Accenture : ಐಟಿ ದಿಗ್ಗಜ ಅಕ್ಸೆಂಚರ್‌ ಕಂಪನಿಯಲ್ಲಿ ಟೆಕ್ಕಿಗಳಿಗೆ ಆಘಾತ, 19,000 ಉದ್ಯೋಗ ಕಡಿತ - Vistara News

ವಾಣಿಜ್ಯ

Accenture : ಐಟಿ ದಿಗ್ಗಜ ಅಕ್ಸೆಂಚರ್‌ ಕಂಪನಿಯಲ್ಲಿ ಟೆಕ್ಕಿಗಳಿಗೆ ಆಘಾತ, 19,000 ಉದ್ಯೋಗ ಕಡಿತ

ಮಾಹಿತಿ ತಂತ್ರಜ್ಞಾನ ದಿಗ್ಗಜ ಅಕ್ಸೆಂಚರ್‌ ವೆಚ್ಚ ನಿಯಂತ್ರಣದ ಭಾಗವಾಗಿ 19,000 ಉದ್ಯೋಗಗಳನ್ನು (Accenture) ಕಡಿತಗೊಳಿಸುವುದಾಗಿ ಗುರುವಾರ ಘೋಷಿಸಿದೆ. ವಿವರ ಇಲ್ಲಿದೆ.

VISTARANEWS.COM


on

Accenture to skip pay hikes for in India and Sri Lanka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಬ್ಲಿನ್:‌ ತಂತ್ರಜ್ಞಾನ ವಲಯದ ಅಕ್ಸೆಂಚರ್‌ ಕಂಪನಿ 19,000 ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಗುರುವಾರ ತಿಳಿಸಿದೆ. ವಾರ್ಷಿಕ ಆದಾಯ ಮತ್ತು ಲಾಭದ ಮುನ್ನೋಟವನ್ನೂ ಕಂಪನಿ ತಗ್ಗಿಸಿದೆ. ಜಾಗತಿಕ ಆರ್ಥಿಕತೆಯ ಅನಿಶ್ಚಿತತೆ ಹಿನ್ನೆಲೆಯಲ್ಲಿ ವೆಚ್ಚ ನಿಯಂತ್ರಣ ಅನಿವಾರ್ಯವಾಗಿದೆ. ಆರ್ಥಿಕ ಹಿಂಜರಿತದ ಭೀತಿಯ ಪರಿಣಾಮ ಕಂಪನಿಗಳು ತಂತ್ರಜ್ಞಾನಕ್ಕೆ ವೆಚ್ಚವನ್ನು ಕಡಿಮೆ ಮಾಡುತ್ತಿವೆ ಎಂದು ತಿಳಿಸಿದೆ.

ಅಕ್ಸೆಂಚರ್‌ ತನ್ನ ವಾರ್ಷಿಕ ಆದಾಯ, ಲಾಭದ ಮುನ್ನೋಟವನ್ನು 10%ರಿಂದ 8%ಕ್ಕೆ ಕಡಿತಗೊಳಿಸಿದೆ. ಇತ್ತೀಚೆಗೆ ಕಂಪನಿಯು ಬೆಂಗಳೂರು ಮೂಲದ ಇಂಡಸ್ಟ್ರಿಯಲ್‌ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಕಂಪನಿ ಫ್ಲೊಟುರಾವನ್ನು ಖರೀದಿಸಿತ್ತು. ಫ್ಲೊಟುರಾ, ಅಕ್ಸೆಂಚರ್‌ನ ಕೈಗಾರಿಕಾ ಎಐ ಸೇವೆಯನ್ನು ಸುಧಾರಿಸಲಿದೆ ಎಂದು ಕಂಪನಿ ತಿಳಿಸಿತ್ತು.

ಐರಿಷ್-‌ ಅಮೆರಿಕನ್ ಮೂಲದ ಅಕ್ಸೆಂಚರ್‌ ಐಟಿ ವೃತ್ತಿಪರ ಸೇವೆ ಒದಗಿಸುವ ಕಂಪನಿಯಾಗಿದೆ. ‌ ಫಾರ್ಚ್ಯೂನ್‌ ಗ್ಲೋಬಲ್‌ 500 ಕಂಪನಿಯಾಗಿದೆ. 1989ರಲ್ಲಿ ಸ್ಥಾಪನೆಯಾಗಿರುವ ಕಂಪನಿಯಲ್ಲಿ 7.38 ಲಕ್ಷ ಉದ್ಯೋಗಿಗಳು ಇದ್ದಾರೆ.

ಕ್ರೆಡಿಟ್‌ ಸ್ವೀಸ್‌ ಬಿಕ್ಕಟ್ಟು, ಉದ್ಯೋಗ ಕಡಿತ ಸಂಭವ:

