Tomato price : ಕೇಂದ್ರದಿಂದ ಟೊಮ್ಯಾಟೊ ರಿಟೇಲ್ ದರ ಪ್ರತಿ ಕೆ.ಜಿಗೆ 70 ರೂ.ಗೆ ಇಳಿಕೆ - Vistara News

ವಾಣಿಜ್ಯ

Tomato price : ಕೇಂದ್ರದಿಂದ ಟೊಮ್ಯಾಟೊ ರಿಟೇಲ್ ದರ ಪ್ರತಿ ಕೆ.ಜಿಗೆ 70 ರೂ.ಗೆ ಇಳಿಕೆ

Tomato price ಕೇಂದ್ರ ಸರ್ಕಾರ ಪ್ರತಿ ಕೆ.ಜಿಗೆ 80 ರೂ.ಗಳ ರಿಯಾಯಿತಿ ದರದಲ್ಲಿ ಟೊಮ್ಯಾಟೊ ಮಾರಾಟ ಮಾಡಲು ನಾಫೆಡ್‌ ಮತ್ತು ಎನ್‌ಸಿಸಿಎಫ್‌ಗೆ ಸೂಚಿಸಿದೆ. ವಿವರ ಇಲ್ಲಿದೆ.

VISTARANEWS.COM


on

tomato
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸರ್ಕಾರ ಮಾರುಕಟ್ಟೆ ಏಜೆನ್ಸಿಗಳಾದ ನಾಫೆಡ್‌ (NAFED) ಹಾಗೂ ಎನ್‌ಸಿಸಿಎಫ್‌ಗೆ ಟೊಮ್ಯಾಟೊವನ್ನು ಗುರುವಾರದಿಂದ ಪ್ರತಿ ಕೆ.ಜಿಗೆ 70 ರೂ.ಗಳಂತೆ ಮಾರಾಟ ಮಾಡುವಂತೆ (Tomato price) ಬುಧವಾರ ತಿಳಿಸಿದೆ. ಈ ಮೊದಲು 80 ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ಇದರಿಂದ ಗ್ರಾಹಕರಿಗೆ ನಿರಾಳವಾಗಲಿದೆ. ಮಾರುಕಟ್ಟೆಯಲ್ಲಿ ದರ ನಿಯಂತ್ರಣಕ್ಕೆ ಇದು ಪ್ರಯೋಜನವಾಗುವ ನಿರೀಕ್ಷೆ ಇದೆ.

ನ್ಯಾಶನಲ್‌ ಕೋಪರೇಟಿವ್‌ ಕನ್‌ಸ್ಯೂಮರ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ (NCCF) ಮತ್ತು ನ್ಯಾಶನಲ್‌ ಅಗ್ರಿಕಲ್ಚರಲ್‌ ಕೋಪರೇಟಿವ್‌ ಮಾರ್ಕೆಟಿಂಗ್‌ ಫೆಡರೇಷನ್‌ ಆಫ್‌ ಇಂಡಿಯಾ (NAFED) ಈ ಮಾರ್ಗಸೂಚಿಯನ್ನು ಗುರುವಾರದಿಂದ ಪಾಲಿಸಲಿದೆ.

ಈ ಎರಡೂ ಏಜೆನ್ಸಿಗಳು ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರದ ಮಂಡಿಗಳಲ್ಲಿ ಟೊಮ್ಯಾಟೊ ಖರೀದಿ ನಡೆಸುತ್ತಿವೆ. ಹಾಗೂ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ನಡೆಸುತ್ತಿವೆ. ದಿಲ್ಲಿ-ಎನ್‌ಸಿಆರ್‌ ವಲಯದಲ್ಲಿ 2023ರ ಜುಲೈ 14ರಂದಿ ಡಿಸ್ಕೌಂಟ್‌ ದರದಲ್ಲಿ ಟೊಮ್ಯಾಟೊ ಮಾರಾಟ ಶುರುವಾಗಿತ್ತು. ಪ್ರಮುಖ ನಗರಗಳಲ್ಲಿ ಟೊಮ್ಯಾಟೊ ದರ ಪ್ರತಿ ಕೆ.ಜಿಗೆ 150-200 ರೂ.ಗೆ ಏರಿಕೆಯಾಗಿದೆ.

ಟೊಮ್ಯಾಟೊ ದರ ಏರಿಕೆಯಾಗಿದ್ದೇಕೆ?

ಸಾಮಾನ್ಯವಾಗಿ ಜುಲೈ-ಆಗಸ್ಟ್‌ ಮತ್ತು ಅಕ್ಟೋಬರ್‌ -ನವೆಂಬರ್‌ನಲ್ಲಿ ಟೊಮ್ಯಾಟೊ ದರ ಏರುತ್ತದೆ. ಏಕೆಂದರೆ ಆ ತಿಂಗಳುಗಳಲ್ಲಿ ಉತ್ಪಾದನೆ ಕಡಿಮೆ ಇರುತ್ತದೆ. ಇದರ ಪರಿಣಾಮ ಪೂರೈಕೆಯಲ್ಲಿ ಏರುಪೇರಾಗುತ್ತದೆ. ದರ ಜಿಗಿಯುತ್ತದೆ. ಈ ವರ್ಷ ಪ್ರಮುಖ ನಗರಗಳಲ್ಲಿ ಟೊಮ್ಯಾಟೊ ದರ ಕೆ.ಜಿಗೆ 155 ರೂ.ಗಳಿಂದ 200 ರೂ. ತನಕ ಏರಿಕೆಯಾಗಿದೆ.

