Retail Inflation Inflation in May decreased to lowest in two yearsRetail inflation : Good News: ಮೇನಲ್ಲಿ ಹಣದುಬ್ಬರ ಎರಡು ವರ್ಷದಲ್ಲೇ ಕನಿಷ್ಠ, 4.25%ಕ್ಕೆ ಇಳಿಕೆ

ಪ್ರಮುಖ ಸುದ್ದಿ

Retail inflation : Good News: ಮೇನಲ್ಲಿ ಹಣದುಬ್ಬರ ಎರಡು ವರ್ಷದಲ್ಲೇ ಕನಿಷ್ಠ, 4.25%ಕ್ಕೆ ಇಳಿಕೆ

Retail inflation 2023ರ ಮೇನಲ್ಲಿ ರಿಟೇಲ್ ಹಣದುಬ್ಬರ‌ ಕಳೆದ ಎರಡು ವರ್ಷದಲ್ಲಿಯೇ ಕನಿಷ್ಠ ಮಟ್ಟಕ್ಕೆ ಇಳಿದಿದೆ. ವಿವರ ಇಲ್ಲಿದೆ.

VISTARANEWS.COM


on

Retail Inflation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದಲ್ಲಿ ರಿಟೇಲ್‌ ಹಣದುಬ್ಬರ (Retail inflation) ಕಳೆದ ಎರಡು ವರ್ಷದಲ್ಲಿಯೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಇದು ಮೇನಲ್ಲಿ 4.25%ಕ್ಕೆ ತಗ್ಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಗ್ರಾಹಕ ದರ ಸೂಚ್ಯಂಕ (consumer price index) ಆಧರಿತ ಹಣದುಬ್ಬರ ಆರ್‌ಬಿಐನ ಸಹಿಷ್ಣುತೆಯ ಮಟ್ಟದಲ್ಲಿ, ಅಂದರೆ 2-6% ಒಳಗೆಯೇ ಇದೆ ಎಂದು ಸೋಮವಾರ ಬಿಡುಗಡೆಯಾಗಿರುವ ಅಂಕಿ ಅಂಶಗಳು ತಿಳಿಸಿವೆ.

ಮೇನಲ್ಲಿ ಗ್ರಾಹಕ ಆಹಾರ ದರ ಸೂಚ್ಯಂಕ (consumer food price index) 2.91%ಕ್ಕೆ ಇಳಿಕೆಯಾಗಿತ್ತು. ಇದು ಏಪ್ರಿಲ್‌ನಲ್ಲಿ 3.84% ಇತ್ತು. ಗ್ರಾಮೀಣ ಹಣದುಬ್ಬರ 4.17% ಇದ್ದರೆ, ನಗರ ಪ್ರದೇಶದ ಹಣದುಬ್ಬರ 4.27% ಇತ್ತು.

ಕಳೆದ ಮೇನಲ್ಲಿ ತರಕಾರಿಗಳ ಬೆಲೆಯಲ್ಲಿ 8.1% ಇಳಿಕೆಯಾಗಿತ್ತು. ಆಹಾರ ಮತ್ತು ಪಾನೀಯಗಳ ದರ 3.29% ಇಳಿದಿತ್ತು. ಧವಸ ಧಾನ್ಯಗಳ ದರದಲ್ಲೂ ಇಳಿಕೆ ಉಂಟಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಪಿಜಿ, ಇತರ ಇಂಧನ ದರ ಇಳಿಕೆ ಕೂಡ ಸಕಾರಾತ್ಮಕ ಪ್ರಭಾವ ಬೀರಿತ್ತು. ಹೀಗಿದ್ದರೂ, ಎಲ್‌ನಿನೊ ಎಫೆಕ್ಟ್‌, ಮುಂಗಾರು ಕೊರತಯ ಸವಾಲು ಕಾಡಿದರೆ, ಹಣದುಬ್ಬರ ಮತ್ತೆ ಏರಿಕೆಯಾಗುವ ಆತಂಕ ಇದೆ.

