Union Budget 2024: ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಣೆ ಸಾಧ್ಯತೆ; ಯಾರಿಗೆಲ್ಲ ಅನುಕೂಲ? - Vistara News

ವಾಣಿಜ್ಯ

Union Budget 2024: ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಣೆ ಸಾಧ್ಯತೆ; ಯಾರಿಗೆಲ್ಲ ಅನುಕೂಲ?

Union Budget 2024: ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇನ್ನು, ಬಜೆಟ್‌ನಲ್ಲಿ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಹಾಗಾದರೆ, ಎಷ್ಟು ಆದಾಯ ಇರುವವರಿಗೆ ಹೊಸ ತೆರಿಗೆ ಸ್ಲ್ಯಾಬ್‌ ಅನ್ವಯ ಲಾಭವಾಗುತ್ತದೆ? ಇಲ್ಲಿದೆ ಮಾಹಿತಿ.

VISTARANEWS.COM


on

Union Budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು (Union Budget 2024) ಸಿದ್ಧತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ, ಈ ಬಾರಿಯ ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಪರಿಚಯ ಮಾಡಲಾಗುತ್ತದೆ. ಇದರಿಂದ ಮಧ್ಯಮ ವರ್ಗದವರಿಗೆ ಭಾರಿ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ತೆರಿಗೆ ಪದ್ಧತಿಯ ಸ್ಲ್ಯಾಬ್‌ ಹೀಗೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ದೇಶದಲ್ಲಿ ಈಗ ಹಳೆಯ ತೆರಿಗೆ ಪದ್ಧತಿ ಹಾಗೂ ಹೊಸ ತೆರಿಗೆ ಪದ್ಧತಿ ಚಾಲ್ತಿಯಲ್ಲಿವೆ. ಆದಾಯ ತೆರಿಗೆ ಪಾವತಿದಾರರು ಯಾವ ತೆರಿಗೆ ಪದ್ಧತಿಯನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದೆ. ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರಿಗೆ 3 ಲಕ್ಷ ರೂ.ವರೆಗೆ ವಿನಾಯಿತಿ ಇದೆ. ಈಗ ಇದನ್ನು 5 ಲಕ್ಷ ರೂ.ಗೆ ಏರಿಕೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಆದರೆ, ಗರಿಷ್ಠ ತೆರಿಗೆ ಪ್ರಮಾಣವನ್ನು ಶೇ.30ರಿಂದ ಶೇ.25ಕ್ಕೆ ಇಳಿಸಬೇಕು ಎಂಬ ಒತ್ತಾಯವಿದ್ದು, ಇದನ್ನು ಈಡೇರಿಸುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ಹೇಳಲಾಗತ್ತಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

Airtel Price Hike: ರಿಲಯನ್ಸ್ ಜಿಯೋ ತನ್ನ ಮೊಬೈಲ್‌ ಡೇಟಾ ಯೋಜನೆಗಳಲ್ಲಿ 12%ರಿಂದ 25%ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್‌ಟೆಲ್‌ ಇಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21%ರಷ್ಟು ಹೆಚ್ಚಿಸಿತು. ಹೊಸ ದರವು ಜುಲೈ 3ರಿಂದ ಜಾರಿಗೆ ಬರಲಿದೆ.

VISTARANEWS.COM


on

airtel price hike
Koo

ಹೊಸದಿಲ್ಲಿ: ದೇಶದ ಎರಡನೇ ಅತಿ ದೊಡ್ಡ ಇಂಟರ್‌ನೆಟ್‌ ಸೇವಾದಾತ (internet provider) ಕಂಪನಿ ಭಾರ್ತಿ ಏರ್‌ಟೆಲ್‌ (Bharti Airtel) , ತನ್ನ ಡೇಟಾ ದರಗಳನ್ನು (Airtel price hike) ಶೇ.21ರಷ್ಟು ಹೆಚ್ಚಿಸಿದೆ. ನಿನ್ನೆ ಇದರ ಪ್ರತಿಸ್ಪರ್ಧಿ ರಿಲಯನ್ಸ್‌ ಜಿಯೊ (Reliance Jio) ಡೇಟಾ ದರಗಳನ್ನು (Data Price) ಏರಿಸಿದ ಬಿನ್ನಲ್ಲೇ ಇದು ಬಂದಿದೆ.

