Family problem : ಹೆಂಡತಿ ಬೇರೆ ಧರ್ಮಕ್ಕೆ ಮತಾಂತರ ಆದರೆ ಮದುವೆಯೇ ಅನೂರ್ಜಿತ! - Vistara News

ಕರ್ನಾಟಕ

Family problem : ಹೆಂಡತಿ ಬೇರೆ ಧರ್ಮಕ್ಕೆ ಮತಾಂತರ ಆದರೆ ಮದುವೆಯೇ ಅನೂರ್ಜಿತ!

Family problem : ಗಂಡ ಮತ್ತು ಹೆಂಡತಿಯಲ್ಲಿ ಯಾರಾದರೂ ಒಬ್ಬರು ಮತಾಂತರವಾದರೆ ಆ ಮದುವೆಯೇ ರದ್ದಾಗುತ್ತದೆ ಎಂಬ ಮಹತ್ವದ ಕಾನೂನು ಸಂಗತಿಯ ಬಗ್ಗೆ ಹೈಕೋರ್ಟ್‌ ಗಮನ ಸೆಳೆದಿದೆ. ಏನಿದು ಸ್ಪೆಷಲ್‌. ಈ ವರದಿ ಓದಿ.

VISTARANEWS.COM


on

High court Marriage Conversion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಂದು ವೇಳೆ ಹೆಂಡತಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ (Conversion to other Religion) ಅವರಿಬ್ಬರ ನಡುವೆ ಯಾವುದೇ ಕಾನೂನು ಪ್ರಕ್ರಿಯೆಗಳು ಇಲ್ಲದೆಯೇ ರದ್ದಾಗುತ್ತದೆ (Marriage Nullified), ವೈವಾಹಿಕ ಸಂಬಂಧ ಅನೂರ್ಜಿತವಾಗುತ್ತದೆ ಎಂದು ರಾಜ್ಯ ಹೈಕೋರ್ಟ್‌ (Karnataka High court) ಹೇಳಿದೆ. ಪ್ರಕರಣವೊಂದರಲ್ಲಿ ಈ ಪರಿಸ್ಥಿತಿ ಎದುರಾದಾಗ ಕೋರ್ಟ್‌ ಮದುವೆಗೆ ಅಸ್ತಿತ್ವವೇ ಇಲ್ಲ (Family Problem) ಎಂದು ಸಾರಿದೆ.

ಪತ್ನಿ ಬೇರೊಂದು ಧರ್ಮಕ್ಕೆ ಮತಾಂತರಗೊಂಡರೆ ದಂಪತಿ ವಿವಾಹ ವಿಚ್ಛೇದನ ಪಡೆಯದಿದ್ದರೂ ಮದುವೆ ಅನೂರ್ಜಿತವಾಗುತ್ತದೆ. ಆಕೆ ಸಂಬಂಧದಲ್ಲಿನ ಎಲ್ಲ ಹಕ್ಕುಗಳನ್ನೂ ಕಳೆದುಕೊಳ್ಳುತ್ತಾಳೆ ಎಂದು ಕೋರ್ಟ್‌ ಹೇಳಿದೆ.

ಏನಿದು ಪ್ರಕರಣ? ಯಾಕೆ ಬಂತು ಮತಾಂತರ ಕಥೆ?

ಬೆಂಗಳೂರಿನ ರಾಜಾಜಿ ನಗರದ ಕೃಷ್ಣ ಎಂಬವರು ವಿದ್ಯಾರಣ್ಯಪುರದ ಮಹಿಳೆಯನ್ನು 2002ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಗಂಡು ಮಗು ಹುಟ್ಟಿತ್ತು. ಮುಂದೆ ಕಾರಣಾಂತರಗಳಿಂದ ಗಂಡು ಮಗು ಮೃತಪಟ್ಟು ಒಂದೇ ಮಗು ಉಳಿದಿತ್ತು. ಈ ನಡುವೆ ಕೃಷ್ಣ ಪಾರ್ಶ್ವ ವಾಯು ಪೀಡಿತರಾದರು. ಅದರ ನಡುವೆ, ಮಹಿಳೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಮಗುವನ್ನೂ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.

