Money Guide : SWP ಎಂದರೇನು? ಫಿಕ್ಸೆಡ್‌ ಡೆಪಾಸಿಟ್‌ಗಿಂತ ಇದು ಹೆಚ್ಚು ಲಾಭದಾಯಕವೇ? - Vistara News

ವಾಣಿಜ್ಯ

Money Guide : SWP ಎಂದರೇನು? ಫಿಕ್ಸೆಡ್‌ ಡೆಪಾಸಿಟ್‌ಗಿಂತ ಇದು ಹೆಚ್ಚು ಲಾಭದಾಯಕವೇ?

ಮ್ಯೂಚುವಲ್‌ ಫಂಡ್‌ ಹೂಡಿಕೆಯಲ್ಲಿ ( Money Guide ) ಎಸ್‌ ಡಬ್ಲ್ಯುಪಿ (ಸಿಸ್ಟಮ್ಯಾಟಕ್‌ ವಿತ್‌ ಡ್ರಾವಲ್‌ ಪ್ಲಾನ್)‌ ಕೂಡ ಚಾಲ್ತಿಯಲ್ಲಿದೆ. ಇದರ ವಿಶೇಷತೆ ಬಗ್ಗೆ ಮನಿ ಪ್ಲಸ್‌ನಲ್ಲಿ ತಜ್ಞ ವಿನೋದ್‌ ತಂತ್ರಿ ಅವರು ವಿವರಿಸಿದ್ದಾರೆ.

VISTARANEWS.COM


on

mutual fund
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮ್ಯೂಚುವಲ್‌ ಫಂಡ್‌ಗಳಲ್ಲಿ ಸಿಪ್‌ ಅಥವಾ (Money Guide) ಸಿಸ್ಟಮ್ಯಾಟಿಕ್‌ ಇನ್ವೆಸ್ಟ್‌ ಮೆಂಟ್‌ ಪ್ಲಾನ್‌ ಎನ್ನುವುದು ಜನಜನಿತ. ಪ್ರತಿ ತಿಂಗಳು ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುತ್ತಾ ಹೋಗುವುದು ಹಾಗೂ ಕೊನೆಯಲ್ಲಿ ಹೂಡಿಕೆಯನ್ನು ಹಿಂತೆಗೆದುಕೊಳ್ಳುವುದು. ಆದರೆ ಎಸ್‌ ಡಬ್ಲ್ಯು ಪಿ ಎನ್ನುವುದೂ ಇದೆ. ಎಸ್‌ಡಬ್ಲ್ಯುಪಿ ಎಂದರೆ ಸಿಸ್ಟಮ್ಯಾಟಿಕ್‌ ವಿತ್‌ ಡ್ರಾವಲ್‌ ಪ್ಲಾನ್‌ ( Systematic Withdrawal Plan) ಮೂಲಕ ಮ್ಯೂಚುವಲ್‌ ಫಂಡ್‌. ಹಾಗಾದರೆ ಇದರ ಲಾಭವೇನು ಎನ್ನುತ್ತೀರಾ? ಇದಕ್ಕಾಗಿ ವಿಸ್ತಾರ ಮನಿ ಪ್ಲಸ್‌ನಲ್ಲಿ ನಾಲೆಡ್ಜ್‌ ಬೆಲ್‌ ಸಿಇಒ ವಿನೋದ್‌ ತಂತ್ರಿ ಅವರು ವಿವರಿಸಿದ್ದಾರೆ.

