SBI Cards Q1 Results : ಎಸ್‌ಬಿಐ ಕಾರ್ಡ್ಸ್ ನಿವ್ವಳ ಲಾಭದಲ್ಲಿ 5% ಇಳಿಕೆ - Vistara News

ವಾಣಿಜ್ಯ

SBI Cards Q1 Results : ಎಸ್‌ಬಿಐ ಕಾರ್ಡ್ಸ್ ನಿವ್ವಳ ಲಾಭದಲ್ಲಿ 5% ಇಳಿಕೆ

SBI Cards Q1 Results ಎಸ್‌ಬಿಐ ಕಾರ್ಡ್ಸ್‌ ಕಳೆದ ಏಪ್ರಿಲ್-ಜೂನ್‌ ತ್ರೈಮಾಸಿಕದಲ್ಲಿ 627 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

VISTARANEWS.COM


on

sbi cards
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಎಸ್‌ಬಿಐ ಕಾರ್ಡ್ಸ್‌ & ಪೇಮೆಂಟ್‌ ಸರ್ವೀಸ್‌ ಶುಕ್ರವಾರ ಏಪ್ರಿಲ್-ಜೂನ್‌ ಅವಧಿಯಲ್ಲಿ 593 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. (SBI Cards Q1 Results) ಕಳೆದ ವರ್ಷ ಇದೇ ಅವಧಿಯಲ್ಲಿ 627 ಕೋಟಿ ರೂ. ನಿವ್ವಳ ಲಾಭ ದಾಖಲಾಗಿತ್ತು.

ಏಪ್ರಿಲ್-ಜೂನ್‌ ತ್ರೈಮಾಸಿಕ ಆದಾಯ 4,046 ಕೋಟಿ ರೂ.ಗೆ ಏರಿಕೆಯಾಗಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 3,263 ಕೋಟಿ ರೂ.ನಷ್ಟಿತ್ತು. ವಿಭಾಗೀಯ ಲೆಕ್ಕದಲ್ಲಿ ಬಡ್ಡಿ ಆದಾಯ 1804 ಕೋಟಿ ರೂ. ಆದಾಯ ಗಳಿಸಿತ್ತು. ಕಳದ ವರ್ಷ ಇದೇ ಅವಧಿಯಲ್ಲಿ 1387 ಕೋಟಿ ರೂ. ಗಳಿಸಿತ್ತು. ಕಂಪನಿಯ ಒಟ್ಟು ಎನ್‌ಪಿಎ 2.41% ಇತ್ತು.

ಭಾರತದ ಅತಿ ದೊಡ್ಡ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (state bank of India-SBI) ತನ್ನ ಲಾಕರ್‌ಗಳನ್ನು ಬಳಸುತ್ತಿರುವ ಬಳಕೆದಾರರಿಗೆ ಹೊಸ ಮಾರ್ಗದರ್ಶಿಯನ್ನು ಬಿಡುಗಡೆಗೊಳಿಸಿದೆ. ಹಾಗಾದರೆ ಹೊಸ ಮಾರ್ಗದರ್ಶಿಯಲ್ಲಿ ಏನೇನಿದೆ? ಇಲ್ಲಿದೆ ವಿವರ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಲಾಕರ್‌ ಅಗ್ರಿಮೆಂಟ್‌ ಕುರಿತ ನಿಯಮಾವಳಿಗಳನ್ನು ಪರಿಷ್ಕರಿಸಿದೆ. ಹಾಲಿ ಬಳಕೆದಾರರು ಲಾಕರ್‌ ಹೋಲ್ಡಿಂಗ್‌ ಬ್ರಾಂಚ್‌ ಅನ್ನು ಸಂಪರ್ಕಿಸಿ ಒಪ್ಪಂದವನ್ನು ಪರಿಷ್ಕರಿಸಿಕೊಳ್ಳಲು ಬ್ಯಾಂಕ್‌ ಮನವಿ ಮಾಡಿದೆ. ಕನಿಷ್ಠ 50% ಲಾಕರ್‌ಗಳು ಹೊಸ ಅಗ್ರಿಮೆಂಟ್‌ ವ್ಯಾಪ್ತಿಗೆ ಬರಬೇಕು ಎಂದು ಆರ್‌ಬಿಐ ಎಲ್ಲ ಬ್ಯಾಂಕ್‌ಗಳಿಗೆ ತಿಳಿಸಿದೆ. ಸೆಪ್ಟೆಂಬರ್‌ 30ರ ವೇಳೆಗೆ 30%, ಡಿಸೆಂಬರ್‌ 30 ವೇಳೆಗೆ 100% ಆಗಬೇಕು ಎಂದು ಆರ್‌ಬಿಐ ತಿಳಿಸಿದೆ.

