Stock Market: ಷೇರುಪೇಟೆ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕ ಕುಸಿತ; 17 ಲಕ್ಷ ಕೋಟಿ ರೂ. ಲಾಸ್‌! - Vistara News

ವಾಣಿಜ್ಯ

Stock Market: ಷೇರುಪೇಟೆ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕ ಕುಸಿತ; 17 ಲಕ್ಷ ಕೋಟಿ ರೂ. ಲಾಸ್‌!

Stock Market: ಭಾರತೀಯ ಷೇರುಪೇಟೆಯಲ್ಲಿ ಸೋಮವಾರ (ಆಗಸ್ಟ್‌ 5) ಭಾರಿ ಕುಸಿತ ಕಂಡು ಬಂದಿದೆ. ಬಿಎಸ್‌ಇ ಸೆನ್ಸೆಕ್ಸ್ (Sensex) ಮತ್ತು ಎನ್‌ಎಸ್‌ಇ ನಿಫ್ಟಿ (Nifty) ಶೇ. 2ಕ್ಕೂ ಅಧಿಕ ನೆಲಕಚ್ಚಿದೆ. ಬಿಎಸ್‌ಇ ಸೆನ್ಸೆಕ್ಸ್ 2,393 ಪಾಯಿಂಟ್ಸ್ ಕುಸಿದು 78,588ಕ್ಕೆ ತಲುಪಿದರೆ, ನಿಫ್ಟಿ 50 ಸೂಚ್ಯಂಕವು ಆರಂಭಿಕ ವ್ಯವಹಾರಗಳಲ್ಲಿ 405 ಪಾಯಿಂಟ್ಸ್ ಕುಸಿದು 24,302 ಮಟ್ಟಕ್ಕೆ ಬಂದು ಮುಟ್ಟಿದೆ.

VISTARANEWS.COM


on

Stock Market
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಭಾರತೀಯ ಷೇರುಪೇಟೆ (Stock Market)ಯಲ್ಲಿ ಸೋಮವಾರ (ಆಗಸ್ಟ್‌ 5) ಭಾರಿ ಕುಸಿತ ಕಂಡು ಬಂದಿದೆ. ಬಿಎಸ್‌ಇ ಸೆನ್ಸೆಕ್ಸ್ (Sensex) ಮತ್ತು ಎನ್‌ಎಸ್‌ಇ ನಿಫ್ಟಿ (Nifty) ಶೇ. 2ಕ್ಕೂ ಅಧಿಕ ನೆಲಕಚ್ಚಿದೆ. ಬಿಎಸ್‌ಇ ಸೆನ್ಸೆಕ್ಸ್ 2,393 ಪಾಯಿಂಟ್ಸ್ ಕುಸಿದು 78,588ಕ್ಕೆ ತಲುಪಿದರೆ, ನಿಫ್ಟಿ 50 ಸೂಚ್ಯಂಕವು ಆರಂಭಿಕ ವ್ಯವಹಾರಗಳಲ್ಲಿ 405 ಪಾಯಿಂಟ್ಸ್ ಕುಸಿದು 24,302 ಮಟ್ಟಕ್ಕೆ ಬಂದು ಮುಟ್ಟಿದೆ. ಕೆಲವೇ ಗಂಟೆಗಳಲ್ಲಿ ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ. ನಷ್ಟವಾಗಿದೆ.

ಸುಮಾರು 442 ಷೇರುಗಳ ಮೌಲ್ಯ ವೃದ್ಧಿಸಿದರೆ, 2,368 ಷೇರುಗಳು ಕುಸಿದವು ಮತ್ತು 154 ಷೇರುಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ನಿಫ್ಟಿಯಲ್ಲಿ ಅಪೊಲೊ ಆಸ್ಪತ್ರೆ ಮತ್ತು ಸನ್ ಫಾರ್ಮಾ ಲಾಭ ಗಳಿಸಿದ ಪ್ರಮುಖ ಕಂಪನಿಗಳು. ಇನ್ನು ಮಾರುತಿ ಸುಜುಕಿ, ಟಾಟಾ ಮೋಟಾರ್ಸ್, ಹಿಂಡಾಲ್ಕೊ, ಟೈಟಾನ್ ಮತ್ತು ಟಾಟಾ ಸ್ಟೀಲ್ ನಷ್ಟ ಅನುಭವಿಸಿದವು.

ಕುಸಿತಕ್ಕೆ ಕಾರಣವೇನು?

ಅಮೆರಿಕದಲ್ಲಿ ಆರ್ಥಿಕ ಹಿಂಜರಿತದ ಭೀತಿ: ಕಳೆದ ವಹಿವಾಟಿನ ದಿನದಂದು ಅಮೆರಿಕದ ಮಾರುಕಟ್ಟೆಯಲ್ಲಿ ಕುಸಿತ ಕಂಡುಬಂದಿದೆ. ಅದರ ಪರಿಣಾಮ ಇಂದು ಜಗತ್ತಿನ ಎಲ್ಲ ಮಾರುಕಟ್ಟೆಗಳಲ್ಲೂ ಗೋಚರಿಸುತ್ತಿದೆ. ಇನ್ನು ಅಮೆರಿಕದ ಆರ್ಥಿಕತೆಯು ಆರ್ಥಿಕ ಹಿಂಜರಿತದ ಹಂತವನ್ನು ಪ್ರವೇಶಿಸಬಹುದು ಎಂಬ ಆತಂಕಗಳಿವೆ. ಕಳೆದ ವರ್ಷದ ಮಾಸಿಕ ಸರಾಸರಿ ಉದ್ಯೋಗಗಳಿಗೆ ಹೋಲಿಸಿದರೆ ಅಮೆರಿಕದಲ್ಲಿ ಜುಲೈನಲ್ಲಿ ನೇಮಕಾತಿ ಪ್ರಕ್ರಿಯೆ ಮಂದಗತಿಯಲ್ಲಿ ನಡೆದಿದೆ. ಜತೆಗೆ ನಿರುದ್ಯೋಗ ಪ್ರಮಾಣ ಶೇ. 4.3ಕ್ಕೆ ಏರಿದೆ. ಇದು 2021ರ ಅಕ್ಟೋಬರ್ ನಂತರ ದಾಖಲಾದ ಗರಿಷ್ಠ ಮಟ್ಟ.