ಇದೆಲ್ಲದರ ನಡುವೆ ಪತ್ನಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಪತಿ ದೌರ್ಜನ್ಯ ಎಸಗುತ್ತಿದ್ದು, ಪರಿಹಾರ ಕೊಡಿಸಿ ಎಂದು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯ, ಕೌಟುಂಬಿಕ ದೌರ್ಜನ್ಯ ನಡೆದಿರುವ ಕುರಿತು ಸಾಕ್ಷ್ಯಾಧಾರಗಳಿಲ್ಲ. ಹಾಗಾಗಿ, ಪರಿಹಾರ ನೀಡಲು ಸಾಧ್ಯವಿಲ್ಲ’ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿತ್ತು.

ಮುಂದೆ ಪತ್ನಿ ಸೆಷನ್ಸ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರು. ವಿಚಾರಣೆ ನಡೆಸಿದ ಕೋರ್ಟ್‌ ಅಲ್ಲಿ ಕೂಡಾ ಕೌಟುಂಬಿಕ ದೌರ್ಜನ್ಯ ನಡೆಸಿರುವ ಕುರಿತು ಸಾಕ್ಷ್ಯಾಧಾರಗಳಿಲ್ಲ ಎಂದೇ ಹೇಳಿತು. ಹೀಗಾಗಿ ಮಾಸಿಕ ನಿರ್ವಹಣಾ ವೆಚ್ಚ ನೀಡಲಾಗದು. ಆದರೆ, ಪತ್ನಿ ಜೀವನ ನಿರ್ವಹಣೆ ಮತ್ತು ಆರೋಗ್ಯ ನಿರ್ವಹಣೆಗೆ 4 ಲಕ್ಷ ರೂ. ಪಾವತಿ ಮಾಡಬೇಕು ಎಂದು ಹೇಳಿತ್ತು. ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಸೆಕ್ಷನ್‌ 22ರ ಪ್ರಕಾರ ಈ ಪರಿಹಾರಕ್ಕೆ ಸೂಚನೆ ಕೊಡಲಾಗಿತ್ತು.

ಸೆಷನ್ಸ್‌ ಕೋರ್ಟ್‌ ಮೊರೆಹೋದ ಗಂಡ

ಇದಾದ ಬಳಿಕ ಕೌಟುಂಬಿಕ ದೌರ್ಜನ್ಯ ನಡೆಯದಿದ್ದರೂ ಪರಿಹಾರ ಮಂಜೂರು ಮಾಡಿದ್ದ ನಗರದ ಸೆಷನ್ಸ್‌ ಕೋರ್ಟ್‌ ಆದೇಶ ಪ್ರಶ್ನಿಸಿ ಕೃಷ್ಣ ಅವರು ಹೈಕೋರ್ಟ್‌ ಮೊರೆ ಹೊಕ್ಕರು. ಇದೀಗ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್‌ ನೇತೃತ್ವದ ಏಕಸದಸ್ಯ ಪೀಠ ಪರಿಹಾರ ನೀಡಬೇಕೆಂಬ ಆದೇಶವನ್ನು ರದ್ದುಗೊಳಿಸಿದೆ. ಜತೆಗೆ ಮದುವೆಯೇ ಊರ್ಜಿತದಲ್ಲಿಲ್ಲ ಎಂದು ಹೇಳಿದೆ.

ಪತ್ನಿ ದೌರ್ಜನ್ಯಕ್ಕೆ ಒಳಗಾಗಿರುವುದು ಸಾಬೀತಾಗದಿದ್ದಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯಡಿ ಪತ್ನಿಗೆ ಪರಿಹಾರ ನೀಡಲಾಗದು ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್‌ ಮತಾಂತರದ ವಿಚಾರವನ್ನೂ ಉಲ್ಲೇಖಿಸಿ ಈ ಮದುವೆಯೇ ಅಸ್ತಿತ್ವದಲ್ಲಿಲ್ಲ ಎಂದಿದೆ. ದಂಪತಿ ನಡುವೆ ವಿಚ್ಛೇದನ ಆಗಿಲ್ಲದಿದ್ದರೂ ಪತ್ನಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಇಬ್ಬರ ನಡುವಿನ ವಿವಾಹದ ಹಕ್ಕುಗಳು ರದ್ದುಗೊಂಡಂತಾಗಿದೆ ಎಂದಿದೆ.

