ಎಲಾನ್‌ ಮಸ್ಕ್‌ ವಿರುದ್ಧ ಕೇಸ್‌ ದಾಖಲಿಸಿದ ಟ್ವಿಟರ್, ಕಾನೂನು ಸಂಘರ್ಷ ಆರಂಭ - Vistara News

ಪ್ರಮುಖ ಸುದ್ದಿ

ಎಲಾನ್‌ ಮಸ್ಕ್‌ ವಿರುದ್ಧ ಕೇಸ್‌ ದಾಖಲಿಸಿದ ಟ್ವಿಟರ್, ಕಾನೂನು ಸಂಘರ್ಷ ಆರಂಭ

ನಿರೀಕ್ಷೆಯಂತೆ ಸಾಮಾಜಿಕ ಜಾಲ ತಾಣ ದಿಗ್ಗಜ ಟ್ವಿಟರ್‌, ಟೆಸ್ಲಾ ಸ್ಥಾಪಕ ಎಲಾನ್‌ ಮಸ್ಕ್‌ ವಿರುದ್ಧ ಮೆಗಾ ಡೀಲ್‌ ಒಪ್ಪಂದವನ್ನು ಉಲ್ಲಂಘಿಸಿದ ಆರೋಪದೊಂದಿಗೆ ಕಾನೂನು ಸಂಘರ್ಷ ಆರಂಭಿಸಿದೆ.

VISTARANEWS.COM


on

twitter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಸಾಮಾಜಿಕ ಜಾಲತಾಣ ದಿಗ್ಗಜ ಟ್ವಿಟರ್‌, ಬಿಲಿಯನೇರ್‌ ಉದ್ಯಮಿ, ಟೆಸ್ಲಾ ಸ್ಥಾಪಕ ಎಲಾನ್‌ ಮಸ್ಕ್‌ ವಿರುದ್ಧ ಮೊಕದ್ದಮೆ ದಾಖಲಿಸಿದೆ.

ಸಾಮಾಜಿಕ ಜಾಲ ತಾಣ ಟ್ವಿಟರ್‌ ಕಂಪನಿಯನ್ನು ಖರೀದಿಸುವ ೪೪ ಶತಕೋಟಿ ಡಾಲರ್‌ ಮೊತ್ತದ (ಅಂದಾಜು ೩೪ ಲಕ್ಷ ಕೋಟಿ ರೂ.) ಡೀಲ್‌ ಅನ್ನು ಎಲಾನ್‌ ಮಸ್ಕ್‌ ಇತ್ತೀಚೆಗೆ ರದ್ದುಪಡಿಸಿದ್ದರು. ಆದರೆ ಈ ಮೂಲಕ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ ಎಂದು ಟ್ವಿಟರ್‌ ಆರೋಪಿಸಿದೆ.

ಟ್ವಿಟರ್‌ ತನ್ನಲ್ಲಿರುವ ನಕಲಿ ಖಾತೆಗಳ ಲೆಕ್ಕವನ್ನು ಸ್ಪಷ್ಟವಾಗಿ ಕೊಟ್ಟಿಲ್ಲ ಎಂದು ವಿಶ್ವದ ನಂ.೧ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಆರೋಪಿಸಿದ್ದಾರೆ. ಡೀಲ್‌ ಮುರಿದು ಬೀಳಲು ಇದೇ ಕಾರಣ ಎಂದಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಟ್ವಿಟರ್‌ ಷೇರಿನ ದರ ೫೦ ಡಾಲರ್‌ನ ಎತ್ತರದಿಂದ ೩೪ ಡಾಲರ್‌ಗೆ ಕುಸಿದಿದೆ.

