SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ! - Vistara News

ವಾಣಿಜ್ಯ

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

SBI Debit Cards: ಏಪ್ರಿಲ್‌ 1ರಿಂದ ಎಸ್‌ಬಿಐ ಡೆಬಿಟ್ ಕಾರ್ಡ್‌ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳಲಿದೆ. ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸುವುದಾಗಿ ಬ್ಯಾಂಕ್‌ ಘೋಷಿಸಿದೆ.

VISTARANEWS.COM


on

SBI Debit Cards
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನೀವು ಎಸ್‌ಬಿಐ (State Bank of India)ಯ ಡೆಬಿಟ್‌ ಕಾರ್ಡ್‌ ಹೊಂದಿದ್ದೀರಾ? ಹಾಗಾದರೆ ನಿಮಗಿದು ಬ್ಯಾಡ್‌ ನ್ಯೂಸ್‌. ಯಾಕೆಂದರೆ ಎಸ್‌ಬಿಐ ಕೆಲವು ವರ್ಗದ ಡೆಬಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸುವುದಾಗಿ ಘೋಷಿಸಿದೆ (SBI Debit Cards). ಹೊಸ ದರಗಳು ಹೊಸ ಹಣಕಾಸು ವರ್ಷದ ಮೊದಲ ದಿನವಾದ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ ಎಂದು ಎಸ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಯಾವೆಲ್ಲ ಕಾರ್ಡ್‌ಗಳಿಗೆ ಅನ್ವಯ?

ಡೆಬಿಟ್ ಕಾರ್ಡ್‌ಗಳಾದ ಕ್ಲಾಸಿಕ್ / ಸಿಲ್ವರ್ / ಗ್ಲೋಬಲ್, ಯುವ / ಗೋಲ್ಡ್, ಪ್ಲಾಟಿನಂ ಮತ್ತು ಪ್ರೈಡ್ / ಪ್ರೀಮಿಯಂ ಬಿಸಿನೆಸ್ ವಿಭಾಗಗಳಿಗೆ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ವಿವಿಧ ವಿಭಾಗಗಳಲ್ಲಿ ವಾರ್ಷಿಕ ನಿರ್ವಹಣಾ ಶುಲ್ಕವನ್ನು 75 ರೂ. ಹೆಚ್ಚಿಸಲಾಗಿದೆ ಎಂದು ಎಸ್‌ಬಿಐ ತಿಳಿಸಿದೆ.

ಡೆಬಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ಇತರ ಶುಲ್ಕಗಳನ್ನು ಸಹ ಉಲ್ಲೇಖಿಸಲಾಗಿದೆ. ಇವುಗಳಲ್ಲಿ ಡೆಬಿಟ್ ಕಾರ್ಡ್‌ಗಳ ವಿತರಣೆ ಮತ್ತು ಬದಲಾವಣೆಯೂ ಸೇರಿವೆ. ಗ್ರಾಹಕರು ಡೆಬಿಟ್ ಕಾರ್ಡ್ ಬದಲಾಯಿಸಲು (300 ರೂ. ಮತ್ತು ಜಿಎಸ್‌ಟಿ), ನಕಲಿ ಪಿನ್ / ಪಿನ್ ರಿಜನರೇಷನ್‌ (50 ರೂ. ಪ್ಲಸ್ ಜಿಎಸ್‌ಟಿ)ಗೆ ಶುಲ್ಕ ಪಾವತಿಸಬೇಕಾಗುತ್ತದೆ. ಅಂತಾರಾಷ್ಟ್ರೀಯ ವಹಿವಾಟುಗಳಂತಹ ಸೇವೆಗಳ ಫೀಸ್‌ ಬಗ್ಗೆಯೂ ಎಸ್‌ಬಿಐ ಉಲ್ಲೇಖಿಸಿದೆ. ಎಲ್ಲ ಶುಲ್ಕಗಳು ಶೇ. 18 ರಷ್ಟು ಜಿಎಸ್‌ಟಿಯನ್ನು ಒಳಗೊಂಡಿದೆ.

