ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಸಾಮಗ್ರಿಗಳ ದರ ಹೀಗಿದೆ: ಯಾವುದು ಅಗ್ಗ? ಯಾವುದು ದುಬಾರಿ? ಫುಲ್‌ ಡಿಟೇಲ್ಸ್ - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಸಾಮಗ್ರಿಗಳ ದರ ಹೀಗಿದೆ: ಯಾವುದು ಅಗ್ಗ? ಯಾವುದು ದುಬಾರಿ? ಫುಲ್‌ ಡಿಟೇಲ್ಸ್

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

market rate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

2೫/02/2023

ಸರಕು ದರ (ರೂಪಾಯಿ)
ಸಕ್ಕರೆ (100 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1790-1800
1750-1770
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ
3. ಉಂಡೆ ಸೇಲಂ
4. ಕೊಲ್ಲಾಪುರ

4500-4600
4100-4200
4500-4600
4300-5600
ತೊಗರಿಬೇಳೆ ಹೊಸದು 50 ಕೆ.ಜಿ.
ದೇಸಿ ಶಿವಲಿಂಗ
ವಿದೇಶಿ ಶಿವಲಿಂಗ
ವಿದೇಶಿ ಮಧ್ಯಮ
ಪಟ್ಕ ಸಾರ್ಟೆಕ್ಸ್
ರೆಗ್ಯುಲರ್

6200-6250
5100-2150
4900-4950
5750-5800
5300-5400
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3380-3400
3300-3350
3150-3200
2950-3000
ಕಡಲೆಕಾಯಿ ಬೀಜ 40 ಕೆಜಿ
ಉತ್ತಮ ದಪ್ಪ
ಮಧ್ಯಮ

5650-5700
5200-5400
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2200-2250
1950-2000
ಉದ್ದಿನ ಬೇಳೆ 50 ಕೆ.ಜಿ.
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಸೂರ್ಯ
ಮಧ್ಯಮ
ಗೋಲಾ ಉತ್ತಮ
ಗೋಲಾ ಮಧ್ಯಮ

6550-6600
5350-5400
5250-5300
5300-5350
5000-5150
4800-4900
4500-4600
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

5200-5250
4900-5000
ಹೆಸರು ಕಾಳು
1. ಉತ್ತಮ
2. ಮಧ್ಯಮ

5200-5250
4500-4750
ಅಲಸಂದೆ
1. ಉತ್ತಮ
2. ಮಧ್ಯಮ

3700-3800
3500-3600
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

5500-5600
5300-5400


7000-7200
6500-6700


3600-3700
3500-3600
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3450-3500
3100-3200
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
ರಾ,ರೈಸ್ ಸೋನಾ,ಮ,ಹಳೇದು
ರಾ, ರೈಸ್ ಸೊನಾ, ಮ, ಹೊಸದು
ರಾ ರೈಸ್ ನುಚ್ಚು
ಸೋನಾ,ಮ,ಸ್ಟೀಮ್ ಉತ್ತಮ
ಸೋನಾ, ಮ,ಸ್ಟೀಮ್ ಮದ್ಯಮ
ಸೋನಾ,ಮ,ಸ್ಟೀಮ್ ನುಚ್ಚು
ಆರ್ ಎನ್ ಆರ್ ಸ್ಟೀಮ್
ಹೆಚ್ ಎಂ ಟಿ ಸ್ಟಿಮ್
ಸೋನಾ ಬಾಯಿಲ್ಡ್
ಕೆಂಪು ಕುಚಲಕ್ಕಿ ಉತ್ತಮ
ಮಧ್ಯಮ
ಐ ಆರ್8(100 ಕೆಜಿ)
ಇಡ್ಲಿಕಾರ್ (100 ಕೆಜೆ)

5000-5400
4600-4800
3200-3300
4400-4500
4200-4300
2500-2600
4600-4900
5200-5300
3600-4500
4900-5300
4200-4400
3100-3200
3500-3600
ಬೆಳ್ಳುಳ್ಳಿ ಹೊಸದು 100 ಕೆಜಿ
ಎಂಪಿ ಗೋಲಾ
ಲಡ್ಡು
ಮಧ್ಯಮ
ಉಟಿ