ಎಸ್‌ಬಿಐ ಲಾಕರ್‌ ಸೇವೆಯ ನೋಂದಣಿ ಶುಲ್ಕ ಪರಿಷ್ಕರಣೆಯಾಗಿದ್ದು, ಸಣ್ಣ ಮತ್ತು ಮಧ್ಯಮ ಸೈಜ್‌ ಲಾಕರ್‌ಗೆ 500 ರೂ, ದೊಡ್ಡ ಲಾಕರ್‌ಗೆ 1,000 ರೂ. ನೋಂದಣಿ ಶುಲ್ಕ ಅನ್ವಯಿಸಲಿದೆ. ಸ್ಥಳ ಮತ್ತು ಗಾತ್ರವನ್ನು ಆಧರಿಸಿ ಲಾಕರ್‌ ಬಾಡಿಗೆ ಶುಲ್ಕ ವ್ಯತ್ಯಾಸವಾಗುತ್ತದೆ. ವಿವರ ಇಲ್ಲಿದೆ.

ಇದನ್ನೂ ಓದಿ: PAN- Aadhaar deadline expired : ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗಿದ್ದರೆ ಏನು ಮಾಡಬೇಕು?

ಎಸ್‌ಬಿಐ ಗ್ರಾಹಕರು ನಗರ ಮತ್ತು ಮೆಟ್ರೊ ನಗರಗಳಲ್ಲಿ ಸಣ್ಣ ಲಾಕರ್‌ಗೆ 2000 ರೂ. ಮತ್ತು ಜಿಸ್‌ಟಿ ಸೇರಿಸಿ ಬಾಡಿಗೆ ನೀಡಬೇಕು. ಸಣ್ಣ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಲಾಕರ್‌ ಗೆ 1500 ರೂ. ಬಾಡಿಗೆ ಶುಲ್ಕ ಇದೆ. ನಗರ ಅಥವಾ ಮೆಟ್ರೊ ನಗರಗಳಲ್ಲಿ ಮಧ್ಯಮ ಗಾತ್ರದ ಲಾಕರ್‌ಗೆ 4,000 ರೂ, ಗ್ರಾಮೀಣ ಪ್ರದೇಶದಲ್ಲಿ 3,000 ರೂ. ಶುಲ್ಕವಾಗುತ್ತದೆ. ನಗರಗಳಲ್ಲಿ ದೊಡ್ಡ ಗಾತ್ರದ ಲಾಕರ್‌ಗಳಿಗೆ 8,000 ರೂ. ಅನ್ವಯಿಸುತ್ತದೆ. ಎಸ್‌ಬಿಐ ದೊಡ್ಡ ನಗರಗಳಲ್ಲಿ ಅತಿ ದೊಡ್ಡ ಲಾಕರ್‌ಗೆ 12,000 ರೂ. ಬಾಡಿಗೆ ನಿಗದಿಪಡಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಇದು 9,000 ರೂ.ಗಳಾಗಿದೆ. ಎಸ್‌ಬಿಐ ತನ್ನ ಯುನೊ ಮೊನೈಲ್‌ ಅಪ್ಲಿಕೇಶನ್‌ ಅನ್ನೂ ಪರಿಷ್ಕರಿಸಿದೆ. (YONO) ಮುಖ್ಯವಾಗಿ ಯುಪಿಐ ಆಧರಿತ ಫೀಚರ್‌ಗಳನ್ನೂ ಅಳವಡಿಸಿದೆ. ಸ್ಕ್ಯಾನ್‌ ಮತ್ತು ಪೇ ಸಾಧ್ಯವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ ಗೈಡ್