ಸ್ವಿಸ್‌ ಬ್ಯಾಂಕಿಂಗ್‌ ದಿಗ್ಗಜ ಯುಬಿಎಸ್‌, ದಿವಾಳಿಯಂಚಿನಲ್ಲಿರುವ ಕ್ರೆಡಿಟ್‌ ಸ್ವೀಸ್‌ ಅನ್ನು ಖರೀದಿಸಿದೆ. (UBS-Credit Suisse merger) ಇದರ ಪರಿಣಾಮ ಭಾರತದಲ್ಲೂ ಹಲವಾರು ಮಂದಿ ಉದ್ಯೋಗ ಕಳೆದುಕೊಳ್ಳುವ ಅಪಾಯವೂ ಇದೆ. ಯುಬಿಎಸ್‌ ಮತ್ತು ಕ್ರೆಡಿಟ್‌ ಸ್ವೀಸ್‌ ಭಾರತದಲ್ಲಿ ತಂತ್ರಜ್ಞಾನ ಆಧಾರಿತ ಬ್ಯಾಕ್‌ ಆಫೀಸ್‌ಗಳನ್ನು ಹೊಂದಿದ್ದು, ಈ ಕಚೇರಿಗಳಲ್ಲಿ 7,000ಕ್ಕೂ ಹೆಚ್ಚು ಉದ್ಯೋಗಿಗಳು ಇದ್ದಾರೆ. ಯುಬಿಎಸ್‌ನಲ್ಲಿ ಕ್ರೆಡಿಟ್‌ ಸ್ವೀಸ್‌ ವಿಲೀನವಾಗುತ್ತಿರುವುದರಿಂದ ವೆಚ್ಚ ನಿಯಂತ್ರಣದ ಭಾಗವಾಗಿ ಉದ್ಯೋಗ ಕಡಿತವಾಗುವ ಸಾಧ್ಯತೆ ಇದೆ.

ಯುಬಿಎಸ್‌ ಮತ್ತು ಕ್ರೆಡಿಟ್‌ ಸ್ವೀಸ್‌ ತಮ್ಮ ತಂತ್ರಜ್ಞಾನ ಕೇಂದ್ರಗಳಲ್ಲಿ 14,000 ಉದ್ಯೋಗಿಗಳನ್ನು ಹೊಂದಿದೆ. ಈ ಪೈಕಿ 7,000 ಮಂದಿ ಭಾರತದ ನಾನಾ ನಗರಗಳಲ್ಲಿನ ಟೆಕ್‌ ಸೆಂಟರ್‌ಗಳಲ್ಲಿ (Global in-house centre) ಇದ್ದಾರೆ.‌

ಸ್ವಿಜರ್ಲೆಂಡ್‌ನ ಬ್ಯಾಂಕಿಂಗ್‌ ದಿಗ್ಗಜ ಯುಬಿಎಸ್‌ (UBS) ದಿವಾಳಿಯಾಗುವ ಅಪಾಯದಲ್ಲಿರುವ ಮತ್ತೊಂದು ಸ್ವಿಸ್‌ ಬ್ಯಾಂಕ್‌ ಕ್ರೆಡಿಟ್‌ ಸ್ವೀಸ್‌ ಅನ್ನು 26,800 ಕೋಟಿ ರೂ.ಗಳ ಮೆಗಾ ಡೀಲ್‌ನಲ್ಲಿ (3.25 ಶತಕೋಟಿ ಡಾಲರ್) ಇತ್ತೀಚೆಗೆ ಖರೀದಿಸಿದೆ. (UBS Credit Suisse deal) ಒಂದು ವೇಳೆ ಕ್ರೆಡಿಟ್‌ ಸ್ವೀಸ್‌ ದಿವಾಳಿಯಾದರೆ ಜಾಗತಿಕ ಆರ್ಥಿಕತೆಗೆ, ಮುಖ್ಯವಾಗಿ ಪಾಶ್ಚಿಮಾತ್ಯ ದೇಶಗಳ ಬ್ಯಾಂಕಿಂಗ್‌ ಅಲ್ಲೋಲಕಲ್ಲೋಲವಾಗುವ ಸಾಧ್ಯತೆ ಇತ್ತು. ಇದನ್ನು ತಪ್ಪಿಸಲು ಸ್ವಿಸ್‌ ಅಧಿಕಾರಿಗಳು ಇದೀಗ ಮೆಗಾ ಡೀಲ್‌ ಕುದುರಿಸಿದ್ದಾರೆ.

ಈ ಸ್ವಿಸ್‌ ಡೀಲ್‌ ಬಳಿಕ ವಿಶ್ವದ ಸೆಂಟ್ರಲ್‌ ಬ್ಯಾಂಕ್‌ಗಳು ಮುಂಬರುವ ವಾರಗಳಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಸ್ಥಿರಗೊಳಿಸಲು ಸಂಘಟಿತ ಕ್ರಮವನ್ನು ಕೈಗೊಳ್ಳಲು ಮುಂದಾಗಿವೆ. ಪ್ರತಿ ದಿನ ಬ್ಯಾಂಕ್‌ಗಳಿಗೆ ಅಗತ್ಯ ಇದ್ದರೆ ಡಾಲರ್‌ ಸಾಲ ನೀಡಲು ವ್ಯವಸ್ಥೆ ಕಲ್ಪಿಸಲಿವೆ. 2008ರ ಸೆಪ್ಟೆಂಬರ್‌ನಲ್ಲಿ ಅಮೆರಿಕದ ಬ್ಯಾಂಕಿಂಗ್‌ ದಿಗ್ಗಜ ಲೆಹ್ಮನ್‌ ಬ್ರದರ್ಸ್‌ ದಿವಾಳಿಯಾಗಿ ಆರ್ಥಿಕ ಹಿಂಜರಿತ ಸಂಭವಿಸಿದಾಗ ಈ ರೀತಿ ಮಾಡಲಾಗಿತ್ತು. ಆಗ ಬ್ಯಾಂಕ್‌ಗಳು ಸೆಂಟ್ರಲ್‌ ಬ್ಯಾಂಕ್‌ಗಳಿಂದ 580 ಶತಕೋಟಿ ಡಾಲರ್‌ (47 ಲಕ್ಷ ಕೋಟಿ ರೂ.)‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Highest Paid CEO: 2024ರ ಹಣಕಾಸು ವರ್ಷದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಐಟಿ ಸಿಇಒ ವಿಪ್ರೊದ ಥಿಯೆರ್ರಿ ಡೆಲಾಪೋರ್ಟೆ ಅವರು ಏಪ್ರಿಲ್ 6ರಂದು ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ 32 ವರ್ಷಗಳ ಕಾಲ ಅನುಭವಿ ಶ್ರೀನಿವಾಸ್ ಪಾಲ್ಲಿಯಾ ಅವರನ್ನು
ನೇಮಿಸಲಾಗಿದೆ. ಬೃಹತ್‌ ಐಟಿ ಕಂಪನಿಗಳ ಸಿಇಒಗಳು ಹೆಚ್ಚು ಸಂಬಳ ಪಡೆಯುತ್ತಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Highest Paid CEO
Koo

