UPI Transaction : ಮಾರ್ಚ್‌ನಲ್ಲಿ ಯುಪಿಐ ಮೂಲಕ ಹೊಸ ದಾಖಲೆಯ 14 ಲಕ್ಷ ಕೋಟಿ ರೂ. ವರ್ಗಾವಣೆ - Vistara News

ಪ್ರಮುಖ ಸುದ್ದಿ

UPI Transaction : ಮಾರ್ಚ್‌ನಲ್ಲಿ ಯುಪಿಐ ಮೂಲಕ ಹೊಸ ದಾಖಲೆಯ 14 ಲಕ್ಷ ಕೋಟಿ ರೂ. ವರ್ಗಾವಣೆ

ಕಳೆದ ಮಾರ್ಚ್‌ನಲ್ಲಿ ಯುಪಿಐ ಮೂಲಕ ದಾಖಲೆಯ 14 ಲಕ್ಷ ಕೋಟಿ ರೂ. ಮೌಲ್ಯದ ವರ್ಗಾವಣೆ ನಡೆದಿದೆ. ಯುಪಿಐ ವರ್ಗಾವಣೆ ದಿನೇದಿನೆ (UPI Transaction) ಜನಪ್ರಿಯವಾಗುತ್ತಿರುವುದನ್ನು ಇದು ಬಿಂಬಿಸಿದೆ.

VISTARANEWS.COM


on

UPI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಳೆದ ಮಾರ್ಚ್‌ನಲ್ಲಿ ಯುನಿಫೈಡ್‌ ಪೇಮೆಂಟ್‌ ಇಂಟರ್‌ಫೇಸ್‌ (Unified Payment Interface -UPI) ಮೂಲಕ ಹೊಸ ದಾಖಲೆಯ 14 ಲಕ್ಷ ಕೋಟಿ ರೂ. ಮೌಲ್ಯದ ಹಣಕಾಸು ವರ್ಗಾವಣೆಗಳು ನಡೆದಿವೆ. ದಾಖಲೆಯ 865 ಕೋಟಿ ಸಂಖ್ಯೆಯ ವರ್ಗಾವಣೆಗಳು ನಡೆದಿವೆ.

2023ರ ಫೆಬ್ರವರಿಯಲ್ಲಿ 12.35 ಕೋಟಿ ರೂ. ವರ್ಗಾವಣೆಗಳು ನಡೆದಿತ್ತು. ಇದಕಕೆ ಹೋಲಿಸಿದರೆ 13% ಏರಿಕೆಯಾಗಿದೆ. ಫೆಬ್ರವರಿಯಲ್ಲಿ 728 ಕೋಟಿ ವರ್ಗಾವಣೆಗಳು ನಡೆದು 18% ಹೆಚ್ಚಳ ದಾಖಲಿಸಿತ್ತು.

2022-23ರ ಸಾಲಿನ ಕೊನೆಯ ತಿಂಗಳು ಯುಪಿಐ ವರ್ಗಾವಣೆಗಳು ಹೊಸ ದಾಖಲೆಯೊಂದಿಗೆ ಮುಕ್ತಾಯವಾಗಿರುವುದು ಡಿಜಿಟಲೀಕರಣದ ಜನಪ್ರಿಯತೆಯನ್ನು ಬಿಂಬಿಸಿದೆ ಎಂದಯ ಎನ್‌ಪಿಸಿಐನ ಸಿಒಒ ದಿಲೀಪ್‌ ಅಸ್ಬೆ ಹೇಳಿದ್ದಾರೆ. ಎನ್‌ ಪಿಸಿಐ ಪ್ರಕಾರ 2023ರ ಮಾರ್ಚ್‌ನಲ್ಲಿ 49.7 ಕೋಟಿ ಐಎಂಪಿಎಸ್‌ ವರ್ಗಾವಣೆಗಳು ನಡೆದಿವೆ.ಇದರ ಮೌಲ್ಯ 5.5 ಲಕ್ಷ ಕೋಟಿ ರೂ.ಗಳಾಗಿದೆ.

ಯುಪಿಐ ಪೇಮೆಂಟ್ಸ್‌ ಇಂಟರ್‌ಫೇಸ್‌ (UPI) ಎನ್ನುವುದು ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ ಅಭಿವೃದ್ಧಿಪಡಿಸಿರುವ ಪೇಮೆಂಟ್‌ ಸಿಸ್ಟಮ್‌ ಆಗಿದ್ದು, 2016ರ ಏಪ್ರಿಲ್‌ 11ರಂದು ಆರಂಭವಾಯಿತು. 6 ವರ್ಷಗಳ ಹಿಂದೆ ಶುರುವಾದ ಯುಪಿಐ ಅನ್ನು ಮೊಬೈಲ್‌ಗಳಲ್ಲಿ ಎರಡು ಬ್ಯಾಂಕ್‌ ಖಾತೆಗಳ ನಡುವೆ ಹಣ ವರ್ಗಾವಣೆಗೆ ಬಳಸಬಹುದು. ಫೋನ್‌ ಪೇ, ಗೂಗಲ್‌ ಪೇ, ಪೇಟಿಂ, ಭೀಮ್‌ ಆಪ್‌ ಇತ್ಯಾದಿಗಳು ಯುಪಿಐ ತಂತ್ರಜ್ಞಾನವನ್ನು ಆಧರಿಸಿ ಸೇವೆ ನೀಡುತ್ತವೆ.