ಇದನ್ನೂ ಓದಿ:ಟ್ವಿಟರ್‌ ಖರೀದಿಸುವ 34 ಲಕ್ಷ ಕೋಟಿ ರೂ. ಡೀಲ್‌ ರದ್ದುಪಡಿಸಿದ ಎಲಾನ್‌ ಮಸ್ಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

Viral Video: ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ ಹೆಚ್ಚಾಗಿ ಎಲ್ಲಾ ಮಂತ್ರಿಗಳು, ಸಂಸದರು ತಮ್ಮ ಮುಂದೆ ಪೇಪರ್ ಇಟ್ಟುಕೊಂಡು ಅದನ್ನು ನೋಡಿಕೊಂಡೇ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಇಲ್ಲೊಬ್ಬರು ಸಂಸದೆ ಪೇಪರ್ ನೋಡದೇ ಎದುರಿಗಿದ್ದ ಸಭೆಯನ್ನು ನೋಡುತ್ತಾ ಪ್ರಮಾಣ ವಚನ ಸ್ವೀಕರಿಸಿದ್ದು ಎಲ್ಲೆಡೆ ವೈರಲ್ ಆಗಿದೆ. ಅಂದಹಾಗೇ, ಆ ಸಂಸದೇ ಮತ್ಯಾರು ಅಲ್ಲ 26 ವರ್ಷದ ಶಾಂಭವಿ ಚೌಧರಿ. ಇವರ ಬಗ್ಗೆ ಇನ್ನಷ್ಟು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

VISTARANEWS.COM


on

Viral Video
Koo

ನವದೆಹಲಿ : ಜನಪ್ರತಿನಿಧಿಗಳು ಸಾಮಾನ್ಯವಾಗಿ ಪೇಪರ್ ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಅತ್ಯಂತ ಕಿರಿಯ ಸಂಸದೆ ಒಬ್ಬರು ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಸುದ್ದಿ ವೈರಲ್ (Viral Video) ಆಗಿದೆ.

ಅತ್ಯಂತ ಕಿರಿಯ ಸಂಸದೆ ಎಂದು ಕರೆಸಿಕೊಂಡ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ತಮ್ಮ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. 26 ವರ್ಷ ವಯಸ್ಸಿನ ಇವರು ಸಂಸತ್ತಿನಲ್ಲಿ ಸಂಸದೆಯಾಗಿ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಎಲ್ಲರೂ ಸಂಸದೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೊದಲ್ಲಿ ಶಾಂಭವಿಯವರು ಬಿಳಿ ಬಣ್ಣದ ಸೀರೆ ಧರಿಸಿ ಪೇಪರ್ ನೋಡದೆ ಸಭೆಯನ್ನು ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಲೋಕ ಸಭಾ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಅಭ್ಯರ್ಥಿಯಾಗಿ ಬಿಹಾರದ ಸಮಸ್ತಿಪುರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸನ್ನಿ ಹಜಾರಿ ಅವರನ್ನು 1,87,251 ಮತಗಳಿಂದ ಸೋಲಿಸಿದ್ದಾರೆ. ಆ ಮೂಲಕ ಇವರು ಸಮಸ್ತಿಪುರದ ಮೊದಲ ಮಹಿಳಾ ಸಂಸದೆ ಎನಿಸಿಕೊಂಡಿದ್ದಾರೆ.
ಶಾಂಭವಿ ಚೌಧರಿ ಅವರು ಜೆಡಿಯು ನಾಯಕರಾದ ಅಶೋಕ್ ಚೌಧರಿ ಅವರ ಪುತ್ರಿ. ಅಶೋಕ್ ಚೌಧರಿ ಅವರು ನಿತೀಶ್ ಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಅತ್ಯಂತ ಪ್ರಭಾವಶಾಲಿ ಮಂತ್ರಿಗಳಲ್ಲಿ ಒಬ್ಬರಾಗಿದ್ದರು. ಇವರು ಮೊದಲಿಗೆ ಕಾಂಗ್ರೆಸ್ ನಲ್ಲಿದ್ದು ನಂತರ ಜೆಡಿಯು ಪಕ್ಷಕ್ಕೆ ಸೇರಿಕೊಂಡರು. ಅಲ್ಲದೇ ಶಾಂಭವಿ ಚೌಧರಿ ಅವರ ಅಜ್ಜ ದಿ.ಮಹಾವೀರ್ ಚೌಧರಿ ಕೂಡ ಕಾಂಗ್ರೆಸ್ ಸದಸ್ಯರಾಗಿದ್ದರು. ಅವರು ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ಸಾನಿಯಾ ಮಿರ್ಜಾ ಗೊತ್ತು, ಆಕೆಯ ತಂಗಿ ಅನಮ್ ಮಿರ್ಜಾ ಗೊತ್ತಾ?