ಕಳೆದ ಏಪ್ರಿಲ್‌ನಲ್ಲಿ ರಿಟೇಲ್‌ ಹಣದುಬ್ಬರ 4.7%ಕ್ಕೆ ಇಳಿಕೆಯಾಗಿದೆ. ಮಾರ್ಚ್‌ನಲ್ಲಿ ಇದು 5.66% ಇತ್ತು ಎಂದು ಶುಕ್ರವಾರ ಸರ್ಕಾರ ಬಿಡುಗಡೆಗೊಳಿಸಿದ ಅಂಕಿ ಅಂಶಗಳು ತಿಳಿಸಿವೆ. ಸತತ ಎರಡನೇ ತಿಂಗಳಿಗೆ ಗ್ರಾಹಕ ದರ ಆಧರಿತ ಹಣದುಬ್ಬರ (Consumer Price Index) ಆರ್‌ಬಿಐನ ಸುರಕ್ಷತೆಯ ಮಟ್ಟದ ಮಿತಿಯೊಳಗೆ ಬಂದಿದೆ.

ಆರ್‌ಬಿಐ ಪ್ರಕಾರ ಹಣದುಬ್ಬರ ಗರಿಷ್ಠ 6% ಇರಬಹುದು. ಆಹಾರ ವಸ್ತುಗಳ ದರ ಇಳಿಕೆಯ ಪರಿಣಾಮ ಚಿಲ್ಲರೆ ಹಣದುಬ್ಬರ ಕಳೆದ 18 ತಿಂಗಳಿನಲ್ಲಿಯೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿತ್ತು. 2021ರ ಅಕ್ಟೋಬರ್‌ನಲ್ಲಿ ರಿಟೇಲ್‌ ಹಣದುಬ್ಬರ 4.48% ಇತ್ತು.

ಮಾರ್ಚ್‌ನಲ್ಲಿ ಕಾರ್ಖಾನೆಗಳಲ್ಲಿ ಉತ್ಪಾದನೆ 1.1% ಏರಿಕೆಯಾಗಿತ್ತು. ಇದನ್ನು ಕೈಗಾರಿಕಾ ಉತ್ಪಾದನೆ ಸೂಚ್ಯಂಕ ಐಐಪಿ 2022ರ ಮಾರ್ಚ್‌ನಲ್ಲಿ 2.2% ಏರಿತ್ತು. ನ್ಯಾಶನಲ್‌ ಸ್ಟಾಟಿಸ್ಟಿಕಲ್‌ ಆಫೀಸ್‌ (National statistical office) ಈ ವರದಿ ಬಿಡುಗಡೆಗೊಳಿಸಿದೆ. ಮಾರ್ಚ್‌ನಲ್ಲಿ ಗಣಿಗಾರಿಕೆಯ ಉತ್ಪಾದನೆ 6.8% ಏರಿಕೆಯಾಗಿತ್ತು. ವಿದ್ಯುತ್‌ ಉತ್ಪಾದನೆ 1.6% ಇಳಿಕೆಯಾಗಿತ್ತು.

