ಜೆರೋಧಾ ಸಂಸ್ಥಾಪಕರಾದ ಕಾಮತ್‌ ಸಹೋದರರ ಗಳಿಕೆ ಎಷ್ಟು ಕೋಟಿ ರೂ.? - Vistara News

ಕರ್ನಾಟಕ

ಜೆರೋಧಾ ಸಂಸ್ಥಾಪಕರಾದ ಕಾಮತ್‌ ಸಹೋದರರ ಗಳಿಕೆ ಎಷ್ಟು ಕೋಟಿ ರೂ.?

Zerodha: ಝೆರೋಧಾ ಸಂಸ್ಥಾಪಕರ ವೇತನದ ಮಾಹಿತಿ ಬಹಿರಂಗಗೊಂಡಿದೆ. ಸಹೋದರರಾದ ನಿತಿನ್ ಕಾಮತ್ ಮತ್ತು ನಿಖಿಲ್ ಕಾಮತ್ ವಾರ್ಷಿಕ ವೇತನವಾಗಿ ತಲಾ 72 ಕೋಟಿ ರೂ. ಪಡೆದುಕೊಂಡಿದ್ದಾರೆ.

VISTARANEWS.COM


on

kamath brothers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಮೂಲದ ಆನ್‌ಲೈನ್‌ ಬ್ರೋಕರೇಜ್ ಸಂಸ್ಥೆ ಜೆರೋಧಾ (Zerodha) ಸಂಸ್ಥಾಪಕರಾದ ನಿತಿನ್ ಕಾಮತ್ ಮತ್ತು ನಿಖಿಲ್ ಕಾಮತ್ (Nithin Kamath, Nikhil Kamath) 2023ರ ಹಣಕಾಸು ವರ್ಷದಲ್ಲಿ 195.4 ಕೋಟಿ ರೂ.ಗಳನ್ನು ಪರಿಹಾರವಾಗಿ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಕಾಮತ್ ಸಹೋದರರು ಜೆರೋಧಾ ಪೂರ್ಣಾವಧಿ ನಿರ್ದೇಶಕರೂ ಹೌದು. ಈ ಪೈಕಿ ನಿತಿನ್ ಕಾಮತ್ ಮತ್ತು ನಿಖಿಲ್ ಕಾಮತ್ ತಮ್ಮ ವಾರ್ಷಿಕ ವೇತನವಾಗಿ ತಲಾ 72 ಕೋಟಿ ರೂ. ಪಡೆದುಕೊಂಡಿದ್ದಾರೆ.

ಅತ್ಯಧಿಕ ಸಂಭಾವನೆ

ಈ ಮೂಲಕ ಭಾರತದ ಸ್ಟಾರ್ಟ್ಅಪ್ ಸಂಸ್ಥಾಪಕರ ಪೈಕಿ ಅತೀ ಹೆಚ್ಚು ಸಂಭಾವನೆ ಪಡೆದುಕೊಂಡವರು ಎನ್ನುವ ಹೆಗ್ಗಳಿಕೆಗೆ ಕಾಮತ್‌ ಸಹೋದರರು ಪಾತ್ರರಾಗಿದ್ದಾರೆ. ಓಯೋದ ರಿತೇಶ್ ಅಗರ್ವಾಲ್ 2023ರ ಹಣಕಾಸು ವರ್ಷದಲ್ಲಿ 12 ಕೋಟಿ ರೂ.ಗಳ ವೇತನದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಸಿಇಒ ನಿತಿನ್ ಕಾಮತ್ ಅವರ ಪತ್ನಿ ಮತ್ತು ಕಂಪನಿಯ ಪೂರ್ಣಾವಧಿ ನಿರ್ದೇಶಕಿ ಸೀಮಾ ಪಾಟೀಲ್ ಈ ವರ್ಷ 36 ಕೋಟಿ ರೂ. ವೇತನ ಪಡೆದುಕೊಂಡಿದ್ದಾರೆ.