ವಿಪ್ರೋದ (Wipro) ಮಾಜಿ ಸಿಇಒ (ex-ceo) ಮತ್ತು ಆಡಳಿತ ನಿರ್ದೇಶಕ ಥಿಯೆರ್ರಿ ಡೆಲಾಪೋರ್ಟೆ (Thierry Delaporte) ಅವರು 20 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 166 ಕೋಟಿ ರೂ. ಗಳಿಸಿ ಸತತ ಎರಡನೇ ವರ್ಷ ಐಟಿ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ (Highest Paid CEO) ಪಡೆಯುವ ಸಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಥಿಯೆರಿ ಡೆಲಾಪೋರ್ಟೆ ಅವರು ಏಪ್ರಿಲ್‌ 6ರಂದು ಕಂಪನಿಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಕಂಪನಿಯು 32 ವರ್ಷಗಳ ಕಾಲ ಅನುಭವ ಹೊಂದಿರುವ ಶ್ರೀನಿವಾಸ್ ಪಾಲ್ಲಿಯಾ ಅವರನ್ನು ನೇಮಕ ಮಾಡಿದೆ. ಯುಎಸ್ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಕಮಿಷನ್‌ಗೆ ವಿಪ್ರೊ ಸಲ್ಲಿಸಿರುವ 20 ಎಫ್ ಫೈಲಿಂಗ್‌ಗಳ ಪ್ರಕಾರ ಡೆಲಾಪೋರ್ಟೆ 3.9 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಸಂಬಳ ಮತ್ತು ಭತ್ಯೆ, 5 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಕಮಿಷನ್/ ವೇರಿಯಬಲ್ ಪೇ, ಸುಮಾರು 7 ಮಿಲಿಯನ್ ಡಾಲರ್ ಇತರ ಮತ್ತು 4 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ದೀರ್ಘಾವಧಿಯ ಪರಿಹಾರವನ್ನು ಗಳಿಸಿದ್ದಾರೆ.

ಶ್ರೀನಿವಾಸ್ ಪಲ್ಲಿಯಾ ಅವರು ಸುಮಾರು 50 ಕೋಟಿ ರೂಪಾಯಿಗಳ ವಾರ್ಷಿಕ ಸಂಭಾವನೆ ಪ್ಯಾಕೇಜ್‌ ಸ್ವೀಕರಿಸಿದ್ದಾರೆ. ಇದರಿಂದ ಅವರು ಆರ್ಥಿಕ ವರ್ಷ 2025ರಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಎರಡನೇ ಸಿಇಒ ಆಗಿದ್ದಾರೆ. ಕಂಪನಿಯ ಆದಾಯವು ಇಳಿಮುಖವಾಗುತ್ತಿರುವ ಹೊತ್ತಲ್ಲಿ ಹೊಸ ಸಿಇಒ ನೇಮಕ ವೇತನದ ನಡುವಿನ ಅಸಮಾನತೆಯನ್ನು ಹೆಚ್ಚಿಸಿದೆ. ಸಿಇಒ ವೇತನವು ಸತತ ಎರಡನೇ ವರ್ಷಕ್ಕೆ ಹೆಚ್ಚಾಗಿದೆ.

ಮತ್ತೊಂದೆಡೆ ವಿಪ್ರೋ ಕಾರ್ಯನಿರ್ವಾಹಕ ಅಧ್ಯಕ್ಷ ರಿಶಾದ್ ಪ್ರೇಮ್‌ಜಿ ಅವರು ಹೆಚ್ಚುತ್ತಿರುವ ಏಕೀಕೃತ ನಿವ್ವಳ ಲಾಭದ ಮೇಲೆ ಶೇ. 0.35ರಷ್ಟು ಕಮಿಷನ್‌ಗೆ ಅರ್ಹರಾಗಿದ್ದಾರೆ. ಕಂಪನಿಯ ಹಣಕಾಸಿನ ವರ್ಷದಲ್ಲಿ ನಷ್ಟವನ್ನು ಅನುಭವಿಸಿದ ಕಾರಣ ಅದನ್ನು ತಡೆಹಿಡಿಯಲಾಗಿದೆ.

