Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌ Vistara News

ಉಡುಪಿ

Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

Chaitra Kundapura : ವಂಚಕಿ ಚೈತ್ರಾ ಜತೆ ಕುಂದಾಪುರದ ಹೆಸರು ಬಳಸಬಾರದು ಎಂಬ ಅರ್ಜಿದಾರರ ದಾವೆಗೆ ಕೋರ್ಟ್‌ ತಾತ್ಕಾಲಿಕವಾಗಿ ಓಕೆ ಎಂದಿದೆ. ಮುಂದಿನ ವಿಚಾರಣೆಯ ಬಳಿಕ ಇದಕ್ಕೆ ಸ್ಪಷ್ಟತೆ ಸಿಗಲಿದೆ.

VISTARANEWS.COM


on

Chaitra Kundapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಐದು ಕೋಟಿ ರೂ. ವಂಚನೆ ಮಾಡಿರುವ ಕುಂದಾಪುರ ಮೂಲದ ಫೈರ್‌ ಬ್ರಾಂಡ್‌ ಭಾಷಣಕಾರ್ತಿ ಚೈತ್ರಾ (Chaitra Kundapura) ಹೆಸರು ಈಗ ಎಲ್ಲೆಡೆ ಫೇಮಸ್‌. ಆದರೆ, ಈಕೆಯ ಹೆಸರನ್ನು ಪದೇಪದೆ ವಂಚನೆಯ ಹೆಸರಲ್ಲಿ ಬಳಸುತ್ತಿರುವುದು ಕುಂದಾಪುರ (Kundapura Name of a town) ಎಂಬ ಊರಿಗೆ ಅಪಮಾನ ಮಾಡಿದಂತಾಗುತ್ತಿದೆ. ಹೀಗಾಗಿ ಆಕೆಯ ಹೆಸರಿನ ಜತೆಗಿರುವ ʻಕುಂದಾಪುರʼ ಹೆಸರನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಎಂದು ಕುಂದಾಪುರದ ವ್ಯಕ್ತಿಯೊಬ್ಬರು ಕೋರ್ಟ್‌ ಮೊರೆ ಹೊಕ್ಕಿದ್ದರು. ಈ ಕೋರ್ಟ್‌ ಈ ಬೇಡಿಕೆಗೆ ತಾತ್ಕಾಲಿಕ ಅಸ್ತು (Court restricts media from using Kundapuara name with Chaitra) ಎಂದಿದೆ.

ವಂಚನೆ ಪ್ರಕರಣವಾಗಿರುವುದರಿಂದ, ಬಿಜೆಪಿ ಟಿಕೆಟ್‌ ವಂಚನೆಯಾಗಿರುವುದರಿಂದ, ಪ್ರಧಾನ ಆರೋಪಿ ಸಾಕಷ್ಟು ಜನಪ್ರಿಯಳಾಗಿರುವುದರಿಂದ ಆಕೆಯ ಹೆಸರು ಮತ್ತು ಸುದ್ದಿ ಗಮನ ಸೆಳೆದಿತ್ತು. ಹೀಗಾಗಿ ಆಕೆಯೊಂದಿಗೆ ಆಕೆಯ ಊರಿನ ಹೆಸರೂ ಜತೆಯಾಗಿ ಬರುತ್ತಿತ್ತು. ಇದು ಸಹಜವಾಗಿ ಅಲ್ಲಿನ ಜನರಿಗೆ ಬೇಸರ ಉಂಟು ಮಾಡಿದೆ.

ಇದನ್ನು ಗಮನಿಸಿದ ಕುಂದಾಪುರ ಮೂಲದ ಸದ್ಯ ಬೆಂಗಳೂರಿನಲ್ಲಿರುವ ವ್ಯಕ್ತಿಯೊಬ್ಬರು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆಕೆಯ ಹೆಸರಿನ ಜತೆ ಕುಂದಾಪುರದ ಹೆಸರು ತಳುಕು ಹಾಕುವುದು ಬೇಡ ಎಂದು ಕೋರಿದ್ದರು.

