Share Market Crash: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ನಷ್ಟ - Vistara News

ವಾಣಿಜ್ಯ

Share Market Crash: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ನಷ್ಟ

Share Market Crash: ಬಿಎಸ್‌ಇನಲ್ಲಿ ಸುಮಾರು 208 ಸ್ಟಾಕ್‌ಗಳು ಕಳೆದ 52 ವಾರಗಳಲ್ಲಿಯೇ ಅತಿ ಹೆಚ್ಚು ನಷ್ಟ ಅನುಭವಿಸಿದವು. ಇದರಲ್ಲಿ ಕೇವಲ 21 ಸ್ಟಾಕ್‌ಗಳು ಮಾತ್ರ 52 ವಾರಗಳಲ್ಲಿಯೇ ಗರಿಷ್ಠ ಲಾಭ ಗಳಿಸಿದವು. ಆಟೋಮೊಬೈಲ್‌, ದುಬಾರಿ ಸರಕು, ಮೆಟಲ್‌, ತೈಲ ಹಾಗೂ ಗ್ಯಾಸ್‌ ಷೇರುಗಳು ಗಣನೀಯವಾಗಿ ಕುಸಿತ ಕಂಡವು. ಸೆನ್ಸೆಕ್ಸ್‌ನಲ್ಲಿ ಮಾರುತಿ ಸುಜುಕಿ ಮಾತ್ರ ಶೇ.2ರಷ್ಟು ಲಾಭ ಗಳಿಸಿತು. ಬಹುತೇಕ ಹೂಡಿಕೆದಾರರು ನಷ್ಟವನ್ನೇ ಅನುಭವಿಸಿದರು.

VISTARANEWS.COM


on

Stock Market
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಷೇರುಪೇಟೆಯಲ್ಲಿ ನಿಫ್ಟಿ ಹಾಗೂ ಸೆನ್ಸೆಕ್ಸ್‌ ಸತತ ಏರಿಕೆ ಮೂಲಕ ಭಾರಿ ಪ್ರಮಾಣದಲ್ಲಿ ಲಾಭ ಕಂಡಿದ್ದ ಹೂಡಿಕೆದಾರರಿಗೆ ಬುಧವಾರ (ಜುಲೈ 10) ಭಾರಿ ಪ್ರಮಾಣದಲ್ಲಿ ನಷ್ಟವುಂಟಾಗಿದೆ. ಸೆನ್ಸೆಕ್ಸ್‌ (Sensex) ಹಾಗೂ ನಿಫ್ಟಿ (Nifty) ಕುಸಿತ ಕಂಡ ಕಾರಣ ಒಂದೇ ದಿನದಲ್ಲಿ ಹೂಡಿಕೆದಾರರಿಗೆ ಸುಮಾರು 7.38 ಲಕ್ಷ ಕೋಟಿ ರೂ. (Share Market Crash) ನಷ್ಟವಾಗಿದೆ. ಸೆನ್ಸೆಕ್‌ 900 ಪಾಯಿಂಟ್‌ಗಳ ಕುಸಿತದೊಂದಿಗೆ 79,446 ಅಂಕಗಳಿಗೆ ವಹಿವಾಟು ಮುಗಿಸಿತು. ಇನ್ನು ನಿಫ್ಟಿ ಕೂಡ 259 ಪಾಯಿಂಟ್‌ಗಳ ಕುಸಿತದೊಂದಿಗೆ 24,173 ಪಾಯಿಂಟ್‌ಗಳಿಗೆ ವಹಿವಾಟು ಅಂತ್ಯಗೊಂಡಿತು. ಇದರಿಂದ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ನಷ್ಟ ಅನುಭವಿಸಿದರು.

ಬಿಎಸ್‌ಇನಲ್ಲಿ ಸುಮಾರು 208 ಸ್ಟಾಕ್‌ಗಳು ಕಳೆದ 52 ವಾರಗಳಲ್ಲಿಯೇ ಅತಿ ಹೆಚ್ಚು ನಷ್ಟ ಅನುಭವಿಸಿದವು. ಇದರಲ್ಲಿ ಕೇವಲ 21 ಸ್ಟಾಕ್‌ಗಳು ಮಾತ್ರ 52 ವಾರಗಳಲ್ಲಿಯೇ ಗರಿಷ್ಠ ಲಾಭ ಗಳಿಸಿದವು. ಆಟೋಮೊಬೈಲ್‌, ದುಬಾರಿ ಸರಕು, ಮೆಟಲ್‌, ತೈಲ ಹಾಗೂ ಗ್ಯಾಸ್‌ ಷೇರುಗಳು ಗಣನೀಯವಾಗಿ ಕುಸಿತ ಕಂಡವು. ಇದರಿಂದಾಗಿ ಹೂಡಿಕೆದಾರರಿಗೆ ಹಣ ನಷ್ಟವಾಯಿತು. ಷೇರುಪೇಟೆಯಲ್ಲಿ ಹೂಡಿಕೆದಾರರ ನಂಬಿಕೆಯು ನಲುಗಿದ ಕಾರಣ ಹೆಚ್ಚಿನ ಹೂಡಿಕೆದಾರರು ನಷ್ಟ ಅನುಭವಿಸಬೇಕಾಯಿತು ಎಂಬುದಾಗಿ ಮೂಲಗಳು ತಿಳಿಸಿವೆ.

Share Market
Share Market

ಬಿಎಸ್‌ಇ ಮಿಡ್‌ಕ್ಯಾಪ್‌ ಇಂಡೆಕ್ಸ್‌ ಕೂಡ 678 ಅಂಕಗಳನ್ನು ಕುಸಿತ ಕಂಡುಉ, 46,861 ಪಾಯಿಂಟ್‌ಗಳೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿತು. ಸ್ಮಾಲ್‌ ಕ್ಯಾಪ್‌ ಸ್ಟಾಕ್‌ಗಳ ಸೂಚ್ಯಂಕದಲ್ಲೂ 909 ಪಾಯಿಂಟ್‌ಗಳ ಕುಸಿತವಾಗಿ, 53,245 ಪಾಯಿಂಟ್‌ಗಳಿಗೆ ದಿನದ ವಹಿವಾಟು ಅಂತ್ಯವಾಯಿತು. ಸೆನ್ಸೆಕ್ಸ್‌ನಲ್ಲಿ ಮಾರುತಿ ಸುಜುಕಿ ಮಾತ್ರ ಶೇ.2ರಷ್ಟು ಲಾಭ ಗಳಿಸಿತು.