8,000-8,500
7,000-7,500
4,500-5,000
9,500-10,000
ಈರುಳ್ಳಿ
ಫುಲ್ ದಪ್ಪ
ಮೀಡಿಯಂ ದಪ್ಪ
ಮಧ್ಯಮ
ಗೋಲ್ಟಾ
ಗೊಲ್ಟಿ
ಜೋಡ್

550-500
400-500
300-350
200-250
100-150
100-200
ಆಲೂಗಡ್ಡೆ (50 ಕೆ.ಜಿ.)
ಇಂದೂರು ಚೀಪ್ಸ್
ಮಧ್ಯಮ
ಕೋಲಾರ ದಪ್ಪ
ಮಧ್ಯಮ
ಆಗ್ರಾ ಹೊಸದು
ಮಧ್ಯಮ

800- 900
600-700
800-900
600-700
500-550
450-500
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮೀಡಿಯಂ

2900-3000
1500-2100
ಪರಿಶುದ್ಧ ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ
ಸನ್ ಪ್ಯೂರ್ 15 ಕೆಜಿ
ಗೋಲ್ಡವಿನ್ನರ್ 10 ಲೀ.
ಗೋಲ್ಡ್ ವಿನ್ನರ್ 15 ಕೆಜಿ
ಜೆಮಿನಿ 10 ಲೀ.
ಜೆಮಿನಿ 15 ಕೆಜಿ
ಫ಼ಾರ್ಚುನ್10 ಲೀ.
ಫ಼ಾರ್ಚುನ್15 ಕೆಜಿ
ಪ್ಯೂರ್ ಗೋಲ್ಡ್ 10 ಲೀ


1320
2000
1330
2000
1430
2050
1340
2030
1220
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2185
755
1660
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ
3. ಕ್ಲಿನ್ ಗುಲಾಬಿ
4. ಕ್ಲಿನ್ ಮಧ್ಯಮ

2900-2950
2750-2800
2900-3000
2750-2800
ಚಕ್ಕಿ ಅಟ್ಟ (50 ಕೆ.ಜಿ)
ಐಸ್
ಆರೇಂಜ್
ಸಿಲ್ವರ್ ಕಾಯಿನ್
ಇಂದೂರ್
ಕೇಸರಿ ಪಿಚ್
ಅಂಬೆ
ಕೇಸರಿ
ಹಿರಾ ಪನ್ನ

1800-1810
1850-1860
1790-1800
1800-1810
1730-1740
1760-1770
1680-1690
1690-1700
ರೆಗ್ಯುಲರ್ ಅಟ್ಟ 50 ಕೆ.ಜಿ
ಆರೇಂಜ್
ರಾಕ್ಷಿ
ಸುನಿಲ್

1800-1810
1800-1810
1780-1790
ತಂದೂರಿ ಅಟ್ಟ ( 50 ಕೆ.ಜಿ)
1. ರಾಕ್ಷಿ
2. ಸಿಲ್ವರ್ ಕಾಯಿನ್
3. ಮೋಹಿನಿ

1820-1830
1860-1870
1800-1810
ಸಾದಾ ಸೂಜಿ (50 ಕೆ.ಜಿ)
ಆರೇಂಜ್
ರಾಕ್ಷಿ
ಹೀರೊ
ಸುನಿಲ್
ಕ್ಯಾಂಡಿ
ಅಂಬೆ ಉತ್ತಮ

2000-2010
1995-2000
1800-1810
1800-1810
1860-1870
1800-1810
ಚಿರೋಟಿ ಸೂಜಿ (50 ಕೆ.ಜಿ)
1. ಮೋಹಿನಿ
2. ಆರೆಂಜ್ 30 ಕೆ.ಜಿ
3. ತುಳಸಿ

1850-1860
2000-2010
1750-1760
ಮೈದಾ (50 ಕೆ.ಜಿ)
1. ಐಸ್
2. ಸುನೀಲ್
3. ಆರೆಂಜ್
4. ಮೊಬೆಲ್
5. ಸಿಲ್ವರ್ ಕಾಯಿನ್
6. ಕೇಸರಿ ಪೀಚ್