ಇದೇ ಅವಧಿಯಲ್ಲಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣು ಮಾಧವ್ ಒಟ್ಟು 15.4 ಕೋಟಿ ರೂ.ಗಳ ಪ್ಯಾಕೇಜ್ ಪಡೆದಿದ್ದಾರೆ. ಕಂಪೆನಿಯು ನೌಕರರಿಗಾಗಿ ಈ ವರ್ಷ 623 ಕೋಟಿ ರೂ.ಗಳನ್ನು ವಿನಿಯೋಗಿಸಿದೆ. ಆ ಪೈಕಿ 380 ಕೋಟಿ ರೂ.ಗಳನ್ನು ನಿರ್ದೇಶಕರ ವೇತನವಾಗಿ ನೀಡಲಾಗಿದೆ. ಉಳಿದ 236 ಕೋಟಿ ರೂ.ಗಳನ್ನು ನಗದಾಗಿ ಎಂಪ್ಲಾಯ್‌ ಸ್ಟಾಕ್‌ ಓನರ್‌ಶಿಪ್‌ ಪ್ಲ್ಯಾನ್ಸ್‌ (ESOPs)ಗೆ ಉಪಯೋಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಮೂಲದ ಈ ಟೆಕ್ ದೈತ್ಯ ಸಂಸ್ಥೆಯ ಉದ್ಯೋಗಿಗಳ ಪ್ರಯೋಜನ ವೆಚ್ಚವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 35.7ರಷ್ಟು ಗಮನಾರ್ಹ ಹೆಚ್ಚಳವನ್ನು ದಾಖಲಿಸಿದೆ. ಇದಕ್ಕಾಗಿ ಈ ವರ್ಷ 623 ಕೋಟಿ ರೂ. ವಿನಿಯೋಗಿಸಲಾಗಿದೆ. ಕಳೆದ ವರ್ಷ ಇದಕ್ಕಾಗಿ 459 ಕೋಟಿ ರೂ. ಖರ್ಚು ಮಾಡಲಾಗಿತ್ತು. ಜೆರೋಧಾ ಭಾರತದ ಅತ್ಯಂತ ಲಾಭದಾಯಕ ಸ್ಟಾರ್ಟ್‌ ಅಪ್‌ಗಳ ಪೈಕಿ ಪ್ರಮುಖವಾದುದು.

ಲಾಭದಲ್ಲಿ ಏರಿಕೆ

ಕಳೆದ ವರ್ಷಕ್ಕೆ ಹೋಲಿಸಿದರೆ ಕಂಪೆನಿಯ ನಿವ್ವಳ ಲಾಭ ಈ ವರ್ಷ ಶೇ. 39ರಷ್ಟು ಏರಿಕೆ ಕಂಡಿದೆ. ಕಳೆದ ವರ್ಷ 2,094 ಕೋಟಿ ರೂ. ಇದ್ದರೆ ಈ ವರ್ಷ 2,907 ಕೋಟಿ ರೂ.ಗೆ ಹೆಚ್ಚಳವಾಗಿದೆ. ಕಂಪನಿಯ ಮೌಲ್ಯ 30,000 ಕೋಟಿ ರೂ. ಇದು ವಾರ್ಷಿಕ ಲಾಭದ ಅಂದಾಜು 10 ಪಟ್ಟು. ಇತ್ತೀಚಿನ ದಿನಗಳಲ್ಲಿ ಸತತ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ, ಮಾರುಕಟ್ಟೆಯಲ್ಲಿ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ. ಈ ಬ್ರೋಕರೇಜ್ ಸಂಸ್ಥೆಯನ್ನು 2010ರಲ್ಲಿ ಸ್ಥಾಪಿಸಲಾಗಿತ್ತು. ಕಂಪನಿಯು ಪ್ರಸ್ತುತ ದೇಶದಲ್ಲಿ ಎರಡನೇ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿದೆ. ಇದನ್ನು 65 ಲಕ್ಷಕ್ಕೂ ಹೆಚ್ಚು ಮಂದಿ ಬಳಸುತ್ತಿದ್ದಾರೆ. ಮೊದಲ ಸ್ಥಾನದಲ್ಲಿ 66.30 ಲಕ್ಷ ಸಕ್ರಿಯ ಬಳಕೆದಾರರನ್ನು ಹೊಂದಿರುವ Groww ಇದೆ.

