Home Loan : 50 ಲಕ್ಷ ಗೃಹ ಸಾಲದ ಬಡ್ಡಿಯಲ್ಲಿ 30 ಲಕ್ಷ ಉಳಿಸಬೇಕೇ? ಆರ್​​ಬಿಐನ ಈ ಹೊಸ ನಿಯಮಗಳನ್ನು ಪಾಲಿಸಿ - Vistara News

ಪ್ರಮುಖ ಸುದ್ದಿ

Home Loan : 50 ಲಕ್ಷ ಗೃಹ ಸಾಲದ ಬಡ್ಡಿಯಲ್ಲಿ 30 ಲಕ್ಷ ಉಳಿಸಬೇಕೇ? ಆರ್​​ಬಿಐನ ಈ ಹೊಸ ನಿಯಮಗಳನ್ನು ಪಾಲಿಸಿ

ಆರ್​ಬಿಐ ಹೊಸ ನಿಯಮದ ಪ್ರಕಾರ ಸಾಲ ನೀಡಿದ ಬ್ಯಾಂಕ್​ಗಳು ಗೃಹ ಸಾಲ (Home Loan) ಪಡೆದವರಿಗೆ ಇಎಂಐ ಹೆಚ್ಚಳದಿಂದ ಆಗುವ ಲಾಭ ಹಾಗೂ ಅವಧಿ ಹೆಚ್ಚಿಸದೇ ಇರುವುದಿಂದ ಪಾವತಿಸಬೇಕಾದ ಹೆಚ್ಚುವರಿ ಬಡ್ಡಿಯ ಬಗ್ಗೆ ಮಾಹಿತಿ ನೀಡಬೇಕು.

VISTARANEWS.COM


on

Home Loan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಗೃಹ ಸಾಲದ (Home Loan) ಬಡ್ಡಿದರವು ಹೆಚ್ಚಾದಾಗ ಇಎಂಐಗಳಿಂದ ಸಾಲಗಾರರನ್ನು ರಕ್ಷಿಸಲು ಬ್ಯಾಂಕುಗಳು ಸಾಮಾನ್ಯವಾಗಿ ಸಾಲದ ಅವಧಿಯನ್ನು ಹೆಚ್ಚಿಸುತ್ತವೆ. ಆ ಕ್ಷಣಕ್ಕೆ ಇದು ಸಾಲಗಾರರಿಗೆ ಪೂರಕ ಎಂದು ಎನಿಸಿದರೂ ದೀರ್ಘ ಅವಧಿಯಲ್ಲಿ ಅದರ ಬಡ್ಡಿಯನ್ನು ಕಟ್ಟಲೇಬೇಕಾಗುತ್ತದೆ. ಈ ಸಮಸ್ಯೆಯಿಂದ ಸಾಲಗಾರರನ್ನು ಕಾಪಾಡಲು ರಿಸರ್ವ್​ ಬ್ಯಾಂಕ್​ ಇಂಡಿಯಾ (ಆರ್​ಬಿಐ) ಕೆಲವೊಂದು ಅನುಕೂಲಗಳನ್ನು ಮಾಡಿಕೊಟ್ಟಿದೆ. ಇಎಂಐ ಹೆಚ್ಚಿಸುವುದು, ಸಾಲದ ಅವಧಿಯನ್ನು ವಿಸ್ತರಿಸಲು ಅಥವಾ ಗೃಹ ಸಾಲಗಳ ಮೇಲಿನ ಬಡ್ಡಿದರಗಳನ್ನು ಮರುಹೊಂದಿಸುವ ಆಯ್ಕೆಗಳನ್ನು ಒಟ್ಟಿಗೆ ಬಳಸುವುದಕ್ಕೆ ಅವಕಾಶ ನೀಡಿದೆ. ಹಾಗಾದರೆ ಈ ನಿಯಮ ಹೇಗೆ ಸಾಲಗಾರರಿಗೆ ಹೇಗೆ ಅನುಕೂಲಕರ ಹಾಗೂ ಅದನ್ನು ಹೇಗೆ ಬಳಸಬಹುದು ಇದರಲ್ಲಿ ಹೊಸತೇನಿದೆ ಮತ್ತು ಇದು ಗೃಹ ಸಾಲಗಾರರಿಗೆ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ನೋಡೋಣ.

ಇಎಂಐಗಳ ಹೆಚ್ಚಳ ಅಥವಾ ಅವಧಿ ವಿಸ್ತರಣೆ- ಸಾಮಾನ್ಯ ಮಾನದಂಡ ಯಾವುದು?

