TCS CEO Resigns : ಟಿಸಿಎಸ್‌ ಸಿಇಒ ರಾಜೇಶ್‌ ಗೋಪಿನಾಥನ್‌ ರಾಜೀನಾಮೆ Vistara News
Connect with us

ವಾಣಿಜ್ಯ

TCS CEO Resigns : ಟಿಸಿಎಸ್‌ ಸಿಇಒ ರಾಜೇಶ್‌ ಗೋಪಿನಾಥನ್‌ ರಾಜೀನಾಮೆ

ಟಿಸಿಎಸ್‌ ಸಿಇಒ ರಾಜೇಶ್‌ ಗೋಪಿನಾಥನ್‌ ಅವರು ರಾಜೀನಾಮೆ ನೀಡಿದ್ದಾರೆ. ಇತರ ಹಿತಾಸಕ್ತಿ ಸಲುವಾಗಿ ಪದತ್ಯಾಗ ಮಾಡುತ್ತಿರುವುದಾಗಿ (TCS CEO Resigns) ತಿಳಿಸಿದ್ದಾರೆ.

VISTARANEWS.COM


on

Rajesh Gopinathan
Koo

ಮುಂಬಯಿ: ಐಟಿ ದಿಗ್ಗಜ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ನ (TCS) ಸಿಇಒ ರಾಜೇಶ್‌ ಕೃಷ್ಣನ್‌ ಅವರು ರಾಜೀನಾಮೆ ನೀಡಿದ್ದಾರೆ. ಟಿಸಿಎಸ್‌ನಲ್ಲಿ 22 ವರ್ಷಗಳ ಕಾಲ ಸೇವೆ (TCS CEO Resigns) ಸಲ್ಲಿಸಿದ್ದ ಅವರು, ಇತರ ಹಿತಾಸಕ್ತಿ ದೃಷ್ಟಿಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.

ರಾಜೇಶ್‌ ಗೋಪಿನಾಥನ್‌ ರಾಜೀನಾಮೆ ಬಗ್ಗೆ ಟಿಸಿಎಸ್‌, ಷೇರು ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ವಿವರಣೆಯಲ್ಲಿ ತಿಳಿಸಿದೆ. ಟಿಸಿಎಸ್‌ನ ನಿಯೋಜಿತ ಸಿಇಒ ಆಗಿ ಕೆ. ಕೃತಿವಾಸನ್ ಅವರು ನೇಮಕವಾಗಿದ್ದಾರೆ. ಕೃತಿ ವಾಸನ್‌ ಅವರು ಟಿಸಿಎಸ್‌ನ ಬಿಎಫ್‌ಎಸ್‌ಐ ಘಟಕದ ಮುಖ್ಯಸ್ಥರಾಗಿದ್ದಾರೆ. ಕೃತಿವಾಸನ್‌ 1989ರಲ್ಲಿ ಟಿಸಿಎಸ್‌ಗೆ ಸೇರಿದ್ದರು.

ಕಳೆದ 6 ವರ್ಷಗಳಲ್ಲಿ ರಾಜೇಶ್‌ ಅವರು ಟಿಸಿಎಸ್‌ಗೆ ಉತ್ತಮ ನಾಯಕತ್ವ ನೀಡಿದ್ದಾರೆ. ಅವರ ಭವಿಷ್ಯಕ್ಕೆ ಶುಭ ಕೋರುವುದಾಗಿ ಟಿಸಿಎಸ್‌ ಅಧ್ಯಕ್ಷ ಎನ್.ಚಂದ್ರಶೇಖರನ್‌ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PPF Investment : ಪಿಪಿಎಫ್‌ ಸೇರಿ ಸಣ್ಣ ಉಳಿತಾಯ ಹೂಡಿಕೆಗಳ ನಿಯಮ ಸಡಿಲ, ಪ್ಯಾನ್‌ ಬದಲಿಗೆ ಆಧಾರ್‌ ಬಳಕೆ ಶೀಘ್ರ

ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆಯ ಕೆವೈಸಿ ನಿಯಮಗಳನ್ನು ಸಡಿಲಗೊಳಿಸುವುದರಿಂದ, ಪ್ಯಾನ್‌ ಬದಲಿಗೆ ಆಧಾರ್‌ ಬಳಕೆಗೆ ಅನುಮತಿ ನೀಡುವುದರಿಂದ, ಗ್ರಾಮೀಣ ಭಾಗದಲ್ಲಿ ಹೂಡಿಕೆ ಹೆಚ್ಚಳವಾಗುವ (PPF Investment) ನಿರೀಕ್ಷೆ ಉಂಟಾಗಿದೆ.

VISTARANEWS.COM


on

Edited by

small savings
Koo

ನವ ದೆಹಲಿ: ಹಣಕಾಸು ಸಚಿವಾಲಯವು ಸಣ್ಣ ಉಳಿತಾಯ ಯೋಜನೆಗಳಲ್ಲಿನ (PPF Investment ) ಹೂಡಿಕೆ ಕುರಿತ ಕೆವೈಸಿ (KYC) ನಿಯಮಾವಳಿಗಳನ್ನು ಸಡಿಲಗೊಳಿಸಲು ಮುಂದಾಗಿದೆ. ಪ್ಯಾನ್‌ ಬದಲಿಗೆ ಆಧಾರ್‌ ಕಾರ್ಡ್‌ ಅನ್ನು ದಾಖಲೆಯಾಗಿಟ್ಟುಕೊಂಡು ಈ ಯೋಜನೆಗಳಲ್ಲಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲೂ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಹೆಚ್ಚುವ ನಿರೀಕ್ಷೆ ಇದೆ. (small savings schemes)

ಕೆವೈಸಿ ನಿಯಮ ಸಡಿಲಗೊಳಿಸುವ ಭಾಗವಾಗಿ ಮೂರು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಮೊದಲನೆಯದಾಗಿ ಪ್ಯಾನ್‌ ಕಾರ್ಡ್‌ ಬದಲು ಆಧಾರ್‌ ಬಳಸಿಯೂ ಹೂಡಿಕೆಯನ್ನು ಮಾಡಬಹುದು. ಏಕೆಂದರೆ ಭಾರತದಲ್ಲಿ ಪ್ಯಾನ್‌ ಕಾರ್ಡ್‌ ಬಳಕೆದಾರರಿಗಿಂತ ಹೆಚ್ಚು ಆಧಾರ್‌ ಕಾರ್ಡ್‌ದಾರರು ಇದ್ದಾರೆ. ಈ ನೀತಿ ಸಡಿಲಗೊಳಿಸುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಠೇವಣಿಗಳು ಲಭಿಸುವ ಸಾಧ್ಯತೆ ಇದೆ.

ಎರಡನೆಯದಾಗಿ ಯಾವುದೇ ವಿವಾದ ಇಲ್ಲದೆ ಮೃತಪಟ್ಟಿರುವ ಠೇವಣಿದಾರರ ಹಣವನ್ನು ಅವರ ಉತ್ತರಾಧಿಕಾರಿಗಳಿಗೆ ಸರಾಗವಾಗಿ ಹಸ್ತಾಂತರಿಸಲು ಪ್ರಕ್ರಿಯೆ ಸುಗಮವಾಗಲಿದೆ. ಮೂರನೆಯದಾಗಿ ನಾಮಿನೇಶನ್‌ ಪ್ರಕ್ರಿಯೆ ಸರಳವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೂಡಿಕೆಯ ಕೆವೈಸಿ ನಿಯಮಗಳನ್ನು ಸಡಿಲಗೊಳಿಸುವುದರಿಂದ ರಾಷ್ಟ್ರೀಯ ಸಣ್ಣ ಉಳಿತಾಯ ನಿಧಿಗೆ (National small savings fund) ಹೂಡಿಕೆಯ ಹರಿವು ಹೆಚ್ಚಲಿದೆ. ಸಾರ್ವಜನಿಕ ಭವಿಷ್ಯನಿಧಿ, ಸುಕನ್ಯಾಸಮೃದ್ಧಿ, ಎನ್‌ಎಸ್‌ಸಿ ಇತ್ಯಾದಿಗಳು ಸಣ್ಣ ಉಳಿತಾಯ ಯೋಜನೆಗಳಾಗಿವೆ.

