Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ - Vistara News

ಶ್ರದ್ಧಾಂಜಲಿ

Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Iqbal Ahmed Saradgi: ಕಲಬುರಗಿಯ ಮಾಜಿ ಸಂಸದ ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

VISTARANEWS.COM


on

Iqbal Ahmed Saradgi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) (EX MP Iqbal Ahmed Saradgi) ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಹಾಗೂ ಮಾಜಿ ಸಿಎಂ ದಿ. ಧರ್ಮ ಸಿಂಗ್ (Dharm Singh) ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಕಲಬುರಗಿ (kalaburagi) ನಗರದಲ್ಲಿ 1944 ಜೂನ್ 5ರಂದು ಜನಿಸಿದ ಸರಡಗಿ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎಎಲ್ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕೇಂದ್ರ ಹಜ್‌ ಸಮಿತಿ, ವಕ್ಫ್‌ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ತಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ.

ನಗರದ ಐವಾನ್- ಇ-ಶಾಹಿ ಪ್ರದೇಶದಲ್ಲಿರುವ ಸರಡಗಿ ನಿವಾಸದಲ್ಲಿ ಇಂದು ಇಡೀ ದಿನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 5 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

ವಿಜಯನಗರ: ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ, ಹಂಪಿಯ ಸ್ಮಾರಕಗಳ ಮೇಲೆ ಆಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಹಂಪಿಯ ರಥ ಬೀದಿಯಲ್ಲಿರುವ ಸಾಲು ಮಂಟಪಗಳಲ್ಲಿ ಕೆಲವು ಉರುಳಿ ಬಿದ್ದಿವೆ.

ಹಂಪಿಗೆ ವಿಶ್ವಖ್ಯಾತಿಯನ್ನು ತಂದುಕೊಟ್ಟ ವಿಜಯನಗರ ಸಾಮ್ರಾಜ್ಯದ ಕಾಲದ ಕಲ್ಲು ಮಂಟಪಗಳು ಇವಾಗಿದ್ದು, ಮಳೆಗೆ ಕುಸಿದುಬಿದ್ದಿವೆ. ಇವುಗಳನ್ನು ವಿಜಯನಗರ ಅರಸರು ನಿರ್ಮಿಸಿದ್ದರು. ಇವು ಪಂಪಾ ವಿರೂಪಾಕ್ಷ ದೇವಾಲಯದ ರಥ ಬೀದಿಯಲ್ಲಿದ್ದು, ಹಂಪಿಗೆ ಬಂದಿಳಿಯುವವರಿಗೆ ಮೊದಲಾಗಿ ಕಾಣಿಸುವಂತಿವೆ. ಇವು ಮೊದಲೇ ಶಿಥಿಲವಾಗಿದ್ದು, ದುರಸ್ತಿಯ ಅಗತ್ಯದಲ್ಲಿದ್ದವು.

ಹಂಪಿಯ ಸ್ಮಾರಕಗಳು ಯುನೆಸ್ಕೋ ಪಟ್ಟಿಗೆ ಸೇರಿವೆ. ಹೀಗಾಗಿಯೇ ಇವುಗಳನ್ನು ನೋಡಲು ವಿದೇಶಗಳಿಂದ ಜನ ಆಗಮಿಸುತ್ತಾರೆ. ಆದರೆ ಪುರಾತತತ್ವ ಇಲಾಖೆ ಇವುಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಸ್ಮಾರಕಗಳ ರಕ್ಷಣೆಗೆ ಲಕ್ಷ ಲಕ್ಷ ರೂಪಾಯಿ ಹಣ ಬರುತ್ತಿದ್ದರೂ, ಕೇಂದ್ರ ಪುರಾತತ್ವ ಇಲಾಖೆ ಇವುಗಳ ಸ್ಥಿತಿಗತಿಯ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ದೂರಲಾಗಿದೆ.