UPI

ಯುನಿಫೈಡ್‌ ಪೇಮೆಂಟ್ಸ್‌ ಇಂಟರ್‌ಫೇಸ್‌ (UPI) ಪ್ಲಾಟ್‌ಫಾರ್ಮ್‌ನಲ್ಲಿ ಮುಂದಿನ ಮೂರು ವರ್ಷದಲ್ಲಿ ದಿನಕ್ಕೆ ಸರಾಸರಿ 100 ಕೋಟಿ ವರ್ಗಾವಣೆಗಳು (daily transactions) ನಡೆಯಲಿವೆ ಎಂದು ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಶನ್‌ ಆಫ್‌ ಇಂಡಿಯಾ (NPCI) ಸಂಸ್ಥೆಯ ವ್ಯವಸ್ಥಾಪಕ ಕಾರ್ಯಕಾರಿ ನಿರ್ದೇಶಕ ಮತ್ತು ಸಿಇಒ ದಿಲೀಪ್‌ ಅಸ್ಬೆ ತಿಳಿಸಿದ್ದಾರೆ.

ಯುಪಿಐ ಪೇಮೆಂಟ್‌ ವ್ಯವಸ್ಥೆಯ ಸಾಧ್ಯತೆಗಳು ಅಪಾರವಾಗಿದೆ. ಭಾರತದಂಥ ದೇಶದಲ್ಲಿ ಇದಕ್ಕೆ ಭವಿಷ್ಯ ಉಜ್ವಲವಾಗಿದೆ ಎಂದು ಅವರು ಹೇಳಿದರು. 2025ರ ವೇಳೆಗೆ ದಿನಕ್ಕೆ ಸರಾಸರಿ 100 ಕೋಟಿ ಯುಪಿಐ ವರ್ಗಾವಣೆಗಳು ನಡೆದರೆ ಅಚ್ಚರಿ ಇಲ್ಲ. ಖಂಡಿತವಾಗಿಯೂ ಸಾಧ್ಯವಿದೆ ಎಂದರು.

ಕಳೆದ 12 ತಿಂಗಳುಗಳಲ್ಲಿ ನಿತ್ಯ ಸರಾಸರಿ 36 ಕೋಟಿ ಯುಪಿಐ ವರ್ಗಾವಣೆಗಳು ನಡೆದಿವೆ ಎಂದು ಆರ್‌ಬಿಐನ ಇತ್ತೀಚಿನ ಅಂಕಿ ಅಂಶಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Lok Sabha Election 2024: ಗೃಹ ಸಚಿವ ಅಮಿತ್‌ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಆರೋಪಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಈ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎನ್.‌ ರವಿಕುಮಾರ್‌ ಮಾತನಾಡಿ, ಯತೀಂದ್ರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರೌಡಿ, ಗೂಂಡಾ ಎಂಬೆಲ್ಲ ಪದ ಬಳಕೆಯನ್ನು ಮಾಡಿದ್ದಾರೆ. ಅಲ್ಲದೆ, ಕೊಲೆಗಡುಕರು ಎಂದೂ ಹೇಳಿದ್ದಾರೆ. ಹೀಗಾಗಿ ಯತೀಂದ್ರ ಅವರು ತಮ್ಮ ಹೇಳಿಕೆಯಲ್ಲಿ ಮಾಡಲಾಗಿರುವ ಆರೋಪವನ್ನು ನಿರೂಪಿಸಬೇಕು. ಇಲ್ಲವಾದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ (BJP Karnataka) ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿರುದ್ಧ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗವು ದೂರು ನೀಡಿದೆ. ಈಗ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ಸಾಬೀತು ಮಾಡಬೇಕು. ಸಾಬೀತುಪಡಿಸುವಲ್ಲಿ ಅವರು ವಿಫಲವಾದರೆ ಚುನಾವಣಾ ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎನ್. ರವಿಕುಮಾರ್, ಮಾ. 28ರಂದು ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ಅಮಿತ್ ಶಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರೌಡಿ, ಗೂಂಡಾ ಎಂಬೆಲ್ಲ ಪದ ಬಳಕೆಯನ್ನು ಮಾಡಿದ್ದಾರೆ. ಅಲ್ಲದೆ, ಕೊಲೆಗಡುಕರು ಎಂದೂ ಹೇಳಿದ್ದಾರೆ. ಹೀಗಾಗಿ ಯತೀಂದ್ರ ಅವರು ತಮ್ಮ ಹೇಳಿಕೆಯಲ್ಲಿ ಮಾಡಲಾಗಿರುವ ಆರೋಪವನ್ನು ನಿರೂಪಿಸಬೇಕು. ಇಲ್ಲವಾದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಗೃಹ ಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಿಂದನೀಯ ಪದವನ್ನು ಬಳಕೆ ಮಾಡಲಾಗಿದೆ. ಖಂಡನೀಯ. ಈ ಬಗ್ಗೆ ದೂರು ನೀಡಿದ್ದೇವೆ. ಯತೀಂದ್ರ ಅವರು 153a, 153b, 171c, 295a, 505(2) ಈ ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಾಗ ಅವರು ಇವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿ ಮಾತನಾಡಿದ್ದಾರೆ. ಈ ಹಿಂದೆ ಈ ರೀತಿ ಮಾತನಾಡಿರುವವರ ವಿರುದ್ಧ ಕ್ರಮ ಆಗಿದೆ. ಇವರ ವಿರುದ್ಧವೂ ಕ್ರಮ ಆಗಬೇಕು. ಇಲ್ಲದೆ ಹೋದರೆ ಬಿಜೆಪಿಯಿಂದ ಉಗ್ರ ಪ್ರತಿಭಟನೆಯನ್ನು ಮಾಡಲಿದ್ದೇವೆ ಎಂದು ರವಿಕುಮಾರ್‌ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ (ಮಾ. 28) ಹನೂರಿನ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒಬ್ಬ ಗೂಂಡಾ, ರೌಡಿ ಎಂದು ಹೇಳಿಕೆ ನೀಡಿದ್ದರು. ಗುಜರಾತ್‌ನಲ್ಲಿ ನಡೆದಿದ್ದ ನರಮೇಧದ ರೂವಾರಿ ಎಂಬ ಆರೋಪವನ್ನು ಅಮಿತ್‌ ಹೊತ್ತಿದ್ದಾರೆ. ಅವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದು, ಇಂತಹವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಹನೂರಿನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದಕ್ಕೆ ಈಗ ರಾಜ್ಯ ಬಿಜೆಪಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದೆ. ಅಲ್ಲದೆ, ಈಗ ಚುನಾವಣಾ ಆಯೋಗಕ್ಕೂ ದೂರು ನೀಡಿದೆ.