Continue Reading

ಪ್ರಮುಖ ಸುದ್ದಿ

Private sector : ಖಾಸಗಿ ವಲಯದಿಂದ ಭಾರಿ ಹೂಡಿಕೆ ಶೀಘ್ರ, ಯಾವ ಕಂಪನಿಯಿಂದ ಎಷ್ಟು ಕೋಟಿ ಹೂಡಿಕೆ?

ಖಾಸಗಿ ವಲಯದ ಕಾರ್ಪೊರೇಟ್‌ ಕಂಪನಿಗಳು ಮುಂಬರುವ ದಿನಗಳಲ್ಲಿ ಭಾರಿ ಹೂಡಿಕೆಗೆ ನಿರ್ಧರಿಸಿವೆ. (Private sector) ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

VISTARANEWS.COM


on

Edited by

production
Koo

ನವ ದೆಹಲಿ: ಖಾಸಗಿ ವಲಯದ ಕಾರ್ಪೊರೇಟ್‌ ಕಂಪನಿಗಳು (Private sector) ದೇಶದಲ್ಲಿ ತಮ್ಮ ಹೂಡಿಕೆಯನ್ನು ಶೀಘ್ರದಲ್ಲಿಯೇ ಗಣನೀಯವಾಗಿ ಏರಿಸಲು ಉದ್ದೇಶಿಸಿವೆ. ಕೇಂದ್ರ ಸರ್ಕಾರವು ಮೂಲಸೌಕರ್ಯ ವಲಯಕ್ಕೆ ಮಾಡುತ್ತಿರುವ ವೆಚ್ಚ, ಉತ್ಪಾದನೆ ಆಧರಿತ ಇನ್ಸೆಂಟಿವ್‌ ಯೋಜನೆಗಳ ಪರಿಣಾಮ ಖಾಸಗಿ ವಲಯದ ಕಂಪನಿಗಳು ತಮ್ಮ ಹೂಡಿಕೆಯನ್ನು ಮುಂಬರುವ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ನಿರ್ಧರಿಸಿವೆ.

ಖಾಸಗಿ ಕಂಪನಿಗಳು ಮತ್ತು ಬ್ಯಾಂಕ್‌ಗಳ ಬ್ಯಾಲೆನ್ಸ್‌ಶೀಟ್‌ ಆರೋಗ್ಯ ಸುಧಾರಿಸಿರುವುದು ಕೂಡ ಸಕಾರಾತ್ಮಕ ಪ್ರಭಾವ ಬೀರಿದೆ ಎಂದು ಫಿಚ್‌ ರೇಟಿಂಗ್ಸ್‌ ವರದಿ ತಿಳಿಸಿದೆ.

ಯಾವೆಲ್ಲ ಕಂಪನಿಗಳಿಂದ ಹೂಡಿಕೆ?

ರಿಲಯನ್ಸ್‌ ಇಂಡಸ್ಟ್ರೀಸ್‌ ಭಾರಿ ಮತ್ತು ಸಾಧಾರಣ ಗಾತ್ರದ ಹೂಡಿಕೆಯನ್ನು ನಾನಾ ವಲಯಗಳಲ್ಲಿ ಹೂಡಿಕೆ ಮಾಡಲಿದೆ. ತೈಲ, ರಾಸಾಯನಿಕ, ಹಸಿರು ಇಂಧನ, ಡಿಜಿಟಲ್‌ ಸೇವೆ ವಲಯದಲ್ಲಿ ಹೂಡಿಕೆ ಮಾಡಲಿದೆ ಎಂದು ವರದಿ ತಿಳಿಸಿದೆ.