1840-1850
1870-1890
1890-2000
1840-1850
1840-1850
1790-1800

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

ಸನ್ ಪ್ರಿಯಾ
ಸನ್ ಪಾರ್ಕ್
ಸನ್ ಪವರ್
ಸೂರ್ಯ ಪವರ್
1030
1040
1020
1010
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
ಆನಂದಮ್
ಅಂದಮ್
ಅಕ್ಷಯ
ನಂದಿನಿ

1070
1060
1050
1070
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1750
1600
1500
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
ರುಚಿಗೋಲ್ಡ್ 10 ಲೀ.
ಲೀಡರ್ ಗೋಲ್ಡ್ 10 ಲೀ
ರುಚಿಗೋಲ್ಡ್ 15 ಕೆಜಿ

990
1000
1700
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

900
1570
1600
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

1850
1830
1700
1700
1660
1680
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ ಬೆಂಗಳೂರು]
ಬ್ಯಾಡಗಿ ಸ್ಟೇಮ್
ಬ್ಯಾ, ಸ್ಟೇಮ್ಲೆಸ್
ಗುಂಟೂರಸ್ಟೇಮ್
ಗು, ಸ್ಟೇಮ್ ಲೆಸ್
ಮಣ್ ಕಟ್
ಕನಿಷ್ಠ ಗರಿಷ್ಠ

20,000 – 52,000
30,000 – 65,000
15,000 – 21,000
25,000 – 27,000
20,000 – 23,500
ಹುಣಸೆ ಹುಳಿ (100 ಕೆ.ಜಿ.)
ಉತ್ತಮ ಹಸಿರು
ಮಧ್ಯಮ ಹಸಿರು
ಮಧ್ಯಮ
ಬ್ರೋಕನ್
ಕನಿಷ್ಠ ಗರಿಷ್ಠ
6,000 – 12,000
4,000 – 10,000
11,000 – 18,000
15,000 – 25,000
ಧನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
5,000 – 8,000
4,000 – 4,800
3,000 – 3,800
2,800 – 3,200
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಸಣ್ಣ
3. ಜೀರಿಗೆ ಸೂಪರ್ ಫೈನ್
4. ಜೀರಿಗೆ ಮೀಡಿಯಂ ಫೈನ್
5. ಜೀರಿಗೆ ಮೀಡಿಯಂ

120
90
400
370
300

125
95
410
380
340
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ
4. ಇಂಡಿಯನ್

1390
1230
1450
1350

1400
1250
1510
1400
ಮೆಂತ್ಯೆ7780
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

75
76

76
77
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

2400
2200
2100
1800

2500
2250
2200
1900
ಲವಂಗ
ಮಡಗಸ್ಕರ್
ಲಾಲ್ ಪರಿ
ಚೆಕ್ಕೆ
ಮರಾಠಿ ಮೊಗ್ಗು ವರ್ಜಿನಲ್
ಆನಾನಸ್ ಹೂ
ಕೊಬ್ಬರಿ
ಉತ್ತಮ
ಮಾಧ್ಯಮ

800
890
270
980
780

145
135

820
920
280
1000
800

150
140
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

550
530

560
540
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

680
720
700

720
750
720
ಬಾದಾಮಿ580600
ಗೋಧಿ 50 ಕೆಜಿ
1. ಸೂಪರ್ ಫೈನ್
2. ಮೀಡಿಯಂ ಫೈನ್
3. ಮೀಡಿಯಂ

2200
2000
1800

2300
2100
1850
ದ್ರಾಕ್ಷಿ190230
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

178
210
230

180
220
240

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 450 ರೂಪಾಯಿ]