ಬಡ್ಡಿ ಹೆಚ್ಚಾದಾಗ, ಬ್ಯಾಂಕ್​ಗಳು ಸಾಮಾನ್ಯವಾಗಿ ಇಎಂಐ ಹೆಚ್ಚಿಸುವ ಬದಲು ಸಾಲದ ಅವಧಿಯನ್ನು ವಿಸ್ತರಿಸಲು ಬಯಸುವೆ. ಇಲ್ಲಿಯವರೆಗೆ ದರ ಏರಿಕೆಯ ಸಂದರ್ಭದಲ್ಲಿ ಬ್ಯಾಂಕ್​​ಗಳಿಗೆ ಅವಧಿ ವಿಸ್ತರಣೆ ಬಿಟ್ಟರೆ ಬೇರೆ ಅವಕಾಶ ಇಲಿಲ್ಲ. ಬ್ಯಾಂಕ್​ಗಳು ಸಾಲಗಾರನ ಮರುಪಾವತಿ ಸಾಮರ್ಥ್ಯವನ್ನು ಪ್ರತ್ಯೇಕವಾಗಿ ಪರಿಶೀಲಿಸುವ ಬದಲು ಅವಧಿ ವಿಸ್ತರಣೆ ನಿರ್ಧಾರಗಳನ್ನು ಜಾರಿಗೆ ತರುತ್ತವೆ. ಸಾಲಗಾರರು ಇದರಿಂದ ತಕ್ಷಣ ಇಎಂಐ ಹೆಚ್ಚಳದ ತೊಂದರೆ ಅನುಭವಿಸುವುದಿಲ್ಲ. ಆದರೆ ಸಾಲಗಾರರಿಗೆ ವಿಸ್ತರಣೆ ಅವಧಿಯ ಬಡ್ಡಿ ಹೊರೆಯಾಗುತ್ತದೆ ಎಂಬುದು ಸತ್ಯ. ಇದಕ್ಕೆ ಉತ್ತಮ ಪರಿಹಾರವೇ ಇಎಂಐ ಹೆಚ್ಚಳ ಮಾಡುವುದು. ಇದು ಆರ್​ಬಿಐ ಮಾಡಿರುವ ಹೊಸ ಅನುಕೂಲ . ಸಾಲ ಕೊಟ್ಟ ಬ್ಯಾಂಕ್​ಗಳ ಬಳಿಗೆ ತೆರಳಿ ಅವಧಿ ವಿಸ್ತರಣೆ ಮಾಡುವ ಬದಲು ಇಎಂಐ ಹೆಚ್ಚಿಸುವಂತೆ ಕೋರಿಕೊಳ್ಳಬಹುದು.

ಗೃಹ ಸಾಲದ ಬಗ್ಗೆ ಆರ್​ಬಿಐನ ಹೊಸ ಆದೇಶ ಏನು?

ಆಗಸ್ಟ್ 18, 2023 ರಂದು ಬಿಡುಗಡೆಯಾದ ಅಧಿಸೂಚನೆಯಲ್ಲಿ, ಆರ್​ಬಿಐ ಸಾಲಗಾರರಿಗೆ ಇಎಂಐ ಹೆಚ್ಚಿಸಲು ಅಥವಾ ಸಾಲದ ಅವಧಿಯನ್ನು ವಿಸ್ತರಿಸಲು ಅಥವಾ ಗೃಹ ಸಾಲಗಳ ಮೇಲಿನ ಬಡ್ಡಿದರಗಳನ್ನು ಮರುಹೊಂದಿಸುವ ಸಮಯದಲ್ಲಿ ಎರಡೂ ಆಯ್ಕೆಗಳನ್ನು ಒಟ್ಟಿಗೆ ಬಳಸಲು ಅವಕಾಶ ನೀಡುವಂತೆ ಬ್ಯಾಂಕ್​​ಗಳಿಗೆ ಹೇಳಿದೆ. ‘

1) ಇಎಂಐ / ಅವಧಿ ಅಥವಾ ಎರಡರಲ್ಲೂ ಬದಲಾವಣೆಗೆ ಕಾರಣವಾಗುವ ಬೆಂಚ್​ಮಾರ್ಕ್​ ದರಗಳಲ್ಲಿನ ಬದಲಾವಣೆಯ ಸಂಭಾವ್ಯ ಪರಿಣಾಮದ ಕುರಿತು ಬ್ಯಾಂಕ್​ಗಳು ಸಾಲಗಾರರಿಗೆ ಮಾಹಿತಿ ನೀಡಬೇಕು.

2) ಬಡ್ಡಿ ಮರುಹೊಂದಿಸುವ ಸಮಯದಲ್ಲಿ, ಸಾಲಗಾರರಿಗೆ ಸ್ಥಿರ ಬಡ್ಡಿ ದರಕ್ಕೆ ಬದಲಾಯಿಸುವ ಆಯ್ಕೆಯನ್ನು ನೀಡಬೇಕು. ಫ್ಲೋಟಿಂಗ್ ಬಡ್ಡಿಯಿಂದ ಫಿಕ್ಸೆಡ್ ಗೆ ಬದಲಾಯಿಸಲು ಅನ್ವಯವಾಗುವ ಎಲ್ಲಾ ಶುಲ್ಕಗಳ ವಿವರಗಳನ್ನು ಸಾಲ ಮಂಜೂರಾತಿ ಪತ್ರದಲ್ಲಿ ಬಹಿರಂಗಪಡಿಸಬೇಕು.

