ಲ್ಯಾಟ್‌ ಮಾಲೀಕರಿಗೆ ಭೂಮಿಯ ಮೇಲಿನ ಹಕ್ಕು ಏಕೆ ಸಿಕ್ತಿಲ್ಲ? - Vistara News

ವಾಣಿಜ್ಯ

Rera Act : ಫ್ಲ್ಯಾಟ್‌ ಮಾಲೀಕರಿಗೆ ಭೂಮಿಯ ಮೇಲಿನ ಹಕ್ಕು ಏಕೆ ಸಿಕ್ತಿಲ್ಲ?

ರಾಜ್ಯದಲ್ಲಿ ಬಹುತೇಕ ಫ್ಲ್ಯಾಟ್‌ಗಳ ಮಾಲೀಕರಿಗೆ ಅವರ ಅಪಾರ್ಟ್‌ಮೆಂಟ್‌ ಇರುವ ಜಾಗದ ಮೇಲಿನ ಹಕ್ಕು ವರ್ಗಾವಣೆಯಾಗಿಲ್ಲ. ಇದಕ್ಕೆ ಕಾರಣವೇನು? (Rera Act) ಕರ್ನಾಟಕ ಮನೆ ಗ್ರಾಹಕರ ವೇದಿಕೆಯ ಸಂಚಾಲಕ ಧನಂಜಯ್‌ ಪದ್ಮನಾಭಾಚಾರ್‌ ಅವರು ವಿಸ್ತಾರ ಬಿಸಿನೆಸ್‌ & ಪ್ರಾಪರ್ಟಿಗೆ ನೀಡಿದ ಸಂದರ್ಶನದ ವಿಡಿಯೊ ವೀಕ್ಷಿಸಿ.

VISTARANEWS.COM


on

Bengaluru Apartments
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲ ಫ್ಲ್ಯಾಟ್‌ಗಳ ಮಾಲೀಕರಿಗೆ ಅವರ ಫ್ಲ್ಯಾಟ್‌ ಅಥವಾ ಅಪಾರ್ಟ್‌ ಮೆಂಟ್‌ ಇರುವ ಭೂಮಿಯ ಮೇಲಿನ ಹಕ್ಕು ಇನ್ನೂ ವರ್ಗಾವಣೆಯಾಗಿಲ್ಲ. ಕರ್ನಾಟಕದಲ್ಲಿ ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯೇ (Rera Act) ಇನ್ನೂ ಪ್ರಕಟವಾಗಿಲ್ಲ. ಒಕ್ಯುಪೆನ್ಸಿ ಸರ್ಟಿಫಿಕೇಟ್‌ ( Occupancy certificate) ವಿತರಿಸಿದರೆ ಪ್ರಾಜೆಕ್ಟ್‌ ಕಂಪ್ಲೀಟ್‌ ಆಯಿತು ಎನ್ನುವ ತಪ್ಪು ಮಾಹಿತಿಯನ್ನು ರೇರಾ ಪೋರ್ಟಲ್‌ನಲ್ಲಿ ನೀಡಲಾಗಿದೆ ಎಂದು ಕರ್ನಾಟಕ ಮನೆ ಗ್ರಾಹಕರ ವೇದಿಕೆಯ ಸಂಚಾಲಕ ಧನಂಜಯ್‌ ಪದ್ಮನಾಭಾಚಾರ್‌ ಆರೋಪಿಸಿದ್ದಾರೆ.

ವಿಸ್ತಾರ ಬಿಸಿನೆಸ್‌ & ಪ್ರಾಪರ್ಟಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಯಾವುದೇ ಅಪಾರ್ಟ್‌ ಮೆಂಟ್‌ ಅಸೋಸಿಯೇಶನ್‌ಗೆ ಭೂಮಿಯ ಹಕ್ಕು ವರ್ಗಾವಣೆಯಾಗಿಲ್ಲ. ಕರ್ನಾಟಕ ಮನೆ ಗ್ರಾಹಕರ ವೇದಿಕೆಯ ಅಡಿಯಲ್ಲಿ ಐನೂರು ಅಪಾರ್ಟ್‌ಮೆಂಟ್‌ಗಳು ಇವೆ. ಯಾವುದರಲ್ಲೂ ಮನೆಗಳ ಗ್ರಾಹಕರಿಗೆ ಲ್ಯಾಂಡ್‌ ಟ್ರಾನ್ಸ್‌ ಫರ್‌ ಆಗಿಲ್ಲ. ಆದ್ದರಿಂದ ಸರ್ಕಾರ ಈ ಬಗ್ಗೆ ಮಾರ್ಗಸೂಚಿ ಪ್ರಕಟಿಸಬೇಕು ಎಂದು ಧನಂಜಯ್‌ ಪದ್ಮನಾಭಾಚಾರ್‌ ವಿವರಿಸಿದ್ದಾರೆ.

ಮಾರ್ಗಸೂಚಿಯನ್ನು ಪ್ರಕಟಿಸಿದ ಬಳಿಕ ಲ್ಯಾಂಡ್‌ ಟ್ರಾನ್ಸ್‌ಫರ್‌ಗೆ ಸಂಬಂಧಿಸಿ ರೇರಾದಲ್ಲಿ ಒಂದು ಸಕ್ಷಮ ಪ್ರಾಧಿಕಾರವನ್ನು ವ್ಯವಸ್ಥೆಗೊಳಿಸಬೇಕು. ಆಗ ಮನೆ ಮಾಲೀಕರು, ಬಿಲ್ಡರ್‌ಗಳು ಲ್ಯಾಂಡ್‌ ಟ್ರಾನ್ಸ್‌ಫರ್‌ ಪ್ರಕ್ರಿಯೆ ಕೈಗೊಳ್ಳಬಹುದು. ಅಸೋಸಿಯೇಶನ್‌ ನೋಂದಣಿಯಾಗಿದೆಯೇ ಎಂಬುದನ್ನು ಖಾತರಿಪಡಿಸುವ ರಿಜಿಸ್ಟ್ರೇಶನ್‌ ಸರ್ಟಿಫಿಕೇಟ್, ಬಿಲ್ಡರ್ಸ್‌ ಮತ್ತು ಅಸೋಸಿಯೇಶನ್‌ ನಡುವೆ ಲ್ಯಾಂಡ್‌ ಟ್ರಾನ್ಸ್‌ ಫರ್‌ ಆಗಿರುವುದಕ್ಕೆ ದಾಖಲೆ, ಇಸಿ ದಾಖಲೆ, ಖಾತಾ ಟ್ರಾನ್ಸ್‌ ಫರ್‌ ಆಗಿರುವ ದಾಖಲೆಗಳು ಅಗತ್ಯ. ಆಗ ಪ್ರಾಜೆಕ್ಟ್‌ ಸಂಪೂರ್ಣವಾಗಿದೆ ಎಂದು ರೇರಾ ಹೇಳಬಹುದು. ಕೇವಲ ಒಸಿ ವಿತರಿಸಿದರೆ ಸಾಕಾಗುವುದಿಲ್ಲ ಎನ್ನುತ್ತಾರೆ ಧನಂಜಯ್‌ ಪದ್ಮನಾಭಾಚಾರ್‌.