ಬಿಜೆಪಿ ನಾಯಕರ ವಾಗ್ದಾಳಿ

ಯತೀಂದ್ರ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ತೀವ್ರ ವಾಗ್ದಾಳಿಯನ್ನು ನಡೆಸಿದ್ದರು. ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದೂ ಹೇಳಿದ್ದರು. ಅಲ್ಲದೆ, ಆಯೋಗಕ್ಕೆ ದೂರು ನೀಡುವುದಾಗಿಯೂ ಶುಕ್ರವಾರ ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಯತೀಂದ್ರ ಕ್ಷಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹ

ಯತೀಂದ್ರ ವಿರುದ್ಧ ದೂರು ಕೊಡುತ್ತೇವೆ: ಅಶೋಕ್

ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇನ್ನೂ ಮೆಚ್ಯುರಿಟಿ, ಬುದ್ಧಿ ಇಲ್ಲ. ಯಾರ ಬಗ್ಗೆ ಮಾತಾಡಬೇಕು ಎಂಬ ಬಗ್ಗೆ ಗೊತ್ತಿಲ್ಲ, ಸ್ಥಾನಮಾನ ಇಲ್ಲದ ವ್ಯಕ್ತಿ. ಅಮಿತ್ ಶಾ ಈ ದೇಶದ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಕಾಂಗ್ರೆಸ್ ಹಿಂದಿನಿಂದಲೂ ಕೊಟ್ಟುಕೊಂಡು ಬರುತ್ತಿದೆ. ಸಿದ್ದರಾಮಯ್ಯ ಅವರ ಮಗ ಎಂಬ ಕಾರಣಕ್ಕೆ ಬಾಲಿಶ ಹೇಳಿಕೆ ನೀಡಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ಅವರು ಜೈಲು ಶಿಕ್ಷೆಯನ್ನು ಅನುಭವಿಸುವ ಹಂತಕ್ಕೆ ಬಂದಿದ್ದಾರೆ. ಇವರ ಡಿಎನ್ಎನಲ್ಲೇ ಇಂತಹ ವಿಚಾರಗಳು ಬಂದಿದೆ. ಇವರ ವಿರುದ್ಧ ದೂರು ನೀಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆ: ಸಿಟಿ ರವಿ

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆಯೇ ಮಾತನಾಡುತ್ತಾರೆ. ಎಂದಾದರೂ ಪಕ್ಷದ ಕೆಲಸ ಮಾಡಿದ್ದಾರಾ? 1982ರಲ್ಲಿ ಅಮಿತ್ ಶಾ ಬೂತ್ ಅಧ್ಯಕ್ಷ ಆಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು‌ ಇವರು. ನಾವು ವಿದ್ಯಾರ್ಥಿಗಳಾಗಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಕೇಸ್‌ ಹಾಕಿದ್ದರು. ಹಾಗಾದರೆ ನಾನು ಗೂಂಡಾನಾ? ಅಪ್ಪನ ಹೆಸರು ಹೇಳಿಕೊಂಡು, ಅಧಿಕಾರ ಚಲಾಯಿಸುವವರಿಗೆ ಬಡವರ ಕಷ್ಟ ಕಾಣಿಸುತ್ತಾ? ಎಂದು ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