ಕಂಪನಿಯ ಆದಾಯ ಇಳಿಕೆ

ಆರ್ಥಿಕ ವರ್ಷ 2024ರ ಪೂರ್ಣ ವರ್ಷದಲ್ಲಿ ವಿಪ್ರೋ ಆದಾಯವು ವರ್ಷಕ್ಕೆ 90,486 ಕೋಟಿಗಳಿಂದ 89,760 ಕೋಟಿಗೆ ಇಳಿದಿದೆ.

ಅತಿ ಹೆಚ್ಚು ವಾರ್ಷಿಕ ಸಂಭಾವನೆ

2023- 24ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರು ವಾರ್ಷಿಕ ಸಂಭಾವನೆ ಪ್ಯಾಕೇಜ್‌ನಲ್ಲಿ 56 ಕೋಟಿ ರೂ. ಆಗಿದೆ. ಎಚ್‌ಸಿಎಲ್‌ಟೆಕ್‌ನ ಸಿ ವಿಜಯಕುಮಾರ್, 28.4 ಕೋಟಿ ರೂ. ಗಳಿಸಿದ್ದಾರೆ. L&T ಮತ್ತು Mindtree ವಿಲೀನದ ಅನಂತರ ನವೆಂಬರ್ 2022 ರಲ್ಲಿ ಚುಕ್ಕಾಣಿ ಹಿಡಿದ ಅದರ ಸಿಇಒ ದೇಬಾಶಿಸ್ ಚಟರ್ಜಿ ಆರ್ಥಿಕ ವರ್ಷ 22-23ರಲ್ಲಿ 17.5 ಕೋಟಿ ರೂ. ಗಳಿಸಿದ್ದಾರೆ.

ಇದನ್ನೂ ಓದಿ: Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

ಟೆಕ್ ಮಹೀಂದ್ರಾದ ಮೋಹಿತ್ ಜೋಶಿ ಅವರು ವಾರ್ಷಿಕವಾಗಿ 6.5 ಕೋಟಿ ರೂಪಾಯಿಗಳ ವೇತನ ಪಡೆಯುತ್ತಾರೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು 2024ರಲ್ಲಿ ವಾರ್ಷಿಕ ಪರಿಹಾರದಲ್ಲಿ 25.36 ಕೋಟಿ ರೂ. ಗಳನ್ನು ಪಡೆದರು.

2024ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ ಡೆಲಾಪೋರ್ಟೆ ಅವರಿಗೆ ನೀಡಿದ ಪರಿಹಾರವು 9,89,130 ಅನ್ವೆಸ್ಟೆಡ್ ಸ್ಟಾಕ್ ಆಯ್ಕೆ ಮತ್ತು 4.33 ಮಿಲಿಯನ್ ಡಾಲರ್ ಮೊತ್ತದ ನಗದು ಪರಿಹಾರವನ್ನು ಒಳಗೊಂಡಿದೆ.

Continue Reading

ದೇಶ

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Share Market: ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

VISTARANEWS.COM


on

Share Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Share Market) ಗುರುವಾರ (ಮೇ 23) ಹೂಡಿಕೆದಾರರಿಗೆ ಭಾರಿ ಲಾಭವಾಗಿದೆ. ನಿಫ್ಟಿ (Nifty) 303 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 22,900 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿ 986 ಅಂಕಗಳ ಏರಿಕೆಯೊಂದಿಗೆ 75,206 ಪಾಯಿಂಟ್ಸ್‌ ತಲುಪುವ ಮೂಲಕ ದಾಖಲೆ ಸೃಷ್ಟಿಸಿತು. ಸೆನ್ಸೆಕ್ಸ್‌ (Sensex) ಶೇ.1.33ರಷ್ಟು ಏರಿಕೆಯಾದರೆ, ನಿಫ್ಟಿ ಕೂಡ ಶೇ.1.33ರಷ್ಟು ಏರಿಕೆಯಾಯಿತು. ನಿಫ್ಟಿ ಮಿಡ್‌ಕ್ಯಾಪ್‌ ಇಂಡೆಕ್ಸ್‌ ಕೂಡ 238 ಪಾಯಿಂಟ್‌ಗಳ ಏರಿಕೆಯೊಂದಿಗೆ 52,405 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿಯ ಸ್ಮಾಲ್‌ಕ್ಯಾಪ್‌ ಕೂಡ 27 ಅಂಕಗಳ ಏರಿಕೆಯೊಂದಿಗೆ 16,909 ಪಾಯಿಂಟ್ಸ್‌ ತಲುಪಿತು.

ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

ಇನ್ನು ಸನ್‌ ಫಾರ್ಮಾ, ಪವರ್‌ ಗ್ರಿಡ್‌, ಎನ್‌ಟಿಪಿಸಿ, ಜೆಎಸ್‌ಡಬ್ಲ್ಯೂ ಸ್ಟೀಲ್‌, ಐಟಿಸಿ, ಟಾಟಾ ಸ್ಟೀಲ್‌ ನಷ್ಟ ಹೊಂದಿದವು. ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಮನಿ-ಗೈಡ್

Money Guide: ಜನಪ್ರಿಯವಾಗುತ್ತಿದೆ ʼಈಗ ಖರೀದಿಸಿ, ನಂತರ ಪಾವತಿಸಿʼ ಆಯ್ಕೆ: ಏನಿದು ಬಿಎನ್‌ಪಿಎಲ್‌? ಬಳಕೆ ಹೇಗೆ? ಇಲ್ಲಿದೆ ವಿವರ