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

PF Balance Check: ಇನ್ನೇನು 2023 -2024ರ ಬಡ್ಡಿ ಹಣ ಇಪಿಎಫ್ ಖಾತೆಗೆ ಬೀಳಲಿದೆ. ನೌಕರರ ಭವಿಷ್ಯ ನಿಧಿ ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಇಪಿಎಫ್ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಎಂಬುದನ್ನು ನೋಡಲು ನಾಲ್ಕು ದಾರಿಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

PF Balance Check
Koo

ನವದೆಹಲಿ: ನೌಕರರ ಭವಿಷ್ಯ ನಿಧಿ (EPF) ಹೊಂದಿರುವ ಉದ್ಯೋಗಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ 2023-2024ರ ಬಡ್ಡಿ ಹಣ (interest money) ಖಾತೆಗೆ ಬೀಳಲಿದೆ. ಹೀಗಾಗಿ ಈಗಾಗಲೇ ಇಪಿಎಫ್‌ಒ ಹೊಂದಿರುವ ಸದಸ್ಯರು ತಮ್ಮ ಖಾತೆಗೆ ಬಡ್ಡಿ ಹಣ (PF Balance Check) ಬಂದಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ತೊಡಗಿದ್ದಾರೆ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇರುವುದರಿಂದ ಈಗ ಇದು ಕಷ್ಟವೇನಲ್ಲ.

ಇಪಿಎಫ್ ಬಡ್ಡಿ ಕ್ರೆಡಿಟ್ ಸ್ಥಿತಿಯನ್ನು ಪರಿಶೀಲಿಸಲು ನಾಲ್ಕು ದಾರಿಗಳಿವೆ. ಆನ್‌ಲೈನ್ ಮೂಲಕ, ಸಂದೇಶ ಕಳುಹಿಸಿ, ಮಿಸ್ಡ್ ಕಾಲ್‌ ಅಥವಾ ಉಮಂಗ್ ಅಪ್ಲಿಕೇಶನ್ ಮೂಲಕ ಇಪಿಎಫ್ ಬಡ್ಡಿ ಕ್ರೆಡಿಟ್ ಆಗಿದೆಯೇ ಇಲ್ಲವೋ ಎಂದು ನೋಡಬಹುದು.

ಆನ್ ಲೈನ್ ನಲ್ಲಿ ಪರಿಶೀಲಿಸಿ

ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು epfindia.gov.in ಗೆ ಲಾಗಿನ್ ಮಾಡಿ. ಅಲ್ಲಿ UAN ಸಂಖ್ಯೆ, ಪಾಸ್‌ವರ್ಡ್ ಮತ್ತು ಕ್ಯಾಪ್ಚಾ ಕೋಡ್‌ ಅನ್ನು ಹಾಕಿ. ಬಳಿಕ ಇ-ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ. ಒಮ್ಮೆ ನೀವು ಎಲ್ಲಾ ವಿವರಗಳನ್ನು ಫೈಲ್ ಮಾಡಿದರೆ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಸದಸ್ಯರ ಐಡಿ ತೆರೆದು ಖಾತೆಯಲ್ಲಿರುವ ಒಟ್ಟು EPF ಬ್ಯಾಲೆನ್ಸ್ ಅನ್ನು ನೋಡಬಹುದು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ


ಉಮಂಗ್ ಅಪ್ಲಿಕೇಶನ್

ಉಮಂಗ್ ಅಪ್ಲಿಕೇಶನ್ ಮೂಲಕ EPF ಬ್ಯಾಲೆನ್ಸ್ ಅನ್ನು ಹೇಗೆ ಪರಿಶೀಲಿಸಲು UMANG ಅಪ್ಲಿಕೇಶನ್ ತೆರೆಯಿರಿ. EPFO ಮೇಲೆ ಕ್ಲಿಕ್ ಮಾಡಿ. ಉದ್ಯೋಗಿ ಕೇಂದ್ರಿತ ಸೇವೆಗಳ ಮೇಲೆ ಕ್ಲಿಕ್ ಮಾಡಿ, ಬಳಿಕ View Passbook ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ UAN ಸಂಖ್ಯೆ ಮತ್ತು ಪಾಸ್‌ವರ್ಡ್‌ ಫೀಡ್ ಮಾಡಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಅನ್ನು ಅಲ್ಲಿ ಹಾಕಿ ಇಪಿಎಫ್ ಬ್ಯಾಲೆನ್ಸ್ ಅನ್ನು ಪರಿಶೀಲಿಸಬಹುದು.