ಕೂಡಲೇ ಯತೀಂದ್ರ ಕ್ಷಮೆ ಯಾಚಿಸಲಿ: ಅಶ್ವಥ್ ನಾರಾಯಣ್

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ರಾಜಕೀಯದಲ್ಲಿ ಮಾತಿನ ಮೇಲೆ, ನಡವಳಿಕೆ ಮೇಲೆ ನಿಲ್ಲಬೇಕು. ಮಾತಿನಲ್ಲಿ ಲಕ್ಷ್ಮಣ ರೇಖೆ ಇರಬೇಕು. ಎಲ್ಲಿಯೂ ಎಲ್ಲೆ ಮೀರಿದ ಮಾತನಾಡಬಾರದು. ಯತೀಂದ್ರ ಅವರ ಇಂಥ ಕೀಳು ಮಟ್ಟದ ರಾಜಕೀಯ ಹೇಳಿಕೆಯನ್ನು ವಿರೋಧಿಸುತ್ತೇವೆ. ಅಲ್ಲದೆ, ನಮ್ಮ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ ಎಂದು ಕರೆದಿದ್ದಕ್ಕೆ ಯತೀಂದ್ರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.

ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ: ಡಿವಿಎಸ್‌

ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಮಾತನಾಡಿ, ಬೈಗುಳದಿಂದ ರಾಜಕಾರಣ ಮಾಡುವುದಾದರೆ ಅನೇಕರು ರಾಜಕಾರಣವನ್ನು ಮಾಡಬಹುದಿತ್ತು. ಬೈಗುಳದಿಂದ ರಾಜಕಾರಣ ಮಾಡುವವರ ಸಾಲಿಗೆ ಯತೀಂದ್ರ ಸೇರಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ, ದೊಡ್ಡ ರಾಜಕಾರಣಿ ಆಗುತ್ತೇನೆ ಎಂದು ಭಾವಿಸಿದರೆ ಕೊನೇ ಮೊಳೆ ಆಗಲಿದೆ. ಅವರ ತಂದೆ ಮಂಡಿಸಿದ ಬಜೆಟ್ ಬಗ್ಗೆ ಮಾತಾಡಲಿ. ಅದು ಬಿಟ್ಟು ಬಿಜೆಪಿ, ಬಿಜೆಪಿ ನಾಯಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯ ಅವರ ಮಗನಾಗಿ, ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ಕಿವಿಮಾತು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

ಹೂಡಿಕೆ ಮಾಡುವಾಗ ಪ್ರತಿಯೊಬ್ಬರು ಸಮಗ್ರ ಮತ್ತು Income Tax: ದೀರ್ಘಕಾಲೀನ ಯೋಜನೆಯನ್ನು ಅಳವಡಿಸಿಕೊಳ್ಳಬೇಕು. ಹೂಡಿಕೆ ಮೇಲಿನ ಆದಾಯ, ಲಾಕ್-ಇನ್ ಅವಧಿ ಸೇರಿದಂತೆ ಹಲವಾರು ಮಾನದಂಡಗಳನ್ನು ಹೊಂದಿರುವ ಹೂಡಿಕೆಯನ್ನು ಆಯ್ಕೆ ಮಾಡಿಕೊಂಡರೆ ಮಾತ್ರ ತೆರಿಗೆ ಲಾಭ ದೊರೆಯುವುದು. ಉದಾಹರಣೆಗೆ ಪಿಪಿಎಫ್ ತೆರಿಗೆ ಮುಕ್ತ ಉತ್ತಮ ಆದಾಯ ನೀಡುತ್ತದೆ. ಆದರೆ ತೆರಿಗೆದಾರರು ವಾರ್ಷಿಕವಾಗಿ ಕನಿಷ್ಠ 500 ರೂ.ಗಳನ್ನು ಪಾವತಿ ಮಾಡಲೇಬೇಕು. ಆದರೆ ಇದಕ್ಕೆ 15 ವರ್ಷಗಳ ಲಾಕ್-ಇನ್ ಅವಧಿಯೂ ಇದೆ. ಒಂದು ಬಾರಿ ಹೂಡಿಕೆ ಮಾಡಿ ಮತ್ತೆ ನಿಲ್ಲಿಸಿದರೆ ಅಥವಾ ಮಧ್ಯದಲ್ಲಿಯೇ ವಾಪಸ್ ಪಡೆಯಲು ಪ್ರಯತ್ನಿಸಿದರೆ ನಷ್ಟವೇ ಹೆಚ್ಚು.