ಬ್ಯಾಂಕ್ ಆಫ್ ಜಪಾನ್‌ನ ಬದಲಾದ ನಿಯಮ: ಬ್ಯಾಂಕ್ ಆಫ್ ಜಪಾನ್ ತನ್ನ ಬೆಂಚ್ ಮಾರ್ಕ್ ಬಡ್ಡಿದರವನ್ನು ಹೆಚ್ಚಿಸಿದೆ. ಇದರಿಂದ ಜಪಾನ್‌ನ ನಿಕೈ 225 ಸೂಚ್ಯಂಕವು ಅಮೆರಿಕನ್‌ ಡಾಲರ್ ವಿರುದ್ಧ ಜಪಾನಿನ ಯೆನ್ ಮೌಲ್ಯವನ್ನು ಹೆಚ್ಚಿಸಿದೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿ: ಇದು ಜಾಗತಿಕ ಮಾರುಕಟ್ಟೆಯಲ್ಲಿ ನಕಾರಾತ್ಮಕ ಭಾವನೆಯನ್ನು ಸೃಷ್ಟಿಸಿದೆ. ಇದರ ಪರಿಣಾಮ ಭಾರತೀಯ ಷೇರು ಮಾರುಕಟ್ಟೆಯಲ್ಲೂ ಕಂಡು ಬಂದಿದೆ. ಹಮಾಸ್ ಮುಖ್ಯಸ್ಥ ಮತ್ತು ಹಿಜ್ಬುಲ್ಲಾ ಮಿಲಿಟರಿ ಮುಖ್ಯಸ್ಥನ ಹತ್ಯೆಗೆ ಇಸ್ರೇಲ್‌ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್, ಹಮಾಸ್ ಮತ್ತು ಹಿಜ್ಬುಲ್ಲಾ ಪ್ರತಿಜ್ಞೆ ಮಾಡಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇದು ತೈಲ ಬೆಲೆಗಳ ಹೆಚ್ಚಳಕ್ಕೂ ಕಾರಣವಾಗಬಹುದು.

ಭಾರತ ಮಾತ್ರವಲ್ಲ ಏಷ್ಯನ್ ಮಾರುಕಟ್ಟೆಯಲ್ಲಿ ಇಂದು ಕುಸಿತ ಕಂಡುಬಂದಿದೆ. ಜಪಾನ್‌ನ ನಿಕ್ಕಿ ಶೇ. 4.63 ಮತ್ತು ಹಾಂಗ್‌ಕಾಂಗ್‌ನ ಹ್ಯಾಂಗ್ ಸೆಂಗ್ ಶೇ. 0.58ರಷ್ಟು ಕುಸಿದಿವೆ. ಚೀನಾದ ಶಾಂಘೈ ಕಾಂಪೋಸಿಟ್ ಕೂಡ ಶೇ. 0.22ರಷ್ಟು ಇಳಿಕೆ ಕಂಡಿದೆ.

ಇದನ್ನೂ ಓದಿ: Viral News: 20 ವರ್ಷಗಳ ಹಿಂದೆ ಅಜ್ಜ ಖರೀದಿಸಿದ್ದ ಷೇರು; ಮೊಮ್ಮಗಳು ರಾತ್ರೋರಾತ್ರಿ ಕೋಟ್ಯಧಿಪತಿ!

ಆಗಸ್ಟ್‌ 1ರಂದು ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದ್ದವು. ಮುಂಬೈ ಷೇರುಪೇಟೆ ಸೆನ್ಸೆಕ್ಸ್‌ ಮೊದಲ ಬಾರಿಗೆ 82,000 ಗಡಿಯನ್ನು ದಾಟಿದ್ದು, ನಿಫ್ಟಿ 50 ಸೂಚ್ಯಂಕವು 25,000 ಗಡಿದಾಟಿ ಮುಂದುವರಿದಿತ್ತು. ಆಗಸ್ಟ್‌ 2ರಂದು ಕುಸಿತ ಕಂಡು ಬಂದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

Stock Market News: ಷೇರು ಮಾರುಕಟ್ಟೆ ಮೌಲ್ಯ ಹಿಂದಿನ ದಾಖಲಾತಿ ರೂ.457.16 ಲಕ್ಷ ಕೋಟಿಯ ಮೌಲ್ಯದಿಂದ ರೂ.440.13 ಲಕ್ಷ ಕೋಟಿಗೆ ಒಟ್ಟಾರೆ ಮೌಲ್ಯ ಕುಸಿಯಿತು. ಸೆನ್ಸೆಕ್ಸ್ 2,037 ಅಂಕಗಳನ್ನು ಕಳೆದುಕೊಂಡು 78,944ಕ್ಕೆ ಮತ್ತು ನಿಫ್ಟಿ 661 ಅಂಕಗಳನ್ನು ಕಳೆದುಕೊಂಡು 24,056ಕ್ಕೆ ತಲುಪಿತು.

VISTARANEWS.COM


on

Indian stock market
Koo

ಮುಂಬಯಿ: ಷೇರು ಮಾರುಕಟ್ಟೆಯಲ್ಲಿ (Stock Market News) ಇಂದು ಸಂಭವಿಸಿದ ಭಾರೀ ಕುಸಿತದ ಪರಿಣಾಮ, ಹೂಡಿಕೆದಾರರ (Investors) ) ಸಂಪತ್ತು ರೂ.17.03 ಲಕ್ಷ ಕೋಟಿಯಷ್ಟು ನಷ್ಟ ಕಂಡಿತು. ಷೇರು ಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ (Nifty) ಇಂದು ಎರಡು ಸಲ ಭಾರಿ ಕುಸಿತ ದಾಖಲಿಸಿದವು. ಅಮೆರಿಕದ ಆರ್ಥಿಕತೆಯ (US Economy recession) ಹಿಂಜರಿತದ ಭೀತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಭಾರಿ ಪಲ್ಲಟ ಆಗಿದೆ.

ಷೇರು ಮಾರುಕಟ್ಟೆ ಮೌಲ್ಯ ಹಿಂದಿನ ದಾಖಲಾತಿ ರೂ.457.16 ಲಕ್ಷ ಕೋಟಿಯ ಮೌಲ್ಯದಿಂದ ರೂ.440.13 ಲಕ್ಷ ಕೋಟಿಗೆ ಒಟ್ಟಾರೆ ಮೌಲ್ಯ ಕುಸಿಯಿತು. ಸೆನ್ಸೆಕ್ಸ್ 2,037 ಅಂಕಗಳನ್ನು ಕಳೆದುಕೊಂಡು 78,944ಕ್ಕೆ ಮತ್ತು ನಿಫ್ಟಿ 661 ಅಂಕಗಳನ್ನು ಕಳೆದುಕೊಂಡು 24,056ಕ್ಕೆ ತಲುಪಿತು. ಟಾಟಾ ಮೋಟಾರ್ಸ್, ಅದಾನಿ ಪೋರ್ಟ್ಸ್, ಎಂ & ಎಂ, ಎಸ್‌ಬಿಐ, ಜೆಎಸ್‌ಡಬ್ಲ್ಯೂ ಸ್ಟೀಲ್ ಮತ್ತು ಟೈಟಾನ್‌ನಂತಹ ಷೇರುಗಳು ಸೆನ್ಸೆಕ್ಸ್ 5.04% ವರೆಗೆ ಕುಸಿದವು. ಸೆನ್ಸೆಕ್ಸ್‌ನ 30 ಷೇರುಗಳಲ್ಲಿ 28 ಷೇರುಗಳು ರೆಡ್‌ನಲ್ಲಿ ವಹಿವಾಟಾಗುತ್ತಿವೆ.