ಹಾಗಾಗಿ ಮೂರನೇ ತಲೆಮಾರಿನ ರಾಜಕಾರಣಿಯಾದ ಶಾಂಭವಿ ಅವರಿಗೆ ರಾಜಕೀಯ ವಿಚರದಲ್ಲಿ ಆಸಕ್ತಿ ಇತ್ತು ಎನ್ನಲಾಗಿದೆ. ಶಾಂಭವಿ ಅವರು ಪ್ರತಿಷ್ಠಿತ ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ನಿಂದ ‘ಮಾಸ್ಟರ್ಸ್ ಆಫ್ ಆರ್ಟ್ಸ್’ ಪದವಿ ಪಡೆದಿದ್ದಾರೆ. ಹಾಗೇ ಶಾಂಭವಿ ಅವರು ಮಾಜಿ ಐಪಿಎಸ್ ಅಧಿಕಾರಿ ಆಚಾರ್ಯ ಕಿಶೋರ್ ಕುನಾಲ್ ಅವರ ಮಗ ಸಾಯನ್ ಕುನಾಲ್ ಅವರನ್ನು ವಿವಾಹವಾಗಿದ್ದಾರೆ.

Continue Reading

Latest

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Viral Video: ಧರ್ಮ ಧರ್ಮದ ನಡುವೆ ಸಾಮರಸ್ಯ ಬೆಳೆದರೆ ದೇಶ ಕೂಡ ಸುಭಿಕ್ಷವಾಗಿರುತ್ತದೆ. ಆದರೆ ಪದೇ ಪದೇ ಒಂದು ಧರ್ಮದವರು ಇನ್ನೊಂದು ಧರ್ಮದ ಮೇಲೆ ಕಿಡಿಕಾರುತ್ತಲೇ ಇರುತ್ತಾರೆ. ಇಂತಹದ್ದೊಂದು ಅಮಾನವೀಯ ಘಟನೆಯೊಂದು ಬಿಹಾರದ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಯುವಕರ ಗುಂಪೊಂಡು 15 ವರ್ಷದ ಹಿಂದೂ ಬಾಲಕನ್ನು ಕೋಣೆಯೊಂದರಲ್ಲಿ ಬಂಧಿಸಿ ಹಲ್ಲೆ ಮಾಡಿದ್ದು ಅಲ್ಲದೇ, ‘ಅಲ್ಲಾಹು ಅಕ್ಬರ್’ ಮತ್ತು ‘ಮಿಯಾನ್ ಸಾಹೇಬ್ ಜಿಂದಾಬಾದ್’ ಎಂದು ಇಸ್ಲಾಮಿಕ್ ಧರ್ಮದ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಹಾಗೇ ಪಾದಕ್ಕೆ ಎಂಜಲು ಉಗುಳಿ ಅದನ್ನು ನೆಕ್ಕುವಂತೆ ಬಾಲಕನಿಗೆ ಹಿಂಸೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಬಿಹಾರ : ಬಿಹಾರದ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ಹಿಂದೂ ಅಪ್ರಾಪ್ತ ಬಾಲಕನ್ನು ವಶಕ್ಕೆ ಪಡೆದ ಮುಸ್ಲಿಂ ಯುವಕರು ಅಮಾನವೀಯವಾಗಿ ಥಳಿಸಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video ) ಆಗಿದೆ.