3) ಸಾಲಗಾರರಿಗೆ ಸಾಲದ ಅವಧಿಯನ್ನು ವಿಸ್ತರಿಸುವ ಅಥವಾ ಇಎಂಐಗಳಲ್ಲಿ ಹೆಚ್ಚಳ ಅಥವಾ ಎರಡನ್ನೂ ಹೆಚ್ಚಿಸುವ ಆಯ್ಕೆಯನ್ನು ನೀಡಬೇಕು.

4) ಅವಧಿಯ ವಿಸ್ತರಣೆಯು ನೆಗೆಟಿವ್ ಅಮೋರ್ಟೈಸೇಶನ್​ ಕಾರಣವಾಗಬಾರದು ಎಂದು ಬ್ಯಾಂಕ್​ಗಳು ಖಚಿತಪಡಿಸಿಕೊಳ್ಳಬೇಕು. ಅಂದರೆ ಮಾಸಿಕ ಸಾಲ ಪಾವತಿಗಳು ಸಾಲದ ಸಂಚಿತ ಬಡ್ಡಿದರವನ್ನು (Accruing intrest rate ) ಸರಿದೂಗಿಸಲೇಬೇಕು.

ಈ ಮೇಲಿನ ಹೊಸ ನಿಯಮಗಳ ಪ್ರಕಾರ ಸಾಲಗಾರನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬ್ಯಾಂಕುಗಳು ಸಾಲದ ಕೆಲವು ಅಂಶಗಳ ಬಗ್ಗೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಗೃಹ ಸಾಲ ಪಡೆದವರಿಗೆ ಈ ವಿಚಾರದಲ್ಲಿ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಅವಕಾಶ ಲಭಿಸಿದೆ.

ಇಲ್ಲಿಯವರೆಗೆ ವಸೂಲಿ ಮಾಡಲಾದ ಒಟ್ಟು ಬಡ್ಡಿ ಮತ್ತು ಅಸಲು, ಉಳಿದ ಸಾಲದ ವಾರ್ಷಿಕ ಬಡ್ಡಿದರ, ಇಎಂಐ ಮೊತ್ತ ಮತ್ತು ಪ್ರತಿ ತ್ರೈಮಾಸಿಕದ ನಂತರ ಉಳಿದಿರುವ ಇಎಂಐಗಳ ಸಂಖ್ಯೆಯನ್ನು ವಿವರಿಸುವ ಸುಲಭವಾಗಿ ಅರ್ಥಮಾಡಿಕೊಳ್ಳಬಹುದಾದ ಸಾಲದ ಹೇಳಿಕೆಯನ್ನು ಹಂಚಿಕೊಳ್ಳುವಂತೆ ಆರ್​ಬಿಐಗಳಿಗೆ ಬ್ಯಾಂಕುಗಳಿಗೆ ನಿರ್ದೇಶನ ನೀಡಿದೆ.

ಹೊಸ ನಿಯಮ: ಇದು ನಿಮಗೆ ಹೇಗೆ ಸಹಾಯ ಮಾಡುತ್ತದೆ?

ಬಡ್ಡಿ ದರವನ್ನು ಹೆಚ್ಚಿಸಿದಾಗ ಸಾಲಗಾರರಿಗೆ ಆಯ್ಕೆ ಸಿಗುತ್ತದೆ. ಸಾಲಗಾರರಿಗೆ ತಮ್ಮ ಸಾಲದ ಅವಧಿಯನ್ನು ವಿಸ್ತರಿಸಲು, ಇಎಂಐ ಹೆಚ್ಚಿಸಲು ಅಥವಾ ಎರಡೂ ಆಯ್ಕೆಗಳ ಹೋಗಲು ಬಯಸುತ್ತವೆಯೇ ಎಂದು ನಿರ್ಧರಿಸಲು ಬ್ಯಾಂಕುಗಳು ಅವಕಾಶವನ್ನು ನೀಡಬೇಕಾಗುತ್ತದೆ.