ಟೊಮ್ಯಾಟೊ ಪೆಟ್ರೋಲಿಗಿಂತ ದುಬಾರಿಯಾಗಿದೆ. ಮೆಕ್‌ ಡೊನಾಲ್ಡ್‌ ತನ್ನ ಆಹಾರಗಳ ಮೆನುವಿನಿಂದ ಟೊಮ್ಯಾಟೊವನ್ನು ಹೊರಗಿಟ್ಟಿದೆ. ಟೊಮ್ಯಾಟೊ ದರ ಏರಿಕೆಯಿಂದ ಹಣದುಬ್ಬರ ಹೆಚ್ಚಬಹುದು ಎಂದು ಆರ್‌ಬಿಐನ ಸಂಶೋಧಕರ ವರದಿ ಕಳವಳ ವ್ಯಕ್ತಪಡಿಸಿದೆ.

ಟೊಮ್ಯಾಟೊ ಬೆಳೆಯುವ ಪ್ರದೇಶಗಳು:

ಭಾರತದಲ್ಲಿ ರಾಬಿ ಅವಧಿಯ ಹಾಗೂ ಖಾರಿಫ್‌ ಅವಧಿಯ ಟೊಮ್ಯಾಟೊ ಬೆಳೆ ಸಾಮಾನ್ಯ. ರಾಬಿ ಕೊಯ್ಲು ಚಳಿಗಾಲದ ಅವಧಿಯದ್ದಾಗಿದ್ದರೆ ಖಾರಿಫ್‌ ಮಳೆಗಾಲದ ಬೆಳೆಯಾಗಿದೆ. ರಾಬಿ ಬೆಳೆಯನ್ನು ಮಹಾರಾಷ್ಟ್ರ ಮತ್ತು ಕರ್ನಾಟಕದ ಭಾಗಗಳಲ್ಲಿ ಬೆಳೆಯಲಾಗುತ್ತದೆ. ರಾಬಿಯ ಫಸಲು ಮಾರ್ಚ್-‌ ಆಗಸ್ಟ್‌ನಲ್ಲಿ ಉತ್ತರಪ್ರದೇಶ ಮತ್ತು ನಾಸಿಕ್‌ನಿಂದ ಬರುತ್ತದೆ. ಈ ಪ್ರದೇಶಗಳು ಟೊಮ್ಯಾಟೊವನ್ನು ಬೆಳೆಯುವ ಪ್ರಮುಖ ಪ್ರದೇಶಗಳಾಗಿವೆ.

ಬೆಳೆ ಹಾನಿಗೆ ಕಾರಣವೇನು?

ಮುಂಗಾರು ಮಳೆಯ ಕೊರತೆ, ತೀವ್ರ ಉಷ್ಣ ಹವಾಮಾನ, ಕೀಟಾಣುಗಳ ಹಾವಳಿಯಿಂದ ಈ ವರ್ಷ ಟೊಮ್ಯಾಟೊ ಬೆಳೆಯ ಉತ್ಪಾದನೆ ಗಣನೀಯ ಕುಂಠಿತವಾಗಿದೆ. ಜನವರಿ-ಮಾರ್ಚ್‌ ಅವಧಿಯಲ್ಲಿ ಮೊದಲ ಹಂತದ ಟೊಮ್ಯಾಟೊ ಬೆಳೆಯನ್ನು ಬೆಳೆಯಲಾಗಿತ್ತು. ಇದರ ಫಸಲು ಏಪ್ರಿಲ್-ಜೂನ್‌ನಲ್ಲಿ ಬಂದಿದೆ. ಈ ರಾಬಿ ಬೆಳೆ ರೈತರಿಗೆ ಉತ್ತಮ ಆದಾಯ ಕೊಡುತ್ತಿದ್ದರೂ, ಈ ಸಲ ಫಸಲೇ ಕಡಿಮೆಯಾಗಿದೆ.

ಎರಡು ವೈರಸ್‌ಗಳ ಹಾವಳಿ:

ದಿಢೀರ್‌ ಉಷ್ಣತೆ ಏರಿದಾಗ ಕೀಟಗಳ ಹಾವಳಿಯೂ ಜೋರಾಯಿತು. ಫಸಲು ನಾಶವಾಯಿತು. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ವೈರಸ್‌ ದಾಳಿಯಿಂದ ಟೊಮ್ಯಾಟೊ ಬೆಳೆಯ ಫಸಲು ಕುಸಿಯಿತು. ಮಹಾರಾಷ್ಟ್ರದಲ್ಲಿ ಕುಕುಂಬರ್‌ ಮೊಸಾಯಿಕ್‌ ವೈರಸ್‌ (cucumber mosaic virus – CMV) ಹಾಗೂ ಕರ್ನಾಟಕದಲ್ಲಿ ಟೊಮ್ಯಾಟೊ ಮೊಸಾಯಿಕ್‌ ವೈರಸ್‌ (tomato mosaic virus) ಹಾವಳಿಯಾಗಿತ್ತು.

ಇದನ್ನೂ ಓದಿ: Tomato Price : ಟೊಮ್ಯಾಟೋಗೆ 2 ಲಕ್ಷ ರೂ. ಖರ್ಚು ಮಾಡಿ 9 ಲಕ್ಷ ಲಾಭ ಮಾಡಿದ ಚಿಕ್ಕೋಡಿ ರೈತ!

ಇತರ ತರಕಾರಿಗಳ ದರ ಏನು?