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ರಿಟೇಲ್‌ ಹಣದುಬ್ಬರವನ್ನು 2-6% ರ ಶ್ರೇಣಿಯಲ್ಲಿ ಉಳಿಸಿಕೊಳ್ಳುವ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಪೂರೈಕೆಯ ಸರಣಿಯಲ್ಲಿ ಅಡಚಣೆ ಉಂಟಾಗಿದ್ದರಿಂದ ಹಣದುಬ್ಬರ ಏರಿತ್ತು. ಇದನ್ನು ಹತೋಟಿಗೆ ತರಲು ಆರ್‌ಬಿಐ ಬಡ್ಡಿ ದರವನ್ನು ಏರಿಸಿತ್ತು. ಇದೀಗ ರಿಟೇಲ್‌ ಹಣದುಬ್ಬರ ತಗ್ಗಿರುವುದರಿಂದ ಬಡ್ಡಿ ದರ ಇಳಿಕೆಗೆ ಹಾದಿ ಸುಗಮವಾಗುತ್ತಿದೆ. ಆರ್‌ಬಿಐ ಅಂದಾಜಿನ ಪ್ರಕಾರ 2023-24ರಲ್ಲಿ ರಿಟೇಲ್ ಹಣದುಬ್ಬರ ಸರಾಸರಿ 5.1% ರಲ್ಲಿ ಇರಬಹುದು. ತಜ್ಞರ ಪ್ರಕಾರ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ಬಡ್ಡಿ ದರಗಳು ಇಳಿಕೆಯಾಗಲಿವೆ. ಜಾಗತಿಕ ಮಟ್ಟದಲ್ಲಿ ಬಡ್ಡಿ ದರಗಳು ಇಳಿಕೆಯಾದರೆ, ಆರ್‌ಬಿಐ ಅದನ್ನು

ಇದನ್ನೂ ಓದಿ: Retail inflation : ಬಿಗ್‌ ರಿಲೀಫ್, ರಿಟೇಲ್‌ ಹಣದುಬ್ಬರ ಏಪ್ರಿಲ್‌ನಲ್ಲಿ 4.7%ಕ್ಕೆ ಇಳಿಕೆ, ಕಾರಣವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

HD Revanna: ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಆಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ (Bowring Hospital) ವೈದ್ಯಕೀಯ ಪರೀಕ್ಷೆ (Medical Test) ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆಯಲಿದ್ದಾರೆ. ಇನ್ನು, ಎಸ್‌ಐಟಿ ಸೆಲ್‌ನಲ್ಲಿ ಎಚ್‌.ಡಿ.ರೇವಣ್ಣ ಅವರು ಗಳಗಳನೆ ಅತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಚ್‌.ಡಿ. ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋದರು. ಇದಾದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಮತ್ತೆ ಸಿಐಡಿ ಕಚೇರಿಗೆ ಕರೆತಂದು, ಎಸ್‌ಐಟಿ ಸೆಲ್‌ನಲ್ಲಿ ಇರಿಸಿದರು. ಎಚ್‌.ಡಿ.ರೇವಣ್ಣ ಅವರು ಮಲಗಲು ಹಾಸಿಗೆ ಹಾಗೂ ಬೆಡ್‌ಶೀಟ್‌ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ.ರೇವಣ್ಣ ಅವರನ್ನು ವಿಚಾರಣೆ ಮಾಡಲಿರುವ ಅಧಿಕಾರಿಗಳು, ಬಳಿಕ ವಿಶ್ರಾಂತಿಗೆ ಅವಕಾಶ ನೀಡಲಿದ್ದಾರೆ. ಸೆಲ್‌ನಲ್ಲಿ ರೇವಣ್ಣ ಅವರಿಗೆ ಒಂದು ಸಾಮಾನ್ಯ ಬೆಡ್‌ ಹಾಗೂ ಕುರ್ಚಿ ನೀಡಲಾಗಿದೆ. ಇದೆಲ್ಲವನ್ನೂ ಕಂಡ ರೇವಣ್ಣ ಅವರು ಕಣ್ಣೀರು ಹಾಕಿದ್ದಾರೆ. ಮಗ ವಿದೇಶಕ್ಕೆ ಪರಾರಿಯಾಗಿದ್ದಾನೆ. ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಈಗ ನಾನು ಸೆಲ್‌ನಲ್ಲಿ ಇರಬೇಕಾಯಿತಲ್ಲ ಎಂಬುದನ್ನು ನೆನೆದು ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ನಮ್ಮನ್ನೆಲ್ಲ ಸಾಯಿಸ್ತಾರೆ ಎಂದ ಮಹಿಳೆ

ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading

ಪ್ರಮುಖ ಸುದ್ದಿ

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024: ಪಂದ್ಯದ ನಂತರ ಟೀಕಾಕಾರರ ವಿರುದ್ಧ ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಂತೆಯೇ ಶನಿವಾರ ನಡೆದ ಆರ್​ಸಿಬಿ ಮತ್ತು ಜಿಟಿ ಪಂದ್ಯಕ್ಕೆ ಮುಂಚಿತವಾಗಿ ಕೊಹ್ಲಿಯ ಪ್ರತಿಕ್ರಿಯೆಗಳ ಬಗ್ಗೆ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಕೊಹ್ಲಿ 118 ಸ್ಟ್ರೈಕ್ ರೇಟ್ ನಲ್ಲಿ ಆಡಿ ನಂತರ 14 ಅಥವಾ 15 ನೇ ಓವರ್​ಗಳಲ್ಲಿ ನಿಧಾನಗೊಳಿಸುವುದನ್ನು ವೀಕ್ಷಕ ವಿವರಣೆಗಾರರು ಪ್ರಶ್ನಿಸಿದ್ದಾರೆ ಅಷ್ಟೆ. ಅದರಲ್ಲಿ ಏನು ತಪ್ಪು ಎಂದು ಎಂದು ಭಾರತೀಯ ದಂತಕಥೆ ಪ್ರಶ್ನಸಿದ್ದಾರೆ.

VISTARANEWS.COM


on

Virat kohli
Koo

ನವದೆಹಲಿ: ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡಿರುವುದಕ್ಕೆ ತಿರುಗೇಟು ಕೊಟ್ಟಿರುವ ಕೊಹ್ಲಿಯ ಬಗ್ಗೆ ಕ್ರಿಕೆಟ್ ದಂತಕತೆ ಸುನಿಲ್​ ಗವಾಸ್ಕರ್​ ಮತ್ತೆ ಕೋಪ ವ್ಯಕ್ತಪಡಿಸಿದ್ದಾರೆ. ಐಪಿಎಲ್​ (IPL 2024) ಪಂದ್ಯಗಳ ಸಮಯದಲ್ಲಿ ವೀಕ್ಷಕ ವಿವರಣೆಗಾರರು ತಮ್ಮ ಮುಂದೆ ನಡೆಯುತ್ತಿರುವುದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ಹಾಗೆಂದು ಅವರಿಗೆ ಯಾವುದೇ ದುರುದ್ದೇಶ ಇರುವುದಿಲ್ಲ ಎಂಬುದಾಗಿ ಗವಾಸ್ಕರ್ ಹೇಳಿದ್ದಾರೆ. ಕೊಹ್ಲಿಯ ಸ್ಟ್ರೈಕ್ ರೇಟ್ ಇತ್ತೀಚೆಗೆ ಚರ್ಚೆಯ ವಿಷಯವಾಗಿತ್ತು. ಪವರ್​ಪ್ಲೇ ಓವರ್ಗಳ ನಂತರ ಅವರು ನಿಧಾನವಾಗಿ ಅಡುತ್ತಾರೆ ಎಂದು ಅನೇಕರು ಟೀಕಿಸಿದ್ದಾರೆ. ಏಪ್ರಿಲ್ 28 ರಂದು ಜಿಟಿ ವಿರುದ್ಧ ಕೊಹ್ಲಿ 44 ಎಸೆತಗಳಲ್ಲಿ 70 ರನ್ ಗಳಿಸಿದ್ದು ಅದರಲ್ಲೊಂದು .