VISTARANEWS.COM


on

income Tax - how to save tax
Koo

ಬೆಂಗಳೂರು: 2023-24ರ ಹಣಕಾಸು ವರ್ಷವು ಮಾರ್ಚ್ 31 ಕ್ಕೆ ಕೊನೆಗೊಳ್ಳಲಿದೆ. ಇದೇ ವೇಳೆ ಆದಾಯ ತೆರಿಗೆ (Income Tax) ಕಟ್ಟುವವರಿಗೆ ಹಣಕಾಸು ವರ್ಷದಲ್ಲಿ ತಮ್ಮ ಟ್ಯಾಕ್ಸ್​ಗಳನ್ನು (Tax Savings) ಉಳಿಸಲು ಕೊನೆಯ ಅವಕಾಶ ಇದು. ಆದರೆ ಸಾಕಷ್ಟು ಮಂದಿ ಕೊನೆಯ ಕ್ಷಣದ ಅವಸರದಲ್ಲಿ ತಪ್ಪುಗಳನ್ನು ಮಾಡುತ್ತಾರೆ. ಈ ಬಾರಿ ಆ ರೀತಿ ಮಾಡಬೇಡಿ. ಮಾರ್ಚ್ 31ರ ಗಡುವು ಹತ್ತಿರದಲ್ಲಿರುವುದರಿಂದ ಏನು ಮಾಡಬೇಕು ಎಂಬುದನ್ನು ಪರಿಣತರ ಅಭಿಪ್ರಾಯಗಳನ್ನು ಇಲ್ಲಿ ನೀಡಲಾಗಿದೆ.

ಮಾರ್ಚ್ 31ರಿಂದ ಕೇವಲ ಒಂದೆರಡು ದಿನಗಳು ಮಾತ್ರ ಇರುವುದರಿಂದ ಹೂಡಿಕೆ ಸಲಹೆಗಾರರು, ತೆರಿಗೆ ಸಲಹೆಗಾರರು ಮತ್ತು ತೆರಿಗೆದಾರರು ಬ್ಯುಸಿಯಾಗಿರುತ್ತಾರೆ. ಹೀಗಾಗಿ ತೆರಿಗೆ ಲಾಭವನ್ನು ಪಡೆಯಲು ತೆರಿಗೆ ಉಳಿತಾಯ ಹೂಡಿಕೆಗಳಲ್ಲಿ ಹಣವನ್ನು ಹೂಡಿಕೆ ಮಾಡಲೇಬೇಕು ಎಂದು ಹೇಳುತ್ತಾರೆ.

ಆದಾಯ ತೆರಿಗೆ ಕಾಯ್ದೆ, 1961, ಪಿಪಿಎಫ್, ಎಲ್ಐಸಿ ಪ್ರೀಮಿಯಂಗಳು, ಫಿಕ್ಸೆಡ್​ ಡೆಪಾಸಿಟ್​ಗಳು, ಇಎಲ್ಎಸ್ಎಸ್, ಯುಲಿಪ್, ಎನ್ಎಸ್ಸಿ ಮುಂತಾದ ನಿರ್ದಿಷ್ಟ ಸೆಕ್ಯುರಿಟಿಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ತೆರಿಗೆ ಉಳಿಸಬಹುದು ಎಂದು ರೌಟೆ ಹೇಳುತ್ತಾರೆ.

ಹೂಡಿಕೆ ಮಾಡುವಾಗ ಪ್ರತಿಯೊಬ್ಬರು ಸಮಗ್ರ ಮತ್ತು ದೀರ್ಘಕಾಲೀನ ಯೋಜನೆಯನ್ನು ಅಳವಡಿಸಿಕೊಳ್ಳಬೇಕು. ಹೂಡಿಕೆ ಮೇಲಿನ ಆದಾಯ, ಲಾಕ್-ಇನ್ ಅವಧಿ ಸೇರಿದಂತೆ ಹಲವಾರು ಮಾನದಂಡಗಳನ್ನು ಹೊಂದಿರುವ ಹೂಡಿಕೆಯನ್ನು ಆಯ್ಕೆ ಮಾಡಿಕೊಂಡರೆ ಮಾತ್ರ ತೆರಿಗೆ ಲಾಭ ದೊರೆಯುವುದು. ಉದಾಹರಣೆಗೆ ಪಿಪಿಎಫ್ ತೆರಿಗೆ ಮುಕ್ತ ಉತ್ತಮ ಆದಾಯ ನೀಡುತ್ತದೆ. ಆದರೆ ತೆರಿಗೆದಾರರು ವಾರ್ಷಿಕವಾಗಿ ಕನಿಷ್ಠ 500 ರೂ.ಗಳನ್ನು ಪಾವತಿ ಮಾಡಲೇಬೇಕು. ಆದರೆ ಇದಕ್ಕೆ 15 ವರ್ಷಗಳ ಲಾಕ್-ಇನ್ ಅವಧಿಯೂ ಇದೆ. ಒಂದು ಬಾರಿ ಹೂಡಿಕೆ ಮಾಡಿ ಮತ್ತೆ ನಿಲ್ಲಿಸಿದರೆ ಅಥವಾ ಮಧ್ಯದಲ್ಲಿಯೇ ವಾಪಸ್ ಪಡೆಯಲು ಪ್ರಯತ್ನಿಸಿದರೆ ನಷ್ಟವೇ ಹೆಚ್ಚು.