ವಿಡಿಯೊದಲ್ಲಿ 15 ವರ್ಷದ ಬಾಲಕನ್ನು ಕೋಣೆಯೊಂದರಲ್ಲಿ ಬಂಧಿಸಿ ಗೋಣಿ ಚೀಲದ ಮೇಲೆ ಕೂರಿಸಿ ಅದರಲ್ಲಿ ಒಬ್ಬ ದುಷ್ಕರ್ಮಿ ಕೋಲು ಹಿಡಿದು ಆತನ ಮೇಲೆ ಪದೇ ಪದೇ ಹಲ್ಲೆ ಮಾಡುತ್ತಿದ್ದಾನೆ. ಮತ್ತೊಬ್ಬ ‘ಅಲ್ಲಾಹು ಅಕ್ಬರ್’ ಮತ್ತು ‘ಮಿಯಾನ್ ಸಾಹೇಬ್ ಜಿಂದಾಬಾದ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸುತ್ತಿರುವುದು ಕಂಡುಬಂದಿದೆ. ಹಾಗೇ ಅದರ ಜೊತೆಗೆ ದುಷ್ಕರ್ಮಿಗಳು ಅವರ ಪಾದಕ್ಕೆ ಎಂಜಲು ಉಗುಳಿ ಅದನ್ನು ನೆಕ್ಕುವಂತೆ ಬಾಲಕನಿಗೆ ಹಿಂಸೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೊಲೀಸರು ಈ ಘಟನೆಯ ಬಗ್ಗೆ ಮಾಹಿತಿ ಪಡೆದು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಮುನ್ನಾ ಮತ್ತು ಸಾಹಿಲ್ ಹಾಗೂ ಮತ್ತೊಬ್ಬ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ ಎನ್ನಲಾಗಿದೆ. ಆದರೆ ಉಳಿದವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ವಿಡಿಯೊವನ್ನು ಆರೋಪಿಗಳೇ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಉದ್ವಿಗ್ಧ ಪರಿಸ್ಥಿತಿಗೆ ಕಾರಣವಾಗಿದೆ ಎನ್ನಲಾಗಿದೆ. ಈ ಬಗ್ಗೆ ವೀಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು?

ಈ ಬಗ್ಗೆ ಸಂತ್ರಸ್ತ ಬಾಲಕನ ತಂದೆ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಬಾಲಕನ ಕೈಗೆ ಪೆಟ್ಟಾಗಿದೆ ಎಂಬುದಾಗಿ ತಿಳಿದುಬಂದಿದೆ. ಬಿಹಾರದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಕಾನೂನು ಸುವ್ಯವಸ್ಥೆ ಕಾಪಾಲು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲು ಸ್ಥಳೀಯ ಅಧಿಕಾರಿಗಳು, ಪೊಲೀಸರು ಹೆಣಗಾಡುತ್ತಿದ್ದಾರೆ.

Continue Reading

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading

ಕ್ರಿಕೆಟ್

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

IND vs ENG: ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ.

VISTARANEWS.COM


on

IND vs ENG
Koo


ಗಯಾನಾ: ಲೀಗ್‌ ಮತ್ತು ಸೂಪರ್​-8 ಹಂತದಲ್ಲಿ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಟಿ20 ವಿಶ್ವಕಪ್‌(T20 World Cup 2024) ನಾಕೌಟ್‌ ಪ್ರವೇಶಿಸಿರುವ ಭಾರತ(IND vs ENG) ತಂಡದ ಮುಂದೀಗ ಸೇಡಿನ ಪಂದ್ಯವೊಂದು ಕಾದು ಕುಳಿತಿದೆ. ನಾಳೆ(ಗುರುವಾರ) ರಾತ್ರಿ ನಡೆಯಲಿರುವ ಸೆಮಿಫೈನಲ್‌(T20 World Cup 2024) ಮುಖಾಮುಖಿಯಲ್ಲಿ ರೋಹಿತ್​ ಶರ್ಮ ಪಡೆ ಬಲಿಷ್ಠ ಇಂಗ್ಲೆಂಡ್‌ ಸವಾಲನ್ನು ಎದುರಿಸಲಿದೆ.

ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ. ದಿನದ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ತಂಡ ಸೆಣಸಾಟ ನಡೆಸಲಿದೆ.

