Unemployment Rate : ಜನವರಿಯಲ್ಲಿ ನಿರುದ್ಯೋಗದ ಪ್ರಮಾಣ 7.14%ರಿಂದ 7.45%ಕ್ಕೆ ಏರಿಕೆ - Vistara News

ವಾಣಿಜ್ಯ

Unemployment Rate : ಜನವರಿಯಲ್ಲಿ ನಿರುದ್ಯೋಗದ ಪ್ರಮಾಣ 7.14%ರಿಂದ 7.45%ಕ್ಕೆ ಏರಿಕೆ

ಜನವರಿಯಲ್ಲಿ ದೇಶದಲ್ಲಿ ನಿರುದ್ಯೋಗದ ಪ್ರಮಾಣ 7.14%ರಿಂದ 7.45%ಕ್ಕೆ ಏರಿಕೆಯಾಗಿದೆ ಎಂದು (Unemployment Rate) ಸಿಎಂಐಇ ತಿಳಿಸಿದೆ.

VISTARANEWS.COM


on

unemployment rate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದಲ್ಲಿ ನಿರುದ್ಯೋಗದ ಪ್ರಮಾಣ ಫೆಬ್ರವರಿಯಲ್ಲಿ 7.14%ರಿಂದ 7.45%ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ ( Centre for monitoring Indian economy) ತಿಳಿಸಿದೆ.

ನಗರ ಮಟ್ಟದ ನಿರುದ್ಯೋಗ ದರ 8.55ರಿಂದ 7.93%ಕ್ಕೆ ಇಳಿಕೆಯಾಗಿದೆ. ಆದರೆ ಗ್ರಾಮೀಣ ನಿರುದ್ಯೋಗ ದರ 6.48%ರಿಂದ 7.23%ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಡಿತ ಸಂಭವಿಸಿದೆ. ಸ್ಟಾರ್ಟಪ್‌ ವಲಯದಲ್ಲಿ ಕೂಡ ಉದ್ಯೋಗ ನಷ್ಟ ಸಂಭವಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading

ಪ್ರಮುಖ ಸುದ್ದಿ

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Sensex Crash: ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡ ಬೀರಿದೆ.

VISTARANEWS.COM


on

Sensex crash
Koo

ಮುಂಬಯಿ : ಎಫ್ ಐಐ ಹೊರಹರಿವು ಮತ್ತು ಯುಎಸ್ ಬಾಂಡ್ ಹೆಚ್ಚಳದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಗುರುವಾರ ತೀವ್ರ ಕುಸಿತ (Sensex Crash) ಕಂಡಿವೆ. ಬಿಎಸ್ಇ (BSE) ಸೆನ್ಸೆಕ್ಸ್ 1,132 ಪಾಯಿಂಟ್ಸ್ ಕುಸಿದು 72,334 ಕ್ಕೆ ತಲುಪಿದ್ದರೆ, ನಿಫ್ಟಿ 50 370 ಪಾಯಿಂಟ್ಸ್ ಕುಸಿದು 21,932 ಕ್ಕೆ ತಲುಪಿದೆ. ಬಿಎಸ್ಇ ಸೂಚ್ಯಂಕವು ಅಂತಿಮವಾಗಿ 1,062 ಪಾಯಿಂಟ್​​ ಅಂದರೆ ಶೇಕಡಾ 1.45 ರಷ್ಟು ಕುಸಿದು 72,404 ಕ್ಕೆ ಕೊನೆಗೊಂಡಿತು. ನಿಫ್ಟಿ 50 ಕೂಡ 345 ಪಾಯಿಂಟ್ ಅಂದರೆ ಶೇಕಡಾ 1.55 ರಷ್ಟು ಕುಸಿದು 21,958 ಕ್ಕೆ ತಲುಪಿದೆ.