ತೆರಿಗೆ ಉಳಿತಾಯ ಅನುಕೂಲ ನೀಡುವ ಸ್ಥಿರ ಠೇವಣಿಗಳು ಕಡಿಮೆ ಬಡ್ಡಿದರವನ್ನು ನೀಡುತ್ತವೆ. ಆದರೆ ಇದು ಸುಮಾರು 5 ವರ್ಷಗಳವರೆಗೆ ಲಾಕ್-ಇನ್ ಹೊಂದಿರುತ್ತವೆ. ಹೀಗಾಗಿ, ಸರಿಯಾದ ಆಯ್ಕೆಯನ್ನು ಮಾಡಲು ಮತ್ತು ನಿಮ್ಮ ಪ್ರಯೋಜನಗಳನ್ನು ಉತ್ತಮಗೊಳಿಸಲು ನಿರ್ದಿಷ್ಟ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ತೆರಿಗೆ ಉಳಿತಾಯವನ್ನು ಹೆಚ್ಚಿಸಲು ಕೆಲವೊಂದು ಸಾಮಾನ್ಯ ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಮಾಡುವ ತಪ್ಪುಗಳು

ಸೆಕ್ಷನ್ 80 ಸಿ ನಿರ್ಲಕ್ಷಿಸುವುದು: ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ತೆರಿಗೆ ಉಳಿತಾಯ ಹೂಡಿಕೆಗಳಿಗೆ ಇಎಲ್ಎಸ್ಎಸ್ (ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್), ಪಿಪಿಎಫ್ (ಪಬ್ಲಿಕ್ ಪ್ರಾವಿಡೆಂಟ್ ಫಂಡ್), ಎನ್ಎಸ್ಸಿ (ನ್ಯಾಷನಲ್ ಸೇವಿಂಗ್ಸ್​ ಸರ್ಟಿಫೀಕೇಟ್​) ಮುಂತಾದ ವಿವಿಧ ಮಾರ್ಗಗಳಿವೆ. ಅನೇಕ ತೆರಿಗೆದಾರರು ಸೆಕ್ಷನ್ 80 ಸಿ ಅಡಿಯಲ್ಲಿ ಲಭ್ಯವಿರುವ 1.5 ಲಕ್ಷ ರೂ.ಗಳ ಸಂಪೂರ್ಣ ಮಿತಿಯನ್ನು ಬಳಸಿಕೊಳ್ಳಲು ವಿಫಲರಾಗುತ್ತಾರೆ. ಎಲ್ಲಾ ಆಯ್ಕೆಗಳನ್ನು ಮೌಲ್ಯಮಾಪನ ಮಾಡಿ ಮತ್ತು ಈ ವಿಭಾಗದ ಅಡಿಯಲ್ಲಿ ತೆರಿಗೆ ಉಳಿತಾಯ ಮಾಡುವಂಥ ಹೂಡಿಕೆ ಮಾಡಿ.

ಇದನ್ನೂ ಓದಿ : LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

ಅಪೂರ್ಣ ದಾಖಲೆಗಳು: ತೆರಿಗೆ ಉಳಿತಾಯ ಹೂಡಿಕೆಗಳಿಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಚಾಲ್ತಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಿ. ಇದರಲ್ಲಿ ಹೂಡಿಕೆ ರಸೀದಿಗಳು, ಪ್ರೀಮಿಯಂ ಪಾವತಿ ಪ್ರಮಾಣಪತ್ರಗಳು, ಸಾಲ ಪ್ರಮಾಣಪತ್ರಗಳು ಇತ್ಯಾದಿಗಳು ಸೇರಿಕೊಂಡಿವೆ. ಅಪೂರ್ಣ ದಾಖಲೆಗಳು ತೆರಿಗೆ ಕಡಿತದ ಅವಕಾಶ ಸಿಗದಂತೆ ಮಾಡಬಹುದು. ಹೀಗಾಗಿ ನಿಮ್ಮ ಹೂಡಿಕೆಗಳು ಮತ್ತು ಕಡಿತಗಳ ದಾಖಲೆಗಳನ್ನು ಇರಿಸಿಕೊಳ್ಳಿ. ಯಾಕೆಂದರೆ ನಿಮ್ಮ ತೆರಿಗೆ ಫೈಲಿಂಗ್ ಗಳನ್ನು ಪರಿಶೀಲಿಸಲು ಐಟಿ ಇಲಾಖೆ ದಾಖಲೆಗಳ ಮರುಪರಿಶೀಲನೆ ಮಾಡುವ ಸಾಧ್ಯತೆಗಳಿವೆ.

ತೆರಿಗೆ ಯೋಜನೆಗಳನ್ನು ನಿರ್ಲಕ್ಷಿಸುವುದು: ಸೆಕ್ಷನ್ 80 ಸಿ ಹೊರತುಪಡಿಸಿ, ತೆರಿಗೆ ಪ್ರಯೋಜನಗಳನ್ನು ಪಡೆಯಬಹುದಾದ 80 ಡಿ (ಆರೋಗ್ಯ ವಿಮಾ ಪ್ರೀಮಿಯಂ), 80 ಇ (ಶಿಕ್ಷಣ ಸಾಲದ ಬಡ್ಡಿ) ಮತ್ತು 80 ಜಿ (ನಿರ್ದಿಷ್ಟ ನಿಧಿಗಳಿಗೆ ದೇಣಿಗೆ) ನಂತಹ ಇತರ ವಿಭಾಗಗಳಿವೆ. ಈ ಲಾಭವನ್ನು ನಿರ್ಲಕ್ಷಿಸುವುದರಿಂದ ತೆರಿಗೆ ಉಳಿಸುವ ಅವಕಾಶಗಳನ್ನು ಕಳೆದುಕೊಳ್ಳಬಹುದು.