  • ಎಸ್‌ಬಿಐ ಕ್ಲಾಸಿಕ್, ಸಿಲ್ವರ್, ಗ್ಲೋಬಲ್, ಕಾಂಟ್ಯಾಕ್ಟ್‌ಲೆಸ್ ಡೆಬಿಟ್ ಕಾರ್ಡ್‌ಗಳ ಗ್ರಾಹಕರು ವಾರ್ಷಿಕ 200 ರೂ. ನಿರ್ವಹಣಾ ಶುಲ್ಕ ಮತ್ತು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ. ಪ್ರಸ್ತುತ ಈ ಕಾರ್ಡ್‌ಗಳಿಗೆ 125 ರೂ. ಶುಲ್ಕ + ಜಿಎಸ್‌ಟಿ ಪಾವತಿಸಬೇಕಿದೆ.
  • ಯುವ, ಗೋಲ್ಡ್, ಕಾಂಬೋ ಡೆಬಿಟ್ ಕಾರ್ಡ್, ಮೈ ಕಾರ್ಡ್ (ಇಮೇಜ್ ಕಾರ್ಡ್)ಗೆ ಏಪ್ರಿಲ್‌ 1ರಿಂದ 250 ರೂ. + ಜಿಎಸ್‌ಟಿ ನಿರ್ವಹಣಾ ಶುಲ್ಕ ಪಾವತಿಸಬೇಕು (ಇದುವರೆಗೆ 175 ರೂ. + ಜಿಎಸ್‌ಟಿ ಇತ್ತು). ಎಸ್‌ಬಿಐ ಪ್ಲಾಟಿನಂ ಡೆಬಿಟ್ ಕಾರ್ಡ್‌ಗಳಿಗೆ 250 ರೂ. ಬದಲಿಗೆ 325 ರೂ. + ಜಿಎಸ್‌ಟಿ ವಾರ್ಷಿಕ ಶುಲ್ಕ ಪಾವತಿಸಬೇಕು.
  • ಪ್ರೈಡ್ ಮತ್ತು ಪ್ರೀಮಿಯಂ ಬ್ಯುಸಿನೆಸ್ ಡೆಬಿಟ್ ಕಾರ್ಡ್‌ಗಳ ವಾರ್ಷಿಕ ನಿರ್ವಹಣೆ ಶುಲ್ಕವು ಈಗಿನ 350 ರೂ. + ಜಿಎಸ್‌ಟಿಯಿಂದ 425 ರೂ. + ಜಿಎಸ್‌ಟಿಗೆ ಹೆಚ್ಚಾಗುತ್ತದೆ.