ಕೆಲವು ರಾಜ್ಯಗಲ್ಲಿ ಇತರ ತರಕಾರಿಗಳ ದರ ಏರುಗತಿಯಲ್ಲಿದೆ. ಕ್ಯಾಲಿಫ್ಲವರ್‌, ಆಲೂಗಡ್ಡೆ, ಈರುಳ್ಳಿ, ಕ್ಯಾಬೇಜ್‌, ಬೀಟ್‌ ರೂಟ್‌, ಬೆಂಡೆ, ಹಸಿಮೆಣಸಿನ ದರ ಏರಿದೆ. ಈ ವರ್ಷ ಆರಂಭದಲ್ಲಿ ತೀವ್ರ ಉಷ್ಣ ಹವಾಮಾನ, ಬಳಿಕ ಮಳೆಯ ಕೊರತೆ ಹಾಗೂ ಅಂತಿಮವಾಗಿ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯ ಅನಾಹುತವನ್ನು ಭಾರತ ಎದುರಿಸಿದೆ. ಇದರ ಪರಿಣಾಮ ತರಕಾರಿಗಳ ದರ ಏರಲಿದೆ. ಹಣದುಬ್ಬರ ಹೆಚ್ಚಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಜೂನ್‌ನಲ್ಲಿ ರಿಟೇಲ್‌ ಹಣದುಬ್ಬರ 4.81% ಇತ್ತು. ಎಲ್‌ ನಿನೊ ಪರಿಣಾಮದಿಂದ ಉಂಟಾಗುತ್ತಿರುವ ಹವಾಮಾನ ಬದಲಾವಣೆ ಸವಾಲಾಗಿದೆ ಎಂದು ಈ ಹಿಂದೆ ಆರ್‌ಬಿಐ ವರದಿ ಕೂಡ ತಿಳಿಸಿತ್ತು.

ಟೊಮ್ಯಾಟೊ ದರ ಯಾವಾಗ ಇಳಿಕೆಯಾಗಲಿದೆ?

ಖಾರಿಫ್‌ ಅವಧಿಯ ಟೊಮ್ಯಾಟೊ ಬೆಳೆ ಬಂದ ಬಳಿಕ ಟೊಮ್ಯಾಟೊ ದರ ಇಳಿಕೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಆಗಸ್ಟ್‌ ಮಧ್ಯ ಭಾಗದ ತನಕ ಕಾಯಬೇಕಾಗುತ್ತದೆ. ಅಂದರೆ ಇನ್ನೂ ಒಂದು ತಿಂಗಳು ಟೊಮ್ಯಾಟೊ ದರ ಉನ್ನತ ಮಟ್ಟದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

Money Guide: ಭವಿಷ್ಯದ ಉಳಿತಾಯ ಯೋಜನೆಗಳಲ್ಲಿ ನೌಕರರ ಭವಿಷ್ಯ ನಿಧಿ ಪ್ರಮುಖವಾದುದು. ನಿವೃತ್ತಿಗಾಗಿ ಉಳಿತಾಯ ಮಾಡಲು ಇಪಿಎಫ್ ಒಂದು ಸುಲಭ ಮಾರ್ಗ. ಇದು ನಿಮ್ಮ ಸಂಬಳದಿಂದ ಸ್ವಯಂ ಚಾಲಿತವಾಗಿ ಕಡಿತಗೊಳ್ಳುವುದರಿಂದ ಪ್ರತ್ಯೇಕವಾಗಿ ಹೂಡಿಕೆ ಮಾಡಬೇಕಾಗಿಲ್ಲ ಎನ್ನುವುದು ಈ ಯೋಜನೆಯ ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ಜತೆಗೆ ತುರ್ತು ಅಗತ್ಯದ ಸಂದರ್ಭದಲ್ಲಿ ಒಂದಷ್ಟು ಮೊತ್ತ ಮರಳಿ ಪಡೆಯುವ ಸೌಲಭ್ಯವೂ ಇದೆ. ಈ ಅಕೌಂಟ್‌ಗೆ ನೀವು ಮೊಬೈಲ್‌ ನಂಬರ್‌ ನಮೂದಿಸಬೇಕಾಗುತ್ತದೆ. ಒಂದುವೇಳೆ ನೀವು ಆರಂಭದಲ್ಲಿ ನೀಡಿದ ನಂಬರ್‌ ಅನ್ನು ಬದಲಾಯಿಸಬೇಕೆಂದಿದ್ದರೆ ಅದಕ್ಕೂ ಅವಕಾಶ ಇದೆ. ಸುಲಭವಾಗಿ, ಮನೆಯಲ್ಲೇ ಕುಳಿತು ಮೊಬೈಲ್‌ ನಂಬರ್‌ ಬದಲಾಯಿಸಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ನೌಕರರ ಭವಿಷ್ಯ ನಿಧಿ (Employees’ Provident Fund) ಅತ್ಯುತ್ತಮ ನಿವೃತ್ತಿ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ಉಳಿತಾಯವನ್ನು ಉತ್ತೇಜಿಸಲಾಗುತ್ತದೆ. ನಿವೃತ್ತಿಗಾಗಿ ಉಳಿತಾಯ ಮಾಡಲು ಇಪಿಎಫ್ ಒಂದು ಸುಲಭ ಮಾರ್ಗ. ಇದು ನಿಮ್ಮ ಸಂಬಳದಿಂದ ಸ್ವಯಂ ಚಾಲಿತವಾಗಿ ಕಡಿತಗೊಳ್ಳುವುದರಿಂದ ಪ್ರತ್ಯೇಕವಾಗಿ ಹೂಡಿಕೆ ಮಾಡಬೇಕಾಗಿಲ್ಲ ಎನ್ನುವುದು ಈ ಯೋಜನೆಯ ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ಎಂಪ್ಲಾಯ್‌ ಪ್ರೊವಿಡೆಂಟ್‌ ಫಂಡ್‌ ಆರ್ಗನೈಸೇಷನ್‌ (EPFO) ಇದನ್ನು ನಿಯಂತ್ರಿಸುತ್ತದೆ. ನೀವು ಒಮ್ಮೆ ಇಪಿಎಫ್‌ ಯೋಜನೆಯಲ್ಲಿ ಹೆಸರು ನೋಂದಾಯಿಸಿದರೆ ಯೂನಿವರ್ಸಲ್‌ ಅಕೌಂಟ್‌ ನಂಬರ್‌ (UAN) ನೀಡಲಾಗುತ್ತದೆ. ಇಇಪಿಎಫ್‌ ಯೋಜನೆ ಆರಂಭಿಸುವಾಗ ನೀವು ಮೊಬೈಲ್‌ ನಂಬರ್‌ ನೀಡಬೇಕಾಗುತ್ತದೆ. ಬಳಿಕ ಪ್ರತಿ ತಿಂಗಳು ನಿಮ್ಮ ಸಂಬಳದಿಂದ ಮೊತ್ತ ಕಡಿತವಾದಾಗ ಈ ಬಗ್ಗೆ ಮಸೇಜ್‌ ಮೂಲಕ ಮಾಹಿತಿ ಕಳುಹಿಸಲಾಗುತ್ತದೆ. ಒಂದುವೇಳೆ ನಿಮ್ಮ ಮೊಬೈಲ್‌ ನಂಬರ್‌ ಬದಲಾಗಿದ್ದರೆ ಅದನ್ನು ಅಪ್‌ಡೇಟ್‌ ಮಾಡುವುದು ಮುಖ್ಯ. ಅದು ಹೇಗೆ ಎನ್ನುವುದರ ವಿವರ ಇಲ್ಲಿದೆ (Money Guide).