ರಿಲಯನ್ಸ್ ಜಿಯೋ ತನ್ನ ಮೊಬೈಲ್‌ ಡೇಟಾ ಯೋಜನೆಗಳಲ್ಲಿ 12%ರಿಂದ 25%ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್‌ಟೆಲ್‌ ಇಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21%ರಷ್ಟು ಹೆಚ್ಚಿಸಿತು. ಹೊಸ ದರವು ಜುಲೈ 3ರಿಂದ ಜಾರಿಗೆ ಬರಲಿದೆ.

ಕೆಲವು ಪರಿಷ್ಕೃತ ದರಗಳು ಹೀಗಿವೆ:

ಡೇಟಾ
ಅವಧಿ ಹಿಂದಿನ ದರ ಹೊಸ ದರ
ವಾಯಿಸ್‌ ಕಾಲ್‌ ಪ್ಲಾನ್‌
2 GB
28179199
8 GB 84455509
ಡೈಲಿ ಡೇಟಾ ಪ್ಲಾನ್‌
1.5 ಜಿಬಿ28299349
2.5 ಜಿಬಿ, 28, 359, 409
3 ಜಿಬಿ, 28, 399, 449
Add- On ಪ್ಲಾನ್‌
111922
212933

ಗ್ರಾಹಕರ ಮೇಲಿನ ಹೆಚ್ಚಿನ ಹೊರೆಗಳನ್ನು ನಿವಾರಿಸುವ ಸಲುವಾಗಿ, ಎಂಟ್ರಿ ಲೆವೆಲ್‌ ಪ್ಲಾನ್‌ಗಳಲ್ಲಿ ಅತ್ಯಂತ ಸಾಧಾರಣ ಬೆಲೆ ಏರಿಕೆ (ದಿನಕ್ಕೆ 70 ಪೈಸೆಗಿಂತ ಕಡಿಮೆ) ಮಾಡಲಾಗಿದೆ ಎಂದು ಭಾರ್ತಿ ಏರ್ಟೆಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಭಾರತದಲ್ಲಿ ಟೆಲಿಕಾಂ ಕಂಪನಿಗಳು ಆರ್ಥಿಕವಾಗಿ ಆರೋಗ್ಯಕರ ವ್ಯವಹಾರ ಮಾಡಬೇಕು ಎಂದಿದ್ದರೆ ಮೊಬೈಲ್ ಸರಾಸರಿ ಆದಾಯ (ಎಆರ್‌ಪಿಯು) 300 ರೂ.ಗಿಂತ ಹೆಚ್ಚಾಗಿರಬೇಕು ಎಂದು ಭಾರ್ತಿ ಏರ್ಟೆಲ್ ಹೇಳಿದೆ. “ಈ ಮಟ್ಟದ ಎಆರ್‌ಪಿಯು ನೆಟ್‌ವರ್ಕ್ ತಂತ್ರಜ್ಞಾನ ಮತ್ತು ಸ್ಪೆಕ್ಟ್ರಮ್‌ನಲ್ಲಿ ಅಗತ್ಯವಿರುವ ಗಣನೀಯ ಹೂಡಿಕೆಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಬಂಡವಾಳದ ಮೇಲೆ ಸಾಧಾರಣ ಆದಾಯವನ್ನು ನೀಡುತ್ತದೆ” ಎಂದು ಅದು ಹೇಳಿದೆ.

ಇಂದು ಭಾರ್ತಿ ಏರ್ಟೆಲ್ ಷೇರುಗಳು ಬಿಎಸ್ಇಯಲ್ಲಿ ಸುಮಾರು 2% ಏರಿಕೆಯಾಗಿ 1496.80 ರೂ.ಗೆ ತಲುಪಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಭಾರ್ತಿ ಏರ್ಟೆಲ್ ಎರಡೂ ಜೂನ್ 28ರ ಆರಂಭಿಕ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದವು.

