Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ - Vistara News

ವಾಣಿಜ್ಯ

Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

Sebi Fines: ವಂಚನೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಮಂಗಳವಾರ ಸಿಎನ್‌ಬಿಸಿ ಅವಾಝ್‌ನ ಮಾಜಿ ಮಾರ್ಕೆಟ್‌ ಸಂಪಾದಕ, ನಿರೂಪಕ ಪ್ರದೀಪ್‌ ಪಾಂಡ್ಯ ಮತ್ತು ತಾಂತ್ರಿಕ ವಿಶ್ಲೇಷಕ ಅಲ್ಪೇಶ್ ಫುರಿಯಾ ಅವರಿಗೆ ತಲಾ 1 ಕೋಟಿ ರೂ.ಗಳ ದಂಡ ವಿಧಿಸಿದೆ. ಮಾತ್ರವಲ್ಲ ಇವರಿಬ್ಬರ ಜತೆಗೆ ಇತರ ಆರು ಘಟಕಗಳನ್ನು ಐದು ವರ್ಷಗಳ ಕಾಲ ಷೇರು ಮಾರುಕಟ್ಟೆಯಿಂದ ನಿಷೇಧಿಸಲಾಗಿದೆ.

VISTARANEWS.COM


on

Sebi Fines
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ವಂಚನೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ (SEBI) ಮಂಗಳವಾರ ಸಿಎನ್‌ಬಿಸಿ ಅವಾಝ್‌ನ ಮಾಜಿ ಮಾರ್ಕೆಟ್‌ ಸಂಪಾದಕ, ನಿರೂಪಕ ಪ್ರದೀಪ್‌ ಪಾಂಡ್ಯ ಮತ್ತು ತಾಂತ್ರಿಕ ವಿಶ್ಲೇಷಕ ಅಲ್ಪೇಶ್ ಫುರಿಯಾ ಅವರಿಗೆ ತಲಾ 1 ಕೋಟಿ ರೂ.ಗಳ ದಂಡ ವಿಧಿಸಿದೆ (Sebi Fines). ಮಾತ್ರವಲ್ಲ ಇವರಿಬ್ಬರ ಜತೆಗೆ ಇತರ ಆರು ಘಟಕಗಳನ್ನು ಐದು ವರ್ಷಗಳ ಕಾಲ ಷೇರು ಮಾರುಕಟ್ಟೆಯಿಂದ ನಿಷೇಧಿಸಲಾಗಿದೆ. ಅಲ್ಪೇಶ್ ಫುರಿಯಾ (HUF), ಅಲ್ಪಾ ಫುರಿಯಾ, ಮನೀಶ್ ಫುರಿಯಾ, ಮನೀಶ್ ಫುರಿಯಾ (HUF), ಮಹಾನ್ ಇನ್ವೆಸ್ಟ್‌ಮೆಂಟ್‌ ಮತ್ತು ತೋಶೀ ಟ್ರೇಡ್‌ಗೆ ತಲಾ 10 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸಿಎನ್‌ಬಿಸಿ ಅವಾಝ್‌ ಚಾನಲ್‌ನಲ್ಲಿ ಪ್ರದೀಪ್ ಪಾಂಡ್ಯ ಅಥವಾ ಅಲ್ಪೇಶ್ ಫುರಿಯಾ ನೀಡಿದ ಸ್ಟಾಕ್ ಶಿಫಾರಸುಗಳಿಗೆ ಅನುಗುಣವಾಗಿ ಅಲ್ಪೇಶ್ ಗ್ರೂಪ್ ಘಟಕಗಳು ಮೋಸದ ವಹಿವಾಟುಗಳನ್ನು ನಡೆಸಿದ್ದವು ಎಂದು ಮೂಲಗಳು ತಿಳಿಸಿದೆ.