ಮೊಬೈಲ್‌ ನಂಬರ್‌ ಯಾಕೆ ಮುಖ್ಯ?

ನಿಮ್ಮ ಕೊಡುಗೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಮಾತ್ರವಲ್ಲ ಬ್ಯಾಲನ್ಸ್‌ ಚೆಕ್‌ ಮಾಡಲು ಕೂಡ ಮೊಬೈಲ್‌ ನಂಬರ್‌ ಮುಖ್ಯ. ಜತೆಗೆ ಪಿಎಫ್‌ ವೆಬ್‌ಸೈಟ್ ಅಥವಾ ಉಮಂಗ್ ಆ್ಯಪ್ ಮೂಲಕ ಯಾವುದೇ ಮಾಹಿತಿಯನ್ನು ಪಡೆಯಲು, ನಿಮ್ಮ ಖಾತೆಯಲ್ಲಿನ ವಿವರ ತಿಳಿದುಕೊಳ್ಳಲು ನೋಂದಾಯಿಸಲಾದ ಮೊಬೈಲ್ ಸಂಖ್ಯೆ ಸಕ್ರಿಯವಾಗಿರುವುದು ಬಹಳ ಮುಖ್ಯ. ಯಾಕೆಂದರೆ ಇದಕ್ಕೆ ಬರುವ ಒಟಿಪಿಯನ್ನು ಆರಂಭದಲ್ಲಿ ನಮೂದಿಸಬೇಕಾಗುತ್ತದೆ.

ಮೊಬೈಲ್‌ ನಂಬರ್‌ ಯಾವೆಲ್ಲ ಪ್ರಯೋಜನ ಲಭ್ಯ?

ನಿಮ್ಮ ಮೊಬೈಲ್‌ ನಂಬರ್‌ ಬಳಸಿ ಇಪಿಎಫ್‌ನ ಈ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಬಹುದು.

  • ಯುಎಎನ್‌ (UAN)ನ ಸ್ಥಿತಿಯ ಪರಿಶೀಲನೆ (ಸಕ್ರಿಯ ಅಥವಾ ನಿಷ್ಕ್ರೀಯ).
  • ಇಪಿಎಫ್‌ನ ಸಂಪೂರ್ಣ ಮಾಹಿತಿ.
  • ಎಸ್‌ಎಂಎಸ್‌ ಮೂಲಕ ಬ್ಯಾಲನ್ಸ್‌ ಪರಿಶೀಲನೆ.
  • ಕ್ಲೈಮ್‌ ಮಾಡಿದ್ದರೆ ಅದರ ಮಾಹಿತಿ.
  • ನಿಮ್ಮ ಖಾತೆಗೆ ಜಮೆ ಆಗುತ್ತಿರುವ ಮೊತ್ತದ ಮಾಹಿತಿ.
  • ಹಣ ವರ್ಗಾವಣೆಯಾಗುತ್ತಿದ್ದರೆ ಅದರ ಮಾಹಿತಿ.
  • ಬ್ಯಾಂಕ್‌ ಅಕೌಂಟ್‌, ಪ್ಯಾನ್‌ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್‌ ಲಿಂಕ್‌ ಆಗಿದೆಯಾ ಎನ್ನುವುದರ ಪರಿಶೀಲನೆ.
  • ವಿವಿಧ ಆನ್‌ಲೈನ್‌ ಸೇವೆಗಳ ಒಟಿಪಿ ಪಡೆದುಕೊಳ್ಳಲು.

ಮೊಬೈಲ್‌ ನಂಬರ್‌ ಬದಲಾಯಿಸುವುದು ಹೇಗೆ?