ನಿಫ್ಟಿ ಷೇರುಗಳು ಕುಸಿದವು. 46 ನಿಫ್ಟಿ ಶೇರುಗಳು ರೆಡ್‌ನಲ್ಲಿ ವಹಿವಾಟಾಗುತ್ತಿವೆ. ಟಾಟಾ ಮೋಟಾರ್ಸ್, ಹಿಂಡಾಲ್ಕೊ, ಒಎನ್‌ಜಿಸಿ, ಶ್ರೀರಾಮ್ ಫೈನಾನ್ಸ್ ಮತ್ತು ಜೆಎಸ್‌ಡಬ್ಲ್ಯೂ ಸ್ಟೀಲ್ ನಿಫ್ಟಿಯಲ್ಲಿ ಟಾಪ್ ಲೂಸರ್ ಆಗಿದ್ದು, ಆರಂಭಿಕ ವ್ಯವಹಾರಗಳಲ್ಲಿ 4.37% ವರೆಗೆ ಕುಸಿದಿದೆ.

ಇಂದು 88 ಷೇರುಗಳು ತಮ್ಮ 52 ವಾರಗಳ ಗರಿಷ್ಠ ಮಟ್ಟವನ್ನು ತಲುಪಿವೆ. ಮತ್ತೊಂದೆಡೆ, ಸೋಮವಾರದ ಆರಂಭಿಕ ವ್ಯವಹಾರಗಳಲ್ಲಿ 42 ಷೇರುಗಳು ಬಿಎಸ್‌ಇಯಲ್ಲಿ ತಮ್ಮ 52 ವಾರಗಳ ಕನಿಷ್ಠ ಮಟ್ಟವನ್ನು ತಲುಪಿದವು. 3,421 ಷೇರುಗಳಲ್ಲಿ 394 ಷೇರುಗಳು ಹಸಿರು ಬಣ್ಣದಲ್ಲಿ ವಹಿವಾಟಾಗಿವೆ. ಸುಮಾರು 2891 ಷೇರುಗಳು ಕೆಂಪು ಬಣ್ಣದಲ್ಲಿ ವಹಿವಾಟು ನಡೆಸುತ್ತಿದ್ದರೆ 136 ಷೇರುಗಳು ಬದಲಾಗದೆ ಉಳಿದಿವೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರ ನಿವ್ವಳ ಆಧಾರದ ಮೇಲೆ ರೂ. 3,310 ಕೋಟಿ ಮೌಲ್ಯದ ಈಕ್ವಿಟಿಗಳನ್ನು ಮಾರಾಟ ಮಾಡಿದರು. ಆದರೆ ದೇಶೀಯ ಹೂಡಿಕೆದಾರರು ರೂ. 2,965.94 ಕೋಟಿ ಷೇರುಗಳನ್ನು ಖರೀದಿಸಿದ್ದಾರೆ. ಇದು ತಾತ್ಕಾಲಿಕ ಎನ್‌ಎಸ್‌ಇ ಡೇಟಾ.

ಶುಕ್ರವಾರದ ವಹಿವಾಟಿನಲ್ಲಿ ನಿಫ್ಟಿ 293 ಪಾಯಿಂಟ್‌ಗಳ ಕುಸಿತದೊಂದಿಗೆ 24,717 ಕ್ಕೆ ಕೊನೆಗೊಂಡಿತು ಮತ್ತು ಸೆನ್ಸೆಕ್ಸ್ 886 ಪಾಯಿಂಟ್‌ಗಳನ್ನು ಕಳೆದುಕೊಂಡು 80,982 ಕ್ಕೆ ತಲುಪಿದೆ.

ಅಮೆರಿಕದ ಮಾರುಕಟ್ಟೆಗಳು

ಯುಎಸ್ ಆರ್ಥಿಕತೆಯು ಆರ್ಥಿಕ ಹಿಂಜರಿತದ ಕಡೆಗೆ ಹೋಗಬಹುದು ಎಂದು ಆರ್ಥಿಕ ಮಾಹಿತಿ ತೋರಿಸಿದೆ. ಕಳೆದ ವಾರ ಬಿಡುಗಡೆಯಾದ ದುರ್ಬಲ US ಉದ್ಯೋಗಗಳ ಮಾಹಿತಿಯು ಶುಕ್ರವಾರ US ಮಾರುಕಟ್ಟೆಗಳಲ್ಲಿ ಕುಸಿತಕ್ಕೆ ಕಾರಣವಾಯಿತು. NASDAQ ಸಂಯೋಜಿತ ಸೂಚ್ಯಂಕವು 417 ಅಂಕಗಳು ಅಥವಾ 2.43% ರಷ್ಟು ಕುಸಿದು 16,776 ಕ್ಕೆ ತಲುಪಿದರೆ, S&P 500 ಸೂಚ್ಯಂಕ 1.84% ಅಥವಾ 100 ಪಾಯಿಂಟ್‌ಗಳು ಕಡಿಮೆಯಾಗಿ 5,346 ಕ್ಕೆ ತಲುಪಿದೆ. ಡೌ ಜೋನ್ಸ್ ಇಂಡಸ್ಟ್ರಿಯಲ್ ಸರಾಸರಿ 1.51% ಅಥವಾ 610 ಪಾಯಿಂಟ್‌ಗಳು ಶುಕ್ರವಾರ 39,737 ಕ್ಕೆ ಕುಸಿದವು.