ದೀರ್ಘಾವಧಿಯ ಹಣಕಾಸು ಗುರಿಯ ನಿರ್ಲಕ್ಷ್ಯ: ತೆರಿಗೆ ಉಳಿತಾಯ ಹೂಡಿಕೆಗಳು ನಿಮ್ಮ ದೀರ್ಘಾವಧಿಯ ಹಣಕಾಸು ಉದ್ದೇಶಗಳಿಗೆ ಹೊಂದಿಕೆಯಾಗಬೇಕು. ತೆರಿಗೆ ಲಾಭ ಪಡೆಯುವ ಉದ್ದೇಶದಿಂದ ಮಾತ್ರ ಹೂಡಿಕೆ ಮಾಡಿದರೆ ಅದು ನಿಮ್ಮ ಹಣಕಾಸಿನ ಅಗತ್ಯಕ್ಕೆ ಅದು ಹೊಂದಿಕೆಯಾಗದೇ ಹೋದರೆ ಅದರಿಂದ ಹೆಚ್ಚಿನ ಲಾಭವು ಸಿಗುವುದಿಲ್ಲ.

Continue Reading

Lok Sabha Election 2024

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Lok Sabha Election 2024: ಯತೀಂದ್ರ ಸಿದ್ದರಾಮಯ್ಯ ಅವರದ್ದು ಬಾಲಿಶ, ಬುದ್ಧಿಭ್ರಮಣೆಯ ಹಾಗೂ ಅಪ್ರಬುದ್ಧ ಹೇಳಿಕೆಯಾಗಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದರು. ಯತೀಂದ್ರ ಅವರಿಗೂ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ. ಗೂಂಡಾ ಗುರು ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನದ್ದು ಗೂಂಡಾ ಸಂಸ್ಕೃತಿಯಾಗಿದೆ ಎಂದು ಆರ್.‌ ಅಶೋಕ್‌ ಗುಡುಗಿದ್ದಾರೆ.

VISTARANEWS.COM


on

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ (BJP Karnataka) ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ (Rahul Gandhi) ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು.

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್‌ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ. ಅವರು ಎಚ್ಚರದಿಂದ ಮಾತನಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಗೂಂಡಾ ಗುರು

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಮಾತ್ರ ಕಣ್ಣಿಗೆ ಕಾಣುವುದಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಜಾರಿಯಲ್ಲಿದೆ. ಸದನದಲ್ಲಿ ಪೊಲೀಸರನ್ನು ಬೆದರಿಸುವುದು, ಸ್ಪೀಕರ್‌ಗೆ ಧಮ್ಕಿ ಹಾಕುವುದು ಮಹಿಳೆಯರ ಬಟ್ಟೆ ಎಳೆದು ದೌರ್ಜನ್ಯ ಮಾಡುವುದು, ಕಾರ್ಯಕರ್ತರ ಕಪಾಳಕ್ಕೆ ಹೊಡೆಯುವುದು-ಹೀಗೆ ಸಿಎಂ ಸಿದ್ದರಾಮಯ್ಯ ಮಾಡಿದ ರೌಡಿಸಂಗೆ ಲೆಕ್ಕವೇ ಇಲ್ಲ. ಪ್ರಧಾನಿಗೆ, ರಾಷ್ಟ್ರಪತಿಗೆ ಅವನು, ಇವಳು ಎಂದು ಕರೆಯುವವರು, ಪ್ರಧಾನಿಗೆ ಹೊಡೆಯುತ್ತೇನೆ ಎನ್ನುವವರು ನಿಜವಾದ ಗೂಂಡಾಗಳು. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದರೆ ಇವರು ನಡೆಸುವುದು ರಾವಣ ರಾಜ್ಯ. ಯತಿ ಎಂದರೆ ಸನ್ಯಾಸಿ. ಆದರೆ ಇವರ ಬಾಯಲ್ಲಿ ಬರುವ ಮಾತು ರಾಕ್ಷಸನಂತಿದೆ. ಇವರ ಹೆಸರಿಗೂ ಮಾತಿಗೂ ಸಂಬಂಧವೇ ಇಲ್ಲ ಎಂದರು.