ನಿಮ್ಮಲ್ಲಿ ಇಡಿಯಾಗಿ ಹೂಡಿಕೆ ಮಾಡಲು ಹಣ ಇದ್ದರೆ ಅದನ್ನು ಮ್ಯೂಚುವಲ್‌ ಫಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡಿ, ನಿಯಮಿತವಾಗಿ ಪ್ರತಿ ತಿಂಗಳು ಹಣ ಪಡೆಯಬಹುದು. ಯೋಜನೆಯ ಮುಕ್ತಾಯಕ್ಕೆ ಇಡಿಯಾಗಿ ಮೊತ್ತವೂ ಸಿಗುತ್ತದೆ. ಅಂದರೆ ಇಲ್ಲಿ ಒಂದು ಕಡೆ ಪ್ರತಿ ತಿಂಗಳು ಹಣ ವಿತ್‌ ಡ್ರಾವಲ್‌ ಮಾಡುತ್ತೀರಿ. ಮತ್ತೊಂದು ಕಡೆ ನಿಮ್ಮ ಹೂಡಿಕೆ ಕೂಡ ಬೆಳೆಯುತ್ತಾ ಇರುತ್ತದೆ. ಆದ್ದರಿಂದ ಇದು ಲಾಭದಾಯಕ ಎನ್ನುತ್ತಾರೆ ವಿನೋದ್‌ ತಂತ್ರಿ.

ಜನ ರಿಯಲ್‌ ಎಸ್ಟೇಟ್‌ನಲ್ಲಿ ಸಾಮಾನ್ಯವಾಗಿ ಹೂಡಿಕೆ ಮಾಡುತ್ತಾರೆ. ಆದರೆ ಇದರಲ್ಲಿ ಲಿಕ್ವಿಡಿಟಿ ಕಡಿಮೆ. ಆದರೆ ಎಸ್‌ ಡಬ್ಲ್ಯುಪಿನಲ್ಲಿ ಒಂದು ಸಲ ಒಟ್ಟಿಗೆ ಹೂಡಿಕೆ ಮಾಡಲು ಅನುಕೂಲ ಇರುವವರು ಇನ್ವೆಸ್ಟ್‌ ಮಾಡಬಹುದು. 10-20-30 ಲಕ್ಷ ರೂ. ಇದೆ ಎನ್ನುವವರು ಇದರಲ್ಲಿ ಹೂಡಿಕೆ ಮಾಡಬಹುದು. ಬಳಿಕ ಪ್ರತಿ ತಿಂಗಳೂ ಮೊದಲೇ ನಿಗದಿತವಾದ ಹಣವನ್ನು ಪಡೆಯಬಹುದು. ಇದರಿಂದ ಮಾಸಿಕ ಆದಾಯ ಸಿಗುತ್ತದೆ. ಇದು ಮಾತ್ರವಲ್ಲದೆ ಪ್ರತಿ ತಿಂಗಳೂ ನಿಮ್ಮ ಹೂಡಿಕೆ ಕೂಡ ಬೆಳೆಯುತ್ತಿರುತ್ತದೆ. ಆ ಹಣ ಕೊನೆಯಲ್ಲಿ ನಿಮಗೆ ಸಿಗುತ್ತದೆ. ಇಲ್ಲಿ ನೀವು ಎಷ್ಟು ಹಣವನ್ನು ವಿತ್‌ ಡ್ರಾವಲ್‌ ಮಾಡುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ.

ಚಾರಿತ್ರಿಕ ದಾಖಲೆಗಳನ್ನು ಗಮನಿಸಿದರೆ, ಎಸ್‌ಡಬ್ಲ್ಯುಪಿನಲ್ಲಿ ಹೂಡಿಕೆ ಮಾಡಿದವರಿಗೆ ಪ್ರತಿ ತಿಂಗಳಿನ ಆದಾಯದ ಜತೆಗೆ ಕೊನೆಯಲ್ಲಿ ಅವರ ಅಸಲು ಮೊತ್ತವು ಇಮ್ಮಡಿಯಾಗಿದೆ ಎನ್ನುತ್ತಾರೆ ವಿನೋದ್‌ ತಂತ್ರಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಲೈಫ್‌ಸ್ಟೈಲ್

Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಅಕ್ಷಯ ತೃತೀಯವನ್ನು ಈ ಬಾರಿ ಮೇ 10ರಂದು ಆಚರಿಸಲಾಗುತ್ತಿದ್ದು, ಈ ದಿನ ಮನೆಮನೆಯಲ್ಲಿ ಸಮೃದ್ಧಿ (Akshaya Tritiya 2024) ತುಂಬ ಬೇಕಾದರೆ ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ಸಂಗತಿಗಳಿವೆ. ಅವುಗಳು ಯಾವುದು ಗೊತ್ತೇ? ಈ ಲೇಖನ ಓದಿ.