ಇಲ್ಲೊಂದು ಉದಾಹರಣೆಯಿದೆ

ನೀವು 2020ರಲ್ಲಿ 20 ವರ್ಷಗಳವರೆಗೆ (240 ತಿಂಗಳುಗಳು) 7% ಬಡ್ಡಿದರದಲ್ಲಿ 50 ಲಕ್ಷ ರೂ.ಗಳ ಗೃಹ ಸಾಲವನ್ನು ಪ್ರಾರಂಭಿಸಿದ್ದೀರಿ ಎಂದು ಭಾವಿಸೋಣ. ಸಾಲ ತೆಗೆದುಕೊಳ್ಳುವ ಸಮಯದಲ್ಲಿ ನಿಮ್ಮ ಮಾಸಿಕ ಇಎಂಐ 38,765 ರೂ. ಒಟ್ಟಾರೆ ಬಡ್ಡಿ 43.04 ಲಕ್ಷ ರೂಪಾಯಿ. ಮೂರು ವರ್ಷಗಳ ನಂತರ ಬಡ್ಡಿದರವನ್ನು 9.25% ಕ್ಕೆ ಹೆಚ್ಚಿಸಲಾಗುತ್ತದೆ ಎಂದು ಭಾವಿಸೋಣ. ಹೊಸ ಆರ್​ಬಿಐ ಆದೇಶದ ಪ್ರಕಾರ, ಬಡ್ಡಿದರವನ್ನು ಮರುಹೊಂದಿಸುವಾಗ ಬ್ಯಾಂಕುಗಳು ನಿಮ್ಮ ಇಎಂಐ ಅಥವಾ ಅವಧಿಯನ್ನು ಹೆಚ್ಚಿಸಲು ಅಥವಾ ಎರಡರ ಸಂಯೋಜನೆಯನ್ನು ಬಳಸಲು ನಿಮಗೆ ಆಯ್ಕೆ ನೀಡಬೇಕಾಗುತ್ತದೆ.

ನಿಮ್ಮ 20 ವರ್ಷಗಳ ಸಾಲವನ್ನು ಉಳಿದ 17 ವರ್ಷಗಳ ಅವಧಿಯೊಳಗೆ ಪೂರ್ಣಗೊಳಿಸಲು ನೀವು ಬಯಸಿದರೆ (3 ವರ್ಷಗಳು ಕಳೆದಿವೆ ಎಂದು ಪರಿಗಣಿಸಿ), ನಿಮ್ಮ ಇಎಂಐ ತಿಂಗಳಿಗೆ 44,978 ರೂ.ಗೆ ಏರುತ್ತದೆ. ಸಾಲದ ಅವಧಿಯ ಕೊನೆಯಲ್ಲಿ ನೀವು ಒಟ್ಟು 55.7 ಲಕ್ಷ ರೂ.ಗಳ ಬಡ್ಡಿಯನ್ನು ಪಾವತಿಸಬೇಕಾಗುತ್ತದೆ.

ಇಎಂಐ ಹೆಚ್ಚಾದರೆ ಮತ್ತು ಸಾಲದ ಅವಧಿ ಒಂದೇ ಆಗಿದ್ದರೆ ಈ ರೀತಿ ಆಗುತ್ತದೆ

ಗೃಹ ಸಾಲ ( ಲಕ್ಷ ರೂಪಾಯಿಗಳಲ್ಲಿ)25 5075 1
240 ತಿಂಗಳಿಗೆ ಶೇ 7 ಬಡ್ಡಿಯಂತೆ ಇಎಂಐ(ರೂಪಾಯಿಗಳಲ್ಲಿ)19,382 ರೂ.38,765 ರೂ.58,147 ರೂ.77,530 ರೂ.
ಶೇ7 ರಂತೆ ಪಾವತಿಸುವ ಒಟ್ಟು ಬಡ್ಡಿ 21.52 ಲಕ್ಷ43.04ಲಕ್ಷ64.55 ಲಕ್ಷ86.07 ಲಕ್ಷ
36 ತಿಂಗಳಿಗೆ ಪಾವತಿ ಮಾಡಿದ ಬಡ್ಡಿ (ಲಕ್ಷ ರೂಪಾಯಿ)5.06 ಲಕ್ಷ10.12 ಲಕ್ಷ15.18 ಲಕ್ಷ20.24 ಲಕ್ಷ
3ವರ್ಷಗಳ ಬಳಿಕ ಉಳಿಕೆ ಸಾಲ (ಲಕ್ಷಗಳಲ್ಲಿ)23.08 ಲಕ್ಷ6.16 ಲಕ್ಷ69.25 ಲಕ್ಷ92.33 ಲಕ್ಷ
17 ವರ್ಷಕ್ಕೆ ಶೇ. 9.25ರಂತೆ ಇಎಂಐ22,485 ರೂ44,978 ರೂ67,466 ರೂ89,956 ರೂ
ಶೇ. 9.25ರಂತೆ ಪಾವತಿಸಬೇಕಾದ ಬಡ್ಡಿ 22.79 ಲಕ್ಷ45.58
ಲಕ್ಷ
68.38
ಲಕ್ಷ
91.17
ಲಕ್ಷ
ಇಎಂಐ ಹೆಚ್ಚಿಸಿದರೆ ಪಾವತಿಸಬೇಕಾದ ಒಟ್ಡು ಬಡ್ಡಿ27.85 ಲಕ್ಷ55.7 ಲಕ್ಷ83.56 ಲಕ್ಷ1.11 ಕೋಟಿ.