ಬೆಂಗಳೂರಿನ ಬಸವನಗುಡಿಯಲ್ಲಿ ಕಾಫಿ ಶಾಪ್‌ ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್‌ ಶೆಟ್ಟಿ ದಾವೆ ಹೂಡಿದವರು. ನಾನು ಕುಂದಾಪುರ ಮೂಲದವನಾಗಿದ್ದು, ಹೋಟೆಲ್ ನಡೆಸುತ್ತಿದ್ದೇನೆ. ಹೋಟೆಲ್ ಗೆ ಬರುವ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ಅವರು ದಾವೆಯಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. 10 ಮತ್ತು 11ನೇ ಶತಮಾನದಲ್ಲಿ ಅಲುಪು ರಾಜವಂಶಸ್ಥರಾದ ಕುಂದವರ್ಮ ಅವರು ಕುಂದಾಪುರದಲ್ಲಿ ಆಳ್ವಿಕೆ ನಡೆಸಿದ್ದು. ಐತಿಹಾಸಿಕ ಕುಂದೇಶ್ವರ ದೇವಸ್ಥಾನ ಸಹ ನಿರ್ಮಿಸಿದ್ದಾರೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನಂತರ ಪೋರ್ಚಗೀಸರು, ಜರ್ಮನ್ನರು, ಟಿಪ್ಪುಸುಲ್ತಾನ್‌, ಬ್ರಿಟಿಷರು ಕುಂದಾಪುರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅನೇಕ ಐತಿಹಾಸಿಕ ದೇವಸ್ಥಾಗಳಿಂದ ಕುಂದಾಪುರ ಖ್ಯಾತಿ ಪಡೆದಿದೆ ಎಂದು ದಾವೆಯಲ್ಲಿ ವಿವರಿಸಲಾಗಿತ್ತು.

ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ. ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿತ್ತು.

ಇದನ್ನೂ ಓದಿ: Chaitra Kundapura : ಫೈರ್‌ ಬ್ರಾಂಡ್‌ ಚೈತ್ರಾ ಕುಂದಾಪುರ ಪರಪ್ಪನ ಅಗ್ರಹಾರಕ್ಕೆ; 14 ದಿನ ನ್ಯಾಯಾಂಗ ಬಂಧನ

ಹೀಗಾಗಿ ಮಾಧ್ಯಮಗಳು ಆಕೆಯ ವಿಚಾರ ಬಂದಾಗ ಕುಂದಾಪುರ ಎಂಬ ಹೆಸರನ್ನು ಉಲ್ಲೇಖಿಸದಂತೆ ಸೂಚನೆ ನೀಡಬೇಕು ಎಂದು ಅವರು ಕೋರಿದ್ದರು. ಜತೆಗೆ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ಕೂಡಾ ಕೇಳಿದ್ದರು.

ಇದೀಗ ಕೋರ್ಟ್‌ ಅವರ ದಾವೆಯನ್ನು ಸ್ವೀಕರಿಸಿದ್ದು ಮುಂದಿನ ವಿಚಾರಣೆಯ ವರೆಗೆ ಮಾಧ್ಯಮಗಳು ಆಕೆಯ ಹೆಸರಿನ ಜತೆಗೆ ಕುಂದಾಪುರ ಎಂಬ ಹೆಸರನ್ನು ಬಳಸದಂತೆ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಮುಂದಿನ ವಿಚಾರಣೆಯವರೆಗೆ ಈ ನಿರ್ಬಂಧವನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Billionaire Farmer : ಕುಂದಾಪುರದ ರಮೇಶ್‌ ನಾಯಕ್‌ ಬಿಲಿಯನೇರ್‌ ರೈತ; ಇವರ ತೋಟ ನೋಡಿದ್ರಾ?

Billionaire farmer: ಕುಂದಾಪುರದ ಪ್ರಗತಿಪರ ರೈತ, ಉದ್ಯಮಿಯೊಬ್ಬರು ಕೇಂದ್ರ ಸರ್ಕಾರದ ಬಿಲಿಯನೇರ್‌ ರೈತ ಪ್ರಶಸ್ತಿ ಪಡೆದಿದ್ದಾರೆ. ಹಾಗಿದ್ದರೆ ಅವರು ಮಾಡಿದ್ದೇನು? ಇಲ್ಲಿದೆ ಮಾಹಿತಿ.