ಮಾರುಕಟ್ಟೆಗಳಲ್ಲಿ, ಬಿಎಸ್ಇ ಮಿಡ್​ಕ್ಯಾಪ್​ ಸೂಚ್ಯಂಕವು ಶೇಕಡಾ 2 ರಷ್ಟು ಕುಸಿದರೆ, ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇಕಡಾ 2.4 ರಷ್ಟು ಕುಸಿದಿದೆ. “ಮಾರುಕಟ್ಟೆಯ ಕುಸಿತಕ್ಕೆ ಮುಖ್ಯವಾಗಿ ಸಾರ್ವತ್ರಿಕ ಚುನಾವಣೆಗಳ ಸುತ್ತಲಿನ ಅನಿಶ್ಚಿತತೆ ಕಾರಣವಾಗಿದೆ. ಈ ಅನಿಶ್ಚಿತತೆಯು ಭಾರತದ ಚಂಚಲತೆಯ ಮಾಪಕವಾದ ಇಂಡಿಯಾ ವಿಐಎಕ್ಸ್ ಅನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಇದು 52 ವಾರಗಳ ಗರಿಷ್ಠ 19 ಕ್ಕೆ ತಲುಪಿದೆ, ಇದು ಮಾರುಕಟ್ಟೆ ಆತಂಕವನ್ನು ಸೂಚಿಸಿದೆ. ಲಾರ್ಜ್ ಕ್ಯಾಪ್ ಕಂಪನಿಗಳ ನಾಲ್ಕನೇ ತ್ರೈಮಾಸಿಕ ಗಳಿಕೆಯ ಇಳಿಕೆಯು ಹೂಡಿಕೆದಾರರ ನಿರಾಸಕ್ತಿಗೆ ಕಾರಣವಾಗಿದೆ ಎಂದು ಷೇರು ಮಾರುಕಟ್ಟೆ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಮೇ ತಿಂಗಳಾದ್ಯಂತ ತಮ್ಮ ಹೂಡಿಕೆಗಳನ್ನು ಸಕ್ರಿಯವಾಗಿ ಮಾರಾಟ ಮಾಡುತ್ತಿದ್ದಾರೆ. ಒಟ್ಟು ಮಾರಾಟ 15,863.14 ಕೋಟಿ ರೂ. ಆಗಿದ್ದು ಇದು ಕೂಡ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಮೇ 8 ರಂದು ವಿದೇಶಿ ಹೂಡಿಕೆದಾರರು 6,669.10 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆದಾರರು 2025ರ ಹಣಕಾಸು ವರ್ಷದಲ್ಲಿ ಇದುವರೆಗೆ 13,747 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ.

ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ (ಡಿಐಐ) ಕಡಿಮೆ ಖರೀದಿ ಚಟುವಟಿಕೆಯು ಮಾರುಕಟ್ಟೆಯ ಚಂಚಲತೆಗೆ ಕಾರಣವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ, ನಿಫ್ಟಿ ಶೇಕಡಾ 1.5 ರಷ್ಟು ಕುಸಿದರೆ, ಶಾಂಘೈ ಕಾಂಪೊಸಿಟ್ ಶೇಕಡಾ 2.62 ಮತ್ತು ಹ್ಯಾಂಗ್ ಸೆಂಗ್ ಶೇಕಡಾ 8.8 ರಷ್ಟು ಏರಿಕೆಯಾಗಿದೆ. ಚೀನಾ ಮತ್ತು ಹಾಂಗ್ ಕಾಂಗ್ ಮಾರುಕಟ್ಟೆಗಳು ಸುಮಾರು 10 ಪಿಇಗಳೊಂದಿಗೆ ಇಳಿಕೆ ಕಂಡಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಲೋಕ ಸಭಾ ಚುನಾವಣೆಯ ಆರಂಭಿಕ ಮೂರು ಹಂತಗಳಲ್ಲಿ ಕಂಡುಬಂದ ಕಡಿಮೆ ಮತದಾನವು ಮಾರುಕಟ್ಟೆಗಳ ಆತಂಕ ಹೆಚ್ಚಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಮನಿ-ಗೈಡ್

