Sensex crash | ಅಮೆರಿಕದಲ್ಲಿ ಬಡ್ಡಿ ದರ ಏರಿಕೆ ಎಫೆಕ್ಟ್‌, ಸೆನ್ಸೆಕ್ಸ್‌ 879 ಅಂಕ ಪತನ - Vistara News

ಪ್ರಮುಖ ಸುದ್ದಿ

Sensex crash | ಅಮೆರಿಕದಲ್ಲಿ ಬಡ್ಡಿ ದರ ಏರಿಕೆ ಎಫೆಕ್ಟ್‌, ಸೆನ್ಸೆಕ್ಸ್‌ 879 ಅಂಕ ಪತನ

ಅಮೆರಿಕದಲ್ಲಿ ಫೆಡರಲ್‌ ರಿಸರ್ವ್‌ ಬಡ್ಡಿ ದರ ಏರಿಸಿದ ಬೆನ್ನಲ್ಲೇ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಅಲ್ಲೋಕಕಲ್ಲೋಲ ಸಂಭವಿಸಿತು. ಹೀಗಿದ್ದರೂ ಇದು ತಾತ್ಕಾಲಿಕ ಪತನ (Sensex crash) ಎನ್ನುತ್ತಾರೆ ಆರ್ಥಿಕ ತಜ್ಞರು.

VISTARANEWS.COM


on

stock trader
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಅಮೆರಿಕದಲ್ಲಿ ಫೆಡರಲ್‌ ರಿಸರ್ವ್‌ ಬಡ್ಡಿ ದರ ಏರಿಕೆಯ ಬೆನ್ನಲ್ಲೇ ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ( Sensex crash) ಗುರುವಾರ 879 ಅಂಕ ಪತನವಾಗಿದೆ.

ಸೆನ್ಸೆಕ್ಸ್‌ 61,799ಕ್ಕೆ ದಿನದ ವಹಿವಾಟು ಮುಕ್ತಾಯಗೊಳಿಸಿದರೆ, ನಿಫ್ಟಿ 245 ಅಂಕ ಕಳೆದುಕೊಂಡು 18,414ಕ್ಕೆ ಸ್ಥಿರವಾಯಿತು. ಟೆಕ್‌ ಮಹೀಂದ್ರಾ, ಟೈಟನ್‌, ಇನ್ಫೋಸಿಸ್‌, ಎಚ್‌ಡಿಎಫ್‌ಸಿ ಮತ್ತು ಐಟಿಸಿ ಷೇರು ದರ 2-4% ತನಕ ಇಳಿಯಿತು. ನಿಫ್ಟಿ ಐಟಿ ಇಂಡೆಕ್ಸ್‌ 2.14% ಇಳಿಯಿತು.

ಅಮೆರಿಕದಲ್ಲಿ ಬಡ್ಡಿ ದರ ಏರಿಕೆಯ ಟ್ರೆಂಡ್‌ ಮುಂದುವರಿಯುವ ಸಾಧ್ಯತೆ ಇದೆ ಎಂಬ ಸುಳಿವನ್ನು ಫೆಡರಲ್‌ ರಿಸರ್ವ್‌ ನೀಡಿದ್ದು, ಜಾಗತಿಕ ಷೇರು ಪೇಟೆ ತತ್ತರಿಸಿತು. ಹೀಗಿದ್ದರೂ, ಭಾರತ ಮತ್ತು ಅಮೆರಿಕದ ಮಾರುಕಟ್ಟೆಗೆ ದೀರ್ಘಕಾಲೀನ ದೃಷ್ಟಿಯಿಂದ ಆತಂಕಕ್ಕೆ ಕಾರಣವಿಲ್ಲ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಏಷ್ಯಾದ ಷೇರು ಮಾರುಕಟ್ಟೆಗಳು ಗುರುವಾರ ಸೂಚ್ಯಂಕಗಳ ಕುಸಿತಕ್ಕೆ ಸಾಕ್ಷಿಯಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
ಹತ ರೇಣುಕಾಸ್ವಾಮಿ ಹಾಗೂ ದರ್ಶನ್.
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ‌ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು) ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಆರೋಪದಲ್ಲಿ ರೇಣುಕಾಸ್ವಾಮಿ (28) ಎಂಬ ಯುವಕನನ್ನು ಹತ್ಯೆಗೈದ ಆರೋಪದಲ್ಲಿ ದರ್ಶನ್‌ (Actor Darshan Arrested) ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿರುವ ನಟನ ಫಾರ್ಮ್‌ಹೌಸ್‌ನಲ್ಲಿ ದರ್ಶನ್‌ ಅವರನ್ನು ಬಂಧಿಸಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದರ್ಶನ್‌ ಅವರನ್ನು ವಶಪಡಿಸಿಕೊಂಡಿರುವ ಕುರಿತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಅವರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Continue Reading

ಪ್ರಮುಖ ಸುದ್ದಿ

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
Koo

ಮೈಸೂರು: ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಜತೆಗೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ ಮಾಹಿತಿ ನೀಡಿದ್ದು, “ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ದರ್ಶನ್‌ ಅವರನ್ನು ಕರೆತರಲಾಗಿದೆ” ಎಂದು ತಿಳಿಸಿದ್ದಾರೆ.