ಅಮೆರಿಕದ ಕಾರ್ಮಿಕ ಮಾರುಕಟ್ಟೆಯಲ್ಲಿ 249,000 ಉದ್ಯೋಗ ಕುಸಿತ ಆಗಬಹುದು ಎಂದು ವರದಿಗಳು ಸೂಚಿಸಿವೆ. ಅಲ್ಲದೆ, USನಲ್ಲಿ ಜುಲೈನಲ್ಲಿ ISM ಉತ್ಪಾದನೆಯು ಕುಸಿದಿದೆ ಎಂದು ಡೇಟಾ ತೋರಿಸಿದೆ. ISM ಉತ್ಪಾದನಾ ಸೂಚ್ಯಂಕವು ಜೂನ್‌ನಲ್ಲಿ 48.5% ರಿಂದ ಜುಲೈನಲ್ಲಿ 46.8% ಕ್ಕೆ ಕುಸಿಯಿತು. ಇದು ಎಂಟು ತಿಂಗಳ ಕನಿಷ್ಠ. US ಕಾರ್ಖಾನೆಗಳು ಇನ್ನೂ ಕುಸಿಯುತ್ತಿವೆ.

ಏಷ್ಯ, ಯುರೋಪ್‌ ಮಾರುಕಟ್ಟೆಯಲ್ಲಿ ಕುಸಿತ

ಯುಎಸ್ ಮಾರುಕಟ್ಟೆಯಲ್ಲಿನ ದುರ್ಬಲತೆಯ ಭಾವನೆ ಏಷ್ಯನ್ ಮತ್ತು ಯುರೋಪಿಯನ್ ಮಾರುಕಟ್ಟೆಗಳ ಮೇಲೂ ಪರಿಣಾಮ ಬೀರಿದೆ. ಜಪಾನ್‌ನ ನಿಕ್ಕಿ ಇಂದು 2747 ಅಂಕಗಳಿಂದ 33,162 ಅಂಕಗಳಿಗೆ ಕುಸಿದಿದೆ ಮತ್ತು ಹ್ಯಾಂಗ್ ಸೆಂಗ್ 36 ಅಂಕಗಳಿಂದ 16,908ಕ್ಕೆ ಕುಸಿದಿದೆ. ತೈವಾನ್ ಸೂಚ್ಯಂಕವು 1584 ಅಂಕಗಳನ್ನು ಕಳೆದುಕೊಂಡು 20,044 ಕ್ಕೆ ತಲುಪಿದೆ. ಕೊಸ್ಪಿ ಸೋಮವಾರ 182 ಅಂಕಗಳ ಕುಸಿತ ಕಂಡು 2,494 ಅಂಕಗಳಿಗೆ ತಲುಪಿತ್ತು.

FTSE ಶುಕ್ರವಾರ 108 ಅಂಕಗಳೊಂದಿಗೆ 8174ಕ್ಕೆ ಕುಸಿದಿದೆ. ಫ್ರಾನ್ಸ್‌ನ CAC 119 ಅಂಕಗಳನ್ನು ಕಳೆದುಕೊಂಡು 7251 ಕ್ಕೆ ತಲುಪಿತು ಮತ್ತು DAX 421 ಅಂಕಗಳು ಕಡಿಮೆಯಾಗಿ 17,661 ಕ್ಕೆ ಕೊನೆಗೊಂಡಿತು.

ಇದನ್ನೂ ಓದಿ: Stock Market: ಷೇರುಪೇಟೆ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕ ಕುಸಿತ; 17 ಲಕ್ಷ ಕೋಟಿ ರೂ. ಲಾಸ್‌!

Continue Reading

ಚಿನ್ನದ ದರ

Gold Rate Today: ಸತತ ಎರಡನೆ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 5) ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಇಂದು ಕೂಡ ಅದೇ ಬೆಲೆ ಮುಂದುವರಿದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 5) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಇನ್ನು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಇಂದು ಕೂಡ ಅದೇ ಬೆಲೆ ಮುಂದುವರಿದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,760 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,700 ಮತ್ತು ₹ 6,47,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,464 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,580 ಮತ್ತು ₹ 7,05,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,485₹ 7,073
ಮುಂಬೈ₹ 6,470₹ 7,058
ಬೆಂಗಳೂರು₹ 6,470₹ 7,058
ಚೆನ್ನೈ₹ 6,450₹ 7,036

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 85 ಹಾಗೂ 8 ಗ್ರಾಂಗೆ ₹ 680 ಇದೆ. 10 ಗ್ರಾಂ ₹ 850 ಹಾಗೂ 1 ಕಿಲೋಗ್ರಾಂ ₹ 85,000 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Viral News: 20 ವರ್ಷಗಳ ಹಿಂದೆ ಅಜ್ಜ ಖರೀದಿಸಿದ್ದ ಷೇರು; ಮೊಮ್ಮಗಳು ರಾತ್ರೋರಾತ್ರಿ ಕೋಟ್ಯಧಿಪತಿ!

Continue Reading

ವಾಣಿಜ್ಯ

Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಮುಖಬೆಲೆಯ ನೋಟುಗಳನ್ನು (Indian Currency) ಮುದ್ರಿಸುತ್ತದೆ. ಎಲ್ಲ ನೋಟುಗಳ ಮುದ್ರಣ ವೆಚ್ಚ ಒಂದೇ ರೀತಿ ಇರುವುದಿಲ್ಲ. ಅವುಗಳ ಮೌಲ್ಯಕ್ಕೆ ಅನುಗುಣವಾಗಿ ಬದಲಾಗುತ್ತದೆ. ಈಗಾಗಲೇ ಚಲಾವಣೆಯಿಂದ ಹೊರತೆಗೆದಿರುವ 2,000 ರೂಪಾಯಿ ನೋಟಿನ ಮುದ್ರಣಕ್ಕೆ 2018 ರಲ್ಲಿ 4.18 ರೂಪಾಯಿ ವೆಚ್ಚವಾಗುತ್ತಿತ್ತು. ಬಳಿಕ ಅದು 3.53 ರೂಪಾಯಿಗೆ ಇಳಿಕೆಯಾಗಿತ್ತು. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Indian Currency
Koo

ವಿವಿಧ ನಾಣ್ಯ, ಮುಖಬೆಲೆಯ ನೋಟುಗಳನ್ನು (Indian Currency) ಮುದ್ರಿಸುವ ಭಾರತೀಯ ರಿಸರ್ವ್ ಬ್ಯಾಂಕ್‌ಗೆ (Reserve Bank of India) ಇವುಗಳನ್ನು ಮುದ್ರಿಸಲು ಎಷ್ಟು ಖರ್ಚಾಗುತ್ತದೆ (Printing costs) ಎಂಬುದು ತಿಳಿದರೆ ಆಶ್ಚರ್ಯವಾಗಬಹುದು. ಕೆಲವು ನೋಟುಗಳ ಮುದ್ರಣ ವೆಚ್ಚ ತುಂಬಾ ದುಬಾರಿಯಾಗಿದೆ. ನೋಟ್ ಬ್ಯಾನ್ ಆದ ಬಳಿಕ ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದೆ.