ಇದನ್ನೂ ಓದಿ: Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Continue Reading

ವಾಣಿಜ್ಯ

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,57,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 28) ಮತ್ತೆ ಚಿನ್ನದ ಬೆಲೆ ತುಸು ಏರಿಕೆ ಕಂಡಿದೆ. (Gold Rate Today). ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಆಗಿದೆ, ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 40 ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 43 ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,57,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,630₹ 7,233
ಮುಂಬೈ₹ 6,615₹ 7,216
ಬೆಂಗಳೂರು₹ 6,615₹ 7,216
ಚೆನ್ನೈ₹ 6,666₹ 7,272

ಬೆಳ್ಳಿ ಧಾರಣೆ
ಬೆಳ್ಳಿಯ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ಒಂದು ಗ್ರಾಂಗೆ ₹ 89.50 ಹಾಗೂ 8 ಗ್ರಾಂಗೆ ₹ 716 ಇದೆ. 10 ಗ್ರಾಂಗೆ ₹ 895 ಹಾಗೂ 1 ಕಿಲೋಗ್ರಾಂಗೆ ₹ 89,500 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ:Hindu Temple: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಹಿಂದು ದೇವಾಲಯವನ್ನೇ ನೆಲಸಮಗೊಳಿಸಿದ ಪಾಕ್‌ ಆಡಳಿತ

Continue Reading

ಕರ್ನಾಟಕ

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Tata Motors: ಟಾಟಾ ಮೋಟಾರ್ಸ್‌ನ ಎರಡು ಉತ್ಪನ್ನಗಳಾದ ಪಂಚ್ ಮತ್ತು ನೆಕ್ಸಾನ್ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‌ಯುವಿಗಳಾಗಿ ಹೊರಹೊಮ್ಮಿರುವುದರಿಂದ ಆರ್ಥಿಕ ವರ್ಷ 24 ಅನ್ನು ಅತ್ಯುತ್ತಮ ರೀತಿಯಲ್ಲಿ ಆರಂಭಿಸಿದೆ. ಟಾಟಾ ನೆಕ್ಸಾನ್ ರೇಸ್‌ನಲ್ಲಿ ಇದ್ದಂತೆ ಪೋಲ್ ಪೊಸಿಷನ್ ಅನ್ನು ಪಡೆದುಕೊಂಡಿದ್ದು, ಈ ವಿಭಾಗದಲ್ಲಿ ಸತತ ಮೂರು ವರ್ಷಗಳ ಕಾಲ ಪ್ರಾಬಲ್ಯ ಸಾಧಿಸಿದೆ.

VISTARANEWS.COM


on

Tata Motors has taken the lead in the SUV market with Nexon Punch
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕರಲ್ಲಿ ಒಂದಾದ ಟಾಟಾ ಮೋಟಾರ್ಸ್ (Tata Motors) ಅದರ ಎರಡು ಉತ್ಪನ್ನಗಳಾದ ಪಂಚ್ ಮತ್ತು ನೆಕ್ಸಾನ್ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‌ಯುವಿಗಳಾಗಿ ಹೊರಹೊಮ್ಮಿರುವುದರಿಂದ ಆರ್ಥಿಕ ವರ್ಷ 24 ಅನ್ನು ಅತ್ಯುತ್ತಮ ರೀತಿಯಲ್ಲಿ ಮುಕ್ತಾಯಗೊಳಿಸಿದೆ. ಟಾಟಾ ನೆಕ್ಸಾನ್ ರೇಸ್‌ನಲ್ಲಿ ಇದ್ದಂತೆ ಪೋಲ್ ಪೊಸಿಷನ್ ಅನ್ನು ಪಡೆದುಕೊಂಡಿದ್ದು, ಈ ವಿಭಾಗದಲ್ಲಿ ಸತತ ಮೂರು ವರ್ಷಗಳ ಕಾಲ ಪ್ರಾಬಲ್ಯ ಸಾಧಿಸಿದೆ. ವಿಭಾಗದಲ್ಲಿ ಭಾರಿ ಸ್ಪರ್ಧೆಯ ಹೊರತಾಗಿಯೂ ಪಂಚ್ ಎರಡನೇ ಸ್ಥಾನದಲ್ಲಿದೆ.