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ನಂಬಿಕೆ ನಲುಗಿದ ಕಾರಣ ಷೇರುಪೇಟೆ ಕುಸಿದಿದೆ. ಇದರಿಂದಾಗಿ ಹೂಡಿಕೆದಾರರು ಹೂಡಿಕೆ ಮಾಡುವ ಎಚ್ಚರದಿಂದ ಇರಬೇಕು. ಸ್ಮಾಲ್‌ ಕ್ಯಾಪ್‌ ಹೂಡಿಕೆದಾರರು ಇನ್ನೂ ಎಚ್ಚರದಿಂದ ಇರಬೇಕು. ಕಡಿಮೆ ಬೆಲೆಗೆ ಷೇರುಗಳನ್ನು ಆಫರ್‌ ಮಾಡಲಾಗುತ್ತಿರುವ ಕುರಿತು ಶಂಕೆಗಳು ವ್ಯಕ್ತವಾಗಿವೆ. ಇವುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ ಪಡೆಯಬೇಕು” ಎಂಬುದಾಗಿ ಷೇರುಪೇಟೆ ತಜ್ಞರು ಎಚ್ಚರಿಸಿದ್ದಾರೆ.

ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತ ಏರಿಕೆ?

ಸದ್ಯ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಲ್ಲೂ 50 ಸಾವಿರ ರೂ. ಸ್ಟಾಂಡರ್ಡ್‌ ಡಿಡಕ್ಷನ್‌ ಇದೆ. ಇದನ್ನು, 70 ಸಾವಿರ ರೂ.ಗೆ ಏರಿಕೆ ಮಾಡಿದರೆ, ಸಂಬಳದಾರರು ಹೆಚ್ಚಿನ ತೆರಿಗೆ ಹಣವನ್ನು ಉಳಿತಾಯ ಮಾಡಬಹುದಾಗಿದೆ. ಹಣದುಬ್ಬರ ಏರಿಕೆ ಸೇರಿ ಹಲವು ಕಾರಣಗಳಿಂದಾಗಿ ಸ್ಟಾಂಡರ್ಡ್‌ ಡಿಡಕ್ಷನ್‌ ಅಥವಾ ತೆರಿಗೆ ವಿನಾಯಿತಿ ಮೊತ್ತವನ್ನು ಏರಿಕೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಹಾಗಾಗಿ, ಮೊತ್ತವನ್ನು 70 ಸಾವಿರ ರೂ.ಗೆ ಏರಿಕೆ ಮಾಡಲು ನಿರ್ಮಲಾ ಸೀತಾರಾಮನ್‌ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಟಾಂಡರ್ಡ್‌ ಡಿಡಕ್ಷನ್‌ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ.

ಇದನ್ನೂ ಓದಿ: Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Bengaluru Airport : ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ 2 ದಶಲಕ್ಷ ಚದರ ಅಡಿ ಪ್ರದೇಶದ ಬಿಸಿನೆಸ್ ಪಾರ್ಕ್ ತೆರೆಯಲು ಮೊದಲ ಹೆಜ್ಜೆ ಇಟ್ಟಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗ ಸಂಸ್ಥೆಯಾದ (Bengaluru Airport) ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

Construction of Business Park of Bangalore Airport City Limited a subsidiary of Bangalore International Airport Limited
Construction of Business Park of Bangalore Airport City Limited a subsidiary of Bangalore International Airport Limited

ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹ ಕೊಡಲಿದೆ.

ಇದನ್ನೂ ಓದಿ: Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌ ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

Continue Reading

ಹೊಸ ಸುದ್ದಿ

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Jio Cloud PC : ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ ಎಂಬುದು ತಂತ್ರಜ್ಞಾನವಾಗಿದ್ದು, ಯಾವುದೇ ಟಿವಿಯು ಇಂಟರ್ ನೆಟ್ ಮೂಲಕ ಕ್ಲೌಡ್ ಕಂಪ್ಯೂಟಿಂಗ್‌ಗೆ ಸಂಪರ್ಕಿಸಲು ಸಾಧ್ಯವಾಗುತ್ತದೆ.

VISTARANEWS.COM


on

By

Jio Cloud PC to turn home TV into computer
Koo

ನವದೆಹಲಿ : ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ (Jio Cloud PC) ಹೆಸರಿನ ಈ ತಂತ್ರಜ್ಞಾನವು ಕೇವಲ ನೂರು ರೂಪಾಯಿಗಳಿಗೆ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸುತ್ತದೆ. ಇದಕ್ಕೆ ಬೇಕಾಗಿರುವುದು ಇಂಟರ್ ನೆಟ್ ಸಂಪರ್ಕ, ಸ್ಮಾರ್ಟ್ ಟಿವಿ, ಟೈಪಿಂಗ್ ಕೀಬೋರ್ಡ್, ಮೌಸ್ ಮತ್ತು ಜಿಯೋ ಕ್ಲೌಡ್ ಪಿಸಿ ಅಪ್ಲಿಕೇಷನ್. ಟಿವಿಗಳು ಸ್ಮಾರ್ಟ್ ಅಲ್ಲದಿದ್ದಲ್ಲಿ ಸಾಮಾನ್ಯ ಟಿವಿಗಳು ಸಹ ಜಿಯೋಫೈಬರ್ (JioFiber) ಅಥವಾ ಜಿಯೋಏರ್ ಫೈಬರ್ (JioAirFiber) ಜತೆಗೆ ಬರುವ ಸೆಟ್-ಟಾಪ್ ಬಾಕ್ಸ್ ಮೂಲಕ ಕಂಪ್ಯೂಟರ್ ಆಗಬಹುದು.

ಜಿಯೋ ಕ್ಲೌಡ್ ಪಿಸಿ ಎಂಬುದು ತಂತ್ರಜ್ಞಾನವಾಗಿದ್ದು, ಯಾವುದೇ ಟಿವಿಯು ಇಂಟರ್ ನೆಟ್ ಮೂಲಕ ಕ್ಲೌಡ್ ಕಂಪ್ಯೂಟಿಂಗ್‌ಗೆ ಸಂಪರ್ಕಿಸಲು ಸಾಧ್ಯವಾಗುತ್ತದೆ. ಇದು ಬಳಸುವುದಕ್ಕೆ ಸಹ ಸುಲಭ. ಆದರೆ ಗ್ರಾಹಕರು ಅಪ್ಲಿಕೇಷನ್‌ಗೆ ಲಾಗಿನ್ ಮಾಡಬೇಕಾಗುತ್ತದೆ ಮತ್ತು ಕ್ಲೌಡ್‌ನಲ್ಲಿ ಸಂಗ್ರಹವಾಗಿರುವ ಎಲ್ಲ ಡೇಟಾ ಟಿವಿಯಲ್ಲಿ ಕಾಣಿಸುತ್ತದೆ. ಇಮೇಲ್, ಸಂದೇಶ ಕಳುಹಿಸುವುದು, ಸಾಮಾಜಿಕ ನೆಟ್‌ವರ್ಕಿಂಗ್, ಇಂಟರ್ ನೆಟ್ ಸರ್ಫಿಂಗ್, ಶಾಲಾ ಪ್ರಾಜೆಕ್ಟ್ ಗಳು, ಕಚೇರಿ ಪ್ರಸೆಂಟೇಷನ್ ಮುಂತಾದ ಕಂಪ್ಯೂಟರ್‌ನಲ್ಲಿ ಮಾಡಬಹುದಾದ ಎಲ್ಲ ಕೆಲಸಗಳನ್ನು ಮನೆಯ ಟಿವಿಯಲ್ಲಿ ಮಾಡಬಹುದು. ಸರಳವಾಗಿ ಹೇಳುವುದಾದರೆ, ಎಲ್ಲ ಡೇಟಾವು ಕ್ಲೌಡ್‌ನಲ್ಲಿರುತ್ತದೆ ಮತ್ತು ಸರ್ವರ್, ಸ್ಟೋರೇಜ್, ಡೇಟಾಬೇಸ್, ನೆಟ್‌ವರ್ಕಿಂಗ್, ಸಾಫ್ಟ್‌ವೇರ್ ಮತ್ತು ಅನಲಿಟಿಕ್ಸ್ ಥರದ ಸೇವೆಗಳನ್ನು ಟಿವಿ ಮೂಲಕ ಬಳಕೆ ಮಾಡಬಹುದು.