“ವೈಯಕ್ತಿಕ ಲಾಭಕ್ಕಾಗಿ ಮಾಹಿತಿ ಮುಚ್ಚಿಟ್ಟುಕೊಂಡಿರುವುದು ಮತ್ತು ದುರುಪಯೋಗ ಪಡಿಸಿರುವುದು ತನಿಖೆ ವೇಳೆ ಕಂಡು ಬಂದಿದೆ” ಎಂದು ಸೆಬಿ ಹೇಳಿದೆ. “ಪ್ರಸ್ತುತ ಇದು ಕ್ಲಾಸಿಕಲ್ ಫ್ರಂಟ್ ರನ್ನಿಂಗ್ ಪ್ರಕರಣವನ್ನು ಹೋಲುತ್ತದೆʼʼ ಎಂದೂ ತಿಳಿಸಿದೆ.

ʼʼಪ್ರದೀಪ್ ಪಾಂಡ್ಯ, ಅಲ್ಪೇಶ್ ಫುರಿಯಾ ಮತ್ತು ಇತರ ಆರು ಸಂಸ್ಥೆಗಳು ಸೆಕ್ಯುರಿಟಿ ಮಾರುಕಟ್ಟೆಯನ್ನು ಪ್ರವೇಶಿಸದಂತೆ ಸೆಬಿ ನಿರ್ಬಂಧ ವಿಧಿಸಿದೆ ಮತ್ತು ಐದು ವರ್ಷಗಳ ಅವಧಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಸೆಕ್ಯುರಿಟಿ ಖರೀದಿಸುವುದು, ಮಾರಾಟ ಮಾಡುವುದು ಅಥವಾ ವ್ಯವಹರಿಸುವುದನ್ನು ಅಥವಾ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದುವುದನ್ನು ನಿಷೇಧಿಸಿದೆʼʼ ಎಂದು ಮೂಲಗಳು ಹೇಳಿವೆ.

ಪ್ರದೀಪ್ ಪಾಂಡ್ಯ 2021ರ ಆಗಸ್ಟ್‌ವರೆಗೆ ಸಿಎನ್‌ಬಿಸಿ ಅವಾಝ್‌ನಲ್ಲಿ ವಿವಿಧ ಕಾರ್ಯಕ್ರಮಗಳ ನಿರೂಪಕ / ಸಹ-ನಿರೂಪಕರಾಗಿದ್ದರು. ಅಲ್ಪೇಶ್ ಫುರಿಯಾ ಚಾನಲ್‌ನಲ್ಲಿ ಅತಿಥಿ ತಜ್ಞರಾಗಿ ಕಾಣಿಸಿಕೊಂಡಿದ್ದರು ಮತ್ತು ಅವರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸ್ಟಾಕ್ ಶಿಫಾರಸು ಮಾಡುತ್ತಿದ್ದರು.

ಸೆಬಿ ಪ್ರಕಾರ, ಅಲ್ಪೇಶ್ ಫುರಿಯಾ ಮತ್ತು ಸಂಬಂಧಿತ ಖಾತೆಗಳು 10.73 ಕೋಟಿ ರೂ.ಗಳ ಕಾನೂನುಬಾಹಿರ ಲಾಭವನ್ನು ಗಳಿಸಿವೆ ಮತ್ತು ಇದರಲ್ಲಿ 8.4 ಕೋಟಿ ರೂ.ಗಳನ್ನು ಈಗಾಗಲೇ ಸೆಬಿ ಮುಟ್ಟುಗೋಲು ಹಾಕಿಕೊಂಡಿದೆ ಮತ್ತು ಈಗ ಉಳಿದ 2.34 ಕೋಟಿ ರೂ.ಗಳನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: SEBI : ಹೂಡಿಕೆದಾರರ ಪರ ಸೆಬಿ ಕೈಗೊಂಡ ಮಹತ್ವದ ನಿರ್ಧಾರಗಳು ಯಾವುದು?