Tata Punch

ಟಾಟಾ ನೆಕ್ಸಾನ್ ಇತ್ತೀಚೆಗೆ ತನ್ನ 7ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ 7 ಲಕ್ಷ ಯುನಿಟ್ ಮಾರಾಟದ ಮೈಲಿಗಲ್ಲನ್ನು ಸಾಧಿಸಿದ್ದು, ಇದು ಭಾರತದ ಅತ್ಯಂತ ಪ್ರೀತಿಪಾತ್ರ ಎಸ್‌ಯುವಿ ಆಗಿದೆ.

ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಇತ್ತೀಚಿನ ವರ್ಷಗಳಲ್ಲಿ ಗಮನಾರ್ಹ ಬೆಳವಣಿಗೆಯನ್ನು ಪ್ರದರ್ಶಿಸಿದೆ. ಈ ವಿಭಾಗವು ಅತ್ಯಂತ ಸ್ಪರ್ಧಾತ್ಮಕ ಮತ್ತು ತೀವ್ರ ಪೈಪೋಟಿಯ ವಿಭಾಗವಾಗಿದೆ ಮತ್ತು ಟಾಟಾ ಮೋಟಾರ್ಸ್ ಈ ವಿಭಾಗದಲ್ಲಿರುವ ನಾಯಕರಲ್ಲಿ ಒಬ್ಬರಾಗಿದೆ. ನೆಕ್ಸಾನ್ ಮತ್ತು ಪಂಚ್‌ಗಾಗಿ ವಿವಿಧ ಆವಿಷ್ಕಾರಗಳನ್ನು ಪರಿಚಯಿಸಲು ಕಂಪನಿಯು ಮಾಡಿರುವ ಪ್ರಯತ್ನಗಳನ್ನು ಗಮನಿಸಬಹುದಾಗಿದೆ.

ಇದನ್ನೂ ಓದಿ: Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

2017ರಲ್ಲಿ ಪ್ರಾರಂಭವಾದಾಗಿನಿಂದಲೂ ನೆಕ್ಸಾನ್ ತನ್ನ ವಿಶಿಷ್ಟತೆ ಮತ್ತು ಔಟ್ ಆಫ್ ದಿ ಬಾಕ್ಸ್ ಗುಣ ಅಂದರೆ ವಿಭಿನ್ನತೆಯನ್ನು ಬಯಸುವ ಗ್ರಾಹಕರನ್ನು ಆಕರ್ಷಿಸಿದೆ ಮತ್ತು ಇದು ಅತ್ಯುತ್ತಮವಾದ ಕಾರ್ಯಕ್ಷಮತೆ ಮತ್ತು ಸೌಕರ್ಯವನ್ನು ಒದಗಿಸುತ್ತದೆ. ನೆಕ್ಸಾನ್‌ನ ಭವಿಷ್ಯಕ್ಕೆ ಸಲ್ಲುವ ವಿನ್ಯಾಸ, ಉನ್ನತ ಸುರಕ್ಷತಾ ಫೀಚರ್‌ಗಳು ಮತ್ತು ಸ್ಥಿರವಾದ ಬೆಳವಣಿಗೆಯಿಂದ ಇದು ಭಾರತೀಯ ಗ್ರಾಹಕರ ಜನಪ್ರಿಯ ಆಯ್ಕೆಯಾಗಿದೆ ಮತ್ತು ವಿಶ್ವಾಸಾರ್ಹತೆಯ ಖ್ಯಾತಿಯನ್ನು ಗಳಿಸಿದೆ.