ಅಡಿಲೇಡ್​ನಲ್ಲಿ ನಡೆದಿದ್ದ ಕಳೆದ ಟಿ20 ವಿಶ್ವಕಪ್​ ಸೆಮೀ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 6 ವಿಕೆಟ್​ಗೆ 168 ರನ್​ಗಳ ಸಾಧಾರಣ ಮೊತ್ತ​ ಪೇರಿಸಿ ಸವಾಲೊಡ್ಡಿತು. ಈ ಮೊತ್ತವನ್ನು ಇಂಗ್ಲೆಂಡ್​ 16 ಓವರ್​ಗಳಲ್ಲೇ ವಿಕೆಟ್​ ನಷ್ಟವಿಲ್ಲದೆ 170 ರನ್​ ಗಳಿಸಿ ಗೆದ್ದಿತ್ತು. ಜಾಸ್​ ಬಟ್ಲರ್​(80*) ಮತ್ತು ಅಲೆಕ್ಸ್​ ಹೇಲ್ಸ್​(86*) ಅಜೇಯ ಬ್ಯಾಟಿಂಗ್​ ಆರ್ಭಟದ ಮುಂದೆ ಭಾರತೀಯ ಬೌಲರ್​ಗಳು ಸಂಪೂರ್ಣ ಮಂಕಾದರು. ಭಾರತ ಪರ ವಿರಾಟ್​ ಕೊಹ್ಲಿ ಮತ್ತು ಹಾರ್ದಿಕ್​ ಪಾಂಡ್ಯ ಅರ್ಧಶತಕ ಬಾರಿಸಿದ್ದರು. ಆದರೆ ಈ ಬಾರಿ ಕೊಹ್ಲಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. 2 ಶೂನ್ಯ ಕೂಡ ಸುತ್ತಿದ್ದಾರೆ. ಎರಡಂಕಿ ಮೊತ್ತ ಪೇರಿಸಿದ್ದು ಒಮ್ಮೆ ಮಾತ್ರ.

ಇದನ್ನೂ ಓದಿ IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

ಮಳೆ ಬಂದರೆ ಭಾರತಕ್ಕೆ ಲಾಭ


ಪ್ರಾವಿಡೆನ್ಸ್​ ಸ್ಟೇಡಿಯಂನಲ್ಲಿ ನಡೆಯಲಿರುವ ಇತ್ತಂಡಗಳ ನಡುವಣ ಈ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ ಎಂದು ಎಚ್ಚರಿಕೆ ನೀಡಿದೆ. ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಹೇಳಿದೆ. ಈ ಪಂದ್ಯಕ್ಕೆ ಮೀಸಲು ದಿನವಿಲ್ಲ. ಆದರೆ, ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಜೂನ್​ 29ಕ್ಕೆ ಬ್ರಿಜ್​ಟೌನ್​ನಲ್ಲಿ ಫೈನಲ್​ ಪಂದ್ಯ ನಡೆಯಲಿದೆ. ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳಲಿದ್ದರೆ. ಪಂದ್ಯ ಎಲ್ಲಿಗೆ ನಿಂತಿರುತ್ತದೆಯೇ ಅಲ್ಲಿಂದಲೇ ಮೀಸಲು ದಿನ ಅಂದರೆ ಜೂನ್​ 30 (ಭಾನುವಾರ) ನಡೆಯಲಿದೆ. ಫೈನಲ್​ನಲ್ಲೂ ಫಲಿತಾಂಶ ನಿರ್ಧಾರಕ್ಕೆ ಉಭಯ ತಂಡಗಳು ಕನಿಷ್ಠ 10 ಓವರ್​ ಆಡಬೇಕು. ಮೀಸಲು ದಿನವೂ ಮಳೆ ಅಡ್ಡಿಪಡಿಸಿದರೆ, ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಐಸಿಸಿ ಘೋಷಿಸಲಿದೆ.

Continue Reading
Advertisement
IRCTC
ದೇಶ13 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ16 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest17 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ22 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್23 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest24 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ26 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ30 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ1 hour ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್1 hour ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