ಹತ್ಯೆಗೀಡಾದ ಯುವಕ.

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ದರ್ಶನ್‌ ಅವರು ಹಲವರೊಂದಿಗೆ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು. ಕೊಲೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ತಿಂಗಳ ಹಿಂದೆ ಹತ್ಯೆ ಮಾಡಲಾಗಿತ್ತು.

ಕೊಲೆ ಕೇಸ್‌ನಲ್ಲಿ ದಾಖಲಾಗಿದ್ದ ಎಫ್‌ಐಆರ್

ಬೆಂಗಳೂರಿನ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ವ್ಯಕ್ತಿಯನ್ನು ಹತ್ಯೆ ಮಾಡಿ ರಾಜಕಾಲುವೆ ಬಳಿ ಬಿಸಾಡಲಾಗಿತ್ತು. ಶವವನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಶವ ರೇಣುಕಾಸ್ವಾಮಿ ಅವರದ್ದೇ ಎಂದು ಗುರುತಿಸಿದ್ದರು. ಇದಾದ ಬಳಿಕ ತನಿಖೆ ಕೈಗೊಂಡಿದ್ದರು. ತನಿಖೆ ನಡೆಸಿದ ಪೊಲೀಸರು ದರ್ಶನ್‌ ಅವರನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ದರ್ಶನ್‌ ಅವರ ಬೌನ್ಸರ್‌ಗಳನ್ನು ಕೂಡ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Continue Reading

ದೇಶ

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

All Eyes on Raesi: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಮಾತ್ರವಲ್ಲ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸೆಲೆಬ್ರಿಟಿಗಳ ಇಬ್ಬಗೆಯ ನೀತಿಯನ್ನು ಹಲವರು ಪ್ರಶ್ನಿಸಿದ್ದಾರೆ.

VISTARANEWS.COM


on

All Eyes on Raesi
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಜತೆಗೆ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಇಸ್ರೇಲ್‌ನ ವೈಮಾನಿಕ ದಾಳಿಯ ನಂತರ ದಕ್ಷಿಣ ಗಾಜಾದಲ್ಲಿ 45 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಬಳಿಕ ದಕ್ಷಿಣ ಗಾಜಾದ ರಫಾ ನಗರದಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಡೇರೆಗಳ ಚಿತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದರಲ್ಲಿ ʼಆಲ್ ಐಸ್ ಆನ್ ರಫಾʼ ಎಂದು ಬರೆದು, ರಫಾ ನಿರಾಶ್ರಿತರಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು. ಈ ಪೋಸ್ಟ್‌ ಅನ್ನು ಭಾರತದ ಸೆಲೆಬ್ರಿಟಿಗಳೂ ಹಂಚಿಕೊಂಡಿದ್ದರು. ಪ್ರಿಯಾಂಕಾ ಚೋಪ್ರಾ, ವರುಣ್ ಧವನ್, ಆಲಿಯಾ ಭಟ್, ಸಮಂತಾ ರುತ್ ಪ್ರಭು, ತ್ರಿಪ್ತಿ ಡಿಮ್ರಿ, ರಿಚಾ ಚಡ್ಡಾ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಮುಂತಾದ ಸೆಲೆಬ್ರಿಟಿಗಳು ʼಆಲ್ ಐಸ್ ಆನ್ ರಫಾʼ ಪೋಸ್ಟ್‌ ಹಂಚಿಕೊಂಡು ಕಂಬನಿ ಮಿಡಿದಿದ್ದರು. ಸದ್ಯ ಇವರೆಲ್ಲ ಭಾರತದಲ್ಲೇ ನಡೆದ ದುರಂತದ ಬಗ್ಗೆ ಮೌನ ವಹಿಸಿದ್ದು ನೆಟ್ಟಿಗರನ್ನು ಕೆರಳಿಸಿದೆ. ʼಆಲ್ ಐಸ್ ಆನ್ ರಿಯಾಸಿʼ ಎನ್ನುವ ಪೋಸ್ಟ್‌ ಈ ಸೆಲೆಬ್ರಿಟಿಗಳ ಸೋಷಿಯಲ್‌ ಮೀಡಿಯಾದಲ್ಲಿ ಯಾಕೆ ಕಾಣಿಸಿಕೊಂಡಿಲ್ಲ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಹಿಂದೂಗಳಿಗೆ ಯಾಕೆ ಮನಸ್ಸು ಮಿಡಿಯುತ್ತಿಲ್ಲ?