ನೆಕ್ಸಾನ್ 2018 ರ ಭಾರತದ ಮೊದಲ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಪಡೆದ ವಾಹನವಾಗಿದೆ, ಆ ಮೂಲಕ ಇದು ಎಲ್ಲಾ ಭಾರತೀಯ ಆಟೋಮೊಬೈಲ್‌ಗಳಿಗೆ ಅನುಸರಿಸಲು ಮಾನದಂಡವನ್ನು ಸ್ಥಾಪಿಸಿದೆ. ಅಂದಿನಿಂದ ಇಂದಿನವರೆಗೂ ಪರಂಪರೆ ಮುಂದುವರಿದಿದೆ. 2024ರ ಫೆಬ್ರವರಿಯಲ್ಲಿ ಹೊಸ ಜನರೇಷನ್‌ನ ನೆಕ್ಸಾನ್ ವರ್ಧಿತ 2022 ಪ್ರೋಟೋಕಾಲ್ ಪ್ರಕಾರ ತನ್ನ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿತು. ಅದರ ಬೆನ್ನಲ್ಲೇ ನೆಕ್ಸಾನ್.ಇವಿ ಈ ತಿಂಗಳು ಭಾರತ್- ಎನ್‌ಸಿಎಪಿಯಿಂದ ಪ್ರತಿಷ್ಠಿತ 5-ಸ್ಟಾರ್ ರೇಟಿಂಗ್ ಅನ್ನು ಪಡೆಯಿತು.

ಭಾರತೀಯ ರಸ್ತೆಗಳಲ್ಲಿ 7 ಲಕ್ಷ ನೆಕ್ಸಾನ್‌ ಇವೆ ಮತ್ತು ನೆಕ್ಸಾನ್ 41 ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿವೆ. ಅದರ ಅತ್ಯದ್ಭುತ ಕಾರ್ಯಕ್ಷಮತೆ ಅದರ ಮಾರಾಟದ ಬೆಳವಣಿಗೆಯಲ್ಲಿ ಪ್ರಮುಖ ಕೊಡುಗೆ ನೀಡಿರುವುದು ಎಲ್ಲರೂ ಗಮನಿಸಬಹುದಾಗಿದೆ. ಕಳೆದ ಎರಡು ವರ್ಷಗಳಲ್ಲಿ (2022 ಮತ್ತು 2023) ನೆಕ್ಸಾನ್ ನ 3 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳು ಮಾರಾಟವಾಗಿವೆ. ನೆಕ್ಸಾನ್ ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ನ ಬಹು ಪವರ್‌ಟ್ರೇನ್‌ಗಳಲ್ಲಿ ಲಭ್ಯವಿದೆ. ನೆಕ್ಸಾನ್ ಕಾಲ ಕಾಲಕ್ಕೆ ದೃಢವಾಗಿ ಬೆಳೆದಿದೆ ಮತ್ತು ಅದರ ವಿಭಾಗ ಪ್ರಮುಖ ವಿನ್ಯಾಸ, ವಿಭಾಗದ ಅತ್ಯುತ್ತಮ ಫೀಚರ್ ಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನದಿಂದಾಹಿ ನಿಷ್ಠಾವಂತ ಅಭಿಮಾನಿಗಳನ್ನು ಗಳಿಸಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಟಾಟಾ ಪಂಚ್: ಮತ್ತೊಂದೆಡೆ ಟಾಟಾ ಪಂಚ್ ಎಸ್‌ಯುವಿ ಗುಣಲಕ್ಷಣಗಳನ್ನು ಎಲ್ಲರೂ ಮೆಚ್ಚುವಂತೆ ಮಾಡಿದೆ. ಪಂಚ್‌ನ ಅದ್ಭುತ ವಿನ್ಯಾಸ, ಸೌಕರ್ಯ ಮತ್ತು ಅಪ್ರತಿಮ ಸಾಮರ್ಥ್ಯವು ಈಗಾಗಲೇ ಕಾರು ಹೊಂದಿರುವ ಮತ್ತು ಮೊದಲ ಬಾರಿಯ ಕಾರು ಖರೀದಿದಾರರಿಗೂ ಆಸಕ್ತಿ ಹುಟ್ಟುವಂತೆ ಮಾಡುತ್ತದೆ.