ಭಾರ್ತಿ ಏರ್‌ಟೆಲ್‌ ಕೂಡ ದೂರಸಂಪರ್ಕ ವಲಯದಲ್ಲಿ ಭಾರಿ ಹೂಡಿಕೆಗೆ ನಿರ್ಧರಿಸಿದೆ. ಟಾಟಾ ಮೋಟಾರ್ಸ್‌, ಟಾಟಾ ಸ್ಟೀಲ್‌, ಹಿಂಡಾಲ್ಕೊ ಇಂಡಸ್ಟ್ರೀಸ್‌, ಅಲ್ಟ್ರಾ ಟೆಕ್‌ ಸಿಮೆಂಟ್‌ ಕೂಡ ಹೂಡಿಕೆ ಮಾಡಲಿದೆ. ಪ್ರಮುಖ ಕಂಪನಿಗಳು 6.11 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿವೆ. ಲೋಹ, ವಿದ್ಯುತ್‌, ಟೆಲಿಕಾಂ, ಬಂದರು, ಆಟೊಮೊಬೈಲ್‌, ಸಿಮೆಂಟ್‌ ವಲಯದಲ್ಲಿ ಹೂಡಿಕೆ ಆಗಲಿದೆ.

ಕಂಪನಿಗಳಿಂದ ಹೂಡಿಕೆ ವೆಚ್ಚದ ಯೋಜನೆಗಳು ಇಂತಿವೆ.

ಕಂಪನಿಹೂಡಿಕೆ (ಕೋಟಿ ರೂ.ಗಳಲ್ಲಿ)
ರಿಲಯನ್ಸ್‌ ಇಂಡಸ್ಟ್ರೀಸ್‌2,15,448
ಅದಾನಿ ಎಂಟರ್‌ಪ್ರೈಸಸ್18,226
ಟಾಟಾ ಸ್ಟೀಲ್32,300
ಜೆಎಸ್‌ಡಬ್ಲ್ಯು31,700
ಹಿಂಡಾಲ್ಕೊ ಇಂಡಸ್ಟ್ರೀಸ್30,300
ವೇದಾಂತ ಲಿಮಿಟೆಡ್26,200
ಜಿಂದಾಲ್‌ ಸ್ಟೀಲ್‌ & ಪವರ್12,600
ಭಾರ್ತಿ ಏರ್‌ಟೆಲ್79,800
ವೊಡಾಫೋನ್‌ ಐಡಿಯಾ16,800
ಅದಾನಿ ಟ್ರಾನ್ಸ್‌ಮಿಶನ್9,500
ಟಾಟಾ ಪವರ್16,000
ಅಂಬುಜಾ ಸಿಮೆಂಟ್5,400
ಅಲ್ಟ್ರಾಟೆಕ್‌ ಸಿಮೆಂಟ್15,700
ದಾಲ್ಮಿಯಾ ಭಾರತ್6,400
ಶ್ರೀ ಸಿಮೆಂಟ್5,200
ಟಾಟಾ ಮೋಟಾರ್ಸ್48,500
ಎಂ&ಎಂ14,000
ಮಾರುತಿ ಸುಜುಕಿ13,500
ಅದಾನಿ ಪೋರ್ಟ್ಸ್&ಸೆಜ್14,300
ಒಟ್ಟು6,11,874

ಖಾಸಗಿ ಕಂಪನಿಗಳ ಹೂಡಿಕೆ ಹೆಚ್ಚಳಕ್ಕೆ ಕಾರಣವೇನು?