ಇದನ್ನೂ ಓದಿ: LIC News: ಎಲ್‌ಐಸಿ ಈಗ ನಂಬರ್‌ ಒನ್‌ ಜಾಗತಿಕ ವಿಮೆ ಬ್ರಾಂಡ್!‌

ಕ್ರೆಡಿಟ್‌ ಕಾರ್ಡ್‌ನಲ್ಲಿಯೂ ಬದಲಾವಣೆ

ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್‌ಗಳ ಕನಿಷ್ಠ ದಿನದ ಬಿಲ್ ಲೆಕ್ಕಾಚಾರ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಘೋಷಿಸಿದೆ. ಕೆಲವು ವಿಶೇಷ ಕ್ರೆಡಿಟ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಕ್ರೆಡಿಟ್ ಕಾರ್ಡ್‌ಗಳ ಮೂಲಕ ದರ ಪಾವತಿಗಳನ್ನು ಮಾಡುವಾಗ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುವುದಿಲ್ಲ. ಇದುವರೆಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ದರ ಪಾವತಿ ಮಾಡುವವರಿಗೆ ರಿವಾರ್ಡ್ ಪಾಯಿಂಟ್ಸ್‌ ಸಿಗುತ್ತಿತ್ತು. ಇದುವರೆಗೆ ಗಳಿಸಿರುವ ರಿವಾರ್ಡ್ ಪಾಯಿಂಟ್‌ಗಳು 2024ರ ಏಪ್ರಿಲ್ 15ರ ನಂತರ ಮುಕ್ತಾಯಗೊಳ್ಳಲಿವೆ. ಅಂದರೆ ರಿವಾರ್ಡ್ ಪಾಯಿಂಟ್ಸ್‌ ಪಡೆದಿದ್ದರೆ ಈ ಅವಧಿಯೊಳಗೆ ಬಳಸಿಕೊಳ್ಳಬೇಕು. ಎಸ್‌ಬಿಐ ದೇಶದ ಎರಡನೇ ಅತಿದೊಡ್ಡ ಕ್ರೆಡಿಟ್ ಕಾರ್ಡ್ ವಿತರಕನಾಗಿದ್ದು, 18 ದಶಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Money Guide: ದೇಶದಲ್ಲಿನ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದಿದೆ. ಅದರಂತೆ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ 16 ಕಂತುಗಳನ್ನು ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಮುಂದಿನ ತಿಂಗಳು 17ನೇ ಕಂತು ಬಿಡಿಗಡೆಯಾಗುವ ನಿರೀಕ್ಷೆ ಇದೆ. ಸದ್ಯ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Money Guide
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು. ದೇಶಾದ್ಯಂತದ 9 ಕೋಟಿಗಿಂತ ಅಧಿಕ ಫಲಾನುಭವಿಗಳ ಖಾತೆಗೆ ಅಂದು ಸುಮಾರು 21,000 ಕೋಟಿ ರೂ. ಜಮೆ ಮಾಡಲಾಗಿತ್ತು. ಸದ್ಯ 17ನೇ ಕಂತು ಬಿಡುಗಡೆಯಾಗಬೇಕಿದೆ.

17ನೇ ಕಂತು ಯಾವಾಗ?

17ನೇ ಕಂತು ಮೇಯಲ್ಲಿ ಬಿಡುಗಡೆಯಾಗಲಿದೆ. ಆದರೆ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ‘New Farmer Registration’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ.
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ನಿಮ್ಮ ಹೆಸರು ಫಲಾನುಭವಿ ಪಟ್ಟಿಯಿಂದ ರದ್ದಾಗಲು ಕಾರಣ

  • ನಕಲಿ ಫಲಾನುಭವಿ ಸಂಖ್ಯೆ.
  • ಇ-ಕೆವೈಸಿ ಪೂರ್ಣವಾಗದಿರುವುದು.
  • ಅರ್ಜಿಯಲ್ಲಿನ ತಪ್ಪಾದ ಐಎಫ್‌ಎಸ್‌ಸಿ ಕೋಡ್‌.
  • ಅಮಾನ್ಯ, ವರ್ಗಾವಣೆಗೊಂಡ, ನಿರ್ಬಂಧಿಸಿದ ಅಥವಾ ಸ್ಥಗಿತಗೊಳಿಸಿದ ಬ್ಯಾಂಕ್ ಖಾತೆ.
  • ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ನಂಬರ್‌ ಲಿಂಕ್‌ ಆಗದೇ ಇರುವುದು.
  • ಅಪೂರ್ಣ ಅಪ್ಲಿಕೇಷನ್‌ ಫಾರಂ.
  • ಅಮಾನ್ಯ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೆಸರು.
  • ಫಲಾನುಭವಿ ಖಾತೆ ಸಂಖ್ಯೆಯು ಫಲಾನುಭವಿ ಕೋಡ್ ಮತ್ತು ಯೋಜನೆಯೊಂದಿಗೆ ಹೋಲಿಕೆ ಆಗದಿರುವುದು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading

ಪರಿಸರ

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

Chocolate industry: ಪಶ್ಚಿಮ ಆಫ್ರಿಕಾದ ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ.

VISTARANEWS.COM


on

By

Chocolate industry
Koo

ನವದೆಹಲಿ: ಚಾಕೊಲೇಟ್‌ನಲ್ಲಿ ಬಳಸುವ ಪ್ರಮುಖ ಸಾಮಗ್ರಿಯಾದ ಕೋಕೋ (cacao) ಮರಗಳಲ್ಲಿ ವೈರಸ್ (virus) ಕಾಣಿಸಿಕೊಂಡಿದ್ದು, ಇದು ಚಾಕೊಲೇಟ್ ಉತ್ಪಾದನೆ ಮೇಲೆ ಬಹುದೊಡ್ದ ಹೊಡೆತ ಬೀಳುವ ಸಾಧ್ಯತೆ ಇದೆ. ಇದರಿಂದ ಚಾಕೊಲೇಟ್‌ಗಳು ಮತ್ತಷ್ಟು ದುಬಾರಿಯಾಗಬಹುದು.