 Jio Cloud PC to turn home TV into computer
Jio Cloud PC to turn home TV into computer

ಭಾರತೀಯ ಮಧ್ಯಮ ವರ್ಗದ ಕುಟುಂಬಗಳು ಹೆಚ್ಚಿನ ಪ್ರಮಾಣದಲ್ಲಿ ಕಂಪ್ಯೂಟರ್‌ಗೆ ಸಂಪರ್ಕ ಹೊಂದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ತಂತ್ರಜ್ಞಾನ ವರದಾನವಿದ್ದಂತೆ. ಏಕೆಂದರೆ ಕ್ಲೌಡ್ ಕಂಪ್ಯೂಟಿಂಗ್ ಸಾಮರ್ಥ್ಯವನ್ನು ಅಗತ್ಯಕ್ಕೆ ತಕ್ಕಂತೆ ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು. ಇದು ಸುರಕ್ಷಿತ ಮಾತ್ರವಲ್ಲ, ಡೇಟಾ ಮರುಪಡೆಯುವಿಕೆ ಸಹ ಸಾಮಾನ್ಯ ಕಂಪ್ಯೂಟರ್ ಅನ್ನು ಬಳಸುವುದಕ್ಕಿಂತ ಸುಲಭವಾಗಿದೆ. ಟಿವಿ ಜೊತೆಗೆ ಮೊಬೈಲ್ ನಲ್ಲೂ ಬಳಸಬಹುದು. ಕಂಪನಿಯು ಈ ಅಪ್ಲಿಕೇಷನ್‌ ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸದಿದ್ದರೂ ಮುಂದಿನ ಕೆಲವು ತಿಂಗಳಲ್ಲಿ ಇದನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಬಹುದು.

ಭಾರತದ ಡೇಟಾವು ಭಾರತೀಯ ಡೇಟಾ ಕೇಂದ್ರಗಳಲ್ಲಿಯೇ ಇರಬೇಕು: ಆಕಾಶ್ ಅಂಬಾನಿ

ಭಾರತದ ಡೇಟಾವನ್ನು ಭಾರತೀಯ ಡೇಟಾ ಕೇಂದ್ರಗಳಲ್ಲಿಯೇ ಇರಿಸಬೇಕು ಎಂದು ರಿಲಯನ್ಸ್ ಜಿಯೋದ ಅಧ್ಯಕ್ಷರಾದ ಆಕಾಶ್ ಅಂಬಾನಿ ಅವರು ಪ್ರತಿಪಾದನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್- 2024ರಲ್ಲಿ ಭಾಗವಹಿಸಿದ್ದ ಅವರು ಈ ಅಭಿಪ್ರಾಯ ಪಟ್ಟರು. ಭಾರತದಲ್ಲಿ ಡೇಟಾ ಉತ್ಪಾದನೆ ಪ್ರಮಾಣ ಹಾಗೂ ವೇಗ ಎರಡೂ ತೀವ್ರವಾಗಿ ಹೆಚ್ಚಾಗಿದೆ. ಇನ್ನು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನೊಂದಿಗೆ (ಕೃತಕ ಬುದ್ಧಿಮತ್ತೆ) ಇದು ಇನ್ನಷ್ಟು ವೇಗವನ್ನು ಪಡೆದುಕೊಳ್ಳುತ್ತದೆ. ಈ ಕಾರಣದಿಂದ ದೇಶದಲ್ಲಿಯೇ ಎಐ ಹಾಗೂ ಮಶೀನ್ ಲರ್ನಿಂಗ್ ಡೇಟಾ ಸೆಂಟರ್ ಗಳನ್ನು ಸ್ಥಾಪಿಸುವ ಅಗತ್ಯವಿದೆ. ಇದಕ್ಕಾಗಿ ಭಾರತೀಯ ಕಂಪನಿಗಳಿಗೆ ಸರ್ಕಾರದಿಂದ ಪ್ರೋತ್ಸಾಹ ಸಿಗಬೇಕು. ದತ್ತಾಂಶ ಕೇಂದ್ರ ನೀತಿ- 2020ರ ಕರಡನ್ನು ಶೀಘ್ರದಲ್ಲಿಯೇ ನವೀಕರಿಸಬೇಕು ಎಂದು ಅವರು ಸರ್ಕಾರನ್ನು ಮನವಿ ಮಾಡಿದರು.

ಆಕಾಶ್ ಅಂಬಾನಿ ಅವರು ಮಾತು ಮುಂದುವರಿಸಿ, “ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಕೃತಕ ಬುದ್ಧಿಮತ್ತೆ (AI) ಅತ್ಯಂತ ಮುಖ್ಯವಾಗಿದೆ. ಮತ್ತು ಕೃತಕ ಬುದ್ಧಿಮತ್ತೆಯ ಪ್ರಯೋಜನಗಳನ್ನು ಪ್ರತಿ ಭಾರತೀಯರಿಗೂ ತಲುಪಿಸಲು ಜಿಯೋ ಪ್ರಯತ್ನಗಳನ್ನು ಆರಂಭಿಸಿದೆ. ನಾವು ಮೊಬೈಲ್ ಬ್ರಾಡ್‌ಬ್ಯಾಂಡ್‌ನೊಂದಿಗೆ ಮಾಡಿದಂತೆಯೇ ಕೈಗೆಟುಕುವ ಬೆಲೆಯಲ್ಲಿ ಶಕ್ತಿಯುತವಾದ ಎಐ ಮಾದರಿಗಳು ಮತ್ತು ಸೇವೆಗಳನ್ನು ತಲುಪಿಸಲು ಬದ್ಧರಾಗಿದ್ದೇವೆ. ಇದಕ್ಕಾಗಿ, ನಾವು ರಾಷ್ಟ್ರೀಯ ಎಐ ಮೂಲಸೌಕರ್ಯದ ಆಧಾರ ಸಿದ್ಧಪಡಿಸುತ್ತಿದ್ದೇವೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವವನ್ನು ಶ್ಲಾಘಿಸಿದ ಆಕಾಶ್ ಅಂಬಾನಿ, “ಇಂದು ಭಾರತೀಯ ಮೊಬೈಲ್ ಕಂಪನಿಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯಿಂದಾಗಿ ಭಾರತವು ಅಭಿವೃದ್ಧಿ ಹೊಂದಿದ ದೇಶಗಳು ಸೇರಿದಂತೆ ಜಗತ್ತಿಗೆ ಎಐ ಸಲ್ಯೂಷನ್ ಗಳನ್ನು ಒದಗಿಸಬಹುದು. ಸರ್ಕಾರವು ಉದ್ಯಮ ಮತ್ತು ನಾವೀನ್ಯತೆಗೆ ಹೆಚ್ಚು ಪ್ರೋತ್ಸಾಹ- ಉತ್ತೇಜನ ನೀಡುವುದರಿಂದ ಭಾರತದಲ್ಲಿ ಅತಿದೊಡ್ಡ ಡಿಜಿಟಲ್ ಕ್ರಾಂತಿ ಸಂಭವಿಸಿದೆ. ನವ ಭಾರತದಲ್ಲಿ ಈಗ ವ್ಯಾಪಾರ ಸಂಪೂರ್ಣ ಬದಲಾಗಿದೆ. 145 ಕೋಟಿ ಭಾರತೀಯರ ಅಗತ್ಯಗಳು ಮತ್ತು ನಿರೀಕ್ಷೆಗಳನ್ನು ಪೂರೈಸಲು ಸರ್ಕಾರ ಮತ್ತು ಉದ್ಯಮವು ಉತ್ತಮ ಬಾಂಧವ್ಯದಲ್ಲಿ ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.

