Sensex | ಸೆನ್ಸೆಕ್ಸ್‌ 274 ಅಂಕ ಏರಿಕೆ, ದೇಶಿ ಸಾಂಸ್ಥಿಕ ಹೂಡಿಕೆದಾರರ ಸತತ ಹೂಡಿಕೆ - Vistara News

ವಾಣಿಜ್ಯ

Sensex | ಸೆನ್ಸೆಕ್ಸ್‌ 274 ಅಂಕ ಏರಿಕೆ, ದೇಶಿ ಸಾಂಸ್ಥಿಕ ಹೂಡಿಕೆದಾರರ ಸತತ ಹೂಡಿಕೆ

ದೇಶೀಯ ಹೂಡಿಕೆದಾರರ ಉತ್ಸಾಹದ ಪರಿಣಾಮ (Sensex) ಮಾರುಕಟ್ಟೆಗೆ ಹೊಸ ಬಲ ಬಂದಂತಾಗಿದೆ. ಪ್ರತಿ ತಿಂಗಳು ರಿಟೇಲ್‌ ಹೂಡಿಕೆದಾರರ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದೆ.

VISTARANEWS.COM


on

share
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಜಾಗತಿಕ ಮಾರುಕಟ್ಟೆಯ ಅಸ್ಥಿರತೆ ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರ ಲಾಭಾಂಶ ಗಳಿಕೆ ಮುಂದುವರಿದರೂ ದೇಶಿ ಸಾಂಸ್ಥಿಕ ಹೂಡಿಕೆದಾರರ (Sensex ) ಸತತ ಹೂಡಿಕೆಯ ಪರಿಣಾಮ ಷೇರುಪೇಟೆ ಇಂದು ಸಕಾರಾತ್ಮಕವಾಗಿ ವಹಿವಾಟು ನಡೆಸಿತು.
ನಿಫ್ಟಿ ಇಂದು ಕೇವಲ 19 ಅಂಕಗಳ ಏರಿಕೆಯೊಂದಿಗೆ 18179 ಅಂಕಗಳಿಗೆ ಮತ್ತು ಸೆನ್ಸೆಕ್ಸ್ 18 ಅಂಕಗಳ ಇಳಿಕೆಯೊಂದಿಗೆ 61144 ಅಂಶಗಳಿಗೆ ಪ್ರಾರಂಭವಾಯಿತು. ಬ್ಯಾಂಕ್ ನಿಫ್ಟಿ 120 ಅಂಕಗಳ ಹೆಚ್ಚಳದೊಂದಿಗೆ 42457 ರಲ್ಲಿ ಆರಂಭವಾಯಿತು.
ನಿಫ್ಟಿ ಆರಂಭದಲ್ಲಿ ಅಲ್ಪ ಕುಸಿದು 18140 ರಲ್ಲಿ ಸಪೋರ್ಟ್​ ತೆಗೆದುಕೊಂಡು ಏರುಮುಖವಾಯಿತು. ಸಾರ್ವಜನಿಕ ಬ್ಯಾಂಕ ಷೇರುಗಳಿಗೆ ನಿರಂತರ ಬೇಡಿಕೆ ವ್ಯಕ್ತವಾಗುತ್ತಿರುವುದರಿಂದ ಮಾರುಕಟ್ಟೆಗೆ ಬಲ ನೀಡಿದಂತಾಗಿದೆ. ಇದರಿಂದ ಖಾಸಗಿ ಬ್ಯಾಂಕ್ ಷೇರುಗಳು ಕುಸಿದರೂ ಬ್ಯಾಂಕ್ ನಿಫ್ಟಿ ಉತ್ತಮವಾಗಿ ವಹಿವಾಟು ನಡೆಯಿತು.
ದಿನದ ಕೊನೆಯ ಒಂದು ಗಂಟೆಯಲ್ಲಿ ದೇಶಿ ಹೂಡಿಕೆದಾರರಿಂದ ಷೇರುಗಳಿಗೆ ಬೇಡಿಕೆ ವ್ಯಕ್ತವಾದ ಕಾರಣ ನಿಫ್ಟಿ 84 ಅಂಕಗಳ ಏರಿಕೆಯೊಂದಿಗೆ 18244 ಕ್ಕೆ ಮತ್ತು ಸೆನ್ಸೆಕ್ಸ್ 274 ಅಂಶಗಳ ಹೆಚ್ಚಳದೊಂದಿಗೆ 61418 ರಲ್ಲಿ ಮುಕ್ತಾಯವಾಯಿತು. ಬ್ಯಾಂಕ್ ನಿಫ್ಟಿ 110 ಅಂಕಗಳ ಏರಿಕೆಯೊಂದಿಗೆ 42457 ರಲ್ಲಿ ಅಂತ್ಯವಾಯಿತು.