ಪ್ರಸ್ತುತ ಪಶ್ಚಿಮ ಆಫ್ರಿಕಾದ (West Africa) ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ (mealybugs) ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ. ಇದು ಬಿಸಿ ವಾತಾವರಣದಲ್ಲಿ ಹೆಚ್ಚು ತೀವ್ರವಾಗಿ ಬೆಳೆಯುತ್ತಿದೆ.

ಈ ವೈರಸ್ ಭೂಮಿಯ ಮೇಲಿರುವ ಪರಿಸರ ವಿನಾಶಕಾರಿ ಜೀವಿ ಎನ್ನಲಾಗುತ್ತದೆ. ಇದು ಘಾನಾದಲ್ಲಿ 50,000 ಹೆಕ್ಟೇರ್ ಕೋಕೋ ಫಾರ್ಮ್‌ಗಳನ್ನು ನಾಶಪಡಿಸಿದೆ. ಇದು ವಿಶ್ವದ ಎರಡನೇ ಅತಿದೊಡ್ಡ ಚಾಕೊಲೇಟ್ ಉತ್ಪಾದಕ ದೇಶ. ಇದು ಜಾಗತಿಕ ಚಾಕೊಲೇಟ್ ಪೂರೈಕೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಯುಎಸ್ ಮತ್ತು ಘಾನಾದ ವಿಶ್ವವಿದ್ಯಾನಿಲಯಗಳ ವಿಜ್ಞಾನಿಗಳು ವೈರಸ್ ಹರಡುವುದನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರಪಂಚದ ಚಾಕೊಲೇಟ್‌ಗಳನ್ನು ಉಳಿಸಲು ಹೊಸ ಮಾರ್ಗವನ್ನು ಈಗಾಗಲೇ ಕಂಡುಹಿಡಿದಿದ್ದರೂ ಇದು ಚಾಕೊಲೇಟ್ ನ ಜಾಗತಿಕ ಪೂರೈಕೆ ಸರಪಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ.


ಚಾಕೊಲೇಟ್ ಪೂರೈಕೆ ಮೇಲೆ ಪರಿಣಾಮ

ಪ್ರಪಂಚದ ಶೇ. 50ರಷ್ಟು ಚಾಕೊಲೇಟ್‌ಗಳು ಘಾನಾ ಮತ್ತು ಐವರಿ ಕೋಸ್ಟ್‌ನಿಂದ ಬರುತ್ತವೆ. ಈ ಪ್ರದೇಶಗಳಲ್ಲಿನ ಕೋಕೋ ಮರಗಳ ಚಿಗುರು ವೈರಸ್ ನಿಂದ ನಾಶವಾಗಿವೆ. ಕೊಲಂಬಿಯಾದಲ್ಲಿ ರೈತರು ಒಡೆದು ಸಿಪ್ಪೆ ಸುಲಿದಿದ್ದರೂ ಕೋಕೋ ಮರಗಳ ಎಲೆ, ಮೊಗ್ಗು ಮತ್ತು ಹೂವುಗಳನ್ನು ತಿನ್ನುವ ಮೀಲಿಬಗ್ಸ್ ಎಂದು ಕರೆಯಲ್ಪಡುವ ಸಣ್ಣ ಕೀಟಗಳಿಂದ ವೈರಸ್ ಹರಡುತ್ತದೆ. ಘಾನಾವು 254 ಮಿಲಿಯನ್ ಮರಗಳನ್ನು ಹೊಂದಿದೆ ಮತ್ತು ಐವರಿ ಕೋಸ್ಟ್‌ನಲ್ಲಿ ಶೇ. 20ರಷ್ಟು ಬೆಳೆ ಸೋಂಕಿಗೆ ಒಳಗಾಗಿದೆ.

ಚಾಕೊಲೇಟ್‌ ಹೇಗೆ ತಯಾರಿಸಲಾಗುತ್ತದೆ?