ವ್ಯವಸ್ಥೆಯಲ್ಲಿ ರಚನಾತ್ಮಕ ಬೇಡಿಕೆಯಲ್ಲಿ ಹೆಚ್ಚಳ

ಮೂಲಸೌಕರ್ಯ ವಲಯಕ್ಕೆ ಖರ್ಚು ಹೆಚ್ಚಳ

ಕೇಂದ್ರ ಸರ್ಕಾರದ ಉತ್ಪಾದನೆ ಆಧರಿತ ಇನ್ಸೆಂಟಿವ್‌ ಯೋಜನೆ

ಕಾರ್ಪೊರೇಟ್‌ ಕಂಪನಿ, ಬ್ಯಾಂಕ್‌ ಬ್ಯಾಲೆನ್ಸ್‌ಶೀಟ್‌ ಸುಸ್ಥಿತಿ

ಉತ್ಪಾದನಾ ಚಟುವಟಿಕೆ ಚುರುಕಾಗಿರುವುದು

ಸಂಭವನೀಯ ರಿಸ್ಕ್:‌ ಸರಕುಗಳ ದರ ಏರಿಕೆ, ಜಾಗತಿಕ ದುರ್ಬಲ ಆರ್ಥಿಕ ಬೆಳಣಿಗೆ, ಬಡ್ಡಿ ದರ ಏರಿಕೆ

Continue Reading

ಪ್ರಮುಖ ಸುದ್ದಿ

UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್‌ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?

ಯುಪಿಐನ ಬಳಕೆಯ ಮೇಲೆ ಗ್ರಾಹಕರಿಗೆ ಯಾವುದೇ ಶುಲ್ಕ ಇರುವುದಿಲ್ಲ, ಸಾಮಾನ್ಯ ಹಾಗೂ ಬಹುತೇಕ ಯುಪಿಐ ಪಾವತಿ ಉಚಿತವಾಗಿದೆ ಎಂದು (UPI transactions ) ಎನ್‌ಪಿಸಿಐ ಹೇಳಿದೆ. ಹಾಗಾದರೆ ಯಾರಿಗೆ, ಯಾವುದಕ್ಕೆ
ಇತ್ತೀಚಿನ ಇಂಟರ್‌ಚೇಂಜ್ ಶುಲ್ಕ ಅನ್ವಯವಾಗುತ್ತದೆ? ಇಲ್ಲಿದೆ ವಿವರ.

VISTARANEWS.COM


on

Edited by

UPI
Koo

ನವ ದೆಹಲಿ: ಬ್ಯಾಂಕ್‌ ಖಾತೆಗೆ ಲಿಂಕ್‌ ಹೊಂದಿರುವ ಯುಪಿಐ ಬಳಕೆಗೆ (UPI transactions) ಸಂಬಂಧಿಸಿ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದು ಉಚಿತ ಎಂದು ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (NPCI) ಬುಧವಾರ ಸ್ಪಷ್ಟೀಕರಣ ನೀಡಿದೆ. ಇದರದೊಂದಿಗೆ ಯುಪಿಐ ಮೂಲಕ ಹಣ ಪಾವತಿಗೆ ಶುಲ್ಕ ( Interchange fee ) ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದಿದೆ.

ಸಾಮಾನ್ಯವಾಗಿ ಪೇಟಿಎಂ, ಗೂಗಲ್‌ ಪೇ, ಫೋನ್‌ ಪೇ ಇತ್ಯಾದಿ ಯುಪಿಐ‌ ಆಧರಿತ ಆ್ಯಪ್‌ ಮೂಲಕ ನಡೆಯುವ ಹಣಕಾಸು ವರ್ಗಾವಣೆಗಳು ಬ್ಯಾಂಕ್‌ ಖಾತೆಗೆ ಲಿಂಕ್‌ ಹೊಂದಿರುತ್ತವೆ. 99.9% ವರ್ಗಾವಣೆಗಳು ಇಂಥದ್ದೇ ಆಗಿರುತ್ತವೆ. ಹಾಗೂ ಇವುಗಳು ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಎನ್‌ಪಿಸಿಐ ತಿಳಿಸಿದೆ.