ಕಳೆದ ಒಂದು ವಾರದಿಂದ ವಿಜಯನಗರ ಜಿಲ್ಲಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಹಂಪಿಯಲ್ಲಿ ಇನ್ನಷ್ಟು ಶಿಥಿಲ ಸ್ಮಾರಕಗಳಿವೆ. ಸೂಕ್ತ ನಿರ್ವಹಣೆ ಇಲ್ಲದೇ ಇದ್ದಕ್ಕಿದ್ದಂತೆ ಉರುಳಿ ಬಿದ್ದಿರುವ ಸಾಲು ಮಂಟಪಗಳು, ಐತಿಹಾಸಿಕ ಹಂಪಿಯ ಸ್ಮಾರಕಗಳ ನಿರ್ವಹಣೆಯ ಸಮಸ್ಯೆಯತ್ತ ಬೆಟ್ಟು ಮಾಡಿವೆ.

ಇದನ್ನೂ ಓದಿ: Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶ್ರದ್ಧಾಂಜಲಿ

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Veerabaswanthreddy Mudnal: ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Veerabaswanthreddy Mudnal
Koo

ಯಾದಗಿರಿ: ಮಾಜಿ ಶಾಸಕ ಹಾಗೂ ಹಿರಿಯ ವೈದ್ಯ ಡಾ.ವೀರಬಸವಂತರೆಡ್ಡಿ ಮುದ್ನಾಳ (76) (Veerabaswanthreddy Mudnal) ಅವರು ಅನಾರೋಗ್ಯರಿಂದ ಸೋಮವಾರ ನಿಧನರಾದರು. ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ವಿಬಿಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿದ್ದರು. 2010ರಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಇವರು ಯಾದಗಿರಿ ಜಿಲ್ಲೆ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬಿ.ವೈ.ವಿಜಯೇಂದ್ರ ಸಂತಾಪ

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಪಕ್ಷದ ಮುಖಂಡರು ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಸಂತಾಪ ಕೋರುವೆ. ವೈದ್ಯಕೀಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಾ, ಜನರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸರಳ ವ್ಯಕ್ತಿತ್ವದ ಶ್ರೀ ವೀರಬಸವಂತರೆಡ್ಡಿ ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.

ಮೃತರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ಆಘಾತದ ನೆರಳಿನಿಂದ ಹೊರಬರುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ.
ಓಂಶಾಂತಿ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

Continue Reading

ಕರ್ನಾಟಕ

Anchor Aparna: ಪಂಚಭೂತಗಳಲ್ಲಿ ಅಪರ್ಣಾ ಲೀನ; ಸ್ಮಾರ್ತ ಸಂಪ್ರದಾಯದಂತೆ ನೆರವೇರಿದ ಅಂತ್ಯಸಂಸ್ಕಾರ

Anchor Aparna: ಬೆಂಗಳೂರಿನ ಬನಶಂಕರಿಯ ಅಪರ್ಣಾ ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಶುಕ್ರವಾರ ಮಧ್ಯಾಹ್ನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

Koo

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾದ ಖ್ಯಾತ ನಿರೂಪಕಿ, ನಟಿ ಅಪರ್ಣಾ (Anchor Aparna) ಅವರ ಅಂತ್ಯಸಂಸ್ಕಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್‌ ಗೌರದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು.

ಇದಕ್ಕೂ ಮುನ್ನ ಬನಶಂಕರಿಯ ಅಪರ್ಣಾ (actress aparna) ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಪ್ತ ಸಾಗರದಾಚೆ ಎಲ್ಲೋ ಹಾಡಿನ ಮೂಲಕ ಚಿತ್ರರಂಗದ ಆಪ್ತರು ಕಣ್ಣೀರ ವಿದಾಯ ಹೇಳಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ, ನಟ ಶ್ರೀನಾಥ್, ರಾಘವೇಂದ್ರ ರಾಜಕುಮಾರ್‌, ತೇಜಸ್ವಿನಿ ಅನಂತಕುಮಾರ್, ರಮೇಶ್‌ ಅರವಿಂದ್‌, ವಿನಯ್‌ ರಾಜಕುಮಾರ್‌, ನಿರೂಪಕಿ ಶ್ವೇತಾ ಚೆಂಗಪ್ಪ, ಬ್ರಹ್ಮಾಂಡ ಗೂರೂಜಿ ನರೇಂದ್ರ ಬಾಬು ಶರ್ಮಾ, ಇಂದ್ರಜಿತ್‌ ಲಂಕೇಶ್‌, ಮಂಡ್ಯ ರಮೇಶ್‌, ತಾರಾ ಸೇರಿ ಚಿತ್ರರಂಗ, ರಾಜಕೀಯ ನಾಯಕರು ಸೇರಿ ವಿವಿಧ ಗಣ್ಯರು ಅಂತಿಮ ದರ್ಶನ ಪಡೆದರು.