Money Guide: ಯಾವುದೇ ಒಂದು ವಸ್ತು ಖರೀದಿಸಲು ತಕ್ಷಣಕ್ಕೆ ನಿಮ್ಮ ಬಳಿ ಹಣ ಇಲ್ಲದಿದ್ದರೆ ಹೆಸರೇ ಹೇಳುವಂತೆ ಈಗ ಖರೀದಿಸಿ ನಂತರ ಪಾವತಿಸಬಹುದು ಆಯ್ಕೆಯನ್ನು ಬಳಸಿಕೊಳ್ಳಬಹುದು. ಇ-ಕಾಮರ್ಸ್ ತಾಣಗಳು ಈ ವಿಧಾನದ ಮೂಲಕ ಗ್ರಾಹಕರಿಗೆ ವಸ್ತುಗಳ ಖರೀದಿಗೆ ಬಡ್ಡಿರಹಿತ ಕಿರು ಅವಧಿಯ ಸಾಲಗಳನ್ನು ಒದಗಿಸುತ್ತಿವೆ. ಅಂದರೆ ನೀವು ವಸ್ತು ಖರೀದಿಸಿದ ಬಳಿಕ ಹಂತ ಹಂತವಾಗಿ ಕಂತುಗಳಲ್ಲಿ ದುಡ್ಡು ಪಾವತಿಸದರಾಯ್ತು. ಅಂದರೆ ಈ ಸಾಲ ಬಳಸಿಕೊಂಡು ಗ್ರಾಹಕರು ವಸ್ತುಗಳನ್ನು ಖರೀದಿಸಿ, ಆ ಬಳಿಕ ಬಡ್ಡಿರಹಿತ ಇಎಂಐಗಳ ಮೂಲಕ ಪಾವತಿ ಮಾಡಬಹುದು.

VISTARANEWS.COM


on

Money Guide
Koo

ಬೆಂಗಳೂರು: ಬಿಎನ್‌ಪಿಎಲ್‌ (BNPL) ಬಗ್ಗೆ ನಿಮಗೆ ಗೊತ್ತೆ? ಬಿಎಸ್‌ಎಸ್‌ಎಲ್‌ ಗೊತ್ತು. ಇದೇನಿದು ಬಿಎನ್‌ಪಿಎಲ್‌ ಎಂದು ಎಂದು ಜಾಸ್ತಿ ತಲೆ ಕೆಡಿಸಿಕೊಳ್ಳಬೇಡಿ. ʼಈಗ ಖರೀದಿಸಿ, ನಂತರ ಪಾವತಿಸಿʼ (Buy Now, Pay Later)ಯ ಸಂಕ್ಷಿಪ್ತ ರೂಪವೇ ಬಿಎನ್‌ಪಿಎಲ್‌. ಯಾವುದೇ ಒಂದು ವಸ್ತು ಖರೀದಿಸಲು ತಕ್ಷಣಕ್ಕೆ ನಿಮ್ಮ ಬಳಿ ಹಣ ಇಲ್ಲದಿದ್ದರೆ ಹೆಸರೇ ಹೇಳುವಂತೆ ಈಗ ಖರೀದಿಸಿ ನಂತರ ಪಾವತಿಸಬಹುದು ಆಯ್ಕೆಯನ್ನು ಬಳಸಿಕೊಳ್ಳಬಹುದು. ಇ-ಕಾಮರ್ಸ್ ತಾಣಗಳು ಈ ವಿಧಾನದ ಮೂಲಕ ಗ್ರಾಹಕರಿಗೆ ವಸ್ತುಗಳ ಖರೀದಿಗೆ ಬಡ್ಡಿರಹಿತ ಕಿರು ಅವಧಿಯ ಸಾಲಗಳನ್ನು ಒದಗಿಸುತ್ತಿವೆ. ಅಂದರೆ ನೀವು ವಸ್ತು ಖರೀದಿಸಿದ ಬಳಿಕ ಹಂತ ಹಂತವಾಗಿ ಕಂತುಗಳಲ್ಲಿ ದುಡ್ಡು ಪಾವತಿಸದರಾಯ್ತು. ಅಂದರೆ ಈ ಸಾಲ ಬಳಸಿಕೊಂಡು ಗ್ರಾಹಕರು ವಸ್ತುಗಳನ್ನು ಖರೀದಿಸಿ, ಆ ಬಳಿಕ ಬಡ್ಡಿರಹಿತ ಇಎಂಐಗಳ ಮೂಲಕ ಪಾವತಿ ಮಾಡಬಹುದು. ಸದ್ಯ ಇದು ಭಾರತೀಯ ಮಧ್ಯಮ ವರ್ಗದ ಜನರ ನೆಚ್ಚಿನ ಆಯ್ಕೆ ಎನಿಸಿಕೊಂಡಿದೆ. ಈ ಬಗೆಗಿನ ವಿವರ ಇಲ್ಲಿದೆ (Money Guide).