VISTARANEWS.COM


on

By

Akshaya Tritiya-2024
Koo

ಸಮೃದ್ಧಿಯ ಸಂಕೇತ ಅಕ್ಷಯ ತೃತೀಯವನ್ನು (Akshaya Tritiya 2024) ಮಂಗಳಕರ ದಿನವೆಂದು ಕರೆಯಲಾಗುತ್ತದೆ. ಈ ದಿನ ಏನೇ ಖರೀದಿ ಮಾಡಿದರೂ ಅದು ದ್ವಿಗುಣವಾಗುತ್ತದೆ ಎಂಬ ನಂಬಿಕೆ ಇದೆ. ಈ ವರ್ಷ ಮೇ 10ರಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಈ ದಿನ ಮಾಡಬೇಕಾದ (dos) ಮತ್ತು ಮಾಡಬಾರದ (dont) ಕೆಲವು ಸಂಗತಿಗಳಿವೆ. ಈ ಬಗ್ಗೆ ತಿಳಿದುಕೊಂಡು ಅನುಸರಿಸಿದರೆ ಮನೆಮನೆಯಲ್ಲೂ ಸುಖ ಶಾಂತಿ ಸಮೃದ್ಧಿಯನ್ನು ತುಂಬಿಸಿಕೊಳ್ಳಬಹುದು.

ಅಕ್ತಿ ಅಥವಾ ಅಖಾ ತೀಜ್ ಎಂದೂ ಕರೆಯಲ್ಪಡುವ ಅಕ್ಷಯ ತೃತೀಯವನ್ನು ಹಿಂದೂಗಳು ಮತ್ತು ಜೈನರು ಆಚರಿಸುತ್ತಾರೆ. ಇದು ‘ಅಂತ್ಯವಿಲ್ಲದ ಸಮೃದ್ಧಿಯ ಮೂರನೇ ದಿನ’ ಎಂದು ನಂಬಲಾಗುತ್ತದೆ.


ಈ ದಿನವನ್ನು ತಮ್ಮನ್ನು ತೊರೆದ ಪ್ರೀತಿಪಾತ್ರರನ್ನು ನೆನಪಿಸಲಾಗುತ್ತದೆ. ಉಪವಾಸ, ದಾನ ಮತ್ತು ಪರಸ್ಪರ ಸಹಾಯ ಮಾಡುವ ಮೂಲಕ ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಹೊಸ ಉದ್ಯಮ, ಮದುವೆಗಳು, ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಅಕ್ಷಯ ತೃತೀಯವನ್ನು ಮಂಗಳಕರವೆಂದು ಪರಿಗಣಿಸಲಾಗಿದೆ.

ಅಕ್ಷಯ ತೃತೀಯದ ಮಹತ್ವ

ಅಕ್ಷಯ ತೃತೀಯವು ಕೆಲವು ಪ್ರದೇಶದ ಮಹಿಳೆಯರಿಗೆ ತಮ್ಮ ಜೀವನದಲ್ಲಿ ಅಥವಾ ಭವಿಷ್ಯದಲ್ಲಿ ಮದುವೆಯಾಗುವ ಪುರುಷರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವ ಹಬ್ಬವಾಗಿದೆ.