ಒಂದುವೇಳೆ ನೀವು ಆರಂಭದಲ್ಲಿ ನೀಡಿದ್ದ ಮೊಬೈಲ್‌ ನಂಬರ್‌ ಅನ್ನು ಬದಲಾಯಿಸಬೇಕು ಎಂದು ಬಯಸಿದರೆ ಸುಲಭವಾಗಿ, ಆನ್‌ಲೈನ್‌ನಲ್ಲೇ ಈ ಕೆಲಸ ಮಾಡಬಹುದು. ಅದು ಹೇಗೆ ಎನ್ನುವ ಹಂತ ಹಂತದ ಮಾಹಿತಿ ಇಲ್ಲಿದೆ.

  • ಮೊದಲು https://unifiedportal-mem.epfindia.gov.in/memberinterface/ ವೆಬ್‌ಸೈಟ್‌ಗೆ ತೆರಳಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • UAN ಪಾಸ್‌ವರ್ಡ್ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಲಾಗಿನ್ ಆಗಿ
  • ‘Manage’ ಆಯ್ಕೆಯಲ್ಲಿನ ‘Contact Details’ ಆಪ್ಶನ್‌ ಕ್ಲಿಕ್‌ ಮಾಡಿ.
  • ‘Change Mobile No.’ ಆಯ್ಕೆ ಸೆಲೆಕ್ಟ್‌ ಮಾಡಿ.
  • ಎರಡು ಬಾರಿ ಹೊಸ ಮೊಬೈಲ್‌ ನಂಬರ್‌ ನಮೂದಿಸಿ. ಬಳಿಕ ‘Get Mobile OTP’ ಬಟನ್‌ ಕ್ಲಿಕ್‌ ಮಾಡಿ.
  • ಹೊಸ ಮೊಬೈಲ್‌ ನಂಬರ್‌ಗೆ ಬಂದಿರುವ ಒಟಿಪಿಯನ್ನು ನಮೂದಿಸಿ.
  • ಬಳಿಕ ನಿಮ್ಮ ಮೊಬೈಲ್‌ ನಂಬರ್‌ ಯಶಸ್ವಿಯಾಗಿ ಬದಲಾಗುತ್ತದೆ.

ಪಾಸ್‌ವರ್ಡ್‌ ಮರೆತು ಹೋಗಿದ್ದರೆ ಹೀಗೆ ಮಾಡಿ

ಒಂದು ವೇಳೆ ಪಾಸ್‌ವರ್ಡ್‌ ಮರೆತು ಹೋಗಿದ್ದರೆ ಮೊಬೈಲ್‌ ನಂಬರ್‌ ಬದಲಾಯಿಸಲು ಹೀಗೆ ಮಾಡಿ.

  • ಮೊದಲು https://unifiedportal-mem.epfindia.gov.in/memberinterface/ ವೆಬ್‌ಸೈಟ್‌ಗೆ ತೆರಳಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಬಲ ಬದಿಯಲ್ಲಿ ಕಾಣಿಸುವ, ಲಾಗಿನ್‌ ಬಾಕ್ಸ್‌ನ ಕೆಳಗಡೆ ಇರುವ ʼForgot Passwordʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • UAN, ಕ್ಯಾಪ್ಚಾ ನಮೂದಿಸಿ ʼSubmitʼ ಬಟನ್‌ ಕ್ಲಿಕ್‌ ಮಾಡಿ.
  • ಹೆಸರು, ಹುಟ್ಟಿದ ದಿನಾಂಕ, ಲಿಂಗದ ವಿವರಗಳನ್ನು ಭರ್ತಿ ಮಾಡಿ ʼVerifyʼ ಬಟನ್‌ ಸೆಲೆಕ್ಟ್‌ ಮಾಡಿ.
  • ಮತ್ತೊಮ್ಮೆ ಕ್ಯಾಪ್ಚಾ, ಆಧಾರ್‌ ನಂಬರ್‌ ನಮೂದಿಸಿ ʼVerifyʼ ಆಯ್ಕೆ ಕ್ಲಿಕ್‌ ಮಾಡಿ.
  • ಆಧಾರ್‌ಗೆ ಲಿಂಕ್‌ ಆಗಿರುವ, ಹೊಸ ಮೊಬೈಲ್‌ ನಂಬರ್‌ ನಮೂದಿಸಿ, ಬಳಿಕ ‘Get OTP’ ಬಟನ್‌ ಕ್ಲಿಕ್‌ ಮಾಡಿ.
  • ಹೊಸ ಮೊಬೈಲ್‌ ನಂಬರ್‌ಗೆ ಬಂದಿರುವ ಒಟಿಪಿ ನಮೂದಿಸಿ, ‘Verify’ ಬಟನ್‌ ಕ್ಲಿಕ್‌ ಮಾಡಿ.
  • ಹೊಸ ಪಾಸ್‌ವರ್ಡ್‌ ಎರಡು ಬಾರಿ ನಮೂದಿಸಿ ‘Submit’ ಆಯ್ಕೆ ಕ್ಲಿಕ್‌ ಮಾಡಿ.
  • ಈಗ ಪಾಸ್‌ವರ್ಡ್‌ ಮತ್ತು ಮೊಬೈಲ್‌ ನಂಬರ್‌ ಬದಲಾಗಿರುತ್ತದೆ.