ಪಂದ್ಯದ ನಂತರ ಟೀಕಾಕಾರರ ವಿರುದ್ಧ ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಂತೆಯೇ ಶನಿವಾರ ನಡೆದ ಆರ್​ಸಿಬಿ ಮತ್ತು ಜಿಟಿ ಪಂದ್ಯಕ್ಕೆ ಮುಂಚಿತವಾಗಿ ಕೊಹ್ಲಿಯ ಪ್ರತಿಕ್ರಿಯೆಗಳ ಬಗ್ಗೆ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಕೊಹ್ಲಿ 118 ಸ್ಟ್ರೈಕ್ ರೇಟ್ ನಲ್ಲಿ ಆಡಿ ನಂತರ 14 ಅಥವಾ 15 ನೇ ಓವರ್​ಗಳಲ್ಲಿ ನಿಧಾನಗೊಳಿಸುವುದನ್ನು ವೀಕ್ಷಕ ವಿವರಣೆಗಾರರು ಪ್ರಶ್ನಿಸಿದ್ದಾರೆ ಅಷ್ಟೆ. ಅದರಲ್ಲಿ ಏನು ತಪ್ಪು ಎಂದು ಎಂದು ಭಾರತೀಯ ದಂತಕಥೆ ಪ್ರಶ್ನಸಿದ್ದಾರೆ.

ಸ್ಟ್ರೈಕ್ ರೇಟ್ 118 ಇದ್ದಾಗ ಮಾತ್ರ ವೀಕ್ಷಕ ವಿವರಣೆಗಾರರು ಪ್ರಶ್ನಿಸಿದ್ದರು. ನನಗೆ ಹೆಚ್ಚು ಖಚಿತವಿಲ್ಲ. ನಾನು ಹೆಚ್ಚು ಪಂದ್ಯಗಳನ್ನು ನೋಡುವುದಿಲ್ಲ. ಆದ್ದರಿಂದ ಇತರ ವೀಕ್ಷಕ ವಿವರಣೆಗಾರರು ಬೇರೆ ರೀತಿಯಲ್ಲಿ ಏನು ಹೇಳಿದ್ದಾರೆಂದು ನನಗೆ ತಿಳಿದಿಲ್ಲ. ಆದರೆ ನೀವು 118 ಸ್ಟ್ರೈಕ್ ಹೊಂದಿದ್ದರೆ ಮತ್ತು ನಂತರ 118 ಸ್ಟ್ರೈಕ್ ರೇಟ್ನೊಂದಿಗೆ ಔಟ್ ಆಗಿದ್ದರೆ ಸರಿಯಲ್ಲ. ನನ್ನ ಪ್ರಕಾರ ನಿಮ್ಮದು ಚಪ್ಪಾಳೆಗಾಗಿ ಪ್ರಯತ್ನ ಎಂದು ಗವಾಸ್ಕರ್​ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

ಹೊರಗಿನ ಮಾತುಗಳಿಗೆ ನೀವು ಏಕೆ ಪ್ರತಿಕ್ರಿಯಿಸುತ್ತಿದ್ದೀರಿ?

ಗವಾಸ್ಕರ್ ಅವರು ಕೊಹ್ಲಿಯನ್ನು ಸತತವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೊರಗಿನ ಗದ್ದಲ ಹಾಗೂ ವಿಶ್ಲೇಷಣೆಗೆ ಗಮನ ಹರಿಸುವುದನ್ನೂ ಪ್ರಶ್ನಿಸಿದ್ದಾರೆ. ವೀಕ್ಷಕ ವಿವರಣೆಗಾರರಿಗೆ ಯಾರ ವಿರುದ್ಧವೂ ಯಾವುದೇ ಕಾರ್ಯಸೂಚಿಗಳಿಲ್ಲ ಮತ್ತು ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಭಾರತೀಯ ಕ್ರಿಕೆಟ್ ದಂತಕಥೆ ಹೇಳಿದರು.