ಇಎಂಐ ಹೆಚ್ಚಿಸದೇ ಲೋನ್​ ಪಾವತಿ ಅವಧಿ ಹೆಚ್ಚಿಸಿದರೆ

ಗೃಹ ಸಾಲ25 ಲಕ್ಷ50 ಲಕ್ಷ75 ಲಕ್ಷ1 ಕೋಟಿ
ಪೂರ್ಣ ಅವಧಿಗೆ ಇಎಂಐ19,382 ರೂ.38,765 ರೂ.58147 ರೂ.77,530 ರೂ.
ಇಎಂಐ ಹೆಚ್ಚಿಸದಿದ್ದರೆ ವಿಸ್ತರಣೆಯಾಗುವ ಅವಧಿ321 ತಿಂಗಳು321 ತಿಂಗಳು321 ತಿಂಗಳು321 ತಿಂಗಳು
ಪಾವತಿಸಬೇಕಾದ ಪರಿಷ್ಕೃತ ಬಡ್ಡಿ39.3 ಲಕ್ಷ78.4 ಲಕ್ಷ1.17 ಕೋಟಿ1.56 ಕೋಟಿ
ಒಟ್ಟು ಪಾವತಿ ಮಾಡುವ ಬಡ್ಡಿ44.36 ಲಕ್ಷ88.52 ಲಕ್ಷ1.32 ಕೋಟಿ1.7 ಕೋಟಿ
ಇಎಂಐ ಹೆಚ್ಚಿಸಿದರೆ ಆಗುವ ಲಾಭ16.5 ಲಕ್ಷ ರೂ.33 ಲಕ್ಷ ರೂ.49.5 ಲಕ್ಷ ರೂ.66 ಲಕ್ಷ ರೂ.

ಸಾಲದ ಇಎಂಐ ಅನ್ನು 38,765 ರೂ.ಗೆ ಉಳಿಸಿಕೊಳ್ಳಲು ಆರಿಸಿಕೊಂಡರೆ ಸಾಲ ಪ್ರಾರಂಭವಾದಾಗ ಇದ್ದಂತೆಯೇ – ಸಾಲವು 321 ತಿಂಗಳುಗಳು ಅಥವಾ 26 ವರ್ಷಗಳು ಮತ್ತು 10 ತಿಂಗಳುಗಳವರೆಗೆ ಮುಂದುವರಿಯುತ್ತದೆ. ಸಾಲದ ಅವಧಿಯ ಕೊನೆಯಲ್ಲಿ ನಿಮ್ಮ ಒಟ್ಟಾರೆ ಬಡ್ಡಿ ಪಾವತಿ 88.52 ಲಕ್ಷ ರೂ. ನೀವು ಹೆಚ್ಚಿನ ಇಎಂಐ ಬದಲಿಗೆ ಹೆಚ್ಚಿನ ಅವಧಿಯನ್ನು ಆರಿಸಿಕೊಂಡರೆ ನೀವು 33 ಲಕ್ಷ ರೂ.ಗಳ ಹೆಚ್ಚುವರಿ ಬಡ್ಡಿದರ ಪಾವತಿಸಬೇಕಾಗುತ್ತದೆ.

ನೀವು ಹೋಮ್ ಲೋನ್ ಇಎಂಐ ಹೆಚ್ಚಿಸಬೇಕೇ ಅಥವಾ ಅವಧಿಯನ್ನು ವಿಸ್ತರಿಸಬೇಕೇ?

ಬಡ್ಡಿದರವು ಹೆಚ್ಚಾದಾಗ ಇಎಂಐ ಅಥವಾ ಸಾಲದ ಅವಧಿಯನ್ನು ಹೆಚ್ಚಿಸುವುದು ಉತ್ತಮ ಆಯ್ಕೆಯೇ ಎಂದು ಗೃಹ ಸಾಲಗಾರ ಮೊದಲು ನಿರ್ಧರಿಸಬೇಕು. ಇಎಂಐಗಳನ್ನು ಹೆಚ್ಚಿಸಲು ನಿರ್ಧರಿಸಿದರೆ ಮರುಪಾವತಿ ಸಾಮರ್ಥ್ಯದೊಳಗೆ ಇದೆ ಎಂದು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಅವಧಿ ಹೆಚ್ಚಿಸಲು ತೀರ್ಮಾನಿಸಿದರೆ ದೀರ್ಘಾವಧಿಯಲ್ಲಿ ಪಾವತಿಸಬೇಕಾದ ಹೆಚ್ಚುವರಿ ಬಡ್ಡಿ ಪಾವತಿಸಲು ಸಾಧ್ಯವೇ ಎಂದು ತಿಳಿದುಕೊಳ್ಳಬೇಕು.