ಭಾರತವು ಮೊಬೈಲ್ ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುತ್ತದೆ. ಆದರೆ ನಾವು ಸಂಪರ್ಕಿತ (ಕನೆಕ್ಟೆಡ್), ಬುದ್ಧಿವಂತ (ಇಂಟೆಲಿಜೆಂಟ್) ಭವಿಷ್ಯಕ್ಕಾಗಿ ಎಐ ಶಕ್ತಿಯನ್ನು ಬಳಸಿಕೊಳ್ಳುತ್ತೇವೆ. ಕಂಪ್ಯೂಟರ್ ಮತ್ತು ಇಂಟರ್‌ನೆಟ್ ಅಳವಡಿಕೆ ಸಮಯದಲ್ಲಿ ಆದಂತೆಯೇ ಇದರಿಂದಲೂ ಉದ್ಯೋಗವೂ ಹೆಚ್ಚಾಗುತ್ತವೆ ಎಂದು ಅವರು ಅಭಿಪ್ರಾಯ ಪಟ್ಟರು.

ಜುಲೈ- ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭ 16,563 ಕೋಟಿ ರೂಪಾಯಿ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನಿಂದ ಸೋಮವಾರ (ಅಕ್ಟೋಬರ್ 14) ಜುಲೈನಿಂದ ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದ ಹಣಕಾಸು ಫಲಿತಾಂಶವನ್ನು ಘೋಷಣೆ ಮಾಡಿದೆ. ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ಬಾರಿ ನಿವ್ವಳ ಲಾಭವು ಶೇಕಡಾ 9.4ರಷ್ಟು ಏರಿಕೆಯಾಗಿ 16,563 ಕೋಟಿ ರೂಪಾಯಿ ತಲುಪಿದೆ. ಭಾರತದ ಅತ್ಯಂತ ಮೌಲ್ಯಯುತ ಕಂಪನಿ ಎನಿಸಿಕೊಂಡಿರುವ ರಿಲಯನ್ಸ್ ಇಂಡಸ್ಟ್ರೀಸ್, ಪ್ರಸಕ್ತ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ಮೂಲಕ ಗಳಿಸಿರುವ ಆದಾಯವು 2.35 ಲಕ್ಷ ಕೋಟಿಗಳಾಗಿದ್ದು, ಕಳೆದ ತ್ರೈಮಾಸಿಕದಲ್ಲಿ ಆದಾಯವು 2.36 ಲಕ್ಷ ಕೋಟಿ ರೂಪಾಯಿಗಳಿತ್ತು.

ಜಿಯೋ ಪ್ಲಾಟ್ ಫಾರ್ಮ್

ರಿಲಯನ್ಸ್ ಕಂಪನಿಯ ಡಿಜಿಟಲ್ ಸೇವೆ ವ್ಯವಹಾರದ ಅಂಗವಾದ ಜಿಯೋ ಪ್ಲಾಟ್ ಫಾರ್ಮ್ಸ್ ಜುಲೈನಿಂದ ಸೆಪ್ಟೆಂಬರ್ ಕೊನೆ ತನಕದ ತ್ರೈಮಾಸಿಕದಲ್ಲಿ ದಾಖಲೆಯ 6,536 ಕೋಟಿ ರೂಪಾಯಿ ಲಾಭ ಗಳಿಸಿದೆ. ವರ್ಷದಿಂದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ 23.2ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಜಿಯೋ 5,058 ಕೋಟಿ ರೂಪಾಯಿ ವರದಿ ಮಾಡಿತ್ತು. ಕಂಪನಿಯ ಆದಾಯವು ವರ್ಷದಿಂದ ವರ್ಷಕ್ಕೆ ಶೇ 14.5ರಷ್ಟು ಏಇಕೆ ಕಂಡು, 28,338 ಕೋಟಿ ರೂಪಾಯಿ ತಲುಪಿದೆ. “ಡಿಜಿಟಲ್ ಸೇವೆಯಲ್ಲಿನ ಬೆಳವಣಿಗೆಗೆ ಮುಖ್ಯ ಕಾರಣ ನೋಡುವುದಾದರೆ ಪ್ರತಿ ಬಳಕೆದಾರರಿಂದ ಬರುವ ಸರಾಸರಿ ಆದಾಯದಲ್ಲಿನ ಹೆಚ್ಚಳ ಹಾಗೂ ಗ್ರಾಹಕರು ತೊಡಗಿಕೊಳ್ಳುವ ಪ್ರಮಾಣದಲ್ಲಿನ ಸುಧಾರಣೆಯಿಂದ ನಮ್ಮ ಸೇವೆಗಳಲ್ಲಿ ಪ್ರಬಲವಾದ ಮೌಲ್ಯ ಸೇರ್ಪಡೆಯಾಗಿದೆ,” ಎಂದು ಕಂಪನಿಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದ್ದಾರೆ.