“ನೀವು ಯಾವುದೇ ಹೊರಗಿನ ಮಾತುಗಳಿಗೆ ಏಕೆ ಉತ್ತರಿಸುತ್ತಿದ್ದೀರಿ. ನಾವೆಲ್ಲರೂ ಸ್ವಲ್ಪ ಕ್ರಿಕೆಟ್ ಆಡಿದ್ದೇವೆ. ಸಾಕಷ್ಟು ಕ್ರಿಕೆಟ್ ಅಲ್ಲ. ಆದರೆ ನಮಗೆ ಯಾವುದೇ ಕಾರ್ಯಸೂಚಿಗಳಿಲ್ಲ. ನಾವು ಏನನ್ನು ನೋಡುತ್ತೇವೆಯೋ ಅದರ ಬಗ್ಗೆ ಮಾತನಾಡುತ್ತೇವೆ. ನಮಗೆ ಯಾವುದೇ ಇಷ್ಟಗಳು ಮತ್ತು ಇಷ್ಟಪಡದಿರುವಿಕೆಗಳು ಇರಬೇಕಾಗಿಲ್ಲ. ನಮಗೆ ಇಷ್ಟಗಳು ಮತ್ತು ಇಷ್ಟಪಡದಿರುವಿಕೆಗಳು ಇದ್ದರೂ ಉಪಯೋಗವಿಲ್ಲ ಎಂದು ಗವಾಸ್ಕರ್ ಹೇಳಿದರು.

Continue Reading

ಕ್ರೀಡೆ

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

IPL 2024: ಎಂಐ ವಿರುದ್ಧದ ಪಂದ್ಯದ ವೇಳೆ ಮಯಾಂಕ್ ತಂಡಕ್ಕೆ ಮರಳಿದ್ದರು. ಆದರೆ ಗಾಯ ಮತ್ತೆ ಉಲ್ಬಣಗೊಂಡ ಕಾರಣ 3.1 ಓವರ್​ಗಳ ಎಸೆದ ನಂತರ ಮೈದಾನದಿಂದ ಹೊರಗುಳಿಯಬೇಕಾಯಿತು. ಯುವ ಆಟಗಾರನ ಅಭಿಯಾನವು ಮುಗಿದಿದೆ ಎಂದು ಲ್ಯಾಂಗರ್ ಈಗ ಬಹಿರಂಗಪಡಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಲಕ್ನೊ ಸೂಪರ್​ ಜೈಂಟ್ಸ್​ ವೇಗದ ಬೌಲರ್​​ ಮಯಾಂಕ್ ಯಾದವ್ ಗಾಯದ ಸಮಸ್ಯೆ ಹೆಚ್ಚಾಗಿದ್ದು ಐಪಿಎಲ್​ನ (IPL 2024) ಉಳಿದ ಪಂದ್ಯಗಳಿಂದ ಹೊರಕ್ಕೆ ಉಳಿಯುವಂತಾಗಿದೆ. ಹಿಂದಿನ ಪಂದ್ಯದಲ್ಲಿ ಅರ್ಧದಲ್ಲೇ ಮೈದಾನದಿಂದ ಹೊರಕ್ಕೆ ಹೋಗಿದ್ದ ಅವರು ಐಪಿಎಲ್ 2024 ಋತುವಿನ ಉಳಿದ ಭಾಗವನ್ನು ಕಳೆದುಕೊಳ್ಳಲಿದ್ದಾರೆ ಎಂದು ಎಲ್ಎಸ್​ಜಿ ಕೋಚ್ ಜಸ್ಟಿನ್ ಲ್ಯಾಂಗರ್ ಖಚಿತಪಡಿಸಿದ್ದಾರೆ. ಐಪಿಎಲ್ 2024 ರಲ್ಲಿ ಮಯಾಂಕ್ 2 ಪಂದ್ಯಗಳಲ್ಲಿ 6 ವಿಕೆಟ್ ಪಡೆಯುವ ಮೂಲಕ ತಮ್ಮ ಜೀವನಕ್ಕೆ ಅದ್ಭುತ ಆರಂಭ ನೀಡಿದ್ದರು. ನಂತರ ದೆಹಲಿ ವೇಗಿ ಗಾಯಗೊಂಡು 5 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಎಂಐ ವಿರುದ್ಧದ ಪಂದ್ಯದ ವೇಳೆ ಮಯಾಂಕ್ ತಂಡಕ್ಕೆ ಮರಳಿದ್ದರು. ಆದರೆ ಗಾಯ ಮತ್ತೆ ಉಲ್ಬಣಗೊಂಡ ಕಾರಣ 3.1 ಓವರ್​ಗಳ ಎಸೆದ ನಂತರ ಮೈದಾನದಿಂದ ಹೊರಗುಳಿಯಬೇಕಾಯಿತು. ಯುವ ಆಟಗಾರನ ಅಭಿಯಾನವು ಮುಗಿದಿದೆ ಎಂದು ಲ್ಯಾಂಗರ್ ಈಗ ಬಹಿರಂಗಪಡಿಸಿದ್ದಾರೆ. ಮಯಾಂಕ್ ಅವರಿಗೆ ಸ್ಕ್ಯಾನ್ ಮಾಡಲಾಯಿತು ಮತ್ತು ಅವರು ಮೊದಲ ಗಾಯ ಮಾಡಿಕೊಂಡ ಅದೇ ಪ್ರದೇಶದಲ್ಲಿ ಅವರಿಗೆ ಸಣ್ಣ ಗಾಯವಿದೆ ಎಂದು ಎಲ್ಎಸ್​ಜಿ ಕೋಚ್ ಹೇಳಿದರು.