VISTARANEWS.COM


on

Ramesh Nayak Billionaire farmer
Koo

ಉಡುಪಿ: ರೈತ ಅಂದ ಕೂಡಲೇ ಬಡವ, ಸಾಲ ಸುಳಿಗೆ ಸಿಲುಕಿದವರು ಎಂಬೆಲ್ಲಾ ಚಿತ್ರಣಗಳು ಮೂಡುವ ಕಾಲದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ತೆಕ್ಕಟ್ಟೆಯ‌ ವ್ಯಕ್ತಿಯೊಬ್ಬರು ಬಿಲಿಯನೇರ್‌ ರೈತ (Billionaire Farmer) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ಕೊಡುವ ಈ ಪ್ರಶಸ್ತಿಯನ್ನು ಪಡೆದವರು ತೆಕ್ಕಟ್ಟೆಯ ರೈತ ಕಮ್‌ ಉದ್ಯಮಿ ರಮೇಶ್‌ ನಾಯಕ್‌ (Ramesh Nayak). ಡಿಸೆಂಬರ್‌ 7ರಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೇ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರೈಸ್‌ಮಿಲ್ ಉದ್ಯಮದ ಜತೆಗೆ ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತ ಉದ್ಯಮಿ ರಮೇಶ್ ನಾಯಕ್ ಕೇಂದ್ರ ಸರಕಾರ ಕೊಡಮಾಡುವ ಬಿಲಿಯನೇರ್ ರೈತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತೆಕ್ಕಟ್ಟೆಯ ರೈಸ್‌ಮಿಲ್ ಉದ್ಯಮಿ ರಮೇಶ್ ನಾಯಕ್ ಅವರು ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು 13 ಎಕರೆ ಜಾಗದಲ್ಲಿ ಸುಮಾರು 11 ಜಾತಿಯ, ಸುಮಾರು 1,634 ವಿವಿಧ ತಳಿಯ ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಸಲು ಕಂಡುಕೊಳ್ಳುವ ಮೂಲಕ ನಿಸರ್ಗ ಪ್ರೇಮ ಮೆರೆದು ಜಿಲ್ಲೆಯಲ್ಲಿ ಮಾದರಿಯಾಗಿದ್ದಾರೆ.

ವಾರ್ಷಿಕ ಸುಮಾರು ಕೋಟಿ ರೂ.ಗಳಿಗೂ ಅಧಿಕ ವಹಿವಾಟು ಮಾಡಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಹೊಸದಿಲ್ಲಿಯಲ್ಲಿ ಡಿ. 7ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Ramesh Nayak Billionaire farmer

ಯಾರಿವರು ರೈತ ರಮೇಶ್‌ ನಾಯಕ್‌?

ತೆಕ್ಕಟ್ಟೆ ರಮೇಶ್ ನಾಯಕ್, ಮೂಲತಃ ರೈಸ್ ಮಿಲ್ ಉದ್ಯಮಿ, ಇವರು ಹಣ್ಣುಗಳ ಬಗ್ಗೆ ಇರುವ ವಿಶೇಷ ಪ್ರೀತಿಯಿಂದ ವಿವಿಧ ಉಪ ಉಷ್ಣ ವಲಯದಲ್ಲಿ ಎಳೆಯುವ ವಿಶೇಷ ಹಣ್ಣುಗಳ ಬಗ್ಗೆ ಅಧ್ಯಯನ ಮಾಡಿ
ಕೆದೂರು ಗ್ರಾಮದಲ್ಲಿ ಸುಮಾರು 13 ಎಕ್ರೆ ಜಾಗದಲ್ಲಿ ಕಾಮಾಕ್ಷಿ ಫಾರ್ಮ್ಸ ಅನ್ನು 2019ರಲ್ಲಿ ಸ್ಥಾಪಿಸಿದರು. ರಂಬುಟನ್, 5 ವಿಧದ ಹಲಸು, ಮ್ಯಾಂಗೋಸ್ಟೀನ್, ದುರಿಯನ್, ಡ್ರಾಗನ್, ಪ್ಯಾಶನ್ ಹಣ್ಣು ಹೀಗೆ ವಿವಿಧ ಹಣ್ಣುಗಳನ್ನು ಯಾವುದೇ ಹಾನಿಕಾರಕ ರಾಸಾಯನಿಕಗಳನ್ನು ಬಳಸದೆ ಬೆಳೆಯುತ್ತಾರೆ.