ಜಿಯೋದ ತಿಂಗಳ ಎಆರ್ ಪಿಯು (ಪ್ರತಿ ಬಳಕೆದಾರರಿಂದ ಬರುವಂಥ ಸರಾಸರಿ ಆದಾಯ) ವರ್ಷದಿಂದ ವರ್ಷಕ್ಕೆ ಶೇಕಡಾ 7.4ರಷ್ಟು ಏರಿಕೆಯಾಗಿ, 195.1 ರೂಪಾಯಿ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಸರಾಸರಿ ಆದಾಯವು 181.70 ರೂಪಾಯಿ ಇತ್ತು. ಇನ್ನು ಮುಂದಿನ ಎರಡು- ಮೂರು ತ್ರೈಮಾಸಿಕದಲ್ಲಿ ದರ ಏರಿಕೆಯ ಪೂರ್ಣ ಪ್ರಮಾಣದ ಪ್ರಭಾವ ತಿಳಿಯಲಿದೆ ಎಂದು ಕಂಪನಿ ಹೇಳಿದೆ. 5ಜಿ ಸೇವೆಯ ವಿಚಾರದಲ್ಲಿ ಮಾರುಕಟ್ಟೆಯಲ್ಲಿ ಜಿಯೋ ನಾಯಕತ್ವದ ಸ್ಥಾನದಲ್ಲಿದೆ. ಒಟ್ಟಾರೆ ಜಿಯೋ 5ಜಿ ಬಳಕೆದಾರರ ಸಂಖ್ಯೆ 14.8 ಕೋಟಿ ತಲುಪಿದೆ. ರಿಲಯನ್ಸ್ ಜಿಯೋದ ಒಟ್ಟಾರೆ ವೈರ್ ಲೆಸ್ ಡೇಟಾ ದಟ್ಟಣೆಯ ಶೇಕಡಾ 34ರಷ್ಟು ಈ ಸೆಗ್ಮೆಂಟ್ ನಿಂದ ಬಂದಿದೆ. ಇನ್ನು ಸದ್ಯದಲ್ಲೆ ಜಿಯೋಕ್ಲೌಡ್ ಬೀಟಾ ಜಿಯೋದಿಂದ ಆರಂಭವಾಗಲಿದೆ.

“ಜಿಯೋದ ವ್ಯಾಪಕ ಶ್ರೇಣಿ ಕೊಡುಗೆಗಳು ಭಾರತದ ಪ್ರತಿ ಹಳ್ಳಿ, ಪಟ್ಟಣ ಮತ್ತು ನಗರಗಳನ್ನು ಡಿಜಿಟಲ್ ಆಗಿ ಸಶಕ್ತಗೊಳಿಸಲು, ಹಾಗೆಯೇ ದೇಶದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳನ್ನು ಸಹ ಸಕ್ರಿಯಗೊಳಿಸುತ್ತದೆ. ಡಿಜಿಟಲ್ ಸೇವೆಗಳ ವ್ಯವಹಾರವು ರಾಷ್ಟ್ರೀಯ ಮಟ್ಟದಲ್ಲಿ ನವೀನ ಡೀಪ್-ಟೆಕ್ ಸಲ್ಯೂಷನ್ ಗಳ ಮೇಲೆ ಕೇಂದ್ರೀಕರಿಸುವುದನ್ನು ಮುಂದುವರಿಸಿದೆ ಮತ್ತು ಎಲ್ಲ ಭಾರತೀಯರಿಗೆ ಕೃತಕ ಬುದ್ಧಿಮತ್ತೆಯ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಪ್ರಯೋಜನಗಳನ್ನು ತಲುಪಿಸುವ ಹಾದಿಯಲ್ಲಿದೆ,” ಎಂದು ಮುಕೇಶ್ ಅಂಬಾನಿ ಹೇಳಿದರು.

ಜಿಯೋ ಪ್ಲಾಟ್‌ಫಾರ್ಮ್‌ಗಳ ಅಧ್ಯಕ್ಷ ಕಿರಣ್ ಥಾಮಸ್ ಮಾತನಾಡಿ, ಕಂಪನಿಯ ಗೃಹ ಬಳಕೆಯ ಬ್ರಾಡ್‌ಬ್ಯಾಂಡ್ ವಿಭಾಗವು ಗಮನಾರ್ಹ ಬೆಳವಣಿಗೆ ದರವನ್ನು ಕಂಡಿದೆ. ಕಳೆದ ನಾಲ್ಕು ತ್ರೈಮಾಸಿಕಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದರು. ಪ್ರತಿ ತಿಂಗಳು ತಮ್ಮ ಬ್ರಾಡ್‌ಬ್ಯಾಂಡ್ ಸೇವೆಗೆ 1 ಮಿಲಿಯನ್, ಅಂದರೆ ಹತ್ತು ಲಕ್ಷ ಹೊಸ ಮನೆಗಳನ್ನು ತಲುಪುವುದು ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದು ಅವರು ಒತ್ತಿ ಹೇಳಿದರು.

ರೀಟೇಲ್ ವೆಂಚರ್ಸ್
ರಿಲಯನ್ಸ್ ರೀಟೇಲ್ ವೆಂಚರ್ಸ್ ತೆರಿಗೆ ನಂತರದ ಲಾಭವು 2,935 ಕೋಟಿ ರೂಪಾಯಿ ಬಂದಿದೆ. ಕಳೆದ ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಇದು ಶೇ 20ರಷ್ಟಕ್ಕೆ ಹತ್ತಿರವಾಗುತ್ತದೆ. ಈ ರೀಟೇಲ್ ಘಟಕದ ಕಾರ್ಯಾಚರಣೆ ಮೂಲಕದ ಆದಾಯವು 66,502 ಕೋಟಿ ರೂಪಾಯಿ ಬಂದಿದೆ. ಕಳೆದ ತ್ರೈಮಾಸಿಕದಲ್ಲಿ ಇದು 66,260 ಕೋಟಿ ರೂಪಾಯಿ ಬಂದಿತ್ತು. “ರೀಟೇಲ್ ಸೆಗ್ಮೆಂಟ್ ತನ್ನ ಗ್ರಾಹಕರ ನೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದೆ. ಆನ್ ಲೈನ್ ಅಥವಾ ಆಫ್ ಲೈನ್ ಹೀಗೆ ಎಲ್ಲ ಚಾನೆಲ್ ಗಳಲ್ಲೂ ಪರಿಣಾಮಕಾರಿಯಾಗಿ ಗ್ರಾಹಕರನ್ನು ತಲುಪಿ, ಅವರ ಅಗತ್ಯಗಳ ಎಲ್ಲ ಮಾದರಿ ಉತ್ಪನ್ನಗಳನ್ನು ತಲುಪಿಸಲಾಗುತ್ತಿದೆ,” ಎಂದು ಅಂಬಾನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೈಲ ಹಾಗೂ ಅನಿಲ
ರಿಲಯನ್ಸ್ ಇಂಡಸ್ಟ್ರೀಸ್ ತೈಲ ಹಾಗೂ ಅನಿಲ ವ್ಯವಹಾರದಲ್ಲಿ ಇಬಿಐಟಿಡಿಎ ವರ್ಷದಿಂದ ವರ್ಷಕ್ಕೆ ಶೇಕಡಾ 11ರಷ್ಟು ಹೆಚ್ಚಳವಾಗಿ 5290 ಕೋಟಿ ರೂಪಾಯಿ ಮುಟ್ಟಿದೆ. ಕಳೆದ ವರ್ಷ ಇಬಿಐಟಿಡಿಎ 4760 ಕೋಟಿ ರೂಪಾಯಿ ಇತ್ತು. ಇನ್ನೂ ಮುಖ್ಯ ಸಂಗತಿ ಏನೆಂದರೆ, ವರ್ಷದಿಂದ ವರ್ಷಕ್ಕೆ ಇಬಿಐಟಿಡಿಎ ಮಾರ್ಜಿನ್ ಶೇ 72ರಿಂದ ಶೇ 85ಕ್ಕೆ ತಲುಪಿದೆ.