ಎಸ್‌ಎಂಎಸ್

ಇಪಿಎಫ್ ಬ್ಯಾಲೆನ್ಸ್ ಅನ್ನು ಎಸ್ ಎಂಎಸ್ ಕಳುಹಿಸಿಯೂ ಪರಿಶೀಲಿಸಬಹುದು. ಮೊಬೈಲ್ ಸಂಖ್ಯೆಯನ್ನು ಹೊರತುಪಡಿಸಿ, ಯುಎಎನ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ಸದಸ್ಯರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳಿಂದ ಎಸ್ ಎಂಎಸ್ ಕಳುಹಿಸುವ ಮೂಲಕ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ಇದಕ್ಕಾಗಿ EPFOHO UAN ಅನ್ನು 7738299899ಗೆ ಎಸ್‌ಎಂಎಸ್ ಮಾಡಬೇಕು.

ಮಿಸ್ಡ್ ಕಾಲ್

ಮಿಸ್ಡ್ ಕಾಲ್ ನೀಡಿಯೂ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸಬಹುದು. ಇದಕ್ಕಾಗಿ UAN ಪೋರ್ಟಲ್‌ನಲ್ಲಿ ನೋಂದಾಯಿಸಲಾದ EPFO ಚಂದಾದಾರರು UANನಲ್ಲಿ ನೋಂದಾಯಿಸಲಾದ ತಮ್ಮ ಮೊಬೈಲ್ ಸಂಖ್ಯೆಯಿಂದ 9966044425 ಈ ನಂಬರ್‌ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ನೆನಪಿಡಿ, ನೀವು ಕರೆ ಮಾಡುವ ಸಂಖ್ಯೆ ನಿಮ್ಮ ಪಿಎಫ್‌ ಅಕೌಂಟ್‌ನಲ್ಲಿ ದಾಖಲಾಗಿರಬೇಕು.

Continue Reading

ವಾಣಿಜ್ಯ

Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ (ಟಿಕೆಎಂ) ತನ್ನ ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್” ಅನ್ನು ಪ್ರಾರಂಭಿಸಿದ್ದು, ಟಿಕೆಎಂ ವಾಹನದ ಇಂಟೀರಿಯರ್ ಮತ್ತು ಎಕ್ಸ್‌ಟೀರಿಯರ್ ಲುಕ್ ಅನ್ನು ಹೆಚ್ಚಿಸಲು ವ್ಯಾಪಕವಾದ ಸೇವೆಗಳನ್ನು ಇದು ನೀಡಲಿದೆ.

VISTARANEWS.COM


on

Toyota Kirloskar Motor launched the Tgloss
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ (ಟಿಕೆಎಂ) ತನ್ನ ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್” ಅನ್ನು (Toyota Kirloskar Motor) ಪ್ರಾರಂಭಿಸಿದೆ.

ಮೇ 1, 2024 ರಿಂದ, “ಟಿಗ್ಲೊಸ್” ಸೇವೆಯು ಭಾರತದ ಎಲ್ಲಾ ಅಧಿಕೃತ ಟೊಯೊಟಾ ಡೀಲರ್‌ಶಿಪ್‌ಗಳಲ್ಲಿ ದೊರೆಯಲಿದೆ. ಕಾರು ತಯಾರಕರ ಇಂಡಸ್ಟ್ರಿ ಫಸ್ಟ್ ಉದ್ಯಮವಾಗಿ, “ಟಿಗ್ಲೊಸ್” ಬ್ರಾಂಡ್ ಅಡಿಯಲ್ಲಿ ಟಿಕೆಎಂ ವಾಹನದ ಇಂಟೀರಿಯರ್ ಮತ್ತು ಎಕ್ಸ್‌ಟೀರಿಯರ್ ಲುಕ್ ಅನ್ನು ಹೆಚ್ಚಿಸಲು ವ್ಯಾಪಕವಾದ ಸೇವೆಗಳನ್ನು ಇದು ನೀಡಲಿದೆ.