ʼʼದೂರದ ಪ್ಯಾಲೆಸ್ತೀನಿಯರಿಗಾಗಿ ಮಿಡಿದ ಸೆಲೆಬ್ರಿಟಿಗಳ ಮನಸ್ಸು ನಮ್ಮದೇ ದೇಶದ ಮುಗ್ಧರಿಗಾಗಿ ಯಾಕೆ ಮಿಡಿಯುತ್ತಿಲ್ಲ? ಭಯೋತ್ಪಾದನೆಗಾಗಿ ಬಲಿಯಾದ ಹಿಂದೂಗಳ ಬೆಂಬಲಕ್ಕೆ ಧಾವಿಸಲು ಸೆಲೆಬ್ರಿಟಿಗಳು ಮುಂದಾಗದಿರುವುದು ದುರಂತʼʼ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವರು ಸೋಷಿಯಲ್‌ ಮೀಡಿಯಾದ ಮೂಲಕ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ʼʼಎಲ್ಲರ ಕಣ್ಣು ರಫಾ ಮೇಲೆ ಎನ್ನುತ್ತಿದ್ದವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆʼʼ ಎಂದು ಒಬ್ಬರು ರಿಯಾಸಿ ದುರಂತದ ಫೋಟೊವನ್ನು ಪೋಸ್ಟ್‌ ಮಾಡಿ ಸಿನಿಮಾ ನಟ-ನಟಿಯರಿಗೆ ಝಾಡಿಸಿದ್ದಾರೆ.

ʼʼಕೆಲವು ದಿನಗಳ ಹಿಂದೆ ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಅವರ ಕಣ್ಣು ರಫಾದತ್ತ ನೆಟ್ಟಿತ್ತು. ಈಗ ಅವರ ಕಣ್ಣು ಮುಚ್ಚಿದೆ. ಅವರಿಗೆ ಮುಸ್ಲಿಂ ಭಯೋತ್ಪಾದಕರು ಹಿಂದೂ ಯಾತ್ರಾರ್ಥಿಗಳನ್ನು ಹತ್ಯೆ ಮಾಡಿರುವುದು ಕಾಣಿಸುತ್ತಿಲ್ಲʼʼ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜತೆಗೆ ರೋಹಿತ್‌ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್, ಮಾಧುರಿ ದೀಕ್ಷಿತ್‌ ಮುಂತಾದವರ ಮೌನವನ್ನೂ ಟೀಕಿಸಿದ್ದಾರೆ. ಒಟ್ಟಿನಲ್ಲಿ ಸೆಲೆಬ್ರಿಟಿಗಳ ಇಬ್ಬಗೆಯ ನೀತಿ ಮತ್ತೊಮ್ಮೆ ಬಟಾ ಬಯಲಾಗಿದೆ.

ಇದನ್ನೂ ಓದಿ: Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Continue Reading

ಪ್ರಮುಖ ಸುದ್ದಿ

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Gold Rate Today: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ತುಸು ಇಳಿಕೆಯಾಗಿದೆ. ಇದರಿಂದಾಗಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 11) ಚಿನ್ನದ ಬೆಲೆಯಲ್ಲಿ (Gold Rate Today) ತುಸು ಇಳಿಕೆಯಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ (Lok Sabha Election Result 2024) ಬಳಿಕ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಈಗ ಇಳಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ತಲಾ 1 ರೂ. ಇಳಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಆಗಿರಲಿಲ್ಲ.

ಒಂದು ರೂಪಾಯಿ ಇಳಿಕೆಯೊಂದಿಗೆ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 6,569 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,166 ರೂ. ಆಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ದಿನವಾದ ಜೂನ್‌ 4ರಂದು ಚಿನ್ನದ ಬೆಲೆಯಲ್ಲಿ ಏಕಾಏಕಿ 76 ರೂ. ಏರಿಕೆಯಾಗಿತ್ತು. ಜೂನ್‌ 6 ಹಾಗೂ ಜೂನ್‌ 7ರಂದು ಕೂಡ ಏರಿಕೆಯಾಗಿತ್ತು. ಇದಾದ ಮರುದಿನ ಅಂದರೆ, ಜೂನ್‌ 8ರಂದು 208 ರೂ. ಇಳಿಕೆಯಾಗಿದ್ದು ಗ್ರಾಹಕರು ನಿಟ್ಟುಸಿರು ಬಿಡುವಂತೆ ಮಾಡಿತ್ತು. ಈಗ ಮತ್ತೆ ತುಸು ಇಳಿಕೆಯಾಗಿದೆ.

Gold Rate Today

ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Stock Market: ಫಲಿತಾಂಶದ ಬಳಿಕ ಷೇರು ಪೇಟೆ ನೆಗೆತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ

Continue Reading
Advertisement
black magic
ದಕ್ಷಿಣ ಕನ್ನಡ8 mins ago

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Kamran Akmal
ಕ್ರಿಕೆಟ್15 mins ago

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Actor Darshan
ಕರ್ನಾಟಕ20 mins ago

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Saptami Gowda
ಸಿನಿಮಾ36 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ45 mins ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan
ಪ್ರಮುಖ ಸುದ್ದಿ1 hour ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ1 hour ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ1 hour ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Gold Rate Today
ಪ್ರಮುಖ ಸುದ್ದಿ1 hour ago

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Virat Kohli
ಕ್ರೀಡೆ2 hours ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ36 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