ಈ ದಿನ ದ್ರೌಪದಿಗೆ ಅಕ್ಷಯ ಪಾತ್ರೆ ಎಂಬ ಮಾಂತ್ರಿಕ ಬಟ್ಟಲನ್ನು ಕೃಷ್ಣ ನೀಡಿದ ಎನ್ನುವ ಕಥೆ ಇದೆ. ಅವಳು ತನ್ನ ಪತಿಯರೊಂದಿಗೆ ವನವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಅವರ ಮನೆಗೆ ಅತಿಥಿಯಾಗಿ ಕೋಪಕ್ಕೆ ಹೆಸರುವಾಸಿಯಾದ ದೂರ್ವಾಸ ಋಷಿ ತಮ್ಮ ಶಿಷ್ಯರೊಂದಿಗೆ ಆಗಮಿಸುತ್ತಾರೆ. ಆಗ ದ್ರೌಪದಿಯ ಬಳಿ ಅವರಿಗೆ ನೀಡಲು ಏನೂ ಇರುವುದಿಲ್ಲ. ಕೃಷ್ಣ ಅಲ್ಲಿಗೆ ಬಂದು ಅವರ ಬಟ್ಟಲಿನಲ್ಲಿದ್ದ ಒಂದು ಅಗುಳು ಅನ್ನವನ್ನು ತಿಂದು ಋಷಿ ಮುನಿಗಳೆಲ್ಲ ಸಂತೃಪ್ತರಾಗುವಂತೆ ಮಾಡಿದ. ಅಲ್ಲದೇ ಋಷಿಯು ಪಾಂಡವರನ್ನು ಶಪಿಸದಂತೆ ತಡೆದ. ಈ ದಿನವು ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನ ಜನ್ಮದಿನವೆಂದೂ ನಂಬಲಾಗಿದೆ. ಈ ಬಾರಿ ಅಕ್ಷಯ ತೃತೀಯವನ್ನು ಮೇ 10ರಂದು ಆಚರಿಸಲಾಗುತ್ತಿದ್ದು, ಮನೆಯಲ್ಲಿ ಸಮೃದ್ಧಿ ತುಂಬ ಬೇಕಾದರೆ ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ಸಂಗತಿಗಳಿವೆ.


ಏನು ಮಾಡಬಹುದು?

ಚಿನ್ನವನ್ನು ಖರೀದಿಸಿ

ಅಕ್ಷಯ ತೃತೀಯದ ಪವಿತ್ರ ಸಂದರ್ಭದಲ್ಲಿ ಚಿನ್ನವನ್ನು ಖರೀದಿಸಬಹುದು. ಯಾಕೆಂದರೆ ಅದು ನಿಮ್ಮನ್ನು ಶ್ರೀಮಂತಗೊಳಿಸುತ್ತದೆ ಅಥವಾ ನಿಮ್ಮ ಬಳಿ ಇರುವ ಹಣವನ್ನು ದುಪ್ಪಟ್ಟು ಮಾಡಲು ಸಹಾಯ ಮಾಡುತ್ತದೆ.

ಹೊಸ ವ್ಯವಹಾರ ಪ್ರಾರಂಭ

ಅಕ್ಷಯ ತೃತೀಯ ಹೊಸ ಉದ್ಯಮವನ್ನು ಪ್ರಾರಂಭಿಸಲು ಒಳ್ಳೆಯ ದಿನ ಎಂದು ನಂಬಲಾಗಿದೆ. ಉದಾಹರಣೆಗೆ ಹೊಸ ವ್ಯಾಪಾರವನ್ನು ಪ್ರಾರಂಭಿಸುವುದು ಅಥವಾ ಕಾರು ಖರೀದಿಸುವುದನ್ನು ಈ ದಿನ ಮಾಡಬಹುದು.

ಹೂಡಿಕೆ

ಅಕ್ಷಯ ತೃತೀಯದಂದು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಮಂಗಳಕರ ದಿನವಾಗಿದೆ. ಯಾಕೆಂದರೆ ಇದು ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗಿದೆ.

ಆಧ್ಯಾತ್ಮಿಕ ಚಟುವಟಿಕೆ

ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಪ್ರಾರ್ಥನೆ, ಧ್ಯಾನ ಮತ್ತು ಯಜ್ಞದಂತಹ ಆಧ್ಯಾತ್ಮಿಕ ಚಟುವಟಿಕೆಗಳನ್ನು ಮಾಡಬೇಕು.