ಭಾರತೀಯ ರಿಸರ್ವ್ ಬ್ಯಾಂಕ್ 2024ರ ಮೇ ತಿಂಗಳಲ್ಲಿ 2,000 ರೂ. ಮುಖ ಬೆಲೆಯ ನೋಟುಗಳನ್ನು ತೆಗೆದು ಹಾಕಿತ್ತು. ಇದರ ವಾಪಸಾತಿಗೆ ಅಕ್ಟೋಬರ್ 7ರವರೆಗೆ ಹೊಸ ಗಡುವು ವಿಧಿಸಿದೆ. ಅಂದರೆ ಅಲ್ಲಿಯವರೆಗೆ ಮಾತ್ರ 2,000 ರೂ.ನ ನೋಟುಗಳು ಕಾನೂನು ಮೂಲಕ ಮಾನ್ಯವಾಗಿರುತ್ತವೆ. ಆದರೆ ಚಲಾವಣೆ ಮಾಡಲಾಗುವುದಿಲ್ಲ.

ಯಾವುದಕ್ಕೆ ಎಷ್ಟು ವೆಚ್ಚ?

ಆರ್‌ಬಿಐ ಮುದ್ರಿಸುವ ವಿವಿಧ ಮುಖಬೆಲೆಯ ನೋಟುಗಳ ಮುದ್ರಣ ವೆಚ್ಚವು ಒಂದೇ ರೀತಿ ಇರುವುದಿಲ್ಲ. 2,000 ರೂಪಾಯಿ ಒಂದು ನೋಟು ಮುದ್ರಣಕ್ಕೆ ಸರಿಸುಮಾರು 4 ರೂಪಾಯಿ ವೆಚ್ಚವಾಗುತ್ತದೆ. 2018ರಲ್ಲಿ 2,000 ರೂಪಾಯಿ ನೋಟಿನ ಮುದ್ರಣದ ವೆಚ್ಚ 4.18 ರೂಪಾಯಿ ಆಗಿದ್ದು, ಅನಂತರ ಅದು 3.53 ರೂಪಾಯಿಗೆ ಇಳಿಕೆಯಾಯಿತು.

ಕುತೂಹಲಕಾರಿ ವಿಷಯವೆಂದರೆ ಸರಾಸರಿ ಮೌಲ್ಯ ತೆಗೆದುಕೊಂಡರೆ ಅತ್ಯಧಿಕ ಮುದ್ರಣ ವೆಚ್ಚವಾಗುವುದು 10 ರೂ. ನೋಟುಗಳಿಗೆ ಎಂದರೆ ಆಶ್ಚರ್ಯವಾಗಬಹುದು. 10 ರೂಪಾಯಿಯ 1,000 ನೋಟುಗಳನ್ನು ಮುದ್ರಿಸಲು 960 ರೂ. ವೆಚ್ಚವಾಗುತ್ತದೆ. ಅಂದರೆ ಹತ್ತು ರೂಪಾಯಿಯ ಒಂದು ನೋಟಿಗೆ 96 ಪೈಸೆ ವೆಚ್ಚವಾಗುತ್ತದೆ!

100 ರೂ. ಗಳ 1,000 ನೋಟುಗಳನ್ನು ಮುದ್ರಿಸಲು 1,770 ರೂ., 200 ರೂ. ಗಳ 1,000 ನೋಟುಗಳನ್ನು ಮುದ್ರಿಸಲು 2,370 ರೂ., 500 ರೂ.ಗಳ 1,000 ನೋಟುಗಳನ್ನು ಮುದ್ರಿಸಲು 2,290 ರೂ. ಖರ್ಚಾಗುತ್ತದೆ. 2,000 ರೂಪಾಯಿಗಳ 1000 ನೋಟುಗಳನ್ನು ಮುದ್ರಿಸುವ ವೆಚ್ಚವು ಈ ಕೆಲವು ಮುಖಬೆಲೆಗಳಿಗೆ ಹೋಲಿಸಿದರೆ ಕಡಿಮೆಯಾಗಿದೆ.

Indian Currency
Indian Currency


ಚಲಾವಣೆಯಲ್ಲಿದ್ದ 2,000 ರೂ. ನೋಟುಗಳು

ಆರ್‌ಬಿಐ ಪ್ರಕಾರ ಮೇ 19ರವರೆಗೆ ಚಲಾವಣೆಯಲ್ಲಿದ್ದ 2,000 ರೂಪಾಯಿಗಳ ನೋಟುಗಳ ಒಟ್ಟು ಮೌಲ್ಯ 3.56 ಲಕ್ಷ ಕೋಟಿ ರೂಪಾಯಿ. ಇವುಗಳಲ್ಲಿ 3.42 ಲಕ್ಷ ಕೋಟಿ ರೂಪಾಯಿಗಳು ಬ್ಯಾಂಕ್‌ಗಳಿಗೆ ಮರಳಿದ್ದು ಸೆಪ್ಟೆಂಬರ್ 29 ರ ಹೊತ್ತಿಗೆ ಕೇವಲ 0.14 ಲಕ್ಷ ಕೋಟಿ ಚಲಾವಣೆಯಲ್ಲಿ ಉಳಿದಿದೆ. ಈ ನೋಟುಗಳನ್ನು ಠೇವಣಿ ಮಾಡಲು ಅಥವಾ ವಿನಿಮಯ ಮಾಡಿಕೊಳ್ಳಲು ಆರಂಭಿಕ ಗಡುವು ಸೆಪ್ಟೆಂಬರ್ 30 ಆಗಿತ್ತು.