ಸಣ್ಣ ಕಂಪನಿಗಳ ಸೂಚ್ಯಂಕ ಶೇ. 0.03 ಮತ್ತು ಮಾಧ್ಯಮ ಕಂಪನಿಗಳ ಸೂಚ್ಯಂಕ 0.55 ರಷ್ಟು ಏರಿಕೆ ದಾಖಲಿಸಿದೆ. ಸಾರ್ವಜನಿಕ ಹೂಡಿಕೆ, ಐಟಿ ಮತ್ತು ಲೋಹದ ಸೂಚ್ಯಂಕಗಳು ಏರಿಕೆಯಾದರೇ ರಿಯಾಲಿಟಿ ಮತ್ತು ಇಂಧನ ಸೂಚ್ಯಂಕಗಳು ಇಳಿಕೆಯಾದವು.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು 697 ಕೋಟಿ ರೂ ಮೌಲ್ಯದ ಷೇರುಗಳನ್ನು ಮಾರಿದರೇ ದೇಶಿ ಸಾಂಸ್ಥಿಕ ಹೂಡಿಕೆದಾರರು 636 ಕೋಟಿ ರೂ ಮೌಲ್ಯದ ಷೇರುಗಳನ್ನು ಕೊಂಡುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Money Guide: ಈ ದುಬಾರಿ ದುನಿಯಾದಲ್ಲಿ, ಬೆಲೆ ಏರಿಕೆಯ ಈ ದಿನಗಳಲ್ಲಿ ಐಷಾರಾಮಿ ಬಿಡಿ ತೀರಾ ಅಗತ್ಯ ವಸ್ತುಗಳನ್ನು ಕೊಳ್ಳಲೂ ಸಾಲ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕೆ ತಕ್ಕಂತೆ ವಿವಿಧ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಸರಳ ವಿಧಾನಗಳ ಮೂಲ ಲೋನ್‌ ನೀಡಲು ಮುಂದೆ ಬರುತ್ತಿವೆ. ನೆನಪಿಡಿ ತೀರಾ ಅನಿವಾರ್ಯವಲ್ಲದ ಹೊರತು ಸಾಲಕ್ಕೆ ಮುಂದಾಗಬೇಡಿ. ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಯಾವೆಲ್ಲ ಅಂಶಗಳನ್ನು ಗಮನಿಸಬೇಕು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ʼಸಾಲ ಮಾಡಿಯಾದ್ರೂ ತುಪ್ಪ ತಿನ್ನುʼ ಎನ್ನುವ ಗಾದೆ ಮಾತಿದೆ. ಅಂದರೆ ಐಷಾರಾಮಿ ಬುದುಕು ಬೇಕೆಂದಿದ್ದರೆ ಸಾಲ ಮಾಡಬೇಕಾಗುತ್ತದೆ ಎನ್ನುವ ಅರ್ಥದಲ್ಲಿ ಹಿರಿಯರು ಈ ಮಾತನ್ನು ಹೇಳಿದ್ದರು. ಆದರೆ ಈ ದುಬಾರಿ ದುನಿಯಾದಲ್ಲಿ, ಬೆಲೆ ಏರಿಕೆಯ ಈ ದಿನಗಳಲ್ಲಿ ಐಷಾರಾಮಿ ಬಿಡಿ ತೀರಾ ಅಗತ್ಯ ವಸ್ತುಗಳನ್ನು ಕೊಳ್ಳಲೂ ಸಾಲ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕೆ ತಕ್ಕಂತೆ ವಿವಿಧ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಸರಳ ವಿಧಾನಗಳ ಮೂಲ ಲೋನ್‌ ನೀಡಲು ಮುಂದೆ ಬರುತ್ತಿವೆ. ನೆನಪಿಡಿ ತೀರಾ ಅನಿವಾರ್ಯವಲ್ಲದ ಹೊರತು ಸಾಲಕ್ಕೆ ಮುಂದಾಗಬೇಡಿ. ಇಂದಿನ ಮನಿಗೈಡ್‌ (Money Guide)ನಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಯಾವೆಲ್ಲ ಅಂಶಗಳನ್ನು ಗಮನಿಸಬೇಕು ಎನ್ನುವುದನ್ನು ನೋಡೋಣ.