ರಿಯಾಲ್ಟಿ ಹೂಡಿಕೆ: ನಿಮಗೆ ರಿಯಲ್‌ ಎಸ್ಟೇಟ್‌ನಲ್ಲಿ ಇನ್ವೆಸ್ಟ್ ಮಾಡಬೇಕು ಅಂತ ಅನ್ನಿಸುತ್ತಿದ್ದರೂ, ಅದಕ್ಕೆ ಬೇಕಾಗುವ ಲಕ್ಷಾಂತರ ಅಥವಾ ಕೋಟಿಗಟ್ಟಲೆ ರೂ. ಹಣ ಇಲ್ಲ ಎಂದು ಆಲೋಚಿಸುತ್ತಿದ್ದೀರಾ. ಹಾಗಾದರೆ ಚಿಂತೆ ಮಾಡಬೇಡಿ.

ನೀವು ಕೇವಲ 500 ರೂ.ಗಳಿಂದಲೂ ನೀವು ರಿಯಲ್‌ ಎಸ್ಟೇಟ್‌ನಲ್ಲಿ ಇನ್ವೆಸ್ಟ್ ಮಾಡಬಹುದು. ಇದಕ್ಕೆ ರಿಯಲ್‌ ಎಸ್ಟೇಟ್‌ ಇನ್ವೆಸ್ಟ್‌ಮೆಂಟ್‌ ಟ್ರಸ್ಟ್‌ ಅಥವಾ ಆರ್‌ ಇಐಟಿಗಳಲ್ಲಿ ಹೂಡಿಕೆಯನ್ನು ಆರಂಭಿಸಬಹುದು. ಏನಿದು ಆರ್‌ಇಐಟಿ ಎನ್ನುತ್ತೀರಾ? ಭಾರತದಲ್ಲಿ ಈ ಪರಿಕಲ್ಪನೆ ಹೊಸತಾದರೂ, ರಿಯಾಲ್ಟಿಯಲ್ಲಿ ಹೂಡಿಕೆ ಆರಂಭಿಸಲು ಉತ್ತಮ ಸಾಧನವಾಗಿದೆ.

ಇದನ್ನೂ ಓದಿ: ITR filing online for AY 2023-24 : ವೇತನದಾರರಿಗೆ ಆನ್‌ಲೈನ್‌ನಲ್ಲಿ ಐಟಿ ರಿಟರ್ನ್ಸ್‌ ಸಲ್ಲಿಕೆಗೆ ಕಂಪ್ಲೀಟ್‌ ಗೈಡ್

ರಿಯಲ್‌ ಎಸ್ಟೇಟ್‌ ಇನ್ವೆಸ್ಟ್‌ಮೆಂಟ್‌ ಟ್ರಸ್ಟ್‌ಗಳು ರಿಯಲ್‌ ಎಸ್ಟೇಟ್‌ ಆಸ್ತಿಗಳಲ್ಲಿ ಹೂಡಿಕೆ ಮಾಡುತ್ತವೆ. ಅಪಾರ್ಟ್‌ಮೆಂಟ್‌ ಬಿಲ್ಡಿಂಗ್‌, ಸೆಲ್‌ ಟವರ್‌, ಡೇಟಾ ಸೆಂಟರ್‌, ಹೋಟೆಲ್‌, ಆಸ್ಪತ್ತೆ, ರಿಟೇಲ್‌ ಸೆಂಟರ್‌, ವೇರ್‌ ಹೌಸ್‌ ಇತ್ಯಾದಿ ಪ್ರಾಪರ್ಟಿಗಳಲ್ಲಿ ಹೂಡಿಕೆ ಮಾಡುತ್ತವೆ. ಆರ್‌ಇಐಟಿಗಳು ಸ್ಟಾಕ್‌ ಮಾರ್ಕೆಟ್‌ನಲ್ಲಿ ನೋಂದಣಿಯಾಗಿರುತ್ತವೆ. ದೇಶದಲ್ಲಿ ಎಂಬಸಿ ಆಫೀಸ್‌ ಪಾರ್ಕ್ಸ್‌ ಆರ್‌ಇಐಟಿ, ಮೈಂಡ್‌ ಸ್ಪೇಸ್‌ ಬಿಸಿನೆಸ್‌ ಪಾರ್ಕ್ಸ್‌ ಆರ್‌ಐಇಟಿ ಇದೆ.

ಈ ಆರ್‌ಇಐಟಿಗಳಲ್ಲಿ ಜನರು ಷೇರುಗಳಲ್ಲಿ ಹೂಡಿಕೆ ಮಾಡುವಂತೆ ಸಣ್ಣ ಮೊತ್ತದಲ್ಲಿ ಕೂಡ ಹೂಡಿಕೆ ಆರಂಭಿಸಬಹುದು. ಈ ವ್ಯವಹಾರದಲ್ಲಿ ಗಳಿಸಿದ ಆದಾಯವನ್ನು ಷೇರುದಾರರಿಗೆ ಆರ್‌ಇಐಟಿಗಳು ವಿತರಿಸುತ್ತವೆ. ನಿಮ್ಮ ಹೂಡಿಕೆಯನ್ನು ವೈವಿಧ್ಯಗೊಳಿಸಲು ಇದು ಸಹಾಯಕ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್‌ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Reliance Retail: ರಿಲಯನ್ಸ್ ರೀಟೇಲ್‌ಗೆ ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್‌ ಆದ “ಅಕೈಂಡ್” (Akind) ಬಿಡುಗಡೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್ ಅವರು ಅಕೈಂಡ್ ಅನ್ನು ಅನಾವರಣ ಮಾಡಿದರು.

VISTARANEWS.COM


on

Reliance Retail Tira unveils skin care brand Akind
Koo

ಮುಂಬೈ: ರಿಲಯನ್ಸ್ ರೀಟೇಲ್‌ಗೆ (Reliance Retail) ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ (Tira) ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್ ಆದ “ಅಕೈಂಡ್” (Akind) ಬಿಡುಗಡೆ ಬಗ್ಗೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್, ಅಕೈಂಡ್ ಅನ್ನು ಅನಾವರಣ ಮಾಡಿದರು.