ಪ್ರಿ-ಪೇಯ್ಡ್‌ ಪೇಮೆಂಟ್‌ ಇನ್‌ಸ್ಟ್ರುಮೆಂಟ್‌ಗಳಿಗೆ ಮಾತ್ರ ಶುಲ್ಕ:

ಇತ್ತೀಚೆಗೆ ಪ್ರೀಪೇಯ್ಡ್‌ ಪೇಮೆಂಟ್‌ ಇನ್‌ಸ್ಟ್ರುಮೆಂಟ್ಸ್‌ಗಳಿಗೆ (PPI Wallets) ಯುಪಿಐ ಇಕೊಸಿಸ್ಟಮ್‌ ಭಾಗವಾಗಲು ಅನುಮತಿ ನೀಡಲಾಗಿದೆ. ಹೀಗಾಗಿ ಪಿಪಿಐ ಮರ್ಚೆಂಟ್‌ ಹಣಕಾಸು ವರ್ಗಾವಣೆಗೆ ಮಾತ್ರ ಇಂಟರ್‌ಚೇಂಜ್‌ ಶುಲ್ಕ ವಿಧಿಸಲು ಅವಕಾಶ ಇದೆ. ಇಲ್ಲೂ ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಎನ್‌ಪಿಸಿಐ ತಿಳಿಸಿದೆ. ಹಾಗಾದರೆ ಯಾರು ಶುಲ್ಕ ಕೊಡಬೇಕು?

1.1 % ಶುಲ್ಕ ಪಾವತಿಸುವವರು ಯಾರು?

ಗಿಫ್ಟ್‌ ವೋಚರ್‌, ವ್ಯಾಲೆಟ್‌ ಇತ್ಯಾದಿ ಪ್ರೀಪೇಯ್ಡ್‌ ಪೇಮೆಂಟ್‌ ಇನ್‌ಸ್ಟ್ರುಮೆಂಟ್‌ಗಳ ಮೂಲಕ 2,000 ರೂ.ಗಿಂತ ಹೆಚ್ಚಿನ ಯುಪಿಐ ವರ್ಗಾವಣೆಗಳಿಗೆ ಸಂಬಂಧಿಸಿ ಗ್ರಾಹಕರು ಅಥವಾ ವ್ಯಾಪಾರಿಗಳಿಗೆ 1.1% ಶುಲ್ಕ ಅನ್ವಯವಾಗುವುದಿಲ್ಲ. ಬದಲಿಗೆ ಈ ಗಿಫ್ಟ್‌ ವೋಚರ್‌, ವ್ಯಾಲೆಟ್‌ ನೀಡುವ ಪೇಟಿಎಂ, ಓಲಾ ಫೈನಾನ್ಷಿಯಲ್‌ ಸರ್ವೀಸ್‌ ಮೊದಲಾದ ಕಂಪನಿಗಳು ಅಥವಾ ಸಂಸ್ಥೆಗಳು ಈ 1.1% ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ವಿವಾದ ಸೃಷ್ಟಿಯಾಗಿದ್ದೇಕೆ?