ಇದನ್ನೂ ಓದಿ: Allahabad High Court: ‘ಸಪ್ತಪದಿ’ ತುಳಿಯದ ಮದ್ವೆ ಮದುವೆಯೇ ಅಲ್ಲ! ಅಲಹಾಬಾದ್ ಹೈಕೋರ್ಟ್

ಯಾಕೆ ಪರಿಹಾರ ನೀಡಲಾಗದು ಅಂದರೆ..

ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ 22ರ ಪ್ರಕಾರ, ದೈಹಿಕ ಮಾತ್ರವಲ್ಲ, ಮಾನಸಿಕ ಚಿತ್ರಹಿಂಸೆ, ಭಾವನಾತ್ಮಕ ಯಾತನೆಯಿಂದ ಉಂಟಾದ ನೋವಿಗೆ ಪರಿಹಾರ ನೀಡಲು ಅವಕಾಶವಿದೆ. ಆದರೆ, ದೌರ್ಜನ್ಯ ನಡೆಸಿರುವುದು ಸಾಬೀತಾದಲ್ಲಿ ಮಾತ್ರ ಪರಿಹಾರ ನೀಡಬಹುದು. ಆದರೆ, ಹಾಲಿ ಪ್ರಕರಣದಲ್ಲಿ ದೌರ್ಜನ್ಯ ಸಾಬೀತಾಗಿಲ್ಲ. ಜತೆಗೆ, ಪತ್ನಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರವಾಗಿದ್ದಾರೆ. ಅಲ್ಲದೆ, ಪತಿ ಕೃಷ್ಣ ಅವರು ಪಾರ್ಶವಾಯು ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ, ಪರಿಹಾರ ನೀಡಲಾಗದು ಎಂದು ಪೀಠ ಸ್ಪಷ್ಟಪಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

SSLC Result: ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

VISTARANEWS.COM


on

SSLC Result
Koo

ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಬಳಿಕ, ಊಹಿಸಿದಂತೆಯೇ ಆಗಿದೆ. ಕರ್ನಾಟಕದಲ್ಲಿ ಶಾಲಾ ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ ಎದ್ದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಅಸಮಾಧಾನ ಹೊರಹಾಕಿದೆ. ಸರ್ಕಾರಿ ಶಾಲಾ ಶಿಕ್ಷಣದ ಬಗ್ಗೆ ಹೆತ್ತವರು ಯಾವ ಅಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಸಂಕಲಿಸಿದರೆ ದಾರುಣ ಚಿತ್ರ ಸಿಗಬಹುದು; ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಹೆತ್ತವರು ಕೆಳಮಧ್ಯಮ ವರ್ಗದ, ಕೆಳವರ್ಗದವರಾದುದರಿಂದ ಅವರಿಗೆ ಬೇರೆ ದಾರಿಯಿಲ್ಲ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸುತ್ತಿರುವವರು, ಅಲ್ಲಿಗೆ ಕಳಿಸುತ್ತಿರುವುದೇಕೆ ಎಂದು ಕೇಳಿದರೆ ಸರ್ಕಾರಿ ಶಿಕ್ಷಣದ ಕಳಪೆ ಗುಣಮಟ್ಟದತ್ತ ಬೆಟ್ಟು ಮಾಡುತ್ತಾರೆ. ಆದರೆ ಇದೂ ಪೂರ್ತಿ ಸತ್ಯವಲ್ಲ. ಯಾಕೆಂದರೆ ಹಲವಾರು ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇದು ಒಟ್ಟಾರೆಯಾಗಿ ರಾಜ್ಯ ಶೈಕ್ಷಣಿಕ ಪಠ್ಯದ ಸಮಸ್ಯೆಗಳತ್ತ ಬೆಟ್ಟು ಮಾಡುತ್ತದೆ. ಒಟ್ಟಾರೆಯಾಗಿ ಪಠ್ಯದ ಸಮಸ್ಯೆ ಹಾಗೂ ಕಲಿಕೆಯ ಸಮಸ್ಯೆಗಳು ಒಗ್ಗೂಡಿ ಇಂದಿನ ಈ ಸ್ಥಿತಿಗೆ ತಂದಿವೆ.