“ಪ್ರದೀಪ್ ಪಾಂಡ್ಯ ಸಿಎನ್ಬಿಸಿ ಆವಾಝ್‌ನಲ್ಲಿ ನಿರೂಪಕರಾಗಿದ್ದಾಗ ಮುಂಬರುವ ಸ್ಟಾಕ್ ಶಿಫಾರಸುಗಳ ಬಗ್ಗೆ ಗೌಪ್ಯ ಮಾಹಿತಿಯನ್ನು ಅಲ್ಪೇಶ್ ಫುರಿಯಾ ಅವರೊಂದಿಗೆ ಹಂಚಿಕೊಂಡಿದ್ದರು. ಅಲ್ಪೇಶ್ ಫುರಿಯಾ ಈ ವಿಶೇಷ ಮಾಹಿತಿಯನ್ನು ಬಂಡವಾಳ ಮಾಡಿಕೊಂಡು, ತಮ್ಮ ಸ್ವಂತ ಖಾತೆಗಳು ಮತ್ತು ಸಂಬಂಧಿತ ಸಂಸ್ಥೆಗಳ ಮೂಲಕ ವಹಿವಾಟುಗಳನ್ನು ನಿರ್ವಹಿಸಿದ್ದರು. ಈ ಶಿಫಾರಸುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೊದಲು ಲಾಭ ಗಳಿಸಿಕೊಂಡಿದ್ದರುʼʼ ಎಂದು ಸೆಬಿ ವರದಿಯಲ್ಲಿ ವಿವರಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Liquor Price Karnataka: ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ (Karnataka Government) ನೀಡಿದ್ದು, ಜುಲೈ ಒಂದರಿಂದ ಮದ್ಯದ ದರಗಳನ್ನು ಕಡಿಮೆ (Liquor Price Karnataka) ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳ (Premium brand) ಮದ್ಯದ ದರಗಳು ಜುಲೈ 1ರಿಂದ ಇಳಿಕೆಯಾಗಲಿವೆ.

ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದಲೂ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿರುವುದೂ ಕಂಡುಬರುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ.

ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ. ಮೊದಲ ಐದು ಸ್ಲಾಬ್‌ಗಳಲ್ಲಿ ಈಗ ಇರುವ ಹೆಚ್ಚುವರಿ ಅಬಕಾರಿ ತೆರಿಗೆ ವ್ಯತ್ಯಾಸವಾಗುತ್ತಿಲ್ಲ. ಆದರೆ, ಆರರಿಂದ 16ನೇ ಸ್ಲಾಬ್‌ಗಳಲ್ಲಿ ಹೆಚ್ಚುವರಿ ಅಬಕಾರಿ ತೆರಿಗೆ ದರ ಗಣನೀಯವಾಗಿ ಇಳಿಕೆಯಾಗಲಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಪ್ರಮುಖ ಸುದ್ದಿ

New Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ; ಸಚಿವ ಎಂ.ಬಿ.ಪಾಟೀಲ್‌ ಮಹತ್ವದ ಸಭೆ

New Airport: ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ಏರ್‌ಪೋರ್ಟ್ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ದಶಲಕ್ಷ ಪ್ರಯಾಣಿಕರ ಮತ್ತು 4 ಲಕ್ಷ ಟನ್‌ಗೂ ಹೆಚ್ಚಿನ ಸರಕು ಸಾಗಣೆ ನಿರ್ವಹಣೆ ಆಗಿದೆ. ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂಬುದಾಗಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

New Airport
Koo

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿನಲ್ಲಿ (Bengaluru) ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ (New Airport) ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ. ಪಾಟೀಲ (M B Patil) ಅವರು ಅಧಿಕಾರಿಗಳೊಂದಿಗೆ ಪ್ರಾಥಮಿಕ ಹಂತದ ಸಭೆ ನಡೆಸಿ, ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ ಮತ್ತಿತರರು ಭಾಗವಹಿಸಿದ್ದರು. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ಏರ್‌ಪೋರ್ಟ್ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ದಶಲಕ್ಷ ಪ್ರಯಾಣಿಕರ ಮತ್ತು 4 ಲಕ್ಷ ಟನ್‌ಗೂ ಹೆಚ್ಚಿನ ಸರಕು ಸಾಗಣೆ ನಿರ್ವಹಣೆ ಆಗಿದೆ. ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033)150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು ಇನ್ನು ಒಂಬತ್ತು ವರ್ಷಗಳಲ್ಲಿ ಮುಗಿಯಲಿದೆ. ಆದ್ದರಿಂದ ಈಗಿನಿಂದಲೇ ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಂದಡಿ ಇಡಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ ಎಂದು ಹೇಳಿದರು.

ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳಿಗೆ ದೀರ್ಘ ಸಮಯ ಹಿಡಿಯುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾಗುತ್ತಿದ್ದೇವೆ. ಎರಡನೆಯ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದರು.

ಇದನ್ನೂ ಓದಿ: CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Continue Reading

ವಾಣಿಜ್ಯ

PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಭಾರತದಲ್ಲಿ ಪಾನ್ ಕಾರ್ಡ್ ದುರ್ಬಳಕೆ ಹೆಚ್ಚಾಗುತ್ತಿದೆ. ಅದರಲ್ಲೂ ಹಿರಿಯ ನಾಗರಿಕರು, ದುರ್ಬಲರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ವಂಚಕರು ಪಾನ್ (PAN Card Safety) ವಿವರಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ವಂಚನೆಗಳನ್ನು ಹೇಗೆ ಗುರುತಿಸಬಹುದು ಮತ್ತು ಆರ್ಥಿಕ ಯೋಗಕ್ಷೇಮವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

PAN Card Safety
Koo

ಪಾನ್ ಕಾರ್ಡ್‌ಗಳ (PAN Card Safety) ದುರುಪಯೋಗ ಭಾರತದಲ್ಲಿ (india) ಹೆಚ್ಚಾಗುತ್ತಿದೆ. ವಿಶೇಷವಾಗಿ ಹಿರಿಯ ನಾಗರಿಕರು (senior citizens), ರೈತರು (farmers), ವಿದ್ಯಾರ್ಥಿಗಳು (students) ಇದಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ನಾವು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಅದರಲ್ಲೂ ಪಾನ್ ಕಾರ್ಡ್ (pan card) ಬಳಕೆ, ಮಾಹಿತಿ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯನ್ನು ವಹಿಸಬೇಕಿದೆ.

ಪಾನ್ ಕಾರ್ಡ್ ಭಾರತದಲ್ಲಿನ ಹಣಕಾಸಿನ ವಹಿವಾಟುಗಳಿಗೆ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಇದನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳಬಹುದಾದ ಸಾಧ್ಯತೆಗಳಿವೆ. ಮುಂಬಯಿಯ ಹಿರಿಯ ನಾಗರಿಕರೊಬ್ಬರ ಪಾನ್ ವಿವರಗಳನ್ನು 1.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟವನ್ನು ನೋಂದಾಯಿಸಲು ಬಳಸಿದ್ದಾರೆ ಎನ್ನುವುದು ಆದಾಯ ತೆರಿಗೆ ಇಲಾಖೆಯಿಂದ ತನಿಖೆಗೆ ಬಂದ ಬಳಿಕ ಗೊತ್ತಾಗಿದೆ.

ವಂಚಕರು ಸಾಮಾನ್ಯವಾಗಿ ತಂತ್ರಜ್ಞಾನದ ಬಗ್ಗೆ ತಿಳಿದಿರುತ್ತಾರೆ. ಹೀಗಾಗಿ ಅವರು ಹೆಚ್ಚು ಜಾಗರೂಕರಾಗಿರದ ವ್ಯಕ್ತಿಗಳನ್ನು ಗುರಿಯಾಗಿಸುತ್ತಾರೆ. ಅವರು ವಿವಿಧ ವಿಧಾನಗಳ ಮೂಲಕ ಪಾನ್ ವಿವರಗಳನ್ನು ಪಡೆದು ಅನಂತರ ಅವುಗಳನ್ನು ಕಾನೂನುಬಾಹಿರವಾಗಿ ಬಳಸುತ್ತಾರೆ.

ವಂಚನೆ ಹೇಗೆ?

ನಕಲಿ ಆಸ್ತಿ ನೋಂದಣಿ

ಮುಂಬಯಿ ಪ್ರಕರಣದಂತೆ ವಂಚಕರು ನಕಲಿ ಆಸ್ತಿ ಮಾರಾಟವನ್ನು ನೋಂದಾಯಿಸಲು ಪಾನ್ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಳ್ಳಬಹುದು. ಇದು ಸಂತ್ರಸ್ತರಿಗೆ ತೆರಿಗೆ ನೊಟೀಸ್ ಜಾರಿಯಾಗಲು ಕಾರಣವಾಗಬಹುದು.