ತರಕಾರಿಕನಿಷ್ಠಗರಿಷ್ಠ
ಟೊಮೇಟೊ2025
ಹುರುಳಿಕಾಯಿ ನಾಟಿ           4550
ಹ್ಯಾರಿಕೊಟ್‌ ಬೀನ್ಸ್    4045
ಬದನೆಕಾಯಿ ಬಿಳಿ     3035
ಬದನೆಕಾಯಿ ಗುಂಡು  3035
ಬೀಟ್‌ರೂಟ್‌             2025
ಹಾಗಲಕಾಯಿ            2530
ಸೀಮೆ ಬದನೆಕಾಯಿ      810
ಸೌತೆಕಾಯಿ                  2530
ಗೊರಿಕಾಯಿ ಗೊಂಚಲು  4045
ಕ್ಯಾಪ್ಸಿಕಮ್‌ 3035
ಹಸಿ ಮೆಣಸಿನಕಾಯಿ ದಪ್ಪ3540
ಸಣ್ಣ ಮೆಣಸಿನಕಾಯಿ   4045
ಬಜ್ಜಿ ಮೆಣಸಿನಕಾಯಿ2530
ತೊಂಡೆಕಾಯಿ3540
ಕ್ಯಾರೆಟ್ ಉಟಿ 3035
ಕ್ಯಾರೆಟ್ ನಾಟಿ        3035
ಎಲೆಕೋಸು                68
ನವಿಲು ಕೋಸು2530
ಹೂ ಕೋಸು     3540
ನುಗ್ಗೆಕಾಯಿ 100120
ಬೆಂಡೆಕಾಯಿ4045
ಹಿರೇಕಾಯಿ   3540
ಸೋರೆಕಾಯಿ     1520
ಚಪ್ಪರವರೇಕಾಯಿ4045
ಕಾರಮಣಿ                4550
ಮೂಲಂಗಿ            1520
ಈರುಳ್ಳಿ 1820
ಬೆಳ್ಳುಳ್ಳಿ 5080
ಆಲೂಗಡ್ಡೆ 1520

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 00 ಜನವರಿ 2023

ಅಡಕೆ ಧಾರಣೆ: 00 ಜನವರಿ, 2023

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿ ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಇದು ಆತಂಕಕಾರಿ

VISTARANEWS.COM


on

Vistara Editorial
Koo

ಭಾರತದಲ್ಲಿ ತಯಾರಾಗುವ ಒಟ್ಟು 527 ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಹೇಳಿದ್ದಾರೆ. 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿದೆಯಂತೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ. ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಅಪಾಯಕಾರಿ ಕೆಮಿಕಲ್‌ಗಳು ಕಂಡು ಬಂದಿವೆ. ಇದು ಭಾರತದ ರಫ್ತು ವಲಯದ ಮಟ್ಟಿಗೆ ಆತಂಕಕಾರಿ ಸಂಗತಿ.

ಹೀಗಾಗುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿಯನ್ನು ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಅಮೆರಿಕದಲ್ಲಿ ಭಾರತದ ಮಾವು, ಜರ್ಮನಿಯಲ್ಲಿ ಭಾರತದ ಡಾರ್ಜಲಿಂಗ್‌ ಟೀ, ಯುಎಇಯಲ್ಲಿ ನಮ್ಮ ಮಾವು ಹಾಗೂ ತರಕಾರಿ ತಿರಸ್ಕಾರಕ್ಕೊಳಗಾಗಿದ್ದವು. ಇದೀಗ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅತಿಯಾಗಿ ಕಂಡುಬಂದಿದೆ. ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಹೆಚ್ಚಿದೆ. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದ ಕೆಲವು ದೇಶಗಳಲ್ಲಿ ಸಾವಿಗೆ ಕಾರಣವಾಗಿತ್ತು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಇದಕ್ಕೆ ಕಾರಣ, ನಮ್ಮವರು ಬೆಳೆಯುವ ಬೆಳೆಗೆ ಬಳಸುವ ಕೀಟನಾಶಕ ಹಾಗೂ ರಸಗೊಬ್ಬರದ ಪ್ರಮಾಣದಲ್ಲಿ ಲಂಗುಲಗಾಮೇ ಇಲ್ಲದಿರುವುದು. ಕೀಟನಾಶಕಗಳು ಹಾಗೂ ರಸಗೊಬ್ಬರಗಳಿಗೆ ಅತಿ ಭಾರೀ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕೊಡುವ ದೇಶವೂ ನಮ್ಮದೇ. ಹೀಗಾಗಿ ಇವು ಅತ್ಯಂತ ಅಗ್ಗವಾಗಿ ಸಿಗುತ್ತವೆ. ಅಮೆರಿಕ ಬಹಳಷ್ಟು ಸಾರಿ ನಮ್ಮಲ್ಲಿ ನೀಡಲಾಗುತ್ತಿರುವ ರಸಗೊಬ್ಬರ ಸಬ್ಸಿಡಿಯ ಬಗ್ಗೆ ತಗಾದೆ ಎತ್ತಿದೆ. ಇದರಲ್ಲಿ ಅಮೆರಿಕದ ಹಿತಾಸಕ್ತಿಯೂ ಇದೆ ಎನ್ನೋಣ. ಆದರೆ ಅಮೆರಿಕದ ಆಕ್ಷೇಪದಲ್ಲಿ ಸತ್ಯವೂ ಇದೆ. ಅಮೆರಿಕ, ಮುಂದುವರಿದ ಯುರೋಪ್ ದೇಶಗಳು, ಸಿಂಗಾಪುರ ಮುಂತಾದೆಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮ ಮೀರಿದ ಉತ್ಪನ್ನಗಳನ್ನು ಅವು ಸ್ವೀಕರಿಸುವುದಿಲ್ಲ. ಹೀಗಾಗಿ ರಫ್ತಿನ ಮಟ್ಟಿಗೆ ನಾವೂ ಕಠಿಣ ನಿಯಮಗಳನ್ನು ಪಾಲಿಸಬೇಕಾದುದು ಅತ್ಯವಶ್ಯಕ.

ದೇಶದಿಂದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿನ ಪ್ರಾಮುಖ್ಯತೆ ಹಾಗೂ ಅದರ ಗುಣಮಟ್ಟ ಕಾಪಾಡಿಕೊಳ್ಳಬೇಕಾದ ಅಗತ್ಯ ಅರಿತುಕೊಂಡ ಕೇಂದ್ರ ಸರ್ಕಾರ 1986ರಲ್ಲಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವನ್ನು (APEDA) ಸ್ಥಾಪಿಸಿತು. ರಫ್ತು ಮಾಡಬೇಕಾದ ಸರಕುಗಳ ಕಡ್ಡಾಯ ಗುಣಮಟ್ಟದ ನಿಯಂತ್ರಣ ಮತ್ತು ಪೂರ್ವ-ರವಾನೆ ತಪಾಸಣೆಯ ಉದ್ದೇಶಕ್ಕಾಗಿ ರಫ್ತು (ಗುಣಮಟ್ಟ ನಿಯಂತ್ರಣ ಮತ್ತು ತಪಾಸಣೆ) ಕಾಯಿದೆ, 1963ರ ಸೆಕ್ಷನ್ 3ರ ಅಡಿಯಲ್ಲಿ ಭಾರತ ಸರ್ಕಾರದಿಂದ ರಫ್ತು ಪರಿಶೀಲನಾ ಮಂಡಳಿ (EIC) ಅನ್ನು ಸ್ಥಾಪಿಸಲಾಯಿತು. ಇದು 1000ಕ್ಕೂ ಹೆಚ್ಚು ಸರಕುಗಳನ್ನು ತಪಾಸಿಸುತ್ತದೆ. ಆಹಾರ ಮತ್ತು ಕೃಷಿ, ಮೀನುಗಾರಿಕೆ, ಖನಿಜಗಳು, ಸಾವಯವ ಮತ್ತು ಅಜೈವಿಕ ರಾಸಾಯನಿಕಗಳು, ರಬ್ಬರ್ ಉತ್ಪನ್ನಗಳು, ಸೆರಾಮಿಕ್ ಉತ್ಪನ್ನಗಳು, ಕೀಟನಾಶಕಗಳು, ಲಘು ಎಂಜಿನಿಯರಿಂಗ್, ಉಕ್ಕಿನ ಉತ್ಪನ್ನಗಳು, ಸೆಣಬು ಉತ್ಪನ್ನಗಳು, ತೆಂಗಿನಕಾಯಿ ಉತ್ಪನ್ನಗಳು, ಪಾದರಕ್ಷೆಗಳು ಇವನ್ನೆಲ್ಲ ಪರಿಶೀಲಿಸುತ್ತದೆ. ಇದಕ್ಕಾಗಿಯೇ ದೊಡ್ಡ ಸಂಖ್ಯೆಯ ಲ್ಯಾಬ್‌ಗಳಿವೆ. ಹೀಗಿದ್ದರೂ ಕಣ್ತಪ್ಪಿಸಿ ವಿಷಕಾರಕ ಅಂಶಗಳಿರುವ ಉತ್ಪನ್ನಗಳು ವಿದೇಶಕ್ಕೆ ಹೋಗುತ್ತವೆ ಎಂದರೇನರ್ಥ?