ಹಣ್ಣುಗಳನ್ನು ಬೆಳೆಯುವುದು ಅಷ್ಟೇ ಅಲ್ಲದೆ ಹಣ್ಣುಗಳನ್ನು ಸ್ವಚ್ಛಗೊಳಿಸಿ ಕತ್ತರಿಸಿ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡಿ ಕರಾವಳಿ ಕರ್ನಾಟಕದಲ್ಲಿ ಹಣ್ಣುಗಳ ವ್ಯಾಪಾರಕ್ಕೆ ಹೊಸ ಭಾಷ್ಯ ಬರೆದಿದ್ದು ರಮೇಶ್ ನಾಯಕ್ ಅವರ ಕಾಮಾಕ್ಷಿ ಫಾರ್ಮ್ಸ್.

Ramesh Nayak Billionaire farmer

ಹಲಸಿನ ಸೊಳೆ ಹೋಮ್‌ ಡೆಲಿವರಿ ಮಾಡ್ತಾರೆ!

ವಿವಿಧ ತಳಿಯ ಹಲಸಿನ ಹಣ್ಣನ್ನು ಬಾಕ್ಸ್ ಮಾಡಿ ತಳಿಗಳ ಬಗ್ಗೆ ಗ್ರಾಹಕರಿಗೆ ತಿಳಿಸಿ ಉತ್ತಮ ರುಚಿಯ ಶುಚಿಯಾದ ಹಲಸಿನ ಸೊಳೆಗಳ ಬಾಕ್ಸ್ ಅನ್ನು ಹೋಂ ಡೆಲಿವರಿ ಮೂಲಕ ಮನೆ ಮನೆಗೆ ತಲುಪಿಸಿ ಪ್ರಾರಂಭವಾದ ಹಣ್ಣುಗಳ ಬಾಕ್ಸ್ ಮಾರಾಟ ನಂತರದ ದಿನಗಳಲ್ಲಿ ಅನಾನಸ್, ಪಪಾಯ, ಡ್ರಾಗನ್ ಹೀಗೆ ತೋಟದಲ್ಲಿ ಬೆಳೆಯುವ ಎಲ್ಲ ಹಣ್ಣುಗಳಿಗೆ ಅಳವಡಿಸಿ ಅದರಲ್ಲಿ ಯಶ ಕಂಡಿದ್ದಾರೆ. ತೋಟದಿಂದ ಗ್ರಾಹಕರಿಗೆ ಎಂಬ ವಿಚಾರವನ್ನಿಟ್ಟು ಉತ್ತಮ ಗುಣಮಟ್ಟದ ಹಣ್ಣುಗಳನ್ನು ನೇರವಾಗಿ ಗ್ರಾಹರಿಗೆ ತಲುಪಿಸುವಲ್ಲಿ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದನ್ನೂ ಓದಿ: Agriculture APP : ರೈತರಿಗಾಗಿ AI ಆಧಾರಿತ ಆ್ಯಪ್ ಶೀಘ್ರ; ಕೃಷಿ ಇಲಾಖೆಯಿಂದ ಮಹತ್ವದ ಹೆಜ್ಜೆ

ವಿದೇಶದಿಂದ ಆಮದಾಗುವ ಹಣ್ಣುಗಳನ್ನು ರುಚಿ ಮತ್ತು ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದೇ ಹಾನಿಕಾರಕ ರಾಸಾಯನಿಕಗಳನ್ನೂ ಬಳಸದೆ ಬೆಳೆದು ಮಾರುಕಟ್ಟೆ ಮಾಡುವಲ್ಲಿ ಕಾಮಾಕ್ಷಿ ಫಾರ್ಮ್ಸ್ ಯಶ ಕಂಡಿದೆ.