ಇದನ್ನೂ ಓದಿ: Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

Continue Reading

ವಾಣಿಜ್ಯ

Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

Sebi Fines: ವಂಚನೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಮಂಗಳವಾರ ಸಿಎನ್‌ಬಿಸಿ ಅವಾಝ್‌ನ ಮಾಜಿ ಮಾರ್ಕೆಟ್‌ ಸಂಪಾದಕ, ನಿರೂಪಕ ಪ್ರದೀಪ್‌ ಪಾಂಡ್ಯ ಮತ್ತು ತಾಂತ್ರಿಕ ವಿಶ್ಲೇಷಕ ಅಲ್ಪೇಶ್ ಫುರಿಯಾ ಅವರಿಗೆ ತಲಾ 1 ಕೋಟಿ ರೂ.ಗಳ ದಂಡ ವಿಧಿಸಿದೆ. ಮಾತ್ರವಲ್ಲ ಇವರಿಬ್ಬರ ಜತೆಗೆ ಇತರ ಆರು ಘಟಕಗಳನ್ನು ಐದು ವರ್ಷಗಳ ಕಾಲ ಷೇರು ಮಾರುಕಟ್ಟೆಯಿಂದ ನಿಷೇಧಿಸಲಾಗಿದೆ.

VISTARANEWS.COM


on

Sebi Fines
Koo

ಮುಂಬೈ: ವಂಚನೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ (SEBI) ಮಂಗಳವಾರ ಸಿಎನ್‌ಬಿಸಿ ಅವಾಝ್‌ನ ಮಾಜಿ ಮಾರ್ಕೆಟ್‌ ಸಂಪಾದಕ, ನಿರೂಪಕ ಪ್ರದೀಪ್‌ ಪಾಂಡ್ಯ ಮತ್ತು ತಾಂತ್ರಿಕ ವಿಶ್ಲೇಷಕ ಅಲ್ಪೇಶ್ ಫುರಿಯಾ ಅವರಿಗೆ ತಲಾ 1 ಕೋಟಿ ರೂ.ಗಳ ದಂಡ ವಿಧಿಸಿದೆ (Sebi Fines). ಮಾತ್ರವಲ್ಲ ಇವರಿಬ್ಬರ ಜತೆಗೆ ಇತರ ಆರು ಘಟಕಗಳನ್ನು ಐದು ವರ್ಷಗಳ ಕಾಲ ಷೇರು ಮಾರುಕಟ್ಟೆಯಿಂದ ನಿಷೇಧಿಸಲಾಗಿದೆ. ಅಲ್ಪೇಶ್ ಫುರಿಯಾ (HUF), ಅಲ್ಪಾ ಫುರಿಯಾ, ಮನೀಶ್ ಫುರಿಯಾ, ಮನೀಶ್ ಫುರಿಯಾ (HUF), ಮಹಾನ್ ಇನ್ವೆಸ್ಟ್‌ಮೆಂಟ್‌ ಮತ್ತು ತೋಶೀ ಟ್ರೇಡ್‌ಗೆ ತಲಾ 10 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸಿಎನ್‌ಬಿಸಿ ಅವಾಝ್‌ ಚಾನಲ್‌ನಲ್ಲಿ ಪ್ರದೀಪ್ ಪಾಂಡ್ಯ ಅಥವಾ ಅಲ್ಪೇಶ್ ಫುರಿಯಾ ನೀಡಿದ ಸ್ಟಾಕ್ ಶಿಫಾರಸುಗಳಿಗೆ ಅನುಗುಣವಾಗಿ ಅಲ್ಪೇಶ್ ಗ್ರೂಪ್ ಘಟಕಗಳು ಮೋಸದ ವಹಿವಾಟುಗಳನ್ನು ನಡೆಸಿದ್ದವು ಎಂದು ಮೂಲಗಳು ತಿಳಿಸಿದೆ.

“ವೈಯಕ್ತಿಕ ಲಾಭಕ್ಕಾಗಿ ಮಾಹಿತಿ ಮುಚ್ಚಿಟ್ಟುಕೊಂಡಿರುವುದು ಮತ್ತು ದುರುಪಯೋಗ ಪಡಿಸಿರುವುದು ತನಿಖೆ ವೇಳೆ ಕಂಡು ಬಂದಿದೆ” ಎಂದು ಸೆಬಿ ಹೇಳಿದೆ. “ಪ್ರಸ್ತುತ ಇದು ಕ್ಲಾಸಿಕಲ್ ಫ್ರಂಟ್ ರನ್ನಿಂಗ್ ಪ್ರಕರಣವನ್ನು ಹೋಲುತ್ತದೆʼʼ ಎಂದೂ ತಿಳಿಸಿದೆ.

ʼʼಪ್ರದೀಪ್ ಪಾಂಡ್ಯ, ಅಲ್ಪೇಶ್ ಫುರಿಯಾ ಮತ್ತು ಇತರ ಆರು ಸಂಸ್ಥೆಗಳು ಸೆಕ್ಯುರಿಟಿ ಮಾರುಕಟ್ಟೆಯನ್ನು ಪ್ರವೇಶಿಸದಂತೆ ಸೆಬಿ ನಿರ್ಬಂಧ ವಿಧಿಸಿದೆ ಮತ್ತು ಐದು ವರ್ಷಗಳ ಅವಧಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಸೆಕ್ಯುರಿಟಿ ಖರೀದಿಸುವುದು, ಮಾರಾಟ ಮಾಡುವುದು ಅಥವಾ ವ್ಯವಹರಿಸುವುದನ್ನು ಅಥವಾ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದುವುದನ್ನು ನಿಷೇಧಿಸಿದೆʼʼ ಎಂದು ಮೂಲಗಳು ಹೇಳಿವೆ.