ಅಗತ್ಯ ನೋಡಿಕೊಳ್ಳಿ

ಮೊದಲಿನಂತೆ ಈಗ ಸಾಲ ಪಡೆದುಕೊಳ್ಳಲು ಅನೇಕ ಬಾರಿ ಬ್ಯಾಂಕ್‌ ಬಾಗಿಲಿಗೆ ಓಡಾಡಬೇಕಿಲ್ಲ, ದಿನಗಟ್ಟಲೆ ಕಾಯಬೇಕಾಗಿಲ್ಲ. ಅಗತ್ಯ ಡಾಕ್ಯುಮೆಂಟ್‌ ಹಾಜರುಪಡಿಸಿ ಆನ್‌ಲೈನ್‌ನಲ್ಲೇ, ಮನೆಯಲ್ಲಿ ಕುಳಿತು ಲೋನ್‌ಗೆ ಅಪ್ಲೈ ಮಾಡಬಹುದು. ಹಾಗಂತ ಸುಲಭವಾಗಿ ದೊರೆಯುತ್ತದೆ ಎನ್ನುವ ಕಾರಣಕ್ಕ ತೀರಾ ಸಣ್ಣ ಪುಟ್ಟ ವಿಚಾರಕ್ಕೂ ಸಾಲ ಮಾಡಬೇಡಿ. ತೀರಾ ಅನಿವಾರ್ಯವಲ್ಲದೆ ಹೊರತು ಲೋನ್‌ ತೆರೆಗೆದುಕೊಳ್ಳಲೇಬೇಡಿ. ಸಾಲ ಮಾಡಬೇಕಾ ಎನ್ನುವ ಬಗ್ಗೆ ಒಂದಲ್ಲ ನೂರಾರು ಬಾರಿ ಆಲೋಚಿಸಿ. ಮನೆಯ ಇತರ ಸದಸ್ಯರು, ಸ್ನೇಹಿತರ ಜತೆ ಚರ್ಚಿಸಿ. ಬೇಕೇ ಬೇಕೆ ಎಂದಾದರೆ ಮಾತ್ರ ಸಾಲಕ್ಕೆ ಅರ್ಜಿ ಸಲ್ಲಿಸಿ. ಸಾಧ್ಯವಾದಷ್ಟು ಹಾಸಿಗೆ ಇದ್ದಷ್ಟೇ ಕಾಲು ಚಾಚು ಪಾಲಿಸಿ ಫಾಲೋ ಮಾಡಿ.

ಕಡಿಮೆ ಅವಧಿಯನ್ನು ಅಯ್ದುಕೊಳ್ಳಿ

ಸರಿ, ನೀವು ಸಾಲ ಪಡೆದುಕೊಳ್ಳಲೇ ಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದೀರಿ ಎಂದಿಟ್ಟುಕೊಳ್ಳೋಣ. ಈಗ ನೀವು ಗಮನಿಸಬೇಕಾದ ಇನ್ನೊಂದು ಮುಖ್ಯ ಅಂಶ ಎಂದರೆ ಸಾಲದ ಅವಧಿ. ಅಂದರೆ ನೀವು ಸಾಲ ತೀರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತೀರಿ ಎನ್ನುವುದು ಕೂಡ ನಿಮ್ಮ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಅಂದರೆ ಅವಧಿ ದೀರ್ಘವಾಗದ್ದಷ್ಟು ಬಡ್ಡಿ ಹೆಚ್ಚಾಗುತ್ತದೆ. ಆದ್ದರಿಂದ ಕಡಿಮೆ ಅವಧಿಯ ಸಾಲ ಮರುಪಾವತಿ ಆಯ್ಕೆಯನ್ನು ಆಯ್ದುಕೊಳ್ಳಿ. ಉದಾಹರಣೆಗೆ: ಹೋಮ್‌ ಲೋನ್‌ನ ಅವಧಿ ಗರಿಷ್ಠ 30 ವರ್ಷ ತನಕ ಇರುತ್ತದೆ. ಸಹಜವಾಗಿ ದೀರ್ಘ ಅವಧಿ ಹೊಂದಿದ್ದರೆ ಇಎಂಐ ಪಾವತಿಸಬೇಕಾದ ಮೊತ್ತವೂ ಕಡಿಮೆ ಇರುತ್ತದೆ. ಆದರೆ ನೀವು ಪಾವತಿಸಬೇಕಾದ ಬಡ್ಡಿಯ ಮೊತ್ತ ಹೆಚ್ಚಿರುತ್ತದೆ. 10 ವರ್ಷಗಳ ಸಾಲಕ್ಕೆ ನೀವು ಪಡೆದ ಮೊತ್ತದ ಜತೆಗೆ ಅದರ ಶೇ. 57ರಷ್ಟು ಬಡ್ಡಿ ಪಾವತಿಸಬೇಕು. ಇನ್ನು 20 ವರ್ಷಕ್ಕೆ ಇದೇ ಮೊತ್ತ ಶೇ. 128. ಒಂದುವೇಳೆ ನೀವು 50 ಲಕ್ಷ ರೂ. ಸಾಲವನ್ನು 25 ವರ್ಷಗಳ ಅವಧಿಗೆ ಪಡೆದುಕೊಂಡರೆ ನೀವು ಸುಮಾರು 83.5 ಲಕ್ಷ ರೂ. (ಶೇ. 167) ಪಾವತಿಸಬೇಕಾಗುತ್ತದೆ.

ಕೆಲವು ಸಂದರ್ಭದಲ್ಲಿ ಕಡಿಮೆ ಆದಾಯ ಹೊಂದಿದ್ದರೆ ದೀರ್ಘ ಅವಧಿಯ ಮರುಪಾವತಿಯನ್ನು ಆಯ್ದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದನ್ನು ಆಯ್ದುಕೊಂಡಿದ್ದರೂ ಪ್ರತಿವರ್ಷ ಸಾಲ ಮರುಪಾವತಿಸುವ ಆಯ್ಕೆಯನ್ನು ಹೆಚ್ಚಿಸಬೇಕು. ಆದಾಯ ಹೆಚ್ಚುತ್ತಿದ್ದಂತೆ ಇಎಂಐ ಮೊತ್ತವನ್ನೂ ಜಾಸ್ತಿ ಮಾಡಬೇಕು.