Continue Reading

ಉಡುಪಿ

Fraud Case : ವಂಚಕಿ ಚೈತ್ರಾಗೆ ಕೊನೆಗೂ ಸಿಕ್ತು ಜಾಮೀನು, ಇಂದು ಜೈಲಿಂದ ಬಿಡುಗಡೆ

Fraud Case : ಉದ್ಯಮಿ ಗೋವಿಂದ ಪೂಜಾರಿ ಅವರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಕುಂದಾಪುರದ ಚೈತ್ರಾ ಮತ್ತು ಶ್ರೀಕಾಂತ್‌ ಗೆ ಜಾಮೀನು ಸಿಕ್ಕಿದೆ.

VISTARANEWS.COM


on

Chaitra from Kundapura released
Koo

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojari) ಅವರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ (Fraud Case) ಜೈಲು ಸೇರಿದ್ದ ‌ ಉಗ್ರ ಹಿಂದುತ್ವದ ಭಾಷಣಕಾರ್ತಿ ಕುಂದಾಪುರದ ಚೈತ್ರಾಗೆ (Chaitra from Kundapura) ಕೋರ್ಟ್‌ ಜಾಮೀನು ಮಂಜೂರು (Bail from Court) ಮಾಡಿದೆ. ಆಕೆ ಮಂಗಳವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾಳೆ. ಆಕೆಯ ಜತೆ ಸಹ ಆರೋಪಿ ಶ್ರೀಕಾಂತ್‌ ಕೂಡಾ ಬಿಡುಗಡೆಯಾಗಲಿದ್ದಾನೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್‌ 12ರ ರಾತ್ರಿ ಚೈತ್ರಾಳನ್ನು ಉಡುಪಿಯಲ್ಲಿ ಬಂಧಿಸಲಾಗಿತ್ತು. ಅದೇ ಸಂದರ್ಭದಲ್ಲಿ ಆಕೆಯ ಸಹಚರ ಗಗನ್‌ ಕಡೂರ್‌, ಪ್ರಜ್ವಲ್‌, ಶ್ರೀಕಾಂತ್‌ ಕೂಡಾ ಸೆರೆಯಾಗಿದ್ದರು. ಮುಂದೆ ಕಡೂರಿನ ರಮೇಶ್‌ ಮತ್ತು ಧನರಾಜ್‌ ಹಾಗೂ ಚೆನ್ನಾ ನಾಯ್ಕ್‌ ಸೆರೆಸಿಕ್ಕಿದ್ದರು. ಅದಾದ ಕೆಲವೇ ದಿನದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಕಟಕ್‌ನಲ್ಲಿ ಬಂಧಿಸಲಾಗಿತ್ತು. ಹಾಲಶ್ರೀ ಸ್ವಾಮೀಜಿಗೆ ನವೆಂಬರ್‌ 11ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದೀಗ ಪ್ರಕರಣದ ಮೊದಲ ಆರೋಪಿ ಚೈತ್ರಾ ಮತ್ತು ಏಳನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬಂಧನವಾದ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದ ಚೈತ್ರಾ ಎಂಟ್‌ ಟೀಮ್‌ ಹಲವು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿತ್ತು. ಆದರೆ, ಸಿಕ್ಕಿರಲಿಲ್ಲ. ಈ ನಡುವೆ, ಹಾಲಶ್ರೀಗೆ ಜಾಮೀನು ಸಿಕ್ಕಿರುವುದು ಚೈತ್ರಾ ಮತ್ತು ತಂಡಕ್ಕೆ ಅನುಕೂಲವಾಗಿದೆ. ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್‌ ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಎರಡು ಲಕ್ಷ ಬಾಂಡ್ ನೀಡುವಂತೆ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ. ಆರೋಪಿಗಳಿಂದ ಈಗಾಗಲೇ ಅವರು ವಂಚನೆ ಮಾಡಿದ ಲಕ್ಷಾಂತರ ರೂ. ನಗದು, ಆಸ್ತಿ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಏನಿದು ಚೈತ್ರಾ ವಂಚನೆ ಪ್ರಕರಣ?