ಸಾಲ ಪಡೆಯಲು

ಕ್ರಿಮಿನಲ್‌ಗಳು ಫಿನ್‌ಟೆಕ್ ಅಪ್ಲಿಕೇಶನ್‌ಗಳ ಮೂಲಕ ಸಾಲಗಳನ್ನು ಪಡೆಯಲು ಪಾನ್ ವಿವರಗಳನ್ನು ಬಳಸಿಕೊಳ್ಳಬಹುದು. ಇದರಿಂದ ಸಂತ್ರಸ್ತರು ಅನಿರೀಕ್ಷಿತವಾಗಿ ಸಾಲಗಾರರಾಗಬಹುದು.


ಪಾನ್ ರಕ್ಷಿಸುವುದು ಹೇಗೆ?

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಪಾನ್ ಮಾಹಿತಿಯನ್ನು ಹಂಚಿಕೊಳ್ಳುವಾಗ ತೀವ್ರ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಪಾನ್ ವಿವರಗಳನ್ನು ಸರ್ಕಾರದಿಂದ ಅಧಿಕೃತವಾಗಿರುವ ಘಟಕಗಳೊಂದಿಗೆ ಮಾತ್ರ ಹಂಚಿಕೊಳ್ಳಿ. ಪಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದರಿಂದ ದುರುಪಯೋಗದ ವಿರುದ್ಧ ಸ್ವಲ್ಪ ರಕ್ಷಣೆ ಪಡೆಯಬಹುದು.

ಪ್ಯಾನ್ ಕಾರ್ಡ್ ದುರುಪಯೋಗವನ್ನು ಪರಿಶೀಲಿಸುವುದು ಹೇಗೆ?

ಪಾನ್ ಕಾರ್ಡ್ ಹಗರಣವನ್ನು ಗುರುತಿಸಲು ತೆಗೆದುಕೊಳ್ಳಬೇಕಾದ ಕೆಲವು ಕ್ರಮಗಳಿವೆ.
ವಾರ್ಷಿಕ ಮಾಹಿತಿ ಪರಿಶೀಲಿಸಿ (AIS)

ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಈ ಡಾಕ್ಯುಮೆಂಟ್, ಬ್ಯಾಂಕ್‌ಗಳು ಮತ್ತು ಇತರ ಸಂಸ್ಥೆಗಳು ವರದಿ ಮಾಡಿರುವ ನಿಮ್ಮ ಹಣಕಾಸಿನ ವಹಿವಾಟಿನ ವಿವರವಾದ ದಾಖಲೆಯನ್ನು ಒದಗಿಸುತ್ತದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಾಗಿ ನಿಮ್ಮ ವಾರ್ಷಿಕ ಮಾಹಿತಿಯನ್ನು ನಿಯಮಿತವಾಗಿ ಪರಿಶೀಲಿಸಿ.

ಕ್ರೆಡಿಟ್ ಸ್ಕೋರ್ ಮೇಲ್ವಿಚಾರಣೆ ಮಾಡಿ

CIBIL, Equifax, Experian ಅಥವಾ CRIF ಹೈ ಮಾರ್ಕ್ ನಂತಹ ಏಜೆನ್ಸಿಗಳ ಮೂಲಕ ಕ್ರೆಡಿಟ್ ಸ್ಕೋರ್ ಅನ್ನು ಪರಿಶೀಲಿಸಿ. ನಿಮಗೆ ತಿಳಿಯದೆ ನಿಮ್ಮ ಹೆಸರಿನಲ್ಲಿ ತೆಗೆದುಕೊಂಡ ಯಾವುದೇ ಸಾಲಗಳನ್ನು ಗುರುತಿಸಿ.

ಇದನ್ನೂ ಓದಿ: Elon Musk: ಟೆಸ್ಲಾದಲ್ಲಿ ಎಲಾನ್ ಮಸ್ಕ್ ಒಬ್ಬರ ಸಂಬಳ ಟಾಟಾ ಮೋಟಾರ್ಸ್‌ ಒಟ್ಟು ಆದಾಯಕ್ಕಿಂತ ಹೆಚ್ಚು!