ಸರ್ಕಾರ ಶಾಲಾ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಸರ್ಕಾರ ಯಾವುದೇ ಪರಿಣಾಮಕಾರಿ ರೂಪುರೇಷೆಗಳನ್ನು ರೂಪಿಸುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಾಲಾ ಒಕ್ಕೂಟ ಆಕ್ರೋಶ ಹೊರಹಾಕಿದೆ. ಇದೂ ನಿಜ. ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣದ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ. ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎನ್ನುತ್ತಾರೆ. ಹೀಗಾಗಿ ಗ್ರೇಸ್‌ ಅಂಕ ಕೊಡಲಾಗಿದೆ. ಹತ್ತು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲೂ ಆಗದ ಮಕ್ಕಳ ಸಂಖ್ಯೆ ಹೆಚ್ಚು ಇದೆ ಎಂದರೆ ಏನರ್ಥ? ಇದು ಶಿಕ್ಷಣವೇ? ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ. ಇದು ಕ್ರಿಕೆಟ್‌ನಲ್ಲಿ ಬೌಂಡರಿಗೆ ಬಾಲ್‌ ಹೋಗುತ್ತಿಲ್ಲ ಎಂದು ಬೌಂಡರಿ ವ್ಯಾಪ್ತಿಯನ್ನೇ ಕುಗ್ಗಿಸಿದಂತೆ! ಇದರಿಂದ ಆಟಗಾರರ ಪ್ರತಿಭೆಯೇನೂ ಹೆಚ್ಚುವುದಿಲ್ಲ!

ಇದನ್ನೂ ಓದಿ:ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಪ್ರತಿ ಸಲ ಸರ್ಕಾರ ಬಂದಾಗಲೂ ರಾಜಕೀಯ ಸಿದ್ಧಾಂತದ ಹಿನ್ನೆಲೆಯಲ್ಲಿ ಪಠ್ಯಕ್ರಮ ಪರಿಷ್ಕರಣೆ ಆಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯಗಳ ಪಠ್ಯಕ್ಕೆ ಹಾಗೂ ರಾಷ್ಟ್ರಮಟ್ಟದ ಶಿಕ್ಷಣಕ್ಕೆ ಸ್ಪರ್ಧಾತ್ಮಕವಾಗಿ ಸಿದ್ಧ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸದಾ ರಾಜಕೀಯ. ವಿದ್ಯಾರ್ಥಿಗಳ ಹಿತದೃಷ್ಟಿಗಿಂತ ತಮ್ಮ ಸಿದ್ಧಾಂತಗಳನ್ನು ಹೇರುವುದೇ ಪಕ್ಷಗಳ ಆದ್ಯತೆಯಾಗಿದೆ. ಶಿಕ್ಷಣ ತಜ್ಞರನ್ನು ಮುಂದಿಟ್ಟುಕೊಂಡು ಪಠ್ಯಕ್ರಮ ರಚಿಸುವುದಕ್ಕಿಂತಲೂ ರಾಜಕೀಯ ಚಿಂತನೆಯ ತಜ್ಞರನ್ನು ಸಮಿತಿಯಲ್ಲಿ ನೇಮಿಸಿಕೊಂಡು ಪಠ್ಯ ರಚಿಸಲಾಗುತ್ತಿದೆ. ಇದು ಮಕ್ಕಳ ಬಾಳಿನಲ್ಲಿ ಆಡುವ ಚೆಲ್ಲಾಟ. ಇದು ನಿಲ್ಲಬೇಕು. ಇಲ್ಲವಾದರೆ ಈ ಫಲಿತಾಂಶ ಕುಸಿತ ಹಾಗೂ ಅವಮಾನ ಮುಂದುವರಿಯಲಿದೆ.

Continue Reading

ಶಿವಮೊಗ್ಗ

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

Karnataka Weather: ಬಿರುಗಾಳಿ ಸಮೇತ ಸುರಿದ ಮಳೆಗೆ ವಿದ್ಯುತ್ ಕಂಬಗಳು ಹಾಗೂ ಬೃಹತ್‌ ಮರವೊಂದು ಧರೆಗುರುಳಿದ ಘಟನೆ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದ ಗುಡ್ಡೆ ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಗಾಳಿ-ಮಳೆಗೆ ಜೋಳದ ಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗುರುಳಿದ ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಹೋಗಿವೆ.