ನಿಯಮಿತ ಪಾವತಿ

ಇಎಂಐಯನ್ನು ನಿಯಮಿತವಾಗಿ ಪಾವತಿಸಿ. ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಬೇಡಿ. ಮರುಪಾವತಿ ಕಂತು ಸೂಕ್ತವಾಗಿ ಪಾವತಿಸದಿದ್ದರೆ ಅದು ನಿಮ್ಮ ಕ್ರೆಡಿಟ್‌ ಸ್ಕೋರ್‌ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಲ್ಲದೆ ಇದು ಭಾರೀ ದಂಡಕ್ಕೂ ಕಾರಣವಾಗಬಹುದು.

ಹೂಡಿಕೆಗಾಗಿ ಸಾಲ ಮಾಡಬೇಡಿ

ಸಾಲ ಪಡೆದ ಹಣವನ್ನು ಹೂಡಿಕೆ ಮಾಡಲು ಎಂದಿಗೂ ಬಳಸಬೇಡಿ. ಈಕ್ವಿಟಿಗಳಂತಹ ಹೆಚ್ಚಿನ ಆದಾಯವನ್ನು ನೀಡುವ ಹೂಡಿಕೆಗಳು ತುಂಬಾ ಅಸ್ಥಿರವಾಗಿರುತ್ತವೆ. ಮಾರುಕಟ್ಟೆಗಳು ಕುಸಿದರೆ, ನೀವು ನಷ್ಟವನ್ನು ಅನುಭವಿಸಬೇಕಾಗುತ್ತದೆ.

ದೊಡ್ಡ ಮೊತ್ತದ ಸಾಲಕ್ಕೆ ವಿಮೆ ಮಾಡಿಸಿ

ಹೋಮ್‌ ಲೋನ್‌ ಮತ್ತು ವೆಹಿಕಲ್‌ ಲೋನ್‌ನಂತಗ ದೊಡ್ಡ ಮೊತ್ತದ ಸಾಲ ಪಡೆಯುವಾಗ ಅಷ್ಟೂ ಮೊತ್ತಕ್ಕೆ ವಿಮೆ ಮಾಡಿಸಿ. ಇದಕ್ಕಾಗಿ ಟರ್ಮ್‌ ಇನ್ಶೂರೆನ್ಸ್‌ ಉತ್ತಮ. ಇದರಿಂದ ಒಂದು ವೇಳೆ ನಿಮಗೆ ಏನಾದರೂ ಸಂಭವಿಸಿದರೆ ಸಾಲವು ನಿಮ್ಮ ಕುಟುಂಬ ಹೊರೆ ಆಗುವುದಿಲ್ಲ. ಇಎಂಐ ಪಾವತಿಸಲು ಸಾಧ್ಯವಾಗದಿದ್ದರೆ ಬ್ಯಾಂಕ್‌ನವರು ಮನೆ ಅಥವಾ ಕಾರು ಸ್ವಾಧೀನಪಡಿಸಿಕೊಳ್ಳುತ್ತಾರೆ. ಹೀಗಾಗಿ 50 ಲಕ್ಷ ರೂ.ಗಳ ಟರ್ಮ್ ಇನ್ಶೂರೆನ್ಸ್ ಯೋಜನೆ ಮಾಡಿಸುವುದು ಉತ್ತಮ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

ಬಡ್ಡಿ ಮೊತ್ತ ಲೆಕ್ಕ ಹಾಕಿ

ಸಾಲ ಪಡೆದುಕೊಳ್ಳಲು ನಿರ್ಧರಿಸಿದ ಬಳಿಕ ಬಡ್ಡಿದರವನ್ನು ಹೋಲಿಸಿ ನೋಡಿ. ವಿವಿಧ ಬ್ಯಾಂಕ್‌, ಸಾಲದಾತ ಸಂಸ್ಥೆಗಳ ಬಡ್ಡಿದರವನ್ನು ಗಮನಿಸಿ. ಜತೆಗೆ ಪ್ರತಿಯೊಂದು ಬ್ಯಾಂಕ್‌ ಕೂಡ ತನ್ನದೇ ಆದ ನಿಯಮಗಳನ್ನು ಹೊಂದಿರುತ್ತದೆ. ಆದ್ದರಿಂದ ಷರತ್ತುಗಳನ್ನು ಗಮನವಿಟ್ಟು ಓದಿ. ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಕೇಳಿ ತಿಳಿದುಕೊಳ್ಳಿ.