ಸಾತ್ವಿಕ ಆಹಾರ

ಈ ದಿನ ವಿಷ್ಣುವನ್ನು ಪೂಜಿಸುವಾಗ ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಸದೆ ಶುದ್ಧ ಸಾತ್ವಿಕ ಆಹಾರವನ್ನೇ ದೇವರಿಗೆ ಅರ್ಪಿಸಿ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ಖರೀದಿಗೆ ಮುನ್ನ ದರದ ಜೊತೆಗೆ ಇದು ತಿಳಿದಿರಲಿ

ಏನು ಮಾಡಬಾರದು?
ಕತ್ತಲೆ ದೂರ ಮಾಡಿ

ಅಕ್ಷಯ ತೃತೀಯದಂದು ಮನೆಯ ಕೋಣೆಯನ್ನು ಕತ್ತಲೆ ಮಾಡಬೇಡಿ. ಈ ಅದೃಷ್ಟದ ದಿನದಂದು ಅದೃಷ್ಟದ ಬೆಳಕು ನಿಮ್ಮ ಮನೆಯ ಪ್ರತಿಯೊಂದು ಕೋಣೆಯನ್ನು ಬೆಳಗಿಸಲಿ ಮತ್ತು ಯಾವುದೇ ಕೋಣೆ ಕತ್ತಲೆಯಾಗದಂತೆ ನೋಡಿಕೊಳ್ಳಿ.

ಒಟ್ಟಿಗೆ ಪೂಜಿಸಿ

ಗಣೇಶ ಮತ್ತು ಲಕ್ಷ್ಮಿ ದೇವರನ್ನು ಪ್ರತ್ಯೇಕವಾಗಿ ಪೂಜಿಸಬೇಡಿ. ಈ ದಿನ ಈ ಎರಡೂ ದೇವರನ್ನು ಒಟ್ಟಿಗೆ ಪ್ರಾರ್ಥಿಸುವುದು ಹೆಚ್ಚು ಸಮೃದ್ಧಿಯನ್ನು ತರುತ್ತದೆ.

ಬರಿಗೈಯಲ್ಲಿ ಬರಬೇಡಿ

ಅಕ್ಷಯ ತೃತೀಯದಂದು ಶಾಪಿಂಗ್ ಮಾಡಲು ಹೋದಾಗ ಏನನ್ನಾದರೂ ಖರೀದಿಸಿ. ಚಿನ್ನ ಅಥವಾ ಬೆಳ್ಳಿ ಅಲ್ಲದಿದ್ದರೂ, ಲೋಹದ ಆಭರಣವನ್ನು ಪಡೆಯುವುದು ನಿಮ್ಮ ಮನೆಗೆ ಸಂಪತ್ತನ್ನು ತರುತ್ತದೆ.

ಪವಿತ್ರ ದಾರ

ಅಕ್ಷಯ ತೃತೀಯದಂದು ಹೆಚ್ಚು ಹೊತ್ತು ಪವಿತ್ರ ದಾರವನ್ನು ಧರಿಸುವುದು ಒಳ್ಳೆಯದಲ್ಲ ಎಂಬ ಅಭಿಪ್ರಾಯವಿದೆ.

Continue Reading

ಕರ್ನಾಟಕ

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Gold Rate Today:ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತ್ತು ಶನಿವಾರ ಚಿನ್ನದ ಬೆಲೆಗಳು ಯಥಾಸ್ಥಿತಿ ಕಾಯ್ದುಕೊಂಡಿದ್ದವು.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತ್ತು ಶನಿವಾರ ಚಿನ್ನದ ಬೆಲೆಗಳು ಯಥಾಸ್ಥಿತಿ ಕಾಯ್ದುಕೊಂಡಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,605ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,840 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,050 ಮತ್ತು ₹6,60,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,205 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,640 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,050 ಮತ್ತು ₹7,20,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ62,00072,200
ಮುಂಬಯಿ66,05072,200
ಬೆಂಗಳೂರು66,05072,050
ಚೆನ್ನೈ66,10072,110

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.
1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.
2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.
3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.
4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ:Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Continue Reading

ವಾಣಿಜ್ಯ

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

Rekha Jhunjhunwala: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ ಅವರ ಪತ್ನಿ ರೇಖಾ ಜುಂಜುನ್‌ವಾಲಾ ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ.