ಗಿಫ್ಟ್ ಕಾರ್ಡ್‌, ವ್ಯಾಲೆಟ್‌ ಮತ್ತಿತರ ಪ್ರಿಪೇಯ್ಡ್‌ ಇನ್‌ಸ್ಟ್ರುಮೆಂಟ್‌ಗಳಲ್ಲಿ (Prepaid payment instruments transactions) 2000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ವರ್ಗಾವಣೆಗಳಿಗೆ 2023ರ ಏಪ್ರಿಲ್‌ 1ರಿಂದ 1.1% ಇಂಟರ್‌ಚೇಂಜ್‌ ಶುಲ್ಕ ಅನ್ವಯವಾಗುತ್ತದೆ ಎಂದು ವರದಿಯಾಗಿತ್ತು. ಆದರೆ ಈ ಶುಲ್ಕ ಯಾರಿಗೆ ಅನ್ವಯವಾಗುತ್ತದೆ ಎಂಬುದರ ಬಗ್ಗೆ ಗೊಂದಲ ಉಂಟಾಗಿತ್ತು. ಪ್ರತಿ ತಿಂಗಳೂ ಸರಾಸರಿ 800 ಕೋಟಿಗೂ ಹೆಚ್ಚು ಹಣಕಾಸು ವರ್ಗಾವಣೆಗಳು ಯುಪಿಐ ಮೂಲಕ ನಡೆಯುತ್ತಿರುವುದರಿಂದ ಗ್ರಾಹಕರಲ್ಲಿ ಗೊಂದಲ ಉಂಟಾಗಿತ್ತು. ಇದೀಗ ಎನ್‌ಪಿಸಿಐ ಗೊಂದಲಕ್ಕೆ ತೆರೆ ಎಳೆದಿದೆ. ಎನ್‌ಪಿಸಿಐ 2008ರಲ್ಲಿ ಸ್ಥಾಪನೆಯಾಗಿದ್ದು, ರಿಟೇಲ್‌ ಪೇಮೆಂಟ್‌ ಮತ್ತು ಸೆಟ್ಲ್‌ಮೆಂಟ್‌ ವ್ಯವಸ್ಥೆಗಳ ಒಕ್ಕೂಟ ವ್ಯವಸ್ಥೆಯಾಗಿದೆ. ಭಾರತದ ಡಿಜಿಟಲೀಕರಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.

Continue Reading

ಪ್ರಮುಖ ಸುದ್ದಿ

DCGI : ನಕಲಿ ಔಷಧ ತಯಾರಿಸಿದ 18 ಕಂಪನಿಗಳ ಲೈಸೆನ್ಸ್‌ ರದ್ದು

ನಕಲಿ ಔಷಧ ಉತ್ಪಾದಿಸಿದ 18 ಕಂಪನಿಗಳ ಲೈಸೆನ್ಸ್‌ ಅನ್ನು ಡಿಸಿಜಿಐ (DCGI) ರದ್ದುಪಡಿಸಿದೆ. ಆದರೆ ಕಂಪನಿಗಳ ಹೆಸರು ಬಹಿರಂಗವಾಗಿಲ್ಲ.

VISTARANEWS.COM


on

Edited by

medecine
ಸಾಂದರ್ಭಿಕ ಚಿತ್ರ
Koo

ನವ ದೆಹಲಿ: ನಕಲಿ ಔಷಧಗಳನ್ನು ತಯಾರಿಸಿದ 18 ಔಷಧ ಕಂಪನಿಗಳ ಲೈಸೆನ್ಸ್‌ ಅನ್ನು ಡ್ರಗ್ಸ್‌ ಕಂಟ್ರೋಲರ್‌ ಜನರಲ್‌ ಆಫ್‌ ಇಂಡಿಯಾ (DCGI) ರದ್ದುಪಡಿಸಿದೆ. ಔಷಧ ಮಾರಾಟ ವಲಯದ ನಿಯಂತ್ರಕವು 20 ರಾಜ್ಯಗಳಲ್ಲಿ 76 ಕಂಪನಿಗಳ ಉತ್ಪನ್ನಗಳ ಬಗ್ಗೆ ತಪಾಸಣೆ ನಡೆಸಿತ್ತು. ಬಳಿಕ ಈ ಕ್ರಮ ಕೈಗೊಂಡಿದೆ. ಲೈಸೆನ್ಸ್‌ ಕಳೆದುಕೊಂಡ ಕಂಪನಿಗಳ ಹೆಸರು ಬಹಿರಂಗವಾಗಿಲ್ಲ.