VISTARANEWS.COM


on

heavy wind and rain damaged tree and electricity poles In Jholada Gudde village
Koo

ಸೊರಬ: ಬಿರುಗಾಳಿ ಸಮೇತ ಸುರಿದ ಮಳೆಗೆ (Karnataka Weather) ವಿದ್ಯುತ್ ಕಂಬಗಳು ಹಾಗೂ ಬೃಹತ್‌ ಮರವೊಂದು ಧರೆಗುರುಳಿದ ಘಟನೆ ಚಂದ್ರಗುತ್ತಿ ಸಮೀಪದ ಜೋಳದ ಗುಡ್ಡೆ ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮಧ್ಯಾಹ್ನದ ವರೆಗೆ ಬಿರು ಬಿಸಿಲಿನಿಂದ ಕೂಡಿದ ವಾತಾವರಣ ನಂತರ ಮೋಡ ಕವಿದು ಬಿರುಗಾಳಿ ಸಮೇತ ಮಳೆ ಸುರಿದಿದೆ.

ಗಾಳಿ-ಮಳೆಗೆ ಜೋಳದ ಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗೆ ಉರುಳಿದ ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಹೋಗಿದ್ದು, ಕೆಲ ಸಮಯ ಸೊರಬ ಚಂದ್ರಗುತ್ತಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಯಿತು.

ಇದನ್ನೂ ಓದಿ: Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

ವಿಷಯ ತಿಳಿದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗ್ರಾಪಂ ಸದಸ್ಯ ಲೋಕೇಶ್ ಸೇರಿದಂತೆ ಇತರರು ಅಧಿಕಾರಿಗಳಿಗೆ ಸಹಕಾರ ನೀಡಿದರು.

ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯ ಬಹುತೇಕ ಕಡೆ ಮಳೆಯಾಗಿದ್ದು, ಬಿಸಿಲಿನಿಂದ ಕಾದ ಇಳೆಗೆ ಮಳೆ ತಂಪೆರೆಚಿದಂತಾಗಿದೆ.

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ
ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Result 2024) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತ್ಯೇಕವಾಗಿ ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ. ಇದೇ ವೇಳೆ ಇಬ್ಬರು ವಿದ್ಯಾರ್ಥಿಗಳು ಓದಿದ ಮೊರಾರ್ಜಿ ವಸತಿ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು 1.5 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದ್ದಾರೆ.

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ‌ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತಾ ಹಾಗೂ ತೃತೀಯ ರ‍್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌

ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ಇದನ್ನೂ ಓದಿ | SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯವಾದ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು.

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಅಂಕಿತಾ

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅಂಕಿತಾ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಈ ವೇಳೆ ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

ಅಂಕಿತಾಗೆ 5 ಲಕ್ಷ, ನವನೀತ್‌ಗೆ 2 ಲಕ್ಷ ಪ್ರೋತ್ಸಾಹ ಧನ ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್‌ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3ನೇ ರ‍್ಯಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು.

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್‌ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ, ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ.

ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದರು.

ಇದನ್ನೂ ಓದಿ | CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

Continue Reading

ಕರ್ನಾಟಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರ ಬೆನ್ನಲ್ಲೇ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

VISTARANEWS.COM


on

Victoria Hospital
Koo

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ವಜಾ ಅಗಿದ್ದ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ. ಕೆಲಸ ಕೂಲಿ ಕೇಳಿದ್ದಕ್ಕೆ ವಜಾ ಮಾಡಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ಸಿಬ್ಬಂದಿ ಪ್ರತಿಭಟನೆ ನಡೆಸಿ ಅಕ್ರೋಶ ಹೊರಹಾಕಿದ್ದರು. ಇದೀಗ ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರಿಂದ ಎಚ್ಚೆತ್ತುಕೊಂಡ ವಿಕ್ಟೋರಿಯಾ ಆಸ್ಪತ್ರೆ ಆಡಳಿತ ಮಂಡಳಿ, ವಜಾಗೊಂಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದೆ.