ಇದನ್ನೂ ಓದಿ: NR Narayana Murthy: “70 ಅಲ್ಲ, 90 ಗಂಟೆ ಕೆಲಸ…ʼʼ ನಾರಾಯಣ ಮೂರ್ತಿ ಇನ್ನೊಂದು ಬಾಂಬ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Karnataka Weather Forecast : ಭಾನುವಾರ 17 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ (Heavy Rain News) ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ (Karnataka Weather Forecast) ಅಬ್ಬರಿಸಲಿದ್ದಾನೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಮೂರು ದಿನ ಮೀನುಗಾರರಿಗೆ ಎಚ್ಚರಿಕೆಯನ್ನು ಕೊಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

CET/NEET: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ.

VISTARANEWS.COM


on

UPSC
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ. 3000 ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಇಂಟರ್ ನೆಟ್ ಬ್ಯಾಂಕಿಂಗ್, ಡೆಬಿಟ್/ಕೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿದ್ದರಿಂದ ಇಡೀ ಪ್ರಕ್ರಿಯೆ ಸರಳವಾಯಿತು. ಇದರಿಂದ ಪೋಷಕರಿಗೂ ಸಂತಸವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಚಲನ್‌ ಡೌನ್‌ ಲೋಡ್ ಮಾಡಿಕೊಂಡು ಬ್ಯಾಂಕಿಗೆ ಹೋಗಿ ಶುಲ್ಕ ಪಾವತಿಸುವ ವ್ಯವಸ್ಥೆ ಕೂಡ‌ ಇದ್ದು, ಅದರ ಮೂಲಕವೂ‌ 2000 ಮಂದಿ (ರಾತ್ರಿ 8ಕ್ಕೆ) ಶುಲ್ಕ ಪಾವತಿಸಿದ್ದಾರೆ. ಆನ್ ಲೈನ್ ಮೂಲಕ ಒಂದು ಸಾವಿರ ಮಂದಿ ಪಾವತಿಸಿದ್ದಾರೆ ಎಂದು ವಿವರಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ಕೆಲವರು‌ ತಮ್ಮ ಗರಿಷ್ಠ ಮೊತ್ತದ ಶುಲ್ಕ‌ವನ್ನೂ (6.09 ಲಕ್ಷ) ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ‌ ಮಾಡಿದ್ದಾರೆ. ಅಭ್ಯರ್ಥಿಗಳು ಅಥವಾ ಅವರ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು‌ ಹೇಳಿದರು. ಎಚ್ ಡಿಎಫ್ ಸಿ ಬ್ಯಾಂಕ್ ತನ್ನ ಗ್ರಾಹರಿಗೆ ಒಮ್ಮೆಗೇ ಗರಿಷ್ಠ 50 ಲಕ್ಷ ರೂಪಾಯಿ ವರೆಗೆ ವರ್ಗಾಯಿಸಲು ಅವಕಾಶ ನೀಡಿದೆ. ಇದೇ ರೀತಿ ಇತರ ಬ್ಯಾಂಕ್ ಗಳೂ ಈ ನಿಟ್ಟಿನಲ್ಲಿ ಪ್ರಯತ್ನ‌ ನಡೆಸುತ್ತಿದ್ದು ಇದರಿಂದ ಎನ್ಆರ್ ಐ ಮತ್ತು ಮ್ಯಾನೇಜ್ಮೆಂಟ್ ಸೀಟುಗಳ ಶುಲ್ಕವನ್ನು ಒಮ್ನೆಗೆ ಪಾವತಿಸಲು ಅನುಕೂಲವಾಗಲಿದೆ ಎಂದಿದ್ದಾರೆ. ಹೊಸ ವ್ಯವಸ್ಥೆಯಿಂದಾಗಿ ಬ್ಯಾಂಕ್ ರಜೆ ಇತ್ಯಾದಿ ಕಾರಣಕ್ಕೆ ಶುಲ್ಕ ಪಾವತಿ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ದೂರುಗಳು ಕಡಿಮೆ ಆಗಬಹುದು. ನಾಳೆ ಭಾನುವಾರ ಇದ್ದರೂ ಶುಲ್ಕ ಪಾವತಿಗೆ ಯಾವ ಸಮಸ್ಯೆಯೂ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಯುಪಿಐ ಪಾವತಿ ವ್ಯವಸ್ಥೆ ಮೂಲಕವೂ ಶುಲ್ಕ ಪಾವತಿ ಮಾಡಬಹುದಾಗಿದೆ. ಒಟ್ಟಾರೆ ಪಾವತಿ ವ್ಯವಸ್ಥೆಯನ್ನು ಜನಸ್ನೇಹಿ‌ ಮಾಡಿರುವ ಕಾರಣಕ್ಕೆ ತಾಂತ್ರಿಕ ಸಮಸ್ಯೆಗಳು ಕಡಿಮೆ ಆಗುವ ವಿಶ್ವಾಸವಿದೆ‌ ಎಂದರು.