ಸೃಜನ್ ಲೋಕೇಶ್ ಹಾಗೂ ಕುಟುಂಬಸ್ಥರು ಅಂತ್ಯಸಂಸ್ಕಾರದ ವೇಳೆ ಭಾಗಿಯಾಗಿದ್ದರು. ಈ ವೇಳೆ ಅಪರ್ಣ ಪತಿ ನಾಗರಾಜ್‌ಗೆ ಸೃಜನ್ ಲೋಕೇಶ್ ಸಾಂತ್ವನ ಹೇಳಿದರು. ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಸಂಪ್ರದಾಯದ ಪ್ರಕಾರ ಅಪರ್ಣಾ ಅಂತ್ಯಕ್ರಿಯೆ ನೆರವೇರಿತು.

ಇದನ್ನೂ ಓದಿ | Anchor Aparna:  ಹೂವು-ಹಾರ ತರದಂತೆ ಮನವಿ ಮಾಡಿ, ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ!

ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (57) (Anchor Aparna) ಅವರು ಗುರುವಾರ ರಾತ್ರಿ ನಿಧನರಾಗಿದ್ದರು.

ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ಮಂಗಳವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬನಶಂಕರಿ ನಿವಾಸದಲ್ಲಿ ಪತಿ ಹಾಗೂ ಕೇರ್ ಟೇಕರ್ಸ್ ಜತೆ ಅಪರ್ಣಾ ವಾಸಿಸುತ್ತಿದ್ದರು. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.

1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರು ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ | Anchor Aparna: ಅಪರ್ಣಾ ಕೊನೆ ಆಸೆ ಏನಾಗಿತ್ತು? ಕನಸು ಈಡೇರುವ ಮುನ್ನವೇ ಕಣ್ಮುಚ್ಚಿದ ನಟಿ!

1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ.

Continue Reading

ಶ್ರದ್ಧಾಂಜಲಿ

Anchor Aparna: 6 ತಿಂಗಳು ಎಂದರೂ 2 ವರ್ಷ ಲವಲವಿಕೆಯಿಂದ ಬದುಕಿದ ಜೀವ! ಅಪರ್ಣಾ ಕೊನೆ ದಿನಗಳು ಹೀಗಿದ್ದವು

Anchor Aparna: ಕ್ಯಾನ್ಸರ್‌ ನಡುವೆಯೂ ಅವರು ಹಲವು ʼಮಜಾ ವಿದ್‌ ಸೃಜಾʼ ಸೇರಿದಂತೆ ಹಲವು ಟಿವಿ ಶೋಗಳಲ್ಲಿ ಹಾಗೂ ʼಎಡೆಯೂರು ಶ್ರೀ ಸಿದ್ದಲಿಂಗೇಶ್ವರʼ ಮುಂತಾದ ಸೀರಿಯಲ್‌ಗಳಲ್ಲಿ ಕಾಣಿಸಿಕೊಂಡಿದ್ದರು. ಲವಲವಿಕೆಯಿಂದ ನಟಿಸಿ ಎಲ್ಲರನ್ನೂ ನಗಿಸಿದ್ದರು.

VISTARANEWS.COM


on

anchor aparna vastare
Koo

ಬೆಂಗಳೂರು: ಅಚ್ಚ ಕನ್ನಡದ ಸ್ವಚ್ಛ ಕಂಠದ ನಿರೂಪಕಿ ಅಪರ್ಣಾ ಅವರು ಸುಮಾರು ಎರಡು ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್‌ನಿಂದ ನರಳುತ್ತಿದ್ದರು. ಎರಡು ವರ್ಷ ಹಿಂದೆ ವೈದ್ಯರು ಆಕೆಗೆ ಕ್ಯಾನ್ಸರ್‌ ದೃಢಪಡಿಸಿದಾಗ, ಇನ್ನು ಆರು ತಿಂಗಳು ಬದುಕಬಹುದು ಎಂದಿದ್ದರು ಎಂದು ಅಪರ್ಣಾ ಅವರ ಪತಿ ನಾಗರಾಜ ವಸ್ತಾರೆ ತಿಳಿಸಿದ್ದಾರೆ.