2023ರ ಮೇ 19ರಂತೆ ಚಲಾವಣೆಯಲ್ಲಿರುವ 2,000 ರೂಪಾಯಿಗಳ ಬ್ಯಾಂಕ್‌ನೋಟುಗಳಲ್ಲಿ ಶೇ. 96ರಷ್ಟನ್ನು ಹಿಂತಿರುಗಿಸಲಾಗಿದೆ. ಹೆಚ್ಚುವರಿಯಾಗಿ, ಅಕ್ಟೋಬರ್ 8 ರಿಂದ ಬ್ಯಾಂಕ್ ಶಾಖೆಗಳಲ್ಲಿ 2,000 ರೂ. ಬ್ಯಾಂಕ್ ನೋಟುಗಳನ್ನು ಠೇವಣಿ ಮಾಡುವ ಅಥವಾ ಬದಲಾಯಿಸುವ ಪ್ರಕ್ರಿಯೆಯನ್ನು ನಿಲ್ಲಿಸಲಾಗುವುದು ಎಂದು ಆರ್ ಬಿಐ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: World Bank: ಅಮೆರಿಕದ ತಲಾ ಆದಾಯದ ಕಾಲು ಭಾಗ ತಲುಪಲು ಭಾರತಕ್ಕೆ 75 ವರ್ಷ ಬೇಕು: ವಿಶ್ವ ಬ್ಯಾಂಕ್‌

2,000 ರೂಪಾಯಿಗಳ ನೋಟುಗಳನ್ನು 19 ಆರ್‌ಬಿಐ ಇಶ್ಯೂ ಆಫೀಸ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಒಂದು ಬಾರಿಗೆ 20,000 ರೂ. ಅನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೇ ಆರ್‌ಬಿಐ ಇಶ್ಯೂ ಆಫೀಸ್‌ಗಳಲ್ಲಿ 2,000 ರೂ ಬ್ಯಾಂಕ್‌ನೋಟುಗಳನ್ನು ತಮ್ಮ ಭಾರತೀಯ ಬ್ಯಾಂಕ್ ಖಾತೆಗಳಿಗೆ ಯಾವುದೇ ಮೊತ್ತಕ್ಕೆ ಜಮಾ ಮಾಡಬಹುದು. ಹೆಚ್ಚುವರಿಯಾಗಿ, ದೇಶದೊಳಗೆ ಇರುವ ವ್ಯಕ್ತಿಗಳು ಅಥವಾ ಘಟಕಗಳು ಭಾರತದಲ್ಲಿನ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು 19 ಆರ್‌ಬಿಐ ಇಶ್ಯೂ ಕಚೇರಿಗಳಿಗೆ ಯಾವುದಾದರೂ ಇಂಡಿಯಾ ಪೋಸ್ಟ್ ಮೂಲಕ 2,000 ರೂ . ಬ್ಯಾಂಕ್ ನೋಟುಗಳನ್ನು ಕಳುಹಿಸುವ ಆಯ್ಕೆಯನ್ನು ಹೊಂದಿವೆ.

Continue Reading

ಮನಿ-ಗೈಡ್

Money Guide: ನೆರೆ, ಭೂಕುಸಿತದಿಂದ ನಿಮ್ಮ ಮನೆಯನ್ನು ರಕ್ಷಿಸಲು ಜಸ್ಟ್‌ ಹೀಗೆ ಮಾಡಿ ಸಾಕು

Money Guide: ನೆರೆ, ಭೂಕುಸಿತದಂತಹ ಪ್ರಕೃತಿ ದುರಂತ, ಬೆಂಕಿ ಆಕಸ್ಮಿಕ, ಕಳ್ಳತನದಂತಹ ಸಂದರ್ಭದಲ್ಲಿ ಪರಿಹಾರ ನೀಡುವ ಯೋಜನೆಯೇ ಗೃಹ ವಿಮೆ. ಮನೆ ಕಳೆದುಕೊಂಡರೂ ಬೀದಿಗೆ ಬೀಳದಂತೆ ಇದು ನೋಡಿಕೊಳ್ಳುತ್ತದೆ. ಅತ್ಯಂತ ಅಮೂಲ್ಯ ಮತ್ತು ಬೆಲೆ ಬಾಳುವ ಆಸ್ತಿಯಾದ ಮನೆಗೆ ವಿಮೆ ಮಾಡಿಸಲೇಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ಹೀಗಾಗಿ ಗೃಹ ವಿಮೆಯ ವಿವರ ಇಂದಿನ ಮನಿಗೈಡ್‌ನಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಸ್ವಂತ ಮನೆ ಹೊಂದಬೇಕು ಎನ್ನುವುದು ಬಹುತೇಕ ಎಲ್ಲರ ಕನಸು. ಆದರೆ ಈ ದುಬಾರಿ ಜಗತ್ತಿನಲ್ಲಿ ಇದು ಸುಲಭ ಅಲ್ಲವೇ ಅಲ್ಲ. ಇದಕ್ಕಾಗಿಯೇ ʼಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡುʼ ಎನ್ನುವ ಮಾತು ಪ್ರಚಲಿತದಲ್ಲಿದೆ. ಅಂದರೆ ಈ ಎರಡು ಕೆಲಸ ಬಹಳ ಶ್ರಮದಾಯಕವಾದುದು. ಅದಾಗ್ಯೂ ಸಾಲ ಮಾಡಿ, ಇದ್ದ ಉಳಿತಾಯವನ್ನೆಲ್ಲ ಒಟ್ಟುಗೂಡಿಸಿ ಮನೆ ನಿರ್ಮಾಣ ಮಾಡಿ ನಿಟ್ಟುಸಿರು ಬಿಡುವಷ್ಟರಲ್ಲಿ ಅಗ್ನಿ ಆಕಸ್ಮಿಕ, ನೆರೆ ಅಥವಾ ಭೂಕುಸಿತದಂತಹ ಅವಘಡ ಎದುರಾದರೆ? ಇತ್ತೀಚಿನ ದಿನಗಳಲ್ಲಿ ಇಂತಹ ಅಪಾಯವನ್ನು ತಳ್ಳಿ ಹಾಕುವಂತಿಲ್ಲ. ಪ್ರಕೃತಿಯ ಅಸಮತೋಲನದಿಂದಾಗಿ ಯಾವಾಗ, ಎಲ್ಲಿ ದುರಂತ ಎದುರಾಗುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಗೃಹ ವಿಮೆ (Home Insurance) ರಕ್ಷಾ ಕವಚದಂತೆ ನಮ್ಮನ್ನು ಕಾಪಾಡುತ್ತದೆ. ಮನೆ ಕಳೆದುಕೊಂಡರೂ ಬೀದಿಗೆ ಬೀಳದಂತೆ ನೋಡಿಕೊಳ್ಳುತ್ತದೆ. ಹಾಗಾದರೆ ಗೃಹ ವಿಮೆಯನ್ನು ಯಾರೆಲ್ಲ ಮಾಡಿಸಬಹುದು? ಯಾವೆಲ್ಲ ಕಾರಣಗಳಿಗೆ ಪರಿಹಾರ ದೊರೆಯುತ್ತದೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Money Guide).