ಕಂಪನಿಯ ನ್ಯೂ ಎನರ್ಜಿ ಗಿಗಾ-ಫ್ಯಾಕ್ಟರಿಗಳ ಪ್ರಗತಿಯ ಬಗ್ಗೆ ಮುಕೇಶ್ ಅಂಬಾನಿ ಗಮನ ಸೆಳೆದರು. “ನಮ್ಮ ಮೊದಲ ನ್ಯೂ ಎನರ್ಜಿ ಗಿಗಾ-ಕಾರ್ಖಾನೆಗಳು ಈ ವರ್ಷದ ಅಂತ್ಯದ ವೇಳೆಗೆ ಸೌರ ಪಿವಿ ಮಾಡ್ಯೂಲ್‌ಗಳ ಉತ್ಪಾದನೆಯನ್ನು ಪ್ರಾರಂಭಿಸುವ ಹಾದಿಯಲ್ಲಿದೆ. ನವೀಕರಿಸಬಹುದಾದ ಸಮಗ್ರ ಶ್ರೇಣಿಯೊಂದಿಗೆ ಸೌರಶಕ್ತಿ, ಇಂಧನ ಶೇಖರಣಾ ವ್ಯವಸ್ಥೆಗಳು, ಹಸಿರು ಜಲಜನಕ, ಜೈವಿಕ ಶಕ್ತಿ ಮತ್ತು ಪವನ ಸೇರಿದಂತೆ ಸಲ್ಯೂಷನ್ ಗಳು, ನ್ಯೂ ಎನರ್ಜಿ ವ್ಯವಹಾರವು ಜಾಗತಿಕ ಸ್ವಚ್ಛ ಇಂಧನ ಪರಿವರ್ತನೆಗೆ ಗಮನಾರ್ಹ ಕೊಡುಗೆ ನೀಡಲು ಸಿದ್ಧವಾಗಿದೆ,” ಎಂದು ಅವರು ಹೇಳಿದರು.

ಇನ್ನು ಒಟ್ಟಾರೆ ಹಣಕಾಸು ಫಲಿತಾಂಶದ ಬಗ್ಗೆ ತೃಪ್ತಿಯನ್ನು ವ್ಯಕ್ತಪಡಿಸಿದ ಮುಕೇಶ್ ಅಂಬಾನಿ, ರಿಲಯನ್ಸ್ ಇಂಡಸ್ಟ್ರೀಸ್ ನ ವೈವಿಧ್ಯಮಯವಾದ ವ್ಯವಹಾರಗಳ ಪೋರ್ಟ್ ಫೋಲಿಯೋಗೆ ಇರುವಂಥ ಸಾಮರ್ಥ್ಯದ ಬಗ್ಗೆ ಒತ್ತಿ ಹೇಳಿದರು.

Continue Reading

ಪ್ರಮುಖ ಸುದ್ದಿ

Passport Seva Portal: ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವಾ ಕಾರ್ಯ ಸ್ಥಗಿತ

ಪಾಸ್‌ಪೋರ್ಟ್ ಸೇವಾ ಪೋರ್ಟಲ್ (Passport Seva Portal) ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳ್ಳಲಿದ್ದು, ಈಗಾಗಲೇ ನಿಗದಿಯಾಗಿರುವ ಅಪಾಯಿಂಟ್‌ಮೆಂಟ್‌ಗಳು ಮರುನಿಗದಿ ಪಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ವರೆಗೆ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ನಿಗದಿಪಡಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

VISTARANEWS.COM


on

By

Passport Seva Portal
Koo

ಪಾಸ್ ಪೋರ್ಟ್ ಪೋರ್ಟಲ್ ನ (Passport Seva Portal) ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಇನ್ನು ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವೆ ಸ್ಥಗಿತಗೊಳ್ಳಲಿದೆ. ಆಗಸ್ಟ್ 29ರ ಗುರುವಾರ 8 ಗಂಟೆಯಿಂದ ಸೆಪ್ಟೆಂಬರ್ 2ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೂ ಪೋರ್ಟಲ್ ಸೇವೆ ಸ್ಥಗಿತಗೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.

ಪಾಸ್‌ಪೋರ್ಟ್ ಸೇವಾ ಪೋರ್ಟಲ್ ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳ್ಳಲಿದ್ದು, ಈಗಾಗಲೇ ನಿಗದಿಯಾಗಿರುವ ಅಪಾಯಿಂಟ್‌ಮೆಂಟ್‌ಗಳು ಮರುನಿಗದಿ ಪಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ವರೆಗೆ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ನಿಗದಿಪಡಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಅನ್ನು ಹೊಸ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಅಥವಾ ಪಾಸ್‌ಪೋರ್ಟ್ ನವೀಕರಿಸಲು ದೇಶಾದ್ಯಂತ ಕೇಂದ್ರಗಳಲ್ಲಿ ನೇಮಕಾತಿಗಳನ್ನು ಕಾಯ್ದಿರಿಸಲು ಬಳಸಲಾಗುತ್ತದೆ.

ನೇಮಕಾತಿಯ ದಿನದಂದು ಅರ್ಜಿದಾರರು ಪಾಸ್‌ಪೋರ್ಟ್ ಕೇಂದ್ರಗಳನ್ನು ತಲುಪಬೇಕು ಮತ್ತು ಪರಿಶೀಲನೆಗಾಗಿ ತಮ್ಮ ದಾಖಲೆಗಳನ್ನು ಒದಗಿಸಬೇಕು. ಇದರ ಅನಂತರ ಪೊಲೀಸ್ ಪರಿಶೀಲನೆ ನಡೆಯುತ್ತದೆ. ಬಳಿಕ ಪಾಸ್ ಪೋರ್ಟ್ ಅರ್ಜಿದಾರರ ವಿಳಾಸವನ್ನು ತಲುಪುತ್ತದೆ. ಅರ್ಜಿದಾರರು ನಿಯಮಿತ ಮೋಡ್ ಅನ್ನು ಆರಿಸಿಕೊಳ್ಳಬಹುದು. ಬಳಿಕ ಪಾಸ್‌ಪೋರ್ಟ್ ಅರ್ಜಿದಾರರನ್ನು 30- 45 ಕೆಲಸದ ದಿನಗಳಲ್ಲಿ ತಲುಪುತ್ತದೆ.


ಪೋರ್ಟಲ್ ಸೇವೆ ಸ್ಥಗಿತಗೊಂಡಿರುವುದರಿಂದ ಸೆಪ್ಟೆಂಬರ್ 2ರ ಬಳಿಕ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಹಿಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಅರ್ಜಿದಾರರು ಅಲ್ಲಿಯವರೆಗೂ ಕಾಯಬೇಕಾಗುತ್ತದೆ.