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Money Guide: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ದೇಶದಲ್ಲಿರುವ ಅತ್ಯುತ್ತಮ ನಿವೃತ್ತಿ ಯೋಜನೆ ಎನಿಸಿಕೊಂಡಿದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದನ್ನು ಹೇಗೆ ಸರಿಪಡಿಸಬಹುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಪ್ರತಿಯೊಬ್ಬ ಉದ್ಯೋಗಿಯೂ ಕೆಲಸಕ್ಕೆ ಸೇರಿದಾಗಿನಿಂದಲೇ ನಿವೃತ್ತಿ ಜೀವನಕ್ಕಾಗಿ ಯೋಜನೆ ರೂಪಿಸುವುದು ಅಗತ್ಯ. ಅದಕ್ಕಾಗಿ ಈಗಲೇ ಒಂದಷ್ಟು ಮೊತ್ತವನ್ನು ಕೂಡಿಡಲು ಆರಂಭಿಸಬೇಕು ಎಂದು ಸಲಹೆ ನೀಡುತ್ತಾರೆ ಆರ್ಥಿಕ ತಜ್ಞರು. ಇದಕ್ಕಾಗಿ ದೇಶದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (NPS) ಕೂಡ ಒಂದು. ಎನ್‌ಪಿಎಸ್‌ ಅನ್ನು ನಿವೃತ್ತಿಗೆ ಉತ್ತಮ ಯೋಜನೆ ಎಂದು ಪರಿಗಣಿಸಲಾಗುತ್ತದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದಕ್ಕೆ ಕಾರಣವೇನು? ಇದನ್ನು ಹೇಗೆ ಸರಿಪಡಿಸಬಹುದು? ಮುಂತಾದ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಸ್ಥಗಿತಗೊಂಡ ಎನ್‌ಪಿಎಸ್‌ ಖಾತೆಯನ್ನು ಸಕ್ರಿಯಗೊಳಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಕೆಲವೊಂದು ಮಾರ್ಗಸೂಚಿಗಳನ್ನು ನೀಡಿದೆ. ಈ ಕುರಿತಾದ ವಿವರ ಇಲ್ಲಿದೆ.

ಯಾಕಾಗಿ ಖಾತೆ ಸ್ಥಗಿತಗೊಳ್ಳುತ್ತದೆ?

ಕನಿಷ್ಠ ಪಾವತಿಯ ಕೊರತೆ: ಟೈರ್ 1 ಎನ್‌ಪಿಎಸ್‌ ಖಾತೆಗಳಿಗೆ ವಾರ್ಷಿಕ ಕನಿಷ್ಠ 1,000 ರೂ. ಹೂಡಿಕೆ ಮಾಡಬೇಕಾಗುತ್ತದೆ. ಒಂದು ವರ್ಷದೊಳಗೆ ಈ ನಿಯಮ ಪಾಲಿಸದಿದ್ದರೆ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಟೈರ್ 1 ಸ್ಥಗಿತಗೊಂಡರೆ ಟೈರ್ 2 ಖಾತೆಗಳು ಸಹ ನಿಷ್ಕ್ರಿಯವಾಗುತ್ತವೆ.

ಅಪೂರ್ಣ ಕೆವೈಸಿ ಪ್ರಕ್ರಿಯೆ: ಎನ್‌ಪಿಎಸ್‌ ಖಾತೆಗಳಿಗೆ ಕೆವೈಸಿ (Know Your Customer) ಅಪ್‌ಡೇಟ್‌ ಮಾಡುವುದು ಕಡ್ಡಾಯಗೊಳಿಸಲಾಗಿದೆ. ನೋಂದಣಿ ವೇಳೆ ಅಪೂರ್ಣ ಮಾಹಿತಿ ನೀಡಿದ್ದರೆ ಅಥವಾ ಸೂಕ್ತ ದಾಖಲೆ ಒದಗಿಸದಿದ್ದರೆ ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಳ್ಳುತ್ತದೆ.

