Videocon Group: ವಿದೇಶದಲ್ಲಿ ತೈಲ ಘಟಕ ಅಭಿವೃದ್ಧಿ ನೆಪದಲ್ಲಿ ವಿಡಿಯೊಕಾನ್‌ನಿಂದ 60,000 ಕೋಟಿ ರೂ. ಅಕ್ರಮ ವರ್ಗಾವಣೆ: ಇ.ಡಿ - Vistara News

ಪ್ರಮುಖ ಸುದ್ದಿ

Videocon Group: ವಿದೇಶದಲ್ಲಿ ತೈಲ ಘಟಕ ಅಭಿವೃದ್ಧಿ ನೆಪದಲ್ಲಿ ವಿಡಿಯೊಕಾನ್‌ನಿಂದ 60,000 ಕೋಟಿ ರೂ. ಅಕ್ರಮ ವರ್ಗಾವಣೆ: ಇ.ಡಿ

ವಿಡಿಯೊಕಾನ್‌ ಗ್ರೂಪ್‌ನ (Videocon Group) ಸ್ಥಾಪಕ ವೇಣುಗೋಪಾಲ್‌ ಧೂತ್‌ 60,000 ಕೋಟಿ ರೂ.ಗಳನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿರುವ ಬಗ್ಗೆ ಕೋರ್ಟ್‌ಗೆ ಇ.ಡಿ ವಿವರ ನೀಡಿದೆ.

VISTARANEWS.COM


on

dhooth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವಿದೇಶಗಳಲ್ಲಿ ತೈಲ ಮತ್ತು ಅನಿಲ ಉತ್ಪಾದನೆ ಘಟಕಗಳ ಅಭಿವೃದ್ಧಿ ನೆಪದದಲ್ಲಿ ವಿಡಿಯೊಕಾನ್‌ ಗ್ರೂಪ್‌ 60,000 ಕೋಟಿ ರೂ. ಬ್ಯಾಂಕ್‌ ಸಾಲವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದೆ ಎಂದು ಜಾರಿ ನಿರ್ದೇಶನಾಲಯವಿ ಕಳೆದ ಶುಕ್ರವಾರ ವಿಶೇಷ ಪಿಎಂಎಲ್‌ಎ ಕೋರ್ಟ್‌ಗೆ ತಿಳಿಸಿದೆ. (Videocon Group) ವಿಡಿಯೊಕಾನ್‌ ಗ್ರೂಪ್‌ ಮೊಜಾಂಬಿಕ್‌, ಬ್ರೆಜಿಲ್‌, ಇಂಡೊನೇಷ್ಯಾ, ಆಸ್ಟ್ರೇಲಿಯಾ, ಈಸ್ಟ್‌ ಟಿಮೋರ್‌ನಲ್ಲಿ ತನ್ನ ತೈಲ ಮತ್ತು ಅನಿಲ ಘಟಕಗಳ ಅಭಿವೃದ್ಧಿ ಹೆಸರಿನಲ್ಲಿ ಅಕ್ರಮವಾಗಿ ಬ್ಯಾಂಕ್‌ ಸಾಲದ ಹಣವನ್ನು ವರ್ಗಾವಣೆ ಮಾಡಿದೆ ಎಂದು ಜಾರಿ ನಿರ್ದೇಶನಾಲಯವು ಕೋರ್ಟ್‌ಗೆ ತಿಳಿಸಿದೆ.