ಇದನ್ನೂ ಓದಿ: Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

ಪ್ರತಿಯೊಬ್ಬ ನಾಗರಿಕನ ಮೇಲೆ ಪರಿಣಾಮ ಬೀರಲಿದೆ ಈ ಬದಲಾವಣೆ

ಸೆಪ್ಟೆಂಬರ್ 1ರಿಂದ ಎಲ್‌ಪಿಜಿ (LPG) ಮತ್ತು ಆಧಾರ್ ಕಾರ್ಡ್‌ಗೆ (Aaadhar card) ಸಂಬಂಧಿಸಿ ಆರು ದೊಡ್ಡ ಬದಲಾವಣೆಗಳು (Rule Change) ಆಗಲಿವೆ. ಇದು ಪ್ರತಿಯೊಬ್ಬರ ಜೇಬಿನ ಮೇಲೂ ಪರಿಣಾಮ ಬೀರಲಿದೆ. ಈ ಬದಲಾವಣೆಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್‌ಗಳ (LPG cylinder) ಬೆಲೆ ಮತ್ತು ಕ್ರೆಡಿಟ್ ಕಾರ್ಡ್‌ಗಳ (Credit card) ನಿಯಮಗಳನ್ನು ಒಳಗೊಂಡಿವೆ. ಅಲ್ಲದೇ ತುಟ್ಟಿಭತ್ಯೆ ಕುರಿತು ಸರ್ಕಾರಿ ನೌಕರರಿಗೆ ವಿಶೇಷ ಪ್ರಕಟಣೆಗಳು ಸೇರಿವೆ.

ಎಲ್ ಪಿ ಜಿ ಸಿಲಿಂಡರ್ ಬೆಲೆ

ಪ್ರತಿ ತಿಂಗಳ ಮೊದಲ ದಿನಾಂಕದಂದು ಸರ್ಕಾರವು ಎಲ್‌ಪಿಜಿ ಬೆಲೆಯನ್ನು ಬದಲಾಯಿಸುತ್ತದೆ. ಅಂತೆಯೇ ಅಡುಗೆ ಅನಿಲ, ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳಲ್ಲಿ ಬದಲಾವಣೆ ಸೆಪ್ಟೆಂಬರ್ ಮೊದಲ ದಿನವೇ ಕಾಣಬಹುದು.

ಎಟಿಎಫ್, ಸಿಎನ್‌‌ಜಿ, ಪಿಎನ್‌‌ಜಿ ದರಗಳು

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳೊಂದಿಗೆ ತೈಲ ಮಾರುಕಟ್ಟೆ ಕಂಪೆನಿಗಳು ಏರ್ ಟರ್ಬೈನ್ ಇಂಧನ (ಎಟಿಎಫ್) ಮತ್ತು ಸಿಎನ್‌ಜಿ-ಪಿಎನ್‌ಜಿ ಬೆಲೆಗಳನ್ನು ಸಹ ಪರಿಷ್ಕರಿಸುತ್ತವೆ. ಈ ಕಾರಣದಿಂದಾಗಿ ಸೆಪ್ಟೆಂಬರ್ ಮೊದಲ ದಿನಾಂಕದಂದು ಅವುಗಳ ಬೆಲೆಯಲ್ಲಿ ಬದಲಾವಣೆಗಳನ್ನು ಕಾಣಬಹುದು.

ನಕಲಿ ಕರೆಗಳಿಗೆ ಕಡಿವಾಣ

ಸೆಪ್ಟೆಂಬರ್ 1ರಿಂದ ನಕಲಿ ಕರೆ ಮತ್ತು ಸಂದೇಶಗಳಿಗೆ ಕಡಿವಾಣ ಬೀಳಲಿದೆ. ನಕಲಿ ಕರೆಗಳು ಮತ್ತು ನಕಲಿ ಸಂದೇಶಗಳಿಗೆ ಕಡಿವಾಣ ಹಾಕುವಂತೆ ಟಿಆರ್‌‌ಎಐ ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದೆ. ಇದಕ್ಕಾಗಿ ಟಿಆರ್‌‌ಎಐ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ.

ಕ್ರೆಡಿಟ್ ಕಾರ್ಡ್ ನಿಯಮಗಳು

ಸೆಪ್ಟೆಂಬರ್ 1ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ಯುಟಿಲಿಟಿ ವಹಿವಾಟುಗಳ ರಿವಾರ್ಡ್ ಪಾಯಿಂಟ್‌ಗಳ ಮಿತಿಯನ್ನು ನಿಗದಿಪಡಿಸಲಿದೆ. ಇದರ ಅಡಿಯಲ್ಲಿ ಗ್ರಾಹಕರು ಈ ವಹಿವಾಟುಗಳಲ್ಲಿ ತಿಂಗಳಿಗೆ 2,000 ಪಾಯಿಂಟ್‌ಗಳವರೆಗೆ ಮಾತ್ರ ಪಡೆಯಬಹುದು.

ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಪಾವತಿಸಬೇಕಾದ ಕನಿಷ್ಠ ಮೊತ್ತ ಮತ್ತು ಪಾವತಿ ದಿನಾಂಕವನ್ನು 18 ರಿಂದ 15 ದಿನಗಳವರೆಗೆ ಕಡಿಮೆ ಮಾಡಲಾಗುತ್ತದೆ.

ಇದರ ಹೊರತಾಗಿಸೆಪ್ಟೆಂಬರ್ 1ರಿಂದ ಯುಪಿಐ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾವತಿಗಳಿಗಾಗಿ ರುಪೇ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರು ಇತರ ಪಾವತಿ ಸೇವಾ ಪೂರೈಕೆದಾರರ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವಂತೆಯೇ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುತ್ತಾರೆ.

ತುಟ್ಟಿಭತ್ಯೆ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.

ಆಧಾರ್ ಕಾರ್ಡ್ ಉಚಿತ ನವೀಕರಣ

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 14 ಎಂದು ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ 14ರ ಅನಂತರ ಆಧಾರ್ ಅನ್ನು ನವೀಕರಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading

ವಾಣಿಜ್ಯ

Richest City: ಭಾರತದ ಶ್ರೀಮಂತ ನಗರ ಮುಂಬಯಿ; ನಾಲ್ಕನೇ ಸ್ಥಾನಕ್ಕೆ ಇಳಿದ ಬೆಂಗಳೂರು

ಭಾರತದ ಶ್ರೀಮಂತ ನಗರಗಳ (Richest City) ಪಟ್ಟಿಯನ್ನು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿದ್ದು ಇದು ದೇಶದ ಅತೀ ಹೆಚ್ಚು ಶ್ರೀಮಂತರು ಇರುವ ನಗರಗಳನ್ನು ಗುರುತಿಸಿ ಲೆಕ್ಕಾಚಾರ ನಡೆಸಿದೆ. ಭಾರತದ ಆರ್ಥಿಕ ರಾಜಧಾನಿ ವೇಗವಾಗಿ ಬೆಳೆಯುತ್ತಿರುವ ಮುಂಬಯಿ ಅನ್ನು ವಿಶ್ವದ ಮೂರನೇ ಶ್ರೀಮಂತ ನಗರವನ್ನಾಗಿ ಗುರುತಿಸಲಾಗಿದೆ.