ಪ್ರದೀಪ್ ಪಾಂಡ್ಯ 2021ರ ಆಗಸ್ಟ್‌ವರೆಗೆ ಸಿಎನ್‌ಬಿಸಿ ಅವಾಝ್‌ನಲ್ಲಿ ವಿವಿಧ ಕಾರ್ಯಕ್ರಮಗಳ ನಿರೂಪಕ / ಸಹ-ನಿರೂಪಕರಾಗಿದ್ದರು. ಅಲ್ಪೇಶ್ ಫುರಿಯಾ ಚಾನಲ್‌ನಲ್ಲಿ ಅತಿಥಿ ತಜ್ಞರಾಗಿ ಕಾಣಿಸಿಕೊಂಡಿದ್ದರು ಮತ್ತು ಅವರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸ್ಟಾಕ್ ಶಿಫಾರಸು ಮಾಡುತ್ತಿದ್ದರು.

ಸೆಬಿ ಪ್ರಕಾರ, ಅಲ್ಪೇಶ್ ಫುರಿಯಾ ಮತ್ತು ಸಂಬಂಧಿತ ಖಾತೆಗಳು 10.73 ಕೋಟಿ ರೂ.ಗಳ ಕಾನೂನುಬಾಹಿರ ಲಾಭವನ್ನು ಗಳಿಸಿವೆ ಮತ್ತು ಇದರಲ್ಲಿ 8.4 ಕೋಟಿ ರೂ.ಗಳನ್ನು ಈಗಾಗಲೇ ಸೆಬಿ ಮುಟ್ಟುಗೋಲು ಹಾಕಿಕೊಂಡಿದೆ ಮತ್ತು ಈಗ ಉಳಿದ 2.34 ಕೋಟಿ ರೂ.ಗಳನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: SEBI : ಹೂಡಿಕೆದಾರರ ಪರ ಸೆಬಿ ಕೈಗೊಂಡ ಮಹತ್ವದ ನಿರ್ಧಾರಗಳು ಯಾವುದು?

“ಪ್ರದೀಪ್ ಪಾಂಡ್ಯ ಸಿಎನ್ಬಿಸಿ ಆವಾಝ್‌ನಲ್ಲಿ ನಿರೂಪಕರಾಗಿದ್ದಾಗ ಮುಂಬರುವ ಸ್ಟಾಕ್ ಶಿಫಾರಸುಗಳ ಬಗ್ಗೆ ಗೌಪ್ಯ ಮಾಹಿತಿಯನ್ನು ಅಲ್ಪೇಶ್ ಫುರಿಯಾ ಅವರೊಂದಿಗೆ ಹಂಚಿಕೊಂಡಿದ್ದರು. ಅಲ್ಪೇಶ್ ಫುರಿಯಾ ಈ ವಿಶೇಷ ಮಾಹಿತಿಯನ್ನು ಬಂಡವಾಳ ಮಾಡಿಕೊಂಡು, ತಮ್ಮ ಸ್ವಂತ ಖಾತೆಗಳು ಮತ್ತು ಸಂಬಂಧಿತ ಸಂಸ್ಥೆಗಳ ಮೂಲಕ ವಹಿವಾಟುಗಳನ್ನು ನಿರ್ವಹಿಸಿದ್ದರು. ಈ ಶಿಫಾರಸುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೊದಲು ಲಾಭ ಗಳಿಸಿಕೊಂಡಿದ್ದರುʼʼ ಎಂದು ಸೆಬಿ ವರದಿಯಲ್ಲಿ ವಿವರಿಸಿದೆ.

Continue Reading

ಚಿನ್ನದ ದರ

Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 12) ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 12) ಚಿನ್ನದ ಬೆಲೆಯಲ್ಲಿ (Gold Rate Today) ಏರಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ರೂ.ಗೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,61,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಎಂಟು ಗ್ರಾಂ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,630₹ 7,231
ಮುಂಬೈ₹ 6,615₹ 7,216
ಬೆಂಗಳೂರು₹ 6,615₹ 7,216
ಚೆನ್ನೈ₹ 6,680₹ 7,287

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.15 ಹಾಗೂ 8 ಗ್ರಾಂಗೆ ₹ 721.2 ಇದೆ. 10 ಗ್ರಾಂಗೆ ₹ 901.5 ಹಾಗೂ 1 ಕಿಲೋಗ್ರಾಂಗೆ ₹ 90,150 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Continue Reading

ದೇಶ

Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Modi 3.0: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾಗಿ ಅಧಿಕಾರ ವಹಿಸಿದ ಹರ್‌ದೀಪ್‌ ಸಿಂಗ್‌ ಪುರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಗಣನೀಯವಾಗಿ ಇಳಕೆಯಾಗಲಿದೆ.

VISTARANEWS.COM


on

Modi 3.0
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾಗಿ ಅಧಿಕಾರ ವಹಿಸಿದ ಹರ್‌ದೀಪ್‌ ಸಿಂಗ್‌ ಪುರಿ (Hardeep Singh Puri) ಗುಡ್‌ನ್ಯೂಸ್‌ ನೀಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲಗಳನ್ನು ಜಿಎಸ್‌ಟಿ (Goods and Services Tax-GST) ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಗಣನೀಯವಾಗಿ ಇಳಕೆಯಾಗಲಿದೆ.