ಹಣಕಾಸು ವರದಿಗಳನ್ನು ಪರೀಕ್ಷಿಸಿ

ಪೇಟಿಎಂ ಅಥವಾ ಬ್ಯಾಂಕ್ ಬಜಾರ್‌ನಂತಹ ಫಿನ್‌ಟೆಕ್ ಪ್ಲಾಟ್‌ಫಾರ್ಮ್‌ಗಳು ಹಣಕಾಸು ವರದಿಗಳನ್ನು ಪಡೆಯಲು ಅನುಮತಿಸುತ್ತವೆ. ಈ ವರದಿಗಳನ್ನು ನಿಯಮಿತವಾಗಿ ಪರಿಶೀಲಿಸುವುದರಿಂದ ಯಾವುದೇ ಅನಧಿಕೃತ ವಹಿವಾಟುಗಳನ್ನು ಪತ್ತೆಹಚ್ಚಲು ಸಹಾಯವಾಗುವುದು.

ಜಾಗರೂಕರಾಗಿರಿ ಮತ್ತು ಕ್ರಮ ಕೈಗೊಳ್ಳಿ

ಪಾನ್ ಕಾರ್ಡ್ ಹಂಚಿಕೆ ವಿಚಾರದಲ್ಲಿ ಜಾಗರೂಕರಾಗಿರಿ. ಅನುಮಾನಾಸ್ಪದವಾಗಿ ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಿ. ಇದರಿಂದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಪಾನ್ ಕಾರ್ಡ್ ವಂಚನೆಗೆ ಬಲಿಯಾದರೆ ತಕ್ಷಣ ಪೊಲೀಸ್ ಇಲಾಖೆಗೆ ದೂರು ನೀಡಿ. ಆರ್ಥಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಪಾನ್ ವಿವರಗಳನ್ನು ರಕ್ಷಿಸುವುದು ಬಹಳ ಮುಖ್ಯ.

Continue Reading

ಚಿನ್ನದ ದರ

Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಹೀಗಿದೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 20) ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಸೋಮವಾರ, ಮಂಗಳವಾರ ದರ ಇಳಿಕೆಯಾಗಿದ್ದರೆ ಬುಧವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇದೀಗ ಮೂರು ದಿನಗಳ ಬಳಿಕ ಬೆಲೆ ಹೆಚ್ಚಾಗಿದೆ. ಹಾಗಾದರೆ ಇಂದಿನ ದರ ಎಷ್ಟಿದೆ ಎನ್ನುವ ವಿಚರ ಇಲ್ಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 20) ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ (Gold Rate Today). ಸೋಮವಾರ, ಮಂಗಳವಾರ ದರ ಇಳಿಕೆಯಾಗಿದ್ದರೆ ಬುಧವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 22 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,640 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,244ಕ್ಕೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,400 ಮತ್ತು ₹ 6,64,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,952 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,440 ಮತ್ತು ₹ 7,24,400 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,655 ₹ 7,259
ಮುಂಬೈ₹ 6,640 ₹ 7,244
ಬೆಂಗಳೂರು₹ 6,640₹ 7,244
ಚೆನ್ನೈ₹ 6,700 ₹ 7,301

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ತುಸು ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.9 ಹಾಗೂ 8 ಗ್ರಾಂಗೆ ₹ 727.20 ಇದೆ. 10 ಗ್ರಾಂಗೆ ₹ 909 ಹಾಗೂ 1 ಕಿಲೋಗ್ರಾಂಗೆ ₹ 90,900 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Tata Motors: ಬೆಲೆ ಏರಿಕೆಗೆ ಮುಂದಾದ ಟಾಟಾ ಮೋಟಾರ್ಸ್‌; ಜುಲೈಯಿಂದ ಕಮರ್ಷಿಯಲ್‌ ವಾಹನ ದುಬಾರಿ

Continue Reading
Advertisement
Kalki 2898 AD Final Trailer Released
ಕರ್ನಾಟಕ57 mins ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್1 hour ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ2 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ2 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ2 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ2 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ2 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ3 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು3 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ6 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