ವಿಡಿಯೊಕಾನ್‌ ಗ್ರೂಪ್‌ ಉದ್ಯಮಿ ಸಚಿನ್‌ ದೇವ್‌ ದುಗ್ಗಲ್‌ ಜತೆ ಅಕ್ರಮವಾಗಿ ಹಣಕಾಸು ವ್ಯವಹಾರಗಳನ್ನು ನಡೆಸಿದೆ. ಈ ಬಗ್ಗೆ ಹೆಚ್ಚಿನ ತನಿಖೆಯ ಅಗತ್ಯ ಇದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಕಳೆದ 2020ರ ಜೂನ್‌ 23ರಂದು ಇ.ಡಿಯು ವಿಡಿಯೊಕಾನ್‌ ಸಮೂಹದ ಸ್ಥಾಪಕ ವೇಣುಗೋಪಾಲ್‌ ಧೂತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿತ್ತು. ಐಸಿಐಸಿಐ ಬ್ಯಾಂಕ್‌ ಸಾಲ ಹಗರಣದಲ್ಲಿ ಆರೋಪಿಯಾಗಿರುವ ವೇಣುಗೋಪಾಲ್‌ ಧೂತ್‌ಗೆ ಬಾಂಬೆ ಹೈಕೋರ್ಟ್‌ ಇತ್ತೀಚೆಗೆ ಮಧ್ಯಂತರ ಜಾಮೀನು ನೀಡಿತ್ತು. ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Result 2024) ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತ್ಯೇಕವಾಗಿ ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ. ಇದೇ ವೇಳೆ ಇಬ್ಬರು ವಿದ್ಯಾರ್ಥಿಗಳು ಓದಿದ ಮೊರಾರ್ಜಿ ವಸತಿ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು 1.5 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದ್ದಾರೆ.

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ‌ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತಾ ಹಾಗೂ ತೃತೀಯ ರ‍್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌

ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ಇದನ್ನೂ ಓದಿ | SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯವಾದ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು.

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಅಂಕಿತಾ

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅಂಕಿತಾ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಈ ವೇಳೆ ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

ಅಂಕಿತಾಗೆ 5 ಲಕ್ಷ, ನವನೀತ್‌ಗೆ 2 ಲಕ್ಷ ಪ್ರೋತ್ಸಾಹ ಧನ ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್‌ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3ನೇ ರ‍್ಯಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು.

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್‌ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ, ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ.

ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದರು.

ಇದನ್ನೂ ಓದಿ | CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

Continue Reading

ಕ್ರಿಕೆಟ್

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

IPL 2024: ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ನವ ದೆಹಲಿ: ಸಂಘಟಿತ ಹೋರಾಟದ ಬಲದಿಂದ ಮಿಂಚಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 17ನೇ (IPL 2024) ಅವೃತ್ತಿಯ ಐಪಿಎಲ್​ನ 64ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ 19 ರನ್​ಗಳ ಅಧೀಕಾರಯುತ ಗೆಲುವು ಸಾಧಿಸಿತು. ಇದು ಡೆಲ್ಲಿ ತಂಡಕ್ಕೆ ಹಾಲಿ ಆವೃತ್ತಿಯ ಲೀಗ್​ನ ಕೊನೇ ಪಂದ್ಯ. ಅದೇ ರೀತಿ ಐಪಿಎಲ್​​ನ ಕೊನೇ ಅಭಿಯಾನ ಕೂಡ. 14ರಲ್ಲಿ ಏಳು ಗೆಲುವು ಸಾಧಿಸಿರುವ ಡೆಲ್ಲಿ 14 ಅಂಕಗಳನ್ನು ಸಂಪಾದಿಸಿದೆ. ಆದರೆ, ಇನ್ನೂ ಐದನೇ ಸ್ಥಾನದಲ್ಲಿದೆ. ಈ ತಂಡ ನಾಲ್ಕರೊಳಗೆ ಪ್ರವೇಶ ಪಡೆಯುವ ಯಾವುದೇ ಸಾಧ್ಯತೆಗಳು ಇಲ್ಲದ ಕಾರಣ ಅವರ ಅಭಿಯಾನ ಕೊನೆಗೊಂಡಿದೆ. ಇದೇ ವೇಳೆ ಸತತ ಮೂರು ಸೋಲುಗಳಿಗೆ ಒಳಗಾದ ಲಕ್ನೊ ತಂಡ ನಿರಾಶಾದಾಯಕ ಅಭಿಯಾನ ಮುಂದುವರಿಸಿತು.

ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

ಡೆಲ್ಲಿಯ ಪಿಚ್​ನಲ್ಲಿ ಲಕ್ನೊ ತಂಡಕ್ಕೆ ಇದು ದೊಡ್ಡ ಮೊತ್ತವಾಗಿರಲಿಲ್ಲ. ಆದರೆ, ಆ ತಂಡದ ಬ್ಯಾಟರ್​​ಗಳು ಗೆಲುವಿಗಾಗಿ ಹೆಚ್ಚಿನ ಉತ್ಸಾಹ ತೋರಲಿಲ್ಲ. ಇಶಾಂತ್ ಶರ್ಮಾ (34 ರನ್​ಗೆ 3 ವಿಕೆಟ್​​) ಡೆಲ್ಲಿಯ ಬೌಲರ್​ಗಳ ಅಬ್ಬರಕ್ಕೆ ಒಬ್ಬೊಬ್ಬರಾಗಿಯೇ ಪೆವಿಲಿಯನ್ ಹಾದಿ ಹಿಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನಿಕೋಸಲ್​ ಪೂರನ್​ (27 ಎಸೆತಕ್ಕೆ 61 ರನ್​) ಹಾಗೂ ಅರ್ಶದ್​ ಖಾನ್​ (33 ಎಸೆತಕ್ಕೆ 58 ರನ್​) ಅವರ ಹೋರಾಟದಿಂದಾಗಿ ಗುರಿಯ ಸನಿಹಕ್ಕೆ ಬಂದು ಮರ್ಯಾದೆ ಉಳಿಸಿಕೊಂಡಿತು. ಕ್ವಿಂಟನ್ ಡಿ ಕಾಕ್​ (12), ಕೆ. ಎಲ್​ ರಾಹುಲ್​ (05), ಮಾರ್ಕ್ ಸ್ಟೊಯ್ನಿಸ್​ (05), ದೀಪಕ್ ಹೂಡ (0) ಆಯುಷ್​ ಬದೋನಿ (06), ಅವರ ಅಸಮರ್ಥತೆ ತಂಡವನ್ನು ಸೋಲಿನ ಸುಳಿಗೆ ತಳ್ಳಿತು.

ಡೆಲ್ಲಿಯ ಭರ್ಜರಿ ಬ್ಯಾಟಿಂಗ್​

ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಫೇಸರ್ ಮೆಗ್​ ಕುರ್ಕ್ ಅವರ ಶೂನ್ಯ ಸಂಪಾದನೆ ಮೂಲಕ ಆಘಾತಕ್ಕೆ ಒಳಗಾಯಿತು. ಆದರೆ ಅಭಿಷೇಕ್ ಪೊರೆಲ್​ 58 ರನ್ ಬಾರಿಸಿ ತಂಡಕ್ಕೆ ನೆರವಾದರು. ಬಳಿಕ ಶಾಯ್​ ಹೋಪ್​ 38 ರನ್ ಬಾರಿಸಿದರೆ ರಿಷಭ್ ಪಂತ್​ 33 ರನ್ ಕೊಡುಗೆ ಕೊಟ್ಟರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್​ 25 ಎಸೆತಕ್ಕೆ 57 ರನ್ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು. ಲಕ್ನೊ ಪರ ನವಿನ್ ಉಲ್ ಹಕ್ 5 ವಿಕೆಟ್​ ಪಡೆದರೂ 52 ರನ್ ಬಿಟ್ಟುಕೊಟ್ಟು ದುಬಾರಿ ಎನಿಸಿದರು.

Continue Reading

ಪ್ರಮುಖ ಸುದ್ದಿ

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Team India: ನ್ಯೂಜಿಲೆಂಡ್​​ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್ 2009 ರಿಂದ ಸಿಎಸ್​​ಕೆ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಫ್ರಾಂಚೈಸಿ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ರಾಹುಲ್ ದ್ರಾವಿಡ್ ಅವರ ಒಪ್ಪಂದ ಮುಗಿದ ನಂತರ ಸ್ಟೀಫನ್ ಫ್ಲೆಮಿಂಗ್ ಸೂಕ್ತ ಅಭ್ಯರ್ಥಿ ಎಂದು ಕೆಲವು ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