“ವೈಯಕ್ತಿಕವಾಗಿ ನಾನು ಅಪರ್ಣಾ ತುಂಬಾ ಖಾಸಗಿಯಾಗಿ ಬದುಕಿದವರು. ಅಷ್ಟೇ ಖಾಸಗಿಯಾಗಿ ನಾನು ಅವಳನ್ನು ಬಿಳ್ಕೊಡಲಿಕ್ಕೆ ಇಷ್ಟ ಪಡುತೀನಿ. ಹಾಗಂತ ನನಗೆ ಸೇರುಕ್ಕೆ ಮುಂಚೆನೇ ಹೆಚ್ಚಾಗಿ ಅಪರ್ಣಾ ಕರ್ನಾಟಕಕ್ಕೆ ಸೇರಿದವಳು. ಅಪರ್ಣಾಗೆ ಒಂದು ಆಶಯ ಇತ್ತು. ಸಾವಿನ ಬಳಿಕ ಮಾಧ್ಯಮಗಳ ಮುಂದೆ‌ ಎಲ್ಲವನ್ನು ಹೇಳುವಂತೆ ತಿಳಿಸಿದ್ರು. ಎರಡು ವರ್ಷದ ಹಿಂದೆ ಜುಲೈನಲ್ಲಿ ಶಾಸ್ವಕೋಶ ಕ್ಯಾನ್ಸರ್ ಅಂತಾ ಗೊತ್ತಾಯ್ತು. ಮೊದಲು ನೋಡಿದ ವೈದ್ಯರು ಆರು ತಿಂಗಳು ಬದಕಬಹುದು ಅಂತ ಹೇಳಿದ್ದರು” ಎಂದು ವಸ್ತಾರೆ ತಿಳಿಸಿದ್ದಾರೆ.

“ಅವಳು ಛಲಗಾತಿ, ನಾನು ಬದುಕ್ತೀನಿ ಅಂತಾ ಇದ್ಲು. ಅಲ್ಲಿಂದ ಜನವರಿವರೆಗೂ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡಿದ್ಲು. ಫೆಬ್ರವರಿಯಿಂದ‌ ಸೋತಿದ್ಲು. ಒಂದೂವರೆ ವರ್ಷದಿಂದ ಛಲದಿಂದ ಬದುಕಿದ್ಲು. ಅವಳು ಧೀರೆ, ಇಷ್ಟು ದಿನ ಬದುಕಿದ್ದಾಳೆ. ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಇಬ್ಬರು ಜಂಟಿಯಾಗಿ ಸೋತಿದೀವಿ. ಬರುವ ಅಕ್ಟೋಬರ್‌ಗೆ ಅವಳಿಗೆ 58 ವರ್ಷ ತುಂಬ್ತಿತ್ತು. ಅವಳ ನಿಜವಾದ ವಯಸ್ಸು ಯಾವತ್ತೂ ತೊರಿಸಲಿಲ್ಲ” ಎಂದು ವಸ್ತಾರೆ ವಿವರಿಸಿದ್ದಾರೆ.

“ಇಂದು ಒಂಬತ್ತೂವರೆ ಗಂಟೆ ಸುಮಾರು ದೇಹ ತನ್ನನ್ನ ತಾನು ಹಿಂಪಡೆದಿದೆ. ದಯವಿಟ್ಟು ನೀವೆಲ್ಲಾ ತಮ್ಮ ತಮ್ಮ ಗೂಡುಗಳಿಗೆ ಹೋಗ್ಬಹುದು. ನಾಳೆ ಬೆಳಗ್ಗೆ 7:30 ಗಂಟೆಗೆ ಕರೆದುಕೊಂಡು ಬರುತ್ತೇನೆ. ಇವತ್ತು ಒಂದು ದಿನಾ ನಾನು ನನ್ನ ಕುಟುಂಬದ ಜೊತೆಗೆ ಇರ್ತೀನಿ” ಎಂದು ಅವರು ನುಡಿದಿದ್ದಾರೆ.