ಅಗತ್ಯ ದಾಖಲೆಗಳನ್ನು ಮುಂಚಿತವಾಗಿ ಸಿದ್ಧಪಡಿಸಿ

ತ್ವರಿತ ಲೋನ್ ಮಂಜೂರಾತಿಗಾಗಿ ಮುಂಚಿತವಾಗಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವುದು ಅತ್ಯಗತ್ಯ. ಸಾಮಾನ್ಯವಾಗಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್‌, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಗುರುತಿನ ಚೀಟಿ ಮತ್ತು ಎರಡು ವರ್ಷಗಳ ಆದಾಯ ತೆರಿಗೆ ರಿಟರ್ನ್ (ಐಟಿಆರ್)ನಂತಹ ಗುರುತಿನ ಪುರಾವೆಗಳನ್ನು ಬ್ಯಾಂಕ್‌ಗಳು ಕೇಳುತ್ತವೆ. ಈ ದಾಖಲೆಗಳನ್ನು ಎಷ್ಟು ಬೇಗ ಸಲ್ಲಿಸುತ್ತೀರೋ ಅಷ್ಟು ಬೇಗ ಸಾಲ ಮಂಜೂರಾಗುತ್ತದೆ. ಜತೆಗೆ ಆದಾಯದ ಮೂಲ (ಸ್ಯಾಲರಿ ಸ್ಲಿಪ್‌ ಅಥವಾ ಬ್ಯಾಂಕ್‌ ಸ್ಟೇಟ್‌ಮೆಂಟ್‌) ಸಿದ್ಧವಾಗಿಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ಮುನ್ನ ಮತ್ತೊಮ್ಮೆ ಗಮನಿಸಿ

ಭರ್ತಿ ಮಾಡಿದ ನಿಮ್ಮ ಪರ್ಸನಲ್‌ ಲೋನ್‌ ಅಪ್ಲಿಕೇಷನ್‌ ಫಾರಂ ಅನ್ನು ಕೂಡಲೇ ಸಲ್ಲಿಸಬೇಡಿ. ಮತ್ತೊಮ್ಮೆ ವಿವರಗಳನ್ನು ಕಣ್ಣಾಡಿಸಿ ಮಾಹಿತಿ ಸರಿಯಾಗಿದೆ ಎನ್ನುವುದು ಖಚಿತಪಡಿಸಿಕೊಳ್ಳಿ. ಕೆಲವೊಂದು ಬ್ಯಾಂಕ್‌ಗಳು ಡಾಕ್ಯಮೆಂಟ್‌ ಅಪ್‌ಲೋಡ್‌ ಮಾಡಲು ಕೇಳುತ್ತವೆ. ಇದನ್ನೂ ಗಮನಿಸಿ. ಪೂರ್ಣವಾಗದ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ಇದೆ. ಹೀಗಾಗಿ ಷರತ್ತುಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ.

ಇದನ್ನೂ ಓದಿ: Money Guide: 30 ಸಾವಿರ ಸಂಬಳ ಪಡೆಯುವವರೂ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆಗಲು ಸಾಧ್ಯ!

Continue Reading

ಕರ್ನಾಟಕ

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Liquor Price Karnataka: ಈ ಹಿಂದೆ ಜನವರಿ 1ರಂದು ಕಂಪನಿಗಳು ಮದ್ಯದ ದರ ಏರಿಕೆ ಮಾಡಿದ್ದವು. ಓಲ್ಡ್‌ ಟ್ಯಾವರ್ನ್‌(ಒಟಿ), ಬ್ಲೆಂಡರ್ಸ್‌ ಪ್ರೈಡ್‌ (ಬಿಪಿ), 8 ಪಿಎಂ ಲಿಕ್ಕರ್ ದರಗಳನ್ನು 20 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಮದ್ಯದ ದರಗಳನ್ನು ಸರ್ಕಾರ ಏರಿಸಲು ಮುಂದಾಗಿದೆ. ಅದರಲ್ಲೂ ರಾಜ್ಯದ ಕೂಲಿ ಕಾರ್ಮಿಕರು, ಬಡ ವರ್ಗದ ಜನ ಅತೀ ಹೆಚ್ಚು ಸೇವಿಸುವ ಎಣ್ಣೆಗಳ ದರವೇ ಏರಿಕೆಯಾಗಲಿದೆ.

VISTARANEWS.COM


on

Liquor Price karnataka
Koo

ಬೆಂಗಳೂರು: ಜುಲೈ 1ರಿಂದ ಮದ್ಯದ ಹೊಸ ದರಗಳನ್ನು (Liquor Price Karnataka) ಜಾರಿ ಮಾಡಲು ರಾಜ್ಯದ ಸಿಎಂ ಸಿದ್ದರಾಮಯ್ಯ (CM Siddaramaiah) ಸರಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳಿಗೆ (Guarantee schemes) ಹಣ ಹೊಂಚಲು ಸಿಕ್ಕ ಸಿಕ್ಕಲ್ಲೆಲ್ಲಾ ದರ ಏರಿಕೆ (Price hike) ಮಾಡುತ್ತಿರುವ ಸರಕಾರ, ಇದೀಗ ಬಡವರ ಎಣ್ಣೆ ರೇಟ್‌ ಏರಿಸಲು ಯೋಚಿಸಿದೆ. ಅದೇ ಸಮಯಕ್ಕೆ, ಶ್ರೀಮಂತರು ಸೇವಿಸುವ ಪ್ರೀಮಿಯಂ ಬ್ರಾಂಡ್‌ಗಳ (Premium liquor) ಮದ್ಯಗಳ ಬೆಲೆ ಇಳಿಕೆಗೂ ಚಿಂತಿಸುತ್ತಿದೆ.