VISTARANEWS.COM


on

Team India
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ (Team India ) ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ಅವರ ಅಧಿಕಾರಾವಧಿ ಜೂನ್​​ನಲ್ಲಿ ಕೊನೆಗೊಳ್ಳಲಿದ್ದು, ಅವರ ಸ್ಥಾನವನ್ನು ತುಂಬಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗಾಗಲೇ ಭರ್ಜರಿ ಹುಡುಕಾಟ ಆರಂಭಿಸಿದೆ. ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಮ್ ಇಂಡಿಯಾ ಜೂನ್​ನಲ್ಲಿ ಟಿ 20 ವಿಶ್ವಕಪ್ 2024 ಆಡಲಿದ್ದು, ಪಂದ್ಯಾವಳಿಯ ನಂತರ ಹೊಸ ತರಬೇತುದಾರರನ್ನು ಹೊಂದುವ ಎಲ್ಲಾ ಸಂಭವಗಳಿವೆ. ಈ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ (Stephen Fleming) ಅವರು ರಾಹುಲ್ ದ್ರಾವಿಡ್ ಅವರ ನಂತರ ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಬಹುದು ಎಂದು ಇಂಡಿಯನ್ ಎಕ್ಸ್​ಪ್ರೆಸ್​​ ವರದಿ ಮಾಡಿದೆ.

ನ್ಯೂಜಿಲೆಂಡ್​​ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್ 2009 ರಿಂದ ಸಿಎಸ್​​ಕೆ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಫ್ರಾಂಚೈಸಿ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ರಾಹುಲ್ ದ್ರಾವಿಡ್ ಅವರ ಒಪ್ಪಂದ ಮುಗಿದ ನಂತರ ಸ್ಟೀಫನ್ ಫ್ಲೆಮಿಂಗ್ ಸೂಕ್ತ ಅಭ್ಯರ್ಥಿ ಎಂದು ಕೆಲವು ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಸ್ಟೀಫನ್ ಫ್ಲೆಮಿಂಗ್​ ಆಯ್ಕೆಯಾಗಿರುತ್ತದೆ. ಭಾರತೀಯ ಕ್ರಿಕೆಟ್ ತಂಡಕ್ಕೆ ತರಬೇತಿ ನೀಡುವ ತರಬೇತುದಾರರು ತೀವ್ರವಾದ ಕೆಲಸದ ಹೊರೆಯನ್ನು ಅನುಭವಿಸಬೇಕಾಗುತ್ತದೆ. ರಾಷ್ಟ್ರೀಯ ತಂಡಗಳ ಪ್ರವಾಸದ ನಡುವೆ ಖಾಸಗಿ ಸಮಯ ಮೀಸಲಿಡುವ ಸವಾಲು ಎದುರಾಗುತ್ತವೆ. ಅವರು ಈ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಿದ್ದಾರೆಯೇ ಎಂದು ನೋಡಬೇಕಾಗಿದೆ.

ಮೂರು ವರ್ಷಗಳ ಅವಧಿಗೆ ಕೋಚ್​

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾತನಾಡಿ, ಬಿಸಿಸಿಐ ಕನಿಷ್ಠ ಮೂರು ವರ್ಷಗಳ ದೀರ್ಘಾವಧಿಯ ಒಪ್ಪಂದದೊಂದಿಗೆ ಹೊಸ ತರಬೇತುದಾರನನ್ನು ಹುಡುಕುತ್ತಿದೆ ಎಂದು ಹೇಳಿದ್ದಾರೆ. ವಿಭಜಿತ ಕೋಚಿಂಗ್ ಕಲ್ಪನೆಗೆ ಮಂಡಳಿಯು ಮುಕ್ತವಾಗಿದ್ದರೂ ಅವರು ವೈಯಕ್ತಿಕವಾಗಿ ಆಟದ ಎಲ್ಲಾ ಮೂರು ಸ್ವರೂಪಗಳಿಗೆ ಒಬ್ಬ ಮುಖ್ಯ ತರಬೇತುದಾರನನ್ನು ಬಯಸುತ್ತಾರೆ.