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗೋವಿಂದ ಪೂಜಾರಿ ಅವರು ಸಮಾಜಸೇವಕರೂ ಆಗಿದ್ದು ಬೈಂದೂರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಹೊತ್ತಿದ್ದರು. ಈ ಸಂಬಂಧ ಟಿಕೆಟ್‌ ಪಡೆಯಲು ಯಾರ ಮೂಲಕ ಪ್ರಯತ್ನಿಸಬಹುದು ಎಂಬ ಚರ್ಚೆ ನಡೆದಾಗ ಯಾರೋ ಭಾಷಣಕಾರ್ತಿ ಚೈತ್ರಾ ಹೆಸರು ಹೇಳಿದ್ದರು. ಆಕೆಯನ್ನು ಭೇಟಿ ಮಾಡಿದಾಗ ಆಕೆ ಖಂಡಿತವಾಗಿಯೂ ಟಿಕೆಟ್‌ ಕೊಡಿಸುವ ಭರವಸೆ ನೀಡಿದ್ದಳು. ಈ ನಡುವೆ, ಚೈತ್ರಾ ಗೋವಿಂದ ಬಾಬು ಪೂಜಾರಿಯವರನ್ನು ಹಾಲಶ್ರೀ ಸ್ವಾಮೀಜಿಗಳ ಬಳಿ ಕರೆದುಕೊಂಡು ಹೋಗಿದ್ದಳು. ಆಗ ಸ್ವಾಮೀಜಿ ಟಿಕೆಟ್‌ ಗಾಗಿ 1.5 ಕೋಟಿ ರೂ ಬೇಡಿಕೆ ಇಟ್ಟಿದ್ದರು. ಅದನ್ನು ಗೋವಿಂದ ಪೂಜಾರಿ ಕೆಲವೇ ಸಮಯದಲ್ಲಿ ಹಸ್ತಾಂತರ ಮಾಡಿದ್ದರು. ಈ ನಡುವೆ, ಎಲ್ಲಾ ದುಡ್ಡು ಸ್ವಾಮೀಜಿ ಪಾಲಾಗುತ್ತದೆ, ಇಷ್ಟು ಕಷ್ಟ ಪಟ್ಟ ತನಗೆ ಏನೂ ಸಿಗುವುದಿಲ್ಲ ಎಂದು ಯೋಚಿಸಿ ಗೋವಿಂದ ಪೂಜಾರಿಯಿಂದ ಹಣ ಕಸಿಯುವ ಪ್ಲ್ಯಾನ್‌ ಮಾಡಿದ್ದಳು. ಅದಕ್ಕೆ ಕಡೂರಿನ ಬಿಜೆಪಿ ನಾಯಕ ಗಗನ್‌ ನನ್ನು ಸೇರಿಸಿಕೊಂಡು ವ್ಯೂಹ ಹೆಣೆದಳು. ಆರೆಸ್ಸೆಸ್‌ನ ಹಿರಿಯ ನಾಯಕರು, ಬಿಜೆಪಿಯ ಉನ್ನತ ನಾಯಕರನ್ನು ಭೇಟಿ ಮಾಡಿಸುವ ನಾಟಕವಾಡಿ ನಾಟಕದ ವ್ಯಕ್ತಿಗಳನ್ನು ತೋರಿಸಿ ಹಣ ಪಡೆದುಕೊಂಡಳು. ಕೊನೆಗೆ ಟಿಕೆಟ್‌ ಸಿಗದೆ ಹೋದಾಗ ತನಿಖೆಗೆ ಶುರು ಮಾಡಿದ ಗೋವಿಂದ ಪೂಜಾರಿ ಅವರಿಗೆ ಜ್ಞಾನೋದಯವಾಗಿ ದೂರು ನೀಡಿದರು. ಸೆ. 12ರಂದು ಚೈತ್ರಾ ಎಂಡ್‌ ಟೀಮ್‌ ಬಂಧನವಾಗಿ ಜೈಲಿನಲ್ಲಿದೆ. ನವೆಂಬರ್‌ 12ರಂದು ಹಾಲಶ್ರೀ ಸ್ವಾಮೀಜಿ, ಡಿಸೆಂಬರ್‌ 11ರಂದು ಚೈತ್ರಾ ಮತ್ತು ಶ್ರೀಕಾಂತ್‌ಗೆ ಜಾಮೀನು ಸಿಕ್ಕಿದೆ.

Continue Reading

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Khalistani Terrorist Pannun
ದೇಶ2 mins ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema17 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ21 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ38 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ51 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್52 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ1 hour ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ವ್ಯಕ್ತಿ!

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್2 hours ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್2 hours ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ21 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