ರಾಜ್ಯದಲ್ಲಿ ಗೂಂಡಾ ಸರ್ಕಾರವಿದ್ದು, ಸಿಎಂ ಸಿದ್ದರಾಮಯ್ಯ ಗೂಂಡಾಗುರುವಾಗಿ ವರ್ತಿಸುತ್ತಿದ್ದಾರೆ. ಕರಸೇವಕರನ್ನು ಬಂಧಿಸಿ, ಹನುಮ ಧ್ವಜ ಇಳಿಸಿ, ಮುಸ್ಲಿಂ ದಂಗೆಕೋರರಿಗೆ ಆಶ್ರಯ ನೀಡಿದ್ದು ಇದೇ ಗೂಂಡಾ ಕಾಂಗ್ರೆಸ್‌. ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಹೊಡೆದವರು ಹಾಗೂ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದವರು ಗೂಂಡಾ ಕಾಂಗ್ರೆಸ್ಸಿಗರೇ ಆಗಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಯಾರು ಗೂಂಡಾ ಎಂದು ಪಾಠ ಕಲಿಸಲಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಸಮನ್ವಯ ಸಭೆ

ಬಿಜೆಪಿ-ಜೆಡಿಎಸ್‌ ಹಾಲು ಜೇನಿನಂತೆ ಕೆಲಸ ಮಾಡುತ್ತಿದೆ. ಇನ್ನಷ್ಟು ಚೆನ್ನಾಗಿ ಕಾರ್ಯನಿರ್ವಹಿಸಲು ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗುವುದು. ರೈತರಿಗೆ ಪರಿಹಾರ ಕೊಡದ, ಕುಡಿಯುವ ನೀರು ಕೊಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಇಂತಹ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಬೇಕು ಎಂದು ಮನವಿ ಮಾಡಿದರು.

Continue Reading

Lok Sabha Election 2024

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Lok Sabha Election: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ಸೀಟು ಹಂಚಿಕೆ ಮಾಡಿಕೊಂಡಿವೆ. ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳು ಎಂಬ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi And Tejashwi Yadav
Koo

ಪಟನಾ: ಲೋಕಸಭೆ ಚುನಾವಣೆಗೆ (Lok Sabha Election) ಇಂಡಿಯಾ ಒಕ್ಕೂಟವೂ (India Bloc) ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅಥವಾ ಮಹಾಘಟಬಂಧನದ ಪಕ್ಷಗಳು ಸೀಟು ಹಂಚಿಕೆ ಮಾಡಿಕೊಂಡಿವೆ. ಆರ್‌ಜೆಡಿಯು (RJD) 26 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇನ್ನು ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಎಡ ಪಕ್ಷವು ಐದು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ. ಇದರೊಂದಿಗೆ ಇಂಡಿಯಾ ಒಕ್ಕೂಟದಲ್ಲಿ ಬಿಹಾರದಲ್ಲಿ ಒಮ್ಮತ ಮೂಡಿದಂತಾಗಿದೆ.

ಕಿಶನ್‌ ಗಂಜ್‌ ಹಾಗೂ ಪಟನಾ ಸಾಹಿಬ್‌ ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿವೆ. ಪೂರ್ಣಿಯಾ ಹಾಗೂ ಕಟಿಹಾರ್‌ನಲ್ಲಿ ಜೆಡಿಯು ಗೆಲುವು ಸಾಧಿಸಿದ್ದು, ಪೂರ್ಣಿಯಾದಲ್ಲಿ ಆರ್‌ಜೆಡಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮೊದಲು ಪೂರ್ಣಿಯಾ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ರಾಜ್ಯಸಭೆ ಸದಸ್ಯೆ ರಂಜೀತ್‌ ರಂಜನ್‌ ಅವರ ಪತಿ ಪಪ್ಪು ಯಾದವ್‌ ಅವರು ಇಲ್ಲಿ ಸ್ಪರ್ಧಿಸಲಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಪಪ್ಪು ಯಾದವ್‌ ಕೂಡ ಟಿಕೆಟ್‌ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಬಿಹಾರದಲ್ಲಿ ಲೋಕ ಸಭಾ ಚುನಾವಣೆಗೆ ಎನ್​ಡಿಎ ಬಣದ ಸೀಟು ಹಂಚಿಕೆ ಒಪ್ಪಂದ ನಡೆದಿದೆ. ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷ ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಪ್ರಕಟಿಸಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 17, ಜೆಡಿಯು 16, ಎಲ್​ಜೆಪಿ (ರಾಮ್ ವಿಲಾಸ್) 5, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ತಾವ್ಡೆ ಎಎನ್ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

ಬಿಹಾರದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಲಿದೆ

  1. ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): ವೈಶಾಲಿ, ಹಾಜಿಪುರ, ಸಮಸ್ತಿಪುರ, ಖಗರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಎಲ್ಜೆಪಿ (ರಾಮ್ ವಿಲಾಸ್) ಸ್ಪರ್ಧಿಸಲಿದೆ.
  2. ಹಿಂದೂಸ್ತಾನಿ ಅವಾಮ್ ಮೋರ್ಚಾ ಗಯಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ
  3. ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಕರಕಾಟ್ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election 2024
ಕರ್ನಾಟಕ11 seconds ago

Lok Sabha Election 2024: ಅನುಮಾನ ಬೇಡ, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತಾರೆ: ಸಾಹಿತಿ ಎಸ್.ಎಲ್. ಭೈರಪ್ಪ

Summer Nail Colours Trend
ಫ್ಯಾಷನ್22 mins ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 202426 mins ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು31 mins ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ42 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ1 hour ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 20241 hour ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು1 hour ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ1 hour ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ1 hour ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