ಗಮನ ಸೆಳೆಯುತ್ತಿದೆ

ಈ ಬಿಎನ್‌ಪಿಎಲ್‌ ಸಾಂಪ್ರದಾಯಿಕ ಕ್ರೆಡಿಟ್ ಕಾರ್ಡ್‌ ಮತ್ತು ಸಾಲಗಳಿಗೆ ಪರ್ಯಾಯವಾಗಿ ಗುರುತಿಸಿಕೊಂಡಿದೆ. ಬಡ್ಡಿ ಪಾವತಿಸಬೇಕಾಗಿಲ್ಲ ಎನ್ನುವ ಅಂಶವೇ ಈ ಪಾವತಿ ವಿಧಾನದ ಬಹುದೊಡ್ಡ ಪ್ಲಸ್‌ ಪಾಯಿಂಟ್‌. ಅಲ್ಲದೆ ಬಿಎನ್‌ಪಿಎಲ್ ಸೇವೆ ಸಾಮಾನ್ಯವಾಗಿ ತ್ವರಿತ ಮತ್ತು ಸುಲಭವಾಗಿ ಮಂಜೂರಾಗುತ್ತದೆ. ಇದಕ್ಕೆ ಕನಿಷ್ಠ ಕ್ರೆಡಿಟ್ ಚೆಕ್ ಗಳ ಅಗತ್ಯವಿರುತ್ತದೆ. ಆದರೆ ಗಮನಿಸಿ ಬಿಎನ್‌ಪಿಎಲ್ ತಿಂಗಳ ಮರುಪಾವತಿಯನ್ನು ಮಿಸ್ ಮಾಡಿದರೆ ಅದು ನಿಮ್ಮ ಸಿಬಿಲ್ ಸ್ಕೋರ್ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ಸೂಕ್ತ ಸಮಯದಲ್ಲಿ ಮರು ಪಾವತಿಗೆ ಗಮನ ಹರಿಸಿ. ಅಲ್ಲದೆ ಕ್ರೆಡಿಟ್‌ ಕಾರ್ಡ್‌ಗೆ ಹೋಲಿಸಿದರೆ ಬಿಎನ್‌ಪಿಎಲ್‌ ಕಾರ್ಡ್‌ಗಳಿಗೆ ಆರಂಭದಲ್ಲಿ ಅಲ್ಪ ಮೊತ್ತವಷ್ಟೇ ಲಭಿಸುತ್ತದೆ.

ಗಮನಿಸಬೇಕಾದ ಅಂಶ

ಬಿಎನ್‌ಪಿಎಲ್‌ ಕಾರ್ಡ್‌ ಪಡೆಯುವ ಮುನ್ನ ಈ ಅಂಶಗಳನ್ನು ಗಮನಿಸಿ.

  • ಬಜೆಟ್ ಮುಖ್ಯ: ಬಿಎನ್‌ಪಿಎಲ್ ಮೇಲ್ನೋಟಕ್ಕೆ ಅನುಕೂಲಕವೆಂದು ತೋರಬಹುದು. ಆದರೆ ನಿಮ್ಮ ಸಾಲ ಹೆಚ್ಚಾಗಲು ಇದು ಕಾರಣವಾಗಬಹುದು. ಬಿಎನ್‌ಪಿಎಲ್‌ ಕಾರ್ಡ್‌ ಪಡೆಯುವ ಮುನ್ನ ಅಸ್ತಿತ್ವದಲ್ಲಿರುವ ಸಾಲ ಮತ್ತು ಬಾಧ್ಯತೆಗಳನ್ನು ಪರಿಗಣಿಸಿ.
  • ಷರತ್ತುಗಳನ್ನು ಗಮನಿಸಿ: ಬಡ್ಡಿ-ಮುಕ್ತ ಎಂದು ಜಾಹೀರಾತು ನೀಡಲಾಗಿದ್ದರೂ ಪಾವತಿಯ ವಿಳಂಬಕ್ಕೆ ಹೆಚ್ಚಿನ ದಂಡ ಪಾವತಿಸಬೇಕಾಗುತ್ತದೆ. ಈ ದಂಡಗಳು ಮತ್ತು ಯಾವುದೇ ಪೂರ್ವಪಾವತಿ ನಿರ್ಬಂಧಗಳನ್ನು ಅರ್ಥ ಮಾಡಿಕೊಳ್ಳಲು ನಿಯಮಗಳು ಮತ್ತು ಷರತ್ತುಗಳನ್ನು ಸಂಪೂರ್ಣವಾಗಿ ಓದಿ.
  • ಸಿಬಿಲ್‌ ಸ್ಕೋರ್‌ ಮೇಲೆ ಪರಿಣಾಮ: ವಿಳಂಬ ಪಾವತಿ ನಿಮ್ಮ ಸಿಬಿಲ್‌ ಸ್ಕೋರ್‌ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಿ.
  • ಎಲ್ಲ ಶುಲ್ಕಗಳನ್ನು ಅರ್ಥ ಮಾಡಿಕೊಳ್ಳಿ: ಕೆಲವು ಬಿಎನ್‌ಪಿಎಲ್‌ ಸೇವೆಗಳು ಸಂಸ್ಕರಣಾ ಶುಲ್ಕಗಳನ್ನು ಹೊಂದಿರುತ್ತವೆ. ಇದರಲ್ಲಿ ಒಳಗೊಂಡಿರುವ ಎಲ್ಲ ವೆಚ್ಚಗಳನ್ನು ಅರ್ಥಮಾಡಿಕೊಳ್ಳಿ. ವಿಳಂಬ ಪಾವತಿ ಶುಲ್ಕಗಳು, ಸಂಸ್ಕರಣಾ ಶುಲ್ಕಗಳು ಅಥವಾ ದಂಡಗಳಂತಹ ಗುಪ್ತ ಶುಲ್ಕಗಳನ್ನು ಗಮನಿಸಿ.
  • ಸೀಮಿತ ಬಳಕೆ: ಬಿಎನ್‌ಪಿಎಲ್ ಎಲ್ಲೆಡೆ ಇಲ್ಲದಿರಬಹುದು. ಕ್ರೆಡಿಟ್ ಕಾರ್ಡ್‌ಗಳಿಗಿಂತ ಭಿನ್ನವಾಗಿ, ಬಿಎನ್‌ಪಿಎಲ್ ಕಾರ್ಡ್‌ ಅನ್ನು ನಿರ್ದಿಷ್ಟ ವ್ಯಾಪಾರಿಗಳು ಅಥವಾ ಪ್ಲಾಟ್‌ಫಾರ್ಮ್‌ಗಳು ಮಾತ್ರವೇ ಬಳಸುತ್ತವೆ. ನಿಮ್ಮ ನೆಚ್ಚಿನ ಅಂಗಡಿಗಳು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಬಿಎನ್‌ಪಿಎಲ್ ಆಯ್ಕೆಯನ್ನು ಸ್ವೀಕರಿಸುತ್ತವೆಯೇ ಎಂದು ಪರಿಶೀಲಿಸಿ. ಅಲ್ಲದೆ ಇದು ವಿದೇಶದಲ್ಲಿ ಉಪಯೋಗಕ್ಕೆ ಬರುವುದಿಲ್ಲ.