ಇದನ್ನೂ ಓದಿ: KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

ಭಾರತೀಯ ಕ್ರಿಕೆಟ್​​ನಲ್ಲಿ ವಿಭಿನ್ನ ಸ್ವರೂಪಗಳಿಗೆ ವಿಭಿನ್ನ ತರಬೇತುದಾರರ ಪೂರ್ವನಿದರ್ಶನವಿಲ್ಲ. ಇದಲ್ಲದೆ, ನಾವು ಎಲ್ಲಾ ಸ್ವರೂಪದ ಆಟಗಾರರನ್ನು ಹೊಂದಿರುವ ಹಲವಾರು ಆಟಗಾರರನ್ನು ಹೊಂದಿದ್ದೇವೆ. ಅಂತಿಮವಾಗಿ, ಇದು ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ನಿರ್ಧಾರವಾಗಿದೆ. ಅವರು ಏನು ನಿರ್ಧರಿಸುತ್ತಾರೋ ಅದನ್ನು ನಾನು ಕಾರ್ಯಗತಗೊಳಿಸಬೇಕಾಗಿದೆ” ಎಂದು ಜಯ್ ಶಾ ಹೇಳಿದ್ದರು.

2014 ರಲ್ಲಿ ಡಂಕನ್ ಫ್ಲೆಚರ್ ನಿರ್ಗಮಿಸಿದ ನಂತರ ಭಾರತಕ್ಕೆ ವಿದೇಶಿ ಕೋಚ್ ನೇಮಿಸಿಲ್ಲ. ವರದಿಗಳ ಪ್ರಕಾರ, ಈ ಹುದ್ದೆಗೆ ವಿದೇಶಿ ಅಭ್ಯರ್ಥಿಯನ್ನು ಪರಿಗಣಿಸಲು ಬಿಸಿಸಿಐಗೆ ಯಾವುದೇ ಸಮಸ್ಯೆ ಇಲ್ಲ.

ಸ್ಟೀಫನ್ ಫ್ಲೆಮಿಂಗ್ ಏಕೆ?

ಸ್ಟೀಫನ್ ಫ್ಲೆಮಿಂಗ್ ಐಪಿಎಲ್​​ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ತರಬೇತುದಾರರಾಗಿದ್ದಾರೆ ಮತ್ತು ಆಟಗಾರರಿಂದ ಅತ್ಯುತ್ತಮವಾದುದನ್ನು ಹೊರತೆಗೆಯುವಲ್ಲಿ ಹೆಸರುವಾಸಿಯಾಗಿದ್ದಾರೆ. ಆಟದ ಬಗ್ಗೆ ಅವರ ತಿಳುವಳಿಕೆ ಮತ್ತು ಔಟ್-ಆಫ್-ಬಾಕ್ಸ್ ವಿಧಾನಗಳು ಆಟಗಾರರಿಗೆ ಆಟವನ್ನು ಹೊಸ ದೃಷ್ಟಿಕೋನದಿಂದ ಸಮೀಪಿಸಲು ಸಹಾಯ ಮಾಡುತ್ತದೆ. ಭಾರತದ ಆಂತರಿಕ ಕ್ರಿಕೆಟ್ ವಲಯವು ಸ್ಟೀಫನ್ ಫ್ಲೆಮಿಂಗ್ ಅವರನ್ನು ಮೆಚ್ಚುತ್ತದೆ. ಅವರು ಭಾರತದ ಭವಿಷ್ಯದ ನಾಯಕರನ್ನು ಬೆಳೆಸಿದ ನಾಯಕತ್ವ ಕಾರ್ಯಕ್ರಮಕ್ಕೆ ಹೆಸರುವಾಸಿಯಾಗಿದ್ದಾರೆ.

Continue Reading

ಕರ್ನಾಟಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರ ಬೆನ್ನಲ್ಲೇ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

VISTARANEWS.COM


on

Victoria Hospital
Koo

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ವಜಾ ಅಗಿದ್ದ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ. ಕೆಲಸ ಕೂಲಿ ಕೇಳಿದ್ದಕ್ಕೆ ವಜಾ ಮಾಡಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ಸಿಬ್ಬಂದಿ ಪ್ರತಿಭಟನೆ ನಡೆಸಿ ಅಕ್ರೋಶ ಹೊರಹಾಕಿದ್ದರು. ಇದೀಗ ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರಿಂದ ಎಚ್ಚೆತ್ತುಕೊಂಡ ವಿಕ್ಟೋರಿಯಾ ಆಸ್ಪತ್ರೆ ಆಡಳಿತ ಮಂಡಳಿ, ವಜಾಗೊಂಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದೆ.