ವಾಹನಗಳ ಆಕರ್ಷಣೆ ಹೆಚ್ಚಿಸುವ ಗುರಿ

ಇದರಲ್ಲಿ ಸೆರಾಮಿಕ್ ಕೋಟ್, ಅಂಡರ್ ಬಾಡಿ ಕೋಟ್, ಸೈಲೆನ್ಸರ್ ಕೋಟ್ ಮತ್ತು ಇಂಟರ್‌ನಲ್ ಪ್ಯಾನಲ್ ಪ್ರೊಟೆಕ್ಷನ್ ಸೇರಿವೆ. ಇದು ವಾಹನಗಳ ಆಕರ್ಷಣೆಯನ್ನು ಹೆಚ್ಚಿಸುವ ಗುರಿಯ ಜತೆಗೆ ವಾತಾವರಣದಿಂದ ಕಾರಿನ ಮೇಲಾಗುವ ಪರಿಣಾಮಗಳ ವಿರುದ್ಧವೂ ರಕ್ಷಣೆಯನ್ನು ಒದಗಿಸುತ್ತದೆ.

ಇದನ್ನೂ ಓದಿ: IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಗ್ರಾಹಕರ ಕಾರಿಗೆ ಹೊಸ ಜೀವ ತುಂಬುವುದು, ಕಾರಿನ ಆಕರ್ಷಣೆಯನ್ನು ಹೆಚ್ಚಿಸುವುದು ಮತ್ತು ಹೊಸದಾಗಿ ಕಾಣುವಂತೆ ಮಾಡುವ ಇಂಟೀರಿಯರ್ ಎನ್‌ರಿಚ್ಮೆಂಟ್, ಎಕ್ಸ್‌ಟೀರಿಯರ್ ಆಕರ್ಷಣೆಯನ್ನು ಹೆಚ್ಚಿಸುವ ಸೇವೆಗಳಂತಹ ಸಮಗ್ರ ಸರ್ವಿಸ್‌ಗಳನ್ನು ಇದರಿಂದ ಪಡೆಯಬಹುದಾಗಿದೆ.

ಹೆಚ್ಚುವರಿಯಾಗಿ ಪ್ರಯಾಣಿಕರ ಯೋಗಕ್ಷೇಮಕ್ಕಾಗಿ “ಟಿಗ್ಲೊಸ್” ಸೇವೆಗಳು ಎಸಿ ಡಕ್ಟ್ ಕ್ಲೀನಿಂಗ್ ಮತ್ತು ಎವಾಪರೇಟರ್ ಕ್ಲೀನಿಂಗ್ ಪರಿಹಾರಗಳನ್ನೂ ಇದು ಹೊಂದಿದೆ. ಇದು ಕಾರಿನಲ್ಲಿ ಪರಿಶುದ್ಧ ವಾತಾವರಣ ನಿರ್ಮಾಣ ಮತ್ತು ಆರೋಗ್ಯಕರ ಚಾಲನೆಯನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