ಪ್ರಮುಖ ಬ್ರ್ಯಾಂಡ್‌ಗಳು

ಭಾರತದಲ್ಲಿ ಲೇಜಿ ಪೇ, ಸಿಂಪ್ಲ, ಅಮೆಜಾನ್ ಪೇ ಲೇಟರ್, ಫ್ಲಿಪ್ ಕಾರ್ಟ್ ಪೇ ಲೇಟರ್ ಹಾಗೂ ಝೆಸ್ಟ್ ಮನಿ ಪ್ರಮುಖ ಬಿಎನ್‌ಪಿಎಲ್ ಬ್ರ್ಯಾಂಡ್ ಎನಿಸಿಕೊಂಡಿವೆ. ಈ ಎಲ್ಲ ಬ್ರ್ಯಾಂಡ್‌ಗಳು ಕಾರ್ಯವೈಖರಿ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಇರುತ್ತದೆ. ನಿರ್ದಿಷ್ಟ ಇ-ಕಾಮರ್ಸ್ ತಾಣದಿಂದ ಖರೀದಿಸುವಾಗ ನೀವು ‘Buy now, pay later’ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. ಒಟ್ಟು ಮೊತ್ತದಲ್ಲಿ ಸಣ್ಣ ಮೊತ್ತವನ್ನು ಆರಂಭದಲ್ಲಿ ಡೌನ್ ಪೇಮೆಂಟ್ ಮಾಡಬೇಕು. ಉಳಿದ ಮೊತ್ತವನ್ನು ಬಡ್ಡಿರಹಿತ ಇಎಂಐ ಮೂಲಕ ನಿರ್ದಿಷ್ಟ ಅವಧಿಯೊಳಗೆ ಪಾವತಿಸಬೇಕು.

ಯಾರು ಖರೀದಿಸಬಹುದು?

ಬಿಎನ್‌ಪಿಎಲ್‌ ಕಾರ್ಡ್‌ ಅನ್ನು ಖರೀದಿಸಲು ಬೇಕಾದ ಅರ್ಹತೆಗಳು: ಭಾರತದ ಟೈರ್ 1 ಅಥವಾ ಟೈರ್ 2 ನಗರದ ನಿವಾಸಿಯಾಗಿರಬೇಕು, ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ವೇತನ ಪಡೆಯುತ್ತಿರಬೇಕು, ನಿಮ್ಮ ಬ್ಯಾಂಕ್ ಖಾತೆ ಹಾಗೂ ಇತರ ಕೆವೈಸಿ ದಾಖಲೆಗಳನ್ನು ಹೊಂದಿರಬೇಕು.

ಇದನ್ನೂ ಓದಿ: Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Continue Reading

ಪ್ರಮುಖ ಸುದ್ದಿ

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Equity Market: ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ. ಜೂನ್‌ 4ರ ಬಳಿಕ ದೇಶದ ಷೇರು ಮಾರುಕಟ್ಟೆಯನ್ನು ನಿಯಂತ್ರಿಸುವುದು ಕಷ್ಟ ಎಂಬುದಾಗಿ ಮೋದಿ ಹೇಳಿರುವ ಬೆನ್ನಲ್ಲೇ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಇದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Equity Market
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರ ಬಳಿಕ ಭಾರತದ ಷೇರು ಮಾರುಕಟ್ಟೆಯನ್ನು ಹಿಡಿಯಲು ಆಗುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಜೂನ್‌ 4ರ ಬಳಿಕ ಹೂಡಿಕೆದಾರರಿಗೆ ಭಾರಿ ಲಾಭವಾಗಲಿದೆ ಎಂಬುದಾಗಿ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