ದಾಖಲಾತಿ ನಮೂನೆ ಸಲ್ಲಿಕೆಯ ವಿಳಂಬ: ತಾಂತ್ರಿಕ ದೋಷ ಅಥವಾ ಕೇಂದ್ರ ರೆಕಾರ್ಡ್ ಕೀಪಿಂಗ್ ಏಜೆನ್ಸಿಗೆ (CRA) ದಾಖಲಾತಿ ನಮೂನೆಯನ್ನು ಸಲ್ಲಿಸುವಲ್ಲಿನ ವಿಳಂಬವು ಖಾತೆ ಸ್ಥಗಿತಗೊಳಿಸಲು ಕಾರಣವಾಗಬಹುದು.

ಆನ್‌ಲೈನ್‌ ಮೂಲಕ ಹೀಗೆ ಸಕ್ರಿಯಗೊಳಿಸಿ

ಕನಿಷ್ಠ ಕೊಡುಗೆ ಪಾವತಿಸಿ / ದಂಡ ಕಟ್ಟಿ: ಎನ್‌ಪಿಎಸ್‌ ಅಕೌಂಟ್‌ಗೆ ಲಾಗಿನ್‌ ಆಗಿ Contribution ವಿಭಾಗಕ್ಕೆ ತೆರಳಿ. ನಿಮ್ಮ ಖಾತೆ ಸ್ಥಗಿತಗೊಂಡ ಅವಧಿಯಿಂದ ತೊಡಗಿ ಇದುವರೆಗೆ ತಿಂಗಳಿಗೆ ಕನಿಷ್ಠ 500 ರೂ. ಪಾವತಿಸಿ. ಹೆಚ್ಚುವರಿಯಾಗಿ 100 ರೂ. ದಂಡವನ್ನೂ ಕಟ್ಟಿ.

ದೃಢೀಕರಣ ಮತ್ತು ಖಾತೆ ಪುನರುಜ್ಜೀವನ: ಆನ್‌ಲೈನ್‌ ಪಾವತಿಯನ್ನು ಯಶಸ್ವಿಯಾಗಿ ಮಾಡಿದ ನಂತರ ಇಮೇಲ್ ಅಕೌಂಟ್‌ಗೆ ದೃಢೀಕರಣದ ಸಂದೇಶ ಬರುತ್ತದೆ. ಬಳಿಕ ಪಿಎಫ್‌ಆರ್‌ಡಿಎ ನಿಮ್ಮ ಖಾತೆಯನ್ನು ಪರಿಶೀಲಿಸಿ ಕೆಲವೇ ದಿನಗಳಲ್ಲಿ ಅದನ್ನು ಮತ್ತೆ ಸಕ್ರಿಯಗೊಳಿಸುತ್ತದೆ.

ಆಫ್‌ಲೈನ್‌ ಮೂಲಕ ಸಕ್ರಿಯಗೊಳಿಸುವ ವಿಧಾನ

ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ: ದಂಡ ಸಹಿತ ಬಾಕಿ ಇರುವ ಮೊತ್ತವನ್ನು ಪಾವತಿಸಿ. ಬಳಿಕ ಎನ್‌ಪಿಎಸ್‌ ವೆಬ್‌ಸೈಟ್‌ನಿಂದ UOS-S10-A ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ. ಅದನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಪ್ಯಾನ್‌ ಕಾರ್ಡ್‌ ಪ್ರತಿಯನ್ನು ಲಗತ್ತಿಸಿ. ಇದನ್ನು ನಿಮ್ಮ ಪಿಒಪಿ ಶಾಖೆ (ಬ್ಯಾಂಕ್ ಅಥವಾ ನಿಯೋಜಿತ ಏಜೆನ್ಸಿ)ಗೆ ನೀಡಿ. ಪಿಒಪಿ ನಿಮ್ಮ ಮನವಿಯನ್ನು ಪರಿಶೀಲಿಸಿ ಪಿಎಫ್‌ಆರ್‌ಡಿಎಗೆ ಕಳುಹಿಸುತ್ತದೆ. ಕೆಲವೇ ದಿನಗಳಲ್ಲಿ ಖಾತೆ ಸಕ್ರಿಯಗೊಂಡಿರುವ ಬಗ್ಗೆ ಎಸ್‌ಎಂಎಸ್‌ ಅಥವಾ ಇಮೇಲ್‌ಗೆ ಮಾಹಿತಿ ರವಾನೆಯಾಗುತ್ತದೆ.