ಇಲ್ಲ, ಅವರು ಪ್ಲೇ-ಆಫ್​ನಲ್ಲಿ ಆಡಬಹುದೆಂದು ನಮ್ಮ ಆಶಾವಾದ ಇಟ್ಟುಕೊಂಡಿದ್ದೆವು. ಆದರೆ ನಾನು ವಾಸ್ತವವಾದಿಯೂ ಹೌದು. ಪಂದ್ಯಾವಳಿಯ ಕೊನೆ ಹಂತಕ್ಕೆ ಬರುವುದು ಅವರಿಗೆ ಕಷ್ಟಕರವಾಗಿರುತ್ತದೆ ಎಂದು ಹೇಳಿದರು.

“ಅವರು (ಮಯಾಂಕ್) ಸ್ಕ್ಯಾನ್ ಮಾಡಿಸಿಕೊಂಡಿದ್ದಾರೆ. ಅವರ ಕೊನೆಯ ಗಾಯ (ಗಾಯ) ಇದ್ದ ಪ್ರದೇಶಕ್ಕೆ ಹೋಲುವ ಪ್ರದೇಶದಲ್ಲಿ ಅವರಿಗೆ ಸಣ್ಣ ಹರಿತ ಕಂಡು ಬಂದಿದೆ. ಇದು ತುಂಬಾ ದುರದೃಷ್ಟಕರ. ಅವರು ಆಟಕ್ಕೆ ಮರಳಿದಾಗ ಅವರು ಬೀರಿದ ಪರಿಣಾಮವನ್ನು ನಾವು ನೋಡಿದ್ದೇವೆ, “ಎಂದು ಲ್ಯಾಂಗರ್ ಹೇಳಿದರು.

ಪಂದ್ಯದ ನಂತರ ಮಯಾಂಕ್ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಮಾತನಾಡಿದ್ದಾರೆ. ಅವರು ವೇಗದ ಬೌಲರ್ ಆಗಲು ಹೊರಟರೆ ಅಂತಹ ಗಾಯಗಳನ್ನು ಎದುರಿಸಬೇಕಾಗುತ್ತದೆ ಹೇಳಿದರು ಎಂದು ಲ್ಯಾಂಗರ್ ಹೇಳಿದರು.