ಸರ್ವರ್ ಸಮಸ್ಯೆ

ಚಾಯ್ಸ್ ಆಯ್ಕೆ ನಂತರ ಶುಲ್ಕ ಪಾವತಿ ಮಾಡಲು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಮ್ಮೆಗೇ ಪ್ರಯತ್ನ ನಡೆಸಿದ್ದರಿಂದ ಕೆಲವೊಮ್ಮೆ ಸರ್ವರ್ ನಿಧಾನ/ ಇನ್ನು ಕೆಲವೊಮ್ಮೆ ಸ್ಥಗಿತಗೊಂಡ ಪ್ರಸಂಗ ಕೂಡ ನಡೆಯಿತು. ತಾಂತ್ರಿಕ ಸಿಬ್ಬಂದಿ ಸರಿ ಮಾಡಿ ನಂತರ ಸಹಜ ಸ್ಥಿತಿಗೆ ತಂದರು.

Continue Reading

ಕರ್ನಾಟಕ

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆಯಾಗಿದ್ದಾರೆ. ಸರ್ಕಾರಿ ಭರವಸೆಗಳ ಸಮಿತಿಯು ಒಟ್ಟು 9 ಮಂದಿ ಸದಸ್ಯರನ್ನೊಳಗೊಂಡಿದೆ

VISTARANEWS.COM


on

By

TA Saravana elected as new chairman of government assurances committee
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಶಾಸಕ ಟಿ. ಎ. ಶರವಣ (TA Sharavana) ಅವರು ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4) ರ ಮೇರೆಗೆ ಸಭಾಪತಿ ನೇಮಕ ಮಾಡಿದ್ದಾರೆ. ವಿಧಾನ ಪರಿಷತ್ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ. ಎ. ಶರವಣ ಅವರನ್ನು ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಸರ್ಕಾರಿ ಭರವಸೆಗಳ ಸಮಿತಿಯು ಒಟ್ಟು 9 ಮಂದಿ ಸದಸ್ಯರನ್ನೊಳಗೊಂಡಿದೆ. ಪ್ರಕಾಶ್‌ ಕೆ ರಾಥೋಡ್‌, ಶರವಣ ಟಿ.ಎ, ನಿರಾಣಿ ಹಣಮಂತ್‌ ರುದ್ರಪ್ಪ, ಯು.ಬಿ. ವೆಂಕಟೇಶ್‌, ಪ್ರತಾಫ್‌ ಸಿಂಹ ನಾಯಕ್‌ ಕೆ, ಡಿ.ಎಸ್‌ ಅರುಣ್‌ ಹಾಗೂ ಕೆ.ಎಸ್‌ ನವೀನ್‌, ಮಂಜುನಾಥ್‌ ಭಂಡಾರಿ, ತಿಪ್ಪಣ್ಣಪ್ಪ ಕಮಕನೂರ ಅವರು ಸದಸ್ಯರಾಗಿದ್ದಾರೆ.

ಇದನ್ನೂ ಓದಿ: D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Continue Reading

ಬೆಂಗಳೂರು

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Bengaluru News: ಭಾರತದಾದ್ಯಂತ ಹರಡಿರುವ ಸಖಿ ಮಹಿಳಾ ಸಂಘಟನೆಯಿಂದ ರಕ್ಷಾ ಸೂತ್ರ ದಿನ ಆಚರಿಸಲಾಯಿತು.