ಹೊಸ ಏಜೆನ್ಸಿ ಬಂದ ಹಿನ್ನೆಲೆ ಸುಮಾರು 55 ಮಂದಿಯನ್ನು ಕೈಬಿಡಲಾಗಿತ್ತು. ಏಜೆನ್ಸಿ ಹಾಗೂ ಆಡಳಿತ ಮಂಡಳಿ ನಿರ್ಲಕ್ಷ್ಯದ ಹಿನ್ನೆಲೆ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆ ಬೆನ್ನಲ್ಲೇ ಸಭೆ ನಡೆಸಿದ್ದ ಹಿರಿಯ ಅಧಿಕಾರಿಗಳು, ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಿದ್ದಾರೆ.

ಇದನ್ನೂ ಓದಿ | Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ವಜಾ ಮಾಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದ್ದು, ಕಳೆದ ಎರಡು ತಿಂಗಳ ಸಂಬಳ ಸಹ ಶೀಘ್ರ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು & ಸಂಶೋಧನಾ ಸಂಸ್ಥೆ ನಿರ್ದೇಶಕ ರಮೇಶ್ ಕೃಷ್ಣ ಮಾಹಿತಿ ನೀಡಿದ್ದಾರೆ.

ಕಳೆದ 20 ವರ್ಷಗಳಿಂದ ಸಿಬ್ಬಂದಿ ಡಿ ಗ್ರೂಪ್ ನೌಕರರಾಗಿ ಹೊರಗುತ್ತಿಗೆ ಆಧಾರದಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳು ಹಿಂದೆ ಏಜೆನ್ಸಿ ಬದಲಾದ ಹಿನ್ನೆಲೆ ಈ ಎಲ್ಲರನ್ನೂ ಕೈ ಬಿಡುವ ಮಾತು ಕೇಳಿಬಂದಿತ್ತು. ಆದರೆ ಕೆಲಸದಿಂದ ಕೈ ಬಿಡಲ್ಲ ಅಂತ ಹೇಳಿದ್ದ ಹೊಸ ಏಜೆನ್ಸಿ ಇವರೆಲ್ಲರನ್ನೂ ಮುಂದುವರಿಸಿತ್ತು. ಆದರೆ ಕೆಲಸ ಮಾಡಿಸಿಕೊಂಡಿತೇ ಹೊರತು ಸಂಬಳ ಮಾತ್ರ ನೀಡಿರಲಿಲ್ಲ.

ಇದನ್ನೂ ಓದಿ | Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಯಾಕೆ ಸಂಬಳ ನೀಡಿಲ್ಲ ಅಂತ ಕಳೆದ 4 ದಿನಗಳ ಹಿಂದೆ ಕೇಳಿದಾಗ ನಿಮ್ಮನ್ನು ಕೆಲಸದಿಂದ ಕೈಬಿಡಲಾಗಿದೆ ಅಂತ ಏಜೆನ್ಸಿ ಹೇಳಿದೆ. ಈ ವಿಷಯ ಕೇಳಿ ದಿಗ್ಭ್ರಾಂತರಾದ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ಪಷ್ಟನೆ ಕೇಳಲು ಮುಂದಾಗಿದ್ದರು. ಬಳಿಕ ವಿವಿ ಪುರಂ ಪೊಲೀಸರು ಅಲ್ಲಿಂದ ಎಲ್ಲರನ್ನೂ ಬೇರೆಡೆಗೆ ಕರೆದೊಯ್ದು ಪರಿಸ್ಥಿತಿ ತಿಳಿಗೊಳಿಸಿದ್ದರು. ಮರು ನೇಮಕ ಮಾಡಿದ್ದರಿಂದ ಕೆಲಸ ಕಳೆದುಕೊಂಡು ಕಂಗಾಲಾಗಿದ್ದ ಸಿಬ್ಬಂದಿ ನಿರಾಳರಾಗಿದ್ದಾರೆ.

Continue Reading
Advertisement
SSLC Result
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ1 hour ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ2 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್2 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ3 hours ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ3 hours ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ3 hours ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ4 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ6 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20249 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202412 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ13 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು14 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ20 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