ಸದ್ಯ ಈ ತಪಾಸಣೆಯನ್ನು ಬಿಗಿ ಮಾಡಬೇಕಿದೆ. ವಿಷಕಾರಕ ಅಂಶಗಳನ್ನು ಹೊಂದಿರುವ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವ, ಪರೀಕ್ಷಿಸುವ, ದೇಶಕ್ಕೆ ಕೆಟ್ಟ ಹೆಸರು ತರುವ ಉತ್ಪನ್ನಗಳ ನಿರ್ಬಂಧಕ್ಕೆ ಕಠಿಣ ಕ್ರಮ ಆಗಬೇಕಿದೆ. ಯಾಕೆಂದರೆ ಇದು ಭಾರತದ ಘನತೆಯನ್ನು ಜಾಗತಿಕವಾಗಿ ಉಳಿಸುವ ಅಥವಾ ನಾಶಮಾಡುವ ಸಂಗತಿಯಾಗಿದೆ.

Continue Reading

ವಿದೇಶ

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಅಮೆರಿಕ ಮುಂದಾಗಿದೆ. ಉತ್ಪನ್ನಗಳನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ ನಂತರ ಈ ಬೆಳವಣಿಕೆ ಕಂಡು ಬಂದಿದೆ. ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

MDH, Everest Spices
Koo

ವಾಷಿಂಗ್ಟನ್‌: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳ ಮಾರಾಟವನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ್ದು, ಇದೀಗ ಅಮೆರಿಕವೂ ಕ್ರಮಕ್ಕೆ ಮುಂದಾಗಿದೆ. ಅಮೆರಿಕದ ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ (Food and Drug Administration) ಎಂಡಿಎಚ್ ಮತ್ತು ಎವರೆಸ್ಟ್‌ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

“ಎಫ್‌ಡಿಎ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ” ಎಂದು ವಕ್ತಾರರು ತಿಳಿಸಿದ್ದಾರೆ. ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ಇತ್ತೀಚೆಗೆ ನಿಷೇಧಿಸಿತ್ತು. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿತ ಉತ್ಪನ್ನಗಳು.

ವಿವಾದದ ಬಳಿಕ ಎವರೆಸ್ಟ್ ಸಂಸ್ಥೆ ಪ್ರತಿಕ್ರಿಯಿಸಿ, ʼʼತನ್ನ ಮಸಾಲೆಗಳು ಸೇವನೆಗೆ ಸುರಕ್ಷಿತʼʼ ಎಂದು ಹೇಳಿದೆ. ಆದರೆ ಎಂಡಿಎಚ್ ಇದುವರೆಗೆ ತನ್ನ ಉತ್ಪನ್ನಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕಂಪನಿಗಳ ಉತ್ಪನ್ನಗಳನ್ನು ಅಮೆರಿಕ, ಯುರೋಪ್‌, ಇಂಗ್ಲೆಂಡ್‌ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಗುಣಮಟ್ಟ ತಪಾಸಣೆಗೆ ಭಾರತೀಯ ಆಹಾರ ಸುರಕ್ಷತಾ ನಿಯಂತ್ರಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸೋಮವಾರ ಆದೇಶ ಹೊರಡಿಸಿದೆ.