“ವೇಗದ ಬೌಲರ್ಗಳ ಬಗ್ಗೆ ಯಾವಾಗಲೂ ಸಾಕಷ್ಟು ಚರ್ಚೆ ಇರುತ್ತದೆ. ಪಂದ್ಯದ ನಂತರ ಅವರು [ಜಸ್ಪ್ರೀತ್] ಬುಮ್ರಾ ಅವರೊಂದಿಗೆ ಮಾತನಾಡಿದ್ದಾರೆ ಎಂದು ನನಗೆ ತಿಳಿದಿದೆ. ವೇಗದ ಬೌಲರ್ ಆಗಲು ಹೊರಟರೆ ಆಗುವ ಗಾಯವನ್ನು ವಿವರಿಸಿದ್ದಾರೆ. ನನ್ನ ಅನುಭವದಲ್ಲಿ, ಪ್ರತಿಯೊಬ್ಬ ಯುವ ವೇಗದ ಬೌಲರ್, ಬಹುಶಃ ಅವರು 25 ಅಥವಾ 26 ವರ್ಷ ವಯಸ್ಸಿನವರೆಗೆ ವಿಭಿನ್ನ ಗಾಯಗಳನ್ನು ಅನುಭವಿಸಲಿದ್ದಾರೆ. ಇದು ಅತ್ಯಂತ ದುರದೃಷ್ಟಕರ. ಆದಾಗ್ಯೂ ಅವರು ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ, “ಎಂದು ಲ್ಯಾಂಗರ್ ಹೇಳಿದರು.

ಮಯಾಂಕ್ ಅವರ ವಿಚಾರದಲ್ಲಿ ಎಲ್ಎಸ್ಜಿ ತಂಡದ ಗಾಯ ನಿರ್ವಹಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಲ್ಯಾಂಗರ್ ಇದಕ್ಕೆ ಪ್ರತಿಕ್ರಿಯಿಸಿದ್ದು, ಅವರ ಪುನಶ್ಚೇತನವು ಉತ್ತಮವಾಗಿ ಸಾಗಿದೆ ಮತ್ತು ವೇಗಿ ನೋವು ಮುಕ್ತರಾಗಿದ್ದಾರೆ ಎಂದು ಹೇಳಿದರು.

ಅವರ ಪುನಶ್ಚೇತನ ಅತ್ಯುತ್ತಮವಾಗಿತ್ತು. ಅವರು [ಎಂಐ ವಿರುದ್ಧ] ಆಟಕ್ಕೆ ಪ್ರವೇಶಿಸಿದರು. ಪಂದ್ಯಕ್ಕೆ ಮೊದಲು ಒಂದೆರಡು ಸಮಸ್ಯೆಗಳನ್ನು ಹೊಂದಿದ್ದರು. ಸಂಪೂರ್ಣವಾಗಿ ನೋವು ಮುಕ್ತರಾಗಿದ್ದರು. ಆದ್ದರಿಂದ, ಇದು ಅವರಿಗೆ ತುಂಬಾ ಬೇಸರದ ವಿಯ. ಅವರು (ಪಂದ್ಯಾವಳಿಯ ಉಳಿದ ಭಾಗ) ಆಡದಿರುವುದು ಎಲ್ಎಸ್ಜಿಗೆ ನಿರಾಶಾದಾಯಕ ಎಂದು ಹೇಳಿದ್ದಾರೆ.

Continue Reading

ಕರ್ನಾಟಕ

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

HD Revanna: ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಆಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ (Bowring Hospital) ವೈದ್ಯಕೀಯ ಪರೀಕ್ಷೆ (Medical Test) ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆಯಲಿದ್ದಾರೆ.

ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಚ್‌.ಡಿ. ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋದರು. ಇದಾದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಮತ್ತೆ ಸಿಐಡಿ ಕಚೇರಿಗೆ ಕರೆತಂದು, ಎಸ್‌ಐಟಿ ಸೆಲ್‌ನಲ್ಲಿ ಇರಿಸಿದರು. ಎಚ್‌.ಡಿ.ರೇವಣ್ಣ ಅವರು ಮಲಗಲು ಹಾಸಿಗೆ ಹಾಗೂ ಬೆಡ್‌ಶೀಟ್‌ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿಎ.

ಭಾನುವಾರ ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ನಮ್ಮನ್ನೆಲ್ಲ ಸಾಯಿಸ್ತಾರೆ ಎಂದ ಮಹಿಳೆ

ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Continue Reading
Advertisement
HD Revanna
ಕರ್ನಾಟಕ5 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ5 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ5 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ5 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ5 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ5 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ5 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ6 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ6 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ6 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ24 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