ಹೌದು, 2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದರೊಂದಿಗೆ ಮಾರುಕಟ್ಟೆ ಬಂಡವಾಳ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ತಲುಪಿರುವುದು ಐತಿಹಾಸಿಕ ಎಂದೇ ಹೇಳಲಾಗುತ್ತಿದೆ. ಇದರಿಂದ ಹೂಡಿಕೆದಾರರ ವಿಶ್ವಾಸವೂ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗಿದೆ. 5 ಲಕ್ಷ ಕೋಟಿ ಡಾಲರ್‌ ಎಂದರೆ ಭಾರತದ 414.75 ಲಕ್ಷ ಕೋಟಿ ರೂ. ಆಗಿದೆ. ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿಯೇ ಮೊದಲ ಬಾರಿಗೆ ಇಷ್ಟೊಂದು ವೇಗದಲ್ಲಿ ಮಾರುಕಟ್ಟೆಯ ಬಂಡವಾಳವು ಏರಿಕೆಯಾಗಿದೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ನಿರೀಕ್ಷಿಸಲಾಗಿದೆ.

ಸದ್ಯ, ನಿಫ್ಟಿಯು ತನ್ನ ಗರಿಷ್ಠ ಪಾಯಿಂಟ್‌ಗಳಿಗಿಂತ 250 ಪಾಯಿಂಟ್‌ ಹಿಂದಿದೆ. ಆದರೂ, ಸಣ್ಣ ಹಾಗೂ ಮಧ್ಯಮ ಶ್ರೇಣಿಯ ಹೂಡಿಕೆಯು ಹೆಚ್ಚಾಗಿದೆ. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರತದ ಷೇರುಪೇಟೆಯು ಮಹತ್ವದ ಸ್ಥಾನ ಪಡೆದಿದೆ. ಹಾಂಕಾಂಗ್‌, ಜಪಾನ್‌, ಚೀನಾ ಹಾಗೂ ಅಮೆರಿಕದ ನಂತರ ಭಾರತದ ಷೇರುಪೇಟೆಯು ಬೃಹತ್‌ ಷೇರು ಮಾರುಕಟ್ಟೆ ಎನಿಸಿದೆ. 2027ರ ವೇಳೆಗೆ ಭಾರತವು ವಿಶ್ವದಲ್ಲೇ ಮೂರನೇ ಬೃಹತ್‌ ಆರ್ಥಿಕತೆ ರಾಷ್ಟ್ರ ಎಂಬ ಖ್ಯಾತಿ ಗಳಿಸುವ ವಿಶ್ವಾಸ ಹೊಂದಿದೆ. 2030ರ ವೇಳೆಗೆ ಮಾರುಕಟ್ಟೆ ಬಂಡವಾಳವು 10 ಲಕ್ಷ ಡಾಲರ್‌ ತಲುಪಬೇಕು ಎಂಬ ಗುರಿ ಇದೆ. ಇದರ ದಿಸೆಯಲ್ಲಿ ಈಕ್ವಿಟಿ ಮೌಲ್ಯವು ಗಣನೀಯವಾಗಿ ಏರಿಕೆಯಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ: LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Continue Reading
Advertisement
ayodhya ram mandir 1
ಪ್ರಮುಖ ಸುದ್ದಿ19 seconds ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ2 mins ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Share Market
ದೇಶ21 mins ago

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Viral Video
ವೈರಲ್ ನ್ಯೂಸ್24 mins ago

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Crime News
ದೇಶ47 mins ago

ಕುಡಿದು ಕಾರು ಓಡಿಸಿ ಇಬ್ಬರ ಕೊಂದ ಬಾಲಕನಿಗೆ ರಿಮಾಂಡ್ ಹೋಮ್‌ನಲ್ಲಿ ಏನೆಲ್ಲ ಸವಲತ್ತಿದೆ ನೋಡಿ!

cm siddaramaiah meet 2
ಪ್ರಮುಖ ಸುದ್ದಿ53 mins ago

CM Siddaramaiah: ರೈತರ ಬರ ಪರಿಹಾರ ಸಮಸ್ಯೆಯಾದರೆ ಸಹಿಸುವುದಿಲ್ಲ- ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

viral video
ಕ್ರೀಡೆ1 hour ago

Viral Video: ಔಟಾದ ಸಿಟ್ಟಿನಲ್ಲಿ ಡಗೌಟ್​​ ಸ್ಟ್ಯಾಂಡ್​ಗೆ ಕೈ ಬಡಿದ ಯಶಸ್ವಿ ಜೈಸ್ವಾಲ್

Prajwal Revanna Case JDS mega plan to cancel Parliament membership even if Rahul Gandhi wins
ರಾಜಕೀಯ1 hour ago

Prajwal Revanna Case: ರಾಹುಲ್‌ ಗಾಂಧಿ ಗೆದ್ದರೂ ಸಂಸತ್‌ ಸದಸ್ಯತ್ವ ರದ್ದು ಮಾಡಲು ಜೆಡಿಎಸ್‌ ಮೆಗಾ ಪ್ಲ್ಯಾನ್‌!

Naxal activities
ತುಮಕೂರು2 hours ago

Naxal activities: ವೆಂಕಟಮ್ಮನಹಳ್ಳಿ ನಕ್ಸಲ್ ದಾಳಿ ಕೇಸ್‌; 19 ವರ್ಷಗಳಿಂದ ತಲೆಮರೆಸಿಕೊಂಡಿದ್ದವನು ಅರೆಸ್ಟ್‌

Viral Video
ವೈರಲ್ ನ್ಯೂಸ್2 hours ago

Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ11 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