ವರದಿಗಳ ಪ್ರಕಾರ ಭಾರತವು ಯಾವಾಗ ಬೇಕಾದರೂ ಪ್ರಾಕೃತಿಕ ದುರಂತ ಸಂಭವಿಸಬಹುದಾದ ದೇಶಗಳ ಪೈಕಿ ಒಂದು ಎನಿಸಿಕೊಂಡಿದೆ. 27 ರಾಜ್ಯಗಳು ವಿಪತ್ತು ಪೀಡಿತವಾಗಿವೆ. ಶೇ. 58.6ರಷ್ಟು ಭೂಪ್ರದೇಶವು ಮಧ್ಯಮದಿಂದ ಹೆಚ್ಚಿನ ತೀವ್ರತೆಯ ಭೂಕಂಪಗಳಿಗೆ ಗುರಿಯಾಗುವ ಮತ್ತು ಶೇ. 12ರಷ್ಟು ಭೂಮಿ ಪ್ರವಾಹ ಮತ್ತು ನದಿ ಸವೆತಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಾರೆ.

ಇನ್ನು 7,516 ಕಿ.ಮೀ. ವ್ಯಾಪ್ತಿಯ ಕರಾವಳಿಯಲ್ಲಿ ಪೈಕಿ 5,700 ಕಿ.ಮೀ.ಯಷ್ಟು ಚಂಡಮಾರುತ ಮತ್ತು ಸುನಾಮಿಗಳಿಗೆ ಗುರಿಯಾಗುತ್ತದೆ. ಕೃಷಿಯೋಗ್ಯ ಭೂಮಿಯ ಪೈಕಿ ಶೇ. 68ರಷ್ಟು ಬರಕ್ಕೆ ತುತ್ತಾಗಬಹುದು. ಶೇ. 15ರಷ್ಟು ಭೂ ಪ್ರದೇಶವು ಭೂ ಕುಸಿತಕ್ಕೆ ಗುರಿಯಾಗುವ ಅಪಾಯ ಎದುರಿಸುತ್ತಿದೆ. ವಿಶೇಷವಾಗಿ ಮಳೆಗಾಲದಲ್ಲಿ ಚಂಡಮಾರುತಗಳು, ಭೂಕುಸಿತಗಳು ಮತ್ತು ಮಿಂಚಿನಿಂದ ಉಂಟಾಗುವ ಅಪಾಯ ಹೆಚ್ಚು. ಇಷ್ಟೆಲ್ಲ ಅಪಾಯವಿದ್ದರೂ ನಾವು ಮನೆಗೆ ವಿಮೆ ಮಾಡಿಸಲು ಮುಂದಾಗುವುದಿಲ್ಲ ಎನ್ನುವುದು ವಿಪರ್ಯಾಸ. ಅತ್ಯಂತ ಅಮೂಲ್ಯ ಮತ್ತು ಬೆಲೆ ಬಾಳುವ ಆಸ್ತಿಯಾದ ಮನೆಗೆ ವಿಮೆ ಮಾಡಿಸಲೇಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಅಂಕಿ-ಅಂಶ ಏನು ಹೇಳುತ್ತದೆ?

ನೈಸರ್ಗಿಕ ವಿಕೋಪಕ್ಕೆ ತುತ್ತಾಗಿ ಮನೆ, ಆಸ್ತಿ ಕಳೆದುಕೊಳ್ಳುವವರ ಪೈಕಿ ಕೇವಲ ಶೇ. 8ರಷ್ಟು ಜನ ವಿಮೆ ಮಾಡಿಸಿಕೊಂಡಿರುತ್ತಾರೆ ಎನ್ನುತ್ತದೆ ಅಂಕಿ-ಅಂಶ. ಗೃಹ ವಿಮೆ ಕೇವಲ ರಕ್ಷಣೆಯಲ್ಲ; ಇದು ಕಠಿಣ ಪರಿಶ್ರಮದ ಮೂಲಕ ಗಳಿಸಿದ ಸ್ವತ್ತುಗಳನ್ನು ರಕ್ಷಿಸುವ ನಿರ್ಣಾಯಕ ಹೂಡಿಕೆ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ.

ಯಾಕಾಗಿ ಗೃಹ ವಿಮೆ?

ನಿಮ್ಮ ಮನೆಗೆ ಆಗಬಹುದಾದ ಹಾನಿ ಮತ್ತು ಅದರಲ್ಲಿನ ಬೆಲೆಬಾಳುವ ವಸ್ತುಗಳ ನಷ್ಟಕ್ಕೆ ಪರಿಹಾರ ಒದಗಿಸಲು ಗೃಹ ವಿಮೆ ಅತ್ಯಗತ್ಯ. ಜತೆಗೆ ಬೆಂಕಿ ಆಕಸ್ಮಿಕ, ಕಳ್ಳತನ, ಗಲಭೆ ಆದಾಗಲೂ ಪರಿಹಾರ ನೀಡುತ್ತದೆ. ಒಟ್ಟಿನಲ್ಲಿ ಮನೆಗೆ ಅನಿರೀಕ್ಷಿತವಾಗಿ ಉಂಟಾಗಬಹುದಾದ ಯಾವುದೇ ನಷ್ಟಗಳ ವಿರುದ್ಧ ರಕ್ಷಣೆ ನೀಡುವ ರಕ್ಷಾ ಕವಚದಂತೆ ಗೃಹ ವಿಮೆ ಕೆಲಸ ಮಾಡುತ್ತದೆ. ಹೀಗಾಗಿ ವೈಯಕ್ತಿಕ, ಆರೋಗ್ಯ, ವಾಹನ ವಿಮೆ ಮಾಡಿಸುವಂತೆ ಇದನ್ನು ಕೂಡ ಅತ್ಯಗತ್ಯವಾಗಿ ಮಾಡಿಸಬೇಕು.

ಗೃಹ ವಿಮೆ ಯಾರೆಲ್ಲ ಮಾಡಿಸಬಹುದು?

  • ಸ್ವಂತ ಮನೆ ಹೊಂದಿದವರು, ಭೂ ಮಾಲೀಕರು ಅಥವಾ ಬಾಡಿಗೆದಾರರು ಇನ್ಶೂರೆನ್ಸ್‌ ಖರೀದಿಸಬಹುದು. ಹೌದು, ಬಾಡಿಗೆದಾರರು ಸಹ ತಮ್ಮ ಮನೆಗಳಿಗೆ ವಿಮೆ ಮಾಡಬಹುದು.
  • ನಿವಾಸಕ್ಕಾಗಿ ಬಳಸುವ ಆಸ್ತಿಗಳಿಗೆ ಮಾತ್ರ ಗೃಹ ವಿಮೆಯನ್ನು ಖರೀದಿಸಬಹುದು. ವಸತಿಯನ್ನು ಯಾವುದೇ ವಾಣಿಜ್ಯ ಚಟುವಟಿಕೆಗೆ ಬಳಸಿದರೆ – ಗೃಹ ವಿಮೆ ಹೊರತುಪಡಿಸಿ ಸೂಕ್ತ ವಿಮಾ ಪಾಲಿಸಿ ಖರೀದಿಸಬೇಕು.