ಪಂಚ್ ಎಸ್‌ಯುವಿಯು ಅದ್ಭುತ ನಿಲುವು, ವಿಶಾಲವಾದ ಇಂಟೀರಿಯರ್‌ಗಳು ಮತ್ತು ವಿಭಾಗದಲ್ಲಿಯೇ ಅತ್ಯುನ್ನತ ಸುರಕ್ಷತಾ ರೇಟಿಂಗ್ (ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್) ಅನ್ನು ಹೊಂದಿದ್ದು, ನಿಸ್ಸಂದೇಹವಾಗಿ ಸಮಗ್ರ ಪ್ಯಾಕೇಜ್ ಹೊಂದಿರುವ ಕಾರ್ ಆಗಿದೆ. ಅದಲ್ಲದೆ, ಪಂಚ್.ಇವಿ ಇತ್ತೀಚೆಗೆ 5-ಸ್ಟಾರ್ ಬಿ ಎನ್ ಸಿ ಎ ಪಿ ರೇಟಿಂಗ್ ಅನ್ನು ಪಡೆದುಕೊಂಡಿದೆ, ಆ ಮೂಲಕ ಇದು ಭಾರತದ ಸುರಕ್ಷಿತ ಇವಿ ವಾಹನ ಎಂಬ ಹೆಗ್ಗಳಿಕೆ ಗಳಿಸಿದೆ.

ಒಟ್ಟಾರೆಯಾಗಿ, ಪಂಚ್ ಉಪ-ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮುಂಚೂಣಿ ಸಾಧಿಸಿದೆ ಮತ್ತು ಆರ್ಥಿಕ ವರ್ಷ 24ರಲ್ಲಿ ಶ್ಲಾಘನೀಯ 170,076 ಯುನಿಟ್‌ಗಳನ್ನು ಮಾರಾಟ ಮಾಡಿದೆ ಮತ್ತು ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದೆ. ಮಾರ್ಚ್ 2024ರ ಸಮಯದಲ್ಲಿ ಪಂಚ್ ಉದ್ಯಮದಲ್ಲಿ #1 ಮಾರಾಟವಾದ ಕಾರು ಎಂಬ ಮನ್ನಣೆ ಗಳಿಸಿತ್ತು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಭಾರತದಲ್ಲಿನ ಕಾಂಪ್ಯಾಕ್ಟ್ ಎಸ್‌ಯುವಿ ಮಾರುಕಟ್ಟೆಯು ಕಳೆದ ಕೆಲವು ವರ್ಷಗಳಲ್ಲಿ ಗಣನೀಯ ಬೆಳವಣಿಗೆಯನ್ನು ಕಂಡಿದೆ. ಮಾರುಕಟ್ಟೆಯ ಸ್ಥಿರ ಬೆಳವಣಿಗೆಯಿಂದ ಈ ವಿಚಾರ ವ್ಯಕ್ತವಾಗಿದೆ. ಉದ್ಯಮವು ಈ ವಿಭಾಗದಲ್ಲಿ ಮಾರುಕಟ್ಟೆ ಪಾಲಿನಲ್ಲಿ 4% ರಿಂದ 7%ಗೆ ಏರಿಕೆ ಕಂಡಿದೆ ಮತ್ತು ದೊಡ್ಡ ಎಸ್‌ಯುವಿ ಮಾರುಕಟ್ಟೆಯಲ್ಲಿ, ಮಾರುಕಟ್ಟೆ ಪಾಲು 8% ರಿಂದ 14%ಗೆ ಬೆಳೆದಿದೆ. ಈ ಅಭಿವೃದ್ಧಿಯು ಆಟೋಮೋಟಿವ್ ಕ್ಷೇತ್ರದಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿಗಳ ಹೆಚ್ಚುತ್ತಿರುವ ಬೇಡಿಕೆ ಮತ್ತು ಅದರ ಮೇಲೆ ಹೆಚ್ಚುತ್ತಿರುವ ಆಕರ್ಷಣೆಯನ್ನು ಸಾರುತ್ತದೆ ಮತ್ತು ಉದ್ಯಮದಲ್ಲಿ ಪ್ರಮುಖ ಶಕ್ತಿಯಾಗಿ ಅದರ ಸ್ಥಾನವನ್ನು ಗಟ್ಟಿಗೊಳಿಸುತ್ತದೆ.