ಚರ್ಮದ ಆರೈಕೆಗೆ ಅಕೈಂಡ್

ಪ್ರತಿ ವ್ಯಕ್ತಿಯೂ ತನ್ನ ಚರ್ಮದ ಆರೈಕೆ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳಲೇಬೇಕಾಗುತ್ತದೆ. ಏಕೆಂದರೆ ವ್ಯಕ್ತಿಯಿಂದ ವ್ಯಕ್ತಿಗೆ ಚರ್ಮವು ವಿಭಿನ್ನ ಹಾಗೂ ವಿಶಿಷ್ಟವಾಗಿರುತ್ತದೆ. ವೈಯಕ್ತಿಕವಾಗಿ ಪ್ರತ್ಯೇಕ ಆರೈಕೆ ಮಾಡಬೇಕಾಗುತ್ತದೆ. ಈ ಸಂಗತಿ “ಅಕೈಂಡ್” ಅರ್ಥ ಮಾಡಿಕೊಳ್ಳುತ್ತದೆ. ಇನ್ನು ಪ್ರತಿ ವ್ಯಕ್ತಿಯ ಚರ್ಮದ ಅಗತ್ಯಗಳನ್ನು ಅರಿತು, ಆರೈಕೆಯನ್ನು ಸರಳಗೊಳಿಸಲಾಗುತ್ತದೆ. ಈ ನಿಶ್ಚಿತ ಗುರಿಯ ವಿಧಾನದ ಮೂಲಕವಾಗಿ ಈ ಬ್ರ್ಯಾಂಡ್ ಪ್ರತಿ ವ್ಯಕ್ತಿಯ ಚರ್ಮ ಕಾಳಜಿಯ ಗುರಿಯನ್ನು ಸಾಧಿಸಲು ಬಲ ತುಂಬುತ್ತದೆ. ಅಕೈಂಡ್‌ನಲ್ಲಿ ಇರುವಂಥ ಪ್ರತಿ ಸೂತ್ರವು ವಿಶಿಷ್ಟ ಉದ್ದೇಶವನ್ನು ಈಡೇರಿಸಿ, ಚರ್ಮದ ಆರೋಗ್ಯಕ್ಕೆ ಇರುವ ಅಡೆತಡೆಗಳನ್ನು ನಿವಾರಿಸುತ್ತದೆ ಮತ್ತು ಅದು ಮೂರು ವರ್ಗಗಳ ಅಡಿಯಲ್ಲಿ ಬರುತ್ತದೆ.

3 ಹಂತಗಳಲ್ಲಿ ಚರ್ಮದ ರಕ್ಷಣೆ

ಬಿಲ್ಡ್, ಬ್ಯಾಲೆನ್ಸ್ ಹಾಗೂ ಡಿಫೆನ್ಸ್ ಹೀಗೆ ಮೂರು ಶ್ರೇಣಿಗಳಿವೆ. ಅದರಲ್ಲಿ ಮೊದಲನೆಯ ಶ್ರೇಣಿಯಾದ ಬಿಲ್ಡ್ ಚರ್ಮದ ಅಡೆತಡೆಗಳನ್ನು ನಿವಾರಿಸಿ, ಅದರ ಸಹಜ ಸ್ಥಿತಿಗೆ ತರುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ. ಇನ್ನು ಎರಡನೆಯ ಶ್ರೇಣಿ ಚರ್ಮದ ಅಡೆತಡೆಗಳನ್ನು ನಯವಾಗಿ ನಿರ್ವಹಿಸುತ್ತದೆ, ಯಥಾ ಸ್ಥಿತಿಯಲ್ಲಿ ಇರಿಸುತ್ತದೆ, ಅದರ ಫಲಿತವಾಗಿ ಆರೋಗ್ಯಪೂರ್ಣವಾಗಿ, ಹೊಳೆಯುವಂಥ ಚರ್ಮವನ್ನು ಕಾಪಾಡುತ್ತದೆ. ಇನ್ನು ಮೂರನೆಯ ಶ್ರೇಣಿಯು ಮಾಲಿನ್ಯ, ಜೀವನಶೈಲಿ ಸಂಗತಿಗಳು ಹಾಗೂ ಸೂರ್ಯನ ಕಿರಣದಿಂದ ಆಗುವಂಥ ಹಾನಿಯಿಂದ ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಇಶಾ ಅಂಬಾನಿ ಈ ಕುರಿತು ಮಾತನಾಡಿ, “ಟಿರಾದ ಮೊದಲ ಚರ್ಮ ಆರೈಕೆ ಬ್ರ್ಯಾಂಡ್ ಆದ ಅಕೈಂಡ್ ಅನ್ನು ಸ್ವಂತ ಬ್ರಾಂಡ್‌ಗಳ ಪೋರ್ಟ್‌ಫೋಲಿಯೊದಲ್ಲಿ ಪರಿಚಯಿಸಲು ನಾವು ಉತ್ಸುಕರಾಗಿದ್ದೇವೆ. ಈಗ ಮಾಡಿರುವ ಉತ್ಪನ್ನದ ಬಿಡುಗಡೆಯು ಟಿರಾದ ಪಯಣದಲ್ಲಿ ಮಹತ್ವದ ಮೈಲುಗಲ್ಲು ಎನಿಸುತ್ತದೆ. ನಾವು ವಿಸ್ತರಿಸುವುದನ್ನು ಮತ್ತು ವಿಕಸನಗೊಳ್ಳುವುದನ್ನು ಮುಂದುವರಿಸಿದಂತೆ, ನಾವೀನ್ಯತೆ ಮತ್ತು ಉತ್ಕೃಷ್ಟತೆಗೆ ಬದ್ಧರಾಗಿರುತ್ತೇವೆ. ಪ್ರತಿ ಕೊಡುಗೆಯು ನಮ್ಮ ಗ್ರಾಹಕರ ಸೌಂದರ್ಯದ ಅನುಭವವನ್ನು ಹೆಚ್ಚಿಸುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಅಕೈಂಡ್ ಸಹ-ಸಂಸ್ಥಾಪಕಿ ಮೀರಾ ಕಪೂರ್ ಮಾತನಾಡಿ, ಬಹಳ ಹಿಂದೆಯೇನೂ ಅಲ್ಲ, ನನ್ನದೇ ಚರ್ಮ ರಕ್ಷಣೆಯ ಬಗ್ಗೆ ಪ್ರಶ್ನೆ ಕೇಳಿಕೊಳ್ಳುತ್ತಾ ಚರ್ಮದ ರಕ್ಷಣೆಯ ಈ ಪ್ರಯಾಣವು ನಿಜವಾಗಿಯೂ ಪ್ರಾರಂಭವಾಯಿತು. ಅಕೈಂಡ್ ಶ್ರೇಣಿಯು ಎಚ್ಚರಿಕೆಯಿಂದ, ಪ್ರಯೋಗಗಳಿಂದ ಮತ್ತು ತಪ್ಪುಗಳಿಂದ ಹಾಗೂ ನಿರ್ದಿಷ್ಟ ಸಮಸ್ಯೆಗಳಿಗೆ ಉದ್ದೇಶಿತ ಪರಿಹಾರವಾಗಿ ಕಾರ್ಯನಿರ್ವಹಿಸುವ ಉನ್ನತ-ಪರಿಣಾಮಕಾರಿ ಪದಾರ್ಥಗಳ ಬಗ್ಗೆ ವ್ಯಾಪಕವಾದ ಸಂಶೋಧನೆಯೊಂದಿಗೆ ನಿಖರವಾಗಿ ರೂಪಿಸಲಾಗಿದೆ ಮತ್ತು ಕ್ಯುರೇಟೆಡ್‌ ಬ್ರ್ಯಾಂಡ್‌ಗಳ ಪಾಲಿ ಅಂತಿಮ ತಾಣದಂತೆ ಇರುವ ಟಿರಾ ಮೂಲಕ ನಾವು ತಲುಪುವುದಕ್ಕಿಂತ ಉತ್ತಮವಾದ ಮಾರ್ಗ ಯಾವುದಿದೆ. ಇದರಿಂದ ನಮ್ಮ ದೃಷ್ಟಿ ಹೆಚ್ಚು ವ್ಯಾಪಿಸುತ್ತದೆ ಹಾಗೂ ಉದ್ದೇಶವನ್ನು ಜೀವಂತ ಇರಿಸುತ್ತದೆ. ಅಕೈಂಡ್ ಜತೆಗೆ, ಹೇಗೆ ನನಗೆ ಅತ್ಯುತ್ತಮ ಚರ್ಮ ರಕ್ಷಣೆಯ ಮಾರ್ಗ ದೊರೆಯಿತೋ ಅದು ಎಲ್ಲರ ಜತೆಗೂ ಈ ಚರ್ಮರಕ್ಷಣೆ ಸಂತೋಷವನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಟಿರಾ ಟೂಲ್ಸ್ (Tira Tools) ಯಶಸ್ವಿ ಬಿಡುಗಡೆಯ ನಂತರ, ಖಾಸಗಿ ಲೇಬಲ್ ಅಡಿಯಲ್ಲಿ ಪ್ರೀಮಿಯಂ ಕ್ಯುರೇಟೆಡ್ ಸೌಂದರ್ಯ ಪರಿಕರಗಳು ಮತ್ತು ನೈಲ್ಸ್ ಅವರ್ ವೇ, ರೋಮಾಂಚಕ ಉಗುರು ಬಣ್ಣಗಳು ಮತ್ತು ಕಿಟ್‌ಗಳ ವಿಶೇಷ ಶ್ರೇಣಿಯ ಮೂಲಕವಾಗಿ ರಿಲಯನ್ಸ್ ರಿಟೇಲ್ ಲಿಮಿಟೆಡ್ (RRL) ತನ್ನ ನವೀನ ಕೊಡುಗೆಗಳನ್ನು ವಿಸ್ತರಿಸುವುದನ್ನು ಮುಂದುವರಿಸಿದೆ.