ಇದರಿಂದೆಲ್ಲ ರಕ್ಷಣೆ

ಗೃಹ ವಿಮೆ ಮಾಡಿಸಿದರೆ ವಿಶೇಷವಾಗಿ ಮಳೆಗಾಲದಲ್ಲಿ ಈ ಎಲ್ಲ ಕಾರಣಕ್ಕೆ ಮನೆಗೆ ಹಾನಿಯಾದರೆ ನಿಮಗೆ ಪರಿಹಾರ ಸಿಗಲಿದೆ.

  • ಚಂಡಮಾರುತ, ಸುಂಟರಗಾಳಿ, ಸುನಾಮಿ
  • ಪ್ರವಾಹ
  • ಮಿಂಚು, ಗುಡುಗು
  • ಭೂಕುಸಿತ
  • ಮರ ಬಿದ್ದು ಮನೆಗೆ ಹಾನಿ

ವಿಧಗಳು

ಮನೆಯ ರಚನೆ: ಇದು ನಿಮ್ಮ ಮನೆಗೆ ಉಂಟಾಗುವ ಹಾನಿಗೆ ಪರಿಹಾರ ನೀಡುತ್ತದೆ. ಗೃಹಬಳಕೆಯ ಔಟ್‌ಹೌಸ್‌, ಕಾಂಪೌಂಡ್ ಗೋಡೆಗಳು, ಪಾರ್ಕಿಂಗ್ ಸ್ಥಳ, ಸೌರ ಫಲಕಗಳು, ನೀರಿನ ಟ್ಯಾಂಕ್‌ ಮುಂತಾದವುಗಳನ್ನು ಇದು ಒಳಗೊಂಡಿರುತ್ತದೆ.

ಸಾಮಗ್ರಿ: ಈ ವಿಧದ ವಿಮೆ ನಿಮ್ಮ ಮನೆಯಲ್ಲಿನ ಗೃಹೋಪಯೋಗಿ ವಸ್ತುಗಳನ್ನು ಒಳಗೊಂಡಿದೆ. ಟಿವಿ, ರೆಫ್ರಿಜರೇಟರ್, ಪೀಠೋಪಕರಣಗಳು ಮತ್ತಿತರ ವಸ್ತುಗಳ ಹಾನಿಗೆ ಪರಿಹಾರ ನೀಡುತ್ತದೆ. ಹೆಚ್ಚುವರಿ ಪ್ರೀಮಿಯಂ ಪಾವತಿಸುವ ಮೂಲಕ ಆಭರಣಗಳು, ಕಲಾಕೃತಿಗಳು, ಬೆಳ್ಳಿಯ ವಸ್ತುಗಳು, ವರ್ಣಚಿತ್ರಗಳು ಮುಂತಾದ ಅಮೂಲ್ಯವಾದ ವಸ್ತುಗಳನ್ನು ಸಹ ನೀವು ಕವರ್ ಮಾಡಬಹುದು.

ಆಕಸ್ಮಿಕ ಸಾವು: ಈ ಕವರೇಜ್ ವಿಮಾದಾರರ ಸಾವಿನ ಸಂದರ್ಭದಲ್ಲಿ ನೆರವಾಗುತ್ತದೆ.

ಈ ಕೆಳಗಿನ ಕಾರಣಗಳಿಂದ ಮನೆಗೆ ಹಾನಿಯಾದರೆ ಗೃಹ ವಿಮೆಯ ಪರಿಹಾರ ಲಭ್ಯ

ವಿಮಾನ ದುರಂತ, ಗಲಭೆ, ಪ್ರತಿಭಟನೆ, ಕ್ಷಿಪಣಿ ಪ್ರಯೋಗ, ನೆರೆ, ಚಂಡ ಮಾರುತ, ಮಿಂಚು, ಭೂಕಂಪ, ಕಳವು, ಬೆಂಕಿ ಆಕಸ್ಮಿಕ.

ಈ ಕೆಳಗಿನ ಕಾರಣಗಳಿಂದ ಮನೆಗೆ ಹಾನಿಯಾದರೆ ಗೃಹ ವಿಮೆಯ ಪರಿಹಾರ ಲಭಿಸುವುದಿಲ್ಲ

ನಗದು ಕಳವು, ಯುದ್ಧ, ವಿದ್ಯುತ್‌ ಉಪಕರಣಗಳ ಅತಿಯಾದ ಬಳಿಕೆಯಿಂದ ಆಗುವ ಹಾನಿ.

ಇದನ್ನೂ ಓದಿ: Money Guide: ಹೋಮ್‌ ಲೋನ್‌ಗೆ ಇನ್ಶೂರೆನ್ಸ್‌ ಮಾಡಿಸಿದ್ದೀರಾ? ಏನಿದರ ಮಹತ್ವ? ನಿಮ್ಮ ಸಂಶಯಗಳಿಗೆ ಇಲ್ಲಿದೆ ಉತ್ತರ

Continue Reading
Advertisement
Shira News
ತುಮಕೂರು12 mins ago

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shravana 2024
ಧಾರ್ಮಿಕ16 mins ago

Shravana 2024: ಶ್ರಾವಣ ಉಪವಾಸದ ವೇಳೆ ಈ 5 ಪಾನೀಯ ಆರೋಗ್ಯಕರ

bs yediyurappa
ಪ್ರಮುಖ ಸುದ್ದಿ18 mins ago

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

PSI Parashuram Case
ಕರ್ನಾಟಕ30 mins ago

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

Snake Bite
ವೈರಲ್ ನ್ಯೂಸ್48 mins ago

Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

Road Accident
ಬೆಂಗಳೂರು49 mins ago

Road Accident : ಅಡ್ಡ ಬಂದ ನಾಯಿ ಮರಿ ಮೇಲೆ ಬೈಕ್ ಹತ್ತಿಸಿದ ಸವಾರ

Viral Video
Latest1 hour ago

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Physical Abuse
ವಿಜಯಪುರ1 hour ago

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Sex Racket
Latest1 hour ago

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Duniya Vijay- Ganesh To Combined together make Movie in future
ಸ್ಯಾಂಡಲ್ ವುಡ್1 hour ago

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