ಉಷ್ಣವಲಯದ ಹವಾಮಾನದಲ್ಲಿ ಬೆಳೆಯುವ ಕೋಕೋ ಬೀನ್ಸ್‌ನಿಂದ ಚಾಕೊಲೇಟ್‌ಗಳನ್ನು ತಯಾರಿಸಲಾಗುತ್ತದೆ. ಅವುಗಳನ್ನು ಹುದುಗಿಸಿ, ಒಣಗಿಸಿ ಮತ್ತು ಹುರಿದು ಮಾಡಿದ ಪುಡಿಯನ್ನು ಹಾಲು ಮತ್ತು ಸಕ್ಕರೆಯೊಂದಿಗೆ ಬೆರೆಸಿ ಚಾಕೊಲೇಟ್ ತಯಾರಿಸಲಾಗುತ್ತದೆ.

2022ರಲ್ಲಿ ಐವರಿ ಕೋಸ್ಟ್ 2.2 ಮಿಲಿಯನ್ ಟನ್ ಕೋಕೋವನ್ನು ಉತ್ಪಾದಿಸಿತು ಮತ್ತು ಘಾನಾ 1.1 ಮಿಲಿಯನ್ ಉತ್ಪಾದಿಸಿತು. ಪ್ರಪಂಚದ ಅತಿದೊಡ್ಡ ಉತ್ಪಾದಕ ಇಂಡೋನೇಷ್ಯಾವು 2022 ರಲ್ಲಿ 6,67,000 ಟನ್‌ಗಳನ್ನು ಉತ್ಪಾದಿಸಿದೆ.

ಬೆಚ್ಚಗಿನ ತಾಪಮಾನವು ಮೀಲಿಬಗ್ ಗೆ ಹೆಚ್ಚು ಪೂರಕವಾಗಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ. ಆರ್ಲಿಂಗ್ಟನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾನಿಲಯದ ತಜ್ಞರ ಪ್ರಕಾರ, ಈ ವೈರಸ್ ಪ್ರಪಂಚದ ಚಾಕೊಲೇಟ್ ಪೂರೈಕೆಗೆ ಅಪಾಯವನ್ನುಂಟು ಮಾಡುತ್ತದೆ.

ವೈರಸ್ ಅನ್ನು ನಿಲ್ಲಿಸಬಹುದೇ?

ಕೀಟನಾಶಕಗಳಿಂದ ಮೀಲಿಬಗ್‌ಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಸೋಂಕಿತ ಮರಗಳನ್ನು ಕಡಿಯುವುದು ಮತ್ತು ನಿರೋಧಕ ಮರಗಳನ್ನು ನೆಡುವುದು ಸುಲಭ ಮತ್ತು ಅಗ್ಗದ ಮಾರ್ಗವಾಗಿದೆ. ರೈತರು ಮರಗಳಿಗೆ ಲಸಿಕೆಯನ್ನೂ ನೀಡಬಹುದು. ಆದರೆ ಇದು ದುಬಾರಿಯಾಗಿರುವುದರಿಂದ ಇದು ಮರಗಳಿಂದ ಉತ್ಪತ್ತಿಯಾಗುವ ಕೋಕೋ ಮೇಲೆ ಪರಿಣಾಮವನ್ನು ಬೀರುತ್ತದೆ.

ದೂರದೂರ ಮರಗಳನ್ನು ನೆಡುವುದರಿಂದ ವೈರಸ್ ಹರಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಸಂಶೋಧಕರು. ಆದರೆ ಇದು ಇನ್ನೂ ಪ್ರಯೋಗ ಹಂತದಲ್ಲಿದೆ. ಇದು ರೈತರಿಗೆ ತಮ್ಮ ಬೆಳೆಯನ್ನು ರಕ್ಷಿಸಲು ಸಹಾಯ ಮಾಡುವ ಸಾಧ್ಯತೆಯಿದೆ.


ಮೀಲಿಬಗ್‌ನಿಂದ ಮಾತ್ರ ತೊಂದರೆಯೇ?