ಆಧಾರ್ ದೃಢೀಕರಣ ಕಡ್ಡಾಯ

ದೇಶಾದ್ಯಂತ ಆನ್‌ಲೈನ್‌ ವಂಚನೆ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಖಾತೆಗಳ ಲಾಗಿನ್ ಪ್ರಕ್ರಿಯೆಯಲ್ಲಿ ಬದಲಾವಣೆ ತಂದಿದೆ. ಏಪ್ರಿಲ್ 1ರಿಂದ ಹೊಸ ನಿಯಮ- ಕಡ್ಡಾಯ ಆಧಾರ್ ಅಥೆಂಟಿಕೇಷನ್‌ ಜಾರಿಗೆ ಬಂದಿದೆ.  

ಇದನ್ನೂ ಓದಿ: Money Guide: ಗಮನಿಸಿ; ಏ. 1ರಿಂದ ಎನ್‌ಪಿಎಸ್ ವಹಿವಾಟಿಗೆ ಆಧಾರ್ ದೃಢೀಕರಣ ಕಡ್ಡಾಯ: ಏನಿದು ಹೊಸ ನಿಯಮ ? ಯಾಕಾಗಿ ?

Continue Reading

ದೇಶ

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Air India Express: ಸಾಮೂಹಿಕ ಅನಾರೋಗ್ಯದ ರಜೆ ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು.

VISTARANEWS.COM


on

Air India Express
Koo

ನವದೆಹಲಿ: ಸಾಮೂಹಿಕ ಅನಾರೋಗ್ಯದ ರಜೆ (Sick Leave) ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಿಮಾನದ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಗಮಿಸದಿದ್ದರೆ ಶಿಸ್ತು ಕ್ರಮ ನಡೆಸಲಾಗುವುದು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾದ ಅಂಗಸಂಸ್ಥೆಯಾದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದರು.

30ಕ್ಕೂ ಹೆಚ್ಚು ಸಿಬ್ಬಂದಿಗೆ ನೀಡಲಾದ ವಜಾ ಪತ್ರದಲ್ಲಿ, ಸಾಮೂಹಿಕ ರಜೆಯು ʼಯಾವುದೇ ಸಮರ್ಥನೀಯ ಕಾರಣವಿಲ್ಲದೆ ಪೂರ್ವ ನಿಯೋಜಿತ ಮತ್ತು ಸಂಘಟಿತ ಕೆಲಸದಿಂದ ದೂರವಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತದೆʼ ಎಂದು ಉಲ್ಲೇಖಿಸಲಾಗಿದೆ. “ನಿಮ್ಮ ಪ್ರತಿಭಟನೆ ಕಾರಣದಿಂದ ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ರದ್ದುಗೊಳಿಸಬೇಕಾಯಿತು. ಇದು ಕಂಪನಿಯ ಪ್ರಯಾಣಿಕರಿಗೆ ಭಾರಿ ಅನಾನುಕೂಲತೆಯನ್ನು ಉಂಟು ಮಾಡಿದೆ. ನಿಮ್ಮ ಕೃತ್ಯವು ಸಾರ್ವಜನಿಕ ಹಿತಾಸಕ್ತಿಯನ್ನು ವಿರುದ್ಧವಾಗಿದೆ. ಜತೆಗೆ ಕಂಪನಿಗೆ ಗಂಭೀರ ವಿತ್ತೀಯ ನಷ್ಟವನ್ನು ಉಂಟು ಮಾಡಿದೆʼʼ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಚೆನ್ನೈಯಿಂದ ಕೋಲ್ಕತ್ತಾ, ಚೆನ್ನೈಯಿಂದ ಸಿಂಗಾಪುರ, ತಿರುಚ್ಚಿಯಿಂದ ಸಿಂಗಾಪುರ ಮತ್ತು ಜೈಪುರದಿಂದ ಮುಂಬೈಗೆ ತೆರಳು ವಿಮಾನಗಳು ರದ್ದಾಗಿವೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನೆಗೆ ಕಾರಣವೇನು?