VISTARANEWS.COM


on

Rekha Jhunjhunwala
Koo

ಮುಂಬೈ: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ (Rakesh Jhunjhunwala) ಅವರ ಪತ್ನಿ ರೇಖಾ ಜುಂಜುನ್‌ವಾಲಾ (Rekha Jhunjhunwala) ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. 

ರೇಖಾ ಜುಂಜುನ್ವಾಲಾ ಅವರು 2024ರ ಮಾರ್ಚ್ 31ರ ವೇಳೆಗೆ ಟಾಟಾ ಗ್ರೂಪ್ ಸಂಸ್ಥೆಯಲ್ಲಿ ಶೇಕಡಾ 5.35ರಷ್ಟು ಪಾಲನ್ನು ಹೊಂದಿದ್ದರು. ಅಂದರೆ ಇದರ ಮೌಲ್ಯ 16,792 ಕೋಟಿ ರೂ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿ 15,986 ಕೋಟಿ ರೂ.ಗೆ ತಲುಪಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಗಳಲ್ಲಿನ ಚಂಚಲತೆ ಮತ್ತು ಸ್ಪರ್ಧಾತ್ಮಕ ತೀವ್ರತೆಯು ಟೈಟಾನ್‌ನ ಲಾಭಾಂಶದ ಮೇಲೆ ಪರಿಣಾಮ ಬೀರುತ್ತದೆ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಯಾರು ಈ ರೇಖಾ ಜುಂಜುನ್‌ವಾಲಾ?

ರಾಕೇಶ್‌ ಜುಂಜುನ್‌ವಾಲಾ ಅವರು ದೇಶದ ಖ್ಯಾತ ಹೂಡಿಕೆದಾರರು. ಷೇರು ಮಾರುಕಟ್ಟೆಯ ಬಿಗ್‌ ಬುಲ್‌, ಭಾರತದ ವಾರೆನ್‌ ಬಫೆಟ್‌ ಎಂದೇ ಖ್ಯಾತಿಯಾಗಿದ್ದ ಅವರು 2022ರಲ್ಲಿ ನಿಧನರಾದರು. ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರ ಮಗನಾಗಿದ್ದ ಜುಂಜುನ್‌ವಾಲಾ ಅವರು ಕೇವಲ 5 ಸಾವಿರ ರೂ. ಹೂಡಿಕೆಯಿಂದ ಷೇರು ವ್ಯವಹಾರವನ್ನು ಆರಂಭಿಸಿ, ಅಂತಿಮವಾಗಿ ಷೇರು ಪೇಟೆಯ ಸರದಾರರಾಗಿ 5.8 ಶತಕೋಟಿ ಡಾಲರ್‌ (ಸುಮಾರು 45 ಸಾವಿರ ಕೋಟಿ ರೂ.) ಸಂಪತ್ತಿಗೆ ಒಡೆಯರಾಗಿದ್ದರು. ಸದ್ಯ, ರೇಖಾ ಜುಂಜುನ್‌ವಾಲಾ ಅವರ ಆಸ್ತಿ ಮೌಲ್ಯ 58 ಸಾವಿರ ಕೋಟಿ ರೂ. ಆಗಿದೆ ಎಂದು ತಿಳಿದುಬಂದಿದೆ.