ಇದನ್ನೂ ಓದಿ: SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

ಅದರ ಮೊದಲ ಚರ್ಮರಕ್ಷಣೆ ಬ್ರಾಂಡ್‌ನ ಸೇರ್ಪಡೆ, ಅಕೈಂಡ್ ಸೌಂದರ್ಯ ಮತ್ತು ವೈಯಕ್ತಿಕ ಆರೈಕೆ ವಿಭಾಗಗಳಾದ್ಯಂತ ಗ್ರಾಹಕರಿಗೆ ಉತ್ತಮ-ಗುಣಮಟ್ಟದ, ವೈವಿಧ್ಯಮಯ ಮತ್ತು ಟ್ರೆಂಡ್-ಸೆಟ್ಟಿಂಗ್ ಉತ್ಪನ್ನಗಳನ್ನು ಒದಗಿಸುವ ಟಿರಾ ಬದ್ಧತೆಯನ್ನು ಒತ್ತಿ‌ ಹೇಳುತ್ತದೆ.

Continue Reading

ದೇಶ

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

Union Budget 2024: ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ಅಧಿವೇಶನ ನಡೆಯಲಿದ್ದು, ಲೋಕಸಭೆ ಸ್ಪೀಕರ್‌ ಆಯ್ಕೆ, ನೂತನ ಸಂಸದರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇದಾದ ನಂತರ ಅಂದರೆ, ಜುಲೈ ಮೂರನೇ ವಾರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Union Budget 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು, ನೂತನ ಸರ್ಕಾರ ರಚನೆಯಾಗುತ್ತಲೇ ಮೊದಲ ಬಜೆಟ್‌ ಮಂಡನೆ (Union Budget 2024) ಮಾಡಲಾಗುತ್ತದೆ. ಅದರಂತೆ, ಜುಲೈ 15-21ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವಾರದಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವಾಲಯದ ಅಧಿಕಾರಿಗಳು ಸೇರಿ ಹಲವರೊಂದಿಗೆ ಸಭೆ, ಸಮಾಲೋಚನೆ ನಡೆಸುವ ಮೂಲಕ ಬಜೆಟ್‌ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲಿದ್ದಾರೆ. ಅಷ್ಟೇ ಅಲ್ಲ, ಜೂನ್‌ 22ರಂದು ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ 53ನೇ ಜಿಎಸ್‌ಟಿ ಸಮಿತಿ ಸಭೆ ನಡೆಯಲಿದ್ದು, ಅಧಿಕಾರಿಗಳ ಸಲಹೆ-ಸೂಚನೆಗಳನ್ನೂ ಸಚಿವೆ ಪಡೆಯಲಿದ್ದಾರೆ. ಬಜೆಟ್‌ ಮಂಡನೆ ದೃಷ್ಟಿಯಿಂದ ಜಿಎಸ್‌ಟಿ ಸಮಿತಿ ಸಭೆಯು ಕೂಡ ಪ್ರಾಮುಖ್ಯತೆ ಪಡೆದಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: G7 Summit: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ; ಇಟಲಿಯ ಜಿ7 ಶೃಂಗಸಭೆಯಲ್ಲಿ ಭಾಗಿ

Continue Reading

ವಾಣಿಜ್ಯ

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

ಎಟಿಎಂ ಉದ್ಯಮದ ಒಕ್ಕೂಟ (ಸಿಎಟಿಎಂಐ) ವ್ಯವಹಾರಕ್ಕೆ ಹೆಚ್ಚಿನ ನಿಧಿಯನ್ನು ಪಡೆಯಲು ಎಟಿಎಂ ಆಪರೇಟರ್‌ಗಳು ಎಟಿಎಂಗಳಲ್ಲಿ ನಗದು ಹಿಂಪಡೆಯುವಿಕೆಯ ಮೇಲಿನ ಇಂಟರ್‌ಚೇಂಜ್ ಶುಲ್ಕವನ್ನು (ATM Cash Withdrawal Fee) ಪ್ರತಿ ವಹಿವಾಟಿಗೆ ಗರಿಷ್ಠ 23 ರೂ. ಹೆಚ್ಚಿಸಲು ಒತ್ತಾಯಿಸಿದೆ. ಇವರ ಬೇಡಿಕೆ ಏನು ಇತ್ಯಾದಿ ವಿವರ ಇಲ್ಲಿದೆ.