ʼʼಹಾಂಕಾಂಗ್ ಮತ್ತು ಸಿಂಗಾಪುರದ ಅಧಿಕಾರಿಗಳಿಂದ ಎಂಡಿಎಚ್ ಮತ್ತು ಎವರೆಸ್ಟ್ ಉತ್ಪನ್ನಗಳ ರಫ್ತು ಬಗ್ಗೆ ಮಾಹಿತಿ ಕೋರಲಾಗಿದೆ. ಗುಣಮಟ್ಟದ ಸಮಸ್ಯೆಗಳ ಮೂಲ ಕಾರಣವನ್ನು ಕಂಡುಹಿಡಿಯಲು ಕಂಪನಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆʼʼ ಎಂದು ಭಾರತದ ಮಸಾಲೆ ಮಂಡಳಿ ಬುಧವಾರ ತಿಳಿಸಿದೆ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಹಿಂಪಡೆಯಲು ಸಿಂಗಾಪುರ ಆದೇಶಿಸಿತ್ತು. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಅದು ಆರೋಪಿಸಿತ್ತು. ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಕಾರಣ ತಿಳಿಸಿತ್ತು. ಅದಾದ ಬಳಿಕ ಹಾಂಕಾಂಗ್‌ನಲ್ಲೂ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ.

Continue Reading

ಮನಿ-ಗೈಡ್

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Money Guide: ದೇಶದಲ್ಲಿನ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದಿದೆ. ಅದರಂತೆ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ 16 ಕಂತುಗಳನ್ನು ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಮುಂದಿನ ತಿಂಗಳು 17ನೇ ಕಂತು ಬಿಡಿಗಡೆಯಾಗುವ ನಿರೀಕ್ಷೆ ಇದೆ. ಸದ್ಯ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Money Guide
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು. ದೇಶಾದ್ಯಂತದ 9 ಕೋಟಿಗಿಂತ ಅಧಿಕ ಫಲಾನುಭವಿಗಳ ಖಾತೆಗೆ ಅಂದು ಸುಮಾರು 21,000 ಕೋಟಿ ರೂ. ಜಮೆ ಮಾಡಲಾಗಿತ್ತು. ಸದ್ಯ 17ನೇ ಕಂತು ಬಿಡುಗಡೆಯಾಗಬೇಕಿದೆ.

17ನೇ ಕಂತು ಯಾವಾಗ?

17ನೇ ಕಂತು ಮೇಯಲ್ಲಿ ಬಿಡುಗಡೆಯಾಗಲಿದೆ. ಆದರೆ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ‘New Farmer Registration’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ.
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ನಿಮ್ಮ ಹೆಸರು ಫಲಾನುಭವಿ ಪಟ್ಟಿಯಿಂದ ರದ್ದಾಗಲು ಕಾರಣ

  • ನಕಲಿ ಫಲಾನುಭವಿ ಸಂಖ್ಯೆ.
  • ಇ-ಕೆವೈಸಿ ಪೂರ್ಣವಾಗದಿರುವುದು.
  • ಅರ್ಜಿಯಲ್ಲಿನ ತಪ್ಪಾದ ಐಎಫ್‌ಎಸ್‌ಸಿ ಕೋಡ್‌.
  • ಅಮಾನ್ಯ, ವರ್ಗಾವಣೆಗೊಂಡ, ನಿರ್ಬಂಧಿಸಿದ ಅಥವಾ ಸ್ಥಗಿತಗೊಳಿಸಿದ ಬ್ಯಾಂಕ್ ಖಾತೆ.
  • ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ನಂಬರ್‌ ಲಿಂಕ್‌ ಆಗದೇ ಇರುವುದು.
  • ಅಪೂರ್ಣ ಅಪ್ಲಿಕೇಷನ್‌ ಫಾರಂ.
  • ಅಮಾನ್ಯ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೆಸರು.
  • ಫಲಾನುಭವಿ ಖಾತೆ ಸಂಖ್ಯೆಯು ಫಲಾನುಭವಿ ಕೋಡ್ ಮತ್ತು ಯೋಜನೆಯೊಂದಿಗೆ ಹೋಲಿಕೆ ಆಗದಿರುವುದು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading
Advertisement
Karnataka Weather
ಕರ್ನಾಟಕ4 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ13 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ18 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 202438 mins ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ51 mins ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ1 hour ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್2 hours ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ2 hours ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Parliament Flashback
Lok Sabha Election 20242 hours ago

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20243 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20247 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