ಈ ಕ್ಯಾನ್ಸರ್‌ ನಡುವೆಯೂ ಅವರು ಹಲವು ʼಮಜಾ ವಿದ್‌ ಸೃಜಾʼ ಸೇರಿದಂತೆ ಹಲವು ಟಿವಿ ಶೋಗಳಲ್ಲಿ ಹಾಗೂ ʼಎಡೆಯೂರು ಶ್ರೀ ಸಿದ್ದಲಿಂಗೇಶ್ವರʼ ಮುಂತಾದ ಸೀರಿಯಲ್‌ಗಳಲ್ಲಿ ಕಾಣಿಸಿಕೊಂಡಿದ್ದರು. ಲವಲವಿಕೆಯಿಂದ ನಟಿಸಿ ಎಲ್ಲರನ್ನೂ ನಗಿಸಿದ್ದರು. ʼನಾವು ಅಪರ್ಣಾ ಕಾಲ್‌ಶೀಟ್‌ಗಾಗಿ ಕಾಯುತ್ತಿದ್ದೆವುʼ ಎಂದು ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಹೇಳಿದ್ದಾರೆ. ಬೃಹತ್‌ ಸಾರ್ವಜನಿಕ ಕಾರ್ಯಕ್ರಮಗಳ ನಿರೂಪಣೆಗೆ ಅಪರ್ಣಾ ಅವರೇ ಮೊದಲ ಆಯ್ಕೆಯಾಗಿದ್ದರು.

ಮೂರು ದಿನದ ಹಿಂದೆ ಕ್ಯಾನ್ಸರ್‌ ಉಲ್ಬಣಿಸಿ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ನಿನ್ನೆ ಸಂಜೆ 9:45 ಕ್ಕೆ ನಿಧನರಾಗಿದ್ದರು. ಇಂದು ಬನಶಂಕರಿ ಬೆಳಗ್ಗೆ 11:30ರವರೆಗೆ ಬನಶಂಕರಿಯ ಸುಚಿತ್ರಾ ಫಿಲಂ ಸೊಸೈಟಿ ಬಳಿ ಇರುವ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ವಸ್ತಾರೆ ತಿಳಿಸಿದ್ದಾರೆ.

ಅಂತಿಮ ದರ್ಶನಕ್ಕೆ ಬರುವವರು ಖಾಲಿ ಕೈಯಲ್ಲಿ ಬರಬೇಕು. ಪ್ಲಾಸ್ಟಿಕ್‌ ಹಾಗೂ ಬೊಕೆಗಳನ್ನು ದಯವಿಟ್ಟು ತರಬೇಡಿ. ಅವುಗಳು ಕೆಲವು ಗಂಟೆಗಳ ಬಳಿಕ ಕಸವಾಗುವುದರಿಂದ, ಆ ಮೂಲಕ ಪರಿಸರ ಮಾಲಿನ್ಯ ಮಾಡಲು ನಮಗಿಷ್ಟವಿಲ್ಲ ಎಂದೂ ವಸ್ತಾರೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Anchor Aparna: ನಟನೆ, ನಿರೂಪಣೆ, ಕನ್ನಡ, ಹಾಸ್ಯ; ಅಪರ್ಣಾ ಸಾಗಿದ ಜೀವನದ ಹಾದಿ ಇಲ್ಲಿದೆ

Continue Reading

ಕರ್ನಾಟಕ

Prabhu Deva: ನಟ, ಡ್ಯಾನ್ಸ್ ಮಾಸ್ಟರ್‌ ಪ್ರಭುದೇವ ಅವರ ಅಜ್ಜಿ ನಿಧನ; ಮೈಸೂರು ಬಳಿಯ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ

Prabhu Deva: ಬಹುಭಾಷ ನಟ ಪ್ರಭುದೇವ ಅವರ ಅಜ್ಜಿ ಪುಟ್ಟಮ್ಮಣ್ಣಿ (97) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಮೈಸೂರು ತಾಲೂಕಿನ ದೂರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಭುದೇವ ಮತ್ತು ಸಹೋದರರು ಆಗಮಿಸಿದ್ದಾರೆ.