ಈ ಬಗ್ಗೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಸೇಲ್ಸ್–ಸರ್ವೀಸ್-ಯೂಸ್ಡ್ ಕಾರ್ ಬ್ಯುಸಿನೆಸ್‌ನ ಉಪಾಧ್ಯಕ್ಷ ಶಬರಿ ಮನೋಹರ್, ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ‘ಗ್ರಾಹಕ-ಮೊದಲು’ ತತ್ವಕ್ಕೆ ಅಚಲ ಬದ್ಧತೆಯನ್ನು ವ್ಯಕ್ತಪಡಿಸುವ ಇನ್ನೊವೇಟೀವ್ ಮತ್ತು ಇಂಡಸ್ಟ್ರಿ ಫಸ್ಟ್ “ಟಿಗ್ಲೊಸ್” ಅನ್ನು ಅನಾವರಣಗೊಳಿವುದು ನಮಗೆ ಹೆಚ್ಚು ಸಂತಸವನ್ನು ನೀಡುತ್ತದೆ. ಟಿಗ್ಲೊಸ್ ಅನ್ನು ತಮ್ಮ ಕಾರುಗಳನ್ನು ಆಕರ್ಷಣೀಯವಾಗಿ ಅತ್ಯುತ್ತಮ ಸ್ಥಿತಿಯಲ್ಲಿಡಲು ಸಹಾಯ ಮಾಡುವ ಮೂಲಕ ಅವರ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರ ಸಾವು

ಟಿಗ್ಲೊಸ್ ಎಂಬುದು ಒನ್-ಸ್ಟಾಪ್-ಶಾಪ್ ಸೊಲ್ಯೂಷನ್ ಆಗಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಕಾರ್‌ ಕೇರ್ ಸರ್ವಿಸ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ, ಇದು ಟೊಯೊಟಾ ಮಾಲೀಕರಿಗೆ ಗುಣಮಟ್ಟ, ಬಾಳಿಕೆ ಮತ್ತು ವಿಶ್ವಾಸಾರ್ಹತೆಯ (ಕ್ಯೂಡಿಆರ್) ನಮ್ಮ ಪ್ರಮುಖ ಮೌಲ್ಯಗಳೊಂದಿಗೆ ತಡೆರಹಿತವಾಗಿ ಹೊಂದಾಣಿಕೆಯಾಗುವ ಸೇವೆ ಇದಾಗಿದೆ. ಸಮಗ್ರ ಕಾರ್ ಕೇರ್ ಸೊಲ್ಯೂಷನ್‌ಗಳನ್ನು ತಲುಪಿಸುವ ನಮ್ಮ ಪ್ರಯಾಣದಲ್ಲಿ ಮಹತ್ವದ ಮತ್ತೊಂದು ನಿರ್ಣಾಯಕ ಮೈಲಿಗಲ್ಲನ್ನು ಸೂಚಿಸುತ್ತದೆ. ಇಲ್ಲಿ ಹೆಚ್ಚು ನುರಿತ ಮತ್ತು ತರಬೇತಿ ಪಡೆದ ವೃತ್ತಿಪರರು ಸೇವೆಯನ್ನು ನೀಡುತ್ತಾರೆ ಎಂದು ತಿಳಿಸಿದ್ದಾರೆ.

Continue Reading

ಮನಿ-ಗೈಡ್

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

Money Guide: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ಹಾಗಾದರೆ ವಿದೇಶಿ ಪ್ರಯಾಣದ ವೇಳೆ ನೆರವಾಗುವ ಫೊರೆಕ್ಸ್‌ ಕಾರ್ಡ್‌ ಮತ್ತು ಕ್ರೆಡಿಟ್‌ ಕಾರ್ಡ್‌ ಪೈಕಿ ಯಾವುದು ಸೂಕ್ತ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭ ಅಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಸೂಕ್ತ ಪ್ಲಾನ್‌ ಮಾಡಬೇಕಾಗುತ್ತದೆ. ಜತೆಗೆ ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ತೆರಿಗೆಯನ್ನು ತಪ್ಪಿಸಲು ವಿದೇಶಿ ವಿನಿಮಯ ಕಾರ್ಡ್‌ (forex cards)ಗಳನ್ನು ಬಳಸಬೇಕೆ ಅಥವಾ ಕ್ರೆಡಿಟ್ ಕಾರ್ಡ್ ಸ್ವೈಪ್ ಮಾಡಬೇಕೆ ಎನ್ನುವ ಗೊಂದಲ ಕಾಡುವುದು ಸಹಜ. ಈ ಪ್ರಶ್ನೆಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಕ್ರೆಡಿಟ್‌ ಕಾರ್ಡ್‌