VISTARANEWS.COM


on

By

ATM Cash Withdrawal Fee
Koo

ಎಟಿಎಂನಲ್ಲಿ (ATM) ಇನ್ನು ಮುಂದೆ ಹಣ ಪಡೆಯುವ (Cash Withdrawal) ಮುನ್ನ ಯೋಚಿಸಿ. ಯಾಕೆಂದರೆ ಈಗಾಗಲೇ ಬ್ಯಾಂಕ್‌ಗಳು ವಿಧಿಸುತ್ತಿರುವ ಎಟಿಎಂ ಸೇವಾ ಶುಲ್ಕ (ATM Cash Withdrawal Fee) ಇನ್ನೂ ಹೆಚ್ಚಾಗಬಹುದು. ಎಟಿಎಂ ಆಪರೇಟರ್‌ಗಳು ನಗದು ಹಿಂಪಡೆಯುವಿಕೆಯ ಮೇಲಿನ ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸುತ್ತಿದ್ದು, ಈಗಾಗಲೇ ಇವರು ತಮ್ಮ ಮನವಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾಗೆ (NPCI) ಸಲ್ಲಿಸಿದ್ದಾರೆ.

ಎಟಿಎಂ ಉದ್ಯಮದ ಒಕ್ಕೂಟ (ಸಿಎಟಿಎಂಐ) ವ್ಯವಹಾರಕ್ಕೆ ಹೆಚ್ಚಿನ ನಿಧಿಯನ್ನು ಪಡೆಯಲು ಎಟಿಎಂ ಆಪರೇಟರ್‌ಗಳು ಎಟಿಎಂಗಳಲ್ಲಿ ನಗದು ಹಿಂಪಡೆಯುವಿಕೆಯ ಮೇಲಿನ ಇಂಟರ್‌ಚೇಂಜ್ ಶುಲ್ಕವನ್ನು ಪ್ರತಿ ವಹಿವಾಟಿಗೆ ಗರಿಷ್ಠ 23 ರೂ. ಹೆಚ್ಚಿಸಲು ಒತ್ತಾಯಿಸಿದೆ. ಎರಡು ವರ್ಷಗಳ ಹಿಂದೆ ಈ ವಿನಿಮಯ ದರವನ್ನು ಕೊನೆಯದಾಗಿ ಹೆಚ್ಚಿಸಲಾಗಿತ್ತು ಎಂದು ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಸ್ಟಾನ್ಲಿ ಜಾನ್ಸನ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಈ ಕುರಿತು ಭಾರತೀಯ ರಿಸರ್ವ್ ಅನ್ನು ಸಂಪರ್ಕಿಸಲಾಗುತ್ತಿದೆ. ಅವರು ನಮ್ಮ ವಿನಂತಿಯನ್ನು ಬೆಂಬಲಿಸುವಂತೆ ತೋರುತ್ತಿದೆ. ಸಿಎಟಿಎಂಐ ಶುಲ್ಕವನ್ನು 21 ರೂ. ಗೆ ಏರಿಸಲು ಪ್ರಸ್ತಾಪಿಸಿದೆ. ಆದರೆ ಕೆಲವು ಎಟಿಎಂ ತಯಾರಕರು 23 ರೂ. ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದರು.


ಎಟಿಎಂ ವಹಿವಾಟಿನ ಇಂಟರ್ಚೇಂಜ್ ಶುಲ್ಕವನ್ನು ಕೊನೆಯದಾಗಿ 2021ರಲ್ಲಿ 15 ರಿಂದ 17ಕ್ಕೆ ಹೆಚ್ಚಿಸಲಾಗಿತ್ತು. ಹಿಂದಿನ ಬಾರಿ ಈ ಶುಲ್ಕ ಹೆಚ್ಚಳಕ್ಕೆ ಹಲವಾರು ವರ್ಷಗಳನ್ನು ತೆಗೆದುಕೊಂಡಿತು. ಆದರೆ ಈಗ ಎಲ್ಲರೂ ಇದಕ್ಕೆ ಹೊಂದಿಕೊಂಡಿದ್ದಾರೆ. ಶುಲ್ಕ ಹೆಚ್ಚಳಕ್ಕೆ ಇನ್ನು ಅನುಮೋದನೆ ಸಿಕ್ಕಿಲ್ಲ. ಶೀಘ್ರದಲ್ಲೇ ಸಿಗಬಹುದು ಎಂದು ಜಾನ್ಸನ್ ತಿಳಿಸಿದ್ದಾರೆ.

ಇದನ್ನೂ ಓದಿ: Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

ಇಂಟರ್‌ಚೇಂಜ್ ಶುಲ್ಕ ಎಂದರೇನು?

ಎಟಿಎಂ ಇಂಟರ್ ಚೇಂಚ್ ಶುಲ್ಕವು ಎಟಿಎಂ ಕಾರ್ಡ್ ಅನ್ನು ವಿತರಿಸುವ ಬ್ಯಾಂಕ್ (ವಿತರಕರು) ಪಾವತಿಸುವ ಶುಲ್ಕವಾಗಿದೆ. ಎಟಿಎಂ ಕಾರ್ಡ್ ಅನ್ನು ನಗದು ಹಿಂಪಡೆಯಲು ಬಳಸಲಾಗುತ್ತದೆ. ಇದು ಹೆಚ್ಚುವರಿಯಾಗಿ ಗ್ರಾಹಕರಿಗೆ ವಿಧಿಸಬಹುದಾದ ಶುಲ್ಕವಾಗಿದೆ. ಪ್ರಸ್ತುತ ಆರು ಪ್ರಮುಖ ನಗರಗಳಲ್ಲಿ ಬೆಂಗಳೂರು, ಚೆನ್ನೈ, ಹೈದರಾಬಾದ್, ಕೋಲ್ಕತ್ತಾ, ಮುಂಬಯಿ ಮತ್ತು ನವದೆಹಲಿ ಬ್ಯಾಂಕ್‌ಗಳು ತಮ್ಮ ಉಳಿತಾಯ ಖಾತೆದಾರರಿಗೆ ತಿಂಗಳಿಗೆ ಕನಿಷ್ಠ ಐದು ಉಚಿತ ವಹಿವಾಟುಗಳನ್ನು ಹಾಗೂ ಇತರ ಬ್ಯಾಂಕ್‌ಗಳ ಎಟಿಎಂಗಳಲ್ಲಿ ತಿಂಗಳಿಗೆ ಮೂರು ಉಚಿತ ವಹಿವಾಟು ಸೌಲಭ್ಯವನ್ನು ಒದಗಿಸುತ್ತದೆ. ಬಳಿಕ ನಡೆಯುವ ಪ್ರತಿ ವಹಿವಾಟಿಗೆ ಶುಲ್ಕ ವಿಧಿಸಲಾಗುತ್ತದೆ.