ಟಾಟಾ ಗ್ರೂಪ್‌ ಜತೆಗೆ ಏರ್‌ ಇಂಡಿಯಾ ವಿಲೀನಗೊಂಡ ಬಳಿಕ ಸಿಬ್ಬಂದಿ ನಡುವೆ ತಾರತಮ್ಯ ಸಮಸ್ಯೆ ಉಂಟಾಗಿತ್ತು. ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಕೆಲವೊಂದು ಸಿಬ್ಬಂದಿಗೆ ಕೆಲದರ್ಜೆಯ ನೌಕರಿಯನ್ನು ನೀಡಲಾಗುತ್ತಿದೆ. ಪರಿಹಾರ ಪ್ಯಾಕೇಜ್‌ನ ಪ್ರಮುಖ ಭಾಗಗಳನ್ನು ಮಾರ್ಪಡಿಸಲಾಗಿದೆ ಅಥವಾ ತೆಗೆದು ಹಾಕಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಬಲವಂತವಾಗಿ ಬಾಯಿಮುಚ್ಚಿಸಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಸ್ತುತ ಎಐಎಕ್ಸ್ ಕನೆಕ್ಟ್ (ಹಿಂದಿನ ಏರ್ ಏಷ್ಯಾ ಇಂಡಿಯಾ) ಅನ್ನು ತನ್ನೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯಲ್ಲಿದೆ. ಪೈಲಟ್ ಸಮಸ್ಯೆಗಳಿಂದಾಗಿ ಟಾಟಾ ಗ್ರೂಪ್ ಪೂರ್ಣ-ಸೇವಾ ವಾಹಕ ವಿಸ್ತಾರಾ ರದ್ದಾಗಿರುವ ಬೆನ್ನಲ್ಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಈ ಬಿಕ್ಕಟ್ಟು ಆರಂಭವಾಗಿದೆ. ಏರ್ ಇಂಡಿಯಾದೊಂದಿಗೆ ವಿಲೀನಗೊಳ್ಳುವ ಪ್ರಕ್ರಿಯೆ ಬಗ್ಗೆ ವಿಸ್ತಾರಾದಲ್ಲಿದ್ದ ಪೈಲಟ್‌ಗಳಲ್ಲೂ ಅಸಮಾಧಾನವು ಭುಗಿಲೆದ್ದಿತ್ತು. ಹೊಸ ಒಪ್ಪಂದಗಳನ್ನು ಅನುಸರಿಸಿ, ಪೈಲಟ್‌ಗಳು ವಿಮಾನಗಳನ್ನು ನಿರ್ವಹಿಸುವ ರೋಸ್ಟರ್‌ಗಳು ಮತ್ತು ಅವರ ವೇತನ ಪ್ಯಾಕೇಜ್‌ಗಳ ಅಂಶಗಳ ಬಗ್ಗೆ ಕಳವಳಗಳಿವೆ. ಈ ಎಲ್ಲ ಕಾರಣಗಳಿಂದ ಏರ್‌ ಇಂಡಿಯಾ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Air India | ಏರ್‌ ಇಂಡಿಯಾದಲ್ಲಿ ವಿಸ್ತಾರ, ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಲೀನ ಶೀಘ್ರ

Continue Reading
Advertisement
drowned in tank jindal bellary
ಕ್ರೈಂ9 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202412 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 202423 mins ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ28 mins ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ43 mins ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ51 mins ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ1 hour ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ1 hour ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

karnataka SSLC result 2024
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

Digestion Tips
ಆರೋಗ್ಯ2 hours ago

Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ12 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ19 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ19 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು20 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ20 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