2023ರ ಡಿಸೆಂಬರ್‌ ಕ್ವಾರ್ಟರ್‌ನಲ್ಲಿ ರೇಖಾ ಜುಂಜುನ್‌ವಾಲಾ 26 ಕಂಪನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಇದರ ಮೌಲ್ಯ 4.9 ಬಿಲಿಯನ್ ಡಾಲರ್‌ನಷ್ಟಿತ್ತು. ಆದ್ರೆ ಇದರಲ್ಲಿ 13 ಕಂಪನಿಗಳು ಮಾತ್ರ ರೇಖಾ ಜುಂಜುನ್‌ವಾಲಾ ಎಷ್ಟು ಷೇರುಗಳನ್ನು ಹೊಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಿವೆ. ಆದರೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ಇದರಲ್ಲಿ ಐದು ಕಂಪನಿಗಳ ಸ್ಟಾಕ್‌ಗಳನ್ನು ರೇಖಾ ಮಾರಾಟ ಮಾಡಿದ್ದರು.

ಟಾಟಾ ಮೋಟಾರ್ಸ್, ಇಂಡಿಯನ್ ಹೋಟೆಲ್ಸ್, ಟೈಟಾನ್, ನಜಾರಾ ಟೆಕ್ ಮತ್ತು ಡೆಲ್ಟಾ ಕಾರ್ಪ್‌ನಂತಹ ದೊಡ್ಡ ಕಂಪನಿಗಳಲ್ಲಿ ರೇಖಾ ಅವರು ಷೇರುಗಳನ್ನು ಹೊಂದಿದ್ದಾರೆ. ಜತೆಗೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ತಮ್ಮ ಪೋರ್ಟ್‌ಫೊಲಿಯೊಗೆ ಕೆಎಂ ಶುಗರ್‌ ಮಿಲ್ಸ್‌ ಲಿಮಿಟೆಡ್‌ ಸ್ಟಾಕ್‌ ಸೇರಿಸಿದ್ದರು. ಈ ಕಂಪನಿಯಲ್ಲಿ ರೇಖಾ ಸುಮಾರು 5 ಲಕ್ಷ ಷೇರುಗಳನ್ನು ಅಥವಾ ಶೇಕಡಾ 0.54ರಷ್ಟು ಮೌಲ್ಯವನ್ನು ಹೊಂದಿದ್ದಾರೆ. ಇವರು ಹೂಡಿಕೆ ಮಾಡುವ ಹೆಚ್ಚಿನ ಕಂಪನಿಗಳು ಮಲ್ಟಿಬ್ಯಾಗರ್ಸ್ ರಿಟರ್ನ್‌ ನೀಡುತ್ತವೆ.

ಇದನ್ನೂ ಓದಿ: ಸಮುದ್ರ ಕಾಣಲ್ಲ ಎಂದು 118 ಕೋಟಿ ರೂ.ಗೆ ಎದುರಿನ ಮನೆ ಖರೀದಿಸಿದ ರೇಖಾ ಜುಂಜುನ್‌ವಾಲಾ!

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Gold Rate Today: ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ (Gold Market) ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸ್ಥಿರವಾಗಿದೆ. ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.60, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹826ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,260 ಮತ್ತು 1 ಕಿಲೋಗ್ರಾಂಗೆ ₹82,600 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,00071,980
ಮುಂಬಯಿ65,85071,830
ಬೆಂಗಳೂರು65,85071,830
ಚೆನ್ನೈ66,00072,000

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?


ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ:Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading
Advertisement
Lok Sabha Election-2024
ಕರ್ನಾಟಕ8 mins ago

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ49 mins ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

IPL 2024
ಕ್ರೀಡೆ49 mins ago

IPL 2024 : ಪೃಥ್ವಿ ಶಾ ಗರ್ಲ್​​ ಫ್ರೆಂಡ್​​​ ನಿಧಿಯನ್ನು ತಬ್ಬಿ ಅಭಿನಂದಿಸಿದ ಶಾರುಖ್​ ಖಾನ್​​

CM Siddaramaiah
ಪ್ರಮುಖ ಸುದ್ದಿ59 mins ago

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

Arvind Kejriwal
ದೇಶ1 hour ago

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Female foeticide
ಪ್ರಮುಖ ಸುದ್ದಿ2 hours ago

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Summer Holiday Fashion
ಫ್ಯಾಷನ್2 hours ago

Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

Woman
ಪ್ರಮುಖ ಸುದ್ದಿ2 hours ago

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ49 mins ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