Continue Reading

ವಿದೇಶ

Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನಕ್ಕೆ ಕೃಷಿ ಕ್ಷೇತ್ರದಲ್ಲಿ ಆಶಾದಾಯಕ ಬೆಳವಣಿಗೆ ಕಂಡು ಬಂದಿದೆ. ಮುಖ್ಯವಾಗಿ ಕತ್ತೆಗಳ ಸಂಖ್ಯೆಯಲ್ಲಿ ಕಳೆದ ಒಂದು ವರ್ಷದಲ್ಲಿ ಗಣನೀಯ ಏರಿಕೆಯಾಗಿದೆ. 2022- 23ರ ಆರ್ಥಿಕ ವರ್ಷದಲ್ಲಿ ಕತ್ತೆಗಳ ಸಂಖ್ಯೆಯು (Donkey Population In Pak) 5.9 ಮಿಲಿಯನ್‌ಗೆ ತಲುಪಿದ್ದು, ಇದು ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 1.72 ರಷ್ಟು ಬೆಳವಣಿಗೆಯನ್ನು ಸೂಚಿಸುತ್ತದೆ.

VISTARANEWS.COM


on

By

Donkey Population In Pak
Koo

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನದಲ್ಲಿ (pakistan) ಕಳೆದ ಒಂದು ವರ್ಷದಲ್ಲಿ ಕತ್ತೆಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು (Donkey Population In Pak), ಇದು ದೇಶದ ಕೃಷಿ (agricultural) ಚಟುವಟಿಕೆಗಳಲ್ಲಿ ಆಶಾದಾಯಕ ಬೆಳವಣಿಗೆಯನ್ನು ತೋರಿಸಿದೆ. ಕತ್ತೆಗಳ (donkey) ಸಂಖ್ಯೆಯು 2022-23ರ ಆರ್ಥಿಕ ವರ್ಷದಲ್ಲಿ 5.9 ಮಿಲಿಯನ್‌ ತಲುಪಿದ್ದು ಹಿಂದಿನ ಅವಧಿಯಲ್ಲಿ 5.7 ಮಿಲಿಯನ್‌ ನಷ್ಟಿತ್ತು. ಒಂದು ವರ್ಷದಲ್ಲಿ ಕತ್ತೆಗಳ ಸಂಖ್ಯೆ ಸರಿಸುಮಾರು ಎರಡು ಲಕ್ಷ ಹೆಚ್ಚಳವಾಗಿದೆ.

ಆರ್ಥಿಕ ಬಿಕ್ಕಟ್ಟು ದೇಶದ ಬಹುತೇಕ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿರುವುದನ್ನು 2023- 24ರ ಆರ್ಥಿಕ ಸಮೀಕ್ಷೆಯಲ್ಲಿ (Economic Survey) ತಿಳಿದು ಬಂದಿದೆ. ಈ ಕುರಿತ ಆರ್ಥಿಕ ವರ್ಷದ ಪ್ರಮುಖ ಸಾಮಾಜಿಕ ಆರ್ಥಿಕ ಸಾಧನೆಗಳನ್ನು ವಿವರಿಸುವ ಪೂರ್ವ ಬಜೆಟ್ ದಾಖಲೆ ತಿಳಿಸಿದೆ.

ಜಾನುವಾರು ವಲಯದಲ್ಲಿ ಆಶಾದಾಯಕ ಬೆಳವಣಿಗೆ

ಪಾಕಿಸ್ತಾನದಲ್ಲಿ ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಿ ಜಾನುವಾರು ವಲಯವು ಹೊರಹೊಮ್ಮುತ್ತಿದೆ. ಒಟ್ಟು ಜಾನುವಾರು ಸಂಖ್ಯೆಯಲ್ಲಿ ಎಮ್ಮೆಗಳ ಸಂಖ್ಯೆಯು 43.7 ಮಿಲಿಯನ್‌ನಿಂದ 45 ಮಿಲಿಯನ್‌ಗೆ ಏರಿಕೆಯಾಗಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ.

ಕುರಿ ಮತ್ತು ಮೇಕೆಗಳ ಸಂಖ್ಯೆಯು ಕ್ರಮವಾಗಿ 32.3 ಮತ್ತು 84.7 ಮಿಲಿಯನ್‌ಗೆ ಏರಿಕೆಯಾಗಿದೆ. ಸಮೀಕ್ಷೆಯ ಒಂದು ಕುತೂಹಲಕಾರಿ ಸಂಶೋಧನೆಯೆಂದರೆ ಕತ್ತೆಗಳ ಸಂಖ್ಯೆಯು 2022-23 ರ ಆರ್ಥಿಕ ವರ್ಷದಲ್ಲಿ 5.9 ಮಿಲಿಯನ್‌ಗೆ ತಲುಪಿದ್ದು, ಒಂದು ವರ್ಷದಲ್ಲಿ ಸುಮಾರು ಒಂದು ಲಕ್ಷ ಹೆಚ್ಚಳವಾಗಿದೆ. ಇದು ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 1.72 ರಷ್ಟು ಬೆಳವಣಿಗೆಯನ್ನು ಸೂಚಿಸುತ್ತದೆ.