ಈ ಹಿಂದೆ ಕಪ್ಪು ಪಾಡ್ ರೋಗವು ಚಾಕೊಲೇಟ್ ಉತ್ಪನ್ನಗಳ ಮೇಲೆ ಪರಿಣಾಮ ಬೀರಿತ್ತು. ಈ ರೋಗವು ಕೋಕೋ ಬೀಜಗಳನ್ನು ಕಪ್ಪು ಅಥವಾ ಕಂದು ಬಣ್ಣಕ್ಕೆ ತಿರುಗಿಸುತ್ತದೆ. ಇದು 2022 ರಲ್ಲಿ ವಿಶ್ವದ ವಾರ್ಷಿಕ ಕೋಕೋ ಬೆಳೆಗಳಲ್ಲಿ ಶೇ. 30ರಷ್ಟನ್ನು ನಾಶಪಡಿಸಿತು. ಈ ಪ್ರದೇಶದಲ್ಲಿ ಉಂಟಾದ ಭಾರೀ ಮಳೆಯಿಂದಾಗಿ ರೋಗವನ್ನು ಮತ್ತಷ್ಟು ಉಲ್ಬಣವಾಗಿತ್ತು. ಏಕೆಂದರೆ ಸೋಂಕು ತೇವಾಂಶವುಳ್ಳ ಸ್ಥಿತಿಯಲ್ಲಿ ಹೆಚ್ಚು ವೇಗವಾಗಿ ಬೆಳೆಯುತ್ತದೆ ಮತ್ತು ಹರಡುತ್ತದೆ.

Continue Reading

ದೇಶ

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Tech Mahindra: ಐಟಿ ಸೇವೆಗಳಿಗೆ ಹೆಸರುವಾಸಿಯಾಗಿರುವ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದದಲ್ಲಿ 661 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೇ, 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಟೆಕ್‌ ಮಹೀಂದ್ರಾ ತೀರ್ಮಾನಿಸಿದೆ. ಇದು ಫ್ರೆಶರ್‌ಗಳಿಗೆ ಭಾರಿ ಅನುಕೂಲವಾಗಲಿದೆ.

VISTARANEWS.COM


on

Tech Mahindra
Koo

ನವದೆಹಲಿ: ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ, ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

“ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. ನಾಲ್ಕನೇ ತ್ರೈಮಾಸಿಕದಲ್ಲಿ ಟೆಕ್‌ ಮಹೀಂದ್ರಾ ನಿವ್ವಳ ಲಾಭದ ಪ್ರಮಾಣವು 709.47 ಕೋಟಿ ರೂ. ಇರಲಿದೆ ಎಂಬುದಾಗಿ ಮನಿಕಂಟ್ರೋಲ್‌ (Moneycontrol) ಅಂದಾಜಿಸಿತ್ತು.

6 ಸಾವಿರ ಫ್ರೆಶರ್‌ಗಳ ನೇಮಕ

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

50 ಸಾವಿರ ನೌಕರರಿಗೆ ಎಐ ತರಬೇತಿ

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಇನ್ನು, ಟೆಕ್‌ ಟೆಕ್‌ ಮಹೀಂದ್ರಾ ಕಂಪನಿಯ ವಾರ್ಷಿಕ ಲಾಭವೂ ಶೇ.6.2ರಷ್ಟು ಅಂದರೆ, 12,871 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೂ ಉದ್ಯೋಗ ಸೃಷ್ಟಿ ಸೇರಿ ಹಲವು ಯೋಜನೆಗಳಿಗೆ ಟೆಕ್‌ ಮಹೀಂದ್ರಾ ಚಾಲನೆ ನೀಡುತ್ತಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Continue Reading
Advertisement
Traffic Restrictions
ಬೆಂಗಳೂರು16 mins ago

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

karnataka weather Forecast
ಮಳೆ30 mins ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ42 mins ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

IPL 2024
ಕ್ರೀಡೆ49 mins ago

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

Ujjwal Nikam
ದೇಶ51 mins ago

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Money Guide
ಮನಿ-ಗೈಡ್57 mins ago

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Murder case in Belgavi
ಬೆಳಗಾವಿ1 hour ago

Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ1 hour ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು2 hours ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20242 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ7 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ14 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