ಹೊಸ ಏಜೆನ್ಸಿ ಬಂದ ಹಿನ್ನೆಲೆ ಸುಮಾರು 55 ಮಂದಿಯನ್ನು ಕೈಬಿಡಲಾಗಿತ್ತು. ಏಜೆನ್ಸಿ ಹಾಗೂ ಆಡಳಿತ ಮಂಡಳಿ ನಿರ್ಲಕ್ಷ್ಯದ ಹಿನ್ನೆಲೆ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆ ಬೆನ್ನಲ್ಲೇ ಸಭೆ ನಡೆಸಿದ್ದ ಹಿರಿಯ ಅಧಿಕಾರಿಗಳು, ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಿದ್ದಾರೆ.

ಇದನ್ನೂ ಓದಿ | Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ವಜಾ ಮಾಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದ್ದು, ಕಳೆದ ಎರಡು ತಿಂಗಳ ಸಂಬಳ ಸಹ ಶೀಘ್ರ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು & ಸಂಶೋಧನಾ ಸಂಸ್ಥೆ ನಿರ್ದೇಶಕ ರಮೇಶ್ ಕೃಷ್ಣ ಮಾಹಿತಿ ನೀಡಿದ್ದಾರೆ.

ಕಳೆದ 20 ವರ್ಷಗಳಿಂದ ಸಿಬ್ಬಂದಿ ಡಿ ಗ್ರೂಪ್ ನೌಕರರಾಗಿ ಹೊರಗುತ್ತಿಗೆ ಆಧಾರದಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳು ಹಿಂದೆ ಏಜೆನ್ಸಿ ಬದಲಾದ ಹಿನ್ನೆಲೆ ಈ ಎಲ್ಲರನ್ನೂ ಕೈ ಬಿಡುವ ಮಾತು ಕೇಳಿಬಂದಿತ್ತು. ಆದರೆ ಕೆಲಸದಿಂದ ಕೈ ಬಿಡಲ್ಲ ಅಂತ ಹೇಳಿದ್ದ ಹೊಸ ಏಜೆನ್ಸಿ ಇವರೆಲ್ಲರನ್ನೂ ಮುಂದುವರಿಸಿತ್ತು. ಆದರೆ ಕೆಲಸ ಮಾಡಿಸಿಕೊಂಡಿತೇ ಹೊರತು ಸಂಬಳ ಮಾತ್ರ ನೀಡಿರಲಿಲ್ಲ.

ಇದನ್ನೂ ಓದಿ | Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಯಾಕೆ ಸಂಬಳ ನೀಡಿಲ್ಲ ಅಂತ ಕಳೆದ 4 ದಿನಗಳ ಹಿಂದೆ ಕೇಳಿದಾಗ ನಿಮ್ಮನ್ನು ಕೆಲಸದಿಂದ ಕೈಬಿಡಲಾಗಿದೆ ಅಂತ ಏಜೆನ್ಸಿ ಹೇಳಿದೆ. ಈ ವಿಷಯ ಕೇಳಿ ದಿಗ್ಭ್ರಾಂತರಾದ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ಪಷ್ಟನೆ ಕೇಳಲು ಮುಂದಾಗಿದ್ದರು. ಬಳಿಕ ವಿವಿ ಪುರಂ ಪೊಲೀಸರು ಅಲ್ಲಿಂದ ಎಲ್ಲರನ್ನೂ ಬೇರೆಡೆಗೆ ಕರೆದೊಯ್ದು ಪರಿಸ್ಥಿತಿ ತಿಳಿಗೊಳಿಸಿದ್ದರು. ಮರು ನೇಮಕ ಮಾಡಿದ್ದರಿಂದ ಕೆಲಸ ಕಳೆದುಕೊಂಡು ಕಂಗಾಲಾಗಿದ್ದ ಸಿಬ್ಬಂದಿ ನಿರಾಳರಾಗಿದ್ದಾರೆ.

Continue Reading
Advertisement
ಪ್ರಮುಖ ಸುದ್ದಿ3 mins ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್7 mins ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ59 mins ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ1 hour ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ1 hour ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ3 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ3 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ3 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ3 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ5 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20247 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202411 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ11 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು12 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ19 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