ಕತ್ತೆಗಳ ಸಂಖ್ಯೆ ಹೆಚ್ಚಿದ್ದರೂ ಪಾಕಿಸ್ತಾನದ ಒಟ್ಟಾರೆ ಆರ್ಥಿಕ ಸಾಧನೆ ನಿರೀಕ್ಷೆಗೂ ಮೀರಿ ಕುಸಿದಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯು ಕೇವಲ ಶೇ. 2.4ರಷ್ಟು ಬೆಳವಣಿಗೆಯನ್ನು ನಿರೀಕ್ಷಿಸಲಾಗಿದೆ. ಇತ್ತೀಚಿನ ಆರ್ಥಿಕ ಸಮೀಕ್ಷೆಯಲ್ಲಿ ವಿವರಿಸಿದಂತೆ ಸರ್ಕಾರದ ಗುರಿಯಾದ ಶೇ. 3.5ಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಸಮೀಕ್ಷೆಯ ಸಂಶೋಧನೆಗಳು ಕೃಷಿ ಮತ್ತು ಆರ್ಥಿಕ ಅಂಶಗಳ ನಡುವಿನ ಅಸಮಾನತೆಯನ್ನು ಎತ್ತಿ ತೋರಿಸುತ್ತವೆ. ಕತ್ತೆಗಳ ಸಂಖ್ಯೆಯ ಹೆಚ್ಚಳವು ಗ್ರಾಮೀಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ಕೆಲವು ಸಕಾರಾತ್ಮಕ ಪ್ರವೃತ್ತಿಗಳನ್ನು ಪ್ರತಿಬಿಂಬಿಸಬಹುದಾದರೂ ಇದು ವಿಶಾಲವಾದ ಆರ್ಥಿಕ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆರ್ಥಿಕತೆಯಲ್ಲಿ ಕಳಪೆ ಕಾರ್ಯಕ್ಷಮತೆಯು ಪಾಕಿಸ್ತಾನವು ತನ್ನ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಎತ್ತಿ ತೋರಿಸುತ್ತದೆ.

ಪಾಕಿಸ್ತಾನಿಗಳಿಗೆ ಕತ್ತೆಗಳು ಏಕೆ ನಿರ್ಣಾಯಕ?

ಕತ್ತೆಗಳು ಪಾಕಿಸ್ತಾನದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ. ಈ ಪ್ರಾಣಿಗಳು ಸರಕು ಮತ್ತು ಜನರ ಸಾಗಣೆ, ಕೃಷಿ ಕೆಲಸ, ಮತ್ತು ಅನೇಕ ಕುಟುಂಬಗಳಿಗೆ ಜೀವನಾಧಾರದ ನಿರ್ಣಾಯಕ ಮೂಲವಾಗಿ ಸೇವೆ ಸಲ್ಲಿಸುವುದು ಸೇರಿದಂತೆ ವಿವಿಧ ಕಾರ್ಯಗಳಿಗೆ ಅನಿವಾರ್ಯವಾಗಿವೆ.

ಶಕ್ತಿ, ವಿಶ್ವಾಸಾರ್ಹತೆ ಮತ್ತು ಒರಟಾದ ಭೂಪ್ರದೇಶಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯಕ್ಕೆ ಹೆಸರುವಾಸಿಯಾದ ಕತ್ತೆಗಳು ಕೆಲವು ಕೈಗಾರಿಕೆಗಳು ಮತ್ತು ಸಮುದಾಯಗಳಿಗೆ ಅತ್ಯಗತ್ಯ. ಆಧುನಿಕ ಸಾರಿಗೆ ಮೂಲಸೌಕರ್ಯವು ಅಸಮರ್ಪಕ ಅಥವಾ ಅಸ್ತಿತ್ವದಲ್ಲಿಲ್ಲದ ಪ್ರದೇಶಗಳಲ್ಲಿ ಅವುಗಳ ಉಪಯುಕ್ತತೆಯು ವಿಶೇಷವಾಗಿ ಗಮನಾರ್ಹವಾಗಿದೆ. ಇದು ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಕತ್ತೆಗಳನ್ನು ಆರ್ಥಿಕ ರಚನೆಯ ಅವಿಭಾಜ್ಯ ಅಂಗವನ್ನಾಗಿ ಮಾಡುತ್ತದೆ. ಇದು ಸ್ಥಳೀಯ ಆರ್ಥಿಕತೆಗಳಿಗೆ ಮತ್ತು ಪಾಕಿಸ್ತಾನದ ಹಲವಾರು ಜನರ ದೈನಂದಿನ ಜೀವನಕ್ಕೆ ಗಣನೀಯವಾಗಿ ಕೊಡುಗೆ ನೀಡುತ್ತದೆ.

ಒಂದು ವರದಿಯ ಪ್ರಕಾರ ಪಾಕಿಸ್ತಾನವು ಚೀನಾಕ್ಕೆ ಕತ್ತೆಗಳನ್ನು ರಫ್ತು ಮಾಡುವ ಮೂಲಕ ವಾರ್ಷಿಕವಾಗಿ ಲಕ್ಷಾಂತರ ಡಾಲರ್‌ಗಳನ್ನು ವಿದೇಶಿ ವಿನಿಮಯದಲ್ಲಿ ಗಳಿಸಲು ಯೋಜನೆ ರೂಪಿಸಿದೆ. ಪಾಕಿಸ್ತಾನವು ವಿಶ್ವದಲ್ಲೇ ಅತೀ ಹೆಚ್ಚು ಕತ್ತೆಗಳನ್ನು ಹೊಂದಿರುವ ಮೂರನೇ ರಾಷ್ಟ್ರವಾಗಿದೆ. ಇದರಲ್ಲಿ ಚೀನಾ ಮೊದಲ ಸ್ಥಾನದಲ್ಲಿದೆ.


ಚೀನಾಕ್ಕೆ ಹೆಚ್ಚು ಕತ್ತೆಗಳು ಏಕೆ ಬೇಕು?

ಇ-ಜಿಯಾವೋ ಎಂದು ಕರೆಯಲ್ಪಡುವ ಚೀನಾದ ಸಾಂಪ್ರದಾಯಿಕ ಔಷಧಕ್ಕೆ ಪ್ರತಿ ವರ್ಷ ಲಕ್ಷಾಂತರ ಕತ್ತೆಗಳು ಚೀನಾದಲ್ಲಿ ಬಲಿಯಾಗುತ್ತಿದೆ. ಕತ್ತೆ ಚರ್ಮದಿಂದ ಹೊರತೆಗೆಯಲಾಗುವ ಕಾಲಜನ್ ಬಳಸಿ ತಯಾರಿಸಲಾದ ಇ-ಜಿಯಾವೊ ಆಹಾರ ಮತ್ತು ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸುವ ಪ್ರಮುಖ ಅಂಶವಾಗಿದೆ. ಈ ಔಷಧವು ರಕ್ತವನ್ನು ಸಮೃದ್ಧಗೊಳಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ರೋಗಗಳನ್ನು ತಡೆಯುತ್ತದೆ ಎನ್ನಲಾಗುತ್ತದೆ.

ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಚೀನಾ ಇತರ ದೇಶಗಳಿಂದ ಕತ್ತೆಗಳನ್ನು ಆಮದು ಮಾಡಿಕೊಳ್ಳುತ್ತಿದೆ ಮತ್ತು ಪಾಕಿಸ್ತಾನವು ತನ್ನ ಸ್ನೇಹಿತ ರಾಷ್ಟ್ರವಾದ ಚೀನಾದಿಂದ ಈ ಮೂಲಕ ಸ್ವಲ್ಪ ಲಾಭ ಪಡೆಯಲು ಪ್ರಯತ್ನಿಸುತ್ತಿದೆ.