ಈ ಹಿಂದೆ ಜನವರಿ 1ರಂದು ಕಂಪನಿಗಳು ಮದ್ಯದ ದರ ಏರಿಕೆ ಮಾಡಿದ್ದವು. ಓಲ್ಡ್‌ ಟ್ಯಾವರ್ನ್‌(ಒಟಿ), ಬ್ಲೆಂಡರ್ಸ್‌ ಪ್ರೈಡ್‌ (ಬಿಪಿ), 8 ಪಿಎಂ ಲಿಕ್ಕರ್ ದರಗಳನ್ನು 20 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಮದ್ಯದ ದರಗಳನ್ನು ಸರ್ಕಾರ ಏರಿಸಲು ಮುಂದಾಗಿದೆ. ಅದರಲ್ಲೂ ರಾಜ್ಯದ ಕೂಲಿ ಕಾರ್ಮಿಕರು, ಬಡ ವರ್ಗದ ಜನ ಅತೀ ಹೆಚ್ಚು ಸೇವಿಸುವ ಎಣ್ಣೆಗಳ ದರವೇ ಏರಿಕೆಯಾಗಲಿದೆ.

ಹಾಲಿ ಒಟಿ ವಿಸ್ಕಿ 180 mlಗೆ 123 ರೂಪಾಯಿ ಇದೆ. ಜುಲೈ 1ರಿಂದ ಒಟಿ ಬೆಲೆ 130 ರೂಪಾಯಿ ನಿಗದಿಯಾಗಲಿದೆ. 8 ಪಿಎಂ ವಿಸ್ಕಿ 123 ರೂ. ಯಿಂದ 130ಕ್ಕೇರಿಕೆ ಸಾಧ್ಯತೆ ಇದೆ. ಚಾಯ್ಸ್ 80 ರೂಪಾಯಿ ಇದ್ದು ಜುಲೈನಿಂದ 83 ರೂಪಾಯಿ, ಹೈವರ್ಡ್ಸ್ 80 ರೂಪಾಯಿಯಿಂದ 83 ರೂಪಾಯಿ, ಬಿಪಿ ವಿಸ್ಕಿ ದರ ಹಾಲಿ 159 ರೂಪಾಯಿ ಇದ್ದು, ಜುಲೈನಿಂದ 154 ರೂಪಾಯಿ ಆಗುವ ಸಾಧ್ಯತೆ ಇದೆ.

ಇದೇ ವೇಳೆಗೆ ಬೆಲೆಬಾಳುವ ಪ್ರೀಮಿಯಂ ಮದ್ಯಗಳ ದರಗಳಲ್ಲಿ ಇಳಿಕೆಯಾಗುತ್ತಿದೆ. ಕ್ವಾರ್ಟರ್‌ಗೆ 300 ರೂಪಾಯಿ ಮೇಲಿರುವ ಬ್ರ್ಯಾಂಡ್‌ಗಳ ದರ 60ರಿಂದ 100 ರೂಪಾಯಿ ಇಳಿಕೆಯಾಗಲಿದೆ. 383 ರೂಪಾಯಿ ಬೆಲೆ ಬಾಳುವ ಮದ್ಯ 295 ರೂ.ಗೆ, 680 ರೂ. ಬೆಲೆ ಬಾಳುವ ಮದ್ಯ 595 ರೂಪಾಯಿಗೆ ಇಳಿಕೆ ಆಗುವ ಸಾಧ್ಯತೆ ಇದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಚಿನ್ನದ ದರ

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 26) ಚಿನ್ನದ ಬೆಲೆ ಇಳಿಕೆಯಾಗಿದೆ. ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿತ್ತು. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಇಂದು ಮತ್ತೆ ಇಳಿಕೆಯಾಗಿದೆ. ಹಾಗಾದರೆ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 26) ಚಿನ್ನದ ಬೆಲೆ ಇಳಿಕೆಯಾಗಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿತ್ತು. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಇಂದು ಮತ್ತೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹ 23 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,600 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,200 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,800. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,000 ಮತ್ತು ₹ 6,60,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,600 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,000 ಮತ್ತು ₹ 7,20,000 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,615 ₹ 7,215
ಮುಂಬೈ₹ 6,600 ₹ 7,200
ಬೆಂಗಳೂರು₹ 6,600₹ 7,200
ಚೆನ್ನೈ₹ 6,660 ₹ 7,266

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.95 ಹಾಗೂ 8 ಗ್ರಾಂಗೆ ₹ 727.60 ಇದೆ. 10 ಗ್ರಾಂಗೆ ₹ 909.50 ಹಾಗೂ 1 ಕಿಲೋಗ್ರಾಂಗೆ ₹ 90,950 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Nita Ambani: ಕಾಶಿಯಲ್ಲಿ ಮದುವೆ ಆಮಂತ್ರಣ ಪೂಜೆ; ಚಾಟ್‌ ಅಂಗಡಿಗೂ ಭೇಟಿ ನೀಡಿದ ನೀತಾ ಅಂಬಾನಿ

Continue Reading

ಬೆಂಗಳೂರು

Tata Motors: ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಮಾಡಿಕೊಂಡ ಟಾಟಾ ಮೋಟಾರ್ಸ್

Tata Motors: ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ.