VISTARANEWS.COM


on

By

Richest City
Koo

ಭಾರತದ ಶ್ರೀಮಂತ ನಗರವಾಗಿ (Richest City) ಮತ್ತೆ ಮುಂಬಯಿ (mumbai) ಮೊದಲ ಸ್ಥಾನ ಗಳಿಸಿದೆ. ದೆಹಲಿ (New Delhi) ಮತ್ತು ಹೈದರಾಬಾದ್ (Hyderabad) ಕ್ರಮವಾಗಿ ಎರಡು, ಮೂರು ಸ್ಥಾನಗಳನ್ನು ಅಲಂಕರಿಸಿದೆ. ಐಟಿ ಕ್ಯಾಪಿಟಲ್ (IT Capital) ಬೆಂಗಳೂರನ್ನು (bengaluru) ಹಿಂದಿಕ್ಕಿದ ಹೈದರಾಬಾದ್ ಶ್ರೀಮಂತ ನಗರಿ ಪಟ್ಟಿಯಲ್ಲಿ ಮೇಲೆರಿದ್ದು ಬೆಂಗಳೂರು ನಾಲ್ಕನೇ ಸ್ಥಾನಕ್ಕೆ ಇಳಿದಿದೆ.

ಭಾರತದ ಶ್ರೀಮಂತ ನಗರಗಳ ಪಟ್ಟಿಯನ್ನು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿದ್ದು ಇದು ದೇಶದ ಅತೀ ಹೆಚ್ಚು ಶ್ರೀಮಂತರು ಇರುವ ನಗರಗಳನ್ನು ಗುರುತಿಸಿ ಲೆಕ್ಕಾಚಾರ ನಡೆಸಿದೆ.

ಈ ವರ್ಷ ಭಾರತವು 94 ಹೊಸ ಬಿಲಿಯನೇರ್‌ಗಳನ್ನು ಸ್ವಾಗತಿಸಿದೆ. ಭಾರತದ ಬಿಲಿಯನೇರ್‌ಗಳು ಸಾಮೂಹಿಕ ಸಂಪತ್ತು ಸರಿಸುಮಾರು 1 ಟ್ರಿಲಿಯನ್‌ ಯುಎಸ್ ಡಾಲರ್. ಇದು ಒಟ್ಟು ಜಾಗತಿಕ ಸಂಪತ್ತಿನ ಶೇ. 7ರಷ್ಟಿದೆ. ಯುನೈಟೆಡ್ ಸ್ಟೇಟ್ಸ್ ಬಳಿಕ ಜಾಗತಿಕವಾಗಿ ಇದು ಎರಡನೇ ಅತಿ ಹೆಚ್ಚು ಏರಿಕೆಯಾಗಿದೆ.

ಇದು ಭಾರತದ ಆರ್ಥಿಕ ರಾಜಧಾನಿ ವೇಗವಾಗಿ ಬೆಳೆಯುತ್ತಿರುವ ಮುಂಬಯಿ ಅನ್ನು ವಿಶ್ವದ ಮೂರನೇ ಶ್ರೀಮಂತ ನಗರವನ್ನಾಗಿ ಮಾಡಿದೆ ಎಂದು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ಭಾರತದ ಅತ್ಯಂತ ಶ್ರೀಮಂತ ನಗರವಾದ ಮುಂಬಯಿ ಈಗ ಒಟ್ಟು 386 ಬಿಲಿಯನೇರ್‌ಗಳನ್ನು ಹೊಂದಿದೆ. ಈ ವರ್ಷವೊಂದರಲ್ಲೇ 58 ಹೊಸ ವ್ಯಕ್ತಿಗಳು ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ನಗರದ ಸಂಪತ್ತು ಕಳೆದ ವರ್ಷದಿಂದ ಶೇ. 47ರಷ್ಟು ಏರಿಕೆಯಾಗಿದೆ.

ಮುಂಬಯಿ ಬಳಿಕ ನವದೆಹಲಿ ಮತ್ತು ಹೈದರಾಬಾದ್ ಭಾರತದ ಅತಿ ಶ್ರೀಮಂತ ನಗರಗಳಾಗಿ ಹೊರಹೊಮ್ಮಿವೆ. ದೆಹಲಿ 18 ಹೊಸ ಬಿಲಿಯನೇರ್‌ಗಳ ಸೇರ್ಪಡೆಯೊಂದಿಗೆ ಈಗ ಪಟ್ಟಿಯಲ್ಲಿ ಒಟ್ಟು 217 ಬಿಲಿಯನೇರ್ ಗಳನ್ನು ಹೊಂದಿದೆ. ಇದು ಭಾರತದಲ್ಲಿ ಅತಿ ಹೆಚ್ಚು ಬಿಲಿಯನೇರ್‌ಗಳನ್ನು ಹೊಂದಿರುವ ಎರಡನೇ ನಗರವಾಗಿದೆ.


ಬೆಂಗಳೂರನ್ನು ಹಿಂದಿಕ್ಕಿದ ಹೈದರಾಬಾದ್

ಈ ಬಾರಿ ಹೈದರಾಬಾದ್ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಮೊದಲ ಬಾರಿಗೆ ಬೆಂಗಳೂರನ್ನು ಹಿಂದಿಕಿರುವ ಹೈದರಾಬಾದ್ ಶ್ರೀಮಂತ ನಿವಾಸಿಗಳ ವಿಷಯದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

17 ಹೊಸ ಬಿಲಿಯನೇರ್‌ಗಳ ಸೇರ್ಪಡೆಯು ಹೈದರಾಬಾದ್‌ನ ಒಟ್ಟು ಮೊತ್ತವನ್ನು 104 ಕ್ಕೆ ತಂದಿದೆ. ಆದರೆ ಬೆಂಗಳೂರು 100 ಶ್ರೀಮಂತ ವ್ಯಕ್ತಿಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಬೆಂಗಳೂರಿಗೆ ನಾಲ್ಕನೇ ಸ್ಥಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬೆಂಗಳೂರು ಉದ್ಯಮಿಗಳು, ಬಂಡವಾಳ, ಹೂಡಿಕೆ ಹೈದರಾಬಾದ್ ನತ್ತ ಸಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.


ಇದನ್ನೂ ಓದಿ: Luxury House: ಕನಸಿನ ನಗರಿ ಮುಂಬಯಿಯಲ್ಲಿರುವ 9 ಅತ್ಯಂತ ದುಬಾರಿ ಬಂಗಲೆಗಳಿವು!

ಉಳಿದಂತೆ ಚೆನ್ನೈ-82, ಕೋಲ್ಕತ್ತಾ-69, ಅಹಮದಾಬಾದ್-67, ಪುಣೆ-53, ಸೂರತ್-28, ಗುರುಗ್ರಾಮ-23 ಬಿಲಿಯನೇರ್ ಗಳನ್ನು ಹೊಂದಿದ್ದು ಕ್ರಮವಾಗಿ ಸ್ಥಾನ ಗಳಿಸಿದೆ.

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ8 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು10 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ11 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು13 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ13 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ14 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ2 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