ಗ್ರಾಹಕರು ಮೊದಲು ಸರಕು ಅಥವಾ ಸೇವೆಗಳನ್ನು ಖರೀದಿಸಿ ಬಳಿಕ ಪಾವತಿಸುವ ವ್ಯವಸ್ಥೆ ಕ್ರೆಡಿಟ್‌ ಕಾರ್ಡ್‌ನಲ್ಲಿದೆ. ಈ ಕಾರ್ಡ್ ಮೂಲಕ ನೀವು ನಿಮ್ಮ ಅಗತ್ಯಗಳನ್ನು ಸೀಮಿತ ಪ್ರಮಾಣದಲ್ಲಿ ಪೂರೈಸಿಕೊಳ್ಳಬಹುದು. ತೀರ ಬೇಕೆಂದಾಗ ನೀವು ಕ್ರೆಡಿಟ್ ಕಾರ್ಡ್‌ನಿಂದ ಹಣವನ್ನು ಕೂಡ ಪಡೆಯಬಹುದು. ಈ ರೀತಿಯಾಗಿ ಕ್ರೆಡಿಟ್ ಕಾರ್ಡ್ ಹೊಂದಿರುವವರು ಬ್ಯಾಂಕ್ ಬ್ಯಾಲೆನ್ಸ್ ಇಲ್ಲದಿದ್ದರೂ ಯಾವುದೇ ತೊಂದರೆಯಿಲ್ಲದೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಬಹುದು. ಕಡಿಮೆ ಬ್ಯಾಂಕ್ ಬ್ಯಾಲೆನ್ಸ್‌ನ ಸಂದರ್ಭದಲ್ಲಿಯೂ ಸಹ ಖರೀದಿ ಮಾಡಲು ಕ್ರೆಡಿಟ್ ಕಾರ್ಡ್ ನೆರವಾಗುತ್ತದೆ. ಇಲ್ಲಿ ನೀವು ಅನೇಕ ಬಡ್ಡಿ ರಹಿತ ಕ್ರೆಡಿಟ್‌ಗಳ ಪ್ರಯೋಜನವನ್ನು ಸಹ ಪಡೆಯಬಹುದು. ಕ್ರೆಡಿಟ್ ಕಾರ್ಡ್‌ಗಳನ್ನು ಆನ್‌ಲೈನ್ ಶಾಪಿಂಗ್, ಶಾಪಿಂಗ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಪಾವತಿ ಮಾಡಲು ಬಳಸಬಹುದು.

ಫೊರೆಕ್ಸ್‌ ಕಾರ್ಡ್‌

ಫೊರೆಕ್ಸ್‌ ಕಾರ್ಡ್ ಒಂದು ರೀತಿಯ ಪ್ರಿಪೇಯ್ಡ್ ಟ್ರಾವೆಲ್ ಕಾರ್ಡ್ ಆಗಿದ್ದು, ಇದು ವಿದೇಶಿ ಹಣವನ್ನು ಲೋಡ್ ಮಾಡಿ ಅದನ್ನು ಖರ್ಚು ಮಾಡಲು ನಿಮಗೆ ಅನುವು ಮಾಡಿಕೊಡುತ್ತದೆ. ಈ ಕಾರ್ಡ್ ಅನ್ನು ಬ್ಯಾಂಕುಗಳು ನೀಡುತ್ತವೆ. ನೀವು ಇದರಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಯನ್ನು ಮುಂಚಿತವಾಗಿಯೇ ಲೋಡ್ ಮಾಡಬಹುದು ಮತ್ತು ನೀವು ಭೇಟಿ ನೀಡುವ ವಿದೇಶಿ ರಾಷ್ಟ್ರದಲ್ಲಿ ನಗದು ಹಿಂಪಡೆಯಲು, ಶಾಪಿಂಗ್ ಮಾಡಲು ಬಳಸಬಹುದು. ವಿದೇಶದಲ್ಲಿ ಅಧ್ಯಯನ ಮಾಡುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಡ್ ಬಳಸುತ್ತಾರೆ.

ಯಾವುದು ಉತ್ತಮ?