VISTARANEWS.COM


on

Tata Motors has partnered with Bajaj Finance
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ (Tata Motors) ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ ಮತ್ತು ಗ್ರಾಹಕರು ಕಂಪನಿಯ ವಿಸ್ತಾರವಾದ ವ್ಯಾಪ್ತಿ, ಸ್ಪರ್ಧಾತ್ಮಕ ಬಡ್ಡಿ ದರಗಳು, ಫ್ಲೆಕ್ಸಿ ಲೋನ್ ಮತ್ತು ಡಿಜಿಟಲ್ ಆಧರಿತ ಸಾಲ ಪ್ರಕ್ರಿಯೆಗಳ ಪ್ರಯೋಜನಗಳನ್ನು ಪಡೆಯುತ್ತಾರೆ.

ಈ ಕುರಿತು ಟಾಟಾ ಮೋಟಾರ್ಸ್ ಕಮರ್ಷಿಯಲ್ ವೆಹಿಕಲ್ಸ್ ಟ್ರಕ್ಸ್ ವೈಸ್ ಪ್ರೆಸಿಡೆಂಟ್ ಮತ್ತು ಬಿಸಿನೆಸ್ ಹೆಡ್ ರಾಜೇಶ್ ಕೌಲ್ ಮಾತನಾಡಿ, ಗ್ರಾಹಕರ ಸಂತೋಷಕ್ಕಾಗಿ ಉನ್ನತ ದರ್ಜೆಯ ಉತ್ಪನ್ನಗಳನ್ನು ಒದಗಿಸುವ ನಮ್ಮ ದೃಷ್ಟಿಯನ್ನು ಹೊಂದಿರುವ ಕಂಪನಿಯಾದ ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಹೊಂದಲು ನಾವು ಸಂತೋಷ ಪಡುತ್ತೇವೆ. ವಾಣಿಜ್ಯ ವಾಹನಗಳ ಫೈನಾನ್ಸಿಂಗ್‌ ಕ್ಷೇತ್ರದ ಅವರ ಈ ಆರಂಭಿಕ ಹೆಜ್ಜೆಯು ಸಾರಿಗೆ ವಲಯದ ಅಗಾಧ ಸಾಮ್ರಾಜ್ಯವನ್ನು ಅವರದನ್ನಾಗಿ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ನಾವಂದು ಕೊಂಡಿದ್ದೇವೆ.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಜತೆಗೆ ಈ ಪಾಲುದಾರಿಕೆಯು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಜಾಜ್ ಫೈನಾನ್ಸ್‌ನ ದೊಡ್ಡ ನೆಟ್‌ವರ್ಕ್‌ನ ಪ್ರಯೋಜನವನ್ನು ನೀಡುತ್ತದೆ. ಗ್ರಾಹಕರು ಅವಶ್ಯಕತೆಗಳಿಗೆ ಅನುಗುಣವಾಗಿ ಹಣಕಾಸು ಪರಿಹಾರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ನಮ್ಮ ಮೌಲ್ಯಯುತ ಗ್ರಾಹಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬಜಾಜ್ ಫೈನಾನ್ಸ್‌ನ ಉಪ ವ್ಯವಸ್ಥಾಪಕ ನಿರ್ದೇಶಕ ಅನುಪ್ ಸಹಾ ಮಾತನಾಡಿ, ಬಜಾಜ್ ಫೈನಾನ್ಸ್‌ನಲ್ಲಿನ ನಮ್ಮ ವ್ಯವಹಾರದ ನೀತಿಯಲ್ಲಿ ಗ್ರಾಹಕರ ಕೇಂದ್ರಿತತೆ ಬೇರೂರಿದೆ. ನಾವು ಗ್ರಾಹಕರಿಗೆ ಅನುಕೂಲಕರ ಹಣಕಾಸು ಪರಿಹಾರಗಳನ್ನು ಒದಗಿಸುತ್ತೇವೆ. ಆ ಮೂಲಕ ಅವರು ಮಾಲೀಕತ್ವದ ಸಂತೋಷಕರ ಅನುಭವವನ್ನು ಹೊಂದುತ್ತಾರೆ. ಟಾಟಾ ಮೋಟಾರ್ಸ್ ಜತೆಗಿನ ನಮ್ಮ ಪಾಲುದಾರಿಕೆಯು ಈ ಬದ್ಧತೆಗೆ ಪುರಾವೆಯಾಗಿದೆ. ಇಂಡಿಯಾ ಸ್ಟಾಕ್ ಅನ್ನು ಬಳಸಿಕೊಂಡು ನಮ್ಮ ಅತ್ಯುತ್ತಮ- ದರ್ಜೆಯ ವ್ಯವಸ್ಥೆಯ ಮೂಲಕ ಗ್ರಾಹಕರಿಗೆ ವಾಣಿಜ್ಯ ವಾಹನವನ್ನು ಖರೀದಿಸುವ ಪ್ರಕ್ರಿಯೆಯನ್ನು ಸುಲಭ ಮತ್ತು ತೊಂದರೆ- ಮುಕ್ತಗೊಳಿಸುವ ಗುರಿಯನ್ನು ಹೊಂದಿದ್ದೇವೆ. ಪಾಲುದಾರಿಕೆಯು ಹೆಚ್ಚಿನ ವಾಣಿಜ್ಯ ವಾಹನ ಮಾಲೀಕರಿಗೆ ಹಣಕಾಸು ಪರಿಹಾರಗಳನ್ನು ಒದಗಿಸಿ ಸಶಕ್ತಗೊಳಿಸುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಹೇಳಿದರು.