ಚೀನಾದಲ್ಲಿ ಕತ್ತೆಗಳ ಸಂಖ್ಯೆ ಇಳಿಕೆ

ಚೀನಾದ ಕತ್ತೆಗಳ ಸಂಖ್ಯೆಯು 1992ರಲ್ಲಿ 11 ಮಿಲಿಯನ್‌ನಿಂದ 2024ರಲ್ಲಿ 2 ಮಿಲಿಯನ್‌ ಗೆ ಇಳಿದಿದೆ. ಹೀಗಾಗಿ ಅದು ತನ್ನ ಇ-ಜಿಯಾವೋ ಉದ್ಯಮಕ್ಕಾಗಿ ಸಾಗರೋತ್ತರದಿಂದ ಕತ್ತೆ ಚರ್ಮವನ್ನು ಆಮದು ಮಾಡಿಕೊಳ್ಳುತ್ತಿದೆ.

ಕತ್ತೆಗಳು ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಿಗಳಿಗೆ ಭರವಸೆಯೇ?

ಕತ್ತೆಗಳು ಅನೇಕ ಪಾಕಿಸ್ತಾನಿಗಳಿಗೆ ಕೊನೆಯ ಭರವಸೆಯಾಗಿರಬಹುದು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವವರಿಗೆ. ಸ್ಥಳೀಯ ಆರ್ಥಿಕತೆಯು ಈ ಪ್ರಾಣಿಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ.

ವಿತ್ತ ಸಚಿವ ಮುಹಮ್ಮದ್ ಔರಂಗಜೇಬ್ ಅನಾವರಣಗೊಳಿಸಿದ ಸಮೀಕ್ಷೆಯ ಪ್ರಕಾರ, ಕೃಷಿ ವಲಯದ ಶೇ. 60.84 ಮತ್ತು ಜಿಡಿಪಿಯ ಶೇ. 14.63 ಪಾಲನ್ನು ಹೊಂದಿರುವ ಜಾನುವಾರುಗಳು 2023- 24ರಲ್ಲಿ ಶೇ.3.89 ರಷ್ಟು ಪ್ರಗತಿ ಸಾಧಿಸಿದ್ದು, ಕಳೆದ ವರ್ಷ ಶೇ.3. 70ರಷ್ಟಿತ್ತು.

ಜಾನುವಾರು ವಲಯದ ಒಟ್ಟು ಮೌಲ್ಯವರ್ಧನೆಯು 2022- 23 ರಲ್ಲಿ 5,587 ಶತಕೋಟಿ ರೂಪಾಯಿಗಳಿಂದ 2023- 24 ರಲ್ಲಿ 5,804 ಶತಕೋಟಿಗಳಿಗೆ ಏರಿಕೆಯನ್ನು ತೋರಿಸಿದೆ. ಇದು ಶೇಕಡಾ 3.9 ರ ಬೆಳವಣಿಗೆಯ ದರವನ್ನು ತೋರಿಸಿದೆ. ಜಾನುವಾರು ವಲಯವು ಕೃಷಿ ಬೆಳವಣಿಗೆಯಲ್ಲಿ ತನ್ನ ಪಾಲು ಪ್ರಮುಖವಾಗಿರುವುದನ್ನು ಭದ್ರಗೊಳಿಸಿದೆ. ಇದು 2024ರ ಆರ್ಥಿಕ ಅವಧಿಯಲ್ಲಿ ಕೃಷಿ ಮೌಲ್ಯದ ಸುಮಾರು ಶೇ. 60.84 ಮತ್ತು ರಾಷ್ಟ್ರೀಯ ಜಿಡಿಪಿಯ ಶೇ.14.63ರಷ್ಟು ಪಾಲನ್ನು ಹೊಂದಿದೆ.

ಇದನ್ನೂ ಓದಿ: Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ


ಪಾಕಿಸ್ತಾನಕ್ಕೆ ಹೆಚ್ಚಾಗುತ್ತಿವೆ ಸವಾಲುಗಳು

ಪಾಕಿಸ್ತಾನದ ಆರ್ಥಿಕ ಸಮೀಕ್ಷೆಯಲ್ಲಿ ಕತ್ತೆಗಳ ಸಂಖ್ಯೆಯ ಹೆಚ್ಚಳವು ದೇಶದ ಆರ್ಥಿಕತೆಗೆ ಅದರ ಪ್ರಾಮುಖ್ಯತೆ ಮತ್ತು ಪ್ರಸ್ತುತತೆಯನ್ನು ಸೂಚಿಸುತ್ತದೆ. ಈಗಾಗಲೇ ಪಾಕಿಸ್ತಾನವು ತನ್ನ ಆರ್ಥಿಕ ಬೆಳವಣಿಗೆಯ ಗುರಿಗಳನ್ನು ಸಾಧಿಸುವಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಹೆಚ್ಚಿನ ಹಣದುಬ್ಬರ ದರಗಳು ಮತ್ತು ಸಮರ್ಥನೀಯ ವಿತ್ತೀಯ ಕೊರತೆಗಳು ಹೂಡಿಕೆದಾರರ ವಿಶ್ವಾಸವನ್ನು ದುರ್ಬಲಗೊಳಿಸಿದೆ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಅಡ್ಡಿಪಡಿಸಿದೆ.

ಅಲ್ಲದೇ ಭಯೋತ್ಪಾದನೆ ಮತ್ತು ದಂಗೆಯಂತಹ ಭದ್ರತಾ ಸವಾಲುಗಳು ಭದ್ರತೆಗೆ ಸಂಬಂಧಿಸಿದ ವೆಚ್ಚಗಳನ್ನು ಹೆಚ್ಚಿಸಿವೆ. ಅಭಿವೃದ್ಧಿಗೆ ಮತ್ತಷ್ಟು ಅಡ್ಡಿಯುಂಟುಮಾಡಿದೆ. ಅಸಮರ್ಪಕ ಮೂಲಸೌಕರ್ಯ ಮತ್ತು ಅಸಮರ್ಥ ಅಧಿಕಾರಶಾಹಿಯಂತಹ ರಚನಾತ್ಮಕ ದೌರ್ಬಲ್ಯಗಳು ಉತ್ಪಾದಕತೆಯನ್ನು ನಿರ್ಬಂಧಿಸುತ್ತವೆ ಮತ್ತು ಆರ್ಥಿಕ ವಿಸ್ತರಣೆಗೆ ಅಡ್ಡಿಯಾಗುತ್ತವೆ.

Continue Reading
Advertisement
Jammu Kashmir
ದೇಶ18 mins ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ25 mins ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ56 mins ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ2 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ3 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ3 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್3 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ4 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ4 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು4 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