ನಕಲಿ ಔಷಧ ಉತ್ಪಾದನೆ, ಕಲಬೆರಕೆಯ ಪ್ರಕರಣಗಳನ್ನು ಈ ಕಂಪನಿಗಳ ವಿರುದ್ಧ ದಾಖಲಿಸಲಾಗಿದೆ. ಇದರ ಜತೆಗೆ 26 ಕಂಪನಿಗಳಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ, ಉತ್ತರಾಖಂಡ್‌, ಮಧ್ಯಪ್ರದೇಶದಲ್ಲಿ ಈ ಕಂಪನಿಗಳು ಇವೆ. ಕಳೆದ ಫೆಬ್ರವರಿಯಲ್ಲಿ ತಮಿಳುನಾಡು ಮೂಲದ ಗ್ಲೋಬಲ್‌ ಫಾರ್ಮಾ ಹೆಲ್ತ್‌ಕೇರ್‌, ತನ್ನ ಐ ಡ್ರಾಪ್‌ ಔಷಧವನ್ನು ಹಿಂತೆಗೆದುಕೊಂಡಿತ್ತು. ಇದನ್ನು ಅಮೆರಿಕದಲ್ಲಿ ಬಳಸಿದವರಿಗೆ ಕಣ್ಣಿನ ದೃಷ್ಟಿಯೇ ಹೋಗಿತ್ತು ಎಂದು ಆರೋಪಿಸಲಾಗಿದೆ.

Continue Reading
Advertisement
Establishment of Backward Classes Category-I Pinjara, Nadaf and 13 Other Castes Development Corporation
ಕರ್ನಾಟಕ13 mins ago

Reservation: ಒಬಿಸಿ ಮೀಸಲಾತಿ ಪುನರ್‌ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ; 2ಸಿ ಪ್ರವರ್ಗಕ್ಕೆ ಶೇ.6, 2ಡಿ ಪ್ರವರ್ಗಕ್ಕೆ ಶೇ.7 ಮೀಸಲಾತಿ

World’s first 7.2-metre high-rise train set on trial on Delhi-Jaipur route, video out
ದೇಶ52 mins ago

Viral Video: ಭಾರತದಲ್ಲಿ ವಿಶ್ವದಲ್ಲೇ ಎತ್ತರದ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ, ಇಲ್ಲಿದೆ ವಿಡಿಯೊ

Road Accident
ಕರ್ನಾಟಕ55 mins ago

Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು

High way robbery
ಕರ್ನಾಟಕ1 hour ago

Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್‌, ಐಫೋನ್‌ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್‌

Restrictions on entry to Dharwad, Supreme Court dismisses Vinay Kulkarni's plea seeking exemption
ಕರ್ನಾಟಕ2 hours ago

Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Ram Navami 2023
ಧಾರ್ಮಿಕ2 hours ago

Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? 

IPL 2023: Rohit likely to be unavailable for some IPL matches to relieve stress
ಕ್ರಿಕೆಟ್2 hours ago

IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್​ ಪಂದ್ಯಗಳಿಗೆ ರೋಹಿತ್​ ಅಲಭ್ಯ ಸಾಧ್ಯತೆ

Karnataka Elections 2023
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

Aam Aadmi Party announces 300 units of free electricity, Rs 3,000. unemployment allowance, Implementation of OPS guarantee scheme
ಕರ್ನಾಟಕ3 hours ago

Karnataka Election: ಎಎಪಿಯಿಂದ 300 ಯೂನಿಟ್‌ ವಿದ್ಯುತ್‌ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್‌ ಜಾರಿ ಗ್ಯಾರಂಟಿ

Indian govt let go of Rs 7 lakh in GST to save a baby girl’s life
ದೇಶ3 hours ago

ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

amit shah convoy
ಕರ್ನಾಟಕ2 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ2 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 week ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 week ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ1 week ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ1 week ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ1 week ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

ಟ್ರೆಂಡಿಂಗ್‌

error: Content is protected !!