VISTARANEWS.COM


on

By

Sakhi Mahila Sangathan celebrates Raksha Sutra Diwas
Koo

ಬೆಂಗಳೂರು: ಸಖಿ ಮಹಿಳಾ ಸಂಘಟನೆಯು ರಕ್ಷಾ ಸೂತ್ರ ದಿನವನ್ನು (Bengaluru News) ಆಚರಿಸಿದೆ. ಅಧ್ಯಕ್ಷರು ಪ್ರೀತ ಘೋಷ್ ಪ್ರಮಾಣಿಕ್, ಉಪಾಧ್ಯಕ್ಷೆ ಪಲ್ಲವಿ ರಾಘವೇಂದ್ರ ಮತ್ತು ತಬಸ್ಸುಮ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಕ್ಷಾ ಸೂತ್ರದಲ್ಲಿ ಸಹೋದರರು ಮಾತ್ರ ನಮ್ಮನ್ನು ರಕ್ಷಿಸಲಾರರು. ಇದರಲ್ಲಿ ಎಲ್ಲರೂ ನಮ್ಮನ್ನು ಆರ್ಥಿಕವಾಗಿ, ಭಾವನಾತ್ಮಕವಾಗಿ, ದೈಹಿಕವಾಗಿ ರಕ್ಷಿಸಬಲ್ಲರು. ಅದು ನಿಮ್ಮ ಸ್ನೇಹಿತರೇ ಆಗಿರಬಹುದು ಅಥವಾ ಸಹೋದರಿಯರು, ಪೋಷಕರೇ ಆಗಿರಬಹುದು ಎಂದು ಸಖಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಅಭಯಕ್ಕಾಗಿ ಪ್ರತಿಭಟಿಸುತ್ತಿರುವ ಹೊತ್ತಿನಲ್ಲಿ, ಅವಳಿಗಾಗಿ ಮೇಣದಬತ್ತಿಗಳನ್ನು ಬೆಳಗಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಸಖಿ ಮಹಿಳಾ ಗುಂಪು ಭಾರತದಾದ್ಯಂತ ಹರಡಿದೆ. ಇದು ಭಾರತ ಮಾತ್ರವಲ್ಲದೇ ಯುಎಸ್‌ಎ (USA), ಯುಕೆ( UK) ಯಲ್ಲೂ ಹರಡಿದೆ.

ಇನ್ನು ಆಸ್ಟ್ರೇಲಿಯಾ ಎಲ್ಲಾ ರೀತಿಯ ಬಿಕ್ಕಟ್ಟಿನಲ್ಲಿ ಒಟ್ಟಿಗೆ ಇರುವುದಾಗಿ ಸಖಿ ಮಹಿಳಾ ಸಂಘಟನೆ ಪ್ರಮಾಣ ಮಾಡಿದೆ. ಚರ್ಚಿಸಿ ಪರಿಹಾರವನ್ನು ಹೊರತೆಗೆಯುವ ಗುರಿಯೂ ಸಂಘಟನೆಗೆ ಇದೆ. ಹುಡುಗಿಯರನ್ನು ಮಾನಸಿಕವಾಗಿ ಸದೃಢರನ್ನಾಗಿಸಲು, ವಿವಿಧ ರೀತಿಯ ಧ್ಯಾನವನ್ನು ಹೇಳಿಕೊಡುತ್ತಿದ್ದಾರೆ. ಆದ್ದರಿಂದ ಅವರು ಕಷ್ಟಗಳನ್ನು ಎದುರಿಸಬಹುದು ಮತ್ತು ಜಯಿಸಬಹುದು ಇದು ಸಖಿ ಟ್ರ‌ಸ್ಟ್‌ನ ಮುಖ್ಯ ಉದ್ದೇಶವಾಗಿದೆ.

Continue Reading
Advertisement
karnataka weather Forecast
ಮಳೆ51 mins ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ9 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ10 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ11 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ11 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು11 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ11 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ11 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್12 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್16 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