ʼʼಪೆಟ್ರೋಲ್‌, ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು 2020ರಲ್ಲಿಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ರಾಜ್ಯಗಳ ಒಪ್ಪಿಗೆ ಅಗತ್ಯ. ಆದರೆ ರಾಜ್ಯಗಳಿಗೆ ಪ್ರಮುಖ ಆದಾಯ ಬರುವುದು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಹೇರಲಾಗಿರುವ ತೆರಿಗೆಯಿಂದ. ಹೀಗಾಗಿ ಇದು ಜಾರಿ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಲಾಗುವುದುʼʼ ಅವರು ತಿಳಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಈ ಹಿಂದೆ ಮಾತನಾಡಿದ್ದ ಹರ್‌ದೀಪ್‌ ಸಿಂಗ್‌ ಪುರಿ, “ರಾಜ್ಯಗಳು ಈ ಬಗ್ಗೆ ಕ್ರಮ ಕೈಗೊಂಡರೆ, ಜಾರಿಗೊಳಿಸಲು ನಾವು ಸಿದ್ಧರಿದ್ದೇವೆ. ಅದನ್ನು ಹೇಗೆ ಕಾರ್ಯಗತಗೊಳಿಸಬೇಕು ಎನ್ನುವುದನ್ನು ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ಹೇಳಿದ್ದರು. 2022ರಲ್ಲಿಯೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿದ್ದ ಹರ್‌ದೀಪ್‌ ಸಿಂಗ್‌ ಪುರಿ ಈ ಬಗ್ಗೆ ತಿಳಿಸಿದ್ದರು. ಅಲ್ಲದೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೂ ಈ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. 2023ರ ನವೆಂಬರ್‌ನಲ್ಲಿ ಅವರು, ಈ ಯೋಜನೆ ಜಾರಿಗೆ ತರುವುದರಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ಒತ್ತಿ ಹೇಳಿದ್ದರು.

ಜಿಎಸ್‌ಟಿ ಜಾರಿಗೆ ಬಂದಾಗಿನಿಂದ ಇಂಧನ ಉತ್ಪನ್ನಗಳನ್ನು ಹೊಸ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಚರ್ಚೆ ನಡೆದಿದೆ. ಪ್ರಸ್ತುತ ಜಿಎಸ್‌ಟಿ ವ್ಯಾಪ್ತಿಗೆ ಒಳಪಡದ ಪೆಟ್ರೋಲ್, ಡೀಸೆಲ್, ನೈಸರ್ಗಿಕ ಅನಿಲ ಮತ್ತು ವಾಯುಯಾನ ಟರ್ಬೈನ್ ಇಂಧನದಂತಹ ಉತ್ಪನ್ನಗಳು ಮೌಲ್ಯವರ್ಧಿತ ತೆರಿಗೆ (VAT), ಕೇಂದ್ರ ಅಬಕಾರಿ ಸುಂಕ ಮತ್ತು ಕೇಂದ್ರ ಮಾರಾಟ ತೆರಿಗೆಯ ಅಡಿಯಲ್ಲಿ ಬರುತ್ತದೆ. ಪ್ರತಿ ರಾಜ್ಯವು ಪೆಟ್ರೋಲ್ ಮತ್ತು ಡೀಸೆಲ್‌ಗೆ ತನ್ನದೇ ಆದ ದರಗಳನ್ನು ನಿಗದಿಪಡಿಸುತ್ತದೆ. ಒಂದು ವೇಳೆ ಪೆಟ್ರೋಲ್- ಡೀಸೆಲ್ ಅನ್ನು ಜಿಎಸ್‌ಟಿ ಕೆಳಗೆ ತಂದುಬಿಟ್ಟರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬರುತ್ತಿರುವ ಆದಾಯ ಶೇ. 50ರಷ್ಟು ಕುಸಿದು ಹೋಗುತ್ತದೆ.

ಪ್ರಸ್ತುತ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕವನ್ನು ಮತ್ತು ರಾಜ್ಯ ಸರ್ಕಾರವು ಮೌಲ್ಯವರ್ಧಿತ ತೆರಿಗೆಯನ್ನು ಸಂಗ್ರಹಿಸುತ್ತದೆ.

ಇದನ್ನೂ ಓದಿ: GST : ರಾಜ್ಯಗಳು ಒಪ್ಪಿದರೆ ಪೆಟ್ರೋಲ್‌, ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ: ನಿರ್ಮಲಾ ಸೀತಾರಾಮನ್

ಕಳೆದ ವರ್ಷ ಸಚಿವೆ ನಿರ್ಮಲಾ ಸೋತಾರಾಮನ್‌ ಈ ಬಗ್ಗೆ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೊದಲಿನಿಂದಲೂ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಒಲವು ತೋರುತ್ತಿದೆ. ಆದರೆ ಕಾಂಗ್ರೆಸ್ ಈ ಬಗ್ಗೆ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದರು.

Continue Reading
Advertisement
disqualification for hanawala Gram Panchayat Vice President and Cancellation of membership ordered
ಕರ್ನಾಟಕ4 mins ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ33 mins ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ1 hour ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ1 hour ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ICC T20 Rankings
ಕ್ರೀಡೆ2 hours ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Rain News
ಪ್ರಮುಖ ಸುದ್ದಿ2 hours ago

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Chellagurki Shri Yerrithathanavara Maharathotsava in Ballari
ಧಾರ್ಮಿಕ2 hours ago

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Narendra Modi
ದೇಶ2 hours ago

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Terror attack
ದೇಶ2 hours ago

Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

Uttara Kannada MP Vishweshwara hegde kageri spoke in Thanksgiving ceremony for bjp party workers in banavasi
ಉತ್ತರ ಕನ್ನಡ3 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಕ್ಷೇತ್ರ ಎಂಬುದು ಮತ್ತೊಮ್ಮೆ ಸಾಬೀತು: ಕಾಗೇರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