ಇದನ್ನೂ ಓದಿ : Money Guide : ಸೆಪ್ಟೆಂಬರ್​ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್​ ಖಾತೆ ನಿಷ್ಕ್ರಿಯ ಖಚಿತ

ನಿಮ್ಮ ದೈನಂದಿನ ವೆಚ್ಚಗಳ ಮೇಲೆ ಪರಿಣಾಮ ಬೀರದೆ ಸಾಧ್ಯವಾದಷ್ಟು ಪೂರ್ವಪಾವತಿ ಮಾಡಲು ಪ್ರಯತ್ನಿಸಿ. ಪೂರ್ವಪಾವತಿ ಹೆಚ್ಚಾದಷ್ಟೂ, ಬ್ಯಾಲೆನ್ಸ್ ಮೊತ್ತ ಕಡಿಮೆಯಾಗುತ್ತದೆ ಹಾಗೂ ಬಡ್ಡಿ ಶುಲ್ಕಗಳು ನಿಯಂತ್ರಣದಲ್ಲಿರುತ್ತವೆ.

ಬೋಸನ್​ ಮೊತ್ತವನ್ನು ಬಳಸಿ

ಸಾಲಗಾರರು ಸಾಧ್ಯವಾದಷ್ಟು ಸಾಲಗಳನ್ನು ಪೂರ್ವಪಾವತಿ ಮಾಡಲು ವಾರ್ಷಿಕ ಬೋನಸ್ ಅಥವಾ ಅನಿರೀಕ್ಷಿತ ಲಾಭಗಳನ್ನು ಬಳಸಬೇಕು. ಸಾಲದ ಪೂರ್ವಪಾವತಿ ಮಾಡುವ ಮೊದಲು ತಮ್ಮ ಆರ್ಥಿಕ ಸ್ಥಿತಿಯನ್ನು ನಿರ್ಣಯಿಸಬೇಕು. ಆದಾಯ ಹೆಚ್ಚಾದರೆ, ಇಎಂಐ ಮೊತ್ತದಲ್ಲಿ ಹೆಚ್ಚಳವನ್ನು ಆರಿಸಿಕೊಳ್ಳಿ, ಏಕೆಂದರೆ ಇದು ಸಾಲ ಮರುಪಾವತಿಯನ್ನು ವೇಗಗೊಳಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

VISTARANEWS.COM


on

ಬೆಂಗಳೂರು: ಕನ್ನಡ ಭಾಷೆಗೆ ಶುದ್ಧ ಸುದ್ದಿವಾಹಿನಿ ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಶುಭಾರಂಭಗೊಂಡಿದೆ. ಬಿಜಿಎಸ್‌ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಇಂದು ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಜನರ ಕಷ್ಟಕಾರ್ಪಣ್ಯಗಳಿಗೆ ಧ್ವನಿಯಾಗಲಿ ಮತ್ತು ನ್ಯಾಯಪರವಾಗಲಿ ಎಂದು ಹೇಳಿದರು.

ಯಾವುದೇ ಸಂಸ್ಥೆಯನ್ನು ಕಟ್ಟಿಬೆಳೆಸುವುದು ಸುಲಭವಲ್ಲ. ಶ್ರೀ ಧರ್ಮೇಶ್‌ ಅವರು ಪಿಎನ್‌ ಎಸ್‌ ವಿಸ್ತಾರ ಚಾನೆಲ್‌ ಗೆ ಬಂಡವಾಳ ಹೂಡಿದ್ದಾರೆ. ಅವರ ಸಾಹಸವನ್ನು ಮೆಚ್ಚಲೇಬೇಕು. ಹೊಸ ಚಾನೆಲ್‌ ನಲ್ಲಿ ಕೆಲಸ ನಿರ್ವಹಿಸುವ ಎಲ್ಲ ಸಿಬ್ಬಂದಿ ಸಂಸ್ಥೆಯ ಗೌರವಕ್ಕೆ ಚ್ಯುತಿ ಬಾರದಂತೆ ಧರ್ಮೇಶ್‌ ಅವರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡುವುಂತೆ ಕರೆ ನೀಡಿದರು.


ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ಎಚ್.ಜಿ. ಪವಿತ್ರಾಗೌಡ ಅವರು ಜವಬ್ದಾರಿ ವಹಿಸಿಕೊಂಡಿದ್ದಾರೆ. ವೃತ್ತಿಯಿಂದ ಉದ್ಯಮಿ ಮತ್ತು ಪ್ರವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿರುವ ಅವರು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಶ್ರೀಸಾಮಾನ್ಯನ ಧ್ವನಿಯಾಗಲು ಪಣ ತೊಟ್ಟಿದ್ದಾರೆ. ಅವರ ನಿರೀಕ್ಷೆಗಳಿಗೆ ತಕ್ಕಂತೆ ಸಿಬ್ಬಂದಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನಲ್ಲಿ ಅನುಭವಿ ಪತ್ರಕರ್ತರ ತಂಡ ಇರುವುದು ಕಂಡು ಬರುತ್ತಿದೆ. ಸಂಸ್ಥೆಗೆ ಕೆಟ್ಟ ಹೆಸರು ಬಾರದಂತೆ ಮನಸ್ಸು ಮೆಚ್ಚುವಂತಹ ಕೆಲಸ ಮಾಡುತ್ತೀರಿ ಎಂದು ಭಾವಿಸುವುದಾಗಿಯೂ ಪರಮ ಪೂಜ್ಯ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಚುಟುಕಾಗಿ ತಮ್ಮ ಅನಿಸಿಗಳನ್ನು ಹಂಚಿಕೊಂಡ ಸಿಇಓ ಪವಿತ್ರಾ ಗೌಡ ಅವರು, ಎಲ್ಲರೂ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ಹಿಸುತ್ತಾ ಬೆಂಬಲ ನೀಡುವಂತೆ ಕೋರಿದರು.
ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ವ್ಯವಸ್ಥಾಪಕ ನಿರ್ದಶಕರಾದ ಧರ್ಮೇಶ್‌ ಸೇರಿದಂತೆ ಬಿಜೆಪಿ ಹಿರಿಯ ನಾಯಕ ಎನ್‌.ಆರ್‌.ರಮೇಶ್‌, ಇಂಡಿಯನ್‌ ಎಕ್ಸ್‌ಪ್ರೆಕ್ಸ್‌ನ ಜನರಲ್‌ ಮ್ಯಾನೇಜರ್‌ ಸುರೇಶ್‌ ಅವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Continue Reading

ಸುವಚನ

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

VISTARANEWS.COM


on

ಜೈ ಶ್ರೀ ಗುರುದೇವ್
ಜಗತ್ತಿನಲ್ಲಿ ತಂತ್ರಜ್ಞಾನದ ನೆರೆವಿನಿಂದ ಎಲ್ಲವೂ ಕೈಗೆಟಕುತ್ತಿದೆ. ಇದೇ ತಂತ್ರಜ್ಞಾನವನ್ನು ಬಳಸಿ ಆರೋಗ್ಯಕರ ಸಮಾಜದ ಸ್ಥಾಪನೆಗೆ ಪಿಎನ್‌ಎಸ್‌ ವಿಸ್ತಾರ ಚಾನಲ್‌ ಮುಂದಾಗಿರುವುದು ಶ್ಲಾಘನೀಯ. ಸಮಾಜದ ಈ ಸುಧಾರಣೆಯ ದಾರಿಯಲ್ಲಿ ಮಾಧ್ಯಮಗಳ ಪಾತ್ರ ಹೆಚ್ಚಿದೆ. ಅನ್ಯಾಯಗಳನ್ನು ವಿರೋಧಿಸಿ ನ್ಯಾಯ ಒದಗಿಸುವುದು ಸಾಮಾಜಿಕ ನ್ಯಾಯ ದೊರಕಿಸುವುದು ಹಾಗೂ ಬಡವರು, ದೀನ-ದಲಿತರು, ರೈತರು ಹಾಗೂ ಶೋಷಿತರ ದನಿಯಾಗಬೇಕಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ಇದೇ ಧ್ಯೇಯದೊಂದಿಗೆ ನಿಮ್ಮ ಮುಂದೆ ಬರುತ್ತಿದೆ.
ವಿದ್ಯುನ್ಮಾನ ಕ್ಷೇತ್ರದಲ್ಲಿ ಈವರೆಗೆ ನಡೆದುಕೊಂಡು ಬಂದ ಸಂಪ್ರದಾಯ ಕೊಡವಿ ಧನಾತ್ಮಕ ಪ್ರಯೋಗಗಳ ಮೂಲಕ ಸಮಾಜವನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ ಹೆಜ್ಜೆ ಇಟ್ಟಿರುವುದು ಅಭಿನಂದನೀಯ. ರಾಜ್ಯದ ಮೂಲೆ ಮೂಲೆಗಳ ಸಮಸ್ಯೆ, ಕುಂದುಕೊರತೆಗಳನ್ನು ಪ್ರಸಾರ ಮಾಡಿ ಪರಿಹಾರ ಒದಗಿಸುವ ಜವಾಬ್ದಾರಿ ನಮ್ಮ ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ ಆದ್ಯತೆಯಾಗಿದೆ. ಪಕ್ಷ, ಪಂಥ, ಪಂಗಡಗಳಿಂದ ಪ್ರತ್ಯೇಕವಾಗಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ನುರಿತ ತಂಡ ಸೈನಿಕರಂತೆ ಕಾರ್ಯನಿರ್ವಹಿಸಲಿದ್ದಾರೆ.
ನಮ್ಮ ಚಾನೆಲ್‌ ವಿಶ್ಲೇಷಣೆ, ಮನರಂಜನೆ ಹಾಗೂ ಮಾಹಿತಿ ನೀಡುವ ಮುಖೇನ ನಾಡಿನ ಮೂಲೆ ಮೂಲೆ ತಲುಪಲು ಕಾರ್ಯೋನ್ಮುಖವಾಗಲಿದೆ. ಯಾವುದೇ ವಿಚಾರದಲ್ಲಿ ರಾಜಿಯಾಗದೇ ಜನಪರವಾಗಿ ಕೆಲಸ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ನಮ್ಮ ಧ್ಯೇಯವಾಗಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ  ಈ ಧ್ಯೇಯವನ್ನು ಸಮಸ್ತ ಕನ್ನಡನಾಡಿನ ನಾಗರಿಕರು ಪ್ರೋತ್ಸಾಹಿಸುತ್ತಾರೆ ಎಂದು ಭಾವಿಸುತ್ತೇವೆ. ನಾಡಿನ ಸಮಸ್ತ ಜನರಿಗೆ ಪಿಎನ್‌ಎಸ್‌ ವಿಸ್ತಾರ ಬಳಗದಿಂದ ಅನಂತಾನಂತ ಧನ್ಯವಾದಗಳು.
ಶುಭ ಆಶೀರ್ವಾದಗಳೊಂದಿಗೆ
ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ
ವ್ಯವಸ್ಥಾಪಕ ನಿರ್ದೇಶಕರು, ಬಿಜಿಎಸ್‌ & ಎಸ್‌ಜೆಬಿ ಗ್ರೂಪ್‌ ಆಫ್‌ ಇನ್ಸ್‌ಟಿಟ್ಯೂಷನ್‌ ಮತ್ತು ಆಸ್ಪತ್ರೆಗಳು