Continue Reading

ದೇಶ

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Jio Tariffs: ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ. ಈಗ ರಿಲಯನ್ಸ್‌ ಜಿಯೋ ಪ್ಲಾನ್‌ಗಳ ಬೆಲೆಯನ್ನು ಶೇ.20ರಷ್ಟು ಏರಿಕೆ ಮಾಡಿದ್ದು, ಕೋಟ್ಯಂತರ ಗ್ರಾಹಕರಿಗೆ ಹೊರೆಯಾಗಲಿದೆ.

VISTARANEWS.COM


on

Jio Tariffs
Koo

ಮುಂಬೈ: ರಿಲಯನ್ಸ್‌ ಜಿಯೋ (Reliance Jio) ಪ್ರಿಪೇಯ್ಡ್‌ ಬಳಕೆದಾರರಿಗೆ ಕಂಪನಿಯು ಕಹಿ ಸುದ್ದಿ ನೀಡಿದೆ. ಜಿಯೋ ಪ್ರಿಪೇಯ್ಡ್‌ ಪ್ಲಾನ್‌ನ ಶುಲ್ಕಗಳನ್ನು (Jio Tariffs) ಶೇ.20ರಷ್ಟು ಏರಿಕೆ ಮಾಡಿದ್ದು, ಇದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಅದರಲ್ಲೂ, ಇತ್ತೀಚೆಗೆ ಕರ್ನಾಟಕದಲ್ಲಿ ಪೆಟ್ರೋಲ್‌, ಡೀಸೆಲ್‌, ಹಾಲಿನ ಬೆಲೆಯೇರಿಕೆ ಆಗಿದ್ದು, ಇದರ ಬೆನ್ನಲ್ಲೇ ಜಿಯೋ ಪ್ರಿಪೇಯ್ಡ್‌ ಪ್ಲಾನ್‌ಗಳ ಶುಲ್ಕವೂ ಜಾಸ್ತಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜುಲೈ 3ರಿಂದ ರಿಲಯನ್ಸ್‌ ಜಿಯೋ ಹೊಸ ರೇಟ್‌ ಅನ್ವಯವಾಗಲಿದೆ.

ತಿಂಗಳ ಪ್ಲಾನ್‌ಗೆ ಇಷ್ಟಾಗಲಿದೆ ಹೊರೆ

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಇದನ್ನೂ ಓದಿ: GST Council Meeting : ಪೆಟ್ರೋಲ್, ಡೀಸೆಲ್ ಜಿಎಸ್​​ಟಿ ವ್ಯಾಪ್ತಿಗೆ ಬರಲಿದೆಯೇ? ಸಭೆಯ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

Continue Reading
Advertisement
ವಿದೇಶ18 mins ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ25 mins ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest27 mins ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

power outage in many parts of Bengaluru on June 29
ಬೆಂಗಳೂರು36 mins ago

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Actor Darshan In Central Jail remembering mother and son
ಸ್ಯಾಂಡಲ್ ವುಡ್45 mins ago

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

bear attack
ಕೊಪ್ಪಳ46 mins ago

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Haveri Accident
ಕರ್ನಾಟಕ57 mins ago

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

cm siddaramaiah karnataka cm
ಕರ್ನಾಟಕ1 hour ago

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Ajinkya Rahane
ಕ್ರೀಡೆ1 hour ago

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

BGauss RUV350
Latest2 hours ago

BGauss RUV350 : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಆರ್‌ಯುವಿ350 ಬಿಡುಗಡೆ ಮಾಡಿದ ಬಿಗಾಸ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು23 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