ಟಾಟಾ ಮೋಟಾರ್ಸ್ 1-ಟನ್‌ನಿಂದ 55-ಟನ್ ತೂಕದ ಸರಕು ವಾಹನಗಳು ಮತ್ತು 10-ಆಸನಗಳಿಂದ 51-ಆಸನಗಳ ಸಮೂಹ ಚಲನಶೀಲತೆ ಪರಿಹಾರಗಳು ಅಂದರೆ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳನ್ನು ಒದಗಿಸುತ್ತದೆ. ಸಣ್ಣ ವಾಣಿಜ್ಯ ವಾಹನಗಳು ಮತ್ತು ಪಿಕಪ್‌ಗಳು, ಟ್ರಕ್‌ಗಳು ಮತ್ತು ಬಸ್‌ಗಳನ್ನು ಒದಗಿಸುವ ಮೂಲಕ ಸರಕು ಸಾಗಣೆ ಮತ್ತು ಪ್ರಯಾಣಿಕರ ಪ್ರಯಾಣ ವಿಭಾಗದ ಅಗತ್ಯತೆಗಳನ್ನು ಪೂರೈಸುತ್ತದೆ. ಕಂಪನಿಯು ತನ್ನ 2500+ ಟಚ್‌ಪಾಯಿಂಟ್‌ಗಳ ವ್ಯಾಪಕ ನೆಟ್‌ವರ್ಕ್ ಮೂಲಕ ಅತ್ಯುತ್ತಮ ಗುಣಮಟ್ಟ ಮತ್ತು ಸರ್ವೀಸ್ ಅನ್ನು ಒದಗಿಸುತ್ತದೆ. ಈ ಟಚ್ ಪಾಯಿಂಟ್‌ಗಳು ತರಬೇತಿ ಪಡೆದ ಪರಿಣಿತರಿಂದ ನಿರ್ವಹಿಸಲ್ಪಡುತ್ತದೆ ಮತ್ತು ಅಲ್ಲಿ ಟಾಟಾದ ಅಸಲಿ ಭಾಗಗಳು ಲಭ್ಯವಾಗುತ್ತವೆ.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಬಜಾಜ್ ಫೈನಾನ್ಸ್ ಭಾರತದಲ್ಲಿನ ಅತ್ಯಂತ ವೈವಿಧ್ಯಮಯ ಎನ್‌ಬಿಎಫ್‌ಸಿಗಳಲ್ಲಿ ಒಂದಾಗಿದೆ. ಇದು ಸಾಲ, ಠೇವಣಿ (ಡಿಪಾಸಿಟ್) ಮತ್ತು ಪಾವತಿ ವಿಭಾಗಗಳಲ್ಲಿ 83.64 ಮಿಲಿಯನ್ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಮಾರ್ಚ್ 31, 2024ರ ಪ್ರಕಾರ ಕಂಪನಿಯ ಅಸೆಟ್ ಅಂಡರ್ ಮ್ಯಾನೇಜ್ಮೆಂಟ್ (ಎಯುಎಂ) ₹3,30,615 ಕೋಟಿಗಳಷ್ಟಿದೆ.

Continue Reading
Advertisement
Money Guide
ಮನಿ-ಗೈಡ್11 mins ago

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Prajwal revanna Case
ಕರ್ನಾಟಕ22 mins ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್27 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

ಕ್ರೀಡೆ29 mins ago

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

ಕಿರುತೆರೆ55 mins ago

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Renuka Swamy Murder
ಕರ್ನಾಟಕ1 hour ago

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

IND vs ENG Semi Final
ಕ್ರೀಡೆ1 hour ago

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

Lok Sabha Speaker
ದೇಶ1 hour ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು1 hour ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ1 hour ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