Continue Reading

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for november 4 2024

ಚಂದ್ರನು ಸೋಮವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೀನ ರಾಶಿಯವರಿಗೆ ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-11-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ 23:23 ವಾರ: ಸೋಮವಾರ
ನಕ್ಷತ್ರ: ಅನುರಾಧ 08:03 ಯೋಗ: ಶೋಭನ 11:42
ಕರಣ: ತೈತುಲ 10:47 ಅಮೃತಕಾಲ: ಮಧ್ಯರಾತ್ರಿ 12:20 ರಿಂದ 02:03

ಸೂರ್ಯೋದಯ : 06:12   ಸೂರ್ಯಾಸ್ತ : 05:54

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ
1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠತೆ.ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಒತ್ತಡ.ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ.ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ.ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ.ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ.ಸಾಮಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ.ಉದ್ಯೋಗಿಗಳಿಗೆ ಒತ್ತಡ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ.ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ.ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ.ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ.ಉದ್ಯೋಗಿಗಳಿಗೆ ಶುಭ ಫಲ.ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ.ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ.ಅಗತ್ಯ ವಸ್ತುಗಳ ಖರೀದಿ.ಸಹದ್ಯೋಗಿಗಳ ಬೆಂಬಲ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಮಾನಸಿಕ ಆರೋಗ್ಯ ಸದೃಢ.ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ.ಉದ್ಯೋಗಿಗಳಿಗೆ ಸಹಕಾರ.ಆರೋಗ್ಯ ಉತ್ತಮ.ಕೌಟುಂಬಿಕ ಕಲಹಗಳಿಗೆ ದ್ವನಿ ಆಗುವುದು ಬೇಡ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ.ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ.ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ.ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಯಶಸ್ಸು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ.ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ.ಆರ್ಥಿಕ ಪ್ರಗತಿ ಸಾಧಾರಣ.ಹರಟೆಯಿಂದ ಕಾಲ ಹರಣ ಮಾಡುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು.ಸಕರಾತ್ಮಕ ಆಲೋಚನೆ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ.ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ.ಆರೋಗ್ಯ ಉತ್ತಮಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ.ಆರೋಗ್ಯ ಮಧ್ಯಮ.ಆರ್ಥಿಕ ಪ್ರಗತಿ ಸಾಧಾರಣ..ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಬಾಗಿ, ಪ್ರಯಾಣ ಮಾಡುವ ಸಾಧ್ಯತೆ.ಆರ್ಥಿಕ ಪ್ರಗತಿ ಉತ್ತಮ.ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ.ಯಾರೊಂದಿಗೂ ಅತಿಯಾದ ಸಲುಗೆ ಬೇಡ.ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ.ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Latest2 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest3 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ3 ಗಂಟೆಗಳು ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ3 ಗಂಟೆಗಳು ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

Latest3 ಗಂಟೆಗಳು ago

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

ಅವಿಭಾಗೀಕೃತ3 ಗಂಟೆಗಳು ago

ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

Latest4 ಗಂಟೆಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest4 ಗಂಟೆಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest5 ಗಂಟೆಗಳು ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest6 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