  • ನೀವು ಫೊರೆಕ್ಸ್‌ ಕಾರ್ಡ್‌ಗೆ ಹಣವನ್ನು ಲೋಡ್ ಮಾಡಿದಾಗ ವಿದೇಶಿ ವಿನಿಮಯ ದರವನ್ನು ಲಾಕ್ ಮಾಡಲಾಗುತ್ತದೆ. ಇದು ಭವಿಷ್ಯದ ಕರೆನ್ಸಿ ಬದಲಾವಣೆಯ ದರಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಕ್ರೆಡಿಟ್ ಕಾರ್ಡ್‌ನ ವಹಿವಾಟಿನ ಸಮಯದಲ್ಲಿ ಅದಕ್ಕೆ ದರ ಅನ್ವಯವಾಗುತ್ತದೆ. ಇದು ನಿರೀಕ್ಷಿತ ಏರಿಳಿತಗಳಿಗೆ ನಿಮ್ಮನ್ನು ಒಡ್ಡುತ್ತದೆ.
  • ಫೊರೆಕ್ಸ್‌ ಕಾರ್ಡ್‌ಗೆ ವ್ಯತಿರಿಕ್ತವಾಗಿ ಅಂತಾರಾಷ್ಟ್ರೀಯ ವಹಿವಾಟು ಮತ್ತು ನಗದು ಮುಂಗಡ ಶುಲ್ಕದಿಂದಾಗಿ ವಿದೇಶದಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ನಗದು ಹಿಂಪಡೆಯುವಿಕೆ ದುಬಾರಿಯಾಗಬಹುದು.
  • ಫೊರೆಕ್ಸ್‌ ಕಾರ್ಡ್ ಪ್ರಿಪೇಯ್ಡ್ ಆಗಿರುತ್ತವೆ. ಆದ್ದರಿಂದ ಕ್ರೆಡಿಟ್ ಕಾರ್ಡ್‌ನಲ್ಲಿ ವಿಧಿಸಲಾಗುವ ವಿಳಂಬ ಪಾವತಿಯ ದಂಡ ಮತ್ತು ಅತಿಯಾದ ಬಡ್ಡಿದರಗಳಿಂದ ಪಾರಾಗುತ್ತೀರಿ.
  • ನಿಮ್ಮ ಕ್ರೆಡಿಟ್ ಕಾರ್ಡ್‌ನ ಸಂಪೂರ್ಣ ಕ್ರೆಡಿಟ್ ಮಿತಿಯನ್ನು ಬಳಸಬಹುದು. ಇದು ಖರೀದಿಗಳು ಮತ್ತು ತುರ್ತು ಪರಿಸ್ಥಿತಿಗಳಿಗೆ ಸೂಕ್ತ. ಆದಾಗ್ಯೂ ಫೊರೆಕ್ಸ್‌ ಕಾರ್ಡ್‌ನಲ್ಲಿ ಮೊದಲೇ ಲೋಡ್ ಮಾಡಿದ ಮೊತ್ತವನ್ನಷ್ಟೇ ಬಳಸಬಹುದು. ನಿಮ್ಮ ಮೊತ್ತವು ಮುಗಿದರೆ, ನೀವು ಅದನ್ನು ಮತ್ತೆ ಲೋಡ್ ಮಾಡಬೇಕಾಗುತ್ತದೆ. ಇದು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಜತೆಗೆ ಮರು-ಲೋಡ್ ಶುಲ್ಕ ಪಾವತಿಸಬೇಕಾಗುತ್ತದೆ.

ಒಟ್ಟಿನಲ್ಲಿ ವಿದೇಶ ಪ್ರವಾಸದ ಸಂದರ್ಭದಲ್ಲಿ ಕ್ರೆಡಿಟ್‌ ಕಾರ್ಡ್‌ಗಿಂತ ಫೊರೆಕ್ಸ್‌ ಕಾರ್ಡ್‌ ಉತ್ತಮ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಇದನ್ನೂ ಓದಿ: Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Continue Reading

Latest

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading
Advertisement
Murder Case
ಕರ್ನಾಟಕ4 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ24 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ25 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ35 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ52 mins ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ1 hour ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ3 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