VISTARANEWS.COM


on

Prabhu Deva
Koo

ಮೈಸೂರು: ಖ್ಯಾತ ಡ್ಯಾನ್ಸ್‌ ಮಾಸ್ಟರ್‌, ಬಹುಭಾಷ ನಟ ಪ್ರಭುದೇವ (Prabhu Deva) ಅವರ ಅಜ್ಜಿ ಪುಟ್ಟಮ್ಮಣ್ಣಿ (97) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಮೈಸೂರು ತಾಲೂಕಿನ ದೂರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಜ್ಜಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರಭುದೇವ ಹಾಗೂ ಸಹೋದರರು ಆಗಮಿಸಿದ್ದಾರೆ.

ಪುಟ್ಟಮ್ಮಣ್ಣಿ ಅವರು ಪ್ರಭುದೇವರ ತಾಯಿ ಮಹದೇವಮ್ಮ ಅವರ ತಾಯಿ. ಪಾರ್ಥಿವ ಶರೀರ ದರ್ಶನ ಮಾಡಲು ಚೆನ್ನೈನಿಂದ ಮೈಸೂರಿಗೆ ಪ್ರಭುದೇವ ಆಗಮಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಕಾರಿನ ಮೂಲಕ ದೂರ ಗ್ರಾಮಕ್ಕೆ ತೆರಳಿದ ಪ್ರಭುದೇವ ಸಹೋದರರು ತೆರಳಿದ್ದಾರೆ. ಇಂದು ದೂರ ಗ್ರಾಮದಲ್ಲಿ ಪುಟ್ಟಮ್ಮಣ್ಣಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಹಿರಿಯ ನೃತ್ಯ ಸಂಯೋಜಕ ಮೂಗೂರು ಸುಂದರಂ ಅವರು ಮೂಲತಃ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದವರು. ಅವರು ದೂರ ಗ್ರಾಮದ ವೈಸ್ ಚೇರ್ಮನ್ ಮಹದೇವಪ್ಪ ಮತ್ತು ಪುಟ್ಟಮ್ಮಣ್ಣಿ ಅವರ ಮಗಳು ಮಹದೇವಮ್ಮ ಅವರನ್ನು ವಿವಾಹವಾಗಿದ್ದರು. ನಂತರ ಚಿತ್ರರಂಗದಲ್ಲಿ ಯಶಸ್ಸು ಕಂಡು ಚೆನ್ನೈನಲ್ಲಿ ನೆಲೆಸಿದ್ದರು. ಅವರಿಗೆ ರಾಜು, ಪ್ರಭುದೇವ, ನಾಗೇಂದ್ರ ಸೇರಿ ಮೂವರು ಪುತ್ರರಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ; ಈಕೆ ಜೀವ ತೆಗೆದುಕೊಳ್ಳುವಂಥದು ಏನಾಗಿತ್ತು?

udupi self harming
udupi self harming

ಉಡುಪಿ: ಮಣಿಪಾಲದ ಹೆರ್ಗದಲ್ಲಿ ವೈಯಕ್ತಿಕ ಕಾರಣಕ್ಕೆ ಚಾರ್ಟರ್ಡ್ ಅಕೌಂಟೆಂಟ್‌ (chartered accountant) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ (Student Self Harming) ಮಾಡಿಕೊಂಡಿದ್ದಾರೆ. ಕೌಟುಂಬಿಕ ಅಸೌಖ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಇವರು ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಬಾಡಿಗೆ ಮನೆಯ ರೂಮ್‌ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ | Hit and Run Case: ಮೈನಡುಗಿಸುವ ಆಕ್ಸಿಡೆಂಟ್ ವಿಡಿಯೊ; ಸೈಕಲ್‌ ಸವಾರನ ಜೀವ ತೆಗೆದ ಬಸ್‌

ಇವರು ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರ ಮಗಳಾಗಿದ್ದಾರೆ. ಮಹೇಶ್‌ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಡಯಾಲಿಸಿಸ್ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading
Advertisement
Aadhaar Update
ವಾಣಿಜ್ಯ7 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ22 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